New Criminal Law: ಹೊಸ ಕ್ರಿಮಿನಲ್‌ ಕಾನೂನಿನಂತೆ ಬೀದಿ ವ್ಯಾಪಾರಿ ವಿರುದ್ಧ ಮೊದಲ ಎಫ್‌ಐಆರ್‌ ದಾಖಲು - Vistara News

ದೇಶ

New Criminal Law: ಹೊಸ ಕ್ರಿಮಿನಲ್‌ ಕಾನೂನಿನಂತೆ ಬೀದಿ ವ್ಯಾಪಾರಿ ವಿರುದ್ಧ ಮೊದಲ ಎಫ್‌ಐಆರ್‌ ದಾಖಲು

New Criminal Law: ಬ್ರಿಟಿಷ್​ ವಸಾಹತು ಕಾಲದ ಕ್ರಿಮಿನಲ್‌ ಕಾನೂನುಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದ್ದು, ಇಂದು ಜಾರಿಗೆ ಬಂದಿದ್ದು, ಹೊಸದಿಲ್ಲಿಯ ರೈಲ್ವೆ ನಿಲ್ದಾಣದ ಬಳಿ ರಸ್ತೆಯ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಬೀದಿ ವ್ಯಾಪಾರಿಯ ವಿರುದ್ಧ ಮೊದಲ ಎಫ್ಐಆರ್ ದಾಖಲಿಸಲಾಗಿದೆ. ಹೊಸ ಕ್ರಿಮಿನಲ್ ಕೋಡ್‌ನ ಸೆಕ್ಷನ್ 285ರ ಅಡಿಯಲ್ಲಿ ಈ ಎಫ್ಐಆರ್ ದಾಖಲಿಸಲಾಗಿದೆ.

VISTARANEWS.COM


on

New Criminal Law
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಬ್ರಿಟಿಷ್​ ವಸಾಹತು ಕಾಲದ ಕ್ರಿಮಿನಲ್‌ ಕಾನೂನುಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದ್ದು, ಇಂದು ಜಾರಿಗೆ ಬಂದಿದೆ (New Criminal Law). ಹೊಸ ಕಾನೂನಿನ ಪ್ರಕಾರ ಹೊಸದಿಲ್ಲಿಯ ರೈಲ್ವೆ ನಿಲ್ದಾಣದ ಬಳಿ ರಸ್ತೆಯ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಬೀದಿ ವ್ಯಾಪಾರಿಯ ವಿರುದ್ಧ ಮೊದಲ ಎಫ್ಐಆರ್ ದಾಖಲಿಸಲಾಗಿದೆ.

ಹೊಸ ಕ್ರಿಮಿನಲ್ ಕೋಡ್‌ನ ಸೆಕ್ಷನ್ 285ರ ಅಡಿಯಲ್ಲಿ ಈ ಎಫ್ಐಆರ್ ದಾಖಲಿಸಲಾಗಿದೆ. ಈ ಕಾನೂನಿನ ಪ್ರಕಾರ ಯಾವುದೇ ಸಾರ್ವಜನಿಕ ರಸ್ತೆಗೆ ಅಡ್ಡಿಪಡಿಸಿದರೆ ಅಥವಾ ಸಾರ್ವಜನಿಕ ಮಾರ್ಗದಲ್ಲಿ ಸಂಚರಿಸುವ ಯಾವುದೇ ವ್ಯಕ್ತಿಗೆ ಅಪಾಯ ಅಥವಾ ಗಾಯವನ್ನು ಉಂಟು ಮಾಡಿದರೆ 5 ಸಾವಿರ ರೂಪಾಯಿವರೆಗೆ ದಂಡ ವಿಧಿಸಬಹುದಾಗಿದೆ.

ಭಾನುವಾರ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ರಸ್ತೆಯಲ್ಲಿ ನೀರಿನ ಬಾಟಲಿಗಳು ಮತ್ತು ಗುಟ್ಕಾ ಮಾರಾಟ ಮಾಡುವ ಬೀದಿ ವ್ಯಾಪಾರಿಯನ್ನು ಗುರುತಿಸಿದ ನಂತರ ಎಫ್ಐಆರ್ ದಾಖಲಿಸಲಾಗಿದೆ. ಬೀದಿ ವ್ಯಾಪಾರಿಯ ತಾತ್ಕಾಲಿಕ ಅಂಗಡಿಯು ರಸ್ತೆಗೆ ಅಡ್ಡವಾಗಿ ನಿಂತಿತ್ತು. ಅದನ್ನು ಸ್ಥಳಾಂತರಿಸಲು ಪೊಲೀಸ್‌ ಸಿಬ್ಬಂದಿ ಕೇಳಿಕೊಂಡರೂ ಒಪ್ಪದೇ ಇದ್ದಾಗ ಎಫ್ಐಆರ್ ದಾಖಲಿಸಲಾಗಿದೆ.

ಎಫ್‌ಐಆರ್‌ನಲ್ಲಿ ಏನಿದೆ?

