Parliament Sessions: ಲೋಕಸಭೆಯಲ್ಲಿ ನೀಟ್‌ ವಿವಾದ ಚರ್ಚೆಗೆ ಆಗ್ರಹಿಸಿ ಸಭಾತ್ಯಾಗ ಮಾಡಿದ ಪ್ರತಿಪಕ್ಷ - Vistara News

ದೇಶ

Parliament Sessions: ಲೋಕಸಭೆಯಲ್ಲಿ ನೀಟ್‌ ವಿವಾದ ಚರ್ಚೆಗೆ ಆಗ್ರಹಿಸಿ ಸಭಾತ್ಯಾಗ ಮಾಡಿದ ಪ್ರತಿಪಕ್ಷ

Parliament Sessions: 18ನೇ ಲೋಕಸಭೆಯ ಮೊದಲ ಅಧಿವೇಶನ ದ ಎರಡನೇ ವಾರದ ಮೊದಲ ದಿನವಾದ ಸೋಮವಾರ ನೀಟ್‌ ವಿಚಾರವಾಗಿ ಕೋಲಾಹಲ ಎದ್ದು, ಕಾಂಗ್ರೆಸ್‌ ನೇತೃತ್ವದ ಪ್ರತಿಪಕ್ಷದ ನಾಯಕರು ಸಭಾತ್ಯಾಗ ಮಾಡಿದರು. ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ನೀಟ್‌ ವಿವಾದದ ಬಗ್ಗೆ ಚರ್ಚೆ ನಡೆಸಲು ಪ್ರತ್ಯೇಕ ಒಂದು ದಿನ ಮೀಸಲಿಡಬೇಕು ಎಂದು ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷದ ನಾಯಕರು ಬೇಡಿಕೆ ಮುಂಡಿಟ್ಟರು. ಆದರೆ ಸರ್ಕಾರ ಇದಕ್ಕೆ ಒಪ್ಪದೆ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯನ್ನು ಮುಂದುವರಿಸಲು ಮುಂದಾಯಿತು.

VISTARANEWS.COM


on

Parliament Sessions
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ (Parliament Sessions)ದ ಎರಡನೇ ವಾರದ ಮೊದಲ ದಿನವಾದ ಸೋಮವಾರ (ಜುಲೈ 1) ನೀಟ್‌ (NEET) ವಿಚಾರವಾಗಿ ಕೋಲಾಹಲ ಎದ್ದು, ಕಾಂಗ್ರೆಸ್‌ ನೇತೃತ್ವದ ಪ್ರತಿಪಕ್ಷದ ನಾಯಕರು ಸಭಾತ್ಯಾಗ ಮಾಡಿದರು (Opposition walks out).

ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ನೀಟ್‌ ವಿವಾದದ ಬಗ್ಗೆ ಚರ್ಚೆ ನಡೆಸಲು ಪ್ರತ್ಯೇಕ ಒಂದು ದಿನ ಮೀಸಲಿಡಬೇಕು ಎಂದು ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷದ ನಾಯಕರು ಬೇಡಿಕೆ ಮುಂಡಿಟ್ಟರು. ಆದರೆ ಸರ್ಕಾರ ಇದಕ್ಕೆ ಒಪ್ಪದೆ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯನ್ನು ಮುಂದುವರಿಸಲು ಮುಂದಾಯಿತು. ಇದರಿಂದ ಲೋಕಸಭೆಯಲ್ಲಿ ಕೋಲಾಹಲವೇ ಸೃಷ್ಟಿಯಾಯಿತು.

ರಾಹುಲ್‌ ಗಾಂಧಿ ಹೇಳಿದ್ದೇನು?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ದೇಶಾದ್ಯಂತ ಸುಮಾರು 2 ಕೋಟಿ ವಿದ್ಯಾರ್ಥಿಗಳು ತೊಂದರೆಗೆ ಸಿಲುಕಿದ್ದಾರೆ. ಹೀಗಾಗಿ ನೀಟ್‌ ವಿವಾದದ ಬಗ್ಗೆ ಚರ್ಚೆ ನಡೆಸಲು ಅವಕಾಶ ಒದಗಿಸಬೇಕು ಎಂದು ಪ್ರತಿಪಕ್ಷಗಳ ನಾಯಕ ರಾಹುಲ್‌ ಗಾಂಧಿ ಅವರು ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರ ಬಳಿ ಮನವಿ ಮಾಡಿದರು. “ನಾವು ನೀಟ್ ಬಗ್ಗೆ ಒಂದು ದಿನದ ಚರ್ಚೆ ನಡೆಸಲು ಆಗ್ರಹಿಸುತ್ತಿದ್ದೇವೆ. ಇದು ಒಂದು ಪ್ರಮುಖ ವಿಷಯವಾಗಿದ್ದು, ಎರಡು ಕೋಟಿಗೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆ. 70 ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಈ ವಿಷಯದ ಬಗ್ಗೆ ಪ್ರತ್ಯೇಕ ಚರ್ಚೆಗೆ ನೀವು ಅವಕಾಶ ನೀಡಬೇಕು” ಎಂದು ರಾಹುಲ್ ಗಾಂಧಿ ಹೇಳಿದರು.

