NIA Raid: ಹಿಜ್ಬು-ಉತ್‌-ತಹ್ರೀರ್‌ ಉಗ್ರ ಸಂಘಟನೆ ಜೊತೆ ನಂಟು-10 ಕಡೆಗಳಲ್ಲಿ NIA ರೇಡ್‌; ಶಂಕಿತ ಉಗ್ರರು ಅರೆಸ್ಟ್‌ - Vistara News

ದೇಶ

NIA Raid: ಹಿಜ್ಬು-ಉತ್‌-ತಹ್ರೀರ್‌ ಉಗ್ರ ಸಂಘಟನೆ ಜೊತೆ ನಂಟು-10 ಕಡೆಗಳಲ್ಲಿ NIA ರೇಡ್‌; ಶಂಕಿತ ಉಗ್ರರು ಅರೆಸ್ಟ್‌

NIA Raid:ಬಂಧಿತ ಉಗ್ರರನ್ನು ಅಬ್ದುಲ್‌ ರೆಹಮಾನ್‌ ಮತ್ತು ಮುಜಿಬುಲ್‌ ರೆಹಮಾನ್‌ ಅಲಿಯಾಸ್‌ ಮುಜಿಬುಲ್‌ ರೆಹಮಾನ್‌ ಅಲ್ತಾಮ್‌ ಸಾಹೀಬ್‌ ಎಂದು ಗುರುತಿಸಲಾಗಿದೆ. ಇವರಿಬ್ಬರೂ ತಂಜಾವೂರ್‌ ಜಿಲ್ಲೆಯವರಾಗಿದ್ದು, ಇವರಿಬ್ಬರೂ ಯುವಕರನ್ನು ಉಗ್ರ ಸಂಘಟನೆಗೆ ಪ್ರೇರೇಪಿಸಲು ಗುಪ್ತವಾಗಿ ತರಗತಿಗಳನ್ನು ನಡೆಸುತ್ತಿದ್ದಾರೆ. ಭಾರತ ಈಗ ನಾಸ್ತಿಕ ರಾಷ್ಟ್ರವಾಗಿ ಬೆಳೆಯುತ್ತಿದೆ. ದೇಶದಲ್ಲಿ ಹಿಂಸಾತ್ಮಕ ಜಿಹಾದ್‌ ಮೂಲಕ ಇಸ್ಲಾಂ ಮೇಲಿನ ನಂಬಿಕೆಯನ್ನು ಮೂಡಿಸಬೇಕಿದೆ ಎಂಬುದನ್ನು ಯುವಕರಿಗೆ ಬೋಧಿಸುತ್ತಿದ್ದರು ಎಂದು ಎನ್‌ಐಎ ಹೇಳಿದೆ.

VISTARANEWS.COM


on

NIA Raid
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ತಮಿಳುನಾಡಿನ ಹತ್ತು ಸ್ಥಳಗಳಲ್ಲಿ ಎನ್‌ಐಎ ರೇಡ್‌(NIA Raid) ನಡೆಸಿದ್ದು, ಭಯೋತ್ಪಾದನಾ(Terrorism activities) ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಅರೆಸ್ಟ್‌ ಮಾಡಿದೆ. ತಮಿಳುನಾಡಿನ ಐದು ಜಿಲ್ಲೆಗಳಲ್ಲಿ ಈ ರೇಡ್‌ ನಡೆದಿದ್ದು, ಅಂತಾರಾಷ್ಟ್ರೀಯ ಭಯೋತ್ಪಾದನಾ ಸಂಘಟನೆ ಹಿಜ್ಬು-ಉತ್‌-ತಹ್ರೀರ್‌ನ ಇಬ್ಬರನ್ನು ಬಂಧಿಸಿದೆ. ಈ ಸಂಘಟನೆಯ ಸ್ಥಾಪಕ ತಾಖಿ ಅಲ್‌ ದಿನ್‌ ಅಲ್‌ ಅಬ್ಬಾನಿ ಬರೆದ ಸಂವಿಧಾನವನ್ನು ಪ್ರಪಂಚಾದ್ಯಂತ ಪಸರಿಸಲು ಪ್ರಯತ್ನ ನಡೆಸುತ್ತಿದ್ದಾರೆ.

ಇನ್ನು ಬಂಧಿತ ಉಗ್ರರನ್ನು ಅಬ್ದುಲ್‌ ರೆಹಮಾನ್‌ ಮತ್ತು ಮುಜಿಬುಲ್‌ ರೆಹಮಾನ್‌ ಅಲಿಯಾಸ್‌ ಮುಜಿಬುಲ್‌ ರೆಹಮಾನ್‌ ಅಲ್ತಾಮ್‌ ಸಾಹೀಬ್‌ ಎಂದು ಗುರುತಿಸಲಾಗಿದೆ. ಇವರಿಬ್ಬರೂ ತಂಜಾವೂರ್‌ ಜಿಲ್ಲೆಯವರಾಗಿದ್ದು, ಇವರಿಬ್ಬರೂ ಯುವಕರನ್ನು ಉಗ್ರ ಸಂಘಟನೆಗೆ ಪ್ರೇರೇಪಿಸಲು ಗುಪ್ತವಾಗಿ ತರಗತಿಗಳನ್ನು ನಡೆಸುತ್ತಿದ್ದಾರೆ. ಭಾರತ ಈಗ ನಾಸ್ತಿಕ ರಾಷ್ಟ್ರವಾಗಿ ಬೆಳೆಯುತ್ತಿದೆ. ದೇಶದಲ್ಲಿ ಹಿಂಸಾತ್ಮಕ ಜಿಹಾದ್‌ ಮೂಲಕ ಇಸ್ಲಾಂ ಮೇಲಿನ ನಂಬಿಕೆಯನ್ನು ಮೂಡಿಸಬೇಕಿದೆ ಎಂಬುದನ್ನು ಯುವಕರಿಗೆ ಬೋಧಿಸುತ್ತಿದ್ದರು ಎಂದು ಎನ್‌ಐಎ ಹೇಳಿದೆ.

ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್, ಸಿಮ್ ಮತ್ತು ಮೆಮೊರಿ ಕಾರ್ಡ್‌ಗಳು ಮತ್ತು ಹಿಜ್ಬ್-ಉತ್-ತಹ್ರೀರ್, ಖಿಲಾಫಾ, ಇಸ್ಲಾಮಿಕ್ ಸ್ಟೇಟ್‌ನ ಸಿದ್ಧಾಂತವನ್ನು ಒಳಗೊಂಡಿರುವ ಪುಸ್ತಕಗಳು ಮತ್ತು ಪ್ರಿಂಟ್‌ಔಟ್‌ಗಳು ಅನೇಕ ವಸ್ತುಗಳನ್ನು ಎನ್‌ಐಎ ವಶಪಡಿಸಿಕೊಂಡಿದೆ.

ಮತ್ತೊಂದೆಡೆ ಜಮ್ಮು-ಕಾಶ್ಮೀರದ ರಿಯಾಸಿ(Reasi Terror Attack) ಜಿಲ್ಲೆಯಲ್ಲಿ ಹಿಂದು ಯಾತ್ರಿಕರ ಮೇಲೆ ನಡೆದ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA Raid) ವಿವಿಧ ಸ್ಥಳಗಳಲ್ಲಿ ರೇಡ್‌ ನಡೆಸಿದೆ. ಮಕ್ಕಳು ಸೇರಿದಂತೆ ಒಂಬತ್ತು ಮಂದಿಯನ್ನು ಉಗ್ರರ ದಾಳಿಯಲ್ಲಿ ಬಲಿಯಾಗಿದ್ದರು. ಇದಾದ ಕೆಲವೇ ದಿನಗಳಲ್ಲಿ ಕೇಂದ್ರ ಗೃಹ ಸಚಿವಾಲಯ ಪ್ರಕರಣವನ್ನು ಎನ್‌ಐಎ ತನಿಖೆಗೆ ಹಸ್ತಾಂತರಿಸಿತ್ತು.

ಇದೀಗ ತನಿಖಾ ಭಾಗವಾಗಿ ಜಮ್ಮು -ಕಾಶ್ಮೀರದ ವಿವಿಧ ಭಾಗಗಳಲ್ಲಿ ಎನ್‌ಐಎ ರೇಡ್‌ ನಡೆಸಿದೆ. ಉಗ್ರರಿಗೆ ಆಶ್ರಯ, ಸಹಾಯ ನೀಡಿದ ಶಂಕಿತರ ಮೇಲೆ ಈ ರೇಡ್‌ ನಡೆದಿದ್ದು, ಹಲವು ಮಹತ್ವದ ಮಾಹಿತಿಗಳನ್ನು ಕಳೆ ಹಾಕಿದ್ದಾರೆ. ಇತ್ತೀಚೆಗಷ್ಟೇ ರಿಯಾಸಿ ಉಗ್ರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೌರಿ ಜಿಲ್ಲೆಯಲ್ಲಿ ಹಕೀಮ್‌ ದಿನ್‌ ಎಂಬ ಶಂಕಿತನನ್ನು ಪೊಲೀಸರು ಬಂಧಿಸಿದ್ದಾರೆ. ಈತನೇ ದಾಳಿಯ ರೂವಾರಿ ಆಗದಿದ್ದರೂ, ಉಗ್ರರ ದಾಳಿಗೆ ಅಗತ್ಯ ವಸ್ತುಗಳನ್ನು ಪೂರೈಸಿದ್ದಾನೆ. ಇದರಿಂದ ಉಗ್ರರು ಸುಲಭವಾಗಿ ದಾಳಿ ಮಾಡಲು ಸಾಧ್ಯವಾಗಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ

ದೆಹಲಿ ರಾಜಸ್ಥಾನ ಹಾಗೂ ಉತ್ತರ ಪ್ರದೇಶದ ಹಿಂದು ಯಾತ್ರಿಕರು ಜೂನ್‌ 9ರಂದು ಬಸ್‌ನಲ್ಲಿ ವೈಷ್ಣೋದೇವಿ ಯಾತ್ರೆಗೆ ಹೊರಟಿದ್ದರು. ರಿಯಾಸಿ ಜಿಲ್ಲೆಯ ತೆರ್ಯಾತ್‌ ಗ್ರಾಮದ ಬಳಿಯ ಮಾರ್ಗವಾಗಿ ಬಸ್‌ ಚಲಿಸುತ್ತಿತ್ತು. ಆದರೆ, ಉಗ್ರರು ಬಸ್‌ ಅನ್ನು ಹಿಂಬಾಲಿಸಿಕೊಂಡು ಬಂದು ಗುಂಡಿನ ದಾಳಿ ನಡೆಸಿದ್ದರು. ಗುಂಡಿನ ದಾಳಿಯ ಹಿನ್ನೆಲೆಯಲ್ಲಿ ಬಸ್‌ ಕಣಿವೆಗೆ ಉರುಳಿತ್ತು. ಇದರಿಂದಾಗಿ 9 ಮಂದಿ ಮೃತಪಟ್ಟರೆ, 33 ಜನ ಗಾಯಗೊಂಡಿದ್ದರು. ದಾಳಿಯ ಹೊಣೆಯನ್ನು ಲಷ್ಕರೆ ತಯ್ಬಾ ಉಗ್ರ ಸಂಘಟನೆಯು ಹೊತ್ತುಕೊಂಡಿದೆ.

