Bangalore–Mysore Expressway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಾಳೆಯಿಂದ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ - Vistara News

ಕರ್ನಾಟಕ

Bangalore–Mysore Expressway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಾಳೆಯಿಂದ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ

Bangalore–Mysore Expressway: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಜುಲೈ 1ರಿಂದ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್‌ (ITMS) ಜಾರಿಯಾಗಲಿದೆ. ಇದರಿಂದ ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ ಬೀಳಲಿದೆ.

VISTARANEWS.COM


on

Bangalore–Mysore Expressway
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ಸಂಚಾರ ನಿಯಮ ಉಲ್ಲಂಘನೆ ಹಾಗೂ ರಸ್ತೆ ಅಪಘಾತಗಳ ತಡೆಗಾಗಿ ಸಂಚಾರ ಪೊಲೀಸ್‌ ವಿಭಾಗ, ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳುತ್ತಿದೆ. ಇದರ ಭಾಗವಾಗಿ ನಾಳೆಯಿಂದ (ಜುಲೈ 1) ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ (Bangalore–Mysore Expressway) ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್‌ (ITMS) ಜಾರಿಯಾಗಲಿದೆ. ಈ ವ್ಯವಸ್ಥೆಯು ಇನ್ನುಮುಂದೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಕಡಿವಾಣ ಹಾಕಲು ಪೊಲೀಸರಿಗೆ ನೆರವಾಗಲಿದೆ.

ಜುಲೈ 1ರಿಂದ ಹೆದ್ದಾರಿಯಲ್ಲಿ ಈ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ ಜಾರಿ ಆಗಲಿದೆ. ಈ ಮಾರ್ಗದಲ್ಲಿ ಸಂಚಾರ ನಿಯಮ ಉಲ್ಲಂಘನೆ ದಂಡವನ್ನು ಫಾಸ್ಟ್ಯಾಗ್‌ ಮೂಲಕ ಕಡಿತಗೊಳಿಸಲು ಪೊಲೀಸರು ಮುಂದಾಗಿದ್ದಾರೆ. ಕ್ಯಾಮೆರಾಗಳು, ಸ್ಪೀಡ್‌ ಗನ್‌ಗಳು ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಲು ನೆರವಾಗಲಿವೆ.

ಜುಲೈ 1ರಿಂದ ಮೈಸೂರು-ಬೆಂಗಳೂರು ಹೆದ್ದಾರಿಯು ಸಂಪೂರ್ಣವಾಗಿ ಕ್ರಿಯಾತ್ಮಕ ಐಟಿಎಂಎಸ್ ಕಾರಿಡಾರ್ (ITMS Corridor) ಆಗಲಿದೆ ಎಂದು ಕರ್ನಾಟಕ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಎಡಿಜಿಪಿ ಅಲೋಕ್ ಕುಮಾರ್ ಇತ್ತೀಚೆಗೆ ತಿಳಿಸಿದ್ದರು.

ಐಟಿಎಂಎಸ್ ಅಥವಾ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ ಅನ್ನು ಡಿಸೆಂಬರ್ 2022ರಲ್ಲಿ ಬೆಂಗಳೂರಿನಲ್ಲಿ ಚಾಲನೆಗೆ ತರಲಾಯಿತು. ಅದಕ್ಕಾಗಿ 250 ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್(ಎಎನ್‌ಪಿಆರ್) ಕ್ಯಾಮೆರಾಗಳು ಮತ್ತು 80 ರೆಡ್ ಲೈಟ್ ಉಲ್ಲಂಘನೆ ಪತ್ತೆ (ಆರ್‌ಎರ್‌ವಿಡಿ)ಕ್ಯಾಮೆರಾಗಳನ್ನು ನಗರದ 50 ಜಂಕ್ಷನ್ ಗಳಲ್ಲಿ ಅಳವಡಿಸಲಾಗಿದೆ. ಈಗ ಐಟಿಎಂಎಸ್ ಅಡಿಯಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ರೆಕಗ್ನಿಷನ್ ಕ್ಯಾಮೆರಾಗಳನ್ನು ಮೈಸೂರಿನ ಪ್ರಮುಖ ರಸ್ತೆಗಳಲ್ಲಿ 8.5 ಕೋಟಿ ರೂ. ಅಂದರೆ ಮೈಸೂರು ನಗರಕ್ಕೆ ರೂ.4 ಕೋಟಿ ಮತ್ತು ಮೈಸೂರು ಜಿಲ್ಲೆಗೆ ರೂ.4.5 ಕೋಟಿ ಅಂದಾಜು ವೆಚ್ಚದಲ್ಲಿ ಅಳವಡಿಸಲಾಗಿದೆ. ಅಲ್ಲದೇ ಜುಲೈ 1ರಿಂದ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ವಾಹನ ಚಾಲಕರಿಗೆ ಚಲನ್ ನೀಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದ್ದರು.

ಅಲ್ಲದೇ ಕ್ಯಾಮೆರಾಗಳನ್ನು ಮೈಸೂರು ಜಿಲ್ಲೆಯ ಹುಣಸೂರು, ಎಚ್ ಡಿ ಕೋಟೆ, ನಂಜನಗೂಡು ಮತ್ತು ಟಿ ನರಸೀಪುರದಂತಹ ಹಲವಾರು ಪ್ರದೇಶಗಳಲ್ಲಿ ಅಳವಡಿಸಲಾಗುವುದು. ಹಾಗಾಗಿ ರೂಲ್ಸ್ ಬ್ರೇಕ್ ಮಾಡಿದ ವಾಹನ ಚಾಲಕರಿಗೆ ಸರಿಯಾದ ಸಮಯಕ್ಕೆ ಎಸ್ ಎಂಎಸ್ ಕಳುಹಿಸಲಾಗುವುದು ಎಂದು ಅವರು ಹೇಳಿದ್ದರು.

