IND vs ZIM: ಜಿಂಬಾಬ್ವೆ ಟಿ20 ಸರಣಿಗೆ ಭಾರತ ತಂಡಲ್ಲಿ ದಿಢೀರ್​ ಬದಲಾವಣೆ ಮಾಡಿದ ಬಿಸಿಸಿಐ - Vistara News

ಕ್ರೀಡೆ

IND vs ZIM: ಜಿಂಬಾಬ್ವೆ ಟಿ20 ಸರಣಿಗೆ ಭಾರತ ತಂಡಲ್ಲಿ ದಿಢೀರ್​ ಬದಲಾವಣೆ ಮಾಡಿದ ಬಿಸಿಸಿಐ

IND vs ZIM: ಸಂಜು ಸ್ಯಾಮ್ಸನ್, ಶಿವಂ ದುಬೆ ಮತ್ತು ಯಶಸ್ವಿ ಜೈಸ್ವಾಲ್ ಬದಲಿಗೆ ಸಾಯಿ ಸುದರ್ಶನ್(Sai Sudharsan), ಜಿತೇಶ್ ಶರ್ಮಾ(Jitesh Sharma) ಮತ್ತು ಹರ್ಷಿತ್ ರಾಣಾ(Harshit Rana) ಅವರನ್ನು ಮೊದಲ ಎರಡು ಪಂದ್ಯಗಳಿಗಾಗಿ ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ.

VISTARANEWS.COM


on

IND vs ZIM
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಜುಲೈ 6 ರಿಂದ ಆರಂಭಗೊಳ್ಳಲಿರುವ ಜಿಂಬಾಬ್ವೆ (IND vs ZIM) ವಿರುದ್ಧದ 5 ಪಂದ್ಯಗಳ ಟಿ20 ಸರಣಿಗೆ ಈಗಾಗಲೇ ಭಾರತ ತಂಡ ಪ್ರಕಟಗೊಂಡಿದೆ. ಶುಭಮನ್​ ಗಿಲ್​ ಅವರು ತಂಡವನ್ನು ಮುನ್ನಡೆಸಲಿದ್ದಾರೆ. ಅಂತಿಮ ಕ್ಷಣದಲ್ಲಿ ಬಿಸಿಸಿಐ ತಂಡದಲ್ಲಿ ಮೂರು ಬದಲಾವಣೆ ಮಾಡಿದೆ.

ಚಂಡಮಾರುತದಿಂದ ಬಾರ್ಬಡೋಸ್‌ನಲ್ಲಿ ಸಿಲುಕಿರುವ ಟಿ20 ವಿಶ್ವಕಪ್​ ತಂಡದ ಭಾಗವಾಗಿದ್ದ, ಸಂಜು ಸ್ಯಾಮ್ಸನ್, ಶಿವಂ ದುಬೆ ಮತ್ತು ಯಶಸ್ವಿ ಜೈಸ್ವಾಲ್ ಬದಲಿಗೆ ಸಾಯಿ ಸುದರ್ಶನ್(Sai Sudharsan), ಜಿತೇಶ್ ಶರ್ಮಾ(Jitesh Sharma) ಮತ್ತು ಹರ್ಷಿತ್ ರಾಣಾ(Harshit Rana) ಅವರನ್ನು ಮೊದಲ ಎರಡು ಪಂದ್ಯಗಳಿಗಾಗಿ ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ. ಪರಿಷ್ಕೃತ ತಂಡವನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಪ್ರಕಟಿಸಿದೆ.

ಹರ್ಷಿತ್ ರಾಣಾ ಈ ಬಾರಿಯ ಐಪಿಎಲ್​ ಟೂರ್ನಿಯಲ್ಲಿ ಮೊನಚಾದ ಬೌಲಿಂಗ್​ ಮೂಲಕ ಒಟ್ಟು 19 ವಿಕೆಟ್​ ಕಿತ್ತು ಮಿಂಚಿದ್ದರು. ಮಾಯಾಂಕ್​ ಅಗರ್ವಾಲ್​ ವಿಕೆಟ್​ ಕಿತ್ತು ದುರ್ವರ್ತನೆ ತೋರಿದ ಕಾರಣಕ್ಕೆ ದಂಡ ಮತ್ತು ಒಂದು ಪಂದ್ಯದ ನಿಷೇಧ ಶಿಕ್ಷೆ ಕೂಡ ಎದುರಿಸಿದ್ದರು.

ಮೊದಲ 2 ಪಂದ್ಯಕ್ಕೆ ಪರಿಷ್ಕೃತ ತಂಡ


ಶುಭಮನ್ ಗಿಲ್ (ನಾಯಕ), ಋತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಧ್ರುವ್ ಜುರೆಲ್ (ವೀಕಿ), ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ, ಸಾಯಿ ಸುದರ್ಶನ್, ಜಿತೇಶ್ ಶರ್ಮಾ (ವೀಕಿ) , ಹರ್ಷಿತ್ ರಾಣಾ.

ಇದನ್ನೂ ಓದಿ Team India : ಜಿಂಬಾಬ್ವೆ ಪ್ರವಾಸಕ್ಕೆ ಟೀಮ್ ಇಂಡಿಯಾ ಪ್ರಕಟ, ಶುಭ್​ಮನ್ ಗಿಲ್​ಗೆ ನಾಯಕತ್ವ

5 ಪಂದ್ಯಗಳ ಟಿ20 ಸರಣಿ ಇದಾಗಿದ್ದು, ಅಭಿಷೇಕ್ ಶರ್ಮಾ, ನಿತೀಶ್ ರೆಡ್ಡಿ, ರಿಯಾನ್ ಪರಾಗ್ 2024 ರ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ ಫಲಿತಾಂಶವಾಗಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಟಿ20 ಸರಣಿಯಲ್ಲಿ ಪಂದ್ಯಗಳನ್ನಾಡಲಿದ್ದಾರೆ. ಪರಾಗ್ ಅಸ್ಸಾಂ ನಿಂದ ಭಾರತೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿರುವ ಮೊದಲ ಕ್ರೀಡಾಪಟುವಾಗಿದ್ದಾರೆ.

ವೇಳಾಪಟ್ಟಿ: ಭಾರತದ ಜಿಂಬಾಬ್ವೆ ಪ್ರವಾಸ

1ನೇ ಟಿ20: ಜುಲೈ 6, ಹರಾರೆ, ಸಂಜೆ 4.30

2ನೇ ಟಿ20: ಜುಲೈ 7, ಹರಾರೆ, ಸಂಜೆ 4.30

3ನೇ T20: ಜುಲೈ 10, ಹರಾರೆ, ಸಂಜೆ 4.30

4ನೇ T20: ಜುಲೈ 13, ಹರಾರೆ, ಸಂಜೆ 4.30

5 ನೇ T20: ಜುಲೈ 14, ಹರಾರೆ, ಸಂಜೆ 4.30

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

MS Dhoni Birthday: ಧೋನಿ ನಾಯಕರಾಗಿದ್ದಾಗ ಬಳಸಿದ ಮಹತ್ವದ ಗೆಲುವಿನ ತಂತ್ರಗಳು ಇಲ್ಲಿವೆ

MS Dhoni Birthday: ಕ್ರಿಕೆಟ್‌ ಮೈದಾನದಲ್ಲಿ ಬ್ಯಾಟಿಂಗ್‌, ವಿಕೆಟ್‌ ಕೀಪಿಂಗ್‌ ಅಥವಾ ನಾಯಕನಾಗೇ ಇರಲಿ ಶಾಂತಚಿತ್ತ ಅವರ ಮುಖ್ಯ ಗುಣ. ಎಂತಹ ಸನ್ನಿವೇಶವಿದ್ದರೂ ಧೋನಿ(MS Dhoni) ತಾಳ್ಮೆ ಕಳೆದುಕೊಳ್ಳುವುದು ವಿರಳ. ಇದಕ್ಕಾಗಿ ಅವರಿಗೆ ಕ್ಯಾಪ್ಟನ್‌ ಕೂಲ್‌’ ಎಂಬ ಹೆಸರು ಕೂಡ ಇದೆ.

