VSK Media Awards 2024: ಲೋಕಹಿತಕ್ಕಾಗಿ ಪತ್ರಿಕೋದ್ಯಮ ಶ್ರಮಿಸಬೇಕು: ಪ್ರಫುಲ್ಲ ಕೇತ್ಕರ್ - Vistara News

ಬೆಂಗಳೂರು

VSK Media Awards 2024: ಲೋಕಹಿತಕ್ಕಾಗಿ ಪತ್ರಿಕೋದ್ಯಮ ಶ್ರಮಿಸಬೇಕು: ಪ್ರಫುಲ್ಲ ಕೇತ್ಕರ್

VSK Media Awards 2024: ಬೆಂಗಳೂರಿನ ಬಸವನಗುಡಿಯ ಬಿ.ಎಂ.ಎಸ್ ಎಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ವಿಶ್ವ ಸಂವಾದ ಕೇಂದ್ರದಿಂದ ಆಯೋಜಿಸಿದ್ದ 2024ನೇ ಸಾಲಿನ ವಿಎಸ್‌ಕೆ ಮಾಧ್ಯಮ ಪ್ರಶಸ್ತಿ ಸಮಾರಂಭದಲ್ಲಿ ಆರ್ಗನೈಸರ್ ಸಂಪಾದಕ ಪ್ರಫುಲ್ಲ ಕೇತ್ಕರ್ ಮಾತನಾಡಿದರು.

VISTARANEWS.COM


on

VSK Media Awards 2024
ಬೆಂಗಳೂರಿನಲ್ಲಿ ವಿಶ್ವ ಸಂವಾದ ಕೇಂದ್ರದಿಂದ ಡಾ.ಪೂರ್ವಿ ಜಯರಾಜ್, ಪ್ರೊ.ಪ್ರೇಮಶೇಖರ, ಶೋಭಾ ಎಚ್. ಜಿ, ಅಜಿತ್ ಹನಮಕ್ಕನವರ್ ಹಾಗೂ ಸುದರ್ಶನ್ ಚನ್ನಂಗಿಹಳ್ಳಿ ಅವರಿಗೆ ಮಾಧ್ಯಮ ಪ್ರಶಸ್ತಿ ನೀಡಲಾಯಿತು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪತ್ರಕರ್ತರಾದವರು (VSK Media Awards 2024) ಎಲ್ಲರೊಂದಿಗೂ ಬೆರೆತು ಸಮಾಜ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಬೇಕು. ಲೋಕಹಿತಕ್ಕಾಗಿ ಅವರು ಕಾರ್ಯನಿರ್ವಹಿಸಬೇಕು ಎಂದು ಆರ್ಗನೈಸರ್ ಸಂಪಾದಕ ಪ್ರಫುಲ್ಲ ಕೇತ್ಕರ್ ಹೇಳಿದರು.

ವಿಶ್ವ ಸಂವಾದ ಕೇಂದ್ರ ಕರ್ನಾಟಕದ ವತಿಯಿಂದ ಅವರು ಬಸವನಗುಡಿಯ ಬಿ.ಎಂ.ಎಸ್ ಎಂಜಿನಿಯರಿಂಗ್ ಕಾಲೇಜ್ ಸಭಾಂಗಣದಲ್ಲಿ ಆಯೋಜಿಸಲಾದ 2024ನೆಯ ಸಾಲಿನ ವಿಎಸ್‌ಕೆ ಮಾಧ್ಯಮ ಪ್ರಶಸ್ತಿ ಸಮಾರಂಭದಲ್ಲಿ ಅವರು ಮಾತನಾಡಿದರು.

ಆರ್ಗನೈಸರ್ ಸಂಪಾದಕ ಪ್ರಫುಲ್ಲ ಕೇತ್ಕರ್

ನಾರದ ಮಹರ್ಷಿಗಳನ್ನು ಆದ್ಯ ಪತ್ರಕರ್ತರೆಂದು ಗುರುತಿಸುತ್ತೇವೆ. ಏಕೆಂದರೆ ಸಂವಹನದ ಸ್ಥಿರವಾದ ಸಂಸ್ಥೆಯಂತೆ ಅವರು ತಮ್ಮ ಪಾತ್ರವನ್ನು ನಿಭಾಯಿಸಿದ್ದರು. ಆದರೆ ಅವರನ್ನು ವ್ಯಂಗ್ಯವಾಗಿ ಚಿತ್ರಿಸುವ ಕಥನಗಳು ವ್ಯಾಪಕತೆಯನ್ನು ಪಡೆದುಕೊಂಡಿದ್ದರಿಂದ ಜನಸಾಮಾನ್ಯರಿಗೆ ಅವರ ಪ್ರಾಮುಖ್ಯತೆಯ ಕುರಿತು ಹೆಚ್ಚು ಗಮನವಹಿಸುವುದಕ್ಕೆ ಸಾಧ್ಯವಾಗಲಿಲ್ಲ. ವಾಸ್ತವದಲ್ಲಿ ನಾರದ ಮಹರ್ಷಿಗಳು ಧರ್ಮದ ಉಳಿವಿಗಾಗಿ, ಲೋಕಹಿತಕ್ಕಾಗಿ ಶ್ರಮಿಸಿದ ಮಹಾನ್ ಸಂವಹನಕಾರ ಎಂದು ನುಡಿದರು.

