NEET UG 2024 Re-Test Result: ನೀಟ್‌ ಮರುಪರೀಕ್ಷೆಯ ಫಲಿತಾಂಶ ಪ್ರಕಟ; ಹೀಗೆ ಚೆಕ್‌ ಮಾಡಿ - Vistara News

ದೇಶ

NEET UG 2024 Re-Test Result: ನೀಟ್‌ ಮರುಪರೀಕ್ಷೆಯ ಫಲಿತಾಂಶ ಪ್ರಕಟ; ಹೀಗೆ ಚೆಕ್‌ ಮಾಡಿ

NEET UG 2024 Re-Test Result: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಫಲಿತಾಂಶವನ್ನು ಸೋಮವಾರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಪ್ರಕಟಿಸಿದೆ. ಮೇಯಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಕೃಪಾಂಕ ಪಡೆದ 1,563 ವಿದ್ಯಾರ್ಥಿಗಳಿಗೆ ಜೂನ್ 23ರಂದು ಮರುಪರೀಕ್ಷೆ ನಡೆಲಾಗಿತ್ತು.

VISTARANEWS.COM


on

NEET UG 2024 Re-Test Result
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ (Re-Test) ಫಲಿತಾಂಶವನ್ನು ಸೋಮವಾರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪ್ರಕಟಿಸಿದೆ (NEET UG 2024 Re-Test Result). ಮೇಯಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಕೃಪಾಂಕ ಪಡೆದ 1,563 ವಿದ್ಯಾರ್ಥಿಗಳಿಗೆ ಜೂನ್ 23ರಂದು ಮರುಪರೀಕ್ಷೆ ನಡೆಲಾಗಿತ್ತು. ಈ ಪೈಕಿ 813 ಅಭ್ಯರ್ಥಿಗಳು ಮಾತ್ರ ಹಾಜರಾಗಿದ್ದರು. ಶನಿವಾರ ಆನ್ಸರ್‌ ಕೀ ಪ್ರಕಟಿಸಲಾಗಿತ್ತು.

ಚಂಡೀಗಢ, ಗುಜರಾತ್‌, ಹರಿಯಾಣ, ಮೇಘಾಲಯ ಸೇರಿ ಆರು ರಾಜ್ಯಗಳ ನಗರಗಳಲ್ಲಿ ಮರು ಪರೀಕ್ಷೆ ನಡೆದಿತ್ತು. ಈ ಪೈಕಿ ಛತ್ತೀಸ್‌ಗಢದಲ್ಲಿ 602 ಅಭ್ಯರ್ಥಿಗಳ ಪೈಕಿ 291 ವಿದ್ಯಾರ್ಥಿಗಳು ಹಾಜರಾದರೆ, ಹರಿಯಾಣದಲ್ಲಿ 494 ಅಭ್ಯರ್ಥಿಗಳ ಪೈಕಿ 287, ಮೇಘಾಲಯದಲ್ಲಿ 464 ವಿದ್ಯಾರ್ಥಿಗಳ ಪೈಕಿ 234 ಅಭ್ಯರ್ಥಿಗಳು ಮಾತ್ರ ಹಾಜರಾಗಿದ್ದರು. ಗುಜರಾತ್‌ ಕೇಂದ್ರದಲ್ಲಿ ಒಬ್ಬ ವಿದ್ಯಾರ್ಥಿ ಮಾತ್ರ ಮರು ಪರೀಕ್ಷೆ ಬರೆದಿದ್ದರು.

“ಜೂನ್ 23ರಂದು ಮರು ಪರೀಕ್ಷೆಗೆ ಹಾಜರಾದ ನೀಟ್ (ಯುಜಿ) 2024ರ ಎಲ್ಲ ಅಭ್ಯರ್ಥಿಗಳ ಪರಿಷ್ಕೃತ ಸ್ಕೋರ್‌ ಕಾರ್ಡ್‌ಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಲಾಗಿನ್‌ ಆಗಿ ಪರಿಷ್ಕೃತ ಸ್ಕೋರ್‌ ಕಾರ್ಡ್‌ಗಳನ್ನು ಡೌನ್‌ಲೋಡ್‌ ಮಾಡಬಹುದು” ಎಂದು ಎನ್‌ಟಿಎ ತಿಳಿಸಿದೆ.

ಫಲಿತಾಂಶ ಹೀಗೆ ಚೆಕ್‌ ಮಾಡಿ

ನೀಟ್‌ ಪರೀಕ್ಷೆ ವೇಳೆ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಮತ್ತು ಕೇಂದ್ರ ಶಿಕ್ಷಣ ಸಚಿವಾಲಯದ ಅಧಿಕಾರಿಗಳು ಹಾಜರಿದ್ದು, ಮರುಪರೀಕ್ಷೆಯ ಮೇಲ್ವಿಚಾರಣೆ ನಡೆಸಿದರು.

ಯಾಕಾಗಿ ಮರು ಪರೀಕ್ಷೆ?

2024ರ ಮೇ 5ರಂದು 14 ಅಂತಾರಾಷ್ಟ್ರೀಯ ಸ್ಥಳಗಳು ಸೇರಿದಂತೆ 571 ನಗರಗಳಲ್ಲಿ, 4,750 ಕೇಂದ್ರಗಳಲ್ಲಿ 24 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಿದ್ದರು. ಜೂನ್ 4ರಂದು ಫಲಿತಾಂಶವನ್ನು ಪ್ರಕಟಿಸಲಾಯಿತು. ಬಳಿಕ 1,563 ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳು ದೊರೆತಿರುವುದು ಭಾರಿ ಸುದ್ದಿ ಆಯಿತು. ಸದ್ಯ ಪ್ರಕರಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಗ್ರೇಸ್ ಅಂಕದ ವಿವಾದ ದೇಶಾದ್ಯಂತ ಹರಡುತ್ತಿದ್ದಂತೆ ಕೇಂದ್ರ ಸರ್ಕಾರ ಗ್ರೇಸ್ ಅಂಕಗಳನ್ನು ಪಡೆದ 1,563 ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ನಡೆಸುವುದಾಗಿ ಸುಪ್ರೀಂ ಕೋರ್ಟ್‌ಗೆ ಹೇಳಿತ್ತು. 1,563 ಅಭ್ಯರ್ಥಿಗಳಲ್ಲಿ ಯಾರಾದರೂ ಮರುಪರೀಕ್ಷೆಯಿಂದ ಹೊರಗುಳಿದಿದ್ದರೆ ಗ್ರೇಸ್ ಅಂಕಗಳಿಲ್ಲದ ಅವರ ಹಿಂದಿನ ಅಂಕಗಳನ್ನು ಫಲಿತಾಂಶಗಳಿಗಾಗಿ ಬಳಸಲಾಗುತ್ತದೆ ಎಂದೂ ಕೇಂದ್ರ ಕೋರ್ಟ್‌ಗೆ ತಿಳಿಸಿತ್ತು. ಅದರಂತೆ ಮರುಪರೀಕ್ಷೆ ನಡೆಸಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

