Drown In Water: ಭೀಕರ ದುರಂತ; ನಾಲ್ವರು ಮಕ್ಕಳು ಸೇರಿ ಐವರು ನೀರುಪಾಲು - Vistara News

ದೇಶ

Drown In Water: ಭೀಕರ ದುರಂತ; ನಾಲ್ವರು ಮಕ್ಕಳು ಸೇರಿ ಐವರು ನೀರುಪಾಲು

Drown In Water:ಪುಣೆ ಎಸ್ಪಿ ಪಂಕಜ್ ದೇಶ್‌ಮುಖ್‌ ಈ ಬಗ್ಗೆ ಮಾಹಿತಿ ನೀಡಿದ್ದು, 2 ಶವಗಳನ್ನು ಹೊರತೆಗೆಯಲಾಗಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಎಲ್ಲಾ ಐದು ಜನರು ಪುಣೆ ಸಯ್ಯದ್ ನಗರಕ್ಕೆ ಸೇರಿದ ಒಂದೇ ಕುಟುಂಬದವರು ಎಂದು ಹೇಳಿದ್ದಾರೆ. ನಾವು 40 ವರ್ಷದ ಮಹಿಳೆ ಮತ್ತು 13 ವರ್ಷದ ಬಾಲಕಿಯ ಶವಗಳನ್ನು ವಶಪಡಿಸಿಕೊಂಡಿದ್ದೇವೆ. ಘಟನೆಯಲ್ಲಿ 6 ವರ್ಷದ ಇಬ್ಬರು ಬಾಲಕಿಯರು ಹಾಗೂ 4 ವರ್ಷದ ಬಾಲಕ ನಾಪತ್ತೆಯಾಗಿದ್ದಾರೆ.

VISTARANEWS.COM


on

Drown In Water
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ:ಮಹಾರಾಷ್ಟ್ರದ ಲೋನಾವಾಲಾದಲ್ಲಿ ಭಾನುವಾರ ಎಡೆಬಿಡದೆ ಸುರಿಯುತ್ತಿರುವ ಮಳೆ(Heavy Rain)ಯಿಂದಾಗಿ ಭೂಶಿ ಅಣೆಕಟ್ಟು(Bhushi Dam) ತುಂಬಿ ಹರಿದ ಪರಿಣಾಮ ನಾಲ್ವರು ಮಕ್ಕಳು ಸೇರಿದಂತೆ ಕನಿಷ್ಠ ಐವರು ನೀರಿನಲ್ಲಿ ಮುಳುಗಿ(Drown In Water) ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 1:30ಕ್ಕೆ ಘಟನೆ ನಡೆದಿದ್ದು, ಶೋಧ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ.

ಪುಣೆ ಎಸ್ಪಿ ಪಂಕಜ್ ದೇಶ್‌ಮುಖ್‌ ಈ ಬಗ್ಗೆ ಮಾಹಿತಿ ನೀಡಿದ್ದು, 2 ಶವಗಳನ್ನು ಹೊರತೆಗೆಯಲಾಗಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಎಲ್ಲಾ ಐದು ಜನರು ಪುಣೆ ಸಯ್ಯದ್ ನಗರಕ್ಕೆ ಸೇರಿದ ಒಂದೇ ಕುಟುಂಬದವರು ಎಂದು ಹೇಳಿದ್ದಾರೆ. ನಾವು 40 ವರ್ಷದ ಮಹಿಳೆ ಮತ್ತು 13 ವರ್ಷದ ಬಾಲಕಿಯ ಶವಗಳನ್ನು ವಶಪಡಿಸಿಕೊಂಡಿದ್ದೇವೆ. ಘಟನೆಯಲ್ಲಿ 6 ವರ್ಷದ ಇಬ್ಬರು ಬಾಲಕಿಯರು ಹಾಗೂ 4 ವರ್ಷದ ಬಾಲಕ ನಾಪತ್ತೆಯಾಗಿದ್ದಾರೆ. ಅವರು ಭೂಶಿ ಅಣೆಕಟ್ಟಿನಿಂದ ಎರಡು ಕಿಲೋಮೀಟರ್ ದೂರದಲ್ಲಿರುವ ಜಲಪಾತದಿಂದ ಕೆಳಕ್ಕೆ ಬಿದ್ದು ನೀರುಪಾಲಾಗಿದ್ದಾರೆ ಎಂದು ದೇಶಮುಖ್ ಹೇಳಿದ್ದಾರೆ.