ಹೆಚ್ಚುವರಿಯಾಗಿ ಈ ವರ್ಷ ಬೆಂಗಳೂರಿನಿಂದ ಹತ್ತಿರದ ತಾಲೂಕುಗಳು ಮತ್ತು ಜಿಲ್ಲೆಗಳಿಗೆ ಸಂಪರ್ಕಿಸುವ ನಾಲ್ಕು ಪ್ರಮುಖ ಹೆದ್ದಾರಿಗಳಲ್ಲಿ (ತುಮಕೂರು ರಸ್ತೆ, ಕನಕಪುರ ರಸ್ತೆ, ಹೊಸೂರು ರಸ್ತೆ ಮತ್ತು ಹೊಸಕೋಟೆ) ಐಟಿಎಂಎಸ್ ಕ್ಯಾಮೆರಾಗಳನ್ನು ಅಳವಡಿಸಲು ಎಡಿಜಿಪಿ ಪ್ರಸ್ತಾಪಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಐಟಿಎಂಎಸ್ ಕ್ಯಾಮೆರಾಗಳ ಜೊತೆಗೆ ಅವರು ಈ ರಸ್ತೆಗಳಲ್ಲಿ ವೇರಿಯಬಲ್ ಮೆಸೇಜಿಂಗ್ ಚಿಹ್ನೆಗಳನ್ನು ಸೇರಿಸಲು ಯೋಜಿಸುತ್ತಿದ್ದಾರೆ ಎನ್ನಲಾಗಿದೆ. ಈ ಸೈನ್ ಬೋರ್ಡ್ ಗಳು ಸರಿಯಾದ ಸಮಯಕ್ಕೆ ಟ್ರಾಫಿಕ್ ಪರಿಸ್ಥಿತಿಯ ಕುರಿತು ಡಿಜಿಟಲ್ ಸಂದೇಶವನ್ನು ಪ್ರದರ್ಶಿಸುತ್ತದೆ. ಈ ಪ್ರಸ್ತಾವನೆಯನ್ನು ರಾಜ್ಯ ರಸ್ತೆ ಸಾರಿಗೆ ಪ್ರಾಧಿಕಾರವು ಅನುಮೋದಿಸಿದ್ದು, ಜುಲೈನಲ್ಲಿ ಟೆಂಡರ್ ಶುರುವಾಗಲಿದೆ. ಗದಗ ಪಟ್ಟಣದಲ್ಲಿಯೂ ಐಟಿಎಂಎಸ್ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಬಗ್ಗೆ ಜೂನ್ 1ರಂದು ರಾಜ್ಯ ಪೊಲೀಸ್ ನ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗವು ಪ್ರಾದೇಶಿಕ ಎನ್ ಹೆಚ್ಎಐ ಅಧಿಕಾರಿಯೊಂದಿಗೆ ಸಭೆ ನಡೆಸಿತ್ತು. ಹಾಗೇ ಎಡಿಜಿಪಿ ಅವರು ಈ ಬಗ್ಗೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಪತ್ರ ಬರೆಯುವ ಚಿಂತನೆ ಕೂಡ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ | Rain Effect : ಭಾರಿ ಮಳೆ ಎಫೆಕ್ಟ್‌; ಈ ಹೆದ್ದಾರಿ ಮಾರ್ಗದಲ್ಲಿ ನಾಳೆಯಿಂದ 1 ತಿಂಗಳು ವಾಹನ ಸಂಚಾರಕ್ಕೆ ನಿರ್ಬಂಧ!

ಹೆಚ್ಚಿನ ಸೈನ್ ಬೋರ್ಡ್ ಗಳು ಮತ್ತು ಬ್ಲಿಂಕರ್‌ಗಳು, ಕ್ಯಾಮೆರಾಗಳ ಹೊರತಾಗಿಯೂ ಪೊಲೀಸರು ಹೆದ್ದಾರಿಗಳಿಗೆ ಸೈನ್ ಬೋರ್ಡ್ ಗಳು ಮತ್ತು ಬ್ಲಿಂಕರ್‌ಗಳನ್ನು ಸಂಗ್ರಹಿಸಲು ಹಣ ಹಂಚಿಕೆ ಮಾಡುತ್ತಿದ್ದಾರೆ. ಕುಡಿದು ವಾಹನ ಚಾಲನೆ ಮಾಡುವವರನ್ನು ತಡೆಯಲು ಸುಮಾರು 800 ಆಲ್ಕೋಮೀಟರ್‌ಗಳು ಮತ್ತು 155 ಲೇಸರ್ ಸ್ಪೀಡ್ ಗನ್‌ಗಳನ್ನು ಬೆಂಗಳೂರು ಹೊರತುಪಡಿಸಿ ರಾಜ್ಯದಾದ್ಯಂತ ಪೊಲೀಸ್ ಸಿಬ್ಬಂದಿಗೆ ವಿತರಿಸಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

R Ashok: ಮುಡಾದಲ್ಲಿ ಎಲ್ಲರೂ ಗ್ಯಾಂಗ್‌ ಮಾಡಿಕೊಂಡು ಹಗರಣ ಮಾಡಿದ್ದಾರೆ; ಆರ್‌. ಅಶೋಕ್‌ ಆರೋಪ

R Ashok: ಮುಡಾದಲ್ಲಿ ನಡೆದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಇದರಿಂದ ಎಲ್ಲ ಸತ್ಯ ಹೊರಬರಲಿದೆ ಎಂದು ಆಗ್ರಹಿಸಿರುವ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌, 86 ಸಾವಿರ ಜನರು ನಿವೇಶನ ಕೊಡಿ ಎಂದು ಮನವಿ ಮಾಡಿದ್ದರೂ ಕಾಂಗ್ರೆಸ್‌ ನಾಯಕರಿಗೆ ಮಾತ್ರ ಸೈಟುಗಳು ಸಿಕ್ಕಿದೆ. ಸರ್ಕಾರದ ಆಸ್ತಿಗಳನ್ನು ಯಾರ‍್ಯಾರೋ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

VISTARANEWS.COM


on

Opposition party leader R Ashok latest statement about muda scam
Koo

ಬೆಂಗಳೂರು: ಮುಡಾದಲ್ಲಿ ನಡೆದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಇದರಿಂದ ಎಲ್ಲ ಸತ್ಯ ಹೊರಬರಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ (R Ashok) ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನ ಮುಡಾ ಭೂಸ್ವಾಧೀನ ಮಾಡಿಕೊಳ್ಳಲು ಮುಂದಾಗಿ ನಂತರ ಡಿನೋಟಿಫೈ ಮಾಡಿತ್ತು. ಅದಾದ ನಂತರವೂ ಬಡಾವಣೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಅರ್ಜಿ ಸಲ್ಲಿಸಿದ ನಂತರ ಮುಡಾ ಅಧ್ಯಕ್ಷ ಮತ್ತು ಆಯುಕ್ತರು 50:50 ಅನುಪಾತದಲ್ಲಿ ನಿವೇಶನ ನೀಡಿದ್ದಾರೆ. ಇದರಿಂದ ಮುಡಾಗೆ ನಷ್ಟವಾಗಿದೆ.

