DCM Post: ಒನ್ ಮ್ಯಾನ್ ಒನ್ ಪೋಸ್ಟ್ ಕೂಗಿಗೆ ಡಿಕೆಶಿ ಡೋಂಟ್ ಕೇರ್‌; ಕೇಡರ್ ಬೇಸ್ ಪಾರ್ಟಿ ಕಟ್ಟಲು ಪಣ! - Vistara News

ಕರ್ನಾಟಕ

DCM Post: ಒನ್ ಮ್ಯಾನ್ ಒನ್ ಪೋಸ್ಟ್ ಕೂಗಿಗೆ ಡಿಕೆಶಿ ಡೋಂಟ್ ಕೇರ್‌; ಕೇಡರ್ ಬೇಸ್ ಪಾರ್ಟಿ ಕಟ್ಟಲು ಪಣ!

DCM Post: ಪಕ್ಷ ಸಂಘಟನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಸರಣಿ ಸಭೆಗಳನ್ನು ಮುಂದುವರಿಸಿದ್ದಾರೆ. ಕಳೆದ ವಾರ ಬೆಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಭೆ ನಡೆದಿತ್ತು, ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಪದಾಧಿಕಾರಿಗಳ ಸಭೆ ನಡೆಸಿದ್ದಾರೆ.

VISTARANEWS.COM


on

DCM Post
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ರಾಜ್ಯ ಕಾಂಗ್ರೆಸ್‌ ನಾಯಕರಿಂದಲೇ ಒತ್ತಾಯ ಕೇಳಿಬರುತ್ತಿದೆ. ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ (DCM Post) ಸ್ಥಾನವನ್ನು ಒಬ್ಬರಿಗೆ ನೀಡಿರುವುದಕ್ಕೆ ಪಕ್ಷದಲ್ಲಿ ಭಿನ್ನಮತ ಭುಗಿಲೆದ್ದಿದೆ. ಆದರೆ, ಒನ್ ಮ್ಯಾನ್ ಒನ್ ಪೋಸ್ಟ್ ಕೂಗಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತ್ರ ಡೋಂಟ್ ಕೇರ್ ಎನ್ನುತ್ತಿದ್ದು, ಕೇಡರ್ ಬೇಸ್ ಪಾರ್ಟಿ ಕಟ್ಟಲು ಅವರು ಪಣತೊಟ್ಟಿದ್ದಾರೆ. ಇದಕ್ಕಾಗಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.

ಚುನಾವಣೆ ದೃಷ್ಟಿಯಿಂದ ಪ್ರತ್ಯೇಕ ಆ್ಯಕ್ಷನ್ ಪ್ಲ್ಯಾನ್ ಸಿದ್ಧಪಡಿಸಿ ಪದಾಧಿಕಾರಿಗಳ ಸಭೆಯಲ್ಲಿ ಮಂಡನೆ ಮಾಡಿದ್ದಾರೆ. ಇನ್ನು ಲೋಕಸಭೆ ಫಲಿತಾಂಶದ ಹಿನ್ನಡೆ ಹಿನ್ನೆಲೆಯಲ್ಲಿ ವಲಯವಾರು ಸತ್ಯ ಶೋಧನಾ ಸಮಿತಿ ರಚನೆಗೆ ನಿರ್ಧಾರ ಮಾಡಿದ್ದಾರೆ.

ಲೋಕಸಭೆಯಲ್ಲಿ ಹಿನ್ನಡೆ ಅನುಭವಿಸಿದ ವಿಧಾನಸಭಾ ಕ್ಷೇತ್ರಗಳ ಪ್ರಗತಿ ಪರಿಶೀಲನೆ, ಕಾರಣಗಳನ್ನು ಪತ್ತೆ ಹಚ್ಚುವುದು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ರೂಪುರೇಷೆ ಸಿದ್ಧಪಡಿಸಲು ವಲಯವಾರು ಸಮಿತಿ ರಚನೆ ಮಾಡಲು ಹಾಗೂ ಬಿಬಿಎಂಪಿ, ಜಿಪಂ, ತಾಪಂ ಚುನಾವಣೆಗೆ ಹಾಗೂ ಉಪ ಚುನಾವಣೆಯಲ್ಲಿ ಸಕ್ರಿಯವಾಗಿ ಕೆಲಸ ಮಾಡುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ | Hosur Airport: ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಹೊಣೆ ಬಿಐಎಎಲ್‌ಗೆ! ಕರ್ನಾಟಕಕ್ಕೆ ಟಕ್ಕರ್‌ ಕೊಟ್ಟ ತಮಿಳುನಾಡು

ಪ್ರತಿ ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರವಾರು ಸಂಚಾಲನ ಸಮಿತಿ ರಚನೆಗೂ ನಿರ್ಧಾರ ಮಾಡಲಾಗಿದೆ. ಇದಕ್ಕಾಗಿ ಮಾಜಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್ ಸದಸ್ಯರ ಪ್ರತ್ಯೇಕ ಸಭೆಯನ್ನು ಡಿಕೆಶಿ ನಡೆಸಲಿದ್ದಾರೆ. ಕೆಳಹಂತದಲ್ಲಿ ಪಕ್ಷ ಬಲವರ್ಧನೆಗೆ ಸಲಹೆ ನೀಡಲು ಪದಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಹಾಗೆಯೇ ಬೂತ್ ಮಟ್ಟದ ಸಮಸ್ಯೆ ಬಗೆಹರಿಸಲು ವಾರ್ಡ್ ಸಮಿತಿ/ ಪಂಚಾಯತ್ ಸಮಿತಿಗಳ ರಚನೆಗೆ ತೀರ್ಮಾನ ಮಾಡಿದ್ದು, ಗ್ಯಾರಂಟಿ ಫಲಾನುಭವಿಗಳ ದಾಖಲೆ ಹಾಗೂ ಮೊಬೈಲ್ ಸಂಖ್ಯೆ ಸಂಗ್ರಹಿಸಲು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಕೆಪಿಸಿಸಿ ಮಟ್ಟದಲ್ಲಿ ಅಪಾರ್ಟ್ಮೆಂಟ್ ಸೆಲ್ ಹಾಗೂ ರೆಸಿಡೆಂಟ್ ವೆಲ್ಫೆರ್ ಅಸೋಸಿಯೇಷನ್‌ಗೆ ಪುನಶ್ಚೇತನ ನೀಡಲು ಯೋಜಿಸಿದ್ದು, ಉಪ ಚುನಾವಣೆಗಳಿಗೆ ಸಚಿವರು, ಶಾಸಕರನ್ನು ಹೋಬಳಿ ಮಟ್ಟದಲ್ಲಿ ನಿಯೋಜನೆಗೆ ನಿರ್ಧಾರ ಮಾಡಿದ್ದಾರೆ. ಅಲ್ಲದೇ ಸ್ಥಳೀಯ ಶಾಸಕರು, ಹಿರಿಯ ನಾಯಕರ ನೇತೃತ್ವದಲ್ಲಿ ಎಲೆಕ್ಷನ್ ಕ್ಯಾಂಪ್ ಆಫೀಸ್, ವಾರ್ ರೂಂ ಸ್ಥಾಪನೆ ಮಾಡಲು ನಿರ್ಧರಿಸಿದ್ದಾರೆ.

ಪದಾಧಿಕಾರಿಗಳ ಸಭೆಯಲ್ಲಿ ಎರಡು‌ ರೀತಿಯ ಪ್ಲ್ಯಾನ್ ಆಫ್ ಆ್ಯಕ್ಷನ್ ಮಾಡಲು ಮುಂದಾಗಿದ್ದು, ಪಕ್ಷ ಸಂಘಟನೆ ಮತ್ತು ಮುಂಬರುವ ಚುನಾವಣೆ ಕುರಿತು ಕಾರ್ಯ ಯೋಜನೆ ಮಾಡಲು ತೀರ್ಮಾನಿಸಿದ್ದಾರೆ.