ಎರಡು ವಾರಗಳ ಹಿಂದೆ ಜಮೀನಿನಲ್ಲಿ ನೀರು ತುಂಬಿದ್ದ ಆಳವಾದ ಗುಂಡಿಗೆ ಬಿದ್ದು ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಡಲಗೇರಿ ಗ್ರಾಮದಲ್ಲಿ ನಡೆದಿತ್ತು.. ಗುಂಡಿಗೆ ಬಿದ್ದ ಬಾಲಕಿಯನ್ನು ರಕ್ಷಿಸಲು ಹೋಗಿ ಇನ್ನಿಬ್ಬರು ಕೂಡ ಪ್ರಾಣ ಕಳೆದುಕೊಂಡಿದ್ದಾರೆ. ನೀಲಮ್ಮ ಖಿಲಾರಹಟ್ಟಿ (16), ಮುತ್ತಪ್ಪ ಖಿಲಾರಹಟ್ಟಿ (24) ಹಾಗೂ ಶಿವು ಯಾಳವಾರ (25) ಮೃತರು.

ಹಡಲಗೇರಿ ಗ್ರಾಮದ ಚಿನ್ನಪ್ಪ ತಳವಾರ ಎಂಬುವವರ ಜಮೀನಿನಲ್ಲಿ ಎಮ್ಮೆ ಮೇಯಿಸಲು ಬಾಲಕಿ ನೀಲಮ್ಮ ಹೋಗಿದ್ದಳು. ಈ ವೇಳೆ ಎಮ್ಮೆಗೆ ನೀರು ಕುಡಿಸಲು ಗುಂಡಿ ಬಳಿ ಬಂದಾಗ ಕಾಲು ಜಾರಿ ನೀರಿಗೆ ಬಿದ್ದಿದ್ದಾಳೆ. ಇದನ್ನು ಕಂಡು ಆಕೆಯನ್ನು ರಕ್ಷಣೆ ಮಾಡಲು ಬಂದ ಸಂಬಂಧಿಕ ಮುತ್ತಪ್ಪ ಖಿಲಾರಹಟ್ಟಿ ನೀರಿನಲ್ಲಿ ಸಿಲುಕಿದ್ದಾನೆ. ಅವರಿಬ್ಬರೂ ಹೊರ ಬರಲಾರದೇ ಪರದಾಡುತ್ತಿದ್ದಾಗ ಅವರನ್ನು ಕಾಪಾಡಲು ಹೋದ ಶಿವು ಯಾಳವಾರ ಕೂಡ ನೀರು ಪಾಲಾಗಿದ್ದ.

ಇದನ್ನೂ ಓದಿ: Indian Armed Forces: ಸಹಪಾಠಿಗಳು ಈ ಭಾರತೀಯ ಸೇನೆ ಮತ್ತು ನೌಕಾಪಡೆ ಮುಖ್ಯಸ್ಥರು; ಇದು ದೇಶದ ಇತಿಹಾಸದಲ್ಲೇ ಮೊದಲು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

LK Advani: ಎಲ್‌.ಕೆ. ಅಡ್ವಾಣಿ ಆರೋಗ್ಯದಲ್ಲಿ ಚೇತರಿಕೆ; ಆಸ್ಪತ್ರೆಯಿಂದ ಡಿಸ್‌ಚಾರ್ಜ್‌

LK Advani: ಬುಧವಾರ (ಜುಲೈ 3) ರಾತ್ರಿ 9 ಗಂಟೆ ಸುಮಾರಿಗೆ ಎಲ್‌.ಕೆ.ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಇದಾದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. 96 ವರ್ಷದ ಎಲ್‌.ಕೆ.ಅಡ್ವಾಣಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಕಂಡ ಬಳಿಕ ಅವರನ್ನು ಡಿಸ್‌ಚಾರ್ಜ್‌ ಮಾಡಲಾಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

LK Advani
Koo

ನವದೆಹಲಿ: ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ (L K Advani) ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ದೆಹಲಿಯ ಅಪೋಲೊ ಆಸ್ಪತ್ರೆಯಿಂದ (Apollo Hospital) ಡಿಸ್‌ಚಾರ್ಜ್‌ ಮಾಡಲಾಗಿದೆ. ಅಪೋಲೊ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಎಲ್‌.ಕೆ.ಅಡ್ವಾಣಿ ಅವರ ಆರೋಗ್ಯ ಚೇತರಿಕೆ ಕಂಡಿದೆ. ಹಾಗಾಗಿ, ಗುರುವಾರ (ಜುಲೈ 4) ಸಂಜೆ ಅವರನ್ನು ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಮಾಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಬುಧವಾರ (ಜುಲೈ 3) ರಾತ್ರಿ 9 ಗಂಟೆ ಸುಮಾರಿಗೆ ಎಲ್‌.ಕೆ.ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಇದಾದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. 96 ವರ್ಷದ ಎಲ್‌.ಕೆ.ಅಡ್ವಾಣಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಜೂನ್‌ 27ರಂದು ಕೂಡ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಹಾಗಾಗಿ ಅವರನ್ನು ಅದೇ ರಾತ್ರಿ ದೆಹಲಿಯಲ್ಲಿರುವ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಅವರನ್ನು ಡಿಸ್‌ಚಾರ್ಜ್‌ ಮಾಡಲಾಗಿತ್ತು.

