Drowned: ಪೊಲೀಸರಿಂದ ತಪ್ಪಿಸಿಕೊಳ್ಳಹೋಗಿ ನೀರುಪಾಲು; ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ 1 ಸಾವು, ಇಬ್ಬರ ರಕ್ಷಣೆ, ಇನ್ನೂ ಐವರು ನಾಪತ್ತೆ - Vistara News

ಕ್ರೈಂ

Drowned: ಪೊಲೀಸರಿಂದ ತಪ್ಪಿಸಿಕೊಳ್ಳಹೋಗಿ ನೀರುಪಾಲು; ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ 1 ಸಾವು, ಇಬ್ಬರ ರಕ್ಷಣೆ, ಇನ್ನೂ ಐವರು ನಾಪತ್ತೆ

Drowned: ಪೊಲೀಸರು ದಾಳಿ ನಡೆಸಿದ್ದು ನೋಡಿ ಆರೋಪಿಗಳು ತರಾತುರಿಯಿಂದ ತೆಪ್ಪದ ಮೂಲಕ ಎಸ್ಕೇಪ್ ಆಗಲು ಯತ್ನಿಸಿದ್ದರು. ಗಾಳಿ ವ್ಯತಿರಿಕ್ತವಾಗಿದ್ದುದರಿಂದ ಹಾಗೂ ತೆಪ್ಪದಲ್ಲಿ ಮಿತಿ ಮೀರಿದ ಜನ ತುಂಬಿದ್ದರಿಂದ ತೆಪ್ಪ ನದಿಯೊಳಗೆ ಮುಗುಚಿಕೊಂಡಿದೆ.

VISTARANEWS.COM


on

krishna river drowned death
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯಪುರ: ಜುಗಾರಿ ಆಡುತ್ತಿರುವಾಗ ಪೊಲೀಸರು (Police Attack) ದಾಳಿ ಮಾಡಿದ್ದರಿಂದ ಭಯಭೀತರಾಗಿ ಎಸ್ಕೇಪ್ ಆಗಲು ತೆಪ್ಪ ಏರಿ ಪಲಾಯನ ಮಾಡಿದ ಎಂಟು ಮಂದಿ ಕೃಷ್ಣಾ ನದಿಯಲ್ಲಿ (Krishna River) ತೆಪ್ಪ ಮಗುಚಿಕೊಂಡು (Drowned) ನೀರುಪಾಲಾಗಿದ್ದಾರೆ. ಇವರಲ್ಲಿ ಒಬ್ಬನ ಶವ ದೊರೆತಿದೆ. ಇಬ್ಬರನ್ನು ರಕ್ಷಿಸಲಾಗಿದ್ದು, ಇನ್ನೂ ಐದು ಮಂದಿಗಾಗಿ ಶೋಧ ನಡೆದಿದೆ.

ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ ಕೃಷ್ಣಾ ನದಿ ಹಿನ್ನೀರು ಪ್ರದೇಶದ ಬಳೂತಿ ಗ್ರಾಮದ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪುಂಡಲೀಕ ಯಂಕಂಚಿ (35) ಸಾವಿಗೀಡಾದ ವ್ಯಕ್ತಿ.

ನಿನ್ನೆ ಸಂಜೆ ಇವರು ಜೂಜಾಟ ಆಡುತ್ತಿವಾಗ ಕೊಲ್ಹಾರ ಪೊಲೀಸರಿಗೆ ಮಾಹಿತಿ ಬಂದಿತ್ತು. ಪೊಲೀಸರು ದಾಳಿ ನಡೆಸಿದ್ದು ನೋಡಿ ಆರೋಪಿಗಳು ತರಾತುರಿಯಿಂದ ತೆಪ್ಪದ ಮೂಲಕ ಎಸ್ಕೇಪ್ ಆಗಲು ಯತ್ನಿಸಿದ್ದರು. ಗಾಳಿ ವ್ಯತಿರಿಕ್ತವಾಗಿದ್ದುದರಿಂದ ಹಾಗೂ ತೆಪ್ಪದಲ್ಲಿ ಮಿತಿ ಮೀರಿದ ಜನ ತುಂಬಿದ್ದರಿಂದ ತೆಪ್ಪ ನದಿಯೊಳಗೆ ಮುಗುಚಿಕೊಂಡಿದೆ. ಕಾಪಾಡಿ ಕಾಪಾಡಿ ಎಂದು ಕೂಗಿದಾಗ ಸುತ್ತಲಿನ ಜಮೀನಿನಲ್ಲಿದ್ದವರು ಹಾಗೂ ಮೀನುಗಾರರು ಧಾವಿಸಿ ಬಂದಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಇಬ್ಬರನ್ನು ಕಾಪಾಡಲಾಯಿತು. ಒಬ್ಬನ ಶವ ಸಿಕ್ಕಿದೆ. ರಕ್ಷಣೆಯಾದ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿನ್ನೆ ರಾತ್ರಿಯಾದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 6 ಗಂಟೆಯಿಂದ ರಕ್ಷಣಾ ಕಾರ್ಯಾಚರಣೆ ಮರು ಆರಂಭಿಸಲಾಯಿತು. ಕಲಬುರ್ಗಿಯಿಂದ ಎಸ್‌ಡಿಆರ್‌ಎಫ್ ತಂಡ, ಅಗ್ನಿಶಾಮಕ ದಳ ಸಿಬ್ಬಂದಿ ಬಂದು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಸ್ಥಳಕ್ಕೆ ವಿಜಯಪುರ ಎಸ್ಪಿ ಋಷಿಕೇಶ್ ಸೋನಾವಣೆ, ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸದ್ಯ ನದಿಯಲ್ಲಿ ಮುಳುಗಿರಬಹುದಾದ ಐವರಿಗಾಗಿ ಶೋಧ ನಡೆಯುತ್ತಿದೆ. ಇವರಲ್ಲಿ ಕೆಲವರು ಈಜಿ ಆಚೆ ದಡ ಸೇರಿರಲೂಬಹುದು ಎಂದು ತರ್ಕಿಸಲಾಗಿದೆ.

ಅಗ್ನಿಶಾಮಕ ಸಿಬ್ಬಂದಿ ನಾಲ್ಕು ಬೋಟ್ ಮೂಲಕ ಕಾರ್ಯಾಚರಣೆ ನಡೆಸುತ್ತಿದ್ದು, ಸ್ಥಳೀಯ ಮೀನುಗಾರರು ಸಹ ಪಾಲ್ಗೊಂಡಿದ್ದಾರೆ. ಎಸ್ಪಿ ಋಷಿಕೇಶ ಸೋನಾವಣೆ ಸ್ಥಳದಲ್ಲಿಯೇ ಬೀಡುಬಿಟ್ಟಿದ್ದಾರೆ.

ಮಗನ ಕುಡಿತದ ಚಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಅಪ್ಪ, ಅಮ್ಮ

ಬೆಂಗಳೂರು: ಮಗನ ಕುಡಿತದಿಂದ ಉಂಟಾಗಿರುವ ಕೌಟುಂಬಿಕ ಸಮಸ್ಯೆಗಳಿಂದ ಬೇಸತ್ತು ಹಿರಿಯ ವಯಸ್ಸಿನ ಪೋಷಕರು ಆತ್ಮಹತ್ಯೆ (Suicide News ) ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಘಟನೆ ನಡೆದಿದೆ. ಚಂದ್ರಶೇಖರ್ (54) ಹಾಗೂ ಶಾರದಮ್ಮ ಆತ್ಮಹತ್ಯೆ ಮಾಡಿಕೊಂಡ ದಂಪತಿ.