50:50 ಮಾಡುವುದಾದರೆ ಸರ್ಕಾರಕ್ಕೆ ಕಳುಹಿಸಿ ಒಪ್ಪಿಗೆ ಸಿಕ್ಕಿ ಆದೇಶವಾಗಬೇಕು. ಅಕ್ರಮವಾಗಿ ಅವರೇ ಹಂಚಿಕೆ ಮಾಡಿಕೊಂಡಿದ್ದಾರೆ. ಉದಾಹರಣೆಗೆ ದಾಸರಹಳ್ಳಿಯಲ್ಲಿ ಭೂಸ್ವಾಧೀನವಾದರೆ ಎಂ.ಜಿ. ರಸ್ತೆಯ ಜಮೀನು ಕೊಟ್ಟಂತಾಗಿದೆ. ಈ ಹಗರಣದ ತನಿಖೆಯನ್ನು ಸರ್ಕಾರದಡಿಯ ಸಂಸ್ಥೆಗೆ ನೀಡಿದರೆ ಮುಖ್ಯಮಂತ್ರಿಯವರನ್ನು ಆರೋಪಿ ಮಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಸಿಬಿಐಗೆ ತನಿಖೆಗೆ ವಹಿಸಲಿ ಎಂದು ಒತ್ತಾಯಿಸಿದರು.

ಇದನ್ನೂ ಓದಿ: Hassan News: ಆಲೂರಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್‌ಬುಕ್‌, ಬ್ಯಾಗ್‌ ವಿತರಣೆ

ಡಿನೋಟಿಫೈ ಆದ ಭೂಮಿಯ ಬದಲಿಗೆ ಪ್ರತಿಷ್ಠಿತ ಸ್ಥಳದ ಕಡೆ ಜಾಗ ನೀಡಲಾಗಿದೆ. ಡಿನೋಟಿಫೈ ಆದ ಜಮೀನನ್ನು ಅಭಿವೃದ್ಧಿ ಮಾಡಲಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ ಭೂ ಮಾಲೀಕರು ಅದನ್ನು ನೋಡಿಕೊಂಡು ಏಕೆ ಸುಮ್ಮನಿದ್ದರು ಎಂದು ಅನುಮಾನವಾಗುತ್ತದೆ. ನಾನು ಕೂಡ ಈ ಕುರಿತು ದಾಖಲೆಗಳನ್ನು ಕೇಳಿದ್ದರೂ ಏನೂ ಸಿಕ್ಕಿಲ್ಲ. ಈ ವಹಿವಾಟುಗಳಿಂದ ಸರ್ಕಾರಕ್ಕೆ ಸಾವಿರಾರು ಕೋಟಿ ರೂ. ನಷ್ಟವಾಗಿದೆ. ಮೈಸೂರು ಜಿಲ್ಲಾಧಿಕಾರಿ ಹಲವಾರು ಬಾರಿ ಮುಡಾಗೆ ಪತ್ರ ಬರೆದು ಸ್ಪಷ್ಟನೆ ಕೇಳಿದ್ದಾರೆ. ಆದರೆ ಇದಕ್ಕೆ ಮುಡಾದಿಂದ ಉತ್ತರ ದೊರೆತಿಲ್ಲ. ಅಲ್ಲೇ ಎಲ್ಲರೂ ಸೇರಿಕೊಂಡು ಗ್ಯಾಂಗ್‌ ಮಾಡಿಕೊಂಡಿದ್ದಾರೆ. ಇದರ ಹಿಂದೆ ದೊಡ್ಡ ಜಾಲವಿದೆ ಎಂದು ಆರೋಪಿಸಿದರು.

ಇದು ಬಿಜೆಪಿ ಕಾಲದಲ್ಲೇ ನಡೆದಿದ್ದು ಎಂದು ಸಿಎಂ ಹೇಳಿದ್ದಾರೆ. ಅದು ಯಾರೇ ಆಗಿದ್ದರೂ ಅವರನ್ನು ಮೊದಲು ಬಂಧನ ಮಾಡಿಸಬೇಕು. ಇದಕ್ಕೆ ನಮ್ಮ ಆಕ್ಷೇಪಣೆ ಇಲ್ಲ. ಇದರಲ್ಲಿ ಬಿಜೆಪಿ ಸರ್ಕಾರದ ಯಾವುದೇ ಪಾತ್ರವಿಲ್ಲ. ಈ ನಿವೇಶನ ಮಂಜೂರನ್ನು ಮೊದಲು ರದ್ದುಪಡಿಸಬೇಕು ಎಂದು ಅವರು ಆಗ್ರಹಿಸಿದರು.

ಇದನ್ನೂ ಓದಿ: Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

86 ಸಾವಿರ ಜನರು ನಿವೇಶನ ಕೊಡಿ ಎಂದು ಮನವಿ ಮಾಡಿದ್ದರೂ ಕಾಂಗ್ರೆಸ್‌ ನಾಯಕರಿಗೆ ಮಾತ್ರ ಸೈಟುಗಳು ಸಿಕ್ಕಿದೆ. ಸರ್ಕಾರದ ಆಸ್ತಿಗಳನ್ನು ಯಾರ‍್ಯಾರೋ ಲೂಟಿ ಮಾಡುತ್ತಿದ್ದಾರೆ ಎಂದು ದೂರಿದರು.

Continue Reading

ಉದ್ಯೋಗ

Job Alert: ಧಾರವಾಡ ಕೃಷಿ ವಿಜ್ಞಾನ ವಿವಿಯಲ್ಲಿ 6 ಹುದ್ದೆಗಳಿಗೆ ಅರ್ಜಿ ಆಹ್ವಾನ

ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಒಟ್ಟು 6 ಪ್ರಾಜೆಕ್ಟ್​ ಅಸಿಸ್ಟೆಂಟ್, ಸೀನಿಯರ್​ ರಿಸರ್ಚ್​ ಫೆಲೋ (SRF) ಹುದ್ದೆಗಳಿಗೆ (Job Alert) ಅರ್ಜಿ ಆಹ್ವಾನಿಸಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಲಿಖಿತ ಪರೀಕ್ಷೆ ಮತ್ತು ಕೌಶಲ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಧಾರವಾಡದ ಕೃಷಿ ನಗರ ಚೇಂಬರ್ ಆಫ್ ಅಸೋಸಿಯೇಟ್ ಡೈರೆಕ್ಟರ್ ಆಫ್ ರಿಸರ್ಚ್ (HQ) ನಲ್ಲಿ ಜುಲೈ 10ರಂದು ಸಂದರ್ಶನ ನಡೆಸಲಾಗುತ್ತದೆ.

