Actor Darshan: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಹೆಸರು ಆಚೆ ಬಂದದ್ದು ಹೀಗೆ! - Vistara News

ಕ್ರೈಂ

Actor Darshan: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಹೆಸರು ಆಚೆ ಬಂದದ್ದು ಹೀಗೆ!

Actor Darshan: ರೇಣುಕಾ ಸ್ವಾಮಿಯನ್ನು ಹಂತಕ‌ ಪಡೆ ಕೊಲೆ ಮಾಡಿದ್ದು ಶನಿವಾರ. ಭಾನುವಾರ ಸುಮನಹಳ್ಳಿ ಕಾಲುವೆಯಲ್ಲಿ ಆತನ ಶವ ಸಿಕ್ಕಿತ್ತು. ಶವ ಯಾರದು ಎಂಬ ಹುಡುಕಾಟದಲ್ಲಿದ್ದ ಪೊಲೀಸರಿಗೆ ನಾಲ್ವರು ಆರೋಪಿಗಳು ತಾವಾಗಿ ಬಂದು ಶರಣಾಗಿದ್ದರು. ಆದರೆ ದರ್ಶನ್‌ ಕೈವಾಡ ಗೊತ್ತಾಗುವ ಮುನ್ನ ಪೊಲೀಸರೂ ತುಂಬಾ ಬೆವರು ಹರಿಸಬೇಕಾಗಿ ಬಂದಿತ್ತು.

VISTARANEWS.COM


on

Actor Darshan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ (Renuka Swamy Murder) ಪ್ರಕರಣದಲ್ಲಿ ನಟ ದರ್ಶನ್‌ (Actor Darshan) ಹೆಸರು ಆಚೆಗೇ ಬಾರದೆ ಮುಚ್ಚಿಹೋಗುವುದರಲ್ಲಿತ್ತು. ಆರಂಭದಲ್ಲಿ ಪೊಲೀಸರಿಗೂ (Police) ಇದರ ಅರಿವು ಇರಲಿಲ್ಲ. ಆದರೆ ಪ್ರಕರಣವನ್ನು ಗಂಭಿರವಾಗಿ ಪರಿಗಣಿಸಿ ತನಿಖೆ ಮಾಡುತ್ತ ಹೋದಂತೆಲ್ಲಾ ಒಂದೊಂದೇ ಎಳೆಗಳು ಬಿಚ್ಚಿಕೊಂಡು ದರ್ಶನ್‌ ಜೈಲುಪಾಲಾಗುವಂತಾಯಿತು. ಅದೇ ಒಂದು ರೋಚಕ ಕಹಾನಿ.

ಹತ್ಯೆಯ ಹಿಂದಿದ್ದ ಮಾಸ್ಟರ್ ಮೈಂಡ್ ಹೆಸರು ಬಾಯಿ ಬಿಡಿಸುವುದಕ್ಕೆ ಪೊಲೀಸರಿಗೆ ಸರಿ ಸುಮಾರು ಹತ್ತು ಗಂಟೆ ತೆಗೆದುಕೊಂಡಿತ್ತು. ಅದು ನಡೆದದ್ದು ಹೀಗೆ- ರೇಣುಕಾ ಸ್ವಾಮಿಯನ್ನು ಹಂತಕ‌ ಪಡೆ ಕೊಲೆ ಮಾಡಿದ್ದು ಶನಿವಾರ. ಭಾನುವಾರ ಸುಮನಹಳ್ಳಿ ಕಾಲುವೆಯಲ್ಲಿ ಆತನ ಶವ ಸಿಕ್ಕಿತ್ತು. ಶವ ಯಾರದು ಎಂಬ ಹುಡುಕಾಟದಲ್ಲಿದ್ದ ಪೊಲೀಸರಿಗೆ ನಾಲ್ವರು ಆರೋಪಿಗಳು ತಾವಾಗಿ ಬಂದು ಶರಣಾಗಿದ್ದರು.

ಕಾರ್ತಿಕ್, ನಿಖಿಲ್, ಕೇಶವ ಮೂರ್ತಿ ಹಾಗೂ ರಾಘವೇಂದ್ರ ಪೊಲೀಸರ ಬಳಿಗೆ ಸೋಮವಾರ ಬಂದು, ಕೊಲೆ ಮಾಡಿದ್ದು ನಾವೇ ಅಂತ ಹೇಳಿದ್ದರು. ಹಣಕಾಸಿನ ವಿಚಾರಕ್ಕಾಗಿ ನಾವೇ ಹಲ್ಲೆ ಮಾಡಿದೆವು, ಹಲ್ಲೆ ಮಾಡಿದ್ದು ಜಾಸ್ತಿಯಾಗಿ ಆತ ಸತ್ತುಹೋದ ಎಂದಿದ್ದರು. ಎಷ್ಟು ಪ್ರಶ್ನಿಸಿದರೂ ಅದರಾಚೆಗೆ ಬಾಯಿ ಬಿಟ್ಟಿರಲಿಲ್ಲ. ಆದರೆ ಹಲ್ಲೆ ಮಾಡಿದ ಜಾಗ ಯಾವುದು, ಅಲ್ಲಿಂದ ಇಲ್ಲಿಗೆ ಹೆಣ ಸಾಗಿಸಿದ್ದು ಹೇಗೆ, ಯಾವ ವಾಹನದಲ್ಲಿ, ರೇಣುಕಾ ಸ್ವಾಮಿಗೆ ಕೊಟ್ಟ ಹಣ ನಿಮಗೆ ಬಂದಿದ್ದು ಹೇಗೆ, ಆತನಿಗೂ ನಿಮಗೂ ಹೇಗೆ ಲಿಂಕು, ಇತ್ಯಾದಿ ಸರಣಿ ಪ್ರಶ್ನೆಗಳನ್ನು ಪೊಲೀಸರು ಹಾಕತೊಡಗಿದ ಕೂಡಲೇ ಶರಣಾಗತರು ಉತ್ತರ ಕೊಡಲಾಗದೆ ತತ್ತರಿಸಲು ಆರಂಭಿಸಿದರು.

ಸತತ ಹತ್ತು ಗಂಟೆಗಳ ಪ್ರಶ್ನಾವಳಿಯ ಬಳಿಕ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಪ್ರದೂಷ್ ಹಾಗೂ ವಿನಯ್ ಹೆಸರುಗಳನ್ನು ಶರಣಾಗತರು ಬಾಯಿ ಬಿಟ್ಟಿದ್ದರು. ಇವರಿಬ್ಬರ ಹೆಸರು ಬಂದ ಕೂಡಲೇ ಜಾಗೃತರಾದ ಪೊಲೀಸರು, ಪ್ರಕರಣದಲ್ಲಿ ಇನ್ನಷ್ಟು ದೊಡ್ಡ ಹೆಸರುಗಳು ಇರಬಹುದು ಎಂಬ ಅರಿವಾಗಿ ಜಾಗೃತರಾದರು. ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪ್ರದೂಷ್ ಹಾಗೂ ವಿನಯ್‌ರನ್ನು ವಶಕ್ಕೆ ಪಡೆದರು.

