Parliament Sessions: ಲೋಕಸಭೆಯಲ್ಲಿ ಇಂದು ಮೋದಿ ಭಾಷಣ; ರಾಹುಲ್‌ ಗಾಂಧಿ ಆರೋಪಗಳಿಗೆ ಪ್ರಧಾನಿ ಉತ್ತರವೇನು? ಇಲ್ಲಿದೆ Live - Vistara News

ರಾಜಕೀಯ

Parliament Sessions: ಲೋಕಸಭೆಯಲ್ಲಿ ಇಂದು ಮೋದಿ ಭಾಷಣ; ರಾಹುಲ್‌ ಗಾಂಧಿ ಆರೋಪಗಳಿಗೆ ಪ್ರಧಾನಿ ಉತ್ತರವೇನು? ಇಲ್ಲಿದೆ Live

Parliament Sessions: 18ನೇ ಲೋಕಸಭೆಯ ಮೊದಲ ಅಧಿವೇಶನ ನಡೆಯುತ್ತಿದೆ. ಈ ಬಾರಿ ಪ್ರತಿಪಕ್ಷ ಬಹಳಷ್ಟು ಬಹಳಷ್ಟು ಪ್ರಬಲವಾಗಿರುವುದರಿಂದ ಕಾವೇರಿದ ಚರ್ಚೆ ನಡೆಯುತ್ತಿದೆ. ಇಂದು (ಜುಲೈ 2) ನರೇಂದ್ರ ಮೋದಿ ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದು, ಆರೋಪಗಳಿಗೆ ಉತ್ತರ ನೀಡಲಿದ್ದಾರೆ. ಅಧಿವೇಶನದ ಕ್ಷಣ ಕ್ಷಣದ ಮಾಹಿತಿಗಾಗಿ Live ನೋಡಿ.

VISTARANEWS.COM


on

Parliament Sessions
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ನಡೆಯುತ್ತಿದೆ (Parliament Sessions). ಈ ಬಾರಿ ಪ್ರತಿಪಕ್ಷ ಬಹಳಷ್ಟು ಬಹಳಷ್ಟು ಪ್ರಬಲವಾಗಿರುವುದರಿಂದ ಕಾವೇರಿದ ಚರ್ಚೆ ನಡೆಯುತ್ತಿದೆ. ಸೋಮವಾರ ಪ್ರತಿಪಕ್ಷಗಳ ನಾಯಕ ರಾಹುಲ್‌ ಗಾಂಧಿ (Rahul Gandhi) ಸರ್ಕಾರದ ಬೆವರಿಳಿಸಿದ್ದಾರೆ. ನೀಟ್‌ (NEET) ವಿವಾದ ಚರ್ಚೆ ನಡೆಸಬೇಕೆಂಬ ಬೇಡಿಕೆ ಮುಂದಿಟ್ಟು ಅವರು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ಇಂದು (ಜುಲೈ 2) ನರೇಂದ್ರ ಮೋದಿ (Narendra Modi) ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದು, ಆರೋಪಗಳಿಗೆ ಉತ್ತರ ನೀಡಲಿದ್ದಾರೆ.

ಪ್ರತಿಪಕ್ಷಗಳ ನಾಯಕನಾದ ಬಳಿಕ ರಾಹುಲ್‌ ಗಾಂಧಿ ಸೋಮವಾರ ಮೊದಲ ಬಾರಿ ಲೋಕಸಭೆಯಲ್ಲಿ ಮಾತನಾಡಿದ್ದು, ಇಂದು ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ. ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಮೋದಿ ಉತ್ತರವನ್ನು ನೀಡಲಿದ್ದಾರೆ.

ಸಂಸತ್ತಿನಲ್ಲಿ ಭಾಷಣ ಮಾಡುವ ಮೊದಲು, ಮೋದಿ ಬೆಳಿಗ್ಗೆ 9:30ಕ್ಕೆ ಎನ್‌ಡಿಎ ನಾಯಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೂರನೇ ಅವಧಿಗೆ ಅಧಿಕಾರಕ್ಕೆ ಬಂದ ಬಳಿಕ ಆಡಳಿತಾರೂಢ ಬಣದ ಸಂಸದರನ್ನುದ್ದೇಶಿಸಿ ಮೋದಿ ನಡೆಸುವ ಮೊದಲ ಭಾಷಣ ಇದಾಗಿರಲಿದೆ. 2014ರ ನಂತರ ಮೊದಲ ಬಾರಿಗೆ ಬಿಜೆಪಿ ಬಹುಮತ ಕಳೆದುಕೊಂಡಿರುವುದರಿಂದ ಮತ್ತು ಆಡಳಿತ ನಡೆಸಲು ಮಿತ್ರಪಕ್ಷಗಳನ್ನು ಅವಲಂಬಿಸಬೇಕಿರುವಿದರಿಂದ ಈ ಬೆಳವಣಿಗೆ ಮಹತ್ವವನ್ನು ಪಡೆದುಕೊಂಡಿದೆ. 543 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಗೆದ್ದರೆ, ಮಿತ್ರಪಕ್ಷಗಳು 53 ಸ್ಥಾನಗಳಲ್ಲಿ ಜಯಗಳಿಸಿವೆ.

ಆರಂಭದಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯನ್ನು ಶುಕ್ರವಾರ ನಿಗದಿಪಡಿಸಲಾಗಿತ್ತು. ಆದರೆ ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ವಿರುದ್ಧ ಪ್ರತಿಪಕ್ಷಗಳ ಸಂಸದರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು.

