IND vs SA Final: 40 ಸಾವಿರ ಅಡಿ ಎತ್ತರದಲ್ಲಿಯೂ ಮೊಳಗಿದ ವಿಶ್ವಕಪ್​ ಗೆಲುವಿನ ಸಂಭ್ರಮ; ವಿಡಿಯೊ ವೈರಲ್​ - Vistara News

ಕ್ರೀಡೆ

IND vs SA Final: 40 ಸಾವಿರ ಅಡಿ ಎತ್ತರದಲ್ಲಿಯೂ ಮೊಳಗಿದ ವಿಶ್ವಕಪ್​ ಗೆಲುವಿನ ಸಂಭ್ರಮ; ವಿಡಿಯೊ ವೈರಲ್​

IND vs SA Final: ಭಾರತ ಪಂದ್ಯ ಗೆಲ್ಲುತ್ತಿದ್ದಂತೆ ವಿಮಾನದಲ್ಲಿದ್ದ ಭಾರತೀಯರು ಸಂಭ್ರಮಿಸಿದ್ದಾರೆ. ವಿಮಾನದಲ್ಲಿಯೂ ಕೂಡ ಭಾರತದ ಗೆಲುವಿನ ಸುದ್ದಿಯನ್ನು ಘೋಷಿಸಿದರು. ಈ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

IND vs SA Final
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್​: ಭಾರತ ತಂಡ 17 ವರ್ಷಗಳ ಬಳಿಕ ಟಿ20 ವಿಶ್ವಕಪ್(​T20 World Cup 2024) ಗೆಲ್ಲುವ ಮೂಲಕ ಭಾರತೀಯ(IND vs SA Final) ಕ್ರಿಕೆಟ್​ ಅಭಿಮಾನಿಗಳು 13 ವರ್ಷಗಳಿಂದ ಕಾಯುತ್ತಿದ್ದ ಐಸಿಸಿ ಟ್ರೋಫಿಯೊಂದರ ಕನಸು ನನಸಾಯಿತು. ಈ ಗೆಲುವಿನ ಸಂಭ್ರಮವನ್ನು ದೇಶ-ವಿದೇಶದಲ್ಲಿರುವ ಭಾರತೀಯರು ಸಂಭ್ರಮಿಸಿದ್ದಾರೆ. ಇದೀಗ ಸಮುದ್ರ ಮಟ್ಟದಿಂದ 40ಸಾವಿರ ಅಡಿ ಎತ್ತರದಲ್ಲಿಯೂ ಈ ಗೆಲುವಿನ ಸಂಭ್ರಮಾಚರಣೆ ನಡೆದಿದೆ.

ಹೌದು, ಲಂಡನ್‌ಗೆ ಹೋಗುವ ವಿಮಾನದಲ್ಲಿ ಪ್ರಯಾಣಿಕರು ದಕ್ಷಿಣ ಆಫ್ರಿಕಾ ಮತ್ತು ಭಾರತ ನಡುವಣ ಫೈನಲ್​ ಪಂದ್ಯವನ್ನು ತಮ್ಮ ಲ್ಯಾಪ್​ಟಾಪ್​ಗಳಲ್ಲಿ ವೀಕ್ಷಿಸಿದ್ದಾರೆ. ಭಾರತ ಪಂದ್ಯ ಗೆಲ್ಲುತ್ತಿದ್ದಂತೆ ವಿಮಾನದಲ್ಲಿದ್ದ ಭಾರತೀಯರು ಸಂಭ್ರಮಿಸಿದ್ದಾರೆ. ವಿಮಾನದಲ್ಲಿಯೂ ಕೂಡ ಭಾರತದ ಗೆಲುವಿನ ಸುದ್ದಿಯನ್ನು ಘೋಷಿಸಿದರು. ಈ ವಿಡಿಯೊ ವೈರಲ್​ ಆಗಿದೆ.

ವಿಮಾನದಲ್ಲಿ ಪ್ರಯಾಣಿಸಿದ ಹರ್ದೀಪ್ ಸಿಂಗ್ ಎನ್ನುವವರು ಪಂದ್ಯವನ್ನು ವೀಕ್ಷಿಸಲು ತಡೆರಹಿತ ವೈ-ಫೈ ಸೇವೆಯನ್ನು ಒದಗಿಸಿದ ಏರ್‌ಲೈನ್‌ಗೆ ಧನ್ಯವಾದ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಮೊಳಗಿದ ವಿಜಯೋತ್ಸವ


17ನೇ ವರ್ಷಗಳ ಬಳಿಕ ಟಿ20 ವಿಶ್ವಕಪ್(T20 World Cup final)​ ಗೆದ್ದ ಭಾರತ ತಂಡದ ಈ ಅಭೂತಪೂರ್ವ ಗೆಲುವನ್ನು ಅಭಿಮಾನಿಗಳು ದೇಶಾದ್ಯಂತ ಸಂಭ್ರಮದಿಂದ ಆಚರಿಸಿದ್ದಾರೆ. ದೇಶದ ಮೂಲೆ ಮೂಲೆಯಲ್ಲೂ ತಡರಾತ್ರಿಯೇ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಿದ್ದಾರೆ. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲೂ ಅಭಿಮಾನಿಗಳು ತ್ರಿವರ್ಣ ಧ್ವಜಗಳನ್ನು ಹಿಡಿದು ಗೆಲುವನ್ನು ಸಂಭ್ರಮಿಸಿದ್ದಾರೆ. ಇದರ ಫೋಟೊ ಮತ್ತು ವೈರಲ್​ ಆಗಿದೆ.

ಜಮ್ಮು ಕಾಶ್ಮೀರದ ಕಚಿ ಚೌನಿ ಸೇರಿದಂತೆ ವಿವಿಧ ಭಾಗಗಳಲ್ಲಿ ಚಳಿಯನ್ನು ಕೂಡ ಲೆಕ್ಕಿಸದೆ ಮಧ್ಯರಾತ್ರಿಯೇ ಅಭಿಮಾನಿಗಳು ಮನೆಯಿಂದ ಹೊರ ಬಂದು ಭಾರತದ ಗೆಲುವನ್ನು ಸಂಭ್ರಮಿಸಿದ್ದಾರೆ. ಬೃಹತ್ ತ್ರಿವರ್ಣ ಧ್ವಜ ಹಿಡಿದು ಪಟಾಕಿ ಸಿಡಿಸಿ ಜಯಘೋಷ ಮೊಳಗಿಸಿದ್ದಾರೆ.

ಇದನ್ನೂ ಓದಿ Jay Shah Promise: ಜಯ್​​ ಶಾ ಭವಿಷ್ಯ ನುಡಿದಂತೆ ಟಿ20 ವಿಶ್ವಕಪ್​ ಗೆದ್ದ ಭಾರತ; ವಿಡಿಯೊ ವೈರಲ್​

ಬ್ರಿಜ್‌ಟೌನ್‌ನ ಕೆನ್ಸಿಂಗ್ಟನ್‌ ಓವಲ್‌ ಕ್ರಿಕೆಟ್​ ಸ್ಟೇಡಿಯಂನಲ್ಲಿ ಶನಿವಾರ ರಾತ್ರಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು. ಭಾರತ 7 ರನ್​ ಅಂತರದಿಂದ ಗೆದ್ದು 17 ವರ್ಷಗಳ ಬಳಿಕ 2ನೇ ಟಿ20 ವಿಶ್ವಕಪ್​ ಎತ್ತಿ ಹಿಡಿಯಿತು.