ಮಗ ಪ್ರಶಾಂತನಿಗೆ ವರ್ಷಗಳ ಹಿಂದೆ ಮದುವೆ ಮಾಡಿದ್ದರು. ಆದರೆ ಮಗ ಕುಡಿತದಿಂದ ಮನೆ ಬರೋದು ಕಡಿಮೆ ಮಾಡಿದ್ದ, ಇದರಿಂದ ನೊಂದು ಕಳೆದ ಮೂರು ತಿಂಗಳ ಹಿಂದೆ ಪ್ರಶಾಂತನ ಹೆಂಡತಿ ಮನೆ ಬಿಟ್ಟು ತವರು ಮನೆ ಸೇರಿದ್ದರು. ಇದರಿಂದ‌ ಮಗನ‌ ಬಾಳು ಹೀಗಾಯಿತು ಎಂದು ನೊಂದು ಕೊಂಡಿದ್ದರು.

ಸೋಮವಾ ಎರಡನೇ‌ ಮಗನನ್ನ ಅಂಗಡಿ ಕಳಿಸಿ ದಂಪತಿ ನೇಣಿಗೆ ಶರಣಾಗಿದ್ದರು. ಮಗ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವರು ಹೊಸಕೋಟೆ ಮೂಲದವರು. ಅವರು ಹಲವು ವರ್ಷಗಳಿಂದ‌ ಹಳೆ ಬೈಯಪ್ಪನಹಳ್ಳಿ ಯಲ್ಲಿ ವಾಸ ಮಾಡಿಕೊಂಡಿದ್ದರು. ಬೆಂಗಳೂರಿನಲ್ಲೊ ಕೂಲಿ ಕೆಲಸ ಮಾಡಿಕೊಂಡಿದ್ದರು. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Hemant Nimbalkar: ವಾರ್ತಾ ಇಲಾಖೆ ಆಯುಕ್ತರಾಗಿ ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮರು ನೇಮಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Actor Darshan: 25 ದಿನಕ್ಕೆ ದರ್ಶನ್‌ ತೂಕ ಕಳೆದುಕೊಂಡಿದ್ದು ಇಷ್ಟೊಂದಾ?

Actor Darshan: ದರ್ಶನ್ ಅವರು ಜೈಲಿನಲ್ಲಿದ್ದು ಒಂದು ತಿಂಗಳು ಆಗುತ್ತಾ ಬಂದಿದೆ. ಜಿಮ್‌ನಲ್ಲಿ ವರ್ಕೌಟ್‌ ಮಾಡಿಕೊಂಡು , ಹೊರಗಡೆ ಮೀನು, ಮಟನ್‌ ತಿಂದು ಕೊಂಡು ಹಾಯಾಗಿದ್ದ ದರ್ಶನ್‌, ಕೈದಿಗಳಿಗೆ ಯಾವ ರೀತಿಯ ಊಟ ನೀಡುತ್ತಾರೋ ಅದನ್ನೇ ಸೇವಿಸಬೇಕು.  ಹೀಗಾಗಿ ದರ್ಶನ್‌ ಅವರು ಸರಿಯಾಗಿ ಊಟ ಮಾಡುತ್ತಿಲ್ಲ ಎಂದು ತಿಳಿದು ಬಂದಿದೆ.

VISTARANEWS.COM


on

Actor Darshan Lost KG In 25 Days
Koo

ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ (Renuka swamy Murder) ಪ್ರಕರಣದಲ್ಲಿ ದರ್ಶನ್‌ (Actor Darshan: ) ಜೈಲು ಸೇರಿದ್ದಾರೆ. ದರ್ಶನ್ ಅವರು ಜೈಲಿನಲ್ಲಿದ್ದು ಒಂದು ತಿಂಗಳು ಆಗುತ್ತಾ ಬಂದಿದೆ. ಜಿಮ್‌ನಲ್ಲಿ ವರ್ಕೌಟ್‌ ಮಾಡಿಕೊಂಡು , ಹೊರಗಡೆ ಮೀನು, ಮಟನ್‌ ತಿಂದು ಕೊಂಡು ಹಾಯಾಗಿದ್ದ ದರ್ಶನ್‌, ಕೈದಿಗಳಿಗೆ ಯಾವ ರೀತಿಯ ಊಟ ನೀಡುತ್ತಾರೋ ಅದನ್ನೇ ಸೇವಿಸಬೇಕು.  ಹೀಗಾಗಿ ದರ್ಶನ್‌ ಅವರು ಸರಿಯಾಗಿ ಊಟ ಮಾಡುತ್ತಿಲ್ಲ ಎಂದು ತಿಳಿದು ಬಂದಿದೆ. ಈ ಕಾರಣದಿಂದಲೇ ಅವರು 25 ದಿನಗಳಲ್ಲಿ ಬರೋಬ್ಬರಿ 10 ಕೆಜಿ ತೂಕ ಕಳೆದುಕೊಂಡಿದ್ದಾರೆ ಎಂದು ವರದಿ ಆಗಿದೆ.

ರೇಣುಕಾ ಸ್ವಾಮಿ ಹತ್ಯೆ (Renuka swamy Murder) ಪ್ರಕರಣದಲ್ಲಿ ಇನ್ನೂ ಇಬ್ಬರನ್ನು ಪೊಲೀಸರು ತೀವ್ರವಾಗಿ ಪ್ರಶ್ನಿಸುತ್ತಿದ್ದು, ಇಂದು ಮತ್ತೆ ಎರಡನೇ ಬಾರಿ ವಿಚಾರಣೆಗಾಗಿ ಕರೆಸಿದ್ದಾರೆ. ಪ್ರಕರಣದಲ್ಲಿ ಇವರಿಬ್ಬರ ಭಾಗೀದಾರಿಕೆ ಗಂಭೀರ ಸ್ವರೂಪದ್ದಾಗಿದ್ದು, ಇಬ್ಬರಿಗೂ ಬಂಧನ ಭೀತಿ ಎದುರಾಗಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರಲ್ಲಿ ಒಬ್ಬಾಕೆ ನಟ ದರ್ಶನ್‌ (Actor Darshan) ಹಾಗೂ ಪವಿತ್ರ ಗೌಡ (Pavithra Gowda) ಅನ್ನು ಭೇಟಿಯಾಗಲು ಜೈಲಿಗೆ ಬಂದಿದ್ದವಳು.

ನಟ ದರ್ಶನ್ ಅವರು ಜೈಲಿನಲ್ಲಿದ್ದು ಒಂದು ತಿಂಗಳು ಆಗುತ್ತಾ ಬಂದಿದೆ. ಹೊರಗಿದ್ದಾಗ ಅವರು ಮಾಂಸದೂಟ ಮಾಡಿಕೊಂಡು ಹಾಯಾಗಿ ಇದ್ದರು. ಜಿಮ್​ನಲ್ಲಿ ವರ್ಕೌಟ್ ಮಾಡುತ್ತಿದ್ದರು. ಆದರೆ, ಜೈಲಿನಲ್ಲಿ ಆ ರೀತಿ ಇಲ್ಲ. ಜೈಲಿನ ಇತರ ಕೈದಿಗಳಿಗೆ ಯಾವ ರೀತಿಯ ಊಟ ನೀಡುತ್ತಾರೋ ಅದನ್ನೇ ಸೇವಿಸಬೇಕು. ದರ್ಶನ್ ಅವರಿಗೆ ನಿತ್ಯ ಚಿಂತೆ ಕಾಡುತ್ತಿದೆ. ಯಾವಾಗ ಹೊರಗೆ ಬರುತ್ತೇನೋ ಎನ್ನುವ ಆತಂಕ ಮೂಡಿದೆ. ಹೀಗಾಗಿ ಅವರು ಜೈಲಿನಲ್ಲಿ ಸರಿಯಾಗಿ ಊಟ ಮಾಡುತ್ತಿಲ್ಲ. ಈ ಇವರಲ್ಲಿ ಒಬ್ಬಾತ ಕಾರ್ತಿಕ್‌ ಪುರೋಹಿತ್.‌ ಈತನಿಗೆ ಇಂದು ಇಂದು ವಿಚಾರಣೆಗೆ ಹಾಜರಾಗಲು ನೊಟೀಸ್ ಹೋಗಿದೆ. ಶನಿವಾರ ಸುಮಾರು ನಾಲ್ಕೈದು ಗಂಟೆಗಳ ಕಾಲ ಪೊಲೀಸರು ವಿಚಾರಣೆ ಮಾಡಿದ್ದರು. ಶಾಸಕರೊಬ್ಬರ ಕಾರು ಚಾಲಕನಾಗಿರುವ ಕಾರ್ತಿಕ್ ಪುರೋಹಿತ್, ರೇಣುಕಾ ಸ್ವಾಮಿ ಮೃತದೇಹ ಬಿಸಾಡಿದ ಬಳಿಕ ಆರೋಪಿ ಪ್ರದೋಶ್ ಅನ್ನು ಪಿಕ್‌ಅಪ್ ಮಾಡಿದ್ದ. ತನ್ನದೇ ಕಾರಿನಲ್ಲಿ ಪ್ರದೋಶ್‌ನನ್ನು ಗಿರಿನಗರಕ್ಕೆ ಕರೆದುಕೊಂಡು ಬಂದಿದ್ದ.

