Reels Obsession: ಎಕೆ 47, ಬಾಡಿಗಾರ್ಡ್ಸ್‌, ಸುಂದರಿಯರ ನಡುವೆ ರೀಲ್ಸ್‌ ಶೋಕಿ ಮಾಡಿದವನು ಜೈಲುಪಾಲು! - Vistara News

ಕ್ರೈಂ

Reels Obsession: ಎಕೆ 47, ಬಾಡಿಗಾರ್ಡ್ಸ್‌, ಸುಂದರಿಯರ ನಡುವೆ ರೀಲ್ಸ್‌ ಶೋಕಿ ಮಾಡಿದವನು ಜೈಲುಪಾಲು!

Reels Obsession: ಬೆಂಗಳೂರಿನಲ್ಲಿ ಹೀಗೆ ಶೋ ಕೊಡಲು ಹೋಗಿ ಜೈಲು ಸೇರಿದ ರೀಲ್ಸ್ ಸ್ಟಾರ್ ಹೆಸರು ಅರುಣ್ ಕಟಾರೆ. ಕೊತ್ತನೂರು ಪೊಲೀಸರು ಈತನನ್ನು ಬಂಧಿಸಿದ್ದಾರೆ. ರೌಡಿ ಚಟುವಟಿಕೆ ಮತ್ತು ಹಳೆಯ ಎಂಓಬಿಗಳ ಮೇಲೆ ನಿಗಾ ವಹಿಸಿದ್ದ ಕೊತ್ತನೂರು ಸಿಬ್ಬಂದಿ ಬಾತ್ಮಿದಾರರಿಂದ ಬಂದ ಮಾಹಿತಿ ಮೇರೆಗೆ ಅರುಣ್ ಕಟಾರೆಯನ್ನು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

reels obsession
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಿಲ್ಸ್ ಶೋಗಾಗಿ ಶೋಕಿ (Reels Obsession) ಮಾಡಿದವನನ್ನು ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಮುದ್ದೆ ಮುರಿಯಲು ಕಳಿಸಿದ್ದಾರೆ. ಈತ ಎಕೆ 47 (AK 47 Rifle) ರೈಫಲ್‌ ಹಿಡಿದ ಗನ್ ಮ್ಯಾನ್‌ಗಳನ್ನು ಬಾಡಿಗಾರ್ಡ್ಸ್‌ (Bodyguards) ಆಗಿಟ್ಟುಕೊಂಡು, ಪಾಶ್ ಕಾರುಗಳನ್ನು ಚಲಾಯಿಸಿಕೊಂಡು, ಮೈಮೇಲೆ ಕಿಲೋಗಟ್ಟಲೆ ಚಿನ್ನ ಧರಿಸಿಕೊಂಡು ಶೋಕಿ ಮಾಡುತ್ತಿದ್ದ. ಬೀದಿಬೀದಿಯಲ್ಲಿ ಈತನ ಗನ್‌ ಝಳಪಿಸುವಿಕೆ ಕಂಡು ಜನ ಆತಂಕಕ್ಕೊಳಗಾಗಿದ್ದರು.

ಬೆಂಗಳೂರಿನಲ್ಲಿ ಹೀಗೆ ಶೋ ಕೊಡಲು ಹೋಗಿ ಜೈಲು ಸೇರಿದ ರೀಲ್ಸ್ ಸ್ಟಾರ್ ಹೆಸರು ಅರುಣ್ ಕಟಾರೆ. ಕೊತ್ತನೂರು ಪೊಲೀಸರು ಈತನನ್ನು ಬಂಧಿಸಿದ್ದಾರೆ. ರೌಡಿ ಚಟುವಟಿಕೆ ಮತ್ತು ಹಳೆಯ ಎಂಓಬಿಗಳ ಮೇಲೆ ನಿಗಾ ವಹಿಸಿದ್ದ ಕೊತ್ತನೂರು ಸಿಬ್ಬಂದಿ ಬಾತ್ಮಿದಾರರಿಂದ ಬಂದ ಮಾಹಿತಿ ಮೇರೆಗೆ ಅರುಣ್ ಕಟಾರೆಯನ್ನು ವಶಕ್ಕೆ ಪಡೆದಿದ್ದಾರೆ.

ಈತ ಬಾಡಿಗಾರ್ಡ್ಸ್‌ ಥರ ಮನುಷ್ಯರನ್ನಿಟ್ಟುಕೊಂಡು, ಅವರ ಕೈಲಿ ಎಕೆ 47 ಮಾದರಿಯ ನಕಲಿ ಗನ್ ಹಿಡಿಸಿ ರಸ್ತೆಯಲ್ಲಿ ಶೋಆಫ್‌ ಮಾಡುತ್ತಿದ್ದ. ಮೈಮೇಲೆ ನಕಲಿ ಚಿನ್ನ ಹೇರಿಕೊಳ್ಳುತ್ತಿದ್ದ. ಅರುಣ್ ಕಟಾರೆ ಶೋನಿಂದ ಬೆದರಿದ ಸಾರ್ವಜನಿಕರು ಆತಂಕದಿಂದ ಈ ಬಗ್ಗೆ ಮಾಹಿತಿ ನೀಡಿದ್ದರು.

ಆರ್ಮ್ಸ್ ಕಾಯಿದೆ ಸೆ. 290 ಅಡಿಯಲ್ಲಿ ಪ್ರಕರಣ ದಾಖಲಿಸಿ ಈತನನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ, ನಕಲಿ ಗನ್ ಹಿಡಿದು ಏರಿಯಾದಲ್ಲಿ ಹವಾ ಸೃಷ್ಟಿಸಲು ಹೋದವನ ಗುಟ್ಟು ಬಯಲಾಗಿದೆ. ರೀಲ್ಸ್ ಶೋಕಿಗೆ ಬಿದ್ದ ಯುವಕನನ್ನು ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಕಳಿಸಿದ್ದಾರೆ.

ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದ ಹೊರವಲಯದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ (Dead Body Found) ಪತ್ತೆಯಾಗಿದೆ. ಮೃತನ ಕೈ ಮೇಲೆ ಲಕ್ಷ್ಮಿ ಎಂಬ ಹಚ್ಚೆ ಗುರುತು ಪತ್ತೆಯಾಗಿದೆ.

ಪ್ರೀತಿ-ಪ್ರೇಮ ಹಿನ್ನೆಲೆಯಲ್ಲಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ದುಷ್ಕರ್ಮಿಗಳು ಕೊಲೆ ಮಾಡಿ ಮರಕ್ಕೆ ನೇತು ಹಾಕಿ ಹೋಗಿರುವ ಅನುಮಾನವಿದೆ. ಮರದಲ್ಲಿ ನೇತಾಡುತ್ತಿದ್ದ ಮೃತದೇಹವನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗೌರಿಬಿದನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರದಲ್ಲಿದ್ದ ಮೃತದೇಹವನ್ನು ಕೆಳಗಿಸಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತನ ಗುರುತು ಪತ್ತೆಯಾಗಿಲ್ಲ. ಸದ್ಯ ಪೊಲೀಸರು ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದರ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Murder Case : ರೌಡಿಯಾಗಲು ಹೊರಟವನನ್ನು ಕೊಂದು ಹಾಕಿದ್ರು ಪುಂಡರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Stampede Tips and Tricks: ಕಾಲ್ತುಳಿತ ಸಂದರ್ಭದಲ್ಲಿ ನಮ್ಮನ್ನು ರಕ್ಷಿಸಿಕೊಳ್ಳುವುದು ಹೇಗೆ? ಈ ವಿಡಿಯೋ ನೋಡಿ

Stampede Tips and Tricks: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಇತ್ತೀಚೆಗೆ ನಡೆದ ಬಾಬಾ ಭೋಲೆ ಅವರ ಸತ್ಸಂಗದಲ್ಲಿ ಕಾಲ್ತುಳಿತ ಉಂಟಾಗಿ 121 ಮಂದಿ ಸಾವನ್ನಪ್ಪಿದ್ದು, 31 ಮಂದಿ ಗಾಯಗೊಂಡಿದ್ದರು. ಇಂಥ ಕಾಲ್ತುಳಿತ ಉಂಟಾದಾಗ ನಮ್ಮನ್ನು ನಾನು ರಕ್ಷಿಸಿಕೊಳ್ಳುವುದು ಹೇಗೆ? ಪ್ರಾಣಾಪಾಯದಿಂದ ಪಾರಾಗುವುದು ಹೇಗೆ? ಇಲ್ಲಿದೆ ವಿಡಿಯೊ ಸಹಿತ ವಿವರಣೆ.

VISTARANEWS.COM


on

By

Stampede Tips and Tricks
Koo

ಹತ್ರಾಸ್‌ನಲ್ಲಿ (Hathras) ಇತ್ತೀಚೆಗೆ (Stampede Tips and Tricks) ಬಾಬಾ ಭೋಲೆ (Baba Bhole) ಅವರ ಸತ್ಸಂಗದಲ್ಲಿ ಕಾಲ್ತುಳಿತ ಉಂಟಾಗಿ 121 ಮಂದಿ ಸಾವನ್ನಪ್ಪಿದ್ದು, 31 ಮಂದಿ ಗಾಯಗೊಂಡಿದ್ದರು. ಇಂತಹ ಕಾಲ್ತುಳಿತ ಸಂದರ್ಭಗಳಲ್ಲಿ ನಮ್ಮನ್ನು ನಾವು ಹೇಗೆ ರಕ್ಷಿಸಿಕೊಳ್ಳಬಹುದು ಎನ್ನುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ (Viral Video) ಶೇರ್‌ ಆಗುತ್ತಿದೆ.

ಉತ್ತರ ಪ್ರದೇಶದ ಹತ್ರಾಸ್ ಸತ್ಸಂಗದ (satsang) ಮುಖ್ಯ ಭಾಷಣಕಾರರಾಗಿ ಭೋಲೆ ಬಾಬಾ ಆಗಮಿಸಿದ್ದರು. ಭೋಲೆ ಬಾಬಾ ಅವರು ಅವರು ಅಲ್ಲಿಗೆ ಆಗಮಿಸಿದಾಗ ಭಕ್ತರು ಆ ಪ್ರದೇಶದ ಮಣ್ಣನ್ನು ಸಂಗ್ರಹಿಸಲು ಪ್ರಾರಂಭಿಸಲು ತೊಡಗಿದಾಗ ಕಾಲ್ತುಳಿತ ಉಂಟಾಗಿತ್ತು.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಜನರು ಕಾಲ್ತುಳಿತದಿಂದ ಹೇಗೆ ಬದುಕಬಹುದು ಎಂಬುದನ್ನು ವಿವರಿಸಲು ತಜ್ಞರು ಸ್ವಯಂಸೇವಕರ ಗುಂಪಿನ ಸಹಾಯವನ್ನು ಬಳಸಿದ್ದಾರೆ.
ಜನರು ಕಾಲ್ತುಳಿತದಲ್ಲಿ ಹೇಗೆ ಸಿಲುಕಿಕೊಂಡರು ಎಂಬುದನ್ನು ಪ್ರದರ್ಶಿಸುವ ದೃಶ್ಯವೂ ಇದರಲ್ಲಿದೆ. ಇದಲ್ಲದೆ ಇಂತಹ ಸಂದರ್ಭಗಳು ಜನಸಮೂಹದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನೂ ವಿವರಿಸಲಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಈ ವಿಡಿಯೋದಲ್ಲಿ ಜನರು ಎಂದಾದರೂ ಇಂತಹ ಪರಿಸ್ಥಿತಿಯಲ್ಲಿ ಸಿಲುಕಿಕೊಂಡರೆ ಬದುಕುಳಿಯಬಹುದು ಎಂಬುದನ್ನು ತಜ್ಞರು ವಿವರಿಸಿದ್ದಾರೆ. ಇದಕ್ಕಾಗಿ ಪರಿಣಿತರು ಸಹಾಯಕವಾದ ಸಲಹೆಗಳು ಮತ್ತು ಭಂಗಿಗಳನ್ನು ಹೇಳಿದ್ದಾರೆ. ಇಂಥ ಕಾಲ್ತುಳಿತ ಸಂದರ್ಭದಲ್ಲಿ ಅಡ್ಡಲಾಗಿ ಮಲಗುವ ಮೂಲಕ ಮತ್ತು ಎರಡೂ ಕೈಗಳಿಂದ ತಲೆ ಮತ್ತು ಮುಖವನ್ನು ರಕ್ಷಿಸಿಕೊಳ್ಳುವ ಮೂಲಕ ಪ್ರಾಣಾಪಾಯದಿಂದ ಪಾರಾಗಬಹುದು ಎಂದು ವಿಡಿಯೊದಲ್ಲಿ ಪ್ರಾತ್ಯಕ್ಷಿಕೆ ಮೂಲಕ ವಿವರಿಸಲಾಗಿದೆ.