ಯಾವುದೇ ವೃತ್ತಿಯಲ್ಲಿ ಕೆಲಸ ಮಾಡುವವರು ತಮ್ಮ ವೃತ್ತಿಯ ಕಡೆಗೆ ಭಕ್ತಿಯನ್ನು, ಬದ್ಧತೆಯನ್ನು ಹೊಂದಿರಬೇಕು. ವಿಷಯವನ್ನು ಕೇಳಿ ತಿಳಿಯುವುದು ಮಾತ್ರವಲ್ಲದೆ ಪರಿಶೀಲಿಸಬೇಕು. ನಮ್ಮ ಸಂಚಾರದ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಂಡು ಅನುಭವವನ್ನು ಪಡೆಯಬೇಕು. ಪತ್ರಕರ್ತರಿಗೆ ಈ ಮೂರು ಗುಣ ಅತ್ಯಂತ ಪ್ರಮುಖವಾದದ್ದು. ನಾರದ ಮಹರ್ಷಿಗಳೂ ಈ ಗುಣಗಳನ್ನು ಒಳಗೊಂಡಿದ್ದರು ಮತ್ತು ನಾರದ ಸೂತ್ರದಲ್ಲಿ ಇವುಗಳ ಪ್ರಾಮುಖ್ಯತೆಯ ಕುರಿತು ತಿಳಿಸಿದ್ದಾರೆ ಎಂದರು.

ವಿಜಯ ಕರ್ನಾಟಕ ಸಂಪಾದಕ ಸುದರ್ಶನ್ ಚನ್ನಂಗಿಹಳ್ಳಿ ಮತ್ತು ಸುವರ್ಣ ನ್ಯೂಸ್‌ ಸಂಪಾದಕ ಅಜಿತ್ ಹನಮಕ್ಕನವರ್

ಸುಳ್ಳು ಸುದ್ದಿ ಎಂಬ ಪರಿಭಾಷೆ ಸೂಕ್ತವಾದದ್ದಲ್ಲ. ಏಕೆಂದರೆ ಸುಳ್ಳಿನಿಂದ ಕೂಡಿರುವುದು ಸುದ್ದಿಗಳಾಗಲು ಸಾಧ್ಯವಿಲ್ಲ. ಅವುಗಳನ್ನು ಸುಳ್ಳು ಕಥನಗಳೆಂದು ಗುರುತಿಸಬಹುದು. ಸುದ್ದಿಗಳನ್ನು ನೀಡುವಾಗ ಅವುಗಳನ್ನು ತಿರುಚುತ್ತಿರುವುದು ಇಂದಿನ ಸವಾಲು. ಇದರ ಕುರಿತು ಪರಿಹಾರಗಳನ್ನು ಕಂಡುಕೊಳ್ಳಲು ಇಂದಿನ ಪತ್ರಿಕೋದ್ಯಮ ಗಮನ ಹರಿಸಬೇಕಾಗಿದೆ. ಭಾಷೆ, ಭೌಗೋಳಿಕ ವಿಭಿನ್ನತೆ, ಪ್ರಾದೇಶಿಕತೆ ಇವೆಲ್ಲವೂ ವಿವಿಧತೆಯನ್ನು ಸಂಭ್ರಮಿಸುವ ಸಂಸ್ಕೃತಿಯಾದ ನಮಗೆ ಎಂದಿಗೂ ಪ್ರತ್ಯೇಕತೆಯ ಸರಕಾಗಿಲ್ಲ. ಆದರೆ ಇತ್ತೀಚೆಗಿನ ದಿನಗಳಲ್ಲಿ ಸಮಾಜದಲ್ಲಿ ಒಡಕನ್ನು ಮೂಡಿಸುವುದಕ್ಕಾಗಿ ಅವುಗಳನ್ನು ಬಳಸಿಕೊಳ್ಳಲಾಗುತ್ತಿದೆ. ಆದ್ದರಿಂದ ಪತ್ರಕರ್ತರು ಸತ್ಯಾಧಾರಿತ ಭಾರತೀಯ ಕಥನವನ್ನು ಸರಿಯಾದ ವ್ಯಕ್ತಿಗಳಿಗೆ ತಲುಪಿಸುವ ಕಾರ್ಯವನ್ನು ಮಾಡಬೇಕು ಎಂದು ಅಭಿಪ್ರಾಯಪಟ್ಟರು.

ಸ್ತ್ರೀ ಜಾಗೃತಿ ಪತ್ರಿಕೆ ಸಂಪಾದಕಿ ಶೋಭಾ ಎಚ್. ಜಿ. ಮತ್ತು ಅಂಕಣಕಾರ ಪ್ರೊ.ಪ್ರೇಮಶೇಖರ

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯಕ್ಷೇತ್ರೀಯ ಸಂಘಚಾಲಕ ಡಾ.ಪಿ.ವಾಮನ್ ಶೆಣೈ, ವಿಶ್ವ ಸಂವಾದ ಕೇಂದ್ರ ಕರ್ನಾಟಕದ ವಿಶ್ವಸ್ಥ ಶ್ರೀನಿವಾಸ ಭಟ್, ಮುಖ್ಯ ಅತಿಥಿ ಪ್ರಫುಲ್ಲ ಕೇತ್ಕರ್ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಡಾ.ಪೂರ್ವಿ ಜಯರಾಜ್ ಮತ್ತು ಪ್ರಫುಲ್ಲ ಕೇತ್ಕರ್

