SEBI: ಅದಾನಿ ವರದಿ: ಹಿಂಡನ್‌ಬರ್ಗ್‌ಗೆ ಸೆಬಿಯಿಂದ ಶೋಕಾಸ್ ನೋಟಿಸ್ - Vistara News

ವಾಣಿಜ್ಯ

SEBI: ಅದಾನಿ ವರದಿ: ಹಿಂಡನ್‌ಬರ್ಗ್‌ಗೆ ಸೆಬಿಯಿಂದ ಶೋಕಾಸ್ ನೋಟಿಸ್

SEBI: ಅಮೆರಿಕ ಮೂಲದ ಹಿಂಡನ್‌ಬರ್ಗ್‌ ರಿಸರ್ಚ್ ಸಂಸ್ಥೆಯ ಅದಾನಿ ವರದಿಗೆ ಸಂಬಂಧಿಸಿದಂತೆ ಭಾರತದ ಷೇರು ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಸೆಬಿ ಶೋಕಾಸ್ ನೋಟಿಸ್ ನೀಡಿದೆ. 46 ಪುಟಗಳ ಶೋಕಾಸ್ ನೋಟಿಸ್ ಅನ್ನು ಜೂನ್ 27ರಂದು ನೀಡಲಾಗಿದೆ ಎಂದು ಹಿಂಡನ್‌ಬರ್ಗ್‌ನ ಮೂಲಗಳು ತಿಳಿಸಿವೆ.

VISTARANEWS.COM


on

SEBI
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಅಮೆರಿಕ ಮೂಲದ ಹಿಂಡನ್‌ಬರ್ಗ್‌ ರಿಸರ್ಚ್ (Hindenburg research) ಸಂಸ್ಥೆಯ ಅದಾನಿ ವರದಿಗೆ ಸಂಬಂಧಿಸಿದಂತೆ ಭಾರತದ ಷೇರು ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಸೆಬಿ(SEBI) ಶೋಕಾಸ್ ನೋಟಿಸ್ ನೀಡಿದೆ. 46 ಪುಟಗಳ ಶೋಕಾಸ್ ನೋಟಿಸ್ ಅನ್ನು ಜೂನ್ 27ರಂದು ನೀಡಲಾಗಿದೆ ಎಂದು ಹಿಂಡನ್‌ಬರ್ಗ್‌ನ ಮೂಲಗಳು ತಿಳಿಸಿವೆ.

ಇದಕ್ಕೆ ಪ್ರತಿಕ್ರಿಯಿಸಿದ ಹಿಂಡನ್‌ಬರ್ಗ್‌, “ಪೂರ್ವ ನಿರ್ದೇಶಿತ ಉದ್ದೇಶವನ್ನು ಪೂರೈಸಲು ರೂಪಿಸಿರುವ ಈ ಶೋಕಾಸ್‌ ನೋಟಿಸ್‌ ಅನ್ನು ನಾವು ಅಸಂಬದ್ಧ ಎಂದು ಭಾವಿಸುತ್ತೇವೆ. ಭ್ರಷ್ಟಾಚಾರವನ್ನು ಬಯಲಿಗೆಳೆಯುವವರನ್ನು ಬೆದರಿಸಿ ಮೌನಗೊಳಿಸುವ ಪ್ರಯತ್ನ ಇದಾಗಿದೆ. ಭಾರತದ ಅತ್ಯಂತ ಪ್ರಬಲ ಸಂಸ್ಥೆಯೊಂದು ವಂಚನೆ ಎಸಗಿದೆ” ಎಂದು ಎಂದು ಆರೋಪಿಸಿದೆ.

ʼʼಭಾರತದಲ್ಲಿನ ಅತ್ಯಂತ ಶಕ್ತಿಶಾಲಿ ವ್ಯಕ್ತಿಗಳು ನಡೆಸುವ ಭ್ರಷ್ಟಾಚಾರ ಮತ್ತು ವಂಚನೆಯನ್ನು ಬಹಿರಂಗಪಡಿಸುವವರ ಬಾಯಿ ಮುಚ್ಚಿಸುವ ಪ್ರಯತ್ನ ಇದಾಗಿದೆ. ಸೆಬಿ ಕಳುಹಿಸಿದ ನೋಟಿಸ್‌ನಲ್ಲಿ ಕೆ-ಇಂಡಿಯಾ ಆಪೋರ್ಚೂನಿಟೀಸ್ ಫಂಡ್ ಹೆಸರನ್ನು ಪ್ರಸ್ತಾಪಿಸಿದೆ. ಆದರೆ ಅದು ಕೋಟಕ್ ಮಹೀಂದ್ರ ಬ್ಯಾಂಕ್ ಎಂದು ಸ್ಪಷ್ಟವಾಗಿ ಹೇಳಿಲ್ಲ ಯಾಕೆ? ಮತ್ತೊಬ್ಬ ಪ್ರಭಾವಶಾಲಿ ವ್ಯಕ್ತಿಯನ್ನು ರಕ್ಷಿಸುವ ಕೆಲಸ ಇದುʼʼ ಎಂದು ಹಿಂಡನ್‌ಬರ್ಗ್‌ ರಿಸರ್ಚ್ ಸಂಸ್ಥೆ ಖಾರವಾಗಿ ಪ್ರತಿಕ್ರಿಯಿಸಿದೆ.

