Team India: ತವರಿಗೆ ಪ್ರಯಾಣ ಬೆಳೆಸಿದ ಟೀಮ್​ ಇಂಡಿಯಾ; ನಾಳೆ ದಿಲ್ಲಿಗೆ ಆಗಮನ - Vistara News

ಕ್ರೀಡೆ

Team India: ತವರಿಗೆ ಪ್ರಯಾಣ ಬೆಳೆಸಿದ ಟೀಮ್​ ಇಂಡಿಯಾ; ನಾಳೆ ದಿಲ್ಲಿಗೆ ಆಗಮನ

Team India: ಬಿಸಿಸಿಐ ವ್ಯವಸ್ಥೆ ಮಾಡಿರುವ ವಿಶೇಷ ವಿಮಾನದಲ್ಲಿ ಆಟಗಾರರು ಮತ್ತವರ ಕುಟುಂಬಸ್ಥರು, ಬಿಸಿಸಿಐ ಅಧಿಕಾರಿಗಳು ಸೇರಿ ಇಡೀ ತಂಡ ಭಾರತಕ್ಕೆ ಮರಳಲಿದ್ದಾರೆ. ಟಿ 20 ವಿಶ್ವಕಪ್ ಫೈನಲ್​​ನಲ್ಲಿ ಭಾರತ ಗೆದ್ದ ಕೆಲವೇ ಗಂಟೆಗಳ ನಂತರ ಬೆರಿಲ್ ಚಂಡಮಾರುತವು ದ್ವೀಪ ರಾಷ್ಟ್ರಕ್ಕೆ ಅಪ್ಪಳಿಸಿತ್ತು.

VISTARANEWS.COM


on

Team India
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಾರ್ಬಡೋಸ್​: ಟಿ20 ವಿಶ್ವ ಚಾಂಪಿಯನ್​ ಭಾರತ ತಂಡ(Team India) ಬಾರ್ಬಡೋಸ್​ನಿಂದ(Barbados) ತವರಿಗೆ ಪ್ರಯಾಣ ಬೆಳೆಸಿದೆ(Team India’s departure). ಈ ವಿಚಾರವನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಬುಧವಾರ ಖಚಿತಪಡಿಸಿದೆ. ಟಿ20 ವಿಶ್ವಕಪ್​ ಟ್ರೋಫಿಯ ವಿಡಿಯೊ ಹಾಕಿ ನಾವು ಮರಳುತ್ತಿದ್ದೇವೆ ಎಂದು ಬರೆದುಕೊಂಡಿದೆ. ಬುಧವಾರ ಬಾರ್ಬಡೋಸ್​ನಿಂದ ಹೊರಡಿರುವ ಟೀಮ್​ ಇಂಡಿಯಾ ಗುರುವಾರ ಬೆಳಗ್ಗೆ ನವದೆಹಲಿಗೆ ತಲುಪಲಿದ್ದಾರೆ ಎಂದು ವರದಿಯಾಗಿದೆ.

ಬಿಸಿಸಿಐ ವ್ಯವಸ್ಥೆ ಮಾಡಿರುವ ವಿಶೇಷ ವಿಮಾನದಲ್ಲಿ ಆಟಗಾರರು ಮತ್ತವರ ಕುಟುಂಬಸ್ಥರು, ಬಿಸಿಸಿಐ ಅಧಿಕಾರಿಗಳು ಸೇರಿ ಇಡೀ ತಂಡ ಭಾರತಕ್ಕೆ ಮರಳಲಿದ್ದಾರೆ. ಟಿ 20 ವಿಶ್ವಕಪ್ ಫೈನಲ್​​ನಲ್ಲಿ ಭಾರತ ಗೆದ್ದ ಕೆಲವೇ ಗಂಟೆಗಳ ನಂತರ ಬೆರಿಲ್ ಚಂಡಮಾರುತವು ದ್ವೀಪ ರಾಷ್ಟ್ರಕ್ಕೆ ಅಪ್ಪಳಿಸಿತ್ತು. ಗಂಟೆಗೆ 130 ಕಿ.ಮೀ.ಗೂ ವೇಗವಾಗಿ ಗಾಳಿ ಬೀಸುತ್ತಿರುವುದರಿಂದ ಪ್ರವಾಸಿಗರಿಗೆ ಒಳಾಂಗಣದಲ್ಲೇ ಉಳಿದುಕೊಳ್ಳುವಂತೆ ಎಚ್ಚರಿಕೆ ನೀಡಲಾಗಿತ್ತು. ಅಲ್ಲದೇ ಬಾರ್ಬಡಾಸ್‌ನಲ್ಲಿ ನಿಷೇದಾಜ್ಞೆ ಜಾರಿ ಮಾಡಿ ಜನರಿಗೆ ಮನೆಗಳಿಂದ ಹೊರಬರದಂತೆ ಸೂಚಿಸಲಾಗಿತ್ತು. ಜತೆಗೆ ವಿಮಾನ ನಿಲ್ದಾಣಗಳು ಬಂದ್‌ ಆಗಿತ್ತು. ಹೀಗಾಗಿ ಭಾರತ ತಂಡ ಬಾರ್ಬಡೋಸ್​ನ ಹೊಟೇಲ್‌ನಲ್ಲಿ ತಂಗಿತ್ತು.

17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದ ಭಾರತ

ಫೈನಲ್​ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ(South Africa vs India) 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತ್ತು.

