Google Map: ಗೂಗಲ್‌ ಮ್ಯಾಪ್‌ ನಂಬಿ ಹೊರಟವರಿಗೆ ಕಾದಿತ್ತು ಬಿಗ್‌ ಶಾಕ್‌; 11ಗಂಟೆ ದಟ್ಟ ಕಾಡಿನಲ್ಲೇ ಸಿಲುಕಿದ ವಿದ್ಯಾರ್ಥಿಗಳು - Vistara News

ವೈರಲ್ ನ್ಯೂಸ್

Google Map: ಗೂಗಲ್‌ ಮ್ಯಾಪ್‌ ನಂಬಿ ಹೊರಟವರಿಗೆ ಕಾದಿತ್ತು ಬಿಗ್‌ ಶಾಕ್‌; 11ಗಂಟೆ ದಟ್ಟ ಕಾಡಿನಲ್ಲೇ ಸಿಲುಕಿದ ವಿದ್ಯಾರ್ಥಿಗಳು

Google Map: ಒಡಿಶಾದ ಧೆಂಕನಲ್‌ ಕಾಡಿನಲ್ಲಿ ಈ ಘಟನೆ ನಡೆದಿದ್ದು, ಕಟ್ಟಕ್‌ ಕಾಲೇಜಿ ವಿದ್ಯಾರ್ಥಿಗಳಾದ ಸುಜಿತ್ಯಾ ಸಾಹು, ಪ್ರಕಾಶ್‌ ಮೊಹಂಟಿ, ಸುಭನ್‌ ಮೊಹಪತ್ರ, ಹಿಮಾಂಶು ದಾಸ್‌ ಮತ್ತು ಆರಕ್ಷಿತಾ ಮೊಹಪತ್ರ ತಮ್ಮ ತಮ್ಮ ಬೈಕಿನಲ್ಲಿ ಸಪ್ತಸಜ್ಯ ದೇವಸ್ಥಾನಕ್ಕೆ ಒಂದು ದಿನದ ಪ್ರವಾಸ ಕೈಗೊಂಡಿದ್ದರು. ಜೂ.30ರಂದು ಬೆಳಗ್ಗೆ 11 ಗಂಟೆಗೆ ದೇಗುಲಕ್ಕೆ ತಲುಪಿದ್ದರು. ಬಳಿಕ ಅಲ್ಲಿಂದ ಎತ್ತರದ ಗುಡ್ಡದಲ್ಲಿರುವ ದೇಗುಲಮತ್ತು ವಿಷ್ಣು ಬಾಬಾ ಮಠಕ್ಕೆ ಭೇಟಿ ಕೊಟ್ಟಿದ್ದರು. ಅಲ್ಲಿಂದ ವಾಪಾಸ್‌ ಬರುತ್ತಾ ಗೂಗಲ್‌ ಮ್ಯಾಪ್‌ ಹಾಕಿದ್ದರು. ಅದು ಹೇಳಿದ ದಿಕ್ಕಿಗೆ ಹೋಗುತ್ತಾ ಹೋಗುತ್ತಾ ಐವರು ದಟ್ಟ ಕಾಡಿನ ನಡುವೆ ಸಿಲುಕಿಕೊಂಡಿದ್ದರು.

VISTARANEWS.COM


on

Google Map
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭುವನೇಶ್ವರ: ಇತ್ತೀಚೆಗೆ ಗೂಗಲ್‌ ಮ್ಯಾಪ್‌ ದಾರಿ ತೋರಿಸುವುದಕ್ಕಿಂತ ದಾರಿ ತಪ್ಪಿಸುವ ಘಟನೆಗಳೇ ಹೆಚ್ಚಾಗಿ ನಡೆಯುತ್ತಿವೆ. ಕೆಲವು ದಿನಗಳ ಹಿಂದೆಯಷ್ಟೇ ಆಸ್ಪತ್ರೆಗೆ ಹೋಗಲು ಗೂಗಲ್ ಮ್ಯಾಪ್ (Google Map) ಬಳಸಿ ದಾರಿ ಹುಡುಕುತ್ತಾ ಹೋದ ಯುವಕರಿಬ್ಬರು ತಮ್ಮ ಕಾರನ್ನು ಉಕ್ಕಿ ಹರಿಯುತ್ತಿದ್ದ ನದಿಗೆ ಇಳಿಸಿದ ಘಟನೆ ಕೇರಳದಲ್ಲಿ ನಡೆದಿತ್ತು. ಇದೀಗ ಅಂತಹದ್ದೇ ಒಂದು ಘಟನೆ ಒಡಿಶಾದಲ್ಲಿ ನಡೆದಿದ್ದು, ಗೂಗಲ್‌ ಮ್ಯಾಪ್‌ ಯುವಕರಿಗೆ ದುಃಸ್ವಪ್ನವಾಗಿ ಕಾಡಿದೆ. ಗೂಗಲ್‌ ಮ್ಯಾಪ್‌ ಸೂಚನೆಯಂತೆ ಹೊರಟ ಐವರು ಸ್ನೇಹಿತರು ದಟ್ಟ ಕಾಡಿನ ನಡುವೆ ಸಿಲುಕಿದ್ದು, ಬರೋಬ್ಬರಿ 11ಗಂಟೆಗಳ ಬಳಿಕ ಪಾರಾಗಿದ್ದಾರೆ.

ಏನಿದು ಘಟನೆ?

ಒಡಿಶಾದ ಧೆಂಕನಲ್‌ ಕಾಡಿನಲ್ಲಿ ಈ ಘಟನೆ ನಡೆದಿದ್ದು, ಕಟ್ಟಕ್‌ ಕಾಲೇಜಿ ವಿದ್ಯಾರ್ಥಿಗಳಾದ ಸುಜಿತ್ಯಾ ಸಾಹು, ಪ್ರಕಾಶ್‌ ಮೊಹಂಟಿ, ಸುಭನ್‌ ಮೊಹಪತ್ರ, ಹಿಮಾಂಶು ದಾಸ್‌ ಮತ್ತು ಆರಕ್ಷಿತಾ ಮೊಹಪತ್ರ ತಮ್ಮ ತಮ್ಮ ಬೈಕಿನಲ್ಲಿ ಸಪ್ತಸಜ್ಯ ದೇವಸ್ಥಾನಕ್ಕೆ ಒಂದು ದಿನದ ಪ್ರವಾಸ ಕೈಗೊಂಡಿದ್ದರು. ಜೂ.30ರಂದು ಬೆಳಗ್ಗೆ 11 ಗಂಟೆಗೆ ದೇಗುಲಕ್ಕೆ ತಲುಪಿದ್ದರು. ಬಳಿಕ ಅಲ್ಲಿಂದ ಎತ್ತರದ ಗುಡ್ಡದಲ್ಲಿರುವ ದೇಗುಲಮತ್ತು ವಿಷ್ಣು ಬಾಬಾ ಮಠಕ್ಕೆ ಭೇಟಿ ಕೊಟ್ಟಿದ್ದರು.

