Viral News: ನೀವೂ ಕೂಡ ನಿಮ್ಮ ಹೆಂಡತಿಯನ್ನು ಇವರಂತೆ ಪ್ರೀತಿಸಬಲ್ಲಿರಾ? ಈ ಫೋಟೊ, ವಿಡಿಯೊ ನೋಡಿ ಹೇಳಿ! - Vistara News

Latest

Viral News: ನೀವೂ ಕೂಡ ನಿಮ್ಮ ಹೆಂಡತಿಯನ್ನು ಇವರಂತೆ ಪ್ರೀತಿಸಬಲ್ಲಿರಾ? ಈ ಫೋಟೊ, ವಿಡಿಯೊ ನೋಡಿ ಹೇಳಿ!

Viral News: ಗಂಡ-ಹೆಂಡತಿಯ ಸಂಬಂಧ ಚೆನ್ನಾಗಿದ್ದರೆ ಮನೆಯಲ್ಲಿ ಸುಖ ಶಾಂತಿ ಇರುತ್ತದೆ ಎನ್ನುತ್ತಾರೆ.ಇದು ಗಂಡಸಿನ ವೃತ್ತಿ ಜೀವನದ ಮೇಲೂ ಪ್ರಭಾವ ಬೀರುತ್ತದೆ. ಕೆಲವರು ಹೆಂಡತಿಯನ್ನು ಕಾಲ ಕಸದ ರೀತಿ ನೋಡಿದರೆ ಇನ್ನು ಕೆಲವರು ಶಿವನ ಹಾಗೇ ಹೆಂಡತಿಯೇ ಸರ್ವಸ್ವ ಅನ್ನುತ್ತಾರೆ. ಹೌದು ಹೆಂಡತಿಯನ್ನು ಅತೀಯಾಗಿ ಪ್ರೀತಿಸುವ ಗಂಡಂದಿರ ಪಟ್ಟಿ ಇಲ್ಲಿದೆ.

VISTARANEWS.COM


on

Viral News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಎಷ್ಟೋ ಸಿನಿಮಾಗಳಲ್ಲಿ ಹೀರೊ ತಮ್ಮ ಕುಟುಂಬದವರ ಜೊತೆ ಅನ್ಯೋನ್ಯವಾಗಿರುವುದನ್ನು ನಾವು ನೋಡಿರುತ್ತೇವೆ ಮತ್ತು ಹೀರೊ ತನ್ನ ಪತ್ನಿ ಮತ್ತು ಮಕ್ಕಳ ಬಗ್ಗೆ ತೋರುವ ಕಾಳಜಿ ಕಂಡು ನಾವು ಖುಷಿ ಪಡುತ್ತೇವೆ. ಆದರೆ ಅದೇ ಜೋಡಿ ನಿಜ ಜೀವನದಲ್ಲಿ ದಂಪತಿಯಾದರೆ ಅದರ ನಡುವೆ ಅಷ್ಟೊಂದು ಅನ್ಯೋನ್ಯತೆ ಇರುವುದಿಲ್ಲ. ಅದು ನಮಗೆಲ್ಲರಿಗೂ ಗೊತ್ತು. ಯಾಕೆಂದರೆ ಸಿನಿಮಾದಲ್ಲಿ ಜೊತೆಯಾಗಿ ನಟಿಸಿ ಜನರ ಮನಗೆದ್ದ ಜೋಡಿಗಳಲ್ಲಿ ಕೆಲವು ನಿಜ ಜೀವನದಲ್ಲಿ ಬೇರೆಯಾಗಿದ್ದಾರೆ. ಆದರೆ ಎಲ್ಲಾ ಜೋಡಿ ಹಾಗಿಲ್ಲ. ಕೆಲವು ಸೆಲೆಬ್ರಿಟಿಗಳು ತಮ್ಮ ಪತ್ನಿ ಮತ್ತು ಮಕ್ಕಳನ್ನು ತುಂಬಾ ಪ್ರೀತಿಸುತ್ತಾರೆ. ಅಂತಹ ಸೆಲೆಬ್ರಿಟಿಗಳ ಬಗ್ಗೆ ಮಾಹಿತಿ ವೈರಲ್‌ (Viral News) ಆಗಿದೆ.

ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ

ಜೂನ್ 29ರಂದು ಭಾರತ ಕ್ರಿಕೆಟ್ ತಂಡವು 17 ವರ್ಷಗಳ ನಂತರ ಐಸಿಸಿಟಿ 20 ವಿಶ್ವಕಪ್ ಟ್ರೋಫಿಯನ್ನು ಗೆದ್ದುಕೊಂಡಿತು. ಈ ವೇಳೆ ಸಂಭ್ರಮಾಚರಣೆ ಬಹಳ ಅವಿಸ್ಮರಣೀಯವಾಗಿತ್ತು. ಆದರೆ ಆ ಕ್ಷಣ ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಮತ್ತು ಹಾಗೂ ಮಗಳಿಗೆ ವಿಡಿಯೊ ಕರೆ ಮಾಡಿ ಗೆಲುವನ್ನು ಹಂಚಿಕೊಂಡರು. ಇದು ಲಕ್ಷಾಂತರ ಜನರ ಮನಸ್ಸನ್ನು ಸೆಳೆಯಿತು.

ಇನ್ನು ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಟ್ರೋಫಿಯನ್ನು ಅನುಷ್ಕಾಗೆ ಅರ್ಪಿಸಿ ಈ ದಂಪತಿ ನಡುವೆ ಪ್ರೀತಿ ಎಷ್ಟಿದೆ ಎಂಬುದನ್ನು ತೋರಿಸಿದ್ದಾರೆ.

ರಣವೀರ್ ಸಿಂಗ್ – ದೀಪಿಕಾ ಪಡುಕೋಣೆ

ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಬಾಲಿವುಡ್ ಚಿತ್ರರಂಗದ ಜನಪ್ರಿಯ ಜೋಡಿಗಳಲ್ಲಿ ಒಬ್ಬರು. ಅವರು ಒಟ್ಟಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಾಗಲೆಲ್ಲಾ ಜೋಡಿ ಹಕ್ಕಿಗಳ ಹಾಗೇ ಇರುತ್ತಾರೆ.

