LPG Price Cut: ಎಲ್‌ಪಿಜಿ ಗ್ರಾಹಕರಿಗೆ ಗುಡ್‌ನ್ಯೂಸ್‌; ಕಮರ್ಷಿಯಲ್ ಅಡುಗೆ ಅನಿಲ ದರ 30 ರೂ. ಇಳಿಕೆ - Vistara News

ವಾಣಿಜ್ಯ

LPG Price Cut: ಎಲ್‌ಪಿಜಿ ಗ್ರಾಹಕರಿಗೆ ಗುಡ್‌ನ್ಯೂಸ್‌; ಕಮರ್ಷಿಯಲ್ ಅಡುಗೆ ಅನಿಲ ದರ 30 ರೂ. ಇಳಿಕೆ

LPG Price Cut: ಜುಲೈ 1ರಿಂದ ಜಾರಿಗೆ ಬರುವಂತೆ ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ತೂಕದ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 30 ರೂ. ಕಡಿಮೆ ಮಾಡಿವೆ. ಇದರೊಂದಿಗೆ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 30 ರೂ. ಕಡಿತಗೊಂಡು 1,726 ರೂ.ಗೆ ತಲುಪಿದೆ.

VISTARANEWS.COM


on

LPG Price Cut
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಜುಲೈ 1ರಿಂದ ಜಾರಿಗೆ ಬರುವಂತೆ ತೈಲ ಮಾರುಕಟ್ಟೆ ಕಂಪನಿಗಳು (OMCs) 19 ಕೆಜಿ ತೂಕದ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 30 ರೂ. ಕಡಿಮೆ ಮಾಡಿವೆ (LPG Price Cut). ಇದರೊಂದಿಗೆ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 30 ರೂ. ಕಡಿತಗೊಂಡು 1,726 ರೂ.ಗೆ ತಲುಪಿದೆ.

ಇನ್ನು ದೆಹಲಿಯಲ್ಲಿ ಪರಿಷ್ಕೃತ ದರ 1,646 ರೂ. ಆಗಿದೆ. ಹಿಂದೆ 1,676 ರೂ. ಆಗಿತ್ತು. ಮುಂಬೈಯಲ್ಲಿಯೂ 30 ರೂ. ಇಳಿಕೆಯಾಗಿದ್ದು ಹೊಸ ಬೆಲೆಯನ್ನು 1,598 ರೂ.ಗೆ ನಿಗದಿಪಡಿಸಲಾಗಿದೆ. ಕೋಲ್ಕತ್ತಾದಲ್ಲಿ ದರ ಪರಿಷ್ಕರಣೆಯ ಬಳಿಕ 1,756 ರೂ. ಇದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಪ್ರತಿ ತಿಂಗಳ 1ನೇ ತಾರೀಕಿನಂದು ಅಡುಗೆ ಅನಿಲ ಬೆಲೆಗಳನ್ನು ಪರಿಷ್ಕರಿಸುತ್ತವೆ. ಈ ರೀತಿಯ ಏರಿಳಿತಗಳು ಸಾಮಾನ್ಯವಾಗಿ ಇಂಧನ ವೆಚ್ಚಗಳು ಮತ್ತು ಮಾರುಕಟ್ಟೆ ಡೈನಾಮಿಕ್ಸ್ ಬದಲಾವಣೆಗಳಿಂದ ಪ್ರಭಾವಿತವಾಗಿರುತ್ತವೆ.

ವಾಣಿಜ್ಯ ಎಲ್‌ಪಿಜಿ ಬೆಲೆಗಳ ಕಡಿತವು ಈ ಸಿಲಿಂಡರ್‌ಗಳನ್ನೇ ಅವಲಂಬಿಸಿರುವ ವ್ಯವಹಾರಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ. ಜಾಗತಿಕ ತೈಲ ಮಾರುಕಟ್ಟೆಯ ಪ್ರವೃತ್ತಿಗಳನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುವುದಾಗಿ ಮತ್ತು ದೇಶಾದ್ಯಂತದ ಗ್ರಾಹಕರಿಗೆ ನ್ಯಾಯಯುತ ಬೆಲೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಹೊಂದಾಣಿಕೆಗಳನ್ನು ಮಾಡುವುದಾಗಿ ಒಎಂಸಿಗಳು ಭರವಸೆ ನೀಡಿವೆ.

ಸತತ ಇಳಿಕೆ

ಕಳೆದ ಕೆಲವು ತಿಂಗಳಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಕಡಿತಗೊಳಿಸಲಾಗುತ್ತಿದೆ. ಜೂನ್‌ 1ರಂದು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ 69.50 ರೂ. ಕಡಿಮೆ ಆಗಿತ್ತು. ಮೇ 1ರಂದು ದರ ಪರಿಷ್ಕರಿಸಿ 19 ರೂ. ಇಳಿಕೆ ಮಾಡಲಾಗಿತ್ತು. ಏಪ್ರಿಲ್‌ನಲ್ಲಿಯೂ 19 ಕೆಜಿಯ ಸಿಲಿಂಡರ್‌ ಬೆಲೆಯನ್ನು 30.50 ರೂ. ಇಳಿಸಲಾಗಿತ್ತು. ತೈಲ ಮಾರುಕಟ್ಟೆ ಕಂಪನಿಗಳು ಹಿಂದಿನ ಘೋಷಣೆಯನ್ನು ಮಾರ್ಚ್ 1ರಂದು ಮಾಡಿದ್ದು, ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಸಿಲಿಂಡರ್‌ಗಳ ದರಗಳನ್ನು ಹೆಚ್ಚಿಸಿದ್ದವು. ಆ ಸಮಯದಲ್ಲಿ, OMCಗಳು ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ (LPG) ಗ್ಯಾಸ್ ಸಿಲಿಂಡರ್ ಬೆಲೆಗಳಲ್ಲಿ 19 ಕೆಜಿ ವಾಣಿಜ್ಯ LPG ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳನ್ನು 25 ರೂ. ಹೆಚ್ಚಿಸಿದ್ದವು.

