ವಾಯುಪ್ರದೇಶ ಉಲ್ಲಂಘಿಸಬೇಡಿ: ಚೀನಾಕ್ಕೆ ಭಾರತದ ಖಡಕ್‌ ಸೂಚನೆ - Vistara News

ದೇಶ

ವಾಯುಪ್ರದೇಶ ಉಲ್ಲಂಘಿಸಬೇಡಿ: ಚೀನಾಕ್ಕೆ ಭಾರತದ ಖಡಕ್‌ ಸೂಚನೆ

ಭಾರತದ ಗಡಿಪ್ರದೇಶದ ಸಮೀಪದಲ್ಲಿ ಯುದ್ಧವಿಮಾನಗಳನ್ನು ಹಾರಾಡಿಸಿದ ಚೀನಾ ಮಿಲಿಟರಿಗೆ, ನಿಯಮ ಉಲ್ಲಂಘಿಸದಂತೆ ಸ್ಪಷ್ಟ ಸೂಚನೆಯನ್ನು ಭಾರತ ಸೈನ್ಯ ನೀಡಿದೆ.

VISTARANEWS.COM


on

airspace
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಚೀನಾದ ಕಡೆಯಿಂದ ವಾಯುಪ್ರದೇಶ ಉಲ್ಲಂಘನೆ ಮತ್ತು ಪ್ರಚೋದನೆಗಳ ನಡೆದಿರುವ ಮಧ್ಯೆಯೇ, ಭಾರತ ಮತ್ತು ಚೀನಾ ಇತ್ತೀಚೆಗೆ ಪೂರ್ವ ಲಡಾಖ್‌ನ ಚುಶುಲ್-ಮೊಲ್ಡೊ ಗಡಿ ಸಭೆಯ ಸ್ಥಳದಲ್ಲಿ ವಿಶೇಷ ಸುತ್ತಿನ ಮಿಲಿಟರಿ ಮಾತುಕತೆಗಳನ್ನು ನಡೆಸಿವೆ.

ವಾಯುಪ್ರದೇಶವನ್ನು ಉಲ್ಲಂಘಿಸುವ ಮೂಲಕ ಪೂರ್ವ ಲಡಾಖ್ ವಲಯದಲ್ಲಿ ಪ್ರಚೋದನೆ ನೀಡಲು ಚೀನಾದ ಹಲವು ಬಾರಿ ಪ್ರಯತ್ನಿಸಿದೆ. ಇದನ್ನು ಭಾರತೀಯ ವಾಯುಪಡೆ (ಐಎಎಫ್) ಎದುರಿಸಿದೆ. ಮಂಗಳವಾರ ಈ ಕುರಿತು ಉಭಯ ಕಡೆಗಳವರೂ ಮಾತುಕತೆ ನಡೆಸಿದರು. ಎರಡೂ ಕಡೆಯವರು ವಾಸ್ತವಿಕ ಗಡಿರೇಖೆಯ 10 ಕಿಮೀ ದೂರದ ಒಳಗೆ ಯುದ್ಧವಿಮಾನಗಳನ್ನು ಹಾರಾಡಿಸುವಂತಿಲ್ಲ.

ಪೂರ್ವ ಲಡಾಖ್ ಸೆಕ್ಟರ್ ಬಳಿ ಒಂದು ತಿಂಗಳಿನಿಂದಲೂ ಚೀನಾದ ಹಾರಾಟದ ಚಟುವಟಿಕೆಗಳ ಬಗ್ಗೆ ಭಾರತ ಬಲವಾಗಿ ಆಕ್ಷೇಪಣೆಗಳನ್ನು ಎತ್ತಿದೆ. ಇಂತಹ ಪ್ರಚೋದನಕಾರಿ ಚಟುವಟಿಕೆಗಳನ್ನು ತಪ್ಪಿಸುವಂತೆ ಸೂಚಿಸಲಾಗಿದೆ ಎಂದು ಮಿಲಿಟರಿ ಮೂಲಗಳು ತಿಳಿಸಿವೆ. ಉಭಯ ದೇಶಗಳ ನಡುವಿನ ಮಾತುಕತೆಯಲ್ಲಿ ಸೈನ್ಯದ ಪ್ರತಿನಿಧಿಗಳೊಂದಿಗೆ ಎರಡೂ ಕಡೆಯ ಐಎಎಫ್ ಅಧಿಕಾರಿಗಳಿದ್ದರು. IAF ಅನ್ನು ಏರ್ ಕಮೋಡೋರ್ ಅಮಿತ್ ಶರ್ಮಾ ಪ್ರತಿನಿಧಿಸಿದರೆ, ಪೀಪಲ್ಸ್ ಲಿಬರೇಶನ್ ಆರ್ಮಿಯ (PLA) ವಾಯುಪಡೆಯು ಚರ್ಚೆಗೆ ಸಮಾನ ಶ್ರೇಣಿಯ ಅಧಿಕಾರಿಯನ್ನು ಕಳುಹಿಸಿತು.