ಕಾಫಿ ವಿತ್ ಕರಣ್ ಸೀಸನ್ 8ರಲ್ಲಿ ರಣವೀರ್ ಸಿಂಗ್ ದೀಪಿಕಾ ಬಗ್ಗೆ ತಮ್ಮ ಭಾವನೆಗಳು ಮತ್ತು ಪ್ರೀತಿಯನ್ನು ಬಹಿರಂಗಪಡಿಸಿದಾಗ ಅವರು ಒಬ್ಬ ಉತ್ತಮ ಪತಿ ಎಂಬುದು ತಿಳಿಯುತ್ತದೆ. ಅವರು ತಮ್ಮ ಪತ್ನಿ ದೀಪಿಕಾ ಬಗ್ಗೆ ಮಾತನಾಡುವಾಗ ತಮಗೆ ಅವಳೊಬ್ಬಳೆ ಸಾಕು ಎಂಬ ರೀತಿಯಲ್ಲಿ ಮಾತನಾಡಿ ಎಲ್ಲರ ಹೃದಯವನ್ನು ಗೆದ್ದಿದ್ದರು.

Viral News

ವಿಕ್ಕಿ ಕೌಶಲ್- ಕತ್ರಿನಾ ಕೈಫ್

ವಿಕ್ಕಿ ಕೌಶಲ್ ಅವರು ಸಂದರ್ಶನವೊಂದರಲ್ಲಿ ತಮ್ಮ ಫೋನ್‌ನಲ್ಲಿರುವ ವಾಲ್ಪೇಪರ್ ಮೇಲೆ ಕತ್ರಿನಾ ಕೈಫ್ ಅವರ ಬಾಲ್ಯದ ಪೋಟೊ ಹಾಕಿಕೊಂಡಿದ್ದರು. ಆದರೆ ಅದು ಯಾರು ಎಂದು ಯಾರಿಗೂ ಮೊದಲು ತಿಳಿದಿರಲಿಲ್ಲ.

ಹಾಗಾಗಿ ಅವರು ಅದು ತಮ್ಮ ಪತ್ನಿ ಕತ್ರಿನಾ ಕೈಫ್ ಅವರ ಬಾಲ್ಯದ ಪೋಟೊ ಎಂದು ಹೇಳುವುದರ ಮೂಲಕ ಇವರು ಪತ್ನಿಯನ್ನು ಪ್ರೀತಿಸುವ ಪತಿ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಸೋನಾಕ್ಷಿ ಸಿನ್ಹಾ -ಜಹೀರ್ ಇಕ್ಬಾಲ್

ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ಇತ್ತೀಚೆಗೆ ವಿವಾಹವಾಗಿದ್ದು, ಆ ಮೂಲಕ ಬಾಲಿವುಡ್‌ನ ಹೊಸ ಜೋಡಿ ಎನಿಸಿಕೊಂಡಿದ್ದಾರೆ.

ಸೋನಾಕ್ಷಿ ಸಿನ್ಹಾ ಇತ್ತೀಚೆಗೆ ಜಹೀರ್ ತನ್ನ ಹಿಮ್ಮಡಿಗಳನ್ನು ಹಿಡಿದುಕೊಂಡು ಮಾಲ್‌ನಲ್ಲಿ ಕರೆದುಕೊಂಡು ಹೋಗುತ್ತಿರುವ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಜಹೀರ್ ಇಕ್ಬಾಲ್, ಸೋನಾಕ್ಷಿ ಸಿನ್ಹಾ ಅವರಿಗೆ ಉತ್ತಮ ಪತಿ ಎಂಬುದನ್ನು ತಿಳಿಸಿದ್ದಾರೆ.

ಇದನ್ನೂ ಓದಿ: ಭಾರತದ ಶ್ರೀಮಂತ ಕುಟುಂಬಗಳ ಅತ್ಯಂತ ಅದ್ಧೂರಿ ಮದುವೆ ಯಾರದು? ಪಟ್ಟಿ ಇಲ್ಲಿದೆ

ನಿಕ್ ಜೊನಾಸ್ ಮತ್ತು ಪ್ರಿಯಾಂಕಾ ಚೋಪ್ರಾ

ನಿಕ್ ಜೊನಾಸ್ ವಿದೇಶಿಗರಾದರೂ ಕೂಡ ತನ್ನ ಹೆಂಡತಿ ಮತ್ತು ಅವಳ ಸಂಸ್ಕೃತಿಯ ಬಗ್ಗೆ ತನ್ನ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಾರೆ.

ನಿಕ್‌ ಕೂಡ ತಮ್ಮ ಪತ್ನಿಯ ಜೊತೆಗೆ ಭಾರತೀಯ ಸಂಸ್ಕೃತಿಯನ್ನು ಪ್ರೀತಿ, ಗೌರವ ಮತ್ತು ಭಕ್ತಿಯಿಂದ ಆಚರಿಸುತ್ತಾರೆ. ಆ ಮೂಲಕ ಅವರು ಕೂಡ ನಟಿ ಪ್ರಿಯಾಂಕ ಚೋಪ್ರಾ ಅವರಿಗೆ ಮುದ್ದಿನ ಗಂಡನಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral Video: ಸ್ವಾಗತಿಸಲು ಖುಷಿಯಿಂದ ಕಾಯುತ್ತಿದ್ದ ಕಪ್ಪು ವರ್ಣದ ಮಹಿಳೆಗೆ ಜೋ ಬೈಡನ್ ಅವಮಾನ; ನಾಚಿಕೆಯಾಗಬೇಕು ಅಮೆರಿಕಕ್ಕೆ!

Viral Video: ವಿಸ್ಕಾನ್ಸಿನ್‍ನ ಮ್ಯಾಡಿಸನ್‍ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬೆಂಬಲಿಗರನ್ನುದ್ದೇಶಿಸಿ ಮಾತನಾಡಿದ ಯುಎಸ್ ಅಧ್ಯಕ್ಷ ಜೋ ಬೈಡನ್ ಜನರನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಆ ವೇಳೆ ಅಲ್ಲಿ ಇವರಿಗಾಗಿ ಕಾತುರದಿಂದ ಕಾಯುತ್ತಿದ್ದ ಕಪ್ಪು ವರ್ಣದ ಅಮೆರಿಕನ್ ಮಹಿಳೆಯನ್ನು ಅವರು ನಿರ್ಲಕ್ಷ್ಯ ಮಾಡಿದ್ದಾರೆ. ಡೊನಾಲ್ಡ್ ಟ್ರಂಪ್ ವಿರುದ್ಧದ ಚರ್ಚೆಯ ನಂತರ ರಿಪಬ್ಲಿಕನ್ನರು ಈ ವಿಡಿಯೊವನ್ನು ಬಳಸಿಕೊಂಡು ಇದೀಗ ಜೋ ಬೈಡನ್ ವಿರುದ್ಧ ವಾಗ್ದಾಳಿ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಈ ವಿಡಿಯೊ ನೋಡಿದರೆ ಆ ಯುವತಿಯ ಕುರಿತು ಕನಿಕರ ಬರುತ್ತದೆ.