ಗೃಹಬಳಕೆಯ ಸಿಲಿಂಡರ್‌ ಬೆಲೆ ಯಥಾಸ್ಥಿತಿ

ಈ ಮಧ್ಯೆ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ಇಳಿಕೆ ಅಥವಾ ಏರಿಕೆ ಆಗಿಲ್ಲ. ಬೆಂಗಳೂರಿನಲ್ಲಿ ಗೃಹಬಳಕೆಯ ಸಿಲಿಂಡರ್‌ ಬೆಲೆ 805.50 ರೂ. ಇದೆ. ಇನ್ನು ದೆಹಲಿಯಲ್ಲಿ 803 ರೂ., ಕೋಲ್ಕತ್ತಾದಲ್ಲಿ 829 ರೂ., ಮುಂಬೈನಲ್ಲಿ 802.50 ರೂ., ಚೆನ್ನೈನಲ್ಲಿ 818.50 ರೂ. ಇದೆ. ವಿಶೇಷವೆಂದರೆ ಕಳೆದ ವರ್ಷ ಜೂನ್‌ನಲ್ಲಿ ದೆಹಲಿಯಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 1,103 ರೂ. ಇತ್ತು. ಆಗಸ್ಟ್‌ನಲ್ಲಿ ತೈಲ ಕಂಪನಿಗಳು 200 ರೂ.ಗಳ ಕಡಿತವನ್ನು ಘೋಷಿಸಿ 903 ರೂ.ಗೆ ಇಳಿಸಿದವು. ಬಳಿಕ 2024ರ ಮಾರ್ಚ್‌ನಲ್ಲಿ ಬೆಲೆಯನ್ನು ಮತ್ತೂ 100 ರೂ. ಕಡಿತಗೊಳಿಸಲಾಯಿತು.

ಇದನ್ನೂ ಓದಿ: Mohan Bhagwat: ಮುಕೇಶ್‌ ಅಂಬಾನಿ ನಿವಾಸಕ್ಕೆ ಆಗಮಿಸಿದ ಮೋಹನ್‌ ಭಾಗವತ್‌; ಕೈ ಮುಗಿದು ಸ್ವಾಗತಿಸಿದ ನೀತಾ ಅಂಬಾನಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿನ್ನದ ದರ

Gold Rate Today: ಇಂದು ಏರಿಕೆಯಾಗಿಲ್ಲ ಚಿನ್ನದ ದರ; ಬೆಲೆ ಎಷ್ಟಿದೆ ನೋಡಿ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ (ಜುಲೈ 5) ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಗುರುವಾರ ದರ ಏರಿಕೆಯಾಗಿ ಗ್ರಾಹಕರು ಕಂಗಾಲಾಗಿದ್ದರು. ಇಂದು ಯಥಾಸ್ಥಿತಿ ಕಾಯ್ದುಕೊಂಡಿರುವ ಹಿನ್ನಲೆಯಲ್ಲಿ ಗ್ರಾಹಕರು ತುಸು ಸಮಾಧಾನ ಪಟ್ಟುಕೊಂಡಿದ್ದಾರೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,700 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,309 ಇದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ (ಜುಲೈ 5) ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ (Gold Rate Today). ಗುರುವಾರ ದರ ಏರಿಕೆಯಾಗಿ ಗ್ರಾಹಕರು ಕಂಗಾಲಾಗಿದ್ದರು. ಇಂದು ಯಥಾಸ್ಥಿತಿ ಕಾಯ್ದುಕೊಂಡಿರುವ ಹಿನ್ನಲೆಯಲ್ಲಿ ಗ್ರಾಹಕರು ತುಸು ಸಮಾಧಾನ ಪಟ್ಟುಕೊಂಡಿದ್ದಾರೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,700 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,309 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 53,600. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 67,000 ಮತ್ತು ₹ 6,70,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 58,472 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 73,090 ಮತ್ತು ₹ 7,30,900 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,715₹ 7,324
ಮುಂಬೈ₹ 6,700 ₹ 7,309
ಬೆಂಗಳೂರು₹ 6,700₹ 7,309
ಚೆನ್ನೈ₹ 6,760 ₹ 7,375

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆ ಕೂಡ ಏರಿಕೆಯಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 90.70 ಹಾಗೂ 8 ಗ್ರಾಂಗೆ ₹ 725.60 ಇದೆ. 10 ಗ್ರಾಂಗೆ ₹ 907 ಹಾಗೂ 1 ಕಿಲೋಗ್ರಾಂಗೆ ₹ 90,700 ಬೆಲೆ ಬಾಳುತ್ತದೆ.

ಚಿನ್ನದ ಕ್ಯಾರಟ್‌ ಎಂದರೇನು?

ಚಿನ್ನದ ಕ್ಯಾರಟ್‌ ಎಂಬುದು ಚಿನ್ನದ ಶುದ್ಧತೆಯನ್ನು ಅಳೆಯಲು ಬಳಸುವ ಪದ. ಚಿನ್ನದ ಶುದ್ಧತೆಯನ್ನು ಅಳೆಯಲು ಕ್ಯಾರಟ್ ಅನ್ನು ಒಂದು ಘಟಕವಾಗಿ ಬಳಸಲಾಗುತ್ತದೆ. ಕ್ಯಾರಟೇಜ್ ಹೆಚ್ಚು‌ ಇದ್ದಷ್ಟೂ ಚಿನ್ನವು ಶುದ್ಧವಾಗಿರುತ್ತದೆ. ಇತರ ಲೋಹಗಳೊಂದಿಗೆ ಮಿಶ್ರಿತ ಚಿನ್ನದ ಶುದ್ಧತೆಯ ಮಾಪನವೇ ‘ಕ್ಯಾರಟೇಜ್’. ಕ್ಯಾರಟ್‌ನ ಚಿಹ್ನೆಯು “K”

24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರಟ್ ಚಿನ್ನದಿಂದ ಖರೀದಿಸಲಾಗುತ್ತದೆ.

24 ಕ್ಯಾರಟ್ ಚಿನ್ನ ಮೃದುವಾಗಿರುತ್ತದೆ, ಕಡಿಮೆ ಸಾಂದ್ರತೆಯದಾಗಿರುತ್ತದೆ. ಆದ್ದರಿಂದ ಆಭರಣಗಳನ್ನು ಮಾಡಲು ಇದು ಸೂಕ್ತವಲ್ಲ. ಕಿವಿ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಬಳಸುವಂತಹ ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಸಾಧನಗಳಲ್ಲಿ 24k ಚಿನ್ನವನ್ನು ಬಳಸಲಾಗುತ್ತದೆ.

