Rakshak Bullet: ಅಜ್ಜಿ-ತಂದೆಯ ಸಮಾಧಿ ತೊಳೆದು ವಿಶೇಷ ವಿಡಿಯೊ ಮಾಡಿದ ರಕ್ಷಕ್ ಬುಲೆಟ್ - Vistara News

ಸ್ಯಾಂಡಲ್ ವುಡ್

Rakshak Bullet: ಅಜ್ಜಿ-ತಂದೆಯ ಸಮಾಧಿ ತೊಳೆದು ವಿಶೇಷ ವಿಡಿಯೊ ಮಾಡಿದ ರಕ್ಷಕ್ ಬುಲೆಟ್

Rakshak Bullet: ಸುದೀಪ್‌ ಬಗ್ಗೆ ಹೇಳಿಕೆಯಿಂದಾಗಿ (Rakshak Bullet) ಟ್ರೋಲ್‌ ಆಗಿ ಕ್ಷಮೆಯೂ ಕೇಳಿದ್ದರು. ಆಗಾಗ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಉತ್ತಲೇ ಇರುತ್ತಾರೆ. ಈಗ ಅವರ ಹೊಸ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ತಂದೆ ಬುಲೆಟ್ ಪ್ರಕಾಶ್ ಹಾಗೂ ಅಜ್ಜಿ ಗೌರಮ್ಮ ಅವರ ಸಮಾಧಿಯನ್ನು ತೊಳೆದಿದ್ದಾರೆ.

VISTARANEWS.COM


on

Rakshak Bullet Washed His Father grave
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಗ್‌ಬಾಸ್ʼ ಕನ್ನಡ ಸೀಸನ್‌ 10ರಲ್ಲಿ (BBK SEASON 10) ನಟ ಬುಲೆಟ್‌ ಪ್ರಕಾಶ್‌ ಅವರ ಪುತ್ರ ರಕ್ಷಕ್‌ ಬುಲೆಟ್‌ ಒಂದು ತಿಂಗಳ ಕಾಲ ಬಿಗ್‌ಬಾಸ್‌ನಲ್ಲಿದ್ದು ಎಲಿಮಿನೇಟ್‌ ಆಗಿಯೂ ಹೊರಬಂದಿದ್ದರು. ಸುದೀಪ್‌ ಬಗ್ಗೆ ಹೇಳಿಕೆಯಿಂದಾಗಿ (Rakshak Bullet) ಟ್ರೋಲ್‌ ಆಗಿ ಕ್ಷಮೆಯೂ ಕೇಳಿದ್ದರು. ಆಗಾಗ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಉತ್ತಲೇ ಇರುತ್ತಾರೆ. ಈಗ ಅವರ ಹೊಸ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ತಂದೆ ಬುಲೆಟ್ ಪ್ರಕಾಶ್ ಹಾಗೂ ಅಜ್ಜಿ ಗೌರಮ್ಮ ಅವರ ಸಮಾಧಿಯನ್ನು ತೊಳೆದಿದ್ದಾರೆ.

ವಿಡಿಯೊದಲ್ಲಿ ರಕ್ಷಕ್‌ ಮಾತನಾಡಿ ʻʻಈ ಜಾಗ ನನಗೆ ಒಂಥರ ಸ್ಪೆಷಲ್‌. ಯಾಕಂದರೆ ನನಗೆ ಎಷ್ಟೇ ಖುಷಿ , ಬೇಜಾರು ಆದರೂ ಇಲ್ಲಿ ಬಂದು 5 ನಿಮಿಷ ಕೂತು ನನ್ನ ಮನಸಲ್ಲಿ ಇರೋದು ಹೇಳ್ಕೊಂಡಾಗ ತುಂಬ ಖುಷಿ ಆಗುತ್ತೆ. ನೆಮ್ಮದಿ ಕೂಡ ಆಗತ್ತೆ. ನಾವು ಕ್ಲೀನ್ ಆಗಿದ್ದಂತೆ, ಇವರು ಕ್ಲೀನ್ ಆಗಿರಬೇಕು. ಹೀಗಾಗಿ, ವಾರಕ್ಕೆ ಒಮ್ಮೆ ಬಂದು ಇಲ್ಲಿ ಸಮಾಧಿ ತೊಳೆದು ಹೋಗುತ್ತೇನೆ. ಎಲ್ಲರೂ ಕೇಲ್ತಾರೆ 3 ವರ್ಷದಲ್ಲಿ ರಕ್ಷಕ್‌ ಹೆಂಗೆ ಬೇಳೆದುಬಿಟ್ಟ ಅಂತ. ಈ ಮೂರು ವರ್ಷದ ಹಿಂದೆ ಶ್ರಮ ಇದೆ. ನಮ್ಮ ಅಜ್ಜಿ, ತಂದೆನ ತುಂಬಾ ಚೆನ್ನಾಗಿ ನೋಡಿಕೊಂಡಿದ್ದೇನೆ. ಮಗು ರೀತಿ ನೋಡಿಕೊಂಡಿದ್ದೇನೆ. ಊದಿನಕಡ್ಡಿ ಹಚ್ಚಿ, ಅವರಿಷ್ಟದ ತಿಂಡಿನ ಇಟ್ಟು ಹೋಗುತ್ತೇನೆ. ನಮಸ್ಕಾರ ಮಾಡಿ ಹೋಗುತ್ತೇನೆ. ದೊಡ್ಡವರ ಆಶೀರ್ವಾದ ಇದ್ದರೆ ಬೆಳೆಯುತ್ತೀರಾ. ದೊಡ್ಡವರ ಆಶೀರ್ವಾದವೇ ಇದಕ್ಕೆ ಕಾರಣ’ ಎಂದಿದ್ದಾರೆ ರಕ್ಷಕ್.

ಇದನ್ನೂ ಓದಿ: Rakshak Bullet: ಇನ್ಮುಂದೆ ನಂದೇ ರೌಂಡು, ನಂದೇ ಸೌಂಡು ಎಂದ ಮರಿ ಬುಲೆಟ್‌!

ಈಗ ಅವರು ಹಂಚಿಕೊಂಡಿರೋ ಈ ವಿಡಿಯೋಗೆ ಎಲ್ಲ ಕಡೆಗಳಿಂದ ಭರ್ಜರಿ ಮೆಚ್ಚುಗೆ ಸಿಗುತ್ತಿದೆ. ಎಲ್ಲರೂ ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.

ಸುದೀಪ್‌ ವಿಚಾರವಾಗಿ ಸುದ್ದಿಯಾಗಿದ್ದ ರಕ್ಷಕ್‌

ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ ʻʻಸುದೀಪಣ್ಣ ಬಂದ ಬಳಿಕ, ದೇವರು ನಿಂತಿದ್ದಾರೆ. ನಾವೆಲ್ಲ ಭಕ್ತಾದಿಗಳು. ಅವರು ಹೆಂಗೆ ವರ ಕೊಡ್ತಾರೋ, ಹಂಗೆ ತೆಗೋಬೇಕು ಅನ್ನೋ ಥರ ಎಲ್ಲರೂ ಇರ್ತಾರೆʼʼಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಸುದೀಪ್‌ ಫ್ಯಾನ್ಸ್‌ ಕೂಡ ರಕ್ಷಕ್‌ ಅವರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು. ಅದರಂತೆ ರಕ್ಷಕ್‌ ಕ್ಷಮೆ ಕೇಳಿದ್ದರು.

ರಕ್ಷಕ್‌ ಹೇಳಿದ್ದೇನು?

ಮಾಧ್ಯಮವೊಂದರ ಸಂದರ್ಶನವೊಂದರಲ್ಲಿ ರಕ್ಷಕ್‌ ಅವರು ಮಾತನಾಡಿʻʻ ಬಿಗ್ ಬಾಸ್ ಮನೆಯಲ್ಲಿ ಎಲ್ಲ ಸ್ಪರ್ಧಿಗಳು ಡ್ರಾಮಾ ಮಾಡ್ತಾರೆ. ಕಳಪೆ ಉತ್ತಮ ಅಂತ ಕೊಟ್ಟಮೇಲೆ ಆ ಮಾತಿನ ಮೇಲೆ ಯಾರೂ ನಿಲ್ಲುವುದಿಲ್ಲ. ಸುದೀಪ್‌ ಅವರು ಬಂದ ಮೇಲೆ ಎಲ್ಲವೂ ಬದಲಾಗುತ್ತದೆ. ಸುದೀಪಣ್ಣ ಬಂದ ಬಳಿಕ, ದೇವರು ನಿಂತಿದ್ದಾರೆ. ನಾವೆಲ್ಲ ಭಕ್ತಾದಿಗಳು.. ಅವರು ಹೆಂಗೆ ವರ ಕೊಡ್ತಾರೋ, ಹಂಗೆ ತೆಗೋಬೇಕು ಎನ್ನುವ ಥರ ಎಲ್ಲರೂ ಇರ್ತಾರೆ” ಎಂದು ಸಂದರ್ಶನದಲ್ಲಿ ಹೇಳಿಕೊಂಡಿದ್ದರು. ಈ ಹೇಳಿಕೆ ಭಾರಿ ಟೀಕೆಗೆ ಗುರಿಯಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan: ದರ್ಶನ್ ಬಳಸುತ್ತಿದ್ದ ಸಿಮ್ ಸೀಕ್ರೆಟ್‌ ರಿವೀಲ್; ಆಪ್ತರಿಗೆ ತಟ್ಟಿದೆ ವಿಚಾರಣೆ ಬಿಸಿ!

