Viral News: ನೀರ ಬಿಟ್ಟು ರಸ್ತೆಗೆ ಬಂದ ಮೊಸಳೆಗೆ ಇಲ್ಲೇನು ಕೆಲಸ? ಅಪರೂಪದ Video ಇಲ್ಲಿದೆ ನೋಡಿ - Vistara News

ವೈರಲ್ ನ್ಯೂಸ್

Viral News: ನೀರ ಬಿಟ್ಟು ರಸ್ತೆಗೆ ಬಂದ ಮೊಸಳೆಗೆ ಇಲ್ಲೇನು ಕೆಲಸ? ಅಪರೂಪದ Video ಇಲ್ಲಿದೆ ನೋಡಿ

Viral News: ಮೊಸಳೆ ಯಾರಿಗೆ ಗೊತ್ತಿಲ್ಲ ಹೇಳಿ? ಚೂಪಾದ ಉಗುರು, ಹಲ್ಲು, ದೈತ್ಯ ದೇಹ ನೋಡಿದರೆ ಸಾಕು ಹಲವರು ಬೆಚ್ಚಿ ಬೀಳುತ್ತಾರೆ. ಅಂತಹ ಪ್ರಾಣಿ ಧುತ್ತನೆ ಕಣ್ಣೆದುರು ಬಂದರೆ ಹೇಗಾಗಬೇಡ? ಅದರಲ್ಲಿಯೂ ನೀರಿನಲ್ಲಿ ಇರುವ ಪ್ರಾಣಿ ರಸ್ತೆಗೆ ಬಂದರೆ ಓಡಾಡುವವರು ಬೆಚ್ಚಿ ಬೀಳದೆ ಇರುತ್ತಾರಾ? ಹೌದು ಇಂತಹದ್ದೊಂದು ಅಚ್ಚರಿಯ ಘಟನೆ ನಡೆದಿದೆ. ಈ ಅಪರೂಪದ ವಿಡಿಯೊ ಇಲ್ಲಿದೆ ನೋಡಿ.

VISTARANEWS.COM


on

Viral News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಮೊಸಳೆ (Crocodile) ಜಲಚರ. ಸಾಮಾನ್ಯವಾಗಿ ನದಿಯಲ್ಲಿ, ದೊಡ್ಡ ದೊಡ್ಡ ಸರೋವರಗಳಲ್ಲಿ, ಸಮುದ್ರದಲ್ಲಿ ವಾಸಿಸುತ್ತವೆ. ಅಪರೂಪಕ್ಕೆ ದಡಕ್ಕೆ ಬಂದು ಸ್ವಲ್ಪ ಹೊತ್ತು ವಿಶ್ರಾಂತಿ ಪಡೆದು, ಮೈ ಬೆಚ್ಚಗೆ ಮಾಡಿಕೊಂಡು ಮತ್ತೆ ನೀರೊಳಗೆ ತೆರಳುತ್ತವೆ. ಇದೆಲ್ಲರಿಗೂ ಗೊತ್ತಿರುವ ವಿಷಯ. ಇದರಲ್ಲೇನು ವಿಶೇಷ ಎಂದು ನೀವು ಪ್ರಶ್ನಿಸಬಹುದು. ಇಲ್ಲಿದೆ ಟ್ವಿಸ್ಟ್‌. ನೀರಲ್ಲಿ ಇರುವ ಮೊಸಳೆ ನಗರಕ್ಕೆ ಅದರಲ್ಲಿಯೂ ಜನ ನಿಬಿಡ ರಸ್ತೆಗೆ ಬಂದರೆ ಹೇಗಾಗಬಹುದು? ಇದೆಲ್ಲ ಕಲ್ಪನೆ, ಸಿನಿಮಾದಲ್ಲಿ ನಡೆಯಬಹುದು ಎಂದುಕೊಂಡರೆ ನಿಮ್ಮ ಊಹೆ ತಪ್ಪು. ಹಾಗಾದರೆ ನಿಜವಾಗಿಯೂ ರಸ್ತೆಗೆ ಮೊಸಳೆ ಬಂದಿತ್ತೆ? ಎಲ್ಲಿ? ಯಾಕೆ? ಮುಂತಾದ ನಿಮ್ಮ ಪ್ರಶ್ನೆಗೆ ಈ ವೈರಲ್‌ ವಿಡಿಯೊದಲ್ಲಿ ಇದೆ ಉತ್ತರ (Viral News).

ಮಹಾರಾಷ್ಟ್ರದಲ್ಲಿ ಜೋರಾಗಿ ಮಳೆ ಸುರಿಯುತ್ತಿದೆ. ಈ ಮಳೆಗೆ ಬೇಗ ಬೇಗ ಮನೆ ಸೇರಿಕೊಂಡು ಬಿಡಬೇಕು ಎಂದು ಧಾವಂತದಲ್ಲಿ ಸಾಗುತ್ತಿದ್ದ ರತ್ನಗಿರಿ ಜಿಲ್ಲೆಯ ಜನರಿಗೆ ಕನಸಿನಲ್ಲಿಯೂ ಊಹಿಸದ ಅಚ್ಚರಿ ರಸ್ತೆ ಮಧ್ಯೆ ಎದುರಾಗಿತ್ತು. ತಮ್ಮ ಪಾಡಿಗೆ ತಾವು ಸಾಗುತ್ತಿದ್ದ ವಾಹನ ಚಾಲಕರು ಒಂದು ಕ್ಷಣ ದಂಗಾಗಿ ನಿಂತು ಅಪರೂಪದ ಅತಿಥಿಯನ್ನು ದಿಟ್ಟಿಸಿ ನೋಡತೊಡಗಿದರು. ಹೌದು, ಭಾರಿ ಮಳೆಯಿಂದಾಗಿ ಬೃಹತ್‌ ಗಾತ್ರದ ಮೊಸಳೆಯೊಂದು ನೀರಿನಲ್ಲಿ ಕೊಚ್ಚಿಕೊಂಡು ಬಂದಿತ್ತು. ಎತ್ತ ಹೋಗಬೇಕು ಎನ್ನುವುದು ತಿಳಿಯದೆ ಅದು ಜನ ನಿಬಿಡ ರಸ್ತೆಯಲ್ಲಿ ಹೆಜ್ಜೆ ಹಾಕುತ್ತಿರುವ ದೃಶ್ಯ ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.