VISTARANEWS.COM


on

MS Dhoni Birthday
Koo

ಬೆಂಗಳೂರು ಭಾರತಕ್ಕೆ 2 ವಿಶ್ವಕಪ್(ಟಿ20, ಏಕದಿನ) ಗೆದ್ದ ಕೊಟ್ಟ ನಾಯಕ ಮಹೇಂದ್ರ ಸಿಂಗ್‌ ಧೋನಿಗೆ(MS Dhoni Birthday) 43ನೇ ಜನುಮದಿನದ ಸಂಭ್ರಮ. ಕ್ರಿಕೆಟ್‌ ಮೈದಾನದಲ್ಲಿ ಬ್ಯಾಟಿಂಗ್‌, ವಿಕೆಟ್‌ ಕೀಪಿಂಗ್‌ ಅಥವಾ ನಾಯಕನಾಗೇ ಇರಲಿ ಶಾಂತಚಿತ್ತ ಅವರ ಮುಖ್ಯ ಗುಣ. ಎಂತಹ ಸನ್ನಿವೇಶವಿದ್ದರೂ ಧೋನಿ(MS Dhoni) ತಾಳ್ಮೆ ಕಳೆದುಕೊಳ್ಳುವುದು ವಿರಳ. ಇದಕ್ಕಾಗಿ ಅವರಿಗೆ ಕ್ಯಾಪ್ಟನ್‌ ಕೂಲ್‌’ ಎಂಬ ಹೆಸರು ಕೂಡ ಇದೆ. ಧೋನಿ ಎಂದರೆ ಅಭಿಮಾನಿಗಳಿಗೊಂದು ಎಮೋಷನ್‌. ನಾಯಕನಾಗಿ ಧೋನಿ ತೆಗೆದುಕೊಂಡ ಕೆಲವು ನಿರ್ಧಾರಗಳು ಭಾರತ ತಂಡಕ್ಕೆ ಹೇಗೆ ಹೇಗೆ ನೆರವಾಯಿತು ಎಂಬುದರ ಕುತೂಹಲಕಾರಿ ಸಂಗತಿ ಹೀಗಿದೆ

ಜೋಗಿಂದರ್ ಶರ್ಮಾಗೆ ಕೊನೆ ಓವರ್​ ನೀಡಿದ್ದು!

2007ರಲ್ಲಿ ನಡೆದ ಚೊಚ್ಚಲ ಟಿ 20 ವಿಶ್ವಕಪ್ ಫೈನಲ್​ನಲ್ಲಿ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಿತ್ತು. ಸಾಧಾರಣ ಗುರಿ ಬೆನ್ನತ್ತಿದ್ದ ಪಾಕ್​ ಓಂದೆಡೆ ವಿಕೆಟ್ ಬೀಳುತ್ತಿದ್ದರೂ ಮಿಸ್ಬಾ ಉಲ್ ಹಕ್ ನಿಂತು ಆಡುತ್ತಿದ್ದರು. ಕೊನೆಯ ಓವರ್ ನಲ್ಲಿ 13 ರನ್ ಬೇಕಾಗಿತ್ತು. ಕೈಯಲ್ಲಿ ಇದ್ದಿದ್ದು ಒಂದು ವಿಕೆಟ್. ಜೋಗಿಂದರ್ ಶರ್ಮಾರ ಎರಡನೇ ಎಸೆತವನ್ನು ಸಿಕ್ಸರ್​ಗೆ ಅಟ್ಟಿದ ಮಿಸ್ಬಾ ಮೂರನೇ ಎಸೆತವನ್ನು ಫೈನ್ ಲೆಗ್​ಗೆ ಸ್ಕೂಪ್ ಮಾಡಿದ್ದರು. ಆದರೆ ಚೆಂಡು ಶ್ರೀಶಾಂತ್ ಕೈ ಸೇರಿತ್ತು. ಪಾಕಿಸ್ತಾನ ಆಲ್​ಔಟ್​ ಆಯಿತು. ಭಾರತ ಕೇವಲ 5 ರನ್​ ಅಂತರದಿಂದ ಗೆದ್ದು ಟ್ರೋಫಿ ಎತ್ತಿ ಹಿಡಿಯಿತು. ಇಲ್ಲಿಂದ ಧೋನಿ ಯುಗ ಕೂಡ ಆರಂಭವಾಯಿತು. ಅನಾನುಭವಿ ಜೋಗಿಂದರ್ ಶರ್ಮಾ ಕೈಗೆ ಧೋನಿ ಚೆಂಡು ಕೊಟ್ಟ ನಿರ್ಧಾರ ಪಂದ್ಯದ ಗತಿಯನ್ನೇ ಬದಲಿಸಿತು. ಪಂದ್ಯದ ನಂತರ ಧೋನಿ, ಮಧ್ಯಮ ವೇಗದ ಬೌಲರ್ ಜೋಗಿಂದರ್​ ಮೇಲೆ ನನಗೆ ನಂಬಿಕೆ ಇತ್ತು. ಹಾಗಾಗಿ ಇದು ಸುಲಭ ನಿರ್ಧಾರವಾಗಿತ್ತು ಎಂದು ಸ್ಪಷ್ಟಪಡಿಸಿದ್ದರು.

ಚಾಂಪಿಯನ್ಸ್ ಟ್ರೋಫಿಯಲ್ಲಿ ಇಶಾಂತ್ ಶರ್ಮಾಗೆ ಬೌಲಿಂಗ್​ ಕೊಟ್ಟದ್ದು

2013ರಲ್ಲಿ ನಡೆದಿದ್ದ ಚಾಂಪಿಯನ್ಸ್​ ಟ್ರೋಫಿ ಫೈನಲ್​ನಲ್ಲಿ ಭಾರತ ಮತ್ತು ಇಂಗ್ಲೆಂಡ್​ ಮುಖಾಮುಖಿಯಾಗಿತ್ತು. ನಿಧಾನಗತಿಯ ಎಡ್ಜ್ ಬಾಸ್ಟನ್ ಪಿಚ್​ನಲ್ಲಿ ಇಂಗ್ಲೆಂಡ್ 130 ರನ್ ಗಳ ಗುರಿ ಬೆನ್ನಟ್ಟುತ್ತಿತ್ತು. ಈ ಅವಧಿಯಲ್ಲಿ ಮಳೆಯ ಅವಕೃಪೆಯೂ ಎದುರಾಯಿತು. ಈ ವೇಳೆ ಧೋನಿಗೆ ಬೌಲಿಂಗ್​ಗೆ ಇಳಿಸುವ ಸವಾಲು ಎದುರಾಯಿತು. ವಿಶ್ವಾಸಾರ್ಹ ಸ್ಪಿನ್ ಜೋಡಿ ರವೀಂದ್ರ ಜಡೇಜಾ ಮತ್ತು ಆರ್ ಅಶ್ವಿನ್ ಅವರನ್ನು ಬಳಸಿಕೊಂಡು ಇಂಗ್ಲೆಂಡ್ ಬ್ಯಾಟರ್​ಗಳನ್ನು ಕಟ್ಟಿ ಹಾಕಿದರು. ಆದರೂ ಆತಿಥೇಯ ಆಂಗ್ಲರ ಪಡೆಗೆ ಕೊನೇ 18 ಎಸೆತಗಳಲ್ಲಿ ಕೇವಲ 28 ರನ್​ ಬೇಕಾಗಿತ್ತು. ಈ ವೇಳೆ ಧೋನಿ ಇಶಾಂತ್ ಶರ್ಮಾ ಕೈಗೆ ಚೆಂಡನ್ನು ನೀಡಿದರು.