Actor Darshan: ಈಗಾಗಲೇ ಪೊಲೀಸರು ದರ್ಶನ್ ಪರಿಚಯಸ್ಥರ ವಿಚಾರಣೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ದರ್ಶನ್‌ನ ಇಬ್ಬರು ಪರಿಚಯಸ್ಥರನ್ನು ವಿಚಾರಣೆ ಮಾಡಲು ಪೊಲೀಸರು ಮುಂದಾಗಿದ್ದಾರೆ. ಇದೀಗ ಪೊಲೀಸ್‌ ತನಿಖೆ ವೇಳೆ ದರ್ಶನ್ ಬಳಸುತ್ತಿದ್ದ ಸಿಮ್ ಸೀಕ್ರೆಟ್‌ ರಿವೀಲ್ ಆಗಿದೆ.

VISTARANEWS.COM


on

Actor Darshan SIM Secret Revealed investigation start
Koo

ಬೆಂಗಳೂರು:  ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ಬಂಧಿತನಾಗಿರುವ ನಟ ದರ್ಶನ್‌ಗೆ (Actor Darshan) ಮತ್ತೆ ಪರಪ್ಪನ ಅಗ್ರಹಾರವೇ ಗತಿಯಾಗಿದೆ. ನಟ ದರ್ಶನ್‌ ಸೇರಿ ಹಲವು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18ರವರೆಗೆ ವಿಸ್ತರಣೆ ಮಾಡಲಾಗಿದೆ. ಇದೀಗ ಪೊಲೀಸ್‌ ತನಿಖೆ ವೇಳೆ ದರ್ಶನ್ ಬಳಸುತ್ತಿದ್ದ ಸಿಮ್ ಸೀಕ್ರೆಟ್‌ ರಿವೀಲ್ ಆಗಿದೆ. ನಟ ದರ್ಶನ್ ಮಾತ್ರವಲ್ಲ, ಪವಿತ್ರಗೌಡ, ಪ್ರದೂಷ್, ಕಾರ್ತಿಕ್, ಕೇಶವಮೂರ್ತಿ, ನಿಖಿಲ್ ನಾಯಕ್ ಕೂಡ ಬೇರೊಬ್ಬರ ಸಿಮ್ ಕಾರ್ಡ್ ಬಳಕೆ ಮಾಡುತ್ತಿರುವುದು ತನಿಖೆ ವೇಳೆ ಬಯಲಿಗೆ ಬಂದಿದೆ. ಹೀಗಾಗಿ ಸಿಮ್ ಖರೀದಿದಾರರಿಗೆ ಪೊಲೀಸರು ನೋಟಿಸ್‌ ನೀಡಲು ಮುಂದಾಗಿದ್ದಾರೆ. ಮಾತ್ರವಲ್ಲ ದರ್ಶನ್ ಪರಿಚಯಸ್ಥರ ವಿಚಾರಣೆಗೆ ಕೂಡ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.

ಪೊಲೀಸ್‌ ತನಿಖೆ ವೇಳೆ ಆರೋಪಿಗಳು ಬೇರೊಬ್ಬರ ಸಿಮ್ ಕಾರ್ಡ್ ಬಳಕೆ ಮಾಡುತ್ತಿರುವುದು ಪತ್ತೆಯಾಗಿದೆ. ಮಾಹಿತಿ ಸಂಗ್ರಹಿಸಿ ಪರಿಶೀಲನೆ ವೇಳೆ ಸಿಮ್ ಕಾರ್ಡ್ ರಹಸ್ಯ ಬಯಲಾಗಿದೆ. ಹೇಮಂತ್ ಹೆಸರಿನಲ್ಲಿರುವ ಸಿಮ್‌ವನ್ನು ದರ್ಶನ್‌ ಬಳಸುತ್ತಿದ್ದರೆ, ಪವಿತ್ರಗೌಡ ಅವರು ಮನೋಜ್ ಹೆಸರಿನಲ್ಲಿದ್ದ ಸಿಮ್ ಬಳಸುತ್ತಿದ್ದರು. ಆರೋಪಿ ನಂದೀಶ್ ಅವರು ಹೇಮಂತ್ ಹೆಸರಿನಲ್ಲಿ, ಆರೋಪಿ ಪ್ರದ್ಯೂಷ್ ಖಾಸಗಿ ಕಂಪನಿ ಸೀನಿಯರ್ ಮ್ಯಾನೇಜರ್ ಹೆಸರಿನಲ್ಲಿ, ಆರೋಪಿ ಕಾರ್ತಿಕ್ ಅವರು ವೇಲು ಎಂಬಾತನ ಹೆಸರಲ್ಲಿ, ಕೇಶವಮೂರ್ತಿ ಅರು ಪ್ರಜ್ಞಾ ಎಂ ಹೆಸರಲ್ಲಿ, ನಿಖಿಲ್ ನಾಯಕ್ ಅವರು ಗೀತಾ ಹೆಸರಲ್ಲಿ ಸಿಮ್‌ ಬಳಕೆ ಮಾಡುತ್ತಿರುವುದಾಗಿ ತನಿಖೆ ವೇಳೆ ತಿಳಿದು ಬಂದಿದೆ.

ಇದನ್ನೂ ಓದಿ: Actor Darshan: ದರ್ಶನ್‌ ಅತ್ಯಂತ ಸರಳ, ದೇವತಾ ಮನುಷ್ಯ; ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ ಎಂದ ಖ್ಯಾತ ನಟಿ!  

ಸದರಿ ಸಿಮ್ ಮಾಲೀಕರ ವಿಚಾರಣೆಗೆ ಪೊಲೀಸರು ಮುಂದಾಗಿದ್ದಾರೆ. ನೋಟಿಸ್ ನೀಡಿ ವಿಚಾರಣೆ ಮಾಡಲು ಪೊಲೀಸರು ಸಿದ್ಧತೆ ಮಾಡುತ್ತಿದ್ದಾರೆ. ಮಾತ್ರವಲ್ಲ ಬೆಂಗಳೂರಿನ ಪ್ರಭಾವಿ ಶಾಸಕನ ಕಾರು ಚಾಲಕನಿಗೂ ನೋಟಿಸ್ ನೀಡಿಲಾಗಿದೆ. ಕಾರ್ತಿಕ್ ಪುರೋಹಿತ್ ಎಂಬ ಕಾರು ಚಾಲಕನಿಗೆ ನೋಟಿಸ್ ನೀಡಿದ್ದಾರೆ. ನೋಟಿಸ್ ತಲುಪುತ್ತಿದ್ದಂತೆ ಪುರೋಹಿತ್ ಎಸ್ಕೇಪ್ ಆಗಿದ್ದಾನೆ. ಈತ ಆರೋಪಿ ಪ್ರದೋಷ್‌ಗೆ ಆಪ್ತನಾಗಿದ್ದ.

ದರ್ಶನ್ ಪರಿಚಯಸ್ಥರ ವಿಚಾರಣೆಗೆ ಸಿದ್ಧತೆ

ಈಗಾಗಲೇ ಪೊಲೀಸರು ದರ್ಶನ್ ಪರಿಚಯಸ್ಥರ ವಿಚಾರಣೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ದರ್ಶನ್‌ನ ಇಬ್ಬರು ಪರಿಚಯಸ್ಥರನ್ನು ವಿಚಾರಣೆ ಮಾಡಲು ಪೊಲೀಸರು ಮುಂದಾಗಿದ್ದಾರೆ. ಸಾಕ್ಷಿದಾರರು ಎಂದು ಪರಿಗಣಿಸಿ ಹೇಳಿಕೆ ಪಡೆಯಲು ಸಿದ್ಧತೆ ಮಾಡಿಕೊಂಡಿದ್ದಾರೆ. ಮೋಹನ್ ರಾಜು ಹಾಗೂ ಪ್ರಕಾಶ್ ಹೇಳಿಕೆ ಪಡೆಯಲಿದ್ದಾರೆ. ಹಣಕ್ಕೆ ಸಂಬಂಧಿಸಿದಂತೆ ಹಾಗೇ ಇಬ್ಬರು ಪರಿಚಯಸ್ಥರ ಜೊತೆಗೆ ಇನ್ನೂ ಕೆಲವರ ವಿಚಾರಣೆ ಆಗಲಿದೆ.