ಪಕ್ಷ ಸಂಘಟನೆಯ ಕಾರ್ಯ ಯೋಜನೆ ಏನು?

1.ಉಸ್ತುವಾರಿಗಳ ಹಂಚಿಕೆ
ಜಿಲ್ಲೆಗಳು, ಅಸೆಂಬ್ಲಿ ಕ್ಷೇತ್ರಗಳಿಗೆ ನಿಯೋಜಿಸಲಾದ ಕೆಪಿಸಿಸಿ ಪದಾಧಿಕಾರಿಗಳಗೆ ಜವಾಬ್ದಾರಿ ಹಂಚುವುದು

2.ಹೊಣೆಗಾರಿಕೆ
ಎಲ್ಲಾ ಕೆಪಿಸಿಸಿ ಪದಾಧಿಕಾರಿಗಳಿಂದ ಮಾಸಿಕ ಕೆಲಸದ ವರದಿಗಳನ್ನು ಸಂಗ್ರಹಿಸುವುದು

    3.ವಿಭಾಗೀಯ ಸಭೆಗಳು
    ಕೆಪಿಸಿಸಿ ವಿಭಾಗೀಯ ಸಭೆಗಳು ಜುಲೈ 2024 ರಲ್ಲಿ ನಡೆಯಲಿವೆ
    ಆಗಸ್ಟ್ 2024 ರಲ್ಲಿ ಬ್ಲಾಕ್, ಜಿಲ್ಲೆ ಮತ್ತು ಅಸೆಂಬ್ಲಿ ಹಂತಗಳಲ್ಲಿ ಸಾಂಸ್ಥಿಕ ಕಾರ್ಯಾಗಾರಗಳನ್ನು ನಡೆಸುವುದು.

    4.ದತ್ತಾಂಶ ಪರಿಶೀಲನೆ
    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಬೂತ್ ಸಮಿತಿ ಮತ್ತು BLA 2 ನೇಮಕಾತಿಗಳನ್ನು ಪರಿಶೀಲಿಸುವುದು

    5.ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು
    ಪ್ರತಿ ಜಿಲ್ಲೆ/ಬ್ಲಾಕ್/ಬೂತ್‌ನಲ್ಲಿ ಪದಾಧಿಕಾರಿಗಳನ್ನು ನೇಮಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವುದು
    ಖಾಲಿ ಇರುವ ಹುದ್ದೆಗಳನ್ನ ಒಂದು ಅಥವಾ ಎರಡು ತಿಂಗಳಿನಲ್ಲಿ ಡಿಸಿಸಿ ಅಧ್ಯಕ್ಷರು, ಸ್ಥಳೀಯ ಸಂಸದರು/ಶಾಸಕರು ಮತ್ತು ಹಿರಿಯ ಪದಾಧಿಕಾರಿಗಳು ಅಭಿಪ್ರಾಯ ಪಡೆದು ಭರ್ತಿ ಮಾಡುವುದು

      6.ಡಿಜಿಟಲೈಸೇಶನ್
      ಬ್ಲಾಕ್, ಹಿರಿಯ ನಾಯಕರು, ಮುಂಚೂಣಿ ಘಟಕಗಳು, ಇಲಾಖೆಗಳ ಮುಖ್ಯಸ್ಥರು ಹೀಗೆ ಎಲ್ಲರ ಸಂಪರ್ಕ ವಿವರಗಳೊಂದಿಗೆ ಕೆಪಿಸಿಸಿ ಡೇಟಾ ಡಿಜಿಟಲೈಸೇಷನ್ ಮಾಡುವುದು

      7.ವೆಬ್‌ಸೈಟ್ ಮತ್ತು ಸೋಶಿಯಲ್ ಮೀಡಿಯಾ
      ಕೆಪಿಸಿಸಿ ವೆಬ್‌ಸೈಟ್‌ನಲ್ಲಿ ಪಕ್ಷದ ಕಾರ್ಯಕ್ರಮಗಳ ಕುರಿತು ಅಪ್‌ಡೇಟ್‌ ಆಗುತ್ತಿರಬೇಕು

      8.ಪ್ರಚಲಿತ ವಿದ್ಯಮಾನಗಳು
      ಕೆಪಿಸಿಸಿ ಪದಾಧಿಕಾರಿಗಳನ್ನು ಬೆಂಬಲಿಸುವಂತ, ನರೇಟಿವ್ ಸೆಟ್ ಮಾಡುವ ಕೌಂಟರ್ ಮಾಡಬೇಕು

      9.ಗ್ರೌಂಡ್ ಲೆವೆಲ್ ರೀಚ್
      ಬ್ಲಾಕ್ ಮತ್ತು ಬೂತ್ ಮಟ್ಟದ ನಡುವೆ ಮಧ್ಯವರ್ತಿಗಳಾಗಿ ಪಂಚಾಯತಿವಾರು ಸಮಿತಿಗಳು ಕೆಲಸ ಮಾಡಬೇಕು

        10.ಸಾಧನೆಗಳ ಮಾಹಿತಿ
        ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನ ಬ್ಲಾಕ್ ಮತ್ತು ಬೂತ್ ಸಮಿತಿಗಳ ಮೂಲಕ ಸ್ಥಳೀಯವಾಗಿ ಪ್ರಚಾರ ಮಾಡಬೇಕು

          11.ಬೂತ್ ಮಟ್ಟದ ಫಲಾನುಭವಿ ಕಾರ್ಯಕ್ರಮ
          ಸರ್ಕಾರವು ಕೋಟಿಗಟ್ಟಲೆ ಫಲಾನುಭವಿಗಳನ್ನು ಸೃಷ್ಟಿಸಿದೆ
          ಹೀಗಾಗಿ ರಾಜ್ಯಾದ್ಯಂತ ತಳಮಟ್ಟದ ಆಂದೋಲನವನ್ನು ರಚಿಸಲು ಫಲಾನುಭವಿ ಆಧಾರಿತ ಕಾರ್ಯಕ್ರಮವನ್ನು ಪ್ರಾರಂಭಿಸುವುದು

          12.ಡಿಜಿಟಲ್ ಯೂತ್
          ತ್ವರಿತ ಮಾಹಿತಿ ಒದಗಿಸಲು ಹಾಗೂ ಪ್ರಚಾರ ಮಾಡಲು ಪ್ರತಿ ಬೂತ್‌ನಲ್ಲಿ “ಡಿಜಿಟಲ್ ಯೂತ್” ಸ್ಥಾಪಿಸುವುದು.
          ಕೆಪಿಸಿಸಿ ಸಾಮಾಜಿಕ ಮಾಧ್ಯಮ ವಿಭಾಗ ಇದನ್ನ ನಿರ್ವಹಿಸುವುದು.

            13.ಸದಸ್ಯತ್ವ ನೋಂದಣಿ
            ಪಕ್ಷದ ಸದಸ್ಯರನ್ನು ಹೆಚ್ಚಿಸುವ ಸಲುವಾಗಿ ಮತ್ತೊಮ್ಮೆ ಸದಸ್ಯತ್ವ ನೋಂದಣಿ ಮರುಪ್ರಾರಂಭಿಸುವುದು

              14. AIPC ಮತ್ತು ವೃತ್ತಿಪರರ ಕೋಶ ಪುನರುಜ್ಜೀವನ
              ವೃತ್ತಿಪರರ ಕೋಶ ಮತ್ತು AIPC ಅನ್ನು ಪುನರುಜ್ಜೀವನಗೊಳಿಸಲಾಗುವುದು
              ನಗರ ಕಾರ್ಯನಿರತ ವೃತ್ತಿಪರರನ್ನ ಹೆಚ್ಚೆಚ್ಚು ತಲುಪುವಂತೆ ಮಾಡುವುದು ಇದರ ಉದ್ದೇಶ

              ಚುನಾವಣಾ ಸಿದ್ಧತೆಯ ಪ್ಲಾನ್ ಆಫ್ ಆ್ಯಕ್ಷನ್

              1.ವಿಭಾಗೀಯ ಸತ್ಯಶೋಧನೆ ಮತ್ತು ತಯಾರಿ ಸಮಿತಿ
              ಇತ್ತೀಚಿನ ಚುನಾವಣೆಗಳಲ್ಲಿ ಪಕ್ಷದ ಸೋಲಿನ ಕಾರಣಗಳನ್ನು ತನಿಖೆ ಮಾಡಲು ಸಮಿತಿಯನ್ನು ನೇಮಿಸುವುದು.
              ಇತ್ತೀಚಿನ ಚುನಾವಣೆಯಲ್ಲಿ ನಮ್ಮ ಕಾರ್ಯಕ್ಷಮತೆಗೆ ಕಾರಣಗಳನ್ನು ಅಳೆಯಲು ವಿಭಾಗವಾರು ಸಮಿತಿಗಳು ಕೆಲಸ ಮಾಡುತ್ತವೆ.
              ಮುಂಬರುವ ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್ ಚುನಾವಣೆಗಳಿಗೆ ನಿಖರ ಮಾಹಿತಿ ಒದಗಿಸುವುದು.

