Kannada New Movie: ಮೊಬೈಲ್ ಮುಂಚಿನ ಪ್ರೇಮಕಥೆ 'ಕಾಗದ' ಜುಲೈ 5ರಂದು ಬಿಡುಗಡೆ - Vistara News

ಕರ್ನಾಟಕ

Kannada New Movie: ಮೊಬೈಲ್ ಮುಂಚಿನ ಪ್ರೇಮಕಥೆ ‘ಕಾಗದ’ ಜುಲೈ 5ರಂದು ಬಿಡುಗಡೆ

Kannada New Movie: ಮೊಬೈಲ್ ಬರುವ ಮುಂಚೆ ನಡೆದ ಪ್ರೇಮಕಥೆಯಾದ “ಕಾಗದ” ಚಿತ್ರ ಇದೇ ವಾರ ಜುಲೈ 5 ರಂದು ತೆರೆಗೆ ಬರುತ್ತಿದೆ. ಅರುಣ್ ಕುಮಾರ್ ಆಂಜನೇಯ ಅವರ ನಿರ್ಮಾಣದಲ್ಲಿ ರಂಜಿತ್ ನಿರ್ದೇಶಿಸಿದ್ದು, ಆದಿತ್ಯ ಎಂಬ ನೂತನ ಪ್ರತಿಭೆ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಬಾಲನಟಿಯಾಗಿ ಜನಪ್ರಿಯರಾಗಿರುವ ಅಂಕಿತ ಜಯರಾಂ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದು, ನೇಹಾ ಪಾಟೀಲ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

Kannada New Movie kagada film released on 5th July
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅರುಣ್ ಕುಮಾರ್ ಆಂಜನೇಯ ಅವರ ನಿರ್ಮಾಣದಲ್ಲಿ ರಂಜಿತ್ ನಿರ್ದೇಶಿಸಿರುವ ಮೊಬೈಲ್ ಬರುವ ಮುಂಚೆ ನಡೆದ ಪ್ರೇಮಕಥೆಯಾದ “ಕಾಗದ” ಚಿತ್ರ (Kannada New Movie) ಇದೇ ಜುಲೈ 5ರಂದು ತೆರೆಗೆ ಬರುತ್ತಿದೆ.

“ಕಾಗದ” ಮೊಬೈಲ್ ಬರುವ ಮುಂಚೆ ನಡೆದ ಪ್ರೇಮಕಥೆ. 2005 ರ ಕಾಲಘಟ್ಟದ ಕಥೆಯೂ ಕೂಡ. ಹಳ್ಳಿಹಳ್ಳಿಗಳ ನಡುವಿನ ವೈಷಮ್ಯದ ನಡುವೆ ಅರಳಿದ ಪ್ರೇಮಕಥೆಯೂ ಹೌದು.

ಆದಿತ್ಯ ಎಂಬ ನೂತನ ಪ್ರತಿಭೆ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಬಾಲನಟಿಯಾಗಿ ಜನಪ್ರಿಯರಾಗಿರುವ ಅಂಕಿತ ಜಯರಾಂ “ಕಾಗದ” ಚಿತ್ರದ ನಾಯಕಿ. ನೇಹಾ ಪಾಟೀಲ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಲ ರಾಜ್ವಾಡಿ, ನೀನಾಸಂ ಅಶ್ವಥ್, ಮಠ ಕೊಪ್ಪಳ, ಶಿವಮಂಜು ಮುಂತಾದವರು ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: IND vs SA : ಭಾರತ ವಿರುದ್ಧ ಟಿ20 ಸರಣಿಗೆ ದಕ್ಷಿಣ ಆಫ್ರಿಕಾ ಮಹಿಳಾ ತಂಡ ಪ್ರಕಟ

ನಾಲ್ಕು ಹಾಡುಗಳಿರುವ “ಕಾಗದ” ಚಿತ್ರಕ್ಕೆ ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. ವೀನಸ್ ನಾಗರಾಜ್ ಮೂರ್ತಿ ಛಾಯಾಗ್ರಹಣ ಹಾಗೂ ಪವನ್ ಗೌಡ ಸಂಕಲನ ಈ ಚಿತ್ರಕ್ಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Channapatna By Election: ಚನ್ನಪಟ್ಟಣದಲ್ಲಿ ನನ್ನ ಪತ್ನಿ ಸ್ಪರ್ಧಿಸಲ್ಲ: ಸಂಸದ ಡಾ.ಸಿ.ಎನ್. ಮಂಜುನಾಥ್‌ ಸ್ಪಷ್ಟನೆ

Channapatna By Election: ಚನ್ನಪಟ್ಟಣದಲ್ಲಿ ಪತ್ನಿ ಸ್ಪರ್ಧೆ ಬಗ್ಗೆ ಬಿಜೆಪಿ ಸಂಸದ ಡಾ.ಸಿಎನ್‌.ಮಂಜುನಾಥ್‌ ಪ್ರತಿಕ್ರಿಯಿಸಿದ್ದಾರೆ. ಚನ್ನಪಟ್ಟಣದಲ್ಲಿ ಯಾವುದೇ ಕಾರಣಕ್ಕೂ ಪತ್ನಿ ಅನುಸೂಯ ಸ್ಪರ್ಧೆ ಮಾಡಲ್ಲ ಎಂದು ತಿಳಿಸಿದ್ದಾರೆ.

VISTARANEWS.COM


on

Channapatna By Election
Koo

ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಗೆ (Channapatna By Election) ಅನುಸೂಯ ಸ್ಪರ್ಧೆ ಮಾಡುತ್ತಾರೆ ಎಂಬ ವದಂತಿ ಇದೆ. ಆದರೆ, ಯಾವುದೇ ಕಾರಣಕ್ಕೂ ಅನುಸೂಯ ಸ್ಪರ್ಧೆ ಮಾಡಲ್ಲ ಎಂದು ಬಿಜೆಪಿ ಸಂಸದ ಡಾ.ಸಿ.ಎನ್‌. ಮಂಜುನಾಥ್‌ ಸ್ಪಷ್ಟನೆ ನೀಡಿದ್ದಾರೆ.