VISTARANEWS.COM


on

By

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ (Job Alert) ಆಕಾಂಕ್ಷಿಗಳಿಗೆ ಒಂದು ಗುಡ್ ನ್ಯೂಸ್. ಧಾರವಾಡದ (Dharwad) ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯ (University of Agriculture Sciences) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಬೆಳಗಾವಿ (belagavi), ಧಾರವಾಡ, ಹಾವೇರಿಯಲ್ಲಿ (haveri) ಕೆಲಸ ಮಾಡಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು.

ಹುದ್ದೆಯ ವಿವರ ಹೀಗಿದೆ:

ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು ಒಟ್ಟು 6 ಪ್ರಾಜೆಕ್ಟ್​ ಅಸಿಸ್ಟೆಂಟ್, ಸೀನಿಯರ್​ ರಿಸರ್ಚ್​ ಫೆಲೋ (SRF) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದರಲ್ಲಿ ಸೀನಿಯರ್ ರಿಸರ್ಚ್ ಫೆಲೋ(SRF)-3, ಪ್ರಾಜೆಕ್ಟ್ ಅಸಿಸ್ಟೆಂಟ್​- ಹೈಡ್ರಾಲಜಿ (ಫೀಲ್ಡ್​)-1, ಪ್ರಾಜೆಕ್ಟ್​ ಅಸಿಸ್ಟೆಂಟ್ (RS & GIS)- 2 ಹುದ್ದೆಗಳಿವೆ.

ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳಿಗೆ ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಪೋಸ್ಟಿಂಗ್ ಮಾಡಲಾಗುತ್ತದೆ. ಸೀನಿಯರ್ ರಿಸರ್ಚ್ ಫೆಲೋ (SRF) ಅಭ್ಯರ್ಥಿಗಳಿಗೆ ಮಾಸಿಕ 31,000 ರೂ., ಪ್ರಾಜೆಕ್ಟ್ ಅಸಿಸ್ಟೆಂಟ್​- ಹೈಡ್ರಾಲಜಿ (ಫೀಲ್ಡ್​) ಅಭ್ಯರ್ಥಿಗಳಿಗೆ ಮಾಸಿಕ 29,000 ರೂ., ಪ್ರಾಜೆಕ್ಟ್​ ಅಸಿಸ್ಟೆಂಟ್ (RS & GIS)ಗಳಿಗೆ ಮಾಸಿಕ 21,000- 25,000 ರೂ. ವೇತನ ನೀಡಲಾಗುತ್ತದೆ.

ಶೈಕ್ಷಣಿಕ, ವಯೋಮಿತಿ ಅರ್ಹತೆ ಏನು?

ಸೀನಿಯರ್ ರಿಸರ್ಚ್ ಫೆಲೋ(SRF) ಗೆ ಅರ್ಜಿ ಸಲ್ಲಿರುವ ಅಭ್ಯರ್ಥಿಗಳು ಎಂ.ಎಸ್ಸಿ, ಪಿಎಚ್​.ಡಿ ಪದವಿ ಪೂರ್ಣಗೊಳಿಸಿರಬೇಕು. ಪ್ರಾಜೆಕ್ಟ್ ಅಸಿಸ್ಟೆಂಟ್​- ಹೈಡ್ರಾಲಜಿ (ಫೀಲ್ಡ್​) ವಿಭಾಗಕ್ಕೆ ಅರ್ಜಿ ಸಲ್ಲಿಸುವವರು ಬಿ.ಎಸ್ಸಿ, ಬಿ.ಟೆಕ್​ ಹಾಗೂ ಪ್ರಾಜೆಕ್ಟ್​ ಅಸಿಸ್ಟೆಂಟ್ (RS & GIS) ಹುದ್ದೆಗೆ ಅರ್ಜಿ ಸಲ್ಲಿಸುವವರು ಪದವಿ, ಬಿ.ಎಸ್ಸಿ, ಬಿಇ/ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು.

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳಿಗೆ ಮೀಸಲಾತಿ ಅನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಇದನ್ನೂ ಓದಿ: Job Alert: ಬ್ಯಾಂಕ್‌ ಆಫ್‌ ಬರೋಡಾದ 627 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ಇಲ್ಲಿದೆ ಹೊಸ ಟೈಮ್‌ ಟೇಬಲ್‌

ಆಯ್ಕೆ ಪ್ರಕ್ರಿಯೆ ಹೀಗಿರುತ್ತದೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ ಪರೀಕ್ಷೆ ಮತ್ತು ಸಂದರ್ಶನದ ಬಳಿಕ ಅರ್ಹರಾದವರನ್ನು ಆಯ್ಕೆ ಮಾಡಲಾಗುತ್ತದೆ.

ಲಿಖಿತ ಪರೀಕ್ಷೆ ಮತ್ತು ಕೌಶಲ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಧಾರವಾಡದ ಕೃಷಿ ನಗರ ಚೇಂಬರ್ ಆಫ್ ಅಸೋಸಿಯೇಟ್ ಡೈರೆಕ್ಟರ್ ಆಫ್ ರಿಸರ್ಚ್ (HQ) ನಲ್ಲಿ ಜುಲೈ 10ರಂದು ಸಂದರ್ಶನ ನಡೆಸಲಾಗುತ್ತದೆ.

Continue Reading

ಕ್ರೈಂ

Reels Obsession : ಶೋಕಿಲಾಲನ ವಿರುದ್ಧ ಚಿತ್ರದುರ್ಗದಲ್ಲೂ ಕೇಸ್‌; ಡಮ್ಮಿ ಗನ್‌ ಕೊಟ್ಟ ಸ್ಯಾಂಡಲ್‌ವುಡ್‌ ಟೆಕ್ನಿಷಿಯನ್‌ಗೆ ಸಂಕಷ್ಟ

Reels Obsession: ಮೊನ್ನೆಯಷ್ಟೇ ರೀಲ್ಸ್‌ಗಾಗಿ ಡಮ್ಮಿ ಗನ್‌ ಹಿಡಿದು ಶೋಕಿ ಮಾಡಿದ ಕಾರಣಕ್ಕೆ ರೀಲ್ಸ್‌ ಸ್ಟಾರ್‌ ಅರೆಸ್ಟ್‌ ಆಗಿದ್ದ. ಆದರೆ ಈತನ ವಿರುದ್ಧ ಚಿತ್ರದುರ್ಗದಲ್ಲೂ ಕೇಸ್‌ ದಾಖಲಾಗಿದ್ದು, ಡಮ್ಮಿ ಗನ್‌ ಕೊಟ್ಟ ಸ್ಯಾಂಡಲ್‌ವುಡ್‌ ಟೆಕ್ನಿಷಿಯನ್‌ಗೆ ಸಂಕಷ್ಟ ಎದುರಾಗಿದೆ.