ಕಾಲ್ತುಳಿತದಲ್ಲಿ ಸಿಲುಕಿಕೊಳ್ಳುವ ಜನರು ವಿವಿಧ ಕಡೆಯಿಂದ ಒಂದೇ ಬಾರಿಗೆ ಒತ್ತಡವನ್ನು ಅನುಭವಿಸಬೇಕಾಗುತ್ತದೆ. ಆಗ ಉಸಿರು ಕಟ್ಟುತ್ತದೆ. ಪಕ್ಕೆಲುಬುಗಳು, ಹೃದಯ ಮತ್ತು ಪ್ರಮುಖ ಅಂಗಗಳಿಗೆ ಹಾನಿಯುಂಟಾಗುತ್ತದೆ. ಈ ಸಂದರ್ಭದಲ್ಲಿ ನಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುವ ಭಂಗಿಯನ್ನು ತಜ್ಞರು ವಿವರಿಸಿದ್ದಾರೆ.

ಹತ್ರಾಸ್‌ನಲ್ಲಿ ಏನಾಗಿತ್ತು?

ಹತ್ರಾಸ್ ಜಿಲ್ಲೆಯ ಸಿಕಂದರಾ ರಾವು ಪ್ರದೇಶದ ರಾತಿ ಭಾನ್‌ಪುರ್ ಗ್ರಾಮದಲ್ಲಿ ಇತ್ತೀಚೆಗೆ ವಿಶೇಷವಾಗಿ ಹಾಕಲಾದ ಟೆಂಟ್‌ನಲ್ಲಿ ಪ್ರಚಾರಕರು ಆಯೋಜಿಸಿದ್ದ ‘ಸತ್ಸಂಗ’ದಲ್ಲಿ ಲಕ್ಷಾಂತರ ಜನರು ಜಮಾಯಿಸಿದಾಗ ಕಾಲ್ತುಳಿತ ಸಂಭವಿಸಿತ್ತು. ಧಾರ್ಮಿಕ ಸಭೆ ಮುಗಿದ ಅನಂತರ ಕಾಲ್ತುಳಿತ ಉಂಟಾಗಿತ್ತು.


ಘಟನೆಯ ಬಳಿಕ ಸ್ವಯಂ ಘೋಷಿತ ಬೋಧಕ ಬಾಬಾ ನಾರಾಯಣ ಹರಿ ಅಲಿಯಾಸ್ ಸಾಕರ್ ವಿಶ್ವ ಹರಿ ‘ಭೋಲೆ ಬಾಬಾ’ ಅವರು ಬೆಂಗಾವಲು ಪಡೆಯೊಂದಿಗೆ ಗ್ರಾಮವನ್ನು ತೊರೆದಿದ್ದರು. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ‘ಸೇವಕ್’ ಎಂದೂ ಕರೆಯಲ್ಪಡುವ ಹಲವಾರು ಸ್ವಯಂಸೇವಕರು ಭೋಲೆ ಬಾಬಾ ಅವರ ಬೆಂಗಾವಲು ಪಡೆ ವಾಹನ ರಸ್ತೆ ದಾಟುವಾಗ ರಸ್ತೆಯ ಎರಡೂ ಬದಿಗಳಲ್ಲಿ ನಿಂತಿದ್ದರು.

ಈ ಕುರಿತು ಮಾಹಿತಿ ನೀಡಿರುವ ಪ್ರತ್ಯಕ್ಷದರ್ಶಿ ಗೋಪಾಲ್ ಕುಮಾರ್, ಬಾಬಾ ಅವರು ಬೈಪಾಸ್ ಮಾಡುವ ಮೂಲಕ ಗೊತ್ತುಪಡಿಸಿದ ಮಾರ್ಗದಿಂದ ಆಗಮಿಸಿ, ನಿರ್ಗಮಿಸಿದರು. ಅವರ ಸುತ್ತಲೂ ವಾಹನಗಳಿದ್ದವು ಮತ್ತು ಹೆದ್ದಾರಿಯ ಒಂದು ಭಾಗವು ಭಕ್ತರು ಮತ್ತು ವಾಹನಗಳಿಂದ ತುಂಬಿ ಬಹುತೇಕ ಜಾಮ್ ಆಗಿತ್ತು ಎಂದು ಹೇಳಿದರು.