ಇದನ್ನೂ ಓದಿ:Indian Armed Forces: ಸಹಪಾಠಿಗಳು ಈ ಭಾರತೀಯ ಸೇನೆ ಮತ್ತು ನೌಕಾಪಡೆ ಮುಖ್ಯಸ್ಥರು; ಇದು ದೇಶದ ಇತಿಹಾಸದಲ್ಲೇ ಮೊದಲು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Hathras Stampede: ಕಾಲ್ತುಳಿತದ ಬಳಿಕ ಕಾಲ್ಕಿತ್ತಿದ್ದ ಡೋಂಗಿ ಬಾಬಾ- ವೈರಲ್‌ ಆಯ್ತು ವಿಡಿಯೋ

Hathras Stampede:ಘಟನೆ ಬಳಿಕ ನಾರಾಯಣ ಸಾಕರ್‌ ಹರಿ ಅಲಿಯಾಸ್‌ ಭೋಲೆ ಬಾಬಾ ತನ್ನ ಬೆಂಬಲಿಗರೊಂದಿಗೆ ಸ್ಥಳದಿಂದ ಎಸ್ಕೇಪ್‌ ಆಗುತ್ತಿರುವ ದೃಶ್ಯ ಇದೀಗ ಎಲ್ಲೆಡೆ ವೈರಲ್‌ ಆಗುತ್ತಿದೆ. ಈ ದೃಶ್ಯ ಪೆಟ್ರೋಲ್‌ ಪಂಪ್‌ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

VISTARANEWS.COM


on

Hatras Stampede
Koo

ಲಖನೌ: ಉತ್ತರಪ್ರದೇಶದ ಹತ್ರಾಸ್‌ನಲ್ಲಿ ನಡೆದ ಕಾಲ್ತುಳಿತ(Hathras Stampede) ದುರ್ಘಟನೆಗೆ ಸಂಬಂಧಿಸಿದ ಕೆಲವೊಂದು ಸಿಸಿಟಿವಿ ದೃಶ್ಯಾವಳಿಗಳು ಇದೀಗ ವೈರಲ್‌ ಆಗುತ್ತಿದೆ. ಅದರಲ್ಲಿ ಪ್ರಮುಖವಾಗಿ ಘಟನೆ ಬಳಿಕ ನಾರಾಯಣ ಸಾಕರ್‌ ಹರಿ ಅಲಿಯಾಸ್‌ ಭೋಲೆ ಬಾಬಾ(Bhole Baba) ತನ್ನ ಬೆಂಬಲಿಗರೊಂದಿಗೆ ಸ್ಥಳದಿಂದ ಎಸ್ಕೇಪ್‌ ಆಗುತ್ತಿರುವ ದೃಶ್ಯ ಇದೀಗ ಎಲ್ಲೆಡೆ ವೈರಲ್‌ ಆಗುತ್ತಿದೆ. ಈ ದೃಶ್ಯ ಪೆಟ್ರೋಲ್‌ ಪಂಪ್‌ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ನಾರಾಯಣ ಸಕಾರ್‌ ಹರಿ (Narayan Sakaar Hari) ಅಥವಾ ಸಕಾರ್‌ ವಿಶ್ವ ಹರಿ ಅಥವಾ ಭೋಲೆ ಬಾಬಾ (Bhole Baba) ಅವರು ಸತ್ಸಂಗ ನೆರವೇರಿಸಿದ ಬಳಿಕ ಉಂಟಾದ ಕಾಲ್ತುಳಿತವು ನೂರಾರು ಜನರ ಸಾವಿಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ತನಿಖೆ ಆರಂಭಿಸಿರುವ ಉತ್ತರ ಪ್ರದೇಶ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಹಾಗೆಯೇ, ಪ್ರಮುಖ ಆರೋಪಿಯ ಕುರಿತು ಸುಳಿವು ನೀಡಿದವರಿಗೆ 1 ಲಕ್ಷ ರೂ. ಬಹುಮಾನವನ್ನೂ ಘೋಷಿಸಿದ್ದಾರೆ.

