Sha Rukh Khan: ಸಾಲದ ಇಎಂಐ ಕಟ್ಟಲಾಗದೆ ಕಾರನ್ನು ಕಳೆದುಕೊಂಡಿದ್ದ ಶಾರುಖ್ ಖಾನ್! - Vistara News

Latest

Sha Rukh Khan: ಸಾಲದ ಇಎಂಐ ಕಟ್ಟಲಾಗದೆ ಕಾರನ್ನು ಕಳೆದುಕೊಂಡಿದ್ದ ಶಾರುಖ್ ಖಾನ್!

Sha Rukh Khan: ಕೋಟಿ ಕೋಟಿ ಸಂಭಾವನೆ ಪಡೆಯುವ ಬಾಲಿವುಡ್ ಬಾದ್ ಶಾ ಶಾರುಕ್ ಖಾನ್ ಕೂಡ ಒಂದು ಕಾಲದಲ್ಲಿ ಆರ್ಥಿಕ ಸಮಸ್ಯೆಯಿಂದ ಬಳಲಿದ್ದರಂತೆ. ಕಾರಿನ ಇಎಂಐ ಪಾವತಿಸಲು ಸಾಧ್ಯವಾಗದ ಕಾರಣ ಶಾರುಖ್ ಖಾನ್ ಅವರ ಕಾರನ್ನು ಬ್ಯಾಂಕ್‌ನವರು ತೆಗೆದುಕೊಂಡು ಹೋಗಿದ್ದರು ಎಂದು ಶಾರುಖ್ ಖಾನ್ ಬಗ್ಗೆ ಅವರ ಸ್ನೇಹಿತೆ ನಟಿ ಜೂಹಿ ಚಾವ್ಲಾ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಆಗ ಶಾರುಕ್ ಖಾನ್ ನಟಿ ಜೂಹಿ ಚಾವ್ಲಾ ಹಾಗೂ ನಟ ಜಾಕಿಶ್ರಾಫ್ ಅವರ ಕಾರಿನಲ್ಲಿ ಓಡಾಡುತ್ತಿದ್ದರಂತೆ.

VISTARANEWS.COM


on

Sha Rukh Khan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ : ಹಣದ ಸಮಸ್ಯೆ ಎನ್ನುವುದು ಬಡವರಿಗೆ, ಮಧ್ಯಮವರ್ಗದವರಿಗೆ ಮಾತ್ರವಲ್ಲ, ಕೆಲವೊಮ್ಮೆ ಶ್ರೀಮಂತರು, ಸ್ಟಾರ್ ನಟರೂ ಕೂಡ ಆರ್ಥಿಕ ಸಮಸ್ಯೆಯಿಂದ ಬಳಲುತ್ತಾರೆ. ಶಾರುಖ್ ಖಾನ್ (Sha Rukh Khan) ಅವರು ಬಾಲಿವುಡ್ ಸ್ಟಾರ್ ನಟರಲ್ಲಿ ಒಬ್ಬರು. ಕೋಟಿ ಕೋಟಿ ಸಂಭಾವನೆ ಪಡೆಯುವ ಈ ಸ್ಟಾರ್ ನಟ ಕೂಡ ಆರ್ಥಿಕ ಸಮಸ್ಯೆಯಿಂದ ಒಂದು ಕಾಲದಲ್ಲಿ ಬಳಲಿದ್ದರು ಎಂದು ಅವರ ಸ್ನೇಹಿತೆ ನಟಿ ಜೂಹಿ ಚಾವ್ಲಾ ಹೇಳಿಕೆ ನೀಡಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Sha Rukh Khan

ಶಾರುಖ್ ಖಾನ್ ಮತ್ತು ಜೂಹಿ ಚಾವ್ಲಾ 90ರ ದಶಕದಲ್ಲಿ ಬಾಲಿವುಡ್‌ನ ಹಲವಾರು ಚಿತ್ರಗಳಲ್ಲಿ ಜೊತೆಯಾಗಿ ನಟಿಸಿದ್ದರು. ಆವಾಗಿನಿಂದ ಇವರಿಬ್ಬರು ಆಪ್ತ ಸ್ನೇಹಿತರಾಗಿದ್ದರು. ಇಬ್ಬರೂ ಸೇರಿ ಡ್ರೀಮ್ಸ್‌ ಅನ್‌ಲಿಮಿಟೆಡ್‌ ಎಂಬ ಚಿತ್ರ ನಿರ್ಮಾಣ ಸಂಸ್ಥೆಯನ್ನೂ ಸ್ಥಾಪಿಸಿದ್ದರು.

Sha Rukh Khan

ಅಲ್ಲದೇ ಇವರಿಬ್ಬರು ಐಪಿಎಲ್ ತಂಡದ ಮಾಲೀಕರಾಗಿ ಸಹ ಜೊತೆಯಾಗಿದ್ದರು. ಇತ್ತೀಚೆಗೆ, ಕಾರ್ಯಕ್ರಮವೊಂದರಲ್ಲಿ, ನಟಿ ಜೂಹಿ ಚಾವ್ಲಾ ಅವರು ಮಾತನಾಡಿ ಇಎಂಐ ಪಾವತಿಸಲು ಸಾಧ್ಯವಾಗದ ಕಾರಣ ಶಾರುಖ್ ಖಾನ್ ಅವರ ಕಾರನ್ನು ಬ್ಯಾಂಕ್‌ನವರು ತೆಗೆದುಕೊಂಡು ಹೋಗಿದ್ದರು ಎಂಬ ಸಂಗತಿಯನ್ನು ಶಾರುಖ್ ಖಾನ್ ವೃತ್ತಿ ಜೀವನದ ಆರಂಭದ ದಿನಗಳನ್ನು ಸ್ಮರಿಸಿಕೊಂಡು ಹೇಳಿದ್ದಾರೆ.

Sha Rukh Khan

ಶಾರುಖ್ ಖಾನ್ ಅವರ ಬಳಿ ಕಪ್ಪು ಜಿಪ್ಸಿ ಕಾರ್ ಇತ್ತು. ಶಾರುಖ್ ಖಾನ್ ಅವರು ಹಗಲಿರುಳು ತಮ್ಮ ಸಿನಿಮಾ ಶೂಟಿಂಗ್‌ಗಾಗಿ ಆ ಕಾರಿನಲ್ಲೇ ಹೋಗುತ್ತಿದ್ದರು. ಆದರೆ ಕೆಲವು ಕಾರಣಗಳಿಂದಾಗಿ, ಅವರು ತಮ್ಮ ಕಾರಿಗೆ ಇಎಂಐ ಪಾವತಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಅವರ ಕಾರನ್ನು ತೆಗೆದುಕೊಂಡು ಹೋದರು ಎಂದು ಹೇಳಿದ್ದಾರೆ. ಅಲ್ಲದೇ ಅವರಿಗೆ ಮುಂಬೈನಲ್ಲಿ ಮನೆ ಇರಲಿಲ್ಲ. ಹಾಗೇ ಅವರಿಗೆ ಅಡುಗೆ ಮಾಡಲು ಯಾರೂ ಇರಲಿಲ್ಲ. ಅವರ ಬಗ್ಗೆ ಚಿಂತಿಸುತ್ತಿದ್ದೆ ಎಂದು ನಟಿ ಹಿಂದೆ ನಡೆದ ಘಟನೆಗಳ ಬಗ್ಗೆ ಮೆಲುಕು ಹಾಕಿದ್ದಾರೆ. ಆದರೆ ಈಗ ಅವರು ದೊಡ್ಡ ನಟ ಆಗಿದ್ದಾರೆ ಎಂದು ಅವರು ಖುಷಿ ಪಟ್ಟಿದ್ದಾರೆ.