ಕೆ ಇಂಡಿಯಾ ಆಪೋರ್ಚುನಿಟೀಸ್ ಫಂಡ್ ಅನ್ನು ಕೋಟಕ್ ಮಹೀಂದ್ರ ಇನ್ವೆಸ್ಟ್​ಮೆಂಟ್ ಲಿ ಸಂಸ್ಥೆ ನಿರ್ವಹಿಸುತ್ತದೆ. ಇದು ಉದಯ್ ಕೋಟಕ್ ಅವರ ಕೋಟಕ್ ಮಹೀಂದ್ರ ಬ್ಯಾಂಕ್ ಅಧೀನದಲ್ಲಿರುವ ಸಂಸ್ಥೆಯಾಗಿದೆ. ಕುತೂಹಲ ಎಂದರೆ ಉದಯ್ ಕೋಟಕ್ ಅವರು 2017ರಲ್ಲಿ ಸೆಬಿಯ ಕಾರ್ಪೊರೇಟ್ ಗವರ್ನೆನ್ಸ್ ಕಮಿಟಿಯ ನೇತೃತ್ವ ವಹಿಸಿದ್ದರು. ಇನ್ನು ತನ್ನ ವಿವಿಧ ನೆಟ್‌ವರ್ಕ್‌ಗಳನ್ನು ಬಳಸಿ ಅದಾನಿ ಸ್ಟಾಕ್​ಗಳನ್ನು ಶಾರ್ಟ್ ಮಾಡಿದ್ದೇವೆ ಎಂದು ಸೆಬಿ ಮಾಡಿರುವ ಆರೋಪವನ್ನು ಹಿಂಡನ್‌ಬರ್ಗ್‌ ನಿರಾಕರಿಸಿದೆ.

ಏನಿದು ಹಿಂಡನ್‌ಬರ್ಗ್‌ ವರದಿ ಕೇಸ್?‌

ಗೌತಮ್‌ ಅದಾನಿ ನೇತೃತ್ವದ ಅದಾನಿ ಗ್ರೂಪ್‌ ಅಕ್ರಮ ಎಸಗಿದೆ ಎಂದು ಅಮೆರಿಕದ ಹಿಂಡನ್‌ಬರ್ಗ್‌ ಸಂಸ್ಥೆಯು 2023ರ ಜನವರಿಯಲ್ಲಿ ಪ್ರಕಟಿಸಿದ ವರದಿಯು ದೇಶದಲ್ಲಿ ಸಂಚಲನ ಮೂಡಿಸಿತ್ತು. “ಹೂಡಿಕೆದಾರರಿಗೆ ಅದಾನಿ ಗ್ರೂಪ್‌ ವಂಚನೆ ಮಾಡದೆ. ಷೇರು ಮಾರುಕಟ್ಟೆಯಲ್ಲಿ ಅದಾನಿ ಗ್ರೂಪ್‌ ಷೇರು ಮೌಲ್ಯಗಳನ್ನು ಹೆಚ್ಚು ತೋರಿಸಿರುವುದು ವಂಚನೆಯಾಗಿದೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಇದಾದ ಬಳಿಕ ಅದಾನಿ ಗ್ರೂಪ್‌ ಷೇರು ಮೌಲ್ಯವು ದಿಢೀರನೆ ಕುಸಿದು ಭಾರಿ ನಷ್ಟವಾಗಿತ್ತು. ಅಲ್ಲದೆ, ಅದಾನಿ ಗ್ರೂಪ್‌ ದಿವಾಳಿಯಾಗುತ್ತದೆ ಎಂಬ ಮಾತುಗಳು ಕೇಳಿಬಂದಿದ್ದವು.

ಇದನ್ನೂ ಓದಿ: ಹಿಂಡನ್‌ಬರ್ಗ್‌ ಕೇಸ್; ಅದಾನಿಗೆ ಬಿಗ್‌ ರಿಲೀಫ್, ಸೆಬಿ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ ಎಂದ ಸುಪ್ರೀಂ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಸ್ವರ್ಣ ಪ್ರಿಯರಿಗೆ ಕೊಂಚ ನಿರಾಳ

Gold Rate Today:ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,765 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,380 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 54,120. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 67,650 ಮತ್ತು ₹ 6,76,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 59,040 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 73,800 ಮತ್ತು ₹ 7,38,000 ವೆಚ್ಚವಾಗಲಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಚಿನ್ನದ ದರ ಯಥಾಸ್ಥಿತಿ ಕಾಯ್ದುಕೊಂಡಿದೆ (Gold Rate Today). ನಿನ್ನೆ ಏಕಾಏಕಿ ಚಿನ್ನದ ದರ ಏರಿಕೆ ಕಂಡಿದ್ದರು ಸ್ವರ್ಣ ಪ್ರಿಯರಿಗೆ ಶಾಕ್‌ ನೀಡಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,765 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,380 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 54,120. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 67,650 ಮತ್ತು ₹ 6,76,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 59,040 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 73,800 ಮತ್ತು ₹ 7,38,000 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,780₹ 7,395
ಮುಂಬೈ₹ 6,765₹ 7,380
ಬೆಂಗಳೂರು₹ 6,765₹ 7,380
ಚೆನ್ನೈ₹ 6,820₹ 7,440

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆ ಕೂಡ ಏರಿಕೆಯಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 94.50 ಹಾಗೂ 8 ಗ್ರಾಂಗೆ ₹ 756 ಇದೆ. 10 ಗ್ರಾಂಗೆ ₹ 945 ಹಾಗೂ 1 ಕಿಲೋಗ್ರಾಂಗೆ ₹ 94,500 ಬೆಲೆ ಬಾಳುತ್ತದೆ.

ಚಿನ್ನದ ಕ್ಯಾರಟ್‌ ಎಂದರೇನು?

