UPSC 2024: ಯುಪಿಎಸ್ಸಿ ಸಿಎಸ್ಇ ಪ್ರಿಲಿಮ್ಸ್ ಫಲಿತಾಂಶ ಪ್ರಕಟ; ಪರಿಶೀಲಿಸುವುದು ಹೇಗೆ? - Vistara News

ಪ್ರಮುಖ ಸುದ್ದಿ

UPSC 2024: ಯುಪಿಎಸ್ಸಿ ಸಿಎಸ್ಇ ಪ್ರಿಲಿಮ್ಸ್ ಫಲಿತಾಂಶ ಪ್ರಕಟ; ಪರಿಶೀಲಿಸುವುದು ಹೇಗೆ?

UPSC 2024 : ಪೂರ್ವಭಾವಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮುಂದಿನ ಸುತ್ತಿಗೆ ಪ್ರವೇಶ ಪಡೆಯುತ್ತಾರೆ. ಯುಪಿಎಸ್ಸಿ ಸಿಎಸ್ಇ ಮೇನ್ಸ್ ಪರೀಕ್ಷೆ ಇದಾಗಿದೆ. ಇಲ್ಲಿ ಇದು ಎರಡು ಭಾಗಗಳಿವೆ . ಲಿಖಿತ ಪರೀಕ್ಷೆ ಮತ್ತು ವ್ಯಕ್ತಿತ್ವ ಪರೀಕ್ಷೆ. ಲೋಕ ಸೇವಾ ಆಯೋಗದ ಪರೀಕ್ಷಾ ಕ್ಯಾಲೆಂಡರ್ ಪ್ರಕಾರ ಮೇನ್ಸ್​ (ಮುಖ್ಯ) ಪರೀಕ್ಷೆ ಸೆಪ್ಟೆಂಬರ್ 20 ರಂದು ಪ್ರಾರಂಭವಾಗಲಿದೆ.

VISTARANEWS.COM


on

UPSC 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ 2024ನೇ( UPSC 2024) ಸಾಲಿನ ನಾಗರಿಕ ಸೇವೆಗಳ ಪೂರ್ವಭಾವಿ (ಪ್ರಿಲಿಮ್ಸ್​) ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಯುಪಿಎಸ್​ಸಿ ಸಿಎಸ್ಇ 2024 ರ ಪರೀಕ್ಷೆಗೆ ಹಾಜರಾಗಿವು ಅಭ್ಯರ್ಥಿಗಳು upsc.gov.in ಮತ್ತು upsconline.nic.in ವೆಬ್​ಸೈಟ್​ಗೆ ಪ್ರವೇಶ ಮಾಡಿ ಫಲಿತಾಂಶಗಳನ್ನು ಡೌನ್ಲೋಡ್ ಮಾಡಬಹದು. ಸಾಮಾನ್ಯ ಪರೀಕ್ಷೆಯನ್ನು ಜೂನ್ 16 ರಂದು ಸಾಮಾನ್ಯ ಅಧ್ಯಯನ ಪರೀಕ್ಷೆ 1 ಮತ್ತು ಪರೀಕ್ಷೆ 2 ಎಂದು ಎರಡು ಪಾಳಿಗಳಲ್ಲಿ ನಡೆಸಲಾಯಿತು. ಪರೀಕ್ಷೆಯು ಒಟ್ಟು 400 ಅಂಕಗಳನ್ನು ಹೊಂದಿತ್ತು. ಪ್ರಶ್ನೆ ಪತ್ರಿಕೆಯು ಆಬ್ಜೆಕ್ಟಿವ್​ ಮಾದರಿಯ ಪ್ರಶ್ನೆಗಳನ್ನು ಒಳಗೊಂಡಿದ್ದು, ತಲಾ 4 ಆಯ್ಕೆಗಳನ್ನು ಹೊಂದಿತ್ತು.

ಪೂರ್ವಭಾವಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮುಂದಿನ ಸುತ್ತಿಗೆ ಪ್ರವೇಶ ಪಡೆಯುತ್ತಾರೆ. ಯುಪಿಎಸ್ಸಿ ಸಿಎಸ್ಇ ಮೇನ್ಸ್ ಪರೀಕ್ಷೆ ಇದಾಗಿದೆ. ಇಲ್ಲಿ ಇದು ಎರಡು ಭಾಗಗಳಿವೆ . ಲಿಖಿತ ಪರೀಕ್ಷೆ ಮತ್ತು ವ್ಯಕ್ತಿತ್ವ ಪರೀಕ್ಷೆ. ಲೋಕ ಸೇವಾ ಆಯೋಗದ ಪರೀಕ್ಷಾ ಕ್ಯಾಲೆಂಡರ್ ಪ್ರಕಾರ ಮೇನ್ಸ್​ (ಮುಖ್ಯ) ಪರೀಕ್ಷೆ ಸೆಪ್ಟೆಂಬರ್ 20 ರಂದು ಪ್ರಾರಂಭವಾಗಲಿದೆ.

ಕಳೆದ ವರ್ಷದ ಟ್ರೆಂಡ್ ಪ್ರಕಾರ, ಪರೀಕ್ಷೆಯನ್ನು ಮೇ 26 ರಂದು ನಡೆಸಲಾಯಿತು ಮತ್ತು ಫಲಿತಾಂಶಗಳನ್ನು ಜೂನ್ 12 ರಂದು ಬಿಡುಗಡೆ ಮಾಡಲಾಗಿತ್ತು.

ಇದನ್ನೂ ಓದಿ: Reliance Jio: ಮೊಬೈಲ್‌ ಶುಲ್ಕ ಏರಿಕೆ; ಯಾವ ಕಂಪನಿಯ ಪ್ಲ್ಯಾನ್‌ ಸೂಕ್ತ?

ಭಾರತೀಯ ಆಡಳಿತ ಸೇವೆ, ಭಾರತೀಯ ಪೊಲೀಸ್ ಸೇವೆ, ಭಾರತೀಯ ವಿದೇಶಾಂಗ ಸೇವೆ ಮತ್ತು ಇತರ ಉನ್ನತ ಸೇವೆಗಳಲ್ಲಿ ಪ್ರಮುಖ ಹುದ್ದೆಗಳಿಗೆ ಸ್ಪರ್ಧಿಸುವ ಲಕ್ಷಾಂತರ ನಾಗರಿಕ ಸೇವಾ ಆಕಾಂಕ್ಷಿಗಳ ಭವಿಷ್ಯವನ್ನು ನಿರ್ಧರಿಸುವಲ್ಲಿ ಯುಪಿಎಸ್ಸಿ ಸಿಎಸ್ಇ ಕಟ್-ಆಫ್ ನಿರ್ಣಾಯಕವಾಗಿದೆ. 2023 ರಲ್ಲಿ ಸಾಮಾನ್ಯ ವರ್ಗಕ್ಕೆ ಯುಪಿಎಸ್ಸಿ ಪ್ರಿಲಿಮ್ಸ್ ಕಟ್-ಆಫ್ 75.41 ರಷ್ಟಿತ್ತು.