ದರ್ಶನ್ ಮನೆ ಕೆಲಸಗಾರರಾದ ಬಾಬುಲ್ ಖಾನ್, ಸುಶೀಲಮ್ಮ ಮತ್ತು ಅಮೀರ್ ಖಾನ್ ,ಸ್ಟೋನಿ ಬ್ರೂಕ್ ರೆಸ್ಟೋರೆಂಟ್ ಕೆಲಸಗಾರ ಚೇತನ್ ಗೌಡ ಹೇಳಿಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ. ಆರೋಪಿ ಪವಿತ್ರಗೌಡ ಸ್ನೇಹಿತೆ ಸಮಂತ ಎಂಬಾಕೆಗೂ ವಿಚಾರಣೆ ಬಿಸಿ ತಟ್ಟಿದೆ. ಇದರ ಜೊತೆಗೆ ಇನ್ನಷ್ಟು ಪರೋಕ್ಷ ಸಾಕ್ಷಿಗಳ ಸಂಗ್ರಹ ಕೂಡ ಆಗುತ್ತಿದೆ. ಪೊಲೀಸರು ಪ್ರತಿಯೊಬ್ಬರ ಮಾಹಿತಿ ಸಂಗ್ರಹಿಸಿ ವಿಚಾರಣೆ ನಡೆಸುತ್ತಿದ್ದಾರೆ.

Continue Reading

ಸ್ಯಾಂಡಲ್ ವುಡ್

Chaithra J Achar: ʻರೂಪಾಂತರʼ ಸಿನಿಮಾದ ಹಾಡು ರಿಲೀಸ್‌; ಇಳಕಲ್‌ ಸೀರೆಯಲ್ಲಿ ಮಿಂಚಿದ ಚೈತ್ರಾ ಆಚಾರ್!

Chaithra J Achar: ಈ ‘ರೂಪಾಂತರ’ ಸಿನಿಮಾದ ಹಾಡು ಈಗ ರಿಲೀಸ್ ಆಗಿದೆ. ಸದ್ದಿಲ್ಲದೆ ಸಿನಿಮಾ ಮುಗಿಸಿರುವ ತಂಡ ಈಗಾಗಲೇ “ಕಿತ್ತಾಳೆ” ಎನ್ನುವ ಹಾಡನ್ನು ರಿಲೀಸ್ ಮಾಡಿದೆ. ಈ ಮೂಲಕ ಸಿನಿ ರಸಿಕರು ಹಾಗೂ ಸಂಗೀತ ಪ್ರೇಮಿಗಳ ಕಿವಿಗಳಿಗೆ ಇಂಪು ನೀಡಿದೆ.ಇದೇ ಸಿನಿಮಾ ಮೂಲಕ ಸಂಗೀತ ನಿರ್ದೇಶಕ ಮಿಧುನ್ ಮುಕುಂದನ್ ಕೂಡ ಎಂಟ್ರಿ ಕೊಟ್ಟಿದ್ದರು.

VISTARANEWS.COM


on

Chaithra J Achar Kittale Roopanthara Raj B Shetty out
Koo

ಬೆಂಗಳೂರು: ಇತ್ತೀಚೆಗಷ್ಟೆ ʼಟರ್ಬೋʼ ಎಂಬ ಮಲಯಾಳಂ ಚಿತ್ರದಲ್ಲಿ ವೆಟ್ರಿವೇಲ್ ಷಣ್ಮುಗಸುಂದರಂ ಎಂಬ ಪಾತ್ರದಲ್ಲಿ ಮಮ್ಮೂಟ್ಟಿಯವರಿಗೆ ಟಕ್ಕರ್ ಕೊಡುವ ಖಳನಾಯಕನಾಗಿ ಮಿಂಚಿದ ರಾಜ್ ಬಿ. ಶೆಟ್ಟಿ ತಮ್ಮ ಇನ್ಸ್‌ಸ್ಟಾಗ್ರಾಮ್ ಖಾತೆಯಲ್ಲಿ “ರೂಪಾಂತರ” (Roopanthara)ಎಂಬ ಹೊಸ ಚಿತ್ರದ (Kannada New Movie) ಫಸ್ಟ್‌ ಲುಕ್ ಪೋಸ್ಟರ್ ಅನ್ನು ಹಂಚಿಕೊಳ್ಳುವ ಮೂಲಕ ಮತ್ತೊಮ್ಮೆ ಸಿನಿ ರಸಿಕರ ಗಮನ ಸೆಳೆದಿದ್ದರು. ಈಗಾಗಲೇ ‘ಟೋಬಿ’, ‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿ ಅಂತಹ ಸಿನಿಮಾಗಳಲ್ಲಿ ನಟಿಸಿ ಸಿನಿಪ್ರಿಯರ ಮೆಚ್ಚುಗೆ ಗಳಿಸಿಕೊಂಡಿರುವ ಚೈತ್ರಾ ಆಚಾರ್ (Chaithra J Achar) ‘ರೂಪಾಂತರ’ದಲ್ಲೂ ಕಾಣಿಸಿಕೊಂಡಿದ್ದಾರೆ.

ಈ ‘ರೂಪಾಂತರ’ ಸಿನಿಮಾದ ಹಾಡು ಈಗ ರಿಲೀಸ್ ಆಗಿದೆ. ಸದ್ದಿಲ್ಲದೆ ಸಿನಿಮಾ ಮುಗಿಸಿರುವ ತಂಡ ಈಗಾಗಲೇ “ಕಿತ್ತಾಳೆ” ಎನ್ನುವ ಹಾಡನ್ನು ರಿಲೀಸ್ ಮಾಡಿದೆ. ಈ ಮೂಲಕ ಸಿನಿ ರಸಿಕರು ಹಾಗೂ ಸಂಗೀತ ಪ್ರೇಮಿಗಳ ಕಿವಿಗಳಿಗೆ ಇಂಪು ನೀಡಿದೆ.ಇದೇ ಸಿನಿಮಾ ಮೂಲಕ ಸಂಗೀತ ನಿರ್ದೇಶಕ ಮಿಧುನ್ ಮುಕುಂದನ್ ಕೂಡ ಎಂಟ್ರಿ ಕೊಟ್ಟಿದ್ದರು.ಮಿಧುನ್ ಸಂಗೀತಕ್ಕೆ ರಾಜ್ ಸಾಹಿತ್ಯ ರಚಿಸಿದ್ದು “ಕಿತ್ತಾಳೆ” ಹಾಡು ಸಂಗೀತ ಪ್ರಿಯರನ್ನು ಸೆಳೆಯುತ್ತಿದೆ. ನಟಿ ಚೈತ್ರಾ ಆಚಾರ್ ಅವರೇ ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದು, ಅವರೇ ಹಾಡಿರುವುದು ವಿಶೇಷ.

ಕೆಲ ಸಿನಿಮಾಗಳು ಮನಸ್ಸಿಗೆ ಬಲು ಹತ್ತಿರ. ಅಂತಹ ಒಂದು ಸುಂದರವಾದ ಚಿತ್ರ ರೂಪಾಂತರ. ಈ ಸಿನಿಮಾದ ಭಾಗವಾಗಿರುವುದು, ಜತೆಗೆ ಈ ಚಿತ್ರವನ್ನು ನಿಮ್ಮ ಮುಂದೆ ಪ್ರಸ್ತುತಪಡಿಸುವ ಜವಾಬ್ದಾರಿ ನನಗೆ ಲಭಿಸಿರುವುದು ನನ್ನ ವೃತ್ತಿ ಜೀವನದ ಭಾಗ್ಯ’ ಎಂದು ಬರೆದುಕೊಂಡಿರುವ ರಾಜ್ ಬಿ. ಶೆಟ್ಟಿ, ಸದಾ ಹೊಸ ಪ್ರಯೋಗಗಳಿಗೆ ತಮ್ಮನ್ನು ತೊಡಗಿಸಿಕೊಳ್ಳುವ ಗುಣವನ್ನು ಮತ್ತೊಮ್ಮೆ ಅವರು ಸಾಬೀತುಪಡಿಸಿದ್ದಾರೆ.