ಪ್ರದೂಷ್‌ ಹಾಗೂ ವಿನಯ್‌ ಸುಲಭವಾಗಿ ಬಾಯಿ ಬಿಡಲಿಲ್ಲ. ಆರಂಭದಲ್ಲಿ, ಶರಣಾದವರು ಯಾರೂ ನಮಗೆ ಗೊತ್ತೇ ಇಲ್ಲ ಎಂದುಬಿಟ್ಟರು. ಪೊಲೀಸರು ವಿಚಾರಣೆ ತೀವ್ರಗೊಳಿಸಿದರು. ಆಗಲೂ ದರ್ಶನ್‌ ಹೆಸರು ಬಾಯಿ ಬಿಡಲಿಲ್ಲ ಪ್ರದೂಷ್ ಹಾಗೂ ವಿನಯ್. ಆದರೆ ಬೆಳಗಿನ ಜಾವ ಪೊಲೀಸರ ವಿಚಾರಣೆ ಧಾಟಿಗೆ ಬಳಲಿಹೋಗಿದ್ದ ವಿನಯ್ ಹಾಗೂ ಪ್ರದೂಷ್ ಪವಿತ್ರ ಗೌಡಳ ಹೆಸರು ಹೇಳಿದ್ದರು. ಪವಿತ್ರ ಗೌಡ ಯಾರು ಎಂದು ತಲೆ ಕೆಡಿಸಿಕೊಂಡ ಪೊಲೀಸರಿಗೆ ಆಕೆಗೆ ದರ್ಶನ್‌ ಲಿಂಕ್‌ ಇರುವುದು ಗೊತ್ತಾಗಿ ಇದು ಹೈ ಪ್ರೊಫೈಲ್‌ ಕೇಸು ಎಂಬುದು ಗೊತ್ತಾಗಿ ಹೋಗಿದೆ.

ನಂತರ ಪೊಲೀಸರು ಪವಿತ್ರ ಗೌಡಳ ಮನೆಗೆ ತೆರಳಿ ವಿಚಾರಣೆ ನಡೆಸಿದ್ದಾರೆ. ಅಷ್ಟರಲ್ಲಿ ದರ್ಶನ್ ಜೊತೆ ಪವಿತ್ರ ಗೌಡ ಲಿಂಕ್ ಇರುವುದು ಚಾಟಿಂಗ್ಸ್, ಕಾಲ್ ಡಿಟೇಲ್ಸ್ ಮೂಲಕ ಪತ್ತೆಯಾಗಿದೆ. ಆರೋಪಿಗಳನ್ನೂ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ಕೂರಿಸಿಕೊಂಡು ಮತ್ತಷ್ಟು ವಿಚಾರಣೆ ನಡೆಸಿದಾಗ ಎಲ್ಲರೂ ಡಿ ಬಾಸ್‌ ಗ್ಯಾಂಗ್‌ ಆಗಿರುವುದು ಗೊತ್ತಾಗಿದೆ. ಪವಿತ್ರ ಗೌಡ ಕಾಲ್‌ ಹಿಸ್ಟರಿ, ಚಾಟ್‌ ಎಲ್ಲ ತೆಗೆದಾಗ ಅದರಲ್ಲಿ ರೇಣುಕ ಸ್ವಾಮಿಯ ಅಶ್ಲೀಲ ಮೆಸೇಜ್‌ಗಳ ಬಗೆಗಿನ ವಿವರಗಳು ಕಂಡುಬಂದಿವೆ. ಈ ಬಗ್ಗೆ ಪವನ್‌, ದರ್ಶನ್‌ಗೆ ಕಾಲ್‌ ಮಾಡಿ ರೇಣುಕಾ ಸ್ವಾಮಿಯ ಹಾವಳಿಯ ಬಗ್ಗೆ ತಿಳಿಸಿದ್ದು ಕೂಡ ಗೊತ್ತಾಗಿದೆ.

ಕೂಡಲೇ ಪ್ರಕರಣದ ತನಿಖೆ ನಡೆಸುತ್ತಿದ್ದ ಡಿಸಿಪಿ ಗಿರೀಶ್ ಈ ವಿಷಯವನ್ನು ಕಮೀಷನರ್‌ಗೆ ಮುಟ್ಟಿಸಿದ್ದರು. ಪ್ರಕರಣದ ಗಂಭೀರತೆ ಅರಿತ ಕಮೀಷನರ್, ದರ್ಶನ್ ಬಂಧನಕ್ಕೆ‌‌ ಸೂಚನೆ ನೀಡಿದ್ದರು. ಜೂನ್ 10ರ ರಾತ್ರಿಯೇ ಮೈಸೂರಿಗೆ ತೆರಳಿದ ಬೆಂಗಳೂರು ಪೊಲೀಸರು ದರ್ಶನ್ ಇರುವ ಸ್ಥಳದ ಮಾಹಿತಿ ಕಲೆ ಹಾಕಿದ್ದರು. ಜೂನ್ 11ರ ಬೆಳಗ್ಗೆ 6.30ಕ್ಕೆ ಮೈಸೂರಿನ ರ್ಯಾಡಿಸನ್ ಹೋಟೆಲ್​ನಲ್ಲಿ ಜಿಮ್ ಮಾಡುತ್ತಿದ್ದ ದರ್ಶನ್ ಹೊರಗೆ ಬಂದ ಕೂಡಲೇ ವಶಕ್ಕೆ ಪಡೆದರು.

ಇದನ್ನೂ ಓದಿ: Actor Darshan: ದರ್ಶನ್‌ ಮೇಲಿನ ಅಂಧಾಭಿಮಾನ; ಮಗನನ್ನೇ ಕೈದಿ ಮಾಡಿದ ಹುಚ್ಚು ಫ್ಯಾನ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Dengue cases in Karnataka: ರಾಜ್ಯದಲ್ಲಿಂದು 175 ಡೆಂಗ್ಯೂ ಕೇಸ್‌ಗಳು ಪತ್ತೆ; ಸಕ್ರಿಯ ಪ್ರಕರಣಗಳ ಸಂಖ್ಯೆ 352ಕ್ಕೆ ಏರಿಕೆ!

Dengue cases in Karnataka: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 753 ಮಂದಿಗೆ ಡೆಂಗ್ಯೂ ಟೆಸ್ಟ್‌ ನಡೆಸಿದ್ದು, ಈ ಪೈಕಿ 175 ಮಂದಿಗೆ ಸೋಂಕು ದೃಢವಾಗಿದೆ.