ರಾಹುಲ್‌ ಗಾಂಧಿ ವಾಗ್ದಾಳಿ

ಸೋಮವಾರ ರಾಹುಲ್‌ ಗಾಂಧಿ ವಿವಿಧ ವಿಚಾರಗಳನ್ನು ಕೈಗೆತ್ತಿಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಕ್ಸಮರಕ್ಕೆ ಸಜ್ಜಾಗಿಯೇ ಬಂದಿದ್ದ ರಾಹುಲ್‌ ಗಾಂಧಿ, ಹಲವು ವಿಚಾರಗಳನ್ನು ಪ್ರಸ್ತಾಪಿಸಿ ನೇರವಾಗಿ ತಿವಿದರು. ಇದರಿಂದ ಸದನ ರಣರಂಗವಾಗಿತ್ತು. ʼʼಅಗ್ನಿಪಥ್ ಯೋಜನೆಯು ಪ್ರಧಾನಿ ಮೋದಿಯ ಕೂಸು. ಆದರೆ ಸಶಸ್ತ್ರ ಪಡೆಗಳದ್ದಲ್ಲ. ನಮ್ಮ ಸರ್ಕಾರ ಬಂದಾಗ ಅಗ್ನಿಪಥ್ ಯೋಜನೆಯನ್ನು ರದ್ದುಗೊಳಿಸುತ್ತೇವೆ. ಏಕೆಂದರೆ ಇದು ಸಶಸ್ತ್ರ ಪಡೆಗಳು ಮತ್ತು ದೇಶಭಕ್ತಿಗೆ ವಿರುದ್ಧವಾಗಿದೆ. ಬಿಜೆಪಿಯ ನೀತಿಗಳು, ರಾಜಕಾರಣವು ಮಣಿಪುರವನ್ನು ಭಸ್ಮ ಮಾಡಿದೆ, ನಾಗರಿಕ ಯುದ್ಧಕ್ಕೆ ನೂಕಿದೆ. ಆದರೂ ಪ್ರಧಾನಿ ಮೋದಿ ರಾಜ್ಯಕ್ಕೆ ಈವರೆಗೂ ಭೇಟಿ ನೀಡಿಲ್ಲ. ನೀಟ್‌ ಅಕ್ರಮದಿಂದ ಕೋಟ್ಯಂತರ ವಿದ್ಯಾರ್ಥಿಗಳಿಗೆ ತೊಂದರೆ ಎದುರಾಗಿದೆʼʼ ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದರು.

ಬಿಜೆಪಿಯು ಸಂವಿಧಾನ ಮತ್ತು ಭಾರತದ ಮೂಲಭೂತ ಕಲ್ಪನೆಯ ಮೇಲೆ ವ್ಯವಸ್ಥಿತ ದಾಳಿಗಳನ್ನು ನಡೆಸುತ್ತಿದೆ ಎಂದು ದೂರಿದ್ದ ಅವರು, ʼʼಆಡಳಿತ ಪಕ್ಷವು ಪ್ರಸ್ತಾಪಿಸಿದ ವಿಚಾರಗಳನ್ನು ಲಕ್ಷಾಂತರ ಜನರು ವಿರೋಧಿಸಿದ್ದಾರೆ. ಪ್ರಧಾನಿ ಮೋದಿಯವರ ಆದೇಶದ ಮೇರೆಗೆ ನನ್ನ ಮೇಲೆ ದಾಳಿ ನಡೆದಿದೆ. 20ಕ್ಕೂ ಹೆಚ್ಚು ಪ್ರಕರಣಗಳು ನನ್ನ ವಿರುದ್ಧ ದಾಖಲಾಗಿವೆ. ನನ್ನ ಮನೆಯನ್ನು ಕಿತ್ತುಕೊಳ್ಳಲಾಯಿತು, ಇ.ಡಿ 55 ಗಂಟೆಗಳ ವಿಚಾರಣೆ ನಡೆಸಿತುʼʼ ಎಂದು ಹೇಳಿದ್ದರು.

ಪ್ರತಿಪಕ್ಷಗಳ, ರಾಹುಲ್‌ ಗಾಂಧಿ ಅವರ ಈ ಎಲ್ಲ ಆರೋಪಗಳಿಗೆ ನರೇಂದ್ರ ಮೋದಿ ಅವರು ಇಂದು ಯಾವ ರೀತಿ ಉತ್ತರಿಸುತ್ತಾರೆ ಎನ್ನುವ ಕುತೂಹಲ ಮೂಡಿದೆ.

ಇದನ್ನೂ ಓದಿ: Parliament Sessions: ಮೋದಿ ಆತ್ಮದ ಜೊತೆ ಪರಮಾತ್ಮನ ಸಂವಹನ; ರಾಹುಲ್‌ ಗಾಂಧಿ ವ್ಯಂಗ್ಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Elephant Arjuna: ದಸರಾ ಆನೆ ಅರ್ಜುನನ ಸ್ಮಾರಕಕ್ಕೆ ಶಂಕುಸ್ಥಾಪನೆ; 50 ಲಕ್ಷ ವೆಚ್ಚದಲ್ಲಿ ನಿರ್ಮಾಣ

Elephant Arjuna: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಅರಣ್ಯ ವಲಯದ ದಬ್ಬಳ್ಳಿಕಟ್ಟೆಯ ನೆಡುತೋಪಿನಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಅರ್ಜುನನ ಸ್ಮಾರಕ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ.

VISTARANEWS.COM


on

Elephant Arjuna
Koo

ಹಾಸನ: ದಸರಾ ಆನೆ ಅರ್ಜುನನ ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಾಣಕ್ಕೆ (Elephant Arjuna) ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು ಶನಿವಾರ ಶಂಕುಸ್ಥಾಪನೆ ನೆರವೇರಿಸಿದರು. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಅರಣ್ಯ ವಲಯದ ದಬ್ಬಳ್ಳಿಕಟ್ಟೆಯ ನೆಡುತೋಪಿನಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಸ್ಮಾರಕ (elephant Arjuna’s memorial) ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ.

2023ರ ಡಿ. 4ರಂದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಕ್ಯಾಪ್ಟನ್ ಅರ್ಜುನ ವೀರ ಮರಣವನ್ನಪ್ಪಿತ್ತು. ಬಳಿಕ ಅರ್ಜುನನ ಸ್ಮಾರಕ ನಿರ್ಮಾಣಕ್ಕೆ ಒತ್ತಾಯಗಳು ಕೇಳಿಬಂದಿದ್ದರಿಂದ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿತ್ತು. ಇದೀಗ ಅರ್ಜುನನ ಅಭಿಮಾನಿಗಳ ಆಸೆ ಈಡೇರಿದೆ.