ದ್ರಾವಿಡ್​ಗೆ ಸ್ಮರಣೀಯ ಬೀಳ್ಕೊಡುಗೆ


ನಾಯಕನಾಗಿ ಗೆಲ್ಲಲಾಗದ ವಿಶ್ವಕಪ್(T20 World Cup 2024)​ ಟ್ರೋಫಿಯನ್ನು ರಾಹುಲ್​ ದ್ರಾವಿಡ್‌(Rahul Dravid) ಕೊನೆಗೂ ಭಾರತ ತಂಡದ ತರಬೇತುದಾರಾಗಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಅದು ಕೂಡ ತಮ್ಮ ಕೊನೆಯ ಮಾರ್ಗದರ್ಶನದಲ್ಲಿ ಎನ್ನುವುದು ವಿಶೇಷ. 2007ರಲ್ಲಿ ವೆಸ್ಟ್​ ಇಂಡೀಸ್​ನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ರಾಹುಲ್​ ದ್ರಾವಿಡ್​ ಅವರ ನಾಯಕತ್ವದಲ್ಲಿ ಭಾರತ ಅತ್ಯಂತ ಕಳಪೆ ಪ್ರದರ್ಶನ ತೋರುವ ಮೂಲಕ ಲೀಗ್​ ಹಂತದಿಂದಲೇ ನಿರ್ಗಮಿಸಿತ್ತು. ದುರ್ಬಲ ಬಾಂಗ್ಲಾದೇಶ ವಿರುದ್ದವೂ ಕೂಡ ಗೆಲುವು ಸಾಧಿಸಲು ಸಾಧ್ಯವಾಗ ಅವಮಾನಕ್ಕೆ ಸಿಲುಕಿತ್ತು. ಅಂದು ಅವಮಾನ ಎದುರಿಸಿದ ವಿಂಡೀಸ್​ ನೆಲದಲ್ಲೇ ಇದೀಗ ದ್ರಾವಿಡ್​ ತರಬೇತುದಾರನಾಗಿ ಕಪ್​ ಗೆದ್ದು ಸಂಭ್ರಮಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Team India: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ಗೆ ಕ್ಷಣಗಣನೆ; ಮುಂಬೈ ತಲುಪಿದ ಆಟಗಾರರು

Team India: ಭಾರತಕ್ಕೆ ಬರುವ ಮುನ್ನವೇ ರೋಹಿತ್​ ‘ಇಂತಹ ವಿಶೇಷ ಸಂಭ್ರಮವನ್ನು ನಿಮ್ಮೊಂದಿಗೆ ಆಚರಿಸುವ ಬಯಕೆಯಿದೆ. ಮರೈನ್ ಡ್ರೈವ್ ಹಾಗೂ ವಾಂಖೇಡೆ ಕ್ರೀಡಾಂಗಣದಲ್ಲಿ ನಮ್ಮೊಂದಿಗೆ ನೀವೂ ಜತೆಯಾಗಿ’ ಎಂದು ಟ್ವೀಟ್ ಮಾಡಿದ್ದರು. ಈಗಾಗಲೇ ಅಭಿಮಾನಿಗಳು ಟೀಮ್​ ಇಂಡಿಯಾ ಜೆರ್ಸಿ ತೊಟ್ಟು ಸ್ಟೇಡಿಯಂಗೆ ಆಗಮಿಸಿದ್ದಾರೆ.

VISTARANEWS.COM


on

Team India
Koo

ಮುಂಬಯಿ: ಟಿ20 ವಿಶ್ವಕಪ್(T20 World Cup) ವಿಜೇತ ಟೀಮ್​ ಇಂಡಿಯಾದ(Team India) ವಿಕ್ಟರಿ ಪೆರೇಡ್​ಗೆ ಕ್ಷಣಗಣನೆ ಶುರುವಾಗಿದೆ. ವಿಶ್ವ ವಿಜೇತರನ್ನು ಅಭಿನಂದಿಸಲು(Team India victory parade) ಮುಂಬೈ ನಗರಿ ಸಿದ್ಧವಾಗಿ ನಿಂತಿದೆ. ಆಟಗಾರರು ಈಗಾಗಲೇ ಮುಂಬೈ ತಲುಪಿದ್ದಾರೆ. ಈ ವಿಜಯಯಾತ್ರೆಯನ್ನು ಸ್ಟಾರ್ ಸ್ಪೋರ್ಟ್ಸ್ ನೇರ ಪ್ರಸಾರ ಮಾಡುವುದಾಗಿ ಘೋಷಿಸಿದೆ. ಹಾಗೆಯೇ ಸ್ಪೋರ್ಟ್ಸ್ 18ನಲ್ಲಿ, ಜಿಯೋ ಸಿನಿಮಾ ಆ್ಯಪ್​ನಲ್ಲಿಯೂ ಈ ವಿಜಯೋತ್ಸವದ ನೇರ ಪ್ರಸಾರ ಇರಲಿದೆ.

ಸಂಭ್ರಮಾಚರಣೆಗೆ ಆಹ್ವಾನ ನೀಡಿದ್ದ ರೋಹಿತ್​


ಮುಂಬೈನವರೇ ಆಗಿರುವ ನಾಯಕ ರೋಹಿತ್ ಶರ್ಮ ತಮ್ಮ ತವರಿನ ಅಭಿಮಾನಿಗಳಿಗೆ ಈ ಬೃಹತ್ ಮೆರವಣಿಯಲ್ಲಿ ಪಾಲ್ಗೊಳ್ಳುವಂತೆ ವಿಶೇಷವಾಗಿ ಮನವಿ ಮಾಡಿದ್ದರು. ಭಾರತಕ್ಕೆ ಬರುವ ಮುನ್ನವೇ ರೋಹಿತ್​ ‘ಇಂತಹ ವಿಶೇಷ ಸಂಭ್ರಮವನ್ನು ನಿಮ್ಮೊಂದಿಗೆ ಆಚರಿಸುವ ಬಯಕೆಯಿದೆ. ಮರೈನ್ ಡ್ರೈವ್ ಹಾಗೂ ವಾಂಖೇಡೆ ಕ್ರೀಡಾಂಗಣದಲ್ಲಿ ನಮ್ಮೊಂದಿಗೆ ನೀವೂ ಜತೆಯಾಗಿ’ ಎಂದು ಟ್ವೀಟ್ ಮಾಡಿದ್ದರು. ಈಗಾಗಲೇ ಅಭಿಮಾನಿಗಳು ಟೀಮ್​ ಇಂಡಿಯಾ ಜೆರ್ಸಿ ತೊಟ್ಟು ಸ್ಟೇಡಿಯಂಗೆ ಆಗಮಿಸಿದ್ದಾರೆ.

ತೆರೆದ ಬಸ್​ನಲ್ಲಿ ರೋಡ್ ಶೋ


ಆಟಗಾರರು ಮುಂಬೈಗೆ ತಲುಪಿದೊಡನೆ ‘ಮುಂಬೈನ ನರೀಮನ್ ಪಾಯಿಂಟ್‌ನಿಂದ ಸರಿಯಾಗಿ 5 ಗಂಟೆಗೆ ರೋಡ್‌ ಶೋ ಆರಂಭವಾಗಲಿದೆ. ಅದಾದ ಮೇಲೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆಟಗಾರರನ್ನು ಮತ್ತು ಮತ್ತು ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಗುತ್ತದೆ. ಇದಾದ ಬಳಿಕ ಬಿಸಿಸಿಐ ಘೋಷಿಸಿರುವ 125 ಕೋಟಿ ಬಹುಮಾನ ಮೊತ್ತವನ್ನು ಕೂಡ ಪ್ರದಾನ ಮಾಡಲಾಗುತ್ತದೆ.

ಮುಂಬೈಗೆ ತೆರಳುವ ಮುನ್ನ ಟೀಮ್​ ಇಂಡಿಯಾ ಆಟಗಾರರು ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi)ಅವರ ನಿವಾಸಕ್ಕೆ(Team India Arrival) ಭೇಟಿ ನೀಡಿ ವಿಶ್ವಕಪ್​ ಗೆಲುವಿನ ಕುರಿತು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಜತೆಗೆ ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟವನ್ನು ಕೂಡ ಏರ್ಪಡಿಸಲಾಗಿತ್ತು. ಈ ವೇಳೆ ಬಿಸಿಸಿಐ ಕಡೆಯಿಂದ ಮೋದಿಗೆ(PM Modi) ನಮೋ ನಂ.1 ಎಂದು ಬರೆದ ಟೀಮ್​ ಇಂಡಿಯಾ ಜೆರ್ಸಿಯನ್ನು(Indian Cricket Jersey) ಉಡುಗೊರೆಯಾಗಿ ನೀಡಲಾಯಿತು.