LK Advani

ಕಳೆದ ತಿಂಗಳ ಆರಂಭದಲ್ಲಿ, ಸರ್ಕಾರ ರಚನೆಗೆ ಹಕ್ಕು ಸಾಧಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಅಡ್ವಾಣಿಯವರನ್ನು ಭೇಟಿ ಮಾಡಿದ್ದರು. ಗಾಂಧಿನಗರದ ಮಾಜಿ ಸಂಸದರಾದ ಅಡ್ವಾಣಿ, ಮೋದಿಯವರ ರಾಜಕೀಯ ಮಾರ್ಗದರ್ಶಕರಾಗಿದ್ದಾರೆ.

ಅಡ್ವಾಣಿ ಅವರಿಗೆ ಈ ವರ್ಷದ ಮಾರ್ಚ್‌ನಲ್ಲಿ ಭಾರತ ರತ್ನ ಪ್ರಶಸ್ತಿಯನ್ನು ನೀಡಲಾಗಿತ್ತು. ಅವರ ನಿವಾಸದಲ್ಲಿಯೇ ಈ ಅತ್ಯುನ್ನತ ನಾಗರಿಕ ಗೌರವವನ್ನು ಸಲ್ಲಿಸಲಾಗಿತ್ತು. ರಾಷ್ಟ್ರಪತಿ ದ್ರೌಪದಿ ಮುರ್ಮು ಇದನ್ನು ಕೊಡಮಾಡಿದ್ದರು. ಔಪಚಾರಿಕ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಎಲ್ ಕೆ ಅಡ್ವಾಣಿ ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

ಎಲ್‌ಕೆ ಅಡ್ವಾಣಿ ಅವರು ಜೂನ್ 2002ರಿಂದ ಮೇ 2004 ರವರೆಗೆ ಭಾರತದ ಉಪ ಪ್ರಧಾನ ಮಂತ್ರಿಯಾಗಿ, ಅಕ್ಟೋಬರ್ 1999 ರಿಂದ ಮೇ 2004 ರವರೆಗೆ ಕೇಂದ್ರ ಗೃಹ ಸಚಿವರಾಗಿ ಸೇವೆ ಸಲ್ಲಿಸಿದರು. ಅವರು 1986 ರಿಂದ 1990, 1993 ರಿಂದ 1998 ಮತ್ತು 2004 ರಿಂದ 2005ರವರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು.

ಇದನ್ನೂ ಓದಿ: LK Advani: ಎಲ್‌ ಕೆ ಅಡ್ವಾಣಿ ಆರೋಗ್ಯದಲ್ಲಿ ಮತ್ತೆ ಏರುಪೇರು; ಆಸ್ಪತ್ರೆಗೆ ದಾಖಲು

Continue Reading

ದೇಶ

Hemant Soren: 5 ತಿಂಗಳ ಜೈಲುವಾಸದ ಬಳಿಕ ಮತ್ತೆ ಜಾರ್ಖಂಡ್‌ ಸಿಎಂ ಆಗಿ ಹೇಮಂತ್‌ ಸೊರೆನ್‌ ಪ್ರಮಾಣವಚನ!

Hemant Soren: Hemant Soren: ಅಕ್ರಮವಾಗಿ ಹಣ ವರ್ಗಾವಣೆ ಸೇರಿ ಹಲವು ಪ್ರಕರಣಗಳಲ್ಲಿ ಹೇಮಂತ್‌ ಸೊರೆನ್‌ ಅವರ ಬಂಧನವಾದ ಬಳಿಕ ಅವರ ಆಪ್ತ ಚಂಪೈ ಸೊರೆನ್‌ ಅವರು ಫೆಬ್ರವರಿ 2ರಂದು ಜಾರ್ಖಂಡ್‌ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಜೈಲಿನಿಂದ ಬಿಡುಗಡೆಯಾಗಿರುವ ಹೇಮಂತ್‌ ಸೊರೆನ್‌ ಅವರು ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

VISTARANEWS.COM


on

Hemant Soren
Koo

ರಾಂಚಿ: ಅಕ್ರಮ ಹಣ ವರ್ಗಾವಣೆ (Money laundering Case), ಭೂ ವ್ಯವಹಾರ ಸೇರಿ ಹಲವು ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳಿಂದ ಬಂಧಿತರಾಗಿ, ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿರುವ ಜಾರ್ಖಂಡ್‌ ಮುಕ್ತಿ ಮೋರ್ಚಾ ಪಕ್ಷದ ಮುಖ್ಯಸ್ಥ ಹೇಮಂತ್‌ ಸೊರೆನ್ (Hemant Soren) ಅವರು ಮೂರನೇ ಬಾರಿಗೆ ಜಾರ್ಖಂಡ್‌ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಐದು ತಿಂಗಳ ಜೈಲು ವಾಸದ ಬಳಿಕ ಅವರು ಮತ್ತೆ ಸಿಎಂ ಗದ್ದುಗೆಗೆ ಏರಿದ್ದಾರೆ.