ಈ ಬಾರಿಯ ಫಲಿತಾಂಶಗಳನ್ನು ಈ ರೀತಿ ಡೌನ್​ಲೋಡ್ ಮಾಡಿಕೊಳ್ಳಿ


  • ಮೊದಲಿಗೆ, ಯುಪಿಎಸ್ಸಿಯ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ಯುಪಿಎಸ್ಸಿ ಸಿವಿಲ್ ಸರ್ವೀಸಸ್ (ಪ್ರಿಲಿಮಿನರಿ) ಫಲಿತಾಂಶ 2024 ಲಿಂಕ್ ಅನ್ನು ಕ್ಲಿಕ್ ಮಾಡಿ.
  • ಅಗತ್ಯವಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿದಾಗ ಹೊಸ ಪುಟ ತೆರೆಯುತ್ತದೆ.
  • “ಸಲ್ಲಿಸು” ಆಯ್ಕೆಯನ್ನು ಆರಿಸಿದರೆ ಫಲಿತಾಂಶಗಳು ಕಾಣುತ್ತದೆ
  • ಡೌನ್ ಲೋಡ್ ಮಾಡಿ ಮತ್ತು ನಿಮ್ಮ ಭವಿಷ್ಯದ ಅಗತ್ಯಗಳಿಗಾಗಿ ಕಾಪಿಯನ್ನು ಸೇವ್ ಮಾಡಿಟ್ಟುಕೊಳ್ಳಿ.

2024 ರ ಸಿಎಸ್ (ಪಿ) ಪರೀಕ್ಷೆಯ ಅಂಕಗಳು, ಕಟ್-ಆಫ್ ಅಂಕಗಳು ಮತ್ತು ಉತ್ತರ ಕೀಗಳನ್ನು ನಾಗರಿಕ ಸೇವೆಗಳ ಪರೀಕ್ಷೆ ಪೂರ್ಣಗೊಂಡ ನಂತರ ಮತ್ತು ಅಂತಿಮ ಫಲಿತಾಂಶಗಳ ಪ್ರಕಟಣೆಯ ನಂತರ ವೆಬ್​ಸೈಟ್​ನಲ್ಲಿ ಪೋಸ್ಟ್​​ ಮಾಡಲಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ಈ ರಾಶಿಯವರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷದ ಪಾಡ್ಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಕಟಕ ರಾಶಿಯಿಂದ ಶನಿವಾರ ರಾತ್ರಿ 11:55ಕ್ಕೆ ಸಿಂಹ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ. ಆಪ್ತ ವ್ಯಕ್ತಿಗಳಿಗೆ ಸಹಾಯ ಮಾಡುವಿರಿ. ಮನೆಯಲ್ಲಿ ಕಲಹಗಳಿಗೆ ಆಸ್ಪದ ಕೊಡಬೇಡಿ. ವೃಷಭ ರಾಶಿಯವರು ಅತಿರೇಕದಲ್ಲಿ ಮಾತನಾಡುವ ಮುನ್ನ ಯೋಚಿಸಿ. ತಿಳಿಯದೆ ನಿಮ್ಮ ಅಭಿಪ್ರಾಯಗಳು ಬೇರೊಬ್ಬರ ಭಾವನೆಗಳಿಗೆ ಧಕ್ಕೆಯುಂಟು ಮಾಡಬಹುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (6-07-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ.
ತಿಥಿ: ಪಾಡ್ಯ 28:25 ವಾರ: ಶನಿವಾರ
ನಕ್ಷತ್ರ: ಪುನರ್ವಸು 28:46 ಯೋಗ: ವ್ಯಾಘಾತ 26:45
ಕರಣ: ಕಿಂಸ್ತುಘ್ನ 16:21 ಅಮೃತಕಾಲ: ಮಧ್ಯರಾತ್ರಿ 02:20 ರಿಂದ 03:58 ರವರೆಗೆ
ದಿನದ ವಿಶೇಷ: ಆಷಾಢಮಾಸ ಆರಂಭ, ಪುರಿ ಜಗನ್ನಾಥರ ರಥಯಾತ್ರೆ

ಸೂರ್ಯೋದಯ : 05:58   ಸೂರ್ಯಾಸ್ತ : 06:50

ರಾಹುಕಾಲ: ಬೆಳಗ್ಗೆ 10:48ರಿಂದ 12:24
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30

ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ. ಆಪ್ತ ವ್ಯಕ್ತಿಗಳಿಗೆ ಸಹಾಯ ಮಾಡುವಿರಿ. ಮನೆಯಲ್ಲಿ ಕಲಹಗಳಿಗೆ ಆಸ್ಪದ ಕೊಡಬೇಡಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ವೃಷಭ: ಅತಿರೇಕದಲ್ಲಿ ಮಾತನಾಡುವ ಮುನ್ನ ಯೋಚಿಸಿ. ತಿಳಿಯದೆ ನಿಮ್ಮ ಅಭಿಪ್ರಾಯಗಳು ಬೇರೊಬ್ಬರ ಭಾವನೆಗಳಿಗೆ ಧಕ್ಕೆಯುಂಟು ಮಾಡಬಹುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕುಟುಂಬದಲ್ಲಿ ನೆಮ್ಮದಿ ಇರಲಿದೆ. ಅದೃಷ್ಟ ಸಂಖ್ಯೆ: 3