ರಾಹುಲ್ ಗಾಂಧಿ ಅವರ ಬೇಡಿಕೆಗೆ ಪ್ರತಿಕ್ರಿಯಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಸದನವು ವಂದನಾ ನಿರ್ಣಯವನ್ನು ಪೂರ್ಣಗೊಳಿಸುವವರೆಗೆ ಚರ್ಚೆಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು. “ಸಂಸದನಾಗಿ ನನ್ನ ದಶಕಗಳ ಅನುಭವದಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಸಮಯದಲ್ಲಿ ಬೇರೆ ಯಾವುದೇ ವಿಷಯವನ್ನು ಕೈಗೆತ್ತಿಕೊಂಡಿರುವುದನ್ನು ನೋಡಿಲ್ಲ. ವಂದನಾ ನಿರ್ಣಯವನ್ನು ಅಂಗೀಕರಿಸಿದ ನಂತರ ಇತರ ಸಮಸ್ಯೆಗಳನ್ನು ಎತ್ತಬಹುದು” ಎಂದು ಅವರು ತಿಳಿಸಿದರು.

ಇಷ್ಟಕ್ಕೆ ತೃಪ್ತರಾಗದ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷದ ನಾಯಕರು ವಂದನಾ ನಿರ್ಣಯದ ಮೇಲಿನ ಚರ್ಚೆಯ ನಂತರ ನೀಟ್ ವಿಷಯವನ್ನು ಚರ್ಚಿಸಲಾಗುವುದು ಎಂದು ಸರ್ಕಾರ ಭರವಸೆ ನೀಡುವಂತೆ ಆಗ್ರಹಿಸಿದರು.

ʼʼವಂದನಾ ನಿರ್ಣಯದ ಮೇಲಿನ ಚರ್ಚೆಯ ಸಮಯದಲ್ಲಿ ಬೇರೆ ಯಾವುದೇ ವಿಷಯವನ್ನು ತೆಗೆದುಕೊಳ್ಳುವ ಸಂಪ್ರದಾಯವಿಲ್ಲ ಮತ್ತು ಸದಸ್ಯರು ನೀಟ್ ಮೇಲಿನ ಚರ್ಚೆಗೆ ಪ್ರತ್ಯೇಕ ನೋಟಿಸ್ ನೀಡಬಹುದುʼʼ ಎಂದು ಸ್ಪೀಕರ್ ಓಂ ಬಿರ್ಲಾ ಹೇಳಿದರು. ಬಳಿಕ ಅವರು ವಂದನಾ ನಿರ್ಣಯದ ಮೇಲಿನ ಚರ್ಚೆಯನ್ನು ಪ್ರಾರಂಭಿಸುವಂತೆ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರಿಗೆ ಸೂಚಿಸಿದರು. ಈ ವೇಳೆ ಪ್ರತಿಪಕ್ಷಗಳು ಸರ್ಕಾರ ಸ್ಪಷ್ಟ ಭರವಸೆ ನೀಡುವಂತೆ ಒತ್ತಾಯಿಸಿ ಸಭಾತ್ಯಾಗ ಮಾಡಿದವು.

ಇದನ್ನೂ ಓದಿ: Karnataka Politics: ಸ್ಥಾನ ಭದ್ರಪಡಿಸಲು ದೆಹಲಿಯಲ್ಲಿ ಸಿಎಂ, ಡಿಸಿಎಂ ಪ್ರಯತ್ನ: ಎನ್.ರವಿಕುಮಾರ್ ಟೀಕೆ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷೆಯ ನಿರ್ವಹಣೆಯಲ್ಲಿನ ಇತರ ಅಕ್ರಮಗಳ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

RBI Fine: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ಆರ್‌ಬಿಐ 1.31 ಕೋಟಿ ರೂ. ದಂಡ; ಕಾರಣ ಹೀಗಿದೆ

RBI Fine: ಆರ್‌ಬಿಐ ನಿಯಮಗಳನ್ನು ಉಲ್ಲಂಘಿಸಿ ಎರಡು ರಾಜ್ಯಗಳಲ್ಲಿರುವ ರಾಜ್ಯ ಸರ್ಕಾರಿ ಒಡೆತನದ ನಿಗಮಗಳಿಗೆ ಸಾಲ ನೀಡಿರುವುದು ಸೇರಿ ಹಲವು ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಪಿಎನ್‌ಬಿಗೆ ಆರ್‌ಬಿಐ ನೋಟಿಸ್‌ ಜಾರಿಗೊಳಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಬಳಿಕ ಆರ್‌ಬಿಐ ದಂಡ ವಿಧಿಸಿದೆ ಎಂದು ತಿಳಿದುಬಂದಿದೆ.