ಇದನ್ನೂ ಓದಿ: Actor Darshan: ದರ್ಶನ್‌ ಸುದ್ದಿ ಕೇಳಿ ಆಘಾತವಾಗಿತ್ತು ಎಂದು ಬಿಕ್ಕಿ ಬಿಕ್ಕಿ ಅತ್ತ ನೀನಾಸಂ ರತ್ನಕ್ಕ!

ಇದನ್ನೂ ಓದಿ: Actor Darshan: ಪವಿತ್ರ ಗೌಡ ಆಪ್ತೆ, ಶಾಸಕರ ಕಾರು ಚಾಲಕನಿಗೆ ಸಂಕಷ್ಟ; 2ನೇ ಬಾರಿ ವಿಚಾರಣೆ, ಬಂಧನ?

ಹೀಗಾಗಿ ಆವತ್ತು ಏನೆಲ್ಲಾ ಆಯ್ತು, ಕೊಲೆಯ ಮಾಹಿತಿ ಕಾರ್ತಿಕ್‌ಗೆ ಇತ್ತೇ ಎಂದು ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ. ಕೊಲೆ ಮಾಹಿತಿ ಇದ್ದೂ ಪೊಲೀಸರಿಗೆ ತಿಳಿಸಲಿಲ್ಲವಾದರೆ ಸಂಕಷ್ಟ ಗ್ಯಾರಂಟಿ ಆಗಿದೆ. ಜೊತೆಗೆ ಎರಡು ದಿನಗಳ ಕಾಲ ಆರೋಪಿಗೆ ಆಶ್ರಯ ಕೊಟ್ಟಿರುವ ಶಂಕೆ ಇದೆ. ಆಶ್ರಯದ ಜೊತೆಗೆ ಹಣಕಾಸು ಸಹಾಯವೂ ಮಾಡಿರುವ ಅನುಮಾನ ಇದೆ. ಹೀಗಾಗಿ ಇಂದು ಮತ್ತೊಮ್ಮೆ ವಿಚಾರಣೆಗೆ ಹಾಜರಾಗಲು ನೊಟೀಸ್ ನೀಡಲಾಗಿದೆ.

ಜೊತೆಗೆ ಇಂದು ಪವಿತ್ರ ಗೌಡ ಆಪ್ತೆ ಸಮತಾ ವಿಚಾರಣೆ ಕೂಡ ನಡೆಯಲಿದೆ. ಈಗಾಗಲೇ ಸಮತಾ ಒಂದು ಬಾರಿ ವಿಚಾರಣೆಗೆ ಹಾಜರಾದ್ದಾಳೆ. ಈಕೆ ಆರೋಪಿ ಧನರಾಜ್‌ಗೆ 3 ಸಾವಿರ ರೂಪಾಯಿ ಹಣ ಕಳುಹಿಸಿದ್ದಳು. ಇದೇ ಹಣದಲ್ಲಿ ಧನರಾಜ್ ಎಲೆಕ್ಟ್ರಿಕ್ ಶಾಕ್ ಡಿವೈಸ್ ಖರೀದಿ ಮಾಡಿರುವ ಶಂಕೆ ಇದೆ. ಹೀಗಾಗಿ ಸಮತಾಳನ್ನು ಮತ್ತೆ ವಿಚಾರಣೆಗೆ ಪೊಲೀಸರು ಕರೆದಿದ್ದು, ಇಂದು ಹಾಜರಾಗಲು ಸೂಚಿಸಿದ್ದಾರೆ. ಬಸವೇಶ್ವರನಗರ ಪೊಲೀಸ್ ಠಾಣೆಯ ಎಸಿಪಿ ಕಚೇರಿಯಲ್ಲಿ ತನಿಖಾಧಿಕಾರಿ ಎಸಿಪಿ ಚಂದನ್ ಮುಂದೆ ಸಮತಾ ಹಾಜರಾಗಲಿದ್ದಾಳೆ.

ಪವಿತ್ರ ಮುನಿಸು ತಣಿಸಲು ʼಕಂದಾಯ‌ʼ ಕಟ್ಟುತ್ತಿದ್ದ ದರ್ಶನ್
ದರ್ಶನ್‌ (Actor Darshan) ಹಾಗೂ ಪವಿತ್ರಾ (Pavithra Gowda) ನ್ಯಾಯಾಂಗ ಬಂಧನಲ್ಲಿದ್ದಾರೆ. ಈ ಕೊಲೆ ಪ್ರಕರಣಕ್ಕೂ ಮುಂಚೆ ದರ್ಶನ್‌ಗೆ ಪವಿತ್ರಾ ಗೌಡಳ ಮುನಿಸು ಹಲವು ಬಾರಿ ಆಪತ್ತು ತಂದು ಒಡ್ಡಿದೆ. ಪವಿತ್ರಾಗೌಡ ಮುನಿಸು ಶಮನ‌‌ ಮಾಡೋದೇ ಒಂದು ಚಾಲೇಂಜ್‌ ಆಗಿತ್ತು ದರ್ಶನ್‌ಗೆ. ಒಂದೊಂದು ಬಾರಿ ಕೋಪಿಸಿಕೊಂಡಾಗಲೂ ಒಂದೊಂದು ರೀತಿಯ ಪರಿಹಾರ ಕೊಡಬೇಕಿತ್ತು. ಲಕ್ಷ ,ಕೋಟಿ ಬೆಲೆ ಬಾಳುವ ವಸ್ತುಗಳೇ ಪವಿತ್ರಗೌಡ ಕೋಪ ಕಡಿಮೆಯಾಗಲು ಬೇಕಿತ್ತು.

ಕೆಲವೇ ದಿನಗಳ ಹಿಂದೆ ಒಂದು ಕಾರ್ ಕೂಡ ದರ್ಶನ್‌ ಅವರು ಪವಿತ್ರಾಗೆ ಗಿಫ್ಟ್‌ ಕೊಟ್ಟಿದ್ದರು ಎನ್ನಲಾಗಿದೆ. ಅನಂತರ‌ ಮತ್ತೊಂದು ಕಾರ್ ಗಿಫ್ಟ್ ಕೂಡ ಪವಿತ್ರಾ ಕೇಳಿದ್ದರಂತೆ. ದರ್ಶನ್ ದುಬೈ ಟ್ರಿಪ್ ಮುಗಿಸಿ ಬರುತ್ತಿದ್ದಂತೆ ಕೋಟಿ ಬೆಲೆಯ ಕಾರಿಗೆ ತೀವ್ರವಾದ ಬೇಡಿಕೆ ಇಟ್ಟಿದ್ದರು. ಕಾರು ಕೊಟ್ಟ ಬಳಿಕ ಇದೀಗ ಒಂದು ಪ್ರಾಣವೇ ಗಿಫ್ಟ್ ಕೊಟ್ಟಂತಾಗಿದೆ.