ಇದನ್ನೂ ಓದಿ MS Dhoni Birthday: ಸಲ್ಮಾನ್​ ಖಾನ್​ ಜತೆ ಕೇಕ್​ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ ಧೋನಿ

ಅವರ ಎಸೆತಕ್ಕೆ ಇಯಾನ್ ಮಾರ್ಗನ್ ಸಿಕ್ಸರ್ ಭಾರಿಸಿದ ಜತೆಗೆ ಶರ್ಮಾ ಎರಡು ವೈಡ್​ ನೀಡಿದ ಬಳಿಕ ಧೋನಿಯ ನಿರ್ಧಾರ ತಲೆಕೆಳಗಾದಂತೆ ಕಂಡಿತು. ಆದರೆ, ನಂತರ ನಡೆದಿದ್ದೇ ಬೇರೆ. ಇಶಾಂತ್ ನಿಧಾನಗತಿಯ ಚೆಂಡನ್ನು ಸಿಕ್ಸರ್ ಕಡೆಗೆ ಕಳುಹಿಸಲು ಹೋದ ಮಾರ್ಗನ್​ ಔಟಾದರು. ಮುಂದಿನ ಎಸೆತದಲ್ಲಿ ರವಿ ಬೋಪಾರಾ ವಿಕೆಟ್ ಪಡೆದರು. ಪಿಚ್​​ನಲ್ಲಿ ತಳವೂರಿದ್ದ ಬ್ಯಾಟರ್​​ಗಳನ್ನು ಪೆವಿಲಿಯನ್​ಗೆ ಕಳುಹಿಸಿ ಭಾರತದ ಜಯಕ್ಕೆ ಹಾದಿ ಮಾಡಿಕೊಟ್ಟರು ಇಶಾಂತ್​. ಅಲ್ಲಿಗೆ ಧೋನಿಯ ತಂತ್ರಗಾರಿಕೆ ಮತ್ತೆ ಫಲಕೊಟ್ಟಂತಾಯಿತು.

2011 ರ ವಿಶ್ವಕಪ್ ಫೈನಲ್​ ಪಂದ್ಯದಲ್ಲಿ ಬ್ಯಾಟಿಂಗ್​ ಮುಂಬಡ್ತಿ


ನಾಯಕನಾಗಿ ಧೋನಿ ಅವರ ಅತ್ಯಂತ ಪ್ರಸಿದ್ಧ ಮತ್ತು ಕ್ಷಿಪ್ರ ನಿರ್ಧಾರದಲ್ಲಿ 2011ರಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಫೈನಲ್ ಕೂಡ ಒಂದು. ಶ್ರೀಲಂಕಾ ವಿರುದ್ಧದ 2011 ರ ವಿಶ್ವಕಪ್ ಫೈನಲ್​​ನಲ್ಲಿ ತಾವೇ ಸ್ವತಃ ಯುವರಾಜ್ ಸಿಂಗ್ ಅವರಿಗಿಂತ ಮುಂಚಿತವಾಗಿ ಬ್ಯಾಟ್​ ಮಾಡಲು ಇಳಿದಿರುವುದು. ತಂಡದ ಮೂರನೇ ವಿಕೆಟ್ ಪತನದ ನಂತರ ಅವರು ತಾವೇ ಬ್ಯಾಟ್​ ಹಿಡಿದು ಆಡಲು ಮುಂದಾದರು. ಗೌತಮ್​ ಗಂಭೀರ್​ ಜತೆ ಅಮೂಲ್ಯ ಜತೆಯಾಟ ನೀಡುವ ಜತೆಗೆ ಲಂಕಾದ ಸ್ಪಿನ್ ಬೌಲರ್​ಗಳ ತಂತ್ರವನ್ನು ಅವರಿಬ್ಬರು ವಿಫಲಗೊಳಿಸಿದರು. ಅಲ್ಲದೇ ತಾವು ಕೊನೇ ತನಕ ಉಳಿದು 97 ರನ್ ಬಾರಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ಇದು ಭಾರತ ಕ್ರಿಕೆಟ್ ತಂಡದ ಪಾಲಿಗೆ ಐತಿಹಾಸಿಕ ನಿರ್ಧಾರವೇ ಸರಿ.

ಲಾರ್ಡ್ಸ್​ನಲ್ಲಿ ಇಶಾಂತ್ ಶರ್ಮಾ ಬೌನ್ಸರ್ ದಾಳಿ


ಭಾರತವು 2014ರ ಇಂಗ್ಲೆಂಡ್​ ಪ್ರವಾಸದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯಲು ಹೆಣಗಾಡಿತ್ತು. ಆದರೆ ಪ್ರವಾಸದ ಎರಡನೇ ಟೆಸ್ಟ್​​ನಲ್ಲಿ ಅದು ಬದಲಾಯಿತು. ಅಲ್ಲಿ ಧೋನಿ ನಾಯಕತ್ವದಲ್ಲಿ ಆಡಿದ ಭಾರತ ತಂಡ ಪುಟಿದೆದ್ದಿತು. ಆ ಪಂದ್ಯದಲ್ಲಿ ಇಂಗ್ಲೆಂಡ್​ ತಂಡಕ್ಕೆ 6 ವಿಕೆಟ್​ಗಳು ಕೈಯಲ್ಲಿರುವಾಗ 140 ರನ್​ಗಳ ಅಗತ್ಯವಿತ್ತು . ಹೀಗಾಗಿ ಗೆಲುವು ಇಂಗ್ಲೆಂಡ್​ ತಂಡದ್ದು ಎಂದು ಭಾವಿಸಲಾಗಿತ್ತು. ಧೋನಿ ತಂತ್ರಗಾರಿಕೆ ಬಳಸಿದರು. ಇಶಾಂತ್​ ಶರ್ಮಾಗೆ ಚೆಂಡು ಕೊಟ್ಟು ಶಾರ್ಟ್ ಪಿಚ್ ದಾಳಿ ಮಾಡಲು ಹೇಳಿದರು. ಶರ್ಮಾ ಮಿಂಚಿದರು. ಜೀವನ ಶ್ರೇಷ್ಠ 7 ವಿಕೆಟ್​ ಪಡೆದರು. ಕೇವಲ 74 ರನ್ ನೀಡಿ ಈ ಸಾಧನೆ ಮಾಡಿದರು. ಭಾರತಕ್ಕೆ 95 ರನ್​ಗಳ ಗೆಲುವು ಲಭಿಸಿತು. ಇಶಾಂತ್​ ಅವರ ಶಾರ್ಟ್​​ ಪಿಚ್ ಹಾಗೂ ಬೌನ್ಸರ್​ಗಳು ಕೆಲಸ ಮಾಡಿದವು. ಧೋನಿಯ ತಂತ್ರಗಾರಿಕೆ ಮೇಲುಗೈ ಸಾಧಿಸಿತ್ತು.