ಚಿನ್ನದ ಕ್ಯಾರಟ್‌ ಎಂಬುದು ಚಿನ್ನದ ಶುದ್ಧತೆಯನ್ನು ಅಳೆಯಲು ಬಳಸುವ ಪದ. ಚಿನ್ನದ ಶುದ್ಧತೆಯನ್ನು ಅಳೆಯಲು ಕ್ಯಾರಟ್ ಅನ್ನು ಒಂದು ಘಟಕವಾಗಿ ಬಳಸಲಾಗುತ್ತದೆ. ಕ್ಯಾರಟೇಜ್ ಹೆಚ್ಚು‌ ಇದ್ದಷ್ಟೂ ಚಿನ್ನವು ಶುದ್ಧವಾಗಿರುತ್ತದೆ. ಇತರ ಲೋಹಗಳೊಂದಿಗೆ ಮಿಶ್ರಿತ ಚಿನ್ನದ ಶುದ್ಧತೆಯ ಮಾಪನವೇ ‘ಕ್ಯಾರಟೇಜ್’. ಕ್ಯಾರಟ್‌ನ ಚಿಹ್ನೆಯು “K”

24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರಟ್ ಚಿನ್ನದಿಂದ ಖರೀದಿಸಲಾಗುತ್ತದೆ.

24 ಕ್ಯಾರಟ್ ಚಿನ್ನ ಮೃದುವಾಗಿರುತ್ತದೆ, ಕಡಿಮೆ ಸಾಂದ್ರತೆಯದಾಗಿರುತ್ತದೆ. ಆದ್ದರಿಂದ ಆಭರಣಗಳನ್ನು ಮಾಡಲು ಇದು ಸೂಕ್ತವಲ್ಲ. ಕಿವಿ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಬಳಸುವಂತಹ ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಸಾಧನಗಳಲ್ಲಿ 24k ಚಿನ್ನವನ್ನು ಬಳಸಲಾಗುತ್ತದೆ.

22 ಕ್ಯಾರೆಟ್ ಚಿನ್ನ ಇದರಲ್ಲಿ 22 ಭಾಗಗಳಲ್ಲಿ ಚಿನ್ನ ಹಾಗೂ ಉಳಿದ ಎರಡು ಭಾಗಗಳಲ್ಲಿ ಕೆಲವು ಇತರ ಲೋಹಗಳಿರುತ್ತವೆ. ಆಭರಣಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿ, ಸತು, ನಿಕಲ್ ಮತ್ತು ಇತರ ಮಿಶ್ರಲೋಹಗಳಂತಹ ಇತರ ಲೋಹಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ಚಿನ್ನದ ವಿನ್ಯಾಸವನ್ನು ಗಟ್ಟಿಗೊಳಿಸುತ್ತದೆ ಮತ್ತು ಆಭರಣವನ್ನು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ. 22 ಕ್ಯಾರಟ್ ಚಿನ್ನವು 91.67 ಪ್ರತಿಶತ ಚಿನ್ನವನ್ನು ಹೊಂದಿದ್ದು, ಉಳಿದ 8.33 ಪ್ರತಿಶತ ಬೇರೆ ಲೋಹಗಳಿಂದ ಮಾಡಲ್ಪಟ್ಟಿರುತ್ತದೆ.

18 ಕ್ಯಾರಟ್ ಚಿನ್ನವು 75 ಪ್ರತಿಶತ ಚಿನ್ನವನ್ನು ಒಳಗೊಂಡಿರುತ್ತದೆ. ಉಳಿದ ತಾಮ್ರ ಅಥವಾ ಬೆಳ್ಳಿಯಂತಹ ಇತರ ಲೋಹಗಳ 25 ಪ್ರತಿಶತದೊಂದಿಗೆ ಮಿಶ್ರಣವಾಗಿರುತ್ತದೆ. ಸ್ಟಡೆಡ್ ಆಭರಣಗಳು ಮತ್ತು ವಜ್ರದ ಆಭರಣಗಳನ್ನು 18 ಕ್ಯಾರಟ್ ಚಿನ್ನವನ್ನು ಬಳಸಿ ತಯಾರಿಸಲಾಗುತ್ತದೆ.

ಇದನ್ನೂ ಓದಿ: Project Zorawar: ಚೀನಾಗೆ ಪೆಟ್ಟು ಕೊಡಲು ದೇಶೀಯವಾಗಿ ಯುದ್ಧ ಟ್ಯಾಂಕ್‌ ಉತ್ಪಾದನೆ; ಏನಿವುಗಳ ವಿಶೇಷ?

Continue Reading

ಮನಿ-ಗೈಡ್

Money Guide: ಹಿರಿಯ ನಾಗರಿಕರು ಮಾಸಿಕ 20,000 ರೂ. ಆದಾಯ ಗಳಿಸಲು ಈ ಯೋಜನೆಯಲ್ಲಿ ಹೂಡಿಕೆ ಮಾಡಿ

Money Guide: 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಸೀನಿಯರ್‌ ಸಿಟಿಜನ್ಸ್‌ ಸೇವಿಂಗ್‌ ಸ್ಕೀಮ್‌ ಅತ್ಯತ್ತಮ ಹೂಡಿಕೆ ಯೋಜನೆ ಎನಿಸಿಕೊಂಡಿದೆ. ಸೀನಿಯರ್‌ ಸಿಟಿಜನ್ಸ್‌ ಸೇವಿಂಗ್‌ ಸ್ಕೀಮ್‌ ವಿಶೇಷವಾಗಿ ಹಿರಿಯ ನಾಗರಿಕರಿಗೆಂದೇ ರೂಪಿಸಲಾಗಿದೆ. ಇತ್ತೀಚೆಗೆ ಬಡ್ಡಿ ದರವೂ ಏರಿಕೆಯಾಗಿದೆ. ಸರ್ಕಾರಿ ಬೆಂಬಲಿತ ಯೋಜನೆ ಇದಾಗಿರುವುದರಿಂದ ಹೂಡಿಕೆ ಮಾಡುವುದರಿಂದ ಅಪಾಯವೂ ಕಡಿಮೆ. ಒಟ್ಟಿನಲ್ಲಿ ಸುರಕ್ಷಿತ ಹೂಡಿಕೆಗೆ ಆದ್ಯತೆ ನೀಡುವವರಿಗೆ ಇದು ಉತ್ತಮ ಆಯ್ಕೆ.