ವಿಡಿಯೊದಲ್ಲಿ ಏನಿದೆ?

ರತ್ನಗಿರಿ ಜಿಲ್ಲೆಯ ಚಿಪ್ಲುನ್‌ ಎಂಬಲ್ಲಿ ಈ ಅಪರೂಪದ ದೃಶ್ಯ ಸೆರೆಯಾಗಿದೆ. ಚಿಪ್ಲುನ್‌ನಲ್ಲಿ ಹರಿಯುವ ಶಿವ ನದಿ ಅನೇಕ ಮೊಸಳೆಗಳಿಗೆ ಆಶ್ರಯತಾಣ. ಇಲ್ಲಿ ಜೋರಾಗಿ ಸುರಿದ ಮಳೆಗೆ ಬೃಹತ್‌ ಗಾತ್ರದ ಮೊಸಳೆಯೊಂದು ನೀರಿನಲ್ಲಿ ಕೊಚ್ಚಿಕೊಂಡು ಬಂದಿದೆ. ಅದು ರಸ್ತೆಯಲ್ಲಿ ಸಂಚರಿಸುವುದನ್ನು ಕಾರಿನಲ್ಲಿದ್ದ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ವಾಹನಗಳ ಬೆಳಕಿನಲ್ಲಿ ಮೊಸಳೆ ರಸ್ತೆಯಲ್ಲಿ ರಾಜಾರೋಷವಾಗಿ ಅಡ್ಡಾಡುತ್ತಿರುವುದು ಸ್ಪಷ್ಟವಾಗಿ ಕಂಡು ಬರುತ್ತಿದೆ.

ರತ್ನಗಿರಿ ಮೊಸಳೆಗಳಿಗೆ ಪ್ರಸಿದ್ಧ

ಭಾರತದ ಮೂರು ಮೊಸಳೆ ಪ್ರಭೇದಗಳಲ್ಲಿ ಒಂದಾದ ಮಗ್ಗರ್ ಮೊಸಳೆಗಳಿಗೆ ರತ್ನಗಿರಿ ಬಹಳ ಪ್ರಸಿದ್ಧ. ರತ್ನಗಿರಿ ಜಿಲ್ಲೆಯ ಚಿಪ್ಲುನ್ ಮತ್ತು ಇತರ ಸ್ಥಳಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಇದರಿಂದ ನದಿಗಳ ನೀರಿನ ಮಟ್ಟ ದಿನ ಕಳೆದಂತೆ ಹೆಚ್ಚಾಗುತ್ತಿದೆ. ಜುಲೈ 2ರ ತನಕ ಧಾರಾಕಾರ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Viral News: 10 ಅಡಿಯ ದೈತ್ಯ ಮೊಸಳೆಯಿಂದ ಕಬ್ಬಿಣದ ಗೇಟು ಹಾರಲು ಯತ್ನ; ಮೈ ಜುಮ್ಮೆನ್ನಿಸುವ ವಿಡಿಯೊ ಇಲ್ಲಿದೆ

ಸದ್ಯ ವಿಡಿಯೊ ನೋಡಿದರ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ. ಮೊಸಳೆ ನೆಲದ ಮೇಲೆ ಇಷ್ಟು ಸರಾಗವಾಗಿ ನಡೆಯುತ್ತದೆ ಎನ್ನುವುದು ಗೊತ್ತೆ ಇರಲಿಲ್ಲ ಎಂದು ಅನೇಕರು ಕಮೆಂಟ್‌ ಮಾಡಿದ್ದಾರೆ. ಕಣ್ಣನ್ನು ನಂಬಲೇ ಸಾಧ್ಯವಾಗುತ್ತಿಲ್ಲ ಎಂದು ಇನ್ನೂ ಹಲವರು ಉದ್ಘರಿಸಿದ್ದಾರೆ. ಇನ್ನು ಈ ಕಣ್ಣಲ್ಲಿ ಏನೇನು ನೋಡಬೇಕೋ ಎಂದು ಕೆಲವರು ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ. ನೀರು ಬಿಟ್ಟು ರಸ್ತೆಯಲ್ಲಿ ಮೊಸಳೆಗೆ ಏನು ಕೆಲಸ? ಎಂದು ನೆಟ್ಟಿಗರು ಕಾಲೆಳೆದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ವೇದಿಕೆಯಲ್ಲೇ ಎಲ್ಲರೆದುರು ಟಾಪ್‌ ಎತ್ತಿ ಸ್ತನ ಪ್ರದರ್ಶಿಸಿದ ಸಚಿವೆ- ವಿಡಿಯೋ ಭಾರೀ ವೈರಲ್‌

Viral News: ಜೂನ್‌ನಲ್ಲಿ ಈ ಓಸ್ಲೋ ಪ್ರೈಡ್‌ ಇವೆಂಟ್ ಅನ್ನು ಆಯೋಜಿಸಿದ್ದು, ಈ ಕಾರ್ಯಕ್ರಮದಲ್ಲಿ ಸಚಿವೆ ಲುಬ್ನಾ ಜ್ಯಾಫೆರಿಗೆ ʼಫ್ಯಾಗ್‌ ಹ್ಯಾಗ್‌ 2024ʼ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಪ್ರಶಸ್ತಿ ಸ್ವೀಕರಿಸುತ್ತಿದ್ದಂತೆ ಸಂತಸ ವ್ಯಕ್ತಪಡಿಸಿದ ಲುಬ್ನಾ, ತಕ್ಷಣ ತಾವು ಧರಿಸಿದ್ದ ಟಾಪ್‌ ಅನ್ನು ಎತ್ತಿ ತನ್ನ ಸ್ತನಗಳನ್ನು ಪ್ರದರ್ಶಿಸಿದ್ದಾಳೆ. ಇದೇ ವೇಳೆ ಮಾತನಾಡಿದ ಅವರು ಈ ಪ್ರಶಸ್ತಿ ಸ್ವೀಕರಿಸಿರುವುದಕ್ಕೆ ನಾನು ಬಹಳ ಆಭಾರಿಯಾಗಿದ್ದೇನೆ. ನಿಮ್ಮನ್ನು ನೀವು ಹೊರಗೆ ತನ್ನಿ. ನಿಮ್ಮನ್ನು ನೀವು ಅಷ್ಟೋಂದು ಗಂಭೀರವಾಗಿ ಪರಿಗಣಿಸಬೇಡಿ ಎಂದಿದ್ದಾರೆ.