ಬೆರಿಲ್ ಚಂಡಮಾರುತದ ದೃಶ್ಯವನ್ನು ವಿಡಿಯೊ ಕಾಲ್​ ಮೂಲಕ ಪತ್ನಿ ಅನುಷ್ಕಾಗೆ ತೋರಿಸಿದ ಕೊಹ್ಲಿ

ಚಂಡಮಾರುತದ ಅಬ್ಬರದ ದೃಶ್ಯವನ್ನು ವಿರಾಟ್​ ಕೊಹ್ಲಿ(virat kohli) ಅವರು ತಮ್ಮ ಪತ್ನಿ ಅನುಷ್ಕಾ ಶರ್ಮಗೆ(Virat- Anushka) ವಿಡಿಯೊ ಕಾಲ್ ಮೂಲಕ ತೋರಿಸುತ್ತಿರುವ ವಿಡಿಯೊ ಇದೀಗ ವೈರಲ್​ ಆಗಿದೆ.​

ವಿರಾಟ್​ ಕೊಹ್ಲಿ ತಾವು ತಂಗಿರುವ ಹೊಟೇಲ್‌ ಕಿಟಕಿಯಿಂದ ಸಮುದ್ರದಲ್ಲಿ ಅಪ್ಪಳಿಸುತ್ತಿರುವ ಭಾರೀ ಗಾತ್ರದ ಅಲೆಗಳನ್ನು, ಮತ್ತು ಅಲ್ಲಿನ ಪರಿಸ್ಥಿತಿ ಹೇಗಿದೆ ಎನ್ನುವುದನ್ನು ಪತ್ನಿ ಅನುಷ್ಕಾಗೆ(anushka sharma) ವಿಡಿಯೊ ಕಾಲ್​ ಮೂಲಕ ತೋರಿಸಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ. ಕುಟುಂಬಕ್ಕೆ ಮೊದಲ ಪ್ರಾಧಾನ್ಯತೆ ನೀಡುವ ಕೊಹ್ಲಿ ಯಾವುದೇ ಪಂದ್ಯ ಇರಲಿ ಇದು ಮುಕ್ತಾಯಗೊಂಡ ತಕ್ಷಣ ಪತ್ನಿಗೆ ವಿಡಿಯೊ ಕಾಲ್​ ಮಾಡಿ ಮಾತನಾಡುತ್ತಾರೆ. ಕೆಲವೊಮ್ಮೆ ಕ್ರಿಕೆಟ್​ ಸರಣಿ ಇದ್ದರೂ ಕೂಡ ಇದರಿಂದ ಹಿಂದೆ ಸರಿದು ಕುಟುಂಬದ ಜತೆ ಕಾಲ ಕಳೆಯುತ್ತಾರೆ. ಟಿ20 ವಿಶ್ವಕಪ್​ ಗೆದ್ದ ಬಳಿಕವೂ ಕೂಡ ಕೊಹ್ಲಿ ಪತ್ನಿಗೆ ಕರೆ ಮಾಡಿ ಮಕ್ಕಳ ಬಗ್ಗೆ ವಿಚಾರಿಸಿದ್ದಾರೆ. ಜತೆಗೆ ಪುಟ್ಟ ಮಗುವಿಗೆ ಫ್ಲೈಯಿಂಗ್ ಕಿಸ್ ನೀಡಿದ ವಿಡಿಯೊ ಕೂಡ ವೈರಲ್​ ಆಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Suryakumar Yadav: 8 ವರ್ಷಗಳ ಹಿಂದೆಯೇ ಅದ್ಭುತ ಕ್ಯಾಚ್​ ಹಿಡಿದೆ ಎಂದು ವಿವಾಹ ವಾರ್ಷಿಕೋತ್ಸವ ಆಚರಿಸಿದ ಸೂರ್ಯಕುಮಾರ್

Suryakumar Yadav: ಆ ಕ್ಯಾಚ್‌ ಹಿಡಿದು 8 ದಿನಗಗಳು ಕಳೆದಿವೆ. ಆದರೆ ನನ್ನ ಪ್ರಮುಖ ಕ್ಯಾಚ್ 8 ವರ್ಷಗಳ ಹಿಂದೆ ಹಿಡಿದದ್ದು!’ ಎಂದು ಬರೆದುಕೊಳ್ಳುವ ಮೂಲಕ ಸೂರ್ಯಕುಮಾರ್ ಯಾದವ್ ತಮ್ಮ ಪತ್ನಿಗೆ ವಿವಾಹ ವಾರ್ಷಿಕೋತ್ಸದ ಶುಭ ಹಾರೈಸಿದ್ದಾರೆ.

VISTARANEWS.COM


on

Suryakumar Yadav
Koo

ಮುಂಬಯಿ: ಟಿ20 ವಿಶ್ವಕಪ್ ವಿಜೇತ ಹೀರೋ ಸೂರ್ಯಕುಮಾರ್ ಯಾದವ್(Suryakumar Yadav) ಅವರು ತಮ್ಮ ಎಂಟನೇ ವಿವಾಹ ವಾರ್ಷಿಕೋತ್ಸವನ್ನು ಪತ್ನಿ ದೇವಿಶಾ ಶೆಟ್ಟಿ(Devisha Shetty) ಜತೆ ಆಚರಿಸಿಕೊಂಡಿದ್ದಾರೆ. ವಿದೇಶದಲ್ಲಿ ಈ ಜೋಡಿ ತಮ್ಮ ವಿವಾಹ ವಾರ್ಷಿಕೋತ್ಸವನ್ನು ಆಚರಿಸಿಕೊಂಡಿರುವ ಫೋಟೊವನ್ನು ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸೂರ್ಯಕುಮಾರ್​ ಅವರು ಪತ್ನಿಗೆ ಶುಭ ಹಾರೈಸಿರುವ ಪೋಸ್ಟ್​ ಇದೀಗ ವೈರಲ್​ ಆಗಿದೆ.