ಬಾಬಾ ಅವರ ವಾಹನವು ಹೆದ್ದಾರಿಯನ್ನು ತಲುಪುತ್ತಿದ್ದಂತೆ ನೂರಾರು ಭಕ್ತರು ಅವರ ಪಾದದ ಅಡಿಯ ಮಣ್ಣು ಪಡೆಯಲು ಅವರ ಕಾರಿನ ಕಡೆಗೆ ಧಾವಿಸಿದರು. ಇದರಲ್ಲಿ ಕೆಲವರು ಬಿದ್ದರು. ಬೃಹತ್ ಜನಸಮೂಹವು ಹೆದ್ದಾರಿಯತ್ತ ಧಾವಿಸಿದ್ದು, ಬಿದ್ದವರಲ್ಲಿ ಕೆಲವರಿಗೆ ಮೇಲಕ್ಕೆ ಎಳಲೂ ಸಾಧ್ಯವಾಗಲಿಲ್ಲ. ಇದು ಕಾಲ್ತುಳಿತಕ್ಕೆ ಕಾರಣವಾಯಿತು. ಅವರಲ್ಲಿ ಕೆಲವರು ಸತ್ತರು ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಉತ್ತರ ಪ್ರದೇಶ ಪೊಲೀಸರು ಆರು ಜನರು ಸೇರಿ ಎಲ್ಲಾ ಸೇವಾದಾರರನ್ನು ಬಂಧಿಸಿದ್ದರೆ ಎಂದು ತಿಳಿಸಿದರು.

ಪ್ರಮುಖ ಆರೋಪಿ ಪ್ರಕಾಶ್ ಮಧುಕರ್ ಕುರಿತು ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನವನ್ನು ಪೊಲೀಸರು ಬಂಧಿಸಿದ್ದಾರೆ. ಭೋಲೆ ಬಾಬಾ ಅವರ ಹೆಸರಿನಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ಅನುಮತಿ ಕೇಳದ ಕಾರಣ ಎಫ್‌ಐಆರ್‌ನಲ್ಲಿ ಅವರ ಹೆಸರನ್ನು ಉಲ್ಲೇಖಿಸಿಲ್ಲ ಎಂದು ಐಜಿ (ಅಲಿಗಢ ರೇಂಜ್) ಶಲಭ್ ಮಾಥುರ್ ತಿಳಿಸಿದ್ದಾರೆ.

Continue Reading

ದೇಶ

Deadly Attack: ಹಾಡಹಗಲೇ ಶಿವಸೇನೆ ಮುಖಂಡನ ಮೇಲೆ ಡೆಡ್ಲಿ ಅಟ್ಯಾಕ್‌- ವಿಡಿಯೋ ಇದೆ

Deadly Attack: ಥಾಪರ್‌ ಆಸ್ಪತ್ರೆಯಿಂದ ಹೊರ ಬರುತ್ತಿರುವುದನ್ನು ಗಮನಿಸಿದ ದುಷ್ಕರ್ಮಿಗಳು ಆತನನ್ನು ಹಿಂಬಾಲಿಸಲು ಶುರು ಮಾಡುತ್ತಾರೆ. ಆಗ ದಾಳಿಕೋರರಲ್ಲಿ ಒಬ್ಬ ಕತ್ತಿಯಿಂದ ಥಾಪರ್ ತಲೆಯ ಮೇಲೆ ಬಿಡದೇ ಹೊಡೆಯಲು ಶುರು ಮಾಡುತ್ತಾನೆ. ಥಾಪರ್ ಕೈ ಜೋಡಿಸಿ ಬಿಟ್ಟು ಬಿಡಿ ಎಂದು ಅಂಗಾಲಾಚುತ್ತಿದ್ದರೂ ಅದನ್ನು ಲೆಕ್ಕಿಸದೇ ಆತನ ಮೇಲೆ ನಿರಂತರ ದಾಳಿ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

VISTARANEWS.COM


on

Deadly Attack
Koo

ಚಂಢಿಗಡ: ಪಂಜಾಬ್‌ನ ಶಿವಸೇನೆ ಮುಖಂಡ(Shivsena Leader)ನ ಮೇಲೆ ನಾಲ್ವರು ದುಷ್ಕರ್ಮಿಗಳು ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ(Deadly Attack) ನಡೆಸಿರುವ ಘಟನೆ ಲುಧಿಯಾನದಲ್ಲಿ ನಡೆದಿದೆ. ಶಿವಸೇನೆ ನಾಯಕ ಸಂದೀಪ್‌ ಥಾಪರ್‌ ಅಲಿಯಾಸ್‌ ಗೋರಾ ಮೇಲೆ ಸ್ಕೂಟರ್‌ನಲ್ಲಿ ಬಂದ ನಿಹಾಂಗ್ ಉಡುಪಿನಲ್ಲಿದ್ದ ನಾಲ್ವರು ಅಪರಿಚಿತ ವ್ಯಕ್ತಿಗಳು ಹಲ್ಲೆ ನಡೆಸಿದ್ದಾರೆ. ಇನ್ನು ಘಟನೆ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್‌ ಆಗಿದ್ದು, ವೈರಲ್‌(Viral Video) ಆಗಿದೆ.

ವೈರಲ್‌ ವಿಡಿಯೋದಲ್ಲೇನಿದೆ?