ಚನ್ನಪಟ್ಟಣದಲ್ಲಿ ಪತ್ನಿ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ನೂರಕ್ಕೆ ನೂರು ಪರ್ಸೆಂಟ್ ನನ್ನ ಪತ್ನಿ ನಿಲ್ಲಲ್ಲ. ಕೆಲವು ಪತ್ರಿಕೆ, ಮಾಧ್ಯಮದಲ್ಲಿ ಅನಸೂಯ ಸ್ಪರ್ಧಿಸುತ್ತಾರೆ ಎಂದು ಬಂದಿದೆ. ಇದು ನಮಗೆ ಬಹಳಷ್ಟು ಮುಜುಗರ ತರಿಸಿದೆ. ಅನುಸೂಯ ಯಾವುದೇ ಕಾರಣಕ್ಕೂ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ತಿಳಿಸಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಡಿ.ಕೆ.ಶಿವಕುಮಾರ್ ಅವರು ಸ್ಪರ್ಧಿಸುವ ಸಾಧ್ಯತೆ ಇರುವುದರಿಂದ ಡಿ.ಕೆ. ಸಹೋದರರನ್ನು ಕಟ್ಟಿ ಹಾಕುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು, ಸಂಸದ ಡಾ.ಸಿ.ಎನ್.ಮಂಜುನಾಥ್ ಪತ್ನಿಯನ್ನು ಕಣಕ್ಕಿಳಿಸಲಿವೆ ಎಂದು ಚರ್ಚೆಯಾಗುತ್ತಿತ್ತು. ಮಹಿಳಾ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಅನಸೂಯ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಚಿಂತನೆ ನಡೆದಿದೆ ಎಂದು ಹೇಳಲಾಗಿತ್ತು. ಇದಕ್ಕೆ ಡಾ.ಮಂಜುನಾಥ್‌ ಅವರು ಸ್ಪಷ್ಟನೆ ನೀಡಿದ್ದಾರೆ.

ಡೆಂಗ್ಯುಗೆ ಕೋವಿಡ್‌ ಮಾದರಿ ಉಚಿತ ಚಿಕಿತ್ಸೆ ಕೊಡಿ, ಮೆಡಿಕಲ್‌ ಎಮರ್ಜೆನ್ಸಿ ಘೋಷಿಸಿ

ಡೆಂಗ್ಯು ಜ್ವರಕ್ಕೆ (Dengue Fever) ಅಡ್ಮಿಟ್ ಆದವರಿಗೆ, ಕೋವಿಡ್ (Covid 19) ಸಂದರ್ಭದಲ್ಲಿ ಯಾವ ರೀತಿ ಉಚಿತ ಚಿಕಿತ್ಸೆ ನೀಡಲಾಯಿತೋ ಅದೇ ರೀತಿ ಕನಿಷ್ಠ ಮಾನದಂಡದಲ್ಲಿ ಉಚಿತ ಚಿಕಿತ್ಸೆ ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ (Bangalore Rural) ಸಂಸದ ಡಾ. ಸಿಎನ್‌ ಮಂಜುನಾಥ್‌ (Dr CN Manjunath) ಹೇಳಿದ್ದಾರೆ.

ಇದು ಸರ್ಕಾರಕ್ಕೆ ನನ್ನ ಸಲಹೆ. ಡೆಂಗ್ಯೂ ಫಿವರ್‌ ನಿಯಂತ್ರಣ ಅಂದರೆ ಸೊಳ್ಳೆ ನಿಯಂತ್ರಣ. ಸೊಳ್ಳೆ ನಿಯಂತ್ರಣ ಆದರೆ ಮಾತ್ರ ಡೆಂಗ್ಯು ನಿಯಂತ್ರಣ ಆಗಲಿದೆ. ಮಳೆಗಾಲ ಪ್ರಾರಂಭದಲ್ಲಿ ಸೊಳ್ಳೆಯಿಂದ ಹರಡುವ ಕಾಯಿಲೆ ಬರುತ್ತದೆ. ಡೆಂಗ್ಯು ತಡೆಗಟ್ಟದಿದ್ರೆ ಚಿಕನ್ ಗುನ್ಯ, ಜೀಕಾ ವೈರಸ್ ಬರಬಹುದು. ಕೋವಿಡ್ ಪ್ಯಾಂಡಮಿಕ್ ಅಂದೆವು. ಡೆಂಗ್ಯು ಎಂಡಮಿಕ್ ಆಗಿದೆ. ಎಂಡೆಮಿಕ್ ಅಂದರೆ ರಾಜ್ಯಾದ್ಯಂತ ಹರಡಿರೋದು. ಇದಕ್ಕೆ ತುರ್ತು ಚಿಕಿತ್ಸೆ ಅಗತ್ಯವಿದೆ. ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡಬೇಕು ಎಂದು ಮಂಜುನಾಥ್‌ ಹೇಳಿದ್ದಾರೆ.

ಇದನ್ನೂ ಓದಿ | Dengue Fever: ಸಿಲಿಕಾನ್‌ ಸಿಟಿಯಲ್ಲಿ ಡೆಂಗ್ಯು ಜ್ವರಕ್ಕೆ ಬಾಲಕ ಬಲಿ, ರಾಜಧಾನಿಯಲ್ಲಿ 2ನೇ ಸಾವು

ಸರಕಾರ ಡೆಂಗ್ಯುಗೆ ದರ ನಿಗದಿ ಮಾಡಿದೆ. ಡಯೋಗ್ನಾಸಿಸ್‌ಗಳು ಹೆಚ್ಚು ವಸೂಲಿ ಮಾಡಿದರೆ,‌ ಅವುಗಳ ಬಾಗಿಲು ಮುಚ್ಚಿಸಬೇಕು. ಡೆಂಗ್ಯು ಹರಡಲು ಕಾರಣ ಮಳೆಗಾಲದಲ್ಲಿ ನೀರು ನಿಲ್ಲೋದರಿಂದ. ಹಲವೆಡೆ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಅಲ್ಲಿ ಸೊಳ್ಳೆಗಳು ಉತ್ಪತ್ತಿ ಆಗುತ್ತಿವೆ. ಈಡಿಸ್ ಈಜಿಪ್ಟೈ ಸೊಳ್ಳೆಯಿಂದ ಕಾಯಿಲೆ‌ ಹರಡುತ್ತಿದೆ. ರಾಜ್ಯದಲ್ಲಿ ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಆಗಬೇಕು. ಪ್ರತ್ಯೇಕ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು. ಮಳೆಗಾಲ ಆರಂಭವಾದ ಮೇಲೆ ಎಚ್ಚೆತ್ತುಕೊಂಡಿದ್ದಾರೆ. ಈಗ ಯುದ್ಧೋಪಾದಿಯಲ್ಲಿ ಕೆಲಸ ಮಾಡಬೇಕಿದೆ. ಸರ್ಕಾರ ಮತ್ತು ಸಾರ್ವಜನಿಕರು ಇಬ್ಬರದ್ದೂ ಜವಾಬ್ದಾರಿ ಇದೆ ಎಂದು ಡಾ. ಮಂಜುನಾಥ್‌ ಎಚ್ಚರಿಸಿದ್ದಾರೆ.