VISTARANEWS.COM


on

RBI Fine
Koo

ಮುಂಬೈ: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ (Punjab National Bank) ಭಾರತೀಯ ರಿಸರ್ವ್‌ ಬ್ಯಾಂಕ್‌ 1.31 ಕೋಟಿ ರೂಪಾಯಿ ದಂಡ ವಿಧಿಸಿದೆ. ಆರ್‌ಬಿಐ ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಕೇಂದ್ರೀಯ ಬ್ಯಾಂಕ್‌ ಪಿಎನ್‌ಬಿಗೆ (PNB) ದಂಡ ವಿಧಿಸಿದೆ. ಕೆವೈಸಿ (Know Your Customer), ಸಾಲಗಳು ಹಾಗೂ ಅಡ್ವಾನ್ಸಸ್‌ ಕುರಿತು ನಿಯಮಗಳನ್ನು ಪಾಲಿಸಲು ಪಿಎನ್‌ಬಿ ವಿಫಲವಾದ ಕಾರಣ ಆರ್‌ಬಿಐ ದಂಡದ (RBI Fine) ಬರೆ ಎಳೆದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಆರ್‌ಬಿಐ ನಿಯಮಗಳನ್ನು ಉಲ್ಲಂಘಿಸಿ ಎರಡು ರಾಜ್ಯಗಳಲ್ಲಿರುವ ರಾಜ್ಯ ಸರ್ಕಾರಿ ಒಡೆತನದ ನಿಗಮಗಳಿಗೆ ಸಾಲ ನೀಡಿರುವುದು ಸೇರಿ ಹಲವು ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಪಿಎನ್‌ಬಿಗೆ ಆರ್‌ಬಿಐ ನೋಟಿಸ್‌ ಜಾರಿಗೊಳಿಸಿತ್ತು. ನೋಟಿಸ್‌ಗೆ ಪಿಎನ್‌ಬಿ ನೀಡಿದ ಪ್ರತಿಕ್ರಿಯೆಯ ಆಧಾರದ ಮೇಲೆ ಆರ್‌ಬಿಐ ದಂಡ ವಿಧಿಸಿದೆ ಎಂದು ತಿಳಿದುಬಂದಿದೆ.

RBI Balance Sheet

ಬ್ಯಾಂಕ್‌ ಆಫ್‌ ಇಂಡಿಯಾಗೆ ಕಳೆದ ತಿಂಗಳು ದಂಡ

ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ ಕಳೆದ ಜೂನ್‌ ತಿಂಗಳಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌ 1.45 ಕೋಟಿ ರೂ. ದಂಡ ವಿಧಿಸಿತ್ತು. ಸಾಲಗಳು ಹಾಗೂ ಮುಂಗಡಗಳು, ಗ್ರಾಹಕರ ರಕ್ಷಣೆಯ ಕುರಿತು ಆರ್‌ಬಿಐ ಜಾರಿಗೆ ತಂದಿರುವ ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಮುಂಬೈ ಮೂಲದ ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ ದಂಡ ವಿಧಿಸಲಾಗಿತ್ತು.

ಅನುತ್ಪಾದಕ ಆಸ್ತಿ (NPA) ಬಿಕ್ಕಟ್ಟು ನಿವಾರಣೆ, ಬ್ಯಾಂಕ್‌ಗಳ ದಿವಾಳಿತನ ತಡೆಗಾಗಿ ಹಲವು ನಿಯಮಗಳನ್ನು ಆರ್‌ಬಿಐ ಜಾರಿಗೆ ತಂದಿದೆ. ಹಾಗಾಗಿ, ಎಲ್ಲ ಬ್ಯಾಂಕ್‌ಗಳು ಕಠಿಣ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ನಿಯಮಗಳನ್ನು ಪಾಲಿಸುವಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಆರ್‌ಬಿಐ ದಂಡ ವಿಧಿಸುತ್ತದೆ. ಆರ್‌ಬಿಐ ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿಯೇ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ ವಹಿವಾಟನ್ನು ಸ್ಥಗಿತಗೊಳಿಸಲಾಗಿದೆ.

ಕೆಲ ತಿಂಗಳ ಹಿಂದೆಯೂ ಮೂರು ಬ್ಯಾಂಕ್‌ಗಳಿಗೆ ಆರ್‌ಬಿಐ ದಂಡ ವಿಧಿಸಿತ್ತು. ಎಸ್‌ಬಿಐಗೆ 2 ಕೋಟಿ ರೂ. ದಂಡ ವಿಧಿಸಲಾಗಿತ್ತು. ಠೇವಣಿದಾರರ ಶೈಕ್ಷಣಿಕ ಜಾಗೃತಿ ಫಂಡ್‌ ಯೋಜನೆ (2014) ಅಡಿಯಲ್ಲಿ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ದಂಡ ವಿಧಿಸಿತ್ತು. ಆದಾಯ ಗುರುತಿಸುವ ಮಾನದಂಡಗಳು, ಅನುತ್ಪಾದಕ ಆಸ್ತಿ ಪತ್ತೆಹಚ್ಚುವಲ್ಲಿ ಚ್ಯುತಿ ಸೇರಿ ಹಲವು ಕಾರಣಗಳಿಂದಾಗಿ ಸಿಟಿ ಯುನಿಯನ್‌ ಬ್ಯಾಂಕ್‌ಗೆ 66 ಲಕ್ಷ ರೂ. ದಂಡ ವಿಧಿಸಿತ್ತು. ಮತ್ತೊಂದೆಡೆ, ಆರ್‌ಬಿಐ ನಿರ್ದೇಶನಗಳನ್ನು ಪಾಲಿಸುವಲ್ಲಿ ವಿಫಲವಾದ ಕೆನರಾ ಬ್ಯಾಂಕ್‌ಗೆ 32.30 ಲಕ್ಷ ರೂ. ದಂಡ ವಿಧಿಸಿತ್ತು.

ಇದನ್ನೂ ಓದಿ: RBI Dividend: ಆರ್‌ಬಿಐನಿಂದ ಕೇಂದ್ರಕ್ಕೆ 2.11 ಲಕ್ಷ ಕೋಟಿ ರೂ.‌ ಡಿವಿಡೆಂಡ್! ಮುಂದಿನ ಸರ್ಕಾರಕ್ಕೆ ವರ!