ಥಾಪರ್‌ ಆಸ್ಪತ್ರೆಯಿಂದ ಹೊರ ಬರುತ್ತಿರುವುದನ್ನು ಗಮನಿಸಿದ ದುಷ್ಕರ್ಮಿಗಳು ಆತನನ್ನು ಹಿಂಬಾಲಿಸಲು ಶುರು ಮಾಡುತ್ತಾರೆ. ಆಗ ದಾಳಿಕೋರರಲ್ಲಿ ಒಬ್ಬ ಕತ್ತಿಯಿಂದ ಥಾಪರ್ ತಲೆಯ ಮೇಲೆ ಬಿಡದೇ ಹೊಡೆಯಲು ಶುರು ಮಾಡುತ್ತಾನೆ. ಥಾಪರ್ ಕೈ ಜೋಡಿಸಿ ಬಿಟ್ಟು ಬಿಡಿ ಎಂದು ಅಂಗಾಲಾಚುತ್ತಿದ್ದರೂ ಅದನ್ನು ಲೆಕ್ಕಿಸದೇ ಆತನ ಮೇಲೆ ನಿರಂತರ ದಾಳಿ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಮತ್ತೊಬ್ಬ ನಿಹಾಂಗ್ ಕತ್ತಿಯಿಂದ ದಾಳಿ ಮುಂದುವರಿಸಿದಾಗ ಶಿವಸೇನಾ ಪಂಜಾಬ್ ನಾಯಕ ಬ್ಯಾಲೆನ್ಸ್‌ ಕಳೆದುಕೊಂಡು ಸ್ಕೂಟರ್ ಸಮೇತ ರಸ್ತೆಯಲ್ಲಿ ಬಿದ್ದಿದ್ದಾರೆ. ಅಲ್ಲೇ ಇದ್ದ ಪ್ರಯಾಣಿಕರು ಆಘಾತದಿಂದ ನೋಡುತ್ತಿದ್ದಂತೆ ದಾಳಿಕೋರರು ಸ್ಕೂಟರ್​​ನಲ್ಲಿ ಪರಾರಿಯಾಗಿದ್ದಾರೆ.

ಸ್ಥಳದಲ್ಲಿ ಅನೇಕ ಜನ ಥಾಪರ್‌ ಸಹಾಯಕ್ಕೆ ಬರಲೇ ಇಲ್ಲ. ಟ್ರಸ್ಟ್‌ನ ಸಂಸ್ಥಾಪಕ-ಅಧ್ಯಕ್ಷ ರವೀಂದರ್ ಅರೋರಾ ಅವರ ನಾಲ್ಕನೇ ಪುಣ್ಯತಿಥಿಯ ಅಂಗವಾಗಿ ನಡೆದ ಸಮಾರಂಭದಲ್ಲಿ ಭಾಗವಹಿಸಿದ್ದ ಥಾಪರ್ ಅವರು ಸಂವೇದನಾ ಟ್ರಸ್ಟ್ ಎಂಬ ಎನ್‌ಜಿಒ ಕಚೇರಿಯಿಂದ ಸಿವಿಲ್ ಆಸ್ಪತ್ರೆ ಬಳಿ ತೆರಳಿದ ನಂತರ ಈ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಮಾರಣಾಂತಿಕ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಥಾಪರ್‌ನನ್ನು ಸ್ಥಳೀಯ ಸಿವಿಲ್ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿಂದ ಅವರನ್ನು ಸ್ಥಳೀಯ ದಯಾನಂದ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಯಿತು. ಅಪರಿಚಿತ ದಾಳಿಕೋರರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದ್ದು, ಶೋಧ ನಡೆಸಲಾಗುತ್ತಿದೆ ಎಂದು ಉಪ ಪೊಲೀಸ್ ಆಯುಕ್ತ ಜಸ್ಕಿರಂಜಿತ್ ಸಿಂಗ್ ತೇಜಾ ತಿಳಿಸಿದ್ದಾರೆ.

ಘಟನೆಯ ನಂತರ, ಶಿವಸೇನಾ ಪಂಜಾಬ್ ನಾಯಕರು ಸಿವಿಲ್ ಆಸ್ಪತ್ರೆಯ ಹೊರಗೆ ಜಮಾಯಿಸಿ ಪಂಜಾಬ್ ಸರ್ಕಾರ ಮತ್ತು ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದರು. ಥಾಪರ್‌ಗೆ ಮೂವರು ಬಂದೂಕುಧಾರಿಗಳ ಭದ್ರತೆ ನೀಡಲಾಗಿತ್ತು. ಪೊಲೀಸರು ಒಂದು ವಾರದ ಹಿಂದೆ ಅವರ ಭದ್ರತೆಯನ್ನು ಹಿಂತೆಗೆದುಕೊಂಡರು. ಇದರ ಬೆನ್ನಲ್ಲೇ ಈ ದುರ್ಘಟನೆ ಸಂಭವಿಸಿದೆ. ಥಾಪರ್‌ ಮೇಲಿನ ದಾಳಿಗೆ ಹಿಂದೂ ಸಂಘಟನೆ ಮುಖಂಡರು ಖಂಡನೆ ವ್ಯಕ್ತಪಡಿಸಿದ್ದಾರೆ. ಹಿಂದೂ ಮುಖಂಡರಿಗೆ ಸರ್ಕಾರ ಭದ್ರತೆ ನೀಡುತ್ತಿಲ್ಲ. ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯ ಮೇಲೆ ಇಂತಹ ಕ್ರೂರ ದಾಳಿ ಖಂಡನೀಯ. ಇದು ನಿವಾಸಿಗಳಲ್ಲಿ ಭೀತಿ ಮೂಡಿಸಿದೆ ಎಂದಿದ್ದಾರೆ.

ಇದನ್ನೂ ಓದಿ:Self Harming: ಮೊದಲ ರಾತ್ರಿಯ ಟೆನ್ಶನ್‌ಗೆ ವರ ಆತ್ಮಹತ್ಯೆ? ಉತ್ತರ ಪ್ರದೇಶದಲ್ಲೊಂದು ವಿಲಕ್ಷಣ ಘಟನೆ

Continue Reading

ತುಮಕೂರು

Assault Case : ಜಮೀನು ವಿವಾದ; ನೀರಿನಲ್ಲಿ ಮುಳುಗಿಸಿ, ಕುಡುಗೋಲು, ಕಲ್ಲಿನಿಂದ ವ್ಯಕ್ತಿ ಮೇಲೆ ಹಲ್ಲೆ!