VISTARANEWS.COM


on

By

Reels Obsession who gave dummy gun To Reels Obsession Sandalwood technician now trouble
ಸಿನಿಮಾ ಟೆಕ್ನಿಷಿಯನ್ ಸಾಹಿಲ್‌ಗೆ ಪೊಲೀಸರಿಂದ ನೋಟಿಸ್‌.. ಡಮ್ಮಿ ಗನ್‌ ಹಿಡಿದು ಶೋಕಿ ಮಾಡಿದ ಅರುಣ್‌ ಕಟಾರೆ
Koo

ಚಿತ್ರದುರ್ಗ/ಬೆಂಗಳೂರು: ರೀಲ್ಸ್‌ಗಾಗಿ ಎಕೆ 47 (AK 47 Rifle) ರೈಫಲ್‌ ಹಿಡಿದ ಗನ್ ಮ್ಯಾನ್‌ಗಳನ್ನು ಬಾಡಿಗಾರ್ಡ್ಸ್‌ (Bodyguards) ಆಗಿಟ್ಟುಕೊಂಡು ಶೋಕಿ (Reels Obsession) ಮಾಡಿದ ಅರುಣ್‌ ಕಟಾರೆ ಎಂಬಾತನನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದರು. ಆದರೆ ಕಳೆದ ವರ್ಷವೇ ಚಿತ್ರದುರ್ಗದಲ್ಲಿ ಅರುಣ್‌ ವಿರುದ್ಧ ಪ್ರತ್ಯೇಕ ಎರಡು ಎಫ್‌ಐಆರ್‌ಗಳು ದಾಖಲಾಗಿವೆ.

ಶೋಕಿಲಾಲ ಅರುಣ್‌ ಕಟಾರೆ ವಿರುದ್ಧ ಕಳೆದ 2023ರ ಏಪ್ರಿಲ್ ಹಾಗೂ ಜುಲೈನಲ್ಲಿ ಬ್ಲ್ಯಾಕ್‌ಮೇಲ್‌ ಹಾಗೂ ಚೀಟಿಂಗ್‌ ಮಾಡಿರುವ ಆರೋಪದಡಿ ಎಫ್‌ಐಆರ್‌ ದಾಖಲಾಗಿದೆ. ಬಾಲಕನಿಗೆ ಮದ್ಯ ಕುಡಿಸಿ, ಸಿಗರೇಟ್ ಸೇದಿಸಿ ಮೊಬೈಲ್‌ನಲ್ಲಿ ವಿಡಿಯೊ ಮಾಡಿ ಬೆದರಿಸುತ್ತಿದ್ದ. ಮನೆಯಿಂದ ಒಡವೆ ತರುವಂತೆ ಬಾಲಕನಿಗೆ ಅರುಣ್ ಕಟಾರೆ ಬೆದರಿಸುತ್ತಿದ್ದ. ಈ ವಿಚಾರ ತಿಳಿಯುತ್ತಿದ್ದಂತೆ ಬಾಲಕನ ತಂದೆ ಬಾಲಾಜಿ ಎಂ.ಕೆ ಎಂಬುವವರಿಂದ ದೂರು ದಾಖಲಿಸಿದ್ದರು.

ಹಣ ಡಬಲ್‌ ಮಾಡುವುದಾಗಿ ವಂಚನೆ

ಮತ್ತೊಬ್ಬರಿಗೆ ಹಣ ಡಬಲ್ ಮಾಡಿಕೊಡುವುದಾಗಿ ಹೇಳಿ ಸುಮಾರು 3,68,000 ಹಣ ಪಡೆದು ಅರುಣ್ ಕಟಾರೆ ವಂಚಿಸಿದ್ದಾನೆ. ಡ್ಯೂಯೆಟ್ ಪಬ್‌ನಲ್ಲಿ ಬಂಡವಾಳ ಹಾಕಿ ಡಬಲ್ ಮಾಡುವುದಾಗಿ ಹೇಳಿದ್ದ. ವಂಚನೆಗೆ ಒಳಗಾದ ರವಿತೇಜ ಎಲ್.ಯು ಎಂಬುವುವರಿಂದ ದೂರು ದಾಖಲಾಗಿದೆ. ರವಿತೇಜನಿಂದ ಹಣ ಪಡೆದ ಬಳಿಕ ಫೋನ್ ಸ್ವಿಚ್ ಮಾಡಿಕೊಂಡು ಅರುಣ್‌ ಕಟಾರೆ ಪರಾರಿ ಆಗಿದ್ದ.

ಸ್ಯಾಂಡಲ್‌ವುಡ್‌ ಟೆಕ್ನಿಷಿಯನ್‌ಗೆ ಸಂಕಷ್ಟ

ಅರುಣ್‌ ಕಟಾರೆ ರೀಲ್ಸ್ ಶೋಕಿಯಿಂದಾಗಿ ಸ್ಯಾಂಡಲವುಡ್‌ನ ಟೆಕ್ನಿಷಿಯನ್‌ಗೆ ಸಂಕಷ್ಟ ಎದುರಾಗಿದೆ. ಕನ್ನಡದ ಸೂಪರ್ ಹಿಟ್ ಸಿನಿಮಾಗಳಿಗೆ ಡಮ್ಮಿ ಗನ್ ಒದಗಿಸುವ ಟೆಕ್ನಿಷಿಯನ್ ಸಾಹಿಲ್‌ಗೆ ಪೊಲೀಸರು ನೋಟಿಸ್‌ ಕೊಟ್ಟಿದ್ದಾರೆ. ಹೊಂಬಾಳೆ ಫಿಲ್ಸ್, ಗೀತಾ ಪಿಕ್ಚರ್ಸ್ ನಂತಹ ಬ್ಯಾನರ್‌ಗಳ ಸಿನಿಮಾಗಳಿಗೆ ಸಾಹಿಲ್ ಟೆಕ್ನಿಷಿಯನ್ ಆಗಿದ್ದರು. ಕನ್ನಡದ ಸೂಪರ್ ಹಿಟ್ ಚಿತ್ರಗಳಾದ ಕಬ್ಜ, ಭೈರತಿ ರಣಗಲ್, ಮಪ್ತಿ ಸಿನಿಮಾಗಳಿಗೆ ಟೆಕ್ನಿಷಿಯನ್ ಸಾಹಿಲ್ ಡಮ್ಮಿ ಗನ್ ಒದಗಿಸಿದ್ದರು. ಇದೇ ಸಾಹಿಲ್ ಬಳಿ ಅರುಣ್ ಕಟಾರೆ ಡಮ್ಮಿ ಗನ್ ಬಾಡಿಗೆ ಪಡೆದಿದ್ದರು. ಸಾರ್ವಜನಿಕ ಸ್ಥಳದಲ್ಲಿ ರೀಲ್ಸ್ ಮಾಡಲು ಡಮ್ಮಿ ಗನ್‌ ಅನ್ನು ಅರುಣ್ ಕಟಾರೆ ಬಳಸಿದ್ದ. ಸದ್ಯ ಕೊತ್ತನೂರು ಠಾಣೆ ಪೊಲೀಸರಿಂದ ಬಂಧಿತನಾಗಿದ್ದ ಅರುಣ್ ಕಾಟೇರ, ಸಾಹಿಲ್ ಬಳಿ ಶಾರ್ಟ್ ಮೂವಿಗೆ ಎಂದು ಡಮ್ಮಿ ಗನ್ ಬಾಡಿಗೆ ತೆಗೆದುಕೊಂಡಿದ್ದ. ಈಗ ಕೊತ್ತನೂರು ಪೊಲೀಸರು ಸಾಹಿಲ್‌ಗೆ ನೊಟೀಸ್ ಜಾರಿ ಮಾಡಿದ್ದಾರೆ.