VISTARANEWS.COM


on

Dengue cases in Karnataka
Koo

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 175 ಡೆಂಗ್ಯೂ ಕೇಸ್‌ಗಳು ಪತ್ತೆಯಾಗಿವೆ. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲೇ 115 ಹೊಸ ಕೇಸ್‌ಗಳು ವರದಿಯಾಗಿದ್ದು, ಒಟ್ಟಾರೆ ರಾಜ್ಯದಲ್ಲಿ (Dengue cases in Karnataka) 352 ಸಕ್ರಿಯ ಡೆಂಗ್ಯೂ ಪ್ರಕರಣಗಳು ಇವೆ. ಡೆಂಗ್ಯೂ ಸೋಂಕಿನಿಂದ ಜನವರಿಯಿಂದ ಈವರೆಗೆ ಒಟ್ಟು 6 ಮಂದಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 753 ಮಂದಿಗೆ ಡೆಂಗ್ಯೂ ಟೆಸ್ಟ್‌ ನಡೆಸಿದ್ದು, ಈ ಪೈಕಿ 175 ಮಂದಿಗೆ ಸೋಂಕು ದೃಢವಾಗಿದೆ. ಜಿಲ್ಲಾವಾರು ನೋಡುವುದಾದರೆ ಬೆಂಗಳೂರಿನಲ್ಲಿ 115, ಬೆಂಗಳೂರು ಗ್ರಾಮಾಂತರ 2, ವಿಜಯಪುರ 9, ಗದಗ 8, ಉತ್ತರ ಕನ್ನಡ 1, ಬಳ್ಳಾರಿ 1, ಮಂಡ್ಯ 26, ಉಡುಪಿ 2, ಕೊಡಗು ಜಿಲ್ಲೆಯಲ್ಲಿ 11 ಪ್ರಕರಣ ಪತ್ತೆಯಾಗಿವೆ. ಸದ್ಯ ಇರುವ 325 ಸಕ್ರಿಯ ಪ್ರಕರಣಗಳ ಪೈಕಿ 45 ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜನವರಿಯಿಂದ ಈವರೆಗೆ ರಾಜ್ಯದಲ್ಲಿ ಒಟ್ಟು 7,006 ಡೆಂಗ್ಯೂ ಕೇಸ್‌ಗಳು ವರದಿಯಾಗಿದ್ದು, ಒಟ್ಟು 6 ಮಂದಿ ಮೃತಪಟ್ಟಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿಯೇ 1,908 ಸೋಂಕು ಪ್ರಕರಣಗಳು ದಾಖಲಾಗಿವೆ.

ಶಿರಸಿಯಲ್ಲಿ ಶಂಕಿತ ಡೆಂಗ್ಯೂ ಜ್ವರದಿಂದ ವಿದ್ಯಾರ್ಥಿನಿ ಸಾವು

ಕಾರವಾರ: ಶಂಕಿತ ಡೆಂಗ್ಯೂ ಜ್ವರದಿಂದ (Dengue fever) ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಶಿರಸಿಯ ಕಸ್ತೂರಬಾ ನಗರದ ಸುಹಾನಾ ಮಹ್ಮದ್ ಶಫಿ (12) ಮೃತ ದುರ್ದೈವಿ. ಡೆಂಗ್ಯೂ ಲಕ್ಷಣಗಳು ಕಂಡುಬಂದಿದ್ದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಜ್ವರಕ್ಕೆ ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದಳು. ಚಿಕಿತ್ಸೆ ಫಲಿಸದ ಹಿನ್ನೆಲೆಯಲ್ಲಿ ಬಾಲಕಿ ಕೊನೆಯುಸಿರೆಳೆದಿದ್ದಾಳೆ.

ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿರಸಿ ನಗರದ ಮಹಾಲಕ್ಷ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಇದುವರೆಗೆ 122 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಅಬ್ಬರ

ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಅಬ್ಬರಿಸುತ್ತಿದೆ. ಇದುವರೆಗೆ ಜಿಲ್ಲೆಯಲ್ಲಿ 122 ಮಂದಿಗೆ ಡೆಂಗ್ಯೂ ದೃಢವಾಗಿದ್ದು, 1692 ಡೆಂಗ್ಯೂ ಶಂಕಿತರನ್ನು ಪತ್ತೆ ಹಚ್ಚಲಾಗಿದೆ. 1499 ಮಂದಿ ಡೆಂಗ್ಯೂ ಶಂಕಿತರಿಗೆ ಪರೀಕ್ಷೆ ನಡೆಸಲಾಗಿದೆ.

ಜಿಲ್ಲೆಯ ಅಂಕೋಲಾ, ಹೊನ್ನಾವರ ತಾಲೂಕುಗಳಲ್ಲಿ 30ಕ್ಕೂ ಅಧಿಕ ಡೆಂಗ್ಯೂ ಸೋಂಕಿತರು ಪತ್ತೆಯಾಗಿದ್ದಾರೆ. ಹೀಗಾಗಿ ಡೆಂಗ್ಯೂ ಕುರಿತು ಮನೆ ಮನೆಗೆ ತೆರಳಿ ಆಶಾಕಾರ್ಯಕರ್ತೆಯರು ಜಾಗೃತಿ ಮೂಡಿಸುತ್ತಿದ್ದಾರೆ. ನೀರು ಖಾಲಿ‌ ಮಾಡಲು ಸಾಧ್ಯವಾದ ಸ್ಥಳಗಳಲ್ಲಿ ಲಾರ್ವಾ ನಾಶಕ ಔಷಧ ಸಿಂಪಡಣೆಗೆ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ | Dengue fever: ಹಾವೇರಿಯಲ್ಲಿ ಶಂಕಿತ ಡೆಂಗ್ಯೂಗೆ 9 ವರ್ಷದ ಮಗು ಬಲಿ

ಆರೋಗ್ಯ ಇಲಾಖೆಯಿಂದಲೂ ಜಾಗೃತಿ‌ ಕಾರ್ಯಕ್ರಮಗಳ ಆಯೋಜನೆ ಮಾಡಲಾಗಿದ್ದು, ವಾರಕ್ಕೊಮ್ಮೆ ಮನೆ ಮನೆಗೆ ಭೇಟಿ ನೀಡಿ ಆಶಾಕಾರ್ಯಕರ್ತೆಯರಿಂದ ಮಾಹಿತಿ ಸಂಗ್ರಹ ಕಾರ್ಯ ನಡೆಯುತ್ತಿದೆ. ಜ್ವರ ಬಂದಾಗ ನಿರ್ಲಕ್ಷ್ಯ ತೋರದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಸೂಚನೆ ನೀಡಲಾಗುತ್ತಿದೆ ಎಂದು ಕಾರವಾರ ತಾಲೂಕು ಆರೋಗ್ಯಾಧಿಕಾರಿ ಡಾ.ರಮೇಶ ರಾವ್ ಮಾಹಿತಿ ನೀಡಿದ್ದಾರೆ.