Horoscope Today

ಮಿಥುನ: ಆರೋಗ್ಯ ಪರಿಪೂರ್ಣವಾಗಿರಲಿದೆ. ಸ್ನೇಹಿತರಿಗೆ ಸಹಾಯ ಮಾಡುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಸಕರಾತ್ಮಕ ಆಲೋಚನೆಗಳು ಪುಷ್ಠಿ ನೀಡುತ್ತದೆ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕಟಕ: ಕೆಲಸ ಕಾರ್ಯಗಳಲ್ಲಿ ಒತ್ತಡ ಉಂಟುಮಾಡುವ ವಿಚಾರಗಳಿಂದ ದೂರ ಇರಿ. ತಾಳ್ಮೆ ಇರಲಿ. ಅಗತ್ಯಕ್ಕಾಗಿ ಯಾರದಾರು ಹಣದ ಸಹಾಯ ಬೇಡುವ ಸಾಧ್ಯತೆ ಇದೆ, ಆಲೋಚಿಸಿ ಮುಂದುವರಿಯಿರಿ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಸಿಂಹ: ಇತರರು ನಿಮ್ಮ ಕಾರ್ಯಗಳಿಗೆ ಪ್ರಶಂಸೆ ವ್ಯಕ್ತಪಡಿಸುವರು. ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗ, ಆರೋಗ್ಯ, ಕೌಟುಂಬಿಕವಾಗಿ ಶುಭ ಫಲ ಇರಲಿದೆ. ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ನಿಮ್ಮ ಒತ್ತಡವನ್ನು ಇತರರ ಮೇಲೆ ಹಾಕಿ ಕೋಪಗೊಳ್ಳುವುದು ಬೇಡ, ಸಮಾಧಾನದಿಂದ ವರ್ತಿಸಿ. ಆರ್ಥಿಕವಾಗಿ ಸಾಧಾರಣವಾಗಿರಲಿದೆ. ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆಪ್ತರೊಂದಿಗೆ ಬಾಲ್ಯದ ನೆನಪು ಹಂಚಿಕೊಳ್ಳುವಿರಿ. ಮನಸ್ಸಿನ ಒತ್ತಡ ಈ ಮೂಲಕ ಹೊರಹಾಕುವಿರಿ. ಆರೋಗ್ಯ ಮಧ್ಯಮವಾಗಿರಲಿದೆ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಫಲಿತಾಂಶ ಸಿಗಲಿದೆ. ಕಾರ್ಯದಲ್ಲಿ ನಿಧಾನಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ವೃಶ್ಚಿಕ : ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ನಿಮ್ಮ ನಿರೀಕ್ಷೆಗೆ ತಕ್ಕಂತೆ ಪ್ರತಿಫಲ ಸಿಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಈ ಹಿಂದೆ ನಿಮ್ಮನ್ನು ದ್ವೇಷಿಸುತ್ತಿದ್ದ ಜನರು ನಿಮ್ಮೊಂದಿಗೆ ಪ್ರೀತಿಯಿಂದ ವರ್ತಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಧನಸ್ಸು: ಚುರುಕುತನದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಲಾಭ ಇರಲಿದೆ. ಹೊಸ ಸ್ನೇಹಿತರ ಪರಿಚಯ ಆಗಲಿದೆ.ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಮಕರ: ಸಮಯ ವ್ಯರ್ಥಮಾಡಿ ಕೊರಗುವುದು ಬೇಡ. ಅನಗತ್ಯವಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಉತ್ತಮ ಆಲೋಚನೆಗಳು ಇರಲಿ. ಹಳೆಯ ನೆನಪುಗಳು ಮಾನಸಿಕ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ದೈಹಿಕ ಆರೋಗ್ಯ ಉತ್ತಮವಾಗಿರಲಿದೆ. ವಿನಾಕಾರಣ ಕುಟುಂಬದ ಸದಸ್ಯರೊಂದಿಗೆ ಕಲಹಗಳು ಸೃಷ್ಟಿ ಆಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ಕುಂಭ: ಅಧಿಕ ಶ್ರಮದಿಂದ ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ ಇದೆ, ಕಾಳಜಿ ಇರಲಿ. ಸಾಂಕ್ರಮಿಕ ರೋಗದ ಭಾದ್ಯತೆ, ಆದಷ್ಟು ಮುಂಜಾಗ್ರತೆ ವಹಿಸುವುದು ಒಳ್ಳೆಯದು. ಸ್ನೇಹಿತರ ಸಹಕಾರ ಸಿಗಲಿದೆ. ಸಂಗಾತಿಯೊಂದಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮೀನ: ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ಮಾಡಿಕೊಡಬೇಡಿ. ಉದ್ಯೋಗದಲ್ಲಿ ಹೊಸ ಭರವಸೆ ಇರಲಿದೆ. ಮನಸ್ಸಿನ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಸಾಧನೆಯಿಂದ ತಂದುಕೊಳ್ಳಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 7

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

Cheating case : ಭಕ್ತರ 40 ಲಕ್ಷ ರೂ. ಗುಳುಂ ಮಾಡಲು ದರೋಡೆ ಕತೆ ಕಟ್ಟಿದ ಸ್ವಾಮೀಜಿ!

Cheating case : ಮಠಕ್ಕೆ ಭಕ್ತರು ಸಾಕಷ್ಟು ಧನ ಸಹಾಯ ಮಾಡಿದ್ದರು. ಅಂತೆಯ 40 ಲಕ್ಷ ರೂಪಾಯಿ ಮಠದಲ್ಲಿತ್ತು. ಅದನ್ನು ತಮ್ಮ ಸ್ವಂತಕ್ಕೆ ಬಳಸಿಕೊಳ್ಳುವುದು ಸ್ವಾಮೀಜಿಯ ದುರಾಲೋಚನೆಯಾಗಿತ್ತು ಎಂಬುದು ಪೊಲೀಸರು ಪತ್ತೆ ಹಚ್ಚಿದ ಹಲವಾರು ಸಾಕ್ಷಿಗಳಿಂದ ಗೊತ್ತಾಗಿದೆ. ಹಣದ ಥೈಲಿಯನ್ನು ಬಾಚಿಕೊಳ್ಳುವುದಕ್ಕೆ ಸಜ್ಜಾಗಿದ್ದ ಸ್ವಾಮೀಜಿ ಪೊಲೀಸರ ಕೈಕೋಳಕ್ಕೆ ಕೈ ನೀಡುವ ಪರಿಸ್ಥಿತಿ ಎದುರಾಗಿದೆ.