2015ರಲ್ಲಿ ಇದೇ ವಿಚಾರದ ಬಗ್ಗೆ ನಟ ಶಾರುಖ್ ಖಾನ್‌ವರು ಕೂಡ ಟಿವಿ ಚಾನೆಲ್‌ವೊಂದರಲ್ಲಿ ಹೇಳಿದ್ದರು. ತಾನು ಖರೀದಿಸಿದ ಮೊದಲ ಕಾರಿಗೆ ಇಎಂಐ ಕಟ್ಟಲು ಆಗದ ಕಾರಣ ಬ್ಯಾಂಕಿನವರು ತೆಗೆದುಕೊಂಡು ಹೋಗಿದ್ದರು. ಆಗ ನಟಿ ಜೂಹಿ ಚಾವ್ಲಾ ತಮ್ಮ ಕಾರನ್ನು ನೀಡಿರುವುದಾಗಿ ಹೇಳಿದ್ದರು. ಮತ್ತು ಕೆಲವೊಮ್ಮೆ ನಟ ಜಾಕಿಶ್ರಾಫ್ ಅವರ ಕಾರಿನಲ್ಲಿ ಓಡಾಡುತ್ತಿದ್ದೆ ಎಂದು ತಿಳಿಸಿದ್ದರು.

Sha Rukh Khan

ಇದನ್ನೂ ಓದಿ: ದಳಪತಿ ವಿಜಯ್‌ಗೆ ಭುಜದ ಮೇಲಿನ ಕೈ ತೆಗೆಯಲು ಹೇಳಿದ ಹುಡುಗಿ; ವಿಡಿಯೊ ವೈರಲ್

ಇತ್ತೀಚಿಗೆ ನಡೆದ ಸಂದರ್ಶನವೊಂದರಲ್ಲಿ ಹಿರಿಯ ನಟ ಗೋವಿಂದ್ ನಾಮದೇವ್ ಅವರು 2000ರಲ್ಲಿ ಬಿಡುಗಡೆಯಾದ “ಫಿರ್ ಭಿ ದಿಲ್ ಹೈ ಹಿಂದೂಸ್ತಾನಿ” ಚಿತ್ರದ ಚಿತ್ರೀಕರಣ ಸಮಯದಲ್ಲಿ ಶಾರುಖ್ ಖಾನ್ ಅವರ ಜೊತೆ ಕಳೆದ ದಿನಗಳನ್ನು ಅವರು ಮೆಲುಕು ಹಾಕಿದ್ದಾರೆ. ಆ ವೇಳೆ ಅವರು ಕೆಲಸದ ಒತ್ತಡದಿಂದ ಅವರು ಧೂಮಪಾನ ಮಾಡುತ್ತಿದ್ದರು ಎಂದು ಶಾಕಿಂಗ್ ಹೇಳಿಕೆ ನೀಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಲೋಕಸಭೆ ಚುನಾವಣೆಯಲ್ಲಿ 7 ಸಂಸದರಿಗೆ ಸಿಕ್ಕಿದ್ದು ಶೇ. 70ಕ್ಕಿಂತ ಹೆಚ್ಚು ಮತ; ಯಾರಿವರು?

ಲೋಕಸಭೆಗೆ (Lok Sabha Election 2024) ಆಯ್ಕೆಯಾಗಿರುವ 542 ಸಂಸದರಲ್ಲಿ ಅರ್ಧಕ್ಕಿಂತ ಹೆಚ್ಚು ಅಂದರೆ ಸುಮಾರು 279 ಮಂದಿ ಶೇ. 50ಕ್ಕಿಂತ ಹೆಚ್ಚಿನ ಮತಗಳಿಂದ ಗೆದ್ದಿದ್ದರೆ, 263ರಷ್ಟು ಮಂದಿ ತಮ್ಮ ಕ್ಷೇತ್ರಗಳಲ್ಲಿ ಒಟ್ಟು ಶೇ. 50ಕ್ಕಿಂತ ಕಡಿಮೆ ಮತಗಳಿಂದ ಚುನಾವಣೆ ಗೆದ್ದಿದ್ದಾರೆ ಎಂದು ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ರಾಷ್ಟ್ರೀಯ ಚುನಾವಣಾ ವೀಕ್ಷಣೆಯ ಹೊಸ ವರದಿಗಳು ತಿಳಿಸಿವೆ. ಈ ಕುರಿತ ಕುತೂಹಲಕರ ಮಾಹಿತಿ ಇಲ್ಲಿದೆ.

VISTARANEWS.COM


on

By

Lok Sabha Election 2024
Koo

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಕೇವಲ ಏಳು ಸಂಸದರು (MPs) ತಮ್ಮ ಕ್ಷೇತ್ರಗಳಲ್ಲಿ ಒಟ್ಟು ಶೇ. 70ಕ್ಕಿಂತ ಹೆಚ್ಚು ಮತಗಳನ್ನು ಗಳಿಸಿ ಚುನಾವಣೆಯಲ್ಲಿ ಗೆದ್ದಿದ್ದಾರೆ ಮತ್ತು ಅವರೆಲ್ಲರೂ ಭಾರತೀಯ ಜನತಾ ಪಕ್ಷದವರು (BJP) ಎಂದು ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಮತ್ತು ರಾಷ್ಟ್ರೀಯ ಚುನಾವಣಾ ವೀಕ್ಷಣೆಯ ಹೊಸ ವರದಿಗಳು ತಿಳಿಸಿವೆ.