Assault Case : ತುಮಕೂರಿನಲ್ಲಿ ಜಮೀನು ವಿವಾದಕ್ಕೆ ಎರಡು ಕುಟುಂಬಗಳ ನಡೆದ ಗಲಾಟೆ ವಿಕೋಪಕ್ಕೆ ತಿರುಗಿದ್ದು, ವ್ಯಕ್ತಿಯನ್ನು ನೀರಿನಲ್ಲಿ ಮುಳುಗಿಸಿ, ಕುಡುಗೋಲು, ಕಲ್ಲಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

VISTARANEWS.COM


on

By

Assault case
Koo

ತುಮಕೂರು: ಜಮೀನು‌ ವಿವಾದ ಹಿನ್ನೆಲೆಯಲ್ಲಿ (Assault Case) ಎರಡು ಕುಟುಂಬಗಳ ನಡುವೆ ಮಾರಾಮಾರಿಯೇ ನಡೆದಿದೆ. ತುಮಕೂರು‌ ಜಿಲ್ಲೆಯ ತುರುವೇಕೆರೆ ತಾಲೂಕಿನ ಸೊಂಡೆಮಾರ್ಗೋನಹಳ್ಳಿಯಲ್ಲಿ ಘಟನೆ ನಡೆದಿದೆ. ಶಶಿಕುಮಾರ್, ಲಕ್ಷ್ಮಣಯ್ಯ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ನಾಗೇಗೌಡನಪಾಳ್ಯದ ಮಂಜುನಾಥ್ ಎಂಬಾತನ ತಾಯಿ, ಪತ್ನಿ ಹಾಗೂ ಗಂಗಮ್ಮ, ನಾಗಯ್ಯ ಎಂಬುವವರು ಹಲ್ಲೆ ನಡೆಸಿದ್ದಾರೆ.

ಲಕ್ಷ್ಮಣಯ್ಯಗೆ ಸೇರಿದ ಸರ್ವೇ ನಂ.26ರ ಜಮೀನಿನ‌ ವಿಚಾರಕ್ಕೆ ಗಲಾಟೆ ನಡೆದಿದೆ. 1 ಎಕರೆ 10 ಗುಂಟೆಗೆ ಪಹಣಿ ಇದ್ದು, ಸರ್ವೆ ನಂ.26 ರಲ್ಲಿ ಇರುವ 15 ಗುಂಟೆ ಕರಾಬಿನ ವಿಚಾರಕ್ಕೆ ಮಾರಾಮಾರಿ ನಡೆದಿದೆ. ಈಗಾಗಲೇ 15 ಗುಂಟೆ ಕರಾಬು ಜಾಗದಲ್ಲಿ ಲಕ್ಷ್ಮಣಯ್ಯ ಉಳುಮೆ ಮಾಡಿಕೊಂಡಿದ್ದಾರೆ.

15 ಗುಂಟೆ ಕರಾಬು ನಮಗೆ ಸೇರಬೇಕೆಂದು ಪಕ್ಕದ ಜಮೀನಿನ ಮಂಜುನಾಥ ಕುಟುಂಬಸ್ಥರಿಂದ ಲಕ್ಷ್ಮಣಯ್ಯ ಮೇಲೆ ಹಲ್ಲೆ ನಡೆಸಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಜಗಳಕ್ಕೆ ಬಂದ ಮಂಜುನಾಥ್‌ ಕುಟುಂಬಸ್ಥರು, ಲಕ್ಷ್ಮಣಯ್ಯನನ್ನು ಹಿಡಿದು ನೀರಿನಲ್ಲಿ ಮುಳುಗಿಸಿ, ಕುಡುಗೋಲು ಹಾಗೂ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ.

ಹಲ್ಲೆಯಿಂದ ಲಕ್ಷ್ಮಣಯ್ಯಗೆ ಗಂಭೀರ ಗಾಯಗೊಂಡಿದ್ದು, ತುರುವೇಕೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಇದನ್ನೂ ಓದಿ: Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

ದೇವನಹಳ್ಳಿಯ ಶಾಲೆ ಹಿಂಭಾಗ ಶವ ಪತ್ತೆ

ರಾಜಕಾಲುವೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ನಂದಿನಿ ಶಾಲೆ ಹಿಂಭಾಗ ಘಟನೆ ನಡೆದಿದೆ. ರಾಜಕಾಲುವೆಯಲ್ಲಿ ಶವ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಐದಾರು ದಿನಗಳ ಹಿಂದೆ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಇದು ಕೊಲೆಯೋ ಅಥವಾ ಸಹಜ ಸಾವೋ ಎಂಬುದರ ಕುರಿತು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಧಾರವಾಡದಲ್ಲಿ ತಂದೆಯನ್ನು ಹುಡುಕಿಕೊಡುವಂತೆ ಮಗನ ಅಳಲು

ತಂದೆಯನ್ನು ಹುಡುಕಿಕೊಡುವಂತೆ ಮಗನೊಬ್ಬ ಎಸ್‌ಪಿ ಕಚೇರಿಗೆ ಆಗಮಿಸಿದ್ದಾನೆ. ಧಾರವಾಡ ಜಿಲ್ಲೆಯ ಮಾರಡಗಿ ಗ್ರಾಮದ ದ್ಯಾಮಪ್ಪ ಹಡಪದ ಕಳೆದ ಮೇ 19ರಂದು ಏಕಾಏಕಿ ಕಾಣೆಯಾಗಿದ್ದರಿ. ಕಳೆದ 50 ದಿನಗಳಿಂದ ತಂದೆ ಕಾಣುತ್ತಿಲ್ಲ ಎಂದು ಮಗ ಪ್ರವೀಣ್‌ ಅಳಲು ತೊಡಿಕೊಂಡಿದ್ದಾರೆ. ಧಾರವಾಡ ಎಸ್‌ಪಿ ಕಚೇರಿಗೆ ಆಗಮಿಸಿ ತಂದೆಯನ್ನು ಹುಡುಕಿಕೊಡುವಂತೆ ಪ್ರವೀಣ್ ಮನವಿ ಮಾಡಿದ್ದಾರೆ. ನಮ್ಮ ತಂದೆಗೆ ಏನಾಗಿದೆ ಅಂತಲೇ ಗೊತ್ತಿಲ್ಲ, ಅವರನ್ನ ಹುಡುಕಿಕೊಡಿ ಒತ್ತಾಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Latest