Continue Reading

ವೈರಲ್ ನ್ಯೂಸ್

Viral Video: ಆಧಾರ್ ಕಾರ್ಡ್ ಫೋಟೋಗೆ ಸುಂದರ ಪೋಸ್ ಕೊಟ್ಟು ಮನ ಗೆದ್ದ ಪುಟಾಣಿ! ನಿಮಗೇನು ಅನಿಸಿತು?

ಸಣ್ಣ ಮಕ್ಕಳು ಮಾತ್ರವಲ್ಲ ದೊಡ್ಡವರ ಫೋಟೋಗಳು ಆಧಾರ್ ಕಾರ್ಡ್‌, ರೇಷನ್ ಕಾರ್ಡ್, ಮತದಾರರ ಗುರುತು ಪತ್ರದಲ್ಲಿ ಅಸಮಾಧಾನಗೊಂಡಿರುವಂತೆ ತೋರಿಸುತ್ತದೆ. ಆದರೆ ಈ ಪುಟ್ಟ ಹುಡುಗಿ ಮಾತ್ರ ಯಾವುದೇ ತಪ್ಪು ಆಗದಂತೆ ನೋಡಿಕೊಂಡಳು. ಗುರುತಿನ ಚೀಟಿಗಾಗಿ ಉತ್ತಮ ಭಂಗಿಯನ್ನು ತೋರಿ ಎಲ್ಲರ ಮನ ಗೆದ್ದಳು. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದ್ದು, ಸಾಕಷ್ಟು ಮಂದಿಯ ಮೆಚ್ಚುಗೆ ಕೂಡ ಗಳಿಸಿದೆ.

VISTARANEWS.COM


on

By

Viral Video
Koo

ಆಧಾರ್ ಕಾರ್ಡ್ ನಂತಹ (Aadhar card) ಕೆಲವೊಂದು ದಾಖಲೆಗಳಿಗೆ ಮಕ್ಕಳ (child) ಫೋಟೋ (photo) ಕಡ್ಡಾಯವಾಗಿರುತ್ತದೆ. ಆದರೆ ಪುಟ್ಟ ಮಕ್ಕಳ ಫೋಟೋ ತೆಗೆಸುವ ವೇಳೆಗೆ ತಂದೆ, ತಾಯಿ ಮಾತ್ರವಲ್ಲ ಫೋಟೋಗ್ರಾಫರ್ ಕೂಡ ಸುಸ್ತಾಗಿ ಬಿಡುತ್ತಾರೆ. ಆದರೆ ಇಲ್ಲೊಂದು ಮಗು ಮಾತ್ರ ಫೋಟೋ ಎಂದಾಕ್ಷಣ ತನ್ನ ಮುದ್ದಾದ ಭಂಗಿಯನ್ನು ತೋರಿಸಿ ಎಲ್ಲರ ಮನ ಗೆದ್ದಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದ್ದು, ಸಾಕಷ್ಟು ಮಂದಿಯ ಮೆಚ್ಚುಗೆ ಕೂಡ ಗಳಿಸಿದೆ.

ಸಣ್ಣ ಮಕ್ಕಳು ಮಾತ್ರವಲ್ಲ ದೊಡ್ಡವರ ಫೋಟೋಗಳು ಆಧಾರ್ ಕಾರ್ಡ್‌, ರೇಷನ್ ಕಾರ್ಡ್, ಮತದಾರರ ಗುರುತು ಪತ್ರದಲ್ಲಿ ಅಸಮಾಧಾನಗೊಂಡಿರುವಂತೆ ತೋರಿಸುತ್ತದೆ. ಆದರೆ ಈ ಪುಟ್ಟ ಹುಡುಗಿ ಮಾತ್ರ ಯಾವುದೇ ತಪ್ಪು ಆಗದಂತೆ ನೋಡಿಕೊಂಡಳು. ಗುರುತಿನ ಚೀಟಿಗಾಗಿ ಉತ್ತಮ ಭಂಗಿಯನ್ನು ತೋರಿ ಎಲ್ಲರ ಮನ ಗೆದ್ದಳು.
ಅವಳು ಕೆಮರಾದ ಮುಂದೆ ಮುಗುಳ್ನಕ್ಕಿರುವುದು ಮಾತ್ರವಲ್ಲ ತನ್ನ ವಿಭಿನ್ನ ಭಂಗಿಯನ್ನು ತೋರಿ ಎಲ್ಲರ ಮನ ಗೆದ್ದಳು.

ತಾನು ಯಾವುದಕ್ಕಾಗಿ ಫೋಟೋ ತೆಗೆಸಿಕೊಳ್ಳುತ್ತಿದ್ದೇನೆ ಎಂಬ ಅರಿವಿಲ್ಲದ ಈ ಮಗು ಆಧಾರ್ ಕಾರ್ಡ್ ಫೋಟೋಗಾಗಿ ಬಗೆ ಬಗೆಯ ಪೋಸ್ ನೀಡಿದ್ದಾಳೆ. 20ಕ್ಕೂ ಹೆಚ್ಚು ಪೋಸ್ ನೀಡಿರುವ ಆಕೆಯ ಯಾವ ಫೋಟೋವನ್ನು ಕಾರ್ಡ್ ನಲ್ಲಿ ಅಚ್ಚು ಹಾಕುವ ಗೊಂದಲ ಈಗ ಆಧಾರ್ ಕಾರ್ಡ್ ಮಾಡುವ ಸಿಬ್ಬಂದಿಯದ್ದಾಗಿದೆ.