ಅದೇ ರೀತಿ ಕಾಂಗ್ರೆಸ್‌ನ (congress) ಮೂವರು ಸಂಸದರು ತಮ್ಮ ಸ್ಥಾನಗಳಲ್ಲಿ ಒಟ್ಟು ಶೇ. 30ಕ್ಕಿಂತ ಕಡಿಮೆ ಮತಗಳೊಂದಿಗೆ ವಿಜೇತರಾಗಿದ್ದಾರೆ ಎಂಬುದನ್ನು ಈ ವರದಿ ಉಲ್ಲೇಖಿಸಿದೆ. ಹೊಸ ಲೋಕಸಭಾ ಚುನಾವಣೆಯಲ್ಲಿ 543 ಕ್ಷೇತ್ರಗಳ ಪೈಕಿ 542 ಕ್ಷೇತ್ರಗಳಿಗೆ ಮತ ಹಂಚಿಕೆಯನ್ನು ಎಡಿಆರ್ ವಿಶ್ಲೇಷಿಸಿದೆ. ಸೂರತ್ ನಲ್ಲಿ ಬಿಜೆಪಿ ಸಂಸದರು ಅವಿರೋಧವಾಗಿ ಆಯ್ಕೆಯಾಗಿದ್ದರು.

ವರದಿಯ ಪ್ರಕಾರ 542 ಸಂಸದರಲ್ಲಿ ಅರ್ಧಕ್ಕಿಂತ ಹೆಚ್ಚು ಅಂದರೆ ಸುಮಾರು 279 ಮಂದಿ ಶೇ. 50ಕ್ಕಿಂತ ಹೆಚ್ಚಿನ ಮತಗಳಿಂದ ಗೆದ್ದಿದ್ದರೆ 263ರಷ್ಟು ಮಂದಿ ತಮ್ಮ ಕ್ಷೇತ್ರಗಳಲ್ಲಿ ಒಟ್ಟು ಶೇ. 50ಕ್ಕಿಂತ ಕಡಿಮೆ ಮತಗಳಿಂದ ಚುನಾವಣೆ ಗೆದ್ದಿದ್ದಾರೆ.


ಬಿಜೆಪಿಯ 239 ವಿಜೇತರಲ್ಲಿ 75 ಮಂದಿ ತಮ್ಮ ಕ್ಷೇತ್ರಗಳಲ್ಲಿ ಒಟ್ಟು ಶೇ. 50ಕ್ಕಿಂತ ಕಡಿಮೆ ಮತಗಳನ್ನು ಗಳಿಸಿ ಗೆದ್ದಿದ್ದಾರೆ. ಐಎನ್‌ಸಿಯಿಂದ 99 ವಿಜೇತರಲ್ಲಿ 57 ಮಂದಿ ಶೇ. 58, ಎಸ್‌ಪಿಯಿಂದ 37 ವಿಜೇತರಲ್ಲಿ 32 ಮಂದಿ ಶೇ. 86, ಎಐಟಿಸಿಯಿಂದ 29 ವಿಜೇತರಲ್ಲಿ 21 ಮಂದಿ ಶೇ. 72 ಮತ್ತು ಡಿಎಂಕೆಯಿಂದ 22 ವಿಜೇತರಲ್ಲಿ 14 ಮಂದಿ ಶೇ. 64ಕ್ಕಿಂತ ಕಡಿಮೆ ಮತಗಳಿಂದ ಗೆದ್ದಿದ್ದಾರೆ. ಬಹುತೇಕ ಎಲ್ಲ ಕ್ಷೇತ್ರದಲ್ಲಿ ಒಟ್ಟು ಶೇ. 50ಕ್ಕಿಂತ ಕಡಿಮೆ ಮತಗಳು ಚಲಾವಣೆಯಾದವು ಎಂದು ಅಂಕಿ ಅಂಶ ಉಲ್ಲೇಖಿಸಿದೆ. ಮತ್ತೊಂದೆಡೆ ಬಿಜೆಪಿಯ 164 ಮತ್ತು ಕಾಂಗ್ರೆಸ್‌ನ 42 ಸಂಸದರು ಶೇ. 50ಕ್ಕಿಂತ ಹೆಚ್ಚು ಮತಗಳನ್ನು ಗಳಿಸಿ ಗೆದ್ದಿದ್ದಾರೆ. ತೆಲುಗು ದೇಶಂ ಪಕ್ಷವು ಶೇ. 50ಕ್ಕಿಂತ ಹೆಚ್ಚು ಮತಗಳನ್ನು ಗಳಿಸಿ 15 ಸಂಸದರೊಂದಿಗೆ ಮೂರನೇ ಸ್ಥಾನದಲ್ಲಿದೆ.

ಹೆಚ್ಚು ಮತ ಪಡೆದ ಸಂಸದರು

ಅತಿ ಹೆಚ್ಚು ಮತಗಳ ಹಂಚಿಕೆಯೊಂದಿಗೆ ಗೆದ್ದ ಬಿಜೆಪಿಯ ಅಗ್ರ ಏಳು ಸಂಸದರಲ್ಲಿ ಇಂದೋರ್ ಸಂಸದ ಶಂಕರ್ ಲಾಲ್ವಾನಿ ಅವರು ಒಟ್ಟು ಶೇ. 78.54ರಷ್ಟು ಮತಗಳನ್ನು ಪಡೆದರು. ಅನಂತರ ನವಸಾರಿ ಸಂಸದ ಸಿ.ಆರ್. ಪಾಟೀಲ್ ಅವರು ಶೇ. 77ಕ್ಕಿಂತ ಹೆಚ್ಚು ಮತಗಳನ್ನು ಗಳಿಸಿದ್ದಾರೆ. ಬಿಜೆಪಿಯ ಏಳು ಸ್ಥಾನಗಳ ಪಟ್ಟಿಯಲ್ಲಿ ಗುಜರಾತ್‌ನಲ್ಲಿ ನಾಲ್ಕು, ಮಧ್ಯಪ್ರದೇಶದಲ್ಲಿ ಎರಡು ಮತ್ತು ತ್ರಿಪುರಾದಲ್ಲಿ ಒಂದು ಸ್ಥಾನ ಸೇರಿದೆ.

ವಿಜೇತರಿಗೆ ಪಡೆದ ಮತಗಳನ್ನು ಒಟ್ಟು ಚಲಾವಣೆಯಾದ ಮಾನ್ಯವಾದ ಮತಗಳಿಂದ ಭಾಗಿಸುವ ಮೂಲಕ ಶೇಕಡಾವಾರು ಮತ ಹಂಚಿಕೆಯನ್ನು ಲೆಕ್ಕಹಾಕಲಾಗುತ್ತದೆ. ಹಾಗಾಗಿ ಶೇ. 77ರಷ್ಟು ಮತ ಹಂಚಿಕೆ ಎಂದರೆ ಸರಾಸರಿ ಪ್ರತಿ 100 ಮಾನ್ಯ ಮತಗಳಲ್ಲಿ 77 ಪಾಟೀಲರಿಗೆ ಬಂದಿವೆ.

