Kalki 2898 AD: ಕಲ್ಕಿ 2898 ಎಡಿ ಚಿತ್ರದ 10 ಕುತೂಹಲಕರ ಸಂಗತಿಗಳಿವು! - Vistara News

ಸಿನಿಮಾ

Kalki 2898 AD: ಕಲ್ಕಿ 2898 ಎಡಿ ಚಿತ್ರದ 10 ಕುತೂಹಲಕರ ಸಂಗತಿಗಳಿವು!

ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಮೇಲೆ ದಾಖಲೆ ಬರೆಯುತ್ತಿರುವ ಕಲ್ಕಿ 2898ಎಡಿ (Kalki 2898 AD) ಚಿತ್ರ ಸಾಕಷ್ಟು ಪ್ರೇಕ್ಷಕರ ಮನ ಗೆದ್ದಿದೆ. ಪ್ರಭಾಸ್- ದೀಪಿಕಾ ಪಡುಕೋಣೆ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರ ಹಲವು ಕಾರಣಗಳಿಂದ ವಿಶೇಷ ಎಂದೆನಿಸಿದೆ. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರದ ಹತ್ತು ಪ್ರಮುಖ ಸಂಗತಿಗಳು ಚಿತ್ರ ನೋಡುವ ಮುನ್ನವೇ ಮನಸ್ಸನ್ನು ಚಿತ್ರ ನೋಡಲು ಪ್ರೇರೇಪಿಸುವಂತೆ ಮಾಡುತ್ತದೆ. ಅದು ಯಾವುದು ಗೊತ್ತೇ?

VISTARANEWS.COM


on

Kalki 2898 AD
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಶ್ವದಾದ್ಯಂತ (world) ಅದ್ಧೂರಿಯಾಗಿ ಜೂನ್ 27ರಂದು ತೆರೆ ಕಂಡಿರುವ ಕಲ್ಕಿ 2898 ಎಡಿ (Kalki 2898 AD) ಸಿನಿಮಾ ಈಗಾಗಲೇ ಬಾಕ್ಸ್ ಆಫೀಸ್​ನಲ್ಲಿ (box office) ದಾಖಲೆ ಬರೆದಿದೆ. ಭಾರತೀಯ ಚಿತ್ರರಂಗದಲ್ಲಿ (Indian cinema) ಮೂರನೇ ಅತೀ ದೊಡ್ಡ ಓಪನರ್ ಕಂಡ ಈ ಚಿತ್ರ ಹಲವಾರು ಕಾರಣಗಳಿಗಾಗಿ ಪ್ರೇಕ್ಷಕರ ಮನ ಗೆದ್ದಿದೆ. ಚಿತ್ರ ನೋಡದವರಿಗೂ ಈ ಸಿನಿಮಾ ಬಗ್ಗೆ ಕುತೂಹಲ ಮೂಡಿದೆ.

ನಾಗ್ ಅಶ್ವಿನ್ (Nag Ashwin) ನಿರ್ದೇಶಿಸಿರುವ ಈ ಚಿತ್ರ ಹಿಂದೂ (hindu) ಧರ್ಮಗ್ರಂಥಗಳಿಂದ ಪ್ರೇರಿತವಾಗಿದೆ. ಈಗಾಗಲೇ ಸಾಕಷ್ಟು ಮಂದಿಯ ಉತ್ಸಾಹವನ್ನು ಹೆಚ್ಚಿಸಿರುವ ಕಲ್ಕಿ 2898ಎಡಿ ಚಿತ್ರ ಪೌರಾಣಿಕ ಕಥೆಯ ಸಾರವನ್ನು ಒಳಗೊಂಡಿರುವ ವೈಜ್ಞಾನಿಕ ಚಿತ್ರ. ಈ ಚಿತ್ರವನ್ನು ವೀಕ್ಷಿಸಲು ಚಿತ್ರಮಂದಿರಗಳಿಗೆ ತೆರಳವಾ ಯೋಚನೆಯಲ್ಲಿದ್ದರೆ ನಿಮ್ಮ ಉತ್ಸಾಹವನ್ನು ಹೆಚ್ಚಿಸುವ ಚಿತ್ರದ ಹತ್ತು ಪ್ರಮುಖ ಸಂಗತಿಗಳು ಇಲ್ಲಿವೆ.


  1. 1. ಕಲ್ಕಿ 2898 ಎಡಿ ಚಿತ್ರವನ್ನು 600 ಕೋಟಿ ರೂಪಾಯಿ ಬಜೆಟ್‌ನಲ್ಲಿ ನಿರ್ಮಿಸಲಾಗಿದೆ. ಇದು ಈವರೆಗೆ ನಿರ್ಮಿಸಲಾದ ಅತ್ಯಂತ ದುಬಾರಿ ಭಾರತೀಯ ಚಲನಚಿತ್ರವಾಗಿದೆ.

2. ಚಿತ್ರವು ಭಗವಾನ್ ವಿಷ್ಣುವಿನ 10ನೇ ಮತ್ತು ಕೊನೆಯ ಅವತಾರದ ಬಗ್ಗೆ ಹೇಳುತ್ತದೆ. ಮಹಾಭಾರತ ಮತ್ತು ಕಲ್ಕಿ ಪುರಾಣದಿಂದ ಪ್ರೇರಿತವಾಗಿದೆ.

3. ಚಿತ್ರದ ಕಥೆಯು ಮಹಾಭಾರತದಿಂದ ಪ್ರಾರಂಭವಾಗುತ್ತದೆ. ಕಲ್ಕಿ 2898 ಎಡಿಯಲ್ಲಿ ವಿಷ್ಣು ಅವತಾರ ಭಗವಾನ್ ಕೃಷ್ಣ ಲೋಕದಿಂದ ನಿರ್ಗಮಿಸುವಾಗ ಕೊನೆಗೊಳ್ಳುತ್ತದೆ.


4. ಅಮಿತಾಭ್ ಬಚ್ಚನ್ ಮತ್ತು ಕಮಲ್ ಹಾಸನ್ 39 ವರ್ಷಗಳ ಅನಂತರ ಈ ಸಿನಿಮಾದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಅವರು ಕೊನೆಯದಾಗಿ 1985ರ ಚಲನಚಿತ್ರ ಗಿರಫ್ತಾರ್ ನಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು.