VISTARANEWS.COM


on

Money Guide
Koo

ಬೆಂಗಳೂರು: ನಿವೃತ್ತಿಯ ನಂತರ ಹಾಯಾಗಿ, ಯಾವುದೇ ಚಿಂತೆ ಇಲ್ಲದೆ ಜೀವನ ಕಳೆಯಬೇಕು ಎನ್ನುವುದು ಬಹುತೇಕರ ಕನಸು. ಈ ರೀತಿಯ ನೆಮ್ಮದಿಯ ಜೀವನಕ್ಕೆ ಆರ್ಥಿಕವಾಗಿ ಸ್ವಾವಲಂಬಿಯಾಗಿರುವುದು ಮುಖ್ಯ. ಮಾಸಿಕ ಪಿಂಚಣಿ ಇಲ್ಲದಿದ್ದರೂ ಚಿಂತೆ ಬೇಡ. ಈ ವಿಶೇಷ ಯೋಜನೆಯಲ್ಲಿ ಹೂಡಿಕೆ ಮಾಡಿದರೆ ಪ್ರತಿ ತಿಂಗಳು ನಿರ್ದಿಷ್ಟ ಆದಾಯ ಗಳಿಬಹುದು. ಆ ಯೋಜನೆಯೇ ಸೀನಿಯರ್‌ ಸಿಟಿಜನ್ಸ್‌ ಸೇವಿಂಗ್‌ ಸ್ಕೀಮ್‌ (Senior Citizens Savings Scheme-SCSS). 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಇದು ಉತ್ತಮ ಹೂಡಿಕೆಯ ಆಯ್ಕೆ. ಈ ಬಗ್ಗೆ ವಿವರ ಮನಿಗೈಡ್‌ (Money Guide)ನಲ್ಲಿದೆ.

ಏನಿದು ಯೋಜನೆ?

ಸೀನಿಯರ್‌ ಸಿಟಿಜನ್ಸ್‌ ಸೇವಿಂಗ್‌ ಸ್ಕೀಮ್‌ ವಿಶೇಷವಾಗಿ ಹಿರಿಯ ನಾಗರಿಕರಿಗೆಂದೇ ರೂಪಿಸಲಾಗಿದೆ. ಇತ್ತೀಚೆಗೆ ಬಡ್ಡಿ ದರವೂ ಏರಿಕೆಯಾಗಿದೆ. ಈ ಯೋಜನೆಯಲ್ಲಿ 50,000 ರೂ. ತನಕದ ಬಡ್ಡಿ ಆದಾಯ ತೆರಿಗೆ ಮುಕ್ತ. ಪಿಪಿಎಫ್‌ಗಿಂತ ಹೆಚ್ಚಿನ ಆದಾಯವನ್ನು ನೀಡುತ್ತದೆ. ಹೀಗಿದ್ದರೂ ಇದರಲ್ಲಿ ವೈಯಕ್ತಿಕವಾಗಿ ಗರಿಷ್ಠ 15 ಲಕ್ಷ ರೂ. ಹೂಡಿಕೆ ಮಾಡಬಹುದು. ಈ ಯೋಜನೆಯು ಐದು ವರ್ಷಗಳ ಅವಧಿಯನ್ನು ಹೊಂದಿದೆ. ಇನ್ನೂ ಮೂರು ವರ್ಷಗಳವರೆಗೆ ವಿಸ್ತರಿಸಬಹುದು. ಎಸ್‌ಸಿಎಸ್‌ಎಸ್‌ ಯೋಜನೆಯಲ್ಲಿ ಸರ್ಕಾರ ಇತ್ತೀಚೆಗೆ ಹಲವು ಬದಲಾವಣೆಗಳನ್ನು ತಂದಿದೆ. ಒಬ್ಬ ವ್ಯಕ್ತಿಯು ನಿವೃತ್ತಿ ಹೊಂದಿದ ದಿನಾಂಕದಿಂದ ಮೂರು ತಿಂಗಳೊಳಗೆ ಹಿರಿಯ ನಾಗರಿಕರ ಉಳಿತಾಯ ಯೋಜನೆಯಡಿ ಖಾತೆಯನ್ನು ತೆರೆಯಬಹುದು. ಅಲ್ಲದೆ ಹೊಸ ಅಧಿಸೂಚನೆಯು, ಸರ್ಕಾರಿ ಉದ್ಯೋಗಿಯ ಸಂಗಾತಿಯೂ ಯೋಜನೆಯಲ್ಲಿ ಹೂಡಿಕೆ ಮಾಡಲು ಅನುವು ಮಾಡಿಕೊಡುತ್ತದೆ. 

ಮೊದಲೇ ಹೇಳಿದಂತೆ ಈ ಯೋಜನೆಯನ್ನು ಹಿರಿಯ ನಾಗರಿಕರಿಗೆಂದೇ ರೂಪಿಸಲಾಗಿದೆ. ಸರ್ಕಾರಿ ಬೆಂಬಲಿತ ಯೋಜನೆ ಇದಾಗಿರುವುದರಿಂದ ಹೂಡಿಕೆ ಮಾಡುವುದರಿಂದ ಅಪಾಯವೂ ಕಡಿಮೆ. ಒಟ್ಟಿನಲ್ಲಿ ಸುರಕ್ಷಿತ ಹೂಡಿಕೆಗೆ ಆದ್ಯತೆ ನೀಡುವವರಿಗೆ ಇದು ಉತ್ತಮ ಆಯ್ಕೆ ಎನಿಸಿಕೊಂಡಿದೆ.