                2.ಕ್ರಿಯಾಶೀಲ ಪಾತ್ರ
                ಮುಂಬರುವ BBMP/ZP/TP ಚುನಾವಣೆಗಳು ಮತ್ತು ಉಪಚುನಾವಣೆಗಳಲ್ಲಿ ಉತ್ತಮ ಫಲಿತಾಂಶಕ್ಕಾಗಿ ಕೆಪಿಸಿಸಿ ಕಚೇರಿ ಪೂರ್ವಭಾವಿಯಾಗಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವುದು

                3.ಸಮನ್ವಯ ತಂಡಗಳು
                ಪ್ರತಿ ಜಿಲ್ಲೆ, ವಿಧಾನಸಭಾ ಕ್ಷೇತ್ರವು ಅಭ್ಯರ್ಥಿಗಳಿಗೆ ಸಹಾಯ ಮಾಡಲು ಮತ್ತು ಕೆಪಿಸಿಸಿಗೆ ವರದಿ ಮಾಡಲು ಹಿರಿಯ ನಾಯಕರ ನೇತೃತ್ವದಲ್ಲಿ ಕಾರ್ಯನಿರತ ತಂಡ ರಚಿಸುವುದು
                ಸಮನ್ವಯ ತಂಡಕ್ಕೆ ಆಯಾ ಚುನಾವಣೆಗೆ ನಿರ್ಣಾಯಕ ಬೂತ್‌ಗಳನ್ನು ಗುರುತಿಸುವ ಜವಾಬ್ದಾರಿ ಇರುತ್ತದೆ

                4.ವಿಭಾಗೀಯ ಸಭೆಗಳು
                ಎಲ್ಲಾ ಮಾಜಿ TP/ZP ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರು/ಉಪ ನಾಯಕರ ಸಭೆಗಳನ್ನ ಮಾಡಿ ಸಲಹೆ ಸೂಚನೆ ಪಡೆಯುವುದು

                5.ಮತದಾರರ ಪಟ್ಟಿಯನ್ನು ನವೀಕರಿಸುವುದು
                ಮತದಾರರ ಪಟ್ಟಿಯಿಂದ ಮತದಾರರ ಸೇರ್ಪಡೆ ಮತ್ತು ಅಳಿಸುವಿಕೆ ಮತ್ತು ಅದರ ನಿರಂತರ ಮೇಲ್ವಿಚಾರಣೆ ಮಾಡಬೇಕು

                6.ಸಮನ್ವಯ ಸಮಿತಿಗಳು
                ಬಿ.ಬಿ.ಎಂ.ಪಿ ಮತ್ತು ಗ್ರಾಮ ಪಂಚಾಯತಿಗಾಗಿ ವಾರ್ಡ್/ಪಂಚಾಯತ್ ವಾರು ಕಮಿಟಿಗಳನ್ನು ಮಾಡುವುದು
                ಗ್ರೌಂಡ್ ಲೆವೆಲ್‌ಗೆ ತಲುಪಿ ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ರೂಪಿಸುವುದು

                7.ಫಲಾನುಭವಿ ಡೇಟಾ
                ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಡೇಟಾವನ್ನು ಸಂಗ್ರಹಿಸುವುದು ಮತ್ತು ಪ್ರತ್ಯೇಕಿಸುವುದು
                ನಿರ್ದಿಷ್ಟ ಸಂದೇಶವನ್ನು ಕಳುಹಿಸುವ ಸಲುವಾಗಿ ಡೇಟಾ ಬಳಕೆ ಮಾಡುವುದು.

                8.ಅಪಾರ್ಟ್‌ಮೆಂಟ್ ಸೆಲ್
                ಬಿಬಿಎಂಪಿ ಚುನಾವಣೆ ಅನುಕೂಲಕ್ಕಾಗಿ ಆರ್‌ಡಬ್ಲ್ಯೂಎ ಮತ್ತು ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ತಲುಪಲು ಕೆಪಿಸಿಸಿ ಅಪಾರ್ಟ್‌ಮೆಂಟ್ ಸೆಲ್ ಪುನರುಜ್ಜೀವನಗೊಳಿಸುವುದು

                9.ಉಪಚುನಾವಣೆಗಳ ಗಮನ
                ವಿಧಾನಸಭೆ ಮತ್ತು ಪರಿಷತ್ ಉಪಚುನಾವಣೆಗಳಲ್ಲಿ ಗೆಲುವು ಸಾಧಿಸಲು ಪಕ್ಷದ ಹಿರಿಯ ನಾಯಕರು, ಶಾಸಕರು ಮತ್ತು ಇತರ ಪ್ರಮುಖ ನಾಯಕರನ್ನು ನಿಯೋಜಿಸುವುದು

                  10.ಚುನಾವಣಾ ಶಿಬಿರ ಕಚೇರಿಗಳು
                  ಹಿರಿಯ ಕೆಪಿಸಿಸಿ ನಾಯಕರು ಮತ್ತು ಸ್ಥಳೀಯ ಶಾಸಕರ ನೇತೃತ್ವದಲ್ಲಿ ಉಪ-ಚುನಾವಣೆ ಸ್ಥಾನಗಳಲ್ಲಿ ಚುನಾವಣಾ ಶಿಬಿರ ಕಚೇರಿಗಳು/ವಾರ್ ರೂಮ್‌ಗಳನ್ನು ಸ್ಥಾಪಿಸಿ.

                  11.ಪರಿಶೀಲನಾ ಸಭೆಗಳು
                  ಮಾಜಿ TP/ZP ಅಧ್ಯಕ್ಷರು/ಉಪಾಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರು/ಉಪ ನಾಯಕರ ಸಭೆಗಳನ್ನು ನಡೆಸಿ ಜಬಾವ್ದಾರಿ ಹಂಚುವುದು ಹಾಗೂ ಸಲಹೆ ಪಡೆಯುವುದು

                  12.ಕಾರ್ಯಕ್ಷಮತೆಯ ವಿಮರ್ಶೆ
                  ಇತ್ತೀಚಿನ ಲೋಕಸಭೆ ಚುನಾವಣೆಗಳಲ್ಲಿನ ಕಾರ್ಯಕ್ಷಮತೆಯನ್ನು ಕೂಲಂಕಷವಾಗಿ ಪರಿಶೀಲಿಸುವುದು
                  ಯಾವ ಅಸೆಂಬ್ಲಿ ಸ್ಥಾನಗಳು ಕಳಪೆ ಸಾಧನೆ ಮಾಡಿವೆ ಎಂಬುದನ್ನು ಗುರುತಿಸುವುದು ಮತ್ತು ಅದಕ್ಕೆ ಕಾರಣ ತಿಳಿದುಕೊಳ್ಳುವುದು (important)