VISTARANEWS.COM


on

Cheating Case
Koo

ರಾಯಚೂರು: ಭಕ್ತರಿಗೆ ಸೇರಿದ್ದ 40 ಲಕ್ಷ ರೂಪಾಯಿ ಹಣವನ್ನು ಸ್ವಂತಕ್ಕೆ ಮಾಡಿಕೊಳ್ಳುವುದಕ್ಕೆ ಸಂಚು ರೂಪಿಸಿ ದರೋಡೆ ಕತೆಯನ್ನು ಸೃ ಷ್ಟಿಸಿದ ಸ್ವಾಮೀಜಿಯ ಕಳ್ಳಾಟ (Cheating case) ಬಯಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಪ್ರಾಥಮಿಕ ಹಂತದಲ್ಲಿಯೇ ಸ್ವಾಮೀಜಿಯ ಕತೆ ಬಹಿರಂಗಗೊಂಡಿದೆ.

ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿರೋ ವಿಜಯಮಹಾಂತೇಶ್ವರ ಶಾಖಾ ಮಠ ನುಗ್ಗಿದ ದರೋಡೆಕೋರರು ತಮ್ಮನ್ನು ಬೆದರಿಸಿ 40 ಲಕ್ಷ ರೂಪಾಯಿ ಹಣ ದರೋಡೆ ಮಾಡಿದ್ದಾರೆ ಎಂದು ಇಲ್ಲಿನ ವಿಜಯಮಹಾಂತೇಶ್ವರ ಶಾಖಾ ಮಠದ ಸಿದ್ದಲಿಂಗ ಸ್ವಾಮೀಜಿ ದೂರು ನೀಡಿದ್ದರು. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸಂಚಲನ ಮೂಡಿತ್ತು. ಮಠಕ್ಕೆ ನುಗ್ಗಿ ಹಣವನ್ನು ದರೋಡೆ ಮಾಡಿದವರನ್ನು ಬಂಧಿಸಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು. ಆದರೆ, ದೂರು ನೀಡಿದ ಸ್ವಾಮೀಜಿಯ ಕೆಲವೊಂದು ನಡೆ ಬಗ್ಗೆ ಅನುಮಾನಗೊಂಡಿದ್ದ ಪೊಲೀಸರು ಎಫ್​ಐಆರ್​ ದಾಖಲಿಸಿ ಒಂದೇ ದಿನದಲ್ಲಿ ದರೋಡೆ ಕೇಸನ್ನು ಭೇದಿಸಿದ್ದಾರೆ.

ಇದನ್ನೂ ಓದಿ: ತನಗೆ ಒಮ್ಮೆ ಕಚ್ಚಿದ ಹಾವಿಗೆ ಮೂರು ಬಾರಿ ಕಚ್ಚಿ ಸೇಡು ತೀರಿಸಿಕೊಂಡ ವ್ಯಕ್ತಿ; ಕೊನೆಗೆ ಬದುಕುಳಿದಿದ್ದು ಯಾರು?

ಮಠಕ್ಕೆ ಭಕ್ತರು ಸಾಕಷ್ಟು ಧನ ಸಹಾಯ ಮಾಡಿದ್ದರು. ಅಂತೆಯ 40 ಲಕ್ಷ ರೂಪಾಯಿ ಮಠದಲ್ಲಿತ್ತು. ಅದನ್ನು ತಮ್ಮ ಸ್ವಂತಕ್ಕೆ ಬಳಸಿಕೊಳ್ಳುವುದು ಸ್ವಾಮೀಜಿಯ ದುರಾಲೋಚನೆಯಾಗಿತ್ತು ಎಂಬುದು ಪೊಲೀಸರು ಪತ್ತೆ ಹಚ್ಚಿದ ಹಲವಾರು ಸಾಕ್ಷಿಗಳಿಂದ ಗೊತ್ತಾಗಿದೆ. ಹಣದ ಥೈಲಿಯನ್ನು ಬಾಚಿಕೊಳ್ಳುವುದಕ್ಕೆ ಸಜ್ಜಾಗಿದ್ದ ಸ್ವಾಮೀಜಿ ಪೊಲೀಸರ ಕೈಕೋಳಕ್ಕೆ ಕೈ ನೀಡುವ ಪರಿಸ್ಥಿತಿ ಎದುರಾಗಿದೆ.

ಪೊಲೀಸರು ಮಠ ಸೇರಿದಂತೆ ಸುತ್ತಮುತ್ತಲಿನ ಹಲವಾರು ಸಿಸಿ ಟಿವಿ ಕ್ಯಾಮೆರಾಗಳನ್ನು ವೀಕ್ಷಿಸಿದ್ದರು. ಆದರೆ ಗನ್​ ಇಟ್ಟು ಹಣ ತೆಗೆದುಕೊಂಡು ಹೋಗಿದ್ದಾರೆ ಎಂದು ಹೇಳಿದ ಸಮಯ ಸೇರಿದಂತೆ ಹತ್ತಿರದ ವೇಳೆಯಲ್ಲಿ ಯಾರೂ ಆ ಕಡೆಗೆ ಬಂದಿರಲಿಲ್ಲ ಹಾಗೂ ಹೋಗಿರಲಿಲ್ಲ ಎಂಬುದು ಖಾತರಿಯಾಗಿತ್ತು. ಅಂತೆಯೇ ತನಿಖೆ ಮುಂದುವರಿಸಿದಾಗ ಮಠದ ಸುತ್ತಲಿನ ಸಿಸಿ ಟಿವಿ ಕ್ಯಾಮೆರಾಗಳು ಆಫ್​ ಆಗಿರುವುದು ಗೊತ್ತಾಗಿದೆ. ಬಳಿಕ ಬೆರಳಚ್ಚು ಪರಿಣತರು ಬಂದು ಪರಿಶೀಲನೆ ನಡೆಸಿದಾಗ ಅಲ್ಲಿ ಸ್ವಾಮೀಜಿಯ ಬೆರಳಚ್ಚು ಮೂಡಿತ್ತು.

ಕ್ಯಾಮೆರಾಗಳನ್ನು ಆನ್​ – ಆಫ್​ ಮಾಡುವ ಸ್ವಿಚ್ ಮೇಲೆ ಸ್ವಾಮೀಜಿಯ ಬೆರಳಚ್ಚು ಕೊನೇ ಬಾರಿ ಮೂಡಿತ್ತು. ಹೀಗಾಗಿ ಕ್ಯಾಮೆರಾವನ್ನು ಉದ್ದೇಶಪೂರ್ವಕವಾಗಿ ಆಫ್ ಮಾಡಿರುವುದು ಬೆಳಕಿಗೆ ಬಂದಿದೆ. ತನಿಖೆ ವೇಳೆ ಮಠದಲ್ಲಿ ಯಾವುದೇ ದರೋಡೆ ಪ್ರಕರಣ ನಡೆದಿಲ್ಲ ಎಂಬುದಕ್ಕೆ ಸಾಕ್ಷಿ ಒದಗಿಸಿತ್ತು. ಹೀಗಾಗಿ ಅದು ಸ್ವಾಮೀಜಿಯ ಕಟ್ಟು ಕಥೆ ಎಂಬುದು ಗೊತ್ತಾಗಿದೆ.