Continue Reading

ಕರ್ನಾಟಕ

Dengue fever: ಶಿರಸಿಯಲ್ಲಿ ಶಂಕಿತ ಡೆಂಗ್ಯೂ ಜ್ವರದಿಂದ ವಿದ್ಯಾರ್ಥಿನಿ ಸಾವು

Dengue fever: ಶಿರಸಿಯ ಕಸ್ತೂರಬಾ ನಗರದ 12 ವರ್ಷದ ವಿದ್ಯಾರ್ಥಿನಿ ಶಂಕಿತ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾಳೆ. ಇದುವರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ 122 ಮಂದಿಗೆ ಡೆಂಗ್ಯೂ ದೃಢವಾಗಿದೆ.

VISTARANEWS.COM


on

Dengue fever
Koo

ಕಾರವಾರ: ಶಂಕಿತ ಡೆಂಗ್ಯೂ ಜ್ವರದಿಂದ (Dengue fever) ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಶಿರಸಿಯ ಕಸ್ತೂರಬಾ ನಗರದ ಸುಹಾನಾ ಮಹ್ಮದ್ ಶಫಿ (12) ಮೃತ ದುರ್ದೈವಿ. ಡೆಂಗ್ಯೂ ಲಕ್ಷಣಗಳು ಕಂಡುಬಂದಿದ್ದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಜ್ವರಕ್ಕೆ ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದಳು. ಚಿಕಿತ್ಸೆ ಫಲಿಸದ ಹಿನ್ನೆಲೆಯಲ್ಲಿ ಬಾಲಕಿ ಕೊನೆಯುಸಿರೆಳೆದಿದ್ದಾಳೆ.

ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿರಸಿ ನಗರದ ಮಹಾಲಕ್ಷ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಇದುವರೆಗೆ 122 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಅಬ್ಬರ

ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಅಬ್ಬರಿಸುತ್ತಿದೆ. ಇದುವರೆಗೆ ಜಿಲ್ಲೆಯಲ್ಲಿ 122 ಮಂದಿಗೆ ಡೆಂಗ್ಯೂ ದೃಢವಾಗಿದ್ದು, 1692 ಡೆಂಗ್ಯೂ ಶಂಕಿತರನ್ನು ಪತ್ತೆ ಹಚ್ಚಲಾಗಿದೆ. 1499 ಮಂದಿ ಡೆಂಗ್ಯೂ ಶಂಕಿತರಿಗೆ ಪರೀಕ್ಷೆ ನಡೆಸಲಾಗಿದೆ.

ಜಿಲ್ಲೆಯ ಅಂಕೋಲಾ, ಹೊನ್ನಾವರ ತಾಲೂಕುಗಳಲ್ಲಿ 30ಕ್ಕೂ ಅಧಿಕ ಡೆಂಗ್ಯೂ ಸೋಂಕಿತರು ಪತ್ತೆಯಾಗಿದ್ದಾರೆ. ಹೀಗಾಗಿ ಡೆಂಗ್ಯೂ ಕುರಿತು ಮನೆ ಮನೆಗೆ ತೆರಳಿ ಆಶಾಕಾರ್ಯಕರ್ತೆಯರು ಜಾಗೃತಿ ಮೂಡಿಸುತ್ತಿದ್ದಾರೆ. ನೀರು ಖಾಲಿ‌ ಮಾಡಲು ಸಾಧ್ಯವಾದ ಸ್ಥಳಗಳಲ್ಲಿ ಲಾರ್ವಾ ನಾಶಕ ಔಷಧ ಸಿಂಪಡಣೆಗೆ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ | Dengue Fever: ಸಿಲಿಕಾನ್‌ ಸಿಟಿಯಲ್ಲಿ ಡೆಂಗ್ಯು ಜ್ವರಕ್ಕೆ ಬಾಲಕ ಬಲಿ, ರಾಜಧಾನಿಯಲ್ಲಿ 2ನೇ ಸಾವು

ಆರೋಗ್ಯ ಇಲಾಖೆಯಿಂದಲೂ ಜಾಗೃತಿ‌ ಕಾರ್ಯಕ್ರಮಗಳ ಆಯೋಜನೆ ಮಾಡಲಾಗಿದ್ದು, ವಾರಕ್ಕೊಮ್ಮೆ ಮನೆ ಮನೆಗೆ ಭೇಟಿ ನೀಡಿ ಆಶಾಕಾರ್ಯಕರ್ತೆಯರಿಂದ ಮಾಹಿತಿ ಸಂಗ್ರಹ ಕಾರ್ಯ ನಡೆಯುತ್ತಿದೆ. ಜ್ವರ ಬಂದಾಗ ನಿರ್ಲಕ್ಷ್ಯ ತೋರದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಸೂಚನೆ ನೀಡಲಾಗುತ್ತಿದೆ ಎಂದು ಕಾರವಾರ ತಾಲೂಕು ಆರೋಗ್ಯಾಧಿಕಾರಿ ಡಾ.ರಮೇಶ ರಾವ್ ಮಾಹಿತಿ ನೀಡಿದ್ದಾರೆ.

Dengue fever: ಹಾವೇರಿಯಲ್ಲಿ ಶಂಕಿತ ಡೆಂಗ್ಯೂಗೆ 9 ವರ್ಷದ ಮಗು ಬಲಿ

ಹಾವೇರಿ: ಶಂಕಿತ ಡೆಂಗ್ಯೂ ಜ್ವರಕ್ಕೆ (Dengue fever) ಜಿಲ್ಲೆಯಲ್ಲಿ 9 ವರ್ಷದ ಮಗು ಬಲಿಯಾಗಿದೆ. ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದ ದ್ಯಾಮಪ್ಪ ಬನ್ನಿಹಟ್ಟಿ ಎಂಬುವವರ ಪುತ್ರಿ ದಿವ್ಯ ದ್ಯಾಮಪ್ಪ ಮೃತ ಮಗು. ಕಳೆದ 12 ದಿನಗಳ ಹಿಂದೆ ಜ್ವರದಿಂದ ಬಳುತ್ತಿದ್ದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮಗು ಕೊನೆಯುಸಿರೆಳೆದಿದೆ.

ಶುಕ್ರವಾರ ತಡರಾತ್ರಿ ಬೆಂಗಳೂರಿನ ಅಂಜನಾಪುರದ 11 ವರ್ಷದ ಬಾಲಕ ಗಗನ್ ಶಂಕಿತ ಡೆಂಗ್ಯೂ ಜ್ವರದಿಂದ ಸಾವಿಗೀಡಾಗಿದ್ದ. ಇದರ ಬೆನ್ನಲ್ಲೇ ಬ್ಯಾಡಗಿ ತಾಲೂಕಿನಲ್ಲಿ 9 ವರ್ಷದ ಬಾಲಕಿ ಮೃತಪ್ಟಿದ್ದಾಳೆ. ರಾಜ್ಯದಲ್ಲಿ ಶುಕ್ರವಾರ 155 ಡೆಂಗ್ಯೂ ಕೇಸ್‌ಗಳು ಪತ್ತೆಯಾಗಿದ್ದವು. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 107 ಹೊಸ ಕೇಸ್‌ಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಒಟ್ಟಾರೆ 343 ಸಕ್ರಿಯ ಡೆಂಗ್ಯೂ ಪ್ರಕರಣಗಳು ಇವೆ. ಡೆಂಗ್ಯೂ ಸೋಂಕಿನಿಂದ ಜನವರಿಯಿಂದ ಈವರೆಗೆ ಒಟ್ಟು 6 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕೃತ ಮಾಹಿತಿ ನೀಡಿತ್ತು.