T20 World Cup :​ ವಿಜಯೋತ್ಸವದ ಕ್ಷಣಗಳನ್ನು ಉಲ್ಲೇಖಿಸಿ ಬಿಸಿಸಿಐಗೆ ಕುಟುಕಿದ ಆದಿತ್ಯ ಠಾಕ್ರೆ

T20 World Cup : ಟಿ20 ವಿಶ್ವ ಕಪ್​ ಗೆದ್ದುಕೊಂಡು ವೆಸ್ಟ್​ ಇಂಡೀಸ್​ನಿಂದ ಬಂದ ಭಾರತ ತಂಡದ ಆಟಗಾರರಿಗೆ ಅಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಲಕ್ಷಾಂತರ ಮಂದಿ ಸೇರಿದ್ದರು. ಮುಂಬೈನಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮ ಸ್ಟೇಡಿಯಮ್​ನ ಹೊರಗೂ ಹಾಗೂ ಒಳಗೂ ಲಕ್ಷಾಂತರ ಮಂದಿಯ ಕೂಡುವಿಕೆಗೆ ಸಾಕ್ಷಿಯಾಗಿತ್ತು. ಇದನ್ನು ಉಲ್ಲೇಖಿಸಿ ಬಿಸಿಸಿಐಗೆ ಪರೋಕ್ಷವಾಗಿ ಕುಟುಕಿದ್ದಾರೆ ಆದಿತ್ಯ ಠಾಕ್ರೆ.

VISTARANEWS.COM


on

T20 World Cup
Koo

ನವದೆಹಲಿ: ಐಸಿಸಿ ಏಕದಿನ ವಿಶ್ವಕಪ್ 2023 ರ ಫೈನಲ್ ಪಂದ್ಯವನ್ನು ಮುಂಬೈನಲ್ಲಿ ಆಯೋಜಿಸದೆ ಗುಜರಾತ್​​ನ ಅಹಮದಾಬಾದ್​ನಲ್ಲಿರುವ ವಿಶ್ವ ವಿಖ್ಯಾತ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಡಿಸಿರುವ ಬಗ್ಗೆ ಕ್ರಿಕೆಟ್ ಮುಂಬೈ ಅಭಿಮಾನಿಗಳಿಗೆ ಬೇಸರವಿತ್ತು. ಕ್ರಿಕೆಟ್​​ ಕಾಶಿಯಾಗಿರುವ ವಾಂಖೆಡೆ ಸ್ಟೇಡಿಯಮ್​ನಲ್ಲೇ ಪಂದ್ಯ ನಡೆಸಬೇಕು ಎಂಬುದು ಬಹುತೇಕ ಭಾರತೀಯರ ಒತ್ತಾಸೆಯಾಗಿತ್ತು. ಆದರೆ, ದೊಡ್ಡ ಸ್ಟೇಡಿಯಮ್​ (1.30 ಲಕ್ಷ ಮಂದಿ ಪ್ರೇಕ್ಷಕರನ್ನು ತುಂಬಿಕೊಳ್ಳುವ ಸಾಮರ್ಥ್ಯ) ಎಂಬ ಕಾರಣಕ್ಕೆ ನರೇಂದ್ರ ಮೋದಿ ಸ್ಟೇಡಿಯಮ್​ಗೆ ಫೈನಲ್ ಪಂದ್ಯವನ್ನು ವರ್ಗಾಯಿಸಲಾಯಿತ್ತು. ಫೈನಲ್​ನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ ಹೀನಾಯವಾಗಿ ಸೋತಿತ್ತು. ಇದೀಗ ಆ ನೋವನ್ನು ಶಿವಸೇನೆ ಮುಖಂಡ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಆದಿತ್ಯ ಠಾಕ್ರೆ ಹೊರ ಹಾಕಿದ್ದಾರೆ. ಅದಕ್ಕೆ ಕಾರಣವೂ ಇದೆ. ಟಿ20 ವಿಶ್ವ ಕಪ್​ ಗೆದ್ದುಕೊಂಡು (T20 World Cup ) ವೆಸ್ಟ್​ ಇಂಡೀಸ್​ನಿಂದ ಬಂದ ಭಾರತ ತಂಡದ ಆಟಗಾರರಿಗೆ ಅಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಲಕ್ಷಾಂತರ ಮಂದಿ ಸೇರಿದ್ದರು. ಮುಂಬೈನಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮ ಸ್ಟೇಡಿಯಮ್​ನ ಹೊರಗೂ ಹಾಗೂ ಒಳಗೂ ಲಕ್ಷಾಂತರ ಮಂದಿಯ ಕೂಡುವಿಕೆಗೆ ಸಾಕ್ಷಿಯಾಗಿತ್ತು. ಇದನ್ನು ಉಲ್ಲೇಖಿಸಿ ಬಿಸಿಸಿಐಗೆ ಪರೋಕ್ಷವಾಗಿ ಕುಟುಕಿದ್ದಾರೆ ಆದಿತ್ಯ ಠಾಕ್ರೆ.