                  13.ಸದಸ್ಯತ್ವ ಡ್ರೈವ್ ಬಳಕೆ
                  ರಾಜ್ಯದಾದ್ಯಂತ ಕೆಪಿಸಿಸಿ ಸದಸ್ಯರನ್ನು ತಲುಪಲು, ಕೆಪಿಸಿಸಿ ಸದಸ್ಯತ್ವ ಡ್ರೈವ್‌ನಿಂದ ಡೇಟಾವನ್ನು ಬಳಸಿಕೊಳ್ಳುವುದು

                    14.ವಿಷನ್ ಡಾಕ್ಯುಮೆಂಟ್
                    ಸ್ಥಳೀಯ ಸಂಸ್ಥೆಗಳ ಚುನಾವಣೆಗಾಗಿ ವಿಷನ್ ಡಾಕ್ಯುಮೆಂಟ್/ಪ್ರಣಾಳಿಕೆಯನ್ನು ರಚಿಸುವುದು

                    ಇದನ್ನೂ ಓದಿ | DV Sadananda Gowda: ಬಿಜೆಪಿ ರಾಜ್ಯ ನಾಯಕರ ಮೇಲೆ ಸಿಡಿದೆದ್ದ ಸದಾನಂದ ಗೌಡ; ಪಕ್ಷವಿರೋಧಿಗಳಿಗೆ ಮಣೆ ಹಾಕಿದ್ದಕ್ಕೆ ಕಿಡಿ

                    ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಸೋಮವಾರ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತಕುಮಾರ್, ಜಿ.ಸಿ. ಚಂದ್ರಶೇಖರ್, ವಿ.ಎಸ್. ಉಗ್ರಪ್ಪ, ರಮಾನಾಥ್ ರೈ ಸೇರಿದಂತೆ ಕೆಪಿಸಿಸಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

                    ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
                    ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
                    Continue Reading
                    Click to comment

                    Leave a Reply

                    Your email address will not be published. Required fields are marked *

                    ಕರ್ನಾಟಕ

                    Namma Metro: ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ನಾಳೆಯಿಂದ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ರೈಲು ಸೇವೆ

                    Namma Metro: ಬೆಂಗಳೂರಿನ ಮೆಟ್ರೋ ನೇರಳೆ ಮಾರ್ಗದಲ್ಲಿ ಪ್ರಸ್ತುತ 9 ರೈಲುಗಳಷ್ಟೇ ಕಾರ್ಯಾಚರಣೆ ಮಾಡುತ್ತಿದ್ದವು. ಜುಲೈ 6ರಿಂದ ಹೆಚ್ಚುವರಿಯಾಗಿ 15 ರೈಲುಗಳು ಕಾರ್ಯಾಚರಣೆ ನಡೆಸಲಿವೆ.

                    VISTARANEWS.COM


                    on

                    Namma Metro
                    Koo

                    ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ (Namma Metro) ಬಿಎಂಆರ್‌ಸಿಎಲ್‌ ಗುಡ್ ನ್ಯೂಸ್ ನೀಡಿದೆ. ನಾಳೆಯಿಂದ (ಜುಲೈ 6) ನೇರಳೆ ಮಾರ್ಗದಲ್ಲಿ ಹೆಚ್ಚುವರಿ ಮೆಟ್ರೋ ರೈಲುಗಳು ಸಂಚರಿಸಲಿದ್ದು, ಪ್ರಯಾಣಿಕರ ಒತ್ತಾಯದ ಮೇರೆಗೆ ಹೆಚ್ಚುವರಿ ಮೆಟ್ರೋ ಕಾರ್ಯಾಚರಣೆ ನಡೆಸಲು ವ್ಯವಸ್ಥೆ ಮಾಡಲಾಗಿದೆ.

                    ನೇರಳೆ ಮಾರ್ಗದಲ್ಲಿ ಪ್ರಸ್ತುತ 9 ರೈಲುಗಳಷ್ಟೇ ಕಾರ್ಯಾಚರಣೆ ಮಾಡುತ್ತಿದ್ದವು. ಜುಲೈ 6ರಿಂದ ಹೆಚ್ಚುವರಿಯಾಗಿ 15 ರೈಲುಗಳು ಕಾರ್ಯಾಚರಣೆ ನಡೆಸಲಿವೆ. ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಎಲ್ಲಾ ಹೆಚ್ಚುವರಿ ಮೆಟ್ರೋ ಸೇವೆ ಆರಂಭವಾಗಲಿದೆ. ಈ ಮೂಲಕ ನೇರಳೆ ಮಾರ್ಗದಲ್ಲಿ ಪ್ರತೀ 3.5 ನಿಮಿಷಕ್ಕೊಂದು ರೈಲು ಸೇವೆ ಇರಲಿದೆ, ಇನ್ನುಳಿದಂತೆ ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

                    ಇದನ್ನೂ ಓದಿ | Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

                    ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಬಿ.ಎಂ.ಆ‌ರ್.ಸಿ.ಎಲ್, ಜುಲೈ 6ರಿಂದ ಜಾರಿಗೆ ಬರುವಂತೆ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲುಗಳ ವೇಳಾಪಟ್ಟಿಯನ್ನು ಪರಿಷ್ಕರಿಸಿದ್ದು, ನಾಡಪ್ರಭು ಕೆಂಪೇಗೌಡ ನಿಲ್ದಾಣ – ಮೆಜೆಸ್ಟಿಕ್‌ನಿಂದ ಹೆಚ್ಚುವರಿ ರೈಲು ಸೇವೆಗಳನ್ನು ಒದಗಿಸಲಾಗುತ್ತಿದೆ.

                    ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್‌ನಿಂದ ಪ್ರಸ್ತುತ 9 ರೈಲುಗಳ ಬದಲಾಗಿ ಹೆಚ್ಚುವರಿಯಾಗಿ 15 ರೈಲುಗಳನ್ನು ಪ್ರಯಾಣಿಕರ ಸೇವೆಗೆ ಒದಗಿಸಲಾಗುವುದು. ಈ 15 ರೈಲುಗಳಲ್ಲಿ ಹತ್ತು ರೈಲುಗಳು ಪಟ್ಟಂದೂರು ಅಗ್ರಹಾರದ (ಐಟಿಪಿಎಲ್) ವರೆಗೆ, ನಾಲ್ಕು ರೈಲು ವೈಟ್‌ ಫೀಲ್ಡ್ ಮತ್ತು ಒಂದು ರೈಲು ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಚಲಿಸುತ್ತವೆ.

                    ಅದರಂತೆ, ಬೆಳಗಿನ ಸಮಯದಲ್ಲಿ ರೈಲುಗಳು ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ 8:48, 8:58, 9:08, 9:18, 9:29, 9:39, 9:50, 10:00, 10:11, 10:21, 10:39, 10:50, 11:00, 11:22 ಪೂರ್ವಕ್ಕೆ ಹೊರಡುತ್ತವೆ. ಇದಲ್ಲದೆ, ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್‌ನಲ್ಲಿ 3.3 ನಿಮಿಷಗಳ ಆವರ್ತನದಲ್ಲಿ ಬೆಳಗ್ಗೆ 10.25 ಗಂಟೆಯವರೆಗೆ ನಿಯಮಿತವಾಗಿ ಹಾದುಹೋಗುವ ರೈಲುಗಳು ಸಹ ಲಭ್ಯವಿರುತ್ತವೆ ಎಂದು ತಿಳಿಸಿದೆ.

                    ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ಪ್ರಸ್ತುತ ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣದಲ್ಲಿ ಕೊನೆಗೊಳ್ಳುವ 14 ರೈಲುಗಳಲ್ಲಿ, 6 ರೈಲುಗಳನ್ನು ಪಟ್ಟಂದೂರು ಅಗ್ರಹಾರ (ಐಟಿಪಿಎಲ್)/ ವೈಟ್‌ ಫೀಲ್ಡ್ ವರೆಗೆ ವಿಸ್ತರಿಸಲಾಗಿದೆ. ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣದಲ್ಲಿ ಇಳಿಯುವ ಪ್ರಯಾಣಿಕರಿಗೆ ಪಟ್ಟಂದೂರು ಅಗ್ರಹಾರ (ಐಟಿಪಿಎಲ್) ಕಡೆಗೆ ಪ್ರಯಾಣಿಸಲು ಮುಂದಿನ ರೈಲು 3.5 ನಿಮಿಷಗಳ ಆವರ್ತನದಲ್ಲಿ ಲಭ್ಯವಿರುತ್ತದೆ.