ಅಲ್ಲಿಂದ ವಾಪಾಸ್‌ ಬರುತ್ತಾ ಗೂಗಲ್‌ ಮ್ಯಾಪ್‌ ಹಾಕಿದ್ದರು. ಅದು ಹೇಳಿದ ದಿಕ್ಕಿಗೆ ಹೋಗುತ್ತಾ ಹೋಗುತ್ತಾ ಐವರು ದಟ್ಟ ಕಾಡಿನ ನಡುವೆ ಸಿಲುಕಿಕೊಂಡಿದ್ದರು. ಮಧ್ಯಾಹ್ನ 2ಗಂಟೆ ಹೊತ್ತಿಗೆ ಅವರು ದಟ್ಟ ಕಾಡಿನ ನಡುವೆ ದಾರಿ ಹುಡುಕಲು ಪ್ರಯತ್ನಿಸಿ ವಿಫಲರಾಗುತ್ತಾರೆ. ಹೊಟ್ಟೆಗೆ ಊಟ, ನೀರಿಲ್ಲದೇ ಎಲ್ಲರೂ ಸುಸ್ತಾಗಿರುತ್ತಾರೆ. ಸಾಗುತ್ತಾ ಸಾಗುತ್ತಾ ಅವರು ಸಂಜೆ5:30ರ ಹೊತ್ತಿಗೆ ಭೌಶುನಿ ಕೋಲ ಪ್ರದೇಶಕ್ಕೆ ತಲುಪುತ್ತಾರೆ. ಅಲ್ಲಿ ಜನ ಸಂಪರ್ಕಕ್ಕೆ ಯತ್ನಿಸುತ್ತಾರೆ. ಅವರಲ್ಲಿ ಒಬ್ಬ ಪೊಲೀಸರನ್ನು ಸಂಪರ್ಕಿಸುವಲ್ಲಿ ಯಶಸ್ವಿ ಆಗುತ್ತಾನೆ.

ಪೊಲೀಸರಿಂದ ರಕ್ಷಣಾ ಕಾರ್ಯಾಚರಣೆ

ಯುವಕರು ಕಾಡಿನಲ್ಲಿ ಸಿಲುಕಿರುವ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಪೊಲೀಸರು ತಕ್ಷಣ ಕಾರ್ಯಪ್ರವೃತರಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ಜೊತೆಗೂಡಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದರು. ಸತತ 11ಗಂಟೆಗಳ ಕಾರ್ಯಾಚರಣೆ ಬಳಿಕ ವಿದ್ಯಾರ್ಥಿಗಳನ್ನು ರಕ್ಷಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್‌ ಎಲ್ಲರೂ ಸುರಕ್ಷಿತವಾಗಿ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂರು ದಿನಗಳ ಹಿಂದೆಯಷ್ಟೇ ಆಸ್ಪತ್ರೆಗೆ ಹೋಗಲು ಗೂಗಲ್ ಮ್ಯಾಪ್ (Google Map) ಬಳಸಿ ದಾರಿ ಹುಡುಕುತ್ತಾ ಹೋದ ಯುವಕರಿಬ್ಬರು ತಮ್ಮ ಕಾರನ್ನು ಉಕ್ಕಿ ಹರಿಯುತ್ತಿದ್ದ ನದಿಗೆ ಇಳಿಸಿದ ಘಟನೆ ಕೇರಳದ (kerala) ಕಾಸರಗೋಡು (kasaragodu) ಜಿಲ್ಲೆಯಲ್ಲಿ ನಡೆದಿದೆ. ಅದೃಷ್ಟವಶಾತ್ ವಾಹನ ಮರಕ್ಕೆ ಸಿಲುಕಿದ್ದರಿಂದ ಯುವಕರಿಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೇರಳದ ಕಾಸರಗೋಡಿನ ಪಲ್ಲಂಚಿಯಲ್ಲಿ ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಕಾರಿನಲ್ಲಿ ಸಿಲುಕಿದ್ದ ಯುವಕರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಹೈದರಾಬಾದ್ ಮೂಲದ ಪ್ರವಾಸಿಗರಾದ ಯುವಕರು ಬೆಳ್ಳಂಬೆಳಗ್ಗೆ ಹತ್ತಿರದ ಆಸ್ಪತ್ರೆಗೆ ಹೋಗುತ್ತಿದ್ದರು. ಇದಕ್ಕಾಗಿ ಅವರು ಗೂಗಲ್ ನಕ್ಷೆಯನ್ನು ಬಳಸಿಕೊಂಡು ಮುಂದುವರಿಯುತ್ತಿದ್ದರು. ಎಂದು ಯುವಕರಲ್ಲಿ ಒಬ್ಬರಾದ ಅಬ್ದುಲ್ ರಶೀದ್ ತಿಳಿಸಿದ್ದಾರೆ.

ಗೂಗಲ್ ನಕ್ಷೆ ಕಿರಿದಾದ ರಸ್ತೆಯನ್ನು ತೋರಿಸಿತ್ತು. ಹೀಗಾಗಿ ಕಾರನ್ನು ಮುಂದೆ ಓಡಿಸಿದೆವು. ವಾಹನದ ಹೆಡ್‌ಲೈಟ್ ಅನ್ನು ಬಳಸಿದಾಗ ನಮ್ಮ ಮುಂದೆ ಸ್ವಲ್ಪ ನೀರು ಇದೆ ಎಂದು ಅನಿಸಿತು. ಆದರೆ ಎರಡು ಕಡೆ ನದಿ ಮತ್ತು ಮಧ್ಯದಲ್ಲಿ ಸೇತುವೆ ಇರುವುದು ಗೊತ್ತಾಗಲಿಲ್ಲ. ಸೇತುವೆಗೆ ತಡೆ ಗೋಡೆಯೂ ಇರಲಿಲ್ಲ ಎಂದು ಅವರು ತಿಳಿಸಿದರು.
ಕಾರು ಹಠಾತ್ತನೆ ನೀರಿನ ಪ್ರವಾಹಕ್ಕೆ ಸಿಲುಕಲು ಪ್ರಾರಂಭಿಸಿತು. ಆದರೆ ಅನಂತರ ನದಿಯ ದಡದಲ್ಲಿರುವ ಮರದಲ್ಲಿ ಸಿಲುಕಿಕೊಂಡಿತು. ಅಷ್ಟರಲ್ಲಾಗಲೇ ಕಾರಿನ ಬಾಗಿಲು ತೆರೆದು ವಾಹನದಿಂದ ಹೊರಬಂದು ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಸಂಪರ್ಕಿಸಿ ಸ್ಥಳವನ್ನು ತಿಳಿಸಿದೆವು. ಅನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹಗ್ಗಗಳನ್ನು ಬಳಸಿ ನಮ್ಮನ್ನು ಸುರಕ್ಷಿತವಾಗಿ ಕರೆದುಕೊಂಡು ಬಂದಿದ್ದಾರೆ ಎಂದು ಅವರು ವಿವರಿಸಿದರು. ನಾವು ನಮ್ಮ ಜೀವ ಉಳಿಸಿಕೊಳ್ಳಬಹುದು ಎಂದು ಕನಸಿನಲ್ಲೂ ಯೋಚಸಲಿಲ್ಲ. ಇದು ಪುನರ್ಜನ್ಮ ಎಂದು ಭಾವಿಸುತ್ತೇವೆ ಎಂದು ರಶೀದ್ ಹೇಳಿದರು.