ಮುಂಬೈನಲ್ಲಿ ನಿನ್ನೆ ನಡೆದ ವಿಶ್ವ ಕಪ್​ ಟ್ರೋಫಿಯ ಸಂಭ್ರಮಾಚರಣೆ ಬಿಸಿಸಿಐಗೆ ನೇರ ಸಂದೇಶವಾಗಿದೆ. ವಿಶ್ವಕಪ್ ಫೈನಲ್ ಪಂದ್ಯವನ್ನು ಮುಂಬೈನಿಂದ ಎಂದಿಗೂ ಕಸಿದುಕೊಳ್ಳಬೇಡಿ” ಎಂದು ಆದಿತ್ಯ ಠಾಕ್ರೆ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಐಸಿಸಿ ಕ್ರಿಕೆಟ್ ವಿಶ್ವಕಪ್ 2024 ರ ಚಾಂಪಿಯನ್ ಆಗಿರುವ ಭಾರತೀಯ ಕ್ರಿಕೆಟ್ ತಂಡವನ್ನು ಮುಂಬೈನಲ್ಲಿ ಗುರುವಾರ ವಿಜಯೋತ್ಸವದ ಮೆರವಣಿಗೆಯಲ್ಲಿ ಭಾರಿ ಜನಸಮೂಹ ಸ್ವಾಗತಿಸಿದ್ದರು. ಅದಾದ ಒಂದು ದಿನದ ನಂತರ ಆದಿತ್ಯ ಬಿಸಿಸಿಐ ವಿರುದ್ಧ ಟೀಕೆ ಮಾಡಿದ್ದಾರೆ.

ಇದನ್ನೂ ಓದಿ: Virat Kohli’s Phone Wallpaper: ಕೊಹ್ಲಿಯ ಮೊಬೈಲ್​ ​ವಾಲ್​ ಪೇಪರ್​ನಲ್ಲಿರುವ ವ್ಯಕ್ತಿ ಯಾರು? ಇವರ ಹಿನ್ನಲೆ ಏನು?

ಟಿ 20 ಭಾರತೀಯ ಕ್ರಿಕೆಟ್ ತಂಡವನ್ನು ಸ್ವಾಗತಿಸಲು ಅಭಿಮಾನಿಗಳು ವಾಂಖೆಡೆ ಕ್ರೀಡಾಂಗಣದಲ್ಲಿ ಗಂಟೆಗಳ ಕಾಲ ಕಾದಿದ್ದರು. ಎಂಎಸ್ ಧೋನಿ ನಾಯಕತ್ವದಲ್ಲಿ 2007 ರಲ್ಲಿ ಭಾರತದ ಮೊದಲ ಟಿ 20 ವಿಶ್ವಕಪ್ ಗೆಲುವು, 2011 ರ ಕ್ರಿಕೆಟ್ ವಿಶ್ವಕಪ್ ಗೆಲುವು ಮತ್ತು 2013 ರಲ್ಲಿ ಸಚಿನ್ ತೆಂಡೂಲ್ಕರ್ ಅವರ ಭಾವನಾತ್ಮಕ ವಿದಾಯ ಸೇರಿದಂತೆ ಅನೇಕ ಐತಿಹಾಸಿಕ ಕ್ರಿಕೆಟ್ ಘಟನೆಗಳಿಗೆ ವಾಂಖೆಡೆ ಆತಿಥ್ಯ ವಹಿಸಿದೆ.

ಅವಕಾಶಗಳು ಮತ್ತು ಕಾರ್ಯಕ್ರಮಗಳನ್ನು ಮುಂಬೈನಿಂದ ಅಹಮದಾಬಾದ್​​ಗೆ ಸ್ಥಳಾಂತರಿಸಿದ್ದಕ್ಕಾಗಿ ಠಾಕ್ರೆ ಈ ಹಿಂದೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಮೇ ತಿಂಗಳ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಹಿಂದೂಸ್ತಾನ್ ಟೈಮ್ಸ್​ಗೆ ನೀಡಿದ ಸಂದರ್ಶನದಲ್ಲಿ, ಕೈಗಾರಿಕೆಗಳು ಮತ್ತು ಯೋಜನೆಗಳನ್ನು ಗುಜರಾತ್​ಗೆ ಸ್ಥಳಾಂತರಿಸಿದ್ದರಿಂದ ಮಹಾರಾಷ್ಟ್ರವು ಗಮನಾರ್ಹ ನಷ್ಟ ಎದುರಿಸಿದೆ ಎಂದು ಆದಿತ್ಯ ಉಲ್ಲೇಖಿಸಿದ್ದರು.

ಇಂಟರ್​​ನ್ಯಾಷನಲ್​ ಫೈನಾನ್ಸ್ ಸೆಂಟರ್, ವೇದಾಂತ ಫಾಕ್ಸ್​ಕಾನ್​, ಬೃಹತ್ ಡ್ರಗ್​ (ಔಷಧ) ಪಾರ್ಕ್ ಮತ್ತು ವೈದ್ಯಕೀಯ ಸಾಧನಗಳ ಪಾರ್ಕ್ ಸೇರಿಕೊಂಡಿವೆ. ಮುಂಬೈನಲ್ಲಿ ನಡೆಯಬೇಕಿದ್ದ ವಿಶ್ವಕಪ್ ಫೈನಲ್ ಪಂದ್ಯವನ್ನು ಅಹಮದಾಬಾದ್​ಗೆ ಸ್ಥಳಾಂತರಿಸಲಾಗಿದೆ ಎಂಬುದಾಗಿಯೂ ಅವರು ಗಮನ ಸೆಳೆದಿದ್ದರು.