VISTARANEWS.COM


on

Viral Video
Koo

ಕೆಲವೊಂದು ದೇಶಗಳಲ್ಲಿ ಕಪ್ಪು ವರ್ಣದ ಜನರನ್ನು ಕಡೆಗಣಿಸುತ್ತಾರೆ. ಈ ಬಗ್ಗೆ ಅನೇಕರು ಹೋರಾಟ ನಡೆಸಿದರೂ ಕೂಡ ಕಪ್ಪು ಮತ್ತು ಬಿಳಿ ಮನುಷ್ಯರ ನಡುವಿನ ತಾರತಮ್ಯ ನಿಂತಿಲ್ಲ. ಅದರಲ್ಲೂ ಎಲ್ಲರಿಗೂ ಮಾದರಿಯಾಗಬೇಕಾಗಿದ್ದ ದೇಶದ ದೊಡ್ಡ ದೊಡ್ಡ ವ್ಯಕ್ತಿಗಳೇ ಇಂತಹ ತಾರತಮ್ಯ ಮಾಡುತ್ತಿರುವುದು ನಿಜವಾಗಲೂ ಬೇಸರದ ವಿಚಾರವೇ ಸರಿ. ಅಮೆರಿಕದಲ್ಲಂತೂ ಇಂತಹ ಘಟನೆಗಳು ಹೆಚ್ಚು ನಡೆಯುತ್ತಿರುತ್ತದೆ. ಇದೀಗ ಯುಎಸ್ ಅಧ್ಯಕ್ಷ ಜೋ ಬೈಡನ್ ಕಪ್ಪು ವರ್ಣದ ಅಮೆರಿಕನ್ ಮಹಿಳೆಯನ್ನು ನಿರ್ಲಕ್ಷಿಸಿದ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್(Viral Video) ಆಗಿದೆ. ಇದು ಚರ್ಚೆಗೆ ಕಾರಣವಾಗಿದೆ.

ವಿಸ್ಕಾನ್ಸಿನ್‍ನ ಮ್ಯಾಡಿಸನ್‍ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬೆಂಬಲಿಗರನ್ನುದ್ದೇಶಿಸಿ ಮಾತನಾಡಿದ ಯುಎಸ್ ಅಧ್ಯಕ್ಷ ಜೋ ಬೈಡನ್ ಜನರನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಆ ವೇಳೆ ಅಲ್ಲಿ ಇವರಿಗಾಗಿ ಕಾತುರದಿಂದ ಕಾಯುತ್ತಿದ್ದ ಕಪ್ಪು ವರ್ಣದ ಅಮೆರಿಕನ್ ಮಹಿಳೆಯನ್ನು ಅವರು ನಿರ್ಲಕ್ಷ್ಯ ಮಾಡಿದ್ದಾರೆ. ಡೊನಾಲ್ಡ್ ಟ್ರಂಪ್ ವಿರುದ್ಧದ ಚರ್ಚೆಯ ನಂತರ ರಿಪಬ್ಲಿಕನ್ನರು ಈ ವಿಡಿಯೊವನ್ನು ಬಳಸಿಕೊಂಡು ಇದೀಗ ಜೋ ಬೈಡನ್ ವಿರುದ್ಧ ವಾಗ್ದಾಳಿ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ.

ಈ ವಿಡಿಯೊದಲ್ಲಿ, ಕಪ್ಪು ಅಮೆರಿಕನ್ ಯುವತಿ ಕೈಯಲ್ಲಿ ಬೈಡನ್‌-ಹ್ಯಾರಿಸ್ ಬೋರ್ಡ್‌ ಹಿಡಿದು ಬೈಡನ್ ಅವರನ್ನು ಸ್ವಾಗತಿಸಲು ಆ ಮಹಿಳೆ ಕಾಯುತ್ತಿದ್ದಳು. ಆದರೆ ಯುಎಸ್ ಅಧ್ಯಕ್ಷ ಬೈಡನ್ ಮಹಿಳೆಯನ್ನು ಕಡೆಗಣಿಸಿದ್ದಾರೆ. ಆಕೆಯ ಮೊದಲು ನಿಂತಿದ್ದ ಬಿಳಿ ವರ್ಣದ ಮಹಿಳೆಯರನ್ನು ಹಗ್ ಮಾಡಿದ ಅವರು ಆಕೆಯನ್ನು ಬಿಟ್ಟು ಆಕೆಯ ನಂತರ ನಿಂತ ಬಿಳಿ ವರ್ಣದ ಮತ್ತೊಬ್ಬ ಮಹಿಳೆಯನ್ನು ಹಗ್ ಮಾಡಿದ್ದಾರೆ. ಆಕೆಯನ್ನು ಕಣ್ಣೆತ್ತಿ ನೋಡದ ಅಧ್ಯಕ್ಷರನ್ನು ಕಂಡು ಆಕೆ ಬೇಸರಗೊಂಡಿದ್ದು ಆಕೆಯ ಮುಖದಲ್ಲಿ ಎದ್ದು ಕಾಣುತ್ತಿತ್ತು. ಈ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆಕೆ ಅಧ್ಯಕ್ಷರನ್ನು ನೋಡಿದಾಗ ತುಂಬಾ ಖುಷಿಯಾಗಿದ್ದರು ಆದರೆ ಅವಳನ್ನು ಗುರುತಿಸದಿದ್ದಾಗ ನಿರಾಶೆಗೊಂಡರು ಎಂದು ಅದರಲ್ಲಿ ಬರೆಯಲಾಗಿದೆ. ಅಲ್ಲದೇ “ತನ್ನ “ಹೀರೋ ತನ್ನ ಬಣ್ಣದ ಜನರನ್ನು ಇಷ್ಟಪಡುವುದಿಲ್ಲ ಎಂದು ಅವಳು ಅರಿತುಕೊಂಡ ಕ್ಷಣ” ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರೊಬ್ಬರು ಎಕ್ಸ್ ನಲ್ಲಿ ಬರೆದು ಪೋಸ್ಟ್ ಮಾಡಿದ್ದಾರೆ.

ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಬೈಡನ್ ಪ್ರಚಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎನ್ನಲಾಗಿದೆ. ಯಾಕೆಂದರೆ ಬೈಡನ್ ಅವರನ್ನು ಶ್ವೇತಭವನಕ್ಕೆ ಕರೆದೊಯ್ದ ಕಪ್ಪು ವರ್ಣದ ಮತದಾರ ಬೆಂಬಲ ಕಳೆದುಕೊಳ್ಳುತ್ತಿದ್ದಾರೆ ಎಂದು ಹಲವಾರು ಸಮೀಕ್ಷೆಗಳು ತೋರಿಸಿವೆ. ಅಲ್ಲದೇ ಕೆಲವು ಕಪ್ಪು ಮತದಾರರು, ವಿಶೇಷವಾಗಿ ಯುವಕರ ಆರ್ಥಿಕತೆ ಮತ್ತು ಮತದಾರರ ಹಕ್ಕುಗಳ ಆದ್ಯತೆಗಳನ್ನು ನಿಭಾಯಿಸುವಲ್ಲಿ ಬೈಡನ್ ವಿಫಲರಾಗಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಐಷಾರಾಮಿ ಹೋಟೆಲ್‌ನಲ್ಲಿ ವಾಸ, ಫ್ಲೈಟ್‌ನಲ್ಲಿ ಓಡಾಟ; ಶ್ರೀಮಂತ ಕಳ್ಳನೀಗ ಪೊಲೀಸರ ಬಲೆಗೆ!

“ಟ್ರಂಪ್ ಇದನ್ನು ಪ್ರಚಾರದ ಜಾಹೀರಾತಾಗಿ ನಡೆಸಬೇಕು” ಎಂದು ಕೆಲವರು ಹೇಳಿದ್ದಾರೆ. ಈಗಾಗಲೇ ಜೂನ್‌ನಲ್ಲಿ ಡೆಟ್ರಾಯಿಟ್‍ನ 180 ಚರ್ಚ್‍ನಲ್ಲಿ ಸುಮಾರು 200 ಜನರನ್ನುದ್ದೇಶಿಸಿ ಮಾತನಾಡಿದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಧ್ಯಕ್ಷ ಜೋ ಬೈಡನ್ ಅವರ ಪಾತ್ರವನ್ನು ಟೀಕಿಸುವ ಮೂಲಕ ಕಪ್ಪು ಮತದಾರರನ್ನು ಆಕರ್ಷಿಸಿದರು ಎನ್ನಲಾಗಿದೆ. ಹಾಗಾಗಿ ಅಮೆರಿಕದಲ್ಲಿ ಹೆಚ್ಚಿನ ಬೆಂಬಲ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗಿದೆ ಎನ್ನಲಾಗಿದೆ.

Continue Reading

ಪ್ರಮುಖ ಸುದ್ದಿ

Viral Video : ಮೆಟ್ರೊದಲ್ಲಿ ಪರ್ಸ್ ಕದಿಯಲು ಮುಂದಾದ ಕಳ್ಳನಿಗೆ ಬಿತ್ತು ಗೂಸಾ! ವಿಡಿಯೊ ನೋಡಿ

Viral Video: ಕೆಲವರು ದುಡಿಯುವುದಕ್ಕೆ ಆಗದೇ ಕಳ್ಳತನ ಮಾರ್ಗ ಹಿಡಿಯುತ್ತಾರೆ. ಇನ್ನು ಕೆಲವರು ಕಳ್ಳತನವನ್ನೇ ದುಡಿಮೆಯನ್ನಾಗಿಸಿಕೊಳ್ಳುತ್ತಾರೆ. ದೆಹಲಿ ಮೆಟ್ರೋದಲ್ಲಿ ಪರ್ಸ್ ಕಳ್ಳತನ ಮಾಡಿ ಸಿಕ್ಕಿಬಿದ್ದ ಕಳ್ಳನಿಗೆ ಪ್ರಯಾಣಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಳಕಿಗೆ ಬಂದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಪೊಲೀಸ್ ಕ್ರಮದ ಬಗ್ಗೆ ವರದಿಯಾಗಿಲ್ಲ. ಈ ಘಟನೆಗಳು ಬೆಳಕಿಗೆ ಬರುತ್ತಿದ್ದಂತೆ, ರೈಲಿನ ಒಳಗೆ ಮತ್ತು ನಿಲ್ದಾಣಗಳಲ್ಲಿ ಇಂತಹ ಘಟನೆಗಳನ್ನು ತಡೆಯಲು ನೇಮಿಸಲಾದ ಮೆಟ್ರೋ ಮಾರ್ಷಲ್‌ಗಳು ಎಲ್ಲಿದ್ದಾರೆ ಎಂದು ಜನರು ಆಶ್ಚರ್ಯ ಪಡುತ್ತಿದ್ದಾರೆ.

VISTARANEWS.COM


on

Viral Video
Koo

ನವದೆಹಲಿ : ಇತ್ತೀಚಿನ ದಿನಗಳಲ್ಲಿ ಕಳ್ಳತನದ ಪ್ರಕರಣ ಹೆಚ್ಚಾಗಿ ನಡೆಯುತ್ತಿವೆ. ಬಸ್, ರೈಲು, ಮಾರುಕಟ್ಟೆ, ರಸ್ತೆಗಳಲ್ಲಿ ಜನರ ಬೆಲೆಬಾಳುವ ವಸ್ತುಗಳನ್ನು, ಪರ್ಸ್‌ಗಳನ್ನು ಹಾಡುಹಗಲಿನಲ್ಲಿಯೇ ಜನಸಂದಣಿ ಇರುವಂತಹ ಸ್ಥಳಗಳಲ್ಲಿಯೇ ದರೋಡೆ ಮಾಡುತ್ತಿದ್ದಾರೆ. ಇದೀಗ ದೆಹಲಿ ಮೆಟ್ರೋದಲ್ಲಿ ಪರ್ಸ್ ಕಳ್ಳತನ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video )ಆಗಿದೆ.

ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಪರ್ಸ್ ಕದಿಯಲು ಕಳ್ಳ ಮುಂದಾದಾಗ ವ್ಯಕ್ತಿಯೊಬ್ಬ ಕಳ್ಳನನ್ನು ಹಿಡಿದು ಥಳಿಸಿದ್ದಾನೆ. ಮೆಟ್ರೋ ಒಳಗೆ ಕಳ್ಳನನ್ನು ಥಳಿಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ, ಮಧ್ಯವಯಸ್ಕ ವ್ಯಕ್ತಿಯೊಬ್ಬ ಜನಜಂಗುಳಿ ಇರುವ ರೈಲಿನಲ್ಲಿ ಪರ್ಸ್ ಕದಿಯುತ್ತಿದ್ದ ಕಳ್ಳನನ್ನು ಒದೆಯುವುದು ಮತ್ತು ಕಪಾಳಮೋಕ್ಷ ಮಾಡುವುದನ್ನು ಕಾಣಬಹುದು. ಆರೋಪಿಯು ಆ ವ್ಯಕ್ತಿಯ ಬಳಿ ಮತ್ತೆ ಈ ಕೆಲಸ ಮಾಡುವುದಿಲ್ಲ ಎಂದು ಬೇಡಿಕೊಳ್ಳುತ್ತಿರುವುದು ಕಂಡುಬಂದಿದೆ. ಆದರೆ ಆ ವ್ಯಕ್ತಿಯು ಅವನ ವಿನಂತಿಯನ್ನು ಕೇಳದೆ ಜನಗಳ ಮುಂದೆ ಅವನಿಗೆ ಕಪಾಳಮೋಕ್ಷ ಮಾಡುತ್ತಿದ್ದಾನೆ. ನಂತರ ಆರೋಪಿಯು ತನ್ನ ಕೃತ್ಯಕ್ಕಾಗಿ ಕ್ಷಮೆಯಾಚಿಸುತ್ತಾ ವ್ಯಕ್ತಿಯ ಪಾದಗಳನ್ನು ಹಿಡಿಯಲು ಪ್ರಯತ್ನಿಸುತ್ತಾನೆ. ಆದರೆ ಆರೋಪಿಯು ಅವನ ಪಾದಗಳನ್ನು ಸ್ಪರ್ಶಿಸಲು ಬಂದಾಗ ಆ ವ್ಯಕ್ತಿ ಅವನ ಎದೆಗೆ ಒದೆಯುತ್ತಾನೆ ಮತ್ತು ನಂತರ ಪದೇ ಪದೇ ಕಪಾಳಮೋಕ್ಷ ಮಾಡುತ್ತಾನೆ.

ಕಾಶ್ಮೀರಿ ಗೇಟ್ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಘಟನೆ ನೆಡೆದ ನಿಖರವಾದ ದಿನಾಂಕ ಇನ್ನೂ ತಿಳಿದುಬಂದಿಲ್ಲ. ಆದಾಗ್ಯೂ, ಈ ವಿಡಿಯೊ ಭಾನುವಾರ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಸಖತ್ ವೈರಲ್ ಆಗುತ್ತಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಪೊಲೀಸ್ ಕ್ರಮದ ಬಗ್ಗೆ ವರದಿಯಾಗಿಲ್ಲ. ಈ ಘಟನೆಗಳು ಬೆಳಕಿಗೆ ಬರುತ್ತಿದ್ದಂತೆ, ರೈಲಿನ ಒಳಗೆ ಮತ್ತು ನಿಲ್ದಾಣಗಳಲ್ಲಿ ಇಂತಹ ಘಟನೆಗಳನ್ನು ತಡೆಯಲು ನೇಮಿಸಲಾದ ಮೆಟ್ರೋ ಮಾರ್ಷಲ್‌ಗಳು ಎಲ್ಲಿದ್ದಾರೆ ಎಂದು ಜನರು ಆಶ್ಚರ್ಯ ಪಡುತ್ತಿದ್ದಾರೆ.

ಇದನ್ನೂ ಓದಿ: ಪುರಿ ಜಗನ್ನಾಥ ದೇವಾಲಯದ 10 ಅದ್ಭುತ ಸಂಗತಿಗಳಿವು!

ಇಂತಹ ಕಳ್ಳತನದ ಪ್ರಕರಣಗಳು ದಿನಕ್ಕೊಂದು ಬೆಳಕಿಗೆ ಬರುತ್ತಿದೆ. ಅದರಲ್ಲೂ ಮೆಟ್ರೋ ಸಿಟಿಗಳಾದ ದೆಹಲಿ, ಬೆಂಗಳೂರಿನಂತಹ ಸ್ಥಳಗಳಲ್ಲಿ ಈ ಪ್ರಕರಣಗಳು ಹೆಚ್ಚು ನಡೆಯುತ್ತಿವೆ. ಇತ್ತೀಚೆಗಷ್ಟೆ ಬೆಂಗಳೂರಿನಲ್ಲಿ ಜನಸಂದಣಿ ಇರುವ ಸ್ಥಳದಲ್ಲಿ ಹಾಡುಹಗಲಿನಲ್ಲಿಯೇ ಕಳ್ಳನೊಬ್ಬ ವಯಸ್ಕ ವ್ಯಕ್ತಿಯ ಕೈಯಲ್ಲಿದ್ದ ಬ್ಯಾಗ್ ಅನ್ನು ಕಳ್ಳತನ ಮಾಡಿ ಓಡಿ ಹೋಗುತ್ತಿರುವುದು ಕಂಡುಬಂದಿದೆ.

Continue Reading

ರಾಜಕೀಯ

Rahul Gandhi: ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿಗೆ ಇರುವ ಅಧಿಕಾರ ಏನೇನು?

2014 ಮತ್ತು 2019ರಲ್ಲಿ ಲೋಕಸಭೆಯಲ್ಲಿ ಶೇ.10ಕ್ಕಿಂತ ಕಡಿಮೆ ಸ್ಥಾನಗಳನ್ನು ಹೊಂದಿದ್ದ ಕಾಂಗ್ರೆಸ್‌ನ ಇದೀಗ ಹತ್ತು ವರ್ಷಗಳ ಬಳಿಕ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆಯಲು ವಿರೋಧ ಪಕ್ಷಕ್ಕೆ ಕನಿಷ್ಠ 55 ಸ್ಥಾನಗಳ ಅಗತ್ಯವಿದೆ. 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 99 ಸ್ಥಾನಗಳನ್ನು ಗಳಿಸಿದೆ. ವಿರೋಧ ಪಕ್ಷದ ನಾಯಕನಾಗಿರುವ ರಾಹುಲ್‌ ಗಾಂಧಿ ಅವರಿಗೆ ಇರುವ ಅಧಿಕಾರ ಏನೇನು ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

By

Rahul Gandhi
Koo

ಇಂಡಿಯಾ ಮೈತ್ರಿ ಕೂಟವು (India alliance) ಎನ್‌ಡಿಎ (NDA) ಸರ್ಕಾರದ ವಿರುದ್ಧ ಕಾಂಗ್ರೆಸ್ (congress) ನಾಯಕ ರಾಹುಲ್ ಗಾಂಧಿ (rahul gandhi) ಅವರನ್ನು ಲೋಕಸಭೆಯ (loksabha) ವಿರೋಧ ಪಕ್ಷದ ನಾಯಕರನ್ನಾಗಿ (Leader of the Opposition) ನೇಮಿಸಿದೆ. ವಿರೋಧ ಪಕ್ಷದ ನಾಯಕನಿಗೆ ಸಂಸತ್ತಿನಲ್ಲಿ ಕೆಲವು ಅಧಿಕಾರಗಳಿವೆ. ಹತ್ತು ವರ್ಷಗಳ ಬಳಿಕ ಕಾಂಗ್ರೆಸ್ ಈ ಬಾರಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆದಿದೆ.