ಇತ್ತೀಚೆಗೆ, ಐಎಎಫ್ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿವೇಕ್ ರಾಮ್ ಚೌಧರಿ, “ಚೀನಾದ ವಿಮಾನಗಳು ಅಥವಾ ರಿಮೋಟ್ ಪೈಲಟ್ ಏರ್‌ಕ್ರಾಫ್ಟ್ ಸಿಸ್ಟಮ್‌ಗಳು (ಆರ್‌ಪಿಎಎಸ್) ಎಲ್‌ಎಸಿಗೆ ಹತ್ತಿರ ಬರುತ್ತಿದ್ದರೆ, ನಾವು ನಮ್ಮ ಫೈಟರ್‌ಗಳನ್ನು ಸ್ಕ್ರಾಂಬ್ಲಿಂಗ್ ಮಾಡುವ ಮೂಲಕ ಅಥವಾ ನಮ್ಮ ಆರ್‌ಪಿಎಎಸ್‌ಗಳನ್ನು ಮುಂದೆ ಬಿಡುವ ಮೂಲಕ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಇದು ಅವರನ್ನು ಸ್ವಲ್ಪ ಮಟ್ಟಿಗೆ ತಡೆದಿದೆ” ಎಂದು ತಿಳಿಸಿದ್ದಾರೆ.

2020ರಲ್ಲಿ ವಾಸ್ತವಿಕ ಗಡಿರೇಖೆಯಲ್ಲಿ LACಯಲ್ಲಿ ಯಥಾಸ್ಥಿತಿಯನ್ನು ಬದಲಾಯಿಸಲು ಚೀನಿಯರು ಪ್ರಯತ್ನಿಸಿದ್ದರು. ನಂತರ ಪ್ರಾರಂಭವಾದ ಉದ್ವಿಗ್ನತೆಯನ್ನು ಶಮನಗೊಳಿಸಲು ಉಭಯ ರಾಷ್ಟ್ರಗಳು ತಮ್ಮ ಕಮಾಂಡರ್ ಮಟ್ಟದ ಮಾತುಕತೆಗಳನ್ನು ನಡೆಸಿವೆ.

ಇದನ್ನೂ ಓದಿ: ತೈವಾನ್‌ ಮೂಲಕ ಸಾಗಿ ಜಪಾನ್‌ಗೆ ಅಪ್ಪಳಿಸಿದ ಚೀನಾದ ಕ್ಷಿಪಣಿಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಪಿಎಂ ಆವಾಸ್‌ ಯೋಜನೆಯ 40 ಸಾವಿರ ರೂ. ಪಡೆದು 11 ಸ್ತ್ರೀಯರು ಗೆಳೆಯರೊಂದಿಗೆ ಪರಾರಿ; ಕಂಗಾಲಾದ ಪತಿಯರು!

ಉತ್ತರ ಪ್ರದೇಶದ ನಿಚ್ಲಾಲ್‌ ಬ್ಲಾಕ್‌ನಲ್ಲಿರುವ 11 ಗ್ರಾಮಗಳ ಮಹಿಳೆಯರು ತಮ್ಮ ಬ್ಯಾಂಕ್‌ ಖಾತೆಗೆ ಪಿಎಂ ಆವಾಸ್‌ ಯೋಜನೆಯ ಮೊದಲ ಕಂತಿನ ಮೊತ್ತವು ಜಮೆಯಾಗುತ್ತಲೇ ಪತಿಯರನ್ನು ತೊರೆದು ಪರಾರಿಯಾಗಿದ್ದಾರೆ. ಪ್ರಕರಣದ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿರುವ ಮಧ್ಯೆಯೇ, ಮಹಿಳೆಯರ ಗಂಡಂದಿರು ಹಿರಿಯ ಅಧಿಕಾರಿಗಳ ಮೊರೆ ಹೋಗಿದ್ದಾರೆ.