5. ಕಲ್ಕಿ ಚಿತ್ರವನ್ನು ARRI ಅಲೆಕ್ಸಾ 65 ಕೆಮರಾದಲ್ಲಿ ಚಿತ್ರೀಕರಿಸಲಾಗಿದೆ. ಹೀಗಾಗಿ ಈ ತಂತ್ರಜ್ಞಾನವನ್ನು ಬಳಸಿದ ಮೊದಲ ಭಾರತೀಯ ಚಲನಚಿತ್ರ ಇದಾಗಿದೆ. ಅಲೆಕ್ಸಾ 65 ಕೆಮರಾವು A3ಎಕ್ಸ್ ಸಂವೇದಕವನ್ನು ಹೊಂದಿದೆ. ಇದು ಮೂರು ಲಂಬವಾಗಿ ಜೋಡಿಸಲಾದ ALEV III ಸಂವೇದಕಗಳಿಂದ ಮಾಡಲ್ಪಟ್ಟಿದೆ. ಗರಿಷ್ಠ ರೆಸಲ್ಯೂಶನ್ 6560×3100 ಅನ್ನು ಕೊಡುತ್ತದೆ. ಈ ಕೆಮರದಲ್ಲಿ ಚಿತ್ರೀಕರಿಸಿದ ಮೊದಲ ಚಲನಚಿತ್ರ ಮಿಷನ್: ಇಂಪಾಸಿಬಲ್ – ರೋಗ್ ನೇಷನ್ (2015). ಇದನ್ನು ನೀರೊಳಗಿನ ದೃಶ್ಯಗಳನ್ನು ಸೆರೆಹಿಡಿಯಲು ಬಳಸಲಾಯಿತು. The Revenant (2015) ನ ಸರಿಸುಮಾರು 40 ಪ್ರತಿಶತವನ್ನು ಚಿತ್ರೀಕರಿಸಲು ಸಹ ಇದನ್ನು ಬಳಸಲಾಗಿದೆ.


6. ಭಾರೀ ಗಾತ್ರದ ಆರು-ಟನ್ ಎಐ ಚಾಲಿತ ರೋಬೋಟಿಕ್ ಮೂರು-ಚಕ್ರದ ಬುಜ್ಜಿ ಎಂಬ ವಾಹನವು ಮುಂದಿನ ಪೀಳಿಗೆಯ ವಾಹನವಾಗಿದ್ದು, ಇದನ್ನು ಕಲ್ಕಿ ಚಲನಚಿತ್ರಕ್ಕಾಗಿ ಪ್ರತ್ಯೇಕವಾಗಿ ಮಾಡಿಸಲಾಗಿದೆ. ಈ ಚಿತ್ರದಲ್ಲಿ ಪ್ರಭಾಸ್ ಓಡಿಸುವ ವಾಹನವನ್ನು ಓಡಿಸಲು ನಿರ್ದೇಶಕ ನಾಗ್ ಅಶ್ವಿನ್ ಅವರು ಉದ್ಯಮಿ ಎಲಾನ್ ಮಸ್ಕ್ ಅವರನ್ನು ಆಹ್ವಾನಿಸಿದ್ದರು.

7. ಅಮಿತಾಭ್ ಬಚ್ಚನ್ ಅವರ ಪಾತ್ರವು ನಿಜ ಜೀವನದ ಅಶ್ವತ್ಥಾಮನಿಂದ ಪ್ರೇರಿತವಾಗಿದೆ. ಟ್ರೈಲರ್‌ನಲ್ಲಿ ಬಿಗ್ ಬಿ ಪಾತ್ರಗಳ ಹಣೆಯ ಮೇಲೆ ಕಾಣುವ ಮಣಿಯಂತಹ ವಸ್ತುವಿನ ಮಹತ್ವ ಮತ್ತು ಪ್ರಸ್ತುತತೆಯ ಬಗ್ಗೆಯೂ ಈ ಚಿತ್ರದಲ್ಲಿ ತಿಳಿಯಬಹುದು.

8. ಡ್ಯೂನ್, ಓಪನ್‌ಹೈಮರ್, ಇಂಟರ್‌ಸ್ಟೆಲ್ಲರ್, ಇನ್‌ಸೆಪ್ಶನ್, ಟೆನೆಟ್ ಮತ್ತು ಬ್ಲೇಡ್ ರನ್ನರ್ 2049ನಂತಹ ಕೆಲವು ಸಾಂಪ್ರದಾಯಿಕ ಹಾಲಿವುಡ್ ಚಲನಚಿತ್ರಗಳಲ್ಲಿ ಕೆಲಸ ಮಾಡಿದ ವಿಎಫ್ ಎಕ್ಸ್ ತಂಡವು ಕಲ್ಕಿ 2989 ಎಡಿಯಲ್ಲಿ ಕೆಲಸ ಮಾಡಿದೆ.


9. ಕಲ್ಕಿ ಚಿತ್ರದಲ್ಲಿ ಎಸ್‌.ಎಸ್. ರಾಜಮೌಳಿ, ರಾಮ್ ಗೋಪಾಲ್ ವರ್ಮಾ, ವಿಜಯ್ ದೇವರಕೊಂಡ, ನಾನಿ, ರಾಣಾ ದಗುಬಾಟಿ, ದುಲ್ಕರ್ ಸಲ್ಮಾನ್ ಮತ್ತು ಮೃಣಾಲ್ ಠಾಕೂರ್ ಅವರ ವಿಶೇಷ ಅತಿಥಿ ಪಾತ್ರಗಳಿವೆ.

ಇದನ್ನೂ ಓದಿ: Kalki 2898 AD: 1000 ಕೋಟಿ ರೂ. ಗಳಿಕೆಯತ್ತ ‘ಕಲ್ಕಿ 2898  ಎಡಿʼ; ಇಲ್ಲಿಯವರೆಗೆ ಕಲೆಕ್ಷನ್‌ ಮಾಡಿದ್ದೆಷ್ಟು?