ಬೀದಿ ಬದಿ ವ್ಯಾಪಾರಿ ಭಾನುವಾರ ರಾತ್ರಿ ನವದೆಹಲಿ ರೈಲ್ವೆ ನಿಲ್ದಾಣದ ಬಳಿಯ ಪಾದಚಾರಿ ಮೇಲ್ಸೇತುವೆಯ ಕೆಳಗೆ ತನ್ನ ಅಂಗಡಿಯನ್ನು ನಿಲ್ಲಿಸಿದ್ದ ಎಂದು ಹೇಳಲಾಗಿದೆ. “ಆ ವ್ಯಾಪಾರಿಯು ಬೀದಿಯಲ್ಲಿ ನೀರಿನ ಬಾಟಲಿ, ಬೀಡಿ ಮತ್ತು ಸಿಗರೇಟುಗಳನ್ನು ಮಾರಾಟ ಮಾಡುತ್ತಿದ್ದ. ಸಾರ್ವಜನಿಕರ ಸುಗಮ ಸಂಚಾರಕ್ಕೆ ಆತನ ಅಂಗಡಿ ಅಡ್ಡಿಯಾಗುತ್ತಿತ್ತು. ರಸ್ತೆಯಿಂದ ಅಂಗಡಿಯನ್ನು ತೆರವುಗೊಳಿಸುವಂತೆ ಸಬ್ ಇನ್ಸ್‌ಪೆಕ್ಟರ್ ಆ ವ್ಯಾಪಾರಿ ಬಳಿ ಹಲವು ಬಾರಿ ಮನವಿ ಮಾಡಿದರು. ಆದರೆ ಆತ ಅದಕ್ಕೆ ಒಪ್ಪಲಿಲ್ಲ” ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. ವ್ಯಾಪಾರಿಯನ್ನು ಬಿಹಾರದ ಪಾಟ್ನಾ ಮೂಲದ ಪಂಕಜ್ ಕುಮಾರ್ ಎಂದು ಗುರುತಿಸಲಾಗಿದೆ.

ಏನಿದು ಹೊಸ ಕಾನೂನು?

ಐಪಿಸಿಯನ್ನು ಭಾರತೀಯ ನ್ಯಾಯ ಸಂಹಿತೆ-2023, ಸಿಆರ್‌ಪಿಸಿಯನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಯನ್ನು ಭಾರತೀಯ ಸಾಕ್ಷ್ಯ ವಿಧೇಯಕ-2023 ಎಂಬುದಾಗಿ ಮಾರ್ಪಡಿಸಲಾಗಿದೆ. ಮೂರು ಕ್ರಿಮಿನಲ್ ಕಾನೂನುಗಳನ್ನು ಕಳೆದ ವರ್ಷ ಡಿಸೆಂಬರ್‌ನಲ್ಲಿ ಸಂಸತ್ತು ಅಂಗೀಕರಿಸಿತ್ತು. ಅದೇ ತಿಂಗಳು ರಾಷ್ಟ್ರಪತಿಗಳ ಒಪ್ಪಿಗೆ ಪಡೆಯಿತು. ಆದರೆ ಅವು ಜಾರಿಗೆ ಬಂದಿರಲಿಲ್ಲ. ಈ ವರ್ಷ ಫೆಬ್ರವರಿ 25ರಂದು ಮೂರು ಕಾನೂನುಗಳು ಜುಲೈ 1ರಂದು ಜಾರಿಗೆ ಬರುತ್ತವೆ ಎಂದು ಸರ್ಕಾರವು ಅಧಿಸೂಚನೆಯನ್ನು ಹೊರಡಿಸಿತ್ತು.

ಭಾರತೀಯ ನ್ಯಾಯ ಸಂಹಿತಾ (Indian Code), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (Indian Civil Protection Code) ಮತ್ತು ಭಾರತೀಯ ಸಾಕ್ಷಿ ಕಾಯಿದೆಯು (Indian Evidence Act) ಇವೇ ಆ ಮೂರು ಹೊಸ ಕಾನೂನುಗಳು. ಬ್ರಿಟಿಷರ ಕಾಲದ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು 1872ರ ಭಾರತೀಯ ಸಾಕ್ಷಿ ಕಾಯಿದೆಗೆ ತಿದ್ದುಪಡಿ ಮಾಡಿ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯಿದೆ ಎಂದು ಬದಲಿಸಲಾಗಿದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Fire accident: ಮಾಲ್‌ನಲ್ಲಿ ಭೀಕರ ಅಗ್ನಿ ಅವಘಡ; ಭಾರೀ ಸಾವು-ನೋವಿನ ಶಂಕೆ

Fire accident: ಮಾಲ್‌ನಲ್ಲಿದ್ದ ಬಟ್ಟೆಯ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡು ಏಕಾಏಕಿ ಇಡೀ ಮಾಲ್‌ಗೆ ಆವರಿಸಿತ್ತು. ದಟ್ಟ ಹೊಗೆ ತುಂಬಿಕೊಳ್ಳುತ್ತಿದ್ದಂತೆ ಗಾಬರಿಗೊಂಡ ಜನ ಸ್ಥಳದಿಂದ ಓಡಲು ಶುರು ಮಾಡಿದ್ದಾರೆ. ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ಪೊಲೀಸರು ಅಗ್ನಿ ಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಪ್ರಯತ್ನ ನಡೆಸಿವೆ. ತಕ್ಷಣ ಮಾಲ್‌ನ ಒಳಗಿದ್ದ ಜನರನ್ನು ಸುರಕ್ಷಿತವಾಗಿ ಹೊರ ಕರೆ ತರುವಲ್ಲಿ ಯಶಸ್ವಿ ಆಗಿದೆ.

VISTARANEWS.COM


on

Fire accident
Koo

ನೋಯ್ಡಾ: ಉತ್ತರಪ್ರದೇಶದ ಮಾಲ್‌ವೊಂದರಲ್ಲಿ ಭಾರೀ ಅಗ್ನಿ ಅವಘಡ(Fire accident) ಸಂಭವಿಸಿದೆ. ನೋಯ್ಢಾದ ಲಾಜಿಕ್ಸ್‌ ಮಾಲ್‌(Logix Mall)ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಇದುವರೆಗೆ ಯಾವುದೇ ಸಾವು ನೋವು ಪ್ರಕರಣಗಳು ವರದಿ ಆಗಿಲ್ಲ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಜನರನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಗುತ್ತಿದೆ.