VISTARANEWS.COM


on

Viral News
Koo

ಲಖನೌ: ಸರ್ಕಾರಿ ಯೋಜನೆಗಳ ಲಾಭ ಪಡೆದು, ಸಂಸಾರ ಸಾಗಿಸುವ ಕೋಟ್ಯಂತರ ಮಹಿಳೆಯರು ದೇಶದಲ್ಲಿದ್ದಾರೆ. ಆದರೆ, ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ ಜಿಲ್ಲೆಯ (Maharajganj District) ನಿಚ್ಲಾಲ್‌ ಬ್ಲಾಕ್‌ನಲ್ಲಿ ವಿಚಿತ್ರ ಪ್ರಕರಣವು ಭಾರಿ ಸುದ್ದಿಯಾಗಿದೆ. ಪ್ರಧಾನಮಂತ್ರಿ ಆವಾಸ್‌ ಯೋಜನೆಯ (PM Awas Yojana) ಮೊದಲ ಕಂತಿನ ಮೊತ್ತವಾದ 40 ಸಾವಿರ ರೂ. ಖಾತೆಗೆ ಜಮೆಯಾಗುತ್ತಲೇ 11 ವಿವಾಹಿತ ಮಹಿಳೆಯರು ತಮ್ಮ ಪ್ರಿಯತಮರೊಂದಿಗೆ ಪರಾರಿಯಾಗಿದ್ದಾರೆ. ಇದರಿಂದ ಮಹಿಳೆಯರ ಗಂಡಂದಿರು ಕಂಗಲಾಗಿದ್ದಾರೆ.

ಹೌದು, ನಿಚ್ಲಾಲ್‌ ಬ್ಲಾಕ್‌ನಲ್ಲಿರುವ 11 ಗ್ರಾಮಗಳ ಮಹಿಳೆಯರು ತಮ್ಮ ಬ್ಯಾಂಕ್‌ ಖಾತೆಗೆ ಪಿಎಂ ಆವಾಸ್‌ ಯೋಜನೆಯ ಮೊದಲ ಕಂತಿನ ಮೊತ್ತವು ಜಮೆಯಾಗುತ್ತಲೇ ಪತಿಯರನ್ನು ತೊರೆದು ಪರಾರಿಯಾಗಿದ್ದಾರೆ. ಪ್ರಕರಣದ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿರುವ ಮಧ್ಯೆಯೇ, ಮಹಿಳೆಯರ ಗಂಡಂದಿರು ಹಿರಿಯ ಅಧಿಕಾರಿಗಳ ಮೊರೆ ಹೋಗಿದ್ದಾರೆ. ನಮ್ಮ ಪತ್ನಿಯರು ಪರಾರಿಯಾಗಿದ್ದು, ಅವರ ಬ್ಯಾಂಕ್‌ ಖಾತೆಗೆ ಎರಡನೇ ಕಂತಿನ ಮೊತ್ತವನ್ನು ಜಮೆ ಮಾಡದಂತೆ ಅಂಗಲಾಚಿದ್ದಾರೆ ಎಂದು ತಿಳಿದುಬಂದಿದೆ.

2023-24ನೇ ವಿತ್ತೀಯ ಸಾಲಿನಲ್ಲಿ ಮಹಾರಾಜ್‌ಗಂಜ್‌ ಜಿಲ್ಲೆ ನಿಚ್ಲಾಲ್‌ ಬ್ಲಾಕ್‌ನ 108 ಗ್ರಾಮಗಳ 2,350 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಇವುಗಳಲ್ಲಿ ಶೇ.90ರಷ್ಟು ಮನೆಗಳ ನಿರ್ಮಾಣವು ಪೂರ್ಣಗೊಂಡಿದೆ. ತುತ್ತಿಬರಿ, ಶೀತಲಾಪುರ, ಚಾಟಿಯಾ, ರಾಮನಗರ, ಕಿಶನ್‌ಪುರ, ಮೇಧೌಳಿ ಸೇರಿ 11 ಮಹಿಳೆಯರ ಬ್ಯಾಂಕ್‌ ಖಾತೆಗಳಿಗೆ ಮೊದಲ ಕಂತಿನ 40 ಸಾವಿರ ರೂ. ಜಮೆಯಾಗಿದೆ. ಖಾತೆಗೆ ಹಣ ಜಮೆಯಾಗುವ ಕುರಿತು ಮೊದಲೇ ಮಾಹಿತಿ ಇದ್ದ ಮಹಿಳೆಯರು, ತಮ್ಮ ಪ್ರಿಯತಮರಿಗೆ ವಿಷಯ ತಿಳಿಸಿದ್ದರು. ಹಣ ಜಮೆಯಾಗುತ್ತಲೇ ಅವರು ಗೆಳೆಯರೊಂದಿಗೆ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಮನೆ ಆಸೆಗೆ ಮಡದಿಯ ಕಳೆದುಕೊಂಡರು