ದರ್ಶನ್‌ ಪವಿತ್ರಾ ಮುನಿಸು ಶಮನಕ್ಕೆ‌ ರೇಣುಕಾಸ್ವಾಮಿ ಕಿಡ್ನಾಪ್ ಅಸ್ತ್ರವಾಗಿತ್ತು ಎನ್ನಲಾಗಿದೆ. ಆರಂಭದಲ್ಲಿ‌ ಕಾರು ಕೊಡಿಸೋದಕ್ಕೆ ನಟ‌ ದರ್ಶನ್ ನಿರಾಕರಿಸಿದ್ದರು ಎಂಬ ಮಾಹಿಯೂ ಇದೆ. ಅಷ್ಟು ದೊಡ್ಡ ಮಟ್ಟದ ಹಣ ಸದ್ಯ ಇಲ್ಲವೆಂಬ ಕಾರಣ‌ ನೀಡಿ ಕಾರು ಕೊಡಿಸಲು ಬ್ರೇಕ್ ಕೂಡ ಹಾಕಕಿದ್ದರು. ಇದರಿಂದಾಗಿ ಕೋಪಗೊಂಡ ಪವಿತ್ರಾ ಬಹುತೇಕ ಒಂದು ತಿಂಗಳ ಕಾಲ ದರ್ಶನ್ ಬಳಿ ಮಾತು ಬಿಟ್ಟಿದ್ದಳು.

ಈ ಸಮಯದಲ್ಲಿಯೇ ರೇಣುಕಾಸ್ವಾಮಿ‌‌ ಮೆಸೇಜ್ ಅತಿರೇಕವಾಗಿತ್ತು. ಮಾತು ಬಿಟ್ಟಿದ್ದ ಕಾರಣ ದರ್ಶನ್‌‌ಗೆ ವಿಷಯ ತಿಳಿಸದ ಪವಿತ್ರಾ ಗೌಡ, ಈ ವಿಚಾರವನ್ನು ಪವನ್ ಬಳಿ ತಿಳಿಸಿದ್ದಳು. ಆದರೆ ಪವನ್‌ ಈ ವಿಚಾರವನ್ನು ದರ್ಶನ್‌ ಬಳಿ ನೇರವಾಗಿ ಹೇಳಿದ್ದ. ಆ ನಂತರ ನಡೆದದ್ದೇ ರೇಣುಕಾಸ್ವಾಮಿ ಕಿಡ್ನಾಪ್ ಮತ್ತು ಕೊಲೆ‌ ಪ್ರಕರಣ.

Continue Reading

ಕ್ರೈಂ

Child Abandon: ಮೂರು ತಿಂಗಳ ಮಗು ಬಿಟ್ಟು ತಾಯಿ ಪರಾರಿ

Child Abandon: ಮಗುವಿನ ಅಳುವಿನ ಶಬ್ದ ಕೇಳಿ ಆಶಾ ಕಾರ್ಯಕರ್ತೆಯೊಬ್ಬರು ಮಗುವನ್ನ ರಕ್ಷಿಸಿದ್ದಾರೆ. ರಾತ್ರಿ ಊಟ ಮಾಡಿ ವಾಕಿಂಗ್ ಮಾಡುತ್ತಿದ್ದ ಆಶಾ ಕಾರ್ಯಕರ್ತೆ ಕಲಾವತಿ ಅವರಿಗೆ ರಸ್ತೆ ಬದಿಯಲ್ಲಿ ಅಳುತ್ತಿದ್ದ ಮಗುವಿನ ಶಬ್ದ ಕೇಳಿಸಿತ್ತು. ಸ್ಥಳಕ್ಕೆ ಹೋದಾಗ, ಮೂರು ತಿಂಗಳ ಮಗುವನ್ನು ಬಿಟ್ಟು ಹೋಗಿರುವುದು ಬೆಳಕಿಗೆ ಬಂದಿದೆ.

VISTARANEWS.COM


on

child abandon
Koo

ತುಮಕೂರು: ತಾಯಿಯೊಬ್ಬಳು (mother) ರಸ್ತೆ ಬದಿಯಲ್ಲಿ ಮೂರು ತಿಂಗಳ ಮಗುವನ್ನು ಅನಾಥವಾಗಿ (Child abandon) ಬಿಟ್ಟು ಹೋಗಿರುವ ಪ್ರಕರಣ ತುಮಕೂರು (Tumkur news) ಜಿಲ್ಲೆ ತಿಪಟೂರು ತಾಲೂಕಿನ ಹೆಡಗರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮಗುವಿನ ಅಳುವಿನ ಶಬ್ದ ಕೇಳಿ ಆಶಾ ಕಾರ್ಯಕರ್ತೆಯೊಬ್ಬರು ಮಗುವನ್ನ ರಕ್ಷಿಸಿದ್ದಾರೆ. ರಾತ್ರಿ ಊಟ ಮಾಡಿ ವಾಕಿಂಗ್ ಮಾಡುತ್ತಿದ್ದ ಆಶಾ ಕಾರ್ಯಕರ್ತೆ ಕಲಾವತಿ ಅವರಿಗೆ ರಸ್ತೆ ಬದಿಯಲ್ಲಿ ಅಳುತ್ತಿದ್ದ ಮಗುವಿನ ಶಬ್ದ ಕೇಳಿಸಿತ್ತು. ಸ್ಥಳಕ್ಕೆ ಹೋದಾಗ, ಮೂರು ತಿಂಗಳ ಮಗುವನ್ನು ಬಿಟ್ಟು ಹೋಗಿರುವುದು ಬೆಳಕಿಗೆ ಬಂದಿದೆ.

ಕೂಡಲೇ ನೊಣವಿನಕೆರೆ ಪೊಲೀಸರಿಗೆ ಆಶಾ ಕಾರ್ಯಕರ್ತೆ ಕಲಾವತಿ ಮಾಹಿತಿ ನೀಡಿದ್ದಾರೆ. ಆಂಬ್ಯುಲೆನ್ಸ್ ಮೂಲಕ ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ಮಗು ಕರೆದೊಯ್ಯಲಾಗಿದೆ. ವೈದ್ಯರು ಮಗುವಿನ ಆರೋಗ್ಯ ತಪಾಸಣೆ ನಡೆಸಿದ್ದು, ಆರೋಗ್ಯವಾಗಿರುವ ಮಗು 4.5 ಕೆಜಿಯಷ್ಟು ತೂಕವಿದೆ. ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಗುವಿನ ಪೋಷಕರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಬೆಂಗಳೂರಿನಲ್ಲಿ ಎಟಿಎಂಗಳ ದರೋಡೆ

ಬೆಂಗಳೂರು: ಬೆಂಗಳೂರಿನಲ್ಲಿ ಕೆಲವು ವಾರಗಳಿಂದ ಸಕ್ರಿಯವಾಗಿರುವ ಎಟಿಎಂ ಕಳ್ಳರ (ATM theft) ಗ್ಯಾಂಗ್ ಬಗ್ಗೆ ಪೊಲೀಸರು ಇದೀಗ ತಲೆಕೆಡಿಸಿಕೊಂಡಿದ್ದಾರೆ. ಹರ್ಯಾಣ ಮೂಲದ ಎರಡು ಗ್ಯಾಂಗ್‌ಗಳು ಸತತವಾಗಿ ಎಟಿಎಂಗಳಿಂದ ಹಣ (Robbery Case) ಎತ್ತುತ್ತಿವೆ. ಗುರುತೇ ಸಿಗದಂತೆ ದರೋಡೆ ಮಾಡುತ್ತಿರುವ ಈ ಗ್ಯಾಂಗ್‌ಗಳು ಪೊಲೀಸರಿಗೆ ತಲೆನೋವಾಗಿವೆ.