ಅಕ್ರಮವಾಗಿ ಹಣ ವರ್ಗಾವಣೆ ಸೇರಿ ಹಲವು ಪ್ರಕರಣಗಳಲ್ಲಿ ಹೇಮಂತ್‌ ಸೊರೆನ್‌ ಅವರ ಬಂಧನವಾದ ಬಳಿಕ ಅವರ ಆಪ್ತ ಚಂಪೈ ಸೊರೆನ್‌ ಅವರು ಫೆಬ್ರವರಿ 2ರಂದು ಜಾರ್ಖಂಡ್‌ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಜಾರ್ಖಂಡ್ ಮುಕ್ತಿ ಮೋರ್ಚಾ, ಕಾಂಗ್ರೆಸ್ ಮತ್ತು ಲಾಲು ಪ್ರಸಾದ್‌ ಯಾದವ್ ಅವರ ರಾಷ್ಟ್ರೀಯ ಜನತಾ ದಳದ ಆಡಳಿತಾರೂಢ ಮೈತ್ರಿಕೂಟವು ಹೇಮಂತ್‌ ಸೊರೆನ್‌ ಅವರು ಮತ್ತೆ ಸಿಎಂ ಆಗಲು ಒಪ್ಪಿಗೆ ಸೂಚಿಸಿತು. ಇದಾದ ಬಳಿಕ ಚಂಪೈ ಸೊರೆನ್‌ ರಾಜೀನಾಮೆ ನೀಡಿದ್ದರು. ಹೇಮಂತ್‌ ಸೊರೆನ್‌ ಅವರು ಸರ್ಕಾರ ರಚಿಸಲು ಹಕ್ಕು ಮಂಡಿಸಿ, ಈಗ ಸಿಎಂ ಆಗಿ ಪದಗ್ರಹಣ ಮಾಡಿದ್ದಾರೆ.

ಅಕ್ರಮವಾಗಿ ಹಣ ವರ್ಗಾವಣೆ, ಭೂ ಅವ್ಯವಹಾರ ಪ್ರಕರಣ ಕೇಳಿಬಂದ ಹಿನ್ನೆಲೆಯಲ್ಲಿ ಇ.ಡಿ ಅಧಿಕಾರಿಗಳು ಹೇಮಂತ್‌ ಸೊರೆನ್‌ ಅವರಿಗೆ 9 ಬಾರಿ ಸಮನ್ಸ್‌ ಜಾರಿಗೊಳಿಸಿದ್ದರು. ಆದರೆ ಹೇಮಂತ್‌ ಸೊರೆನ್‌ ಅವರು ಪ್ರತಿ ಬಾರಿ ಸಮನ್ಸ್‌ ನೀಡಿದಾಗಲೂ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದರು. ಇ.ಡಿ ಅಧಿಕಾರಿಗಳು ಮನೆಗೆ ಲಗ್ಗೆ ಇಡುತ್ತಾರೆ ಎಂಬುದನ್ನು ಅರಿತಿದ್ದ ಅವರು ದೆಹಲಿಗೆ ತೆರಳಿ, ಗೌಪ್ಯ ಸ್ಥಳದಲ್ಲಿದ್ದರು. ಆದರೆ ಇ.ಡಿ ಅಧಿಕಾರಿಗಳು ಕೊನೆಗೂ ಹೇಮಂತ್‌ ಸೊರೆನ್‌ ಅವರನ್ನು ಈ ವರ್ಷದ ಜನವರಿ 31ರಂದು ಬಂಧಿಸಿದ್ದರು. ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಹೇಮಂತ್‌ ಸೊರೆನ್‌ ಅವರು ರಾಜೀನಾಮೆ ನೀಡಿದ್ದರು.

ಬಂಧನವನ್ನು ಪ್ರಶ್ನಿಸಿ ಹಾಗೂ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿತ್ತು. ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸುವ ಉದ್ದೇಶದಿಂದ ಹೇಮಂತ್‌ ಸೊರೆನ್‌ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠವು ಹೇಮಂತ್ ಸೊರೆನ್ ಅವರು ವಿಚಾರಣಾ ನ್ಯಾಯಾಲಯದ ಮುಂದೆ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ ಎಂಬ ಅಂಶವನ್ನು ಮರೆಮಾಚಿದ್ದಕ್ಕಾಗಿ ತರಾಟೆಗೆ ತೆಗೆದುಕೊಂಡಿತು. ನ್ಯಾಯಾಲಯ ಎಚ್ಚರಿಕೆ ನೀಡಿದ ನಂತರ ಸೊರೆನ್ ಪರವಾಗಿ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಜಾಮೀನು ಅರ್ಜಿಯನ್ನು ಹಿಂತೆಗೆದುಕೊಂಡರು. ಇದರಿಂದ ಸೊರೆನ್‌ ಅವರಿಗೆ ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ: Arvind Kejriwal: ಅರವಿಂದ ಕೇಜ್ರಿವಾಲ್‌ ಬಿಡುಗಡೆ ಕನಸು ಭಗ್ನ; ಮತ್ತೆ 14 ದಿನ ನ್ಯಾಯಾಂಗ ಬಂಧನ