10. ಕಮಲ್ ಹಾಸನ್ ಅವರು ಸುಪ್ರೀಂ ಯಾಸ್ಕಿನ್ ಪಾತ್ರವನ್ನು ನಿರ್ವಹಿಸಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಅವರು ತಮ್ಮ ಪಾತ್ರವನ್ನು ಚಿತ್ರದಲ್ಲಿ ಕೆಟ್ಟ ಉದ್ದೇಶಗಳನ್ನು ಹೊಂದಿರುವ ದುಷ್ಟ ಋಷಿ ಎಂದು ವಿವರಿಸಿದ್ದಾರೆ. ಇದು ಚಿತ್ರದ ಬಗ್ಗೆ ಸಾಕಷ್ಟು ಕುತೂಹಲವನ್ನು ಮೂಡಿಸುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಸಿನಿಮಾ

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ ಬರಲಿದೆ.

VISTARANEWS.COM


on

By

Action Prince Dhruva Sarja much awaited film Martin to hit the screens on October 11
Koo

ಬೆಂಗಳೂರು: ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ (Dhruva Sarja) ನಟನೆಯ ಬಹುನಿರೀಕ್ಷಿತ, ಪ್ಯಾನ್‌ ವರ್ಲ್ಡ್‌ ಸಿನಿಮಾ ಮಾರ್ಟಿನ್‌ ರಿಲೀಸ್‌ಗೆ ಕೌಂಟ್‌ ಡೌನ್‌ ಶುರುವಾಗಿದೆ. ಅಕ್ಟೋಬರ್ 11 ರಂದು ಭಾರತದಾದ್ಯಂತ 3 ಸಾವಿರ ಥಿಯೇಟರ್‌ನಲ್ಲಿ ರಿಲೀಸ್ ಆಗುತ್ತಿದೆ. ಈಗಾಗಲೇ ಮಾರ್ಟಿನ್‌ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ.

Action Prince Dhruva Sarjas much-awaited film 'Martin' to hit the screens on October 11
Action Prince Dhruva Sarja much awaited film Martin to hit the screens on October 11

ಭರ್ಜರಿ ಬರ್ತ್‌ ಡೇ ಸೆಲೆಬ್ರೆಷನ್‌ಗೆ ಫ್ಯಾನ್ಸ್‌ ಸಜ್ಜು

ಮಾರ್ಟಿನ್‌ ಸಿನಿಮಾಗೂ ಮೊದಲೇ ಧ್ರುವ ಸರ್ಜಾರ ಬರ್ತ್ ಡೇ ಸೆಲೆಬ್ರೆಷನ್‌‌ಗೆ ಫ್ಯಾನ್ಸ್ ಭರ್ಜರಿಯಾಗಿ ಸಜ್ಜಾಗಿದ್ದಾರೆ. ಸ್ಯಾಂಡಲ್‌ವುಡ್‌ನ ಆಟಂ ಬಾಂಬ್ ಧ್ರುವ ಸರ್ಜಾ ನಟನೆಯಲ್ಲಿ ರಿಲೀಸ್ ಆಗಿರುವುದುದು ನಾಲ್ಕೇ ಸಿನಿಮಾವಾದರೂ, 40 ಸಿನಿಮಾ ಮಾಡಿರುವಷ್ಟು ಅಭಿಮಾನಿಗಳನ್ನ ಸಂಪಾದಿಸಿದ್ದಾರೆ. ಅಭಿಮಾನಿಗಳನ್ನು ವಿಐಪಿ ಅಂತೇಳು ಧ್ರುವ, ಅವರಿಗಾಗಿಯೇ ಒಂದು ದಿನ ಮೀಸಲಿಟ್ಟಿದ್ದಾರೆ. ಪ್ರತಿ ಭಾನುವಾರ ಅಭಿಮಾನಿಗಳನ್ನು ಭೇಟಿಯಾಗುವ ಬಹದ್ಧೂರ್, ಈ ಬಾರಿ ಹುಟ್ಟುಹಬ್ಬಕ್ಕೆ ಫ್ಯಾನ್ಸ್ ಇರುವ ಜಾಗಕ್ಕೆ ಭೇಟಿ ಕೊಡುತ್ತಿದ್ದಾರೆ. ಕಳೆದ ಭಾನುವಾರ ಬೆಂಗಳೂರಿನ ಕೆ.ಆರ್ ರಸ್ತೆಯಲ್ಲಿರುವ ಧ್ರುವ ಮನೆಯ ರಸ್ತೆಯು, ಅಭಿಮಾನಿಗಳಿಂದ ತುಂಬಿ ಹೋಗಿತ್ತು.

Action Prince Dhruva Sarjas much-awaited film 'Martin' to hit the screens on October 11
Action Prince Dhruva Sarja much awaited film Martin to hit the screens on October 11

ಧ್ರುವ ಹುಟ್ಟುಹಬ್ಬಕ್ಕೂ ಮೊದಲು ಮಾರ್ಟಿನ್ ಚಿತ್ರತಂಡ ಅಕ್ಟೋಬರ್ 4ರಂದು ಹೈದರಾಬಾದ್‌ನಲ್ಲಿ ಧ್ರುವ ಅವರ ಇಂಟ್ರೋಡಕ್ಷನ್ ಸಾಂಗ್ ರಿಲೀಸ್ ಮಾಡುತ್ತಿದೆ. ಅಕ್ಟೋಬರ್ 5ರಂದು ಹುಬ್ಬಳಿಯಲ್ಲಿ ಧ್ರುವ ತಮ್ಮ ಫ್ಯಾನ್ಸ್‌ನ ಮೀಟ್ ಮಾಡಲಿದ್ದಾರೆ. ತಮ್ಮ ಹುಟ್ಟುಹಬ್ಬದಂದು ದಾವಣಗೆರೆಯಲ್ಲಿ ಮಾರ್ಟಿನ್ ಪ್ರೀ ರಿಲೀಸ್ ಇವೆಂಟ್ ಹಮ್ಮಿಕೊಂಡಿದ್ದಾರೆ. ಒಟ್ಟಾರೆ ಉತ್ತರ ಕರ್ನಾಟಕ ಜನರ ಜತೆ ಧ್ರುವ ಈ ಬಾರಿ ಬರ್ತ್‌ಡೇ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದಾರೆ.