ಡೆಂಗ್ಯು ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರ್ತಿದೆ. ಶಾಲೆಗಳಿಗೆ ಸರ್ಕ್ಯೂಲರ್ ಹೊರಡಿಸಬೇಕು. ಮಕ್ಕಳಲ್ಲಿ ಆರೋಗ್ಯ ಹದಗೆಟ್ಟಿದ್ದರೆ ಕ್ರಮ ತೆಗೆದುಕೊಳ್ಳಬೇಕು. ಈಗಾಗಲೇ ಏಳೆಂಟು ಜನ ಸಾವನ್ನಪ್ಪಿದ್ದಾರೆ. ಸೊಳ್ಳೆ ನಿಯಂತ್ರಣ ಮಾಡೋದ್ರಲ್ಲಿ ಸರ್ಕಾರ ಎಡವಿದೆ. ಏನೇನೋ ಫ್ರೀ ಕೊಡ್ತೀವಿ, ಯಾವುದನ್ನೋ ಉಚಿತ ಕೊಡ್ತಿದ್ದಾರೆ. ಅದರ ಜೊತೆಗೆ ಸ್ಲಂಗಳಲ್ಲಿ, ವಠಾರದಲ್ಲಿ ವಾಸವಾಗಿದ್ದವರ ಮನೆಗೆ ಸೊಳ್ಳೆಪರದೆಯನ್ನು ಉಚಿತವಾಗಿ ನೀಡಬೇಕು. ಇದರಿಂದ ಬಹಳಷ್ಟು ರೋಗ ನಿಯಂತ್ರಣ ಆಗಲಿದೆ ಎಂದು ಮಂಜುನಾಥ್ ಸೂಚಿಸಿದ್ದಾರೆ. ‌

ಡೆಂಗ್ಯು ಬಂದು ಮತ್ತೆ ಹುಷಾರಾಗುವಾಗ ಪ್ಲೇಟ್ ಲೆಟ್ಸ್ ಕಡಿಮೆ ಆಗುತ್ತೆ. ಜೊತೆಗೆ ದೇಹದಲ್ಲಿ ನೀರು ತುಂಬಿಕೊಳ್ಳುತ್ತದೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವರ‌ ಗಮನಕ್ಕೂ ನಾನು ತರಲಿದ್ದೇನೆ. ಅವಶ್ಯಕತೆ ಇರುವವರಿಗೆ ಮೊದಲೇ ಚಿಕಿತ್ಸೆ ನೀಡಬೇಕು. ಡೆಂಗ್ಯೂ ಕಾಯಿಲೆಗೆ ಬೇಕಾದ ಮಾತ್ರೆಗಳ ಕೊರತೆ ಕೂಡ ಎದುರಾಗಿದೆ. ವಾರ್ ರೂಮ್ ಮೂಲಕ ಮಾನಿಟರ್ ಮಾಡಬೇಕು. ಮುಂದುವರೆದ ದೇಶಗಳಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ಕಾಯಿಲೆ ತಡೆದಿದ್ದಾರೆ. ಮಸ್ಕ್ಯೂಟೋ ರೆಪೆಲೆಂಟ್ಸ್ ಅಂತ ಸ್ಟಿಕರ್ ಬರುತ್ತಿದ್ದು. ಅದನ್ನ ಇಲ್ಲೂ ಹಾಕಬೇಕು. ಇದರಿಂದ ಮಕ್ಕಳಿಗೆ ಸೊಳ್ಳೆ ಕಡಿತ ತಪ್ಪಿಸಬಹುದು ಎಂದು ಅವರು ಹೇಳಿದರು.

ಇದನ್ನೂ ಓದಿ | Zika Virus : ಡೆಂಗ್ಯೂ ಬೆನ್ನಲ್ಲೇ ಶಿವಮೊಗ್ಗದಲ್ಲಿ ಝಿಕಾ ವೈರಸ್‌ಗೆ ವೃದ್ಧ ಬಲಿ

ಜಪಾನ್, ಸಿಂಗಾಪುರ್, ಅಮೇರಿಕಾದಲ್ಲಿ ಡೆಂಗ್ಯೂ ಕಾಯಿಲೆಗೆ ಬೇಕಾದ ಮೆಡಿಸಿನ್ ಇದೆ. ಅವುಗಳನ್ನು ರಾಜ್ಯ ಸರ್ಕಾರ ತರಿಸಿಕೊಳ್ಳಬೇಕು. ಇಲ್ಲ ಅಲ್ಲಿ ನೀರು ನಿಲ್ಲೋದನ್ನ ತಡೆಗಟ್ಟಬೇಕು. ಸೊಳ್ಳೆ ನಿಯಂತ್ರಣ ಮಾಡಲು ಸ್ಪ್ರೇ ಮಾಡುವವರು ಕಾಣುತ್ತಿಲ್ಲ. ಬಿಬಿಎಂಪಿ ಎಚ್ಚೆತ್ತುಕೊಳ್ಳಬೇಕು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Continue Reading

ಉದ್ಯೋಗ

Job Alert: ಬೆಂಗಳೂರಿನಲ್ಲಿದೆ ಉದ್ಯೋಗಾವಕಾಶ; 10, 12ನೇ ತರಗತಿ ಪಾಸಾದವರೂ ಅಪ್ಲೈ ಮಾಡಿ

Job Alert: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಜೂನಿಯರ್‌ ಅಸಿಸ್ಟಂಟ್‌, ಚಾಲಕ ಸೇರಿದಂತೆ ಒಟ್ಟು 39 ಹುದ್ದೆಗಳಿವೆ. ಪದವಿ ಜತೆಗೆ 10, 12ನೇ ತರಗತಿ ತೇರ್ಗಡೆಯಾದವರೂ ಅರ್ಜಿ ಸಲ್ಲಿಸಬಹುದು. ಆಸಕ್ತರು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದೆ. ನಿಮ್ಮ ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 26.