Sexual Harassment: 80 ವರ್ಷದ ಅಜ್ಜಿಯ ಮೇಲೆ ನಿರಂತರ ಅತ್ಯಾಚಾರ; ಮೊಮ್ಮಗನಿಗೆ ಜೀವಾವಧಿ ಶಿಕ್ಷೆ

Sexual Harassment: ಅಜ್ಜಿ ಹಾಗೂ ಮೊಮ್ಮಕ್ಕಳ ಬಾಂಧವ್ಯ ತುಂಬಾ ಅನ್ಯೋನ್ಯವಾದದ್ದು. ಮೊಮ್ಮಕ್ಕಳ ಲಾಲನೆ ಪಾಲನೆಯನ್ನು ತಾಯಿಗಿಂತ ತುಸು ಹೆಚ್ಚಾಗಿಯೇ ಅಜ್ಜಿಯಂದಿರು ಮಾಡುತ್ತಾರೆ. ಆದರೆ ಇಲ್ಲೊಬ್ಬ ಮೊಮ್ಮಗ ತನ್ನ ಅಜ್ಜಿಯ ಮೇಲೆಯೇ ಹೀನಾಯ ಕೃತ್ಯ ಎಸಗಿದ್ದಾನೆ. ತಾಯಿಯಿಲ್ಲದ ವೇಳೆ ಅಜ್ಜಿಯನ್ನು ತನ್ನ ಕಾಮದಾಹಕ್ಕೆ ಬಳಸಿಕೊಂಡಿದ್ದು ಅಲ್ಲದೇ, ಯಾರಿಗಾದರೂ ತಿಳಿಸಿದರೆ ಮತ್ತಷ್ಟು ತೊಂದರೆ ಕೊಡುವುದಾಗಿ ಅಜ್ಜಿಗೆ ಬೆದರಿಕೆಯೊಡ್ಡಿದ್ದ. ಈ ಕಾಮುಕ ಮೊಮ್ಮಗನಿಗೆ ಕೋರ್ಟ್ ಈಗ ಕಠಿಣ ಶಿಕ್ಷೆ ವಿಧಿಸಿದೆ.

VISTARANEWS.COM


on

Sexual Harassment
Koo

ಇತ್ತೀಚಿನ ದಿನಗಳಲ್ಲಿ ಅತ್ಯಾಚಾರದ ಪ್ರಕರಣಗಳು ಹೆಚ್ಚು ದಾಖಲಾಗುತ್ತಿದ್ದು, ಸಾಮಾನ್ಯವಾಗಿ ಈ ಪ್ರಕರಣದಲ್ಲಿ ಯುವತಿಯರು ಅಥವಾ ಬಾಲಕಿಯರು ಬಲಿಪಶುಗಳಾಗಿರುತ್ತಿದ್ದರು. ಇದೀಗ ಸಿಕ್ಕಿಂನಲ್ಲಿ 80 ವರ್ಷದ ಅಜ್ಜಿಯ ಮೇಲೆ 24 ವರ್ಷದ ಮೊಮ್ಮಗ ಅತ್ಯಾಚಾರ (Sexual Harassment) ಎಸಗಿದ ಪ್ರಕರಣದಲ್ಲಿ ಈತನಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ.

ಸಂತ್ರಸ್ತ ಅಜ್ಜಿ ತನ್ನ ಮಗಳು, ಅಳಿಯ, ಮತ್ತು ಮೊಮ್ಮಗನೊಂದಿಗೆ ವಾಸವಾಗಿದ್ದಳು. ಸಂತ್ರಸ್ತೆಯ ಮಗಳು ಪಶ್ಚಿಮ ಬಂಗಾಳ ಪ್ರವಾಸದಿಂದ ಹಿಂದಿರುಗಿದಾಗ ತಾಯಿ ಕಾಣೆಯಾಗಿರುವುದನ್ನು ನೋಡಿ ಆಕೆಯನ್ನು ಹುಡುಕಿದಾಗ ವೃದ್ಧ ತಾಯಿ ನೆರೆಹೊರೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದಳು. ಅಲ್ಲಿ ಅಜ್ಜಿ ಮಗಳ ಬಳಿ ಹಲ್ಲೆಯನ್ನು ಬಹಿರಂಗಪಡಿಸಿದಳು. ಮತ್ತು ಮೊಮ್ಮಗ ತನ್ನ ಮೇಲೆ ಅನೇಕ ಸಂದರ್ಭಗಳಲ್ಲಿ ಅತ್ಯಾಚಾರ ಎಸಗಿದ್ದಾನೆ ಮತ್ತು ಈ ವಿಚಾರ ಬಹಿರಂಗಪಡಿಸಿದರೆ ಮತ್ತಷ್ಟು ಹಲ್ಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ತಿಳಿಸಿದ್ದಳು. ಅಲ್ಲದೇ ತನ್ನ ಸ್ವಂತ ಮೊಮ್ಮಗನ ಬಗ್ಗೆ ಪೊಲೀಸರಿಗೆ ದೂರು ನೀಡಲು ಆಕೆ ಹಿಂಜರಿದಿದ್ದಳು. ಆದರೆ ಆಕೆಯ ಮಗಳು ಮಾತ್ರ ತನ್ನ ಮಗನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು.