ಜೂನ್ 29 ರಂದು ಬಾರ್ಬಡೋಸ್‌ನಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಸೂರ್ಯಕುಮಾರ್​ ಯಾದವ್ ಅದ್ಭುತ ಕ್ಯಾಚ್​ ಹಿಡಿದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೇ ಕ್ಯಾಚ್​ ಅನ್ನು ಸೂರ್ಯಕುಮಾರ್ ತಮ್ಮ ವಿವಾಹ ವಾರ್ಷಿಕೋತ್ಸ ಆಚರಣೆಯ ವೇಳೆಯೂ ಬಳಸಿಕೊಂಡಿದ್ದಾರೆ. ‘ಆ ಕ್ಯಾಚ್‌ ಹಿಡಿದು 8 ದಿನಗಗಳು ಕಳೆದಿವೆ. ಆದರೆ ನನ್ನ ಪ್ರಮುಖ ಕ್ಯಾಚ್ 8 ವರ್ಷಗಳ ಹಿಂದೆ ಹಿಡಿದದ್ದು!’ ಎಂದು ಬರೆದುಕೊಳ್ಳುವ ಮೂಲಕ ಪತ್ನಿಗೆ ವಿವಾಹ ವಾರ್ಷಿಕೋತ್ಸದ ಶುಭ ಹಾರೈಸಿದ್ದಾರೆ. ಸದ್ಯ ಸೂರ್ಯ ಅವರು ಈ ಪೋಸ್ಟ್​ ವೈರಲ್ ಆಗಿದೆ. ಜುಲೈ 7, 2016ರಲ್ಲಿ ಸೂರ್ಯ ಮತ್ತು ದೇವಿಶಾ ವಿವಾಹವಾಗಿದ್ದರು. ದೇವಿಶಾ ಶೆಟ್ಟಿ ಮೂಲತಃ ಕರಾವಳಿಯವರಾಗಿದ್ದಾರೆ.

ಕೊನೆಯ ಓವರ್​ನಲ್ಲಿ ದಕ್ಷಿಣ ಆಫ್ರಿಕಾ ಗೆಲುವಿಗೆ 16 ರನ್ ಅಗತ್ಯವಿತ್ತು. ಹಾರ್ದಿಕ್ ಪಾಂಡ್ಯ ಎಸೆದ ಮೊದಲ ಎಸೆತವನ್ನು ಡೇವಿಡ್ ಮಿಲ್ಲರ್ ಸಿಕ್ಸರ್ ನತ್ತ ಬಾರಿಸಿದ್ದರು. ಬೌಂಡರಿ ಲೈನ್ ನಲ್ಲಿದ್ದ ಸೂರ್ಯ ಕುಮಾರ್ ಯಾದವ್ ಯಾರೂ ಊಹಿಸದಂತೆ ಸಾಹಸಮಯ ಅಮೋಘ ಕ್ಯಾಚ್ ಪಡೆದರು. 21 ರನ್ ಗಳಿಸಿದ್ದ ಡೇವಿಡ್​ ಮಿಲ್ಲರ್ ವಿಕೆಟ್​ ಕೈಚೆಲ್ಲಿದರು. ಮಿಲ್ಲರ್​ ಔಟ್​ ಆಗುತ್ತಿದ್ದಂತೆ ಭಾರತದ ಗೆಲುವು ಕೂಡ ಖಚಿತಗೊಂಡಿತ್ತು. ಸೂರ್ಯ ಈ ಕ್ಯಾಚ್​ ಹಿಡಿಯದೇ ಹೋಗಿದ್ದರೆ ಭಾರತ ಸೋಲುವ ಸಾಧ್ಯತೆಯೂ ಅಧಿಕವಾಗಿತ್ತು.

ಇದನ್ನೂ ಓದಿ Suryakumar Yadav: ದಿಲ್ಲಿಯಲ್ಲಿ ತಮಟೆ ಸದ್ದಿಗೆ ಹೆಜ್ಜೆ ಹಾಕಿದ ಸೂರ್ಯಕುಮಾರ್​ ಯಾದವ್​; ವಿಡಿಯೊ ವೈರಲ್​

ಸೂರ್ಯಕುಮಾರ್​ ಯಾದವ್(Suryakumar Yadav Catch)​ ಅವರು ಹಿಡಿದ ಈ ಕ್ಯಾಚ್​ ಬಗ್ಗೆ ಭಾರೀ ಚರ್ಚೆ ನಡೆದಿತ್ತು. ಸೂರ್ಯಕುಮಾರ್​ ಬೌಂಡರಿ ಗೆರೆಯನ್ನು ತುಳಿದಿದ್ದಾರೆ ಎನ್ನಲಾದ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. ಈಗಲೂ ಕೂಡ ಈ ಚರ್ಚೆ ನಿಂತಿಲ್ಲ.

ಕ್ರಿಕೆಟ್ ಸಂಖ್ಯಾಶಾಸ್ತ್ರಜ್ಞ ರಜನೀಶ್ ಗುಪ್ತಾ ಎಂಬವರು ಸೂರ್ಯಕುಮಾರ್​ ಕ್ಯಾಚ್​ ವಿವಾದದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. “ನಾನು ಅಂದು ಮೈದಾನದ ಟಿವಿ ಕಾಮೆಂಟರಿ ಬಾಕ್ಸ್‌ನಲ್ಲಿದ್ದೆ. ಬಿಳಿ ಗೆರೆಯು ಬೌಂಡರಿಯಾಗಿರಲಿಲ್ಲ ಎಂದು ನಾನು ಹೇಳಬಲ್ಲೆ. ಏಕೆಂದರೆ ಬೌಂಡರಿ ರೋಪ್ ವೆಡ್ಜ್ ಆ ಬಿಳಿ ಗೆರೆಯ ಹಿಂದೆ ಇತ್ತು. ಪಂದ್ಯದ ಆರಂಭದಿಂದಲೂ ಹಾಗೆಯೇ ಇತ್ತು. ಪಿಚ್ ಅನ್ನು ಬದಲಾಯಿಸಿದಾಗ, ಬೌಂಡರಿಗಳನ್ನು ಸರಿಹೊಂದಿಸಲಾಗುತ್ತದೆ. ಹೀಗಾಗಿ ಈ ಬಗ್ಗೆ ಚರ್ಚೆ ನಡೆಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದಿದ್ದಾರೆ.