ನೆನ್ನೆ 899 ಮಂದಿಗೆ ಡೆಂಗ್ಯೂ ಟೆಸ್ಟ್‌ ನಡೆಸಿದ್ದು, ಈ ಪೈಕಿ 155 ಮಂದಿಗೆ ಸೋಂಕು ದೃಢವಾಗಿತ್ತು. ಬೆಂಗಳೂರಿನಲ್ಲಿ 107, ಚಿತ್ರದುರ್ಗ 10, ದಾವಣಗೆರೆ 4, ಶಿವಮೊಗ್ಗ 9, ಉತ್ತರ ಕನ್ನಡ 2, ವಿಜಯನಗರ 4, ಹಾಸನ 16 ಉಡುಪಿಯಲ್ಲಿ 3 ಕೇಸ್‌ಗಳು ಪತ್ತೆಯಾಗಿದ್ದವು. 343 ಸಕ್ರಿಯ ಪ್ರಕರಣಗಳ ಪೈಕಿ 142 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಾಸನದಲ್ಲಿ ಒಂದು ವಾರದಲ್ಲಿ ನಾಲ್ವರು ಬಾಲಕಿಯರ ಸಾವು

ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ದೊಡ್ಡಳ್ಳಿ ಗ್ರಾಮದಲ್ಲಿ ಬಾಲಕಿಯೊಬ್ಬಳು ಶುಕ್ರವಾರ ಮೃತಪಟ್ಟಿದ್ದಳು. ರಮೇಶ್-ಅಶ್ವಿನಿ ದಂಪತಿಯ ಪುತ್ರಿ ಸಮೃದ್ಧಿ (8) ಮೃತಪಟ್ಟ ಬಾಲಕಿ. ಕಳೆದ ಮೂರ್ನಾಲ್ಕು ದಿನಗಳಿಂದ ಈಕೆ ತೀವ್ರ ಜ್ವರದಿಂದ ಬಳಲುತ್ತಿದ್ದಳು. ಮೂರು ದಿನದ ಹಿಂದೆ ಹಿಮ್ಸ್‌ಗೆ ದಾಖಲಾಗಿದ್ದಳು. ಬಾಲಕಿ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ ಮೈಸೂರಿನ ಅಪೋಲೊ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸಮೃದ್ಧಿ ಸಾವನ್ನಪ್ಪಿದ್ದಳು.

ಇದನ್ನೂ ಓದಿ | Dengue Fever: ಡೆಂಗ್ಯುಗೆ ಕೋವಿಡ್‌ ಮಾದರಿ ಉಚಿತ ಚಿಕಿತ್ಸೆ ಕೊಡಿ, ಮೆಡಿಕಲ್‌ ಎಮರ್ಜೆನ್ಸಿ ಘೋಷಿಸಿ: ಡಾ. ಮಂಜುನಾಥ್

ಇದರಿಂದ ಒಂದು ವಾರದಲ್ಲಿ ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯುವಿಗೆ ನಾಲ್ವರು ಬಾಲಕಿಯರು ಬಲಿಯಾದಂತಾಗಿದೆ. ಹೊಳೆನರಸೀಪುರ ತಾಲ್ಲೂಕಿನಲ್ಲೇ ಮೂವರು ಬಾಲಕಿಯರು ಮೃತಪಟ್ಟಿದ್ದಾರೆ. ಅರಕಲಗೂಡು ಮೂಲದ ಒಂದು ಹಾಗು ಹೊಳೆನರಸೀಪುರ ಮೂಲದ ಮೂರು ಕಂದಮ್ಮಗಳು ಸಾವಿಗೀಡಾಗಿವೆ. ಮೂರೂ ಮಕ್ಕಳೂ ತೀವ್ರ ಜ್ವರದಿಂದ ಬಳಲಿದ್ದವು. ಜುಲೈ 1ರಂದು ಅರಕಲಗೂಡು ಮೂಲದ ಅಣ್ಣಪ್ಪಶೆಟ್ಟಿ ಹಾಗು ಪದ್ಮ ದಂಪತಿ ಪುತ್ರಿ ಅಕ್ಷತಾ (13) ಸಾವಿಗೀಡಾಗಿದ್ದಾಳೆ. ಜೂನ್ 30ರಂದು ಹೊಳೆನರಸೀಪುರ ತಾಲ್ಲೂಕಿನ ಹಳ್ಳಿ ಮೈಸೂರು ಮೂಲದ ವರ್ಷಿಕಾ(8) ತೀವ್ರ ಜ್ವರದಿಂದ ಬಳಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಬುಧವಾರ ಹೊಳೆನರಸೀಪುರ ತಾಲೂಕಿನ ಕಲಾಶ್ರೀ ಜಿ.ಎಲ್ (11) ನಿಧನ ಹೊಂದಿದ್ದಳು. ಈಕೆ ಹೊಳೆನರಸೀಪುರ ತಾಲ್ಲೂಕಿನ ಗುಡ್ಡೇನಹಳ್ಳಿ ಗ್ರಾಮದ ಲೋಕೇಶ್ ಮತ್ತು ತನುಜ ಎಂಬವರ ಪುತ್ರಿ.

Continue Reading

ದೇಶ

Hathras Stampede: ಹತ್ರಾಸ್‌ ಕಾಲ್ತುಳಿತ- ಭೋಲೆ ಬಾಬಾನ ವಿರುದ್ಧ ಮೊದಲ ಕೇಸ್‌ ದಾಖಲು

Hathras Stampede: ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮೂವರು ಸದಸ್ಯರ ಕಾನೂನು ಆಯೋಗವನ್ನು ನೇಮಿಸಿ ಪ್ರಕರಣದ ತನಿಖೆಗೆ ಆದೇಶಿಸಿದೆ. ನಿವೃತ ಹೈಕೋರ್ಟ್‌ ನ್ಯಾಯಮೂರ್ತಿ ಈ ಆಯೋಗದ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಕರಣದ ಬಳಿಕ ತಲೆ ಮರೆಸಿಕೊಂಡಿದ್ದ, ಸ್ವಯಂಘೋಷಿತ ದೇವ ಮಾನವ ಭೋಲೆ ಬಾಬಾ (Bhole Baba) ಇದೀಗ ಮಾಧ್ಯಮದ ಜತೆ ಮಾತನಾಡಿ, ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Hathras Stampede
Koo