ಮಳೆಯ ನಡುವೆಯೇ ಸ್ಮಾರಕ ನಿರ್ಮಾಣಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಸ್ಥಳೀಯ ಶಾಸಕ ಸಿಮೆಂಟ್ ಮಂಜು, ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ, ಸಿಇಒ ಪೂರ್ಣಿಮಾ, ಸಿಸಿಎಫ್ ರವಿಶಂಕರ್ ಉಪಸ್ಥಿತರಿದ್ದರು.

ಜ.1ಕ್ಕೆ ಸ್ಮಾರಕ ಲೋಕಾರ್ಪಣೆ

ಶಂಕುಸ್ಥಾಪನೆ ಬಳಿಕ ಮಾತನಾಡಿದ ಸಚಿವ ಸಚಿವ ಈಶ್ವರ್ ಖಂಡ್ರೆ ಅವರು, ಎಂಟು ಬಾರಿ ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಎಲ್ಲರ ಗಮನ ಸೆಳೆದಿತ್ತು. ಪುಂಡಾನೆ ಸೆರೆ ಕಾರ್ಯಾಚರಣೆಯಲ್ಲಿ ಸರ್ಜುನ ಸಾವನ್ನಪ್ಪಿತ್ತು, ಇದು ರಾಜ್ಯದ ಜನತೆಗೆ ಅತ್ಯಂತ ದು:ಖದ ಸಂಗತಿಯಾಗಿತ್ತು. 1968ರಲ್ಲಿ ಈ ಆನೆಯನ್ನು ಸೆರೆ ಹಿಡಿಯಲಾಗಿತ್ತು, ಆದಾದ ನಂತರ ತರಬೇತಿ ನೀಡಲಾಗಿತ್ತು. 2012ರಿಂದ ದಸರಾದಲ್ಲಿ ಅಂಬಾರಿ ಹೊತ್ತಿತ್ತು. ಅರ್ಜುನ ನಮ್ಮಿಂದ ದೂರ ಹೋಗುತ್ತಾನೆ ಎಂದು ಯಾರೂ ಊಹಿಸಿರಲಿಲ್ಲ. ದಬ್ಬಳ್ಳಿಕಟ್ಟೆ ಹಾಗೂ ಬಳ್ಳೆ ಎರಡೂ ಕಡೆ ಸ್ಮಾರಕ ನಿರ್ಮಾಣ ಮಾಡುತ್ತೇವೆ. ಆದಷ್ಟು ಶೀಘ್ರದಲ್ಲೇ ಕಾಮಗಾರಿ ಆರಂಭವಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ | Hathras Stampede: 121 ಜನರ ಸಾವಿಗೆ ಕಾರಣನಾದ ಭೋಲೆ ಬಾಬಾ ಆಸ್ತಿ ಧ್ವಂಸಕ್ಕೆ ಮುಂದಾದ ಯೋಗಿ!

ಐವತ್ತು ಲಕ್ಷ ರೂ. ವೆಚ್ಚದಲ್ಲಿ ಸ್ಮಾರಕ ನಿರ್ಮಾಣ ಮಾಡುತ್ತೇವೆ. ಜ.1 ರಂದು ಸ್ಮಾರಕ ಲೋಕಾರ್ಪಣೆ ಮಾಡುತ್ತೇವೆ. ಸ್ಮಾರಕ ಅಭಿವೃದ್ಧಿ ಮಾಡಲು ಹಣದ ಸಮಸ್ಯೆ ಇಲ್ಲ, ಎಷ್ಟು ಹಣ ಬೇಕಾದರೂ ಖರ್ಚು ಮಾಡುತ್ತೇವೆ ಎಂದು ಸಚಿವರು ತಿಳಿಸಿದ್ದಾರೆ.

Continue Reading

ಕರ್ನಾಟಕ

BJP Karnataka: ವಿಧಾನಸಭೆ, ವಿಧಾನ ಪರಿಷತ್ ಉಪಚುನಾವಣೆ; 4 ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ

BJP Karnataka: ವಿಧಾನಸಭೆ, ವಿಧಾನ ಪರಿಷತ್ ಉಪಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳನ್ನು (BJP Karnataka) ನೇಮಿಸಲಾಗಿದೆ.

VISTARANEWS.COM


on

BJP Karnataka
Koo

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ವಿಧಾನಸಭೆ, ಒಂದು ಸ್ಥಾನಕ್ಕೆ ವಿಧಾನ ಪರಿಷತ್ ಉಪಚುನಾವಣೆ ಹಿನ್ನೆಲೆಯಲ್ಲಿ ಉಸ್ತುವಾರಿಗಳನ್ನು ನೇಮಿಸಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ, ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳನ್ನು (BJP Karnataka) ನೇಮಿಸಲಾಗಿದೆ.

ಉಪ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ಸಂಬಂಧ ಉಸ್ತುವಾರಿ ನಾಯಕರು ಅಭಿಪ್ರಾಯ ಸಂಗ್ರಹ ಮತ್ತು ವರದಿ ತಯಾರಿಸಿ, ಹೈ ಕಮಾಂಡ್‌ಗೆ ನೀಡಲಿದ್ದಾರೆ.

ಉಸ್ತುವಾರಿಗಳ ಪಟ್ಟಿ

ದಕ್ಷಿಣ ಕನ್ನಡ (ಸ್ಥಳೀಯ ಸಂಸ್ಥೆ)