ಪೊಲಾರ್ಡ್ ವಿರುದ್ಧ ಸ್ಟ್ರೈಟ್-ಆನ್ ಫೀಲ್ಡಿಂಗ್​ ತಂತ್ರ


ಎಂಎಸ್ ಧೋನಿ ನಾಯಕತ್ವದಲ್ಲಿ ಫೀಲ್ಡಿಂಗ್ ಸೆಟ್ಟಿಂಗ್​ ಕೂಡ ಅದ್ಭುತವಾಗಿತ್ತು. 2010ರ ಐಪಿಎಲ್ ಫೈನಲ್​ನಲ್ಲಿ ಇದಕ್ಕೊಂದು ತಾಜಾ ಉದಾಹರಣೆಯಿದೆ. ಸಿಎಸ್​ಕೆ ಮತ್ತು ಮುಂಬಯಿ ನಡುವಿನ ಫೈನಲ್​ ಹಣಾಹಣಿಯದರು. ವಿಂಡೀಸ್ ದೈತ್ಯ ಕೀರನ್ ಪೊಲಾರ್ಡ್ ಚೆನ್ನೈ ಕೈಯಿಂದ ಜಯ ಕಸಿಯುವ ಪ್ರಯತ್ನ ಮಾಡುತ್ತಿದ್ದರು. 9 ಎಸೆತಗಳಲ್ಲಿ 27 ರನ್ ಗಳಿಸಿದ್ದರು ಪೊಲಾರ್ಡ್​. ಇದನ್ನು ಗ್ರಹಿಸಿದ ಧೋನಿ ಮ್ಯಾಥ್ಯೂ ಹೇಡನ್ ಅವರನ್ನು ಮ್ಯಾಥ್ಯೂ ಹೇಡನ್ ಅವರನ್ನು ಸ್ಟ್ರೈನ್ ಆನ್​ ಬಳಿ ಫೀಲ್ಡಿಂಗ್ ನಿಲ್ಲಿಸಿದರು. ಪೊಲಾರ್ಡ್​ ಕ್ಯಾಚ್​ ನೀಡಿ ನಿರ್ಗಮಿಸಿದರು. ಧೋನಿ 2017 ರ ಫೈನಲ್​ನಲ್ಲಿ ರೈಸಿಂಗ್ ಪುಣೆ ಸೂಪರ್​ಜೈಂಟ್ಸ್​ ತಂಡ ಪರವಾಗಿ ಅದೇ ತಂತ್ರ ಬಳಸಿ ಪೊಲಾರ್ಡ್ ಅವರನ್ನು ಔಟ್​ ಮಾಡಿಸಿದರು. 2022ರಲ್ಲಿ ಪೊಲಾರ್ಡ್ ಅವರ ಅಂತಿಮ ಐಪಿಎಲ್​ ಋತುವಿನಲ್ಲೂ ಅವರನ್ನು ಅದೇ ರೀತಿ ಔಟ್​ ಮಾಡಿಸಿದ್ದರು ಧೋನಿ.

Continue Reading

ಕ್ರಿಕೆಟ್

MS Dhoni Birthday: ಸಲ್ಮಾನ್​ ಖಾನ್​ ಜತೆ ಕೇಕ್​ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ ಧೋನಿ

MS Dhoni Birthday: ವಿಕೆಟ್‌ ಕೀಪಿಂಗ್‌ನಲ್ಲಿ ಧೋನಿ ವಿಶ್ವದಾಖಲೆ ಹೊಂದಿದ್ದಾರೆ. 2018ರಲ್ಲಿ ಕೇವಲ 0.08 ಸೆಕೆಂಡ್‌ನಲ್ಲಿ ಸ್ಟಂಪ್‌ಔಟ್‌ ಮಾಡುವ ಮೂಲಕ ವೆಸ್ಟ್‌ ಇಂಡೀಸ್‌ನ ಕೀಮೊ ಪೌಲ್‌ರನ್ನು ಪೆವಿಲಿಯನ್‌ಗೆ ಕಳುಹಿಸಿದ್ದರು. ಕುಲದೀಪ್‌ ಯಾದವ್‌ ಆಗ ಬೌಲಿಂಗ್‌ ಮಾಡಿದ್ದರು. ಇದು ವಿಶ್ವದಲ್ಲೇ ವೇಗದ ಸ್ಟಂಪಿಂಗ್‌ ಎನಿಸಿದೆ.

VISTARANEWS.COM


on

MS Dhoni Birthday
Koo

ನವದೆಹಲಿ: ಎಂ.ಎಸ್.ಧೋನಿ, ಕ್ಯಾಪ್ಟನ್‌ ಕೂಲ್‌, ಮಾಹಿ, ತಾಲಾ… ಎಂದೆಲ್ಲ ಪ್ರೀತಿಯಿಂದ ಕರೆಸಿಕೊಳ್ಳುವ ಮಹೇಂದ್ರ ಸಿಂಗ್‌ ಧೋನಿ ಇಂದು (July 7) 43ನೇ ವಸಂತಕ್ಕೆ (MS Dhoni Birthday) ಕಾಲಿಟ್ಟಿದ್ದಾರೆ. ಭಾರತಕ್ಕೆ ಮೂರು ಐಸಿಸಿ ಟ್ರೋಫಿಗಳನ್ನು ತಂದುಕೊಟ್ಟ, ಕೂಲ್‌ ಆಗಿದ್ದೇ ‘ಹಾಟ್‌’ ಫೇವರಿಟ್‌ ತಂಡವನ್ನು ಕಟ್ಟಿದ, ಕ್ರಿಕೆಟ್‌ನ ಆಚೆಗೂ ವ್ಯಕ್ತಿತ್ವದಿಂದ, ತನ್ನ ವಿಶೇಷ ಹವ್ಯಾಸಗಳಿಂದ, ಕೈಂಡ್‌ನೆಸ್‌ ವರ್ತನೆಯಿಂದ ಮನ ಸೆಳೆದ ಧೋನಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಈ ಬಾರಿ ಧೋನಿ ತಮ್ಮ ಹುಟ್ಟುಹಬ್ಬವನ್ನು ಬಾಲಿವುಡ್​ ಸ್ಟಾರ್​ ಸಲ್ಮಾನ್​ ಖಾನ್​(Salman Khan) ಜತೆ ಕೇಕ್​ ಕತ್ತರಿಸಿ ಸಂಭ್ರಮಿಸಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ಶನಿವಾರ ಮುಂಬೈನಲ್ಲಿ ಮುಕೇಶ್‌ ಅಂಬಾನಿ(Mukesh Ambani) ಪುತ್ರ ಅನಂತ್‌ ಅಂಬಾನಿ(Anant Ambani) ಹಾಗೂ ರಾಧಿಕಾ ಮರ್ಚೆಂಟ್‌ (Radhika Merchant) ಅವರ ವಿವಾಹಪೂರ್ವವಾಗಿ(Anant Ambani wedding) ನಡೆದ ಸಂಗೀತ ಕಾರ್ಯಕ್ರಮದಲ್ಲಿ(Anant-Radhika sangeet ceremony) ಧೋನಿ ಮತ್ತು ಅವರ ಪತ್ನಿ ಸಾಕ್ಷಿ ಸಿಂಗ್​ ಪಾಲ್ಗೊಂಡಿದ್ದರು. ಬಾಲಿವುಡ್​ನ ಹಲವು ಸ್ಟಾರ್​ ನಟ ಮತ್ತು ನಟಿಯರು ಕೂಡ ಈ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದರು. ಇದೇ ವೇಳೆ ಸಲ್ಮಾನ್​ ಖಾನ್​ ಅವರು ಸರ್​ಪ್ರೈಸ್​ ಆಗಿ ಧೋನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಧೋನಿ ಅವರು ಸಲ್ಮಾನ್​ ಜತೆ ಕೇಕ್​ ಕತ್ತರಿಸಿ ತಮ್ಮ ಹುಟ್ಟು ಹಬ್ಬ ಆಚರಿಸಿದ್ದಾರೆ.

ಮಹೇಂದ್ರ ಸಿಂಗ್​ ಧೋನಿ ಅವರು ಟೀಮ್​ ಇಂಡಿಯಾದ ಬ್ಲೂ ಜೆರ್ಸಿಯಲ್ಲಿ ಬ್ಯಾಟ್​ ಹಿಡಿದು ಬರುತ್ತಿರುವ ಬರೋಬ್ಬರಿ 52 ಅಡಿ ಎತ್ತರದ ಕಟೌಟ್​ ನಿರ್ಮಿಸಿದ್ದಾರೆ. ಸದ್ಯ ಧೋನಿಯ ಈ ಕಟೌಟ್​ ಫೋಟೋವನ್ನು ಅಂತರ್ಜಾಲದಲ್ಲಿ ಕೊಟ್ಯಂತರ ಅಭಿಮಾನಿಗಳು ಶೇರ್​ ಮತ್ತು ಲೈಕ್ ಮಾಡಿ ಶುಭಾಶಯ ಕೋರಿದ್ದಾರೆ. ಕಳೆದ ಬಾರಿಯೂ ಕೂಡ ಆಂಧ್ರಪ್ರದೇಶದ ವಿಜಯವಾಡ ಜಿಲ್ಲೆಯಲ್ಲಿ ಅಭಿಮಾನಿಗಳು ಧೋನಿಯ 43ನೇ ಜನ್ಮದಿನದ ಗೌರವಾರ್ಥವಾಗಿ 43 ಅಡಿ ಎತ್ತರದ ಕಟೌಟ್​ ನಿರ್ಮಿಸಿದ್ದರು. ಕೇರಳದಲ್ಲಿಯೂ 2018 ರಲ್ಲಿ 35 ಅಡಿ ಎತ್ತರದ ಕಟೌಟ್​ ನಿರ್ಮಿಸಿದ್ದರು.