ವಿದಿಶಾ ಸಂಸದ ಶಿವರಾಜ್ ಸಿಂಗ್ ಚೌಹಾಣ್ ಒಟ್ಟು ಮತಗಳಲ್ಲಿ ಸುಮಾರು ಶೇ. 77ರಷ್ಟು ಗಳಿಸಿದರೆ, ಗಾಂಧಿನಗರ ಸಂಸದ ಅಮಿತ್ ಶಾ ಶೇ. 76.5ರಷ್ಟು ಪಡೆದರು. ಈ ಪಟ್ಟಿಯಲ್ಲಿ ತ್ರಿಪುರಾ ಪಶ್ಚಿಮ ಸಂಸದ ಬಿಪ್ಲಬ್ ಕುಮಾರ್ ದೇಬ್ ಶೇ. 72.85, ವಡೋದರಾ ಸಂಸದ ಡಾ ಹೇಮಾಂಗ್ ಜೋಶಿ ಶೇ. 72.04 ಮತ್ತು ಪಂಚಮಹಲ್ ಸಂಸದ ರಾಜಪಾಲ್ಸಿನ್ಹ್ ಮಹೇಂದ್ರಸಿನ್ಹ್ ಜಾದವ್ ಶೇ. 70.22ರಷ್ಟು ಮತಗಳನ್ನು ಪಡೆದಿದ್ದಾರೆ.

ಇದನ್ನೂ ಓದಿ: NEET UG: ನೀಟ್‌ ಅಕ್ರಮ: ಪರೀಕ್ಷೆಯನ್ನು ರದ್ದುಗೊಳಿಸುವುದು ಸಮಂಜಸವಲ್ಲ ಎಂದ ಕೇಂದ್ರ


ಕಡಿಮೆ ಮತ ಪಡೆದವರು

ಐದು ಸಂಸದರು ತಮ್ಮ ಸ್ಥಾನಗಳಿಗೆ ಒಟ್ಟು ಮತಗಳ ಶೇ. 30ಕ್ಕಿಂತ ಕಡಿಮೆ ಮತಗಳಿಸಿ ಸದನಕ್ಕೆ ಬಂದಿದ್ದಾರೆ. ಇದರಲ್ಲಿ ಮೂರು ಸ್ಥಾನಗಳನ್ನು ಪಂಜಾಬ್‌ನ ಕಾಂಗ್ರೆಸ್ ಶಾಸಕರು ಗಳಿಸಿದ್ದಾರೆ. ಫಿರೋಜ್‌ಪುರದ ಶೇರ್ ಸಿಂಗ್ ಘುಬಾಯಾ ಶೇ. 23.70, ಪಟಿಯಾಲಾದ ಡಾ ಧರ್ಮವೀರ ಗಾಂಧಿ ಶೇ. 26.54 ಮತ್ತು ಅಮೃತಸರದ ಗುರ್ಜಿತ್ ಸಿಂಗ್ ಔಜ್ಲಾ ಶೇ. 28.18ರಷ್ಟು ಮತಗಳನ್ನು ಗಳಿಸಿದ್ದಾರೆ.

ಪಟ್ಟಿಯಲ್ಲಿರುವ ಇತರ ಇಬ್ಬರು ಸಂಸದರು ಪಂಜಾಬ್‌ನವರಾಗಿದ್ದರು. ಆಮ್ ಆದ್ಮಿ ಪಕ್ಷದ ಆನಂದ್‌ಪುರ ಸಾಹಿಬ್‌ನ ಮಲ್ವಿಂದರ್ ಸಿಂಗ್ ಕಾಂಗ್ ಮತ್ತು ಸ್ವತಂತ್ರ ಫರೀದ್‌ಕೋಟ್ ಶಾಸಕ ಸರಬ್ಜೀತ್ ಸಿಂಗ್ ಖಾಲ್ಸಾ ಅವರು ಒಟ್ಟು ಮತಗಳ ಸುಮಾರು ಶೇ. 29ರಷ್ಟನ್ನು ಗಳಿಸಿದರು.

Continue Reading

Latest

Branded Company: ಬ್ರಾಂಡೆಡ್‌ ಬ್ಯಾಗ್‌ ಕಂಪನಿಗಳ ಲೂಟಿ; ಸಾವಿರಕ್ಕೆ ಖರೀದಿಸಿ ಲಕ್ಷಕ್ಕೆ ಸೇಲ್‌!

Branded Company: ಮಿಲನ್‌ನಲ್ಲಿ ಐಷಾರಾಮಿ ಬ್ಯಾಗ್‌ಗಳನ್ನು ಮಾರಾಟ ಮಾಡುವ ಎಲ್‌ವಿಎಂಹೆಚ್‌ ಡಿಯಾರ್ ಬ್ರ್ಯಾಂಡ್ ಕಂಪೆನಿಯ ಮೇಲೆ ಇಟಲಿ ಪೊಲೀಸರು ದಾಳಿ ನಡೆಸಿದ್ದಾರೆ. ಡಿಯಾರ್ ಪೂರೈಕೆದಾರರಿಂದ ಪ್ರತಿ ಬ್ಯಾಗ್‌ಗೆ ಸುಮಾರು 4,700 ರೂ.ಪಾವತಿಸಿ ನಂತರ ಅದನ್ನು ತನ್ನ ಅಂಗಡಿಗಳಲ್ಲಿ 2.34 ಲಕ್ಷ ರೂ.ಗೆ ಮಾರಾಟ ಮಾಡುತ್ತಿದೆ ಎಂಬುದಾಗಿ ತಿಳಿದುಬಂದಿದೆ. ಅದೇರೀತಿ ಇನ್ನೊಂದು ಬ್ರ್ಯಾಂಡ್ ಕಂಪೆನಿ ಅರ್ಮಾನಿ ಕೂಡ ಬ್ಯಾಗ್‌ಗಳನ್ನು ಪೂರೈಕೆದಾರರಿಂದ 8400 ರೂ.ಗಳಿಗೆ ಖರೀದಿಸಿ ತನ್ನ ಅಂಗಡಿಗಳಲ್ಲಿ 1.6ಲಕ್ಷ ರೂ. ಗೆ ಮಾರಾಟ ಮಾಡುತ್ತಿರುವುದು ತನಿಖೆಯ ವೇಳೆ ತಿಳಿದುಬಂದಿದೆ.

