Aditya L1: ಲ್ಯಾಗ್ರೇಂಜ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದ ಆದಿತ್ಯ ಎಲ್‌ 1; ಇಸ್ರೋಗೆ ಭಾರಿ ಮುನ್ನಡೆ - Vistara News

ದೇಶ

Aditya L1: ಲ್ಯಾಗ್ರೇಂಜ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದ ಆದಿತ್ಯ ಎಲ್‌ 1; ಇಸ್ರೋಗೆ ಭಾರಿ ಮುನ್ನಡೆ

Aditya L1: ಕಕ್ಷೆಯ ಮೊದಲ ಸುತ್ತು ಪೂರ್ಣಗೊಳಿಸಿರುವ ಕುರಿತು ಇಸ್ರೋ ಮಾಹಿತಿ ನೀಡಿದೆ. “ಆದಿತ್ಯ ಎಲ್‌ 1 ಮಿಷನ್‌ ಎಲ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದೆ. ಜನವರಿ 6ರಂದು ಕಕ್ಷೆ ಸೇರಿದ ಇದು 178 ದಿನಗಳ ಬಳಿಕ ಮೊದಲ ಸುತ್ತು ಪೂರ್ಣಗೊಳಿಸಿದೆ.

VISTARANEWS.COM


on

Aditya L1
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾರತದ ಚೊಚ್ಚಲ ಬಾಹ್ಯಾಕಾಶ ಆಧಾರಿತ ಸೌರ ಮಿಷನ್ ಆಗಿರುವ ಆದಿತ್ಯ ಎಲ್‌1 (Aditya L1) ಬಾಹ್ಯಾಕಾಶ ನೌಕೆಯು ಮತ್ತೊಂದು ಇತಿಹಾಸ ಸೃಷ್ಟಿಸಿದೆ. ಸೂರ್ಯ ಮತ್ತು ಭೂಮಿ ನಡುವಿನ ಗುರುತ್ವಾಕರ್ಷಣೆ ನಿಷ್ಕ್ರಿಯವಾಗುವ ‘ಲ್ಯಾಗ್ರೇಂಜ್‌ ಪಾಯಿಂಟ್‌’ನ (L1) ಪ್ರಭಾವಲಯದ (Halo) ಮೊದಲ ಸುತ್ತು ಪೂರ್ಣಗೊಳಿಸಿದೆ. ಇದರೊಂದಿಗೆ ಕಕ್ಷೆ ಸೇರಿದ (ಇದೇ ವರ್ಷದ ಜನವರಿ 6ರಂದು ಕಕ್ಷೆ ಸೇರಿದೆ) 178 ದಿನಗಳ ಬಳಿಕ ಲ್ಯಾಗ್ರೇಂಜ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದಂತಾಗಿದೆ.

ಕಕ್ಷೆಯ ಮೊದಲ ಸುತ್ತು ಪೂರ್ಣಗೊಳಿಸಿರುವ ಕುರಿತು ಇಸ್ರೋ ಮಾಹಿತಿ ನೀಡಿದೆ. “ಆದಿತ್ಯ ಎಲ್‌ 1 ಮಿಷನ್‌ ಎಲ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದೆ. ಜನವರಿ 6ರಂದು ಕಕ್ಷೆ ಸೇರಿದ ಇದು 178 ದಿನಗಳ ಬಳಿಕ ಮೊದಲ ಸುತ್ತು ಪೂರ್ಣಗೊಳಿಸಿದೆ. ಇದರೊಂದಿಗೆ ಎರಡನೇ ಸುತ್ತಿನತ್ತ ಆದಿತ್ಯ ಎಲ್‌ 1 ಮಿಷನ್‌ ದಾಪುಗಾಲು ಇಟ್ಟಿದೆ” ಎಂಬುದಾಗಿ ಇಸ್ರೋ ತಿಳಿಸಿದೆ. ಇದು ಸೂರ್ಯನ ಕುರಿತು ಅಧ್ಯಯನ ಮಾಡುವಲ್ಲಿ ಇಸ್ರೋಗೆ ಸಿಕ್ಕ ಮಹತ್ವದ ಮುನ್ನಡೆಯಾಗಿದೆ ಎಂದು ಹೇಳಲಾಗುತ್ತಿದೆ.

ಸೆಪ್ಟೆಂಬರ್‌ 2ರಂದು ಆದಿತ್ಯ ಎಲ್‌ 1 ಮಿಷನ್‌ ಉಡಾವಣೆಯಾಗಿದ್ದು, ಸೆಪ್ಟೆಂಬರ್‌ 3ರಂದು ಮೊದಲ ಕಕ್ಷೆ ಬದಲಾವಣೆಯನ್ನು ಯಶಸ್ವಿಯಾಗಿ ಪೂರೈಸಿತು. ಸೆಪ್ಟೆಂಬರ್‌ 5ರಂದು ಎರಡನೇ ಬಾರಿ ಕಕ್ಷೆ ಬದಲಾವಣೆ ಮಾಡಿಕೊಂಡಿತು. ಒಟ್ಟು ಐದು ಬಾರಿ ಕಕ್ಷೆ ಬದಲಾವಣೆ ಮಾಡಿಕೊಂಡ ನಂತರ ಅಧ್ಯಯನ ನಡೆಸಲು ಉದ್ದೇಶಿಸಿರುವ ಲ್ಯಾಂಗ್ರೇಜ್‌ ಪಾಯಿಂಟ್‌ನತ್ತ (L1 Point) ಆದಿತ್ಯ ಎಲ್‌ 1 ಮಿಷನ್‌ ಸಾಗಿದೆ.

ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಮಿಷನ್‌ ಹೊತ್ತುಕೊಂಡು ಪಿಎಸ್‌ಎಲ್‌ವಿ-ಸಿ 57 (PSLV-C57 ) ರಾಕೆಟ್‌ 2023ರ ಸೆಪ್ಟೆಂಬರ್‌ 2ರಂದು ನಭಕ್ಕೆ ಹಾರಿದೆ. ನಭಕ್ಕೆ ನೆಗೆದ ಕೆಲವೇ ನಿಮಿಷಗಳಲ್ಲಿ ರಾಕೆಟ್‌ನಿಂದ ಆದಿತ್ಯ ಎಲ್‌ 1 ಮಿಷನ್‌ ಬೇರ್ಪಟ್ಟಿದೆ. ಸೂರ್ಯನ ಮೇಲ್ಮೈನಲ್ಲಿ ಮಾತ್ರ ಆದಿತ್ಯ ಎಲ್‌ 1 ಮಿಷನ್‌ ಅಧ್ಯಯನ ನಡೆಸುತ್ತಿದೆ. ಭೂಮಿಯಿಂದ ಸೂರ್ಯನ ದಿಕ್ಕಿನಲ್ಲಿ 15 ಲಕ್ಷ ಕಿಲೋಮೀಟರ್‌ ಸಂಚರಿಸಿ ಅಧ್ಯಯನ ನಡೆಸುತ್ತಿದೆ. ಭೂಮಿಯಿಂದ 15 ಲಕ್ಷ ಕಿಲೊಮೀಟರ್‌ ಅಂದರೆ, ಭೂಮಿಯಿಂದ ಸೂರ್ಯನಿಗಿರುವ ದೂರದಲ್ಲಿ ಶೇ.1ರಷ್ಟು ಮಾತ್ರ ಕ್ರಮಿಸಿದಂತೆ.