ದೂರಿನಲ್ಲಿ ಅಜ್ಜಿ ಮೊಮ್ಮಗನಿಂದ ಪದೇ ಪದೇ ಅತ್ಯಾಚಾರಕ್ಕೆ ಒಳಗಾಗುತ್ತಿದ್ದು, ಆತ ತನ್ನ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದ, ಬೆದರಿಕೆ ಹಾಕುತ್ತಿದ್ದ ಎಂಬುದನ್ನು ವಿವರಿಸಿದ್ದಳು. ಆದರೆ ಆಕೆಯ ಮೇಲೆ ಯಾವುದೇ ದೈಹಿಕ ಗಾಯ ಆಗಿರಲಿಲ್ಲ. ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ವರದಿಯಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವುದು ತಿಳಿದು ಬಂದಿತ್ತು.

ಇದನ್ನೂ ಓದಿ:ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ಕಳ್ಳರು ಬ್ಯಾಗ್‌ ಕಸಿದು ಓಡುತ್ತಾರೆ! ಪೋಲಿಸ್ರು ಏನ್‌ ಮಾಡ್ತಿದ್ದಾರೋ!

ಹಾಗಾಗಿ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (2) (ಎಫ್) (ಸಂಬಂಧಿಕರು, ಪೋಷಕರ ಮೇಲೆ ಅತ್ಯಾಚಾರ ಇತ್ಯಾದಿ), 376 (2) (ಎನ್) (ಒಂದೇ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗುವುದು) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಫಾಸ್ಟ್ ಟ್ರ್ಯಾಕ್ ಸೆಷನ್ಸ್ ನ್ಯಾಯಾಲಯ ಈ ಪ್ರಕರಣದ ವಿಚಾರಣೆ ನಡೆಸಿ ಅಪರಾಧಿ ಮೊಮ್ಮಗನಿಗೆ ಜೀವಾವಧಿ ಶಿಕ್ಷೆ ಮತ್ತು ಪ್ರತಿ ಅತ್ಯಾಚಾರ ಅಪರಾಧಕ್ಕೆ 10,000 ರೂ.ಗಳ ದಂಡ ವಿಧಿಸಿತ್ತು, ಜೊತೆಗೆ ಕ್ರಿಮಿನಲ್ ಬೆದರಿಕೆಗಾಗಿ ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು 1,000 ರೂ. ಶಿಕ್ಷೆಗಳು ಏಕಕಾಲದಲ್ಲಿ ನಡೆಯಬೇಕೆಂದು ತೀರ್ಪು ನೀಡಿದೆ. ಅಪರಾಧಿ ಮೊಮ್ಮಗ ಈ ಬಗ್ಗೆ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದರೂ ಹೈಕೋರ್ಟ್ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದು ಮೇಲ್ಮನವಿಯನ್ನು ವಜಾಗೊಳಿಸಿದೆ.

Continue Reading
Advertisement
Kerala govt
ದೇಶ25 mins ago

Kerala Govt: ಕೇರಳ ಸರ್ಕಾರಿ ನೌಕರರ ಪೈಕಿ ಮೂರರಲ್ಲಿ ಒಬ್ಬ ಮುಸ್ಲಿಂ ಅಥವಾ ಕ್ರಿಶ್ಚಿಯನ್

Teach for India
ಬೆಂಗಳೂರು30 mins ago

Teach For India : ಟೀಚ್ ಫಾರ್ ಇಂಡಿಯಾದಿಂದ 2025ರ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿಗಳ ಆಹ್ವಾನ

Bridge Collapse
ದೇಶ32 mins ago

Bridge Collapse: 17 ದಿನದಲ್ಲಿ 10 ಸೇತುವೆ ಕುಸಿತ; ಬಿಹಾರದಲ್ಲಿ 15 ಎಂಜಿನಿಯರ್‌ಗಳ ಅಮಾನತು!

Shivamogga News Give top priority to cleanliness says Raju Hiriyawali
ಶಿವಮೊಗ್ಗ37 mins ago

Shivamogga News: ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ: ರಾಜು ಹಿರಿಯಾವಲಿ

Stampede Tips and Tricks
ದೇಶ40 mins ago

Stampede Tips and Tricks: ಕಾಲ್ತುಳಿತ ಸಂದರ್ಭದಲ್ಲಿ ನಮ್ಮನ್ನು ರಕ್ಷಿಸಿಕೊಳ್ಳುವುದು ಹೇಗೆ? ಈ ವಿಡಿಯೋ ನೋಡಿ

ಕರ್ನಾಟಕ40 mins ago

MUDA site scandal: ಸಿಎಂ ಸಿದ್ದರಾಮಯ್ಯ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲಿ: ಲೆಹರ್‌ ಸಿಂಗ್‌ ಆಗ್ರಹ

Deadly Attack
ದೇಶ1 hour ago

Deadly Attack: ಹಾಡಹಗಲೇ ಶಿವಸೇನೆ ಮುಖಂಡನ ಮೇಲೆ ಡೆಡ್ಲಿ ಅಟ್ಯಾಕ್‌- ವಿಡಿಯೋ ಇದೆ

Viral Video
Latest1 hour ago

Viral Video: ಮೆಟ್ರೋದಲ್ಲಿ ಕೋತಿ ಚೇಷ್ಟೆಗೆ ಕೊನೆಯೇ ಇಲ್ಲ! ಈ ಮಂಗ್ಯಾನ ಡ್ಯಾನ್ಸ್‌ ನೋಡಿ!

Anganwadi workers should make good use of mobile phones says MLA Channareddy Patil Thunnur
ಯಾದಗಿರಿ1 hour ago

Yadgiri News: ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಉಪಯುಕ್ತ : ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು

congratulation ceremony for Dr. Jinadatta Hadagali on 7th July in Dharwad
ಧಾರವಾಡ1 hour ago

Dharwad News: ಧಾರವಾಡದಲ್ಲಿ ಜು.7ರಂದು ಡಾ. ಜಿನದತ್ತ ಅ. ಹಡಗಲಿಗೆ ಅಭಿನಂದನಾ ಸಮಾರಂಭ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ3 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ4 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ5 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ7 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ8 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು9 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು10 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ14 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ1 day ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಟ್ರೆಂಡಿಂಗ್‌