Continue Reading

ಕ್ರೀಡೆ

Paris 2024 Olympics Athletics: ವಿಶ್ವ ರ್‍ಯಾಂಕಿಂಗ್‌ ಆಧಾರದಲ್ಲಿ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಜೆಸ್ವಿನ್‌, ಅಂಕಿತಾ ಧ್ಯಾನಿ

Paris Olympics 2024:22 ವರ್ಷದ 5000 ಮೀ. ಓಟಗಾರ್ತಿ ಅಂಕಿತಾ ಕಳೆದ 2023ರ ಏಷ್ಯನ್‌ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗೆದ್ದ ಸಾಧನೆ ಮಾಡಿದ್ದರು. ಲಾಂಗ್‌ ಜಂಪ್‌ ಪಟು ಜೆಸ್ವಿನ್‌ ಇತ್ತೀಚೆಗಷ್ಟೇ ರಾಷ್ಟ್ರೀಯ ಅಂತರ್-ರಾಜ್ಯ ಅಥ್ಲೆಟಿಕ್ಸ್‌ನಲ್ಲಿ ಬೆಳ್ಳಿ ಜಯಿಸಿದ್ದರು.

VISTARANEWS.COM


on

Koo

ನವದೆಹಲಿ: ಲಾಂಗ್‌ ಜಂಪ್‌ ಪಟು ಜೆಸ್ವಿನ್‌ ಆಲ್ಡ್ರಿನ್‌(Jeswin Aldrin) ಹಾಗೂ 5000 ಮೀ. ಓಟಗಾರ್ತಿ ಅಂಕಿತಾ ಧ್ಯಾನಿ(Ankita Dhyani) ವಿಶ್ವ ರ್‍ಯಾಂಕಿಂಗ್‌(world rankings) ಆಧಾರದ ಮೇಲೆ ಪ್ಯಾರಿಸ್​ ಒಲಿಂಪಿಕ್ಸ್‌ನಲ್ಲಿ(Paris Olympics 2024) ಸ್ಪರ್ಧಿಸಲು ಅರ್ಹತೆ ಗಿಟ್ಟಿಸಿಕೊಳ್ಳುವ ಮೂಲಕ ಒಲಿಂಪಿಕ್ಸ್​ನ ಅಥ್ಲೆಟಿಕ್ಸ್‌ನಲ್ಲಿ(Paris 2024 Olympics Athletics) ಪಾಲ್ಗೊಳ್ಳಲಿರುವ ಭಾರತೀಯರ ಅಥ್ಲೀಟ್​ಗಳ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಆಗಸ್ಟ್‌ 1ರಿಂದ ಅಥ್ಲೆಟಿಕ್ಸ್‌ ಶುರುವಾಗಲಿದೆ.

ಕಳೆದ ವಾರ ಭಾರತದ 9 ಅಥ್ಲೀಟ್​ಗಳು ವಿಶ್ವ ಶ್ರೇಯಾಂಕದ ಆಧಾರದಲ್ಲಿ ಒಲಿಂಪಿಕ್ಸ್​ಗೆ ಅರ್ಹತೆ ಪಡೆದುಕೊಂಡಿದ್ದರು. ಈ ವೇಳೆ ಭಾರತೀಯ ಅಥ್ಲೆಟಿಕ್ಸ್‌ ಸಂಸ್ಥೆ ಒಲಿಂಪಿಕ್ಸ್‌ನ ಅಥ್ಲೆಟಿಕ್ಸ್‌ನಲ್ಲಿ ಪಾಲ್ಗೊಳ್ಳಲಿರುವ ಭಾರತದ ಒಟ್ಟು 28 ಸ್ಪರ್ಧಿಗಳ ಹೆಸರು ಪ್ರಕಟಿಸಿತ್ತು. ಇದೀಗ ಮತ್ತೆ ಇಬ್ಬರ ಹೆಸರನ್ನು ಸೇರ್ಪಡೆಗೊಳಿಸಿದೆ. 30 ಸದಸ್ಯರನ್ನು ಒಳಗೊಂಡ ಟ್ರ್ಯಾಕ್ ಆ್ಯಂಡ್ ಫೀಲ್ಡ್ ತಂಡಕ್ಕೆ ಟೋಕಿಯೊ ಒಲಿಂಪಿಕ್​ ಚಿನ್ನದ ಪದಕ ವಿಜೇತ, ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ನಾಯಕನಾಗಿದ್ದಾರೆ

22 ವರ್ಷದ 5000 ಮೀ. ಓಟಗಾರ್ತಿ ಅಂಕಿತಾ ಕಳೆದ 2023ರ ಏಷ್ಯನ್‌ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗೆದ್ದ ಸಾಧನೆ ಮಾಡಿದ್ದರು. ಲಾಂಗ್‌ ಜಂಪ್‌ ಪಟು ಜೆಸ್ವಿನ್‌ ಇತ್ತೀಚೆಗಷ್ಟೇ ರಾಷ್ಟ್ರೀಯ ಅಂತರ್-ರಾಜ್ಯ ಅಥ್ಲೆಟಿಕ್ಸ್‌ನಲ್ಲಿ ಬೆಳ್ಳಿ ಜಯಿಸಿದ್ದರು.

ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಪದಕ ಗೆಲ್ಲುವುದು ಭಾರತದ ಪ್ರಮುಖ ಗುರಿಯಾಗಿದೆ. ಟೋಕಿಯೊದಲ್ಲಿ ಭಾರತ ಒಟ್ಟು 7 ಪದಕ ಜಯಿಸಿತ್ತು. ಇದರಲ್ಲಿ ಒಂದು ಚಿನ್ನ, 2 ಬೆಳ್ಳಿ ಮತ್ತು 4 ಕಂಚಿನ ಪದಕ ಒಳಗೊಂಡಿತ್ತು. ಒಟ್ಟಾರೆಯಾಗಿ ಭಾರತ ಪದಕ ಪಟ್ಟಿಯಲ್ಲಿ 48ನೇ ಸ್ಥಾನ ಪಡೆದಿತ್ತು. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

ಇದನ್ನೂ ಓದಿ Paris Olympics 2024: ಒಲಿಂಪಿಕ್ಸ್‌ಗೆ ಭಾರತದ ಎಲ್ಲ ಕ್ರೀಡಾಪಟುಗಳು ಫಿಟ್‌ ಎಂದ ಐಒಎ