22 ಕ್ಯಾರೆಟ್ ಚಿನ್ನ ಇದರಲ್ಲಿ 22 ಭಾಗಗಳಲ್ಲಿ ಚಿನ್ನ ಹಾಗೂ ಉಳಿದ ಎರಡು ಭಾಗಗಳಲ್ಲಿ ಕೆಲವು ಇತರ ಲೋಹಗಳಿರುತ್ತವೆ. ಆಭರಣಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿ, ಸತು, ನಿಕಲ್ ಮತ್ತು ಇತರ ಮಿಶ್ರಲೋಹಗಳಂತಹ ಇತರ ಲೋಹಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ಚಿನ್ನದ ವಿನ್ಯಾಸವನ್ನು ಗಟ್ಟಿಗೊಳಿಸುತ್ತದೆ ಮತ್ತು ಆಭರಣವನ್ನು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ. 22 ಕ್ಯಾರಟ್ ಚಿನ್ನವು 91.67 ಪ್ರತಿಶತ ಚಿನ್ನವನ್ನು ಹೊಂದಿದ್ದು, ಉಳಿದ 8.33 ಪ್ರತಿಶತ ಬೇರೆ ಲೋಹಗಳಿಂದ ಮಾಡಲ್ಪಟ್ಟಿರುತ್ತದೆ.

18 ಕ್ಯಾರಟ್ ಚಿನ್ನವು 75 ಪ್ರತಿಶತ ಚಿನ್ನವನ್ನು ಒಳಗೊಂಡಿರುತ್ತದೆ. ಉಳಿದ ತಾಮ್ರ ಅಥವಾ ಬೆಳ್ಳಿಯಂತಹ ಇತರ ಲೋಹಗಳ 25 ಪ್ರತಿಶತದೊಂದಿಗೆ ಮಿಶ್ರಣವಾಗಿರುತ್ತದೆ. ಸ್ಟಡೆಡ್ ಆಭರಣಗಳು ಮತ್ತು ವಜ್ರದ ಆಭರಣಗಳನ್ನು 18 ಕ್ಯಾರಟ್ ಚಿನ್ನವನ್ನು ಬಳಸಿ ತಯಾರಿಸಲಾಗುತ್ತದೆ.

ಇದನ್ನೂ ಓದಿ: Stock Market: ಷೇರು ಮಾರುಕಟ್ಟೆಯಲ್ಲಿ ಮುಂದುವರಿದ ಗೂಳಿಯ ಅಬ್ಬರ; ಸಾರ್ವಕಾಲಿಕ ಎತ್ತರಕ್ಕೆ ಜಿಗಿದ ಸೆನ್ಸೆಕ್ಸ್

Continue Reading

ಉದ್ಯೋಗ

Job Alert: ಬ್ಯಾಂಕ್‌ ಆಫ್‌ ಬರೋಡಾದ 627 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ಇಲ್ಲಿದೆ ಹೊಸ ಟೈಮ್‌ ಟೇಬಲ್‌

Job Alert: ದೇಶದ ಪ್ರತಿಷ್ಠಿತ ಬ್ಯಾಂಕ್‌ ಆಫ್‌ ಬರೋಡಾ ತನ್ನಲ್ಲಿ ಖಾಲಿ ಇರುವ 627 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಪದವಿ ಪಡೆದ, ಕಂಪ್ಯೂಟರ್‌ ಜ್ಞಾನ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಹುದು. ಈ ಹಿಂದೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜುಲೈ 2 ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು ವಿಸ್ತರಿಸಲಾಗಿದ್ದು, ಆಸಕ್ತರು ಜುಲೈ 12ರ ತನಕ ಅಪ್ಲೈ ಮಾಡಬಹುದು. ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ವಿವರ ಇಲ್ಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಬ್ಯಾಂಕ್‌ನಲ್ಲಿ ಉದ್ಯೋಗ ನಿರ್ವಹಿಸಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಭರ್ಜರಿ ಅವಕಾಶ. ದೇಶದ ಪ್ರತಿಷ್ಠಿತ ಬ್ಯಾಂಕ್‌ ಆಫ್‌ ಬರೋಡಾ (Bank of Baroda) ತನ್ನಲ್ಲಿ ಖಾಲಿ ಇರುವ 627 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಪದವಿ ಪಡೆದ, ಕಂಪ್ಯೂಟರ್‌ ಜ್ಞಾನ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಹುದು (Bank of Baroda Recruitment 2024). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಈ ಹಿಂದೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜುಲೈ 2 ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು ವಿಸ್ತರಿಸಲಾಗಿದ್ದು, ಆಸಕ್ತರು ಜುಲೈ 12ರ ತನಕ ಅಪ್ಲೈ ಮಾಡಬಹುದು (Job Alert).

ಹುದ್ದೆಗಳ ವಿವರ

627 ಹುದ್ದೆಗಳ ಪೈಕಿ 459 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಮತ್ತು 168 ಹುದ್ದೆಗಳನ್ನು ನಿಯಮಿತ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ.