“ಹತ್ರಾಸ್‌ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಹಾಗೂ ನಾಲ್ವರು ಪುರುಷರು ಸೇರಿ ಒಟ್ಟು ಆರು ಮಂದಿಯನ್ನು ಇದುವರೆಗೆ ಬಂಧಿಸಲಾಗಿದೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆ ಮಾಡಲಾಗುತ್ತಿದೆ. ಇದುವರೆಗೆ 121 ಮಂದಿ ಮೃತಪಟ್ಟಿದ್ದು, ಎಲ್ಲರ ಶವಗಳನ್ನು ಗುರುತಿಸಲಾಗಿದೆ. ಮರಣೋತ್ತರ ಪರೀಕ್ಷೆ ಪ್ರಕ್ರಿಯೆಯೂ ಮುಕ್ತಾಯಗೊಂಡಿದೆ” ಎಂದು ಅಲಿಗಢ ಐಜಿ ಶಾಲಾಭ್‌ ಮಾಥುರ್‌ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಘಟನೆ ಬಳಿಕ ನಾಪತ್ತೆಯಾಗಿದ್ದ ಭೋಲೆ ಬಾಬಾ ನಂತರ ಪ್ರತ್ಯಕ್ಷರಾಗಿದ್ದು, “ನಾನು ಸತ್ಸಂಗ ಮುಗಿಸಿ ತೆರಳಿದ ಬಳಿಕ ಘಟನೆ ನಡೆದಿದೆ. ಇದು ಸಮಾಜಘಾತುಕ ಶಕ್ತಿಗಳ ಕೃತ್ಯ” ಎಂದಿದ್ದಾರೆ. ಕಾಲ್ತುಳಿತದ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರವು ಎಸ್‌ಐಟಿ ರಚಿಸಿದೆ.

ಹತ್ರಾಸ್‌ ಕಾಲ್ತುಳಿತ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿದ್ದು, ಈಗಾಗಲೇ ಮೃತರ ಸಂಬಂಧಿಕರಿಗೆ ರಾಜ್ಯ ಸರ್ಕಾರ ತಲಾ 2 ಲಕ್ಷ ರೂ., ಕೇಂದ್ರ ಸರ್ಕಾರ ತಲಾ 2 ಲಕ್ಷ ರೂ. ಘೋಷಿಸಿದೆ. ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ತನಿಖೆಗಾಗಿ ಎಸ್‌ಐಟಿಯನ್ನೂ ರಚಿಸಲಾಗಿದೆ. ಮತ್ತೊಂದೆಡೆ, ನೂರಾರು ಜನರ ಸಾವಿನ ಬಳಿಕ ಭೋಲೆ ಬಾಬಾ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:BJP Muslim Candidate: ಉತ್ತರ ಪ್ರದೇಶದಲ್ಲಿ ಮೊದಲ ಬಾರಿಗೆ ಮುಸ್ಲಿಂ ಅಭ್ಯರ್ಥಿಗೆ ಬಿಜೆಪಿ ಟಿಕೆಟ್? ಏನಿದರ ಗುಟ್ಟು?

Continue Reading

ದೇಶ

PF Interest: ನೌಕರರಿಗೆ ಗುಡ್‌ ನ್ಯೂಸ್;‌ ಪಿಎಫ್‌ ಬಡ್ಡಿದರ ಘೋಷಿಸಿದ ಕೇಂದ್ರ ಸರ್ಕಾರ, ಎಷ್ಟಿದೆ ನೋಡಿ

PF Interest: ಕೇಂದ್ರ ಹಣಕಾಸು ಸಚಿವಾಲಯವು ಈ ಕುರಿತು ಪ್ರಕಟಣೆ ಹೊರಡಿಸಿದೆ. ಪ್ರಸಕ್ತ ಹಣಕಾಸು ವರ್ಷದ ಜುಲೈ 1ರಿಂದ ಸೆಪ್ಟೆಂಬರ್‌ 30ರವರೆಗಿನ ತ್ರೈಮಾಸಿಕದಲ್ಲಿ ಜಿಪಿಎಫ್‌ ಸೇರಿ ಹಲವು ಭವಿಷ್ಯ ನಿಧಿಗಳ ಮೇಲಿನ ಬಡ್ಡಿದರವನ್ನು ಶೇ.7.1ರಷ್ಟು ಘೋಷಿಸಲಾಗಿದೆ. ಇದೊಂದು ಔಪಚಾರಿಕ ಮಾಹಿತಿಯಾಗಿದೆ ಎಂಬುದಾಗಿ ಮಾಹಿತಿ ನೀಡಿದೆ.

VISTARANEWS.COM


on

PF Interest
Koo

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರವು ಗುರುವಾರ (ಜುಲೈ 4) ಸಿಹಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರಿ ನೌಕರರಿಗೆ ಸಾಮಾನ್ಯ ಭವಿಷ್ಯ ನಿಧಿ (GPF) ಸೇರಿ ಹಲವು ಭವಿಷ್ಯ ನಿಧಿ ಯೋಜನೆಗಳಿಗೆ ಬಡ್ಡಿದರವನ್ನು ಘೋಷಣೆ ಮಾಡಿದೆ. ಸಾಮಾನ್ಯ ಭವಿಷ್ಯ ನಿಧಿ ಸೇರಿ ಹಲವು ಭವಿಷ್ಯ ನಿಧಿಗಳಿಗೆ ಕೇಂದ್ರ ಸರ್ಕಾರವು ಜುಲೈ-ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ಶೇ.7.1ರಷ್ಟು ಬಡ್ಡಿದರವನ್ನು (PF Interest) ಘೋಷಣೆ ಮಾಡಿದೆ.