ಬಸವರಾಜ್ ಬೊಮ್ಮಾಯಿ, ಕೋಟ ಶ್ರೀನಿವಾಸ್ ಪೂಜಾರಿ, ಬ್ರಿಜೇಶ್ ಚೌಟ, ಪ್ರೀತಂ ಗೌಡ

ಶಿಗ್ಗಾಂವಿ

ಆರ್. ಅಶೋಕ್, ಅರವಿಂದ್ ಬೆಲ್ಲದ್, ಮಹೇಶ್ ಟೆಂಗಿನಕಾಯಿ, ಪಿ. ರಾಜೀವ್

ಸಂಡೂರು

ಗೋವಿಂದ ಕಾರಜೋಳ, ಸುನೀಲ್ ಕುಮಾರ್, ಎನ್.ರವಿಕುಮಾರ್, ಕೆ.ಎಸ್ ನವೀನ್

ಚನ್ನಪಟ್ಟಣ

ಸಿ.ಎನ್ ಅಶ್ವತ್ಥ್‌ ನಾರಾಯಣ್, ಎಂ.ಕೃಷ್ಣಪ್ಪ, ಗೋಪಿನಾಥ್ ರೆಡ್ಡಿ, ನಂದೀಶ್ ರೆಡ್ಡಿ

ರಾಜ್ಯ ಬಿಜೆಪಿಗೆ ನೂತನ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಬೆಂಗಳೂರು: ರಾಜ್ಯ ಬಿಜೆಪಿಗೆ (BJP Karnataka) ನೂತನ ಉಸ್ತುವಾರಿ, ಸಹ ಉಸ್ತುವಾರಿಯನ್ನು ನೇಮಕ ಮಾಡಲಾಗಿದೆ. ಉಸ್ತುವಾರಿಯಾಗಿ ಡಾ. ರಾಧಾಮೋಹನ್ ದಾಸ್ ಅಗರ್ವಾಲ್ ಮತ್ತು ಸಹ ಉಸ್ತುವಾರಿಯಾಗಿ ಪ್ರಭಾಕರ್ ರೆಡ್ಡಿ ನೇಮಕವಾಗಿದ್ದಾರೆ. ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಆಗಿದ್ದ ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ರಾಜ್ಯ ಬಿಜೆಪಿ ನೂತನ ಉಸ್ತುವಾರಿಯಾಗಿ ಮುಂದುವರಿಸಲಾಗಿದೆ.

ಕರ್ನಾಟಕ ಸೇರಿ ದೇಶದ ವಿವಿಧ ರಾಜ್ಯಗಳಿಗೆ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ಅವರು ಆದೇಶ ಹೊರಡಿಸಿದ್ದು, ಕರ್ನಾಟಕದ ಉಸ್ತುವಾರಿಯಾಗಿ ಡಾ. ರಾಧಾಮೋಹನ್ ದಾಸ್ ಅಗರ್ವಾಲ್ ಮತ್ತು ಸಹ ಉಸ್ತುವಾರಿಯಾಗಿ ಪ್ರಭಾಕರ್ ರೆಡ್ಡಿ ನೇಮಕ ಮಾಡಲಾಗಿದೆ.

ಚನ್ನಪಟ್ಟಣದಲ್ಲಿ ನನ್ನ ಪತ್ನಿ ಸ್ಪರ್ಧಿಸಲ್ಲ: ಸಂಸದ ಡಾ.ಸಿ.ಎನ್. ಮಂಜುನಾಥ್‌ ಸ್ಪಷ್ಟನೆ

Channapatna By Election

ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಗೆ (Channapatna By Election) ಅನುಸೂಯ ಸ್ಪರ್ಧೆ ಮಾಡುತ್ತಾರೆ ಎಂಬ ವದಂತಿ ಇದೆ. ಆದರೆ, ಯಾವುದೇ ಕಾರಣಕ್ಕೂ ಅನುಸೂಯ ಸ್ಪರ್ಧೆ ಮಾಡಲ್ಲ ಎಂದು ಬಿಜೆಪಿ ಸಂಸದ ಡಾ.ಸಿ.ಎನ್‌. ಮಂಜುನಾಥ್‌ ಸ್ಪಷ್ಟನೆ ನೀಡಿದ್ದಾರೆ.

ಚನ್ನಪಟ್ಟಣದಲ್ಲಿ ಪತ್ನಿ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ನೂರಕ್ಕೆ ನೂರು ಪರ್ಸೆಂಟ್ ನನ್ನ ಪತ್ನಿ ನಿಲ್ಲಲ್ಲ. ಕೆಲವು ಪತ್ರಿಕೆ, ಮಾಧ್ಯಮದಲ್ಲಿ ಅನಸೂಯ ಸ್ಪರ್ಧಿಸುತ್ತಾರೆ ಎಂದು ಬಂದಿದೆ. ಇದು ನಮಗೆ ಬಹಳಷ್ಟು ಮುಜುಗರ ತರಿಸಿದೆ. ಅನುಸೂಯ ಯಾವುದೇ ಕಾರಣಕ್ಕೂ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | MyMUL President: ಸಚಿವ ಕೆ.ವೆಂಕಟೇಶ್ ಕಿರುಕುಳದಿಂದಲೇ ಮೈಮುಲ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ: ಪಿ.ಎಂ.ಪ್ರಸನ್ನ

ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಡಿ.ಕೆ.ಶಿವಕುಮಾರ್ ಅವರು ಸ್ಪರ್ಧಿಸುವ ಸಾಧ್ಯತೆ ಇರುವುದರಿಂದ ಡಿ.ಕೆ. ಸಹೋದರರನ್ನು ಕಟ್ಟಿ ಹಾಕುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು, ಸಂಸದ ಡಾ.ಸಿ.ಎನ್.ಮಂಜುನಾಥ್ ಪತ್ನಿಯನ್ನು ಕಣಕ್ಕಿಳಿಸಲಿವೆ ಎಂದು ಚರ್ಚೆಯಾಗುತ್ತಿತ್ತು. ಮಹಿಳಾ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಅನಸೂಯ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಚಿಂತನೆ ನಡೆದಿದೆ ಎಂದು ಹೇಳಲಾಗಿತ್ತು. ಇದಕ್ಕೆ ಡಾ.ಮಂಜುನಾಥ್‌ ಅವರು ಸ್ಪಷ್ಟನೆ ನೀಡಿದ್ದಾರೆ.