ಡೆಪ್ಯುಟಿ ವೈಸ್ ಪ್ರೆಸಿಡೆಂಟ್ – ಡಾಟಾ ಸೈಂಟಿಸ್ಟ್ & ಡಾಟಾ ಎಂಜಿನಿಯರ್: 4 ಹುದ್ದೆ
ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್ – ಡಾಟಾ ಸೈಂಟಿಸ್ಟ್ & ಡಾಟಾ ಎಂಜಿನಿಯರ್: 9 ಹುದ್ದೆ
ಆರ್ಕಿಟೆಕ್ಟ್: 8 ಹುದ್ದೆ
ಜೋನಲ್ ಸೇಲ್ಸ್ ಮ್ಯಾನೇಜರ್: 3 ಹುದ್ದೆ
ಅಸಿಸ್ಟೆಂಟ್ ವೈಸ್ಪ್ರೆಸಿಡೆಂಟ್: 20 ಹುದ್ದೆ
ಸೀನಿಯರ್ ಮ್ಯಾನೇಜರ್: 22 ಹುದ್ದೆ
ಮ್ಯಾನೇಜರ್: 11 ಹುದ್ದೆ
ರೇಡಿಯನ್ಸ್ ಪ್ರೈವೇಟ್ ಸೇಲ್ಸ್ ಹೆಡ್: 1 ಹುದ್ದೆ
ಗ್ರೂಪ್ ಹೆಡ್: 4 ಹುದ್ದೆ
ಟೆರಿಟರಿ ಹೆಡ್: 8 ಹುದ್ದೆ
ಸೀನಿಯರ್ ರಿಲೇಶನ್‌ಶಿಪ್‌ ಮ್ಯಾನೇಜರ್: 234 ಹುದ್ದೆ
ಇ-ವೆಲ್ತ್ ರಿಲೇಶನ್‌ಶಿಪ್‌ ಮ್ಯಾನೇಜರ್: 26 ಹುದ್ದೆ
ಪ್ರೈವೇಟ್ ಬ್ಯಾಂಕರ್-ರೇಡಿಯನ್ಸ್ ಪ್ರೈವೇಟ್: 12 ಹುದ್ದೆ
ಗ್ರೂಪ್ ಸೇಲ್ಸ್ ಹೆಡ್ (ವರ್ಚುವಲ್ ಆರ್‌ಎಂ ಸೇಲ್ಸ್ ಹೆಡ್): 1 ಹುದ್ದೆ
ವೆಲ್ತ್ ಸ್ಟ್ರಾಟಜಿಸ್ಟ್ (ಇನ್ವೆಸ್‌ಮೆಂಟ್‌ & ಇನ್ಶೂರೆನ್ಸ್)/ ಪ್ರಾಡಕ್ಟ್ ಹೆಡ್: 10 ಹುದ್ದೆ
ಪೋರ್ಟ್ಫೋಲಿಯೊ ರಿಸರ್ಚ್ ಅನಾಲಿಸ್ಟ್: 1 ಹುದ್ದೆ
ಎವಿಪಿ- ಅಕ್ವಿಸಿಷನ್ & ರಿಲೇಶನ್‌ಶಿಪ್‌ ಮ್ಯಾನೇಜರ್: 19 ಹುದ್ದೆ
ಫಾರೆಕ್ಸ್ ಅಕ್ವಿಸಿಷನ್ & ರಿಲೇಶನ್‌ಶಿಪ್‌ ಮ್ಯಾನೇಜರ್: 15 ಹುದ್ದೆ
ಕ್ರೆಡಿಟ್ ಅನಾಲಿಸ್ಟ್: 80 ಹುದ್ದೆ
ರಿಲೇಶನ್‌ಶಿಪ್‌ ಮ್ಯಾನೇಜರ್: 66 ಹುದ್ದೆ
ಸೀನಿಯರ್ ಮ್ಯಾನೇಜರ್- ಬಿಸಿನೆಸ್ ಫೈನಾನ್ಸ್: 4 ಹುದ್ದೆ
ಚೀಫ್ ಮ್ಯಾನೇಜರ್- ಇಂಟರ್ನಲ್ ಕಂಟ್ರೋಲ್ಸ್‌ – 3 ಹುದ್ದೆಗಳಿವೆ.

ವಿದ್ಯಾರ್ಹತೆ

ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಕೃಷಿ, ಪಶುವೈದ್ಯಕೀಯ ವಿಜ್ಞಾನ, ಸಮಾಜಶಾಸ್ತ್ರ, ಮನಃಶಾಸ್ತ್ರ ಮತ್ತು ಸಮಾಜ ಕಾರ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ. ಅಭ್ಯರ್ಥಿಗಳು ಸ್ಥಳೀಯ ಭಾಷೆ ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಔದ್ಯೋಗಿಕ ಅನುಭವ ಕಡ್ಡಾಯ.

ಅರ್ಜಿ ಶುಲ್ಕ ಮತ್ತು ವಯೋಮಿತಿ

ಅರ್ಜಿ ಶುಲ್ಕವಾಗಿ ಸಾಮಾನ್ಯ, ಇಡಬ್ಲ್ಯುಎಸ್‌ ಮತ್ತು ಒಬಿಎಸ್ ವರ್ಗಗಳಿಗೆ ಸೇರಿದ ಅರ್ಜಿದಾರರು 600 ರೂ., ಎಸ್‌ಸಿ, ಎಸ್‌ಟಿ, ಅಂಗವಿಕಲ ಮತ್ತು ಮಹಿಳಾ ವರ್ಗಗಳಿಗೆ ಸೇರಿದ ಅರ್ಜಿದಾರರು 199 ರೂ. ಪಾವತಿಸಬೇಕಾಗುತ್ತದೆ. ಇದಕ್ಕೆ ತೆರಿಗೆ ಪ್ರತ್ಯೇಕ. ವಿವಿಧ ಹುದ್ದೆಗಳಿಗೆ ಅನುಗುಣವಾಗಿ 24 ವರ್ಷಗಳಿಂದ 60 ವರ್ಷದೊಳಗಿನವರು ಅರ್ಜಿ ಸಲ್ಲಿಬಹುದು.

ಆಯ್ಕೆ ವಿಧಾನ

ಆನ್‌ಲೈನ್‌ ಪರೀಕ್ಷೆ, ಗ್ರೂಪ್‌ ಡಿಸ್ಕಷನ್‌, ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಕರ್ನಾಟಕದಲ್ಲಿ ಬೆಂಗಳೂರಿನಲ್ಲಿ ಪರೀಕ್ಷೆ ಆಯೋಜಿಸಲಾಗುತ್ತದೆ.

ದಿನಾಂಕ ವಿಸ್ತರಣೆಯ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ನಿಯಮಿತ ಆಧಾರದಲ್ಲಿನ ನೇಮಕಾತಿಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಗುತ್ತಿಗೆ ಆಧಾರದಲ್ಲಿನ ನೇಮಕಾತಿಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಗಮನಿಸಿ ಅರ್ಜಿ ಸಲ್ಲಿಕೆ ದಿನಾಂಕ ಬದಲಾಗಿದ್ದು, ಉಳಿದೆಲ್ಲ ವಿವರಗಳಲ್ಲಿ ಯಾವುದೇ ಬದಲಾವಣೆ ಇಲ್ಲ.

ಅರ್ಜಿ ಸಲ್ಲಿಸಲುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://www.bankofbaroda.in/career/current-opportunities)
  • ನೀವು ಅರ್ಜಿ ಸಲ್ಲಿಸಬೇಕಿರುವ ಹುದ್ದೆಯ ಮೇಲೆ ಕ್ಲಿಕ್‌ ಮಾಡಿ.
  • ಅಗತ್ಯ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
  • ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: HCLನಲ್ಲಿ ಖಾಲಿ ಇರುವ 56 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ 1 ಲಕ್ಷ ರೂ.ವರೆಗೆ: ಇಂದೇ ಅಪ್ಲೈ ಮಾಡಿ