ಮುಂಬೈನಲ್ಲಿ ಸಾಂಗ್‌ ರಿಲೀಸ್‌

ಹುಟ್ಟುಹಬ್ಬದ ನಂತರ ಅಕ್ಟೋಬರ್ 8ರಂದು ಮುಂಬೈನಲ್ಲಿ ಮಾರ್ಟಿನ್ ಚಿತ್ರದ ಮತ್ತೊಂದು ಸಾಂಗ್ ರಿಲೀಸ್ ಆಗುತ್ತಿದೆ. ಅಂದ‌ ಹಾಗೆ ಮಾರ್ಟಿನ್ ಒಂದಲ್ಲ ಒಂದು ಕಾರಣಕ್ಕೆ ಸೆನ್ಸೇಶನ್ ಕ್ರಿಯೇಟ್ ಮಾಡಿದೆ.ಇದೇ ತಿಂಗಳ 11ರಂದು ಮಾರ್ಟಿನ್ ಆಲ್ ಓವರ್ ಇಂಡಿಯಾ 3 ಸಾವಿರ ಥಿಯೇಟರ್‌ನಲ್ಲಿ ರಿಲೀಸ್ ಆಗುತ್ತಿದೆ. ಕನ್ನಡದ ಅತಿ ಹೆಚ್ಚು ಬಜೆಟ್‌ನ ಮಾರ್ಟಿನ್‌, ಶೇಖಡಾ 80ರಷ್ಟು ಚಿತ್ರವನ್ನು ಸೆಟ್‌ನಲ್ಲಿಯೇ ಚಿತ್ರೀಕರಣಗೊಂಡಿದೆ. ಹಾಲಿವುಡ್‌ನ ಫಾಸ್ಟ್ ಆ್ಯಂಡ್ ಪ್ಯೂರಿಯಸ್ ಚಿತ್ರ ನೋಡಿದ ಅನುಭವ ಆಗುತ್ತೆ ಎನ್ನುವ ಮಾತನ್ನು ಸಿನಿಮಾ ತಂಡ ಹೇಳಿಕೊಂಡಿದೆ.

Action Prince Dhruva Sarjas much-awaited film 'Martin' to hit the screens on October 11
Action Prince Dhruva Sarja much awaited film Martin to hit the screens on October 11

ಮಾರ್ಟಿನ್ ತಂಡದಿಂದ ನಿರ್ದೇಶಕರೇ ಔಟ್!

ಮಾರ್ಟಿನ್ ಗೆಲ್ಲುತ್ತೆ ಎಂಬ ಭರವಸೆ ಕೂಡ ಗಾಂಧಿನಗರಕ್ಕಿದೆ. ಆದರೆ ಈ ಸಮಯದಲ್ಲಿ ಜತೆಯಾಗಿರಬೇಕಿದ್ದ ತಂಡದಲ್ಲಿ ಬಿರುಕು ಮೂಡಿದೆ. ಚಿತ್ರದ ಪ್ರಚಾರದಿಂದ ನಿರ್ದೇಶಕ ಎಪಿ ಅರ್ಜುನ್ ಅವರನ್ನು ದೂರ ಇಡಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ಮಾರ್ಟಿನ್‌ಗೆ ದ್ರೋಹದ ವಿಚಾರ ಜಗಜ್ಜಾಹೀರಾಗಿತ್ತು. ಚಿತ್ರದ ಹೆಸರಿನಲ್ಲಿ ನಿರ್ಮಾಪಕ ಉದಯ್ ಮೆಹ್ತಾಗೆ ನಿರ್ದೇಶಕ ಎ.ಪಿ.ಅರ್ಜುನ್ ಅವರಿಂದ ಮೋಸವಾಗಿದೆ. ಕೇವಲ ಸಿಜಿ ಮತ್ತು ವಿಎಫ್‌ಎಕ್ಸ್ ಒಂದರಲ್ಲೇ 73 ಲಕ್ಷ ರೂ. ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ಈ ಕಾರಣಕ್ಕೆ ಉದಯ್ ಮೆಹ್ತಾ ಮತ್ತು ಎಪಿ ಅರ್ಜುನ್ ನಡುವೆ ಸಂಬಂಧ ಹಳಸಿದೆ. ತಮ್ಮದೇ ಚಿತ್ರದ ಬಿಡುಗಡೆಗೆ ತಡೆ ನೀಡುವಂತೆ ಎಪಿ ಅರ್ಜುನ್ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದರು. ಆದರೆ ಆ ಅರ್ಜಿ ವಜಾ ಆಗಿದೆ ಎಂದು ಹೊಸ ಬಾಂಬ್ ಕೂಡ ಉದಯ್ ಮೆಹ್ತಾ ಸಿಡಿಸಿದ್ದಾರೆ.

Action Prince Dhruva Sarja  much awaited film Martin to hit the screens on October 11
Action Prince Dhruva Sarja much awaited film Martin to hit the screens on October 11

ಮಾರ್ಟಿನ್ ಚಿತ್ರದ ಕಥೆ ಚಿತ್ರಕಥೆಯನ್ನು ಆ್ಯಕ್ಷನ್ ಹೀರೋ ಅರ್ಜುನ್ ಸರ್ಜಾ ಬರೆದಿದ್ದಾರೆ. ಹೀಗಿರುವಾಗ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರಿಸಬೇಕಿದ್ದ ”ಮಾರ್ಟಿನ್‌” ಚಿತ್ರತಂಡದಲ್ಲಿ, ಸಿನಿಮಾ ರಿಲೀಸ್‌ಗೂ ಮೊದಲೇ ಬಿರುಕು ಮೂಡಿದೆ. ಇವೆಲ್ಲದರ ನಡುವೆ ಅಕ್ಟೋಬರ್ 6 ರಂದು ಧ್ರುವ ಸರ್ಜಾ ಬರ್ತ್ ಡೇ ಸೆಲೆಬ್ರೇಶನ್ ಮಾಡಿ ಮತ್ತೊಂದು ಮೆಗಾ ಸಂಭ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Love Case : ಸಿರಿಯಲ್ ನಟಿಯ ಮದುವೆ ಕಿರಿಕ್‌; ವಾಶ್‌ರೂಮ್‌ನಲ್ಲಿ ಯುವಕ ಆತ್ಮಹತ್ಯೆ

Love Case : ಸಿರಿಯಲ್ ನಟಿ ಮದುವೆ ಆಗುವಂತೆ ಒತ್ತಾಯಿಸಿದ್ದಕ್ಕೆ ಯುವಕನೊರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