VISTARANEWS.COM


on

Koo

ಗ್ರಾಹಕರು ಬ್ರ್ಯಾಂಡೆಡ್ ವಸ್ತುಗಳಿಗೆ ಹೆಚ್ಚು ಬೆಲೆ ಕೊಟ್ಟು ಖರೀದಿಸುತ್ತಾರೆ. ಯಾಕೆಂದರೆ ಅದರ ಗುಣಮಟ್ಟ, ವಿನ್ಯಾಸ ಉತ್ತಮವಾಗಿರುತ್ತದೆ ಮತ್ತು ಅದು ಹೆಚ್ಚು ಕಾಲ ಬಾಳಿಕೆ ಬರುತ್ತದೆ. ಹಾಗೂ ಅದನ್ನು ಪ್ರತಿಷ್ಠಿತ ಕಂಪನಿಗಳು ತಯಾರಿಸಿರುತ್ತಾರೆ ಎಂಬ ಕಾರಣಕ್ಕಾಗಿ ಅದಕ್ಕೆ ಎಷ್ಟೇ ಬೆಲೆಯಿದ್ದರೂ ಕೂಡ ಅದನ್ನು ಖರೀದಿಸುತ್ತಾರೆ. ಗ್ರಾಹಕರ ಈ ಮನಸ್ಥಿತಿಯನ್ನು ದುರುಪಯೋಗಪಡಿಸಿಕೊಂಡ ಬ್ರ್ಯಾಂಡೆಡ್ ಕಂಪೆನಿಗಳು (Branded Company) ಇದೀಗ ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಿ ಹೆಚ್ಚಿನ ಬೆಲೆಗೆ ಗ್ರಾಹಕರಿಗೆ ಮಾರಾಟಮಾಡುತ್ತಿರುವುದಾಗಿ ತಿಳಿದುಬಂದಿದೆ.

ಮಿಲನ್‌ನಲ್ಲಿ ಐಷಾರಾಮಿ ಬ್ಯಾಗ್‌ಗಳನ್ನು ಮಾರಾಟ ಮಾಡುವ ಎಲ್‌ವಿಎಂಹೆಚ್‌ನ ಡಿಯಾರ್ ಬ್ರ್ಯಾಂಡ್ ಕಂಪೆನಿಯ ಮೇಲೆ ಇಟಲಿ ಪೊಲೀಸರು ದಾಳಿ ನಡೆಸಿದ್ದಾರೆ. ಡಿಯಾರ್ ಪೂರೈಕೆದಾರರಿಂದ ಪ್ರತಿ ಬ್ಯಾಗ್‌ಗೆ ಸುಮಾರು 4,700 ರೂ. ಪಾವತಿಸಿ ನಂತರ ಅದನ್ನು ತನ್ನ ಅಂಗಡಿಗಳಲ್ಲಿ 2.34 ಲಕ್ಷ ರೂ.ಗೆ ಮಾರಾಟ ಮಾಡುತ್ತಿದೆ ಎಂಬುದಾಗಿ ತಿಳಿದುಬಂದಿದೆ. ಅದೇರೀತಿ ಇನ್ನೊಂದು ಬ್ರ್ಯಾಂಡ್ ಕಂಪೆನಿ ಅರ್ಮಾನಿ ಕೂಡ ಬ್ಯಾಗ್‌ಗಳನ್ನು ಪೂರೈಕೆದಾರರಿಂದ 8400 ರೂ.ಗಳಿಗೆ ಖರೀದಿಸಿ ತನ್ನ ಅಂಗಡಿಗಳಲ್ಲಿ 1.6ಲಕ್ಷ ರೂ. ಗೆ ಮಾರಾಟ ಮಾಡುತ್ತಿರುವುದು ತನಿಖೆಯ ವೇಳೆ ತಿಳಿದುಬಂದಿದೆ. ಈ ವೆಚ್ಚಗಳು ಲೇದರ್ ವಸ್ತುಗಳ ವೆಚ್ಚದ ಜೊತೆಗೆ ಅದರ ವಿನ್ಯಾಸ, ವಿತರಣೆ ಮತ್ತು ಮಾರ್ಕೆಟಿಂಗ್ ಗಳಿಗೆ ಸೇರಿಸಿ ಹೆಚ್ಚುವರಿ ವೆಚ್ಚವನ್ನು ಗ್ರಾಹಕರು ಪಾವತಿಸಿದಂತಾಗಿದೆ. ಇಂತಹ ಬ್ರ್ಯಾಂಡೆಡ್ ಕಂಪೆನಿಗಳ ಬಗ್ಗೆ ತೀವ್ರ ಟೀಕೆಗೆ ಕಾರಣವಾಗಿದೆ. ಈ ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಧೀಶರು ಈ ಕುರಿತು ಕಂಪೆನಿ ಮಾಲೀಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Branded Company

ಅಲ್ಲದೇ ಕಂಪೆನಿಗಳು ಈ ಆರೋಪದ ಜೊತೆಗೆ ಅವರ ಕಂಪೆನಿಯಲ್ಲಿ ಕೆಲಸ ಮಾಡುವಂತಹ ಕಾರ್ಮಿಕರನ್ನು ಶೋಷಣೆ ಮಾಡುತ್ತಿದೆ ಮತ್ತು ಸರಿಯಾದ ದಾಖಲೆಗಳಿಲ್ಲದೇ ಕೆಲಸಗಾರರನ್ನು ನೇಮಿಸಿಕೊಂಡ ಆರೋಪವನ್ನು ಎದುರಿಸುತ್ತಿದೆ. ಈ ತನಿಖೆಯ ವೇಳೆ ಕಂಪೆನಿಯಲ್ಲಿ ಇಬ್ಬರು ಅಕ್ರಮ ವಲಸಿಗರು ಮತ್ತು 7 ಉದ್ಯೋಗಿಗಳಿಗೆ ಸರಿಯಾದ ದಾಖಲೆಗಳಿಲ್ಲ ಎಂಬುದನ್ನು ತನಿಖಾಧಿಕಾರಿಗಳು ಕಂಡುಕೊಂಡಿದ್ದಾರೆ ಎನ್ನಲಾಗಿದೆ.

Branded Company

ಇಟಲಿ ಪೊಲೀಸರು ನಡೆಸಿದ ತನಿಖೆಯಲ್ಲಿ ಮಾರ್ಚ್ ಮತ್ತು ಏಪ್ರಿಲ್ ತಿಂಗಳಿನಲ್ಲಿ ಇಲ್ಲಿನ ಕಾರ್ಮಿಕರು ನೈರ್ಮಲ್ಯ ಸಮಸ್ಯೆಯಿಂದ ಅನಾರೋಗ್ಯಕ್ಕೊಳಗಾಗಿರುವುದಾಗಿ ತಿಳಿದುಬಂದಿದೆ. ಉತ್ಪಾದನಾ ಯಂತ್ರಗಳಲ್ಲಿ ಯಾವುದೇ ಸುರಕ್ಷತಾ ಸಾಧನಗಳಿಲ್ಲದಿರುವುದನ್ನು ಅಧಿಕಾರಿಗಳು ಕಂಡುಕೊಂಡಿದ್ದಾರೆ. ಹಾಗೇ ಇಲ್ಲಿನ ಕಾರ್ಮಿಕರಿಗೆ ಸರಿಯಾದ ವಸತಿ ವ್ಯವಸ್ಥೆ ಇಲ್ಲ ಹಾಗೂ ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಬೆಳಗ್ಗೆಯಿಂದ ರಾತ್ರಿ 9 ಗಂಟೆಯವರೆಗೆ ಕೆಲಸ ಮಾಡಿಸಿಕೊಳ್ಳುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ಕಳ್ಳರು ಬ್ಯಾಗ್‌ ಕಸಿದು ಓಡುತ್ತಾರೆ! ಪೋಲಿಸ್ರು ಏನ್‌ ಮಾಡ್ತಿದ್ದಾರೋ!