ಇದನ್ನೂ ಓದಿ: Viral Video: ರೀಲ್ಸ್‌ಗಾಗಿ ಸಿಗರೇಟ್‌ ದಂ ಹೊಡೆದ ಯುವತಿ; ಮನೇಲಿ ಹಿಗ್ಗಾಮುಗ್ಗಾ ಹೊಡೆದ ಅಪ್ಪ!

ಏನಿದು ಪ್ರಕರಣ?

ಬೆಂಗಳೂರು: ರೀಲ್ಸ್‌ಗಾಗಿ ಶೋಕಿ (Reels Obsession) ಮಾಡಿದವನನ್ನು ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಮುದ್ದೆ ಮುರಿಯಲು ಕಳಿಸಿದ್ದರು. ಈತ ಎಕೆ 47 (AK 47 Rifle) ರೈಫಲ್‌ ಹಿಡಿದ ಗನ್ ಮ್ಯಾನ್‌ಗಳನ್ನು ಬಾಡಿಗಾರ್ಡ್ಸ್‌ (Bodyguards) ಆಗಿಟ್ಟುಕೊಂಡು, ಪಾಶ್ ಕಾರುಗಳನ್ನು ಚಲಾಯಿಸಿಕೊಂಡು, ಮೈಮೇಲೆ ಕಿಲೋಗಟ್ಟಲೆ ಚಿನ್ನ ಧರಿಸಿಕೊಂಡು ಶೋಕಿ ಮಾಡುತ್ತಿದ್ದ. ಬೀದಿಬೀದಿಯಲ್ಲಿ ಈತನ ಗನ್‌ ಕಂಡು ಜನ ಆತಂಕಕ್ಕೊಳಗಾಗಿದ್ದರು.

ಬೆಂಗಳೂರಿನಲ್ಲಿ ಹೀಗೆ ಶೋ ಕೊಡಲು ಹೋಗಿ ಜೈಲು ಸೇರಿದ ರೀಲ್ಸ್ ಸ್ಟಾರ್ ಹೆಸರು ಅರುಣ್ ಕಟಾರೆ. ಕೊತ್ತನೂರು ಪೊಲೀಸರು ಈತನನ್ನು ಬಂಧಿಸಿದ್ದರು. ರೌಡಿ ಚಟುವಟಿಕೆ ಮತ್ತು ಹಳೆಯ ಎಂಓಬಿಗಳ ಮೇಲೆ ನಿಗಾ ವಹಿಸಿದ್ದ ಕೊತ್ತನೂರು ಸಿಬ್ಬಂದಿ ಬಾತ್ಮಿದಾರರಿಂದ ಬಂದ ಮಾಹಿತಿ ಮೇರೆಗೆ ಅರುಣ್ ಕಟಾರೆಯನ್ನು ವಶಕ್ಕೆ ಪಡೆದಿದ್ದರು.

ಈತ ಬಾಡಿಗಾರ್ಡ್ಸ್‌ ಥರ ಮನುಷ್ಯರನ್ನಿಟ್ಟುಕೊಂಡು, ಅವರ ಕೈಲಿ ಎಕೆ 47 ಮಾದರಿಯ ನಕಲಿ ಗನ್ ಹಿಡಿಸಿ ರಸ್ತೆಯಲ್ಲಿ ಶೋಆಫ್‌ ಮಾಡುತ್ತಿದ್ದ. ಮೈಮೇಲೆ ನಕಲಿ ಚಿನ್ನ ಹೇರಿಕೊಳ್ಳುತ್ತಿದ್ದ. ಅರುಣ್ ಕಟಾರೆ ಶೋನಿಂದ ಬೆದರಿದ ಸಾರ್ವಜನಿಕರು ಆತಂಕದಿಂದ ಈ ಬಗ್ಗೆ ಮಾಹಿತಿ ನೀಡಿದ್ದರು. ಆರ್ಮ್ಸ್ ಕಾಯಿದೆ ಸೆ. 290 ಅಡಿಯಲ್ಲಿ ಪ್ರಕರಣ ದಾಖಲಿಸಿ ಈತನನ್ನು ಬಂಧಿಸಲಾಗಿತ್ತು. ವಿಚಾರಣೆ ವೇಳೆ, ನಕಲಿ ಗನ್ ಹಿಡಿದು ಏರಿಯಾದಲ್ಲಿ ಹವಾ ಸೃಷ್ಟಿಸಲು ಹೋದವನ ಗುಟ್ಟು ಬಯಲಾಗಿತ್ತು. ರೀಲ್ಸ್ ಶೋಕಿಗೆ ಬಿದ್ದ ಯುವಕನನ್ನು ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಕಳಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

Karnataka Weather Forecast : ಅಬ್ಬರಿಸುತ್ತಿರುವ ಮಳೆಯಿಂದಾಗಿ ನಾನಾ ಅವಾಂತರವೇ ಸೃಷ್ಟಿ ಆಗಿದೆ. ಮಳೆಗೆ (Rain News) ಲಾರಿಗಳ ನಡುವೆ ಮುಖಾಮುಖಿ (Road Accident) ಡಿಕ್ಕಿಯಾದರೆ, ಮತ್ತೊಂದು ಕಡೆ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್‌ ಮರ ಬಿದ್ದು ಜಖಂಗೊಂಡಿದೆ. ಹಲವಾರು ಗ್ರಾಮಗಳು ನೀರಿನಿಂದ ಮುಳುಗಡೆಯಾಗಿದೆ.