VISTARANEWS.COM


on

Job Alert
Koo

ಬೆಂಗಳೂರು: ರಾಜ್ಯದಲ್ಲೇ ಅದರಲ್ಲಿಯೂ ಬೆಂಗಳೂರಿನಲ್ಲಿ ಉದ್ಯೋಗ ನಿರ್ವಹಿಸಬೇಕು ಎನ್ನುವ ಕನಸು ಕಾಣುವವರಿಗೆ ಇಲ್ಲಿದೆ ಸುವರ್ಣಾವಕಾಶ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ (Karnataka State Souharda Federal Cooperative Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಜೂನಿಯರ್‌ ಅಸಿಸ್ಟಂಟ್‌, ಚಾಲಕ ಸೇರಿದಂತೆ ಒಟ್ಟು 39 ಹುದ್ದೆಗಳಿವೆ (KSSFCL Recruitment 2024). ಪದವಿ ಜತೆಗೆ 10, 12ನೇ ತರಗತಿ ತೇರ್ಗಡೆಯಾದವರೂ ಅರ್ಜಿ ಸಲ್ಲಿಸಬಹುದು. ಆಸಕ್ತರು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದೆ. ನಿಮ್ಮ ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 26 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಚಾರ್ಟರ್ಡ್ ಅಕೌಂಟೆಂಟ್ 1 ಹುದ್ದೆ, ವಿದ್ಯಾರ್ಹತೆ: ಸಿಎ, ಸಿಎಸ್‌, ಐಸಿಡಬ್ಲ್ಯುಎ
ಕಾನೂನು ಅಧಿಕಾರಿ 2 ಹುದ್ದೆ, ವಿದ್ಯಾರ್ಹತೆ: ಎಲ್‌ಎಲ್‌ಬಿ, ಕಾನೂನು ವಿಷಯದಲ್ಲಿ ಪದವಿ
ಎಚ್‌ಆರ್‌ ಆಫೀಸರ್ 1 ಹುದ್ದೆ, ವಿದ್ಯಾರ್ಹತೆ: ಎಚ್‌ಆರ್‌ ವಿಷಯದಲ್ಲಿ ಎಂಬಿಎ
ತರಬೇತಿ ಅಧಿಕಾರಿ 1 ಹುದ್ದೆ, ವಿದ್ಯಾರ್ಹತೆ: ಎಂಎ, ಎಂಎಸ್‌ಡಬ್ಲ್ಯು
ಫ್ರೆಂಡ್ಲಿ ಡೆವಲಪ್‌ಮೆಂಟ್‌ ಆಫೀಸರ್ (Friendly Development Officer) 11 ಹುದ್ದೆ, ವಿದ್ಯಾರ್ಹತೆ: ಯಾವುದೇ ಪದವಿ
ಸಹಾಯಕರು 8 ಹುದ್ದೆ, ವಿದ್ಯಾರ್ಹತೆ: ಯಾವುದೇ ಪದವಿ
ಟೈಪಿಸ್ಟ್ & ಸ್ಟೆನೊ 2 ಹುದ್ದೆ, ವಿದ್ಯಾರ್ಹತೆ: ಯಾವುದೇ ಪದವಿ
ಜೂನಿಯರ್ ಅಸಿಸ್ಟೆಂಟ್ 11 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ
ಡೆಪ್ಯುಟಿ ಸ್ಟಾಫ್ & ವೆಹಿಕಲ್ ಡ್ರೈವರ್ 2 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ

ವಯೋಮಿತಿ ಮತ್ತು ಅರ್ಜಿ ಶುಲ್ಕ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ 25 ವರ್ಷದಿಂದ 35 ವರ್ಷದೊಳಿಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಚಾರ್ಟರ್ಡ್ ಅಕೌಂಟೆಂಟ್, ಲಾ ಆಫೀಸರ್, ಎಚ್ಆರ್ ಆಫೀಸರ್, ಟ್ರೈನಿಂಗ್ ಆಫೀಸರ್, ಫ್ರೆಂಡ್ಲಿ ಡೆವಲಪ್‌ಮೆಂಟ್‌ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಎಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂ. ಪಾವತಿಸಬೇಕು. ಇನ್ನು ಸಹಾಯಕರು, ಟೈಪಿಸ್ಟ್ ಮತ್ತು ಸ್ಟೆನೋ, ಜೂನಿಯರ್ ಅಸಿಸ್ಟೆಂಟ್, ಡೆಪ್ಯುಟಿ ಸ್ಟಾಫ್ ಮತ್ತು ವೆಹಿಕಲ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವ ಎಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 300 ರೂ. ಪಾವತಿಸಬೇಕು. ಆಫ್‌ಲೈನ್‌ ಮೂಲಕವೇ ಅರ್ಜಿ ಶುಲ್ಕ ಪಾವತಿಸಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ಸಂಬಳ

ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳ ಹುದ್ದೆಗೆ ಅನುಗುಣವಾಗಿ 13,000 ರೂ. 70,000 ಮಾಸಿಕ ವೇತನ ದೊರೆಯಲಿದೆ.

KSSFCL Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

”Souharda Sahakari Soudha”, #68, First Floor, 18th Cross Road,
Margosa Road, Malleswaram, Bengaluru-560055.

ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್‌ ವಿಳಾಸ: souharda.coop ಇಲ್ಲಿಗೆ ಭೇಟಿ ನೀಡಿ.