ಸ್ವಂತ ಮನೆ ಹೊಂದುವ ಕನಸಿನೊಂದಿಗೆ ಮಹಿಳೆಯರ ಪತಿಯರು ಪಿಎಂ ಆವಾಸ್‌ ಯೋಜನೆಗೆ ಅರ್ಜಿ ಹಾಕಿದ್ದರು. ಅರ್ಜಿ ಹಾಕುವಾಗ ಪತ್ನಿಯರ ಬ್ಯಾಂಕ್‌ ಖಾತೆಯ ಸಂಖ್ಯೆಯನ್ನೇ ನಮೂದಿಸಿದ್ದರು. ಹಾಗಾಗಿ ಅವರ ಬ್ಯಾಂಕ್‌ ಖಾತೆಗಳಿಗೆ ಹಣ ಜಮೆಯಾಗಿದೆ. ಈಗ ಪತಿಯರು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ನಮ್ಮ ಬ್ಯಾಂಕ್‌ ಖಾತೆಯಿಂದ ಮಾಸಿಕವಾಗಿ ಹಣ ಕಡಿತಗೊಳಿಸಬಾರದು ಎಂಬುದಾಗಿ ಅಂಗಲಾಚುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Murder case : ಕಾಡಿಗೆ ಹೋದ ಮಹಿಳೆಯ ಕತ್ತು ಕೊಯ್ದು ಕೊಲೆ; ಹಂತಕರು ಪರಾರಿ

Continue Reading

ದೇಶ

Amritpal Singh: ತಾಯಿ ವಿರುದ್ಧವೇ ಹೇಳಿಕೆ ನೀಡಿದ ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತ್‌ಪಾಲ್‌ ಸಿಂಗ್‌; ಕಾರಣವೇನು?

Amritpal Singh: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಜೈಲಿನಿಂದಲೇ ಸ್ಪರ್ಧಿಸಿ ಪಂಜಾಬ್‌ನ ಖದೂರ್ ಸಾಹಿಬ್ ಕ್ಷೇತ್ರದಿಂದ ಜಯಗಳಿಸಿರುವ ಖಲಿಸ್ತಾನಿ ತ್ಯೇಕತಾವಾದಿ ಅಮೃತ್‌ಪಾಲ್‌ ಸಿಂಗ್‌ ತನ್ನ ತಾಯಿ ಬಲ್ವಿಂದರ್ ಕೌರ್ ಹೇಳಿದ್ದ ತಾನು ಖಲಿಸ್ತಾನಿ ಬೆಂಬಲಿಗನಲ್ಲ ಎಂಬ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದಾನೆ. ಶುಕ್ರವಾರ ಹೇಳಿಕೆ ನೀಡಿದ್ದ ಬಲ್ವಿಂದರ್ ಕೌರ್ ತನ್ನ ಮಗ (ಅಮೃತ್‌ಪಾಲ್‌) ಖಲಿಸ್ತಾನಿ ಬೆಂಬಲಿಗನಲ್ಲ ಎಂದು ಹೇಳಿದ್ದರು.