VISTARANEWS.COM


on

Viral Video
Koo

ನಾರ್ವೆ: ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನಾರ್ವೆ(Norway)ಯ ಸಾಂಸ್ಕೃತಿಕ ಸಚಿವೆ ತಮ್ಮ ಸ್ತನಗಳನ್ನು ಪ್ರದರ್ಶಿಸುವ ಮೂಲಕ ಭಾರೀ ವಿವಾದ ಸೃಷ್ಟಿಸಿದ್ದಾರೆ. ಓಸ್ಲೋ ಪ್ರೈಡ್‌ ಇವೆಂಟ್‌ (Oslo Pride)ನಲ್ಲಿ ಸಾಂಸ್ಕೃತಿಕ ಮತ್ತು ಲಿಂಗ ಸಮಾನತೆ ಇಲಾಖೆ ಸಚಿವೆ ಲುಬ್ನಾ ಜ್ಯಾಫೆರಿ(Lubna Jaffery) ತಮ್ಮ ತಾವು ಧರಿಸಿದ್ದ ಟಾಪ್‌ ಅನ್ನು ಎತ್ತಿ ತಮ್ಮ ಸ್ತನಗಳನ್ನು ತೋರಿಸಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಹಳ ವೈರಲ್‌(Viral Video) ಆಗುತ್ತಿದ್ದು, ಅನೇಕರು ಸಚಿವೆಯ ಈ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಜೂನ್‌ನಲ್ಲಿ ಈ ಓಸ್ಲೋ ಪ್ರೈಡ್‌ ಇವೆಂಟ್ ಅನ್ನು ಆಯೋಜಿಸಿದ್ದು, ಈ ಕಾರ್ಯಕ್ರಮದಲ್ಲಿ ಸಚಿವೆ ಲುಬ್ನಾ ಜ್ಯಾಫೆರಿಗೆ ʼಫ್ಯಾಗ್‌ ಹ್ಯಾಗ್‌ 2024ʼ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಪ್ರಶಸ್ತಿ ಸ್ವೀಕರಿಸುತ್ತಿದ್ದಂತೆ ಸಂತಸ ವ್ಯಕ್ತಪಡಿಸಿದ ಲುಬ್ನಾ, ತಕ್ಷಣ ತಾವು ಧರಿಸಿದ್ದ ಟಾಪ್‌ ಅನ್ನು ಎತ್ತಿ ತನ್ನ ಸ್ತನಗಳನ್ನು ಪ್ರದರ್ಶಿಸಿದ್ದಾಳೆ. ಇದೇ ವೇಳೆ ಮಾತನಾಡಿದ ಅವರು ಈ ಪ್ರಶಸ್ತಿ ಸ್ವೀಕರಿಸಿರುವುದಕ್ಕೆ ನಾನು ಬಹಳ ಆಭಾರಿಯಾಗಿದ್ದೇನೆ. ನಿಮ್ಮನ್ನು ನೀವು ಹೊರಗೆ ತನ್ನಿ. ನಿಮ್ಮನ್ನು ನೀವು ಅಷ್ಟೋಂದು ಗಂಭೀರವಾಗಿ ಪರಿಗಣಿಸಬೇಡಿ ಎಂದಿದ್ದಾರೆ.

ನಾರ್ವೆ ಪ್ರಧಾನಿಯಿಂದ ಮೆಚ್ಚುಗೆ

ಇನ್ನು ಲುಬ್ನಾ ವರ್ತನೆ ಅಲ್ಲಿದ್ದ ಪ್ರೇಕ್ಷಕರನ್ನು ಮಾತ್ರವಲ್ಲದೇ ಇಡೀ ದೇಶದ ಗಮನ ಸೆಳೆದಿದೆ. ನಾರ್ವೆ ಪ್ರಧಾನಿ ಜೋನಸ್‌ ಗಹ್ರ್‌ ಸ್ಟೋರ್‌ ಲುಬ್ನಾಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಲುಬ್ನಾ ಒಬ್ಬ ಅತ್ಯಂತ ಆತ್ಮವಿಶ್ವಾಸ, ಮುಕ್ತ ಮತ್ತು ಅದ್ಭುತ ವ್ಯಕ್ತಿಯಾಗಿದ್ದು, ದೇಶಾದ್ಯಂತ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅವರನ್ನು ಪ್ರೀತಿಯಿಂದ ಸ್ವಾಗತಿಸಲಾಗುತ್ತದೆ ಎಂಬುದನ್ನು ಕೇಳಿದ್ದೇನೆ ಎಂದಿದ್ದಾರೆ.

ಮತ್ತೊಂದೆಡೆ ಈವೆಂಟ್‌ನ ಆಯೋಜಕ ಜೋಕಿಮ್ ಆಡ್‌ಲ್ಯಾಂಡ್ ಈ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ “ಹಲವಾರು ವರ್ಷಗಳಲ್ಲಿ ‘ಓಸ್ಲೋ ಪ್ರೈಡ್’ ಸಮಯದಲ್ಲಿ ಸಂಭವಿಸಿದ ಅತ್ಯುತ್ತಮ ಸಂಗತಿ ಇದಾಗಿದೆ. ಈ ರೀತಿ ಮುಕ್ತವಾಗಿ ತಮ್ಮ ಅಭಿಪ್ರಾಯ, ವರ್ತನೆಯನ್ನು ವ್ಯಕ್ತಪಡಿಸುವ ಸಚಿವೆಯನ್ನು ಹೊಂದಿರುವುದಕ್ಕೆ ಹೆಮ್ಮೆ ಪಡುತ್ತೇವೆ. ಪ್ರೇಕ್ಷಕರೂ ಕೂಡ ಲುಬ್ನಾ ಅವರನ್ನು ಮೆಚ್ಚಿಕೊಂಡಿದ್ದಾರೆ. ಇಷ್ಟು ವರ್ಷಗಳಲ್ಲಿ ಇದುವರೆಗೆ ಇಂತಹ ಪ್ರತಿಕ್ರಿಯೆ ಸಿಕ್ಕಿಯೇ ಇಲ್ಲ” ಎಂದಿದ್ದಾರೆ.