ಇದನ್ನೂ ಓದಿ MS Dhoni Birthday: 43ನೇ ವಸಂತಕ್ಕೆ ಕಾಲಿಟ್ಟ ಮಹೇಂದ್ರ ಸಿಂಗ್‌ ಧೋನಿ

ಧೋನಿ ಕುರಿತ ಕೆಲವು ಇಂಟರೆಸ್ಟಿಂಗ್‌ ಅಂಶಗಳು


1. ವಿಕೆಟ್‌ ಕೀಪಿಂಗ್‌ನಲ್ಲಿ ಧೋನಿ ವಿಶ್ವದಾಖಲೆ ಹೊಂದಿದ್ದಾರೆ. 2018ರಲ್ಲಿ ಕೇವಲ 0.08 ಸೆಕೆಂಡ್‌ನಲ್ಲಿ ಸ್ಟಂಪ್‌ಔಟ್‌ ಮಾಡುವ ಮೂಲಕ ವೆಸ್ಟ್‌ ಇಂಡೀಸ್‌ನ ಕೀಮೊ ಪೌಲ್‌ರನ್ನು ಪೆವಿಲಿಯನ್‌ಗೆ ಕಳುಹಿಸಿದ್ದರು. ಕುಲದೀಪ್‌ ಯಾದವ್‌ ಆಗ ಬೌಲಿಂಗ್‌ ಮಾಡಿದ್ದರು. ಇದು ವಿಶ್ವದಲ್ಲೇ ವೇಗದ ಸ್ಟಂಪಿಂಗ್‌ ಎನಿಸಿದೆ.

2. ಧೋನಿಗೆ ಪೆಟ್ಸ್‌ ಎಂದರೆ ತುಂಬ ಇಷ್ಟ. ಸ್ಯಾಮ್‌, ಲಿಲ್ಲಿ, ಗಬ್ಬರ್‌ ಹಾಗೂ ಜೋಯಾ ಎಂಬ ನಾಲ್ಕು ಶ್ವಾನಗಳನ್ನು ಸಾಕಿದ್ದಾರೆ. ಅಷ್ಟೇ ಅಲ್ಲ, ರಾಂಚಿಯಲ್ಲಿರುವ ಫಾರ್ಮ್‌ಹೌಸ್‌ನಲ್ಲಿ Honey ಎಂಬ ಗಿಳಿ, ಚೇತಕ್‌ ಎಂಬ ಕುದುರೆ ಸಾಕಿದ್ದಾರೆ.

3. ಧೋನಿ ಕ್ರಿಕೆಟ್‌ಗೆ ಕಾಲಿಡುವ ಮೊದಲು ಫುಟ್ಬಾಲ್‌ ಆಡುತ್ತಿದ್ದರು. ಬ್ಯಾಡ್ಮಿಂಟನ್‌ ಕೂಡ ಅವರ ನೆಚ್ಚಿನ ಆಟವಾಗಿತ್ತು. ಆದರೆ, ಅವರು ಕ್ರಿಕೆಟ್‌ನಲ್ಲಿ ವೃತ್ತಿಜೀವನ ಆರಂಭಿಸಿದರು. ಮುಂದೆ ಆಗಿದ್ದೆಲ್ಲ ಈಗ ಇತಿಹಾಸ.

4. ಮಹೇಂದ್ರ ಸಿಂಗ್‌ ಧೋನಿ ಅವರಿಗೆ ಬೈಕ್‌ಗಳೆಂದರೆ ಪಂಚಪ್ರಾಣ. ಅವರ ಬಳಿ ಒಂದು ಶೋರೂಮ್‌ನಲ್ಲಿರುವಷ್ಟು ಅಂದರೆ, 70 ದುಬಾರಿ ಬೈಕ್‌ಗಳಿವೆ. ಹಾರ್ಲೆ ಡೇವಿಡ್‌ಸನ್‌ನಿಂದ ಹಿಡಿದು ಸುಜುಕಿ ಹಯಬುಸವರೆಗೆ ದುಬಾರಿ ಬೈಕ್‌ಗಳು ಅವರ ಬಳಿ ಇವೆ. ಹಲವು ಐಷಾರಾಮಿ ಕಾರುಗಳನ್ನೂ ಧೋನಿ ಹೊಂದಿದ್ದಾರೆ.

5. ಧೋನಿ ಹೆಚ್ಚಾಗಿ ಮೊಬೈಲ್‌ ಬಳಸುವುದಿಲ್ಲ. ಇನ್ನು ಸಾಮಾಜಿಕ ಜಾಲತಾಣಗಳಿಂದ ಅವರು ಅಂತರ ಕಾಯ್ದುಕೊಳ್ಳುತ್ತಾರೆ. ಟ್ವಿಟರ್‌ನಲ್ಲಿ 80 ಲಕ್ಷಕ್ಕೂ ಅಧಿಕ ಫಾಲೋವರ್‌ಗಳನ್ನು ಹೊಂದಿರುವ ಅವರು ಕೊನೆಯ ಬಾರಿ ಟ್ವೀಟ್‌ ಮಾಡಿದ್ದು 2021ರಲ್ಲಿ. ಇನ್‌ಸ್ಟಾಗ್ರಾಂನಲ್ಲಿ 4.38 ಕೋಟಿ ಫಾಲೋವರ್‌ಗಳನ್ನು ಹೊಂದಿರುವ ತಾಲಾ, ಫೆಬ್ರವರಿಯಿಂದ ಯಾವುದೇ ವಿಡಿಯೊ ಪೋಸ್ಟ್‌ ಮಾಡಿಲ್ಲ.

Continue Reading

ಕ್ರೀಡೆ

MS Dhoni Birthday: 43ನೇ ವಸಂತಕ್ಕೆ ಕಾಲಿಟ್ಟ ಮಹೇಂದ್ರ ಸಿಂಗ್‌ ಧೋನಿ

MS Dhoni Birthday: ಧೋನಿ ಎಂದರೆ ಅಭಿಮಾನಿಗಳಿಗೆ ಕ್ರೇಜ್​. ಇದೀಗ ಧೋನಿ ಅವರು 43 ವರ್ಷಕ್ಕೆ ಕಾಲಿಟ್ಟಿದ್ದಾರೆ. ಅವರ ಅಭಿಮಾನಿಗಳು ಚೆನ್ನೈ ಸೇರಿ ವಿವಿದೆಡೆ ದೊಡ್ಡ ಕಟೌಟ್​ ನಿರ್ಮಿಸಿ ನೆಚ್ಚಿನ ಆಟಗಾರನಿಗೆ ಹರಸಿ ಹಾರೈಸಿದ್ದಾರೆ.

VISTARANEWS.COM


on

MS Dhoni Birthday
Koo

ರಾಂಚಿ​: ಜುಲೈ 7 ಟೀಮ್‌ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ(MS Dhoni Birthday) ಅವರ ಜನ್ಮದಿನ(dhoni birthday). ಅವರಿಗೆ 43ನೇ ವರ್ಷದ ಸಂಭ್ರಮ. ಕೋಟ್ಯಂತರ ಕ್ರಿಕೆಟ್‌ ಅಭಿಮಾನಿಗಳು(ms dhoni fans) ಸಾಮಾಜಿಕ ಜಾಲ ತಾಣದಲ್ಲಿ ಧೋನಿಗೆ ಹರಸಿ ಹಾರೈಸಿದ್ದಾರೆ. ಹೈದರಾಬಾದ್​ನ ಅಭಿಮಾನಿಗಳು ಧೋನಿಯ ದೊಡ್ಡ ಕಟೌಟ್​ ನಿಲ್ಲಿಸಿ ತಮ್ಮ ನೆಚ್ಚಿನ ಆಟಗಾರನ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದಾರೆ.

ಧೋನಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ದೂರ ಉಳಿದಿದ್ದರೂ ಅವರ ಮೇಲಿನ ಕ್ರೇಜ್ ಮಾತ್ರ ಕಿಂಚಿತ್ತು ಕಡಿಮೆಯಾಗಿಲ್ಲ. ಅವರು ಕ್ರಿಕೆಟ್​ ಆಡಬೇಕೆಂಬುವುದು ಅಭಿಮಾನಿಗಳ ಆಶಯವಾಗಿದೆ. ಇದಕ್ಕೆ ಈ ಬಾರಿಯ ಐಪಿಎಲ್​ ಟೂರ್ನಿಯೇ ಉತ್ತಮ ನಿದರ್ಶನ. ಧೋನಿ ಅವರು ಈ ಬಾರಿಯ ಐಪಿಎಲ್​ ಬಳಿಕ ನಿವೃತ್ತಿ ಘೋಷಿಸುತ್ತಾರೆ ಎನ್ನಲಾಗಿತ್ತು. ಇದೇ ಕಾರಣಕ್ಕೆ ಅವರ ಅಭಿಮಾನಿಗಳು ಚೆನ್ನೈ ಪಂದ್ಯ ಎಲ್ಲೆಲ್ಲಿ ನಡೆಯುತ್ತದೋ ಅಲ್ಲೆಲ್ಲ ಹೋಗಿ ಧೋನಿ ಆಟವನ್ನು ಕಣ್ತುಂಬಿಕೊಂಡಿದ್ದಾರೆ. ಜತೆಗೆ ಧೋನಿ ಅವರು ಮೈದಾನಕ್ಕೆ ಬರುವ ವೇಳೆ ಮೊಬೈಲ್​ ಪ್ಲ್ಯಾಶ್​ ಲೈಟ್​ಗಳನ್ನು ಹಾಕಿ ವಿಶೇಷ ಗೌರವ ಸೂಚಿಸುತ್ತಿದ್ದರು.

ಧೋನಿ ಎಂದರೆ ಅಭಿಮಾನಿಗಳಿಗೆ ಕ್ರೇಜ್​. ಇದೀಗ ಧೋನಿ ಅವರು 43 ವರ್ಷಕ್ಕೆ ಕಾಲಿಟ್ಟಿದ್ದಾರೆ. ಅವರ ಅಭಿಮಾನಿಗಳು ಚೆನ್ನೈ ಸೇರಿ ವಿವಿದೆಡೆ ದೊಡ್ಡ ಕಟೌಟ್​ ನಿರ್ಮಿಸಿ ನೆಚ್ಚಿನ ಆಟಗಾರನಿಗೆ ಹರಸಿ ಹಾರೈಸಿದ್ದಾರೆ.

  1. ಕ್ಯಾಪ್ಟನ್‌ ಕೂಲ್‌ ಕುರಿತ ಕೆಲವು ಇಂಟರೆಸ್ಟಿಂಗ್‌ ಅಂಶಗಳು
  2. 1. ಧೋನಿ ಹೆಚ್ಚಾಗಿ ಮೊಬೈಲ್‌ ಬಳಸುವುದಿಲ್ಲ. ಇನ್ನು ಸಾಮಾಜಿಕ ಜಾಲತಾಣಗಳಿಂದ ಅವರು ಅಂತರ ಕಾಯ್ದುಕೊಳ್ಳುತ್ತಾರೆ. ಟ್ವಿಟರ್‌ನಲ್ಲಿ 80 ಲಕ್ಷಕ್ಕೂ ಅಧಿಕ ಫಾಲೋವರ್‌ಗಳನ್ನು ಹೊಂದಿರುವ ಅವರು ಕೊನೆಯ ಬಾರಿ ಟ್ವೀಟ್‌ ಮಾಡಿದ್ದು 2021ರಲ್ಲಿ. ಇನ್‌ಸ್ಟಾಗ್ರಾಂನಲ್ಲಿ 4.38 ಕೋಟಿ ಫಾಲೋವರ್‌ಗಳನ್ನು ಹೊಂದಿರುವ ತಾಲಾ, ಫೆಬ್ರವರಿಯಿಂದ ಯಾವುದೇ ವಿಡಿಯೊ ಪೋಸ್ಟ್‌ ಮಾಡಿಲ್ಲ.
  3. 2.ಧೋನಿಗೆ ಪೆಟ್ಸ್‌ ಎಂದರೆ ತುಂಬ ಇಷ್ಟ. ಸ್ಯಾಮ್‌, ಲಿಲ್ಲಿ, ಗಬ್ಬರ್‌ ಹಾಗೂ ಜೋಯಾ ಎಂಬ ನಾಲ್ಕು ಶ್ವಾನಗಳನ್ನು ಸಾಕಿದ್ದಾರೆ. ಅಷ್ಟೇ ಅಲ್ಲ, ರಾಂಚಿಯಲ್ಲಿರುವ ಫಾರ್ಮ್‌ಹೌಸ್‌ನಲ್ಲಿ Honey ಎಂಬ ಗಿಳಿ, ಚೇತಕ್‌ ಎಂಬ ಕುದುರೆ ಸಾಕಿದ್ದಾರೆ.
  4. 3.ಧೋನಿ ಕ್ರಿಕೆಟ್‌ಗೆ ಕಾಲಿಡುವ ಮೊದಲು ಫುಟ್ಬಾಲ್‌ ಆಡುತ್ತಿದ್ದರು. ಬ್ಯಾಡ್ಮಿಂಟನ್‌ ಕೂಡ ಅವರ ನೆಚ್ಚಿನ ಆಟವಾಗಿತ್ತು. ಆದರೆ, ಅವರು ಕ್ರಿಕೆಟ್‌ನಲ್ಲಿ ವೃತ್ತಿಜೀವನ ಆರಂಭಿಸಿದರು. ಮುಂದೆ ಆಗಿದ್ದೆಲ್ಲ ಈಗ ಇತಿಹಾಸ.
  5. 4.ಮಹೇಂದ್ರ ಸಿಂಗ್‌ ಧೋನಿ ಅವರಿಗೆ ಬೈಕ್‌ಗಳೆಂದರೆ ಪಂಚಪ್ರಾಣ. ಅವರ ಬಳಿ ಒಂದು ಶೋರೂಮ್‌ನಲ್ಲಿರುವಷ್ಟು ಅಂದರೆ, 70 ದುಬಾರಿ ಬೈಕ್‌ಗಳಿವೆ. ಹಾರ್ಲೆ ಡೇವಿಡ್‌ಸನ್‌ನಿಂದ ಹಿಡಿದು ಸುಜುಕಿ ಹಯಬುಸವರೆಗೆ ದುಬಾರಿ ಬೈಕ್‌ಗಳು ಅವರ ಬಳಿ ಇವೆ. ಹಲವು ಐಷಾರಾಮಿ ಕಾರುಗಳನ್ನೂ ಧೋನಿ ಹೊಂದಿದ್ದಾರೆ.
  6. 5.ವಿಕೆಟ್‌ ಕೀಪಿಂಗ್‌ನಲ್ಲಿ ಧೋನಿ ವಿಶ್ವದಾಖಲೆ ಹೊಂದಿದ್ದಾರೆ. 2018ರಲ್ಲಿ ಕೇವಲ 0.08 ಸೆಕೆಂಡ್‌ನಲ್ಲಿ ಸ್ಟಂಪ್‌ಔಟ್‌ ಮಾಡುವ ಮೂಲಕ ವೆಸ್ಟ್‌ ಇಂಡೀಸ್‌ನ ಕೀಮೊ ಪೌಲ್‌ರನ್ನು ಪೆವಿಲಿಯನ್‌ಗೆ ಕಳುಹಿಸಿದ್ದರು. ಕುಲದೀಪ್‌ ಯಾದವ್‌ ಆಗ ಬೌಲಿಂಗ್‌ ಮಾಡಿದ್ದರು. ಇದು ವಿಶ್ವದಲ್ಲೇ ವೇಗದ ಸ್ಟಂಪಿಂಗ್‌ ಎನಿಸಿದೆ.
Continue Reading