ಕೇಂದ್ರ ಹಣಕಾಸು ಸಚಿವಾಲಯವು ಈ ಕುರಿತು ಪ್ರಕಟಣೆ ಹೊರಡಿಸಿದ್ದು, “ಪ್ರಸಕ್ತ ಹಣಕಾಸು ವರ್ಷದ ಜುಲೈ 1ರಿಂದ ಸೆಪ್ಟೆಂಬರ್‌ 30ರವರೆಗಿನ ತ್ರೈಮಾಸಿಕದಲ್ಲಿ ಜಿಪಿಎಫ್‌ ಸೇರಿ ಹಲವು ಭವಿಷ್ಯ ನಿಧಿಗಳ ಮೇಲಿನ ಬಡ್ಡಿದರವನ್ನು ಶೇ.7.1ರಷ್ಟು ಘೋಷಿಸಲಾಗಿದೆ. ಇದೊಂದು ಔಪಚಾರಿಕ ಮಾಹಿತಿಯಾಗಿದೆ. ನೂತನ ಬಡ್ಡಿದರವು ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ಜಾರಿಗೆ ಬಂದಿದೆ” ಎಂಬುದಾಗಿ ಮಾಹಿತಿ ನೀಡಿದೆ.

ಇದರ ಜತೆಗೆ, ಇದೇ ತ್ರೈಮಾಸಿಕದಲ್ಲಿ ಹಿರಿಯ ನಾಗರಿಕರ ಉಳಿತಾಯ ಯೋಜನೆಗಳ ಬಡ್ಡಿದರವನ್ನು ಶೇ.8.2ರಷ್ಟು ಹಾಗೂ ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ (NSC) ಯೋಜನೆಯ ಬಡ್ಡಿದರವನ್ನು ಶೇ.7.7ರಷ್ಟೇ ಮುಂದುವರಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.

ಯಾವೆಲ್ಲ ಭವಿಷ್ಯ ನಿಧಿಗಳಿಗೆ ಶೇ.7.1ರಷ್ಟು ಬಡ್ಡಿದರ?

  1. ಸಾಮಾನ್ಯ ಭವಿಷ್ಯ ನಿಧಿ (ಕೇಂದ್ರ ಸೇವೆಗಳು)
  2. ಕೊಡುಗೆ ಭವಿಷ್ಯ ನಿಧಿ (ಭಾರತ)
  3. ಅಖಿಲ ಭಾರತ ಸೇವೆಗಳ ಭವಿಷ್ಯ ನಿಧಿ
  4. ರಾಜ್ಯ ರೈಲ್ವೆ ಭವಿಷ್ಯ ನಿಧಿ
  5. ಸಾಮಾನ್ಯ ಭವಿಷ್ಯ ನಿಧಿ (ರಕ್ಷಣಾ ಸೇವೆಗಳು)
  6. ಭಾರತೀಯ ಶಸ್ತ್ರಾಸ್ತ್ರ ಇಲಾಖೆ ಭವಿಷ್ಯ ನಿಧಿ

ಜಿಪಿಎಫ್‌ಗೂ, ಪಿಎಫ್‌ಗೂ ಏನು ವ್ಯತ್ಯಾಸ?

ಸಾಮಾನ್ಯ ಭವಿಷ್ಯ ನಿಧಿಗೂ (GPF), ಉದ್ಯೋಗಿಗಳ ಭವಿಷ್ಯ ನಿಧಿಗೂ (EPF) ಅಂತಹ ವ್ಯತ್ಯಾಸವೇನಿಲ್ಲ. ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವವರಿಗೆ ಕಂಪನಿಗಳು ನೀಡುವ ಭವಿಷ್ಯ ನಿಧಿಯನ್ನು ಇಪಿಎಫ್‌ ಎನ್ನುತ್ತಾರೆ. ಇನ್ನು ಕೇಂದ್ರ ಸರ್ಕಾರಿ ನೌಕರರಿಗೆ ನೀಡುವ ಭವಿಷ್ಯ ನಿಧಿಯನ್ನು ಸಾಮಾನ್ಯ ಭವಿಷ್ಯ ನಿಧಿ ಎಂದು ಕರೆಯಲಾಗುತ್ತದೆ. ಎರಡೂ ಕಡೆಗಳಲ್ಲಿ ಉದ್ಯೋಗಿಯ ನೌಕರನ ಸಂಬಳದಲ್ಲಿ ಮಾಸಿಕವಾಗಿ ಒಂದಷ್ಟು ನಿಗದಿತ ಹಣವನ್ನು ಕಡಿತಗೊಳಿಸಲಾಗುತ್ತದೆ. ಈ ಮೊತ್ತಕ್ಕೆ ಬಡ್ಡಿಯನ್ನೂ ನೀಡಲಾಗುತ್ತದೆ.

ಇದನ್ನೂ ಓದಿ: Money Guide: ಪಿಎಫ್‌ ಅಕೌಂಟ್‌ಗೆ ಹೊಸ ಮೊಬೈಲ್‌ ನಂಬರ್‌ ಸೇರಿಸಬೇಕೆ? ಜಸ್ಟ್‌ ಹೀಗೆ ಮಾಡಿ ಸಾಕು

Continue Reading

ದೇಶ

LK Advani: ಎಲ್‌.ಕೆ. ಅಡ್ವಾಣಿ ಆರೋಗ್ಯದಲ್ಲಿ ಚೇತರಿಕೆ; ಆಸ್ಪತ್ರೆಯಿಂದ ಡಿಸ್‌ಚಾರ್ಜ್‌

LK Advani: ಬುಧವಾರ (ಜುಲೈ 3) ರಾತ್ರಿ 9 ಗಂಟೆ ಸುಮಾರಿಗೆ ಎಲ್‌.ಕೆ.ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಇದಾದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. 96 ವರ್ಷದ ಎಲ್‌.ಕೆ.ಅಡ್ವಾಣಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಕಂಡ ಬಳಿಕ ಅವರನ್ನು ಡಿಸ್‌ಚಾರ್ಜ್‌ ಮಾಡಲಾಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