Continue Reading

ದೇಶ

Defence Production: ರಕ್ಷಣಾ ಕ್ಷೇತ್ರದಲ್ಲಿ ಭಾರತ ಆತ್ಮನಿರ್ಭರ; ರಕ್ಷಣಾ ಉತ್ಪಾದನೆ ದಾಖಲೆಯ ಶೇ.16ರಷ್ಟು ಏರಿಕೆ

Defence Production: 2023-24ರಲ್ಲಿ ದೇಶದ ಸಾರ್ವಜನಿಕ ವಲಯದ ಸಂಸ್ಥೆಗಳು ಹಾಗೂ ಖಾಸಗಿ ಕಂಪನಿಗಳು ಸೇರಿ ಒಟ್ಟು 1.26 ಲಕ್ಷ ಕೋಟಿ ರೂ. ಮೌಲ್ಯದ ರಕ್ಷಣಾ ಉತ್ಪನ್ನಗಳನ್ನು ಉತ್ಪಾದಿಸಿರುವುದ ದಾಖಲೆಯಾಗಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕ್ಷೇತ್ರದ ಉತ್ಪಾದನೆಯ ಸಾಧನೆ ಕುರಿತ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

VISTARANEWS.COM


on

Defence Production
Koo

ನವದೆಹಲಿ: ಮೇಕ್‌ ಇನ್‌ ಇಂಡಿಯಾ, ಆತ್ಮನಿರ್ಭರ ಭಾರತ ಅಭಿಯಾನ, ಯೋಜನೆಗಳ ಮೂಲಕ ಹೆಚ್ಚಿನ ಉತ್ತೇಜನ ನೀಡಿದ ಪರಿಣಾಮವಾಗಿ ಭಾರತದ ರಕ್ಷಣಾ ಉತ್ಪಾದನೆಯು (Defence Production) 2023-24ನೇ ಸಾಲಿನಲ್ಲಿ ದಾಖಲೆ ಬರೆದಿದೆ. 2023-24ನೇ ಸಾಲಿನಲ್ಲಿ ಭಾರತದ ರಕ್ಷಣಾ ಕ್ಷೇತ್ರದ ಉತ್ಪಾದನೆಯು ಶೇ.16.7ರಷ್ಟು ಜಾಸ್ತಿಯಾಗಿದ್ದು, ಇದು ದೇಶದ ಇತಿಹಾಸದಲ್ಲಿಯೇ ಗರಿಷ್ಠ ಬೆಳವಣಿಗೆಯಾಗಿದೆ ಎಂದು ರಕ್ಷಣಾ ಇಲಾಖೆ (Department Of Defence) ಪ್ರಕಟಣೆ ಹೊರಡಿಸಿದೆ. ಅದರಲ್ಲೂ, 2019-20ರ ಬಳಿಕ ಗಮನಾರ್ಹ ಶೇ.60ರಷ್ಟು ಏರಿಕೆಯಾಗಿರುವುದು ರಕ್ಷಣಾ ಕ್ಷೇತ್ರದ ಆತ್ಮನಿರ್ಭರತೆಗೆ (Atmanirbhar) ಹಿಡಿದ ಕನ್ನಡಿ ಎಂದೇ ಹೇಳಲಾಗುತ್ತಿದೆ.

ಡಿಫೆನ್ಸ್‌ ಪಬ್ಲಿಕ್‌ ಸೆಕ್ಟರ್‌ ಅಂಡರ್‌ಟೇಕಿಂಗ್ಸ್‌ (DPSU) ಮಾಹಿತಿ ಪ್ರಕಾರ, “2023-24ರಲ್ಲಿ ದೇಶದ ಸಾರ್ವಜನಿಕ ವಲಯದ ಸಂಸ್ಥೆಗಳು ಹಾಗೂ ಖಾಸಗಿ ಕಂಪನಿಗಳು ಸೇರಿ ಒಟ್ಟು 1.26 ಲಕ್ಷ ಕೋಟಿ ರೂ. ಮೌಲ್ಯದ ರಕ್ಷಣಾ ಉತ್ಪನ್ನಗಳನ್ನು ಉತ್ಪಾದಿಸಿವೆ. 2022-23ರ ಹಣಕಾಸು ವರ್ಷದಲ್ಲಿ ದೇಶೀಯವಾಗಿ 1.08 ಲಕ್ಷ ಕೋಟಿ ರೂ. ಮೌಲ್ಯದ ಉತ್ಪನ್ನಗಳನ್ನು ಉತ್ಪಾದಿಸಲಾಗಿತ್ತು. ಕಳೆದ ಆರ್ಥಿಕ ಸಾಲಿಗೆ ಹೋಲಿಸಿದರೆ ಇದು ಶೇ.16.7ರಷ್ಟು ಬೆಳವಣಿಗೆಯಾಗಿದೆ” ಎಂದು ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.

ನರೇಂದ್ರ ಮೋದಿ ಸಂತಸ

ದೇಶದ ರಕ್ಷಣಾ ಉತ್ಪಾದನೆಯು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. “ಭಾರತವು ರಕ್ಷಣಾ ಉತ್ಪಾದನೆಯಲ್ಲಿ ಆತ್ಮನಿರ್ಭರತೆ ಸಾಧಿಸುತ್ತಿದೆ. ರಕ್ಷಣಾ ಉತ್ಪಾದನೆಯಲ್ಲಿ ಭಾರತವು ಜಗತ್ತಿನಲ್ಲೇ ಮುಂಚೂಣಿಯಲ್ಲಿ ಇರಬೇಕು ಎಂಬ ಬದ್ಧತೆಯಿಂದ ಕೆಲಸ ಮಾಡುತ್ತಿದ್ದೇವೆ. ಈಗ ಉತ್ಪಾದನಾ ಕ್ಷೇತ್ರದ ಬೆಳವಣಿಗೆಯು ಸಂತಸ ತಂದಿದೆ. ಇದರ ಹಿಂದೆ ಶ್ರಮವಹಿಸಿದ ಎಲ್ಲರಿಗೂ ಅಭಿನಂದನೆಗಳು” ಎಂಬುದಾಗಿ ಅವರು ಪೋಸ್ಟ್‌ ಮಾಡಿದ್ದಾರೆ.

ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಕೂಡ ರಕ್ಷಣಾ ಉತ್ಪಾದನೆ ಸಾಧನೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “2023-24ನೇ ಸಾಲಿನಲ್ಲಿ ರಕ್ಷಣಾ ಕ್ಷೇತ್ರದ ಉತ್ಪಾದನೆ ಮೊತ್ತವು ದಾಖಲೆಯ 1.27 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಕ್ಷಣಾ ಕ್ಷೇತ್ರದಲ್ಲೂ ಆತ್ಮನಿರ್ಭರತೆ ಸಾಧಿಸಲು ನೀಡಿದ ಉತ್ತೇಜನದ ಫಲವಾಗಿ ಭಾರತವು ಗಣನೀಯ ಸಾಧನೆ ಮಾಡಿದೆ” ಎಂಬುದಾಗಿ ರಾಜನಾಥ್‌ ಸಿಂಗ್‌ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: Aero India 2023: ಭಾರತದ ರಕ್ಷಣಾ ರಫ್ತು 2024ರಲ್ಲಿ 500 ಕೋಟಿ ಡಾಲರ್‌ ಗುರಿ: ಹೂಡಿಕೆದಾರರಿಗೆ ಸುವರ್ಣಾವಕಾಶ ಎಂದ ಪ್ರಧಾನಿ ಮೋದಿ

Continue Reading

ಶಿಕ್ಷಣ

NEET PG 2024: ನೀಟ್-ಪಿಜಿ ಪರೀಕ್ಷೆಯ ದಿನಾಂಕ ಪ್ರಕಟ; ಆ. 11ರಂದು ನಡೆಯಲಿದೆ ಟೆಸ್ಟ್‌

NEET PG 2024: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ ದಿನಾಂಕವನ್ನು ರಾಷ್ಟ್ರೀಯ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಆಗಸ್ಟ್ 11ರಂದು ಎರಡು ಪಾಳಿಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

VISTARANEWS.COM


on

NEET PG 2024
Koo

ನವದೆಹಲಿ: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ (NEET PG 2024) ದಿನಾಂಕವನ್ನು ರಾಷ್ಟ್ರೀಯ ಪರೀಕ್ಷಾ ಮಂಡಳಿ (National Board of Examinations) ಪ್ರಕಟಿಸಿದೆ. ಆಗಸ್ಟ್ 11ರಂದು ಎರಡು ಪಾಳಿಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್‌ natboard.edu.in ಇಲ್ಲಿಗೆ ಭೇಟಿ ನೀಡಿ.

ಜೂನ್ 23ರಂದು ನಿಗದಿಯಾಗಿದ್ದ ನೀಟ್-ಪಿಜಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಯುಜಿ ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆ ಸೇರಿದಂತೆ ವಿವಿಧ ವಿವಾದ ಭುಗಿಲೆದ್ದ ಹಿನ್ನಲೆಯಲ್ಲಿ ಜೂನ್‌ 22ರಂದು ಪರೀಕ್ಷೆ ಮುಂದೂಡಿ ಪ್ರಕಟಣೆ ಹೊರಡಿಸಲಾಗಿತ್ತು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ಹಲವು ದೂರುಗಳು ದಾಖಲಾಗಿದ್ದವು. ಸಾಮಾಜಿಕ ಮಾಧ್ಯಮಗಳ ಮೂಲಕ ಆಕಾಂಕ್ಷಿಗಳಿಗೆ ಹಣಕ್ಕಾಗಿ ಪ್ರಶ್ನೆ ಪತ್ರಿಕೆಯನ್ನು ನೀಡುವ ಆಮಿಷ ಒಡ್ಡಲಾಗಿದೆ ಎಂದು ದೂರಲಾಗಿತ್ತು. ಹೀಗಾಗಿ ಪರೀಕ್ಷೆಯನ್ನೇ ರದ್ದು ಮಾಡಲಾಗಿತ್ತು.

ನೀಟ್-ಪಿಜಿ ಪ್ರವೇಶ ಪರೀಕ್ಷೆಯ ಸಮಗ್ರತೆಯನ್ನು ಕಾಪಾಡಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿತ್ತು. ಪರೀಕ್ಷಾ ಪ್ರಕ್ರಿಯೆಗಳ ನ್ಯಾಯಸಮ್ಮತತೆಯನ್ನು ಖಚಿತಪಡಿಸಿಕೊಳ್ಳಲು ಸಮಗ್ರ ಮೌಲ್ಯಮಾಪನ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವಾಲಯ ಸಮರ್ಥನೆ ನೀಡಿತ್ತು.

ಸಚಿವಾಲಯ ಹೇಳಿದ್ದೇನು?

ಕೊನೇ ಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ಉಂಟಾದ ಅನಾನುಕೂಲತೆಗೆ ಆರೋಗ್ಯ ಸಚಿವಾಲಯವು ವಿಷಾದಿಸುತ್ತದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಪರೀಕ್ಷಾ ಪ್ರಕ್ರಿಯೆ ಪಾವಿತ್ರ್ಯವನ್ನು ಕಾಪಾಡಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವಾಲ ಪ್ರಕಟಣೆ ಹೊರಡಿಸಿ ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟಿಸುವುದಾಗಿ ಹೇಳಿತ್ತು.

ಡಾರ್ಕ್​ನೆಟ್​​ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಯುಜಿಸಿ-ನೆಟ್ ರದ್ದುಗೊಳಿಸಿದ ನಂತರ ಮುಂದೂಡಲ್ಪಟ್ಟ ಎರಡನೇ ಸ್ಪರ್ಧಾತ್ಮಕ ಪರೀಕ್ಷೆ ಇದಾಗಿದೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (UG) ಅಕ್ರಮಗಳು ನಡೆದಿವೆ ಎಂಬ ಆರೋಪದ ಬಗ್ಗೆಯೂ ವಿವಾದವಿದೆ. ಜೂನ್‌ 21ರಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಜೂನ್ 25ರಿಂದ ನಡೆಯಬೇಕಿದ್ದ ಸಿಎಸ್ಐಆರ್-ಯುಜಿಸಿ-ನೆಟ್ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಘೋಷಿಸಿತ್ತು.

ನೀಟ್​ ಪರೀಕ್ಷೆ ಅಕ್ರಮಗಳ ತನಿಖೆ ಹೊಣೆ ಸಿಬಿಐಗೆ ಒಪ್ಪಿಸಿದ ಕೇಂದ್ರ

ನವದೆಹಲಿ: ಪದವಿಪೂರ್ವ ವೈದ್ಯಕೀಯ ಕೋರ್ಸ್​ಗಳ ಪ್ರವೇಶಕ್ಕಾಗಿ ನಡೆಸಲಾಗುವ ಸ್ಪರ್ಧಾತ್ಮಕ ನೀಟ್ ಪರೀಕ್ಷೆಯಲ್ಲಿ (NEET UG) ನಡೆದಿರುವ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ತನಿಖೆ ಹೊಣೆಯನ್ನು ಕೇಂದ್ರ ಸರ್ಕಾರ ಇತ್ತೀಚೆಗೆ ಸಿಬಿಐ ಒಪ್ಪಿಸಿದೆ. ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ “ಕೆಲವು ಅಕ್ರಮಗಳು, ವಂಚನೆ ಮತ್ತು ದುಷ್ಕೃತ್ಯಗಳ ಪ್ರಕರಣಗಳು ವರದಿಯಾಗಿವೆ ಮತ್ತು ಪರೀಕ್ಷಾ ಪ್ರಕ್ರಿಯೆಯ ನಿರ್ವಹಣೆಯಲ್ಲಿ ಪಾರದರ್ಶಕತೆಗಾಗಿ, ಶಿಕ್ಷಣ ಸಚಿವಾಲಯದ ಪರಿಶೀಲನೆಯ ನಂತರ ಈ ಬಗ್ಗೆ ಸಮಗ್ರ ತನಿಖೆಗಾಗಿ ಸಿಬಿಐಗೆ ವಹಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಪರೀಕ್ಷೆಗಳ ಪಾವಿತ್ರ್ಯವನ್ನು ಖಚಿತಪಡಿಸಿಕೊಳ್ಳಲು ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ರಕ್ಷಿಸಲು ಸರ್ಕಾರ ಬದ್ಧ. ಮೋಸದಲ್ಲಿ ಭಾಗಿಯಾಗಿರುವ ಯಾವುದೇ ವ್ಯಕ್ತಿ, ಸಂಸ್ಥೆ ಕಠಿಣ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಎಂದು ಸಚಿವಾಲಯ ಹೇಳಿದೆ. ಮೇ 5 ರಂದು ದೇಶದ 4,750 ಕೇಂದ್ರಗಳಲ್ಲಿ ನೀಟ್-ಯುಜಿ ನಡೆದಿದ್ದು, ಸುಮಾರು 24 ಲಕ್ಷ ಅಭ್ಯರ್ಥಿಗಳು ಭಾಗವಹಿಸಿದ್ದರು. ನಿರೀಕ್ಷಿತ ದಿನಾಂಕಕ್ಕಿಂತ ಹತ್ತು ದಿನ ಮುಂಚಿತವಾಗಿ ಜೂನ್ 4 ರಂದು ಫಲಿತಾಂಶಗಳನ್ನು ಘೋಷಿಸಲಾಗಿತ್ತು. ಫಲಿತಾಂಶದ ನಂತರ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ದುಷ್ಕೃತ್ಯಗಳ ಆರೋಪಗಳು ಕೇಳಿಬಂದಿದ್ದವು.

ಇದನ್ನೂ ಓದಿ: NEET UG Row : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಮುಖ್ಯಸ್ಥರನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ

Continue Reading

ದೇಶ

Ayodhya Ram Mandir: ಅಯೋಧ್ಯೆ ರಾಮ ಮಂದಿರದ ಅರ್ಚಕರಿಗೆ ಹೊಸ ಸಮವಸ್ತ್ರ; ನಿಯಮದಲ್ಲಿ ಬದಲಾವಣೆ: ಕಾರಣವೇನು?

Ayodhya Ram Mandir: ಅಯೋಧ್ಯೆ ರಾಮ ಮಂದಿರದ ಕೆಲವೊಂದು ನಿಯಮಗಳಲ್ಲಿ ಬದಲಾವಣೆ ತರಲಾಗಿದೆ. ಜತೆಗೆ ಅರ್ಚಕರ ಸಮವಸ್ತ್ರ ಮತ್ತು ಬಣ್ಣ ಬದಲಾಗಿದೆ. ಅರ್ಚಕರು ದೇವಾಲಯಕ್ಕೆ ಮೊಬೈಲ್ ಫೋನ್‌ಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ. ಹೊಸ ಡ್ರೆಸ್‌ ಕೋಡ್‌ ಜುಲೈ 1ರಿಂದಲೇ ಜಾರಿಗೆ ಬಂದಿದೆ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

VISTARANEWS.COM


on

Ayodhya Ram Mandir
Koo

ಲಕ್ನೋ: ಅಯೋಧ್ಯೆ ರಾಮ ಮಂದಿರ (Ayodhya Ram Mandir)ದ ಕೆಲವೊಂದು ನಿಯಮಗಳಲ್ಲಿ ಬದಲಾವಣೆ ತರಲಾಗಿದೆ. ಜತೆಗೆ ಅರ್ಚಕರ ಸಮವಸ್ತ್ರ ಮತ್ತು ಬಣ್ಣ ಬದಲಾಗಿದೆ. ಅರ್ಚಕರು ದೇವಾಲಯಕ್ಕೆ ಮೊಬೈಲ್ ಫೋನ್‌ಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ ಎಂದು ದೇವಾಲಯದ ಟ್ರಸ್ಟ್‌ನ ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿಯವರೆಗೆ ಗರ್ಭಗುಡಿಯ ಪುರೋಹಿತರು ಕೇಸರಿ ಬಟ್ಟೆಗಳನ್ನು ಅಂದರೆ ಕೇಸರಿ ಪೇಟ, ಕೇಸರಿ ಕುರ್ತಾ ಮತ್ತು ಧೋತಿ ಧರಿಸುತ್ತಿದ್ದರು. ಇದೀಗ ಪುರೋಹಿತರು ಹಳದಿ (ಪಿತಾಂಬರಿ) ಬಣ್ಣದ ಧೋತಿ, ಅದೇ ಬಣ್ಣದ ಕುರ್ತಾ ಮತ್ತು ಪೇಟ ಧರಿಸುತ್ತಿದ್ದಾರೆ.

ಹೊಸ ಡ್ರೆಸ್‌ ಕೋಡ್‌ ಜುಲೈ 1ರಿಂದಲೇ ಜಾರಿಗೆ ಬಂದಿದೆ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಹೊಸ ಪುರೋಹಿತರಿಗೆ ಹಳದಿ ಪೇಟ ಕಟ್ಟಲು ತರಬೇತಿ ನೀಡಲಾಗಿದೆ ಎಂದೂ ಅವರು ಹೇಳಿದ್ದಾರೆ.