ಲಖನೌ: ಜುಲೈ 2ರಂದು ನಡೆದ, ಸುಮಾರು 121 ಜನರನ್ನು ಬಲಿ ಪಡೆದ ಉತ್ತರ ಪ್ರದೇಶದ ಹತ್ರಾಸ್‌ ಕಾಲ್ತುಳಿತ (Hathras Stampede) ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಘೋಷಿತ ದೇವ ಮಾನವ ಭೋಲೆ ಬಾಬಾ (Bhole Baba) ವಿರುದ್ಧ ಮೊದಲ ಕೇಸ್‌ ದಾಖಲಾಗಿದೆ. ಪಾಟ್ನಾ ಕೋರ್ಟ್‌ನಲ್ಲಿ ಭೋಲೇ ಬಾಬಾನ ವಿರುದ್ಧ ಮೊದಲ ಪ್ರಕರಣ ದಾಖಲಾಗಿದೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮೂವರು ಸದಸ್ಯರ ಕಾನೂನು ಆಯೋಗವನ್ನು ನೇಮಿಸಿ ಪ್ರಕರಣದ ತನಿಖೆಗೆ ಆದೇಶಿಸಿದೆ. ನಿವೃತ ಹೈಕೋರ್ಟ್‌ ನ್ಯಾಯಮೂರ್ತಿ ಈ ಆಯೋಗದ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಕರಣದ ಬಳಿಕ ತಲೆ ಮರೆಸಿಕೊಂಡಿದ್ದ, ಸ್ವಯಂಘೋಷಿತ ದೇವ ಮಾನವ ಭೋಲೆ ಬಾಬಾ (Bhole Baba) ಇದೀಗ ಮಾಧ್ಯಮದ ಜತೆ ಮಾತನಾಡಿ, ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ತಮ್ಮ ಸತ್ಸಂಗ ಕಾರ್ಯಕ್ರಮ ಬಳಿಕ ನಡೆದ ಈ ಘಟನೆಯಿಂದ ತೀವ್ರ ದುಃಖಿತನಾಗಿ ಖಿನ್ನತೆಗೆ ಜಾರಿರುವುದಾಗಿ ಅವರು ತಿಳಿಸಿದ್ದಾರೆ.

ನಾರಾಯಣ್ ಸಕರ್ ಹರಿ ಅಲಿಯಾಸ್ ಭೋಲೆ ಬಾಬಾ ಎಂದು ಗುರುತಿಸಿಕೊಂಡಿರುವ ಸೂರಜ್‌ಪಾಲ್‌ ಅವರು ಕಾಲ್ತುಳಿತದ ಪ್ರಮುಖ ಆರೋಪಿ ದೇವ್‌ಪ್ರಕಾಶ್ ಮಧುಕರ್ ನವದೆಹಲಿಯಲ್ಲಿ ಪೊಲೀಸರ ಮುಂದೆ ಶರಣಾದ ಕೆಲವೇ ಗಂಟೆಗಳ ನಂತರ ಶನಿವಾರ ಸುದ್ದಿಸಂಸ್ಥೆ ಎಎನ್ಐ ಜತೆ ಮಾತನಾಡಿದರು. ನಂತರ ಅವರನ್ನು ಉತ್ತರ ಪ್ರದೇಶ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ʼಜುಲೈ 2ರಂದು ನಡೆದ ಕಾಲ್ತುಳಿತದ ಘಟನೆಯಿಂದ ತೀವ್ರ ಆಘಾತಕ್ಕೆ ಒಳಗಾಗಿದ್ದೇನೆ. ಆ ದೇವರು ನಮಗೆಲ್ಲ ಈ ದುಃಖದಿಂದ ಹೊರ ಬರುವ ಶಕ್ತಿ ನೀಡಲಿ. ಸರ್ಕಾರ ಮತ್ತು ಆಡಳಿತ ಮೇಲೆ ನಂಬಿಕೆ ಇಡಿ. ಗೊಂದಲ, ಕಾಲ್ತುಳಿತಕ್ಕೆ ಕಾರಣರಾದವರನ್ನು ಕಾನೂನು ಸುಮ್ಮನೆ ಬಿಡುವುದಿಲ್ಲ ಎಂಬ ನಂಬಿಕೆ ನನಗಿದೆ. ನನ್ನ ವಕೀಲ ಎ.ಪಿ.ಸಿಂಗ್ ಅವರ ಮೂಲಕ, ದುಃಖಿತ ಕುಟುಂಬಗಳು ಮತ್ತು ಗಾಯಗೊಂಡವರ ಜತೆ ನಿಲ್ಲಲು ಮತ್ತು ಅವರಿಗೆ ಸಹಾಯ ಮಾಡಲು ನಾನು ಸಮಿತಿಯ ಸದಸ್ಯರಲ್ಲಿ ಮನವಿ ಮಾಡುತ್ತಿದ್ದೇನೆ” ಎಂದು ಭೋಲೆ ಬಾಬಾ ಹೇಳಿದ್ದಾರೆ.

ಹತ್ರಾಸ್‌ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ತಲೆ ಮರೆಸಿಕೊಂಡಿದ್ದ ಮುಖ್ಯ ಆರೋಪಿ ದೇವಪ್ರಕಾಶ್‌ ಮಧುಕರ್‌ (Devprakash Madhukar)ನನ್ನು ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ. ʼʼದೆಹಲಿಯಲ್ಲಿದ್ದ ದೇವಪ್ರಕಾಶ್‌ ಮಧುಕರ್‌ ಶರಣಾಗಿದ್ದು, ಉತ್ತರ ಪ್ರದೇಶ ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆʼʼ ಎಂದು ಅವರ ವಕೀಲ ಎ.ಪಿ.ಸಿಂಗ್ ತಿಳಿಸಿದ್ದಾರೆ. ಕಾಲ್ತುಳಿತಕ್ಕೆ ಕಾರಣವಾದ ಭೋಲೆ ಬಾಬಾ (Bhole Baba) ಅವರ ಸತ್ಯಂಗದ ಮುಖ್ಯ ಸೇವಾದಾರ ಮಧುಕರ್‌ ವಿರುದ್ಧ ಹತ್ರಾಸ್‌ನ ಸಿಕಂದ್ರ ರಾವ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ. ಮಧುಕರ್‌ನ ವಕೀಲ ಎ.ಪಿ.ಸಿಂಗ್ ವಿಡಿಯೊ ಸಂದೇಶದಲ್ಲಿ, ʼʼತಮ್ಮ ಕಕ್ಷಿದಾರ (ದೇವಪ್ರಕಾಶ್‌ ಮಧುಕರ್‌) ದೆಹಲಿಯಲ್ಲಿ ಶರಣಾಗಿದ್ದಾರೆ. ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರುʼʼ ಎಂದು ಹೇಳಿದ್ದಾರೆ.