Continue Reading

ಕರ್ನಾಟಕ

CM Siddaramaiah: ಪ್ರತಿ ಠಾಣೆಗೂ ತೆರಳಿ ಪರಿಶೀಲಿಸಬೇಕು: ಪೊಲೀಸ್‌ ಮೇಲಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

CM Siddaramaiah: ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶವನ್ನು ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

VISTARANEWS.COM


on

CM Siddaramaiah
Koo

ಬೆಂಗಳೂರು: ಎಸ್‌ಪಿ, ಡಿಸಿಪಿ, ಐಜಿಗಳು ತಮ್ಮ ವ್ಯಾಪ್ತಿಯ ಪ್ರತಿ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ. ನಿಮ್ಮ ವ್ಯಾಪ್ತಿಯಲ್ಲಿ ಕ್ಲಬ್‌ಗಳು, ಇಸ್ಪೀಟ್, ಬೆಟ್ಟಿಂಗ್, ಡ್ರಗ್ಸ್‌ ದಂಧೆ ನಿಲ್ಲಿಸದಿದ್ದರೆ ಎಸ್‌ಪಿ ಮತ್ತು‌ ಐಜಿ ಮಟ್ಟದ ಅಧಿಕಾರಿಗಳನ್ನೂ ನೇರ ಹೊಣೆ ಮಾಡಿ ಕ್ರಮ ತೆಗೆದುಕೊಳ್ಳಲಾಗುವುದು. ಎಸ್‌ಪಿ, ಐಜಿಗಳು ಪ್ರತಿ ಠಾಣೆಗೆ ಹೋಗಿ ಪರಿಶೀಲನೆ ನಡೆಸಿದರೆ ಇವನ್ನೆಲ್ಲಾ ತಪ್ಪಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.

ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶವನ್ನು ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು. ನಾಳೆಯಿಂದಲೇ ಎಸ್‌ಪಿ, ಐಜಿಗಳು ಠಾಣೆಗಳಿಗೆ ಭೇಟಿ ನೀಡಬೇಕು. ಭೇಟಿ ನೀಡಿ ಅರ್ಧಗಂಟೆಯಲ್ಲಿ ಶಾಸ್ತ್ರ ಮುಗಿಸಬಾರದು. ಕೂಲಂಕಷವಾಗಿ ಪರಿಶೀಲನೆ ನಡೆಸಬೇಕು ಎಂದು ಎಚ್ಚರಿಸಿದರು.

ಫೇಕ್ ನ್ಯೂಸ್ ಪ್ರಸಾರ ತಡೆಗಟ್ಟಿ: ಇಲ್ಲಾಂದ್ರೆ ಕ್ರಮ ಎದುರಿಸಿ

ಫೇಕ್ ನ್ಯೂಸ್‌ಗಳು ಸಮಾಜದ ನೆಮ್ಮದಿಗೆ ಕಂಟಕವಾಗಿವೆ. ಇವು ವಿಪರೀತ ಹೆಚ್ಚಾಗುತ್ತಿವೆ. ಇವುಗಳ ತಡೆಗೆ fact check ಘಟಕಗಳನ್ನು ಮಾಡಿದ್ದೇವೆ. ಆದರೂ ಫೇಕ್ ನ್ಯೂಸ್‌ಗಳು ಹೆಚ್ಚಾಗುತ್ತಿವೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಸದ್ಯ ಫೇಕ್ ನ್ಯೂಸ್ ತಡೆಯಲು ಆಗುತ್ತಿರುವ ಕೆಲಸ ಸಾಲುತ್ತಿಲ್ಲ. ಹೀಗಾಗಿ ಕೃತಕ ಬುದ್ದಿಮತ್ತೆ ಬಳಸಿ. ಸ್ವಯಂ ಪ್ರೇರಿತ ದೂರುಗಳನ್ನು ಹೆಚ್ಚೆಚ್ಚು ದಾಖಲಿಸಿ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲೇಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.

ಡ್ರಗ್ಸ್ ಪೂರ್ತಿ ನಿಂತಿಲ್ಲ ಏಕೆ?

ಡ್ರಗ್ಸ್ ಮಾರೋರು ಯಾರು? ರೌಡಿಗಳು ಯಾರು?, ರಿಯಲ್ ಎಸ್ಟೇಟ್ ಮಾಡೋರು ಯಾರು ಎನ್ನುವುದು ಆಯಾ ಠಾಣಾಧಿಕಾರಿಗಳಿಗೆ ಗೊತ್ತಿರುತ್ತೆ. ಆದರೂ ಯಾಕೆ ನಿಲ್ಲುತ್ತಿಲ್ಲ‌ ಎಂದು ಪ್ರಶ್ನಿಸಿದ ಸಿಎಂ, ನಿಮಗೆ ಗನ್‌ ಕೊಟ್ಟಿರುವುದು ಏಕೆ? ಈ ಬಗ್ಗೆ ರೌಡಿಗಳಿಗೆ ಏಕೆ ಭಯವಿಲ್ಲ. ರೌಡಿಗಳಿಗೆ ಪೊಲೀಸ್ ಭಯ ಇರಬೇಕು ಎಂದರು.

ಕೆಲವು ಪೊಲೀಸರಿಗೆ ಇ-ಬೀಟ್ ವ್ಯವಸ್ಥೆ ಜಾರಿಯಲ್ಲಿರುವುದೇ ಗೊತ್ತಿಲ್ಲ ಎಂದರೆ ನಾಚಿಕೆಗೇಡು. ಇದನ್ನು ಸರಿಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಹಿರಿಯ ಪೊಲೀಸ್ ಅಧಿಕಾರಿಗಳು ನಿಮ್ಮ ಜವಾಬ್ದಾರಿಗಳನ್ನು, ಕರ್ತವ್ಯಗಳನ್ನು ಸರಿಯಾಗಿ ನಿರ್ವಹಿಸಿದರೆ ನಿಮ್ಮ ಕೆಳಗಿನ‌ ಅಧಿಕಾರಿಗಳು‌ ಇನ್ನಷ್ಟು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಾರೆ. ಬೀಟ್ ವ್ಯವಸ್ಥೆ, ಸಂಚಾರ ವ್ಯವಸ್ಥೆ, ಹೈವೇ ಪ್ಯಾಟ್ರೋಲಿಂಗ್ ವ್ಯವಸ್ಥೆಯನ್ನು ತೀವ್ರ ಪರಿಣಾಮಕಾರಿಯಾಗಿ ನಿರ್ವಹಿಸಲು ಸಿಎಂ ಸೂಚನೆ ನೀಡಿದರು.