ಬೆಳ್ಳಂದೂರು ಠಾಣೆ ವ್ಯಾಪ್ತಿಯ ಎಕ್ಸಿಸ್ ಬ್ಯಾಂಕ್ ಎಟಿಎಂನಿಂದ ನಿನ್ನೆ ಕಳ್ಳತನ ಮಾಡಲಾಗಿದೆ. ಇಕೋ ಎರ್ಟಿಗಾ ಕಾರ್‌ನಲ್ಲಿ ಬಂದು ಕಳವು ಮಾಡಲಾಗಿದೆ. ಪರಿಶೀಲಿಸಿದಾಗ ಕಾರು ಕೂಡ ಕಳವು ಮಾಲು ಎಂಬುದು ಗೊತ್ತಾಗಿದೆ. ಆರೋಪಿಗಳು ಮೈಮೇಲೆ ಹೊದಿಕೆ ಹೊದ್ದುಕೊಂಡು ಎಟಿಎಂ ಒಳಗೆ ಹೋಗಿ ಕೃತ್ಯ ನಡೆಸುತ್ತಿದ್ದಾರೆ. ಹೀಗಾಗಿ ಇವರು ಗುರುತು ಕಾಣಿಸದಾಗಿದೆ.

ಇವರ ಖತರ್‌ನಾಕ್‌ ಬುದ್ಧಿ ಒಂದೆರಡಲ್ಲ. ಕಳ್ಳತನ ವೇಳೆ ಎಟಿಎಂನಲ್ಲಿರುವ ಸಿಸಿಟಿವಿ ಕ್ಯಾಮೆರಾ ಲೆನ್ಸ್‌ಗೆ ಕಪ್ಪು ಪೇಂಟ್‌ ಬಳಿಯುತ್ತಾರೆ. ಅಲ್ಲಿಗೆ ಅದೂ ಮಟಾಶ್.‌ ಬಳಿಕ ಗ್ಯಾಸ್ ಕಟರ್ ಬಳಸಿ ಎಟಿಎಂ ಓಪನ್ ಮಾಡಿ ಲಕ್ಷಾಂತರ ರೂಪಾಯಿ ಹಣ ದರೋಡೆ ಮಾಡುತ್ತಾರೆ. ಬೆಳ್ಳಂದೂರಿನಲ್ಲಿ ಜೂ. 6ರಂದು ಬೆಳಗಿನ ಜಾವ 3.30ಕ್ಕೆ ಕೃತ್ಯ ನಡೆಸಲಾಗಿದೆ. ಸದ್ಯ ಸಿಸಿಟಿವಿಯಲ್ಲಿ ಆರೋಪಿಗಳ ಕೃತ್ಯ ಸೆರೆಯಾಗಿದೆ.

ಈ ಸಂಬಂಧ ಏಜೆನ್ಸಿ ಸಿಬ್ಬಂದಿ ಕಿರಣ್ ಎಂಬುವವರಿಂದ ದೂರು ದಾಖಲಾಗಿದೆ. ಬೆಳ್ಳಂದೂರು ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಪ್ರತಿನಿತ್ಯ ರಾತ್ರಿ ವೇಳೆ ನಗರದ ಎಟಿಎಂಗಳ ಸುತ್ತಮುತ್ತಲೂ ಹೆಚ್ಚಾಗಿ ಗಸ್ತಿಗೆ ಹಿರಿಯ ಅಧಿಕಾರಿಗಳು ಸಿಬ್ಬಂದಿಗಳಿಗೆ ಸೂಚನೆ ನೀಡಿದ್ದಾರೆ.

ಕಾರಿನ ಮೇಲೆ ಕಾಡಾನೆ ದಾಳಿ, ಕುಟುಂಬ ಪಾರು

ಕೊಡಗು: ಮಲೆನಾಡು ಭಾಗದಲ್ಲಿ ಕಾಡಾನೆಗಳ (Wild animal attack) ಉಪಟಳ ಹೆಚ್ಚಾಗುತ್ತಿದ್ದು, ಕೊಡಗಿನಲ್ಲಿ ಕಾರಿನ ಮೇಲೆ ಕಾಡಾನೆ ದಾಳಿ (Elephant attack) ನಡೆಸಿದೆ. ಕಾರಿನೊಳಗೆ ಇದ್ದ ಕುಟುಂಬವೊಂದು ಕೂದಲೆಳೆಯ ಅಂತರದಿಂದ ಪಾರಾಗಿದ್ದಾರೆ. ವೀರಾಜಪೇಟೆಯ ಯಶವಂತ್ ಅವರ ಕುಟುಂಬವು ಕಾಡಾನೆ ದಾಳಿಯಿಂದ ಪಾರಾಗಿದ್ದಾರೆ.

ಯಶವಂತ್‌ ತಮ್ಮ ಕುಟುಂಬದೊಂದಿಗೆ ಟಿ.ಶೆಟ್ಟಿಗೇರಿಯಿಂದ ಇರ್ಪು ಕಡೆ ತೆರಳುತ್ತಿದ್ದಳು. ಈ ವೇಳೆ ಪೊನ್ನಂಪೇಟೆ ತಾಲೂಕಿನ ಕುರ್ಚಿ ಗ್ರಾಮದಲ್ಲಿ ಅಡ್ಡಗಟ್ಟಿದ ಆನೆಯು ಏಕಾಏಕಿ ದಾಳಿ ಮಾಡಿದೆ. ಆನೆ ಹತ್ತಿರ ಬರುತ್ತಿದ್ದಂತೆ ಕಾರಿನಿಂದ ಇಳಿದು ಓಡಿದ್ದಾರೆ. ಈ ವೇಳೆ ಆನೆಯು ಕಾರು ಜಖಂಗೊಳಿಸಿದೆ. ಇಬ್ಬರು ಮಕ್ಕಳು ಸೇರಿದಂತೆ ಕಾರಿನಲ್ಲಿದ್ದ ನಾಲ್ವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಕಾಡಾನೆ ಹಾವಳಿಗೆ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಪ್ರತಿನಿತ್ಯ ಗ್ರಾಮದಲ್ಲಿ ಕಾಡಾನೆಗಳು ಅಡ್ಡಾಡುತ್ತಿದ್ದರೂ ಸೆರೆಹಿಡಿಯದೆ ಸುಮ್ಮನಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

ಇದನ್ನೂ ಓದಿ: Wild Animals Attack: ವಿಜಯನಗರ: ನಾಡಿಗೆ ನುಗ್ಗಿದ ಕರಡಿಯನ್ನು ರಾತ್ರೋರಾತ್ರಿ ಕಾಡಿಗೆ ಅಟ್ಟಿದ ಅರಣ್ಯ ಇಲಾಖೆ ಸಿಬ್ಬಂದಿ

Continue Reading

ದೇಶ

Mumbai Hit And Run: ಹಿಟ್‌ ಆ್ಯಂಡ್‌ ರನ್‌ಗೂ ಮುನ್ನ ಪಬ್‌ಗೆ ಹೋಗಿದ್ದ ಆರೋಪಿ; ವೈರಲ್‌ ಆಗ್ತಿದೆ ಈ ವಿಡಿಯೋ

Mumbai Hit And Run: ನಿನ್ನೆ ಮುಂಬೈನ ವೊರ್ಲಿಯಲ್ಲಿ ರಾಜೇಶ್‌ ಶಾ (Rajesh Shah) ಅವರ ಪುತ್ರ ಮಿಹಿರ್‌ ಶಾ (Mihir Shah) ಕುಡಿದು ವಾಹನ ಚಲಾಸುವಾಗ, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿದ್ದು, ಮಹಿಳೆ ಮೃತಪಟ್ಟಿದ್ದಾರೆ. ಆಕೆಯ ಪತಿಯು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಬಳಿಕ 24 ವರ್ಷದ ಮಿಹಿರ್‌ ಶಾ ಪರಾರಿಯಾಗಿದ್ದ, ಬಳಿಕ ಪೊಲೀಸರು ಅವನ ತಂದೆಯನ್ನು ವಶಪಡಿಸಿಕೊಂಡಿದ್ದಾರೆ.