ಇದನ್ನೂ ಓದಿ: Pushpak Launch: ‘ಪುಷ್ಪಕ್‌’ ರಾಕೆಟ್ ಹ್ಯಾಟ್ರಿಕ್‌ ಉಡಾವಣೆ ಯಶಸ್ವಿ-ಇಸ್ರೋದಿಂದ ಮಹತ್ವದ ಮೈಲಿಗಲ್ಲು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Mobile Tariffs: ಜಿಯೋ, ಏರ್‌ಟೆಲ್‌, VI ರಿಚಾರ್ಜ್‌ ಶುಲ್ಕ ಕಡಿಮೆ ಮಾಡಲಿದ್ದಾರಾ ಮೋದಿ? ಇಲ್ಲಿದೆ ಕೇಂದ್ರದ ಸ್ಪಷ್ಟನೆ

Mobile Tariffs: ಭಾರತದಲ್ಲಿ ಸುಮಾರು 45 ಕೋಟಿಗೂ ಅಧಿಕ ಜನ ರಿಲಯನ್ಸ್‌ ಜಿಯೋ ಬಳಸುತ್ತಾರೆ. ಹಾಗಾಗಿ, ಇದು ದೇಶದಲ್ಲೇ ಬೃಹತ್‌ ಟೆಲಿಕಾಮ್‌ ಕಂಪನಿ ಎನಿಸಿದೆ. ಈಗ ರಿಲಯನ್ಸ್‌ ಜಿಯೋ ಪ್ಲಾನ್‌ಗಳ ಬೆಲೆಯನ್ನು ಶೇ.20ರಷ್ಟು ಏರಿಕೆ ಮಾಡಿದ್ದು, ಕೋಟ್ಯಂತರ ಗ್ರಾಹಕರಿಗೆ ಹೊರೆಯಾಗುತ್ತಿದೆ. ಏರ್‌ಟೆಲ್‌, ವೋಡಾಫೋನ್-ಐಡಿಯಾ ಸಂಸ್ಥೆಗಳು ಕೂಡ ಬೆಲೆಯೇರಿಕೆ ಮಾಡಿವೆ.

VISTARANEWS.COM


on

Mobile Tariffs
Koo

ನವದೆಹಲಿ: ದೇಶದ ಟೆಲಿಕಾಂ ಕಂಪನಿಗಳು ಕಳೆದ ಕೆಲ ದಿನಗಳಿಂದ ಗ್ರಾಹಕರಿಗೆ ಬೆಲೆಯೇರಿಕೆಯ ಬಿಸಿ ಮುಟ್ಟಿಸಿವೆ. ರಿಲಯನ್ಸ್‌ ಜಿಯೋ (Reliance Jio) ಹಾಗೂ ಏರ್‌ಟೆಲ್‌ (Airtel) ಕಂಪನಿಗಳು ಪ್ರಿಪೇಯ್ಡ್‌ ಹಾಗೂ ಪೋಸ್ಟ್‌ ಪೇಯ್ಡ್‌ ಬೆಲೆಗಳನ್ನು ಏರಿಕೆ ಮಾಡಿದ ಬೆನ್ನಲ್ಲೇ ವೋಡಾಫೋನ್‌ ಐಡಿಯಾ (Vodafone Idea) ಸಂಸ್ಥೆಯೂ ಬೆಲೆಯೇರಿಕೆ ಮಾಡಿದೆ. ಹಾಗಾಗಿ, ಕೇಂದ್ರ ಸರ್ಕಾರವು (Central Government) ಮಧ್ಯಪ್ರವೇಶಿಸಿ, ರಿಚಾರ್ಜ್‌ ಶುಲ್ಕವನ್ನು ಕಡಿಮೆ ಮಾಡಬೇಕು ಎಂಬ ಆಗ್ರಹ ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರವು ಮಹತ್ವದ ಸ್ಪಷ್ಟನೆ ನೀಡಿದೆ. ಯಾವುದೇ ಕಾರಣಕ್ಕೂ ಖಾಸಗಿ ಟೆಲಿಕಾಂ ಕಂಪನಿಗಳ ವಿಷಯದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದಿದೆ.

“ಖಾಸಗಿ ಕಂಪನಿಗಳ ಬೆಲೆಯೇರಿಕೆ ವಿಷಯದಲ್ಲಿ ಕೇಂದ್ರ ಸರ್ಕಾರವು ಮಧ್ಯಪ್ರವೇಶಿಸಲು ಆಗುವುದಿಲ್ಲ. ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರದ (TRAI) ನಿಯಮಗಳ ಅನ್ವಯವೇ ಖಾಸಗಿ ಟೆಲಿಕಾಂ ಕಂಪನಿಗಳು ಬೆಲೆಯೇರಿಕೆ ಸೇರಿ ಹಲವು ನಿರ್ಧಾರಗಳನ್ನು ತೆಗೆದುಕೊಳ್ಳುತ್ತವೆ. ಹಾಗಾಗಿ, ಇಂತಹ ವಿಷಯದಲ್ಲಿ ಕೇಂದ್ರ ಸರ್ಕಾರವು ಮಧ್ಯಪ್ರವೇಶಿಸಲು ಆಗುವುದಿಲ್ಲ” ಎಂದು ಕೇಂದ್ರ ಸರ್ಕಾರವು ಪ್ರಕಟಣೆ ತಿಳಿಸಿದೆ. ಮೂರೂ ಟೆಲಿಕಾಂ ಕಂಪನಿಗಳು ಬೆಲೆಯೇರಿಕೆ ಮಾಡಿದ ಕಾರಣ ಸರ್ಕಾರವು ಬೆಲೆ ಇಳಿಸಬೇಕು ಎಂಬುದಾಗಿ ಜನ ಆಗ್ರಹಿಸಿದ್ದರು.

ತಿಂಗಳ ಪ್ಲಾನ್‌ಗೆ ಇಷ್ಟಾಗಲಿದೆ ಹೊರೆ

28 ದಿನಗಳವರೆಗೆ 2 ಜಿಬಿ ಡೇಟಾ (ಪ್ರತಿದಿನ ಅಲ್ಲ), ಅನ್‌ಲಿಮಿಟೆಡ್‌ ಕರೆಗಳು ಇರುವ 155 ಪ್ಲಾನ್‌ಗೆ ಇನ್ನು 189 ರೂ. ಪಾವತಿಸಬೇಕಾಗುತ್ತದೆ. ಹಾಗೆಯೇ, ಪ್ರತಿದಿನ 1 ಜಿಬಿ ಇಂಟರ್‌ನೆಟ್‌ ಪ್ಲಾನ್‌ಗೆ 28 ದಿನಗಳಿಗೆ 209 ರೂ. ಬದಲು 249 ರೂ., ನಿತ್ಯ 1.5 ಜಿಬಿ ಪ್ಲಾನ್‌ಗೆ 239 ರೂ. ಬದಲು 299 ರೂ., 2 ಜಿಬಿ ಪ್ಲಾನ್‌ಗೆ 299 ರೂ. ಬದಲು 349 ರೂ., 2.5 ಜಿಬಿಗೆ 349 ರೂ. ಬದಲು 399 ರೂ., 3 ಜಿಬಿಗೆ 399 ರೂ. ಬದಲು 449 ರೂ. ಪಾವತಿಸಬೇಕಾಗುತ್ತದೆ.