ಈ ಬಾರಿಯ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ(Paris Olympics) ಭಾಗಿಯಾಗುವ ಭಾರತದ ಆ್ಯತ್ಲೀಟ್‌ಗಳಿಗೆ ಮನೆಯ ವಾತಾವರಣವನ್ನು ಕಲ್ಪಿಸುವ ಉದ್ದೇಶದಿಂದ ರಿಲಯನ್ಸ್‌ ಸಂಸ್ಥೆ “ಇಂಡಿಯಾ ಹೌಸ್​”(India House)​ ಎಂಬ ವಿಶೇಷ ವ್ಯವಸ್ಥೆಯೊಂದನ್ನು ಮಾಡಿದೆ. ಭಾರತೀಯ ಕ್ರೀಡಾಪಟುಗಳು ಇದರಲ್ಲೇ ಉಳಿದುಕೊಳ್ಳಲಿದ್ದಾರೆ. ಇಂಡಿಯಾ ಹೌಸ್​ಗೆ ಎಲ್ಲ ದೇಶಗಳ ಪತ್ರಕರ್ತರಿಗೆ ಮುಕ್ತ ಪ್ರವೇಶವಿದೆ ಎಂದು ನೀತಾ ಅಂಬಾನಿ(Nita Ambani) ಹೇಳಿದ್ದಾರೆ. ನೀತಾ ಅಂಬಾನಿ ಅವರು ಅಂತಾರಾಷ್ಟ್ರೀಯ ಒಲಿಂಪಿಕ್ ಸಂಸ್ಥೆ (ಐಒಸಿ.) ಸದಸ್ಯೆಯಾಗಿದ್ದಾರೆ.

ಕ್ರೀಡಾಪಟುಗಳ ಮೇಲೆ ಮೋದಿ ಪದಕ ವಿಶ್ವಾಸ


ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳಲಿರುವ ಭಾರತದ ಅಥ್ಲೀಟ್‌ಗಳು ಉತ್ತಮ ಪ್ರದರ್ಶನ ನೀಡುವ ಮೂಲಕ ದೇಶಕ್ಕೆ ಹೆಮ್ಮೆ ತರುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪ್ಯಾರಿಸ್‌ಗೆ ತೆರಳಲಿರುವ ಹಲವು ಅಥ್ಲೀಟ್‌ಗಳ ಜತೆ ಸಂವಾದ ನಡೆಸಿದ ಬಳಿಕ ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದರು.

‘ಒಲಿಂಪಿಕ್ಸ್‌ಗಾಗಿ ಪ್ಯಾರಿಸ್‌ಗೆ ತೆರಳಲಿರುವ ನಮ್ಮ ಅಥ್ಲೀಟ್‌ಗಳು ಅತ್ಯುತ್ತಮ ಪ್ರದರ್ಶನ ನೀಡಿ ಭಾರತವೇ ಹೆಮ್ಮೆ ಪಡುವಂತೆ ಮಾಡುತ್ತಾರೆ ಎಂಬ ವಿಶ್ವಾಸ ನನಗಿದೆ. ಅವರ ಮೇಲೆ 140 ಕೋಟಿ ಭಾರತೀಯರು ಭರವಸೆ ಇಟ್ಟಿದ್ದಾರೆ’ ಎಂದು ಮೋದಿ ಬರೆದುಕೊಂಡಿದ್ದರು.

Continue Reading

ಕ್ರೀಡೆ

Rohit Sharma: ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ ಕುಟುಂಬದ ಜತೆ ವಿದೇಶ ಪ್ರವಾಸ ಕೈಗೊಂಡ ರೋಹಿತ್​

Rohit Sharma: ವಿಶ್ವಕಪ್​ ಆಡಿದ ಟೀಮ್​ ಇಂಡಿಯಾದ ಹಲವು ಆಟಗಾರರು ಮುಂದಿನ ಸರಣಿಗೂ ಮುನ್ನ ಕೊಂಚ ರಿಲ್ಯಾಕ್ಸ್ ಆಗುವ ನಿಟ್ಟಿನಲ್ಲಿ ತಮ್ಮ ಕುಟುಂಬದ ಜತೆ ನೆಚ್ಚಿನ ತಾಣಗಳಿಗೆ ಪ್ರವಾಸ ಕೈಗೊಂಡಿದ್ದಾರೆ.

VISTARANEWS.COM


on

Rohit Sharma
Koo

ಮುಂಬಯಿ: ಟಿ20 ವಿಶ್ವಕಪ್​ ಗೆದ್ದು ತವರಿಗೆ ಮರಳಿ ಎಲ್ಲ ಅಭಿನಂದನಾ ಕಾರ್ಯಕ್ರಮ ಮತ್ತು ಸನ್ಮಾನಗಳನ್ನು ಸ್ವೀಕರಿಸಿರುವ ಟೀಮ್​ ಇಂಡಿಯಾ ನಾಯಕ ರೋಹಿತ್​ ಶರ್ಮ(Rohit Sharma) ಇದೀಗ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ. ಕುಟುಂಬದ ಜತೆ ವಿದೇಶ ಪ್ರವಾಸ ಕೈಗೊಂಡಿದ್ದಾರೆ.

ರೋಹಿತ್ ತಮ್ಮ ಪತ್ನಿ, ಮಗಳ ಜತೆ ಮುಂಬೈ ವಿಮಾನ ನಿಲ್ದಾಣದಿಂದ ವಿದೇಶ ಪ್ರಯಾಣ ಬೆಳೆಸಿದ ವಿಡಿಯೊ ವೈರಲ್​ ಆಗಿದೆ. ರೋಹಿತ್​ ಮಾತ್ರವಲ್ಲದೆ ಸೂರ್ಯಕುಮಾರ್ ಯಾದವ್ ಕೂಡಾ ಪತ್ನಿ ಜತೆ ಪ್ರವಾಸಕ್ಕೆ ತೆರಳಿದ್ದಾರೆ. ಒಟ್ಟಾರೆ ವಿಶ್ವಕಪ್​ ಆಡಿದ ಟೀಮ್​ ಇಂಡಿಯಾದ ಹಲವು ಆಟಗಾರರು ಮುಂದಿನ ಸರಣಿಗೂ ಮುನ್ನ ಕೊಂಚ ರಿಲ್ಯಾಕ್ಸ್ ಆಗುವ ನಿಟ್ಟಿನಲ್ಲಿ ತಮ್ಮ ಕುಟುಂಬದ ಜತೆ ನೆಚ್ಚಿನ ತಾಣಗಳಿಗೆ ಪ್ರವಾಸ ಕೈಗೊಂಡಿದ್ದಾರೆ.