ಪ್ರಮುಖ ಸುದ್ದಿ

Champions Trophy 2025 : ಭಾರತ ತಂಡ ಪಾಕಿಸ್ತಾನಕ್ಕೆ ಬರಲೇಬೇಕು ಹಠ ಹಿಡಿದು ಕುಳಿತಿರುವ ಪಿಸಿಬಿ

Champions Trophy 2025 : ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಈ ತಿಂಗಳು ಶ್ರೀಲಂಕಾದಲ್ಲಿ ನಡೆಯಲಿರುವ ಐಸಿಸಿ ಸಭೆಯಲ್ಲಿ ಈ ವಿಷಯವನ್ನು ಎತ್ತಲು ಯೋಜಿಸಿದೆ. ಅಲ್ಲದೆ ಭಾರತ ತಂಡ ಬರಲೇಬೇಕು ಎಂದು ಒತ್ತಾಯ ಮಾಡುವ ಸಾಧ್ಯತೆಗಳಿವೆ. ಇದು ಸಭೆಯಲ್ಲಿ ನಿರ್ಧಾರ ಮಾಡಲು ದೊಡ್ಡ ಸಮಸ್ಯೆಗಳನ್ನು ತಂದೊಡ್ಡಲಿದೆ.

VISTARANEWS.COM


on

Champions Trophy 2025:
Koo

ಬೆಂಗಳೂರು: 2024ರ ಟಿ20 ವಿಶ್ವಕಪ್ ಬಳಿಕ ಇದೀಗ ಎಲ್ಲರ ಗಮನ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರತ್ತ (Champions Trophy 2025 ) ನೆಟ್ಟಿದೆ. ಮುಂದಿನ ವರ್ಷ ಫೆಬ್ರವರಿ-ಮಾರ್ಚ್​​ನಲ್ಲಿ ಪಾಕಿಸ್ತಾನದಲ್ಲಿ ಪಂದ್ಯಾವಳಿ ಆಯೋಜನೆಗೊಂಡಿದೆ. ಆದರೆ, ಟೂರ್ನಿಯಲ್ಲಿ ಭಾರತೀಯ ತಂಡದ ಭಾಗವಹಿಸುವಿಕೆಯೇ ಯಕ್ಷ ಪ್ರಶ್ನೆಯಾಗಿ ಉಳಿದಿದೆ. ಇತ್ತೀಚಿನ ವರದಿಗಳ ಪ್ರಕಾರ, ಐಸಿಸಿ ಚಾಂಪಿಯನ್ಸ್ ಟ್ರೋಫಿಯ 2025 ರ ಆವೃತ್ತಿಯಲ್ಲಿ ಭಾಗವಹಿಸಲು ಭಾರತ ಕ್ರಿಕೆಟ್ ತಂಡವು ಪಾಕಿಸ್ತಾನಕ್ಕೆ ಪ್ರಯಾಣಿಸುವ ಸಾಧ್ಯತೆಯಿಲ್ಲ. ಪಂದ್ಯಾವಳಿಯಲ್ಲಿ ಅವರ ಭಾಗವಹಿಸುವಿಕೆಯು ಭಾರತ ಸರ್ಕಾರ ತೆಗೆದುಕೊಳ್ಳುವ ನಿರ್ಧಾರವನ್ನು ಅವಲಂಬಿಸಿರುತ್ತದೆ.

ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸದಿರಲು ಕಾರಣವೆಂದರೆ ದೇಶಗಳ ನಡುವಿನ ರಾಜಕೀಯ ಉದ್ವಿಗ್ನತೆ. ಉಭಯ ತಂಡಗಳು ದ್ವಿಪಕ್ಷೀಯ ಸರಣಿಗಳಲ್ಲಿ ಪರಸ್ಪರ ಆಡುವುದಿಲ್ಲ. ಐಸಿಸಿ ಈವೆಂಟ್ಗಳು ಮತ್ತು ಏಷ್ಯಾ ಕಪ್​ಗಳಲ್ಲಿ ಮಾತ್ರ ಪರಸ್ಪರ ಮುಖಾಮುಖಿಯಾಗುತ್ತವೆ. 2012-13ರಲ್ಲಿ ಕೊನೆಯ ಬಾರಿ ಸರಣಿ ಆಡಿತ್ತು.

ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗೆ ಭಾರತ ಪ್ರಯಾಣಿಸದಿರುವ ವಿಷಯ ಸರ್ಕಾರದ ನಿರ್ಧಾರದ ಮೇಲೆ ಅವಲಂಬಿತವಾಗಿರುತ್ತದೆ/ ಅದರ ವಿವರಗಳನ್ನು ಐಸಿಸಿ ಸಭೆಯ ನಂತರ ಬಹಿರಂಗಪಡಿಸಲಾಗುವುದು ಎಂದು ಬಿಸಿಸಿಐ ಹೇಳಿದೆ.

ಇದನ್ನೂ ಓದಿ: ZIM vs IND : ಜಿಂಬಾಬ್ವೆ ವಿರುದ್ಧ 13 ರನ್​ಗಳಿಂದ ಸೋತ ವಿಶ್ವ ವಿಜೇತ ಭಾರತ ತಂಡ

ಪಂದ್ಯಾವಳಿಯ ವಿವರಗಳನ್ನು ಇನ್ನೂ ಚರ್ಚಿಸಲಾಗಿಲ್ಲವಾದರೂ, ಭಾರತ ತಂಡವು ಪಾಕಿಸ್ತಾನಕ್ಕೆ ಪ್ರಯಾಣಿಸುವ ಸಾಧ್ಯತೆಯಿಲ್ಲ. ಅಂತಿಮವಾಗಿ, ನಿರ್ಧಾರವು ಭಾರತ ಸರ್ಕಾರಕ್ಕೆ ಬಿಟ್ಟಿದ್ದು. ಆದಾಗ್ಯೂ, ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಈ ತಿಂಗಳು ಶ್ರೀಲಂಕಾದಲ್ಲಿ ನಡೆಯಲಿರುವ ಐಸಿಸಿ ಸಭೆಯಲ್ಲಿ ಈ ವಿಷಯವನ್ನು ಎತ್ತಲು ಯೋಜಿಸಿದೆ. ಅಲ್ಲದೆ ಭಾರತ ತಂಡ ಬರಲೇಬೇಕು ಎಂದು ಒತ್ತಾಯ ಮಾಡುವ ಸಾಧ್ಯತೆಗಳಿವೆ. ಇದು ಸಭೆಯಲ್ಲಿ ನಿರ್ಧಾರ ಮಾಡಲು ದೊಡ್ಡ ಸಮಸ್ಯೆಗಳನ್ನು ತಂದೊಡ್ಡಲಿದೆ.

ಈ ವಿಷಯದಲ್ಲಿ ಸರ್ಕಾರದ ನಿರ್ಧಾರವು ಅಂತಿಮವಾಗಿರುತ್ತದೆ. ಏಕೆಂದರೆ ನಾವು ಅದನ್ನು ಆಂತರಿಕವಾಗಿ ಇನ್ನೂ ದೃಢಪಡಿಸಿಲ್ಲ. ಇದು ಐಸಿಸಿ ಟೂರ್ನಿಯಾಗಿರುವುದರಿಂದ ಯಾವುದೇ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ನಮಗಿಲ್ಲ. ಆದಾಗ್ಯೂ, ಮುಂದಿನ ಐಸಿಸಿ ಸಭೆಯಲ್ಲಿ ಹೆಚ್ಚಿನ ವಿವರಗಳು ಹೊರಬರಬಹುದು ಎಂದು ಮೂಲಗಳು ತಿಳಿಸಿವೆ. ಭಾರತ ತನ್ನ ನಿರ್ಧಾರ ಬದಲಿಸದು ಎಂಬ ಕಾರಣಕ್ಕೆ ಪಾಕಿಸ್ತಾನ ಹಠ ಹಿಡಿಯಲಿದೆ.