ಈ ಬಗ್ಗೆ ಡಿಯಾರ್ ಕಂಪೆನಿ ಯಾವುದೇ ಪ್ರತಿಕ್ರಿಯ ನೀಡಿಲ್ಲ. ಆದರೆ ಅರ್ಮಾನಿ ಕಂಪೆನಿ ಈ ದುರುಪಯೋಗವನ್ನು ತಡೆಗಟ್ಟಲು ಕ್ರಮ ಕೈಗೊಂಡಿದೆ ಮತ್ತು ಈ ಬಗ್ಗೆ ಅಧಿಕಾರಿಗಳೊಂದಿಗೆ ಸಹಕರಿಸುತ್ತಿದೆ ಎಂಬುದಾಗಿ ತಿಳಿದುಬಂದಿದೆ.

Continue Reading

ವೈರಲ್ ನ್ಯೂಸ್

Viral Video: ಆಧಾರ್ ಕಾರ್ಡ್ ಫೋಟೋಗೆ ಸುಂದರ ಪೋಸ್ ಕೊಟ್ಟು ಮನ ಗೆದ್ದ ಪುಟಾಣಿ! ನಿಮಗೇನು ಅನಿಸಿತು?

ಸಣ್ಣ ಮಕ್ಕಳು ಮಾತ್ರವಲ್ಲ ದೊಡ್ಡವರ ಫೋಟೋಗಳು ಆಧಾರ್ ಕಾರ್ಡ್‌, ರೇಷನ್ ಕಾರ್ಡ್, ಮತದಾರರ ಗುರುತು ಪತ್ರದಲ್ಲಿ ಅಸಮಾಧಾನಗೊಂಡಿರುವಂತೆ ತೋರಿಸುತ್ತದೆ. ಆದರೆ ಈ ಪುಟ್ಟ ಹುಡುಗಿ ಮಾತ್ರ ಯಾವುದೇ ತಪ್ಪು ಆಗದಂತೆ ನೋಡಿಕೊಂಡಳು. ಗುರುತಿನ ಚೀಟಿಗಾಗಿ ಉತ್ತಮ ಭಂಗಿಯನ್ನು ತೋರಿ ಎಲ್ಲರ ಮನ ಗೆದ್ದಳು. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದ್ದು, ಸಾಕಷ್ಟು ಮಂದಿಯ ಮೆಚ್ಚುಗೆ ಕೂಡ ಗಳಿಸಿದೆ.

VISTARANEWS.COM


on

By

Viral Video
Koo

ಆಧಾರ್ ಕಾರ್ಡ್ ನಂತಹ (Aadhar card) ಕೆಲವೊಂದು ದಾಖಲೆಗಳಿಗೆ ಮಕ್ಕಳ (child) ಫೋಟೋ (photo) ಕಡ್ಡಾಯವಾಗಿರುತ್ತದೆ. ಆದರೆ ಪುಟ್ಟ ಮಕ್ಕಳ ಫೋಟೋ ತೆಗೆಸುವ ವೇಳೆಗೆ ತಂದೆ, ತಾಯಿ ಮಾತ್ರವಲ್ಲ ಫೋಟೋಗ್ರಾಫರ್ ಕೂಡ ಸುಸ್ತಾಗಿ ಬಿಡುತ್ತಾರೆ. ಆದರೆ ಇಲ್ಲೊಂದು ಮಗು ಮಾತ್ರ ಫೋಟೋ ಎಂದಾಕ್ಷಣ ತನ್ನ ಮುದ್ದಾದ ಭಂಗಿಯನ್ನು ತೋರಿಸಿ ಎಲ್ಲರ ಮನ ಗೆದ್ದಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದ್ದು, ಸಾಕಷ್ಟು ಮಂದಿಯ ಮೆಚ್ಚುಗೆ ಕೂಡ ಗಳಿಸಿದೆ.

ಸಣ್ಣ ಮಕ್ಕಳು ಮಾತ್ರವಲ್ಲ ದೊಡ್ಡವರ ಫೋಟೋಗಳು ಆಧಾರ್ ಕಾರ್ಡ್‌, ರೇಷನ್ ಕಾರ್ಡ್, ಮತದಾರರ ಗುರುತು ಪತ್ರದಲ್ಲಿ ಅಸಮಾಧಾನಗೊಂಡಿರುವಂತೆ ತೋರಿಸುತ್ತದೆ. ಆದರೆ ಈ ಪುಟ್ಟ ಹುಡುಗಿ ಮಾತ್ರ ಯಾವುದೇ ತಪ್ಪು ಆಗದಂತೆ ನೋಡಿಕೊಂಡಳು. ಗುರುತಿನ ಚೀಟಿಗಾಗಿ ಉತ್ತಮ ಭಂಗಿಯನ್ನು ತೋರಿ ಎಲ್ಲರ ಮನ ಗೆದ್ದಳು.
ಅವಳು ಕೆಮರಾದ ಮುಂದೆ ಮುಗುಳ್ನಕ್ಕಿರುವುದು ಮಾತ್ರವಲ್ಲ ತನ್ನ ವಿಭಿನ್ನ ಭಂಗಿಯನ್ನು ತೋರಿ ಎಲ್ಲರ ಮನ ಗೆದ್ದಳು.

ತಾನು ಯಾವುದಕ್ಕಾಗಿ ಫೋಟೋ ತೆಗೆಸಿಕೊಳ್ಳುತ್ತಿದ್ದೇನೆ ಎಂಬ ಅರಿವಿಲ್ಲದ ಈ ಮಗು ಆಧಾರ್ ಕಾರ್ಡ್ ಫೋಟೋಗಾಗಿ ಬಗೆ ಬಗೆಯ ಪೋಸ್ ನೀಡಿದ್ದಾಳೆ. 20ಕ್ಕೂ ಹೆಚ್ಚು ಪೋಸ್ ನೀಡಿರುವ ಆಕೆಯ ಯಾವ ಫೋಟೋವನ್ನು ಕಾರ್ಡ್ ನಲ್ಲಿ ಅಚ್ಚು ಹಾಕುವ ಗೊಂದಲ ಈಗ ಆಧಾರ್ ಕಾರ್ಡ್ ಮಾಡುವ ಸಿಬ್ಬಂದಿಯದ್ದಾಗಿದೆ.