ಇದನ್ನೂ ಓದಿ Team India: ಮೋದಿಗೆ ನಮೋ ಹೆಸರಿನ ಟೀಮ್​ ಇಂಡಿಯಾ ಜೆರ್ಸಿ ಉಡುಗೊರೆ ನೀಡಿದ ಬಿಸಿಸಿಐ

ವಿಶ್ವ ವಿಜೇತ ತಂಡವನ್ನು ಭೇಟಿ ಮಾಡಿದ ಫೋಟೊವನ್ನು ಮೋದಿ ಕೂಡ ತನ್ನ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದು, ನಮ್ಮ ಚಾಂಪಿಯನ್‌ಗಳೊಂದಿಗೆ ಉತ್ತಮ ಸಭೆ!…ಪಂದ್ಯಾವಳಿಯ ಸ್ಮರಣೀಯ ಸಂಭಾಷಣೆy ಅನುಭವವನ್ನು ಕೇಳಿ ನಿಜವಾಗಿಯೂ ಸಂತಸ ತಂದಿತು ಎಂದು ಬರೆದುಕೊಂಡಿದ್ದಾರೆ.

ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಮುಂಬೈ ಪೊಲೀಸರು ಜನರನ್ನು ಒತ್ತಾಯಿಸಿದ್ದಾರೆ. ಮುಂಬೈ ವಲಯ 1ರ ಡಿಸಿಪಿ ಪ್ರವೀಣ್ ಮುಂಡೆ ಮಾಧ್ಯಮದೊಂದಿಗೆ ಮಾತನಾಡಿ, ”ಟಿ20 ವಿಶ್ವಕಪ್ ಗೆದ್ದಿರುವ ಭಾರತ ಕ್ರಿಕೆಟ್ ತಂಡ ಮುಂಬೈಗೆ ಆಗಮಿಸುತ್ತಿದೆ. ನಾರಿಮನ್ ಪಾಯಿಂಟ್ ಮತ್ತು ವಾಂಖೆಡೆ ಸ್ಟೇಡಿಯಂ ನಡುವೆ ಮರೈನ್ ಡ್ರೈವ್‌ನಲ್ಲಿ ಸಂಜೆ 5ರಿಂದ 7 ಗಂಟೆಗೆ ತೆರೆದ ಬಸ್‌ನಲ್ಲಿ ವಿಜಯೋತ್ಸವ ಮೆರವಣಿಗೆ ನಡೆಸಲಾಗುತ್ತಿದೆ. ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಸಂಜೆ 4:30 ಕ್ಕೆ ಮೊದಲು ತಲುಪಿ ಮತ್ತು ರಸ್ತೆಯಲ್ಲಿ ಯಾರೂ ದಟ್ಟಣೆ ಸೇರಬೇಡಿ ಎಂದಿದ್ದಾರೆ.

Continue Reading

ಪ್ರಮುಖ ಸುದ್ದಿ

Virat kohli: ಏಕಾಂಗಿಯಾಗಿ ಎದುರಾಳಿಯನ್ನು ಧ್ವಂಸಗೊಳಿಸುವ ವೀರ ಹೋರಾಟಗಾರ ವಿರಾಟ್​​​

Virat Kohli : ಹೌದು, ಪುರಾಣ ಕಥೆಗಳಲ್ಲಿ ಏಕಾಂಗಿಯಾಗಿ ಯುದ್ಧ ಮಾಡುವ ಮಹಾ ಶೂರರ ಕಥೆಗಳನ್ನು ಕೇಳಿದ್ರೂ ಕಣ್ಣಾರೆ ನೋಡಿಲ್ಲ. ಆದ್ರೆ 22 ಯಾರ್ಡ್ ನ ಕ್ರಿಕೆಟ್ ಮೈದಾನದಲ್ಲಿ ನಿನ್ನಾಟವನ್ನು ಕಣ್ಣಾರೆ ನೋಡಿದ ಮೇಲೆ ನೀನೊಬ್ಬ ಮಹಾ ಶೂರನಂತೆ ಕಾಣುವುದರಲ್ಲಿ ಯಾವುದೇ ಸಂದೇಹವಿಲ್ಲ.

VISTARANEWS.COM


on

Koo

ಸನತ್ ರೈ, ಬೆಂಗಳೂರು

ನೀನೊಬ್ಬ ಮಾಸ್ಟರ್ ಪೀಸ್..! ಮೈದಾನದಲ್ಲಿ ನೀಡಾಡುವ ಆಟದ ಪರಿಯೇ ಅದ್ಭುತ..! ಎದುರಾಳಿಗಳಿಗೆ ನೀನೊಬ್ಬ ಘನಘೋರ ಅಸುರ.. ಟೀಮ್ ಇಂಡಿಯಾದ ಗರ್ಭಗುಡಿಗೆ ನೀನೇ ರಕ್ಷಕ..! ಅಬ್ಬಾ.. ನಿನ್ನ ಬ್ಯಾಟಿಂಗ್ ವೈಖರಿಯನ್ನು ಯಾವ ರೀತಿ ಬಣ್ಣಿಸಬೇಕು ಅಂತನೇ ತಿಳಿಯುತ್ತಿಲ್ಲ. ಯಾಕಂದ್ರೆ ನೀನು ಮೈದಾನದಲ್ಲಿ ಆಡುತ್ತಿದ್ದಿಯೋ ಅಥವಾ ಯುದ್ಧ ಮಾಡುತ್ತಿದ್ದಿಯೋ ಎಂಬುದೇ ಗೊತ್ತಾಗುತ್ತಿಲ್ಲ. ಮೈದಾನದಲ್ಲಿ ನೀನಾಡುವ ಪರಿಯನ್ನು ನೋಡಿದಾಗ ನೀ ರಕ್ಷಕನೋ..ರಕ್ಕಸನೋ ಅನ್ನೋ ಅನುಮಾನ ಕೂಡ ಮೂಡದೇ ಇರುವುದಿಲ್ಲ.

ಹೌದು, ಪುರಾಣ ಕಥೆಗಳಲ್ಲಿ ಏಕಾಂಗಿಯಾಗಿ ಯುದ್ಧ ಮಾಡುವ ಮಹಾ ಶೂರರ ಕಥೆಗಳನ್ನು ಕೇಳಿದ್ರೂ ಕಣ್ಣಾರೆ ನೋಡಿಲ್ಲ. ಆದ್ರೆ 22 ಯಾರ್ಡ್ ನ ಕ್ರಿಕೆಟ್ ಮೈದಾನದಲ್ಲಿ ನಿನ್ನಾಟವನ್ನು ಕಣ್ಣಾರೆ ನೋಡಿದ ಮೇಲೆ ನೀನೊಬ್ಬ ಮಹಾ ಶೂರನಂತೆ ಕಾಣುವುದರಲ್ಲಿ ಯಾವುದೇ ಸಂದೇಹವಿಲ್ಲ.

ಟೀಮ್ ಇಂಡಿಯಾದ ದಳಪತಿಯಾಗಿ ತಂಡವನ್ನು ರಕ್ಷಣೆ ಮಾಡುವುದು ನಿನ್ನ ಜವಾಬ್ದಾರಿ ಎಂಬುದನ್ನು ನೀ ಮರೆಯುವುದಿಲ್ಲ. ತಂಡದ ಗೆಲುವಿಗಾಗಿ ನೀ ನಡೆಸುವ ಹೋರಾಟಕ್ಕೆ ಭೇಷ್ ಅನ್ನದಿರಲು ಎಂಥ ಕಠೋರ ಕೂಡ ಮನಸ್ಸು ಒಪ್ಪುವುದಿಲ್ಲ. ಕ್ರಿಕೆಟ್ ಲೋಕದ ಮಹಾನ್ ಬೌಲರ್​ಗಳನ್ನು ನೀ ಘನಘೋರ ರಕ್ಕಸನಂತೆ ಕಾಡಿದ್ದು ಸುಳ್ಳಲ್ಲ. ಉಗ್ರಪ್ರತಾಪಿಯಂತೆ ಬ್ಯಾಟ್ ಬೀಸಿದ ನಿನ್ನನ್ನು ಕ್ರಿಕೆಟ್ ಜಗತ್ತು ಮಹಾ ಕ್ರೂರಿ ಅಂತ ಬಣ್ಣಿಸಿದ್ರೂ ಅಚ್ಚರಿ ಏನಿಲ್ಲ. ಹಾಗೇ ಟೀಮ್ ಇಂಡಿಯಾದ ಕ್ರಿಕೆಟ್ ಅಭಿಮಾನಿಗಳು ನಿನ್ನನ್ನು ಚೇಸಿಂಗ್ ಮಾಸ್ಟರ್ ಅಂತ ಉಘೇ.. ಉಘೇ ಅನ್ನುವುದರಲ್ಲಿ ತಪ್ಪೇನೂ ಇಲ್ಲ.