ಮಾಲ್‌ನಲ್ಲಿದ್ದ ಬಟ್ಟೆಯ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡು ಏಕಾಏಕಿ ಇಡೀ ಮಾಲ್‌ಗೆ ಆವರಿಸಿತ್ತು. ದಟ್ಟ ಹೊಗೆ ತುಂಬಿಕೊಳ್ಳುತ್ತಿದ್ದಂತೆ ಗಾಬರಿಗೊಂಡ ಜನ ಸ್ಥಳದಿಂದ ಓಡಲು ಶುರು ಮಾಡಿದ್ದಾರೆ. ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ಪೊಲೀಸರು ಅಗ್ನಿ ಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಪ್ರಯತ್ನ ನಡೆಸಿವೆ. ತಕ್ಷಣ ಮಾಲ್‌ನ ಒಳಗಿದ್ದ ಜನರನ್ನು ಸುರಕ್ಷಿತವಾಗಿ ಹೊರ ಕರೆ ತರುವಲ್ಲಿ ಯಶಸ್ವಿ ಆಗಿದೆ.

ಇನ್ನು ಘಟನಾ ಸ್ಥಳದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಒಳಗೆ ಹಲವಾರು ಜನ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಈ ಅಗ್ನಿ ಅವಘಡಕ್ಕೆ ನಿಜವಾದ ಕಾರಣ ಏನೆಂಬುದು ತಿಳಿದಿಲ್ಲ. ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ದೆಹಲಿಯ ವಿವೇಕ್‌ ವಿಹಾರ್‌ನಲ್ಲಿರುವ ನ್ಯೂ ಬಾರ್ನ್‌ ಬೇಬಿ ಕೇರ್‌ ಆಸ್ಪತ್ರೆ(Hospital)ಯ ಕಳೆದ ತಿಂಗಳು ಏಕಾಏಕಿ ಅಗ್ನಿ ಅವಘಡ ಸಂಭವಿಸಿದ್ದು, ವೆಂಟಿಲೇಟರ್‌ನಲ್ಲಿದ್ದ ಮಗು ಸೇರಿದಂತೆ ಒಟ್ಟು 7 ಮಕ್ಕಳು ಸಾವನ್ನಪ್ಪಿದ್ದರು. ಇನ್ನು ಘಟನೆಯಲ್ಲಿ 12 ಮಕ್ಕಳನ್ನು ರಕ್ಷಿಸಲಾಗಿತ್ತು. ಮೂರು ಅಂತಸ್ತಿನ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನೋಡ ನೋಡುತ್ತಿದ್ದಂತೆ ಬೆಂಕಿ ಕೆನ್ನಾಲೆ ವ್ಯಾಪಿಸುತ್ತಲೇ ಹೋಗಿತ್ತು. ತಕ್ಷಣ ಅಗ್ನಿ ಶಾಮಕದಳಕ್ಕೆ ಕರೆ ಮಾಡಿದ್ದು, ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಅಷ್ಟರಲ್ಲಿ ಬೆಂಕಿಯ ಜ್ವಾಲೆಗೆ 7 ಜನ ಮಕ್ಕಳು ಬಲಿಯಾಗಿದ್ದಾರೆ.

ಇದಕ್ಕೂ ಮುನ್ನ ಗುಜರಾತ್‌ನ ರಾಜ್‌ಕೋಟ್‌ (Rajkot) ನಗರದಲ್ಲಿರುವ ಗೇಮಿಂಗ್‌ ಜೋನ್‌ (Gaming Zone) ಒಂದರಲ್ಲಿ ಶನಿವಾರ (ಮೇ 25) ಸಂಜೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 27ಜನ ಮೃತಪಟ್ಟಿದ್ದರು. 9 ಮಕ್ಕಳು, ಮಹಿಳೆಯರು ಸೇರಿ 27 ಮಂದಿ ಮೃತಪಟ್ಟಿರುವ ಪ್ರಕರಣವು ದೇಶವನ್ನೇ ಬೆಚ್ಚಿಬೀಳಿಸಿತ್ತು.

ಇದನ್ನೂ ಓದಿ:Hathras Stampede: ಹತ್ರಾಸ್‌ನಲ್ಲಿ ಕಾಲ್ತುಳಿತ; 6 ಜನರನ್ನು ಬಂಧಿಸಿದ ಉತ್ತರ ಪ್ರದೇಶ ಪೊಲೀಸರು

Continue Reading

ಶಿಕ್ಷಣ

Edu Guide: ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: IDFC FIRST ಬ್ಯಾಂಕ್‌ನಿಂದ 2 ಲಕ್ಷ ರೂ. ಸ್ಕಾಲರ್‌ಶಿಪ್‌; ಹೀಗೆ ಅಪ್ಲೈ ಮಾಡಿ

Edu Guide: ಎಂಬಿಎ ಓದುತ್ತಿರುವ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌. ಐಡಿಎಫ್‌ಸಿ ಫಸ್ಟ್‌ ಬ್ಯಾಂಕ್‌ ನೀಡುವ ಸ್ಕಾಲರ್‌ಶಿಪ್‌ಗೆ ಅರ್ಜಿ ಆಹ್ವಾನಿಸಲಾಗಿದೆ. 2 ಲಕ್ಷ ರೂ. ನೀಡುವ ಸ್ಕಾಲರ್‌ಶಿಪ್‌ ಇದಾಗಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 31. ಅರ್ಜಿ ಸಲ್ಲಿಸುವ ವಿಧಾನ, ಯಾರೆಲ್ಲ ಅರ್ಹರು ಮುಂತಾದ ವಿವರ ಇಲ್ಲಿದೆ.