ಇದು ಮೊದಲಲ್ಲ

ಗೂಗಲ್ ನಕ್ಷೆ ತಪ್ಪು ದಾರಿ ತೋರಿಸಿರುವುದು ಇದು ಮೊದಲಲ್ಲ. ಕಳೆದ ತಿಂಗಳು, ಹೈದರಾಬಾದ್‌ನಿಂದ ಪ್ರವಾಸಿಗರ ಗುಂಪೊಂದು ಕೊಟ್ಟಾಯಂನ ಕುರುಪ್ಪಂಥಾರ ಬಳಿ ಉಕ್ಕಿ ಹರಿಯುತ್ತಿದ್ದ ನದಿಗೆ ವಾಹನವನ್ನು ಓಡಿಸಿತ್ತು. ಸಮೀಪದ ಪೊಲೀಸ್ ಗಸ್ತು ಘಟಕ ಮತ್ತು ಸ್ಥಳೀಯ ನಿವಾಸಿಗಳ ಪ್ರಯತ್ನದಿಂದಾಗಿ ನಾಲ್ವರೂ ಪ್ರಾಣಾಪಾಯದಿಂದ ಪಾರಾಗಿದ್ದರೂ ಅವರ ವಾಹನವು ಸಂಪೂರ್ಣವಾಗಿ ಮುಳುಗಿತ್ತು.

ಇದನ್ನೂ ಓದಿ: Virat Kohli: ಬುರ್ಜ್‌ ಖಲೀಫಾದಲ್ಲಿ ಕಣ್ಮನ ಸೆಳೆದ ವಿರಾಟ್​ ಕೊಹ್ಲಿಯ ಫೋಟೊ; ವಿಡಿಯೊ ವೈರಲ್​

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Mid Day Meal: ಮಕ್ಕಳ ಬಿಸಿಯೂಟದಲ್ಲೂ ಕಳ್ಳಾಟ, ವಿದ್ಯಾರ್ಥಿಗಳಿಗೆ ಸಿಗೋದು ಬರೀ ಅನ್ನ-ಅರಿಶಿಣ; Video ಇದೆ

Mid Day Meal: ಛತ್ತೀಸ್‌ಗಢದಲ್ಲಿ ಅಪೌಷ್ಟಿಕತೆ ಪ್ರಮಾಣ ಶೇ.17.76ರಷ್ಟಿದೆ. ಇದರಿಂದಾಗಿ ಬಿಸಿಯೂಟ ಯೋಜನೆಗೆ ರಾಜ್ಯ ಸರ್ಕಾರವು ಹೆಚ್ಚಿನ ಆದ್ಯತೆ ನೀಡುತ್ತದೆ. ಬಿಸಿಯೂಟದಲ್ಲಿ ಮಕ್ಕಳಿಗೆ ಚಪಾತಿ, ಅನ್ನ, ಸಾಂಬಾರ್‌, ಬೇಳೆ-ಕಾಳಿನಿಂದ ಮಾಡಿದ ಪಲ್ಯ ಸೇರಿ ಹಲವು ರೀತಿಯ ತಿನಿಸುಗಳು ಇರಬೇಕು ಎಂಬ ನಿಯಮ ರೂಪಿಸಿದೆ. ಆದರೆ, ಮಕ್ಕಳಿಗೆ ಸಿಗುತ್ತಿರುವುದು ಮಾತ್ರ ಅರಿಶಿಣ ಮಿಶ್ರಿತ ಅನ್ನ. ಸಾಮಾಜಿಕ ಜಾಲತಾಣದಲ್ಲಿ ಮಕ್ಕಳ ದುಸ್ಥಿತಿಯ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

Mid Day Meal
Koo

ರಾಯ್‌ಪುರ: ಬಡವರ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ ಸಿಗಲಿ, ಊಟದ ಆಸೆಗಾಗಿಯಾದರೂ ಬಡವರ ಮಕ್ಕಳು ಶಾಲೆಗೆ ಬಂದು, ವಿದ್ಯಾವಂತರಾಗಲಿ ಎಂದು ಕರ್ನಾಟಕ ಸೇರಿ ದೇಶದ ಹಲವು ರಾಜ್ಯಗಳ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟದ (Mid Day Meal) ಯೋಜನೆಗಳನ್ನು ಜಾರಿಗೆ ತರಲಾಗಿದೆ. ಆದರೆ, ಸರ್ಕಾರಗಳು ಜಾರಿಗೆ ತಂದಿರುವ ಇಂತಹ ಉತ್ತಮ ಯೋಜನೆಗಳಲ್ಲೂ, ಮಕ್ಕಳ ಊಟದಲ್ಲೂ ಅಧಿಕಾರಿಗಳು ಕಳ್ಳಾಟ ಆಡುತ್ತಿದ್ದಾರೆ. ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಬಿಸಿಯೂಟ ನೀಡುವುದಿಲ್ಲ ಎಂಬ ಆರೋಪಗಳು ಕೇಳಿಬರುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಛತ್ತೀಸ್‌ಗಢದ (Chhattisgarh) ಶಾಲೆಯೊಂದರಲ್ಲಿ ಮಕ್ಕಳಿಗೆ ಬಿಸಿಯೂಟ ಯೋಜನೆ ಅನ್ವಯ ಬರೀ ಅನ್ನ ಹಾಗೂ ಅರಿಶಿಣ ಮಿಶ್ರಣ ಮಾಡಿ, ಅದನ್ನೇ ನೀಡಲಾಗಿದೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ಹೌದು, ಛತ್ತೀಸ್‌ಗಢದ ಬಲರಾಮ್‌ಪುರ ಜಿಲ್ಲೆಯ ಬಿಜಾಕುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಇಷ್ಟೊಂದು ಕಳಪೆ ಆಹಾರವನ್ನು ನೀಡಲಾಗುತ್ತಿದೆ. ಮಕ್ಕಳು ಅರಿಶಿಣ ಮಿಕ್ಸ್‌ ಆಗಿರುವ ಅನ್ನವನ್ನು ಸೇವಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 43 ವಿದ್ಯಾರ್ಥಿಗಳು ಓದುತ್ತಿದ್ದು, ಬಹುತೇಕರು ಬಡವರ ಮಕ್ಕಳಾಗಿದ್ದಾರೆ. ಆದರೆ, ಇವರಿಗೆ ಕಳೆದ ಒಂದು ವಾರದಿಂದ ಬಿಸಿಯೂಟದಲ್ಲಿ ತರಕಾರಿ ನೀಡದೆ, ಬರೀ ಅರಿಶಿಣ ಮಿಶ್ರಣ ಆಗಿರುವ ಅನ್ನ ನೀಡಲಾಗುತ್ತಿದೆ. ಇದನ್ನು ಶಾಲೆಯ ಅಧಿಕಾರಿಗಳೇ ದೃಢಪಡಿಸಿದ್ದಾರೆ.