Continue Reading

ದೇಶ

PM Modi Russia Visit: ಜುಲೈ 8ರಿಂದ ಮೋದಿ ರಷ್ಯಾ ಪ್ರವಾಸ; ಉಕ್ರೇನ್‌ ಆಕ್ರಮಣದ ಬಳಿಕ ಮೊದಲ ಭೇಟಿ

PM Modi Russia Visit: ಜುಲೈ 8 ಹಾಗೂ 9ರಂದು ನರೇಂದ್ರ ಮೋದಿ ಅವರು ಮಾಸ್ಕೋದಲ್ಲಿ ಇರಲಿದ್ದು, ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರನ್ನು ಭೇಟಿಯಾಗಲಿದ್ದಾರೆ. ಇದೇ ವೇಳೆ ಭಾರತ-ರಷ್ಯಾ ನಡುವಿನ 22ನೇ ವಾರ್ಷಿಕ ಸಭೆ ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

VISTARANEWS.COM


on

PM Modi Russia Visit
Koo

ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪದಗ್ರಹಣ ಮಾಡಿರುವ ನರೇಂದ್ರ ಮೋದಿ (Narendra Modi) ಮೊದಲ ಬಾರಿಗೆ ಜು.8ರಂದು ರಷ್ಯಾ ಪ್ರವಾಸ (PM Modi Russia Visit) ಕೈಗೊಳ್ಳಲಿದ್ದಾರೆ. ಜುಲೈ 8ರಿಂದ 10ರವರೆಗೆ ನರೇಂದ್ರ ಮೋದಿ ಅವರು ರಷ್ಯಾ ಹಾಗೂ ಆಸ್ಟ್ರಿಯಾ ಪ್ರವಾಸ ಕೈಗೊಳ್ಳಲಿದ್ದಾರೆ. ಅದರಲ್ಲೂ, ಉಕ್ರೇನ್‌ ಹಾಗೂ ರಷ್ಯಾ ಯುದ್ಧದ ಬಳಿಕ ಇದೇ ಮೊದಲ ಬಾರಿಗೆ ಮೋದಿ ಅವರು ರಷ್ಯಾಗೆ ತೆರಳುತ್ತಿದ್ದಾರೆ. ಜುಲೈ 10ರಂದು ನರೇಂದ್ರ ಮೋದಿ ಅವರು ಆಸ್ಟ್ರಿಯಾಗೆ ಭೇಟಿ ನೀಡಲಿದ್ದಾರೆ. ಕಳೆದ 41 ವರ್ಷಗಳಲ್ಲಿಯೇ ಆಸ್ಟ್ರಿಯಾಗೆ ಭೇಟಿ ನೀಡುತ್ತಿರುವ ಮೊದಲ ಪ್ರಧಾನಿ ಎನಿಸಿದ್ದಾರೆ.

ಜುಲೈ 8 ಹಾಗೂ 9ರಂದು ನರೇಂದ್ರ ಮೋದಿ ಅವರು ಮಾಸ್ಕೋದಲ್ಲಿ ಇರಲಿದ್ದು, ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರನ್ನು ಭೇಟಿಯಾಗಲಿದ್ದಾರೆ. ಇದೇ ವೇಳೆ ಭಾರತ-ರಷ್ಯಾ ನಡುವಿನ 22ನೇ ವಾರ್ಷಿಕ ಸಭೆ ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಈ ಭೇಟಿ ಭಾರತ ಮತ್ತು ರಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಬಲಗೊಳಿಸಲಿದೆ. ಈ ಭೇಟಿ ವೇಳೆ ಉಭಯ ರಾಷ್ಟಗಳು ರಕ್ಷಣೆ, ಅನಿಲ ಮತ್ತು ಇತರೆ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.

ಪ್ರಧಾನಿ ಮೋದಿ ಇತ್ತೀಚೆಗೆ ಇಟಲಿಯಲ್ಲಿ ಆಯೋಜಿಸಿರುವ ಜಿ7 ಶೃಂಗಸಭೆ (G7 Summit)ಯಲ್ಲಿ ಪಾಲ್ಗೊಂಡಿದ್ದರು. ಇದರ ಬಳಿಕ ರಷ್ಯಾ ಪ್ರವಾಸ ಮಹತ್ವ ಪಡೆದುಕೊಂಡಿದೆ. ಈಗಾಗಲೇ ರಷ್ಯಾ ಅಧ್ಯಕ್ಷ ವ್ಲಾಡಿಮಿತ್‌ ಪುಟಿನ್‌ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಧೋವಲ್‌ ಅವರನ್ನು ಹಲವು ಸಂದರ್ಭಗಳಲ್ಲಿ ಭೇಟಿಯಾಗಿದ್ದರು. ಇದೀಗ ಪ್ರಧಾನಿ ಮೋದಿ ರಷ್ಯಾ ಭೇಟಿ ಉಭಯ ರಾಷ್ಟ್ರಗಳ ನಡುವಿನ ಸಂಬಂಧವನ್ನು ಮತ್ತಷ್ಟು ವೃದ್ಧಿಗೊಳಿಸಲಿದೆ. ಹಲವಾರು ರಕ್ಷಣಾ ಖರೀದಿಗಳಿಗಾಗಿ ಭಾರತವು ರಷ್ಯಾವನ್ನು ಹೆಚ್ಚು ಅವಲಂಬಿಸಿರುವುದರಿಂದ ರಷ್ಯಾವು ಹಲವಾರು ವಿಷಯಗಳಿಗೆ ಚೀನಾದ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿರುವುದನ್ನು ಭಾರತ ಬಯಸುವುದಿಲ್ಲ.