2014 ಮತ್ತು 2019ರಲ್ಲಿ ಲೋಕಸಭೆಯಲ್ಲಿ ಶೇ.10ಕ್ಕಿಂತ ಕಡಿಮೆ ಸ್ಥಾನಗಳನ್ನು ಹೊಂದಿದ್ದ ಕಾಂಗ್ರೆಸ್‌ನ ಇದೀಗ ಹತ್ತು ವರ್ಷಗಳ ಬಳಿಕ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆಯಲು ವಿರೋಧ ಪಕ್ಷಕ್ಕೆ ಕನಿಷ್ಠ 55 ಸ್ಥಾನಗಳ ಅಗತ್ಯವಿದೆ. 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 99 ಸ್ಥಾನಗಳನ್ನು ಗಳಿಸಿತು.

ವಿರೋಧ ಪಕ್ಷದ ನಾಯಕ ಸಾಂವಿಧಾನಿಕ ಹುದ್ದೆಯಲ್ಲದಿದ್ದರೂ, ಪ್ರಮುಖ ನೇಮಕಾತಿಗಳನ್ನು ಒಳಗೊಂಡಿರುವ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಕೆಲವು ಅಧಿಕಾರಗಳನ್ನು ಹೊಂದಿದೆ. ಈ ಬಾರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಈ ಅಧಿಕಾರ ಚಲಾಯಿಸುವ ಅವಕಾಶ ಸಿಕ್ಕಿದೆ.

ವಿರೋಧ ಪಕ್ಷದ ನಾಯಕನಿಗೆ ಯಾವ ಅಧಿಕಾರವಿದೆ?

ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಅವರು ನಿರ್ಣಾಯಕ ಸಂಸದೀಯ ಸಮಿತಿಗಳ ಸದಸ್ಯರಾಗಿರಲಿದ್ದಾರೆ. ಅವರು ಹಲವಾರು ಜಂಟಿ ಸಂಸದೀಯ ಸಮಿತಿಗಳು, ಸಾರ್ವಜನಿಕ ಖಾತೆಗಳ ಸಮಿತಿಗಳು, ಸಾರ್ವಜನಿಕ ಉದ್ಯಮ ಸೇರಿದಂತೆ ಹಲವು ಸಮಿತಿಗಳ ಸದಸ್ಯರಾಗಿರುತ್ತಾರೆ. ಪ್ರಮುಖ ಹುದ್ದೆಗಳಿಗೆ ಅಧಿಕಾರಿಗಳನ್ನು ನೇಮಿಸುವ ವಿಚಾರದಲ್ಲಿಯೂ ಅವರ ಮಾತಿಗೆ ಪ್ರಾಮುಖ್ಯತೆ ಇರುತ್ತದೆ.

ಇದಲ್ಲದೆ ಶಾಸನಬದ್ಧ ಸಂಸ್ಥೆಗಳಾದ ಸೆಂಟ್ರಲ್ ವಿಜಿಲೆನ್ಸ್ ಕಮಿಷನ್, ಸೆಂಟ್ರಲ್ ಇನ್ಫಾರ್ಮೇಶನ್ ಕಮಿಷನ್, ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್, ನ್ಯಾಷನಲ್ ಹ್ಯೂಮನ್ ರೈಟ್ಸ್ ಕಮಿಷನ್ ಆಫ್ ಇಂಡಿಯಾ, ಲೋಕಪಾಲ್ ಮತ್ತು ಹೆಚ್ಚಿನವುಗಳ ಮುಖ್ಯಸ್ಥರನ್ನು ನೇಮಿಸುವ ಜವಾಬ್ದಾರಿಯನ್ನು ಹೊಂದಿರುವ ಕೆಲವು ಸಮಿತಿಗಳ ಸದಸ್ಯರಾಗಿಯೂ ಸಹ ರಾಹುಲ್ ಗಾಂಧಿ ಅರ್ಹರಾಗಿದ್ದಾರೆ.

ಗಾಂಧಿ ಕುಟುಂಬದ ಮೂರನೇ ಸದಸ್ಯ

ರಾಹುಲ್ ಗಾಂಧಿ ಅವರು ಗಾಂಧಿ ಕುಟುಂಬದ ಮೂರನೇ ಸದಸ್ಯರಾಗಿ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಅವರಿಗಿಂತ ಮೊದಲು ಅವರ ಅವರ ತಾಯಿ ಸೋನಿಯಾ ಗಾಂಧಿ ಮತ್ತು ತಂದೆ ರಾಜೀವ್ ಗಾಂಧಿ ಈ ಅಧಿಕಾರ ನಿಭಾಯಿಸಿದ್ದರು. ರಾಜೀವ್ ಗಾಂಧಿ ಅವರು 1989- 1990ರವರೆಗೆ ಈ ಹುದ್ದೆಯಲ್ಲಿದ್ದರೆ, ಸೋನಿಯಾ 1999ರಿಂದ 2004ರವರೆಗೆ ಈ ಅಧಿಕಾರ ವಹಿಸಿಕೊಂಡಿದ್ದರು.

ಉತ್ತರ ಪ್ರದೇಶದ ರಾಯ್ಬರೇಲಿಯ ಕಾಂಗ್ರೆಸ್ ಸಂಸದ ರಾಹುಲ್‌ ಗಾಂಧಿಯವರು ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ಹೆಚ್ಚುವರಿ ಸಂಬಳ ಮತ್ತು ಭತ್ಯೆ ಪಡೆಯಲಿದ್ದಾರೆ.

ಇದನ್ನೂ ಓದಿ: Narendra Modi: ಅಂಬೇಡ್ಕರ್‌ರನ್ನು ಷಡ್ಯಂತ್ರದಿಂದ ಸೋಲಿಸಿದ ನೆಹರೂ; ಕಾಂಗ್ರೆಸ್‌ನಿಂದ ದಲಿತರ ಶೋಷಣೆ ಎಂದ ಮೋದಿ


Continue Reading

ಧಾರ್ಮಿಕ

Vastu Tips: ಮನೆಯಲ್ಲಿ ನೆಮ್ಮದಿ ನೆಲೆಸಬೇಕೆ? ಹಾಗಿದ್ದರೆ ಅಡುಗೆ ಒಲೆಯ ದಿಕ್ಕು ಸರಿಯಾಗಿರಲಿ!