“ಕಳೆದ ಒಂದು ವಾರದಿಂದ ತರಕಾರಿ ಪೂರೈಸುವವರು ಶಾಲೆಗೆ ತರಕಾರಿ ಪೂರೈಸುತ್ತಿಲ್ಲ. ಎಷ್ಟೇ ಪ್ರಯತ್ನ ಪಟ್ಟರೂ ತರಕಾರಿ ವ್ಯವಸ್ಥೆ ಆಗಿಲ್ಲ. ಹಾಗಾಗಿ, ಮಕ್ಕಳಿಗೆ ಅನ್ನ-ಸಾರು ಇಲ್ಲವೇ ಅರಿಶಿಣ ಮಿಶ್ರಿತ ಅನ್ನ ನೀಡುತ್ತಿದ್ದೇವೆ” ಎಂದು ಶಾಲೆಯ ಮುಖ್ಯೋಪಾಧ್ಯಾಯ ತಿಳಿಸಿದ್ದಾರೆ. ಇವರ ಆರೋಪಗಳಿಗೆ ತರಕಾರಿ ಪೂರೈಸುವವರು ಪ್ರತಿಕ್ರಿಯಿಸಿದ್ದು, “ಶಾಲೆಗೆ ತರಕಾರಿ ಪೂರೈಸಿದ್ದಕ್ಕೆ ಹಲವು ತಿಂಗಳಿಂದ ಹಣ ನೀಡಿಲ್ಲ. ಇದರಿಂದಾಗಿ ನಾವು ತರಕಾರಿ ಪೂರೈಸುತ್ತಿಲ್ಲ” ಎಂದು ಹೇಳಿದ್ದಾರೆ. ಹೀಗೆ ಆರೋಪ-ಪ್ರತ್ಯಾರೋಪದ ಮಧ್ಯೆ ಮಕ್ಕಳು ಪೌಷ್ಟಿಕಾಂಶಯುಕ್ತ ಊಟದಿಂದ ವಿಮುಖರಾಗುತ್ತಿದ್ದಾರೆ. ಇದಕ್ಕೆ ಗ್ರಾಮಸ್ಥರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಛತ್ತೀಸ್‌ಗಢದಲ್ಲಿ ಅಪೌಷ್ಟಿಕತೆ ಪ್ರಮಾಣ ಶೇ.17.76ರಷ್ಟಿದೆ. ಇದರಿಂದಾಗಿ ಬಿಸಿಯೂಟ ಯೋಜನೆಗೆ ರಾಜ್ಯ ಸರ್ಕಾರವು ಹೆಚ್ಚಿನ ಆದ್ಯತೆ ನೀಡುತ್ತದೆ. ಬಿಸಿಯೂಟದಲ್ಲಿ ಮಕ್ಕಳಿಗೆ ಚಪಾತಿ, ಅನ್ನ, ಸಾಂಬಾರ್‌, ಬೇಳೆ-ಕಾಳಿನಿಂದ ಮಾಡಿದ ಪಲ್ಯ ಸೇರಿ ಹಲವು ರೀತಿಯ ತಿನಿಸುಗಳು ಇರಬೇಕು ಎಂಬ ನಿಯಮ ರೂಪಿಸಿದೆ. ಇದಕ್ಕಾಗಿ ವಾರ್ಷಿಕ ಕೋಟ್ಯಂತರ ರೂ. ಖರ್ಚು ಮಾಡುತ್ತಿದೆ. ಇಷ್ಟಾದರೂ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಮಕ್ಕಳು ಅಪೌಷ್ಟಿಕಾಂಶಯುಕ್ತ ಆಹಾರ ಸೇವಿಸುವಂತಾಗಿದೆ. ಮಕ್ಕಳು ಬರೀ ಅನ್ನ ತಿನ್ನುತ್ತಿರುವ ವಿಡಿಯೊ ವೈರಲ್‌ ಆಗುತ್ತಲೇ ಜಿಲ್ಲಾ ಶಿಕ್ಷಣ ಅಧಿಕಾರಿ ದೇವೇಂದ್ರ ನಾಥ್‌ ಮಿಶ್ರಾ ಪ್ರತಿಕ್ರಿಯಿಸಿದ್ದು, “ಪ್ರಕರಣ ಈಗ ಗಮನಕ್ಕೆ ಬಂದಿದೆ. ಕೂಡಲೇ ಕ್ರಮ ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.

ಇದನ್ನೂ ಓದಿ: Students Fall Sick: ಬಿಸಿಯೂಟ ಸೇವಿಸಿ ಸರ್ಕಾರಿ ಶಾಲೆಯ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆರೋಗ್ಯ ವಿಚಾರಿಸಿದ ಶಾಸಕ

Continue Reading

Latest

Viral Video: ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ; ಪ್ರಾಂಶುಪಾಲರನ್ನು ಕುರ್ಚಿ ಸಹಿತ ಹೊರಗೆಳೆದ ಸಿಬ್ಬಂದಿ

Viral Video ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಬಿಷಪ್ ಜಾನ್ಸನ್ ಬಾಲಕಿಯರ ಶಾಲೆ ಮತ್ತು ಕಾಲೇಜಿನಲ್ಲಿ ಈ ವರ್ಷದ ಫೆಬ್ರವರಿ 11 ರಂದು ಶಾಲಾ ಆವರಣದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಈ ಪ್ರಕರಣದಲ್ಲಿ ಶಾಲೆಯ ಪ್ರಾಂಶುಪಾಲರಾದ ಪಾರುಲ್ ಸೊಲೊಮನ್ ಭಾಗಿಯಾಗಿರುವುದು ಬಹಿರಂಗವಾಗಿದೆ. ಹಾಗಾಗಿ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಆದರೆ ಈ ಸ್ಥಾನಕ್ಕೆ ಹೊಸ ಪ್ರಾಂಶುಪಾಲರನ್ನು ನೇಮಿಸಿದ ನಂತರವೂ ಸೊಲೊಮನ್ ತನ್ನ ಸ್ಥಾನವನ್ನು ಖಾಲಿ ಮಾಡಲು ನಿರಾಕರಿಸಿದ ಕಾರಣ ಕೆಲವು ಶಿಕ್ಷಕರು ಮತ್ತು ಸಿಬ್ಬಂದಿಗಳು ಸೇರಿ ಕುರ್ಚಿ ಸಹಿತವಾಗಿ ಕಚೇರಿಯಿಂದ ಪಾರುಲ್ ಸೊಲೊಮನ್ ಅವರನ್ನು ಹೊರಗೆ ಎಳೆದೊಯ್ದಿದ್ದಾರೆ

VISTARANEWS.COM


on

Viral Video
Koo

ಉತ್ತರ ಪ್ರದೇಶ: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿರುತ್ತದೆ. ಹಣದಾಸೆಗೆ ಕೆಲವು ಕಾಲೇಜಿನ ಸಿಬ್ಬಂದಿಗಳು ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡುವುದನ್ನು ನಾವು ಕೇಳಿರುತ್ತೇವೆ. ಅದೇ ರೀತಿಯ ಪ್ರಕರಣವೊಂದು ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ (Uttar Pradesh) ಪ್ರಯಾಗ್‍ರಾಜ್‌ನ (Prayagraj) ಶಾಲೆಯೊಂದರಲ್ಲಿ ಪ್ರಾಂಶುಪಾಲರು (Principal) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಅವರನ್ನು ಕೆಲಸದಿಂದ ಬಲವಂತವಾಗಿ ತೆಗೆದುಹಾಕಲಾಗಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video )ಆಗಿದೆ.