ಇದನ್ನೂ ಓದಿ: Job Alert: ಇಂಡಿಯನ್‌ ಹೈವೇ ಮ್ಯಾನೇಜ್‌ಮೆಂಟ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಇಂದೇ ಅಪ್ಲೈ ಮಾಡಿ

Continue Reading

ಪ್ರಮುಖ ಸುದ್ದಿ

Dengue Fever: ಡೆಂಗ್ಯುಗೆ ಕೋವಿಡ್‌ ಮಾದರಿ ಉಚಿತ ಚಿಕಿತ್ಸೆ ಕೊಡಿ, ಮೆಡಿಕಲ್‌ ಎಮರ್ಜೆನ್ಸಿ ಘೋಷಿಸಿ: ಡಾ. ಮಂಜುನಾಥ್

Dengue Fever: ಡೆಂಗ್ಯು ತಡೆಗಟ್ಟದಿದ್ರೆ ಚಿಕನ್ ಗುನ್ಯ, ಜೀಕಾ ವೈರಸ್ ಬರಬಹುದು. ಕೋವಿಡ್ ಪ್ಯಾಂಡಮಿಕ್ ಅಂದೆವು. ಡೆಂಗ್ಯು ಎಂಡಮಿಕ್ ಆಗಿದೆ. ಎಂಡೆಮಿಕ್ ಅಂದರೆ ರಾಜ್ಯಾದ್ಯಂತ ಹರಡಿರೋದು. ಇದಕ್ಕೆ ತುರ್ತು ಚಿಕಿತ್ಸೆ ಅಗತ್ಯವಿದೆ. ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡಬೇಕು ಎಂದು ಮಂಜುನಾಥ್‌ ಹೇಳಿದ್ದಾರೆ.

VISTARANEWS.COM


on

DR CN Manjunath dengue fever
Koo

ಬೆಂಗಳೂರು: ಡೆಂಗ್ಯು ಜ್ವರಕ್ಕೆ (Dengue Fever) ಅಡ್ಮಿಟ್ ಆದವರಿಗೆ, ಕೋವಿಡ್ (Covid 19) ಸಂದರ್ಭದಲ್ಲಿ ಯಾವ ರೀತಿ ಉಚಿತ ಚಿಕಿತ್ಸೆ ನೀಡಲಾಯಿತೋ ಅದೇ ರೀತಿ ಕನಿಷ್ಠ ಮಾನದಂಡದಲ್ಲಿ ಉಚಿತ ಚಿಕಿತ್ಸೆ ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ (Bangalore Rural) ಸಂಸದ ಡಾ. ಸಿಎನ್‌ ಮಂಜುನಾಥ್‌ (Dr CN Manjunath) ಹೇಳಿದ್ದಾರೆ.

ಇದು ಸರ್ಕಾರಕ್ಕೆ ನನ್ನ ಸಲಹೆ. ಡೆಂಗ್ಯೂ ಫಿವರ್‌ ನಿಯಂತ್ರಣ ಅಂದರೆ ಸೊಳ್ಳೆ ನಿಯಂತ್ರಣ. ಸೊಳ್ಳೆ ನಿಯಂತ್ರಣ ಆದರೆ ಮಾತ್ರ ಡೆಂಗ್ಯು ನಿಯಂತ್ರಣ ಆಗಲಿದೆ. ಮಳೆಗಾಲ ಪ್ರಾರಂಭದಲ್ಲಿ ಸೊಳ್ಳೆಯಿಂದ ಹರಡುವ ಕಾಯಿಲೆ ಬರುತ್ತದೆ. ಡೆಂಗ್ಯು ತಡೆಗಟ್ಟದಿದ್ರೆ ಚಿಕನ್ ಗುನ್ಯ, ಜೀಕಾ ವೈರಸ್ ಬರಬಹುದು. ಕೋವಿಡ್ ಪ್ಯಾಂಡಮಿಕ್ ಅಂದೆವು. ಡೆಂಗ್ಯು ಎಂಡಮಿಕ್ ಆಗಿದೆ. ಎಂಡೆಮಿಕ್ ಅಂದರೆ ರಾಜ್ಯಾದ್ಯಂತ ಹರಡಿರೋದು. ಇದಕ್ಕೆ ತುರ್ತು ಚಿಕಿತ್ಸೆ ಅಗತ್ಯವಿದೆ. ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡಬೇಕು ಎಂದು ಮಂಜುನಾಥ್‌ ಹೇಳಿದ್ದಾರೆ.

ಸರಕಾರ ಡೆಂಗ್ಯುಗೆ ದರ ನಿಗದಿ ಮಾಡಿದೆ. ಡಯೋಗ್ನಾಸಿಸ್‌ಗಳು ಹೆಚ್ಚು ವಸೂಲಿ ಮಾಡಿದರೆ,‌ ಅವುಗಳ ಬಾಗಿಲು ಮುಚ್ಚಿಸಬೇಕು. ಡೆಂಗ್ಯು ಹರಡಲು ಕಾರಣ ಮಳೆಗಾಲದಲ್ಲಿ ನೀರು ನಿಲ್ಲೋದರಿಂದ. ಹಲವೆಡೆ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಅಲ್ಲಿ ಸೊಳ್ಳೆಗಳು ಉತ್ಪತ್ತಿ ಆಗುತ್ತಿವೆ. ಈಡಿಸ್ ಈಜಿಪ್ಟೈ ಸೊಳ್ಳೆಯಿಂದ ಕಾಯಿಲೆ‌ ಹರಡುತ್ತಿದೆ. ರಾಜ್ಯದಲ್ಲಿ ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಆಗಬೇಕು. ಪ್ರತ್ಯೇಕ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು. ಮಳೆಗಾಲ ಆರಂಭವಾದ ಮೇಲೆ ಎಚ್ಚೆತ್ತುಕೊಂಡಿದ್ದಾರೆ. ಈಗ ಯುದ್ಧೋಪಾದಿಯಲ್ಲಿ ಕೆಲಸ ಮಾಡಬೇಕಿದೆ. ಸರ್ಕಾರ ಮತ್ತು ಸಾರ್ವಜನಿಕರು ಇಬ್ಬರದ್ದೂ ಜವಾಬ್ದಾರಿ ಇದೆ ಎಂದು ಡಾ. ಮಂಜುನಾಥ್‌ ಎಚ್ಚರಿಸಿದ್ದಾರೆ.