ಹುಬ್ಬಳ್ಳಿಯಲ್ಲಿ ಒಂದರ ಹಿಂದೆ ಮತ್ತೊಂದು ಕೊಲೆಗಳು ನಡೆದವು. ಇಂಟೆಲಿಜೆಂಟ್ ಪೊಲೀಸರು ಎಚ್ಚರ ಇದ್ದಿದ್ದರೆ ಎರಡನೇ ಕೊಲೆ ತಪ್ಪಿಸಬಹುದಿತ್ತು. ಅದಕ್ಕೇ ಹಿರಿಯ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕಾಯಿತು.‌ ಇವರ ನಿರ್ಲಕ್ಷ್ಯದಿಂದ ಕೊಲೆ ಆಗಿದೆ. ಈ ಕೊಲೆ ತಪ್ಪಿಸಬಹುದಿತ್ತು. ಜನರಿಗೆ ಪೊಲೀಸ್ ಬಳಿ ಹೋದರೆ ನ್ಯಾಯ ಸಿಗುತ್ತದೆ ಎನ್ನುವ ಆತ್ಮ ವಿಶ್ವಾಸ ಹೆಚ್ಚಾಗಬೇಕು. ಶಾಂತಿ ಸಭೆಗಳನ್ನು ಚಾಚೂ ತಪ್ಪದೆ ಕಡ್ಡಾಯವಾಗಿ ನಿಯಮಿತವಾಗಿ ನಡೆಸಲೇಬೇಕು ಎಂದು ಸೂಚಿಸಿದರು.

ಕಾನೂನು ಪ್ರಕಾರ ಕೆಲಸ ಮಾಡದಿದ್ದರೆ ಸಹಿಸಲ್ಲ

ವರ್ಗಾವಣೆಗೆ ಪ್ರಭಾವ ಬೀರುವವರ ವಿರುದ್ಧ, ಹಣ ಕೊಟ್ಟು ಟ್ರಾನ್ಸ್‌ಫರ್‌ಗೆ ಪ್ರಯತ್ನಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ನಿಮಗೆ ಸಮಸ್ಯೆಗಳಿದ್ದರೆ ಗೃಹ ಸಚಿವರು, ಪೊಲೀಸ್ ಮಹಾ ನಿರ್ದೇಶಕರಿಗೆ ತಿಳಿಸಿ ಸರಿಪಡಿಸಿಕೊಳ್ಳಿ. ಕಾನೂನು ಮೀರಿ ಕೆಲಸ ಮಾಡಿ ಎಂದು ಸರ್ಕಾರ ಯಾವತ್ತೂ ಬಯಸಲ್ಲ. ಕಾನೂನು ಪ್ರಕಾರ ಕೆಲಸ ಮಾಡದಿದ್ದರೆ ಸರ್ಕಾರ ಸಹಿಸಲ್ಲ ಎಂದರು.

ಗೃಹ ಸಚಿವರಿಗೆ, ಕರ್ನಾಟಕ‌ ಪೊಲೀಸ್‌ಗೆ ಅಭಿನಂದನೆ

ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ಕೋಮುಗಲಭೆ ಇಲ್ಲದಂತೆ ಕಾನೂನು ಸುವ್ಯವಸ್ಥೆ ಕಾಪಾಡಿದಕ್ಕೆ ಗೃಹ ಸಚಿವರಿಗೆ, ಕರ್ನಾಟಕ ಪೊಲೀಸ್‌ ಇಲಾಖೆಗೆ ಮುಖ್ಯಮಂತ್ರಿಗಳು ಅಭಿನಂಧಿಸಿದರು.‌

ಕಾರ್ಯಕ್ರಮದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಡಿಜಿ-ಐಜಿ ಡಾ.ಅಲೋಕ್ ಮೋಹನ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕ್ ಚಂದ್ರ ಉಪಸ್ಥಿತರಿದ್ದರು.

ನ್ಯಾಯ ನೀಡಿಕೆಯಲ್ಲಿ ಕರ್ನಾಟಕ ಪೊಲೀಸ್‌ಗೆ ದೇಶದಲ್ಲಿ ಪ್ರಥಮ ಸ್ಥಾನ

ದೇಶದ ಪ್ರತಿಷ್ಠಿತ India justice Report ನವರು ನಡೆಸಿದ ಸಮೀಕ್ಷೆ ಮತ್ತು ವರದಿಯಲ್ಲಿ ಕರ್ನಾಟಕ ಪೊಲೀಸ್ ಇಡೀ ದೇಶದಲ್ಲೇ ನ್ಯಾಯ ನೀಡಿಕೆ (Justice delivery) ಯಲ್ಲಿ ಪ್ರಥಮ‌ ಸ್ಥಾನ‌ ಪಡೆದಿದೆ. ಒಟ್ಟು 10 ಅಂಕಗಳನ್ನು ಇಟ್ಟು ನಡೆಸಿದ ವೈಜ್ಞಾನಿಕ ಸಮೀಕ್ಷೆಯಲ್ಲಿ ಕರ್ನಾಟಕ ಪೊಲೀಸ್ 6.38 ಅಂಕಗಳನ್ನು ಗಳಿಸುವ ಮೂಲಕ ಪ್ರಥಮ‌ ಸ್ಥಾನ ಗಳಿಸಿದೆ ಎಂದು India justice Report ಅನ್ನು ಗೃಹ ಸಚಿವ ಜಿ.ಪರಮೇಶ್ವರ್ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯ ಪ್ರಾಸ್ತಾವಿಕ ಮಾತುಗಳಲ್ಲಿ ಪ್ರಸ್ತಾಪಿಸಿ, ಈ ಗುಣಮಟ್ಟ ಕಾಯ್ದುಕೊಳ್ಳುವಂತೆ ಕಿವಿ ಮಾತು ಹೇಳಿದರು.