2 ಹಾಗೂ 3 ತಿಂಗಳ ಪ್ಲಾನ್‌

ಎರಡು ಹಾಗೂ ಮೂರು ತಿಂಗಳ ಪ್ಲಾನ್‌ಗಳ ಬೆಲೆಯನ್ನೂ ಏರಿಕೆ ಮಾಡಲಾಗಿದೆ. ಪ್ರತಿ ದಿನ 1.5 ಜಿಬಿ ಇಂಟರ್‌ನೆಟ್‌, ಅನ್‌ಲಿಮಿಟೆಡ್‌ ಕರೆಗಳಿಗೆ ಇನ್ನು 479 ರೂ. ಬದಲು 579 ರೂ., 2 ಜಿಬಿಗೆ 533 ರೂ. ಬದಲು 629, 3 ತಿಂಗಳು ಅನ್‌ಲಿಮಿಟೆಡ್‌ ಕರೆ, 6 ಜಿಬಿ ಇಂಟರ್‌ನೆಟ್‌ (ಪ್ರತಿದಿನ ಅಲ್ಲ) ಪ್ಲಾನ್‌ಗೆ 395 ರೂ. ಬದಲಾಗಿ 479 ರೂ. ಪಾವತಿಸಬೇಕಾಗುತ್ತದೆ. ಮೂರು ತಿಂಗಳು ಪ್ರತಿ ದಿನ 1.5 ಜಿಬಿ ಅಂತರ್ಜಾಲ, ಅನ್‌ಲಿಮಿಟೆಡ್‌ ಕಾಲ್ಸ್‌ ಪ್ಲಾನ್‌ಗೆ 666 ರೂ. ಬದಲಾಗಿ 799 ರೂ. 2 ಜಿಬಿಗೆ 719 ರೂ. ಬದಲು 859 ರೂ., 3 ಜಿಬಿಗೆ 999 ರೂ. ಬದಲಾಗಿ 1,199 ರೂ. ತೆರಬೇಕಾಗಿದೆ.

ವಾರ್ಷಿಕ ಹಾಗೂ ಡೇಟಾ ಆ್ಯಡ್‌ ಆನ್‌ಗೆ ಎಷ್ಟು ಏರಿಕೆ

336 ದಿನಗಳವರೆಗೆ ಅನ್‌ಲಿಮಿಟೆಡ್‌ ಕರೆಗಳು, 24 ಜಿಬಿ ಡೇಟಾ (ಪ್ರತಿದಿನ ಅಲ್ಲ) ಪ್ಲಾನ್‌ಗೆ 1,559 ರೂ. ಬದಲು 1,899 ರೂ., ಒಂದು ವರ್ಷಕ್ಕೆ ನಿತ್ಯ 2.5 ಜಿಬಿ ಪ್ಲಾನ್‌ಗೆ 2,999 ರೂ. ಬದಲು 3,599 ರೂ. ಪಾವತಿಸಬೇಕಾಗುತ್ತದೆ. ಡೇಟಾ ಆ್ಯಡ್‌ ಆನ್‌ ಪ್ಲಾನ್‌ಗಳನ್ನೂ ಬಿಟ್ಟಿಲ್ಲ. 1 ಜಿಬಿ ಡೇಟಾಗೆ 15 ರೂ.ನಿಂದ 19 ರೂ.ಗೆ ಏರಿಕೆ ಮಾಡಲಾಗಿದೆ. ಇನ್ನು 2 ಜಿಬಿ ಡೇಟಾಗೆ 25 ರೂ.ನಿಂದ 29 ರೂ., 6 ಜಿಬಿ ಡೇಟಾಗೆ 61 ರೂ.ನಿಂದ 69 ರೂ.ಗೆ ಹೆಚ್ಚಳ ಮಾಡಲಾಗಿದೆ. ಭಾರತದಲ್ಲಿ ಸುಮಾರು 45 ಕೋಟಿಗೂ ಅಧಿಕ ಜನ ರಿಲಯನ್ಸ್‌ ಜಿಯೋ ಬಳಸುತ್ತಾರೆ. ಹಾಗಾಗಿ, ಇದು ದೇಶದಲ್ಲೇ ಬೃಹತ್‌ ಟೆಲಿಕಾಮ್‌ ಕಂಪನಿ ಎನಿಸಿದೆ.

ಏರ್‌ಟೆಲ್‌ ಮೊಬೈಲ್‌ ರಿಚಾರ್ಜ್‌ ದರಪಟ್ಟಿ ಇಲ್ಲಿದೆ

ಡೇಟಾ
ಅವಧಿ ಹಿಂದಿನ ದರ ಹೊಸ ದರ
ವಾಯಿಸ್‌ ಕಾಲ್‌ ಪ್ಲಾನ್‌
2 GB
28179199
8 GB 84455509
ಡೈಲಿ ಡೇಟಾ ಪ್ಲಾನ್‌
1.5 ಜಿಬಿ28299349
2.5 ಜಿಬಿ, 28, 359, 409
3 ಜಿಬಿ, 28, 399, 449
Add- On ಪ್ಲಾನ್‌
111922
212933

ವೋಡಾಫೋನ್-ಐಡಿಯಾ ಬೆಲೆ ಇಷ್ಟಿದೆ

ಜುಲೈ 4ರಿಂದ ವೋಡಾಫೋನ್‌ ಐಡಿಯಾ ಶುಲ್ಕಗಳನ್ನು ಶೇ. 10ರಷ್ಟು ಹಾಗೂ ಶೇ.23ರಷ್ಟು ಏರಿಕೆ ಮಾಡಿದೆ. 28 ದಿನಗಳ ಪ್ಲಾನ್‌ಗೆ 179 ರೂ. ಬದಲಾಗಿ 199 ರೂ. ಪಾವತಿಸಬೇಕಾಗುತ್ತದೆ. ಹಾಗೆಯೇ, 84 ದಿನಗಳವರೆಗೆ 1.5 ಜಿಬಿ ಪ್ಲಾನ್‌ಗೆ 719ರ ಬದಲಾಗಿ 859 ರೂ. ಪಾವತಿಸಬೇಕಾಗುತ್ತದೆ. ಹಾಗೆಯೇ, ವಾರ್ಷಿಕ ಯೋಜನೆಯ ಮೊತ್ತವನ್ನು 2,899 ರೂ.ನಿಂದ 3,499 ರೂ.ಗೆ ಏರಿಕೆ ಮಾಡಿದೆ. ಆದರೆ, 365 ದಿನಗಳವರೆಗೆ ಅನ್‌ಲಿಮಿಟೆಡ್‌ ಕರೆಗಳು ಹಾಗೂ 24 ಜಿಬಿ (ಪ್ರತಿದಿನ ಅಲ್ಲ) ಇಂಟರ್‌ನೆಟ್‌ ಪ್ಲಾನ್‌ ಬೆಲೆಯೇರಿಕೆ ಮಾಡಿಲ್ಲ. ಅದು ಮೊದಲಿನಂತೆ ಶೇ.1,799 ರೂ. ಇರಲಿದೆ.