ಇತ್ತೀಚೆಗೆ ಸುಪ್ರೀಂ ಕೋರ್ಟ್ ವಕೀಲರೂ ಆದ ಎ.ಪಿ.ಸಿಂಗ್ ತಾನು ಸ್ವಯಂ ಘೋಷಿತ ದೇವಮಾನವ ಭೋಲೆ ಬಾಬಾ ಅವರ ಪರವಾಗಿ ವಾದಿಸುತ್ತೇನೆ ಎಂದು ಹೇಳಿಕೊಂಡಿದ್ದರು. ತಲೆಮರೆಸಿಕೊಂಡಿದ್ದ ಮುಖ್ಯ ಆರೋಪಿ ದೇವಪ್ರಕಾಶ್‌ ಮಧುಕರ್‌ನ ಸುಳಿವು ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಕೊಡುವುದಾಗಿ 2 ದಿನಗಳ ಹಿಂದೆ ಉತ್ತರ ಪ್ರದೇಶ ಪೊಲೀಸರು ಘೋಷಿಸಿದ್ದರು.

ಇದನ್ನೂ ಓದಿ:Self Harming: ಮೊದಲ ರಾತ್ರಿಯ ಟೆನ್ಶನ್‌ಗೆ ವರ ಆತ್ಮಹತ್ಯೆ? ಉತ್ತರ ಪ್ರದೇಶದಲ್ಲೊಂದು ವಿಲಕ್ಷಣ ಘಟನೆ

Continue Reading

Latest

Viral News : ಐಷಾರಾಮಿ ಹೋಟೆಲ್‌ನಲ್ಲಿ ವಾಸ, ಫ್ಲೈಟ್‌ನಲ್ಲಿ ಓಡಾಟ; ಶ್ರೀಮಂತ ಕಳ್ಳನೀಗ ಪೊಲೀಸರ ಬಲೆಗೆ!

Viral News: ದುಡಿಯುವುದಕ್ಕೆ ನೂರಾರು ದಾರಿಯಿದ್ದರೂ ಕೆಲವರು ಕಳ್ಳತನವನ್ನೇ ತಮ್ಮ ಕಾಯಕವನ್ನಾಗಿಸಿಕೊಳ್ಳುತ್ತಾರೆ. ಮೈ ಬಗ್ಗಿಸಿ ದುಡಿಯುವ ಬದಲು ಕಳ್ಳಮಾರ್ಗದಲ್ಲಿ ದುಡಿಯುವುದೇ ಕೆಲವರಿಗೆ ಕಸುಬಾಗಿರುತ್ತದೆ. ಇಲ್ಲೊಬ್ಬ ಕಳ್ಳನಿದ್ದಾನೆ. ಇವನು ಅಂತಿಂಥ ಕಳ್ಳನಲ್ಲ. ಐಷಾರಾಮಿ ಹೋಟೆಲ್‌ನಲ್ಲಿ ವಾಸ ಮಾಡುತ್ತಾ, ಫ್ಲೈಟ್‌ನಲ್ಲಿಯೇ ಓಡಾಡುತ್ತಾನೆ.ಇನ್ನು ಮುಂಬೈನ ಮುಂಬ್ರಾ ಪ್ರದೇಶದಲ್ಲಿ ಇವನು 1 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಐಷಾರಾಮಿ ಫ್ಲ್ಯಾಟ್‌ನಲ್ಲಿ ವಾಸಿಸುತ್ತಿದ್ದ ಮತ್ತು ಆಡಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಂಬ ಮಾಹಿತಿ ತಿಳಿದುಬಂದಿದೆ.

VISTARANEWS.COM


on

Rich Thief
Koo

ಗುಜರಾತ್ : ಕೆಲವರು ದುಡಿಯುವುದರ ಬದಲು ಸುಲಭವಾಗಿ ಹಣ ಮಾಡುವ ದಾರಿಯನ್ನೇ ನೋಡುತ್ತಿರುತ್ತಾರೆ. ಅದರಲ್ಲಿ ಮುಖ್ಯವಾಗಿ ಕಳ್ಳತನ. ಆದರೆ ಇಲ್ಲೊಬ್ಬ ಕಿಲಾಡಿ ಕಳ್ಳನಿದ್ದಾನೆ. ಈ ಕಳ್ಳ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈತ ಕಳ್ಳತನ (Rich Thief )ಮಾಡಲು ಐಷಾರಾಮಿ ಹೋಟೆಲ್‌ಗಳಲ್ಲಿ ಉಳಿಯುತ್ತಿದ್ದ, ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಹಾಗೂ ಕ್ಯಾಬ್ ಬುಕ್ ಮಾಡುತ್ತಿದ. ಇನ್ನು ಈತ ವಾಸವಿರುವ ಫ್ಲ್ಯಾಟ್‌ ಬಗ್ಗೆ ಕೇಳಿದ್ರೆ ಆಕ್‌ ಆಗ್ತೀರಾ. ಈತನ ಹೈ ಫೈ ಲೈಫ್‌ ಬಗ್ಗೆ ಕೇಳಿ ಪೊಲೀಸರೇ ಒಂದು ಕ್ಷಣ ದಂಗಾಗಿದ್ದಾರೆ(Viral News).

ಈತನ ಹೆಸರು ರೋಹಿತ್ ಸೋಲಂಕಿ ಎಂಬುದಾಗಿ ತಿಳಿದುಬಂದಿದೆ. ಈತ ಒಬ್ಬ ಅನುಭವಿ ಕಳ್ಳನಾಗಿದ್ದು, ಹಲವಾರು ವರ್ಷಗಳಿಂದ ಕಳ್ಳತನ ಮಾಡಿ ಲಕ್ಷಗಟ್ಟಲೆ ಹಣ ಸಂಪಾದಿಸಿ ಶ್ರೀಮಂತನಾಗಿದ್ದಾನೆ ಎನ್ನಲಾಗಿದೆ. ಮುಂಬೈನ ಮುಂಬ್ರಾ ಪ್ರದೇಶದಲ್ಲಿ ಸೋಲಂಕಿ 1 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಐಷಾರಾಮಿ ಫ್ಲ್ಯಾಟ್‍ನಲ್ಲಿ ವಾಸಿಸುತ್ತಿದ್ದ ಮತ್ತು ಆಡಿ (Audi)ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಂಬ ಮಾಹಿತಿ ತಿಳಿದುಬಂದಿದೆ.