VISTARANEWS.COM


on

Mumbai hit and run
Koo

ಮುಂಬೈ: ನಿನ್ನೆ ಮುಂಬೈನಲ್ಲಿ ನಡೆದ ಡ್ರಂಕ್‌ ಆಂಡ್‌ ಡ್ರೈವ್‌(Mumbai Hit And Run) ಕೇಸ್‌ನ ಪ್ರಮುಖ ಆರೋಪಿ ಶಿವಸೇನೆ ಮುಖಂಡನ ಪುತ್ರ ಘಟನೆಗೂ ಮುನ್ನ ಪಬ್‌ನಿಂದ ಹೋರಬರುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ(Video Viral) ವೈರಲ್‌ ಆಗಿದೆ. ಆರೋಪಿ ಮಿಹಿರ್‌ ಶಾ ತನ್ನ ಸ್ನೇಹಿತರೊಂದಿಗೆ ಪಬ್‌ನಿಂದ ಹೊರಬಂದು ಬಿಎಂಡಬ್ಲ್ಯೂ ಕಾರಿನಲ್ಲಿ ತೆರಳುತ್ತಿರುವುದನ್ನು ಸಿಸಿಟಿವಿ(CCTV Footage) ದೃಶ್ಯಾವಳಿಯಲ್ಲಿ ಕಾಣಬಹುದಾಗಿದೆ.

ನಿನ್ನೆ ಮುಂಬೈನ ವೊರ್ಲಿಯಲ್ಲಿ ರಾಜೇಶ್‌ ಶಾ (Rajesh Shah) ಅವರ ಪುತ್ರ ಮಿಹಿರ್‌ ಶಾ (Mihir Shah) ಕುಡಿದು ವಾಹನ ಚಲಾಸುವಾಗ, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿದ್ದು, ಮಹಿಳೆ ಮೃತಪಟ್ಟಿದ್ದಾರೆ. ಆಕೆಯ ಪತಿಯು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಬಳಿಕ 24 ವರ್ಷದ ಮಿಹಿರ್‌ ಶಾ ಪರಾರಿಯಾಗಿದ್ದ, ಬಳಿಕ ಪೊಲೀಸರು ಅವನ ತಂದೆಯನ್ನು ವಶಪಡಿಸಿಕೊಂಡಿದ್ದಾರೆ.

ಕಾವೇರಿ ನಖ್ವಾ ಮತ್ತು ಪ್ರದೀಕ್‌ ನಖ್ವಾ ಎಂಬ ದಂಪತಿ ಹೋಗುತ್ತಿದ್ದ ಬೈಕ್‌ಗೆ BMW ಕಾರು ಡಿಕ್ಕಿ ಹೊಡೆದಿದ್ದು, ಕೂಡಲೇ ಮಿಹಿರ್‌ ಶಾ ಎಸ್ಕೇಪ್‌ ಆಗಿದ್ದಾನೆ. ಬೆಳಗ್ಗೆ 5:30ರ ಸಮಯದಲ್ಲಿ ದಂಪತಿ ಸಾಸಾನ್‌ ಡಾಕ್‌ ಮಾರುಕಟ್ಟೆಯಿಂದ ಮೀನು ಖರೀದಿಸಿ ವಾಪಾಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಇನ್ನು ದಂಪತಿ ಪ್ರದೀಕ್‌ ನಖ್ವಾ ಮಾರುಕಟ್ಟೆಯಲ್ಲಿ ಮೀನಿನ ವ್ಯಾಪಾರಿಯಾಗಿದ್ದಾರೆ. ಕಾರು ಡಿಕ್ಕಿಯಗುತ್ತಿದ್ದಂತೆ ರಸ್ತೆಗೆ ಬಿದ್ದಿದ್ದ ದಂಪತಿ ಗಂಭೀರವಾಗಿ ಗಾಯಗೊಂಡಿದ್ದರು. ಕಾವೇರಿ ಮತ್ತು ಪ್ರದೀಕ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕಾವೇರಿ ಕೊನೆಯುಸಿರೆಳೆದಿದ್ದಾರೆ.

ಘಟನೆ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಮಿಹಿರ್‌ ಶಾ ನಾಪತ್ತೆಯಾಗಿದ್ದ. ಮಿಹಿರ್‌ ಶಾ ತನ್ನ ಫೋನನ್ನೂ ಸ್ವಿಚ್‌ ಆಫ್‌ ಮಾಡಿಕೊಂಡಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ಶುರು ಮಾಡಿದ್ದರು. ಮಿಹಿರ್‌ ಪೊಲೀಸರಿಗೆ ಹೆದರಿ ತನ್ನ ಪ್ರೇಯಸಿ ಮನೆಯಲ್ಲಿ ಅವಿತಿದ್ದ. ಪೊಲೀಸರು ಆತನನ್ನು ಅರೆಸ್ಟ್‌ ಮಾಡಿದ್ದಾರೆ. ಪೊಲೀಸರ ಪ್ರಕಾರ ಮಿಹಿರ್‌ ಕಳೆದ ರಾತ್ರಿ ಜೂಹೂ ಪ್ರದೇಶದಲ್ಲಿರುವ ಬಾರ್‌ನಲ್ಲಿ ಕಂಠಪೂರ್ತಿ ಕುಡಿದಿದ್ದು. ತನ್ನ ಮನೆಗೆ ಹಿಂದಿರುಗುವ ವೇಳೆ ಲಾಂಗ್‌ ಡ್ರೈವ್‌ ಕರೆದುಕೊಂಡು ಹೋಗುವಂತೆ ಡ್ರೈವರ್‌ಗೆ ಹೇಳಿದ್ದಾನೆ. ವರ್ಲಿಗೆ ತಲುಪುತ್ತಿದ್ದಂತೆ ತಾನು ಕಾರು ಚಲಾಯಿಸುವುದಕ್ಕೆ ಮುಂದಾಗಿದ್ದಾನೆ. ಆಗ ಅತ್ಯಂತ ವೇಗವಾಗಿ ಕಾರು ಚಲಾಯಿಸಿದ ಮಿಹಿರ್, ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ.

ಇನ್ನು ಘಟನೆ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾತ್‌ ಶಿಂಧೆ ಪ್ರತಿಕ್ರಿಯಿಸಿದ್ದಾರೆ. ಈ ಘಟನೆ ದುರಾದೃಷ್ಟಕರವಾದುದು. ಕಾನೂನಿನ ಎದುರು ಎಲ್ಲರೂ ಸಮಾನ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ. ಪೊಲೀಸರು ಜೊತೆಗೆ ಮಾತುಕತೆ ನಡೆಸಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:Self Harming: ಮೊದಲ ರಾತ್ರಿಯ ಟೆನ್ಶನ್‌ಗೆ ವರ ಆತ್ಮಹತ್ಯೆ? ಉತ್ತರ ಪ್ರದೇಶದಲ್ಲೊಂದು ವಿಲಕ್ಷಣ ಘಟನೆ

Continue Reading

ಕ್ರೈಂ

Actor Darshan: ಪವಿತ್ರ ಗೌಡ ಆಪ್ತೆ, ಶಾಸಕರ ಕಾರು ಚಾಲಕನಿಗೆ ಸಂಕಷ್ಟ; 2ನೇ ಬಾರಿ ವಿಚಾರಣೆ, ಬಂಧನ?

ಪ್ರಕರಣದಲ್ಲಿ ಇವರಿಬ್ಬರ ಭಾಗೀದಾರಿಕೆ ಗಂಭೀರ ಸ್ವರೂಪದ್ದಾಗಿದ್ದು, ಇಬ್ಬರಿಗೂ ಬಂಧನ ಭೀತಿ ಎದುರಾಗಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರಲ್ಲಿ ಒಬ್ಬಾಕೆ ನಟ ದರ್ಶನ್‌ (Actor Darshan) ಹಾಗೂ ಪವಿತ್ರ ಗೌಡ (Pavithra Gowda) ಅನ್ನು ಭೇಟಿಯಾಗಲು ಜೈಲಿಗೆ ಬಂದಿದ್ದವಳು.