VISTARANEWS.COM


on

By

Love case
Koo

ಬೆಂಗಳೂರು: ಸಿರಿಯಲ್ ನಟಿ ಮದುವೆ ಆಗುವಂತೆ ಪೀಡಿಸುತ್ತಿದ್ದಳು ಎಂದು ಯುವಕನೊಬ್ಬ ಆತ್ಮಹತ್ಯೆಗೆ (Love Case) ಶರಣಾಗಿದ್ದಾನೆ. ಮದನ್ (25) ಮೃತ ದುರ್ದೈವಿ. ಸಿರಿಯಲ್ ನಟಿ ವೀಣಾ ಎಂಬಾಕೆ ಜತೆಗೆ ಮದನ್ ಲಿವಿಂಗ್‌ ರಿಲೇಷನ್‌ಶಿಪ್‌ನಲ್ಲಿದ್ದ. ನಿನ್ನೆ ರಾತ್ರಿ ಇಬ್ಬರು ಒಂದೇ ರೂಮಿನಲ್ಲಿ ಪಾರ್ಟಿ ಮಾಡಿದ್ದರು. ಪಾರ್ಟಿ ನಂತರ ಮದನ್‌ ಜತೆಗೆ ವೀಣಾ ಮದುವೆ ಪ್ರಸ್ತಾಪಿಸಿದ್ದಳಂತೆ.

ಮದನ್‌ ಇವೆಂಟ್ ಮ್ಯಾನೇಜ್ ಮೆಂಟ್‌ನಲ್ಲಿ ಡೆಕೊರೇಟ್ ಕೆಲಸ ಮಾಡಿಕೊಂಡಿದ್ದ. ಈ ವೇಳೆ ಸಿರಿಯಲ್ ಸೆಟ್‌ನಲ್ಲಿ ಕಾಣಿಸಿಕೊಂಡಿದ್ದ ವೀಣಾಳನ್ನು ಕೆಲ ತಿಂಗಳ ಹಿಂದೆ ಪರಿಚಯ ಮಾಡಿಕೊಂಡಿದ್ದ. ಸಲುಗೆ ಬೆಳೆಸಿಕೊಂಡು ಇಬ್ಬರು ಲೀವಿಂಗ್ ರಿಲೇಶನ್ ಹೊಂದಿದ್ದರು.

ವೀಣಾ ಕನ್ನಡತಿ ಸೀರಿಯಲ್ ಹಾಗೂ ಕೆಲವು ಆ್ಯಡ್ ಗಳಲ್ಲಿ ನಟಿಸುತ್ತಿದ್ದಳು ಎನ್ನಲಾಗಿದೆ. ಸದ್ಯ ಘಟನೆ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಯುವತಿ ಹಲವು ಯುವಕರಿಗೆ ಮದುವೆ ಆಗುವುದಾಗಿ ವಂಚಿಸಿದ್ದಾಳೆ ಎಂದು ಮೃತನ ಪೋಷಕರು ಆರೋಪಿಸಿದ್ದಾರೆ.

ಕೈ ಕೊಯ್ದುಕೊಂಡು ಗಲಾಟೆ ಮಾಡಿದ್ದ ನಟಿ

ಮದುವೆಯಾಗುವಂತೆ ಒತ್ತಾಯಿಸಿ ವೀಣಾ ಈ ಹಿಂದೆ ಕೈ ಕೊಯ್ದುಕೊಂಡು ಮದನ್‌ ಮನೆ ಮುಂದೆ ಗಲಾಟೆ ಮಾಡಿದ್ದಳಂತೆ. ವೀಣಾಗೆ ಹಲವು ಹುಡುಗರ ಪರಿಚಯವಿತ್ತು. ಇದರಿಂದ ಆಕೆಯ ಕ್ಯಾರೆಕ್ಟರ್ ಮೇಲೆ ಮದನ್‌ ಅನುಮಾನ ಪಟ್ಟಿದ್ದ. ಹೀಗಾಗಿ ಮದನ್‌ ಮದುವೆಯಾಗಲು ನಿರಾಕರಿಸಿದ್ದ ಎನ್ನಲಾಗಿದೆ.

ಆದರೆ ಫೋನ್‌ ಮೂಲಕ ಮದನ್‌ಗೆ ಟಾರ್ಚರ್ ನೀಡುತ್ತಿದ್ದಳಂತೆ. ಸಿಕೆ ಪಾಳ್ಯದಲ್ಲಿ ರೂಂ ಮಾಡಿ ವಾಸವಿದ್ದ ವೀಣಾ ನಿನ್ನೆಯೂ ಸಹ ಮದನ್‌ನನ್ನು ಮನೆಗೆ ಕರೆಸಿಕೊಂಡಿದ್ದಳು. ನಿನ್ನೆ ಇಬ್ಬರು ಪಾರ್ಟಿ ಮಾಡಿದ್ದು, 8:30 ರಾತ್ರಿಯಲ್ಲಿ ಮತ್ತೆ ಮದುವೆ ವಿಚಾರ ಪ್ರಸ್ತಾಪವಾಗಿದೆ. ಇಬ್ಬರೂ ಕಂಠಪೂರ್ತಿ ಪಾನಮತ್ತರಾಗಿದ್ದರು. ಈ ವೇಳೆ ವಾಶ್ ರೂಂ ಗೆ ಹೋಗಿ ಬರ್ತಿನಿ ಅಂತ ಹೇಳಿದ್ದ ಮದನ್, ಅಲ್ಲೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: Assault Case : ಡೋರ್‌ ಹತ್ರ ನಿಲ್ಲಬೇಡ ಒಳಗೆ ಹೋಗು ಎಂದಿದ್ದಕ್ಕೆ ಬಿಎಂಟಿಸಿ ಕಂಡಕ್ಟರ್‌ಗೆ ಚಾಕು ಇರಿದು ಹುಚ್ಚನಂತೆ ವರ್ತಿಸಿದ ಪ್ರಯಾಣಿಕ!