ಇದನ್ನೂ ಓದಿ | Channapatna By Election: ಚನ್ನಪಟ್ಟಣದಲ್ಲಿ ನನ್ನ ಪತ್ನಿ ಸ್ಪರ್ಧಿಸಲ್ಲ: ಸಂಸದ ಡಾ.ಸಿ.ಎನ್. ಮಂಜುನಾಥ್‌ ಸ್ಪಷ್ಟನೆ

ತಂತ್ರಾಂಶ ಮತ್ತು ಕೈಪಿಡಿ ಬಿಡುಗಡೆ

  • ಸೀನ್ ಆಫ್ ಕ್ರೈಂ ಕೈಪಿಡಿ
  • ಸಂಚಯ: ಹೊಸ ಕ್ರಿಮಿನಲ್ ಕಾನೂನುಗಳ ಡಿಜಿಟಲ್ ತಂತ್ರಾಂಶ, ಆಪ್ ಬಿಡುಗಡೆ.
  • ರಿಯಲ್ ಟೈಂ ಟ್ರಾಕಿಂಗ್ ಆಫ್ ಹೊಯ್ಸಳ ತಂತ್ರಾಂಶ
  • ಬೆಂಗಳೂರು ಸಿಟಿ ಪೊಲೀಸ್- ಸೇಫ್ ಕನೆಕ್ಟ್ (ಕಮಾಂಡ್ ಸೆಂಡರ್ ಜೊತೆಗೆ ನೊಂದವರು ಆಡಿಯೊ, ವಿಡಿಯೊ ಕಾಲ್ ಮೂಲಕ ಸಂಪರ್ಕ‌ ಸಾಧಿಸುವ ಸಾಧನ)
  • ಡಿಜಿಟಲ್ ಅರೆಸ್ಟ್ ಸ್ಕ್ಯಾಮ್ (ಸೈಬರ್ ಕ್ರೈಂ ಕೈಪಿಡಿ) ಬಿಡುಗಡೆ ಮಾಡಲಾಯಿತು.
Continue Reading

ದೇಶ

Rahul Gandhi: “ಮೋದಿ ಅಯೋಧ್ಯೆಯಲ್ಲಿ ಸ್ಪರ್ಧಿಸಿದ್ದರೆ…” ಪ್ರಧಾನಿಯನ್ನು ಮತ್ತೆ ಕೆಣಕಿದ ರಾಹುಲ್‌

Rahul Gandhi: ಅವರು ಇಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಈ ಬಾರಿ ಪ್ರಧಾನಿ ಮೋದಿ ಅಯೋಧ್ಯೆಯಿಂದ ಕಣಕ್ಕಿಯಲು ಮುಂದಾಗಿದ್ದರು. ಆದರೆ ಅವರ ಜೊತೆಗಾರರು ಅವರು ಆ ಕ್ಷೇತ್ರದಿಂದ ಸ್ಪರ್ಧಿಸುವುದು ಬೇಡ ಎಂದುಅವರ ಬೆಂಬಲಿಗರೇ ಸೂಚಿಸಿದ್ದರು.ಅವರು ಆ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರೆ ಖಂಡಿತ ಸೋಲುತ್ತಿದ್ದರು.

VISTARANEWS.COM


on

Rahul Gandhi
Koo

ಅಹಮದಾಬಾದ್‌: ವಿಪಕ್ಷ ನಾಯಕ ರಾಹುಲ್‌ ಗಾಂಧಿ(Rahul Gandhi) ಮತ್ತೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ವಿರುದ್ಧ ಹರಿಹಾಯ್ದಿದ್ದಾರೆ. ಪ್ರಧಾನಿ ಮೋದಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅಯೋಧ್ಯೆಯಿಂದ ಸ್ಪರ್ಧಿಸಲು ನಿರ್ಧರಿಸಿದ್ದರು. ಆದರೆ ಸೋಲಿನ ಭಯ ಇದ್ದ ಕಾರಣವೇ ಅವರು ಸ್ಪರ್ಧಿಸಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಅವರು ಇಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಈ ಬಾರಿ ಪ್ರಧಾನಿ ಮೋದಿ ಅಯೋಧ್ಯೆಯಿಂದ ಕಣಕ್ಕಿಯಲು ಮುಂದಾಗಿದ್ದರು. ಆದರೆ ಅವರ ಜೊತೆಗಾರರು ಅವರು ಆ ಕ್ಷೇತ್ರದಿಂದ ಸ್ಪರ್ಧಿಸುವುದು ಬೇಡ ಎಂದುಅವರ ಬೆಂಬಲಿಗರೇ ಸೂಚಿಸಿದ್ದರು.ಅವರು ಆ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರೆ ಖಂಡಿತ ಸೋಲುತ್ತಿದ್ದರು. ಅದೂ ಅವರಿಗೂ ಗೊತ್ತಿತ್ತು. ಬಿಜೆಪಿಯ ಭದ್ರಕೋಟೆಯಂತಿದ್ದ ಅಯೋಧ್ಯೆಯಲ್ಲೇ ನಾವು ಬಿಜೆಪಿಗೆ ಸೋಲಿನ ರುಚಿ ತೋರಿಸಿದ್ದೇವೆ. ಒಂದು ವೇಳೆ ಮೋದಿ ಅಯೋಧ್ಯೆಯಲ್ಲಿ ಸ್ಪರ್ಧಿಸಿದ್ದರೆ ಮೋದಿಯ ರಾಜಕೀಯ ಭವಿಷ್ಯ ಸಂಪೂರ್ಣವಾಗಿ ಕೊನೆಯಾಗುತ್ತಿತ್ತು ಎಂದು ಹೇಳಿದ್ದಾರೆ.

ಪ್ರಧಾನಿ ಮಾತೆತ್ತಿದರೆ ತಮಗೆ ನೇರವಾಗಿ ದೇವರ ಜೊತೆ ಸಂಪರ್ಕ ಇದೆ ಅನ್ನುತ್ತಾರೆ. ಹಾಗಿರುವಾಗ ರಾಮ ಜನ್ಮಭೂಮಿ ಅಯೋಧ್ಯೆಯಲ್ಲೇ ಏಕೆ ಬಿಜೆಪಿಗೆ ಗೆಲ್ಲಲು ಸಾಧ್ಯವಾಗಿಲ್ಲ ಎಂದು ರಾಹುಲ್‌ ಪ್ರಶ್ನಿಸಿದ್ದಾರೆ.