ಇದನ್ನೂ ಓದಿ: Viral Video: ಮೆಟ್ಟಿಲುಗಳ ಮೇಲೆ ಬೈಕ್‌ ಸವಾರಿ; ರೋಚಕ ವಿಡಿಯೊ ವೈರಲ್‌

Continue Reading

Latest

Viral News: ಕಾಮ ದಾಹ ತಣಿಸಿಕೊಳ್ಳಲು ವಿದ್ಯಾರ್ಥಿಗಳನ್ನೇ ಬಳಸಿಕೊಂಡ ಶಿಕ್ಷಕಿಗೆ ಶಿಕ್ಷೆ

Viral News: ಗುರುವೆಂದರೆ ಗುರಿ ತೋರಿಸುವವರು ಎಂಬ ನಂಬಿಕೆ. ಆದರೆ ಇಲ್ಲೊಬ್ಬಳು ಶಿಕ್ಷಕಿ ಪಾಠ ಮಾಡುವ ಬದಲು ವಿದ್ಯಾರ್ಥಿಗಳೊಂದಿಗೆ ಕಾಮದಾಟವಾಡಿ ಈಗ ಗರ್ಭಿಣಿಯಾಗಿದ್ದಾಳೆ. ಯುನೈಟೆಡ್ ಕಿಂಗ್ ಡಮ್‌ನಲ್ಲಿ ಇಬ್ಬರು ಹದಿಹರೆಯದ ವಿದ್ಯಾರ್ಥಿಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸಿ ಅವರಲ್ಲಿ ಒಬ್ಬರಿಂದ ಗರ್ಭಿಣಿಯಾದ ಆರೋಪದ ಮೇಲೆ ಬ್ರಿಟಿಷ್ ಮಹಿಳಾ ಶಿಕ್ಷಕಿಗೆ ಮ್ಯಾಂಚೆಸ್ಟರ್ ಕ್ರೌನ್ ಕೋರ್ಟ್ ಆರೂವರೆ ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

VISTARANEWS.COM


on

Viral News
Koo

ಶಿಕ್ಷಕರು ವಿದ್ಯಾರ್ಥಿಗಳನ್ನು ಸರಿಯಾದ ಮಾರ್ಗದಲ್ಲಿ ನಡೆಸುವವರು ಎಂದು ಹೇಳುತ್ತಾರೆ. ಆದರೆ ಇಲ್ಲೊಬ್ಬ ಶಿಕ್ಷಕಿ ತನ್ನ ಕಾಮತೃಷೆಯನ್ನು ತೀರಿಸಿಕೊಳ್ಳಲು ವಿದ್ಯಾರ್ಥಿಗಳನ್ನೇ ಬಳಸಿಕೊಂಡು ಜೈಲು ಪಾಲಾಗಿದ್ದಳು. ಯುನೈಟೆಡ್ ಕಿಂಗ್ ಡಮ್‌ನಲ್ಲಿ ಇಬ್ಬರು ಹದಿಹರೆಯದ ವಿದ್ಯಾರ್ಥಿಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸಿ ಅವರಲ್ಲಿ ಒಬ್ಬರಿಂದ ಗರ್ಭಿಣಿಯಾದ ಆರೋಪದ ಮೇಲೆ ಬ್ರಿಟಿಷ್ ಮಹಿಳಾ ಶಿಕ್ಷಕಿಗೆ ಮ್ಯಾಂಚೆಸ್ಟರ್ ಕ್ರೌನ್ ಕೋರ್ಟ್ ಈಗ ಆರೂವರೆ ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಈ ಸುದ್ದಿ ಈಗ ಎಲ್ಲೆಡೆ ವೈರಲ್‌ (Viral News) ಆಗಿದೆ.

ರೆಬೆಕಾ ಜಾಯ್ನೆಸ್ (30) ಜೈಲು ಶಿಕ್ಷೆಗೆ ಒಳಗಾದ ಶಿಕ್ಷಕಿ. ಈಕೆ ಇಬ್ಬರು ಹುಡುಗರಿಗೆ ಸೋಶಿಯಲ್ ಮೀಡಿಯಾದಲ್ಲಿ ಮೆಸೇಜ್ ಮಾಡುವ ಮೂಲಕ ಅವರ ಪರಿಚಯ ಮಾಡಿಕೊಂಡು ಈ ಕೃತ್ಯ ನಡೆಸಿದ್ದಾಳೆ. ಈ ಹಿಂದೆ ಈ ಶಿಕ್ಷಕಿಗೆ ಒಬ್ಬ ಬಾಲಕನ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದಕ್ಕಾಗಿ ಕೋರ್ಟ್ ಶಿಕ್ಷೆ ವಿಧಿಸಿತ್ತು. ಆದರೆ ಜಾಮೀನಿನ ಮೇಲೆ ಹೊರಬಂದ ಶಿಕ್ಷಕಿ ಮತ್ತೆ ಇನ್ನೊಬ್ಬ ಬಾಲಕನೊಂದಿಗೆ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿದ್ದು, ಇದರಿಂದ ಗರ್ಭಿಣಿಯಾಗಿದ್ದಾಳೆ.

ಅಲ್ಲದೇ ಶಿಕ್ಷಕಿಯ ಜೊತೆಗಿನ ಲೈಂಗಿಕ ಸಂಬಂಧವನ್ನು ನಿರಾಕರಿಸಿದರೂ ಆಕೆ ತಮ್ಮನ್ನು ಬಲವಂತವಾಗಿ ಈ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾಳೆ. ತಮ್ಮನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡಿದ್ದಾಳೆ. ಹಾಗೇ ತಮ್ಮನ್ನು ಮಾನಸಿಕವಾಗಿ ನಿಂದಿಸಿದ್ದಾಳೆ. ಈ ಘಟನೆಯಿಂದ ಹೊರಬರಲು ತಾವು ಹೆಣಗಾಡುತ್ತಿರುವುದಾಗಿ ಬಾಲಕರು ಶಿಕ್ಷಕಿಯ ಮೇಲೆ ಆರೋಪ ಮಾಡಿದ್ದರು.