ಉತ್ತರ ಪ್ರದೇಶದ ಪ್ರಯಾಗ್‍ರಾಜ್‍ನ ಬಿಷಪ್ ಜಾನ್ಸನ್ ಬಾಲಕಿಯರ ಶಾಲೆ ಮತ್ತು ಕಾಲೇಜಿನಲ್ಲಿ ಈ ವರ್ಷದ ಫೆಬ್ರವರಿ 11 ರಂದು ಶಾಲಾ ಆವರಣದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬುದಾಗಿ ತಿಳಿದುಬಂದಿತ್ತು. ‘ಪೇಪರ್ ಲೀಕ್’ ಗ್ಯಾಂಗ್‍ನ ಸದಸ್ಯ ಕಮಲೇಶ್ ಕುಮಾರ್ ಪಾಲ್ ಅಲಿಯಾಸ್ ಕೆಕೆ ಎಂಬಾತ ಪ್ರಶ್ನೆ ಪತ್ರಿಕೆ ಫೋಟೊ ತೆಗೆದು ಸೋರಿಕೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 10 ಜನರನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣ ತನಿಖೆ ಮುಂದುವರಿದಿದ್ದು, ಇದೀಗ ಈ ಪ್ರಕರಣದಲ್ಲಿ ಶಾಲೆಯ ಪ್ರಾಂಶುಪಾಲರಾದ ಪಾರುಲ್ ಸೊಲೊಮನ್ ಭಾಗಿಯಾಗಿರುವುದು ಬಹಿರಂಗವಾಗಿದೆ. ಹಾಗಾಗಿ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಆದರೆ ಈ ಸ್ಥಾನಕ್ಕೆ ಶೆರ್ಲಿ ಮಾಸ್ಸಿ ಎಂಬ ಹೊಸ ಪ್ರಾಂಶುಪಾಲರನ್ನು ನೇಮಿಸಿದ ನಂತರವೂ ಸೊಲೊಮನ್ ತನ್ನ ಸ್ಥಾನವನ್ನು ಖಾಲಿ ಮಾಡಲು ನಿರಾಕರಿಸಿದ ಕಾರಣ ಪ್ರಾಂಶುಪಾಲರ ಕಚೇರಿಯಲ್ಲಿ ಗೊಂದಲ ಸೃಷ್ಟಿಯಾಗಿದೆ. ಸೊಲೊಮನ್‌ ಅವರು ಪ್ರಾಂಶುಪಾಲರ ಕೋಣೆಯನ್ನು ಒಳಗಿನಿಂದ ಲಾಕ್ ಮಾಡಿದರು ಮತ್ತು ಖಾಲಿ ಮಾಡಲು ನಿರಾಕರಿಸಿದರು ಎನ್ನಲಾಗಿದೆ.

ವೈರಲ್ ವಿಡಿಯೊದಲ್ಲಿ ಕೆಲವು ಶಿಕ್ಷಕರು ಮತ್ತು ಸಿಬ್ಬಂದಿಗಳು ಸೇರಿ ಬಾಗಿಲು ಮುರಿದು ಕಚೇರಿಗೆ ಪ್ರವೇಶಿಸಿದ ನಂತರ ಅವರನ್ನು ಕುರ್ಚಿಯಿಂದ ಮೇಲೆಳಿಸಲು ಪ್ರಯತ್ನಿಸಿದ್ದಾರೆ. ಆದರೆ ಅವರು ಕುರ್ಚಿ ಬಿಟ್ಟು ಎದ್ದೇಳಲು ನಿರಾಕರಿಸಿದ ಕಾರಣ ಕುರ್ಚಿ ಸಹಿತವಾಗಿ ಕಚೇರಿಯಿಂದ ಹೊರಗೆ ಎಳೆದೊಯ್ದಿದ್ದಾರೆ.

ಇದನ್ನೂ ಓದಿ: ಐಷಾರಾಮಿ ಹೋಟೆಲ್‌ನಲ್ಲಿ ವಾಸ, ಫ್ಲೈಟ್‌ನಲ್ಲಿ ಓಡಾಟ; ಶ್ರೀಮಂತ ಕಳ್ಳನೀಗ ಪೊಲೀಸರ ಬಲೆಗೆ!

ಈ ಘಟನೆಯ ನಂತರ, ಸೊಲೊಮನ್ ಅವರು ಸಿಬ್ಬಂದಿಯ ಮೇಲೆ ಗಂಭೀರ ಆರೋಪಗಳನ್ನು ಹೊರಿಸಿದನು, ಅವರು ತನಗೆ ಕಿರುಕುಳ ನೀಡಿದ್ದಾರೆಂದು ದೂರು ನೀಡಿದ್ದಾರೆ. ಸೊಲೊಮನ್‍ ಅವರ ದೂರಿನ ಆಧಾರದ ಮೇಲೆ, ಕೆಲವು ಸಿಬ್ಬಂದಿ ಮತ್ತು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆದರೆ ಸೊಲೊಮನ್ ಅವರು ಪ್ರಾಂಶುಪಾಲರಾಗಿದ್ದ ಅವಧಿಯಲ್ಲಿ ಶಾಲೆಯಿಂದ 2.4 ಕೋಟಿ ರೂ.ಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಈ ಪ್ರಕರಣ ತನಿಖೆ ನಡೆಯುತ್ತಿದೆ ಎನ್ನಲಾಗಿದೆ.

Continue Reading

Latest

Viral Video : ಹೀಗೆಲ್ಲಾ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಾರಾ…? ವಿಡಿಯೊ ನೋಡಿ