VISTARANEWS.COM


on

By

karnataka Rain
Koo

ಬೆಳಗಾವಿ/ಶಿವಮೊಗ್ಗ/ಉಡುಪಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯು (Karnataka rain) ಅವಾಂತರವನ್ನೇ (Rain Effect) ಸೃಷ್ಟಿಸಿದೆ. ತೀವ್ರ ಮಳೆಯಿಂದಾಗಿ ಚಾಲಕರ ನಿಯಂತ್ರಣ ತಪ್ಪಿ ಲಾರಿಗಳ ಮಧ್ಯೆ ಮುಖಾಮುಖಿ (Road Accident) ಡಿಕ್ಕಿಯಾಗಿದೆ. ಬೆಳಗಾವಿ ತಾಲೂಕಿನ ಹಲಗಾ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಲಾರಿ ಚಾಲಕರಿಬ್ಬರಿಗೂ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಡಿಕ್ಕಿಯ ರಭಸಕ್ಕೆ ಲಾರಿಗಳು ಸಂಪೂರ್ಣವಾಗಿ ನುಜ್ಜು ಗುಜ್ಜಾಗಿವೆ. ಹಿರೇಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Karnataka Rain

ಮಳೆಗೆ ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಭಾಗದಲ್ಲಿ ಭಾರೀ ಗಾಳಿಯೊಂದಿಗೆ ಮಳೆಯಾಗತ್ತಿದೆ. ಪರಿಣಾಮ ಚಲಿಸುತ್ತಿದ್ದ ಓಮಿನಿ ಕಾರಿನ ಮೇಲೆ ಬೃಹತ್ ಮರ ಬಿದ್ದಿದೆ. ಆಗುಂಬೆ ಘಾಟಿಯ ನಾಲ್ಕನೇ ತಿರುವಿನಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಓಮಿನಿಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಓಮಿನಿ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರಿನ ಮೇಲೆ ಮರ ಬಿದ್ದ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

karnataka Rain

ಉಡುಪಿಯಲ್ಲಿ ಮುಳುಗಡೆಯಾದ ಗ್ರಾಮಗಳು

ಪ್ರತಿ ವರ್ಷದಂತೆ ಈ ವರ್ಷವೂ ಉಡುಪಿಯ ಬೈಂದೂರು ತಾಲೂಕಿನಲ್ಲಿ ನೆರೆಹಾವಳಿ ಸೃಷ್ಟಿಯಾಗಿದೆ. ತಾಲೂಕಿನ ನಾವುಂದ, ಬಡಾಕೇರಿ, ಮರವಂತೆ, ಸಾಲ್ಬುಡ, ಅರೆಹೊಳೆ ಕೋಣ್ಕಿ ಹಾಗೂ ಕುದ್ರು ಚಿಕ್ಕಳ್ಳಿ ಪಡುಕೋಣೆ ಭಾಗದಲ್ಲಿ ನೆರೆಹಾವಳಿಗೆ ತುತ್ತಾಗಿವೆ.

ಸ್ಥಳೀಯ ಯುವಕರು ನೆರೆಹಾವಳಿ ಪೀಡಿತ ಪ್ರದೇಶಗಳಿಗೆ ತೆರಳಿ ಅಗತ್ಯ ನೆರವು ನೀಡುತ್ತಿದ್ದಾರೆ. ಮೂರು ದೋಣಿಗಳನ್ನು ಬಳಸಿ ರಕ್ಷಣಾ ಕಾರ್ಯದ ಜತೆಗೆ ಅಗತ್ಯ ವಸ್ತು ಪೂರೈಸುತ್ತಿದ್ದಾರೆ. ಹೆಚ್ಚುವರಿಯಾಗಿ ಬೈಂದೂರು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನೆರೆಪೀಡಿತ ಪ್ರದೇಶಕ್ಕೆ ಕುಂದಾಪುರ ಸಹಾಯಕ ಕಮೀಶನರ್ ರಶ್ಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

ಮನೆಗಳು ಜಲಾವೃತ

ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆಯಿಂದಾಗಿ ಅಂಕೋಲಾ ತಾಲೂಕಿನ ಬಿಳೆಹೊಂಯ್ಗಿ, ಮಂಜಗುಣಿ ಸೇರಿದಂತೆ 5ಕ್ಕೂ ಹೆಚ್ಚು ಗ್ರಾಮಗಳಿಗೆ ನೀರು ನುಗ್ಗಿದೆ. ಹೊನ್ನೆಬೈಲ್ ಗ್ರಾಮದಲ್ಲಿ 20 ಮನೆಗಳು ಜಲಾವೃತಗೊಂಡಿದೆ. ಅಂಕೋಲಾ ತಾಲೂಕಿನ 5 ಗ್ರಾಮಗಳಲ್ಲಿ ರಸ್ತೆ ನೀರಿನಿಂದ ಮುಳುಗಿದೆ. ಹೀಗಾಗಿ ಬಿಳೆಹೊಂಯ್ಗಿ, ಹೊನ್ನೆಬೈಲು, ಶಿಂಗನಮಕ್ಕಿ, ಮಂಜಗುಣಿ ಶಾಲೆಗಳಲ್ಲಿ ಕಾಳಜಿ ಕೇಂದ್ರವನ್ನು ಜಿಲ್ಲಾಡಳಿತ ತೆರೆದಿದೆ. ನೆರೆ ಪರಿಸ್ಥಿತಿ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

karnataka rain

50ಕ್ಕೂ ಅಧಿಕ ನಿವಾಸಿಗಳು ಕಾಳಜಿ ಕೇಂದ್ರಕ್ಕೆ ರವಾನೆಯಾಗಿದ್ದಾರೆ. ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ನದಿ, ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿದೆ. ವರುಣನ ಅಬ್ಬರಕ್ಕೆ ತಗ್ಗು ಪ್ರದೇಶದ ನಿವಾಸಿಗಳಲ್ಲಿ ಆತಂಕ ಹೆಚ್ಚಿದೆ. ಇತ್ತ ಭಟ್ಕಳದಲ್ಲೂ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನೀರು ನಿಂತು ಹೆದ್ದಾರಿಯಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆ ಹಿನ್ನಲೆ ಭಟ್ಕಳ ರಂಗಿನಕಟ್ಟೆ ಪ್ರದೇಶ ಹೊಳೆಯಂತಾಗಿದೆ. ಭಟ್ಕಳ ತಹಸೀಲ್ದಾರ ನಾಗರಾಜ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪುರಸಭಾ ಸಿಬ್ಬಂದಿ ಚರಂಡಿಯಲ್ಲಿ ತುಂಬಿರುವ ಮಣ್ಣು, ಕಲ್ಲನ್ನು ತೆರವುಗೊಳಿಸುತ್ತಿದ್ದಾರೆ. ಪಟ್ಟಣದ ಜಾಮೀಯಾಬಾದ್‌ ನಲ್ಲಿಯೂ ಮನೆಗಳಿಗೆ ನೀರು ನುಗ್ಗಿದೆ. ಕೋಗ್ತಿ ರೋಡ್, ಡೊಂಗರಪಳ್ಳಿ, ಆಝಾದ್‌ನಗರ, ಕಾರಗದ್ದೆ ರಸ್ತೆ ಜಲಾವೃತಗೊಂಡಿದೆ.