Continue Reading

ಚಿನ್ನದ ದರ

Gold Rate Today: ಕೈ ಸುಡುತಿದೆ ಚಿನ್ನದ ದರ; ಆಭರಣ ಖರೀದಿಸುವ ಮುನ್ನ ಬೆಲೆ ಚೆಕ್‌ ಮಾಡಿ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ (ಜುಲೈ 4) ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಮಂಗಳವಾರ ಹೆಚ್ಚಾಗಿದ್ದ ದರ ಇಂದು ಮತ್ತೊಮ್ಮೆ ಏರಿಕೆಯಾಗಿ ಗ್ರಾಹಕರಿಗೆ ಹೊರೆಯಾಗಿ ಪರಿಣಮಿಸಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 65 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 71 ಹೆಚ್ಚಾಗಿದೆ. 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,700 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,309ಕ್ಕೆ ತಲುಪಿದೆ. ಇಲ್ಲಿದೆ ಸಂಪೂರ್ಣ ವಿವರ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ (ಜುಲೈ 4) ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. (Gold Rate Today). ಮಂಗಳವಾರ ಹೆಚ್ಚಾಗಿದ್ದ ದರ ಇಂದು ಮತ್ತೊಮ್ಮೆ ಏರಿಕೆಯಾಗಿ ಗ್ರಾಹಕರಿಗೆ ಹೊರೆಯಾಗಿ ಪರಿಣಮಿಸಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 65 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 71 ಹೆಚ್ಚಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,700 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,309ಕ್ಕೆ ತಲುಪಿದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 53,600. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 67,000 ಮತ್ತು ₹ 6,70,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 58,472 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 73,090 ಮತ್ತು ₹ 7,30,900 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,715 ₹ 7,324
ಮುಂಬೈ₹ 6,700 ₹ 7,309
ಬೆಂಗಳೂರು₹ 6,700 ₹ 7,309
ಚೆನ್ನೈ₹ 6,760 ₹ 7,375

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆ ಕೂಡ ಏರಿಕೆಯಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 90.60 ಹಾಗೂ 8 ಗ್ರಾಂಗೆ ₹ 724.80 ಇದೆ. 10 ಗ್ರಾಂಗೆ ₹ 906 ಹಾಗೂ 1 ಕಿಲೋಗ್ರಾಂಗೆ ₹ 90,600 ಬೆಲೆ ಬಾಳುತ್ತದೆ.

ಚಿನ್ನ ಯಾಕೆ ದುಬಾರಿಯಾಗುತ್ತಿದೆ?

ಚಿನ್ನದಲ್ಲಿ ಹೂಡಿಕೆ ಸುರಕ್ಷಿತವಾಗಿರುವುದರಿಂದಲೇ ಚಿನ್ನ ಹೆಚ್ಚು ದುಬಾರಿಯಾಗುತ್ತಿದೆ. ಆರ್ಥಿಕ ಅನಿಶ್ಚಿತತೆ, ಭೌಗೋಳಿಕ, ರಾಜಕೀಯ ಪ್ರಕ್ಷುಬ್ಧತೆಯ ಅವಧಿಯಲ್ಲಿ ಸ್ಥಿರತೆಯನ್ನು ಬಯಸುವ ಹೂಡಿಕೆದಾರರಿಗೆ ಚಿನ್ನದ ಮೇಲಿನ ಹೂಡಿಕೆಯು ಹೆಚ್ಚು ಸುರಕ್ಷಿತವಾಗಿ ಕಾಣುತ್ತಿದೆ. ಹೀಗಾಗಿಯೇ ಚಿನ್ನದ ದರ ಗಗನಕ್ಕೇರುತ್ತಿದೆ.

ಹಣದುಬ್ಬರ: ಚಿನ್ನವನ್ನು ಸಾಮಾನ್ಯವಾಗಿ ಹಣದುಬ್ಬರದ ವಿರುದ್ಧ ಹೂಡಿಕೆ ಎಂದು ಪರಿಗಣಿಸಲಾಗಿದೆ. ದೇಶದಲ್ಲಿ ಹೊಸ ನೋಟು, ನಾಣ್ಯಗಳನ್ನು ಹೊರತರಬೇಕಾದರೆ ಅಷ್ಟೇ ಪ್ರಮಾಣದ ಚಿನ್ನವನ್ನು ಆರ್‌ಬಿಐ ತೆಗೆದಿರುಸುತ್ತದೆ. ದೇಶದಲ್ಲಿ ಹಣದುಬ್ಬರದ ಒತ್ತಡದಿಂದಾಗಿ ಕರೆನ್ಸಿಗಳ ಮೌಲ್ಯ ಕಡಿಮೆಯಾಗುತ್ತದೆ. ಆಗ ಚಿನ್ನದ ಬೆಲೆ ತನ್ನಿಂತಾನೇ ಏರಿಕೆಯಾಗುತ್ತದೆ. ಈ ಮೂಲಕ ದೇಶದಲ್ಲಿ ಕರೆನ್ಸಿಗಳ ಮೌಲ್ಯ ಕಾಪಾಡಿಕೊಳ್ಳಬಹುದು.

ಜಾಗತಿಕ ಉದ್ವಿಗ್ನತೆಗಳು: ಇತ್ತೀಚಿನ ದಿನಗಳಲ್ಲಿ ಭೌಗೋಳಿಕ, ರಾಜಕೀಯ ಘರ್ಷಣೆಗಳು ಮಾರುಕಟ್ಟೆಯ ಅಸ್ಥಿರತೆಯನ್ನು ಉಂಟು ಮಾಡುತ್ತಿದೆ. ಇದು ಹೂಡಿಕೆದಾರರಿಗೆ ಚಿನ್ನದಂತಹ ಸುರಕ್ಷಿತ ಸ್ವತ್ತುಗಳನ್ನು ಖರೀದಿಸಲು ಪ್ರೇರೇಪಿಸುತ್ತದೆ. ಭೌಗೋಳಿಕ ರಾಜಕೀಯ ಅನಿಶ್ಚಿತತೆಯ ಸಮಯದಲ್ಲಿ ಅದು ಮೌಲ್ಯವನ್ನು ಉಳಿಸಿಕೊಳ್ಳುತ್ತದೆ. ಉಕ್ರೇನ್‌ ಯುದ್ಧ ಮುಂದುವರಿಯುತ್ತಿರುವಾಗಲೇ ಈಗ ಇರಾನ್‌-ಇಸ್ರೇಲ್‌ ಯುದ್ಧದ ಛಾಯೆ ಆವರಿಸಿದೆ. ಇಂಥ ಸನ್ನಿವೇಶದಲ್ಲಿ ಸಹಜವಾಗಿಯೇ ಚಿನ್ನದ ಮೇಲಿನ ಹೂಡಿಕೆ ಹೆಚ್ಚುತ್ತದೆ. ಆಗ ದರ ಏರಿಕೆಯಾಗುತ್ತದೆ.