ರೋಹಿತ್ ನಾಯಕತ್ವದಲ್ಲಿ, ಕಳೆದ ವಾರ ಬಾರ್ಬಡೋಸ್‌ನಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಏಳು ರನ್‌ಗಳ ಜಯದೊಂದಿಗೆ 11 ವರ್ಷಗಳ ಐಸಿಸಿ ಪ್ರಶಸ್ತಿ ಬರವನ್ನು ಕೊನೆಗೊಳಿಸಿತ್ತು. 2007 ರ ಉದ್ಘಾಟನಾ ಆವೃತ್ತಿಯ ನಂತರ ಇದು ಭಾರತಕ್ಕೆ ಒಲಿದ ಎರಡನೇ ಟಿ20 ವಿಶ್ವಕಪ್ ಪ್ರಶಸ್ತಿಯಾಗಿತ್ತು. ಮೆನ್ ಇನ್ ಬ್ಲೂ ಈ ಹಿಂದೆ ರೋಹಿತ್ ಅವರ ನಾಯಕತ್ವದಲ್ಲಿ ಎರಡು ಫೈನಲ್‌ಗಳನ್ನು ಆಡಿತ್ತು. ಏಕದಿನ ವಿಶ್ವಕಪ್ ಮತ್ತು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್. ಇಲ್ಲಿ ರನ್ನರ್-ಅಪ್ ಸ್ಥಾನ ಗಳಿಸಿತ್ತು.

ಇದನ್ನೂ ಓದಿ Rohit Sharma: ನನಗೆ ಟಿ20ಗೆ ನಿವೃತ್ತಿ ಘೋಷಿಸಲು ಮನಸ್ಸು ಇರಲಿಲ್ಲ; ಆಘಾತಕಾರಿ ಹೇಳಿಕೆ ನೀಡಿದ ರೋಹಿತ್​ ಶರ್ಮಾ

ಚಾಂಪಿಯನ್ಸ್​ ಟ್ರೋಫಿಗೂ ರೋಹಿತ್​ ನಾಯಕ


ಏಕದಿನ ಮತ್ತು ಟೆಸ್ಟ್ ಮಾದರಿಗಳಲ್ಲಿ ರೋಹಿತ್ ಶರ್ಮ(Rohit Sharma) ಭಾರತ ತಂಡದ ನಾಯಕರಾಗಿ ಮುಂದುವರಿಯಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ(BCCI secretary Jay Shah) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜತೆಗೆ ಮುಂದಿನ ವರ್ಷ ಪಾಕಿಸ್ತಾನ ಆತಿಥ್ಯದಲ್ಲಿ ನಡೆಯುವ ಚಾಂಪಿಯನ್ಸ್​ ಟ್ರೋಫಿ(Champions Trophy) ಟೂರ್ನಿಯಲ್ಲಿಯೂ ರೋಹಿತ್​ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

ಮುಂಬರುವ ಚಾಂಪಿಯನ್ಸ್ ಟ್ರೋಫಿ 2025 ಮತ್ತು ಮುಂದಿನ ವರ್ಷ ನಡೆಯಲಿರುವ ಮೂರನೇ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ನಲ್ಲಿ ಭಾರತ ತಂಡ ರೋಹಿತ್​ ಶರ್ಮ ನಾಯಕತ್ವದಲ್ಲಿ ಚಾಂಪಿಯನ್​ ಆಗಲಿದೆ” ಎಂದು ಜಯ್​ ಶಾ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

2025ರಲ್ಲಿ ಪಾಕಿಸ್ತಾನದಲ್ಲಿ ಆಯೋಜನೆಗೊಂಡಿರುವ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ತಿಳಿದುಬಂದಿದೆ. ಕೆಲದಿನಗಳ ಹಿಂದಷ್ಟೇ ಚಾಂಪಿಯನ್ಸ್‌ ಟ್ರೋಫಿಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದ್ದ ಪಾಕಿಸ್ತಾನ ಕ್ರಿಕೆಟ್‌ ಬೋರ್ಡ್‌, ಮಾ.1ಕ್ಕೆ ಲಾಹೋರ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ನಿಗದಿ ಮಾಡಿತ್ತು. ಆದರೆ, ಭದ್ರತೆಯ ಕಾರಣವನ್ನು ನೀಡಿರುವ ಬಿಸಿಸಿಐ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲು ನಿರಾಕರಿಸಿದೆ ಎಂದು ವರದಿಗಳು ತಿಳಿಸಿವೆ.

Continue Reading

ಕ್ರೀಡೆ

Hasin Jahan: ‘ನಾಯಿಗಳ ದಂಡು’… ಎಂದು ಶಮಿಯನ್ನು ಅನಗತ್ಯವಾಗಿ ಕೆಣಕಿದರೇ ವಿಚ್ಛೇದಿತ ಪತ್ನಿ?; ವಿಡಿಯೊ ವೈರಲ್​

Hasin Jahan: ಶಮಿ ವಿರುದ್ಧ ಹಸೀನ್ ಜಹಾನ್ ಈ ರೀತಿ ಮಾಡುತ್ತಿರುವುದು ಇದೇ ಮೊದಲೇನಲ್ಲ. ಏಕದಿನ ವಿಶ್ವಕಪ್​ ಟೂರ್ನಿಯ ವೇಳೆ ಉತ್ತಮ ಪ್ರದರ್ಶನ ತೋರಿದಾಗ ಎಮ್ಮೆ ನೀರು ಕುಡಿಯುತ್ತಿರುವ ಚಿತ್ರಗಳನ್ನು ಪೋಸ್ಟ್​ ಮಾಡುವ ಮೂಲಕ ವಿಲಕ್ಷಣದ ಹೇಳಿಕೆ ನೀಡಿದ್ದರು.