ಯಾಕಂದ್ರೆ ನೀ ಆಡುವ ರೀತಿ ಹಾಗಿದೆ. ಚೆಂಡು ಬ್ಯಾಟ್‍ನ ಸಮರದಲ್ಲಿ ಕೋಪ, ರೋಷಾಗ್ನಿ ಜ್ವಾಲೆ ನಿನ್ನ ಮುಖದಲ್ಲಿ ಪ್ರಜ್ವಲಿಸುತ್ತದೆ. ಮಾತಿಗೆ ಮಾತು.. ಏಟಿಗೆ ಏಟು.. ಅಲ್ಲೇ ಡ್ರಾ.. ಆಲ್ಲೇ ಬಹುಮಾನ ಎಂಬಂತೆ ಕೆಣಕಿದವರಿಗೆ ನೀ ಕೊಡುವ ತಿರುಗೇಟನ್ನು ಜೀವಮಾನದಲ್ಲೇ ಅವರು ಮರೆಯಲಿಕ್ಕಿಲ್ಲ. ನೀ ಗಳಿಸಿದ್ದ ಒಂದೊಂದು ರನ್‍ಗಳಿಗೂ ಅಭಿಮಾನಿಗಳು ಹುಚ್ಚೆದ್ದು ಕುಣಿಯುತ್ತಾರೆ. ಇನ್ನು ಬೌಂಡರಿ ಸಿಕ್ಸರ್‍ಗಳ ಅಬ್ಬರಕ್ಕೆ ಅಭಿಮಾನಿಗಳ ಕೂಗು ಝೇಂಕಾರದಂತೆ ಮಾರ್ದನಿಸುತ್ತದೆ.ಈ ಕಾರಣದಿಂದಲೇ ಕ್ರಿಕೆಟ್ ಜಗದಗಲದಲ್ಲಿ ಪ್ರತಿಧ್ವನಿಸುತ್ತಿದೆ ನಿನಗೆ ಕೊಟ್ಟ ಬಿರುದುಗಳು. ಅದುವೇ ಚೇಸಿಂಗ್ ಮಾಸ್ಟರ್..! ಚೇಸಿಂಗ್ ಗಾಡ್..!

ಹೌದು, ನಿನ್ನದು ಕಿರು ನಗೆಯಿಂದಲೇ ಸೂಜಿಗಲ್ಲಿನಂತೆ ಆಕರ್ಷಿಸುವ ನೋಟ… ಆದ್ರೆ ನೀ ನೋಡುವುದಕ್ಕೆ ಮಾತ್ರ ತುಂಬಾನೇ ಒರಟ…ವಯಸ್ಸು 35 ದಾಟಿದ್ರೂ ಇನ್ನೂ ಬಿಟ್ಟಿಲ್ಲ ತುಂಟಾಟ.. ಕ್ರಿಕೆಟ್ ಮೈದಾನಕ್ಕಿಳಿದ್ರೆ ಸಾಕು ಸುನಾಮಿಯನ್ನು ನಾಚಿಸುವಂತಹ ನಿನ್ನ ಆರ್ಭಟ.. ಬೌಲರ್‍ಗಳಿಗೆ ಸುಸ್ತು ಸುಸ್ತಾಗುವಷ್ಟು ಕೊಡ್ತಿಯ ಕಾಟ…ಎಂಥ ಒತ್ತಡದಲ್ಲೂ ಹಿತವಾಗಿ, ಮಜವಾಗಿ ಆಡುವುದು ನಿನ್ನ ಪರಿಪಾಠ..ಎದುರಾಳಿ ಆಟಗಾರರು ಮಾತಿನ ಸಮರ ನಡೆಸಿದ್ರೆ ಹಿಂದೆ ಮುಂದೆ ನೋಡದೆ ಮಾಡ್ತಿಯಾ ಕಿತ್ತಾಟ.. ಬ್ಯಾಟಿಂಗ್ ಲಯವಿದ್ರೂ, ಲಯ ತಪ್ಪಿದ್ರೂ ಮೈದಾನದಲ್ಲೇ ನಿನ್ನದೇ ರಂಪಾಟ.. ಸೋಲನ್ನು ಒಪ್ಪಿಕೊಳ್ಳದ ಮನದಲ್ಲಿದೆ ಗೆಲ್ಲಲೇಬೇಕು ಅನ್ನೋ ಹಠ.… ಕ್ರಿಕೆಟ್‍ನ ಎಲ್ಲಾ ಗ್ರಾಮರ್‍ಗಳನ್ನು ಮಾಡಿಕೊಂಡಿದ್ದೀಯಾ ಕಂಠಪಾಠ. ಕ್ರಿಕೆಟ್ ಜಗತ್ತನ್ನು ಒಂದು ಕ್ಷಣ ಚಕಿತಗೊಳಿಸುವಂತೆ ಮಾಡುತ್ತೆ ನಿನ್ನ ಬೊಂಬಾಟ್ ಆಟ.…ಪ್ರತಿ ಕ್ಷಣವೂ ನಿನ್ನ ಯೋಚನೆಯಲ್ಲಿರುತ್ತೆ ಸಾಧನೆಯ ಹುಡುಕಾಟ. ಆಧುನಿಕ ಕ್ರಿಕೆಟ್ ಜಗತ್ತಿನಲ್ಲಿ ಎಲ್ಲವೂ ನಿನ್ನದೇ ಚೆಲ್ಲಾಟ. ಪ್ರಬುದ್ಧ, ಪರಿಪಕ್ವ ಆಟದಿಂದಲೇ ಆಗಿದ್ದಿಯಾ ನೀನು ವಿಶ್ವ ಸಾಮ್ರಾಟ…

ನಿಜ, ನೀನು ಮಾಡಿರುವ ಸಾಧನೆಯೇ ಅಂತಹುದ್ದು. ಅದನ್ನು ಯಾರು ಕೂಡ ಊಹೆ ಮಾಡಲು ಸಾಧ್ಯವಿಲ್ಲ. ಯಾಕಂದ್ರೆ ಸಾಧನೆಯ ಹಿಂದಿನ ಒಂದೊಂದು ಹೆಜ್ಜೆಯಲ್ಲೂ ರಾಜ ಗಾಂಭೀರ್ಯವಿದೆ. ಅಷ್ಟೊಂದು ಅರ್ಥಗರ್ಭಿತವಾಗಿದೆ ನೀನು ನಡೆದು ಬಂದಿರುವ ರಾಜಪಥದ ಹಾದಿ.

ನಿನ್ನಂತಹ ಮ್ಯಾಚ್ ವಿನ್ನರ್ ಮತ್ತೊಬ್ಬನಿಲ್ಲ..!