ಮೋದಿ ಸಾಮಾನ್ಯ ವ್ಯಕ್ಯಿಯಲ್ಲ. ದೇವರ ಆದೇಶದ ಮೇರೆಗೆ ಅವರು ಕೆಲಸ ಮಾಡುವವರು. ಅವರ ಆತ್ಮದ ಜೊತೆ ಪರಮಾತ್ಮ ಸಂವಹನ ನಡೆಸುತ್ತಾನೆ. ಪರಮಾತ್ಮನ ಸೂಚನೆಯ ಮೇರೆಗೆ ಅವರು ನೋಟು ಅಮಾನೀಕರದಂತಹ ಮಹತ್ವದ ನಿರ್ಧಾರವನ್ನು ದಿಢೀರ್‌ ಅಂತ ಘೋಷಿಸುತ್ತಾರೆ. ದೇವರ ಆದೇಶದ ಮೇರೆಗೇ ಬಡವರ ಬದಲಿಗೆ ಅಂಬಾನಿ, ಅದಾನಿಯಂತಹ ಉದ್ಯಮಿಗಳ ಏಳಿಗೆಗೆ ಶ್ರಮಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆಯ ದಿನ ಅದಾನಿ ಅಂಬಾನಿಯವರನ್ನು ಆಮಂತ್ರಿಸಲಾಗಿತ್ತು. ಆದರೆ, ಅಲ್ಲಿನ ಸ್ಥಳೀಯ ಜನರನ್ನು ದೂರವಿಡಲಾಗಿತ್ತು. ಆದರೆ, ಲೋಕಸಭಾ ಚುನಾವಣೆಯಲ್ಲಿ ಅಲ್ಲಿನ ಮತದಾರರು ಬಿಜೆಪಿಗೆ ಸೂಕ್ತ ಪಾಠ ಕಲಿಸಿದ್ದಾರೆ” ಎಂದು ರಾಹುಲ್ ಗಾಂಧಿ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದರು.

ಉತ್ತರ ಪ್ರದೇಶದಲ್ಲಿ ಈ ಬಾರಿ ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ. ಬಿಜೆಪಿ 2019ರ 62 ಸ್ಥಾನಗಳಿಂದ 33 ಸ್ಥಾನಕ್ಕೆ ಇಳಿಕೆಯಾದೆರ ಸಮಾಜವಾದಿ ಪಾರ್ಟಿ 37 ಹಾಗೂ ಕಾಂಗ್ರೆಸ್​ 6 ಸ್ಥಾನಗಳನ್ನು ಗೆಲ್ಲುವ ಮೂಲಕ ಇಂಡಿಯಾ ಒಕ್ಕೂಟ ಒಟ್ಟು 43 ಸ್ಥಾನಗಳನ್ನು ಗಳಿಸಿಕೊಂಡಿದೆ. ಇದು ಕೇಂದ್ರಲ್ಲಿ ಸರಳ ಬಹುಮತದೊಂದಿಗೆ ಸರ್ಕಾರ ರಚಿಸುವ ಮೋದಿ ನೇತೃತ್ವದ ಎನ್​ಡಿಎ ಒಕ್ಕೂಟದ ಶಕ್ತಿಯೂ ಧಕ್ಕೆ ತಂದಿದೆ.

ಇದನ್ನೂ ಓದಿ: Hathras Stampede: ಹತ್ರಾಸ್‌ನಲ್ಲಿ ಕಾಲ್ತುಳಿತ; 6 ಜನರನ್ನು ಬಂಧಿಸಿದ ಉತ್ತರ ಪ್ರದೇಶ ಪೊಲೀಸರು

Continue Reading
Advertisement
Champions Trophy 2025:
ಪ್ರಮುಖ ಸುದ್ದಿ26 mins ago

Champions Trophy 2025 : ಭಾರತ ತಂಡ ಪಾಕಿಸ್ತಾನಕ್ಕೆ ಬರಲೇಬೇಕು ಹಠ ಹಿಡಿದು ಕುಳಿತಿರುವ ಪಿಸಿಬಿ

Rain News
ದೇಶ26 mins ago

Rain News: ವರುಣನ ಆರ್ಭಟ; ಮಳೆ ಸಂಬಂಧಿ ಅವಘಡಗಳಿಗೆ 24 ಗಂಟೆಯಲ್ಲಿ 13 ಜನ ಬಲಿ

KAS
ಕರ್ನಾಟಕ1 hour ago

KAS: ಕೆಎಎಸ್‌ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್;‌ ನೇಮಕಾತಿಗೆ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ, ಇಲ್ಲಿದೆ ಮಾಹಿತಿ

Mid Day Meal
ದೇಶ2 hours ago

Mid Day Meal: ಮಕ್ಕಳ ಬಿಸಿಯೂಟದಲ್ಲೂ ಕಳ್ಳಾಟ, ವಿದ್ಯಾರ್ಥಿಗಳಿಗೆ ಸಿಗೋದು ಬರೀ ಅನ್ನ-ಅರಿಶಿಣ; Video ಇದೆ

Dr HS Shetty: Rs 7 crore spent on charity; Businessman Dr. HS Shetty
ಪ್ರಮುಖ ಸುದ್ದಿ2 hours ago

Dr HS Shetty : ದಾನಗಳಿಗಾಗಿಯೇ ವರ್ಷದಲ್ಲಿ 7 ಕೋಟಿ ರೂ. ವಿನಿಯೋಗ

Vasishtha Simha starrer VIP Kannada movie
ಕರ್ನಾಟಕ2 hours ago

Kannada New Movie: ಖ್ಯಾತ ಗಾಯಕಿ ಕೆ.ಎಸ್.ಚಿತ್ರಾ ಕಂಠಸಿರಿಯಲ್ಲಿ ವಸಿಷ್ಠ ಸಿಂಹ ಅಭಿನಯದ ‘ವಿಐಪಿ’ ಚಿತ್ರದ ಹಾಡು

Asia Cup 2024
ಪ್ರಮುಖ ಸುದ್ದಿ3 hours ago

Asia Cup 2024 : ಮಹಿಳಾ ಏಷ್ಯಾಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

Viral Video
Latest3 hours ago

Viral Video: ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ; ಪ್ರಾಂಶುಪಾಲರನ್ನು ಕುರ್ಚಿ ಸಹಿತ ಹೊರಗೆಳೆದ ಸಿಬ್ಬಂದಿ

Kashmir Encounter
ದೇಶ3 hours ago

Kashmir Encounter: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ನಾಲ್ವರು ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ

Viral Video
Latest3 hours ago

Viral Video : ಹೀಗೆಲ್ಲಾ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಾರಾ…? ವಿಡಿಯೊ ನೋಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ6 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ8 hours ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ9 hours ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು12 hours ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ13 hours ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ18 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ1 day ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ1 day ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ1 day ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ1 day ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

ಟ್ರೆಂಡಿಂಗ್‌