ಯಾರೆಲ್ಲ ಹೂಡಿಕೆ ಮಾಡಬಹುದು?

ಸರ್ಕಾರದಿಂದಲೇ ನಡೆಸಲಾಗುವ ಸಣ್ಣ ಉಳಿತಾಯ ಯೋಜನೆ ಇದಾಗಿದ್ದು, 60 ವರ್ಷ ಮೇಲ್ಪಟ್ಟು ವಯಸ್ಸಿನವರು ಅಥವಾ ವಿಆರ್‌ಎಸ್‌ ನಿವೃತ್ತಿ ಪಡೆದ 55 ವರ್ಷ ವಯಸ್ಸಿನವರು ಈ ಯೋಜನೆಯಲ್ಲಿ ಹೂಡಿಕೆ ಮಾಡಲು ಅರ್ಹರು. ವೈಯಕ್ತಿಕವಾಗಿ ಅಥವಾ ಸಂಗಾತಿಯೊಂದಿಗೆ ಜಂಟಿಯಾಗಿ ಖಾತೆಯನ್ನು ತೆರೆಯಬಹುದು.

ಬಡ್ಡಿ ದರ

ಅಂಚೆ ಕಚೇರಿ ಅಥವಾ ಬ್ಯಾಂಕ್‌ನಲ್ಲಿ ಎಸ್‌ಸಿಎಸ್‌ಎಸ್‌ ಖಾತೆ ತೆರೆಯಬಹುದು. ಸದ್ಯ ಈ ಯೋಜನೆಗೆ ವಾರ್ಷಿಕ ಶೇ. 8.2ರಷ್ಟು ಬಡ್ಡಿ ಇದೆ. ಕನಿಷ್ಠ ಹೂಡಿಕೆ 1,000 ರೂ. ಮತ್ತು ಗರಿಷ್ಠ ಹೂಡಿಕೆ 30 ಲಕ್ಷ ರೂ. ವಿಶೇಷ ಎಂದರೆ ತೆರಿಗೆ ಸೆಕ್ಷನ್‌ 80 ಸಿ ಅಡಿಯಲ್ಲಿ ಟ್ಯಾಕ್ಸ್‌ ಡಿಡಕ್ಷನ್‌ಗೂ ಅವಕಾಶ ಇದೆ.

ಮಾಸಿಕ 20 ಸಾವಿರ ರೂ. ಪಡೆಯುವುದು ಹೇಗೆ?

ಈ ಯೋಜನೆ ಮೂಲಕ ಮಾಸಿಕ 20 ಸಾವಿರ ರೂ. ಪಡೆಯುವುದು ಹೇಗೆ ಎನ್ನುವುದನ್ನು ಉದಾಹರಣೆ ಮೂಲಕ ನೋಡೋಣ. ಸದ್ಯ ಎಸ್‌ಸಿಎಸ್‌ಎಸ್‌ ಯೋಜನೆಗೆ 8.2 ಬಡ್ಡಿ ಲಭಿಸುವ ಹಿನ್ನೆಲೆಯಲ್ಲಿ ನೀವು 30 ಲಕ್ಷ ರೂ. ಹೂಡಿಕೆ ಮಾಡಿದರೆ ಪ್ರತಿ ವರ್ಷ 2.46 ಲಕ್ಷ ರೂ. ಬಡ್ಡಿ ಲಭಿಸುತ್ತದೆ. ಅಂದರೆ ಪ್ರತಿ ತಿಂಗಳು 20,000 ರೂ. ಸಿಕ್ಕಂತಾಗುತ್ತದೆ. ಒಟ್ಟಿನಲ್ಲಿ ಇದು ಹಿರಿಯ ನಾಗರಿಕರಿಗೆ ಉತತ್ಮ ಯೋಜನೆ ಎನಿಸಿಕೊಂಡಿದೆ.

ಇದನ್ನೂ ಓದಿ: Money Guide: ನಿವೃತ್ತಿಯ ನಂತರವೂ ಆರ್ಥಿಕವಾಗಿ ಸದೃಢರಾಗಬೇಕೆ?; ಈ ಯೋಜನೆಗಳಲ್ಲಿ ಹೂಡಿಕೆ ಮಾಡಿ

Continue Reading

ದೇಶ

Union Budget 2024: ಜುಲೈ 23ರಂದು ಕೇಂದ್ರ ಬಜೆಟ್‌ ಮಂಡನೆ; ಸಾಮಾನ್ಯ ಜನರಿಗೆ ಏನಿದೆ ನಿರೀಕ್ಷೆ?

Union Budget 2024: ನಿರ್ಮಲಾ ಸೀತಾರಾಮನ್‌ ಅವರು ಫೆಬ್ರವರಿ 1ರಂದು ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಬಜೆಟ್‌ ಮಂಡಿಸಿದ್ದರು. ಇದು ಮಧ್ಯಂತರ ಬಜೆಟ್‌ ಆದ ಕಾರಣ ಮಹತ್ವದ ಘೋಷಣೆಗಳನ್ನು ಮಾಡಿರಲಿಲ್ಲ. ಆದರೆ, ನೂತನ ಸರ್ಕಾರ ರಚನೆಯಾಗಿದ್ದು, ಜುಲೈ 23ರಂದು ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಲಾಗುತ್ತದೆ.