Viral Video : ಅಲಾಸ್ಕಾದ ಗ್ಲೇಸಿಯರ್ ವ್ಯೂನಲ್ಲಿ ಕಾರನ್ನು ಉರುಳಿಸುತ್ತಾ ಸ್ವಾತಂತ್ರ್ಯ ಸಂಭ್ರಮಾಚರಣೆ ಯುನೈಟೆಡ್ ಸ್ಟೇಟ್ಸ್‌ನ ಅಲಾಸ್ಕಾದ ಗ್ಲೇಸಿಯರ್ ವ್ಯೂನಲ್ಲಿ ಸ್ವಾಂತಂತ್ರ್ಯ ದಿನಾಚರಣೆಯನ್ನು ಬಹಳ ವಿಭಿನ್ನವಾಗಿ ಆಚರಿಸುತ್ತಾರೆ. ಘೋಷಣೆಗಳನ್ನು ಕೂಗುತ್ತಾ ಬಂಡೆಯಿಂದ ಕಾರುಗಳನ್ನು ಉರುಳಿಸುವ ಆಚರಣೆ ಮಾಡುತ್ತಾರಂತೆ. ಸುಮಾರು ಎರಡು ದಶಕಗಳಿಂದ ಅಲಾಸ್ಕಾದ ಗ್ಲೇಸಿಯರ್ ವ್ಯೂ ಜುಲೈ 4 ರಂದು ಈ ರೋಮಾಂಚನಕಾರಿ ಆಚರಣೆಯನ್ನು ಮಾಡುತ್ತಾ ಬಂದಿದೆ. ಈ ವರ್ಷ ಕೂಡ ಗ್ಲೇಸಿಯರ್ ವ್ಯೂ ಈ ವಿಶಿಷ್ಟ ಸಂಪ್ರದಾಯದೊಂದಿಗೆ ಆಚರಣೆ ಮಾಡಿದ್ದು ಜನರು ಹುಚ್ಚೆದ್ದು ಕುಣಿಯುವಂತೆ ಮಾಡಿದೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

VISTARANEWS.COM


on

Viral Video
Koo

ಅಮೆರಿಕ : ಸ್ವಾತಂತ್ರ್ಯ ಸಿಕ್ಕ ದಿನವನ್ನು ಎಲ್ಲರೂ ಸಂಭ್ರಮದಿಂದ ಆಚರಿಸುತ್ತಾರೆ. ಆದರೆ ಅಮೆರಿಕದ‌ (USA) ಅಲಾಸ್ಕಾದ ಗ್ಲೇಸಿಯರ್ ವ್ಯೂ ಎಂಬ ಸಣ್ಣ ಪಟ್ಟಣದಲ್ಲಿ ಘೋಷಣೆಗಳನ್ನು ಕೂಗುತ್ತಾ ಬಂಡೆಯಿಂದ ಕಾರುಗಳನ್ನು ಉರುಳಿಸುವ ಆಚರಣೆ ಮಾಡುತ್ತಾರಂತೆ. ಸುಮಾರು ಎರಡು ದಶಕಗಳಿಂದ ಅಲಾಸ್ಕಾದ ಗ್ಲೇಸಿಯರ್ ವ್ಯೂ ಜುಲೈ 4 ರಂದು ಈ ರೋಮಾಂಚನಕಾರಿ ಆಚರಣೆಯನ್ನು ಮಾಡುತ್ತಾ ಬಂದಿದೆ. ಈ ವರ್ಷ ಕೂಡ ಗ್ಲೇಸಿಯರ್ ವ್ಯೂ ಈ ವಿಶಿಷ್ಟ ಸಂಪ್ರದಾಯದೊಂದಿಗೆ ಆಚರಣೆ ಮಾಡಿದ್ದು ಜನರು ಹುಚ್ಚೆದ್ದು ಕುಣಿಯುವಂತೆ ಮಾಡಿದೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

Viral Video

ಈ ವರ್ಷ ಪೊಲೀಸ್ ಕ್ರೂಸರ್‌ಗಳು ಮತ್ತು ಬಸ್ಸುಗಳು ಸೇರಿದಂತೆ ಹೆಚ್ಚಿನ ಕಾರುಗಳನ್ನು ಉರುಳಿಸಲಾಗಿದೆ. ಬಂಡೆಗಳ ಮೇಲಿಂದ ಕಾರುಗಳನ್ನು ಉರುಳಿಸುವ ಮುನ್ನ ಕಾರುಗಳಿಗೆ ಅಲಂಕಾರ ಮಾಡಲಾಗುತ್ತದೆ. ಅದರಂತೆ ಈ ವರ್ಷ ಕೆಲವು ಕಾರುಗಳನ್ನು ಅಮೆರಿಕದ ಧ್ವಜಗಳಿಂದ ಚಿತ್ರಿಸಲಾಗಿದೆ. ಕಾರುಗಳನ್ನು ಉರುಳಿಸುವಾಗ ಸಂಗೀತಗಳು ಜೋರಾಗಿ ಮೊಳಗುತ್ತವೆ. ಇದು ಬೆಳಗ್ಗೆ 8:45ರ ಸುಮಾರಿಗೆ ಪ್ರಾರಂಭವಾಗಲಿದ್ದು, ಈ ಕ್ಷಣ ಆಚರಣೆಗೆ ಆಗಮಿಸಿದ ಸಾವಿರಾರು ಜನಸಮೂಹದ ಸಂತೋಷಕ್ಕೆ ಕಾರಣವಾಗಿದೆ.

ಕೆಲವರು ಇದನ್ನು ಅಮೆರಿಕದ ಒಂದು ಉತ್ತಮ ಆಚರಣೆ ಎಂದು ಬಣ್ಣಸಿದ್ದಾರೆ. ಮತ್ತು ಈ ಆಚರಣೆಯನ್ನು ನೋಡಲು ತುಂಬಾ ಖುಷಿಯಾಗುತ್ತದೆ ಎಂದು ಹಲವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಆಚರಣೆ ಪ್ರಪಂಚದಾದ್ಯಂತ ರೋಮಾಂಚನಕಾರಿ ದೃಶ್ಯಗಳನ್ನು ನೋಡ ಬಯಸುವವರನ್ನು ಹೆಚ್ಚು ಆಕರ್ಷಿಸುತ್ತದೆ ಎನ್ನಲಾಗಿದೆ. ಈ ಆಚರಣೆಯಲ್ಲಿ ಭಾಗವಹಿಸುವವರು ಒಂದು ಟಿಕೆಟ್‌ಗೆ 20 ಡಾಲರ್ ನೀಡಬೇಕಾಗುತ್ತದೆ. ಈ ಆಚರಣೆಯ ವೇಳೆ ಪಿಜ್ಜಾ, ಐಸ್ ಕ್ರೀಮ್, ಬ್ರಿಸ್ಕೆಟ್, ಸ್ಯಾಂಡ್‍ವಿಚ್‍ಗಳಂತಹ ಆಹಾರಗಳನ್ನು ಮಾರಾಟ ಮಾಡಲಾಗುತ್ತದೆ.

ಇದನ್ನೂ ಓದಿ:  ಕೀರ್ತಿ ಚಕ್ರ ಸ್ವೀಕರಿಸಿದ ಹುತಾತ್ಮ ಯೋಧನ ಪತ್ನಿ; ಭಾವುಕರಾದ ದ್ರೌಪದಿ ಮುರ್ಮು‌,ರಾಜನಾಥ್ ಸಿಂಗ್!