ವಿಶ್ವ ಸಂವಾದ ಕೇಂದ್ರ ಕರ್ನಾಟಕದ ವತಿಯಿಂದ ನೀಡಲಾದ ತಿ.ತಾ.ಶರ್ಮ ಪತ್ರಿಕೋದ್ಯಮ ಪ್ರಶಸ್ತಿಯನ್ನು ವಿಜಯ ಕರ್ನಾಟಕ ಪತ್ರಿಕೆಯ ಸಂಪಾದಕ ಸುದರ್ಶನ್ ಚನ್ನಂಗಿಹಳ್ಳಿ, ಚಂದ್ರಶೇಖರ ಭಂಡಾರಿ ಪತ್ರಿಕೋದ್ಯಮ ಪ್ರಶಸ್ತಿಯನ್ನು ಏಷಿಯಾನೆಟ್ ಸುವರ್ಣನ್ಯೂಸ್‌ನ ಸಂಪಾದಕ ಅಜಿತ್ ಹನಮಕ್ಕನವರ್, ಬೆ.ಸು.ನಾ. ಮಲ್ಯ ಪತ್ರಿಕೋದ್ಯಮ ಪ್ರಶಸ್ತಿಯನ್ನು ಸ್ತ್ರೀ ಜಾಗೃತಿ ಪತ್ರಿಕೆಯ ಸಂಪಾದಕಿ ಶೋಭಾ ಎಚ್. ಜಿ., ಹೊ.ವೆ.ಶೇಷಾದ್ರಿ ಅಂಕಣಕಾರ ಪ್ರಶಸ್ತಿಯನ್ನು ಖ್ಯಾತ ಅಂಕಣಕಾರ ಪ್ರೊ.ಪ್ರೇಮಶೇಖರ, ವಿಎಸ್‌ಕೆ ಡಿಜಿಟಲ್ ಮಾಧ್ಯಮ ಪ್ರಶಸ್ತಿಯನ್ನು ಡಾ.ಪೂರ್ವಿ ಜಯರಾಜ್ ಸ್ವೀಕರಿಸಿದರು.

ಇದನ್ನೂ ಓದಿ | ದಶಮುಖ ಅಂಕಣ: ಮಳೆಯ ನಡುವೆ ಮರಳಿ ಶಾಲೆಗೆ!

ಕಾರ್ಯಕ್ರಮದಲ್ಲಿ ವಿಶ್ವ ಸಂವಾದ ಕೇಂದ್ರದ ಟ್ರಸ್ಟಿಗಳು, ಚಿಂತಕರು, ಅಧ್ಯಾಪಕರು, ಸಾಮಾಜಿಕ ಕಾರ್ಯಕರ್ತರು ಸೇರಿ ಹಲವರು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

BS Yediyurappa: ಪೋಕ್ಸೊ ಕೇಸ್;‌ ಜುಲೈ 17ರಂದು ವಿಚಾರಣೆಗೆ ಹಾಜರಾಗುವಂತೆ ಬಿಎಸ್‌ವೈಗೆ ಕೋರ್ಟ್‌ ಸಮನ್ಸ್!

BS Yediyurappa: ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್‌ 27ರಂದು ಸಿಐಡಿ ಅಧಿಕಾರಿಗಳು ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. 75 ಸಾಕ್ಷಿಗಳ ಹೇಳಿಕೆ ಸೇರಿದಂತೆ 750 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ. ಇದರ ಬೆನ್ನಲ್ಲೇ, ಖುದ್ದು ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಕೋರ್ಟ್‌ ಸಮನ್ಸ್‌ ಜಾರಿಗೊಳಿಸಿದೆ.

VISTARANEWS.COM


on

BS Yediyurappa
Koo

ಬೆಂಗಳೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಪೋಕ್ಸೊ ಕೇಸ್‌ (POCSO Case) ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರಿಗೆ ನ್ಯಾಯಾಲಯಕ್ಕೆ ಖುದ್ದು ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಪೋಕ್ಸೊ ವಿಶೇಷ ಕೋರ್ಟ್‌ ಸಮನ್ಸ್‌ ಜಾರಿಗೊಳಿಸಿದೆ. ಜುಲೈ 17ರಂದು ಬಿ.ಎಸ್.ಯಡಿಯೂರಪ್ಪ ಸೇರಿ ಮೂವರು ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಬೇಖು ಎಂದು ಸಮನ್ಸ್‌ ಜಾರಿ ಮಾಡಿದೆ.

ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್‌ 27ರಂದು ಸಿಐಡಿ ಅಧಿಕಾರಿಗಳು ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. 75 ಸಾಕ್ಷಿಗಳ ಹೇಳಿಕೆ ಸೇರಿದಂತೆ 750 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ. ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆ ಸೆಕ್ಷನ್‌ 8, ಐಪಿಸಿ ಸೆಕ್ಷನ್‌ಗಳಾದ 354(ಎ), 204, 214 ಅಡಿ, 2ನೇ ಆರೋಪಿ ಅರುಣ್‌ ಎಂ.ವೈ, 3ನೇ ಆರೋಪಿ ಎಂ.ರುದ್ರೇಶ್‌ ಮತ್ತು 4ನೇ ಆರೋಪಿ ಜಿ.ಮರಿಸ್ವಾಮಿ ಅವರ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 204, 214ರ ಅಡಿ ಆರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ.

B S yediyurappa

ಯಡಿಯೂರಪ್ಪ ನಿರ್ದೇಶನದಂತೆ ಆರೋಪಿ ರುದ್ರೇಶ್‌ ಅವರಿಂದ 2 ಲಕ್ಷ ರೂ. ಪಡೆದು ಅದನ್ನು ಸಂತ್ರಸ್ತ ಮಹಿಳೆಗೆ ನೀಡಿ, ಆಕೆಯ ಫೋನ್‌ನಲ್ಲಿನ ಬಿಎಸ್‌ವೈಗೆ ಸಂಬಂಧಿಸಿದ ವಿಡಿಯೊವನ್ನು ಡಿಲೀಟ್‌ ಮಾಡಿಸಿರುವುದು ಮತ್ತು ಅದನ್ನು ಸಾಮಾಜಿಕ ಜಾಲತಾಣದಿಂದ ತೆಗೆಸಿದ ಆರೋಪ ಅರುಣ್ ಮತ್ತು ಮರಿಸ್ವಾಮಿ ಅವರ ಮೇಲಿದೆ. ಇನ್ನು ಯಡಿಯೂರಪ್ಪ ಅವರು ಎಫ್‌ಐಆರ್‌ ರದ್ದತಿ ಕೋರಿ ಹಾಗೂ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಕೆ ಮಾಡಿರುವ ಅರ್ಜಿಗಳು ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿವೆ.