ಇದನ್ನೂ ಓದಿ: Vodafone Idea: ಜಿಯೋ, ಏರ್‌ಟೆಲ್‌ ಬೆನ್ನಲ್ಲೇ ವೋಡಾಫೋನ್‌ ಐಡಿಯಾ ಪ್ಲಾನ್‌ ಬೆಲೆ ಏರಿಕೆ; ಹೀಗಿದೆ ವಿವರ

Continue Reading

ದೇಶ

Puri Jagannath Yatra: ಪುರಿ ಜಗನ್ನಾಥನ ಅದ್ದೂರಿ ರಥಯಾತ್ರೆ; ರಾಷ್ಟ್ರಪತಿ ಮುರ್ಮು ಉಪಸ್ಥಿತಿ

Puri Jagannath Yatra: ಪ್ರಸಿದ್ಧ ಜಗನ್ನಾಥ ದೇಗುಲದ ವಾರ್ಷಿಕ ರಥಯಾತ್ರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಿದ್ದು,, ಅವರು ಲಕ್ಷಾಂತರ ಭಕ್ತರೊಂದಿಗೆ ಈ ರಥಯಾತ್ರೆಯನ್ನು ವೀಕ್ಷಿಸಿದ್ದಾರೆ. ಇದಕ್ಕಾಗಿ ರಾಜ್ಯ ಸರ್ಕಾರ ವಿಶೇಷ ವ್ಯವಸ್ಥೆ ಮಾಡಿದ್ದು, ಸಾಮಾನ್ಯವಾಗಿ ಒಂದೇ ದಿನದಲ್ಲಿ ನಡೆಯುವ ಯಾತ್ರೆಯನ್ನು ಸುಗಮವಾಗಿ ನಡೆಸಲು ಒಡಿಶಾ ಸರ್ಕಾರ ವಿಸ್ತೃತ ವ್ಯವಸ್ಥೆಗಳನ್ನು ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

VISTARANEWS.COM


on

Puri Jagannath Yatra
Koo

ಭುವನೇಶ್ವರ: ಜಗತ್ಪ್ರಸಿದ್ಧ ಒಡಿಶಾದ ಪುರಿ ಜಗನ್ನಾಥ ದೇವಾಲಯದಲ್ಲಿ ಎರಡು ದಿನ ವಾರ್ಷಿಕ ರಥಯಾತ್ರೆ (Puri Jagannath Yatra) ಇಂದಿನಿಂದ ಆರಂಭವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು(Droupadi Murmu) ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು. ಬರೋಬ್ಬರಿ 53 ವರ್ಷಗಳ ನಂತರ ಜಗತ್ಪ್ರಸಿದ್ಧ ಜಗನ್ನಾಥನ ವಾರ್ಷಿಕ ರಥಯಾತ್ರೆ ನಡೆಯುತ್ತಿದೆ.

ಇನ್ನು ಪ್ರಸಿದ್ಧ ಜಗನ್ನಾಥ ದೇಗುಲದ ವಾರ್ಷಿಕ ರಥಯಾತ್ರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಿದ್ದು,, ಅವರು ಲಕ್ಷಾಂತರ ಭಕ್ತರೊಂದಿಗೆ ಈ ರಥಯಾತ್ರೆಯನ್ನು ವೀಕ್ಷಿಸಿದ್ದಾರೆ. ಇದಕ್ಕಾಗಿ ರಾಜ್ಯ ಸರ್ಕಾರ ವಿಶೇಷ ವ್ಯವಸ್ಥೆ ಮಾಡಿದ್ದು, ಸಾಮಾನ್ಯವಾಗಿ ಒಂದೇ ದಿನದಲ್ಲಿ ನಡೆಯುವ ಯಾತ್ರೆಯನ್ನು ಸುಗಮವಾಗಿ ನಡೆಸಲು ಒಡಿಶಾ ಸರ್ಕಾರ ವಿಸ್ತೃತ ವ್ಯವಸ್ಥೆಗಳನ್ನು ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಗನ್ನಾಥ ದೇವಾಲಯದ ಮೂರು ದೇವರುಗಳಾದ ಜಗನ್ನಾಥ, ಬಲರಾಮ್ ಮತ್ತು ಸುಭದ್ರಾ ಮೂರು ವಿಭಿನ್ನ ರಥಗಳಲ್ಲಿ ಸವಾರಿ ಮಾಡುತ್ತಾರೆ. ಈ ಕಾರಣಕ್ಕಾಗಿ ರಥಯಾತ್ರೆಯನ್ನು ರಥೋತ್ಸವ ಎಂದು ಕರೆಯುತ್ತಾರೆ. ಅವರ ವಿಭಿನ್ನ ರಥಗಳನ್ನು ನಂದಿಘೋಷ, ತಾಳಧ್ವಜ ಮತ್ತು ದೇವದಳನ ಎಂದು ಕರೆಯಲಾಗುತ್ತದೆ. ಭಗವಾನ್ ಜಗನ್ನಾಥನ ನಂದಿಘೋಷ ರಥವು ಹದಿನೆಂಟು ಚಕ್ರಗಳನ್ನು ಹೊಂದಿದೆ. ಭಗವಾನ್ ಬಲರಾಮನ ತಾಳಧ್ವಜ ರಥವು ಹದಿನಾರು ಚಕ್ರಗಳನ್ನು ಹೊಂದಿದೆ ಮತ್ತು ಸುಭದ್ರೆಯ ಪದ್ಮಧ್ವಜ ರಥವು ಹದಿನಾಲ್ಕು ಚಕ್ರಗಳನ್ನು ಹೊಂದಿದೆ.

ಗ್ರಹಗಳು ಮತ್ತು ನಕ್ಷತ್ರಪುಂಜಗಳ ಲೆಕ್ಕಾಚಾರದ ಪ್ರಕಾರ, ಈ ವರ್ಷ ಎರಡು ದಿನಗಳ ರಥಯಾತ್ರೆಗಳನ್ನು ಆಯೋಜಿಸಲಾಗಿದೆ ಎಂದು ತಜ್ಞರು ಹೇಳುತ್ತಾರೆ, ಆದರೆ ಈ ಹಿಂದೆ 1971 ರಲ್ಲಿ ಎರಡು ದಿನಗಳ ರಥಯಾತ್ರೆಯನ್ನು ಆಯೋಜಿಸಲಾಗಿತ್ತು. ಸಂಪ್ರದಾಯಕ್ಕೆ ಹೊರತಾಗಿ, ಮೂರು ಸಹೋದರ-ಸಹೋದರಿ ದೇವತೆಗಳಾದ ಭಗವಾನ್ ಶ್ರೀಕೃಷ್ಣ, ದೇವಿ ಸುಭದ್ರ ಮತ್ತು ಭಗವಾನ್ ಬಲಭದ್ರ ದೇವರಿಗೆ ಸಹ ಇಂದು ಭಾನುವಾರದಂದು ವಿವಿಧ ಪೂಜಾ ಕೈಂಕರ್ಯಗಳನ್ನು ನಡೆಸಲಾಗಿದೆ.