ಇನ್ನು ಈ ಆಚರಣೆಯಲ್ಲಿ ಜನರಿಗೆ ಯಾವುದೇ ಹಾನಿಯಾಗುವುದಿಲ್ಲ. ಯಾಕೆಂದರೆ ಈ ವಾಹನಗಳ ಒಳಗೆ ಯಾರು ಇರುವುದಿಲ್ಲ. ಹಾಗಾಗಿ ಈ ಕಾರನ್ನು ಚಲಾಯಿಸಲು ಮೊನೊರೈಲ್‌ನಿಂದ ಸಹಾಯವನ್ನು ಪಡೆಯುತ್ತಾರೆ, ಅಥವಾ ಫ್ರೀ ವ್ಹೀಲಿಂಗ್ ಮಾಡುತ್ತಾರೆ, ಕೆಲವೊಮ್ಮೆ ವಾಹನವನ್ನು ಸ್ಟಾರ್ಟ್ ಮಾಡಿ ಅದರ ಲೋಹದ ಪೆಡಲ್‌ಗೆ ಮರದ ತುಂಡನ್ನು ಇಡುವ ಮೂಲಕ ಉಡಾಯಿಸುತ್ತಾರೆ. ಇದರಿಂದ ಬಂಡೆಗಳಿಂದ ಉರುಳುವ ಕಾರುಗಳು ತಮ್ಮ ಗಮ್ಯಸ್ಥಾನವನ್ನು ತಲುಪುವ ತನಕ ಗಾಳಿಯಲ್ಲಿ ಹಾರುವಂತೆ ಸ್ಟಂಟ್ ಮಾಡುವಂತೆ ಪ್ರದರ್ಶನ ನೀಡುತ್ತವೆ. ಒಟ್ಟಾರೆ ಇದು ಜುಲೈ ನಾಲ್ಕನೆಯ ತಾರೀಕಿನಂದು ಯುನೈಟೆಡ್ ಸ್ಟೇಟ್ಸ್ ನ ಅಲಾಸ್ಕಾದ ಗ್ಲೇಸಿಯರ್ ವ್ಯೂ ನಲ್ಲಿ ಆಚರಿಸುವ ಅತ್ಯಂತ ದೊಡ್ಡ ಹಬ್ಬವೆಂದೆ ಹೇಳಬಹುದು.

Continue Reading

Latest

Viral News: ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ವೇಳೆ ಅಚಾತುರ್ಯ; ದೃಷ್ಟಿ ಕಳೆದುಕೊಂಡ 16 ರೋಗಿಗಳು

Viral News ಪಶ್ಚಿಮ ಬಂಗಾಳದ ಕೋಲ್ಕೊತಾದ ಮೆಟಿಯಾಬುರೋಜ್ ಸೂಪರ್ ಸ್ಪೆಷಾಲಿಟಿ ಸರ್ಕಾರಿ ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ, ಸುಮಾರು 16 ಜನರು ದೃಷ್ಟಿ ಕಳೆದುಕೊಂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಇದರಲ್ಲಿ ಕೆಲವು ರೋಗಿಗಳಿಗೆ ಸರಿಯಾಗಿ ನೋಡಲು ಸಹ ಸಾಧ್ಯವಾಗುತ್ತಿಲ್ಲ. ಆದರೆ ಈ ರೋಗಿಗಳ ಕಣ್ಣುಗಳಲ್ಲಿ ಶಿಲೀಂಧ್ರಗಳ ಸೋಂಕು ಕಾಣಿಸಿಕೊಂಡಿದೆ ಎಂದು ತನಿಖೆಯಿಂದ ತಿಳಿದುಬಂದಿದೆ. ಆದಾಗ್ಯೂ, ಈ ಸೋಂಕು ಹೇಗೆ ಸಂಭವಿಸಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಪರಿಸ್ಥಿತಿ ಆರೋಗ್ಯ ಇಲಾಖೆಯಲ್ಲಿ ಆತಂಕವನ್ನು ಸೃಷ್ಟಿ ಮಾಡಿದೆ.

VISTARANEWS.COM


on

Viral News
Koo

ಕೋಲ್ಕೊತಾ: ಕಣ್ಣು ನಮ್ಮ ಜೀವನದಲ್ಲಿ ಬಹಳ ಮುಖ್ಯವಾದುದು. ಕಣ್ಣು ಕಾಣದಿದ್ದರೆ ಜೀವನದಲ್ಲಿ ಯಾವುದೇ ಕೆಲಸ ಮಾಡಲು ಸಾಧ್ಯವಿಲ್ಲ. ಇದರಿಂದ ನಾವು ಬೇರೆಯವರ ಮೇಲೆ ಅವಲಂಬಿತರಾಗಬೇಕಾಗುತ್ತದೆ. ಹಾಗಾಗಿ ಕಣ್ಣು ಇಲ್ಲದ ಜೀವನ ನರಕ ಎನ್ನಬಹುದು. ಹಾಗಾಗಿ ಕಣ್ಣಿನ ಶಸ್ತ್ರಚಿಕಿತ್ಸೆಗೆ (Eye Surgery) ಒಳಗಾಗುವವರು ತುಂಬಾ ಎಚ್ಚರಿಕೆಯಿಂದಿರಬೇಕು. ಅದಕ್ಕಾಗಿ ಉತ್ತಮ ಆಸ್ಪತ್ರೆಗಳನ್ನೇ ಆಯ್ಕೆ ಮಾಡಿ. ಇಲ್ಲವಾದರೆ ಸಮಸ್ಯೆಯಾಗಬಹುದು. ಅಂತಹದೊಂದು ಆಘಾತಕಾರಿ ಘಟನೆ ಇದೀಗ ಕೋಲ್ಕೊತಾ (Calcutta) ಆಸ್ಪತ್ರೆಯೊಂದರಲ್ಲಿ ಬೆಳಕಿಗೆ ಬಂದಿದೆ. ಈ ಸುದ್ದಿ ವೈರಲ್‌ (Viral News) ಆಗಿದೆ.