ಹೇಗಿದೆ ಹೊಸ ಸಮವಸ್ತ್ರ?

‘ಚೌಬಂದಿ’ ಎಂದು ಕರೆಯಲ್ಪಡುವ ಹೊಸ ಕುರ್ತಾದಲ್ಲಿ ಯಾವುದೇ ಬಟನ್‌ ಇರುವುದಿಲ್ಲ ಮತ್ತು ಅದನ್ನು ಕಟ್ಟಲು ದಾರವನ್ನು ಬಳಸಲಾಗುತ್ತದೆ. ಹಳದಿ ಬಣ್ಣದ ‘ಧೋತಿ’ಯನ್ನು ಹತ್ತಿ ಬಟ್ಟೆಯಿಂದ ತಯಾರಿಸಲಾಗುತ್ತದೆ. ಇದು ಪಾದವನ್ನೂ ಮುಚ್ಚಲಿದೆ. ದೇವಾಲಯದಲ್ಲಿ ಮುಖ್ಯ ಅರ್ಚಕರು ಮತ್ತು ನಾಲ್ವರು ಸಹಾಯಕ ಅರ್ಚಕರು ಇದ್ದಾರೆ. ಈಗ ಪ್ರತಿ ಸಹಾಯಕ ಪುರೋಹಿತರೊಂದಿಗೆ ಐವರು ಪುರೋಹಿತರು ತರಬೇತಿ ಪಡೆಯುತ್ತಿದ್ದಾರೆ.

ಪುರೋಹಿತರ ಪ್ರತಿ ತಂಡವು ಮುಂಜಾನೆ 3.30ರಿಂದ ರಾತ್ರಿ 11ರವರೆಗೆ ಪಾಳಿಯಲ್ಲಿ ಐದು ಗಂಟೆಗಳ ಕಾಲ ಸೇವೆ ಸಲ್ಲಿಸುತ್ತಿದೆ. ʼʼರಾಮ ಮಂದಿರದಲ್ಲಿ ಅರ್ಚಕರಿಗೆ ಹೊಸ ಡ್ರೆಸ್ ಕೋಡ್ ಜಾರಿಗೆ ತರಲಾಗಿದೆ. ಈಗ ಮುಖ್ಯ ಅರ್ಚಕರು, ನಾಲ್ವರು ಸಹಾಯಕ ಪುರೋಹಿತರು ಮತ್ತು 20 ತರಬೇತಿ ಪುರೋಹಿತರು ಸೇರಿದಂತೆ ಎಲ್ಲ ಪುರೋಹಿತರು ಹಳದಿ ಬಣ್ಣದ ತಲೆಯ ಸಫಾ, ಚೌಬಂದಿ ಮತ್ತು ಧೋತಿ ಧರಿಸಲಿದ್ದಾರೆ” ಎಂದು ರಾಮ ಮಂದಿರದ ಸಹಾಯಕ ಅರ್ಚಕ ಸಂತೋಷ್ ಕುಮಾರ್ ತಿವಾರಿ ತಿಳಿಸಿದ್ದಾರೆ.

ಕಾರಣವೇನು?

ಏಕರೂಪತೆಯನ್ನು ಕಾಪಾಡಿಕೊಳ್ಳಲು ಮತ್ತು ಭದ್ರತೆಯನ್ನು ಖಚಿತಪಡಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಅರ್ಚಕರು ತಮ್ಮ ಫೋನ್‌ಗಳನ್ನು ದೇವಾಲಯಗಳಿಗೆ ಕೊಂಡೊಯ್ಯುವುದನ್ನು ನಿಷೇಧಿಸಿದ್ದು ಕೂಡ ಭದ್ರತಾ ಕ್ರಮದ ಒಂದು ಭಾಗ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಇತ್ತೀಚೆಗೆ ದೇವಾಲಯದ ಚಿತ್ರಗಳು ಆನ್‌ಲೈನ್‌ನಲ್ಲಿ ಸೋರಿಕೆಯಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ನಿಯಮ ಜಾರಿಗೊಳಿಸಿದ್ದಾರೆ.

ಕಡಿಮೆಯಾದ ಭಕ್ತರ ದಟ್ಟಣೆ

ಅಯೋಧ್ಯೆ ರಾಮಮಂದಿರ ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾಗಿ ಹೊರಹೊಮ್ಮಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವುದು ಕೋಟ್ಯಂತರ ಹಿಂದೂಗಳ ಕನಸಾಗಿತ್ತು. ಹಾಗಾಗಿ ರಾಮಮಂದಿರ ಉದ್ಘಾಟನೆಯಾದ ಬೆನ್ನಿಗೇ ಲಕ್ಷಾಂತರ ಸಂಖ್ಯೆಯ ಭಕ್ತರು ರಾಮನ ದರ್ಶನಕ್ಕೆ ಬರುತ್ತಿದ್ದರು. ಆದರೆ ಮಂದಿರ ಉದ್ಘಾಟನೆಯಾಗಿ ಈಗಾಗಲೇ ಆರು ತಿಂಗಳು ಕಳೆದಿರುವುದರಿಂದ ಭಕ್ತರ ಸಂಖ್ಯೆ ಸಹಜವಾಗಿಯೇ ಕಡಿಮೆಯಾಗುತ್ತಿದೆ.