ಚೀನಾದ ಪ್ರಭಾವ: ಇತ್ತೀಚೆಗೆ ಚೀನಾದಲ್ಲಿ ಚಿನ್ನದ ಬೇಡಿಕೆ ಹೆಚ್ಚುತ್ತಿದೆ. ಚೀನಾದ ಸೆಂಟ್ರಲ್ ಬ್ಯಾಂಕ್ ತನ್ನ ಸಂಗ್ರಹಕ್ಕೆ ಗಣನೀಯ ಪ್ರಮಾಣದ ಚಿನ್ನವನ್ನು ಸೇರಿಸುತ್ತಿದೆ. ಇದು ಅಮೆರಿಕ ಮತ್ತು ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ.

ಕಡಿಮೆ ಬಡ್ಡಿ ದರಗಳು: ಬ್ಯಾಂಕ್‌ಗಳಲ್ಲಿ ಬಡ್ಡಿ ದರಗಳು ಕಡಿಮೆಯಾದಾಗ ಜನರಲ್ಲಿ ಹಣದ ಹರಿವಿನ ಪ್ರಮಾಣ ಹೆಚ್ಚಳವಾಗುತ್ತದೆ. ಇದರಿಂದ ಚಿನ್ನ ಖರೀದಿ ಪ್ರಮಾಣ ಹೆಚ್ಚಾಗುತ್ತದೆ. ಇದು ಚಿನ್ನದ ಹೆಚ್ಚಿನ ಬೇಡಿಕೆ ಮತ್ತು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತದೆ.

ಹೂಡಿಕೆ ಮಾಡಬಹುದೆ?: ಚಿನ್ನದ ಬೆಲೆಗಳು ಹೆಚ್ಚಾದಾಗ ಸಾಮಾನ್ಯವಾಗಿ ಇದು ಗ್ರಾಹಕರ ಖರೀದಿ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಮೊದಲೇ ಚಿನ್ನದ ಮೇಲೆ ಹೂಡಿಕೆ ಮಾಡಬೇಕು. ಇದರಿಂದ ಮಾರುಕಟ್ಟೆಯಲ್ಲಿ ಏರಿಳಿತದ ಅಪಾಯ ಕೊಂಚ ಕಡಿಮೆಯಾಗುತ್ತದೆ. ಹೂಡಿಕೆಯ ಉದ್ದೇಶವನ್ನು ಮೊದಲೇ ನಿರ್ಣಯಿಸುವುದು ಮತ್ತು ಪರ್ಯಾಯ ಮಾರ್ಗಗಳನ್ನು ಅನ್ವೇಷಿಸುವುದು ಕೂಡ ಬಹಳ ಮುಖ್ಯ. ಉದಾಹರಣೆಗೆ ಮದುವೆ ಅಥವಾ ಹಬ್ಬಗಳಂತಹ ವಿಶೇಷ ಸಂದರ್ಭಗಳಲ್ಲಿ ಚಿನ್ನವನ್ನು ಖರೀದಿಸುವ ಉದ್ದೇಶ ಮೊದಲೇ ಇರುತ್ತದೆ. ಇದಕ್ಕೆ ಮುಂಚಿತವಾಗಿ ಹೂಡಿಕೆ ಮಾಡಬಹುದು. ಇದರಿಂದ ಬೆಲೆಗಳು ಸ್ಥಿರವಾಗಿದ್ದಾಗ ತಕ್ಷಣ ಖರೀದಿ ಮಾಡಬಹುದು.

ಇದನ್ನೂ ಓದಿ: Price Hike: ಮೊಬೈಲ್ ಕಂಪನಿಗಳಿಂದ ದರ ಏರಿಕೆ; ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬಹುದೆ?

    Continue Reading

    ವಾಣಿಜ್ಯ

    Stock Market: ಷೇರು ಮಾರುಕಟ್ಟೆಯಲ್ಲಿ ಮುಂದುವರಿದ ಗೂಳಿಯ ಅಬ್ಬರ; ಸಾರ್ವಕಾಲಿಕ ಎತ್ತರಕ್ಕೆ ಜಿಗಿದ ಸೆನ್ಸೆಕ್ಸ್

    Stock Market: ಭಾರತೀಯ ಷೇರು ಮಾರುಕಟ್ಟೆಯಲ್ಲಿ ಗೂಳಿ ಅಬ್ಬರ ಜೋರಾಗಿದೆ. ಗುರುವಾರ ಕೂಡ ಸೆನ್ಸೆಕ್ಸ್  ಮತ್ತು ನಿಫ್ಟಿ ಜಿಗಿದು ನೂತನ ದಾಖಲೆ ಬರೆದಿದೆ. ಇಂದು ವಹಿವಾಟು ಆರಂಭವಾದ ಕೆಲ ಹೊತ್ತಿನಲ್ಲೇ ಸೆನ್ಸೆಕ್ಸ್‌ 336.51 ಅಂಕ ಅಥವಾ ಶೇ. 0.42 ಏರಿಕೆಯೊಂದಿಗೆ ಸಾರ್ವಕಾಲಿಕ 80,323.30 ಗಡಿ ತಲುಪಿದೆ. ಇನ್ನು ನಿಫ್ಟಿ 83.50 ಪಾಯಿಂಟ್‌ ಅಥವಾ ಶೇ. 0.34 ಹೆಚ್ಚಳದೊಂದಿಗೆ 24 ಸಾವಿರದ ಗಡಿ ದಾಟಿ 24,370ಕ್ಕೆ ಏರಿದೆ. ಬುಧವಾರ ಸೆನ್ಸೆಕ್ಸ್ 570ಕ್ಕೂ ಅಧಿಕ ಅಂಕಗಳ ಜಿಗಿತವನ್ನು ಕಂಡು ಮೊದಲ ಬಾರಿಗೆ 80 ಸಾವಿರ ಅಂಕಗಳ ಗಡಿ ದಾಟಿತ್ತು.

    VISTARANEWS.COM


    on

    Stock Market
    Koo

    ಮುಂಬೈ: ಭಾರತೀಯ ಷೇರು ಮಾರುಕಟ್ಟೆ (Stock Market)ಯಲ್ಲಿ ಗೂಳಿ ಅಬ್ಬರ ಜೋರಾಗಿದೆ. ಗುರುವಾರ (ಜುಲೈ 3) ಕೂಡ ಸೆನ್ಸೆಕ್ಸ್ (Sensex) ಮತ್ತು ನಿಫ್ಟಿ (Nifty) ಜಿಗಿದು ನೂತನ ದಾಖಲೆ ಬರೆದಿದೆ. ಇಂದು ವಹಿವಾಟು ಆರಂಭವಾದ ಕೆಲ ಹೊತ್ತಿನಲ್ಲೇ ಸೆನ್ಸೆಕ್ಸ್‌ 336.51 ಅಂಕ ಅಥವಾ ಶೇ. 0.42 ಏರಿಕೆಯೊಂದಿಗೆ ಸಾರ್ವಕಾಲಿಕ 80,323.30 ಗಡಿ ತಲುಪಿದೆ. ಇನ್ನು ನಿಫ್ಟಿ 83.50 ಪಾಯಿಂಟ್‌ ಅಥವಾ ಶೇ. 0.34 ಹೆಚ್ಚಳದೊಂದಿಗೆ 24 ಸಾವಿರದ ಗಡಿ ದಾಟಿ 24,370ಕ್ಕೆ ಏರಿದೆ.