                    ಇದನ್ನೂ ಓದಿ | Stampede Tips and Tricks: ಕಾಲ್ತುಳಿತ ಸಂದರ್ಭದಲ್ಲಿ ನಮ್ಮನ್ನು ರಕ್ಷಿಸಿಕೊಳ್ಳುವುದು ಹೇಗೆ? ಈ ವಿಡಿಯೋ ನೋಡಿ

                    ಪ್ರಯಾಣಿಕರ ಅನುಕೂಲಕ್ಕಾಗಿ 5 ನಿಮಿಷಗಳ ಆವರ್ತನದಲ್ಲಿ ಬೈಯಪ್ಪನಹಳ್ಳಿಯಿಂದ ಸಂಜೆ 4:40 ರ ಬದಲಿಗೆ 4:20ಕ್ಕೆ ಮೈಸೂರು ರಸ್ತೆ ನಿಲ್ದಾಣದ ಕಡೆಗೆ ಪ್ರಾರಂಭವಾಗಲಿದೆ. ಹಸಿರು ಮಾರ್ಗದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಸಾರ್ವಜನಿಕರು ತಮ್ಮ ಅನುಕೂಲಕರ ಪ್ರಯಾಣಕ್ಕಾಗಿ ಮೇಲಿನ ಬದಲಾವಣೆಯನ್ನು ಗಮನಿಸಿ ಪ್ರಯಾಣಿಸಬೇಕು ಎಂದು ಬಿಎಂಆರ್‌ಸಿಎಲ್‌ ಕೋರಿದೆ.

                    Continue Reading

                    ಬೆಂಗಳೂರು

                    Teach For India : ಟೀಚ್ ಫಾರ್ ಇಂಡಿಯಾದಿಂದ 2025ರ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿಗಳ ಆಹ್ವಾನ

                    Teach for India: ಟೀಚ್ ಫಾರ್ ಇಂಡಿಯಾ ಫೆಲೋಶಿಪ್ ಎರಡು ವರ್ಷದ, ಪೂರ್ಣಕಾಲಿಕ ಫೆಲೋಶಿಪ್ ಕಾರ್ಯಕ್ರಮವಾಗಿದ್ದು ಶೈಕ್ಷಣಿಕ ವಲಯದಲ್ಲಿ ಆಸಕ್ತಿಯುಳ್ಳ ಮತ್ತು ಬದಲಾವಣೆಯ ನಾಯಕರಾಗಲು ಬಯಸುವವರಿಗೆ ಸಬಲೀಕರಿಸುವ ಉದ್ದೇಶ ಹೊಂದಿದೆ. 640ಕ್ಕೂ ಹೆಚ್ಚು ಫೆಲೋಗಳು 2024 ಸಮೂಹ ಸೇರಿದ್ದು ಈ ಕಾರ್ಯಕ್ರಮದ ಬೆಳೆಯುತ್ತಿರುವ ಪ್ರಭಾವಕ್ಕೆ ಮತ್ತು ಶಿಕ್ಷಣ- ಸಮಾನತೆಯ ಚಳವಳಿಯ ಪರಿಣಾಮದ ಸದೃಢ ಸಾಕ್ಷಿಯಾಗಿದೆ.

                    VISTARANEWS.COM


                    on

                    Teach for India
                    Koo

                    ಬೆಂಗಳೂರು: ಮಕ್ಕಳಿಗೆ ಶೈಕ್ಷಣಿಕ ಸಮಾನತೆ ತರಲು ಶ್ರಮಿಸುತ್ತಿರುವ ಟೀಚ್ ಫಾರ್ ಇಂಡಿಯಾ (Teach for India) ತನ್ನ 2025ರ ಫೆಲೋಶಿಪ್ ಗೆ ಅರ್ಜಿಗಳನ್ನು ಆಹ್ವಾನಿಸಿದೆ. ಇದಕ್ಕೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ಸೆಪ್ಟೆಂಬರ್ 1, 2024. ಟೀಚ್ ಫಾರ್ ಇಂಡಿಯಾ ಫೆಲೋಶಿಪ್ ಎರಡು ವರ್ಷದ, ಪೂರ್ಣಕಾಲಿಕ ಫೆಲೋಶಿಪ್ ಕಾರ್ಯಕ್ರಮವಾಗಿದ್ದು ಶೈಕ್ಷಣಿಕ ವಲಯದಲ್ಲಿ ಆಸಕ್ತಿಯುಳ್ಳ ಮತ್ತು ಬದಲಾವಣೆಯ ನಾಯಕರಾಗಲು ಬಯಸುವವರಿಗೆ ಸಬಲೀಕರಿಸುವ ಉದ್ದೇಶ ಹೊಂದಿದೆ. 640ಕ್ಕೂ ಹೆಚ್ಚು ಫೆಲೋಗಳು 2024 ಸಮೂಹ ಸೇರಿದ್ದು ಈ ಕಾರ್ಯಕ್ರಮದ ಬೆಳೆಯುತ್ತಿರುವ ಪ್ರಭಾವಕ್ಕೆ ಮತ್ತು ಶಿಕ್ಷಣ- ಸಮಾನತೆಯ ಚಳವಳಿಯ ಪರಿಣಾಮದ ಸದೃಢ ಸಾಕ್ಷಿಯಾಗಿದೆ.

                    ಈ ಫೆಲೋಶಿಪ್ ಅರ್ಜಿ ಪ್ರಕ್ರಿಯೆ ಅತ್ಯಂತ ಎಚ್ಚರದಿಂದ ಆಯ್ಕೆ ಮಾಡಲಾಗುತ್ತದೆ ಮತ್ತು ಭಾರತದ ಅತ್ಯಂತ ಉಜ್ವಲ ಮತ್ತು ಭರವಸೆಯ ವ್ಯಕ್ತಿಗಳ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಆಯ್ದ ಫೆಲೋಗಳು ಕಠಿಣ ತರಬೇತಿ ಕಾರ್ಯಕ್ರಮ ಪಡೆಯುತ್ತಾರೆ ಅದರಲ್ಲಿ ಅವರು ಶಿಕ್ಷಣ ವ್ಯವಸ್ಥೆಯನ್ನು ಅದರ ಬೇರುಮಟ್ಟದಿಂದ ಅರ್ಥ ಮಾಡಿಕೊಳ್ಳಲು ಪ್ರೇರಣೆ ನೀಡಲಾಗುತ್ತದೆ.

                    ಇದನ್ನೂ ಓದಿ : Dharwad News: ಧಾರವಾಡದಲ್ಲಿ ಜು.7ರಂದು ಡಾ. ಜಿನದತ್ತ ಅ. ಹಡಗಲಿಗೆ ಅಭಿನಂದನಾ ಸಮಾರಂಭ

                    ಟೀಚ್ ಫಾರ್ ಇಂಡಿಯಾ ಫೆಲೋಶಿಪ್ ನ ವಿಶಿಷ್ಟ ಆಯಾಮವೆಂದರೆ ಪ್ರಸ್ತುತ ಶೈಕ್ಷಣಿಕ ವ್ಯವಸ್ಥೆಯಲ್ಲಿ ಪರಿವರ್ತನೀಯ ಬದಲಾವಣೆ ತರುವ ಅವಕಾಶ. ಇದು ಅವರಿಗೆ ನಾಯಕತ್ವ, ಸಮಸ್ಯೆ ಪರಿಹರಿಸುವುದು ಮತ್ತು ನಿಜ ಜೀವನದ ಸವಾಲುಗಳನ್ನು ಎದುರಿಸುವ ಹಲವು ಆಯಾಮಗಳ ಕುರಿತು ಒಳನೋಟಗಳನ್ನು ನೀಡುತ್ತದೆ ಅದು ಅವರ ಒಟ್ಟಾರೆ ವೃತ್ತಿಯ ಪ್ರಗತಿಗೆ ಮಹತ್ತರ ಬದಲಾವಣೆ ತರುತ್ತದೆ.