ಏನಿದು ಪ್ರಕರಣ?

2024ರ ಫೆಬ್ರವರಿ 2ರಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾರ್ಚ್‌ 14ರಂದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದಾದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ಸಿಐಡಿ ಅಧಿಕಾರಿಗಳ ವಿಚಾರಣೆಗೂ ಹಾಜರಾಗಿದ್ದರು. ಆದರೆ, ಎಫ್‌ಐಆರ್‌ ದಾಖಲಾದ ಮೂರು ತಿಂಗಳ ಬಳಿಕ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜೂನ್‌ 12ರಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಜೂನ್‌ 11ರಂದೇ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು.

ಇದನ್ನೂ ಓದಿ: Actress Ramya: ದರ್ಶನ್, ಪ್ರಜ್ವಲ್‌, ಸೂರಜ್, ಯಡಿಯೂರಪ್ಪ ಹೆಸರು ಉಲ್ಲೇಖಿಸಿ ಮತ್ತೆ ಕಿಡಿ ಕಾರಿದ ರಮ್ಯಾ; ಪೋಸ್ಟ್‌ನಲ್ಲಿ ಏನಿದೆ?

Continue Reading

ಕರ್ನಾಟಕ

CM Siddaramaiah: ನಮಗೆ ನಿವೇಶನ ಕೊಟ್ಟಿರುವುದು ತಪ್ಪು ಎಂದರೆ ಪರಿಹಾರ ಕೊಡಲಿ; ಸಿದ್ದರಾಮಯ್ಯ ಸವಾಲು

CM Siddaramaiah: ಮುಡಾ ನಿವೇಶನ ಹಂಚಿಕೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತ ಆರೋಪಗಳೇ ಹೊರತು ಅಂಕಿಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಎಂದು ತಿಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಿವೇಶನ ನೀಡಿದಾಗ 2021ನೇ ಇಸವಿಯಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಅವರೇ ನಿವೇಶನಗಳನ್ನು ಹಂಚಿ ಈಗ ಕಾನೂನುಬಾಹಿರ ಎಂದರೆ ಹೇಗೆ? ವಿಜಯನಗರ 3ನೇ ಅಥವಾ 4ನೇ ಹಂತದಲ್ಲಿ ಕೊಡಿ ಎಂದು ಕೇಳಲಿಲ್ಲ. ನಮಗೆ ಪರ್ಯಾಯವಾಗಿ 50:50 ಅನುಪಾತದಲ್ಲಿ ಕೊಡಲು ಒಪ್ಪಿದಂತೆ ಕೊಡಿ ಎಂದು ಹೇಳಿದ್ದೇವೆ. ಇದು ರಾಜಕೀಯ ಪ್ರೇರಿತ ಆಪಾದನೆ ಎಂದು ಅವರು ತಿಳಿಸಿದ್ದಾರೆ.

VISTARANEWS.COM


on

Muda site allocation Politically motivated allegation says CM Siddaramaiah
Koo

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತ ಆರೋಪಗಳೇ ಹೊರತು ಅಂಕಿಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಬೇರೇನೂ ವಿಷಯವಿಲ್ಲ. ಆರ್.ಎಸ್.ಎಸ್ ಹೇಳಿದಂತೆ ಮಾಡುತ್ತಾರೆ. ವಿಷಯವೇ ಇಲ್ಲ. ಮುಡಾ ನಮ್ಮ 3.16 ಎಕರೆ ಜಮೀನಿನಲ್ಲಿ ನಿವೇಶನಗಳನ್ನು ಮಾಡಿ ಹಂಚಿದರೆ ನಾವು ಕೇಳಬಾರದೇ. ಹಾಗಿದ್ದಲ್ಲಿ ಜಮೀನಿನ ಮೌಲ್ಯ 60 ಕೋಟಿ ರೂ. ಗಳನ್ನು ಕೊಟ್ಟುಬಿಡಲಿ. ನಮ್ಮ ಜಮೀನು ಒತ್ತುವರಿ ಮಾಡಿಕೊಂಡಿರುವುದನ್ನು ಅವರೇ ಸಭೆಯಲ್ಲಿ ಒಪ್ಪಿಕೊಂಡಿದ್ದಾರೆ. ಅದಕ್ಕಾಗಿ ನಿವೇಶನಗಳನ್ನು 50:50 ಅನುಪಾತದಲ್ಲಿ ನೀಡಿದ್ದಾರೆ. ಅದಕ್ಕೆ ನಾವು ಒಪ್ಪಿದ್ದೇವೆ. ಇಂಥ ಕಡೆಯೇ ನಿವೇಶನ ಕೊಡಿ ಎಂದು ನಾವು ಕೇಳಿಲ್ಲ ಎಂದು ಹೇಳಿದರು.

ಇದನ್ನೂ ಓದಿ: R Ashok: ಮುಡಾದಲ್ಲಿ ಎಲ್ಲರೂ ಗ್ಯಾಂಗ್‌ ಮಾಡಿಕೊಂಡು ಹಗರಣ ಮಾಡಿದ್ದಾರೆ; ಆರ್‌. ಅಶೋಕ್‌ ಆರೋಪ

ಬಿಜೆಪಿ ಅಧಿಕಾರದಲ್ಲಿತ್ತು

ನಿವೇಶನ ನೀಡಿದಾಗ 2021ನೇ ಇಸವಿಯಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಅವರೇ ನಿವೇಶನಗಳನ್ನು ಹಂಚಿ ಈಗ ಕಾನೂನುಬಾಹಿರ ಎಂದರೆ ಹೇಗೆ? ವಿಜಯನಗರ 3ನೇ ಅಥವಾ 4ನೇ ಹಂತದಲ್ಲಿ ಕೊಡಿ ಎಂದು ಕೇಳಲಿಲ್ಲ. ನಮಗೆ ಪರ್ಯಾಯವಾಗಿ 50:50 ಅನುಪಾತದಲ್ಲಿ ಕೊಡಲು ಒಪ್ಪಿದಂತೆ ಕೊಡಿ ಎಂದು ಹೇಳಿದ್ದೇವೆ. ಇದು ರಾಜಕೀಯ ಪ್ರೇರಿತ ಆಪಾದನೆ ಎಂದು ತಿಳಿಸಿದರು.