ಇದನ್ನೂ ಓದಿ: Mahadayi Water Dispute: ಮಹದಾಯಿ ಜಲಾನಯನ ಪ್ರದೇಶಕ್ಕೆ ಕೇಂದ್ರದ ಪ್ರವಾಹ್ ತಂಡ ಭೇಟಿ; ನಾಲೆಗಳ ಪರಿಶೀಲನೆ

Continue Reading

ದೇಶ

Mahua Moitra: ಹೊಸ ಕಾನೂನಿನಂತೆ ಟಿಎಂಸಿ ಎಂಪಿ ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್;‌ ಕಾರಣ ಇಲ್ಲಿದೆ

Mahua Moitra: ಮಹುವಾ ಮೊಯಿತ್ರಾ ಅವರ ಪೋಸ್ಟ್‌ ವೈರಲ್‌ ಆಗುತ್ತಲೇ ರಾಷ್ಟ್ರೀಯ ಮಹಿಳಾ ಆಯೋಗವು ಆಕ್ರೋಶ ವ್ಯಕ್ತಪಡಿಸಿತ್ತು. ಅಲ್ಲದೆ, ಟಿಎಂಸಿ ಸಂಸದೆ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು, ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂಬುದಾಗಿ ದೆಹಲಿ ಪೊಲೀಸರಿಗೆ ಸೂಚಿಸಲಾಗಿತ್ತು.

VISTARANEWS.COM


on

Mahua Moitra
Koo

ನವದೆಹಲಿ: ರಾಷ್ಟ್ರೀಯ ಮಹಿಳಾ ಆಯೋಗದ (NCW Chief) ಅಧ್ಯಕ್ಷೆ ರೇಖಾ ಶರ್ಮಾ ಅವರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಆರೋಪದಲ್ಲಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಜುಲೈ 1ರಂದು ಜಾರಿಗೆ ಬಂದ ಹೊಸ ಕಾನೂನುಗಳ ಪೈಕಿ ಒಂದಾದ ಭಾರತೀಯ ನ್ಯಾಯ ಸಂಹಿತೆ (BNS) ಅನ್ವಯ ಮಹುವಾ ಮೊಯಿತ್ರಾ ಅವರ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

ಮಹುವಾ ಮೊಯಿತ್ರಾ ಹೇಳಿದ್ದೇನು?

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಕಾಲ್ತುಳಿತದಿಂದ 121 ಮಂದಿ ಮೃತಪಟ್ಟ ಹಿನ್ನೆಲೆಯಲ್ಲಿ ರೇಖಾ ಶರ್ಮಾ ಅವರು ಹತ್ರಾಸ್‌ಗೆ ಭೇಟಿ ನೀಡಿದ ವಿಡಿಯೊವನ್ನು ಮಹುವಾ ಮೊಯಿತ್ರಾ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಅಲ್ಲದೆ, “ತಮ್ಮ ಬಾಸ್‌ನ ಪೈಜಾಮಾ ಹಿಡಿದುಕೊಳ್ಳುವುದರಲ್ಲಿಯೇ ಇವರು ನಿರತರಾಗಿದ್ದಾರೆ” ಎಂಬುದಾಗಿ ಟಿಎಂಸಿ ಸಂಸದೆ ಬರೆದುಕೊಂಡಿದ್ದರು.

ಮಹುವಾ ಮೊಯಿತ್ರಾ ಅವರ ಪೋಸ್ಟ್‌ ವೈರಲ್‌ ಆಗುತ್ತಲೇ ರಾಷ್ಟ್ರೀಯ ಮಹಿಳಾ ಆಯೋಗವು ಆಕ್ರೋಶ ವ್ಯಕ್ತಪಡಿಸಿತ್ತು. ಅಲ್ಲದೆ, ಟಿಎಂಸಿ ಸಂಸದೆ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು, ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂಬುದಾಗಿ ದೆಹಲಿ ಪೊಲೀಸರಿಗೆ ಸೂಚಿಸಲಾಗಿತ್ತು. ಅಲ್ಲದೆ, ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೂ ರಾಷ್ಟ್ರೀಯ ಮಹಿಳಾ ಆಯೋಗವು ಪತ್ರ ಬರೆದು, ಮಹುವಾ ಮೊಯಿತ್ರಾ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂಬುದಾಗಿ ಮನವಿ ಮಾಡಿತ್ತು. ಈಗ ಸಂಸದೆ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ವಿವಾದಗಳಿಗೂ ಮಹುವಾ ಮೊಯಿತ್ರಾ ಅವರಿಗೂ ಎಲ್ಲಿಲ್ಲದ ನಂಟಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅದಾನಿ ಗ್ರೂಪ್ ಗುರಿಯಾಗಿಸಿಕೊಂಡು ಪ್ರಶ್ನೆ ಕೇಳಲು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ಲಂಚ ಸ್ವೀಕರಿಸಿದ್ದಾರೆ ಎಂದು ಬಿಜೆಪಿಯ ನಿಶಿಕಾಂತ್‌ ದುಬೆ ಆರೋಪ ಮಾಡಿದ್ದು ದೇಶಾದ್ಯಂತ ಸುದ್ದಿಯಾಗಿತ್ತು. ಇದರ ಕುರಿತು ತನಿಖೆ ಕೂಡ ನಡೆಸಲಾಗಿತ್ತು. “ಉದ್ಯಮಿ ದರ್ಶನ್‌ ಹಿರಾನಂದನಿ ಅವರಿಗೆ ಸಂಸತ್‌ ಐಡಿ ಹಾಗೂ ಪಾಸ್‌ವರ್ಡ್‌ ಕೊಟ್ಟಿದ್ದು ನಿಜ. ಆದರೆ, ಹಣ ಪಡೆದು ಪ್ರಶ್ನೆ ಕೇಳುವ ದಿಸೆಯಲ್ಲಿ ಐಡಿ, ಪಾಸ್‌ವರ್ಡ್‌ ಕೊಟ್ಟಿಲ್ಲ” ಎಂಬುದಾಗಿ ಮಹುವಾ ಮೊಯಿತ್ರಾ ಅವರು ಸುದ್ದಿವಾಹಿನಿಯೊಂದಕ್ಕೆ ತಿಳಿಸಿದ್ದರು.

ಇದನ್ನೂ ಓದಿ: Mahua Moitra: ಸುಮ್ನೆ ಕೂತ್ಕೊಳ್ಳಿ ರಾಹುಲ್‌ ಗಾಂಧಿ; ಸಂಸತ್ತಲ್ಲೇ ಮಹುವಾ ಮೊಯಿತ್ರಾ ಹೀಗೆ ಸಿಟ್ಟಾಗಿದ್ದೇಕೆ?