ನಿಜ, ನಿನ್ನ ಆಟಕ್ಕೆ ಏನೆಂದು ಹೆಸರಿಡಬೇಕು. ಸೋಲಿನ ದವಡೆಯಿಂದ ಪಾರು ಮಾಡುವ ರೀತಿಯನ್ನು ಹೇಗಂತ ವರ್ಣಿಸಬೇಕು. ಒತ್ತಡದಲ್ಲೂ ಆಡುವ ಕಲೆಯನ್ನು ಕರಗತ ಮಾಡ್ಕೊಂಡಿರುವ ಲಯಕ್ಕೆ ಏನಂತ ಹೇಳಬೇಕು. ವಿರೋಧಿಗಳು ತಲೆಬಾಗುವಂತೆ ಆಡುವ ವೈಖರಿಯನ್ನು ಯಾವ ಪರಿ ಕೊಂಡಾಡಬೇಕು. ಅಭಿಮಾನಿಗಳ ಮೊಗದಲ್ಲಿ ನಗುವಿನ ಚಿತ್ತಾರ ಬಿಡಿಸಿರುವುದನ್ನು ಹೇಗೆ ಮರೆಯಲಿ. ಕ್ರಿಕೆಟ್ ಜಗತ್ತನ್ನು ಆಕ್ಷೇಪ ಮಾಡುವ ದಾಟಿಯನ್ನು ಯಾವ ಶಬ್ದದಿಂದ ಕರೆಯಲಿ..ಅಷ್ಟಕ್ಕೂ ಮೈದಾನದಲ್ಲಿ ವಿರಾಟ್ ನಡೆಸುವ ಒಡ್ಡೋಲಗವನ್ನು ಹೇಳಲು ಪದಪುಂಜಗಳು ಸಿಗುತ್ತಿಲ್ಲ. ಏಕಾಂಗಿಯಾಗಿ ನಡೆಸಿದ ಹೋರಾಟದ ಹೊಲಿಕೆಗೆ ನವರಸಗಳು ಸಾಕಾಗುತ್ತಿಲ್ಲ. ಬೌಲರ್​ಗಳನ್ನು ಎದುರು ಮಾಡುವ ತಾಂಡವ ನೃತ್ಯಕ್ಕೆ ಮನಸೋಲದವರಿಲ್ಲ. ಬ್ಯಾಟ್ ಅನ್ನು ಗದೆಯಂತೆ ತಿರುಗಿಸುತ್ತ ರನ್ ಗಳಿಸುವ ನಿನ್ನಂತಹ ಚಾಣಾಕ್ಯ ಇನ್ನೊಬ್ಬನಿಲ್ಲ. ಸವಾಲನ್ನು ಸ್ವೀಕರಿಸಿ ತಂಡವನ್ನು ಗೆಲುವಿನ ದಡ ಸೇರಿಸುವ ನಿನ್ನಂತಹ ಮ್ಯಾಚ್ ವಿನ್ನರ್ ಮತ್ತೊಬ್ಬನಿಲ್ಲ.

ಏನೇ ಆದ್ರೂ ಕ್ರಿಕೆಟ್ ಅನ್ನೋ ಇಂಗ್ಲೀಷರ ಆಟದಲ್ಲೂ ನವರಸಗಳನ್ನು ಬೆರೆಸಿದ ಮಹಾ ಮಾಂತ್ರಿಕ. ಶೃಂಗಾರ ಕಾವ್ಯದಂತೆ ರನ್‍ಗಳಿಸುವ ಕಲಾಕಾರ. ಮಹೋನ್ನತ ಇನಿಂಗ್ಸ್ ನಡುವೆಯೇ ಹಾಸ್ಯ ಮಾಡುವ ಹಾಸ್ಯಗಾರ. ಕೆಣಕಲು ಬಂದ್ರೆ ಮೈದಾನದಲ್ಲೇ ನಿನ್ನ ರೌದ್ರಾವತಾರ. ಕಠಿಣ ಸಂದರ್ಭದಲ್ಲಿ ಕರುಣಾ ರಸದಂತೆ ಆಡುವ ಆಟಗಾರ. ಸವಾಲಿನ ಪ್ರಶ್ನೆ ಬಂದಾಗ ಭೀಭತ್ಸ ತೋರುವ ಮಹಾಶೂರ . ಅಷ್ಟೇ ಅಲ್ಲ, ಏಕಾಂಗಿಯಾಗಿ ಎದುರಾಳಿಯನ್ನು ಧ್ವಂಸಗೊಳಿಸುವ ವೀರ ಹೋರಾಟಗಾರ. ಎಂತಹ ಸನ್ನಿವೇಶದಲ್ಲೂ ಅದ್ಭುತ ಆಟ ಪ್ರದರ್ಶಿಸುವ ಜಾದುಗಾರ. ಕ್ರೀಸ್‍ಗೆ ಆಗಮಿಸುವಾಗಲೇ ಎದುರಾಳಿ ತಂಡಕ್ಕೆ ಭಯಮೂಡಿಸುವ ರಣಧೀರ. ಶಾಂತ ಚಿತ್ತದಿಂದಲೇ ಎಲ್ಲವನ್ನು ಅರಿತುಕೊಂಡು ಕ್ರಿಕೆಟ್ ಜಗತ್ತನ್ನು ಮೋಡಿ ಮಾಡುವ ಮೋಡಿಗಾರ.

ಒಂದಂತೂ ನಿಜ, ನಿನ್ನ ಅಭಿಮಾನಿಗಳಿಗೆ ನೀನು ಎಷ್ಟು ಆಡಿದ್ರೂ, ಎಷ್ಟು ರನ್ ಗಳಿಸಿದ್ರೂ ಅವರ ಮನ ತಣಿಸುವುದಿಲ್ಲ. ಅಭಿಮಾನಿಗಳ ಹೃದಯಕ್ಕೆ ಇನ್ನಷ್ಟು ಬೇಕು ಅಂತ ಅನ್ನಿಸುತ್ತಲೇ ಇರುತ್ತದೆ. ಯಾಕಂದ್ರೆ ನಿನ್ನ ಮೇಲೆ ಅವರಿಗೆ ಆಗಾಧವಾದ ನಂಬಿಕೆ ಮತ್ತು ಪ್ರೀತಿ ಇದೆ. ಅಂತಹ ಒಂದು ಸ್ಥಾನವನ್ನು ಅಭಿಮಾನಿಗಳ ಹೃದಯದಲ್ಲಿ ಶಾಶ್ವತವಾಗಿಟ್ಟುಕೊಳ್ಳುವಂತೆ ಮಾಡಿದ್ದೀಯಾ… ಅದಕ್ಕಾಗಿಯೇ ನೀನು ಚುಟುಕು ಕ್ರಿಕೆಟ್‍ಗೆ ವಿದಾಯ ಹೇಳಿದಾಗ ನಿನ್ನ ಅಭಿಮಾನಿಗಳು ಕಣ್ಣೀರು ಸುರಿಸಿದ್ರು. ಆದ್ರೆ ನೀನು ಟಿ-20 ವಿಶ್ವಕಪ್ ಗೆದ್ದು ಸಾರ್ಥಕತೆಯೊಂದಿಗೆ ಟಿ-20 ಕ್ರಿಕೆಟ್‍ಗೆ ವಿದಾಯ ಹೇಳಿದ್ದೀಯ. ಆದ್ರೂ ಒಂದು ರೀತಿಯ ಸಮಾಧಾನ ಅವರಿಗಿದೆ. ಏಕದಿನ, ಟೆಸ್ಟ್ ಮತ್ತು ಐಪಿಎಲ್‍ನಲ್ಲಿ ನಿನ್ನ ಆಟವನ್ನು ಕಣ್ತುಂಬಿಕೊಳ್ಳಬಹುದು ಎಂಬ ಆಸೆ ಅವರಲ್ಲಿದೆ.