VISTARANEWS.COM


on

Edu Guide
Koo

ಬೆಂಗಳೂರು: ದೇಶದಲ್ಲಿ ಶಿಕ್ಷಣದ ಬಗ್ಗೆ ಜಾಗೃತಿ ಮೂಡುತ್ತಿದೆ. ನಗರ, ಗ್ರಾಮಾಂತರ ಪ್ರದೇಶಗಳಲ್ಲಿ ಸಾಕ್ಷರತೆ ಪ್ರಮಾಣ ಹೆಚ್ಚಾಗುತ್ತಿದೆ. ಅದಾಗ್ಯೂ ಉನ್ನತ ಶಿಕ್ಷಣ ಎನ್ನುವುದು ಇನ್ನೂ ಹಲವು ಕಡೆ ಗಗನ ಕುಸುಮ ಎನಿಸಿಕೊಂಡಿದೆ. ಅದರಲ್ಲಿಯೂ ಎಂಜಿನಿಯರಿಂಗ್‌, ಮೆಡಿಕಲ್‌, ಎಂಬಿಎಯಂತಹ ಉನ್ನತ ಶಿಕ್ಷಣದಲ್ಲಿದಲ್ಲಿನ ದುಬಾರಿ ಫೀಸ್‌ ಕಾರಣದಿಂದ ಹಣ ಹೊಂದಿಸಲು ಬಡ ಮತ್ತು ಮಧ್ಯಮ ವರ್ಗದ ಮಂದಿ ಇಂದಿಗೂ ಪರದಾಡುತ್ತಿದ್ದಾರೆ. ಇದೇ ಕಾರಣಕ್ಕೆ ಸರ್ಕಾರಗಳು ಮತ್ತು ಬ್ಯಾಂಕ್‌ನಂತಹ ಕೆಲವು ಖಾಸಗಿ ಸಂಸ್ಥೆಗಳು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌ ನೀಡಲು ಮುಂದು ಬಂದಿವೆ (Scholarship For Students). ಈ ಪೈಕಿ ಐಡಿಎಫ್‌ಸಿ ಫಸ್ಟ್‌ ಬ್ಯಾಂಕ್‌ ನೀಡುವ ಸ್ಕಾಲರ್‌ಶಿಪ್‌ ಪ್ರಮುಖವಾದುದು (IDFC FIRST Bank MBA Scholarship 2024-26). ಬ್ಯಾಂಕ್‌ ಬಡ ಎಂಬಿಎ ವಿದ್ಯಾರ್ಥಿಗಳಿಗೆ 2 ವರ್ಷಕ್ಕೆ 2 ಲಕ್ಷ ರೂ. ಒದಗಿಸುತ್ತಿದೆ. ಇದಕ್ಕೆ ಯಾರೆಲ್ಲ ಅರ್ಹರು? ಅಪ್ಲೈ ಮಾಡುವುದು ಹೇಗೆ? ಮುಂತಾದ ವಿವರ ಇಲ್ಲಿದೆ (Edu Guide).

ಏನಿದು ಯೋಜನೆ?

ಐಡಿಎಫ್‌ಸಿ ಫಸ್ಟ್‌ ಬ್ಯಾಂಕ್‌ ಎಂಬಿಎ ಓದುತ್ತಿರುವ ಬಡ ವಿದ್ಯಾರ್ಥಿಗಳಿಗೆ ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು 2018ರಲ್ಲಿ ಪರಿಚಯಿಸಿದೆ. ಈ ಯೋಜನೆ ಮೂಲಕ ಅರ್ಹ ವಿದ್ಯಾರ್ಥಿಗಳ ಶಿಕ್ಷಣಕ್ಕೆ 2 ಲಕ್ಷ ರೂ. ನೆರವು ಒದಗಿಸಲಾಗುತ್ತದೆ. ಇದುವರೆಗೆ 152 ಕಾಲೇಜುಗಳ ಸುಮಾರು 1,154 ವಿದ್ಯಾರ್ಥಿಗಳು ಸ್ಕಾಲರ್‌ಶಿಪ್‌ ಪಡೆದುಕೊಂಡಿದ್ದಾರೆ.

ಯಾರೆಲ್ಲ ಅರ್ಹರು?

ಈ ಬಾರಿಯ ಸ್ಕಾಲರ್‌ಶಿಪ್‌ನ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅರ್ಹರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಜುಲೈ 31. ಸ್ಕಾಲರ್‌ಶಿಪ್‌ಗೆ ಈ ಕೆಳಗಿನ ಅರ್ಹತೆ ಅಗತ್ಯ.

  • ಭಾರತೀಯ ನಾಗರಿಕರಾಗಿರಬೇಕು.
  • ಕುಟುಂಬದ ವಾರ್ಷಿಕ ಆದಾಯ 6 ಲಕ್ಷ ರೂ. ಅಥವಾ ಅದಕ್ಕಿಂತ ಕಡಿಮೆ ಇರಬೇಕು.
  • ಪಟ್ಟಿಯಲ್ಲಿ ಇರುವ ಕಾಲೇಜಿನಲ್ಲಿ ಪ್ರವೇಶ ಪಡೆದಿರಬೇಕು (ಕಾಲೇಜಿನ ಪಟ್ಟಿ ಕೆಳಗೆ ನೀಡಲಾಗಿದೆ).
  • 2 ವರ್ಷಗಳ ಪೂರ್ಣ ಅವಧಿಯ ಎಂಬಿಎ ಕೋರ್ಸ್‌ನ ಮೊದಲ ವರ್ಷದಲ್ಲಿರಬೇಕು.
  • ಆಧಾರ್‌ ನಂಬರ್‌ ಜತೆ ಲಿಂಕ್‌ ಆಗಿರುವ ಮೊಬೈಲ್‌ ನಂಬರ್‌ ಹೊಂದಿರಬೇಕು.