ಕಳೆದ ಆರು ವಾರಗಳಲ್ಲಿ ಅಯೋಧ್ಯೆ ನಗರಕ್ಕೆ ಬರುವ ವಿಮಾನಗಳು, ರೈಲುಗಳು ಮತ್ತು ಬಸ್ ಸೇವೆ ಗಮನಾರ್ಹವಾಗಿ ಕಡಿಮೆಯಾಗುತ್ತ ಬಂದಿದೆ. ಕೆಲವು ವಿಶೇಷ ರೈಲುಗಳ ಕಾರ್ಯಾಚರಣೆ ನಿಲ್ಲಿಸಲಾಗಿದೆ. ಇತರ ರಾಜ್ಯಗಳಿಂದ ಅಯೋಧ್ಯೆಗೆ ಬರುವ ವಿಶೇಷ ಬಸ್ಸುಗಳ ಸಂಖ್ಯೆಯಲ್ಲೂ ಕಡಿತವಾಗಿದೆ. ಜನವರಿ 22ರಂದು ಪ್ರಾಣ ಪ್ರತಿಷ್ಠಾ ಸಮಾರಂಭ ನಡೆದ ನಂತರ ಅಯೋಧ್ಯೆಗೆ ಬರುವ ಭಕ್ತರ ಸಂಖ್ಯೆ ವಿಪರೀತ ಹೆಚ್ಚಾಗಿತ್ತು. ಜನವರಿಯಿಂದ ಮಾರ್ಚ್ 2024ರವರೆಗೆ ಪ್ರತಿದಿನ ಸುಮಾರು 1.5 ಲಕ್ಷ ಭಕ್ತರು ಭೇಟಿ ನೀಡುತ್ತಿದ್ದರು. ಆದರೆ ಏಪ್ರಿಲ್‌ನಿಂದ ಭಕ್ತರ ಸಂಖ್ಯೆ ಕಡಿಮೆಯಾಗುತ್ತ ಬಂತು. 

ಇದನ್ನೂ ಓದಿ: Samrat Choudhary: ಅಯೋಧ್ಯೆಯಲ್ಲಿ ತಲೆ ಬೋಳಿಸಿಕೊಂಡು ರಾಮನಿಗೆ ಪೇಟ ಅರ್ಪಿಸಿದ ಬಿಹಾರ ಡಿಸಿಎಂ! ಇದಕ್ಕಿದೆ ವಿಶೇಷ ಕಾರಣ!

Continue Reading
Advertisement
Team India
ಕ್ರೀಡೆ1 min ago

Team India: ರೋಹಿತ್​, ಸೂರ್ಯಕುಮಾರ್​, ದುಬೆ, ಜೈಸ್ವಾಲ್​ಗೆ ಸನ್ಮಾನ ಮಾಡಿದ ಸಿಎಂ ಏಕನಾಥ್​ ಶಿಂಧೆ

Guarantee Schemes
ಕರ್ನಾಟಕ2 mins ago

Guarantee Schemes: ಗ್ಯಾರಂಟಿ ಯೋಜನೆಗಳಿಗೆ ದಲಿತರ 14 ಸಾವಿರ ಕೋಟಿ ರೂ. ಕೊಟ್ಟ ಸಿದ್ದರಾಮಯ್ಯ!

T20 World Cup
ಪ್ರಮುಖ ಸುದ್ದಿ2 mins ago

T20 World Cup :​ ವಿಜಯೋತ್ಸವದ ಕ್ಷಣಗಳನ್ನು ಉಲ್ಲೇಖಿಸಿ ಬಿಸಿಸಿಐಗೆ ಕುಟುಕಿದ ಆದಿತ್ಯ ಠಾಕ್ರೆ

Sexual Harassment
Latest13 mins ago

Sexual Harassment: 80 ವರ್ಷದ ಅಜ್ಜಿಯ ಮೇಲೆ ನಿರಂತರ ಅತ್ಯಾಚಾರ; ಮೊಮ್ಮಗನಿಗೆ ಜೀವಾವಧಿ ಶಿಕ್ಷೆ

ಕರ್ನಾಟಕ20 mins ago

Satish Jarkiholi: ಜನತಾ ದರ್ಶನಕ್ಕೆ ಅಧಿಕಾರಿಗಳು ಗೈರಾಗುವುದು ತಪ್ಪು; ಎಚ್‌ಡಿಕೆ ಪರ ಸಚಿವ ಸತೀಶ್ ಜಾರಕಿಹೊಳಿ ಬ್ಯಾಟಿಂಗ್!

Kangana Ranaut Madhavan's Hilarious Reaction To Double-Meaning
ಬಾಲಿವುಡ್21 mins ago

Kangana Ranaut: ನಿಮ್ಮೊಳಗೆ ರಾಷ್ಟ್ರೀಯ ಪ್ರಶಸ್ತಿ ಇದೆಯಾ ಎಂದು ಕಂಗನಾಗೆ ಡಬಲ್‌ ಮೀನಿಂಗ್‌ ಪ್ರಶ್ನೆ;ಬಿದ್ದು ಬಿದ್ದು ನಕ್ಕ ಆರ್ ಮಾಧವನ್!

Lovers Fighting
ಚಿಕ್ಕಬಳ್ಳಾಪುರ22 mins ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Defence Production
ದೇಶ27 mins ago

Defence Production: ರಕ್ಷಣಾ ಕ್ಷೇತ್ರದಲ್ಲಿ ಭಾರತ ಆತ್ಮನಿರ್ಭರ; ರಕ್ಷಣಾ ಉತ್ಪಾದನೆ ದಾಖಲೆಯ ಶೇ.16ರಷ್ಟು ಏರಿಕೆ

Georgina Rodriguez
ಕ್ರೀಡೆ47 mins ago

Georgina Rodriguez : ಬಿಕಿನಿ ದಿನದಂದು ಬಗೆಬಗೆಯ ಬಿಕಿನಿಗಳಲ್ಲಿ ಮೈಮಾಟ ತೋರಿಸಿದ ಕ್ರಿಸ್ಟಿಯಾನೊ ರೊನಾಲ್ಡೊ ಪ್ರೇಯಸಿ ಜಾರ್ಜಿಯಾ ರೋಡ್ರಿಗಸ್​

Stock Market
ವಾಣಿಜ್ಯ52 mins ago

Stock Market: 1 ಲಕ್ಷ ಪಾಯಿಂಟ್‌ ಮೈಲಿಗಲ್ಲಿನತ್ತ ಸೆನ್ಸೆಕ್ಸ್‌; ಅಂಕಿ-ಅಂಶ ಹೇಳೋದೇನು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lovers Fighting
ಚಿಕ್ಕಬಳ್ಳಾಪುರ22 mins ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

karnataka rain
ಮಳೆ3 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ4 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು5 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು6 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ10 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ22 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ24 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ1 day ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ1 day ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

ಟ್ರೆಂಡಿಂಗ್‌