LK Advani
Koo

ನವದೆಹಲಿ: ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ (L K Advani) ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ದೆಹಲಿಯ ಅಪೋಲೊ ಆಸ್ಪತ್ರೆಯಿಂದ (Apollo Hospital) ಡಿಸ್‌ಚಾರ್ಜ್‌ ಮಾಡಲಾಗಿದೆ. ಅಪೋಲೊ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಎಲ್‌.ಕೆ.ಅಡ್ವಾಣಿ ಅವರ ಆರೋಗ್ಯ ಚೇತರಿಕೆ ಕಂಡಿದೆ. ಹಾಗಾಗಿ, ಗುರುವಾರ (ಜುಲೈ 4) ಸಂಜೆ ಅವರನ್ನು ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಮಾಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಬುಧವಾರ (ಜುಲೈ 3) ರಾತ್ರಿ 9 ಗಂಟೆ ಸುಮಾರಿಗೆ ಎಲ್‌.ಕೆ.ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಇದಾದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. 96 ವರ್ಷದ ಎಲ್‌.ಕೆ.ಅಡ್ವಾಣಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಜೂನ್‌ 27ರಂದು ಕೂಡ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಹಾಗಾಗಿ ಅವರನ್ನು ಅದೇ ರಾತ್ರಿ ದೆಹಲಿಯಲ್ಲಿರುವ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಅವರನ್ನು ಡಿಸ್‌ಚಾರ್ಜ್‌ ಮಾಡಲಾಗಿತ್ತು.

LK Advani

ಕಳೆದ ತಿಂಗಳ ಆರಂಭದಲ್ಲಿ, ಸರ್ಕಾರ ರಚನೆಗೆ ಹಕ್ಕು ಸಾಧಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಅಡ್ವಾಣಿಯವರನ್ನು ಭೇಟಿ ಮಾಡಿದ್ದರು. ಗಾಂಧಿನಗರದ ಮಾಜಿ ಸಂಸದರಾದ ಅಡ್ವಾಣಿ, ಮೋದಿಯವರ ರಾಜಕೀಯ ಮಾರ್ಗದರ್ಶಕರಾಗಿದ್ದಾರೆ.

ಅಡ್ವಾಣಿ ಅವರಿಗೆ ಈ ವರ್ಷದ ಮಾರ್ಚ್‌ನಲ್ಲಿ ಭಾರತ ರತ್ನ ಪ್ರಶಸ್ತಿಯನ್ನು ನೀಡಲಾಗಿತ್ತು. ಅವರ ನಿವಾಸದಲ್ಲಿಯೇ ಈ ಅತ್ಯುನ್ನತ ನಾಗರಿಕ ಗೌರವವನ್ನು ಸಲ್ಲಿಸಲಾಗಿತ್ತು. ರಾಷ್ಟ್ರಪತಿ ದ್ರೌಪದಿ ಮುರ್ಮು ಇದನ್ನು ಕೊಡಮಾಡಿದ್ದರು. ಔಪಚಾರಿಕ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಎಲ್ ಕೆ ಅಡ್ವಾಣಿ ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

ಎಲ್‌ಕೆ ಅಡ್ವಾಣಿ ಅವರು ಜೂನ್ 2002ರಿಂದ ಮೇ 2004 ರವರೆಗೆ ಭಾರತದ ಉಪ ಪ್ರಧಾನ ಮಂತ್ರಿಯಾಗಿ, ಅಕ್ಟೋಬರ್ 1999 ರಿಂದ ಮೇ 2004 ರವರೆಗೆ ಕೇಂದ್ರ ಗೃಹ ಸಚಿವರಾಗಿ ಸೇವೆ ಸಲ್ಲಿಸಿದರು. ಅವರು 1986 ರಿಂದ 1990, 1993 ರಿಂದ 1998 ಮತ್ತು 2004 ರಿಂದ 2005ರವರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು.

ಇದನ್ನೂ ಓದಿ: LK Advani: ಎಲ್‌ ಕೆ ಅಡ್ವಾಣಿ ಆರೋಗ್ಯದಲ್ಲಿ ಮತ್ತೆ ಏರುಪೇರು; ಆಸ್ಪತ್ರೆಗೆ ದಾಖಲು

Continue Reading

ದೇಶ

Hemant Soren: 5 ತಿಂಗಳ ಜೈಲುವಾಸದ ಬಳಿಕ ಮತ್ತೆ ಜಾರ್ಖಂಡ್‌ ಸಿಎಂ ಆಗಿ ಹೇಮಂತ್‌ ಸೊರೆನ್‌ ಪ್ರಮಾಣವಚನ!