ಇದನ್ನೂ ಓದಿ: Kannada New Movie: ‘ರೂಪಾಂತರ’ಗೊಂಡ ರಾಜ್ ಬಿ. ಶೆಟ್ಟಿ! ಮತ್ತೊಂದು ವಿಭಿನ್ನ ಚಿತ್ರ

ಮತ್ತೆ ಒಂದಾದ ʼಮೊಟ್ಟೆʼ ತಂಡ

ಈ ಚಿತ್ರದ ಇನ್ನೊಂದು ವಿಷೇಶತೆಯೆಂದರೆ ಈ ಹಿಂದೆ ʼಒಂದು ಮೊಟ್ಟೆಯ ಕಥೆʼ ಎಂಬ ಚಿತ್ರವನ್ನು ನಿರ್ಮಿಸಿ ವಿಶ್ವದಾದ್ಯಂತ ಹೆಸರುವಾಸಿಯಾದ ಅದೇ ತಂಡ ಸೇರಿ ನಿರ್ಮಿಸಿದ ಚಿತ್ರ ಇದಾಗಿದೆ. ರಾಜ್ ಬಿ. ಶೆಟ್ಟಿಯವರು ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಅಲ್ಲದೆ, ಸಂಭಾಷಣೆಯನ್ನು ಬರೆದಿದ್ದಾರೆ. ಜತೆಗೆ ತಮ್ಮ ನಿರ್ಮಾಣ ಸಂಸ್ಥೆಯಾದ ಲೈಟರ್ ಬುದ್ಧ ಫಿಲಂಮ್ಸ್‌ನ ಮೂಲಕ ತೆರೆಗೂ ತರುತ್ತಿದ್ದಾರೆ.

ಒಂದು ಮೊಟ್ಟೆಯ ಕಥೆಯ ನಿರ್ಮಾಪಕ ಸುಹಾನ್ ಪ್ರಸಾದ್ ಈ ಚಿತ್ರದ ನಿರ್ಮಾಣವನ್ನು ಮಾಡಿದ್ದಾರೆ. ಪ್ರವೀಣ್ ಶ್ರೀಯಾನ್ ಛಾಯಗ್ರಹಣ, ಮಿಧುನ್ ಮುಕುಂದನ್ ಸಂಗೀತವನ್ನು ನೀಡುವ ಮೂಲಕ ಈ ಜೋಡಿ ಮತ್ತೊಮ್ಮೆ ಪ್ರೇಕ್ಷಕರನ್ನು ರಂಚಿಸಲು ಹೊರಟಿದೆ.

ಕನ್ನಡದಲ್ಲೊಂದು ವಿಭಿನ್ನ ಪ್ರಯತ್ನ

ಕನ್ನಡ ಚಿತ್ರರಂಗದಲ್ಲಿ ಹೊಸತನ ಬರಬೇಕು ಎನ್ನುವ ಕೂಗು ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ “ರೂಪಾಂತರ” ಒಂದು ಪ್ರಮುಖ ಪಾತ್ರ ವಹಿಸಲಿದೆ ಎನ್ನುವುದು ಚಿತ್ರತಂಡದ ಅಭಿಪ್ರಾಯ. ಈ ಚಿತ್ರವು ಮಿಥಿಲೇಶ್ ಎಡವಲತ್ ಎನ್ನುವ ಪ್ರತಿಭಾವಂತ ಯುವಕನ ಪ್ರಥಮ ನಿರ್ದೇಶನದ ಚಿತ್ರವಾಗಿದೆ. ಉಳಿದಂತೆ ಸೋಮಶೇಖರ್ ಬೋಲೇಗಾಂವ್, ಲೇಖಾ ನಾಯ್ಡು, ಹನುಮ್ಮಕ್ಕ, ಭರತ್ ಜಿ.ಬಿ, ಅಂಜನ್ ಭಾರಧ್ವಾಜ್ ಮತ್ತಿರರ ತಾರಗಣ ಚಿತ್ರಕ್ಕಿದೆ. ಸಂಕಲನ ಭುವನೇಶ್ ಮಣಿವಣ್ಣನ್, ನಿರ್ಮಾಣ ವಿನ್ಯಾಸ ಪ್ರವೀಣ್ ಮತ್ತು ಅರ್ಷದ್ ನಾಕ್ಕೋತ್ ಅವರದ್ದಾಗಿದೆ.

Continue Reading

ಸ್ಯಾಂಡಲ್ ವುಡ್

Actor Darshan: ದರ್ಶನ್‌ ಅತ್ಯಂತ ಸರಳ, ದೇವತಾ ಮನುಷ್ಯ; ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ ಎಂದ ಖ್ಯಾತ ನಟಿ!  

Actor Darshan: ದರ್ಶನ್‌ ಅಭಿನಯದ ತಾರಕ್‌ ಸಿನಿಮಾದಲ್ಲಿ ಯಮುನಾ ಶ್ರೀನಿಧಿ ಅವರು ನಟಿಸಿದ್ದರು. ನಟ ದರ್ಶನ್‌ ಸೇರಿ ಹಲವು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18ರವರೆಗೆ ವಿಸ್ತರಣೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಆರ್ಥಿಕ ಅಪರಾಧಗಳ ಕೋರ್ಟ್‌ ನ್ಯಾಯಾಧೀಶರು ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.

VISTARANEWS.COM


on

Actor Darshan very simple person Yamuna Srinidhi
Koo

ಬೆಂಗಳೂರು:  ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ಬಂಧಿತನಾಗಿರುವ ನಟ ದರ್ಶನ್‌ಗೆ (Actor Darshan) ಮತ್ತೆ ಪರಪ್ಪನ ಅಗ್ರಹಾರವೇ ಗತಿಯಾಗಿದೆ. ನಟ ದರ್ಶನ್‌ ಸೇರಿ ಹಲವು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18ರವರೆಗೆ ವಿಸ್ತರಣೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಆರ್ಥಿಕ ಅಪರಾಧಗಳ ಕೋರ್ಟ್‌ ನ್ಯಾಯಾಧೀಶರು ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.  ದರ್ಶನ್ ಪ್ರಕರಣದ ಬಗ್ಗೆ ಅವರ ಜತೆ ನಟಿಸಿರೋ ಯಮುನಾ ಶ್ರೀನಿಧಿ ವಿಸ್ತಾರ ಜತೆ ಮಾತನಾಡಿದ್ದಾರೆ. ದರ್ಶನ್‌ ಅಭಿಮಾನಿಗಳಿಗೆ ತೀರ್ಪು ಬರುವವರೆಗೆ ತಾಳ್ಮೆಯಿಂದರಲು ಮನವಿ ಮಾಡಿದ್ದಾರೆ.

ದರ್ಶನ್‌ ಅಭಿನಯದ ತಾರಕ್‌ ಸಿನಿಮಾದಲ್ಲಿ ಯಮುನಾ ಶ್ರೀನಿಧಿ ಅವರು ನಟಿಸಿದ್ದರು. ಇದೀಗ ವಿಸ್ತಾರ ಜತೆ ದರ್ಶನ್‌ ಕುರಿತಾಗಿ ಮಾತನಾಡಿದ್ದು ಹೀಗೆ.

ʻʻಆರೋಪಿ ಸ್ಥಾನದಲ್ಲಿ ಯಾರ ಬೇಕಾದರೂ ಇರಬಹುದು. ನ್ಯಾಯಾಂಗ ಇದೆ..ಪೊಲೀಸ್‌ ಇದ್ದಾರೆ. ಅವರ ಕೆಲಸಗಳ ಬಗ್ಗೆ ಮಾತನಾಡುವಷ್ಟು ಜ್ಞಾನ ನನಗೆ ಖಂಡಿತವಾಗಲೂ ಇಲ್ಲ. ನಾವು ಏನಿದ್ರೂ ಅವರ ತೀರ್ಪು ಬಂದಾಗ ಏನು ಎಂದು ಕಾಯುತ್ತ ಇರುವ ಸಾಮಾನ್ಯ ಪ್ರಜೆಗಳು. ನಾನು ನಂಬಿರುವುದು ಉಹಾ ಪೋಹಗಳು. ತಾರಕ್‌ ಸಿನಿಮಾ ವೇಳೆ ನಾನು ದರ್ಶನ್‌ ಅವರ ಜತೆ ಕೆಲಸ ಮಾಡಿದ್ದೆ. ದೇವತಾ ಮನುಷ್ಯ ಅನಿಸಿತ್ತು. ಅವರ ಸರಳತೆ , ಟ್ರೀಟ್‌ ಮಾಡೋದು ಖುಷಿ ಕೊಡತ್ತೆ. ದರ್ಶನ್‌ ಅವರು ಮಗ ಎನ್ನುವ ಪ್ರೀತಿ ಕೊಟ್ಟಿದ್ದಾರೆ. ದರ್ಶನ್‌ ಪ್ರಕರಣಕ್ಕೂ 10 ದಿನ ಮುಂಚೆ ಮೈಸೂರಿನಲ್ಲಿ ಅವರನ್ನು ಮೀಟ್‌ ಮಾಡಿದ್ವಿ. ನಂತರ ನನ್ನ ಗುರುತು ಹಿಡಿದು ಮಾತನಾಡಿಸಿದ್ರು. ಖುಷಿಯಾಯ್ತುʼʼಎಂದರು.