VISTARANEWS.COM


on

Union Budget 2024
Koo

ನವದೆಹಲಿ: ದೇಶದ ಜನ ಕುತೂಹಲದಿಂದ ಕಾಯುತ್ತಿರುವ ಕೇಂದ್ರ ಬಜೆಟ್‌ಗೆ (Union Budget 2024) ದಿನಾಂಕ ನಿಗದಿಯಾಗಿದೆ. ಜುಲೈ 22ರಿಂದ ಆಗಸ್ಟ್‌ 12ರವರೆಗೆ ಬಜೆಟ್‌ ಅಧಿವೇಶನ (Union Budget Session) ನಡೆಯಲಿದ್ದು, ಜುಲೈ 23ರಂದು ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ದಾಖಲೆಯ ಏಳನೇ ಬಾರಿಗೆ ಬಜೆಟ್‌ ಮಂಡಿಸಲಿದ್ದಾರೆ. ಬಜೆಟ್‌ನಲ್ಲಿ ತೆರಿಗೆ ವಿನಾಯಿತಿ, ಬಡ-ಮಧ್ಯಮ ವರ್ಗದವರಿಗೆ ಹಲವು ರೀತಿಯಲ್ಲಿ ಅನುಕೂಲವಾಗುವ ಯೋಜನೆಗಳ ಘೋಷಣೆ ಕುರಿತು ನಿರೀಕ್ಷೆ ಹೆಚ್ಚಾಗಿದೆ.

ಕೇಂದ್ರ ಸಚಿವ ಕಿರಣ್‌ ರಿಜಿಜು ಅವರು ಬಜೆಟ್‌ ಅಧಿವೇಶನದ ಕುರಿತು ಮಾಹಿತಿ ನೀಡಿದ್ದಾರೆ. “ಜುಲೈ 22ರಿಂದ ಆಗಸ್ಟ್‌ 12ರವರೆಗೆ ಬಜೆಟ್‌ ಅಧಿವೇಶನ ನಡೆಯಲಿದೆ. ಜುಲೈ 23ರಂದು ಬಜೆಟ್‌ ಮಂಡಿಸಲಾಗುತ್ತದೆ” ಎಂಬುದಾಗಿ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದು ಎನ್‌ಡಿಎ ಸರ್ಕಾರದ ಮೂರನೇ ಅವಧಿಯ ಮೊದಲ ಮುಂಗಡಪತ್ರವಾಗಿದೆ.

ಏನೆಲ್ಲ ಇವೆ ನಿರೀಕ್ಷೆ?

“ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಹೊಸ ತೆರಿಗೆ ಸ್ಲ್ಯಾಬ್‌ ಘೋಷಣೆ ಮಾಡುತ್ತದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಏರಿಸುವ ಜತೆಗೆ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಗಳಿಸುವವರಿಗೆ ಹಲವು ರೀತಿಯ ಡಿಡಕ್ಷನ್‌ಗಳ ಮೂಲಕ ತೆರಿಗೆ ಹೊರೆಯನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ” ಎಂದು ಉನ್ನತ ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಇರುವವರಿಗೆ ಈಗ ಇರುವ ಶೇ.30ರ ತೆರಿಗೆ ಬದಲು ಶೇ.25ರಷ್ಟು ತೆರಿಗೆ ವಿಧಿಸಲಾಗುತ್ತದೆ. ಇದು ಕೂಡ ಹೊಸ ಸ್ಲ್ಯಾಬ್‌ನಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ.

ಹೊಸ ತೆರಿಗೆಯ ಸ್ಲ್ಯಾ ಬ್‌ ಹೀಗಿದೆ

ಆದಾಯವಿಧಿಸುವ ತೆರಿಗೆ
0-3 ಲಕ್ಷ ರೂ.ತೆರಿಗೆ ಇರಲ್ಲ
3-6 ಲಕ್ಷ ರೂ.5%
6-9 ಲಕ್ಷ ರೂ.10%
9-12 ಲಕ್ಷ ರೂ.15%
12-15 ಲಕ್ಷ ರೂ.20%
15 ಲಕ್ಷ ರೂ.ಗಿಂತ ಹೆಚ್ಚು30%

ನಿರ್ಮಲಾ ಸೀತಾರಾಮನ್‌ ಅವರು ಫೆಬ್ರವರಿ 1ರಂದು ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಬಜೆಟ್‌ ಮಂಡಿಸಿದ್ದರು. ಇದು ಮಧ್ಯಂತರ ಬಜೆಟ್‌ ಆದ ಕಾರಣ ಮಹತ್ವದ ಘೋಷಣೆಗಳನ್ನು ಮಾಡಿರಲಿಲ್ಲ. ಆದರೆ, ನೂತನ ಸರ್ಕಾರ ರಚನೆಯಾಗಿದ್ದು, ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಲಾಗುತ್ತದೆ. ಉದ್ಯೋಗ ಸೃಷ್ಟಿ, ಬಡವರು ಹಾಗೂ ಮಧ್ಯಮ ವರ್ಗದವರಿಗೆ ಕೊಡುಗೆ, ತೆರಿಗೆ ಹೊರೆ ಇಳಿಸುವುದು ಸೇರಿ ಹಲವು ಅಂಶಗಳು ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್‌ನ ಪ್ರಮುಖ ಅಂಶಗಳಾಗಿವೆ ಎಂದು ತಿಳಿದುಬಂದಿದೆ.

ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ

ನಿರ್ಮಲಾ ಸೀತಾರಾಮನ್‌ ಅವರು ಇದೇ ತಿಂಗಳು ಪೂರ್ಣಪ್ರಮಾಣದ ಬಜೆಟ್‌ ಮಂಡಿಸಿದರೆ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್‌ ಮಂಡಿಸಿದ್ದಾರೆ. ಈಗ ಏಳನೇ ಬಾರಿಗೆ ಬಜೆಟ್‌ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್‌ ಮಂಡಿಸಿದ ದಾಖಲೆ ಮಾಡಿದ್ದಾರೆ. ಇದನ್ನು ನಿರ್ಮಲಾ ಸೀತಾರಾಮನ್‌ ಅವರು ಮುರಿಯಲಿದ್ದಾರೆ.