ಗುರುತು ಚೀಟಿಗಳಿಗಾಗಿ ಸಾಮಾನ್ಯವಾಗಿ ವಯಸ್ಕರ ಫೋಟೋ ತೆಗೆಯುವುದು ಸುಲಭ. ಆದರೆ ಮಕ್ಕಳ ಫೋಟೋ ತೆಗೆಯುವುದು ಅಷ್ಟು ಸುಲಭವಲ್ಲ. ಅವುಗಳ ಗಮನ ಎಲ್ಲೋ ಇರುತ್ತದೆ. ಇನ್ನು ಕೆಲವು ಮಕ್ಕಳು ಅಪರಿಚಿತರನ್ನು ನೋಡಿ ಅಳಲು ಪ್ರಾರಂಭಿಸುತ್ತದೆ. ಮತ್ತೆ ಕೆಲವರು ನಿಂತಲ್ಲಿ ನಿಲ್ಲಲ್ಲ. ಅತ್ತಿತ್ತ ಓಡಿ ಹೋಗುವುದು ಮಾಡುತ್ತಾರೆ. ಇದಲ್ಲ ಮುಗಿದು ಒಂದು ಒಳ್ಳೆಯ ಫೋಟೋ ಸಿಕ್ಕರೆ ಮಾತ್ರ ಪೋಷಕರು ನೆಮ್ಮದಿಯ ನಿಟ್ಟುಸಿರು ಬಿಡಲು ಸಾಧ್ಯ. ಇಲ್ಲವಾದರೆ ಮತ್ತದೇ ಮಕ್ಕಳ ತಕರಾರು ಎದುರಿಸಬೇಕಾಗುತ್ತದೆ.

ಇದನ್ನೂ ಓದಿ: Kerala Govt: ಕೇರಳ ಸರ್ಕಾರಿ ನೌಕರರ ಪೈಕಿ ಮೂರರಲ್ಲಿ ಒಬ್ಬ ಮುಸ್ಲಿಂ ಅಥವಾ ಕ್ರಿಶ್ಚಿಯನ್

ಆದರೆ ಈ ಮಗುವನ್ನು ಪೋಷಕರು ಆಧಾರ್ ಕಾರ್ಡ್ ಸೆಂಟರ್‌ಗೆ ಕರೆದುಕೊಂಡು ಬಂದು ಕುರ್ಚಿಯ ಮೇಲೆ ನಿಲ್ಲಿಸಿ ಕೆಮರಾಗೆ ಪೋಸ್ ನೀಡಲು ಹೇಳಿದ್ದಾರೆ. ಫೋಟೋ ತೆಗೆಯುತ್ತಾರೆ. ಕೆಮರಾ ನೋಡು ಎಂದಿದ್ದಾರೆ. ತಕ್ಷಣ ಮಗು ಒಂದರ ಮೇಲೊಂದರಂತೆ ಪೋಸ್ ನೀಡುತ್ತಾ ಹೋಗಿದ್ದಾಳೆ. ಪುಟಾಣಿ ಮಗುವಿನ ಈ ಪೋಸ್ ಅಲ್ಲಿರುವ ಸಿಬ್ಬಂದಿಗೆ ಮಾತ್ರವಲ್ಲ ಅಲ್ಲಿದ್ದವರೆಲ್ಲರ ಗಮನ ಸೆಳೆದಿದ್ದು, ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ಫೋಟೋ ನೋಡಿ ಮೆಚ್ಚುಗೆ ವ್ಯಕ್ತಪಡಿಸಿ ಸಾಕಷ್ಟು ಮಂದಿ ಕಾಮೆಂಟ್ ಕೂಡ ಮಾಡಿದ್ದಾರೆ.

Continue Reading

ದೇಶ

Kerala Govt: ಕೇರಳ ಸರ್ಕಾರಿ ನೌಕರರ ಪೈಕಿ ಮೂರರಲ್ಲಿ ಒಬ್ಬ ಮುಸ್ಲಿಂ ಅಥವಾ ಕ್ರಿಶ್ಚಿಯನ್

ಕೇರಳದಲ್ಲಿ ಸರ್ಕಾರಿ (Kerala Govt) ಉದ್ಯೋಗ ಪಡೆಯುವಲ್ಲಿ ಹೆಚ್ಚಿನ ಮುಸ್ಲಿಂ ಮತ್ತು ಕ್ರಿಶ್ಚಿಯನರು ಮೇಲುಗೈ ಸಾಧಿಸಿದ್ದಾರೆ. ಒಟ್ಟು ಸರ್ಕಾರಿ ಉದ್ಯೋಗಿಗಳಲ್ಲಿ ಕೇವಲ 26 ಯಾದವರು, 28 ಕ್ಷತ್ರಿಯರು, 27 ಜೈನರು ಮಾತ್ರ ಕೆಲಸ ಮಾಡುತ್ತಿರುವ ಸಂಗತಿ ಅಂಕಿಅಂಶಗಳಿಂದ ಬಹಿರಂಗವಾಗಿದೆ. ರಾಜ್ಯದಲ್ಲಿ 1,73,268 ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ರಾಜ್ಯ ಸರ್ಕಾರದ ಕರ್ತವ್ಯದ ಭಾಗವಾಗಿದ್ದಾರೆ. ಒಟ್ಟು ಉದ್ಯೋಗಿಗಳಲ್ಲಿ ಈ ಎರಡೂ ಸಮುದಾಯದವರು ಶೇ. 31.5ರಷ್ಟು ಪ್ರಮಾಣದಷ್ಟಿದ್ದಾರೆ.

VISTARANEWS.COM


on

By

Kerala govt
Koo

ಕೇರಳ ಸರ್ಕಾರದ (Kerala Govt) ಪ್ರತಿ ಮೂರು ಸರ್ಕಾರಿ ಉದ್ಯೋಗಿಗಳಲ್ಲಿ ಒಬ್ಬ (government employee) ಮುಸ್ಲಿಂ (Muslim) ಅಥವಾ ಕ್ರಿಶ್ಚಿಯನ್ (Christian) ಆಗಿದ್ದಾರೆ. ಈ ರಾಜ್ಯದಲ್ಲಿ ಕೇವಲ 26 ಯಾದವರು, 28 ಕ್ಷತ್ರಿಯರು, 27 ಜೈನರು ಸರ್ಕಾರಿ ಉದ್ಯೋಗದಲ್ಲಿದ್ದಾರೆ ಎಂಬುದನ್ನು ಒಪಿಂಡಿಯಾ ಡೇಟಾ ಬಹಿರಂಗಪಡಿಸಿದೆ.

ಕೇರಳ ವಿಧಾನಸಭೆಯಲ್ಲಿ (kerala vidhansabha) ಮಂಡಿಸಲಾದ ಈ ಅಂಕಿ ಅಂಶವು ರಾಜ್ಯದಲ್ಲಿ ಪ್ರಸ್ತುತ 5,45,423 ನೌಕರರು ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಲ್ಲಿ 73,774 ಮುಸ್ಲಿಮರಾಗಿದ್ದಾರೆ. ಇದು ರಾಜ್ಯದ ಎಲ್ಲ ಸರ್ಕಾರಿ ನೌಕರರಲ್ಲಿ ಶೇ. 13.5ರಷ್ಟಿದೆ ಎಂದು ಡೇಟಾ ಬಹಿರಂಗಪಡಿಸಿದೆ.