ಸಹೋದರತ್ತೆ ಕಾಟಕ್ಕೆ ಬೇಸತ್ತು ಅಳಿಯ ಆತ್ಮಹತ್ಯೆ

ರಾಯಚೂರು: ಸಹೋದರತ್ತೆ ಕಾಟಕ್ಕೆ ಬೇಸತ್ತು ಅಳಿಯ ಆತ್ಮಹತ್ಯೆ (Self harming) ಮಾಡಿಕೊಂಡಿದ್ದಾನೆ. ಜಮೀನು ವಿಚಾರಕ್ಕೆ (Land dispute) ಅತ್ತೆ – ಅಳಿಯನ ನಡುವೆ ಜಗಳ (Family Dispute) ನಡೆದಿದ್ದು, ಅತ್ತೆಯ ಬೆದರಿಕೆಗೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಹುಲಿಗೇಪ್ಪ (20) ಮೃತ ದುರ್ದೈವಿ.

ಮನೆಯಲ್ಲಿ ಯಾರು ಇಲ್ಲದ ವೇಳೆ ಡೆತ್‌ ನೋಟ್ ಬರೆದಿಟ್ಟು ವಿಷ ಸೇವಿಸಿದ್ದಾನೆ. ಡೆತ್ ನೋಟ್‌ನಲ್ಲಿ ಜಾಗದ ವಿಚಾರವಾಗಿ ಅತ್ತೆ ಲಕ್ಷ್ಮಿ, ಅತ್ತೆಯ ಮಗಳ ಅನುರಾಧ, ಮಹಾದೇವಿ, ಅನಿಲ್ ಎಂಬುವವರ ಹೆಸರು ಪ್ರಸ್ತಾಪ ಮಾಡಿದ್ದಾನೆ. ನನ್ನ ಸಾವಿಗೆ ನನ್ನ ಅತ್ತೆ ಲಕ್ಷ್ಮಿದೇವಿ ಮತ್ತು ಆಕೆಯ ಮಕ್ಕಳೇ ಕಾರಣ. ನಮ್ಮ 17 ಗುಂಟೆ ಜಾಗ ತಮ್ಮದು ಎಂದು ನಮಗೆ ಬೆದರಿಕೆ ಹಾಕಿದ್ದಾರೆ. ನನ್ನ ಸಾವಿನ ಬಳಿಕವಾದರೂ ನಮ್ಮ ಜಾಗ ನಮಗೆ ಕೊಡಿ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಸಿರವಾರ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ರಿಮ್ಸ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಕೈಗೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬಾಲಿವುಡ್

Actor Govinda : ಬಾಲಿವುಡ್​ ನಟ ಗೋವಿಂದ ಕಾಲಿಗೆ ಗುಂಡೇಟು! ಮುಂಬೈ ಆಸ್ಪತ್ರೆಗೆ ದಾಖಲು

Actor Govinda : ಬಾಲಿವುಡ್​ ನಟ ಗೋವಿಂದ ಕಾಲಿಗೆ ಗುಂಡು ತಗುಲಿದ್ದು, ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

VISTARANEWS.COM


on

By

Actor Govinda
Koo

ಬಾಲಿವುಡ್‌ ನಟ ಗೋವಿಂದ (Actor Govinda) ಕಾಲಿಗೆ ಗುಂಡು ತಗುಲಿದೆ. ರಿವಾಲ್ವರ್​​ ಲಾಕ್​ ಓಪನ್​ ಆಗಿದ್ದರಿಂದ ಜೇಬಿಗೆ ರಿವಾಲ್ವರ್​ ಇಟ್ಟುಕೊಳ್ಳುವಾಗ ಮಿಸ್ ಫೈರ್ ಆಗಿದೆ. ಕೂಡಲೇ ಗೋವಿಂದ ಕುಟುಂಬಸ್ಥರು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಂದು ಮುಂಜಾನೆ 4.45ರ ಸುಮಾರಿಗೆ ಘಟನೆ ನಡೆದಿದೆ.

ನಟ ಗೋವಿಂದ ಲೈಸೆನ್ಸ್​ ರಿವಾಲ್ವರ್​ ಬಳಕೆ ಮಾಡುತ್ತಿದ್ದರು. ಮನೆ ಬಿಡುವಾಗ ಗನ್​ ಚೆಕ್​ ಮಾಡುತ್ತಿದ್ದರು. ಈ ವೇಳೆ ಗೋವಿಂದ ಕಾಲಿಗೆ ಬುಲೆಟ್ ತಗುಲಿದೆ. ತನ್ನದೇ ರಿವಾಲ್ವರ್​​ನಿಂದ ಫೈರಿಂಗ್​​​ ಆಗಿದೆ. ಮುಂಬೈನ ಅಂಧೇರಿಯಲ್ಲಿರುವ ಆಸ್ಪತ್ರೆಯಲ್ಲಿ ಗೋವಿಂದಗೆ ಟ್ರೀಟ್​ಮೆಂಟ್​ ಮುಂದುವರಿದಿದೆ. ಅದೃಷ್ಟವಶಾತ್‌ ಗೋವಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮುಂಬೈ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಲಿದ್ದು, ಈ ಸಂಬಂಧ ವಿಚಾರಣೆ ನಡೆಸಲಿದ್ದಾರೆ.

ಇದನ್ನೂ ಓದಿ: Actor Rajinikanth: ಸೂಪರ್‌ ಸ್ಟಾರ್‌ ರಜನಿಕಾಂತ್‌ ಆರೋಗ್ಯದಲ್ಲಿ ಏರುಪೇರು; ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಿಸಿದ ಕುಟುಂಬಸ್ಥರು