ಅಗತ್ಯ ದಾಖಲೆಗಳು

  • ಕಾಲೇಜಿಗೆ ಪ್ರವೇಶ ಪಡೆದಿರುವ ಪುರಾವೆ (ಕಾಲೇಜು ಹೆಸರು, ಅಡ್ಮಿಷನ್‌ ವರ್ಷ ಇತ್ಯಾದಿ ಮಾಹಿತಿ ಒಳಗೊಂಡಿರಬೇಕು).
  • ಶುಲ್ಕ ಪಾವತಿಯ ರಸೀದಿ.
  • ಪದವಿ ತರಗತಿಯ ಅಂಕಪಟ್ಟಿ ಮತ್ತು ಉತ್ತೀರ್ಣ ಪ್ರಮಾಣಪತ್ರದ ಪ್ರತಿ.
  • ಆದಾಯ ಪ್ರಮಾಣ ಪತ್ರ.

ಕಾಲೇಜಿನ ಪಟ್ಟಿ ವೀಕ್ಷಿಸಲು ಇಲ್ಲಿ ಕ್ಲಿಕ್‌ ಮಾಡಿ (https://d2w7l1p59qkl0r.cloudfront.net/static/files/list-of-institutions-idfc-first-bank-mba-scholarship-2024-26.pdf)

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://www.buddy4study.com/page/idfc-first-bank-mba-scholarship#scholarships)
  • ಹೆಸರು ನೋಂದಾಯಿಸಿ.
  • ಈಗ IDFC FIRST Bank MBA Scholarship 2024-26 ಪುಟ ಕಾಣಿಸುತ್ತದೆ.
  • ವಿವರಗಳನ್ನು ಓದಿ ‘Apply Now’ ಬಟನ್‌ ಕ್ಲಿಕ್‌ ಮಾಡಿ.
  • ಆಧಾರ್‌ ನಂಬರ್‌ನೊಂದಿಗೆ ಲಿಂಕ್‌ ಆಗಿರುವ ಮೊಬೈಲ್‌ ನಂಬರ್‌ ನಮೂದಿಸಿ.
  • ಈಗ ಯುಆರ್‌ಎಲ್‌, ಯೂಸರ್‌ ಐಡಿ, ಮತ್ತು ಪಾಸ್‌ವರ್ಡ್‌ ಸ್ವೀಕರಿಸುತ್ತೀರಿ.
  • ಅದನ್ನು ಬಳಸಿ ಲಾಗಿನ್‌ ಆಗಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

ಇದನ್ನೂ ಓದಿ: Edu Guide: ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಸಿಗಲಿವೆ ಇವೆಲ್ಲ ಸ್ಕಾಲರ್‌ಶಿಪ್‌

Continue Reading

ಆರೋಗ್ಯ

Brain-Eating Amoeba: ಮೆದುಳು ತಿನ್ನುವ ಅಮೀಬಾಕ್ಕೆ ಮತ್ತೊಂದು ಬಲಿ; 2 ತಿಂಗಳ ಅಂತರದಲ್ಲಿ 3ನೇ ಪ್ರಕರಣ

Brain-Eating Amoeba: ಅಪರೂಪದ ಮೆದುಳು ತಿನ್ನುವ ಅಮೀಬಾ ಸೋಂಕಿಗೆ ಕೇರಳದಲ್ಲಿ ಮತ್ತೊಬ್ಬ ಬಾಲಕ ಬಲಿಯಾಗಿದ್ದಾನೆ. ಬುಧವಾರ ರಾತ್ರಿ ಮೃತಪಟ್ಟ ಕೇರಳದ ಕೋಝಿಕ್ಕೋಡ್‌ ಜಿಲ್ಲೆಯ 12 ವರ್ಷ ಬಾಲಕನಿಗೆ ಅಮೀಬಿಕ್ ಮೆನಿಂಗೊ ಎನ್ಸೆಫಾಲಿಟಿಸ್ (ಮೆದುಳು ತಿನ್ನುವ ಅಮೀಬಾ) ಸೋಂಕು ತಗುಲಿದ್ದು ದೃಧಪಟ್ಟಿದ್ದು, ಕಳೆದ ಎರಡು ತಿಂಗಳಲ್ಲಿ ಸಂಭವಿಸಿದ ಇಂತಹ ಮೂರನೇ ಸಾವಿನ ಪ್ರಕರಣ ಇದಾಗಿದೆ.