VISTARANEWS.COM


on

karthik purohith samatha actor darshan
Koo

ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ (Renuka swamy Murder) ಪ್ರಕರಣದಲ್ಲಿ ಇನ್ನೂ ಇಬ್ಬರನ್ನು ಪೊಲೀಸರು ತೀವ್ರವಾಗಿ ಪ್ರಶ್ನಿಸುತ್ತಿದ್ದು, ಇಂದು ಮತ್ತೆ ಎರಡನೇ ಬಾರಿ ವಿಚಾರಣೆಗಾಗಿ ಕರೆಸಿದ್ದಾರೆ. ಪ್ರಕರಣದಲ್ಲಿ ಇವರಿಬ್ಬರ ಭಾಗೀದಾರಿಕೆ ಗಂಭೀರ ಸ್ವರೂಪದ್ದಾಗಿದ್ದು, ಇಬ್ಬರಿಗೂ ಬಂಧನ ಭೀತಿ ಎದುರಾಗಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರಲ್ಲಿ ಒಬ್ಬಾಕೆ ನಟ ದರ್ಶನ್‌ (Actor Darshan) ಹಾಗೂ ಪವಿತ್ರ ಗೌಡ (Pavithra Gowda) ಅನ್ನು ಭೇಟಿಯಾಗಲು ಜೈಲಿಗೆ ಬಂದಿದ್ದವಳು.

ಇವರಲ್ಲಿ ಒಬ್ಬಾತ ಕಾರ್ತಿಕ್‌ ಪುರೋಹಿತ್.‌ ಈತನಿಗೆ ಇಂದು ಇಂದು ವಿಚಾರಣೆಗೆ ಹಾಜರಾಗಲು ನೊಟೀಸ್ ಹೋಗಿದೆ. ಶನಿವಾರ ಸುಮಾರು ನಾಲ್ಕೈದು ಗಂಟೆಗಳ ಕಾಲ ಪೊಲೀಸರು ವಿಚಾರಣೆ ಮಾಡಿದ್ದರು. ಶಾಸಕರೊಬ್ಬರ ಕಾರು ಚಾಲಕನಾಗಿರುವ ಕಾರ್ತಿಕ್ ಪುರೋಹಿತ್, ರೇಣುಕಾ ಸ್ವಾಮಿ ಮೃತದೇಹ ಬಿಸಾಡಿದ ಬಳಿಕ ಆರೋಪಿ ಪ್ರದೋಶ್ ಅನ್ನು ಪಿಕ್‌ಅಪ್ ಮಾಡಿದ್ದ. ತನ್ನದೇ ಕಾರಿನಲ್ಲಿ ಪ್ರದೋಶ್‌ನನ್ನು ಗಿರಿನಗರಕ್ಕೆ ಕರೆದುಕೊಂಡು ಬಂದಿದ್ದ.

ಹೀಗಾಗಿ ಆವತ್ತು ಏನೆಲ್ಲಾ ಆಯ್ತು, ಕೊಲೆಯ ಮಾಹಿತಿ ಕಾರ್ತಿಕ್‌ಗೆ ಇತ್ತೇ ಎಂದು ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ. ಕೊಲೆ ಮಾಹಿತಿ ಇದ್ದೂ ಪೊಲೀಸರಿಗೆ ತಿಳಿಸಲಿಲ್ಲವಾದರೆ ಸಂಕಷ್ಟ ಗ್ಯಾರಂಟಿ ಆಗಿದೆ. ಜೊತೆಗೆ ಎರಡು ದಿನಗಳ ಕಾಲ ಆರೋಪಿಗೆ ಆಶ್ರಯ ಕೊಟ್ಟಿರುವ ಶಂಕೆ ಇದೆ. ಆಶ್ರಯದ ಜೊತೆಗೆ ಹಣಕಾಸು ಸಹಾಯವೂ ಮಾಡಿರುವ ಅನುಮಾನ ಇದೆ. ಹೀಗಾಗಿ ಇಂದು ಮತ್ತೊಮ್ಮೆ ವಿಚಾರಣೆಗೆ ಹಾಜರಾಗಲು ನೊಟೀಸ್ ನೀಡಲಾಗಿದೆ.

ಜೊತೆಗೆ ಇಂದು ಪವಿತ್ರ ಗೌಡ ಆಪ್ತೆ ಸಮತಾ ವಿಚಾರಣೆ ಕೂಡ ನಡೆಯಲಿದೆ. ಈಗಾಗಲೇ ಸಮತಾ ಒಂದು ಬಾರಿ ವಿಚಾರಣೆಗೆ ಹಾಜರಾದ್ದಾಳೆ. ಈಕೆ ಆರೋಪಿ ಧನರಾಜ್‌ಗೆ 3 ಸಾವಿರ ರೂಪಾಯಿ ಹಣ ಕಳುಹಿಸಿದ್ದಳು. ಇದೇ ಹಣದಲ್ಲಿ ಧನರಾಜ್ ಎಲೆಕ್ಟ್ರಿಕ್ ಶಾಕ್ ಡಿವೈಸ್ ಖರೀದಿ ಮಾಡಿರುವ ಶಂಕೆ ಇದೆ. ಹೀಗಾಗಿ ಸಮತಾಳನ್ನು ಮತ್ತೆ ವಿಚಾರಣೆಗೆ ಪೊಲೀಸರು ಕರೆದಿದ್ದು, ಇಂದು ಹಾಜರಾಗಲು ಸೂಚಿಸಿದ್ದಾರೆ. ಬಸವೇಶ್ವರನಗರ ಪೊಲೀಸ್ ಠಾಣೆಯ ಎಸಿಪಿ ಕಚೇರಿಯಲ್ಲಿ ತನಿಖಾಧಿಕಾರಿ ಎಸಿಪಿ ಚಂದನ್ ಮುಂದೆ ಸಮತಾ ಹಾಜರಾಗಲಿದ್ದಾಳೆ.

ಪವಿತ್ರ ಮುನಿಸು ತಣಿಸಲು ʼಕಂದಾಯ‌ʼ ಕಟ್ಟುತ್ತಿದ್ದ ದರ್ಶನ್

ದರ್ಶನ್‌ (Actor Darshan) ಹಾಗೂ ಪವಿತ್ರಾ (Pavithra Gowda) ನ್ಯಾಯಾಂಗ ಬಂಧನಲ್ಲಿದ್ದಾರೆ. ಈ ಕೊಲೆ ಪ್ರಕರಣಕ್ಕೂ ಮುಂಚೆ ದರ್ಶನ್‌ಗೆ ಪವಿತ್ರಾ ಗೌಡಳ ಮುನಿಸು ಹಲವು ಬಾರಿ ಆಪತ್ತು ತಂದು ಒಡ್ಡಿದೆ. ಪವಿತ್ರಾಗೌಡ ಮುನಿಸು ಶಮನ‌‌ ಮಾಡೋದೇ ಒಂದು ಚಾಲೇಂಜ್‌ ಆಗಿತ್ತು ದರ್ಶನ್‌ಗೆ. ಒಂದೊಂದು ಬಾರಿ ಕೋಪಿಸಿಕೊಂಡಾಗಲೂ ಒಂದೊಂದು ರೀತಿಯ ಪರಿಹಾರ ಕೊಡಬೇಕಿತ್ತು. ಲಕ್ಷ ,ಕೋಟಿ ಬೆಲೆ ಬಾಳುವ ವಸ್ತುಗಳೇ ಪವಿತ್ರಗೌಡ ಕೋಪ ಕಡಿಮೆಯಾಗಲು ಬೇಕಿತ್ತು.