VISTARANEWS.COM


on

Amritpal Singh
Koo

ಚಂಡಿಗಢ: ಈ ಬಾರಿಯ ಲೋಕಸಭೆ ಚುನಾವಣೆ (Lok Sabha Election)ಯಲ್ಲಿ ಜೈಲಿನಿಂದಲೇ ಸ್ಪರ್ಧಿಸಿ ಪಂಜಾಬ್‌ನ ಖದೂರ್ ಸಾಹಿಬ್ (Khadoor Sahib) ಕ್ಷೇತ್ರದಿಂದ ಜಯಗಳಿಸಿರುವ ಖಲಿಸ್ತಾನಿ (Khalistani) ಪ್ರತ್ಯೇಕತಾವಾದಿ ಅಮೃತ್‌ಪಾಲ್‌ ಸಿಂಗ್‌(Amritpal Singh) ತನ್ನ ತಾಯಿ ಬಲ್ವಿಂದರ್ ಕೌರ್ (Balwinder Kaur) ಹೇಳಿದ್ದ ತಾನು ಖಲಿಸ್ತಾನಿ ಬೆಂಬಲಿಗನಲ್ಲ ಎಂಬ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದಾನೆ. ಶುಕ್ರವಾರ ಹೇಳಿಕೆ ನೀಡಿದ್ದ ಬಲ್ವಿಂದರ್ ಕೌರ್ ತನ್ನ ಮಗ (ಅಮೃತ್‌ಪಾಲ್‌) ಖಲಿಸ್ತಾನಿ ಬೆಂಬಲಿಗನಲ್ಲ ಎಂದು ಹೇಳಿದ್ದರು. ಇದನ್ನು ನಿರಾಕರಿಸಿರುವ ಅಮೃತ್‌ಪಾಲ್‌, ತನ್ನ ತಾಯಿಯನ್ನು ಟೀಕಿಸಿ, ಖಾಲ್ಸಾ ರಾಜ್ ಕನಸು ಕಾಣುವುದು ಅಪರಾಧವಲ್ಲ, ಅದು ಹೆಮ್ಮೆಯ ವಿಷಯ ಎಂದು ತಿರುಗೇಟು ನೀಡಿದ್ದಾನೆ. ಜತೆಗೆ ಪಂತ್ (ಧರ್ಮ) ಮತ್ತು ಕುಟುಂಬ ಎಂಬ ಎರಡು ಆಯ್ಕೆಯ ಪೈಕಿ ತನ್ನ ಆದ್ಯತೆ ಯಾವತ್ತಿದ್ದರೂ ಧರ್ಮವೇ ಆಗಿರುತ್ತದೆ ಎಂದು ಹೇಳಿದ್ದಾನೆ.

ದೆಹಲಿಯಲ್ಲಿ ತಮ್ಮ ಮಗ ಸಂಸದನಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಬಲ್ವಿಂದರ್ ಕೌರ್, ʼʼಅಮೃತ್‌ಪಾಲ್‌ ಖಲಿಸ್ತಾನಿ ಬೆಂಬಲಿಗನಲ್ಲ. ಹೀಗಾಗಿ ಆತನನ್ನು ಜೈಲಿನಿಂದ ತಕ್ಷಣವೇ ಬಿಡುಗಡೆ ಮಾಡಬೇಕು. ಆತ ಪಂಜಾಬ್‌ ಹಕ್ಕುಗಳ ಬಗ್ಗೆ ಮಾತನಾಡುತ್ತಾನೆ ಮತ್ತು ಪಂಜಾಬ್‌ನ ಯುವಕರನ್ನು ಮಾದಕ ವಸ್ತುಗಳಿಂದ ರಕ್ಷಿಸುವ ಬಗ್ಗೆ ಒಲವು ಹೊಂದಿದ್ದಾನೆ. ಇಂತಹವರು ಹೇಗೆ ತಾನೆ ಖಲಿಸ್ತಾನದ ಬೆಂಬಲಿಗರಾಗುತ್ತಾರೆ? ಆತ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು ಈಗ ಪ್ರಮಾಣ ವಚನ ಸ್ವೀಕರಿಸಿದ್ದಾನೆ. ಆತ ಪಂಜಾಬ್‌ಗಾಗಿ ಧ್ವನಿ ಎತ್ತಲಿದ್ದಾನೆʼʼ ಎಂದು ತಿಳಿಸಿದ್ದರು.

ಅಮೃತ್‌ಪಾಲ್‌ ಹೇಳಿದ್ದೇನು?