ನಿವೇಶನ ಕೊಟ್ಟಿರುವುದು ತಪ್ಪು ಎಂದರೆ ಪರಿಹಾರ ಕೊಡಲಿ

ಭೂ ಸ್ವಾಧೀನವಾದಲ್ಲಿಯೇ ಜಮೀನು ಕೊಡಬೇಕೆಂಬ ನಿಯಮವಿದೆ ಎಂದು ಪರ್ತಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ನಾವು ಇಂಥ ಕಡೆಯೇ ನಿವೇಶನ ಕೊಡಿ ಎಂದು ಕೇಳಿಲ್ಲ. ಜಾಗ ಕೊಟ್ಟಿರುವುದು ತಪ್ಪು ಎನ್ನುವುದಾದರೆ ನಮಗೆ ಪರಿಹಾರ ಕೊಡಲಿ. ಅಕ್ಟೋಬರ್ 2023 ರಲ್ಲಿ ಸಚಿವರು 50:50 ಅನುಪಾತದಲ್ಲಿ ಜಮೀನು ಕೊಡುವುದನ್ನು ರದ್ದು ಮಾಡಿ ಎಂದು ಬರೆದಿದ್ದಾರೆ. ಬರೆಯದೇ ಹೋದರೂ ಕೂಡ 62 ಕೋಟಿ ರೂ. ಗಳನ್ನು ಕಾನೂನಿನ ಪ್ರಕಾರ ಕೊಟ್ಟುಬಿಡಲಿ. ನಮಗೆ ಕೊಟ್ಟಿರುವ 14 ನಿವೇಶನಗಳ ಬೆಲೆ ಇದಕ್ಕಿಂತಲೂ ಕಡಿಮೆ ಇದೆ. ಒಂದು ಎಕರೆಗೆ 44 ಸಾವಿರ ಚದರ ಅಡಿಯಾದರೆ ನನಗೆ ಕೊಟ್ಟಿರುವುದು 38.264 ಚದರ ಅಡಿ. ಒಂದು ಎಕರೆಗಿಂತ ಕಡಿಮೆಯಾಗಿದೆ. ಪರಿಹಾರವಾಗಿ ಕೊಟ್ಟಿರುವ ಜಮೀನಿನ ಬೆಲೆ ಎಷ್ಟಿದೆ ಎಂದು ನನಗೆ ತಿಳಿದಿಲ್ಲ. ನನಗೆ 62 ಕೋಟಿ ರೂ. ಕೊಟ್ಟುಬಿಡಲಿ ಎಂದು ಹೇಳಿದರು.

ಇದನ್ನೂ ಓದಿ: Lakshmi Hebbalkar: ಅಂಗನವಾಡಿ ಹೆಸರು ಶೀಘ್ರದಲ್ಲೇ ಬದಲಾವಣೆ! ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುಳಿವು

ನಗರಾಭಿವೃದ್ಧಿ ಸಚಿವರು ನಿವೇಶನ ಹಂಚಿಕೆಗೆ ಸಂಬಂಧಿಸಿದ ಕಡತವನ್ನು ತೆಗೆದುಕೊಂಡು ಬಂದಿದ್ದಾರೆ ಎಂಬ ಪರ್ತಕರ್ತರ ಪ್ರಶ್ನೆಗೆ ಉತ್ತರಿಸಿ, ಕಡತ ತಂದಿಲ್ಲ ಎಂದು ಈ ವೇಳೆ ಸಿಎಂ ತಿಳಿಸಿದರು.

Continue Reading

ಕರ್ನಾಟಕ

Kannada New Movie: ಶೀಘ್ರದಲ್ಲೇ ತೆರೆಗೆ ಬರಲಿದೆ ‘ಕಡಲೂರ ಕಣ್ಮಣಿ’ ಚಿತ್ರ

Kannada New Movie: ಶಿರಸಿ ಮೂಲದ ಅರ್ಜುನ್‌ ನಗರ್ಕರ್‌ ನಾಯಕನಾಗಿ ನಟಿಸಿರುವ, ನಿಶಾ ಯಾಲಿನಿ ನಾಯಕಿಯಾಗಿ ನಟಿಸಿರುವ, ರಾಮ್ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿರುವ “ಕಡಲೂರ ಕಣ್ಮಣಿ” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಕೊಳ ಶೈಲೇಶ್ ಆರ್. ಪೂಜಾರಿ, ಬಸವರಾಜ್ ಗಚ್ಚಿ ನಿರ್ಮಾಣದ ಈ ಚಿತ್ರಕ್ಕೆ ವಿನೋದ್ ರಾಮ್, ಹೊಳೆನರಸಿಪುರ ಮತ್ತು ಮಹೇಶ್ ಕುಮಾರ್ ಎಂ. ಅವರ ಸಹ ನಿರ್ಮಾಣವಿದ್ದು, ಯುವ ಪ್ರತಿಭೆ ರಾಮ್ ಪ್ರಸಾದ್ ಹುಣಸೂರ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

VISTARANEWS.COM


on

Kannada New Movie Kadalura Kanmani will release soon
Koo

ಬೆಂಗಳೂರು: ರಾಮ್ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿರುವ “ಕಡಲೂರ ಕಣ್ಮಣಿ” ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಕೊಳ ಶೈಲೇಶ್ ಆರ್. ಪೂಜಾರಿ, ಬಸವರಾಜ್ ಗಚ್ಚಿ ನಿರ್ಮಾಣದ ಈ ಚಿತ್ರಕ್ಕೆ ವಿನೋದ್ ರಾಮ್, ಹೊಳೆನರಸಿಪುರ ಮತ್ತು ಮಹೇಶ್ ಕುಮಾರ್ ಎಂ. ಅವರ ಸಹ ನಿರ್ಮಾಣವಿದ್ದು, ಯುವ ಪ್ರತಿಭೆ ರಾಮ್ ಪ್ರಸಾದ್ ಹುಣಸೂರ ಈ ಚಿತ್ರವನ್ನು (Kannada New Movie) ನಿರ್ದೇಶಿಸಿದ್ದಾರೆ.