ಹಾಗಾಗಿ ವಾಯವ್ಯ ಇಂಗ್ಲೆಂಡ್‍ನ ಮ್ಯಾಂಚೆಸ್ಟರ್ ಕ್ರೌನ್ ನ್ಯಾಯಾಲಯದ ನ್ಯಾಯಾಧೀಶರು ಆಕೆಯ ನಡವಳಿಕೆ ಆಕ್ಷೇಪಕಾರಿ ಆಗಿದೆ. ವಯಸ್ಕಳಾಗಿದ್ದೂ ಎಲ್ಲಾ ತಿಳಿವಳಿಕೆ ಹೊಂದಿದ್ದೂ ತನ್ನನ್ನು ತಾನು ನಿಯಂತ್ರಿಸಿಕೊಳ್ಳಬೇಕಿತ್ತು. ಆದರೆ ಅದರ ಬದಲಾಗಿ ತನ್ನ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ತನ್ನ ಲೈಂಗಿಕ ದಾಹವನ್ನು ತೀರಿಸಿಕೊಳ್ಳಲು ಇಂತಹ ಘೋರ ತಪ್ಪು ಮಾಡಿರುವುದಾಗಿ ತಿಳಿಸಿದ್ದಾರೆ. ಹಾಗಾಗಿ ಆಕೆಗೆ ಆರೂವರೆ ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದಾರೆ.

ಇದನ್ನೂ ಓದಿ: ನೀರು ತುಂಬಿದ್ದ ರಸ್ತೆ ಗುಂಡಿಗೆ ಬಿದ್ದ ಬಾಲಕಿ; ಜೀವ ಉಳಿಸಿದ ಹುಡುಗ

ಶಿಕ್ಷಕಿಗೆ ನ್ಯಾಯಾಲಯ ಈ ಹಿಂದೆ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯಾರೊಂದಿಗೂ ಲೈಂಗಿಕ ಸಂಬಂಧ ಹೊಂದದಂತೆ ಎಚ್ಚರಿಕೆ ನೀಡಿದರೂ ಅದನ್ನು ನಿರ್ಲಕ್ಷ್ಯ ಮಾಡಿ ಮತ್ತೊಂದು ಬಾಲಕನೊಂದಿಗೆ ಸಂಬಂಧ ಹೊಂದಿದ್ದಾಳೆ. ಹಾಗಾಗಿ ಶಿಕ್ಷೆಗೆ ಒಳಗಾದ ಶಿಕ್ಷಕಿಯು ಜನ್ಮ ನೀಡಿದ ಮಗುವನ್ನು ಆಕೆಯಿಂದ ತೆಗೆದುಕೊಂಡು ಆಕೆಯನ್ನು ಜೈಲಿಗೆ ಹಾಕಲಾಗಿದೆ.

ಈ ಘಟನೆ ನೋಡಿದರೆ ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ಮಾತ್ರ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿಲ್ಲ. ಜೊತೆಗೆ ಪುರುಷರು ಹಾಗೂ ಮಕ್ಕಳೂ ಕೂಡ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತಿದೆ.

Continue Reading

ಕ್ರೀಡೆ

Jay Shah: ಕೊಹ್ಲಿಯನ್ನೇ ದಿಟ್ಟಿಸಿ ನೋಡುತ್ತಾ ನಿಂತ ಜಯ್​ ಶಾ; ವಿಡಿಯೊ ವೈರಲ್​

Jay Shah: ವಿರಾಟ್​ ಕೊಹ್ಲಿ ಅವರು ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಕಳೆದ 15 ವರ್ಷಗಳಲ್ಲಿ ರೋಹಿತ್ ಶರ್ಮಾ ಅವರನ್ನು ಇಷ್ಟೊಂದು ಭಾವುಕರಾಗಿ ಎಂದೂ ನೋಡಿರಲಿಲ್ಲ ಎಂದರು.

VISTARANEWS.COM


on

Jay Shah
Koo

ಮುಂಬಯಿ: ಟಿ20 ವಿಶ್ವಕಪ್(T20 World Cup) ಗೆದ್ದು ತವರಿಗೆ ಮರಳಿದ ಟೀಮ್ ಇಂಡಿಯಾ(Team India) ಆಟಗಾರರಿಗೆ ನಿನ್ನೆ)ಗುರುವಾರ) ಮುಂಬೈಯಲ್ಲಿ ಭರ್ಜರಿ ಸ್ವಾಗತ ಕೋರಲಾಯಿತು. ಮುಂಬೈಯಲ್ಲಿ ಒಂದು ರೀತಿಯ ಹಬ್ಬದ ವಾತಾವರಣವೇ ಸೃಷ್ಟಿಯಾಗಿತ್ತು. ಭಾರಿ ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳ ಮಧ್ಯೆ ತೆರೆದ ಬಸ್‌ನಲ್ಲಿ ಆಟಗಾರರರನ್ನು ಮೆರವಣಿಗೆ ಮಾಡಿ ವಾಂಖೆಡೆ ಮೈದಾನದಲ್ಲೂ ಸಂಭ್ರಮ ಆಚರಿಸಲಾಯಿತು. ಈ ವೇಳೆ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ(Jay Shah) ಅವರು ವಿರಾಟ್​ ಕೊಹ್ಲಿಗೆ(virat kohli) ಹಸ್ತಲಾಘವ ನೀಡಿದ ಬಳಿಕವೂ ಕೊಹ್ಲಿಯನ್ನೇ ದಿಟ್ಟಿಸಿ ನೋಡುತ್ತಾ ನಿಂತು ಮೈಮರೆತ ವಿಡಿಯೊವೊಂದು ವೈರಲ್​ ಆಗಿದೆ.

ಮೋದಿ ಭೇಟಿ ಬಳಿಕ ಟೀಮ್​ ಇಂಡಿಯಾ ಆಟಗಾರರು ಮುಂಬೈಗೆ ತಲುಪಿದೊಡನೆ ‘ಮುಂಬೈನ ನರೀಮನ್ ಪಾಯಿಂಟ್‌ನಿಂದ ರೋಡ್‌ ಶೋ ಮಾಡಲಾಯಿತು. ಅದಾದ ಮೇಲೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಟಗಾರರನ್ನು ಮತ್ತು ಮತ್ತು ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಯಿತು. ಬಳಿಕ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ವತಿಯಿಂದ ಚಾಂಪಿಯನ್‌ ಭಾರತ ತಂಡಕ್ಕೆ ಘೋಷಿಸಿದ್ದ 125 ಕೋಟಿ ರೂಪಾಯಿ ಮೊತ್ತದ ಚೆಕ್‌ ಅನ್ನು ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ, ಉಪಾಧ್ಯಕ್ಷ ರಾಜೀವ್‌ ಶುಕ್ಲಾ, ಕಾರ್ಯದರ್ಶಿ ಜಯ್‌ ಶಾ ಹಸ್ತಾಂತರಿಸಿದರು.