ಗುರುತು ಚೀಟಿಗಳಿಗಾಗಿ ಸಾಮಾನ್ಯವಾಗಿ ವಯಸ್ಕರ ಫೋಟೋ ತೆಗೆಯುವುದು ಸುಲಭ. ಆದರೆ ಮಕ್ಕಳ ಫೋಟೋ ತೆಗೆಯುವುದು ಅಷ್ಟು ಸುಲಭವಲ್ಲ. ಅವುಗಳ ಗಮನ ಎಲ್ಲೋ ಇರುತ್ತದೆ. ಇನ್ನು ಕೆಲವು ಮಕ್ಕಳು ಅಪರಿಚಿತರನ್ನು ನೋಡಿ ಅಳಲು ಪ್ರಾರಂಭಿಸುತ್ತದೆ. ಮತ್ತೆ ಕೆಲವರು ನಿಂತಲ್ಲಿ ನಿಲ್ಲಲ್ಲ. ಅತ್ತಿತ್ತ ಓಡಿ ಹೋಗುವುದು ಮಾಡುತ್ತಾರೆ. ಇದಲ್ಲ ಮುಗಿದು ಒಂದು ಒಳ್ಳೆಯ ಫೋಟೋ ಸಿಕ್ಕರೆ ಮಾತ್ರ ಪೋಷಕರು ನೆಮ್ಮದಿಯ ನಿಟ್ಟುಸಿರು ಬಿಡಲು ಸಾಧ್ಯ. ಇಲ್ಲವಾದರೆ ಮತ್ತದೇ ಮಕ್ಕಳ ತಕರಾರು ಎದುರಿಸಬೇಕಾಗುತ್ತದೆ.

ಇದನ್ನೂ ಓದಿ: Kerala Govt: ಕೇರಳ ಸರ್ಕಾರಿ ನೌಕರರ ಪೈಕಿ ಮೂರರಲ್ಲಿ ಒಬ್ಬ ಮುಸ್ಲಿಂ ಅಥವಾ ಕ್ರಿಶ್ಚಿಯನ್

ಆದರೆ ಈ ಮಗುವನ್ನು ಪೋಷಕರು ಆಧಾರ್ ಕಾರ್ಡ್ ಸೆಂಟರ್‌ಗೆ ಕರೆದುಕೊಂಡು ಬಂದು ಕುರ್ಚಿಯ ಮೇಲೆ ನಿಲ್ಲಿಸಿ ಕೆಮರಾಗೆ ಪೋಸ್ ನೀಡಲು ಹೇಳಿದ್ದಾರೆ. ಫೋಟೋ ತೆಗೆಯುತ್ತಾರೆ. ಕೆಮರಾ ನೋಡು ಎಂದಿದ್ದಾರೆ. ತಕ್ಷಣ ಮಗು ಒಂದರ ಮೇಲೊಂದರಂತೆ ಪೋಸ್ ನೀಡುತ್ತಾ ಹೋಗಿದ್ದಾಳೆ. ಪುಟಾಣಿ ಮಗುವಿನ ಈ ಪೋಸ್ ಅಲ್ಲಿರುವ ಸಿಬ್ಬಂದಿಗೆ ಮಾತ್ರವಲ್ಲ ಅಲ್ಲಿದ್ದವರೆಲ್ಲರ ಗಮನ ಸೆಳೆದಿದ್ದು, ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ಫೋಟೋ ನೋಡಿ ಮೆಚ್ಚುಗೆ ವ್ಯಕ್ತಪಡಿಸಿ ಸಾಕಷ್ಟು ಮಂದಿ ಕಾಮೆಂಟ್ ಕೂಡ ಮಾಡಿದ್ದಾರೆ.

Continue Reading

ದೇಶ

Kerala Govt: ಕೇರಳ ಸರ್ಕಾರಿ ನೌಕರರ ಪೈಕಿ ಮೂರರಲ್ಲಿ ಒಬ್ಬ ಮುಸ್ಲಿಂ ಅಥವಾ ಕ್ರಿಶ್ಚಿಯನ್

ಕೇರಳದಲ್ಲಿ ಸರ್ಕಾರಿ (Kerala Govt) ಉದ್ಯೋಗ ಪಡೆಯುವಲ್ಲಿ ಹೆಚ್ಚಿನ ಮುಸ್ಲಿಂ ಮತ್ತು ಕ್ರಿಶ್ಚಿಯನರು ಮೇಲುಗೈ ಸಾಧಿಸಿದ್ದಾರೆ. ಒಟ್ಟು ಸರ್ಕಾರಿ ಉದ್ಯೋಗಿಗಳಲ್ಲಿ ಕೇವಲ 26 ಯಾದವರು, 28 ಕ್ಷತ್ರಿಯರು, 27 ಜೈನರು ಮಾತ್ರ ಕೆಲಸ ಮಾಡುತ್ತಿರುವ ಸಂಗತಿ ಅಂಕಿಅಂಶಗಳಿಂದ ಬಹಿರಂಗವಾಗಿದೆ. ರಾಜ್ಯದಲ್ಲಿ 1,73,268 ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ರಾಜ್ಯ ಸರ್ಕಾರದ ಕರ್ತವ್ಯದ ಭಾಗವಾಗಿದ್ದಾರೆ. ಒಟ್ಟು ಉದ್ಯೋಗಿಗಳಲ್ಲಿ ಈ ಎರಡೂ ಸಮುದಾಯದವರು ಶೇ. 31.5ರಷ್ಟು ಪ್ರಮಾಣದಷ್ಟಿದ್ದಾರೆ.