                    ಟೀಚ್ ಫಾರ್ ಇಂಡಿಯಾ ಫೆಲೋಶಿಪ್ ಕುರಿತು ಹೆಚ್ಚು ತಿಳಿಯಲು ಮತ್ತು ಆಯ್ಕೆ ಪ್ರಕ್ರಿಯೆಗೆ ಈ ಕೆಳಕಂಡ ಲಿಂಕ್ ಗಳಿಗೆ ಭೇಟಿ ನೀಡಿ:

                    Continue Reading

                    ಶಿವಮೊಗ್ಗ

                    Shivamogga News: ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ: ರಾಜು ಹಿರಿಯಾವಲಿ

                    Shivamogga News: ಸೊರಬ ತಾಲೂಕಿನ ಕುಂದಗಸವಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಶುಕ್ರವಾರ ಮಲೆನಾಡ ಸಿರಿ ಸೇವಾ ಬಳಗದ ರಾಜು ಹಿರಿಯಾವಲಿ ಅವರು, ವಾಟರ್ ಫಿಲ್ಟರ್ ಕೊಡುಗೆಯಾಗಿ ನೀಡಿದರು.

                    VISTARANEWS.COM


                    on

                    Shivamogga News Give top priority to cleanliness says Raju Hiriyawali
                    Koo

                    ಸೊರಬ: ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಪೋಷಕರು ಸ್ವಚ್ಛತೆಯತ್ತ ಹೆಚ್ಚು ಹೆಚ್ಚು ಗಮನ ಕೊಡಬೇಕು ಎಂದು ಮಲೆನಾಡ ಸಿರಿ ಸೇವಾ ಬಳಗದ ರಾಜು ಹಿರಿಯಾವಲಿ (Shivamogga News) ತಿಳಿಸಿದರು.

                    ತಾಲೂಕಿನ ಕುಂದಗಸವಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಶುಕ್ರವಾರ ವಾಟರ್ ಫಿಲ್ಟರ್ ಕೊಡುಗೆಯಾಗಿ ನೀಡಿ, ಬಳಿಕ ಅವರು ಮಾತನಾಡಿದರು.

                    ಮಕ್ಕಳಿಗೆ ಮೂಲಭೂತ ಸೌಕರ್ಯಗಳಲ್ಲಿ ಶುದ್ಧ ಕುಡಿಯುವ ನೀರು ಸಹ ಒಂದಾಗಿದೆ. ಶುದ್ಧ ನೀರು ಕುಡಿಯುವುದರಿಂದ ಬಹಳಷ್ಟು ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು, ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆ ತಾಲೂಕಿನ ಸುಮಾರು 50 ಶಾಲೆಗಳಿಗೆ ವಾಟರ್ ಫಿಲ್ಟರ್ ಒದಗಿಸುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಎಂದರು.

                    ಇದನ್ನೂ ಓದಿ: Uttara Kannada News: ರೈತ ಯುವಕರು, ವಿಕಲಚೇತನರ ವಿವಾಹಕ್ಕೆ ಉ.ಕ ಜಿಲ್ಲಾಡಳಿತದಿಂದ ವಿನೂತನ ಪ್ರಯತ್ನ!

                    ಮಕ್ಕಳು ಮತ್ತು ಶಿಕ್ಷಕರು ಶಾಲಾ ಆವರಣದಲ್ಲಿ ಪ್ಲಾಸ್ಟಿಕ್ ಇನ್ನಿತರೆ ಪೊಟರೆಗಳಲ್ಲಿ ಸಂಗ್ರಹವಾಗದಂತೆ ನೋಡಿಕೊಂಡಲ್ಲಿ ಮಳೆಗಾಲದಂತಹ ಈ ದಿನಗಳಲ್ಲಿ ಸೊಳ್ಳೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು ಎಂದ ಅವರು, ವಿದ್ಯಾರ್ಥಿ ದೆಸೆಯಿಂದಲೇ ಮಕ್ಕಳಿಗೆ ಸ್ವಚ್ಛತೆಯ ಬಗ್ಗೆ ಶೈಕ್ಷಣಿಕ ಪ್ರಜ್ಞೆ ಬೆಳೆಸಿದಲ್ಲಿ ಸ್ವಚ್ಛ ಸಮಾಜದ ನಿರ್ಮಾಣಕ್ಕೆ ಮುನ್ನುಡಿ ಬರೆದಂತಾಗುತ್ತದೆ ಎಂದು ತಿಳಿಸಿದರು.

                    ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷ ಎಂ.ಎಲ್. ನೋಪಿ ಶಂಕರ್ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

                    ಇದನ್ನೂ ಓದಿ: HDFC Life: ‘ಕೆಲಸ ಮಾಡಲು ಅತ್ಯುತ್ತಮವಾಗಿರುವ ಭಾರತದ ಕಂಪನಿ’ಗಳಲ್ಲಿ ಒಂದಾದ ಎಚ್‌ಡಿಎಫ್‌ಸಿ ಲೈಫ್

                    ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ವೈ. ಗೌರಮ್ಮ, ಸಹ ಶಿಕ್ಷಕ ಅಶೋಕ್, ಪ್ರಮುಖರಾದ ಎಂ.ಎಚ್‌. ಗಣೇಶ್, ಸಂತೋಷ್, ಶ್ರೀಕಾಂತ್, ಸೃಜನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

                    Continue Reading

                    ಕರ್ನಾಟಕ

                    MUDA site scandal: ಸಿಎಂ ಸಿದ್ದರಾಮಯ್ಯ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲಿ: ಲೆಹರ್‌ ಸಿಂಗ್‌ ಆಗ್ರಹ

                    MUDA site scandal: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುಟುಂಬದಿಂದ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರವಾಗಿ ಅವರ ನೇತೃತ್ವದ ಸರ್ಕಾರದಿಂದ 62 ಕೋಟಿ ರೂ. ಮೊತ್ತದ ಭಾರಿ ಪರಿಹಾರವನ್ನು ಅವರೇ ಕೇಳಿರುವುದು ಬೇಸರದ ಸಂಗತಿ ಮಾತ್ರವಲ್ಲ, ಲಜ್ಜೆಗೆಟ್ಟ ವರ್ತನೆ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್‌ ಸಿಂಗ್ ಸಿರೋಯಾ ಟೀಕಿಸಿದ್ದಾರೆ.

                    VISTARANEWS.COM


                    on

                    Koo

                    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ನೇತೃತ್ವದ ಸರ್ಕಾರದಿಂದಲೇ 62 ಕೋಟಿ ರೂ.ಗಳ ಭಾರೀ ಪರಿಹಾರವನ್ನು ಏಕೆ ಕೇಳುತ್ತಿದ್ದಾರೆ? ತಾವು ಯಾವುದಕ್ಕೂ ಹೆದರುವುದಿಲ್ಲ ಎಂದು ಹೇಳುವ ಸಿಎಂ ಸಿದ್ದರಾಮಯ್ಯನವರು ಮುಡಾ ಪ್ರಕರಣವನ್ನು (MUDA site scandal) ಸಿಬಿಐ ಅಥವಾ ಯಾವುದಾದರೂ ಸ್ವತಂತ್ರ ಸಂಸ್ಥೆಗೆ ಒಪ್ಪಿಸಲು ಹೆದರಬಾರದು. ಹಾಗೆಯೇ ಜಾಣತನದಿಂದ ತಮಗೆ ನಿಕಟರಾಗಿರುವ ನಿವೃತ್ತ ನ್ಯಾಯಾಧೀಶರನ್ನು ಕರೆತಂದು ತನಿಖೆ ನಡೆಸಲು ಮುಖ್ಯಮಂತ್ರಿಗಳು ಮುಂದಾಗಬಾರದು ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್‌ ಸಿಂಗ್ ಸಿರೋಯಾ ಹೇಳಿದ್ದಾರೆ.