VISTARANEWS.COM


on

Hasin Jahan: Divorced wife who scolded Shami unnecessarily as 'pack of dogs'; The video is viral
Koo

ಕೋಲ್ಕತ್ತಾ: ಟೀಮ್​ ಇಂಡಿಯಾದ ಸ್ಟಾರ್​ ವೇಗಿ ಮೊಹಮ್ಮದ್​ ಶಮಿ(Mohammed Shami) ಅವರ ವಿರುದ್ಧ ಸದಾ ಒಂದಿಲ್ಲೊಂದು ಕಾರಣಗಳಿಂದ ಟೀಕಿಸುತ್ತಿರುವ ಅವರ ವಿಚ್ಛೇದಿತ ಪತ್ನಿ ಹಸೀನ್ ಜಹಾನ್(Hasin Jahan) ಈ ಬಾರಿ ನಾಯಿಗೆ ಹೋಲಿಕೆ ಮಾಡಿ ಪರೋಕ್ಷವಾಗಿ ಹೀಯಾಳಿಸಿದ್ದಾರೆ.

ಹೌದು, ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಕಣ್ಣು ಮಿಟುಕಿಸುವ ಒಂದು ನಿಮಿಷದ ವಿಡಿಯೊ ಹಂಚಿಕೊಂಡಿರುವ ಹಸೀನ್ ಜಹಾನ್, ನಾಯಿಗಳ ದಂಡು ಹೆಣ್ಣು ಮಕ್ಕಳ ಹಿಂದಿನಿಂದ ಮಾತ್ರ ಬೊಗಳುತ್ತದೆ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಶಮಿಯನ್ನು ಅನಗತ್ಯವಾಗಿ ಕೆಣಕಿದರೇ ಎಂದ ಅನುಮಾನ ಮೂಡಿದೆ.

ಶಮಿ ವಿರುದ್ಧ ಹಸೀನ್ ಜಹಾನ್ ಈ ರೀತಿ ಮಾಡುತ್ತಿರುವುದು ಇದೇ ಮೊದಲೇನಲ್ಲ. ಏಕದಿನ ವಿಶ್ವಕಪ್​ ಟೂರ್ನಿಯ ವೇಳೆ ಉತ್ತಮ ಪ್ರದರ್ಶನ ತೋರಿದಾಗ ಎಮ್ಮೆ ನೀರು ಕುಡಿಯುತ್ತಿರುವ ಚಿತ್ರಗಳನ್ನು ಪೋಸ್ಟ್​ ಮಾಡುವ ಮೂಲಕ ವಿಲಕ್ಷಣದ ಹೇಳಿಕೆ ನೀಡಿದ್ದರು.

ಕೆಲವು ತಿಂಗಳ ಹಿಂದೆ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ರೋಹಿತ್​ ಶರ್ಮ ಅವರು ತಮ್ಮ ಪುಟ್ಟ ಮಗಳು ಸಮೈರಾ ತೊಡೆ ಮೇಲೆ ಹಾಯಾಗಿ ಮಲಗಿರುವ ಫೋಟೊ ಹಂಚಿಕೊಂಡಿದ್ದ ಹಸೀನ್ ಜಹಾನ್, ಹೆಚ್ಚಿನ ತಂದೆಯಂದಿರು ತಮ್ಮ ಪುಟ್ಟ ಮಗಳನ್ನು ದೇವರಂತೆ ಕಂಡು ಅವರಿಂದ ಶಾಂತಿ ಕಂಡುಕೊಳ್ಳುತ್ತಾರೆ. ಮತ್ತು ಕೆಲವು ತಂದೆಯರು ವೇಶ್ಯೆಯರ ಮಡಿಲಲ್ಲಿ!. ಅಲ್ಲಾಹು ಯಾವುದೇ ಮಗಳಿಗೆ ಇಂತಹ ಗುಣವಿಲ್ಲದ ತಂದೆಯನ್ನು ಎಂದಿಗೂ ನೀಡದಿರಲಿ. ಆಮೀನ್. ನನ್ನ ಪುಟ್ಟ ಮಗಳಿಗೆ ತಾಳ್ಮೆಯನ್ನು ನೀಡುವಂತೆ ನಾನು ಅಲ್ಲಾಹುವಿನನಲ್ಲಿ ಪ್ರಾರ್ಥಿಸುತ್ತೇನೆ ಎಂದು ಪೋಸ್ಟ್​ ಮಾಡಿ ಶಮಿಯನ್ನು ಅನಗತ್ಯವಾಗಿ ಕೆಣಕ್ಕಿದ್ದರು.

16 ಆಗಸ್ಟ್ 2018 ರಂದು, ಹಸಿನ್ ಜಹಾನ್(Hasin Jahan) ಮೊಹಮ್ಮದ್ ಶಮಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲದೆ ಹಲ್ಲೆ, ಅತ್ಯಾಚಾರ, ಕೊಲೆ ಯತ್ನ ಮತ್ತು ಕೌಟುಂಬಿಕ ಹಿಂಸಾಚಾರದ ಆರೋಪದಡಿಯಲ್ಲಿ ಟೀಮ್ ಇಂಡಿಯಾ ಕ್ರಿಕೆಟಿಗನ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ಇದೇ ವೇಳೆ ಮಗಳ ಖರ್ಚಿಗೆ ಹಾಗೂ ತನಗೆ ಯಾವುದೇ ರೀತಿಯ ಹಣಕಾಸಿನ ನೆರವು ನೀಡುತ್ತಿಲ್ಲ ಎಂದು ಹಸಿನ್ ಜಹಾನ್ ದೂರಿನಲ್ಲಿ ಅಪಾದಿಸಿದ್ದರು.