ಜಮೀನು ವಿವಾದ; ನೀರಿನಲ್ಲಿ ಮುಳುಗಿಸಿ, ಕುಡುಗೋಲು, ಕಲ್ಲಿನಿಂದ ವ್ಯಕ್ತಿ ಮೇಲೆ ಹಲ್ಲೆ!

ತುಮಕೂರು: ಜಮೀನು‌ ವಿವಾದ ಹಿನ್ನೆಲೆಯಲ್ಲಿ (Assault Case) ಎರಡು ಕುಟುಂಬಗಳ ನಡುವೆ ಮಾರಾಮಾರಿಯೇ ನಡೆದಿದೆ. ತುಮಕೂರು‌ ಜಿಲ್ಲೆಯ ತುರುವೇಕೆರೆ ತಾಲೂಕಿನ ಸೊಂಡೆಮಾರ್ಗೋನಹಳ್ಳಿಯಲ್ಲಿ ಘಟನೆ ನಡೆದಿದೆ. ಶಶಿಕುಮಾರ್, ಲಕ್ಷ್ಮಣಯ್ಯ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ನಾಗೇಗೌಡನಪಾಳ್ಯದ ಮಂಜುನಾಥ್ ಎಂಬಾತನ ತಾಯಿ, ಪತ್ನಿ ಹಾಗೂ ಗಂಗಮ್ಮ, ನಾಗಯ್ಯ ಎಂಬುವವರು ಹಲ್ಲೆ ನಡೆಸಿದ್ದಾರೆ.
ಲಕ್ಷ್ಮಣಯ್ಯಗೆ ಸೇರಿದ ಸರ್ವೇ ನಂ.26ರ ಜಮೀನಿನ‌ ವಿಚಾರಕ್ಕೆ ಗಲಾಟೆ ನಡೆದಿದೆ. 1 ಎಕರೆ 10 ಗುಂಟೆಗೆ ಪಹಣಿ ಇದ್ದು, ಸರ್ವೆ ನಂ.26 ರಲ್ಲಿ ಇರುವ 15 ಗುಂಟೆ ಕರಾಬಿನ ವಿಚಾರಕ್ಕೆ ಮಾರಾಮಾರಿ ನಡೆದಿದೆ. ಈಗಾಗಲೇ 15 ಗುಂಟೆ ಕರಾಬು ಜಾಗದಲ್ಲಿ ಲಕ್ಷ್ಮಣಯ್ಯ ಉಳುಮೆ ಮಾಡಿಕೊಂಡಿದ್ದಾರೆ.

15 ಗುಂಟೆ ಕರಾಬು ನಮಗೆ ಸೇರಬೇಕೆಂದು ಪಕ್ಕದ ಜಮೀನಿನ ಮಂಜುನಾಥ ಕುಟುಂಬಸ್ಥರಿಂದ ಲಕ್ಷ್ಮಣಯ್ಯ ಮೇಲೆ ಹಲ್ಲೆ ನಡೆಸಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಜಗಳಕ್ಕೆ ಬಂದ ಮಂಜುನಾಥ್‌ ಕುಟುಂಬಸ್ಥರು, ಲಕ್ಷ್ಮಣಯ್ಯನನ್ನು ಹಿಡಿದು ನೀರಿನಲ್ಲಿ ಮುಳುಗಿಸಿ, ಕುಡುಗೋಲು ಹಾಗೂ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ.

Continue Reading

ವೈರಲ್ ನ್ಯೂಸ್

ತನಗೆ ಒಮ್ಮೆ ಕಚ್ಚಿದ ಹಾವಿಗೆ ಮೂರು ಬಾರಿ ಕಚ್ಚಿ ಸೇಡು ತೀರಿಸಿಕೊಂಡ ವ್ಯಕ್ತಿ; ಕೊನೆಗೆ ಬದುಕುಳಿದಿದ್ದು ಯಾರು?

ಬಿಹಾರದ ರಾಜೌಲಿ ಪ್ರದೇಶದಲ್ಲಿ ಜಾರ್ಖಂಡ್‌ ಮೂಲದ ಸಂತೋಷ್‌ ಲೋಹರ್‌ ಎಂಬ ವ್ಯಕ್ತಿಗೆ ಹಾವು ಕಚ್ಚಿದೆ. ಹಾವು ಕಚ್ಚಿದ ಬಳಿಕ ಗಾಬರಿಯಾಗದ ಆತನು ಆಸ್ಪತ್ರೆಗೆ ಓಡದೆ, ಹಾವಿಗೇ ವಾಪಸ್‌ ಮೂರು ಬಾರಿ ಕಚ್ಚಿದ್ದಾನೆ. ಇದಾದ ಬಳಿಕವೇ ಆತನು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾನೆ. ಹಾವು ಹಾಗೂ ವ್ಯಕ್ತಿ ನಡುವಿನ ಕಾಳಗದಲ್ಲಿ ಯಾರು ಗೆದ್ದರು? ಇಲ್ಲಿದೆ ಮಾಹಿತಿ.