ಚೆಕ್‌ ವಿತರಣೆಯ ಕಾರ್ಯಕ್ರಮದ ವೇಳೆ ವೇದಿಕೆಯಲ್ಲಿದ್ದ ಬಿಸಿಸಿಐ ಅಧಿಕಾರಿಗಳಿಗೆ ಆಟಗಾರರು ಹಸ್ತಲಾಘವ ನೀಡುವ ಮೂಲಕ ಗೌರವ ಸೂಚಿಸಿದರು. ಎಲ್ಲ ಆಟಗಾರರಂತೆ ಕೊಹ್ಲಿ ಕೂಡ ಸರತಿ ಸಾಲಿನಲ್ಲಿ ಅಧಿಕಾರಿಗಳ ಕೈ ಕುಲುಕಿ ಮುಂದೆ ಸಾಗಿದರು. ಈ ವೇಳೆ ಜಯ್​ ಶಾ, ಕೊಹ್ಲಿ ಕೈ ಕುಲುಕಿದ ಬಳಿಕ ಕೊಹ್ಲಿಯನ್ನೇ ನೋಡುವುದರಲ್ಲೇ ಮಗ್ನರಾದರು. ನಂತರ ಬಂದ ಆಟಗಾರರಿಗೆ ಕೈ ಕುಲುಕುವುದನ್ನೇ ಮರೆತುಬಿಟ್ಟರು. ಈ ವಿಡಿಯೊ ವೈರಲ್​ ಆಗಿದೆ. ಜಯ್​ ಶಾ ಅವರು ಕೊಹ್ಲಿಯನ್ನೇ ನೋಡುತ್ತಾ ನಿಂತಿದ್ದು ಯಾಕೆ ಎಂಬ ಬಗ್ಗೆ ನೆಟ್ಟಿಗರು ಚರ್ಚೆ ನಡೆಸಲಾರಂಭಿಸಿದ್ದಾರೆ.

ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಟ್ರೋಫಿ ವೇಳೆ ಸರಣಿ ಶ್ರೇಷ್ಠ ಪ್ರಶಸ್ತಿ ಸ್ವಿಕರಿಸುವಾಗ ಕೊಹ್ಲಿ ಜಯ್​ ಶಾ ಮುಖವನ್ನು ಕೂಡ ನೋಡದೆ ನೇರವಾಗಿ ಬಂದಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು. ಯಾರಿಗೆ ಗೌರವ ನೀಡಬೇಕು ಮತ್ತು ನೀಡಬಾರದು ಎಂಬುದು ಕಿಂಗ್​ ಕೊಹ್ಲಿಗೆ ತಿಳಿದಿದೆ ಎಂಬುದಾಗಿ ಕೊಹ್ಲಿ ಅಭಿಮಾನಿಗಳು ಈ ವಿಡಿಯೊಗೆ ಕಮೆಂಟ್​ ಮಾಡಿದ್ದರು.

15 ವರ್ಷಗಳಲ್ಲಿ ರೋಹಿತ್‌ರನ್ನು ಇಷ್ಟು ಭಾವುಕರಾಗಿ ಎಂದೂ ನೋಡಿರಲಿಲ್ಲ ಎಂದ ಕೊಹ್ಲಿ


ವಿರಾಟ್​ ಕೊಹ್ಲಿ ಅವರು ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಕಳೆದ 15 ವರ್ಷಗಳಲ್ಲಿ ರೋಹಿತ್ ಶರ್ಮಾ ಅವರನ್ನು ಇಷ್ಟೊಂದು ಭಾವುಕರಾಗಿ ಎಂದೂ ನೋಡಿರಲಿಲ್ಲ ಎಂದರು. ನಾವು ಕೆನ್ಸಿಂಗ್ಟನ್ ಓವಲ್‌ನಲ್ಲಿ ಮೆಟ್ಟಿಲುಗಳನ್ನು ಹತ್ತುವಾಗ ಅಳುತ್ತಿದ್ದೆವು. 2011ರಲ್ಲಿ ಇದೇ ಮೈದಾನದಲ್ಲಿ ಏಕದಿನ ವಿಶ್ವಕಪ್ ಗೆಲುವಿನ ಬಳಿಕ ಅಂದು ಹಿರಿಯ ಆಟಗಾರರು ಭಾವುಕರಾಗಿದ್ದಾಗ ಅವರ ಭಾವನೆಗಳನ್ನು ಅಷ್ಟೊಂದು ಆಳವಾಗಿ ಗ್ರಹಿಸಲು ಸಾಧ್ಯವಾಗಿರಲಿಲ್ಲ. ಆದರೆ ನನಗೀಗ ಎಲ್ಲವೂ ಅರ್ಥವಾಗುತ್ತಿದೆ’ ಎಂದು ಹೇಳಿದರು.

Continue Reading

ಕ್ರೀಡೆ

Viral Video: ಜನಸಂದಣಿ ಮಧ್ಯೆಯೂ ಆ್ಯಂಬುಲೆನ್ಸ್​ಗೆ ದಾರಿ ಮಾಡಿಕೊಟ್ಟ ಟೀಮ್‌ ಇಂಡಿಯಾ ಅಭಿಮಾನಿಗಳು

Viral Video: ಅಭಿಮಾನಿಗಳು ಆ್ಯಂಬುಲೆನ್ಸ್​ಗೆ ದಾರಿ ಮಾಡಿಕೊಡುತ್ತಿರುವ ವಿಡಿಯೊ ಎಲ್ಲಡೆ ವೈರಲ್​ ಆಗಿದ್ದು(Viral Video), ಅಭಿಮಾನಿಗಳ ಈ ನಡೆಗೆ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದಾರೆ. ಉತ್ಸಾಹಿ ಕ್ರಿಕೆಟ್‌ ಅಭಿಮಾನಿಗಳ ನಡುವೆ ಆ್ಯಂಬುಲೆನ್ಸ್​ ಯಾವ ಸಮಸ್ಯೆಯೂ ಇಲ್ಲದಂತೆ ಸರಾಗವಾಗಿ ಮುನ್ನಡೆಯುತ್ತಿರುವ ವಿಡಿಯೊವನ್ನು ಎಎನ್​ಐ ಸುದ್ದಿ ಸಂಸ್ಥೆ ತನ್ನ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದೆ

VISTARANEWS.COM


on

viral video
Koo

ಮುಂಬಯಿ: ಟಿ20 ವಿಶ್ವಕಪ್​ ವಿಜೇತ ತಂಡದ ಆಟಗಾರರನ್ನು ಅಭಿನಂದಿಸುವ(Team India victory parade) ಸಲುವಾಗಿ ಮುಂಬೈಯ ಮರೀನ್ ಡ್ರೈವ್‌ ಪ್ರದೇಶದಲ್ಲಿ ಸೇರಿದ ಅಭಿಮಾನಿಗಳನ್ನು(Team India fans) ಕಾಣುವಾಗ ಅರಬ್ಬಿ ಸಮುದ್ರವೇ ನಾಚಿ ನೀರಾಗುವಷ್ಟು ಕ್ರಿಕೆಟ್‌ ಪ್ರೀತಿಯ ಸಾಗರ ಉಕ್ಕೇರಿತ್ತು. ಮಳೆಯನ್ನು ಲೆಕ್ಕಿಸದೇ ಸಾವಿರಾರು ಕ್ರಿಕೆಟ್ ಅಭಿಮಾನಿಗಳು ಜಮಾಯಿಸಿದ್ದರು. ಕಿಕ್ಕಿರಿದ ಜನಸಂದಣಿಯ ನಡುವೆಯೂ ಆ್ಯಂಬುಲೆನ್ಸ್​ಗೆ(ambulance) ಟೀಮ್‌ ಇಂಡಿಯಾ(Team India) ಅಭಿಮಾನಿಗಳು ದಾರಿ ಮಾಡಿಕೊಡುವ ಮೂಲಕ ಮಾನವೀಯತೆ ತೋರಿ ಎಲ್ಲರ ಮನಗೆದ್ದಿದ್ದಾರೆ.

ಅಭಿಮಾನಿಗಳು ಆ್ಯಂಬುಲೆನ್ಸ್​ಗೆ ದಾರಿ ಮಾಡಿಕೊಡುತ್ತಿರುವ ವಿಡಿಯೊ ಎಲ್ಲಡೆ ವೈರಲ್​ ಆಗಿದ್ದು(Viral Video), ಅಭಿಮಾನಿಗಳ ಈ ನಡೆಗೆ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದಾರೆ. ಉತ್ಸಾಹಿ ಕ್ರಿಕೆಟ್‌ ಅಭಿಮಾನಿಗಳ ನಡುವೆ ಆ್ಯಂಬುಲೆನ್ಸ್​ ಯಾವ ಸಮಸ್ಯೆಯೂ ಇಲ್ಲದಂತೆ ಸರಾಗವಾಗಿ ಮುನ್ನಡೆಯುತ್ತಿರುವ ವಿಡಿಯೊವನ್ನು ಎಎನ್​ಐ ಸುದ್ದಿ ಸಂಸ್ಥೆ ತನ್ನ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದೆ. ನೆಟ್ಟಿಗರು ಈ ವಿಡಿಯೊಗೆ ಕಮೆಂಟ್​ ಮಾಡಿದ್ದು, ಟೀಮ್​ ಇಂಡಿಯಾ ಅಭಿಮಾನಿಗಳಿಗೆ ದೊಡ್ಡ ಚಪ್ಪಾಳೆ ನೀಡಬೇಕು ಎಂದಿದ್ದಾರೆ.

ಬಾರ್ಬಡೋಸ್‌ನಿಂದ ಬುಧವಾರ ಬೆಳಿಗ್ಗೆ ಪ್ರಯಾಣ ಆರಂಭಿಸಿದ್ದ ಭಾರತ ತಂಡವು ಗುರುವಾರ ಬೆಳಗ್ಗೆ ನವದೆಹಲಿಗೆ ಬಂದಿಳಿದಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಆತಿಥ್ಯ ಸ್ವೀಕರಿಸಿದ ನಂತರ ಮಧ್ಯಾಹ್ನ 3.42ಕ್ಕೆ ಮುಂಬೈಗೆ ಪ್ರಯಾಣ ಬೆಳೆಸಿತ್ತು. ಸಂಜೆ ಐದು ಗಂಟೆಯ ನಂತರ ವಿಮಾನವು ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಆಟಗಾರರು ಬಂದೊಡನೆಯೇ ಕ್ರಿಕೆಟ್‌ ಪ್ರೇಮಿಗಳ ಜಯಘೋಷ ಮೊಳಗಿತು. ಅಭಿಮಾನಿಗಳ ಅಬ್ಬರಕ್ಕೆ ಅರಬ್ಬಿ ಸಮುದ್ರ ಕೂಡ ಒಂದು ಕ್ಷಣ ಸ್ಥಬ್ಧವಾಗಿತ್ತು. ವಿಶೇಷ ವಿನ್ಯಾಸದ ತೆರೆದ ವಾಹನದಲ್ಲಿ ವಿಶ್ವಕಪ್‌ ಟ್ರೋಫಿ ಹಿಡಿದು ನಾಯಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ, ಬೂಮ್ರಾ, ಪಾಂಡ್ಯ, ಕೋಚ್‌ ರಾಹುಲ್‌ ದ್ರಾವಿಡ್‌ ಸೇರಿದಂತೆ ಎಲ್ಲ ಆಟಗಾರರು ವಿಜಯಯಾತ್ರೆಯ ಮೆರವಣಿಗೆಯಲ್ಲಿ ಭಾಗಿಯಾಗಿ ಸಂಭ್ರಮಿಸಿದರು. ಸಾವಿರಾರು ಅಭಿಮಾನಿಗಳು ಘೋಷಣೆ ಕೂಗಿ ಅಭಿನಂದನೆಗಳ ಸಲ್ಲಿಸಿದರು.