Continue Reading

ಬಜೆಟ್ 2024

Union Budget 2024: ಘೋಷಣೆ ಸೋರಿಕೆಯಿಂದ ಹಲ್ವಾ ತಿನ್ನುವವರೆಗೆ; ಕೇಂದ್ರ ಬಜೆಟ್‌ನ 10 ಆಸಕ್ತಿದಾಯಕ ಸಂಗತಿಗಳಿವು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಜುಲೈ 15ರಿಂದ 22ರ ಅವಧಿಯ ನಡುವೆ ಬಜೆಟ್‌ (Union Budget 2024) ಮಂಡಿಸಲು ಸಿದ್ಧತೆ ನಡೆಸಿದ್ದು, ಈ ಸಂದರ್ಭದಲ್ಲಿ ಭಾರತದ ಕೇಂದ್ರ ಬಜೆಟ್ ಬಗ್ಗೆ ತಿಳಿದುಕೊಳ್ಳಬೇಕಾದ ಹತ್ತು ಪ್ರಮುಖ ಆಸಕ್ತಿದಾಯಕ ಸಂಗತಿಗಳಿವೆ. ಅವುಗಳ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

By

Union Budget 2024
Koo

ಲೋಕಸಭೆ ಚುನಾವಣೆ (lok sabha election) ಬಳಿಕ ಮೊದಲ ಬಾರಿಗೆ ಬಿಜೆಪಿ (BJP) ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟವು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ನೇತೃತ್ವದಲ್ಲಿ ಮೊದಲ ಬಜೆಟ್ (Union Budget 2024) ಮಂಡಿಸಲಿದೆ. ಜುಲೈ 15ರಿಂದ 22ರ ಅವಧಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಬಜೆಟ್‌ ಮಂಡಿಸಲು ಸಿದ್ಧತೆ ನಡೆಸಿದ್ದಾರೆ. ಕೇಂದ್ರ ಬಜೆಟ್ ಮಂಡನೆಯಾಗಲಿರುವ ಈ ಸಂದರ್ಭದಲ್ಲಿ ತಿಳಿದುಕೊಳ್ಳಬೇಕಾದ 10 ಆಸಕ್ತಿದಾಯಕ ಸಂಗತಿಗಳಿವೆ.

ಬಜೆಟ್ ಎಂಬ ಪದವು ಫ್ರೆಂಚ್ ಪದ ‘ಬೌಗೆಟ್’ನಿಂದ ಬಂದಿದೆ. ಇದರ ಅರ್ಥ ಸಣ್ಣ ಚೀಲ ಅಥವಾ ಚೀಲ ಎಂಬುದಾಗಿದೆ. ಸ್ವತಂತ್ರ ಪೂರ್ವ ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಬಜೆಟ್ ಮಂಡಿಸಿದ್ದು ಜೇಮ್ಸ್ ವಿಲ್ಸನ್. ಭಾರತೀಯ ಕೌನ್ಸಿಲ್‌ನ ಹಣಕಾಸು ಸಚಿವರಾಗಿ ನೇಮಕಗೊಂಡ ಅವರು ಭಾರತೀಯ ವೈಸ್‌ರಾಯ್‌ಗೆ ಬಜೆಟ್ ಕುರಿತು ಸಲಹೆ ನೀಡಿದರು.

1860ರಲ್ಲಿ ಭಾರತದ ಮೊದಲ ಬಜೆಟ್ ಮಂಡನೆಯಾಗಿತ್ತು. ಸ್ಕಾಟಿಷ್ ಉದ್ಯಮಿಯಾಗಿದ್ದ ಜೇಮ್ಸ್ ವಿಲ್ಸನ್ ವ್ಯಾಪಾರ ಮತ್ತು ಹಣಕಾಸಿನ ಬಗ್ಗೆ ಅಪಾರ ತಿಳಿವಳಿಕೆ ಹೊಂದಿದ್ದರು. ಪ್ರಸಿದ್ಧ ಪತ್ರಿಕೆಯಾದ ದಿ ಎಕನಾಮಿಸ್ಟ್ ಮತ್ತು ಸ್ಟ್ಯಾಂಡರ್ಡ್ ಚಾರ್ಟರ್ಡ್ ಬ್ಯಾಂಕ್‌ನ ಸಂಸ್ಥಾಪಕರಾಗಿದ್ದ ಅವರು ಬ್ರಿಟಿಷ್ ಸಂಸತ್ತಿನ ಸದಸ್ಯರಾಗಿದ್ದರು ಮತ್ತು ಯುಕೆ ಖಜಾನೆಯ ಹಣಕಾಸು ಕಾರ್ಯದರ್ಶಿ ಮತ್ತು ವಾಣಿಜ್ಯ ಮಂಡಳಿಯ ಉಪಾಧ್ಯಕ್ಷರಾಗಿದ್ದರು.


ಕೇಂದ್ರ ಬಜೆಟ್‌ನ 10 ಪ್ರಮುಖ ಸಂಗತಿಗಳು

1. ಮೊದಲ ಬಜೆಟ್‌ ಮಂಡಿಸಿದ್ದು ಯಾರು?

ಸ್ವತಂತ್ರ ಭಾರತದ ಮೊದಲ ವಾರ್ಷಿಕ ಬಜೆಟ್ ಅನ್ನು ಆರ್.ಕೆ. ಷಣ್ಮುಖಂ ಚೆಟ್ಟಿಯವರು 1948ರ ಫೆಬ್ರವರಿ 28ರಂದು ಮಂಡಿಸಿದರು. ದೇಶ ಸ್ವತಂತ್ರಗೊಂಡ ಮೂರು ತಿಂಗಳ ಅನಂತರ ದೇಶದ ಆರ್ಥಿಕ ಸ್ಥಿತಿಯನ್ನು ಪರಿಗಣಿಸಿ 1947ರ ನವೆಂಬರ್ 26ರಂದು ಮಧ್ಯಂತರ ಬಜೆಟ್ ಮಂಡಿಸಲಾಯಿತು. ಇದು ಕೇವಲ ನಾಲ್ಕು ತಿಂಗಳವರೆಗೆ ಊರ್ಜಿತವಾಗಿತ್ತು.
ಪ್ರಧಾನಿಯೊಬ್ಬರು ಇದುವರೆಗೆ ಮೂರು ಬಾರಿ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಪಂಡಿತ್ ಜವಾಹರಲಾಲ್ ನೆಹರು ಅವರು 1958ರಲ್ಲಿ, ಪ್ರಧಾನಿ ಇಂದಿರಾ ಗಾಂಧಿ ಅವರು 1970ರಲ್ಲಿ ಬಜೆಟ್ ಮಂಡಿಸಿದರು. ಅನಂತರ ರಾಜೀವ್ ಗಾಂಧಿ ಅವರು 1987ರಲ್ಲಿ ಬಜೆಟ್ ಮಂಡಿಸಿದ್ದಾರೆ.

2. ಅತಿ ಉದ್ದದ ಬಜೆಟ್ ಭಾಷಣ ಯಾರದ್ದು?

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2020ರಲ್ಲಿ ಅತಿ ಉದ್ದದ ಬಜೆಟ್ ಭಾಷಣ ಮಾಡಿದ ದಾಖಲೆಯನ್ನು ಹೊಂದಿದ್ದಾರೆ. ಇದು 2 ಗಂಟೆ 42 ನಿಮಿಷಗಳು. ಅವರು ಭಾರತದ ಮೊದಲ ಪೂರ್ಣ ಸಮಯದ ಮಹಿಳಾ ಹಣಕಾಸು ಮಂತ್ರಿಯೂ ಆಗಿದ್ದಾರೆ.


3. ಕಾಗದ ರಹಿತ ಬಜೆಟ್‌

ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ 2021ರಲ್ಲಿ ಬಜೆಟ್ ಕಾಗದರಹಿತವಾಯಿತು.

4. ಗರಿಷ್ಠ ಬಜೆಟ್‌ ಯಾರದ್ದು?