VISTARANEWS.COM


on

Brain-Eating Mmoeba
Koo

ತಿರುವನಂತಪುರಂ: ಅಪರೂಪದ ಮೆದುಳು ತಿನ್ನುವ ಅಮೀಬಾ (Brain-Eating Amoeba) ಸೋಂಕಿಗೆ ಮತ್ತೊಬ್ಬ ಬಾಲಕ ಬಲಿಯಾಗಿದ್ದಾನೆ. ಬುಧವಾರ ರಾತ್ರಿ ಮೃತಪಟ್ಟ ಕೇರಳದ ಕೋಝಿಕ್ಕೋಡ್‌ ಜಿಲ್ಲೆಯ 12 ವರ್ಷ ಬಾಲಕನಿಗೆ ಅಮೀಬಿಕ್ ಮೆನಿಂಗೊ ಎನ್ಸೆಫಾಲಿಟಿಸ್ (ಮೆದುಳು ತಿನ್ನುವ ಅಮೀಬಾ) ಸೋಂಕು ತಗುಲಿದ್ದು ದೃಧಪಟ್ಟಿದ್ದು, ಕಳೆದ ಎರಡು ತಿಂಗಳಲ್ಲಿ ಸಂಭವಿಸಿದ ಇಂತಹ ಮೂರನೇ ಸಾವಿನ ಪ್ರಕರಣ ಇದಾಗಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಮೃತ ಬಾಲಕನನ್ನು ಮೃದುಲ್‌ ಇ.ಪಿ. ಎಂದು ಗುರುತಿಸಲಾಗಿದೆ. ಕೋಝಿಕ್ಕೋಡ್‌ ಜಿಲ್ಲೆಯ ಫೆರೊಕೆ ಮೂಲದ ಈತನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 7ನೇ ತರಗತಿಯಲ್ಲಿ ಓದುತ್ತಿದ್ದ ಮೃದುಲ್‌ನಲ್ಲಿ ಕೆಲವು ದಿನಗಳ ಹಿಂದೆ ಸೋಂಕಿನ ಲಕ್ಷಣಗಳಾದ ತೀವ್ರ ತಲೆನೋವು, ವಾಕರಿಕೆ, ವಾಂತಿ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಆತನನ್ನು ಜೂನ್‌ 24ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕೊಳದಲ್ಲಿ ಸ್ನಾನ ಮಾಡಿದ ನಂತರ ಬಾಲಕನಿಗೆ ಸೋಂಕು ತಗುಲಿರಬಹುದು ಎಂದು ಶಂಕಿಸಲಾಗಿದೆ. ಕೊಳಗಳು ಮತ್ತು ಸರೋವರಗಳಂತಹ ಸಿಹಿನೀರಿನ ಮೂಲಗಳಲ್ಲಿ ಕಂಡುಬರುವ ಈ ಅಮೀಬಾ ಮೂಗಿನ ಮೂಲಕ ಶರೀರವನ್ನು ಸೇರಿ ಮಾರಣಾಂತಿಕವಾಗುತ್ತದೆ. ಇದು ಮೆದುಳಿನ ಜೀವಕೋಶಗಳನ್ನು ತಿನ್ನುವುದರಿಂದ ಇದನ್ನು ಮೆದುಳು ತಿನ್ನುವ ಅಮೀಬಾ ಎಂದೇ ಕರೆಯಲಾಗುತ್ತದೆ.

ಆರಂಭದಲ್ಲಿ ಮೃದುಲ್‌ನನ್ನು ಎರಡು ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಯಿತು ಮತ್ತು ನಂತರ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ಆ್ಯಂಟಿ ಮೈಕ್ರೊಬಿಯಲ್ ಚಿಕಿತ್ಸೆ ನೀಡಲಾಯಿತು. ಆದಾಗ್ಯೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆ ಬಳಿಕ ರಾಮನಾಟುಕರ ಮುನ್ಸಿಪಾಲಿಟಿ ಮೃದುಲ್‌ ಸ್ನಾನ ಮಾಡಿದ್ದ ಕೊಳಕ್ಕೆ ಸಾರ್ವಜನಿಕರ ಪ್ರವೇಸವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ಮೂರನೇ ಪ್ರಕರಣ

ಈ ಹಿಂದೆ ಜೂನ್ 25ರಂದು ಕಣ್ಣೂರು ಜಿಲ್ಲೆಯ 13 ವರ್ಷದ ಬಾಲಕಿ ಮತ್ತು ಮೇ 21ರಂದು ಮಲಪ್ಪುರಂನ 5 ವರ್ಷದ ಬಾಲಕಿ ಈ ಸೋಂಕಿಗೆ ಒಳಗಾಗಿ ಸಾವನ್ನಪ್ಪಿದ್ದರು. “ನಾವು ರಾಜ್ಯದಲ್ಲಿ ಸಂಭವಿಸಿದ ಈ ಮೂರು ಸಾವುಗಳನ್ನು ಕೂಲಂಕುಷವಾಗಿ ಅಧ್ಯಯನ ಮಾಡುತ್ತಿದ್ದೇವೆ. ಕಣ್ಗಾವಲು ತೀವ್ರಗೊಳಿಸಿದ್ದೇವೆ. ನಾವು ಮೃದುಲ್‌ನಂತೆ ಅದೇ ಕೊಳದಲ್ಲಿ ಸ್ನಾನ ಮಾಡಿದ ಇತರರನ್ನು ಪರೀಕ್ಷಿಸಿದ್ದೇವೆ. ಆದರೆ ಇಲ್ಲಿಯವರೆಗೆ ಯಾರಲ್ಲಿಯೂ ಸೋಂಕಿನ ಲಕ್ಷಣ ಕಂಡು ಬಂದಿಲ್ಲʼʼ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜನರು ಭಯಭೀತರಾಗುವ ಅಗತ್ಯವಿಲ್ಲ ಎಂದು ಆರೋಗ್ಯ ಅಧಿಕಾರಿ ಹೇಳಿದ್ದಾರೆ. “ಕೊಳಗಳು ಅಥವಾ ಸರೋವರಗಳಲ್ಲಿ ಸ್ನಾನ ಮಾಡುವುದನ್ನು ಸಂಪೂರ್ಣವಾಗಿ ತಪ್ಪಿಸುವ ಅಗತ್ಯವಿಲ್ಲ. ಏಕೆಂದರೆ ಇದು ಅತ್ಯಂತ ಅಪರೂಪದ ಸೋಂಕು. ಅಮೀಬಾ ಪ್ರಭೇದಗಳ ಉಪಸ್ಥಿತಿಯನ್ನು ಪರೀಕ್ಷಿಸಲು ನಾವು ವಿವಿಧ ಜಲ ಮೂಲಗಳ ಮಾದರಿಗಳನ್ನು ಪರೀಕ್ಷಿಸುತ್ತೇವೆ. ಮಳೆ ತೀವ್ರಗೊಳ್ಳುತ್ತಿದ್ದಂತೆ ಸೋಂಕುಗಳ ಹರಡುವ ಸಾಧ್ಯತೆ ಕಡಿಮೆಯಾಗುತ್ತದೆ” ಎಂದು ಅವರು ಧೈರ್ಯ ತುಂಬಿದ್ದಾರೆ.