ಕಳೆದ ತಿಂಗಳು ರೋಹಿತ್ ಸೋಲಂಕಿ ವಾಪಿಯಲ್ಲಿ 1 ಲಕ್ಷ ರೂ.ಗಳ ಕಳ್ಳತನ ಮಾಡಿ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದನು. ಆತ ಈಗಾಗಲೇ 19 ದರೋಡೆಗಳನ್ನು ಮಾಡಿದ್ದು, ಇವುಗಳಲ್ಲಿ ವಲ್ಸಾದ್‍ನಲ್ಲಿ ಮೂರು, ಸೂರತ್‍ನಲ್ಲಿ ಒಂದು, ಪೋರ್ಬಂದರ್ ನಲ್ಲಿ ಒಂದು, ಸೆಲ್ವಾಲ್‍ನಲ್ಲಿ ಒಂದು, ತೆಲಂಗಾಣದಲ್ಲಿ ಎರಡು, ಆಂಧ್ರಪ್ರದೇಶದಲ್ಲಿ ಎರಡು, ಮಧ್ಯಪ್ರದೇಶದಲ್ಲಿ ಎರಡು ಮತ್ತು ಮಹಾರಾಷ್ಟ್ರದಲ್ಲಿ ಒಂದು ಹಾಗೇ ಲಂಚದ ಮೂಲಕ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ ಇನ್ನೂ ಆರು ಕಳ್ಳತನಗಳನ್ನು ಮಾಡಿರುವುದಾಗಿ ಅವನು ಒಪ್ಪಿಕೊಂಡಿದ್ದಾನೆ. ಹಾಗಾಗಿ ಹಲವು ರಾಜ್ಯಗಳಲ್ಲಿ ಕಳ್ಳತನ ಮಾಡಿದ ಇತಿಹಾಸ ಈತನಿಗಿದೆ ಎನ್ನಲಾಗಿದೆ.

ಅಲ್ಲದೇ ಈತ ಮುಸ್ಲಿಂ ಮಹಿಳೆಯನ್ನು ಮದುವೆಯಾಗಲು ಸೋಲಂಕಿ ಎಂಬ ತನ್ನ ಹೆಸರನ್ನು ಅರ್ಹಾನ್ ಎಂದು ಬದಲಾಯಿಸಿಕೊಂಡಿದ್ದಾನೆ ಎಂದು ಪೊಲೀಸರಿಗೆ ತಿಳಿದುಬಂದಿದೆ. ಹಾಗೇ ಈತ ಕಳ್ಳತನಗಳನ್ನು ಮಾಡಲು ಹಗಲಿನಲ್ಲಿ ಯೋಜನೆ ನಡೆಸುತ್ತಿದ್ದನು. ಮತ್ತು ಕಳ್ಳತನ ಮಾಡಲು ಐಷಾರಾಮಿ ಹೋಟೆಲ್‌ಗಳಲ್ಲಿ ಉಳಿದುಕೊಳ್ಳುತ್ತಿದ್ದನು, ಅಲ್ಲದೇ ಕೆಲವೊಮ್ಮೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು ಮತ್ತು ಹಗಲಿನಲ್ಲಿ ಹೋಟೆಲ್ ಕ್ಯಾಬ್ ಗಳನ್ನು ಕಾಯ್ದಿರಿಸುತ್ತಿದ್ದನು ಎಂಬುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: ಮೆಟ್ರೋದಲ್ಲಿ ಕೋತಿ ಚೇಷ್ಟೆಗೆ ಕೊನೆಯೇ ಇಲ್ಲ! ಈ ಮಂಗ್ಯಾನ ಡ್ಯಾನ್ಸ್‌ ನೋಡಿ!

ಅಲ್ಲದೇ ಈತ ಮಾದಕವಸ್ತುಗಳ ವ್ಯಸನಿಯಾಗಿದ್ದು, ಅದಕ್ಕಾಗಿ ತಿಂಗಳಿಗೆ 1.50 ಲಕ್ಷ ರೂ.ಗಳನ್ನು ಖರ್ಚು ಮಾಡುತ್ತಿದ್ದ ಮತ್ತು ಈತ ಮುಂಬೈನ ಡ್ಯಾನ್ಸ್ ಬಾರ್ ಮತ್ತು ನೈಟ್‍ಕ್ಲಬ್‌ಗಳಲ್ಲಿ ಪಾರ್ಟಿ ಮಾಡುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Continue Reading
Advertisement
Dina Bhavishya
ಭವಿಷ್ಯ16 mins ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಸಿಗಲಿದೆ ಶುಭ ಸುದ್ದಿ

Champions Trophy 2025:
ಪ್ರಮುಖ ಸುದ್ದಿ5 hours ago

Champions Trophy 2025 : ಭಾರತ ತಂಡ ಪಾಕಿಸ್ತಾನಕ್ಕೆ ಬರಲೇಬೇಕು ಹಠ ಹಿಡಿದು ಕುಳಿತಿರುವ ಪಿಸಿಬಿ

Rain News
ದೇಶ5 hours ago

Rain News: ವರುಣನ ಆರ್ಭಟ; ಮಳೆ ಸಂಬಂಧಿ ಅವಘಡಗಳಿಗೆ 24 ಗಂಟೆಯಲ್ಲಿ 13 ಜನ ಬಲಿ

KAS
ಕರ್ನಾಟಕ6 hours ago

KAS: ಕೆಎಎಸ್‌ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್;‌ ನೇಮಕಾತಿಗೆ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ, ಇಲ್ಲಿದೆ ಮಾಹಿತಿ

Mid Day Meal
ದೇಶ7 hours ago

Mid Day Meal: ಮಕ್ಕಳ ಬಿಸಿಯೂಟದಲ್ಲೂ ಕಳ್ಳಾಟ, ವಿದ್ಯಾರ್ಥಿಗಳಿಗೆ ಸಿಗೋದು ಬರೀ ಅನ್ನ-ಅರಿಶಿಣ; Video ಇದೆ

Dr HS Shetty: Rs 7 crore spent on charity; Businessman Dr. HS Shetty
ಪ್ರಮುಖ ಸುದ್ದಿ7 hours ago

Dr HS Shetty : ದಾನಗಳಿಗಾಗಿಯೇ ವರ್ಷದಲ್ಲಿ 7 ಕೋಟಿ ರೂ. ವಿನಿಯೋಗ

Vasishtha Simha starrer VIP Kannada movie
ಕರ್ನಾಟಕ7 hours ago

Kannada New Movie: ಖ್ಯಾತ ಗಾಯಕಿ ಕೆ.ಎಸ್.ಚಿತ್ರಾ ಕಂಠಸಿರಿಯಲ್ಲಿ ವಸಿಷ್ಠ ಸಿಂಹ ಅಭಿನಯದ ‘ವಿಐಪಿ’ ಚಿತ್ರದ ಹಾಡು

Asia Cup 2024
ಪ್ರಮುಖ ಸುದ್ದಿ7 hours ago

Asia Cup 2024 : ಮಹಿಳಾ ಏಷ್ಯಾಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

Viral Video
Latest8 hours ago

Viral Video: ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ; ಪ್ರಾಂಶುಪಾಲರನ್ನು ಕುರ್ಚಿ ಸಹಿತ ಹೊರಗೆಳೆದ ಸಿಬ್ಬಂದಿ

Kashmir Encounter
ದೇಶ8 hours ago

Kashmir Encounter: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ನಾಲ್ವರು ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ11 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ13 hours ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ14 hours ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು16 hours ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ18 hours ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ23 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ1 day ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ2 days ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ2 days ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ2 days ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

ಟ್ರೆಂಡಿಂಗ್‌