ಇದನ್ನೂ ಓದಿ Team India: ವಾಂಖೆಡೆ ಸ್ಟೇಡಿಯಂನಲ್ಲಿ ವಂದೇ ಮಾತರಂ ಹಾಡಿದ ಟೀಮ್​ ಇಂಡಿಯಾ; ವಿಡಿಯೊ ಹಂಚಿಕೊಂಡ ಎ.ಆರ್. ರೆಹಮಾನ್

ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ವತಿಯಿಂದ ಚಾಂಪಿಯನ್‌ ಭಾರತ ತಂಡಕ್ಕೆ ಘೋಷಿಸಿದ್ದ 125 ಕೋಟಿ ರೂಪಾಯಿ ಮೊತ್ತದ ಚೆಕ್‌ ಅನ್ನು ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ, ಉಪಾಧ್ಯಕ್ಷ ರಾಜೀವ್‌ ಶುಕ್ಲಾ, ಕಾರ್ಯದರ್ಶಿ ಜಯ್‌ ಶಾ ಹಸ್ತಾಂತರಿಸಿದರು.

ಜೂನ್ 29ರಂದು ಬಾರ್ಬಾಡೋಸ್‌ನಲ್ಲಿ ನಡೆದಿದ್ದ ಟೂರ್ನಿಯ ಫೈನಲ್‌ನಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ಎದುರು ಜಯಿಸಿತ್ತು. ಆದರೆ ಕೆರೀಬಿಯನ್ ದ್ವೀಪದಲ್ಲಿ ಚಂಡಮಾರುತ ಬೀಸಿದ್ದ ಕಾರಣ ವಿಮಾನಯಾನ ಸೌಲಭ್ಯ ರದ್ದಾಗಿತ್ತು. ಆದ್ದರಿಂದ ಬುಧವಾರದವರೆಗೂ ತಂಡವು ಬಾರ್ಬಾಡೋಸ್‌ನಲ್ಲಿಯೇ ಉಳಿದಿತ್ತು.

ಟ್ರೋಫಿ ಪರೇಡ್ ನಡೆಸಿದ ಬಳಿಕ ವಾಂಖೆಡೆ ಕ್ರೀಡಾಂಗಣದಲ್ಲಿ ವಿಶ್ವಕಪ್ ವಿಜೇತ ಆಟಗಾರರು ಅಭಿಮಾನಿಗಳ ಮುಂದೆ ‘ವಂದೇ ಮಾತರಂ'(Vande Mataram) ಹಾಡನ್ನು ಹಾಡಿದ್ದರು. ಜತೆಗೆ ನೃತ್ಯ ಕೂಡ ಮಾಡಿ ಅಭಿಮಾನಿಗಳಿಗೆ ಮನರಂಜನೆ ನೀಡಿದರು. ಒಟ್ಟಾರೆ ಆಟಗಾರರು ಮತ್ತು ಮುಂಬೈ ಜನತೆ ನಿನ್ನೆ ಸಂತಸ ಅಲೆಯಲ್ಲಿ ತೇಲಾಡಿತ್ತು.

Continue Reading
Advertisement
electric bike taxi
ಪ್ರಮುಖ ಸುದ್ದಿ16 mins ago

Electric Bike Taxi: ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿ ಸಂಪೂರ್ಣ ನಿಷೇಧ

Puri Jagannath Yatra
ಧಾರ್ಮಿಕ18 mins ago

Puri Jagannath Yatra: ಜುಲೈ 7ರಂದು ಪುರಿ ಜಗನ್ನಾಥ ರಥಯಾತ್ರೆ; ಇದಕ್ಕಿದೆ ಪೌರಾಣಿಕ ಹಿನ್ನೆಲೆ

SCSP TSP Scheme
ಕರ್ನಾಟಕ25 mins ago

SCSP TSP Scheme: ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನ ಶೇ.100 ಖರ್ಚು ಮಾಡದಿದ್ರೆ ಕಠಿಣ ಕ್ರಮ; ಸಿಎಂ ವಾರ್ನಿಂಗ್‌

Viral Video
ವೈರಲ್ ನ್ಯೂಸ್39 mins ago

Viral Video: ವೇದಿಕೆಯಲ್ಲೇ ಎಲ್ಲರೆದುರು ಟಾಪ್‌ ಎತ್ತಿ ಸ್ತನ ಪ್ರದರ್ಶಿಸಿದ ಸಚಿವೆ- ವಿಡಿಯೋ ಭಾರೀ ವೈರಲ್‌

karnataka rain
ಮಳೆ42 mins ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Ayodhya Ram Mandir
ದೇಶ45 mins ago

Ayodhya Ram Mandir: ಅಯೋಧ್ಯೆ ರಾಮ ಮಂದಿರದ ಅರ್ಚಕರಿಗೆ ಹೊಸ ಸಮವಸ್ತ್ರ; ನಿಯಮದಲ್ಲಿ ಬದಲಾವಣೆ: ಕಾರಣವೇನು?

Latest50 mins ago

Self Harming: ಮೊದಲ ರಾತ್ರಿಯ ಟೆನ್ಶನ್‌ಗೆ ವರ ಆತ್ಮಹತ್ಯೆ? ಉತ್ತರ ಪ್ರದೇಶದಲ್ಲೊಂದು ವಿಲಕ್ಷಣ ಘಟನೆ

Valmiki Corporation Scam
ಪ್ರಮುಖ ಸುದ್ದಿ53 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣದಲ್ಲಿ ಮುಂದುವರಿದ ಮಾಜಿ ಸಚಿವರ ಪಿಎಸ್‌ ವಿಚಾರಣೆ; ನಾಗೇಂದ್ರಗೆ ಢವಢವ!

Team India's Victory Parade
ಕ್ರಿಕೆಟ್54 mins ago

Team India’s Victory Parade: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ನಲ್ಲಿ ಹಲವು ಅಭಿಮಾನಿಗಳಿಗೆ ಗಾಯ; ಆಸ್ಪತ್ರೆಗೆ ದಾಖಲು

Viral News
Latest58 mins ago

Viral News: ಕಾಮ ದಾಹ ತಣಿಸಿಕೊಳ್ಳಲು ವಿದ್ಯಾರ್ಥಿಗಳನ್ನೇ ಬಳಸಿಕೊಂಡ ಶಿಕ್ಷಕಿಗೆ ಶಿಕ್ಷೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka rain
ಮಳೆ42 mins ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ2 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು3 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು4 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ8 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ20 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ22 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ23 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ1 day ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

ಟ್ರೆಂಡಿಂಗ್‌