ಡೆಂಗ್ಯು ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರ್ತಿದೆ. ಶಾಲೆಗಳಿಗೆ ಸರ್ಕ್ಯೂಲರ್ ಹೊರಡಿಸಬೇಕು. ಮಕ್ಕಳಲ್ಲಿ ಆರೋಗ್ಯ ಹದಗೆಟ್ಟಿದ್ದರೆ ಕ್ರಮ ತೆಗೆದುಕೊಳ್ಳಬೇಕು. ಈಗಾಗಲೇ ಏಳೆಂಟು ಜನ ಸಾವನ್ನಪ್ಪಿದ್ದಾರೆ. ಸೊಳ್ಳೆ ನಿಯಂತ್ರಣ ಮಾಡೋದ್ರಲ್ಲಿ ಸರ್ಕಾರ ಎಡವಿದೆ. ಏನೇನೋ ಫ್ರೀ ಕೊಡ್ತೀವಿ, ಯಾವುದನ್ನೋ ಉಚಿತ ಕೊಡ್ತಿದ್ದಾರೆ. ಅದರ ಜೊತೆಗೆ ಸ್ಲಂಗಳಲ್ಲಿ, ವಠಾರದಲ್ಲಿ ವಾಸವಾಗಿದ್ದವರ ಮನೆಗೆ ಸೊಳ್ಳೆಪರದೆಯನ್ನು ಉಚಿತವಾಗಿ ನೀಡಬೇಕು. ಇದರಿಂದ ಬಹಳಷ್ಟು ರೋಗ ನಿಯಂತ್ರಣ ಆಗಲಿದೆ ಎಂದು ಮಂಜುನಾಥ್ ಸೂಚಿಸಿದ್ದಾರೆ. ‌

ಡೆಂಗ್ಯು ಬಂದು ಮತ್ತೆ ಹುಷಾರಾಗುವಾಗ ಪ್ಲೇಟ್ ಲೆಟ್ಸ್ ಕಡಿಮೆ ಆಗುತ್ತೆ. ಜೊತೆಗೆ ದೇಹದಲ್ಲಿ ನೀರು ತುಂಬಿಕೊಳ್ಳುತ್ತದೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವರ‌ ಗಮನಕ್ಕೂ ನಾನು ತರಲಿದ್ದೇನೆ. ಅವಶ್ಯಕತೆ ಇರುವವರಿಗೆ ಮೊದಲೇ ಚಿಕಿತ್ಸೆ ನೀಡಬೇಕು. ಡೆಂಗ್ಯೂ ಕಾಯಿಲೆಗೆ ಬೇಕಾದ ಮಾತ್ರೆಗಳ ಕೊರತೆ ಕೂಡ ಎದುರಾಗಿದೆ. ವಾರ್ ರೂಮ್ ಮೂಲಕ ಮಾನಿಟರ್ ಮಾಡಬೇಕು. ಮುಂದುವರೆದ ದೇಶಗಳಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ಕಾಯಿಲೆ ತಡೆದಿದ್ದಾರೆ. ಮಸ್ಕ್ಯೂಟೋ ರೆಪೆಲೆಂಟ್ಸ್ ಅಂತ ಸ್ಟಿಕರ್ ಬರುತ್ತಿದ್ದು. ಅದನ್ನ ಇಲ್ಲೂ ಹಾಕಬೇಕು. ಇದರಿಂದ ಮಕ್ಕಳಿಗೆ ಸೊಳ್ಳೆ ಕಡಿತ ತಪ್ಪಿಸಬಹುದು ಎಂದು ಅವರು ಹೇಳಿದರು.

ಜಪಾನ್, ಸಿಂಗಾಪುರ್, ಅಮೇರಿಕಾದಲ್ಲಿ ಡೆಂಗ್ಯೂ ಕಾಯಿಲೆಗೆ ಬೇಕಾದ ಮೆಡಿಸಿನ್ ಇದೆ. ಅವುಗಳನ್ನು ರಾಜ್ಯ ಸರ್ಕಾರ ತರಿಸಿಕೊಳ್ಳಬೇಕು. ಇಲ್ಲ ಅಲ್ಲಿ ನೀರು ನಿಲ್ಲೋದನ್ನ ತಡೆಗಟ್ಟಬೇಕು. ಸೊಳ್ಳೆ ನಿಯಂತ್ರಣ ಮಾಡಲು ಸ್ಪ್ರೇ ಮಾಡುವವರು ಕಾಣುತ್ತಿಲ್ಲ. ಬಿಬಿಎಂಪಿ ಎಚ್ಚೆತ್ತುಕೊಳ್ಳಬೇಕು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Dengue Fever: ಸಿಲಿಕಾನ್‌ ಸಿಟಿಯಲ್ಲಿ ಡೆಂಗ್ಯು ಜ್ವರಕ್ಕೆ ಬಾಲಕ ಬಲಿ, ರಾಜಧಾನಿಯಲ್ಲಿ 2ನೇ ಸಾವು

Continue Reading

ಶಿವಮೊಗ್ಗ

Road Accident : ಶಿವಮೊಗ್ಗದಲ್ಲಿ ಕಾರುಗಳ ನಡುವೆ ಭೀಕರ ಅಪಘಾತ; ಮೂವರು ಸಾವು, ಮತ್ತಿಬ್ಬರು ಗಂಭೀರ

Road Accident : ಭೀಕರ ರಸ್ತೆ ಅಪಘಾತದಲ್ಲಿ ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಕಎರಡು ಕಾರುಗಳು ನಡುವೆ ಅಪಘಾತ ಸಂಭವಿಸಿದ್ದು, ಛಿದ್ರಗೊಂಡಿವೆ.

VISTARANEWS.COM


on

By

Road Accident
Koo

ಶಿವಮೊಗ್ಗ: ಶಿವಮೊಗ್ಗದಲ್ಲಿ (Shivamogga News) ಎರಡು ಕಾರುಗಳ (Cars clash) ನಡುವೆ ಭೀಕರ ಅಪಘಾತ (Road Accident) ಸಂಭವಿಸಿದೆ. ಶಿವಮೊಗ್ಗ ತಾಲೂಕಿನ ಮುದ್ದಿನಕೊಪ್ಪ ಟ್ರೀ ಪಾರ್ಕ್ ಬಳಿ ಘಟನೆ ನಡೆದಿದೆ.

ಇನೋವಾ ಕಾರು ಹಾಗೂ ಸ್ವೀಪ್ಟ್ ಕಾರು ನಡುವೆ ಡಿಕ್ಕಿಯಾಗಿದ್ದು, ಎರಡು ಕಾರುಗಳು ಛಿದ್ರ ಛಿದ್ರಗೊಂಡಿವೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರಿಗೆ ಗಂಭೀರ ಗಾಯವಾಗಿದೆ.