ಇದಕ್ಕೆ ತಿರುಗೇಟು ನೀಡಿರುವ ಅಮೃತ್‌ಪಾಲ್‌ ಸಿಂಗ್‌, “ನಿನ್ನೆ ಮಾತಾಜಿ ನೀಡಿದ ಹೇಳಿಕೆಯಿಂದ ನನಗೆ ತುಂಬಾ ದುಃಖವಾಯಿತು. ಮಾತಾಜಿ ತಿಳಿಯದೆ ಈ ರೀತಿಯ ಹೇಳಿಕೆ ನೀಡಿದ್ದಾರೆ. ಅಂತಹ ಹೇಳಿಕೆ ನನ್ನ ಕುಟುಂಬದಿಂದ ಅಥವಾ ನನ್ನನ್ನು ಬೆಂಬಲಿಸುವ ಯಾರಿಂದಲೂ ಬರಬಾರದು. ಖಾಲ್ಸಾ ರಾಜ್ ಕನಸು ಕಾಣುವುದು ಅಪರಾಧವಲ್ಲ, ಅದು ಹೆಮ್ಮೆಯ ವಿಷಯ. ಲಕ್ಷಾಂತರ ಸಿಖರು ತಮ್ಮ ಪ್ರಾಣ ತ್ಯಾಗ ಮಾಡಿದ ಈ ಮಾರ್ಗದಿಂದ ನಾನು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನನ್ನ ಮುಂದೆ ಕುಟುಂಬ ಮತ್ತು ಧರ್ಮದ ಆಯ್ಕೆ ಇಟ್ಟರೆ ನಾನು ಧರ್ಮವನ್ನೇ ಆರಿಸುತ್ತೇನೆ. ಭವಿಷ್ಯದಲ್ಲಿ ಸಂವಹನ ನಡೆಸುವಾಗ ಇಂತಹ ನಿರ್ಲಕ್ಷ್ಯ ಮತ್ತೆ ಸಂಭವಿಸಬಾರದು” ಎಂದು ಹೇಳಿದ್ದಾನೆ.

ಯೂಟರ್ನ್‌ ಹೊಡೆದ ಬಲ್ವಿಂದರ್ ಕೌರ್

ಬಲ್ವಿಂದರ್ ಕೌರ್ ಅವರ ಹೇಳಿಕೆಯು ಚುನಾವಣೆಯಲ್ಲಿ ಅಮೃತ್‌ಪಾಲ್‌ ಸಿಂಗ್‌ಗೆ ಮತ ಚಲಾಯಿಸಿದ ಖಲಿಸ್ತಾನಿ ಪರ ಬೆಂಬಲಿಗರನ್ನು ಕೆರಳಿಸಿದೆ. ಇದರಿಂದ ಎಚ್ಚೆತ್ತ ಬಲ್ವಿಂದರ್ ಕೌರ್ ಮಾಧ್ಯಮಗಳ ಮೇಲೆ ತಪ್ಪು ಹೊರಿಸಿದ್ದಾರೆ. ತನ್ನ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ನಿರೂಪಿಸುತ್ತಿವೆ ಎಂದು ಜಾರಿಕೊಳ್ಳಲು ಯತ್ನಿಸಿದ್ದಾರೆ.

“ನಾವು ಸಂವಿಧಾನದ ಪ್ರಕಾರ ಚುನಾವಣೆಯಲ್ಲಿ ಗೆದ್ದಿದ್ದೇವೆ ಎಂದು ನಾನು ಹೇಳಿದ್ದೆ. ಖಲಿಸ್ತಾನದ ಬಗ್ಗೆ ಕೇಳುವ ಮೂಲಕ ಮಾಧ್ಯಮಗಳು ನನ್ನ ದಾರಿ ತಪ್ಪಿಸಿವೆ. ಮಾಧ್ಯಮಗಳು ಸತ್ಯಗಳನ್ನು ತಪ್ಪಾಗಿ ನಿರೂಪಿಸುವ ಅಭ್ಯಾಸವನ್ನು ಹೊಂದಿರುವುದರಿಂದ ಬೆಂಬಲಿಗರು ನನ್ನ ಹೇಳಿಕೆಯನ್ನು ಬೇರೆ ರೀತಿಯಲ್ಲಿ ಅರ್ಥೈಸಬಾರದು” ಎಂದು ಸಮರ್ಥನೆ ಮಾಡಿಕೊಳ್ಳಲು ಮುಂದಾಗಿದ್ದಾರೆ.

ಇದನ್ನೂ ಓದಿ: ವಿಸ್ತಾರ Explainer: ಯಾರು ಈ ಖಲಿಸ್ತಾನಿ, ಪ್ರತ್ಯೇಕತಾವಾದಿ ನಾಯಕ ಅಮೃತ್​ಪಾಲ್​ ಸಿಂಗ್‌?