2008ರ ಬಳಿಕ ಭಾರತ ತಂಡ ಪಾಕಿಸ್ತಾನ ಪ್ರವಾಸ ಕೈಗೊಂಡಿಲ್ಲ. ಅವರು 2023 ರಲ್ಲಿ ಏಷ್ಯಾ ಕಪ್ ಆಡಬೇಕಿತ್ತು ಆದರೆ ಅವರು ಪ್ರಯಾಣಿಸಲಿಲ್ಲ ಮತ್ತು ಪಂದ್ಯಾವಳಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಡಲಾಯಿತು. ಭಾರತ ಶ್ರೀಲಂಕಾದಲ್ಲಿ ಪಂದ್ಯಗಳನ್ನು ಆಡಿತು. ಆದರೆ ಅದರ ನಂತರ, ಭಾರತವು ಪ್ರಯಾಣಿಸಲು ನಿರಾಕರಿಸಿದರೂ ಪಾಕಿಸ್ತಾನವು ಸಕಾರಾತ್ಮಕ ಪ್ರತಿಕ್ರಿಯೆ ನೀಡಿತು.

2023ರ ಐಸಿಸಿ ವಿಶ್ವಕಪ್ ಟೂರ್ನಿಗಾಗಿ ಪಾಕಿಸ್ತಾನ ತಂಡ ಭಾರತಕ್ಕೆ ಪ್ರಯಾಣ ಬೆಳೆಸಿತ್ತು. ಅವರು ಹೈದರಾಬಾದ್, ಅಹಮದಾಬಾದ್, ಚೆನ್ನೈ, ಬೆಂಗಳೂರು ಮತ್ತು ಕೋಲ್ಕತ್ತಾದಲ್ಲಿ ಪಂದ್ಯಗಳನ್ನು ಆಡಿದರು ಮತ್ತು ಅವರು ಭಾರತದಲ್ಲಿ ಆಡಿದ ಎಲ್ಲಾ ಸ್ಥಳಗಳಾದ್ಯಂತ ಅಭಿಮಾನಿಗಳಿಂದ ಗರಿಷ್ಠ ಸ್ವಾಗತವನ್ನು ಪಡೆದಿದ್ದರು.

ವೇಳಾಪಟ್ಟಿ ಪ್ರಕಟಿಸಿದ ಪಾಕಿಸ್ತಾನ ಕ್ರಿಕೆಟ್ ಮಂಡಳಿ

ಇತ್ತೀಚೆಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ 2025 ರ ಚಾಂಪಿಯನ್ಸ್ ಟ್ರೋಫಿಯ ಕರಡು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿತು. ಲಾಹೋರ್​ನಲ್ಲಿ 7 ಪಂದ್ಯಗಳು, ರಾವಲ್ಪಿಂಡಿಯಲ್ಲಿ 5 ಪಂದ್ಯಗಳು ಮತ್ತು ಕರಾಚಿಯಲ್ಲಿ 3 ಪಂದ್ಯಗಳು ನಡೆಯಲಿವೆ. ಭಾರತವು ತನ್ನ ಎಲ್ಲಾ ಪಂದ್ಯಗಳನ್ನು ಲಾಹೋರ್​ನಲ್ಲಿ ಆಡಬೇಕಾಗಿದೆ.

ಮಾರ್ಚ್ 1 ರಂದು ಲಾಹೋರ್​ನ ಗಡಾಫಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕಿಸ್ತಾನ ಪಂದ್ಯ ನಡೆಯಲಿದೆ ಎಂದು ವರದಿಗಳು ಉಲ್ಲೇಖಿಸಿವೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಗಾಗಿ ಬಹುತೇಕ ಎಲ್ಲಾ ಯೋಜನೆಗಳು ಪೂರ್ಣಗೊಂಡಿದ್ದು, ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ನೋಡಬೇಕಾಗಿದೆ.

Continue Reading
Advertisement
MS Dhoni Birthday
ಕ್ರೀಡೆ12 mins ago

MS Dhoni Birthday: ಧೋನಿ ನಾಯಕರಾಗಿದ್ದಾಗ ಬಳಸಿದ ಮಹತ್ವದ ಗೆಲುವಿನ ತಂತ್ರಗಳು ಇಲ್ಲಿವೆ

Road Accident
ಕ್ರೈಂ34 mins ago

Road Accident: ಲಾರಿಗೆ ಬೈಕ್‌ ಡಿಕ್ಕಿ ಹೊಡೆದು ಪತ್ರಕರ್ತ ಸಾವು: ಇಬ್ಬರನ್ನು ಬಲಿ ಪಡೆದ ಅಪರಿಚಿತ ಕಾರು

actor darshan wife vijayalakshmi conducted a special pooja at bande mahakali last year goes viral
ಸ್ಯಾಂಡಲ್ ವುಡ್37 mins ago

Actor Darshan: ದರ್ಶನ್‌ಗಾಗಿ ವಿಶೇಷ ಪೂಜೆ ಮಾಡಿಸಿದ್ರಾ ವಿಜಯಲಕ್ಷ್ಮಿ? ಅಸಲಿ ಕಥೆ ಬೇರೆಯೇ ಇದೆ!

MS Dhoni Birthday
ಕ್ರಿಕೆಟ್41 mins ago

MS Dhoni Birthday: ಸಲ್ಮಾನ್​ ಖಾನ್​ ಜತೆ ಕೇಕ್​ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ ಧೋನಿ

Building Collapse
ದೇಶ59 mins ago

Building Collapse: ಐದು ಅಂತಸ್ತಿನ ಕಟ್ಟಡ ಧರಾಶಾಹಿ- ಏಳು ಜನ ದಾರುಣ ಸಾವು

Kannada New Movie Not Out Trailer out
ಸ್ಯಾಂಡಲ್ ವುಡ್1 hour ago

Kannada New Movie: ಕುತೂಹಲ ಮೂಡಿಸಿದೆ ʻನಾಟ್ ಔಟ್ʼ ಚಿತ್ರದ ಟ್ರೈಲರ್‌!

Boiler Blast
ಕರ್ನಾಟಕ1 hour ago

Boiler Blast: ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್‌ ಸ್ಫೋಟ; ತಪ್ಪಿದ ಬಹುದೊಡ್ಡ ಅನಾಹುತ

MS Dhoni Birthday
ಕ್ರೀಡೆ1 hour ago

MS Dhoni Birthday: 43ನೇ ವಸಂತಕ್ಕೆ ಕಾಲಿಟ್ಟ ಮಹೇಂದ್ರ ಸಿಂಗ್‌ ಧೋನಿ

Pearl Fashion
ಫ್ಯಾಷನ್2 hours ago

Pearl Fashion: ಮುತ್ತಿನ ಹಾರಕ್ಕೆ ಸಿಕ್ತು ನ್ಯೂ ಲುಕ್‌!

Crime News
ಕ್ರೈಂ2 hours ago

Crime News: ಗಾಂಜಾ ಮತ್ತಿನಲ್ಲಿ ಕಾರು ಓಡಿಸಿ ಬೈಕ್‌ಗಳಿಗೆ ಗುದ್ದಿದ ಚಾಲಕ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳರು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ15 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ18 hours ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ19 hours ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು21 hours ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ22 hours ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ1 day ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ2 days ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ2 days ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ2 days ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

ಟ್ರೆಂಡಿಂಗ್‌