ಗಾಯಾಳುಗಳು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಕುಂಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತರ ಗುರುತುಗಳು ಇನ್ನೂ ಪತ್ತೆಯಾಗಿಲ್ಲ. ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದ್ದ ಕಾರುಗಳನ್ನು ತೆರವು ಮಾಡಲಾಗಿದೆ. ಮೇಲ್ನೋಟಕ್ಕೆ ಅತಿ ವೇಗ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಇದನ್ನೂ ಓದಿ: Assault Case : ಆಮ್ಲೇಟ್‌ನಲ್ಲಿ ಕಲ್ಲು ಸಿಕ್ಕಿದ್ದನ್ನು ಪ್ರಶ್ನಿಸಿದ್ದಕ್ಕೆ ಗ್ರಾಹಕನ ತಲೆಬುರುಡೆ ತೂತು ಮಾಡಿದ ಸಪ್ಲೇಯರ್‌

ಹೋಮ್‌ ವರ್ಕ್‌ ಮಾಡುತ್ತಿದ್ದ ಬಾಲಕಿಗೆ ಸಾವಾಗಿ ಕಾಡಿದ ಪೆನ್‌!

ಶಾಲೆಗೆ ಹೋಗುವ ಮಕ್ಕಳ ಕೈಯಲ್ಲಿ ಪೆನ್ನು, ಪೆನ್ಸಿಲ್ ಕೊಟ್ಟಾಗ ಅವರು ತಮ್ಮ ತಲೆ, ಕಣ್ಣು, ಕೈಗೆ ಕೆಲವೊಮ್ಮೆ ಚುಚ್ಚಿಸಿಕೊಳ್ಳುವುದಿದೆ. ಆದರೆ ಪೆನ್‌ನಿಂದ ಸಾವು ಸಂಭವಿಸಿದ ಸುದ್ದಿ ಹಿಂದೆಂದೂ ಕೇಳಿದ್ದಿಲ್ಲ. ತೆಲಂಗಾಣದ ಭದ್ರಾದ್ರಿ ಕೊಥಗುಡೆಮ್ ಜಿಲ್ಲೆಯ ಭದ್ರಾಚಲಂನ ಸುಭಾಷ್ ನಗರದಲ್ಲಿ ಬರೆಯಲು ಇಟ್ಟುಕೊಂಡಿದ್ದ ಪೆನ್‌ನಿಂದ ಬಾಲಕಿಯ ಸಾವು ಸಂಭವಿಸಿದ ದುರ್ಘಟನೆ ನಡೆದಿದೆ. 5 ವರ್ಷದ ಬಾಲಕಿ (Baby Death) ತಲೆಗೆ ಪೆನ್ ಚುಚ್ಚಿದ ಪರಿಣಾಮ ಸಾವನಪ್ಪಿದ್ದಾಳೆ.

ರಿಯಾನ್ಶಿಕಾ ಪೆನ್ನು ಚುಚ್ಚಿ ಸಾವನಪ್ಪಿದ ಬಾಲಕಿ. ಈಕೆ ಯುಕೆಜಿಯಲ್ಲಿ ಓದುತ್ತಿದ್ದಳು. ಜುಲೈ 1ರಂದು ತನ್ನ ಮನೆಯಲ್ಲಿ ಹಾಸಿಗೆಯ ಮೇಲೆ ಕುಳಿತು ಹೋಮ್‌ ವರ್ಕ್‌ ಮಾಡುತ್ತ ತನ್ನ ಪುಸ್ತಕಗಳೊಂದಿಗೆ ಆಟವಾಡುತ್ತಿದ್ದಾಗ, ಬ್ಯಾಲೆನ್ಸ್ ತಪ್ಪಿ ಮಂಚದಿಂದ ಕೆಳಗೆ ಬಿದ್ದಿದ್ದಾಳೆ. ಆಗ ಅವಳು ಹಿಡಿದಿದ್ದ ಪೆನ್ ಅವಳ ಕಿವಿಯ ಮೇಲ್ಭಾಗದಿಂದ ನೇರವಾಗಿ ತಲೆಗೆ ಆಳವಾಗಿ ಚುಚ್ಚಿದೆ. ಪೆನ್ನಿನ ಸುಮಾರು ಅರ್ಧದಷ್ಟು ಭಾಗ ಅವಳ ತಲೆಯೊಳಗೆ ತೂರಿ ಹೋಗಿತ್ತು ಎನ್ನಲಾಗಿದೆ.

ತಕ್ಷಣ ಆಕೆಯ ಹೆತ್ತವರಾದ ಮಣಿಕಂಠ ಮತ್ತು ಸ್ವರೂಪಾ ಅವರು ಅವಳನ್ನು ಭದ್ರಾಚಲಂ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಆದರೆ ನಂತರ ವೈದ್ಯರ ಸಲಹೆಯ ಮೇರೆಗೆ ಉತ್ತಮ ಚಿಕಿತ್ಸೆಗಾಗಿ ಖಮ್ಮಂನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿದರು. ಅಲ್ಲಿ ವೈದ್ಯರು ಆಕೆಗೆ ಸರ್ಜರಿ ಮಾಡಿ ಪೆನ್ ಅನ್ನು ಹೊರಗೆ ತೆಗೆದರೂ ಕೂಡ ಗಂಭೀರ ಸ್ಥಿತಿಯಲ್ಲಿದ್ದ ಆಕೆ ಸೋಂಕಿಗೆ ಒಳಗಾಗಿ ಸಾವನಪ್ಪಿದ್ದಾಳೆ.

ಕೊನೆಗೂ ನೂರಾರು ವರ್ಷ ಬಾಳಿ ಬದುಕುಬೇಕಾಗಿದ್ದ ಆ ಪುಟ್ಟ ಬಾಲಕಿಯ ಜೀವ ಕೇವಲ ಒಂದು ಚಿಕ್ಕ ಪೆನ್ನಿನಿಂದ ಅಂತ್ಯ ಕಂಡಿದ್ದು ದುರಂತವೇ ಸರಿ. ಹಾಗಾಗಿ ಈ ಘಟನೆಯಿಂದ ಎಲ್ಲಾ ಪೋಷಕರು ಎಚ್ಚೆತ್ತುಕೊಳ್ಳುವುದು ಉತ್ತಮ. ನಿಮಗೆ ಎಷ್ಟೇ ಕೆಲಸವಿದ್ದರೂ ಕೂಡ ನಿಮ್ಮ ಮಕ್ಕಳ ಬಗ್ಗೆ ಒಂದು ಗಮನವಿಟ್ಟಿರಿ. ಇಲ್ಲವಾದರೆ ಇಂತಹ ದುರಂತಗಳಿಗೆ ಕಾರಣವಾಗಬಹುದು.