ಚಿತ್ರದ ನಾಯಕನಾಗಿ ಶಿರಸಿ ಮೂಲದ ಅರ್ಜುನ್‌ ನಗರ್ಕರ್‌ “ಕಡಲೂರ ಕಣ್ಮಣಿ” ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ನಿಶಾ ಯಾಲಿನಿ ನಾಯಕಿಯಾಗಿ ನಟಿಸಿದ್ದು. ಅಂಜು ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಉಡುಪಿ, ಮಂಗಳೂರು, ಹೊನ್ನಾವರ, ಮಂಕಿ, ಮುರುಡೇಶ್ವರದ ಸುತ್ತಮುತ್ತಲ್ಲಿನ ರಮಣೀಯ ಸ್ಥಳಗಳಲ್ಲಿ ಚಿತ್ರೀಕರಣ ನಡೆದಿದೆ‌. ಈ ಮನಮೋಹಕ ಪ್ರಾಕೃತಿಕ ಸ್ಥಳಗಳನ್ನು ಮನೋಹರ್, ರವಿರಾಮ್ ಸುಂದರವಾಗಿ ಚಿತ್ರೀಕರಿಸಿದ್ದಾರೆ. ‘ಕಡಲೂರ ಕಣ್ಮಣಿ’ ಚಿತ್ರಕ್ಕೆ ನಿರ್ದೇಶಕ ರಾಮ್ ಪ್ರಸಾದ್ ಅವರು ಹಲವು ವಿಭಾಗಗಳಲ್ಲಿ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: Lakshmi Hebbalkar: ಅಂಗನವಾಡಿ ಹೆಸರು ಶೀಘ್ರದಲ್ಲೇ ಬದಲಾವಣೆ! ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುಳಿವು

‘ಕಡಲೂರ ಕಣ್ಮಣಿ’ ಅಂದರೆ ವಜ್ರ ಎಂದೂ ಅರ್ಥ. ಚಿತ್ರಕಥೆ ಯುವ ಮನಸುಗಳ ಪ್ರೀತಿ ಪ್ರೇಮದ ಮೇಲೆ ಸಾಗುತ್ತದೆ. ಸಿಟಿಯ ಹುಡುಗ ಕಡಲ ತೀರದ ಹುಡುಗಿಯ ಪ್ರೇಮ ಕಥೆಯೇ ‘ಕಡಲೂರ ಕಣ್ಮಣಿ’. ಈ ಸಿನಿಮಾದ ಕೊನೆಯ ಇಪ್ಪತ್ತು ನಿಮಿಷ ಎಲ್ಲರ ಕಣ್ಣಲ್ಲೂ ನೀರು ತರಿಸುತ್ತದೆ. ಚಿತ್ರದ ಕಲಾವಿದರು ತುಂಬಾ ಚಂದವಾಗಿ ನಟಿಸಿದ್ದಾರೆ.

ಇದನ್ನೂ ಓದಿ: Job Alert: ಧಾರವಾಡ ಕೃಷಿ ವಿಜ್ಞಾನ ವಿವಿಯಲ್ಲಿ 6 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಾಡುಗಳು ತುಂಬಾ ಚೆನ್ನಾಗಿ ಮೂಡಿಬಂದಿವೆ. ಸಂಕಲನ ಕಾರ್ಯದಲ್ಲಿ ನಿಶಿತ್ ಪೂಜಾರಿ ತಮ್ಮ ಕೈಚಳಕ ತೋರಿಸಿದ್ದಾರೆ. ಬಂಡೆ ಚಂದ್ರು ಅವರ ಸಾಹಸ ನಿರ್ದೇಶನದಲ್ಲಿ ಸಾಹಸ ಸನ್ನಿವೇಶಗಳು ಚೆನ್ನಾಗಿ ಮೂಡಿ ಬಂದಿವೆ. ‘ಕಡಲೂರ ಕಣ್ಮಣಿ’ ಚಿತ್ರವನ್ನು ಡಿಎಸ್‌ಕೆ ಸಿನಿಮಾಸ್ ಸಂಸ್ಥೆಯ Dr. ಸುನೀಲ್ ಕುಂಬಾರ್ ಅವರು ವಿಶಾಲ ಕರ್ನಾಟಕಕ್ಕೆ ಹಂಚಿಕೆ ಮಾಡುತ್ತಿದ್ದಾರೆ ಎಂದು ನಿರ್ದೇಶಕ ರಾಮ್ ಪ್ರಸಾದ್ ಹುಣಸೂರ ತಿಳಿಸಿದ್ದಾರೆ.

Continue Reading

ಮಳೆ

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

Karnataka Weather Forecast: ಭಾರಿ ಮಳೆಗೆ (Rain News) ಗುಡ್ಡ ಕುಸಿದಿದೆ. ಪರಿಣಾಮ ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಈ ಮೂಲಕ ಕರಾವಳಿಯಲ್ಲಿ ಮಳೆಗೆ ಮೊದಲ ಬಲಿಯಾಗಿದೆ.