ಕೆಲವೇ ದಿನಗಳ ಹಿಂದೆ ಒಂದು ಕಾರ್ ಕೂಡ ದರ್ಶನ್‌ ಅವರು ಪವಿತ್ರಾಗೆ ಗಿಫ್ಟ್‌ ಕೊಟ್ಟಿದ್ದರು ಎನ್ನಲಾಗಿದೆ. ಅನಂತರ‌ ಮತ್ತೊಂದು ಕಾರ್ ಗಿಫ್ಟ್ ಕೂಡ ಪವಿತ್ರಾ ಕೇಳಿದ್ದರಂತೆ. ದರ್ಶನ್ ದುಬೈ ಟ್ರಿಪ್ ಮುಗಿಸಿ ಬರುತ್ತಿದ್ದಂತೆ ಕೋಟಿ ಬೆಲೆಯ ಕಾರಿಗೆ ತೀವ್ರವಾದ ಬೇಡಿಕೆ ಇಟ್ಟಿದ್ದರು. ಕಾರು ಕೊಟ್ಟ ಬಳಿಕ ಇದೀಗ ಒಂದು ಪ್ರಾಣವೇ ಗಿಫ್ಟ್ ಕೊಟ್ಟಂತಾಗಿದೆ.

ದರ್ಶನ್‌ ಪವಿತ್ರಾ ಮುನಿಸು ಶಮನಕ್ಕೆ‌ ರೇಣುಕಾಸ್ವಾಮಿ ಕಿಡ್ನಾಪ್ ಅಸ್ತ್ರವಾಗಿತ್ತು ಎನ್ನಲಾಗಿದೆ. ಆರಂಭದಲ್ಲಿ‌ ಕಾರು ಕೊಡಿಸೋದಕ್ಕೆ ನಟ‌ ದರ್ಶನ್ ನಿರಾಕರಿಸಿದ್ದರು ಎಂಬ ಮಾಹಿಯೂ ಇದೆ. ಅಷ್ಟು ದೊಡ್ಡ ಮಟ್ಟದ ಹಣ ಸದ್ಯ ಇಲ್ಲವೆಂಬ ಕಾರಣ‌ ನೀಡಿ ಕಾರು ಕೊಡಿಸಲು ಬ್ರೇಕ್ ಕೂಡ ಹಾಕಕಿದ್ದರು. ಇದರಿಂದಾಗಿ ಕೋಪಗೊಂಡ ಪವಿತ್ರಾ ಬಹುತೇಕ ಒಂದು ತಿಂಗಳ ಕಾಲ ದರ್ಶನ್ ಬಳಿ ಮಾತು ಬಿಟ್ಟಿದ್ದಳು.

ಈ ಸಮಯದಲ್ಲಿಯೇ ರೇಣುಕಾಸ್ವಾಮಿ‌‌ ಮೆಸೇಜ್ ಅತಿರೇಕವಾಗಿತ್ತು. ಮಾತು ಬಿಟ್ಟಿದ್ದ ಕಾರಣ ದರ್ಶನ್‌‌ಗೆ ವಿಷಯ ತಿಳಿಸದ ಪವಿತ್ರಾ ಗೌಡ, ಈ ವಿಚಾರವನ್ನು ಪವನ್ ಬಳಿ ತಿಳಿಸಿದ್ದಳು. ಆದರೆ ಪವನ್‌ ಈ ವಿಚಾರವನ್ನು ದರ್ಶನ್‌ ಬಳಿ ನೇರವಾಗಿ ಹೇಳಿದ್ದ. ಆ ನಂತರ ನಡೆದದ್ದೇ ರೇಣುಕಾಸ್ವಾಮಿ ಕಿಡ್ನಾಪ್ ಮತ್ತು ಕೊಲೆ‌ ಪ್ರಕರಣ.

ಇದನ್ನೂ ಓದಿ: Actor Darshan: ದರ್ಶನ್‌ಗಾಗಿ ವಿಶೇಷ ಪೂಜೆ ಮಾಡಿಸಿದ್ರಾ ವಿಜಯಲಕ್ಷ್ಮಿ? ಅಸಲಿ ಕಥೆ ಬೇರೆಯೇ ಇದೆ!

Continue Reading
Advertisement
Actor Darshan Lost KG In 25 Days
ಕ್ರೈಂ4 mins ago

Actor Darshan: 25 ದಿನಕ್ಕೆ ದರ್ಶನ್‌ ತೂಕ ಕಳೆದುಕೊಂಡಿದ್ದು ಇಷ್ಟೊಂದಾ?

road accident vijayapura
ವಿಜಯಪುರ14 mins ago

Road Accident: ಬಸ್‌ ಹರಿದು ವ್ಯಕ್ತಿ ಸಾವು; ಮರಳೇಕಾಯಿ ತಿಂದು 8 ಮಕ್ಕಳು ಅಸ್ವಸ್ಥ

Virat kohli
ಪ್ರಮುಖ ಸುದ್ದಿ17 mins ago

Virat Kohli : ಇನ್​ಸ್ಟಾಗ್ರಾಮ್ ಪೋಸ್ಟ್​ ಮೂಲಕ ಬಿಟಿಎಸ್​ ಬ್ಯಾಂಡ್​ನ ದಾಖಲೆ ಮುರಿದ ವಿರಾಟ್​ ಕೊಹ್ಲಿ

Period Insomnia
ಆರೋಗ್ಯ27 mins ago

Period Insomnia: ಋತುಸ್ರಾವ ಸಮಯದಲ್ಲಿ ನಿದ್ದೆಯ ಸಮಸ್ಯೆಯೇ?; ಇಲ್ಲಿವೆ ಸರಳ ಟಿಪ್ಸ್‌ಗಳು

Kundapura Kannada This time Kundapura Kannada Festival at the palace grounds Here is the list of program
ಉಡುಪಿ38 mins ago

Kundapura Kannada:  ಅರಮನೆ ಮೈದಾನದಲ್ಲಿ ಈ ಬಾರಿ `ವಿಶ್ವ ಕುಂದಾಪುರ ಕನ್ನಡ ಹಬ್ಬ’; ಕಾರ್ಯಕ್ರಮದ ವಿವರ ಪಟ್ಟಿ ಇಲ್ಲಿದೆ!

swamiji death kalaburagi viraktha math
ಕಲಬುರಗಿ40 mins ago

Swamiji Death: ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿ ವಿಧಿವಶ

Smriti Mandhana
ಕ್ರಿಕೆಟ್43 mins ago

Smriti Mandhana : ಬಾಯ್​ಫ್ರೆಂಡ್​ ಜತೆಗಿನ ಐದು ವರ್ಷಗಳ ಬಾಂಧವ್ಯವನ್ನು ಕೇಕ್​ ಕಟ್​ ಮಾಡುವ ಮೂಲಕ ಸಂಭ್ರಮಿಸಿದ ಸ್ಮೃತಿ ಮಂದಾನಾ

child abandon
ಕ್ರೈಂ52 mins ago

Child Abandon: ಮೂರು ತಿಂಗಳ ಮಗು ಬಿಟ್ಟು ತಾಯಿ ಪರಾರಿ

Chandan Shetty talk about future decision
ಸ್ಯಾಂಡಲ್ ವುಡ್1 hour ago

Chandan Shetty: ಚಂದನ್‌ ಶೆಟ್ಟಿಗೆ ಒಳ್ಳೆ ಹುಡುಗಿ ಜತೆ ಮದುವೆಯಾಗುವ ಕನಸು ಏನೋ ಇತ್ತಂತೆ ಆದರೆ….

Mumbai rain
ಪ್ರಮುಖ ಸುದ್ದಿ1 hour ago

Mumbai Rain : ಭಾನುವಾರ ರಾತ್ರಿ ಪೂರ್ತಿ ಸುರಿದ ಮಳೆಗೆ ಮುಂಬೈ ನಗರದ ಹಲವು ಪ್ರದೇಶಗಳು ಜಲಾವೃತ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ14 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ16 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ17 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ2 days ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

ಟ್ರೆಂಡಿಂಗ್‌