VISTARANEWS.COM


on

By

Kerala govt
Koo

ಕೇರಳ ಸರ್ಕಾರದ (Kerala Govt) ಪ್ರತಿ ಮೂರು ಸರ್ಕಾರಿ ಉದ್ಯೋಗಿಗಳಲ್ಲಿ ಒಬ್ಬ (government employee) ಮುಸ್ಲಿಂ (Muslim) ಅಥವಾ ಕ್ರಿಶ್ಚಿಯನ್ (Christian) ಆಗಿದ್ದಾರೆ. ಈ ರಾಜ್ಯದಲ್ಲಿ ಕೇವಲ 26 ಯಾದವರು, 28 ಕ್ಷತ್ರಿಯರು, 27 ಜೈನರು ಸರ್ಕಾರಿ ಉದ್ಯೋಗದಲ್ಲಿದ್ದಾರೆ ಎಂಬುದನ್ನು ಒಪಿಂಡಿಯಾ ಡೇಟಾ ಬಹಿರಂಗಪಡಿಸಿದೆ.

ಕೇರಳ ವಿಧಾನಸಭೆಯಲ್ಲಿ (kerala vidhansabha) ಮಂಡಿಸಲಾದ ಈ ಅಂಕಿ ಅಂಶವು ರಾಜ್ಯದಲ್ಲಿ ಪ್ರಸ್ತುತ 5,45,423 ನೌಕರರು ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಲ್ಲಿ 73,774 ಮುಸ್ಲಿಮರಾಗಿದ್ದಾರೆ. ಇದು ರಾಜ್ಯದ ಎಲ್ಲ ಸರ್ಕಾರಿ ನೌಕರರಲ್ಲಿ ಶೇ. 13.5ರಷ್ಟಿದೆ ಎಂದು ಡೇಟಾ ಬಹಿರಂಗಪಡಿಸಿದೆ.

ರಾಜ್ಯ ಸರ್ಕಾರದಲ್ಲಿ ಮುಸ್ಲಿಮರಿಗಿಂತ ಹೆಚ್ಚು ಕ್ರಿಶ್ಚಿಯನ್‌ ನೌಕರರಿದ್ದಾರೆ. ಲ್ಯಾಟಿನ್ ಚರ್ಚ್‌ನ ಸದಸ್ಯರಾಗಿರುವ 22,452 ಕಾರ್ಮಿಕರು ಕೇರಳ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದಾರೆ. 2,399 ಉದ್ಯೋಗಿಗಳು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. 929 ಕಾರ್ಮಿಕರನ್ನು ನಾಡಾರ್ ಕ್ರಿಶ್ಚಿಯನ್ ಎಂದು ಗುರುತಿಸಲಾಗಿದೆ. ಕೇರಳದಲ್ಲಿ ಸರ್ಕಾರಿ ಉದ್ಯೋಗದಲ್ಲಿರುವ ಎಲ್ಲಾ ಕ್ರಿಶ್ಚಿಯನ್ ಸಮುದಾಯಗಳ ಸಂಖ್ಯೆ 99,494. ಅವರ ಶೇಕಡಾವಾರು ಪ್ರಮಾಣವು ಶೇ. 18.25 ರಷ್ಟಾಗಿದೆ. ಅಂದರೆ ಈ ಸಂಖ್ಯೆ ಮುಸ್ಲಿಮರಿಗಿಂತ ಹೆಚ್ಚು.


ರಾಜ್ಯದಲ್ಲಿ 1,73,268 ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ರಾಜ್ಯ ಸರ್ಕಾರದ ಕರ್ತವ್ಯದ ಭಾಗವಾಗಿದ್ದಾರೆ. ಒಟ್ಟು ಉದ್ಯೋಗಿಗಳಲ್ಲಿ ಈ ಎರಡೂ ಸಮುದಾಯದವರು ಶೇ. 31.5ರಷ್ಟು ಪ್ರಮಾಣದಷ್ಟಿದ್ದಾರೆ. ಗಮನಾರ್ಹ ಸಂಗತಿ ಎಂದರೆ ಸುಮಾರು ಮೂರನೇ ಒಂದು ಭಾಗದಷ್ಟು ರಾಜ್ಯ ಕಾರ್ಮಿಕರನ್ನು ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರು ಎಂದು ವರ್ಗೀಕರಿಸಲಾಗಿದೆ.

ಇದನ್ನೂ ಓದಿ: 2025ರ ವೇಳೆಗೆ ಬಾಹ್ಯಾಕಾಶ, ಸಮುದ್ರದ ಆಳಕ್ಕೆ ಮಾನವ ಸಹಿತ ಮಿಷನ್;‌ ಕೇಂದ್ರ ಸಚಿವ ಮಹತ್ವದ ಘೋಷಣೆ

Continue Reading

ದೇಶ

Bridge Collapse: 17 ದಿನದಲ್ಲಿ 10 ಸೇತುವೆ ಕುಸಿತ; ಬಿಹಾರದಲ್ಲಿ 15 ಎಂಜಿನಿಯರ್‌ಗಳ ಅಮಾನತು!