VISTARANEWS.COM


on

Snake
Koo

ಪಟನಾ: ಹಾವುಗಳು (Snakes) ಎಂದರೆ ಎಲ್ಲರಿಗೂ ಭಯ ಇದ್ದೇ ಇರುತ್ತದೆ. ಸಣ್ಣ ಹಾವು ಕಚ್ಚಿದರೂ ಗಾಬರಿಯಾಗುತ್ತದೆ. ಕೂಡಲೇ ಆಸ್ಪತ್ರೆಗೆ ಹೋಗಿ, ಚಿಕಿತ್ಸೆ ಪಡೆಯುತ್ತೇವೆ. ಹಳ್ಳಿಯಲ್ಲಾದರೆ ಆಯುರ್ವೇದದಿಂದ ಹಾವಿನ ವಿಷಯವನ್ನು ನಿಗ್ರಹಿಸಲಾಗುತ್ತದೆ. ಅಷ್ಟರಮಟ್ಟಿಗೆ, ಹಾವು ಕಚ್ಚಿದರೆ (Snake Bite) ಗಾಬರಿ, ಆತಂಕ, ಭಯ ಆಗುತ್ತದೆ. ಆದರೆ, ಬಿಹಾರದಲ್ಲೊಬ್ಬ (Bihar) ಭೂಪನು, ತನಗೆ ಕಚ್ಚಿದ ಹಾವಿಗೇ ವಾಪಸ್‌ ಮೂರು ಬಾರಿ ಕಚ್ಚಿದ್ದಾನೆ. ಎಂತಹ ಅದೃಷ್ಟ ನೋಡಿ, ಹಾವು ಕಚ್ಚಿಸಿಕೊಂಡ ವ್ಯಕ್ತಿಯು ಬದುಕುಳಿದರೆ, ಈತನಿಂದ ಕಚ್ಚಿಸಿಕೊಂಡ ಹಾವು ಸತ್ತುಹೋಗಿದೆ.

ಹೌದು, ಬಿಹಾರದ ರಾಜೌಲಿ ಪ್ರದೇಶದಲ್ಲಿ ಇಂತಹದ್ದೊಂದು ವಿಸ್ಮಯಕಾರಿ ಘಟನೆ ನಡೆದಿದೆ. ಜಾರ್ಖಂಡ್‌ ಮೂಲದ ಸಂತೋಷ್‌ ಲೋಹರ್‌ ಎಂಬ ವ್ಯಕ್ತಿಯು ರೈಲ್ವೆ ಲೈನ್‌ನಲ್ಲಿ ಉದ್ಯೋಗ ಮಾಡುತ್ತಿದ್ದಾನೆ. ಈತನ ದಿನದ ಕೆಲಸ ಮುಗಿಸಿ ರೌಜಲಿಯಲ್ಲಿರುವ ಕ್ಯಾಂಪ್‌ನಲ್ಲಿ ಕಳೆದ ಮಂಗಳವಾರ (ಜುಲೈ 2) ಮಲಗಿದ್ದಾನೆ. ಇದೇ ವೇಳೆ ಹಾವೊಂದು ಸಂತೋಷ್‌ ಲೋಹರ್‌ಗೆ ಕಚ್ಚಿದೆ. ಹಾವು ಕಚ್ಚಿದ ಬಳಿಕ ಗಾಬರಿಯಾಗದ, ಆಸ್ಪತ್ರೆಗೆ ಓಡದ ಈತನು ಕಬ್ಬಿಣದ ರಾಡ್‌ನಿಂದ ಹಾವನ್ನು ಹಿಡಿದು, ಅದಕ್ಕೇ ಮೂರು ಬಾರಿ ಕಚ್ಚಿದ್ದಾನೆ. ಈತನು ಕಚ್ಚಿದ ತೀವ್ರತೆಗೆ ಹಾವೇ ಸತ್ತುಹೋಗಿದೆ.

Snake bite

ಸಂತೋಷ್‌ ಲೋಹರ್‌ನನ್ನು ಕೂಡಲೇ ಆತನ ಸಹೋದ್ಯೋಗಿಗಳು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಈತನು ಬಹುತೇಕ ಗುಣಮುಖನಾಗಿದ್ದಾನೆ. “ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ದಾಖಲಿಸಿದ ಕಾರಣ ವ್ಯಕ್ತಿಯು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಶೀಘ್ರದಲ್ಲೇ ಆತನನ್ನು ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಮಾಡಲಾಗುವುದು” ಎಂದು ಚಿಕಿತ್ಸೆ ನೀಡಿದ ಡಾ.ಸತೀಶ್‌ ಚಂದ್ರ ಅವರು ಮಾಹಿತಿ ನೀಡಿದ್ದಾರೆ. ಈತನ ಸಾಹಸವನ್ನು ಕೇಳಿದ ಸುತ್ತಮುತ್ತಲಿನ ಗ್ರಾಮಸ್ಥರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಸಂತೋಷ್‌ ಲೋಹರ್‌ನು ಹಾವಿಗೆ ವಾಪಸ್‌ ಕಚ್ಚಿದ ಕುರಿತು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಈತನ ಸಂದರ್ಶನವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. “ನಮ್ಮ ಊರಿನಲ್ಲಿ ಒಂದು ಮಾತಿದೆ. ನಮಗೇನಾದರೂ ಹಾವು ಕಚ್ಚಿದರೆ, ಅದಕ್ಕೆ ಎರಡು ಬಾರಿ ವಾಪಸ್‌ ಕಚ್ಚಬೇಕು ಎಂಬ ಪದ್ಧತಿ ಇದೆ. ಅದರಂತೆ, ನಾನು ಹಾವಿಗೆ ವಾಪಸ್‌ ಕಚ್ಚಿದೆ. ಇದರಿಂದ ನಾನು ಬದುಕುಳಿದೆ” ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಸ್ಥಳೀಯರ ಪ್ರಕಾರ, ಈತನಿಗೆ ಕಚ್ಚಿದ ಹಾವಿನಲ್ಲಿ ವಿಷ ಇರಲಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Viral News: ಒಂದು ತಿಂಗಳಲ್ಲಿ ಐದು ಬಾರಿ ಹಾವು ಕಡಿತ; ಪವಾಡ ರೀತಿಯಲ್ಲಿ ವ್ಯಕ್ತಿ ಬಜಾವ್‌!