ಇದನ್ನೂ ಓದಿ: Actor Darshan: ದರ್ಶನ್‌ ಕೇಸ್‌ ಬಗ್ಗೆ ಮಾತನಾಡದೇ ಇರೋದಕ್ಕೆ ಕಾರಣ ತಿಳಿಸಿದ ಸಮಲತಾ; ಅಭಿಮಾನಿಗಳಿಗೆ ಕಿವಿಮಾತು ಹೇಳಿದ್ದೇನು?

ʻʻಅಭಿಮಾನಿಗಳ ಬಗ್ಗೆ ನನ್ನ ಅನಸಿಕೆ ಏನೆಂದರೆ ಯಾರೂ ಪ್ರಚೋದಿಸಿಲ್ಲ ಎಂದರೆ ಯಾರೂ ಏನೂ ಮಾಡುವದಕ್ಕೆ ಹೋಗುವುದಿಲ್ಲ. ತೀರ್ಪು ಬರುವ ಮುಂಚೆಯೇ ಏನೇನೋ ಪೋಸ್ಟ್‌ ಹಾಕಿದ್ದಾರೆ. ಪ್ರಚೋದಿನೆಯಿಂದಾಗಿ ಅಭಿಮಾನಿಗಳು ಈ ರೀತಿ ವರ್ತಿಸಿದ್ದಾರೆ ಎಂಬುದು ನನ್ನ ನಂಬಿಕೆ. ಹಾಗೇ ವಿಜಯಲಕ್ಷ್ಮಿ ಅವರ ಬಗ್ಗೆ ನನಗೆ ತುಂಬಾ ಗೌರವ ಇದೆ. ಕ್ಷಮೆಯಾಧರಿತ್ರಿಯಾಗಿ ಬದುಕಬೇಕು ಎಂದು ನನ್ನ ತಂದೆ ಹೇಳಿದ್ದರು. ಇದೀಗ ಅವರು ಗಂಡನ ಪಕ್ಕ ನಿಂತು ಹೋರಾಡುತ್ತಿದ್ದಾರೆ. ಹಾಗೇ ಮಗನ ವಿಚಾರಕ್ಕೆ ಬಂದರೆ ಮಕ್ಕಳ ಮನಸ್ಸು ಕೂಡ ತುಂಬ ಸೂಕ್ಷ್ಮ. ಬೇರೆಯವರ ಬಗ್ಗೆ ಬೇಕಾಬಿಟ್ಟಿ ಮಾತನಾಡುವುದು ತುಂಬ ಸುಲಭ. ಆದರೆ ವಿನೀಶ್‌ ನೋಡದಾಗ ತುಂಬ ಬೇಜರಾಗತ್ತೆ. ಅಭಿಮಾನಿಗಳಲ್ಲಿ ಕೇಳೊದು ಇಷ್ಟೇ. ತೀರ್ಪು ಬರುವವರೆಗೆ ದಯವಿಟ್ಟು ತಾಳ್ಮೆ ಇರಬೇಕು ಎಂದು ಕೇಳಿಕೊಳ್ಳುತ್ತೇನೆʼʼಎಂದರು.

ಪೊಲೀಸ್‌ ಕಸ್ಟಡಿ ಬಳಿಕ ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್‌ ಸೇರಿ ಹಲವು ಆರೋಪಿಗಳ ಅವಧಿಯು ಮುಕ್ತಾಯಗೊಂಡ ಕಾರಣ ವಿಡಿಯೊ ಕಾನ್ಫರೆನ್ಸ್‌ ಮೂಲಕ ಜಡ್ಜ್‌ ಎದುರು ಆರೋಪಿಗಳನ್ನು ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಜುಲೈ 18ರವರೆಗೆ ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶ ಹೊರಡಿಸಿದರು. ಇದರಿಂದಾಗಿ ದರ್ಶನ್‌ ಹಾಗೂ ಗ್ಯಾಂಗ್‌ಗೆ ಹಿನ್ನಡೆಯಾದಂತಾಗಿದೆ.

Continue Reading

ಸ್ಯಾಂಡಲ್ ವುಡ್

Actor Darshan: ದರ್ಶನ್‌ ಕೇಸ್‌ ಬಗ್ಗೆ ಮಾತನಾಡದೇ ಇರೋದಕ್ಕೆ ಕಾರಣ ತಿಳಿಸಿದ ಸಮಲತಾ; ಅಭಿಮಾನಿಗಳಿಗೆ ಕಿವಿಮಾತು ಹೇಳಿದ್ದೇನು?

Actor Darshan: ರೇಣುಕಾ ಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಲತಾ ಅವರು ರಿಯಾಕ್ಷನ್‌ ಮಾಡಿಲ್ಲ ಎಂಬ ಸುದ್ದಿ ಸಾಕಷ್ಟು ಚರ್ಚೆಯಾಗಿತ್ತು. ನಿನ್ನೆಯಷ್ಟೇ ಸುಮಲತಾ ಅವರು ದರ್ಶನ್‌ ಕುರಿತಾಗಿ ಪೋಸ್ಟ್‌ ಮೂಲಕ ಅಭಿಪ್ರಾಯ ಹಂಚಿಕೊಂಡಿದ್ದರು. ಇದೀಗ ಮಾಧ್ಯಮದ ಜತೆ ಇಷ್ಟು ದಿನ ದರ್ಶನ್‌ ಕುರಿತಾಗಿ ಏಕೆ ಮಾತನಾಡಿಲ್ಲ ಎಂಬ ಕಾರಣಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