Bridge Collapse: ಸೇತುವೆಗಳು ಧರೆಗುರುಳುವ ಪ್ರಕರಣಗಳು ಜಾಸ್ತಿಯಾಗಿರುವುದು ಜನಾಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಂತೂ ಜನ ಬಿಹಾರ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಬ್ರಹ್ಮಾಂಡ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿವೆ. ಇದರ ಬೆನ್ನಲ್ಲೇ, ಬಿಹಾರ ಸರ್ಕಾರವ 15 ಎಂಜಿನಿಯರ್‌ಗಳನ್ನು ಅಮಾನತು ಮಾಡಿದೆ.

VISTARANEWS.COM


on

Bridge Collapse
Koo

ಪಟನಾ: ಬಿಹಾರದಲ್ಲಿ ಕಳೆದ 17 ದಿನಗಳಲ್ಲಿ 10 ಸೇತುವೆಗಳು ಕುಸಿದಿರುವುದು (Bridge Collapse) ದೇಶಾದ್ಯಂತ ಸುದ್ದಿಯಾಗಿದೆ. ಸಣ್ಣ ಮಳೆಯಾದರೂ ಸೇತುವೆಗಳು ಕುಸಿಯುವುದು, ನಿರ್ಮಾಣ ಹಂತದಲ್ಲಿರುವಾಗಲೇ ಸೇತುವೆಗಳು ಧರೆಗುರುಳುವ ಪ್ರಕರಣಗಳು ಜಾಸ್ತಿಯಾಗಿರುವುದು ಜನಾಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಂತೂ ಜನ ಬಿಹಾರ ಸರ್ಕಾರದ (Bihar Government) ವಿರುದ್ಧ ಮುಗಿಬಿದ್ದಿದ್ದಾರೆ. ಬ್ರಹ್ಮಾಂಡ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿವೆ. ಇದರ ಬೆನ್ನಲ್ಲೇ, ಬಿಹಾರ ಸರ್ಕಾರವ 15 ಎಂಜಿನಿಯರ್‌ಗಳನ್ನು ಅಮಾನತು ಮಾಡಿದೆ.

ಬಿಹಾರದಲ್ಲಿ ಸೇತುವೆಗಳ ನಿರ್ಮಾಣದ ವೇಳೆ ಕರ್ತವ್ಯ ಲೋಪ ಎಸಗಿದ ಕಾರಣ ಸೇತುವೆಗಳು ಕುಸಿದಿವೆ. ಇದೇ ಕಾರಣಕ್ಕಾಗಿ ರಾಜ್ಯ ಸರ್ಕಾರವು 15 ಎಂಜಿನಿಯರ್‌ಗಳನ್ನು ಅಮಾನತುಗೊಳಿಸಿದೆ. ಜಲ ಸಂಪನ್ಮೂಲ ಇಲಾಖೆಯ 11 ಹಾಗೂ ಗ್ರಾಮೀಣ ಅಭಿವೃದ್ಧಿ ಇಲಾಖೆಯ ನಾಲ್ವರು ಎಂಜಿನಿಯರ್‌ಗಳನ್ನು ಅಮಾನತುಗೊಳಿಸಲಾಗಿದೆ. ಇನ್ನು, ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಎಂಜಿನಿಯರ್‌ಗಳಿಂದ ವಿವರಣೆ ಕೇಳಲಾಗಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆ ತನಿಖೆಗೆ ಆದೇಶಿಸಲಾಗಿದ್ದು, ಇನ್ನಷ್ಟು ಅಧಿಕಾರಿಗಳನ್ನು ಮನೆಗೆ ಕಳುಹಿಸಲಾಗುತ್ತದೆ ಎಂದು ತಿಳಿದುಬಂದಿದೆ.

Bridge Collapse

ಬಿಹಾರದಲ್ಲಿ ಕಳೆದ ಕೆಲ ದಿನಗಳಿಂದ ಸೇತುವೆ ಕುಸಿತದ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಜುಲೈ 3ರಂದು ಸಿವಾನ್‌ ಜಿಲ್ಲೆಯಲ್ಲಿ 2 ಸೇತುವೆ ಬಿದ್ದಿದ್ದವು. ಇನ್ನು, ಜುಲೈ 4ರಂದು ಸರಣ್‌ ಜಿಲ್ಲೆಯಲ್ಲಿ ಒಂದು ಸೇತುವೆ ಕುಸಿದಿತ್ತು. ಜೂನ್‌ 28ರಂದು ಮಧುಬನಿ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದಿತ್ತು. ಇದಕ್ಕೂ ಒಂದು ದಿನ ಮೊದಲೇ ಅಂದರೆ ಜೂನ್‌ 27ರಂದು ಕಿಶನ್‌ಗಂಜ್‌ ಜಿಲ್ಲೆಯಲ್ಲಿ ಸೇತುವೆಯೊಂದು ಕುಸಿದಿತ್ತು. ಜೂನ್‌ 23ರಂದು ಪೂರ್ವ ಚಂಪಾರಣ್‌ ಜಿಲ್ಲೆಯಲ್ಲಿ ಸಣ್ಣ ಸೇತುವೆ ಕುಸಿದು ಅಧಿಕಾರಿಗಳು ಜನರ ಆಕ್ರೋಶಕ್ಕೆ ಗುರಿಯಾಗಿದ್ದರು. ಜೂನ್‌ 22ರಂದು ಕೂಡ ಸಿವಾನ್‌ ಜಿಲ್ಲೆಯಲ್ಲಿ ಸೇತುವೆ ಕುಸಿದಿತ್ತು. ಜೂನ್‌ 19ರಂದೂ ಅರಾತಿಯಾ ಪ್ರದೇಶದಲ್ಲಿ ನಿರ್ಮಾಣ ಹಂತದ ಸೇತುವೆ ಧರೆಗುರುಳಿತ್ತು.  