Continue Reading

ಪ್ರಮುಖ ಸುದ್ದಿ

Mohammed Siraj : ವೇಗದ ಬೌಲರ್​ ಮೊಹಮ್ಮದ್​ ಸಿರಾಜ್​ಗೆ ಹೈದರಾಬಾದ್​​ನಲ್ಲಿ ಭರ್ಜರಿ ಸ್ವಾಗತ, ಇಲ್ಲಿದೆ ವಿಡಿಯೊ

Mohammed Siraj : ವಿಜಯಶಾಲಿ ಭಾರತೀಯ ತಂಡವು ಓಪನ್-ಟಾಪ್ ಬಸ್​ನಲ್ಲಿ ವಿಜಯ ಮೆರವಣಿಗೆಯಲ್ಲಿ ಭಾಗವಹಿಸಿತು. ಸಾವಿರಾರು ಅಭಿಮಾನಿಗಳು ಅವರಿಗೆ ಉತ್ಸಾಹಭರಿತ ಸ್ವಾಗತ ನೀಡಿದರು. ಮೆರವಣಿಗೆಯು ಮರೀನ್ ಡ್ರೈವ್ ನಿಂದ ವಾಂಖೆಡೆ ಕ್ರೀಡಾಂಗಣದವರೆಗೆ ನಡೆಯಿತು. 30,000 ಕ್ಕೂ ಹೆಚ್ಚು ಅಭಿಮಾನಿಗಳು ಕ್ರೀಡಾಂಗಣದಲ್ಲಿದ್ದರು,

VISTARANEWS.COM


on

Mohammed Siraj
Koo

ಬೆಂಗಳೂರು: ಇತ್ತೀಚೆಗೆ ಮುಕ್ತಾಯಗೊಂಡ ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ ವಿಜಯದ ಅಭಿಯಾನದ ನಂತರ ಟೀಮ್ ಇಂಡಿಯಾ ತಾರೆಯರಿಗೆ ಭಾರತದಲ್ಲಿ ಭರ್ಜರಿ ಸ್ವಾಗತ ಸಿಗುತ್ತಿದೆ. ಮುಂಬೈನಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಅಮೋಘ ಬೆಂಬಲ ಪಡೆದುಕೊಂಡಿದ್ದ ಭಾರತ ತಂಡದ ಆಟಗಾರರು ಇದೀಗ ತಮ್ಮ ತಮ್ಮ ತವರಿಗೆ ಮರಳಿದ್ದಾರೆ. ಅವರಿಗೆ ಅಲ್ಲಿಯೂ ದೊಡ್ಡ ಮಟ್ಟ ಶ್ಲಾಘನೆ ದೊರಕಿದೆ. ವೇಗದ ಬೌಲರ್​ ಮೊಹಮ್ಮದ್ ಸಿರಾಜ್​ (Mohammed Siraj ) ಹೈದಾರಾದಬಾದ್​ನಲ್ಲಿ ಭರ್ಜರಿ ಸ್ವಾಗತ ಗಿಟ್ಟಿಸಿಕೊಂಡರು.

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ 7 ರನ್​ಗಳ ಭರ್ಜರಿ ಜಯ ಸಾಧಿಸಿದೆ. 11 ವರ್ಷಗಳ ಅಂತರದ ನಂತರ ಐಸಿಸಿ ಪಂದ್ಯಾವಳಿಯನ್ನು ಗೆಲ್ಲುವ ಮೂಲಕ ಭಾರತದ ಹಲವು ವರ್ಷಗಳ ನೋವನ್ನು ಮರೆಯಿತು. ಮೆನ್ ಇನ್ ಬ್ಲೂ ತಂಡವು ಹಲವಾರು ಸಂದರ್ಭಗಳಲ್ಲಿ ಪ್ರಶಸ್ತಿ ಗೆಲ್ಲುವಲ್ಲಿ ಸೋತಿತ್ತು. ಕೊನೆಗೂ ಅವರು ತಮ್ಮ ನಿರೀಕ್ಷೆಯನ್ನು ಮೀರಿದ್ದಾರೆ.

ತಂಡವು ಮಂಗಳವಾರ ಭಾರತಕ್ಕೆ ಇಳಿಯಬೇಕಿತ್ತು. ಬೆರಿಲ್ ಚಂಡಮಾರುತದಿಂದಾಗಿ ವೆಸ್ಟ್​ ಇಂಡೀಸ್​​ನ ಬಾರ್ಬಡೋಸ್​ನಿಂದ ಅವರ ನಿರ್ಗಮನವು ಎರಡು ದಿನ ವಿಳಂಬವಾಯಿತು. ಅಂತಿಮವಾಗಿ ಬುಧವಾರ ದ್ವೀಪವನ್ನು ಬಿಡುವಲ್ಲಿ ಯಶಸ್ವಿಯಾದರು. ಗುರುವಾರ ಬೆಳಿಗ್ಗೆ ಭಾರತಕ್ಕೆ ಬಂದಿಳಿದರು. ಮುಂಬೈಗೆ ತೆರಳುವ ಮೊದಲು ತಂಡವು ನವದೆಹಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ ಇಳಿದು ಪ್ರಧಾನಿ ನರೇಂದ್ರ ಮೋದಿಯವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿತು.

ಇದನ್ನೂ ಓದಿ: Hardik Pandya : ವಿಶ್ವ ಕಪ್​ ಗೆದ್ದ ಹಾರ್ದಿಕ್​ ಪಾಂಡ್ಯಗೆ ಮುತ್ತು ಕೊಟ್ಟು ಅಭಿನಂದಿಸಿದ ಇಶಾನ್ ಕಿಶನ್​

ವಿಜಯಶಾಲಿ ಭಾರತೀಯ ತಂಡವು ಓಪನ್-ಟಾಪ್ ಬಸ್​ನಲ್ಲಿ ವಿಜಯ ಮೆರವಣಿಗೆಯಲ್ಲಿ ಭಾಗವಹಿಸಿತು. ಸಾವಿರಾರು ಅಭಿಮಾನಿಗಳು ಅವರಿಗೆ ಉತ್ಸಾಹಭರಿತ ಸ್ವಾಗತ ನೀಡಿದರು. ಮೆರವಣಿಗೆಯು ಮರೀನ್ ಡ್ರೈವ್ ನಿಂದ ವಾಂಖೆಡೆ ಕ್ರೀಡಾಂಗಣದವರೆಗೆ ನಡೆಯಿತು. 30,000 ಕ್ಕೂ ಹೆಚ್ಚು ಅಭಿಮಾನಿಗಳು ಕ್ರೀಡಾಂಗಣದಲ್ಲಿದ್ದರು, ಭಾರತ ತಂಡ ಮತ್ತು ಅಭಿಮಾನಿಗಳು ಒಟ್ಟಾಗಿ ಸ್ಮರಣೀಯ ವಿಜಯವನ್ನು ಆಚರಿಸಿದರು. ಬಿಸಿಸಿಐನಿಂದ ಸನ್ಮಾನಿಸಲ್ಪಡುವ ಮೊದಲು ಆಟಗಾರರು ಪ್ರೇಕ್ಷಕರೊಂದಿಗೆ ನೃತ್ಯ ಮಾಡಿದರು.