ಈ ಹಿಂದೆ ಮೇ ತಿಂಗಳಿನಲ್ಲಿ ನೇಪಾಳದಲ್ಲಿ 7 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ 10 ಸೆಂ.ಮೀ ಉದ್ದದ ಪೆನ್ಸಿಲ್ ಅನ್ನು ನುಂಗಿ ಬಿಟ್ಟಿದ್ದ. ಇದರಿಂದ ಆತ ಹೊಟ್ಟೆ ನೋವಿನಿಂದ ನರಳಿದ್ದು, ನಂತರ ಪೋಷಕರು ವೈದ್ಯರ ಬಳಿ ಕರೆದುಕೊಂಡು ಹೋದಾಗ ಬಾಲಕನ ಎದೆ ಮತ್ತು ಹೊಟ್ಟೆಯ ಎಕ್ಸ್-ರೇ ಸ್ಕ್ಯಾನ್ ಮಾಡಿಸಿದ ವೈದ್ಯರಿಗೆ ಪೆನ್ಸಿಲ್ ಅವನ ಹೊಟ್ಟೆಯಲ್ಲಿ ಇರುವುದು ತಿಳಿದು ಬಂದಿತ್ತು. ನಂತರ 4 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆಯ ಮೂಲಕ ಅದನ್ನು ಆತನ ಹೊಟ್ಟೆಯಿಂದ ಹೊರಗೆ ತೆಗೆಯಲಾಗಿತ್ತು. ಇದರಿಂದ ಆತ ಪ್ರಾಣಾಪಾಯದಿಂದ ಪಾರಾಗಿದ್ದ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Team India Fan
ಕ್ರೀಡೆ9 mins ago

Team India Fan: ಟಿ20 ವಿಶ್ವಕಪ್​ ವಿಜೇತ ಭಾರತ ತಂಡದ ಆಟಗಾರರ ಹೆಸರನ್ನು ಬೆನ್ನ ಮೇಲೆ ಟ್ಯಾಟು ಹಾಕಿಸಿಕೊಂಡ ಅಭಿಮಾನಿ; ವಿಡಿಯೊ ವೈರಲ್​

Shruti Haasan responds to netizens’ marriage questions in style
ಟಾಲಿವುಡ್10 mins ago

Shruti Haasan: ಮದುವೆ ಯಾವಾಗ ಎಂದು ಕೇಳಿದ್ದಕ್ಕೆ ತಾಳ್ಮೆ ಕಳೆದುಕೊಂಡ ಶ್ರುತಿ ಹಾಸನ್‌!

Channapatna By Election
ಕರ್ನಾಟಕ11 mins ago

Channapatna By Election: ಚನ್ನಪಟ್ಟಣದಲ್ಲಿ ನನ್ನ ಪತ್ನಿ ಸ್ಪರ್ಧಿಸಲ್ಲ: ಸಂಸದ ಡಾ.ಸಿ.ಎನ್. ಮಂಜುನಾಥ್‌ ಸ್ಪಷ್ಟನೆ

Job Alert
ಉದ್ಯೋಗ13 mins ago

Job Alert: ಬೆಂಗಳೂರಿನಲ್ಲಿದೆ ಉದ್ಯೋಗಾವಕಾಶ; 10, 12ನೇ ತರಗತಿ ಪಾಸಾದವರೂ ಅಪ್ಲೈ ಮಾಡಿ

DR CN Manjunath dengue fever
ಪ್ರಮುಖ ಸುದ್ದಿ27 mins ago

Dengue Fever: ಡೆಂಗ್ಯುಗೆ ಕೋವಿಡ್‌ ಮಾದರಿ ಉಚಿತ ಚಿಕಿತ್ಸೆ ಕೊಡಿ, ಮೆಡಿಕಲ್‌ ಎಮರ್ಜೆನ್ಸಿ ಘೋಷಿಸಿ: ಡಾ. ಮಂಜುನಾಥ್

Road Accident
ಶಿವಮೊಗ್ಗ27 mins ago

Road Accident : ಶಿವಮೊಗ್ಗದಲ್ಲಿ ಕಾರುಗಳ ನಡುವೆ ಭೀಕರ ಅಪಘಾತ; ಮೂವರು ಸಾವು, ಮತ್ತಿಬ್ಬರು ಗಂಭೀರ

assault case in Jigani
ಬೆಂಗಳೂರು ಗ್ರಾಮಾಂತರ53 mins ago

Assault Case : ಆಮ್ಲೇಟ್‌ನಲ್ಲಿ ಕಲ್ಲು ಸಿಕ್ಕಿದ್ದನ್ನು ಪ್ರಶ್ನಿಸಿದ್ದಕ್ಕೆ ಗ್ರಾಹಕನ ತಲೆಬುರುಡೆ ತೂತು ಮಾಡಿದ ಸಪ್ಲೇಯರ್‌

Rohit Sharma
ಕ್ರೀಡೆ1 hour ago

Rohit Sharma: ಮರಾಠಿಯಲ್ಲೇ ಮಾತನಾಡಿದ ರೋಹಿತ್​, ಸೂರ್ಯಕುಮಾರ್​; ವಿಡಿಯೊ ವೈರಲ್​

Anant Ambani -Radhika Salman Khan dances
ಬಾಲಿವುಡ್1 hour ago

Anant Ambani -Radhika:  ಸಂಗೀತ ಕಾರ್ಯಕ್ರಮದಲ್ಲಿ ಅನಂತ್ ಅಂಬಾನಿ ಜತೆ ಡ್ಯಾನ್ಸ್‌ ಮಾಡಿದ ಸಲ್ಮಾನ್ ಖಾನ್!

Viral Video
Latest1 hour ago

Viral Video : ಕೀರ್ತಿ ಚಕ್ರ ಸ್ವೀಕರಿಸಿದ ಹುತಾತ್ಮ ಯೋಧನ ಪತ್ನಿ; ಭಾವುಕರಾದ ದ್ರೌಪದಿ ಮುರ್ಮು‌,ರಾಜನಾಥ್ ಸಿಂಗ್!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ6 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ19 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ20 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ21 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ23 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ1 day ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು1 day ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು1 day ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ1 day ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

ಟ್ರೆಂಡಿಂಗ್‌