ಮುಂಜಾನೆ ಕೋಲ್ಕತ್ತಾಗೆ ಹೊರಡುವ ಮೊದಲು ನಟ ತನ್ನ ಪರವಾನಗಿ ಪಡೆದ ರಿವಾಲ್ವರ್ ಅನ್ನು ಪರಿಶೀಲಿಸುತ್ತಿದ್ದಾಗ ಜುಹು ನಿವಾಸದಲ್ಲಿ ಈ ಘಟನೆ ನಡೆದಿದೆ. ರಿವಾಲ್ವರ್ ಆಕಸ್ಮಿಕವಾಗಿ ಗೋವಿಂದ ಕೈಯಿಂದ ಬಿದ್ದು, ಕಾಲಿಗೆ ಗುಂಡು ತಗುಲಿದೆ ಎನ್ನಲಾಗಿದೆ. ಕೋಲ್ಕತ್ತಾದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ಹೋಗಲು ಬೆಳಿಗ್ಗೆ 6 ಗಂಟೆಗೆ ಫ್ಲೈಟ್‌ ಇತ್ತು. ನಾನು ಮೊದಲೇ ವಿಮಾನ ನಿಲ್ದಾಣವನ್ನು ತಲುಪಿದ್ದೆ. ಗೋವಿಂದ ಅವರು ತಮ್ಮ ನಿವಾಸದಿಂದ ವಿಮಾನ ನಿಲ್ದಾಣಕ್ಕೆ ತೆರಳಲು ಹೊರಟಿದ್ದರು. ಆಗ ಈ ಅವಘಡ ಸಂಭವಿಸಿದೆ. ಸದ್ಯ ವೈದ್ಯರು ಗುಂಡು ಹೊರತೆಗೆದಿದ್ದು, ಗೋವಿಂದ ಆರೋಗ್ಯ ಸ್ಥಿರವಾಗಿದೆ ಎಂದು ನಟನ ಮ್ಯಾನೇಜರ್ ಶಶಿ ಸಿನ್ಹಾ ಹೇಳಿದ್ದಾರೆ.

ಆಸ್ಪತ್ರೆಯಿಂದ ನಟ ಗೋವಿಂದ ಆಡಿಯೋ ಮೆಸೇಜ್ ರಿಲೀಸ್ ಮಾಡಿದ್ದಾರೆ. ಎಲ್ಲರ ಹಾರೈಕೆ ಆಶೀರ್ವಾದದಿಂದ ನಾನು ಚೆನ್ನಾಗಿದ್ದೇನೆ. ಗುಂಡು ಬಿದ್ದಿದನ್ನು ತೆಗೆಯಲಾಗಿದೆ. ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ ಎಂದು ಸಂದೇಶ ಕಳುಹಿಸಿದ್ದಾರೆ. ಗೋವಿಂದ ಪ್ರಾಣಕ್ಕೆ ಯಾವುದೇ ತೊಂದರೆ ಇಲ್ಲ ಎನ್ನುವ ವಿಚಾರ ತಿಳಿದು ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Actor Rajinikanth: ಸೂಪರ್‌ ಸ್ಟಾರ್‌ ರಜನಿಕಾಂತ್‌ ಆರೋಗ್ಯದಲ್ಲಿ ಏರುಪೇರು; ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಿಸಿದ ಕುಟುಂಬಸ್ಥರು

Actor Rajinikanth: ಸೂಪರ್‌ ಸ್ಟಾರ್‌ ರಜನಿಕಾಂತ್‌ ಆರೋಗ್ಯದಲ್ಲಿ ಏರುಪೇರಾಗಿದ್ದು, ಮಧ್ಯರಾತ್ರಿಯೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ.

VISTARANEWS.COM


on

By

Superstar Rajinikanth is unwell Family members admitted to hospital in the middle of the night
Koo

ಸೂಪರ್‌ ಸ್ಟಾರ್‌ ರಜನಿಕಾಂತ್ (Actor Rajinikanth) ಆರೋಗ್ಯದಲ್ಲಿ ಏರುಪೇರಾಗಿದೆ. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ರಜನಿಕಾಂತ್ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಿನ್ನೆ (ಸೆ.30) ಮಧ್ಯರಾತ್ರಿ ತಲೈವಾ ರಜನಿಕಾತ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವೈದ್ಯ ಡಾ. ಸಾಯಿ ಸತೀಶ್ ಅವರು ರಜನಿಕಾಂತ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ರಜನಿಕಾಂತ್​ಗೆ ಕಾರ್ಡಿಯಾಕ್​ ಕ್ಯಾಥ್​ ಲ್ಯಾಬ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೂ ದಾಖಲಾಗುವುದಕ್ಕೂ ಮುನ್ನ ರಜನಿಕಾಂತ್‌ ಅಭಿನಯಿಸಿರುವ ವೆಟ್ಟೈಯನ್​​​ ಸಿನಿಮಾದ ಆಡಿಯೋ ಲಾಂಚ್​ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು. ರಜನಿಕಾಂತ್‌ಗೆ 73 ವರ್ಷ ವಯಸ್ಸು ಆಗಿದೆ. ಇಂದು ಸಂಜೆ ಅಥವಾ ನಾಳೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Mallikarjun Kharge: ಭಾಷಣ ಮಾಡುತ್ತಲೇ ವೇದಿಕೆ ಮೇಲೆ ಅಸ್ವಸ್ಥಗೊಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ

ಕೂಲಿ ಚಿತ್ರದಲ್ಲಿ ಸೂಪರ್‌ ಸ್ಟಾರ್‌ ತಲೈವಾ ಜತೆಗೆ ರಿಯಲ್ ಸ್ಟಾರ್

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಹೊಸ ಸಿನಿಮಾ ಕೂಲಿಯಲ್ಲಿ ಕನ್ನಡದ ರಿಯಲ್‌ ಸ್ಟಾರ್‌ ಉಪೇಂದ್ರ ಅಭಿನಯಿಸಲಿದ್ದಾರೆ. ಈ ಕುರಿತು ಉಪೇಂದ್ರ ಅವರು ಅಧಿಕೃತ ಪೋಸ್ಟ್ ಹಂಚಿಕೊಂಡಿದ್ದಾರೆ.

Real Star Upendra Acting with Superstar Rajinikanth Coolie Movie
Real Star Upendra Acting with Superstar Rajinikanth Coolie Movie

ಕೂಲಿ ಸಿನಿಮಾವು ತಮಿಳು, ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಬರಲಿದೆ. ಲೋಕೇಶ್ ಕನಕರಾಜ್‌ ಡೈರೆಕ್ಷನ್‌ನಲ್ಲಿ ಕೂಲಿ ಸಿನಿಮಾ ಮೂಡಿಬರುತ್ತಿದೆ.

Real Star Upendra Acting with Superstar Rajinikanth Coolie Movie
Real Star Upendra Acting with Superstar Rajinikanth Coolie Movie

ತಲೈವಾ ರಜನಿಕಾಂತ್‌ ಅವರ 171ನೇ ಸಿನಿಮಾ ಕೂಲಿ ಆಗಿದೆ. ಜೈಲರ್‌ನಂತಹ ಬ್ಲಾಕ್ ಬಸ್ಟರ್ ಸಿನಿಮಾವನ್ನು ನಿರ್ದೇಶನ ಮಾಡಿದ್ದ ಸನ್ ಪಿಕ್ಚರ್ಸ್ ಕೂಲಿಯನ್ನು ನಿರ್ಮಿಸಲಿದೆ.