Hemant Soren: Hemant Soren: ಅಕ್ರಮವಾಗಿ ಹಣ ವರ್ಗಾವಣೆ ಸೇರಿ ಹಲವು ಪ್ರಕರಣಗಳಲ್ಲಿ ಹೇಮಂತ್‌ ಸೊರೆನ್‌ ಅವರ ಬಂಧನವಾದ ಬಳಿಕ ಅವರ ಆಪ್ತ ಚಂಪೈ ಸೊರೆನ್‌ ಅವರು ಫೆಬ್ರವರಿ 2ರಂದು ಜಾರ್ಖಂಡ್‌ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಜೈಲಿನಿಂದ ಬಿಡುಗಡೆಯಾಗಿರುವ ಹೇಮಂತ್‌ ಸೊರೆನ್‌ ಅವರು ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

VISTARANEWS.COM


on

Hemant Soren
Koo

ರಾಂಚಿ: ಅಕ್ರಮ ಹಣ ವರ್ಗಾವಣೆ (Money laundering Case), ಭೂ ವ್ಯವಹಾರ ಸೇರಿ ಹಲವು ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳಿಂದ ಬಂಧಿತರಾಗಿ, ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿರುವ ಜಾರ್ಖಂಡ್‌ ಮುಕ್ತಿ ಮೋರ್ಚಾ ಪಕ್ಷದ ಮುಖ್ಯಸ್ಥ ಹೇಮಂತ್‌ ಸೊರೆನ್ (Hemant Soren) ಅವರು ಮೂರನೇ ಬಾರಿಗೆ ಜಾರ್ಖಂಡ್‌ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಐದು ತಿಂಗಳ ಜೈಲು ವಾಸದ ಬಳಿಕ ಅವರು ಮತ್ತೆ ಸಿಎಂ ಗದ್ದುಗೆಗೆ ಏರಿದ್ದಾರೆ.

ಅಕ್ರಮವಾಗಿ ಹಣ ವರ್ಗಾವಣೆ ಸೇರಿ ಹಲವು ಪ್ರಕರಣಗಳಲ್ಲಿ ಹೇಮಂತ್‌ ಸೊರೆನ್‌ ಅವರ ಬಂಧನವಾದ ಬಳಿಕ ಅವರ ಆಪ್ತ ಚಂಪೈ ಸೊರೆನ್‌ ಅವರು ಫೆಬ್ರವರಿ 2ರಂದು ಜಾರ್ಖಂಡ್‌ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಜಾರ್ಖಂಡ್ ಮುಕ್ತಿ ಮೋರ್ಚಾ, ಕಾಂಗ್ರೆಸ್ ಮತ್ತು ಲಾಲು ಪ್ರಸಾದ್‌ ಯಾದವ್ ಅವರ ರಾಷ್ಟ್ರೀಯ ಜನತಾ ದಳದ ಆಡಳಿತಾರೂಢ ಮೈತ್ರಿಕೂಟವು ಹೇಮಂತ್‌ ಸೊರೆನ್‌ ಅವರು ಮತ್ತೆ ಸಿಎಂ ಆಗಲು ಒಪ್ಪಿಗೆ ಸೂಚಿಸಿತು. ಇದಾದ ಬಳಿಕ ಚಂಪೈ ಸೊರೆನ್‌ ರಾಜೀನಾಮೆ ನೀಡಿದ್ದರು. ಹೇಮಂತ್‌ ಸೊರೆನ್‌ ಅವರು ಸರ್ಕಾರ ರಚಿಸಲು ಹಕ್ಕು ಮಂಡಿಸಿ, ಈಗ ಸಿಎಂ ಆಗಿ ಪದಗ್ರಹಣ ಮಾಡಿದ್ದಾರೆ.

ಅಕ್ರಮವಾಗಿ ಹಣ ವರ್ಗಾವಣೆ, ಭೂ ಅವ್ಯವಹಾರ ಪ್ರಕರಣ ಕೇಳಿಬಂದ ಹಿನ್ನೆಲೆಯಲ್ಲಿ ಇ.ಡಿ ಅಧಿಕಾರಿಗಳು ಹೇಮಂತ್‌ ಸೊರೆನ್‌ ಅವರಿಗೆ 9 ಬಾರಿ ಸಮನ್ಸ್‌ ಜಾರಿಗೊಳಿಸಿದ್ದರು. ಆದರೆ ಹೇಮಂತ್‌ ಸೊರೆನ್‌ ಅವರು ಪ್ರತಿ ಬಾರಿ ಸಮನ್ಸ್‌ ನೀಡಿದಾಗಲೂ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದರು. ಇ.ಡಿ ಅಧಿಕಾರಿಗಳು ಮನೆಗೆ ಲಗ್ಗೆ ಇಡುತ್ತಾರೆ ಎಂಬುದನ್ನು ಅರಿತಿದ್ದ ಅವರು ದೆಹಲಿಗೆ ತೆರಳಿ, ಗೌಪ್ಯ ಸ್ಥಳದಲ್ಲಿದ್ದರು. ಆದರೆ ಇ.ಡಿ ಅಧಿಕಾರಿಗಳು ಕೊನೆಗೂ ಹೇಮಂತ್‌ ಸೊರೆನ್‌ ಅವರನ್ನು ಈ ವರ್ಷದ ಜನವರಿ 31ರಂದು ಬಂಧಿಸಿದ್ದರು. ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಹೇಮಂತ್‌ ಸೊರೆನ್‌ ಅವರು ರಾಜೀನಾಮೆ ನೀಡಿದ್ದರು.