ಗರಿಷ್ಠ ಸಂಖ್ಯೆಯ ಬಜೆಟ್‌ಗಳನ್ನು ಮಂಡಿಸಿದ ಕೀರ್ತಿ ಮಾಜಿ ವಿತ್ತ ಸಚಿವ ಮೊರಾಜಿ ದೇಸಾಯಿ ಅವರಿಗೆ ಸಲ್ಲುತ್ತದೆ. ಅವರು ಒಟ್ಟು 10 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. ಅನಂತರ ಪಿ. ಚಿದಂಬರಂ ಅವರು 9 ಬಾರಿ, ಪ್ರಣಬ್ ಮುಖರ್ಜಿ ಮತ್ತು ಯಶವಂತ್ ಸಿನ್ಹಾ ಅವರು ತಲಾ 8 ಬಾರಿ ಮತ್ತು ಮನಮೋಹನ್ ಸಿಂಗ್ ಅವರು 6 ಬಾರಿ ಬಜೆಟ್ ಮಂಡಿಸಿದ್ದಾರೆ.

5. ಬಜೆಟ್‌ ಮಂಡನೆ ಸಮಯ ಬದಲಾವಣೆ

ಭಾರತದಲ್ಲಿ ಯಾವಾಗಲೂ ಸಂಜೆ 5 ಗಂಟೆಗೆ ಬಜೆಟ್ ಮಂಡಿಸಲಾಗುತ್ತಿತ್ತು. ಆಯವ್ಯಯ ಪತ್ರಗಳನ್ನು ಬ್ರಿಟಿಷ್ ಪಾರ್ಲಿಮೆಂಟ್‌ನಲ್ಲಿ ಮತ್ತು ಲಂಡನ್‌ನಲ್ಲಿ ಮಂಡನೆ ಮಾಡುವಂತೆ ಈ ಅಭ್ಯಾಸವು ಮೊದಲು ಪ್ರಾರಂಭವಾಯಿತು. 1999ರವರೆಗೂ ಇದು ಪಾಲನೆಯಾಗುತ್ತಿತ್ತು. ಆದರೆ ಹಣಕಾಸು ಸಚಿವ ಯಶವಂತ್ ಸಿನ್ಹಾ ಅವರು ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡಿಸಿ ಹೊಸ ದಾಖಲೆ ಬರೆದರು. ಆ ಬಳಿಕ ಈಗ ಮಧ್ಯಾಹ್ನವೇ ಬಜೆಟ್‌ ಮಂಡಿಸಲಾಗುತ್ತದೆ.

6. ಬಜೆಟ್‌ ದಿನ ಬದಲಾವಣೆ

2017ನೇ ವರ್ಷವು ಕೇಂದ್ರ ಬಜೆಟ್‌ಗೆ ಸಂಬಂಧಿಸಿದ ಎರಡು ಪ್ರಮುಖ ಬದಲಾವಣೆಗಳನ್ನು ಗುರುತಿಸಿದೆ. ವಾರ್ಷಿಕ ಬಜೆಟ್ ಮಂಡನೆ ದಿನಾಂಕವನ್ನು ಫೆಬ್ರವರಿ 28ರಿಂದ ಫೆಬ್ರವರಿ 1ಕ್ಕೆ ಬದಲಾಯಿಸಲಾಯಿತು. ಏಪ್ರಿಲ್ 1ರಿಂದ ಪ್ರಾರಂಭವಾಗುವ ಹಣಕಾಸು ವರ್ಷದ ಆರಂಭದ ಮೊದಲು ಸರ್ಕಾರದ ವಿವಿಧ ಯೋಜನೆಗಳಿಗೆ ಹಣ ಹಂಚಿಕೆಗೆ ಎಲ್ಲಾ ಸಂಸತ್ತಿನ ಅನುಮೋದನೆಗಳು ಜಾರಿಯಲ್ಲಿವೆ ಎಂದು ಖಚಿತಪಡಿಸಿಕೊಳ್ಳಲು ಇದನ್ನು ಮಾಡಲಾಗಿದೆ. ಈ ಮೊದಲು ಫೆಬ್ರವರಿ 28 ಮತ್ತು ಹೊಸ ಹಣಕಾಸು ವರ್ಷ ಪ್ರಾರಂಭವಾಗಲು ಕೇವಲ ಒಂದು ತಿಂಗಳು ಬಾಕಿಯಿರುತ್ತಿತ್ತು. ಆಗ ಕೆಲವು ಅನುಮೋದನೆಗಳಿಗೆ ತೊಂದರೆಯಾಗುತ್ತಿತ್ತು. ರೈಲ್ವೆ ಬಜೆಟ್ ಅನ್ನು ಕೇಂದ್ರ ಬಜೆಟ್‌ನಲ್ಲಿ ವಿಲೀನಗೊಳಿಸಿದ ವರ್ಷವೂ ಇದೇ ಆಗಿತ್ತು.

7. ಮೊದಲ ಬಾರಿ ವೈಯಕ್ತಿಕ ತೆರಿಗೆ ಇಳಿಕೆ

ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರು ಮಂಡಿಸಿದ 1997-98ರ ಬಜೆಟ್ ವೈಯಕ್ತಿಕ ಆದಾಯ ತೆರಿಗೆ ದರಗಳನ್ನು ಕಡಿಮೆ ಮಾಡಿದ ಮೊದಲ ಬಜೆಟ್ ಆಗಿದೆ. ಅಂದಿನಿಂದ ಸಣ್ಣಪುಟ್ಟ ಬದಲಾವಣೆಗಳನ್ನು ಹೊರತುಪಡಿಸಿ ಆ ದರಗಳು ಇನ್ನೂ ಬದಲಾಗದೆ ಹಾಗೇ ಉಳಿದಿವೆ.

8. ಮನಮೋಹನ್‌ ಸಿಂಗ್‌ ಐತಿಹಾಸಿಕ ಬಜೆಟ್‌

ಮನಮೋಹನ್ ಸಿಂಗ್ ಅವರ 1991ರ ಬಜೆಟ್ ಸ್ವತಂತ್ರ ಭಾರತದ ಇತಿಹಾಸದಲ್ಲಿ ಅತ್ಯಂತ ಐತಿಹಾಸಿಕ ಬಜೆಟ್ ಆಗಿದೆ. ಇದು ಭಾರತೀಯ ಆರ್ಥಿಕತೆಯನ್ನು ಉದಾರೀಕರಣಗೊಳಿಸಿತು. ಇದು ಭಾರತವನ್ನು ಉನ್ನತ ಬೆಳವಣಿಗೆಯ ಹಾದಿಯಲ್ಲಿ ಕೊಂಡೊಯ್ಯಲು ಪ್ರೇರಣೆಯಾಯಿತು ಮತ್ತು ವಿದೇಶಿ ಸ್ಪರ್ಧೆಗೆ ಭಾರತೀಯ ಕಂಪನಿಗಳನ್ನು ತೆರೆಯಲು ಅವಕಾಶ ಮಾಡಿಕೊಟ್ಟಿತು.