VISTARANEWS.COM


on

Sumalatha Ambareesh Talks About Darshan Fans And Renukaswamy Case
Koo

ಬೆಂಗಳೂರು:ನಟಿ, ಮಾಜಿ ಸಂಸದೆ ಸುಮಲತಾ ಅಂಬರೀಶ್‌​ (Sumalatha Ambareesh) ಅವರ ಕುಟುಂಬದ ಜೊತೆ ದರ್ಶನ್​ ಅವರಿಗೆ ಆಪ್ತತೆ ಇದೆ. ರೇಣುಕಾ ಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಲತಾ ಅವರು ರಿಯಾಕ್ಷನ್‌ ಮಾಡಿಲ್ಲ ಎಂಬ ಸುದ್ದಿ ಸಾಕಷ್ಟು ಚರ್ಚೆಯಾಗಿತ್ತು. ನಿನ್ನೆಯಷ್ಟೇ ಸುಮಲತಾ ಅವರು ದರ್ಶನ್‌ ಕುರಿತಾಗಿ ಪೋಸ್ಟ್‌ ಮೂಲಕ ಅಭಿಪ್ರಾಯ ಹಂಚಿಕೊಂಡಿದ್ದರು. ಇದೀಗ ಮಾಧ್ಯಮದ ಜತೆ ಇಷ್ಟು ದಿನ ದರ್ಶನ್‌ ಕುರಿತಾಗಿ ಏಕೆ ಮಾತನಾಡಿಲ್ಲ ಎಂಬ ಕಾರಣಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ಮಾಧ್ಯಮಗಳ ಮುಂದೆ ಸುಮಲತಾ ಮಾತನಾಡಿ ʻʻಕಾನೂನಿನ ವ್ಯವಸ್ಥೆಯಲ್ಲಿ ಪ್ರಕ್ರಿಯೆ ಹೇಗೆ ಆಗುತ್ತೆ ಅದೇ ರೀತಿ ಹೋಗತ್ತೆ. ಅದರ ಬಗ್ಗೆ ಯಾರನೂ ಕಮೆಂಟ್‌ ಮಾಡುವ ಹಾಗಿಲ್ಲ. ನಾವು ಕಾನೂನಿಗೆ ಗೌರವ ಕೊಡಬೇಕು. ಇಷ್ಟು ದಿನ ಈ ಬಗ್ಗೆ ಮಾತನಾಡದೇ ಇರುವುದಕ್ಕೂ, ಈಗ ನಾನು ಪೋಸ್ಟ್‌ ಮಾಡಿರುವ ಬಗ್ಗೆಯೂ ಕ್ಲಾರಿಟಿ ಕೊಟ್ಟಿದ್ದೇನೆ. ಪೋಸ್ಟ್‌ನಲ್ಲಿ ಏನೇ ಹೇಳಿದ್ದರೂ ಅದು ನನ್ನ ವೈಯಕ್ತಿಕ ವಿಚಾರ. ಈ ಸಂದರ್ಭದಲ್ಲಿ ಯಾರಿಗೂ ನೋವಾಗುವಂತಹ ಹೇಳಿಕೆಗಳನ್ನು ನೀಡುವುದು ಸರಿಯಲ್ಲ. ಇದು ಗಂಭೀರವಾದ ಪ್ರಕರಣ ಆದ್ದರಿಂದ ನಾವು ಸೂಕ್ಷ್ಮತೆಯನ್ನು ಅರ್ಥ ಮಾಡಿಕೊಂಡು ವರ್ತಿಸಬೇಕು. ಇನ್ನು ದರ್ಶನ್‌ ಕುಟುಂಬ ಕೂಡ ಈ ಪ್ರಕರಣದ ವಿಚಾರದಲ್ಲಿ ಯಾವ ರೀತಿ ಕುಗ್ಗಿದ್ದಾರೆ ಎನ್ನುವುದು ನನಗೆ ವೈಯಕ್ತಿಕವಾಗಿ ಗೊತ್ತು. ನನ್ನ ಮೌನವನ್ನು ಬೇರೆ ರೀತಿ ಬಿಂಬಿಸುವ ಕೆಲಸ ಆಗುತ್ತಿದೆ. ಪೊಲೀಸರು ಕೋರ್ಟ್‌ನಲ್ಲಿ ಏನು ನಡೆಯುತ್ತಿದೆ, ಅದರ ಬಗ್ಗೆ ಕಮೆಂಟ್‌ ಮಾಡುವುದಿಲ್ಲ. ನಾನು ಹೇಳಿರುವುದು ನಾನು ಕಂಡಂತಹ ದರ್ಶನ್‌. ದರ್ಶನ್‌ ಕೂಡ ಇಷ್ಟು ದಿನ ನನ್ನ ಪರ ನಿಂತಿದ್ದರು ಎನ್ನುವುದು ನಿಮಗೂ ಗೊತ್ತು. ಆ ರೀತಿ ದರ್ಶನ್‌ ನಾನು ನೋಡಿರುವುದು. ನಾನು ಮಗನಾಗಿ ನೋಡಿಕೊಂಡು ಬಂದಿದ್ದೇನೆ. ಕಾನೂನು ಪೊಲೀಸ್‌ ವ್ಯವಸ್ಥೆಯಲ್ಲಿ ನನಗೆ ನಂಬಿಕೆ ಇದೆ. ಇದು ತೀರಾ ಪರ್ಸನಲ್‌ ವಿಚಾರ ಆಗಿರುವುದರಿಂದ ಎಲ್ಲವೂ ಒಂದೇ ದಿನ ಬಂದು ಹೇಳುವ ಪರಿಸ್ಥಿಯಲ್ಲಿ ಇರಲಿಲ್ಲʼʼಎಂದು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Sumalatha Ambareesh: ಕೊಲೆ ಮಾಡುವ ವ್ಯಕ್ತಿತ್ವ ದರ್ಶನ್ ಅವರದ್ದಲ್ಲ ಎಂದ ಸುಮಲತಾ; ದೊಡ್ಡ ಮಗನ ಬಗ್ಗೆ ಹೇಳಿದಿಷ್ಟು!

ಸುಮಲತಾ ಪೋಸ್ಟ್‌ ಏನು?

ನಾನು 44 ವರ್ಷಗಳಿಂದ ನಟಿಯಾಗಿ, ಕಲಾವಿದೆಯಾಗಿ ಸಾರ್ವಜನಿಕ ಜೀವನದಲ್ಲಿದ್ದೇನೆ ಮತ್ತು ಕಳೆದ 5 ವರ್ಷಗಳಿಂದ ಸಂಸದೆಯಾಗಿದ್ದೆ. ಅಲ್ಲದೇ, ನಾನು ಕಲಾವಿದೆಯಾಗಿ, ಪತ್ನಿಯಾಗಿ ಮತ್ತು ತಾಯಿಯಾಗಿ ಅಥವಾ ಸಂಸದೆಯಾಗಿ ಮತ್ತು ಒಂದು ವ್ಯಕ್ತಿಯಾಗಿ ನನ್ನ ಜೀವನದಲ್ಲಿ ಪ್ರತಿಯೊಂದು ಜವಾಬ್ದಾರಿಯನ್ನು ಗಂಭೀರವಾಗಿ ತೆಗೆದುಕೊಂಡಿದ್ದೇನೆ. ಸಮಾಜದಲ್ಲಿ ಜವಾಬ್ದಾರಿಯುತ ವ್ಯಕ್ತಿಯಾಗಿ, ನನ್ನ ಬಳಿ ಯಾವುದೇ ಸತ್ಯ ಅಥವಾ ಮಾಹಿತಿಯಿಲ್ಲದೆ ನಾನು ಅಸಡ್ಡೆಯ, ಅನಗತ್ಯ, ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಲು ಸಾಧ್ಯವಿಲ್ಲ.

ಇಂದು ನಾನು ಕೆಲವು ಸಂಗತಿಗಳನ್ನು ಸ್ಪಷ್ಟಪಡಿಸಲು, ನನ್ನ ಆಲೋಚನೆಗಳು ಮತ್ತು ನೋವನ್ನು ಹಂಚಿಕೊಳ್ಳಲು ಪೋಸ್ಟ್ ಮಾಡುತ್ತಿದ್ದೇನೆ ಏಕೆಂದರೆ ಮಾಧ್ಯಮ ಅಥವಾ ಸಾಮಾಜಿಕ ಮಾಧ್ಯಮದಲ್ಲಿ ಯಾವುದೇ ಹೆಚ್ಚಿನ ಊಹಾಪೋಹಗಳನ್ನು ಪ್ರೋತ್ಸಾಹಿಸಲು ಅಥವಾ ನನ್ನ ನಿಲುವಿನ ಬಗ್ಗೆ ಅಭಿಮಾನಿಗಳಲ್ಲಿ ಯಾವುದೇ ಗೊಂದಲಗಳಿಗೆ ಎಡೆ ಮಾಡಿಕೊಡಲು ನಾನು ಬಯಸುವುದಿಲ್ಲ.

ನಾನು ಮೊದಲಿಗೆ ತಮ್ಮ ಮಗ ಮತ್ತು ಪತಿಯನ್ನು ಹೃದಯವಿದ್ರಾವಕ ರೀತಿಯಲ್ಲಿ ಕಳೆದುಕೊಂಡಿರುವ ರೇಣುಕಾಸ್ವಾಮಿ ಅವರ ಹೆತ್ತವರು ಮತ್ತು ಪತ್ನಿಗೆ ನನ್ನ ಸಂತಾಪವನ್ನು ಸೂಚಿಸುತ್ತೇನೆ ಮತ್ತು ಈ ದುರಂತವನ್ನು ಎದುರಿಸಲು ಮತ್ತು ಆ ನೋವನ್ನು ಭರಿಸಲು ಶಕ್ತಿಯನ್ನು ದೇವರು ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ. ನಮ್ಮ ಕಾನೂನು ವ್ಯವಸ್ಥೆಯಿಂದ ಅವರಿಗೆ ಸಿಗಬೇಕಾದ ನ್ಯಾಯ ದೊರಕಲಿ ಎಂದು ಪ್ರಾರ್ಥಿಸುತ್ತೇನೆ.