ಮೊಹಮ್ಮದ್ ಸಿರಾಜ್​​ಗೆ ಹೈದರಾಬಾದ್ ಸ್ವಾಗತ

ಗುರುವಾರ ಮುಂಬೈನಲ್ಲಿ ವಿಜಯೋತ್ಸವದ ನಂತರ ಭಾರತದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಶುಕ್ರವಾರ ಸಂಜೆ ತಮ್ಮ ತವರು ಪಟ್ಟಣ ಹೈದರಾಬಾದ್​ಗೆ ಬಂದಿಳಿದರು. ನಿರೀಕ್ಷೆಯಂತೆ, ವಿಮಾನ ನಿಲ್ದಾಣದ ಹೊರಗೆ ಭಾರಿ ಜನಸಮೂಹ ಅವರಿಗಾಗಿ ಕಾಯುತ್ತಿತ್ತು. ಅಭಿಮಾನಿಗಳು ತಮ್ಮ ತವರು ಆಟಗಾರನನ್ನು ಸ್ವಾಗತಿಸುತ್ತಿದ್ದಂತೆ ಎಲ್ಲೆಡೆ ‘ಇಂಡಿಯಾ, ಇಂಡಿಯಅ ‘ ಘೋಷಣೆಗಳು ಮೊಳಗಿದವು.

ಮೊಹಮ್ಮದ್ ಸಿರಾಜ್ ಟಿ 20 ವಿಶ್ವಕಪ್​​ನಲ್ಲಿ ಮೂರು ಪಂದ್ಯಗಳನ್ನು ಆಡಿದ್ದಾರೆ. ಪಂದ್ಯಾವಳಿಯ ಯುಎಸ್ಎ ಲೆಗ್ ಮುಗಿದ ಕೂಡಲೇ ಕುಲ್ದೀಪ್ ಯಾದವ್ ಅವರನ್ನು ಆಡುವ ಹನ್ನೊಂದರಲ್ಲಿ ಸೇರಿಸಲಾಗಿದೆ. ಕೆರಿಬಿಯನ್ ಪರಿಸ್ಥಿತಿಗಳು ಸ್ಪಿನ್ನರ್​ಗಳಿಗೆ ಹೆಚ್ಚು ಅನುಕೂಲಕರವಾಗಿದ್ದರಿಂದ, ಸಿರಾಜ್ ಬದಲಿಗೆ ಕುಲ್ದೀಪ್ ಅವರನ್ನು ತಂಡಕ್ಕೆ ಕರೆತಂದಿತು.

ಐದು ಪಂದ್ಯಗಳಲ್ಲಿ ಕುಲ್ದೀಪ್ 10 ವಿಕೆಟ್​ಗಳನ್ನು ಪಡೆದು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಸಿರಾಜ್ 3 ಪಂದ್ಯಗಳಲ್ಲಿ 1 ವಿಕೆಟ್ ಪಡೆದಿದ್ದರು. .

Continue Reading
Advertisement
Dina Bhavishya
ಭವಿಷ್ಯ4 mins ago

Dina Bhavishya : ಈ ರಾಶಿಯವರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ

Cheating Case
ಪ್ರಮುಖ ಸುದ್ದಿ5 hours ago

Cheating case : ಭಕ್ತರ 40 ಲಕ್ಷ ರೂ. ಗುಳುಂ ಮಾಡಲು ದರೋಡೆ ಕತೆ ಕಟ್ಟಿದ ಸ್ವಾಮೀಜಿ!

Snake
ವೈರಲ್ ನ್ಯೂಸ್5 hours ago

ತನಗೆ ಒಮ್ಮೆ ಕಚ್ಚಿದ ಹಾವಿಗೆ ಮೂರು ಬಾರಿ ಕಚ್ಚಿ ಸೇಡು ತೀರಿಸಿಕೊಂಡ ವ್ಯಕ್ತಿ; ಕೊನೆಗೆ ಬದುಕುಳಿದಿದ್ದು ಯಾರು?

Mohammed Siraj
ಪ್ರಮುಖ ಸುದ್ದಿ6 hours ago

Mohammed Siraj : ವೇಗದ ಬೌಲರ್​ ಮೊಹಮ್ಮದ್​ ಸಿರಾಜ್​ಗೆ ಹೈದರಾಬಾದ್​​ನಲ್ಲಿ ಭರ್ಜರಿ ಸ್ವಾಗತ, ಇಲ್ಲಿದೆ ವಿಡಿಯೊ

Akshata Murty
ವಿದೇಶ6 hours ago

Akshata Murty: ರಿಷಿ ಸುನಕ್‌ ವಿದಾಯದ ಭಾಷಣದ ವೇಳೆ ಅಕ್ಷತಾ ಮೂರ್ತಿ ಧರಿಸಿದ್ದ ಡ್ರೆಸ್ ಬೆಲೆ 42 ಸಾವಿರ ರೂ.!

Hardik Pandya
ಪ್ರಮುಖ ಸುದ್ದಿ6 hours ago

Hardik Pandya : ವಿಶ್ವ ಕಪ್​ ಗೆದ್ದ ಹಾರ್ದಿಕ್​ ಪಾಂಡ್ಯಗೆ ಮುತ್ತು ಕೊಟ್ಟು ಅಭಿನಂದಿಸಿದ ಇಶಾನ್ ಕಿಶನ್​

Weather News
ಉತ್ತರ ಕನ್ನಡ7 hours ago

Weather News: ಭಾರಿ ಮಳೆ; ಕರಾವಳಿಯಾದ್ಯಂತ ಶಾಲೆ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Mahindra Marazzo
ಪ್ರಮುಖ ಸುದ್ದಿ7 hours ago

Mahindra Marazzo : ಈ 7 ಸೀಟರ್​ ಕಾರಿನ ಉತ್ಪಾದನೆ ನಿಲ್ಲಿಸಿದ ಮಹೀಂದ್ರಾ

BSP President
ದೇಶ7 hours ago

BSP President: ತಮಿಳುನಾಡಿನಲ್ಲಿ ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಹತ್ಯೆ; ರಾಜಕೀಯ ವೈಷಮ್ಯ ಕಾರಣ?

Dengue Fever
ಕರ್ನಾಟಕ8 hours ago

Dengue Fever: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 155 ಡೆಂಗ್ಯೂ ಕೇಸ್‌ಗಳು ಪತ್ತೆ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ11 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ13 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ13 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ15 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ17 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು18 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು18 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ23 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ2 days ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಟ್ರೆಂಡಿಂಗ್‌