ರಾಜ್ಯ ಸರ್ಕಾರದಲ್ಲಿ ಮುಸ್ಲಿಮರಿಗಿಂತ ಹೆಚ್ಚು ಕ್ರಿಶ್ಚಿಯನ್‌ ನೌಕರರಿದ್ದಾರೆ. ಲ್ಯಾಟಿನ್ ಚರ್ಚ್‌ನ ಸದಸ್ಯರಾಗಿರುವ 22,452 ಕಾರ್ಮಿಕರು ಕೇರಳ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದಾರೆ. 2,399 ಉದ್ಯೋಗಿಗಳು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. 929 ಕಾರ್ಮಿಕರನ್ನು ನಾಡಾರ್ ಕ್ರಿಶ್ಚಿಯನ್ ಎಂದು ಗುರುತಿಸಲಾಗಿದೆ. ಕೇರಳದಲ್ಲಿ ಸರ್ಕಾರಿ ಉದ್ಯೋಗದಲ್ಲಿರುವ ಎಲ್ಲಾ ಕ್ರಿಶ್ಚಿಯನ್ ಸಮುದಾಯಗಳ ಸಂಖ್ಯೆ 99,494. ಅವರ ಶೇಕಡಾವಾರು ಪ್ರಮಾಣವು ಶೇ. 18.25 ರಷ್ಟಾಗಿದೆ. ಅಂದರೆ ಈ ಸಂಖ್ಯೆ ಮುಸ್ಲಿಮರಿಗಿಂತ ಹೆಚ್ಚು.


ರಾಜ್ಯದಲ್ಲಿ 1,73,268 ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ರಾಜ್ಯ ಸರ್ಕಾರದ ಕರ್ತವ್ಯದ ಭಾಗವಾಗಿದ್ದಾರೆ. ಒಟ್ಟು ಉದ್ಯೋಗಿಗಳಲ್ಲಿ ಈ ಎರಡೂ ಸಮುದಾಯದವರು ಶೇ. 31.5ರಷ್ಟು ಪ್ರಮಾಣದಷ್ಟಿದ್ದಾರೆ. ಗಮನಾರ್ಹ ಸಂಗತಿ ಎಂದರೆ ಸುಮಾರು ಮೂರನೇ ಒಂದು ಭಾಗದಷ್ಟು ರಾಜ್ಯ ಕಾರ್ಮಿಕರನ್ನು ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರು ಎಂದು ವರ್ಗೀಕರಿಸಲಾಗಿದೆ.

ಇದನ್ನೂ ಓದಿ: 2025ರ ವೇಳೆಗೆ ಬಾಹ್ಯಾಕಾಶ, ಸಮುದ್ರದ ಆಳಕ್ಕೆ ಮಾನವ ಸಹಿತ ಮಿಷನ್;‌ ಕೇಂದ್ರ ಸಚಿವ ಮಹತ್ವದ ಘೋಷಣೆ

Continue Reading
Advertisement
dengue fever death bangalore
ಕ್ರೈಂ8 mins ago

Dengue Fever: ಸಿಲಿಕಾನ್‌ ಸಿಟಿಯಲ್ಲಿ ಡೆಂಗ್ಯು ಜ್ವರಕ್ಕೆ ಬಾಲಕ ಬಲಿ, ರಾಜಧಾನಿಯಲ್ಲಿ 2ನೇ ಸಾವು

UK Election
ವಿದೇಶ21 mins ago

UK Election: ಇಂಗ್ಲೆಂಡ್‌ನಲ್ಲಿ ಅಧಿಕಾರಕ್ಕೆ ಬಂದ ಲೇಬರ್‌ ಪಕ್ಷ; ಭಾರತದ ಮೇಲೇನು ಪರಿಣಾಮ?

Heart Attack
ಕ್ರೀಡೆ30 mins ago

Heart Attack: ಚೆಸ್​ ಆಡುತ್ತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ಗ್ರ್ಯಾಂಡ್‌ಮಾಸ್ಟರ್

Janhvi Kapoor Stuns In Peacock Lehenga
ಬಾಲಿವುಡ್30 mins ago

Janhvi Kapoor: ಅನಂತ್-ರಾಧಿಕಾ ಸಂಗೀತ ಕಾರ್ಯಕ್ರಮದಲ್ಲಿ ನವಿಲಂತೆ ಕಂಗೊಳಿಸಿದ ಜಾಹ್ನವಿ ಕಪೂರ್!

death by shock in pg
ಕ್ರೈಂ33 mins ago

Death by Shock: ಮೊಬೈಲ್‌ ಚಾರ್ಜರ್‌ನಿಂದ ಶಾಕ್‌ ಹೊಡೆದು ವಿದ್ಯಾರ್ಥಿ ಸಾವು

Deepika Padukone heads to Anant Ambani Radhika Merchant sangeet in a saree
ಬಾಲಿವುಡ್59 mins ago

Deepika Padukone: ಅನಂತ್-ರಾಧಿಕಾ ಸಂಗೀತ ಕಾರ್ಯಕ್ರಮದಲ್ಲಿ ಗರ್ಭಿಣಿ ದೀಪಿಕಾ ಸೀರೆಯಲ್ಲಿ ಮಿಂಚಿದ್ದು ಹೀಗೆ!

illegal relationship chitradurga
ಕ್ರೈಂ1 hour ago

Illegal Relationship: ಪರ ಸ್ತ್ರೀಯೊಂದಿಗೆ ಲಾಡ್ಜಿಗೆ ಬಂದು ಪರಲೋಕ ಸೇರಿದ!

Hardik Pandya
ಕ್ರೀಡೆ1 hour ago

Hardik Pandya: ನತಾಶಾ ಜತೆ ವಿಚ್ಛೇದನ ಖಚಿತ; ಸುಳಿವು ನೀಡಿದ ಹಾರ್ದಿಕ್​ ಪಾಂಡ್ಯ ಪೋಸ್ಟ್​!

UK Election
ವಿದೇಶ1 hour ago

UK Election: ಬ್ರಿಟನ್‌ ಸಂಸತ್ತಿಗೆ 28 ಭಾರತೀಯ ಮೂಲದವರು ಆಯ್ಕೆ; ಈ ಪೈಕಿ 12 ಮಂದಿ ಸಿಖ್‌ ಸಮುದಾಯದವರು

Namma Metro
ಬೆಂಗಳೂರು1 hour ago

Namma Metro: ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ, ಇಂದಿನಿಂದ ನೇರಳೆ ಮಾರ್ಗದಲ್ಲಿ ರೈಲುಗಳ ಹೆಚ್ಚಳ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ4 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ16 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ18 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ18 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ20 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ22 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು23 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು23 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ1 day ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

ಟ್ರೆಂಡಿಂಗ್‌