ಇದನ್ನೂ ಓದಿ: Union Budget 2024: ಬಜೆಟ್‌ನಲ್ಲಿ ಹೊಸ ಟ್ಯಾಕ್ಸ್‌ ಸ್ಲ್ಯಾಬ್‌ ಘೋಷಣೆ ಸಾಧ್ಯತೆ; ಯಾರಿಗೆಲ್ಲ ಅನುಕೂಲ?

Continue Reading

ವಾಣಿಜ್ಯ

Gold Rate Today: ಮತ್ತೆ ಏರಿಕೆ ಕಂಡ ಚಿನ್ನದ ದರ; ಸ್ವರ್ಣ ಪ್ರಿಯರಿಗೆ ಶಾಕ್‌

Gold Rate Today: 24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರಟ್ ಚಿನ್ನದಿಂದ ಖರೀದಿಸಲಾಗುತ್ತದೆ.

VISTARANEWS.COM


on

gold rate today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಮತ್ತೆ ಚಿನ್ನದ ದರ ಏರಿಕೆ ಕಂಡಿದ್ದು, ಗ್ರಾಹರಿಗೆ ಶಾಕ್‌ ನೀಡಿದೆ. (Gold Rate Today). ನಿನ್ನೆ ಯಥಾಸ್ಥಿತಿ ಕಾಯ್ದುಕೊಂಡಿರುವ ಹಿನ್ನಲೆಯಲ್ಲಿ ಗ್ರಾಹಕರು ತುಸು ಸಮಾಧಾನ ಪಟ್ಟುಕೊಂಡಿದ್ದರು.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,765 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,380 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 54,120. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 67,650 ಮತ್ತು ₹ 6,76,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 59,040 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 73,800 ಮತ್ತು ₹ 7,38,000 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,780₹ 7,395
ಮುಂಬೈ₹ 6,765₹ 7,380
ಬೆಂಗಳೂರು₹ 6,765₹ 7,380
ಚೆನ್ನೈ₹ 6,820₹ 7,440

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆ ಕೂಡ ಏರಿಕೆಯಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 93.25 ಹಾಗೂ 8 ಗ್ರಾಂಗೆ ₹ 746 ಇದೆ. 10 ಗ್ರಾಂಗೆ ₹ 932.50 ಹಾಗೂ 1 ಕಿಲೋಗ್ರಾಂಗೆ ₹ 93,250 ಬೆಲೆ ಬಾಳುತ್ತದೆ.

ಚಿನ್ನದ ಕ್ಯಾರಟ್‌ ಎಂದರೇನು?

ಚಿನ್ನದ ಕ್ಯಾರಟ್‌ ಎಂಬುದು ಚಿನ್ನದ ಶುದ್ಧತೆಯನ್ನು ಅಳೆಯಲು ಬಳಸುವ ಪದ. ಚಿನ್ನದ ಶುದ್ಧತೆಯನ್ನು ಅಳೆಯಲು ಕ್ಯಾರಟ್ ಅನ್ನು ಒಂದು ಘಟಕವಾಗಿ ಬಳಸಲಾಗುತ್ತದೆ. ಕ್ಯಾರಟೇಜ್ ಹೆಚ್ಚು‌ ಇದ್ದಷ್ಟೂ ಚಿನ್ನವು ಶುದ್ಧವಾಗಿರುತ್ತದೆ. ಇತರ ಲೋಹಗಳೊಂದಿಗೆ ಮಿಶ್ರಿತ ಚಿನ್ನದ ಶುದ್ಧತೆಯ ಮಾಪನವೇ ‘ಕ್ಯಾರಟೇಜ್’. ಕ್ಯಾರಟ್‌ನ ಚಿಹ್ನೆಯು “K”

24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರಟ್ ಚಿನ್ನದಿಂದ ಖರೀದಿಸಲಾಗುತ್ತದೆ.

24 ಕ್ಯಾರಟ್ ಚಿನ್ನ ಮೃದುವಾಗಿರುತ್ತದೆ, ಕಡಿಮೆ ಸಾಂದ್ರತೆಯದಾಗಿರುತ್ತದೆ. ಆದ್ದರಿಂದ ಆಭರಣಗಳನ್ನು ಮಾಡಲು ಇದು ಸೂಕ್ತವಲ್ಲ. ಕಿವಿ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಬಳಸುವಂತಹ ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಸಾಧನಗಳಲ್ಲಿ 24k ಚಿನ್ನವನ್ನು ಬಳಸಲಾಗುತ್ತದೆ.

22 ಕ್ಯಾರೆಟ್ ಚಿನ್ನ ಇದರಲ್ಲಿ 22 ಭಾಗಗಳಲ್ಲಿ ಚಿನ್ನ ಹಾಗೂ ಉಳಿದ ಎರಡು ಭಾಗಗಳಲ್ಲಿ ಕೆಲವು ಇತರ ಲೋಹಗಳಿರುತ್ತವೆ. ಆಭರಣಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿ, ಸತು, ನಿಕಲ್ ಮತ್ತು ಇತರ ಮಿಶ್ರಲೋಹಗಳಂತಹ ಇತರ ಲೋಹಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ಚಿನ್ನದ ವಿನ್ಯಾಸವನ್ನು ಗಟ್ಟಿಗೊಳಿಸುತ್ತದೆ ಮತ್ತು ಆಭರಣವನ್ನು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ. 22 ಕ್ಯಾರಟ್ ಚಿನ್ನವು 91.67 ಪ್ರತಿಶತ ಚಿನ್ನವನ್ನು ಹೊಂದಿದ್ದು, ಉಳಿದ 8.33 ಪ್ರತಿಶತ ಬೇರೆ ಲೋಹಗಳಿಂದ ಮಾಡಲ್ಪಟ್ಟಿರುತ್ತದೆ.