ಜೀವನಾಂಶ ನೀಡುತ್ತಿರುವ ಶಮಿ

2018 ರಲ್ಲಿ ಹಸಿನ್ ಜಹಾನ್ ಅವರು ಮಾಸಿಕ 10 ಲಕ್ಷ ರೂ ಜೀವನಾಂಶವನ್ನು ಕೋರಿ ಶಮ್ಮಿ ವಿರುದ್ಧ ಕಾನೂನು ಮೊಕದ್ದಮೆ ಹೂಡಿದ್ದರು. ವೈಯಕ್ತಿಕ ವೆಚ್ಚಕ್ಕಾಗಿ 7 ಲಕ್ಷ ರೂ., ತಮ್ಮ ಮಗಳ ನಿರ್ವಹಣೆಗಾಗಿ 3 ಲಕ್ಷ ರೂ. ಕೇಳಿದ್ದರು. ಇದರ ವಿಚಾರಣೆ ನಡೆಸಿದ ಕೋಲ್ಕೊತಾ ನ್ಯಾಯಾಲಯ ಇದೇ ವರ್ಷದ ಜನವರಿಯಲ್ಲಿ ತೀರ್ಪು ಪ್ರಕಟಿಸಿ, ಶಮಿ ಅವರು ಪತ್ಯೇಕವಾಗಿ ವಾಸಿಸುತ್ತಿರುವ ಪತ್ನಿ ಜಹಾನ್​ಗೆ ತಿಂಗಳಿಗೆ 50 ಸಾವಿರ ರೂ. ನೀಡುವಂತೆ ಸೂಚಿಸಿತ್ತು. ಕೋರ್ಟ್​ ಸೂಚನೆಯಂತೆ ಶಮಿ ಅವರು ಈ ಮೊತ್ತವನ್ನು ನೀಡಿತ್ತಲೇ ಬರುತ್ತಿದ್ದಾರೆ.

Continue Reading
Advertisement
Viral Video
Latest6 mins ago

Viral Video: ಹೃಷಿಕೇಶದ ಗಂಗಾ ಘಾಟ್‌ನಲ್ಲಿ ಬಿಕಿನಿ ಧರಿಸಿದ ವಿದೇಶಿಯರ ಮೋಜು ಮಸ್ತಿ!

Dengue Cases
ರಾಜಕೀಯ10 mins ago

Dengue Cases: ಕಲುಷಿತ ನೀರು ಪೂರೈಕೆಯಾದ್ರೆ ಅಧಿಕಾರಿಗಳೇ ಹೊಣೆ; 15 ದಿನಕ್ಕೊಮ್ಮೆ ಕ್ವಾಲಿಟಿ ಟೆಸ್ಟ್ ಮಾಡಿ ಎಂದ ಸಿಎಂ

Mahanati Show bindu honnali not selected
ಕಿರುತೆರೆ14 mins ago

Mahanati Show: ಫಿನಾಲೆಗೆ ಆಯ್ಕೆಯಾಗಿಲ್ಲ ದಾವಣಗೆರೆ ಟೀಚರ್; ಕೋಪಗೊಂಡ ನೆಟ್ಟಿಗರು!

PGET 2024 Online application for PGET can be submitted till July 10
ಶಿಕ್ಷಣ35 mins ago

PGET 2024 : ಪಿಜಿಇಟಿಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಜುಲೈ 10ರವರೆಗೆ ಅವಕಾಶ

Suryakumar Yadav
ಕ್ರೀಡೆ37 mins ago

Suryakumar Yadav: 8 ವರ್ಷಗಳ ಹಿಂದೆಯೇ ಅದ್ಭುತ ಕ್ಯಾಚ್​ ಹಿಡಿದೆ ಎಂದು ವಿವಾಹ ವಾರ್ಷಿಕೋತ್ಸವ ಆಚರಿಸಿದ ಸೂರ್ಯಕುಮಾರ್

Rahul Gandhi
ದೇಶ43 mins ago

Rahul Gandhi: ಹಿಂದುಗಳಿಗೆ ಅವಮಾನ ಖಂಡಿಸಿ ದೇಗುಲದ ಡೋರ್‌ಮ್ಯಾಟ್‌ಗೆ ರಾಹುಲ್‌ ಗಾಂಧಿ ಫೋಟೊ; ಇಲ್ಲಿದೆ Video

Manvita Kamath Honeymoon in baali
ಸ್ಯಾಂಡಲ್ ವುಡ್49 mins ago

Manvita Kamath: ಪತಿ ಅರುಣ್ ಜತೆ ಬಾಲಿಯಲ್ಲಿ ಸಖತ್‌ ಎಂಜಾಯ್‌ ಮಾಡುತ್ತಿರುವ ಮಾನ್ವಿತಾ ಕಾಮತ್!

NEET UG 2024
ದೇಶ1 hour ago

NEET UG 2024: ನೀಟ್‌ ಅಕ್ರಮ ಮೇಲ್ನೋಟಕ್ಕೆ ಸಾಬೀತು ಎಂದ ಸುಪ್ರೀಂ; ಎನ್‌ಟಿಎ, ಸಿಬಿಐಗೆ ಖಡಕ್ ಸೂಚನೆ!

OPS News
ಕರ್ನಾಟಕ1 hour ago

OPS News: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌; ಅರ್ಹರಿಗೆ ಒಪಿಎಸ್‌, ಪ್ರಸ್ತಾವನೆ ಸಲ್ಲಿಕೆಗೆ ಆದೇಶ

ಕ್ರೀಡೆ1 hour ago

Paris 2024 Olympics Athletics: ವಿಶ್ವ ರ್‍ಯಾಂಕಿಂಗ್‌ ಆಧಾರದಲ್ಲಿ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಜೆಸ್ವಿನ್‌, ಅಂಕಿತಾ ಧ್ಯಾನಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain Effect
ಮಳೆ2 hours ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ4 hours ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ5 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು6 hours ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ21 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ24 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ1 day ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

ಟ್ರೆಂಡಿಂಗ್‌