ಅದೇನೇ ಇರಲಿ, ನೀನು ಈಗಾಗಲೇ ಏಕದಿನ ಕ್ರಿಕೆಟ್‍ನಲ್ಲಿ ಸಚಿನ್ ತೆಂಡುಲ್ಕರ್ ಅವರ ಶತಕದ ದಾಖಲೆಯನ್ನು ನಿನ್ನ ಹೆಸರಿಗೆ ಬರೆಸಿಕೊಂಡಿದ್ದಿಯ. ಆದ್ರೆ ಟೆಸ್ಟ್ ಶತಕ, ಏಕದಿನ ಮತ್ತು ಟೆಸ್ಟ್ ಕ್ರಿಕೆಟ್‍ನ ಗರಿಷ್ಠ ರನ್ ದಾಖಲೆ ಅಳಿಸಿ ಹಾಕೋದು ಅಂದುಕೊಂಡಷ್ಟು ಸುಲಭವಿಲ್ಲ. ಆದ್ರೂ ನೀನು ಕ್ರಿಕೆಟ್ ದೇವ್ರ ಮಾತು ನಂಬಿಕೆಯನ್ನು ಹುಸಿಗೊಳಿಸಿಲ್ಲ. 14 ವರ್ಷಗಳ ಕಾಲ ಚುಟುಕು ಕ್ರಿಕೆಟ್‍ನಲ್ಲಿ ನಿನ್ನ ಆಟವನ್ನು ನೋಡಿ ಮನಸ್ಸಿಗೆ ಖುಷಿಯಾಗಿದೆ. ಆದ್ರೆ ನಿನ್ನ ನಾಯಕತ್ವದಲ್ಲಿ ಐಸಿಸಿ ಟ್ರೋಫಿ ಗೆದ್ದಿಲ್ಲ ಎಂಬ ಕೊರಗು ಇರಬಹುದು. ಆದ್ರೆ ನಿನ್ನ ಸಮಯ ಅಲ್ಲ ಅಂದಾಗ ಆ ದೇವರು ಕೂಡ ಕೈಹಿಡಿಯುವುದಿಲ್ಲ. ಆದ್ರೆ ನೀನು ನಿನ್ನ ಕರ್ತವ್ಯವನ್ನು ನಿಸ್ವಾರ್ಥದಿಂದ ಮಾಡಿದ್ದೀಯಾ. ಅದರ ಪುಣ್ಯದ ಫಲವೇ ಟಿ-20 ವಿಶ್ವಕಪ್ ಗೆಲುವು ನಿನಗೆ ಸಿಕ್ಕಿರುವುದು. ಕಡೆಯ ಟಿ-20 ಪಂದ್ಯದಲ್ಲೂ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿದಿರುವುದು. ಭಾರತದ ತ್ರಿವರ್ಣ ಧ್ವಜ ಹಿಡಿದುಕೊಂಡು ಗೆಲುವನ್ನು ಸಂಭ್ರಮಿಸಿರುವುದು. ಭಾವುಕನಾಗಿ ನೀನು ನಲಿದಾಡಿದ ಕ್ಷಣಗಳನ್ನ ಎಂದೆಂದಿಗೂ ಮರೆಯಲು ಆಗಲ್ಲ. ಆದ್ರೂ ಚುಟುಕು ಕ್ರಿಕೆಟ್‍ನಲ್ಲಿ ಟೀಮ್ ಇಂಡಿಯಾದ ಗರ್ಭಗುಡಿಯಲ್ಲಿ ನೀನು ಇಲ್ಲ ಅನ್ನೋ ಬೇಸರವಂತೂ ಇದ್ದೇ ಇದೆ. ಏನೇ ಇರಲಿ…ನಿನ್ನ ಬಗ್ಗೆ ಇಷ್ಟು ಬರೆಯುವಂತೆ ಮಾಡಿದ ನಿನ್ನ ಆಟದ ಖದರ್, ನಿನ್ನ ವ್ಯಕ್ತಿತ್ವಕ್ಕೆ ಸಲಾಂ.. ಪ್ರೀತಿಪೂರ್ವಕ ಧನ್ಯವಾದಗಳು ಕಿಂಗ್ ವಿರಾಟ್ ಕೊಹ್ಲಿ..!

Continue Reading

ಕ್ರೀಡೆ

Team India: ಮೋದಿಗೆ ನಮೋ ಹೆಸರಿನ ಟೀಮ್​ ಇಂಡಿಯಾ ಜೆರ್ಸಿ ಉಡುಗೊರೆ ನೀಡಿದ ಬಿಸಿಸಿಐ

Team India: ವಿಶ್ವ ವಿಜೇತ ತಂಡವನ್ನು ಭೇಟಿ ಮಾಡಿದ ಫೋಟೊವನ್ನು ಮೋದಿ ಕೂಡ ತನ್ನ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದು, ನಮ್ಮ ಚಾಂಪಿಯನ್‌ಗಳೊಂದಿಗೆ ಉತ್ತಮ ಸಭೆ!…ಪಂದ್ಯಾವಳಿಯ ಸ್ಮರಣೀಯ ಸಂಭಾಷಣೆy ಅನುಭವವನ್ನು ಕೇಳಿ ನಿಜವಾಗಿಯೂ ಸಂತಸ ತಂದಿತು ಎಂದು ಬರೆದುಕೊಂಡಿದ್ದಾರೆ.

VISTARANEWS.COM


on

Team India
Koo

ನವದೆಹಲಿ: ಐಸಿಸಿ ಟಿ20 ವಿಶ್ವಕಪ್(T20 World Cup 2024)​ ಟ್ರೋಫಿ ಗೆದ್ದು ತವರಿಗೆ ಮರಳಿದ ಟೀಮ್​ ಇಂಡಿಯಾ (Team India) ಆಟಗಾರರನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ತಮ್ಮ ನಿವಾಸದಲ್ಲಿ ಸನ್ಮಾನಿಸಿದರು. ಈ ವೇಳೆ ಬಿಸಿಸಿಐ ಕಡೆಯಿಂದ ಮೋದಿಗೆ(PM Modi) ನಮೋ ನಂ.1 ಎಂದು ಬರೆದ ಟೀಮ್​ ಇಂಡಿಯಾ ಜೆರ್ಸಿಯನ್ನು(Indian Cricket Jersey) ಉಡುಗೊರೆಯಾಗಿ ನೀಡಲಾಯಿತು.

ಇಂದು(ಗುರುವಾರ) ಬೆಳಗ್ಗೆ ದೆಹಲಿಗೆ ಆಗಮಿಸಿದ ಆಟಗಾರರು ಬಳಿಕ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ವಿಶ್ವಕಪ್​ ಗೆಲುವಿನ ಕುರಿತು ಆಟಗಾರರು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಬಳಿಕ ವಿಶ್ವ ಕಪ್​ ಟ್ರೋಫಿ ಜತೆ ಆಟಗಾರರೊಂದಿಗೆ ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟವನ್ನು ಕೂಡ ಏರ್ಪಡಿಸಲಾಗಿತ್ತು. ಈ ಎಲ್ಲ ಕಾರ್ಯಕ್ರಮದ ಬಳಿಕ ಬಿಸಿಸಿಐ ಅಧ್ಯಕ್ಷ ರೋಜರ್​ ಬಿನ್ನಿ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಅವರು ನಮೋ ಎಂದು ಬರೆದ ಟೀಮ್​ ಇಂಡಿಯಾ ಜೆರ್ಸಿಯನ್ನು ನೆನಪಿನ ಕಾಣಿಕೆಯಾಗಿ ನೀಡಿದರು. ಈ ಫೋಟೊವನ್ನು ಬಿಸಿಸಿಐ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಶೇರ್​ ಮಾಡಿದೆ.

ಇದನ್ನೂ ಓದಿ Team India victory parade: ಸಂಜೆ 5ರಿಂದ 7ರವರೆಗೆ ಮುಂಬಯಿಯಲ್ಲಿ ಟೀಮ್ ಇಂಡಿಯಾ ಭರ್ಜರಿ ರೋಡ್ ಶೋ; ನೇರ ಪ್ರಸಾರ ವೀಕ್ಷಣೆ ಹೇಗೆ?

ವಿಶ್ವ ವಿಜೇತ ತಂಡವನ್ನು ಭೇಟಿ ಮಾಡಿದ ಫೋಟೊವನ್ನು ಮೋದಿ ಕೂಡ ತನ್ನ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದು, ನಮ್ಮ ಚಾಂಪಿಯನ್‌ಗಳೊಂದಿಗೆ ಉತ್ತಮ ಸಭೆ!…ಪಂದ್ಯಾವಳಿಯ ಸ್ಮರಣೀಯ ಸಂಭಾಷಣೆy ಅನುಭವವನ್ನು ಕೇಳಿ ನಿಜವಾಗಿಯೂ ಸಂತಸ ತಂದಿತು ಎಂದು ಬರೆದುಕೊಂಡಿದ್ದಾರೆ.