ಉಡುಪಿಯಲ್ಲಿ ಉಕ್ಕಿಹರಿದ ಮಡಿಸಾಲು ಹೊಳೆ

ಬ್ರಹ್ಮಾವರ ತಾಲೂಕಿನ ಆಲೂರು ಬಳಿ ಮಡಿಸಾಲು ಹೊಳೆಯು ಉಕ್ಕಿಹರಿದಿದೆ. ಆರೂರು- ಬೆಳ್ಮಾರು ಗ್ರಾಮದ ಮಧ್ಯ ಹರಿಯಲಿದ್ದು, ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನೆರೆಹಾವಳಿ ಸೃಷ್ಟಿಯಾಗಿದೆ. ಕೃಷಿಕರಿಗೆ ಜೀವನದಿಯಾಗಿದ್ದ ಮಡಿಸಾಲು ಹೊಳೆ ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ಹೊಳೆಯ ಪಕ್ಕದ ಎಕರೆಗಟ್ಟಲೆ ಕೃಷಿ ಭೂಮಿ ಜಲಾವೃತಗೊಂಡಿದೆ. ಕೆಲವು ದಿನಗಳ ಹಿಂದೆಯಷ್ಟೆ ಭತ್ತದ ನಾಟಿ ಮಾಡಿ ಮಾಡಿದ್ದ ಪ್ರದೇಶದಲ್ಲಿ ಈಗ ನೆರೆಹಾವಳಿ ಸೃಷ್ಟಿಯಾಗಿದೆ. ನೆರೆಯಿಂದಾಗಿ ಆರೂರು ಬೆಳ್ಮಾರು ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಮತ್ತೆ ಮಳೆ ಮುಂದುವರಿದರೆ ಕಿರು ಸೇತುವೆ ಮುಳುಗಡೆಯಾಗುವ ಭೀತಿ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Opposition party leader R Ashok latest statement about muda scam
ಕರ್ನಾಟಕ4 mins ago

R Ashok: ಮುಡಾದಲ್ಲಿ ಎಲ್ಲರೂ ಗ್ಯಾಂಗ್‌ ಮಾಡಿಕೊಂಡು ಹಗರಣ ಮಾಡಿದ್ದಾರೆ; ಆರ್‌. ಅಶೋಕ್‌ ಆರೋಪ

Pregnancy Fashion
ಫ್ಯಾಷನ್7 mins ago

Pregnancy Fashion: ಪ್ರೆಗ್ನೆನ್ಸಿ ಸ್ಟೈಲಿಂಗ್‌ನಲ್ಲಿ ಮರೆಯದೇ ಗಮನದಲ್ಲಿಟ್ಟುಕೊಳ್ಳಬೇಕಾದ ಸಂಗತಿಗಳಿವು!

Viral Video
Latest10 mins ago

Viral Video: ಬುಲೆಟ್‌ ಮೇಲೆ ಬಂದ ಹುಡುಗಿ ಆಟೊ ಚಾಲಕನ ಬುರುಡೆ ಒಡೆದಳು!

PM Modi Russia Visit
ದೇಶ15 mins ago

PM Modi Russia Visit: ಜುಲೈ 8ರಿಂದ ಮೋದಿ ರಷ್ಯಾ ಪ್ರವಾಸ; ಉಕ್ರೇನ್‌ ಆಕ್ರಮಣದ ಬಳಿಕ ಮೊದಲ ಭೇಟಿ

Job Alert
ಉದ್ಯೋಗ26 mins ago

Job Alert: ಧಾರವಾಡ ಕೃಷಿ ವಿಜ್ಞಾನ ವಿವಿಯಲ್ಲಿ 6 ಹುದ್ದೆಗಳಿಗೆ ಅರ್ಜಿ ಆಹ್ವಾನ

Reels Obsession who gave dummy gun To Reels Obsession Sandalwood technician now trouble
ಕ್ರೈಂ33 mins ago

Reels Obsession : ಶೋಕಿಲಾಲನ ವಿರುದ್ಧ ಚಿತ್ರದುರ್ಗದಲ್ಲೂ ಕೇಸ್‌; ಡಮ್ಮಿ ಗನ್‌ ಕೊಟ್ಟ ಸ್ಯಾಂಡಲ್‌ವುಡ್‌ ಟೆಕ್ನಿಷಿಯನ್‌ಗೆ ಸಂಕಷ್ಟ

Viral News
Latest36 mins ago

Viral News: ಚಾಲಕನ ಹೆಸರು ʼಯಮರಾಜʼ ಎನ್ನುವುದು ಗೊತ್ತಾಗುತ್ತಲೇ ಕ್ಯಾಬ್ ಬುಕಿಂಗ್‌ ಕ್ಯಾನ್ಸಲ್‌ ಮಾಡಿದ ಗ್ರಾಹಕ!

ಪ್ರಮುಖ ಸುದ್ದಿ43 mins ago

Narendra Modi : ಟ್ರೋಫಿಯನ್ನು ಕೈಯಲ್ಲಿ ಮುಟ್ಟದ ಪ್ರಧಾನಿ ಮೋದಿ, ಕಾರಣವೇನು?

Viral Video
Latest50 mins ago

Viral Video: ಹೆಂಡತಿಯನ್ನು ಯಾಮಾರಿಸಿ ಪ್ರೇಯಸಿಯನ್ನು ಮನೆಗೆ ಕರೆಸಬಾರದಿತ್ತು! ಗೂಸಾ ತಿಂದವನ ಪ್ರತಿಕ್ರಿಯೆ!

Dhruva Sarja Gym Trainer Prashanth poojari twist
ಸ್ಯಾಂಡಲ್ ವುಡ್53 mins ago

Dhruva Sarja: ಧ್ರುವ ಸರ್ಜಾ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಹಲ್ಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 hour ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ2 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ4 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ4 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ6 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ7 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

ಟ್ರೆಂಡಿಂಗ್‌