ಬಿಹಾರ ರಾಜ್ಯದಲ್ಲಿ ಒಂದರ ಹಿಂದೆ ಒಂದರಂತೆ ಸೇತುವೆಗಳು ಕುಸಿಯುತ್ತಿರುವುದಕ್ಕೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಬಿಹಾರದಲ್ಲಿ ಸೇತುವೆ ಕುಸಿತದ ಪ್ರಕರಣಗಳು ಸುದ್ದಿಯಾಗುತ್ತಲೇ ಇವೆ. ಕಳೆದ 9 ದಿನಗಳಲ್ಲಿಯೇ ಇಂತಹ 5 ಪ್ರಕರಣಗಳು ಬೆಳಕಿಗೆ ಬಂದಿವೆ. ನಿತೀಶ್‌ ಕುಮಾರ್‌ ನೇತೃತ್ವದ ಸರ್ಕಾರವು ಸೇತುವೆ ನಿರ್ಮಾಣದಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ ಹಾಗೂ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ. ಜನರ ದುಡ್ಡು ಹೀಗೆ ನೀರು ಪಾಲಾಗುತ್ತಿದ್ದರೂ ಮುಖ್ಯಮಂತ್ರಿಯು ಗಾಢ ನಿದ್ದೆಯಲ್ಲಿದ್ದಾರೆ” ಎಂಬುದಾಗಿ ಟೀಕಿಸಿದ್ದಾರೆ.

ಇದನ್ನೂ ಓದಿ: Bridge Collapse: ಬಿಹಾರದಲ್ಲಿ ಮತ್ತೆರಡು ಸೇತುವೆ ಕುಸಿತ; 15 ದಿನಗಳಲ್ಲಿ ಇದು 7ನೇ ಪ್ರಕರಣ!

Continue Reading
Advertisement
Dengue Fever
ಕರ್ನಾಟಕ9 mins ago

Dengue Fever: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 155 ಡೆಂಗ್ಯೂ ಕೇಸ್‌ಗಳು ಪತ್ತೆ!

Rohit Sharma
ಪ್ರಮುಖ ಸುದ್ದಿ15 mins ago

T20 World Cup : ಮಹಾರಾಷ್ಟ್ರದ ಆಟಗಾರರಿಗೆ 11 ಕೋಟಿ ರೂಪಾಯಿ ಬಹುಮಾನ ಘೋಷಿಸಿದ ಮಹಾ ಸಿಎಂ ಶಿಂಧೆ

RBI Fine
ದೇಶ39 mins ago

RBI Fine: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ಆರ್‌ಬಿಐ 1.31 ಕೋಟಿ ರೂ. ದಂಡ; ಕಾರಣ ಹೀಗಿದೆ

Namma Metro
ಕರ್ನಾಟಕ44 mins ago

Namma Metro: ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ನಾಳೆಯಿಂದ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ರೈಲು ಸೇವೆ

Viral Video
ವೈರಲ್ ನ್ಯೂಸ್45 mins ago

Viral Video: ಆಧಾರ್ ಕಾರ್ಡ್ ಫೋಟೋಗೆ ಸುಂದರ ಪೋಸ್ ಕೊಟ್ಟು ಮನ ಗೆದ್ದ ಪುಟಾಣಿ! ನಿಮಗೇನು ಅನಿಸಿತು?

Brain Eating Amoeba
ಆರೋಗ್ಯ50 mins ago

Brain Eating Amoeba: ಏನಿದು ಮೆದುಳು ತಿನ್ನುವ ಅಮೀಬಾ? ಇದರಿಂದ ನಮಗೂ ಅಪಾಯ ಇದೆಯೆ?

Kerala govt
ದೇಶ1 hour ago

Kerala Govt: ಕೇರಳ ಸರ್ಕಾರಿ ನೌಕರರ ಪೈಕಿ ಮೂರರಲ್ಲಿ ಒಬ್ಬ ಮುಸ್ಲಿಂ ಅಥವಾ ಕ್ರಿಶ್ಚಿಯನ್

Teach for India
ಬೆಂಗಳೂರು1 hour ago

Teach For India : ಟೀಚ್ ಫಾರ್ ಇಂಡಿಯಾದಿಂದ 2025ರ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿಗಳ ಆಹ್ವಾನ

Bridge Collapse
ದೇಶ1 hour ago

Bridge Collapse: 17 ದಿನದಲ್ಲಿ 10 ಸೇತುವೆ ಕುಸಿತ; ಬಿಹಾರದಲ್ಲಿ 15 ಎಂಜಿನಿಯರ್‌ಗಳ ಅಮಾನತು!

Shivamogga News Give top priority to cleanliness says Raju Hiriyawali
ಶಿವಮೊಗ್ಗ1 hour ago

Shivamogga News: ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ: ರಾಜು ಹಿರಿಯಾವಲಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ3 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ5 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ6 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ8 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ9 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು10 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು11 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ15 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ1 day ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಟ್ರೆಂಡಿಂಗ್‌