Real Star Upendra Acting with Superstar Rajinikanth Coolie Movie
Real Star Upendra Acting with Superstar Rajinikanth Coolie Movie

ರಜನಿಕಾಂತ್‌ ಮತ್ತು ಲೋಕೇಶ್ ಕನಕರಾಜ್‌ ಕಾಂಬಿನೇಷನ್‌ನ ‘ಕೂಲಿ’ ಸಿನಿಮಾದಲ್ಲಿ ಕನ್ನಡದ ಸೂಪರ್‌ ಸ್ಟಾರ್‌ ಉಪೇಂದ್ರ ನಟಿಸಲಿದ್ದಾರೆ.

ಈ ಕುರಿತು ಉಪೇಂದ್ರ ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ಕೂಲಿ ಸಿನಿಮಾದ ಪೋಸ್ಟರ್‌ ಹಾಕಿ ತಿಳಿಸಿದ್ದಾರೆ. ತಲೈವಾ ರಜಿನಿಕಾಂತ್‌ ನಟನೆಯ ಕೂಲಿ ಚಿತ್ರದಲ್ಲಿ ಉಪೇಂದ್ರ ಕಲೀಷ ಎಂಬ ಪಾತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ.

Real Star Upendra Acting with Superstar Rajinikanth Coolie Movie
Real Star Upendra Acting with Superstar Rajinikanth Coolie Movie

ನಿಮ್ಮ ಆಶೀರ್ವಾದದಿಂದ ನನ್ನ ಗುರು ನನ್ನ ಸೂಪರ್‌ ಸ್ಟಾರ್‌ ರಜಿನಿ ಸರ್‌ ಜತೆಗೆ ಕೂಲಿ ಚಿತ್ರದಲ್ಲಿ ಒಂದು ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದೇನೆ. ಫೀಲಿಂಗ್‌‌ ಬ್ಲೆಸ್ಡ್ ಅಂತ ಲೋಕೇಶ್‌ ಕನಕರಾಜ್‌ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

Continue Reading
Advertisement
Action Prince Dhruva Sarja much awaited film Martin to hit the screens on October 11
ಸಿನಿಮಾ4 ಗಂಟೆಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Actor Darshan
ಬೆಂಗಳೂರು5 ಗಂಟೆಗಳು ago

Parappana Agrahara : ಜೈಲಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಕೇಸ್; ಕ್ಲೈ ಮ್ಯಾಕ್ಸ್ ಹಂತದಲ್ಲಿ ರಿವೈಲ್ ಆಯ್ತು ಜೈಲಿನೊಳಗಿನ ಅಂದರ್ ಕಿ ದರ್ಬಾರ್!

Bengaluru News
ಬೆಂಗಳೂರು8 ಗಂಟೆಗಳು ago

Bengaluru News : ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನ; ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಕುಟುಂಬ

HD kumaraswamy And Vijayetata
ಬೆಂಗಳೂರು8 ಗಂಟೆಗಳು ago

HD Kumaraswamy : ಎಲೆಕ್ಷನ್‌ಗೆ 50 ಕೋಟಿ ರೂ.ಗೆ ಡಿಮ್ಯಾಂಡ್‌ ಮಾಡಿ ಉದ್ಯಮಿಗೆ ಬೆದರಿಕೆ; ಎಚ್‌ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

Karnataka weather Forecast
ಪ್ರಮುಖ ಸುದ್ದಿ9 ಗಂಟೆಗಳು ago

Karnataka Rain : ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ; ಹೈರಾಣಾದ ವಾಹನ ಸವಾರರು

MLA Muniratna
ಬೆಂಗಳೂರು9 ಗಂಟೆಗಳು ago

MLA Muniratna: ಶಾಸಕ ಮುನಿರತ್ನ ಕೇಸ್‌; ರಾಜಕಾರಣಿಗಳ ಹನಿಟ್ರ್ಯಾಪ್‌ ಮಾಡುತ್ತಿದ್ದ ರೂಮಿನ ಸ್ಥಳ ಮಹಜರು ಮಾಡಿದ ಎಸ್‌ಐಟಿ ಅಧಿಕಾರಿಗಳು

Power cut off due to a technical problem in the transformer Bengaluru faces water crisis today
ಬೆಂಗಳೂರು11 ಗಂಟೆಗಳು ago

Water supply: ಟ್ರಾನ್ಸಫಾರ್ಮರ್‌ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ವಿದ್ಯುತ್‌ ಸಂಪರ್ಕ ಕಡಿತ; ಬೆಂಗಳೂರಿಗೆ ಇಂದು ನೀರಿನ ಸಮಸ್ಯೆ

Gandhi Jayanti 2024
ಬೆಂಗಳೂರು12 ಗಂಟೆಗಳು ago

Gandhi Jayanti 2024: ಗಾಂಧಿ ಜಯಂತಿ ಹಿನ್ನೆಲೆ ಸರ್ಕಾರಿ ಯೋಜನೆಗಳ ಅರಿವು ಮೂಡಿಸಿದ ಎನ್‌ಸಿಸಿ ಕೆಡೆಟ್‌ಗಳು

Drugs Mafia
ಕೊಡಗು13 ಗಂಟೆಗಳು ago

Drugs Mafia: ಥೈಲ್ಯಾಂಡ್ ಟು ದುಬೈ ಡ್ರಗ್‌ ಮಾಫಿಯಾಗೆ ಇಂಡಿಯಾನೆ ಮೈನ್ ಲಿಂಕ್; 3 ಕೋಟಿ ಮೌಲ್ಯದ ಗಾಂಜಾ ವಶ

Mysuru Dasara 2024
ಮೈಸೂರು13 ಗಂಟೆಗಳು ago

Mysuru Dasara 2024: ವೈಭವದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಿಸಿದ ಹಿರಿಯ ಸಾಹಿತಿ ಡಾ. ಹಂಪ ನಾಗರಾಜಯ್ಯ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ4 ಗಂಟೆಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