    ಬುಧವಾರ ಸೆನ್ಸೆಕ್ಸ್ 570ಕ್ಕೂ ಅಧಿಕ ಅಂಕಗಳ ಜಿಗಿತವನ್ನು ಕಂಡು ಮೊದಲ ಬಾರಿಗೆ 80 ಸಾವಿರ ಅಂಕಗಳ ಗಡಿ ದಾಟಿತ್ತು. ಜತೆಗೆ ನಿಫ್ಟಿ ಕೂಡ 24,291.75 ಅಂಕಗಳ ಹೊಸ ಶಿಖರ ಏರಿತ್ತು. ಜಾಗತಿಕವಾಗಿ ಪೂರಕ ವಾತಾವರಣ ಕಂಡು ಬಂದಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಈ ಸಂಚಲನ ಮೂಡಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಜೂನ್ 10ರ ನಂತರ ಇಲ್ಲಿಯವರೆಗೆ ಸೆನ್ಸೆಕ್ಸ್‌ನಲ್ಲಿ 3,000ಕ್ಕೂ ಹೆಚ್ಚು ಪಾಯಿಂಟ್‌ಗಳು ಏರಿವೆ. ವಿಶೇಷ ಎಂದರೆ 1980ರ ದಶಕದಲ್ಲಿ ಪ್ರಾರಂಭವಾದ ನಂತರ ಸೆಕ್ಸೆಕ್ಸ್‌ ಮೊದಲ ಬಾರಿಗೆ 80,400ರ ಗಡಿಯನ್ನು ಸಮೀಪಿಸಿದೆ. ಭಾರತದಲ್ಲಿ ಮಾನ್ಸೂನ್ ಪ್ರಗತಿಯೂ ಹೂಡಿಕೆದಾರರ ವಿಶ್ವಾಸವನ್ನು ಹೆಚ್ಚಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

    ಎಚ್‌ಸಿಎಲ್‌ ಟೆಕ್, ಐಸಿಐಸಿಐ ಬ್ಯಾಂಕ್, ಟಾಟಾ ಮೋಟಾರ್ಸ್, ಎಂ & ಎಂ, ಟಿಸಿಎಸ್, ಬಜಾಜ್ ಫೈನಾನ್ಸ್, ಟಾಟಾ ಸ್ಟೀಲ್ ಮತ್ತು ಟೆಕ್ ಎಂ ಮುಂತಾದ ಪ್ರಮುಖ ಲಾರ್ಜ್ ಕ್ಯಾಪ್ ಷೇರುಗಳಲ್ಲಿ ಶೇ. 1.35ರಷ್ಟು ಏರಿಕೆಯಾಗಿದೆ. ಜತೆಗೆ ಬಿಎಸ್ಇ ಮಿಡ್‌ಕ್ಯಾಪ್‌ ಮತ್ತು ಸ್ಮಾಲ್‌ಕ್ಯಾಪ್‌ ಸೆನ್ಸೆಕ್ಸ್ ಕ್ರಮವಾಗಿ ಶೇ. 0.36 ಮತ್ತು ಶೇ. 0.57ರಷ್ಟು ಏರಿಕೆ ದಾಖಲಿಸಿವೆ. ಇನ್ನು ಎಚ್‌ಡಿಎಫ್‌ಸಿ ಬ್ಯಾಂಕ್, ಸಿಪ್ಲಾ, ಡಾ.ರೆಡ್ಡೀಸ್, ಶ್ರೀರಾಮ್ ಫೈನಾನ್ಸ್ ಮತ್ತು ಅದಾನಿ ಎಂಟರ್‌ಟೈನ್‌ಮೆಂಟ್‌ ಹೆಚ್ಚು ನಷ್ಟ ಅನುಭವಿಸಿದ ಷೇರುಗಳಾಗಿವೆ.

    ದೇಶೀಯ ಮಾರುಕಟ್ಟೆಯ ಜತೆಗೆ ಜಾಗತಿಕ ಮಾರುಕಟ್ಟೆಗಳೂ ಸಕಾರಾತ್ಮಕವಾಗಿ ಸ್ಪಂದಿಸಿವೆ. ಟೆಕ್ ಷೇರುಗಳ ಲಾಭದಿಂದ ವಾಲ್ ಸ್ಟ್ರೀಟ್ ದಾಖಲೆಯ ಗರಿಷ್ಠ ಮಟ್ಟದಲ್ಲಿ ಕೊನೆಗೊಂಡಿದೆ. ಎಸ್ & ಪಿ 500 ಶೇ. 0.51ರಷ್ಟು ಮತ್ತು ನಾಸ್ಡಾಕ್ ಕಾಂಪೊಸಿಟ್ ಶೇ. 0.88ರಷ್ಟು ಏರಿಕೆಯಾಗಿದೆ. ಇನ್ನು ಜಪಾನ್‌ನ ನಿಕೈ 225 ಶೇ. 0.27, ಕೊರಿಯಾದ ಕೋಸ್ಪಿ ಶೇ. 0.87 ಮತ್ತು ಏಷ್ಯಾ ಡೌ ಶೇ. 1ರಷ್ಟು ಏರಿಕೆ ದಾಖಲಿಸಿವೆ. ಹಾಂಗ್‌ಕಾಂಗ್‌ನ ಹಾಂಗ್ ಸೆಂಗ್ ಕೂಡಾ ಶೇ. 0.56ರಷ್ಟು ಹೆಚ್ಚಾಗಿದೆ.