VISTARANEWS.COM


on

By

karnataka Weather Forecast
Koo

ಉಡುಪಿ: ಕರಾವಳಿಯಲ್ಲಿ ಭಾರಿ ಮಳೆಗೆ (Karnataka Weather) ಮೊದಲ (Rain News) ಬಲಿಯಾಗಿದೆ. ಉಡುಪಿಯ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಗುಡ್ಡ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಹಳ್ಳಿ ಬೇರು ನಿವಾಸಿ ಅಂಬಾ (45) ಮೃತಪಟ್ಟವರು.

ಏಕಾಏಕಿ ಗುಡ್ಡ ಕುಸಿದು ಬಿದ್ದ ಪರಿಣಾಮ ಅಂಬಾ ಮಣ್ಣಿನ ಅಡಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಸ್ಥಳೀಯರ ಸಹಾಯದಿಂದ ಮಣ್ಣು ಸರಿಸಿ ಮೃತ ದೇಹವನ್ನು ಮೇಲೆ ಎತ್ತಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಆಗುಂಬೆಯಲ್ಲಿ 25 ಸೆಂ.ಮೀ ಮಳೆ ದಾಖಲು

ನೈರುತ್ಯ ಮಾನ್ಸೂನ್ ಕರಾವಳಿಯಲ್ಲಿ ಸಕ್ರಿಯವಾಗಿದ್ದರೆ, ಒಳಭಾಗದಲ್ಲಿ ಸಾಮಾನ್ಯವಾಗಿತ್ತು. ಆಗುಂಬೆ (ಶಿವಮೊಗ್ಗ ಜಿಲ್ಲೆ) 25, ಗೇರ್ಸೊಪ್ಪ (ಉತ್ತರ ಕನ್ನಡ ಜಿಲ್ಲೆ) 24, ಸಿದ್ದಾಪುರ (ಉಡುಪಿ ಜಿಲ್ಲೆ) 23, ಕಮ್ಮರಡಿ (ಚಿಕ್ಕಮಗಳೂರು) 20 ಸೆಂ.ಮೀ ಮಳೆಯಾಗಿತ್ತು. ಲಿಂಗನಮಕ್ಕಿ (ಶಿವಮೊಗ್ಗ ಜಿಲ್ಲೆ) 19, ಕದ್ರಾ (ಉತ್ತರ ಕನ್ನಡ ಜಿಲ್ಲೆ) 15, ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ) 15, ಶೃಂಗೇರಿ (ಜಿಲ್ಲೆ ಚಿಕ್ಕಮಗಳೂರು) 15, ಕುಂದಾಪುರ (ಉಡುಪಿ ಜಿಲ್ಲೆ) 13, ಮಂಕಿ (ಉತ್ತರ ಕನ್ನಡ ಜಿಲ್ಲೆ) 12 ಸೆಂ.ಮೀ ಮಳೆಯಾಗಿತ್ತು.

ಇದನ್ನೂ ಓದಿ: Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

ಚಾರ್ಮಾಡಿ ಹೆದ್ದಾರಿ ತಡೆಗೋಡೆಗಳಲ್ಲಿ ಬಿರುಕು

ಚಿಕ್ಕಮಗಳೂರಿನಲ್ಲಿ ಮಳೆ ಮುಂದುವರಿದ್ದು, ಚಾರ್ಮಾಡಿ ಹೆದ್ದಾರಿಯ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದೆ. ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅಲ್ಲಲ್ಲಿ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದ್ದು, ಅಪಾಯಕ್ಕೆ ಆಹ್ವಾನಿಸುತ್ತಿದೆ. ಹೊಸ ಕಾಮಗಾರಿ ನಡೆದ ಸ್ಥಳದಲ್ಲೇ ಬಿರುಕು ಕಾಣಿಸಿಕೊಂಡಿದೆ. ಮಳೆ ಹಾಗೂ ಮಂಜಿನ ನಡುವೆ ರಸ್ತೆ ಬಿರುಕು ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ. ರಸ್ತೆಗೆ ಕೋಟ್ಯಂತರ ರೂಪಾಯಿ ವ್ಯಯಿಸಿದರೂ ಪ್ರಯೋಜನವಾಗಿಲ್ಲ. ಕಳಪೆ ಗುಣಮಟ್ಟದ ಕಾಮಗಾರಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇತ್ತ ರಾತ್ರಿಯಿಡೀ ಸುರಿದ ಮಳೆಗೆ ಸೇತುವೆ ಮೇಲೆ ನೀರು ಉಕ್ಕಿ ಹರಿಯುತ್ತಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಾಳೆ ಗದ್ದೆ ಬಿಳ್ಳೂರು ಗ್ರಾಮದಲ್ಲಿ ಬಿಳ್ಳೂರು- ಮುಲ್ಲರ ಹಳ್ಳಿ ಸೇರಿ ಹಲವು ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ. ಸೇತುವೆ ಮೇಲೆ ನೀರು ನದಿಯಂತೆ ಉಕ್ಕಿ ಹರಿಯುತ್ತಿದೆ. ಒಂದು ಕಡೆಯಿಂದ ಮತ್ತೊಂದು ಕಡೆ ಹೋಗಲು ಗ್ರಾಮಸ್ಥರು ಪರದಾಟ ಅನುಭವಿಸುತ್ತಿದ್ದು, ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ.

ಶೃಂಗೇರಿಯ ಕೆರೆಕಟ್ಟೆ ಘಟ್ಟಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಶೃಂಗೇರಿ ಶಾರದಾಂಭೆ ತಟದಲ್ಲಿ ತುಂಗಾ ನದಿ ದೊಡ್ಡ ಪ್ರಮಾಣದಲ್ಲಿ ಹರಿಯುತ್ತಿದೆ. ತುಂಗಾ ನದಿ ಇಕ್ಕೆಲಗಳ ತೋಟಗಳು ಜಲಾವೃತ‌ವಾಗುವ ಸಾಧ್ಯತೆ ಇದೆ. ಇತ್ತ ಅಪಾಯದ ಮಟ್ಟ ಮೀರಿದ ಭದ್ರಾ ನದಿಯಿಂದಾಗಿ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗುವ ಹಂತ ತಲುಪಿದೆ.