ಪಶ್ಚಿಮ ಬಂಗಾಳದ ಕೋಲ್ಕತಾದ ಮೆಟಿಯಾಬುರೋಜ್ ಸೂಪರ್ ಸ್ಪೆಷಾಲಿಟಿ ಸರ್ಕಾರಿ ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ, ಸುಮಾರು 16 ಜನರು ದೃಷ್ಟಿ ಕಳೆದುಕೊಂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಇದರಲ್ಲಿ ಕೆಲವು ರೋಗಿಗಳಿಗೆ ಸರಿಯಾಗಿ ನೋಡಲು ಸಹ ಸಾಧ್ಯವಾಗುತ್ತಿಲ್ಲ. ಆದರೆ ಈ ರೋಗಿಗಳ ಕಣ್ಣುಗಳಲ್ಲಿ ಶಿಲೀಂಧ್ರಗಳ ಸೋಂಕು ಕಾಣಿಸಿಕೊಂಡಿದೆ ಎಂದು ತನಿಖೆಯಿಂದ ತಿಳಿದುಬಂದಿದೆ. ಆದಾಗ್ಯೂ, ಈ ಸೋಂಕು ಹೇಗೆ ಸಂಭವಿಸಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಪರಿಸ್ಥಿತಿ ಆರೋಗ್ಯ ಇಲಾಖೆಯಲ್ಲಿ ಆತಂಕವನ್ನು ಸೃಷ್ಟಿ ಮಾಡಿದೆ. ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಾದ ಕೇವಲ ನಾಲ್ಕು ದಿನಗಳ ನಂತರ ರೋಗಿಗಳಲ್ಲಿ ಸೋಂಕುಗಳು ಕಾಣಿಸಿಕೊಂಡಿವೆ. ಆಸ್ಪತ್ರೆಯ ಹೊರಗೆ ಸೋಂಕು ತಗುಲಿದ್ದರೆ, ಸುಮಾರು ಮೂರು ವಾರಗಳ ನಂತರ ರೋಗಲಕ್ಷಣಗಳು ಕಾಣಿಸಿಕೊಳ್ಳುತ್ತಿದ್ದವು. ಹಾಗಾಗಿ ಶಸ್ತ್ರಚಿಕಿತ್ಸೆ ಸಮಯದಲ್ಲಿ ಬಳಸಿದ ಯಾವುದರಿಂದಾದರೂ ಉಪಕರಣಗಳಿಂದ ಸೋಂಕು ಬಂದಿರಬಹುದು ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಸೋಂಕಿನ ಕಾರಣದ ಬಗ್ಗೆ ತನಿಖೆ ನಡೆಯುತ್ತಿದೆ. ಆಸ್ಪತ್ರೆಯ ಆಪರೇಟಿಂಗ್ ಥಿಯೇಟರ್ ಅತ್ಯಾಧುನಿಕವಾಗಿದ್ದು, ಅಲ್ಲಿ ಸೋಂಕು ಹುಟ್ಟುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಆದರೆ, ಶಿಲೀಂಧ್ರಗಳ ಸೋಂಕಿನ ನಿಖರವಾದ ಕಾರಣ ತಿಳಿದುಬಂದಿಲ್ಲ.ಇದಕ್ಕೆ ಕಾರಣವನ್ನು ಕಂಡುಹಿಡಿಯಲು ಮತ್ತು ಇಂತಹ ಘಟನೆಗಳು ಮತ್ತೆ ಆಗದಂತೆ ತಡೆಯಲು ಆರೋಗ್ಯ ಇಲಾಖೆ ಶ್ರದ್ಧೆಯಿಂದ ಕೆಲಸ ಮಾಡುತ್ತಿದೆ. ಈ ಮಧ್ಯೆ, ಕಣ್ಣಿನ ಸಮಸ್ಯೆ ಎದುರಿಸುತ್ತಿರುವ ರೋಗಿಗಳಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎನ್ನಲಾಗಿದೆ.

ಇದನ್ನೂ ಓದಿ: ಬ್ರಾಂಡೆಡ್‌ ಬ್ಯಾಗ್‌ ಕಂಪನಿಗಳ ಲೂಟಿ; ಸಾವಿರಕ್ಕೆ ಖರೀದಿಸಿ ಲಕ್ಷಕ್ಕೆ ಸೇಲ್‌!

ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಆರೋಗ್ಯ ಕಾರ್ಯದರ್ಶಿ ನಾರಾಯಣ್ ಸ್ವರೂಪ್ ನಿಗಮ್ ಜುಲೈ 5ರಂದು ಮಧ್ಯಾಹ್ನ ತುರ್ತು ವಿಡಿಯೊ ಕಾನ್ಫರೆನ್ಸ್ ಅನ್ನು ಆಯೋಜಿಸಿದ್ದಾರೆ. ಈ ಸಭೆಗೆ ರಾಜ್ಯಾದ್ಯಂತ 104 ಕಣ್ಣಿನ ಆಸ್ಪತ್ರೆಗಳ ಅಧಿಕಾರಿಗಳು ಮತ್ತು ರಾಷ್ಟ್ರೀಯ ಅಂಧತ್ವ ನಿರ್ಮೂಲನಾ ಯೋಜನೆಯ ಸದಸ್ಯರು ಭಾಗವಹಿಸಿದ್ದರು. ನೇತ್ರಶಾಸ್ತ್ರ ಮತ್ತು ಮೈಕ್ರೋಬಯಾಲಜಿ ವಿಭಾಗಗಳ ಮುಖ್ಯಸ್ಥರು ಹಾಗೂ ನರ್ಸ್‍ಗಳು ಸಹ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ್ದರು ಎನ್ನಲಾಗಿದೆ.

Continue Reading
Advertisement
Crime News
ಕ್ರೈಂ4 mins ago

Crime News: ಗಾಂಜಾ ಮತ್ತಿನಲ್ಲಿ ಕಾರು ಓಡಿಸಿ ಬೈಕ್‌ಗಳಿಗೆ ಗುದ್ದಿದ ಚಾಲಕ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳರು

Health Food Tips
ಆರೋಗ್ಯ8 mins ago

Health Food Tips: ಈ ಕೆಲವು ಆಹಾರಗಳ ಸೇವನೆಯಿಂದ ಬಾಯಾರಿ, ಗಂಟಲೊಣಗಿ ನೀರು ಬೇಕೆನಿಸುತ್ತದೆ!

Toothbrush Using Tips
ಲೈಫ್‌ಸ್ಟೈಲ್29 mins ago

Toothbrush Using Tips: ನಿಮ್ಮ ಬ್ರಷ್‌ ಬದಲಿಸಿದ್ದು ಯಾವಾಗ ನೆನಪಿದೆಯಾ?

karnataka weather Forecast
ಮಳೆ1 hour ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

Puri Jagannath Temple
Latest2 hours ago

Puri Jagannath Temple: ಪುರಿ ಜಗನ್ನಾಥ ದೇವಾಲಯದ 10 ಅದ್ಭುತ ಸಂಗತಿಗಳಿವು!

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಸಿಗಲಿದೆ ಶುಭ ಸುದ್ದಿ

Champions Trophy 2025:
ಪ್ರಮುಖ ಸುದ್ದಿ8 hours ago

Champions Trophy 2025 : ಭಾರತ ತಂಡ ಪಾಕಿಸ್ತಾನಕ್ಕೆ ಬರಲೇಬೇಕು ಹಠ ಹಿಡಿದು ಕುಳಿತಿರುವ ಪಿಸಿಬಿ

Rain News
ದೇಶ8 hours ago

Rain News: ವರುಣನ ಆರ್ಭಟ; ಮಳೆ ಸಂಬಂಧಿ ಅವಘಡಗಳಿಗೆ 24 ಗಂಟೆಯಲ್ಲಿ 13 ಜನ ಬಲಿ

KAS
ಕರ್ನಾಟಕ9 hours ago

KAS: ಕೆಎಎಸ್‌ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್;‌ ನೇಮಕಾತಿಗೆ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ, ಇಲ್ಲಿದೆ ಮಾಹಿತಿ

Mid Day Meal
ದೇಶ9 hours ago

Mid Day Meal: ಮಕ್ಕಳ ಬಿಸಿಯೂಟದಲ್ಲೂ ಕಳ್ಳಾಟ, ವಿದ್ಯಾರ್ಥಿಗಳಿಗೆ ಸಿಗೋದು ಬರೀ ಅನ್ನ-ಅರಿಶಿಣ; Video ಇದೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 hour ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ13 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ16 hours ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ17 hours ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು19 hours ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ21 hours ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ1 day ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ2 days ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ2 days ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ2 days ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

ಟ್ರೆಂಡಿಂಗ್‌