ಆಟಗಾರರಿಗೆ ಕರೆ ಮಾಡಿದ್ದ ಮೋದಿ

ಜೂನ್‌ 29ರಂದು ನಡೆದ ಫೈನಲ್‌ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾದ ವಿರುದ್ಧ ಭಾರತ 7 ರನ್‌ಗಳಿಂದ ಜಯ ಸಾಧಿಸಿತ್ತು. ಆ ವೇಳೆ ಆಟಗಾರರಿಗೆ ಕರೆ ಮಾಡಿ ಮೋದಿ ಅಭಿನಂದನೆ ಸಲ್ಲಿಸಿದ್ದರು. ಮೋದಿ ಅವರು ಟೀಮ್‌ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಮಾತನಾಡಿ, ಅದ್ಭುತ ನಾಯಕತ್ವಕ್ಕಾಗಿ ಅಭಿನಂದನೆ ತಿಳಿಸಿದರು. ಅವರ ಟಿ20 ವೃತ್ತಿ ಜೀವನವನ್ನು ಶ್ಲಾಘಿಸಿದರು. ಜತೆಗೆ ಪ್ರಧಾನಿ ಫೈನಲ್‌ ಪಂದ್ಯದಲ್ಲಿ ಭಾರತವು ಸ್ಪರ್ಧಾತ್ಮಕ ಸ್ಕೋರ್ ಗಳಿಸಲು ಸಹಾಯ ಮಾಡಿದ ವಿರಾಟ್ ಕೊಹ್ಲಿ (76 ರನ್) ಅವರ ಆಟವನ್ನೂ ಮೆಚ್ಚಿಕೊಂಡರು. ಜತೆಗೆ ಭಾರತೀಯ ಕ್ರಿಕೆಟ್‌ಗೆ ಕೊಹ್ಲಿ ನೀಡಿದ ಕೊಡುಗೆಯನ್ನೂ ನೆನಪಿಸಿಕೊಂಡಿದ್ದರು.

ಜತೆಗೆ ಜಸ್​ಪ್ರೀತ್​ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯ ಅವರಿಗೂ ಪ್ರಧಾನಿ ಮೆಚ್ಚುಗೆ ಸೂಚಿಸಿದ್ದರು. ಮಾತ್ರವಲ್ಲ ಅದ್ಭುತ ಕ್ಯಾಚ್‌ ಹಿಡಿದು ಪಂದ್ಯದ ಗತಿಯನ್ನೇ ಬದಲಾಯಿಸಿದ ಸೂರ್ಯ ಕುಮಾರ್ ಯಾದವ್ ಅವರನ್ನು ಉಲ್ಲೇಖಿಸಲು ಪ್ರಧಾನಿ ಮರೆತಿರಲಿಲ್ಲ. ಗೆಲುವಿಗಾಗಿ ಮುಖ್ಯ ಕೊಡುಗೆ ನೀಡಿದ ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಮೋದಿ ಧನ್ಯವಾದ ಅರ್ಪಿಸಿದ್ದರು. ಈ ಕುರಿತಾದ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಪ್ರಧಾನಿ ಅವರ ನಡೆಗೆ ಕ್ರೀಡಾಪ್ರೇಮಿಗಳು ಮೆಚ್ಚುಗೆ ಸೂಚಿಸಿದ್ದರು.

Continue Reading

ಕ್ರೀಡೆ

Team India: ಟೀಮ್‌ ಇಂಡಿಯಾ ಆಟಗಾರರನ್ನು ಸನ್ಮಾನಿಸಿದ ಪ್ರಧಾನಿ ಮೋದಿ

Team India: ಟಿ-20 ವಿಶ್ವಕಪ್​ನೊಂದಿಗೆ ತವರಿಗೆ ಮರಳಿದ ಟೀಮ್​ ಇಂಡಿಯಾ ಆಟಗಾರರನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ನಿವಾಸದಲ್ಲಿ ಸನ್ಮಾನಿಸಿದರು. ಮೋದಿ ಅವರ ಜತೆ ಆಟಗಾರರು ಉಪಾಹಾರ ಸೇವಿಸಿದರು. ನಂತರ ಕೆಲ ಹೊತ್ತು ಮಾತುಕತೆ ನಡೆಸಿದರು. ಈ ವೇಳೆ ಮೋದಿ ವಿಶ್ವಕಪ್‌ ಹೀರೋಗಳನ್ನು ಸನ್ಮಾನಿಸಿ, ಅಭಿನಂದಿಸಿದರು. ಸುಮಾರು 17 ವರ್ಷಗಳ ಬಳಿಕ ಟಿ-20 ವಿಶ್ವಕಪ್‌ ಗೆದ್ದುಕೊಂಡ ರೋಹಿತ್‌ ಶರ್ಮ ಮತ್ತು ತಂಡದ ಗೆಲುವನ್ನು ಪ್ರಧಾನಿ ಕೊಂಡಾಡಿದರು.

VISTARANEWS.COM


on

Team India
Koo

ನವದೆಹಲಿ: ಟಿ-20 ವಿಶ್ವಕಪ್​ನೊಂದಿಗೆ ತವರಿಗೆ ಮರಳಿದ ಟೀಮ್​ ಇಂಡಿಯಾ (Team India) ಆಟಗಾರರನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ತಮ್ಮ ನಿವಾಸದಲ್ಲಿ ಸನ್ಮಾನಿಸಿದರು. ಇಂದು ಬೆಳಿಗ್ಗೆ ದೆಹಲಿಗೆ ಆಗಮಿಸಿದ ಆಟಗಾರರು ಬಳಿಕ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ವಿಶ್ವಕಪ್​ ಗೆಲುವಿನ ಕುರಿತು ಆಟಗಾರರು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು.

ಮೋದಿ ಅವರ ಜತೆ ಆಟಗಾರರು ಉಪಾಹಾರ ಸೇವಿಸಿದರು. ನಂತರ ಕೆಲ ಹೊತ್ತು ಮಾತುಕತೆ ನಡೆಸಿದರು. ಈ ವೇಳೆ ಮೋದಿ ವಿಶ್ವಕಪ್‌ ಹೀರೋಗಳನ್ನು ಸನ್ಮಾನಿಸಿ, ಅಭಿನಂದಿಸಿದರು. ಸುಮಾರು 17 ವರ್ಷಗಳ ಬಳಿಕ ಟಿ-20 ವಿಶ್ವಕಪ್‌ ಗೆದ್ದುಕೊಂಡ ರೋಹಿತ್‌ ಶರ್ಮ ಮತ್ತು ತಂಡದ ಗೆಲುವನ್ನು ಪ್ರಧಾನಿ ಕೊಂಡಾಡಿದರು.

ಬಾರ್ಬಡಾಸ್​ನಲ್ಲೇ ಸಿಲುಕಿದ್ದ ಆಟಗಾರರು

ವೆಸ್ಟ್‌ ಇಂಡೀಸ್‌ನಲ್ಲಿ ನಡೆದ ಐಸಿಸಿ ಟಿ-20 ವಿಶ್ವಕಪ್‌ (T20 World Cup 2024) ಟೂರ್ನಿಯ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಬಗ್ಗುಬಡಿದ ರೋಹಿತ್‌ ಶರ್ಮಾ ನೇತೃತ್ವದ ಭಾರತದ ಕ್ರಿಕೆಟ್‌ ತಂಡವು ಇಂದು ಬೆಳಿಗ್ಗೆ ಭಾರತಕ್ಕೆ ಆಗಮಿಸಿತ್ತು. ಏರ್‌ ಇಂಡಿಯಾ ಏರ್‌ಲೈನ್ಸ್‌ನ ವಿಶೇಷ ಚಾರ್ಟರ್ಡ್‌ ವಿಮಾನದಲ್ಲಿ ಭಾರತ ತಂಡದ ಆಟಗಾರರು ದೆಹಲಿಗೆ ಆಗಮಿಸಿದ್ದರು. ಪ್ರತಿಕೂಲ ಹವಾಮಾನದ ಕಾರಣದಿಂದ ಆಟಗಾರರು ಕೆಲವು ದಿನ ಬಾರ್ಬಡಾಸ್​ನಲ್ಲೇ ಸಿಲುಕಿ ಹಾಕಿಕೊಂಡಿದ್ದರು. ಇದೀಗ ತವರಿಗೆ ಆಗಮಿಸಿದ ವಿಶ್ವಕಪ್‌ ಹೀರೋಗಳಿಗೆ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದ್ದಾರೆ.