ಉದಾರ ವ್ಯಕ್ತಿ
ಈ ಘಟನೆಯು ನನ್ನ ಹೃದಯವನ್ನು ಛಿದ್ರಗೊಳಿಸಿತು ಮತ್ತು ನಾನು ಅದನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗದೆ ಹಲವಾರು ದಿನಗಳವರೆಗೆ ಆಘಾತ ಮತ್ತು ನೋವಿನ ಸ್ಥಿತಿಯಲ್ಲಿದ್ದೆ. ನನ್ನ “ಮೌನ” ದ ಬಗ್ಗೆ ಕಾಮೆಂಟ್ ಮಾಡುತ್ತಿರುವ ಕೆಲವರು, ನನ್ನ ಮತ್ತು ದರ್ಶನ್, ಅವರ ಕುಟುಂಬ ಮತ್ತು ನಾವು ವರ್ಷಗಳಿಂದ ಹಂಚಿಕೊಂಡಿರುವ ಬಾಂಧವ್ಯದ ನಡುವಿನ ಅಗಾಧತೆಯನ್ನು ಅರ್ಥಮಾಡಿಕೊಳ್ಳುವುದಿಲ್ಲ. ಅವರು ಸ್ಟಾರ್ ಮತ್ತು ಸೂಪರ್‌ಸ್ಟಾರ್ ಆಗುವ ಮೊದಲು ನಾನು ಅವರನ್ನು 25 ವರ್ಷಗಳಿಂದ ಬಲ್ಲೆ. ಯಾವುದೇ ಸ್ಟಾರ್‌ಡಂಗಿಂತ ಹೆಚ್ಚಾಗಿ, ಅವರು ನನ್ನ ಕುಟುಂಬದ ಸದಸ್ಯ ಮತ್ತು ಯಾವಾಗಲೂ ನನಗೆ ಮಗನಂತೆ. ಅವರು ಅಂಬರೀಶ್ ಅವರನ್ನು ಯಾವಾಗಲೂ ತಮ್ಮ ಅಪ್ಪಾಜಿ ಎಂದು ಪರಿಗಣಿಸಿದ್ದಾರೆ ಹಾಗೂ ನನಗೆ ಅವರ ತಾಯಿಯ ಗೌರವ ಮತ್ತು ಸ್ಥಾನ ಮತ್ತು ಮಗನ ಪ್ರೀತಿಯನ್ನು ನೀಡಿದ್ದಾರೆ.

ಯಾವ ತಾಯಿಯೂ ತನ್ನ ಮಗುವನ್ನು ಈ ರೀತಿಯ ಪರಿಸ್ಥಿತಿಯಲ್ಲಿ ನೋಡುವುದನ್ನು ಸಹಿಸುವುದಿಲ್ಲ. ನಾನು ದರ್ಶನ್ ಅವರನ್ನು ಪ್ರೀತಿಸುವ ಹೃದಯ ಹೊಂದಿರುವ, ಅತ್ಯಂತ ಕಾಳಜಿಯುಳ್ಳ ಮತ್ತು ಉದಾರ ವ್ಯಕ್ತಿ ಎಂದು ತಿಳಿದಿದ್ದೇನೆ. ಪ್ರಾಣಿಗಳ ಬಗ್ಗೆ ಅವನ ಸಹಾನುಭೂತಿ ಮತ್ತು ಸಹಾಯ ಮಾಡುವ ಮನೋಭಾವವು ಯಾವಾಗಲೂ ಅವನ ಸ್ವಭಾವದ ಭಾಗವಾಗಿದೆ. ಈ ಕೃತ್ಯವನ್ನು ಮಾಡುವ ವ್ಯಕ್ತಿತ್ವ ದರ್ಶನ್ ಅವರದ್ದಲ್ಲ ಎಂದು ನಾನು ನಂಬಿದ್ದೇನೆ. ಈ ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಈ ಬಗ್ಗೆ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ.

ದರ್ಶನ್ ಜೊತೆಗೆ ಅವನ ಪತ್ನಿ ವಿಜಯಲಕ್ಷ್ಮಿ ಮತ್ತು ಮುಗ್ಧ ಮಗನನ್ನು ಸಾಮಾಜಿಕ ಮಾಧ್ಯಮದಲ್ಲಿ ಗುರಿಯಾಗಿಸಿಕೊಂಡಿರುವುದು ತುಂಬಾ ಅನ್ಯಾಯವಾಗಿದೆ. ಅಷ್ಟೇ ಅಲ್ಲದೆ ಇತರೆ ಆರೋಪಿಗಳ ಬಡ ಕುಟುಂಬಗಳು ಕೂಡ ಸಂಕಷ್ಟಕ್ಕೆ ಸಿಲುಕಿರುವುದು ನೋವಿನ ಸಂಗತಿಯಾಗಿದೆ. ಸೋಷಿಯಲ್ ಮೀಡಿಯಾ ಬಳಕೆದಾರರು ಮತ್ತು ಸಾರ್ವಜನಿಕರು ಸಂತ್ರಸ್ತ ಅಥವಾ ಆರೋಪಿಯ ಕುಟುಂಬಗಳು, ಈಗಾಗಲೇ ಈ ಭಯಾನಕ ಪರಿಸ್ಥಿತಿಯನ್ನು ಎದುರಿಸುತ್ತಿರುವವರ ಮೇಲೆ ತಮ್ಮ ಕಾಮೆಂಟ್‌ಗಳು ಹೇಗೆ ಪರಿಣಾಮ ಬೀರಬಹುದು ಎಂಬುದನ್ನು ಪರಿಗಣಿಸಬೇಕು.

ದರ್ಶನ್ ನಿಂತಿರುವುದನ್ನು ನೋಡುವುದು ನನಗೆ ತುಂಬಾ ನೋವಿನ ಸಂಗತಿ

ತನಿಖೆ ನಡೆಯುತ್ತಿದೆ ಮತ್ತು ಪೊಲೀಸರು ತಮ್ಮ ಕೆಲಸವನ್ನು ಮಾಡುತ್ತಿದ್ದಾರೆ ಮತ್ತು ನಮ್ಮ ನ್ಯಾಯ ವ್ಯವಸ್ಥೆಯಲ್ಲಿ ನನಗೆ ಅಪಾರ ನಂಬಿಕೆಯಿದೆ. ದರ್ಶನ್ ಈ ಪ್ರಕರಣದಲ್ಲಿ ಆರೋಪಿಯಾಗಿದ್ದು, ಇನ್ನೂ ಯಾವುದೂ ಸಾಬೀತಾಗಿಲ್ಲ ಅಥವಾ ಶಿಕ್ಷೆಯಾಗಿಲ್ಲ. ಇದು ಕಾನೂನಿಗೆ ಬಿಟ್ಟದ್ದು ಮತ್ತು ಈ ಕುರಿತು ಈಗಾಗಲೇ ನಿರ್ಣಯಿಸುವುದು ಮತ್ತು ಶಿಕ್ಷೆ ವಿಧಿಸುವುದು ಬೇರೆ ಯಾರೂ ಅಲ್ಲ. ಈ ವಿಚಾರದಲ್ಲಿ ಅವರ ನಿಲುವು, ಸತ್ಯಾಸತ್ಯತೆಗಳನ್ನು ಸ್ಪಷ್ಟಪಡಿಸುವ ಅವಕಾಶವಾದರೂ ಇರಲಿ.

ಈ ಪರಿಸ್ಥಿತಿಯಲ್ಲಿ, ನಾನು ನೆಮ್ಮದಿಯಿಂದ, ಈ ಸಮಸ್ಯೆಯಿಂದ ದೂರವಿರುವುದು ಅಸಾಧ್ಯ.
ಇದು ನನ್ನದೇ ಕೌಟುಂಬಿಕ ಸಮಸ್ಯೆ. ಇದು ಅವರ ಜೀವನ ಮತ್ತು ಕುಟುಂಬದ ನೆಮ್ಮದಿ, ಭದ್ರತೆ, ಭವಿಷ್ಯಕ್ಕೆ ಸಂಬಂಧಪಟ್ಟಂತೆ ಅತ್ಯಂತ ಗಂಭೀರ ವಿಷಯ. ನಮಗೆಲ್ಲ ನೋವಾಗುತ್ತಿದೆ. ಚಿತ್ರರಂಗ ಅಸ್ತವ್ಯಸ್ತವಾಗಿದೆ. ಸಾವಿರ ಜನರ ಜೀವನೋಪಾಯ ಅವರ ಚಲನಚಿತ್ರ ನಿರ್ಮಾಣಗಳ ಮೇಲೆ ಅವಲಂಬಿತವಾಗಿದೆ. ಇದನ್ನು ಎದುರಿಸುವುದು ಯಾರಿಗೂ ಸುಲಭವಾಗಿರಲಿಲ್ಲ.