ಮನೆ ಮಂದಿಯ ಆರೋಗ್ಯ, ನೆಮ್ಮದಿಯ ಗುಟ್ಟು ಅಡುಗೆ ಮನೆಯಲ್ಲಿ ಇರುತ್ತದೆ. ಒಲೆಯ ದಿಕ್ಕು ಸರಿಯಾಗಿ ಇಲ್ಲದೇ ಇದ್ದರೆ ಅಡುಗೆ ಎಷ್ಟೇ ರುಚಿಯಾಗಿ, ಶುಚಿಯಾಗಿ ಮಾಡಿದರೂ ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ತುಂಬಲು ಸಾಧ್ಯವಿಲ್ಲ. ಹೀಗಾಗಿ ಅಡುಗೆ ಮನೆಯಲ್ಲಿ ಒಲೆಯನ್ನು ಇಡುವಾಗ ದಿಕ್ಕಿನ ಬಗ್ಗೆ ಪ್ರಮುಖ ಆದ್ಯತೆ ನೀಡಲೇಬೇಕು ಎನ್ನುತ್ತದೆ ವಾಸ್ತು (Vastu Tips) ಶಾಸ್ತ್ರ .

VISTARANEWS.COM


on

By

Vastu Tips
Koo

ಮನೆ (home) ಮಂದಿಯ ಆರೋಗ್ಯ (health) ಮತ್ತು ಸಮೃದ್ಧಿಯ (wealth) ಗುಟ್ಟು ಅಡುಗೆ ಮನೆಯಲ್ಲಿ (kitchen room) ಇರುತ್ತದೆ ಎಂದು ಮನೆಯ ಹಿರಿಯರು ಆಗಾಗ ಹೇಳುವುದನ್ನು ನಾವು ಕೇಳಿರುತ್ತೇವೆ. ವಾಸ್ತು ಶಾಸ್ತ್ರವು (Vastu Tips) ಕೂಡ ಇದನ್ನೇ ಹೇಳುತ್ತದೆ. ಹೀಗಾಗಿ ಅಡುಗೆ ಮನೆಗೆ ಸಂಬಂಧಿಸಿ ವಾಸ್ತು ಶಾಸ್ತ್ರದಲ್ಲಿ ವಿಶೇಷ ನಿಯಮಗಳಿವೆ. ಅದರಲ್ಲೂ ಒಲೆಯ (stove) ದಿಕ್ಕಿಗೆ ವಿಶೇಷ ಸ್ಥಾನವಿದೆ.

ವಾಸ್ತು ಶಾಸ್ತ್ರದಲ್ಲಿ ಶಕ್ತಿಗೆ ವಿಶೇಷ ಮಹತ್ವವಿದೆ. ಅಡುಗೆ ಮನೆಗೆ ಸಂಬಂಧಿಸಿ ವಾಸ್ತು ನಿಯಮಗಳನ್ನು ಪಾಲಿಸದೇ ಇದ್ದರೆ ಮನೆಗೆ ನಕಾರಾತ್ಮಕ ಶಕ್ತಿ ಬರಬಹುದು ಎನ್ನಲಾಗುತ್ತದೆ.

ಮನೆಯ ಪ್ರತಿಯೊಂದು ಮೂಲೆಗೂ ನಿರ್ದಿಷ್ಟ ದಿಕ್ಕನ್ನು ಸೂಚಿಸಲಾಗಿದೆ. ವಾಸ್ತು ಶಾಸ್ತ್ರದಲ್ಲಿ ಅಡುಗೆ ಮನೆಗೆ ಸಂಬಂಧಿಸಿ ಹಲವು ಪ್ರಮುಖ ವಿಷಯಗಳನ್ನು ಹೇಳಲಾಗಿದೆ. ಅಡುಗೆ ಮನೆಯಲ್ಲಿ ಯಾವುದೇ ದೋಷವಿದ್ದರೆ ಅದರ ಪರಿಣಾಮ ಅಡುಗೆ ಮಾಡುವವರ ಮೇಲೆ ಹಾಗೂ ಇಡೀ ಕುಟುಂಬದ ಮೇಲೆ ಬೀಳುತ್ತದೆ.

ಅಡುಗೆ ಮನೆಯಲ್ಲಿ ಇಟ್ಟಿರುವ ಒಲೆಯ ದಿಕ್ಕು ತಪ್ಪಿದರೆ ಮನೆಯ ನೆಮ್ಮದಿ ಕೆಡುತ್ತದೆ. ಹೀಗಾಗಿ ಒಲೆಯ ದಿಕ್ಕಿಗೆ ವಿಶೇಷ ಗಮನ ನೀಡಬೇಕು.


ಯಾವ ದಿಕ್ಕಿನಲ್ಲಿ ಒಲೆ ಇಡಬಾರದು?

ಒಲೆಯನ್ನು ಉತ್ತರ ದಿಕ್ಕಿನಲ್ಲಿ ಇಡಬಾರದು. ಈ ದಿಕ್ಕು ಲಕ್ಷ್ಮಿ ದೇವಿಯ ಪ್ರತೀಕವಾಗಿದೆ. ಈ ದಿಕ್ಕಿನಲ್ಲಿ ಒಲೆ ಇಡುವುದರಿಂದ ಸಂಪತ್ತು ಕಡಿಮೆಯಾಗಬಹುದು ಎಂದು ನಂಬಲಾಗಿದೆ. ಪಶ್ಚಿಮ ದಿಕ್ಕು ಪಿತೃ ದೇವತೆಗಳ ಸಂಕೇತವಾಗಿದೆ. ವಾಸ್ತು ಪ್ರಕಾರ, ಈ ದಿಕ್ಕಿನಲ್ಲಿ ಒಲೆ ಇಡುವುದರಿಂದ ಕುಟುಂಬದಲ್ಲಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ.