ಹೆಬ್ಬಾಳೆ ಸೇತುವೆಯ ಮೇಲ್ಪದರಕ್ಕೆ ಭದ್ರಾ ನೀರು ಅಪ್ಪಳಿಸುತ್ತಿದೆ. ಸೇತುವೆ ಮುಳುಗಡೆಯಾದರೆ ಹತ್ತಾರು ಹಳ್ಳಿಗಳ ಸಂಪರ್ಕ ಬಂದ್ ಆಗಲಿದೆ. ಕಳಸ-ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದ ಮಾರ್ಗವೂ ಬಂದ್ ಆಗಲಿದೆ. ಹೀಗಾಗಿ ಮುಂಜಾಗೃತ ಕ್ರಮವಾಗಿ ಪ್ರವಾಸಿಗರು ಹಾಗೂ ಸ್ಥಳೀಯರ ಓಡಾಟಕ್ಕೆ ತಡೆಹಿಡಿಯಲಾಗಿದೆ. ಯಾವುದೇ ಕ್ಷಣದಲ್ಲಾದರೂ ಸೇತುವೆ ಮೇಲೆ ನೀರು ಉಕ್ಕುವ ಸಾಧ್ಯತೆ ಇದೆ. ಹೀಗಾಗಿ ಸ್ಥಳದಲ್ಲಿಯೇ ಕಳಸ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Mukesh Ambani
ದೇಶ7 mins ago

Mukesh Ambani: ಸೋನಿಯಾ ಗಾಂಧಿಯನ್ನು ಮಗನ ಮದುವೆಗೆ ಆಹ್ವಾನಿಸಿದ ಮುಕೇಶ್‌ ಅಂಬಾನಿ

India's open-bus parade
ಪ್ರಮುಖ ಸುದ್ದಿ12 mins ago

India’s open-bus parade : ಭಾರತ ತಂಡದ ವಿಜಯೋತ್ಸವ ಮೆರವಣಿಗೆಯಲ್ಲಿ ಭದ್ರತಾ ವೈಫಲ್ಯ; ಬಸ್​​ನಲ್ಲಿದ್ದ ಆಟಗಾರರು ಜಸ್ಟ್​ ಮಿಸ್​​

Team India
ಪ್ರಮುಖ ಸುದ್ದಿ58 mins ago

Team India : ಅಪರೂಪದಲ್ಲಿ ಅಪರೂಪ; ಮುಂಬೈ ವಿಮಾನ ನಿಲ್ದಾಣದಲ್ಲಿ ಟೀಂ ಇಂಡಿಯಾದ ವಿಮಾನಕ್ಕೆ ಸೆಲ್ಯೂಟ್

BS Yediyurappa
ಕರ್ನಾಟಕ59 mins ago

BS Yediyurappa: ಪೋಕ್ಸೊ ಕೇಸ್;‌ ಜುಲೈ 17ರಂದು ವಿಚಾರಣೆಗೆ ಹಾಜರಾಗುವಂತೆ ಬಿಎಸ್‌ವೈಗೆ ಕೋರ್ಟ್‌ ಸಮನ್ಸ್!

Hatras Stampede
ದೇಶ1 hour ago

Hathras Stampede: ಕಾಲ್ತುಳಿತದ ಬಳಿಕ ಕಾಲ್ಕಿತ್ತಿದ್ದ ಡೋಂಗಿ ಬಾಬಾ- ವೈರಲ್‌ ಆಯ್ತು ವಿಡಿಯೋ

PF Interest
ದೇಶ1 hour ago

PF Interest: ನೌಕರರಿಗೆ ಗುಡ್‌ ನ್ಯೂಸ್;‌ ಪಿಎಫ್‌ ಬಡ್ಡಿದರ ಘೋಷಿಸಿದ ಕೇಂದ್ರ ಸರ್ಕಾರ, ಎಷ್ಟಿದೆ ನೋಡಿ

Hardik Pandya
ಪ್ರಮುಖ ಸುದ್ದಿ2 hours ago

Hardik Pandya : ಅವಮಾನ ಮಾಡಿದ ಪ್ರೇಕ್ಷಕರಿಂದಲೇ ಜೈಕಾರ ಹಾಕಿಸಿಕೊಂಡ ಹಾರ್ದಿಕ್ ಪಾಂಡ್ಯ!

Heavy rain in Uttara Kannada district district NDRF team for rescue says DC Gangubai Manakar
ಉತ್ತರ ಕನ್ನಡ2 hours ago

Uttara Kannada News: ಉ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆ, ರಕ್ಷಣೆಗೆ ಎನ್.ಡಿ.ಆರ್.ಎಫ್ ತಂಡ

Central Govt approves quadrilateral road in Shira at a cost of Rs 1000 rs crore says TB Jayachandra
ತುಮಕೂರು2 hours ago

Shira News: ಶಿರಾದಲ್ಲಿ 1,000 ಕೋಟಿ ರೂ. ವೆಚ್ಚದಲ್ಲಿ ಚತುಷ್ಪಥ ರಸ್ತೆಗೆ ಕೇಂದ್ರದಿಂದ ಅನುಮೋದನೆ: ಟಿ.ಬಿ ಜಯಚಂದ್ರ

Viral Video
Latest2 hours ago

Viral Video: ನೀರು ತುಂಬಿದ್ದ ರಸ್ತೆ ಗುಂಡಿಗೆ ಬಿದ್ದ ಬಾಲಕಿ; ಜೀವ ಉಳಿಸಿದ ಹುಡುಗ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ4 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ5 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ6 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ8 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ9 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ10 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ11 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

ಟ್ರೆಂಡಿಂಗ್‌