ಬಂಧನವನ್ನು ಪ್ರಶ್ನಿಸಿ ಹಾಗೂ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿತ್ತು. ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸುವ ಉದ್ದೇಶದಿಂದ ಹೇಮಂತ್‌ ಸೊರೆನ್‌ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠವು ಹೇಮಂತ್ ಸೊರೆನ್ ಅವರು ವಿಚಾರಣಾ ನ್ಯಾಯಾಲಯದ ಮುಂದೆ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ ಎಂಬ ಅಂಶವನ್ನು ಮರೆಮಾಚಿದ್ದಕ್ಕಾಗಿ ತರಾಟೆಗೆ ತೆಗೆದುಕೊಂಡಿತು. ನ್ಯಾಯಾಲಯ ಎಚ್ಚರಿಕೆ ನೀಡಿದ ನಂತರ ಸೊರೆನ್ ಪರವಾಗಿ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಜಾಮೀನು ಅರ್ಜಿಯನ್ನು ಹಿಂತೆಗೆದುಕೊಂಡರು. ಇದರಿಂದ ಸೊರೆನ್‌ ಅವರಿಗೆ ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ: Arvind Kejriwal: ಅರವಿಂದ ಕೇಜ್ರಿವಾಲ್‌ ಬಿಡುಗಡೆ ಕನಸು ಭಗ್ನ; ಮತ್ತೆ 14 ದಿನ ನ್ಯಾಯಾಂಗ ಬಂಧನ

Continue Reading
Advertisement
Team India
ಪ್ರಮುಖ ಸುದ್ದಿ22 mins ago

Team India : ಅಪರೂಪದಲ್ಲಿ ಅಪರೂಪ; ಮುಂಬೈ ವಿಮಾನ ನಿಲ್ದಾಣದಲ್ಲಿ ಟೀಂ ಇಂಡಿಯಾದ ವಿಮಾನಕ್ಕೆ ಸೆಲ್ಯೂಟ್

BS Yediyurappa
ಕರ್ನಾಟಕ23 mins ago

BS Yediyurappa: ಪೋಕ್ಸೊ ಕೇಸ್;‌ ಜುಲೈ 17ರಂದು ವಿಚಾರಣೆಗೆ ಹಾಜರಾಗುವಂತೆ ಬಿಎಸ್‌ವೈಗೆ ಕೋರ್ಟ್‌ ಸಮನ್ಸ್!

Hatras Stampede
ದೇಶ24 mins ago

Hathras Stampede: ಕಾಲ್ತುಳಿತದ ಬಳಿಕ ಕಾಲ್ಕಿತ್ತಿದ್ದ ಡೋಂಗಿ ಬಾಬಾ- ವೈರಲ್‌ ಆಯ್ತು ವಿಡಿಯೋ

PF Interest
ದೇಶ43 mins ago

PF Interest: ನೌಕರರಿಗೆ ಗುಡ್‌ ನ್ಯೂಸ್;‌ ಪಿಎಫ್‌ ಬಡ್ಡಿದರ ಘೋಷಿಸಿದ ಕೇಂದ್ರ ಸರ್ಕಾರ, ಎಷ್ಟಿದೆ ನೋಡಿ

Hardik Pandya
ಪ್ರಮುಖ ಸುದ್ದಿ54 mins ago

Hardik Pandya : ಅವಮಾನ ಮಾಡಿದ ಪ್ರೇಕ್ಷಕರಿಂದಲೇ ಜೈಕಾರ ಹಾಕಿಸಿಕೊಂಡ ಹಾರ್ದಿಕ್ ಪಾಂಡ್ಯ!

Heavy rain in Uttara Kannada district district NDRF team for rescue says DC Gangubai Manakar
ಉತ್ತರ ಕನ್ನಡ56 mins ago

Uttara Kannada News: ಉ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆ, ರಕ್ಷಣೆಗೆ ಎನ್.ಡಿ.ಆರ್.ಎಫ್ ತಂಡ

Central Govt approves quadrilateral road in Shira at a cost of Rs 1000 rs crore says TB Jayachandra
ತುಮಕೂರು57 mins ago

Shira News: ಶಿರಾದಲ್ಲಿ 1,000 ಕೋಟಿ ರೂ. ವೆಚ್ಚದಲ್ಲಿ ಚತುಷ್ಪಥ ರಸ್ತೆಗೆ ಕೇಂದ್ರದಿಂದ ಅನುಮೋದನೆ: ಟಿ.ಬಿ ಜಯಚಂದ್ರ

Viral Video
Latest60 mins ago

Viral Video: ನೀರು ತುಂಬಿದ್ದ ರಸ್ತೆ ಗುಂಡಿಗೆ ಬಿದ್ದ ಬಾಲಕಿ; ಜೀವ ಉಳಿಸಿದ ಹುಡುಗ

Robot Suicide
ತಂತ್ರಜ್ಞಾನ1 hour ago

Robot Suicide: ದ. ಕೊರಿಯಾದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೋಬೋಟ್! ಕೆಲಸದ ಹೊರೆ ಕಾರಣ?

Muda site allocation Politically motivated allegation says CM Siddaramaiah
ಕರ್ನಾಟಕ2 hours ago

CM Siddaramaiah: ನಮಗೆ ನಿವೇಶನ ಕೊಟ್ಟಿರುವುದು ತಪ್ಪು ಎಂದರೆ ಪರಿಹಾರ ಕೊಡಲಿ; ಸಿದ್ದರಾಮಯ್ಯ ಸವಾಲು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ3 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ5 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ6 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ7 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ8 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ9 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ10 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

ಟ್ರೆಂಡಿಂಗ್‌