18 ಕ್ಯಾರಟ್ ಚಿನ್ನವು 75 ಪ್ರತಿಶತ ಚಿನ್ನವನ್ನು ಒಳಗೊಂಡಿರುತ್ತದೆ. ಉಳಿದ ತಾಮ್ರ ಅಥವಾ ಬೆಳ್ಳಿಯಂತಹ ಇತರ ಲೋಹಗಳ 25 ಪ್ರತಿಶತದೊಂದಿಗೆ ಮಿಶ್ರಣವಾಗಿರುತ್ತದೆ. ಸ್ಟಡೆಡ್ ಆಭರಣಗಳು ಮತ್ತು ವಜ್ರದ ಆಭರಣಗಳನ್ನು 18 ಕ್ಯಾರಟ್ ಚಿನ್ನವನ್ನು ಬಳಸಿ ತಯಾರಿಸಲಾಗುತ್ತದೆ.

ಇದನ್ನೂ ಓದಿ:BJP Muslim Candidate: ಉತ್ತರ ಪ್ರದೇಶದಲ್ಲಿ ಮೊದಲ ಬಾರಿಗೆ ಮುಸ್ಲಿಂ ಅಭ್ಯರ್ಥಿಗೆ ಬಿಜೆಪಿ ಟಿಕೆಟ್? ಏನಿದರ ಗುಟ್ಟು?

Continue Reading
Advertisement
Rat Fever
ಪ್ರಮುಖ ಸುದ್ದಿ19 mins ago

Rat fever: ಡೆಂಗ್ಯೂ ರುದ್ರ ನರ್ತನದ ನಡುವೆ ಹಾವೇರಿಯಲ್ಲಿ ಇಲಿ ಜ್ವರ ಪತ್ತೆ; ಬಾಲಕನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ!

Gautam Gambhir
ಕ್ರೀಡೆ37 mins ago

Gautam Gambhir: ಕೆಕೆಆರ್ ತಂಡದ ಮೆಂಟರ್​ ಸ್ಥಾನಕ್ಕೆ ಗಂಭೀರ್​ ರಾಜೀನಾಮೆ?; ಕೋಚ್​ ಆಗುವುದು ಖಚಿತ

Wild Animals Attack
ವಿಜಯನಗರ42 mins ago

Wild Animals Attack: ವಿಜಯನಗರ: ನಾಡಿಗೆ ನುಗ್ಗಿದ ಕರಡಿಯನ್ನು ರಾತ್ರೋರಾತ್ರಿ ಕಾಡಿಗೆ ಅಟ್ಟಿದ ಅರಣ್ಯ ಇಲಾಖೆ ಸಿಬ್ಬಂದಿ

Actor Darshan case Fingerprint match of accused in Renukaswamy case
ಸ್ಯಾಂಡಲ್ ವುಡ್49 mins ago

Actor Darshan: ರೇಣುಕಾಸ್ವಾಮಿ ಪ್ರಕರಣದಲ್ಲಿ ಆರೋಪಿಗಳ ಫಿಂಗರ್ ಪ್ರಿಂಟ್ ಮ್ಯಾಚ್; ಸ್ಫೋಟಕ ಮಾಹಿತಿ ಬಹಿರಂಗ!

Gold Rate Today
ಕರ್ನಾಟಕ50 mins ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಸ್ವರ್ಣ ಪ್ರಿಯರಿಗೆ ಕೊಂಚ ನಿರಾಳ

Short Circuit
ಕರ್ನಾಟಕ1 hour ago

Short Circuit: ಮೈಸೂರು ವಿವಿ ಸಂಶೋಧಕರ ವಿದ್ಯಾರ್ಥಿ ನಿಲಯದಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌

IND vs ZIM
ಕ್ರೀಡೆ1 hour ago

IND vs ZIM: ಗೆಲುವಿನ ಹಾದಿಗೆ ಮರಳುವುದೇ ಶುಭಮನ್​ ಗಿಲ್​ ಪಡೆ?; ಇಂದು ದ್ವಿತೀಯ ಟಿ20

Raj Tarun’s Heroine Malvi Malhotra Files Complaint
ಟಾಲಿವುಡ್2 hours ago

Raj Tarun: ಯುವ ನಟ ರಾಜ್ ತರುಣ್ ಮಾಜಿ ಪ್ರೇಯಸಿ ವಿರುದ್ಧ ದೂರು ದಾಖಲಿಸಿದ ನಟಿ!

CBI Arrest
ದೇಶ2 hours ago

CBI Arrest: ರೈಲ್ವೇ ಟೆಂಡರ್‌ನಲ್ಲಿ ಭಾರೀ ಗೋಲ್‌ಮಾಲ್;‌ ಸರ್ಕಾರಿ ಅಧಿಕಾರಿಗಳು ಸಿಬಿಐ ಬಲೆಗೆ

Rain News
ಮಳೆ2 hours ago

Rain News: ಕರಾವಳಿಯಲ್ಲಿ ಮುಂದುವರಿದ ವರುಣನ ಅಬ್ಬರ; ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ7 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ19 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ21 hours ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ22 hours ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು1 day ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ1 day ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ1 day ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ2 days ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ2 days ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ2 days ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

ಟ್ರೆಂಡಿಂಗ್‌