    ಇದನ್ನೂ ಓದಿ: Stock Market: ಮೊದಲ ಬಾರಿಗೆ 80,000 ಗಡಿ ದಾಟಿದ ಸೆನ್ಸೆಕ್ಸ್: 24,250 ಪಾಯಿಂಟ್‌ ತಲುಪಿದ ನಿಫ್ಟಿ

    ಯುಎಸ್ ಫೆಡರಲ್ ರಿಸರ್ವ್ ಅಧ್ಯಕ್ಷ ಜೆರೋಮ್ ಪೊವೆಲ್ ಅವರು ಹಣದುಬ್ಬರವನ್ನು ನಿಯಂತ್ರಿಸುವಲ್ಲಿ ಪ್ರಗತಿ ಸಾಧಿಸುದ್ದೇವೆ ಎಂದು ಹೇಳಿಕ ನೀಡಿದ ನಂತರ ಮಾರುಕಟ್ಟೆಗಳು ಧನಾತ್ಮಕ ಪ್ರದರ್ಶನ ತೋರುತ್ತಿವೆ. ಮಂಗಳವಾರ ವಹಿವಾಟು ಆರಂಭವಾದ ಕೆಲ ಹೊತ್ತಿನಲ್ಲಿ ಸೆನ್ಸೆಕ್ಸ್‌ ದಾಖಲೆಯ 79,653.21 ಅಂಕ ತಲುಪಿತ್ತು. ನಿಫ್ಟಿ (Nifty) ಕೂಡ ಹೊಸ ದಾಖಲೆ ಬರೆದಿದ್ದು 24,186.5 ಪಾಯಿಂಟ್‌ ಗಡಿ ಮುಟ್ಟಿತ್ತು. ಮಂಗಳವಾರ ಬೆಳಿಗ್ಗೆ ಎನ್ಎಸ್ಇ ನಿಫ್ಟಿ ಶೇ. 0.21ರಷ್ಟು ಏರಿಕೆ ಕಂಡು 24,186.5 ಪಾಯಿಂಟ್‌ಗೆ ತಲುಪಿದ್ದರೆ, ಬಿಎಸ್ಇ ಸೆನ್ಸೆಕ್ಸ್ ಶೇಕಡಾ 0.22ರಷ್ಟು ಹೆಚ್ಚಳ ದಾಖಲಿಸಿ 79,653.21 ಪಾಯಿಂಟ್‌ ಗಳಿಸಿತ್ತು. 

    Continue Reading
    Advertisement
    Rashmika Mandanna Kubera interesting first look
    ಕಾಲಿವುಡ್2 mins ago

    Rashmika Mandanna: ಧನುಷ್‌ ನಟನೆಯ ʻಕುಬೇರʼ ಸಿನಿಮಾದ ರಶ್ಮಿಕಾ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌!

    IND vs ZIM
    ಕ್ರೀಡೆ4 mins ago

    IND vs ZIM: ನಾಳೆಯಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ; ಯುವ ಪಡೆಗೆ ಸ್ಫೂರ್ತಿಯಾಗಲಿ ಟಿ20 ವಿಶ್ವಕಪ್​ ಗೆಲುವು

    Edu Guide
    ಶಿಕ್ಷಣ16 mins ago

    Edu Guide: ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: IDFC FIRST ಬ್ಯಾಂಕ್‌ನಿಂದ 2 ಲಕ್ಷ ರೂ. ಸ್ಕಾಲರ್‌ಶಿಪ್‌; ಹೀಗೆ ಅಪ್ಲೈ ಮಾಡಿ

    Prajwal Revanna case Three FIRs against Prajwal Wanted list in all three
    ಕ್ರೈಂ19 mins ago

    Prajwal Revanna Case: ಪ್ರಜ್ವಲ್‌ಗೆ ʼಆʼ ಸಾಮರ್ಥ್ಯ ಇದೆ: ವೈದ್ಯಕೀಯ ವರದಿ ರಿವೀಲ್

    Biometric Attendance
    ಬೆಂಗಳೂರು27 mins ago

    Biometric Attendance: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ

    Vinay Rajkumar wedding pictures swathishta krishnan have gone viral
    ಸ್ಯಾಂಡಲ್ ವುಡ್28 mins ago

    Vinay Rajkumar: ಸದ್ದಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿಟ್ರ ವಿನಯ್ ರಾಜ್ ಕುಮಾರ್? ದೊಡ್ಮನೆ ಫ್ಯಾನ್ಸ್‌ಗೆ ಶಾಕ್‌!

    Elephant attack in Hassan and Chikmagalur
    ಹಾಸನ30 mins ago

    Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

    Hina Khan mom weeps as actor cuts her hair
    ಬಾಲಿವುಡ್52 mins ago

    Hina Khan: ಕ್ಯಾನ್ಸರ್‌ನಿಂದ ಬಳಲುತ್ತಿರುವ ನಟಿ `ಹಿನಾ ಖಾನ್’ ತಬ್ಬಿ ಕಣ್ಣೀರಿಟ್ಟ ತಾಯಿ; ಕೂದಲಿಗೆ ಬಿತ್ತು ಕತ್ತರಿ!

    Robbery Case
    ಕ್ರೈಂ1 hour ago

    Robbery Case : ರಾಯಚೂರಿನಲ್ಲಿ ಸ್ವಾಮೀಜಿ ತಲೆಗೆ ಗನ್ ಇಟ್ಟು ದರೋಡೆ!

    Jay Shah
    ಕ್ರೀಡೆ1 hour ago

    Jay Shah: ಕೊಹ್ಲಿಯನ್ನೇ ದಿಟ್ಟಿಸಿ ನೋಡುತ್ತಾ ನಿಂತ ಜಯ್​ ಶಾ; ವಿಡಿಯೊ ವೈರಲ್​

    Sharmitha Gowda in bikini
    ಕಿರುತೆರೆ9 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ9 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ9 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    galipata neetu
    ಕಿರುತೆರೆ7 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ9 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Kannada Serials
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ8 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ7 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    varun
    ಕಿರುತೆರೆ8 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Kannada Serials
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    Elephant attack in Hassan and Chikmagalur
    ಹಾಸನ30 mins ago

    Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

    Physical Abuse
    ಬೆಂಗಳೂರು2 hours ago

    Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

    Self Harming in bengaluru
    ಬೆಂಗಳೂರು2 hours ago

    Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

    karnataka Weather Forecast Rain
    ಮಳೆ7 hours ago

    Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

    karnataka Weather Forecast
    ಮಳೆ19 hours ago

    Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

    karnataka Rain
    ಮಳೆ20 hours ago

    Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

    wild animal attack
    ಬೆಂಗಳೂರು ಗ್ರಾಮಾಂತರ21 hours ago

    Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

    Chikkaballapura News
    ಚಿಕ್ಕಬಳ್ಳಾಪುರ23 hours ago

    Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

    karnataka Rain
    ಮಳೆ24 hours ago

    Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

    Karnataka Rain
    ಮಳೆ1 day ago

    Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

    ಟ್ರೆಂಡಿಂಗ್‌