ನೈಋತ್ಯ ದಿಕ್ಕು ರಾಹು ಗ್ರಹದ ಸಂಕೇತವಾಗಿದೆ. ಈ ದಿಕ್ಕಿನಲ್ಲಿ ಒಲೆ ಇಡುವುದರಿಂದ ನಕಾರಾತ್ಮಕ ಶಕ್ತಿಯ ಹರಿವನ್ನು ಹೆಚ್ಚಿಸಬಹುದು. ಇದು ಮನಸ್ಸಿನಲ್ಲಿ ಅಶಾಂತಿ ಮತ್ತು ತೊಂದರೆಗಳನ್ನು ಉಂಟುಮಾಡಬಹುದು. ಈಶಾನ್ಯ ಮೂಲೆಯು ದೇವರ ಸಂಕೇತವಾಗಿದೆ. ಈ ದಿಕ್ಕಿನಲ್ಲಿ ಒಲೆ ಇಡುವುದರಿಂದ ಪೂಜೆಗೆ ಅಡ್ಡಿಯಾಗುತ್ತದೆ ಮತ್ತು ಮನೆಯಲ್ಲಿ ಅಶಾಂತಿ ಉಂಟಾಗುತ್ತದೆ.

ಇದನ್ನೂ ಓದಿ: Vastu Tips: ಉದ್ಯೋಗದಲ್ಲಿ ಪ್ರಗತಿ ಸಾಧಿಸಬೇಕೆ? ಹೀಗೆ ಮಾಡಿ


ಯಾವ ದಿಕ್ಕು ಒಳ್ಳೆಯದು?

ಆಗ್ನೇಯ ದಿಕ್ಕು ಅಗ್ನಿ ದೇವರ ಸಂಕೇತವಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ ಒಲೆಯ ಬಾಯಿಯನ್ನು ಈ ದಿಕ್ಕಿನಲ್ಲಿ ಇಡುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಇದು ಮನೆಯಲ್ಲಿ ಸಂತೋಷ, ಸಮೃದ್ಧಿ ಮತ್ತು ಸಕಾರಾತ್ಮಕತೆಯ ಹರಿವನ್ನು ಹೆಚ್ಚಿಸುತ್ತದೆ.

ಒಲೆಯನ್ನು ಪೂರ್ವ ದಿಕ್ಕಿಗೆ ಇಡುವುದು ಕೂಡ ಮಂಗಳಕರ. ಈ ದಿಕ್ಕು ಸೂರ್ಯ ದೇವರ ಸಂಕೇತವಾಗಿದೆ. ಈ ದಿಕ್ಕಿಗೆ ಒಲೆ ಇಡುವುದರಿಂದ ಮನೆಯಲ್ಲಿ ಧನಾತ್ಮಕ ಶಕ್ತಿ ಹೆಚ್ಚುತ್ತದೆ ಮತ್ತು ಗ್ರಹಗಳ ಸ್ಥಾನವನ್ನು ಬಲಪಡಿಸುತ್ತದೆ. ಇದರ ಶುಭ ಪರಿಣಾಮದಿಂದಾಗಿ ಕುಟುಂಬ ಸದಸ್ಯರ ಆರೋಗ್ಯವು ಉತ್ತಮವಾಗಿರುತ್ತದೆ.

Continue Reading
Advertisement
Mumbai hit and run
ದೇಶ20 mins ago

Mumbai Hit And Run: ಮುಂಬೈ ಹಿಟ್‌ ಆ್ಯಂಡ್‌ ರನ್‌ ಕೇಸ್‌; ಘಟನೆಗೂ ಮುನ್ನ ಬಾರ್‌ಗೆ ಹೋಗಿದ್ದ ಆರೋಪಿ, 18 ಸಾವಿರ ಬಿಲ್‌!

Actor Darshan Will Attend The Court Hearing From Online
ಕ್ರೈಂ26 mins ago

Actor Darshan: ಆರೋಪಿಗಳಿಗೆ ಗಂಟಲು ಮುಳ್ಳಾದ ಗುರುತು ಪತ್ತೆ ಪರೇಡ್‌, ಬೆಟ್ಟು ಮಾಡಿ ತೋರಿಸಿದ ಸಾಕ್ಷಿಗಳು

Vicky Pedia I love you sanjana song trend
ವೈರಲ್ ನ್ಯೂಸ್29 mins ago

Vicky Pedia: ಸಂಜನಾ..ಸಂಜನಾ …`I Love You’ ಸಂಜನಾ; ಬಾಲಕನ ಹಾಡಿಗೆ ಹೊಸ ಟಚ್ ಕೊಟ್ಟ ವಿಕಾಸ್ ವಿಕ್ಕಿಪಿಡಿಯ! 

Murder case
ಬೆಂಗಳೂರು37 mins ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

Poonam Pandey bold photo with shadow and light
ಬಾಲಿವುಡ್1 hour ago

Poonam Pandey: ಕತ್ತಲೆಯಲ್ಲಿ ಬೆತ್ತಲೆಯಾಗಿ ಮೈಮಾಟ ಪ್ರದರ್ಶಿಸಿ, ಫ್ಯಾನ್ಸ್‌ಗೆ ಕಚಗುಳಿ ಇಟ್ಟ ಪೂನಂ ಪಾಂಡೆ!

Bus Accident
ಪ್ರಮುಖ ಸುದ್ದಿ1 hour ago

Bus Accident : ಶಾಲಾ ಬಸ್​ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ

Student death Nursing college student commits suicide in Bengaluru
ಬೆಂಗಳೂರು1 hour ago

Student Death : ಬೆಂಗಳೂರಿನಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Pakistan
ವಿದೇಶ1 hour ago

Pakistan: ಛೇ..ಇವನೆಂಥಾ ಪಾಪಿ ತಂದೆ! ಚಿಕಿತ್ಸೆಗೆ ಹಣ ಇಲ್ಲವೆಂದು 15 ದಿನದ ಹಸುಳೆಯ ಜೀವಂತ ಸಮಾಧಿ

Kalki 2898 AD box office collection weekend 2
ಟಾಲಿವುಡ್1 hour ago

Kalki 2898 AD: ನಾಲ್ಕೇ ದಿನಕ್ಕೆ 500 ಕೋಟಿ ರೂ. ಗಳಿಕೆ ಮಾಡಿದ ʻಕಲ್ಕಿ 2898 ಎಡಿʼಸಿನಿಮಾ!

Viral Video
Latest1 hour ago

Viral Video: ಸ್ವಾಗತಿಸಲು ಖುಷಿಯಿಂದ ಕಾಯುತ್ತಿದ್ದ ಕಪ್ಪು ವರ್ಣದ ಮಹಿಳೆಗೆ ಜೋ ಬೈಡನ್ ಅವಮಾನ; ನಾಚಿಕೆಯಾಗಬೇಕು ಅಮೆರಿಕಕ್ಕೆ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ16 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ19 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ19 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ2 days ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

ಟ್ರೆಂಡಿಂಗ್‌