ಇದನ್ನೂ ಓದಿ: Union Budget 2024: ಬಜೆಟ್‌ನಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿ 5 ಲಕ್ಷ ರೂ.ಗೆ ಏರಿಕೆ? ಇಲ್ಲಿದೆ ಮಹತ್ವದ ಅಪ್‌ಡೇಟ್


9. ಹಲ್ವಾ ಸಮಾರಂಭ

ಪ್ರತಿ ವರ್ಷ ಹಣಕಾಸು ಸಚಿವರು ಬಜೆಟ್ ಮಂಡಿಸುವ ಒಂದು ವಾರದ ಮೊದಲು ‘ಹಲ್ವಾ ಸಮಾರಂಭ’ ನಡೆಯುತ್ತದೆ. ಬಜೆಟ್ ಮುದ್ರಿಸಿದ ಸ್ಥಳದಲ್ಲಿ ‘ಹಲ್ವಾ’ ತಯಾರಿಸಿ ಎಲ್ಲರಿಗೂ ಬಡಿಸಲಾಗುತ್ತದೆ. ವಿತ್ತ ಸಚಿವರು ಮತ್ತು ವಿತ್ತ ಸಚಿವಾಲಯದ ಎಲ್ಲಾ ಪ್ರಮುಖ ಅಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದು, ಶುಭ ಕಾರ್ಯದ ಆರಂಭವನ್ನು ಸೂಚಿಸುತ್ತಾರೆ. ಬಜೆಟ್ ಪೇಪರ್‌ಗಳ ಮುದ್ರಣಕ್ಕೆ ಹೋಗುವ ಮೊದಲು ಅಧಿಕಾರಿಗಳನ್ನು ಲಾಕ್ ಮಾಡಲಾಗುತ್ತದೆ. ಬಜೆಟ್ ಮಂಡನೆಯಾಗುವವರೆಗೆ ಬಜೆಟ್‌ನ ಮುದ್ರಣದಲ್ಲಿ ತೊಡಗಿರುವ ಎಲ್ಲ ಅಧಿಕಾರಿಗಳು ಹೊರ ಜಗತ್ತಿನೊಂದಿಗೆ ಯಾವುದೇ ಸಂವಹನವಿಲ್ಲದೆ ಹಣಕಾಸು ಸಚಿವಾಲಯದೊಳಗೆ ಬಂಧಿಯಾಗುತ್ತಾರೆ.

10. ಸೋರಿಕೆಯಾಗಿತ್ತು ಬಜೆಟ್‌ ಸಾರ

1950ರಲ್ಲಿ ಬಜೆಟ್ ಸೋರಿಕೆಯಾಯಿತು. ಅದರ ಅನಂತರ ಸರ್ಕಾರವು ಬಜೆಟ್‌ನ ಮುದ್ರಣವನ್ನು ರಾಷ್ಟ್ರಪತಿ ಭವನದಿಂದ ಮಿಂಟೋ ರಸ್ತೆಯಲ್ಲಿರುವ ಮುದ್ರಣಾಲಯಕ್ಕೆ ವರ್ಗಾಯಿಸಿತು. 1980ರಲ್ಲಿ ಇದನ್ನು ದೆಹಲಿಯ ರೈಸಿನಾ ರಸ್ತೆಯಲ್ಲಿರುವ ನಾರ್ತ್ ಬ್ಲಾಕ್‌ನಲ್ಲಿರುವ ಹಣಕಾಸು ಸಚಿವಾಲಯದ ನೆಲಮಾಳಿಗೆಯಲ್ಲಿರುವ ಸರ್ಕಾರಿ ಮುದ್ರಣಾಲಯಕ್ಕೆ ಸ್ಥಳಾಂತರಿಸಲಾಯಿತು.

Continue Reading
Advertisement
Bengaluru News Physical Abuse
ಬೆಂಗಳೂರು7 mins ago

Bengaluru News : ʻ ಹುಡುಗ- ಹುಡುಗಿಯರ ಸರ್ವಿಸ್ ಬೇಕಾʼ ಎಂದವನ ಹೆಡೆಮುರಿ ಕಟ್ಟಿದ ಖಾಕಿ ಪಡೆ

Dengue Cases
ಕರ್ನಾಟಕ15 mins ago

Dengue Cases: ರಾಜ್ಯದಲ್ಲಿ ಭಾನುವಾರ 159 ಮಂದಿಗೆ ಡೆಂಗ್ಯೂ ದೃಢ; ಬೆಂಗಳೂರಲ್ಲೇ ಅತಿ ಹೆಚ್ಚು!

Sonakshi Sinha
ಸಿನಿಮಾ25 mins ago

Sonakshi Sinha: ಮದುವೆ ಆದವರು ಗರ್ಭಿಣಿಯಾದರೆ ಮಾತ್ರ ಆಸ್ಪತ್ರೆಗೆ ಹೋಗಬೇಕಾ? ವದಂತಿಕೋರರಿಗೆ ನಟಿ ಸೋನಾಕ್ಷಿ ಪ್ರಶ್ನೆ!

Dengue Scare
ಬೆಂಗಳೂರು42 mins ago

Dengue Scare: ಬೆಂಗಳೂರಿನಲ್ಲಿ ತೀವ್ರವಾಗಿ ಹರಡುತ್ತಿರುವ ಡೆಂಗ್ಯೂ; ನೂರಾರು ಮಂದಿ ಆಸ್ಪತ್ರೆಗೆ ದಾಖಲು

Press Club of Bangalore
ಬೆಂಗಳೂರು59 mins ago

Press Club of Bangalore: ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಅಧ್ಯಕ್ಷರಾಗಿ ಆರ್. ಶ್ರೀಧರ್ ಮರು ಆಯ್ಕೆ; ನೂತನ ಪದಾಧಿಕಾರಿಗಳ ಪಟ್ಟಿ ಇಲ್ಲಿದೆ

Foods For Hormone Balance
ಆರೋಗ್ಯ1 hour ago

Foods For Hormone Balance: ಮಹಿಳೆಯರೇ, ಹಾರ್ಮೋನಿನ ಸಮತೋಲನಕ್ಕಾಗಿ ಈ ಆಹಾರಗಳನ್ನು ಮರೆಯದೇ ಸೇವಿಸಿ

ZIM vs IND
ಪ್ರಮುಖ ಸುದ್ದಿ1 hour ago

ZIM vs IND : ಭಾರತ ತಂಡಕ್ಕೆ 100 ರನ್​ ಭರ್ಜರಿ ಜಯ, ಜಿಂಬಾಬ್ವೆ ವಿರುದ್ಧ ಸರಣಿಯಲ್ಲಿ 1-1 ಸಮಬಲ ಸಾಧನೆ

Viral Video
ವೈರಲ್ ನ್ಯೂಸ್1 hour ago

Viral Video: ಮನೆಗೆ ನುಗ್ಗಿ ಯುವಕನಿಂದ ಬಾಲಕಿ ಮೇಲೆ ಅಮಾನುಷ ಹಲ್ಲೆ; ವಿಡಿಯೊ ನೋಡಿ ಜನಾಕ್ರೋಶ

Mobile Tariffs
ದೇಶ1 hour ago

Mobile Tariffs: ಜಿಯೋ, ಏರ್‌ಟೆಲ್‌, VI ರಿಚಾರ್ಜ್‌ ಶುಲ್ಕ ಕಡಿಮೆ ಮಾಡಲಿದ್ದಾರಾ ಮೋದಿ? ಇಲ್ಲಿದೆ ಕೇಂದ್ರದ ಸ್ಪಷ್ಟನೆ

karnataka weather Forecast
ಮಳೆ1 hour ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 hour ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ4 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ4 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ15 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ1 day ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ1 day ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ1 day ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು1 day ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ1 day ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

ಟ್ರೆಂಡಿಂಗ್‌