ಇದನ್ನೂ ಓದಿ: Brain eating amoeba | ಮೆದುಳು ತಿನ್ನುವ ಅಮೀಬಾ! ಏನಿದು ವಿಚಿತ್ರ ಕಾಯಿಲೆ?

ಹೇಗೆ ಹರಡುತ್ತದೆ?

ಈ ರೋಗಾಣು ಇರುವ ನೀರಿನಲ್ಲಿ ಈಜುವುದು ಅಥವಾ ಇನ್ನಾವುದಾದರೂ ರೀತಿಯಿಂದ ಈ ನೀರು ಮೂಗಿನೊಳಗೆ ಹೋದರೆ, ಆ ವ್ಯಕ್ತಿಗೆ ಈ ಅಮೀಬಾ ಸೋಂಕು ತಗುಲುತ್ತದೆ. ತುಂಬ ದಿನದಿಂದ ಈಜುಕೊಳದ ನೀರು ಬದಲಿಸದೆ ಇದ್ದರೆ ಅಲ್ಲಿಯೂ ಈ ಅಮೀಬಾ ಇರಬಹುದು. ಅದರಲ್ಲೂ ಕಲುಷಿತ ನೀರಿನಲ್ಲಿ ಈ ಅಮೀಬಾ ಉತ್ಪತ್ತಿ ಪ್ರಮಾಣ ಹೆಚ್ಚು. ನೀರೊಳಗೆ ಮುಖ ಒಳಗೆ ಹಾಕಿ ಈಜಿದಾಗ, ಸರೋವರ, ಕೊಳ, ನದಿ ನೀರಿನಲ್ಲಿ ಮುಖ ಮುಳುಗಿಸಿದಾಗ, ಕಲುಷಿತ ನೀರಿನಲ್ಲಿ ತಲೆ ಸ್ನಾನ ಮಾಡಿದಾಗ ಈ ಅಮೀಬಾ ಮೂಗಿನ ಮೂಲಕ ಮೆದುಳು ಸೇರುವ ಸಾಧ್ಯತೆ ಹೆಚ್ಚು.

Continue Reading

ಉದ್ಯೋಗ

Job Alert: ಇಂಡಿಯನ್‌ ಹೈವೇ ಮ್ಯಾನೇಜ್‌ಮೆಂಟ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಇಂದೇ ಅಪ್ಲೈ ಮಾಡಿ

Job Alert: ಇಂಡಿಯನ್‌ ಹೈವೇ ಮ್ಯಾನೇಜ್‌ಮೆಂಟ್‌ ಕಂಪನಿ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.ಒಟ್ಟು 31 ಹುದ್ದೆ ಖಾಲಿ ಇದೆ. ಎಂಜಿನಿಯರ್‌ ಮತ್ತು ಆಫೀಸರ್‌ ಹುದ್ದೆ ಇದಾಗಿದ್ದು, ಪದವಿ, ಸಿಎ ಓದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್ 16. ಅರ್ಜಿ ಸಲ್ಲಿಸುವ ವಿಧಾನದ ಮಾಹಿತಿ ಇಲ್ಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಪದವಿ ಶಿಕ್ಷಣ ಮುಗಿಸಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ಇಲ್ಲಿದೆ. ಇಂಡಿಯನ್‌ ಹೈವೇ ಮ್ಯಾನೇಜ್‌ಮೆಂಟ್‌ ಕಂಪನಿ ಲಿಮಿಟೆಡ್‌ (Indian Highway Management Company Limited) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ (IHMCL Recruitment 2024). ಒಟ್ಟು 31 ಹುದ್ದೆ ಖಾಲಿ ಇದೆ. ಎಂಜಿನಿಯರ್‌ ಮತ್ತು ಆಫೀಸರ್‌ ಹುದ್ದೆ ಇದಾಗಿದ್ದು, ಪದವಿ, ಸಿಎ ಓದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್ 16 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಎಂಜಿನಿಯರ್‌ – 30 ಮತ್ತು ಆಫೀಸರ್‌ – 1 ಹುದ್ದೆ ಖಾಲಿ ಇದೆ. ಎಂಜಿನಿಯರ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಐಟಿ / ಸಿಎಸ್ / ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ಸ್ / ಎಲೆಕ್ಟ್ರಿಕಲ್ / ಇನ್‌ಸ್ಟ್ರುಮೆಂಟೇಶನ್ / ಡಾಟಾ ಸೈನ್ಸ್ ಮತ್ತು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರಬೇಕು. ಇನ್ನು ಸಿಎ, ಸಿಎಂಎ ವಿದ್ಯಾರ್ಹತೆ ಹೊಂದಿದವರು ಆಫೀಸರ್‌ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಯೋಮಿತಿ

ಎಂಜಿನಿಯರಿಂಗ್‌ ಹುದ್ದೆಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 21 ವರ್ಷ. ಗರಿಷ್ಠ ವಯಸ್ಸು 30 ವರ್ಷ. ಆಫೀಸರ್‌ ಹುದ್ದೆಗೂ ಗರಿಷ್ಠ ವಯೋಮಿತಿ 30 ವರ್ಷ. ಮೀಸಲಾತಿಗೆ ಅನುಗುಣವಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಡಿ (ಸಾಮಾನ್ಯ) ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯುಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಡಿ (ಎಸ್‌ಸಿ / ಎಸ್‌ಟಿ) ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಗೇಟ್‌ (GATE) ಅಂಕ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.