                    ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಆರೋಪದ ಕುರಿತಂತೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಪಾತ್ರವಿದೆ ಎನ್ನಲಾದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದ ಕುರಿತಂತೆ ಇಂದಿನ ಪತ್ರಿಕೆಗಳಲ್ಲಿ ಮುಖ್ಯಮಂತ್ರಿಗಳ ಹೇಳಿಕೆಯನ್ನು ಗಮನಿಸಿದ್ದೇನೆ. ಇಡೀ ದೇಶದಲ್ಲಿ ಬಹುಶಃ ಹಿಂದಿನ ಅಥವಾ ಇಂದಿನ ಯಾವ ಮುಖ್ಯಮಂತ್ರಿಯೂ ತಮ್ಮ ನೇತೃತ್ವದ ಸರ್ಕಾರದ ವಿರುದ್ಧವೇ ಹೀಗೆ ಬ್ಲ್ಯಾಕ್‌ಮೇಲ್ ಮಾಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುಟುಂಬದಿಂದ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರವಾಗಿ ಅವರ ನೇತೃತ್ವದ ಸರ್ಕಾರದಿಂದ 62 ಕೋಟಿ ರೂ. ಮೊತ್ತದ ಭಾರಿ ಪರಿಹಾರವನ್ನು ಅವರೇ ಕೇಳಿರುವುದು ಬೇಸರದ ಸಂಗತಿ ಮಾತ್ರವಲ್ಲ, ಲಜ್ಜೆಗೆಟ್ಟ ವರ್ತನೆಯೂ ಹೌದು ಎಂದು ಕಿಡಿಕಾರಿದ್ದಾರೆ.

                    ಇದನ್ನೂ ಓದಿ | BJP Karnataka: ರಾಜ್ಯ ಬಿಜೆಪಿಗೆ ನೂತನ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

                    ತಾವು ಸದಾ ಪಾರದರ್ಶಕವಾಗಿದ್ದು, ತಾವೊಬ್ಬ ಲೋಹಿಯಾ-ಸಮಾಜವಾದಿ ಹೇಳಿಕೊಳ್ಳುವ ಯಾವುದೇ ಅವಕಾಶವನ್ನು ಕಳೆದುಕೊಳ್ಳದ ಮುಖ್ಯಮಂತ್ರಿಗಳ ಮನಸ್ಥಿತಿಯನ್ನು ಇದು ಬಯಲು ಮಾಡಿದೆ. ಮುಡಾ ಮಾರುಕಟ್ಟೆ ಮೌಲ್ಯದ ಪರಿಹಾರ ನೀಡಿದರೆ ಅನುಮಾನಾಸ್ಪದವಾಗಿ ಹಂಚಿಕೆಯಾಗಿರುವ ನಿವೇಶನಗಳನ್ನು ಮರಳಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿರುವುದು ನಂಬಲಾಗದ ಮತ್ತು ಆಘಾತಕಾರಿ ಸಂಗತಿ. ಹಾಗೆಯೇ, ಮುಖ್ಯಮಂತ್ರಿಗಳು ಏಕೆ ಧಾವಂತದಲ್ಲಿದ್ದಾರೆ ಎನ್ನುವುದು ನನಗೆ ಅರ್ಥವಾಗುತ್ತಿಲ್ಲ. ಹೆಚ್ಚಿನ ಪರಿಹಾರವನ್ನು ಕೇಳುವ ಮೊದಲು ನಿವೇಶನಗಳ ಹಂಚಿಕೆ ಕಾನೂನುಬದ್ಧವಾಗಿ ನಡೆದಿದೆಯೇ ಎಂದು ಮೊದಲು ಖಚಿತಪಡಿಸಿಕೊಳ್ಳಬೇಕಲ್ಲವೇ? ಸರ್ಕಾರ ಯಾವುದೇ ಪಕ್ಷದ್ದಿರಲಿ, ಒಬ್ಬ ಶ್ರೀಸಾಮಾನ್ಯನಿಗೆ ಹೋಲಿಸಿದರೆ ಮುಖ್ಯಮಂತ್ರಿಗಳ ಕುಟುಂಬಕ್ಕೆ ಯಾವ ರೀತಿಯ ಅನುಕೂಲ ಕಲ್ಪಿಸಲಾಗಿದೆ ಎನ್ನುವುದನ್ನು ಮೊದಲು ತನಿಖೆ ಮಾಡಬೇಕಲ್ಲವೇ? ಸಿದ್ದರಾಮಯ್ಯನವರು ಅಧಿಕಾರದಲ್ಲಿರಲಿ ಅಥವಾ ಪ್ರತಿಪಕ್ಷದಲ್ಲಿರಲಿ, ಅನೇಕ ದಶಕಗಳಿಂದ ರಾಜ್ಯದಲ್ಲಿ ಬಹಳ ಪ್ರಭಾವಶಾಲಿ ವ್ಯಕ್ತಿಯಾಗಿರುವುದಂತೂ ನಿಜ ಎಂದು ತಿಳಿಸಿದ್ದಾರೆ.

                    ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿಗಳು ತಮ್ಮ ಆಸ್ತಿಯನ್ನು ಸಾರ್ವಜನಿಕ ಒಳಿತಿಗಾಗಿ ಬಿಟ್ಟುಕೊಡುತ್ತಾರೆ. ಆದರೆ ಇಲ್ಲಿ ಒಬ್ಬ ಮುಖ್ಯಮಂತ್ರಿಗಳು ಅತ್ಯಧಿಕ ಪರಿಹಾರ ಪಡೆದುಕೊಂಡದ್ದು ಮಾತ್ರವಲ್ಲ, ಇನ್ನೂ ಹೆಚ್ಚು ಕಬಳಿಸಲು ಆಸೆ ಪಡುತ್ತಿದ್ದಾರೆ. ನೆಹರೂ-ಗಾಂಧಿ ಕುಟುಂಬಕ್ಕೆ ನಿಷ್ಠರಾಗಿರುವ ಸಿಎಂ ಸಿದ್ದರಾಮಯ್ಯನವರ, ಆ ಹಿರಿಯರ ʼತ್ಯಾಗʼದ ಮಾದರಿಯನ್ನೂ ಅನುಸರಿಸಬೇಕು. ಆ ಕುಟುಂಬ ಅನೇಕ ವರ್ಷಗಳ ಹಿಂದೆ ಪ್ರಯಾಗರಾಜ್‌ನಲ್ಲಿರುವ ಪೂರ್ವಜರ ಮನೆಯನ್ನು ಬಿಟ್ಟುಕೊಟ್ಟಿತ್ತು. ಆದರೆ ನಂತರ ಇಡೀ ದೇಶವನ್ನು ಆಕ್ರಮಿಸಿಕೊಂಡರು ಎನ್ನುವುದು ಬೇರೆಯೇ ಕಥೆ. ಆದರೂ ತಾಂತ್ರಿಕವಾಗಿಯಾದರೂ ಅವರು ಏನೋ ಒಂದನ್ನು ತ್ಯಾಗ ಮಾಡಿದರಲ್ಲ, ಅದರಲ್ಲಿಯೂ ಒಂದು ಪಾಠ ಕಲಿಯಲಿಕ್ಕಿದೆ ಎಂದು ತಿಳಿಸಿದ್ದಾರೆ.