ಆಘಾತ ಮತ್ತು ಯಾತನೆಯ ಮನಸ್ಸಿನ ಸ್ಥಿತಿಯಿಂದ ಹೊರಬರಲು ಮತ್ತು ಹಲವು ಮೂಲಗಳಿಂದ ಬರುವ ಎಲ್ಲಾ ಗೊಂದಲಮಯ ಸುದ್ದಿಗಳನ್ನು ಅರ್ಥಮಾಡಿಕೊಳ್ಳಲು ನನ್ನನ್ನು ನಾನೇ ಸಮಾಧಾನಗೊಳಿಸಬೇಕಿತ್ತು. ಇದು ನಾನು ಸಾಂದರ್ಭಿಕವಾಗಿ ಪ್ರತಿಕ್ರಿಯಿಸಲು ಯಾವುದೋ ಸಿನಿಮಾ ಅಥವಾ ರಾಜಕೀಯ ಘಟನೆಯಲ್ಲ. ಈ ಬಗ್ಗೆ ಚರ್ಚಿಸಲು ಅಥವಾ ಅಂತಹ ಅಪರಾಧದಲ್ಲಿ ಆರೋಪಿಯಾಗಿ ದರ್ಶನ್ ನಿಂತಿರುವುದನ್ನು ನೋಡುವುದು ನನಗೆ ತುಂಬಾ ನೋವಿನ ಸಂಗತಿ ಎಂದು ಜನರು ಅರ್ಥಮಾಡಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ಆರೋಪಿಯಾಗಿರುವುದು ಎಂದರೆ ಅವನು ಅಪರಾಧಿ ಎಂದು ಅರ್ಥವಲ್ಲ ಎಂಬುದನ್ನು ನೆನಪಿನಲ್ಲಿಡೋಣ. ಬೇರೆಯವರಂತೆ ಕಾನೂನಾತ್ಮಕವಾಗಿ ತನ್ನನ್ನು ತಾನು ಸಮರ್ಥಿಸಿಕೊಳ್ಳುವ ಹಕ್ಕು ಅವರಿಗೂ ಇದೆ.

ದರ್ಶನ್ ಯಾವಾಗಲೂ ನನ್ನನ್ನು ಮದರ್ ಇಂಡಿಯಾ ಎಂದು ಕರೆಯುತ್ತಾರೆ ಮತ್ತು ನಾನು ಬದುಕಿರುವವರೆಗೂ ಅವನು ನನ್ನ ಹಿರಿಯ ಮಗನಾಗಿರುತ್ತಾನೆ. ನಮ್ಮ ಬಂಧ ಒಂದೇ ಮತ್ತು ಯಾವುದೂ ಅದನ್ನು ಬದಲಾಯಿಸಲು ಸಾಧ್ಯವಿಲ್ಲ. ಅವರ ತಾಯಿಯಾಗಿ ನಾನು ಸತ್ಯ ಹೊರಬರಲಿ ಮತ್ತು ಎಲ್ಲರಿಗೂ ನ್ಯಾಯ ಸಿಗಲಿ ಎಂದು ದೇವರಲ್ಲಿ ನಿರಂತರವಾಗಿ ಪ್ರಾರ್ಥಿಸುತ್ತಿದ್ದೇನೆ. ಅವರು ತಮ್ಮನ್ನು ತಾವು ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ ಮತ್ತು ಚಿತ್ರೀಕರಣ, ಸಾಮಾನ್ಯ ಜೀವನವನ್ನು ಪುನರಾರಂಭಿಸುತ್ತಾರೆ ಎಂದು ನಾನು ಭರವಸೆ ಹೊಂದಿದ್ದೇನೆ.

ಕಾನೂನಿಗಿಂತ ಮೇಲಲ್ಲ

ದರ್ಶನ್ ಅಭಿಮಾನಿಗಳಿಗೆ ಒಂದು ಹೃತ್ಪೂರ್ವಕ ವಿನಂತಿ, ದಯವಿಟ್ಟು ಶಾಂತವಾಗಿರಿ ಮತ್ತು ಈ ಕ್ಷಣದಲ್ಲಿ ಹೇಳಿಕೆಗಳನ್ನು ನೀಡಬೇಡಿ ಅಥವಾ ಯಾವುದೇ ನಕಾರಾತ್ಮಕತೆಗೆ ಪ್ರತಿಕ್ರಿಯಿಸಬೇಡಿ. ಅದು ಅವರ ಕುಟುಂಬ ಅಥವಾ ಹತ್ತಿರದವರ ಮೇಲೆ ಪರಿಣಾಮ ಬೀರಬಹುದು. ಇದು ಕೇವಲ ಕೆಟ್ಟ ಹಂತ, ಆದರೆ ಅವರಿಗೆ ನಮ್ಮೆಲ್ಲರ ನೈತಿಕ ಬೆಂಬಲದ ಅಗತ್ಯವಿದೆ. ಆದ್ದರಿಂದ ಎದೆಗುಂದಬೇಡಿ.

ನಮ್ಮಲ್ಲಿ ಯಾರೂ ಕಾನೂನಿಗಿಂತ ಮೇಲಲ್ಲ ಮತ್ತು ನಾವು ಅದನ್ನು ಗೌರವಿಸಬೇಕು, ಮತ್ತು ತಾಳ್ಮೆಯಿಂದ ಕಾಯಬೇಕು. ಒಳ್ಳೆಯ ಸಮಯ ಮರಳಲು ಪ್ರಾರ್ಥಿಸಬೇಕು.

ನಮ್ಮ ಕಾನೂನು ವ್ಯವಸ್ಥೆಯ ಮೇಲೆ ನಂಬಿಕೆ ಇರಲಿ.
ದೇವರಲ್ಲಿ ನಂಬಿಕೆಯಿರಲಿ.
ಎಲ್ಲವೂ ಸರಿಯಾಗುತ್ತವೆ.
ಸತ್ಯಮೇವ ಜಯತೇ ಎಂದು ಬರೆದುಕೊಂಡಿದ್ದರು.

Continue Reading
Advertisement
Bigg Boss Telugu 8 Astrologer Venu Swamy A Contestant
ಟಾಲಿವುಡ್5 mins ago

Bigg Boss Telugu 8: ಬಿಗ್‌ ಬಾಸ್‌ ಮನೆಗೆ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಎಂಟ್ರಿ?

Gold Rate Today
ಚಿನ್ನದ ದರ20 mins ago

Gold Rate Today: ಇಂದು ಏರಿಕೆಯಾಗಿಲ್ಲ ಚಿನ್ನದ ದರ; ಬೆಲೆ ಎಷ್ಟಿದೆ ನೋಡಿ

Physical Abuse
ಬೆಂಗಳೂರು26 mins ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Team India
ಕ್ರಿಕೆಟ್32 mins ago

Team India: ವಿಶ್ವಕಪ್ ಟ್ರೋಫಿ ಮೇಲೆ ಕಾಲಿಡುವುದು ನಮ್ಮ ಸಂಸ್ಕೃತಿಯಲ್ಲ ಎಂದು ತೋರಿಸಿಕೊಟ್ಟ ಟೀಮ್​ ಕ್ರಿಕೆಟಿಗರು

ಉದ್ಯೋಗ39 mins ago

Job Alert: ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 2,700 ಅಪ್ರೆಂಟಿಸ್ ಶಿಪ್ ಹುದ್ದೆ; ಆಯ್ಕೆಯಾಗಲು ಏನು ಮಾಡಬೇಕು? ವಿಸ್ತೃತ ಮಾಹಿತಿ

Actor Darshan SIM Secret Revealed investigation start
ಸ್ಯಾಂಡಲ್ ವುಡ್40 mins ago

Actor Darshan: ದರ್ಶನ್ ಬಳಸುತ್ತಿದ್ದ ಸಿಮ್ ಸೀಕ್ರೆಟ್‌ ರಿವೀಲ್; ಆಪ್ತರಿಗೆ ತಟ್ಟಿದೆ ವಿಚಾರಣೆ ಬಿಸಿ!

Brain-Eating Mmoeba
ಆರೋಗ್ಯ48 mins ago

Brain-Eating Amoeba: ಮೆದುಳು ತಿನ್ನುವ ಅಮೀಬಾಕ್ಕೆ ಮತ್ತೊಂದು ಬಲಿ; 2 ತಿಂಗಳ ಅಂತರದಲ್ಲಿ 3ನೇ ಪ್ರಕರಣ

Self Harming in bengaluru
ಬೆಂಗಳೂರು1 hour ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

salary hike cm siddaramaiah
ಪ್ರಮುಖ ಸುದ್ದಿ1 hour ago

Salary Hike: ಸರ್ಕಾರಿ ನೌಕರರ ವೇತನ ಏರಿಕೆ ಸದ್ಯಕ್ಕಿಲ್ಲ: ನೌಕರರ ಸಂಬಳ ನುಂಗಿದ ʼಗ್ಯಾರಂಟಿʼ!

Chaithra J Achar Kittale Roopanthara Raj B Shetty out
ಸ್ಯಾಂಡಲ್ ವುಡ್1 hour ago

Chaithra J Achar: ʻರೂಪಾಂತರʼ ಸಿನಿಮಾದ ಹಾಡು ರಿಲೀಸ್‌; ಇಳಕಲ್‌ ಸೀರೆಯಲ್ಲಿ ಮಿಂಚಿದ ಚೈತ್ರಾ ಆಚಾರ್!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast Rain
ಮಳೆ5 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ17 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ19 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ20 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ22 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ22 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ24 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ1 day ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ3 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ4 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಟ್ರೆಂಡಿಂಗ್‌