ರಷ್ಯಾ-ಉಕ್ರೇನ್ ಸಂಘರ್ಷದ ನಡುವೆ ಪ್ರಸ್ತುತ ಪರಿಸ್ಥಿತಿಯಲ್ಲಿ ಭಾರತವನ್ನು ಮಾತ್ರ ಪ್ರಬಲ ಮಧ್ಯವರ್ತಿಯಾಗಿ ಕಾಣುವುದರಿಂದ ಈ ಭೇಟಿಯು ಪಶ್ಚಿಮಕ್ಕೆ ಉಪಯುಕ್ತವಾಗಬಹುದು ಎಂದು ಮೂಲಗಳು ಹೇಳುತ್ತವೆ. ಪ್ರಧಾನಿ ಮೋದಿ 2022ರಲ್ಲಿ ಉಜ್ಬೇಕಿಸ್ತಾನದಲ್ಲಿ ನಡೆದ ಶಾಂಘೈ ಶೃಂಘಸಭೆಯಲ್ಲಿ ಪುಟಿನ್‌ ಅವರನ್ನು ಭೇಟಿಯಾಗಿದ್ದರು.

ಈ ಹಿಂದೆ ಎನ್‌ಎಸ್‌ಎ ದೋವಲ್ ಕೈಗೆತ್ತಿಕೊಂಡ ರಕ್ಷಣೆ, ಚೀನಾ ಅಂಶ ಮತ್ತು ಉಕ್ರೇನ್‌ನಲ್ಲಿ ಮಧ್ಯಸ್ಥಿಕೆ ಮುಂತಾದ ವಿಷಯಗಳ ಕುರಿತು ಚರ್ಚೆಗಳು ಈಗ ಉನ್ನತ ಮಟ್ಟದಲ್ಲಿ ನಡೆಯಲಿವೆ, ಆದರೆ ನಿರ್ಣಾಯಕ ಅಂಶವಾಗಿ ಮಾರ್ಪಟ್ಟಿರುವ ಭಾರತ-ರಷ್ಯಾ ಬಾಂಧವ್ಯದ ಮೇಲೆ ಎಲ್ಲರ ಕಣ್ಣುಗಳಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಜೂನ್‌ 13ರಂದು ಇಟಲಿಯಲ್ಲಿ ಆಯೋಜಿಸಿದ್ದ ಜಿ7 ಶೃಂಗಸಭೆ (G7 Summit)ಯಲ್ಲಿ ನರೇಂದ್ರ ಮೋದಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: Cabinet Committees: ಸಂಪುಟ ಸಮಿತಿಗಳನ್ನು ರಚಿಸಿದ ಕೇಂದ್ರ; ಭದ್ರತಾ ಸಮಿತಿಗೆ ಮೋದಿಯೇ ಮುಖ್ಯಸ್ಥ!

Continue Reading

ಕ್ರೀಡೆ

Air India: ಟೀಮ್​ ಇಂಡಿಯಾ ಆಟಗಾರರನ್ನು ಕರೆ ತಂದ ಏರ್‌ ಇಂಡಿಯಾಗೆ ವರದಿ ಕೇಳಿದ ಡಿಜಿಸಿಎ; ಕಾರಣವೇನು?

Air India: ಡಿಜಿಸಿಎ 2017ರ ನಿಯಮಗಳ ಪ್ರಕಾರ, ನಿಗದಿತ ವಿಮಾನ ಸೇವೆಗಳನ್ನು ಕೈಬಿಟ್ಟು ನಿಗದಿತವಲ್ಲದ ವಿಮಾನ ಸೇವೆಗಳನ್ನು ಬಳಸುವಂತಿಲ್ಲ ಎಂದು ಹೇಳಿತ್ತು. ಈ ನಿಯಮನ್ನು ಏರ್​ ಇಂಡಿಯಾ ಉಲ್ಲಂಘಿಸಿದೆ ಎಂದು ಡಿಜಿಸಿಎ ಹೇಳಿದೆ.