                    ತಾವು ಯಾವುದಕ್ಕೂ ಹೆದರುವುದಿಲ್ಲ ಮತ್ತು ಹಿರಿಯ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯನವರು ಸಿಬಿಐ ಅಥವಾ ಯಾವುದಾದರೂ ಸ್ವತಂತ್ರ ಸಂಸ್ಥೆಗೆ ಮುಡಾ ಪ್ರಕರಣವನ್ನು ತನಿಖೆಗೆ ಕೊಡಲು ಹಿಂಜರಿಯಬಾರದು. ಈ ಪ್ರಕರಣದ ತನಿಖೆಗೆ ತಮಗೆ ಆಪ್ತರಾದ ನಿವೃತ್ತ ನ್ಯಾಯಾಧೀಶರನ್ನು ನೇಮಿಸುವ ಬಗ್ಗೆಯೂ ಕೂಡ ಅವರು ಯೋಚಿಸಬಾರದು. ಈ ಬೃಹತ್ ಹಗರಣ ಸ್ವತಂತ್ರವಾಗಿ ತನಿಖೆಯಾಗಬೇಕಿದೆ. ಅವರು ಮುಖ್ಯಮಂತ್ರಿಯಾಗಿರುವುದರಿಂದ, ತಾವೇ ಫಿರ್ಯಾದಿ ಮತ್ತು ತಾವೇ ನ್ಯಾಯಾಧೀಶರಾಗಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕೆಂದು ನಮ್ಮ ಪಕ್ಷದ ಕೆಲವು ಹಿರಿಯ ನಾಯಕರು ಸಲಹೆ ನೀಡಿದ್ದಾರೆ. ಬಹುಶಃ ಅವರು ಅದನ್ನು ಪರಿಗಣಿಸಿದರೆ ಒಳ್ಳೆಯದೇನೋ ಎಂದು ಹೇಳಿದ್ದಾರೆ.

                    ಇದನ್ನೂ ಓದಿ | CM Siddaramaiah: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು: ಸಿಎಂ ಸಿದ್ದರಾಮಯ್ಯ

                    ಪ್ರತಿಪಕ್ಷದ ನಾಯಕರುಗಳನ್ನು ತೆಗಳಲು, ನಿಂದಿಸಲು ಸದಾ ಮುಗಿಬೀಳುವ ಸಿದ್ದರಾಮಯ್ಯನವರ ಬೆಂಬಲಿಗ ಪಡೆಯ ಉದಾರವಾದಿಗಳು ಮತ್ತು ನಗರ ನಕ್ಸಲರು, ಈ ವಿಷಯದಲ್ಲಿ ಹೇಗೆ ಉತ್ತರದಾಯಿತ್ವಕ್ಕಾಗಿ ಆಗ್ರಹಿಸುತ್ತಾರೆ ಎನ್ನುವ ಕುತೂಹಲ ನನಗೂ ಇದೆ. ಅವರು ಪ್ರತಿಭಟಿಸಲು ಬಯಸುವುದಾದರೆ ಅಗತ್ಯ ವ್ಯವಸ್ಥೆಗಳನ್ನು ನಾವೇ ಮಾಡಿಕೊಡುತ್ತೇವೆ ಎಂದು ಹೇಳಿದ್ದಾರೆ.

                    Continue Reading
                    Advertisement
                    RBI Fine
                    ದೇಶ11 mins ago

                    RBI Fine: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ಆರ್‌ಬಿಐ 1.31 ಕೋಟಿ ರೂ. ದಂಡ; ಕಾರಣ ಹೀಗಿದೆ

                    Namma Metro
                    ಕರ್ನಾಟಕ16 mins ago

                    Namma Metro: ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ನಾಳೆಯಿಂದ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ರೈಲು ಸೇವೆ

                    Viral Video
                    ವೈರಲ್ ನ್ಯೂಸ್17 mins ago

                    Viral Video: ಆಧಾರ್ ಕಾರ್ಡ್ ಫೋಟೋಗೆ ಸುಂದರ ಪೋಸ್ ಕೊಟ್ಟು ಮನ ಗೆದ್ದ ಪುಟಾಣಿ! ನಿಮಗೇನು ಅನಿಸಿತು?

                    Brain Eating Amoeba
                    ಆರೋಗ್ಯ22 mins ago

                    Brain Eating Amoeba: ಏನಿದು ಮೆದುಳು ತಿನ್ನುವ ಅಮೀಬಾ? ಇದರಿಂದ ನಮಗೂ ಅಪಾಯ ಇದೆಯೆ?

                    Kerala govt
                    ದೇಶ49 mins ago

                    Kerala Govt: ಕೇರಳ ಸರ್ಕಾರಿ ನೌಕರರ ಪೈಕಿ ಮೂರರಲ್ಲಿ ಒಬ್ಬ ಮುಸ್ಲಿಂ ಅಥವಾ ಕ್ರಿಶ್ಚಿಯನ್

                    Teach for India
                    ಬೆಂಗಳೂರು54 mins ago

                    Teach For India : ಟೀಚ್ ಫಾರ್ ಇಂಡಿಯಾದಿಂದ 2025ರ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿಗಳ ಆಹ್ವಾನ

                    Bridge Collapse
                    ದೇಶ56 mins ago

                    Bridge Collapse: 17 ದಿನದಲ್ಲಿ 10 ಸೇತುವೆ ಕುಸಿತ; ಬಿಹಾರದಲ್ಲಿ 15 ಎಂಜಿನಿಯರ್‌ಗಳ ಅಮಾನತು!

                    Shivamogga News Give top priority to cleanliness says Raju Hiriyawali
                    ಶಿವಮೊಗ್ಗ1 hour ago

                    Shivamogga News: ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ: ರಾಜು ಹಿರಿಯಾವಲಿ

                    Stampede Tips and Tricks
                    ದೇಶ1 hour ago

                    Stampede Tips and Tricks: ಕಾಲ್ತುಳಿತ ಸಂದರ್ಭದಲ್ಲಿ ನಮ್ಮನ್ನು ರಕ್ಷಿಸಿಕೊಳ್ಳುವುದು ಹೇಗೆ? ಈ ವಿಡಿಯೋ ನೋಡಿ

                    ಕರ್ನಾಟಕ1 hour ago

                    MUDA site scandal: ಸಿಎಂ ಸಿದ್ದರಾಮಯ್ಯ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲಿ: ಲೆಹರ್‌ ಸಿಂಗ್‌ ಆಗ್ರಹ

                    Sharmitha Gowda in bikini
                    ಕಿರುತೆರೆ9 months ago

                    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

                    Kannada Serials
                    ಕಿರುತೆರೆ9 months ago

                    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

                    Bigg Boss- Saregamapa 20 average TRP
                    ಕಿರುತೆರೆ9 months ago

                    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

                    galipata neetu
                    ಕಿರುತೆರೆ7 months ago

                    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

                    Kannada Serials
                    ಕಿರುತೆರೆ9 months ago

                    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

                    Kannada Serials
                    ಕಿರುತೆರೆ9 months ago

                    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

                    Bigg Boss' dominates TRP; Sita Rama fell to the sixth position
                    ಕಿರುತೆರೆ8 months ago

                    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

                    geetha serial Dhanush gowda engagement
                    ಕಿರುತೆರೆ7 months ago

                    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

                    varun
                    ಕಿರುತೆರೆ8 months ago

                    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

                    Kannada Serials
                    ಕಿರುತೆರೆ10 months ago

                    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

                    karnataka Weather Forecast
                    ಮಳೆ3 hours ago

                    Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

                    Lovers Fighting
                    ಚಿಕ್ಕಬಳ್ಳಾಪುರ5 hours ago

                    Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

                    Medical negligence
                    ದಾವಣಗೆರೆ5 hours ago

                    Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

                    karnataka rain
                    ಮಳೆ7 hours ago

                    Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

                    Elephant attack in Hassan and Chikmagalur
                    ಹಾಸನ9 hours ago

                    Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

                    Physical Abuse
                    ಬೆಂಗಳೂರು10 hours ago

                    Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

                    Self Harming in bengaluru
                    ಬೆಂಗಳೂರು10 hours ago

                    Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

                    karnataka Weather Forecast Rain
                    ಮಳೆ15 hours ago

                    Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

                    karnataka Weather Forecast
                    ಮಳೆ1 day ago

                    Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

                    karnataka Rain
                    ಮಳೆ1 day ago

                    Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

                    ಟ್ರೆಂಡಿಂಗ್‌