ವಿಜಯಯಾತ್ರೆಗೆ ಸಕಲ ಸಿದ್ಧತೆ

ವಿಶ್ವಕಪ್‌ ಗೆದ್ದ ಭಾರತ ತಂಡದ ಆಟಗಾರರಿಗೆ ಮುಂಬೈನಲ್ಲಿ ಗುರುವಾರ ಸಂಜೆ ವಿಜಯಯಾತ್ರೆ ಆಯೋಜಿಸಲಾಗಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸಂಜೆ 5 ಗಂಟೆಗೆ ಭಾರತ ತಂಡದ ಆಟಗಾರರನ್ನು ಅದ್ಧೂರಿಯಾಗಿ ಸ್ವಾಗತಿಸಲಾಗುತ್ತದೆ. ಇದಕ್ಕೂ ಮೊದಲು ಅಂದರೆ, ಸಂಜೆ 4 ಗಂಟೆಗೆ ಮರೀನ್‌ನಿಂದ ವಾಂಖೆಡೆ ಸ್ಟೇಡಿಯಂವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ಬರಲಿದ್ದಾರೆ. ವಿಕ್ಟರಿ ಪರೇಡ್‌ನಲ್ಲಿ ಸಾವಿರಾರು ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಎಲ್ಲರೂ ಬನ್ನಿ ಎಂಬುದಾಗಿ ರೋಹಿತ್‌ ಶರ್ಮಾ ಅವರು ಈಗಾಗಲೇ ಆಹ್ವಾನ ನೀಡಿದ್ದಾರೆ.

ಆಟಗಾರರಿಗೆ ಕರೆ ಮಾಡಿದ್ದ ಮೋದಿ

ಜೂನ್‌ 29ರಂದು ನಡೆದ ಫೈನಲ್‌ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾದ ವಿರುದ್ಧ ಭಾರತ 7 ರನ್‌ಗಳಿಂದ ಜಯ ಸಾಧಿಸಿತ್ತು. ಆ ವೇಳೆ ಆಟಗಾರರಿಗೆ ಕರೆ ಮಾಡಿ ಮೋದಿ ಅಭಿನಂದನೆ ಸಲ್ಲಿಸಿದ್ದರು. ಮೋದಿ ಅವರು ಟೀಮ್‌ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಮಾತನಾಡಿ, ಅದ್ಭುತ ನಾಯಕತ್ವಕ್ಕಾಗಿ ಅಭಿನಂದನೆ ತಿಳಿಸಿದರು. ಅವರ ಟಿ20 ವೃತ್ತಿ ಜೀವನವನ್ನು ಶ್ಲಾಘಿಸಿದರು. ಜತೆಗೆ ಪ್ರಧಾನಿ ಫೈನಲ್‌ ಪಂದ್ಯದಲ್ಲಿ ಭಾರತವು ಸ್ಪರ್ಧಾತ್ಮಕ ಸ್ಕೋರ್ ಗಳಿಸಲು ಸಹಾಯ ಮಾಡಿದ ವಿರಾಟ್ ಕೊಹ್ಲಿ (76 ರನ್) ಅವರ ಆಟವನ್ನೂ ಮೆಚ್ಚಿಕೊಂಡರು. ಜತೆಗೆ ಭಾರತೀಯ ಕ್ರಿಕೆಟ್‌ಗೆ ಕೊಹ್ಲಿ ನೀಡಿದ ಕೊಡುಗೆಯನ್ನೂ ನೆನಪಿಸಿಕೊಂಡಿದ್ದರು.

ಜತೆಗೆ ಭಾರತೀಯ ಜಸ್ಪ್ರೀತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯ ಅವರಿಗೂ ಪ್ರಧಾನಿ ಮೆಚ್ಚುಗೆ ಸೂಚಿಸಿದ್ದರು. ಮಾತ್ರವಲ್ಲ ಅದ್ಭುತ ಕ್ಯಾಚ್‌ ಹಿಡಿದು ಪಂದ್ಯದ ಗತಿಯನ್ನೇ ಬದಲಾಯಿಸಿದ ಸೂರ್ಯ ಕುಮಾರ್ ಯಾದವ್ ಅವರನ್ನು ಉಲ್ಲೇಖಿಸಲು ಪ್ರಧಾನಿ ಮರೆತಿರಲಿಲ್ಲ. ಗೆಲುವಿಗಾಗಿ ಮುಖ್ಯ ಕೊಡುಗೆ ನೀಡಿದ ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಮೋದಿ ಧನ್ಯವಾದ ಅರ್ಪಿಸಿದ್ದರು. ಈ ಕುರಿತಾದ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಪ್ರಧಾನಿ ಅವರ ನಡೆಗೆ ಕ್ರೀಡಾಪ್ರೇಮಿಗಳು ಮೆಚ್ಚುಗೆ ಸೂಚಿಸಿದ್ದರು.

ಇದನ್ನೂ ಓದಿ: T20 World Cup 2024: ʼವಿಶ್ವʼ ಗೆದ್ದ ನಾಯಕ ರೋಹಿತ್‌, ಕೋಚ್‌ ದ್ರಾವಿಡ್‌, ಕೊಹ್ಲಿಗೆ ಕರೆ ಮಾಡಿ ಅಭಿನಂದಿಸಿದ ಮೋದಿ

Continue Reading
Advertisement
Kannada Serials TRP Gowri in trp puttakkana makkalu number 1
ಕಿರುತೆರೆ14 mins ago

Kannada Serials TRP: ಟ್ರ್ಯಾಕ್‌ಗೆ ಮರಳಿದ `ಶ್ರೀಗೌರಿ’; ಟಿಆರ್​ಪಿಯಲ್ಲಿ ‘ಪುಟ್ಟಕ್ಕನ ಮಕ್ಕಳು’ ನಂಬರ್‌ 1!

Arecanut Import
ಕೃಷಿ17 mins ago

Arecanut Import: ಅಕ್ರಮ ಅಡಿಕೆ ಆಮದು ರೋಗಕ್ಕೆ ಔಷಧವೇ ಇಲ್ಲವೇ?

Team India
ಕ್ರೀಡೆ26 mins ago

Team India: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ಗೆ ಕ್ಷಣಗಣನೆ; ಮುಂಬೈ ತಲುಪಿದ ಆಟಗಾರರು

ಪ್ರಮುಖ ಸುದ್ದಿ31 mins ago

Virat kohli: ಏಕಾಂಗಿಯಾಗಿ ಎದುರಾಳಿಯನ್ನು ಧ್ವಂಸಗೊಳಿಸುವ ವೀರ ಹೋರಾಟಗಾರ ವಿರಾಟ್​​​

Om Birla
ದೇಶ40 mins ago

Om Birla: ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವಾಗ ಸಂಸದರು ಘೋಷಣೆ ಕೂಗುವಂತಿಲ್ಲ; ಹೊಸ ನಿಯಮದಲ್ಲಿ ಏನಿದೆ?

Hathras Stampede
ದೇಶ41 mins ago

Hathras Stampede: ಹತ್ರಾಸ್‌ನಲ್ಲಿ ಕಾಲ್ತುಳಿತ; 6 ಜನರನ್ನು ಬಂಧಿಸಿದ ಉತ್ತರ ಪ್ರದೇಶ ಪೊಲೀಸರು

wild animal attack
ಬೆಂಗಳೂರು ಗ್ರಾಮಾಂತರ49 mins ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Agnipath Scheme
ದೇಶ50 mins ago

Agnipath Scheme: ಅಗ್ನಿವೀರರಿಗೆ ಪರಿಹಾರ ಸಿಕ್ಕಿಲ್ಲ ಎಂದ ರಾಹುಲ್‌ ಗಾಂಧಿಗೆ ಭಾರತೀಯ ಸೇನೆ ತಿರುಗೇಟು

Robbery Video
Latest52 mins ago

Robbery Video: ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ಕಳ್ಳರು ಬ್ಯಾಗ್‌ ಕಸಿದು ಓಡುತ್ತಾರೆ! ಪೋಲಿಸ್ರು ಏನ್‌ ಮಾಡ್ತಿದ್ದಾರೋ!

Sumalatha Ambareesh Reaction about darshan
ಸ್ಯಾಂಡಲ್ ವುಡ್58 mins ago

Sumalatha Ambareesh: ಕೊಲೆ ಮಾಡುವ ವ್ಯಕ್ತಿತ್ವ ದರ್ಶನ್ ಅವರದ್ದಲ್ಲ ಎಂದ ಸುಮಲತಾ; ದೊಡ್ಡ ಮಗನ ಬಗ್ಗೆ ಹೇಳಿದಿಷ್ಟು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

wild animal attack
ಬೆಂಗಳೂರು ಗ್ರಾಮಾಂತರ49 mins ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ3 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ3 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ4 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ5 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ5 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

ಟ್ರೆಂಡಿಂಗ್‌