ಮಾಸಿಕ ವೇತನ

ಆಯ್ಕೆಯಾದವರಿಗೆ 40,000 ರೂ. – 1,40,000 ರೂ. ಮಾಸಿಕ ವೇತನ ದೊರೆಯಲಿದೆ. ಉದ್ಯೋಗದ ಸ್ಥಳ: ಭಾರತಾದ್ಯಂತ.

IHMCL Recruitment 2024ರ ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://recruitment.ihmcl.co.in/panel/login.php)
  • ಅಗತ್ಯ ಮಾಹಿತಿ, ಇಮೇಲ್‌ ವಿಳಾಸ ನಮೂದಿಸಿ ಹೆಸರು ನೋಂದಾಯಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಹೆಸರು, ವಿಳಾಸ, ಶೈಕ್ಷಣಿಕ ಮಾಹಿಸಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌, ಫೋಟೊ ಅಪ್‌ಲೋಡ್‌ ಮಾಡಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್‌ ವಿಳಾಸ: ihmcl.co.inಕ್ಕೆ ಭೇಟಿ ನೀಡಿ.

ಇದನ್ನೂ ಓದಿ: Job Alert: ಬ್ಯಾಂಕ್‌ ಆಫ್‌ ಬರೋಡಾದ 627 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ಇಲ್ಲಿದೆ ಹೊಸ ಟೈಮ್‌ ಟೇಬಲ್‌

Continue Reading
Advertisement
Team India's Victory Parade
ಕ್ರಿಕೆಟ್37 seconds ago

Team India’s Victory Parade: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ನಲ್ಲಿ ಹಲವು ಅಭಿಮಾನಿಗಳಿಗೆ ಗಾಯ; ಆಸ್ಪತ್ರೆಗೆ ದಾಖಲು

Viral News
Latest5 mins ago

Viral News: ಕಾಮ ದಾಹ ತಣಿಸಿಕೊಳ್ಳಲು ವಿದ್ಯಾರ್ಥಿಗಳನ್ನೇ ಬಳಸಿಕೊಂಡ ಶಿಕ್ಷಕಿಗೆ ಶಿಕ್ಷೆ

Dengue Fever
ಕರ್ನಾಟಕ19 mins ago

Dengue Fever: ಡೆಂಗ್ಯೂ ಆತಂಕ; ರಾಜಧಾನಿಯಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ಕಸ ಬಿಸಾಡಿದರೆ ಬೀಳಲಿದೆ ಭಾರಿ ದಂಡ!

Fire accident
ದೇಶ30 mins ago

Fire accident: ಮಾಲ್‌ನಲ್ಲಿ ಭೀಕರ ಅಗ್ನಿ ಅವಘಡ; ಭಾರೀ ಸಾವು-ನೋವಿನ ಶಂಕೆ

Rashmika Mandanna Kubera interesting first look
ಕಾಲಿವುಡ್36 mins ago

Rashmika Mandanna: ಧನುಷ್‌ ನಟನೆಯ ʻಕುಬೇರʼ ಸಿನಿಮಾದ ರಶ್ಮಿಕಾ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌!

IND vs ZIM
ಕ್ರೀಡೆ38 mins ago

IND vs ZIM: ನಾಳೆಯಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ; ಯುವ ಪಡೆಗೆ ಸ್ಫೂರ್ತಿಯಾಗಲಿ ಟಿ20 ವಿಶ್ವಕಪ್​ ಗೆಲುವು

Edu Guide
ಶಿಕ್ಷಣ50 mins ago

Edu Guide: ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: IDFC FIRST ಬ್ಯಾಂಕ್‌ನಿಂದ 2 ಲಕ್ಷ ರೂ. ಸ್ಕಾಲರ್‌ಶಿಪ್‌; ಹೀಗೆ ಅಪ್ಲೈ ಮಾಡಿ

Prajwal Revanna case Three FIRs against Prajwal Wanted list in all three
ಕ್ರೈಂ52 mins ago

Prajwal Revanna Case: ಪ್ರಜ್ವಲ್‌ಗೆ ʼಆʼ ಸಾಮರ್ಥ್ಯ ಇದೆ: ವೈದ್ಯಕೀಯ ವರದಿ ರಿವೀಲ್

Biometric Attendance
ಬೆಂಗಳೂರು1 hour ago

Biometric Attendance: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ

Vinay Rajkumar wedding pictures swathishta krishnan have gone viral
ಸ್ಯಾಂಡಲ್ ವುಡ್1 hour ago

Vinay Rajkumar: ಸದ್ದಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿಟ್ರ ವಿನಯ್ ರಾಜ್ ಕುಮಾರ್? ದೊಡ್ಮನೆ ಫ್ಯಾನ್ಸ್‌ಗೆ ಶಾಕ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Elephant attack in Hassan and Chikmagalur
ಹಾಸನ1 hour ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು2 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು3 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ7 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ19 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ21 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ22 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ24 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ1 day ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

ಟ್ರೆಂಡಿಂಗ್‌