VISTARANEWS.COM


on

Air India
Koo

ಮುಂಬಯಿ: ವಿಶೇಷ ಚಾರ್ಟರ್ಡ್ ವಿಮಾನದ ಮೂಲಕ ಟೀಮ್​ ಇಂಡಿಯಾ(Team India) ಆಟಗಾರರನ್ನು ನವದೆಹಲಿಗೆ ಕರೆ ತಂದ ಏರ್ ಇಂಡಿಯಾಗೆ(Chartered flight for Team India) ಸಂಕಷ್ಟವೊಂದು ಎದುರಾಗಿದೆ. ನೆವಾರ್ಕ್‌ನಿಂದ ದೆಹಲಿ ನಡುವೆ ಹಾರಾಟ ನಡೆಸಬೇಕಿದ್ದ ಏರ್‌ ಇಂಡಿಯಾದ(Air India) ಸಾಮಾನ್ಯ ಪ್ಯಾಸೆಂಜರ್‌ ವಿಮಾನವನ್ನು ಜುಲೈ 2ರಂದು ರದ್ದುಗೊಳಿಸಿ, ಭಾರತದ ಕ್ರಿಕೆಟ್‌ ತಂಡವನ್ನು ಸ್ವದೇಶಕ್ಕೆ ಕರೆತರುವ ಉದ್ದೇಶದಿಂದ ಬಾರ್ಬಡೋಸ್‌ಗೆ ಡೈವರ್ಟ್‌ ಮಾಡಿದ ಕ್ರಮಕ್ಕೆ ಭಾರತೀಯ ವಿಮಾನಯಾನ ನಿಯಂತ್ರಕ ಸಂಸ್ಥೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ(DGCA)ವು ಏರ್‌ ಇಂಡಿಯಾದಿಂದ ವರದಿ ಕೇಳಿದ.

ಟಿ20 ವಿಶ್ವಕಪ್​ ಟೂರ್ನಿ ಮುಗಿದ ಮರು ದಿನವೇ​ ವೆಸ್ಟ್ ​ಇಂಡೀಸ್​ನಲ್ಲಿ ಉಂಟಾದ ಬೆರಿಲ್ ಚಂಡಮಾರುತದಿಂದಾಗಿ ವಿಮಾನ ನಿಲ್ದಾಣವನ್ನು ಮುಚ್ಚಲಾಗಿತ್ತು. ಹೀಗಾಗಿ ಟೀಮ್​ ಇಂಡಿಯಾ ಆಟಗಾರರು ಬಾರ್ಬಡೋಸ್‌ನಲ್ಲೇ ನಾಲ್ಕು ದಿನಗಳ ಕಾಲ ಸಿಲುಕಿಕೊಂಡಿದ್ದರು. ಹವಾಮಾನವು ಸುಧಾರಿಸಿದ ನಂತರ, ವಿಶ್ವ ಚಾಂಪಿಯನ್‌ಗಳನ್ನು ಮರಳಿ ಮನೆಗೆ ಕರೆತರಲು ಬಿಸಿಸಿಐ ವಿಶೇಷ ಏರ್ ಇಂಡಿಯಾ ಚಾರ್ಟರ್ಡ್ ವಿಮಾನವನ್ನು ಬಾರ್ಬಡೋಸ್‌ಗೆ ಕಳುಹಿಸಲಾಗಿತ್ತು. ಸುಮಾರು 18 ಗಂಟೆಗಳ ಸುದೀರ್ಘ ಪ್ರಯಾಣದ ನಂತರ, ತಂಡವು ಅಂತಿಮವಾಗಿ ಇಂದು(ಗುರುವಾರ) ಬೆಳಗ್ಗೆ ಭಾರತಕ್ಕೆ ಬಂದಿಳಿದೆ. ಇದೀಗ ಪ್ಯಾಸೆಂಜರ್‌ ವಿಮಾನವನ್ನು ರದ್ದುಗೊಳಿಸಿದ ಕ್ರಮಕ್ಕೆ ಉತ್ತರ ನೀಡುವಂತೆ ಏರ್‌ ಇಂಡಿಯಾಗೆ ಡಿಜಿಸಿಎ ಆದೇಶಿಸಿದೆ.

ಇದನ್ನೂ ಓದಿ Team India: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ಗೆ ಕ್ಷಣಗಣನೆ; ಮುಂಬೈ ತಲುಪಿದ ಆಟಗಾರರು

ಡಿಜಿಸಿಎ 2017ರ ನಿಯಮಗಳ ಪ್ರಕಾರ, ನಿಗದಿತ ವಿಮಾನ ಸೇವೆಗಳನ್ನು ಕೈಬಿಟ್ಟು ನಿಗದಿತವಲ್ಲದ ವಿಮಾನ ಸೇವೆಗಳನ್ನು ಬಳಸುವಂತಿಲ್ಲ ಎಂದು ಹೇಳಿತ್ತು. ಈ ನಿಯಮನ್ನು ಏರ್​ ಇಂಡಿಯಾ ಉಲ್ಲಂಘಿಸಿದೆ ಎಂದು ಡಿಜಿಸಿಎ ಹೇಳಿದೆ.

ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ವಿಮಾನ ರದ್ದುಗೊಂಡ ಕುರಿತು ಪ್ರಯಾಣಿಕರಿಗೆ ಮುಂಚಿತವಾಗಿ ತಿಳಿಸಲಾಗಿತ್ತು. ಅವರಿಗೆ ನ್ಯೂಯಾರ್ಕ್‌ ತನಕ ರಸ್ತೆ ಮೂಲಕ ಸಾಗಲು ಅಥವಾ ವಿಮಾನದಲ್ಲಿ ಸಾಗಲು ಅವಕಾಶ ಕಲ್ಪಿಸಲಾಗಿತ್ತು. ನಂತರ ನ್ಯೂಯಾರ್ಕ್‌ನಿಂದ ದಿಲ್ಲಿಗೆ ತೆರಳಲು ಬೇರೆ ವಿಮಾನ ಸೇವೆ ಒದಗಿಸಲಾಗಿತ್ತು ಎಂದು ಏರ್‌ ಇಂಡಿಯಾ ಹೇಳಿದೆ.

17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದ ಭಾರತ


ಜುಲೈ 29ರಂದು ನಡೆದಿದ್ದ ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ(South Africa vs India) 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತ್ತು.

Continue Reading
Advertisement
Robot Suicide
ತಂತ್ರಜ್ಞಾನ18 mins ago

Robot Suicide: ದ. ಕೊರಿಯಾದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೋಬೋಟ್! ಕೆಲಸದ ಹೊರೆ ಕಾರಣ?

Muda site allocation Politically motivated allegation says CM Siddaramaiah
ಕರ್ನಾಟಕ21 mins ago

CM Siddaramaiah: ನಮಗೆ ನಿವೇಶನ ಕೊಟ್ಟಿರುವುದು ತಪ್ಪು ಎಂದರೆ ಪರಿಹಾರ ಕೊಡಲಿ; ಸಿದ್ದರಾಮಯ್ಯ ಸವಾಲು

Narendra modi
ಪ್ರಮುಖ ಸುದ್ದಿ23 mins ago

Narendra Modi : ಭಾರತ ತಂಡಕ್ಕೆ ಆತಿಥ್ಯ ನೀಡಿದ ಬಳಿಕ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ ನರೇಂದ್ರ ಮೋದಿ

LK Advani
ದೇಶ39 mins ago

LK Advani: ಎಲ್‌.ಕೆ. ಅಡ್ವಾಣಿ ಆರೋಗ್ಯದಲ್ಲಿ ಚೇತರಿಕೆ; ಆಸ್ಪತ್ರೆಯಿಂದ ಡಿಸ್‌ಚಾರ್ಜ್‌

Kannada New Movie Kadalura Kanmani will release soon
ಕರ್ನಾಟಕ49 mins ago

Kannada New Movie: ಶೀಘ್ರದಲ್ಲೇ ತೆರೆಗೆ ಬರಲಿದೆ ‘ಕಡಲೂರ ಕಣ್ಮಣಿ’ ಚಿತ್ರ

Zircon Jewellery Fashion
ಫ್ಯಾಷನ್57 mins ago

Zircon Jewellery Fashion: ಹೈ ಫ್ಯಾಷನ್‌ ಜ್ಯುವೆಲರಿ ಲಿಸ್ಟ್‌ಗೆ ಸೇರಿದ ವೈವಿಧ್ಯಯಮಯ ಜಿರ್ಕೊನ್‌ ಆಭರಣಗಳ ಹಂಗಾಮಾ!

ZIM vs IND
ಪ್ರಮುಖ ಸುದ್ದಿ1 hour ago

ZIM vs IND : ಭಾರತ ವಿರುದ್ಧ ಸರಣಿಗೂ ಮುನ್ನ ಜಿಂಬಾಬ್ವೆ ಬೌಲಿಂಗ್ ಕೋಚ್ ಆಗಿ ಚಾರ್ಲ್ ಲ್ಯಾಂಗೆವೆಲ್ಟ್ ನೇಮಕ

Cabinet Meeting
ಕರ್ನಾಟಕ1 hour ago

Cabinet Meeting: ವಿಮಾದಾರರು, ಆರೋಗ್ಯ ಕ್ಷೇಮ ಕೇಂದ್ರಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್;‌ ಸಂಪುಟ ಸಭೆಯ ಪ್ರಮುಖ ತೀರ್ಮಾನಗಳು ಇಲ್ಲಿವೆ

Hair Oil Tips
ಆರೋಗ್ಯ1 hour ago

Hair Oil Tips: ರಾತ್ರಿ ಕೂದಲಿಗೆ ಎಣ್ಣೆ ಹಚ್ಚಿ ಬೆಳಗ್ಗೆ ಸ್ನಾನ ಮಾಡಿದರೆ ಲಾಭವೋ ನಷ್ಟವೋ?

karnataka Weather Forecast
ಮಳೆ2 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ3 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ5 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ6 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ7 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ8 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ9 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

ಟ್ರೆಂಡಿಂಗ್‌