Continue Reading

ದೇಶ

Hit and Run Case: ಶಿವಸೇನೆ ಮುಖಂಡನ ಪುತ್ರನಿಂದ ಡ್ರಂಕ್‌ ಆಂಡ್‌ ಡ್ರೈವ್‌; ಸ್ಕೂಟರ್‌ಗೆ BMW ಕಾರು ಡಿಕ್ಕಿ ಹೊಡೆದು ಮಹಿಳೆ ಸಾವು

Hit and Run Case:ಕೋಳಿವಾಡ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಕಾವೇರಿ ನಖ್ವಾ ಮತ್ತು ಪ್ರದೀಕ್‌ ನಖ್ವಾ ಎಂಬ ದಂಪತಿ ಹೋಗುತ್ತಿದ್ದ ಬೈಕ್‌ಗೆ BMW ಕಾರು ಡಿಕ್ಕಿ ಹೊಡೆದು ಎಸ್ಕೇಪ್‌ ಆಗಿದ್ದಾನೆ. ಬೆಳಗ್ಗೆ 5:30ರ ಸಮಯದಲ್ಲಿ ದಂಪತಿ ಸಾಸಾನ್‌ ಡಾಕ್‌ ಮಾರುಕಟ್ಟೆಯಿಂದ ಮೀನು ಖರೀದಿಸಿ ವಾಪಾಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಇನ್ನು ದಂಪತಿ ಪ್ರದೀಕ್‌ ನಖ್ವಾ ಮಾರುಕಟ್ಟೆಯಲ್ಲಿ ಮೀನಿನ ವ್ಯಾಪಾರಿಯಾಗಿದ್ದಾರೆ.

VISTARANEWS.COM


on

Hit and Run case
Koo

ಮುಂಬೈ: ಪುಣೆ ಪೋರ್ಶ್‌ ಕಾರು ಹಿಟ್‌ ಆಂಡ್‌ ರನ್‌ ಕೇಸ್‌(Hit and Run Case) ಮಾಸುವ ಮುನ್ನವೇ ಮುಂಬೈನಲ್ಲೂ ಅಂತಹದ್ದೇ ಒಂದು ಘಟನೆ ವರದಿಯಾಗಿದೆ. ಮೀನು ತರಲೆಂದು ಮನೆಯಿಂದ ಹೊರಗೆ ಬಂದಿದ್ದ ದಂಪತಿಗೆ ಬಿಎಂಡಬ್ಲ್ಯೂ ಕಾರು(BMW Car) ಡಿಕ್ಕಿ ಹೊಡೆದಿದೆ. ಇನ್ನು ಕುಡಿದು ಕಾರು ಓಡಿಸಿದ ಚಾಲಕ ಘಟನೆ ಬಳಿಕ ಕಾರು ಸಮೇತ ಎಸ್ಕೇಪ್‌ ಆಗಿದ್ದಾನೆ. ಮುಂಬೈಯ ವರ್ಲಿಯಲ್ಲಿ ಈ ಘಟನೆ ನಡೆದಿದ್ದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಆಕೆಯ ಪತಿಗೆ ಗಂಭೀರ ಗಾಯಗಳಾಗಿವೆ.

ಕೋಳಿವಾಡ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಕಾವೇರಿ ನಖ್ವಾ ಮತ್ತು ಪ್ರದೀಕ್‌ ನಖ್ವಾ ಎಂಬ ದಂಪತಿ ಹೋಗುತ್ತಿದ್ದ ಬೈಕ್‌ಗೆ BMW ಕಾರು ಡಿಕ್ಕಿ ಹೊಡೆದು ಎಸ್ಕೇಪ್‌ ಆಗಿದ್ದಾನೆ. ಬೆಳಗ್ಗೆ 5:30ರ ಸಮಯದಲ್ಲಿ ದಂಪತಿ ಸಾಸಾನ್‌ ಡಾಕ್‌ ಮಾರುಕಟ್ಟೆಯಿಂದ ಮೀನು ಖರೀದಿಸಿ ವಾಪಾಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಇನ್ನು ದಂಪತಿ ಪ್ರದೀಕ್‌ ನಖ್ವಾ ಮಾರುಕಟ್ಟೆಯಲ್ಲಿ ಮೀನಿನ ವ್ಯಾಪಾರಿಯಾಗಿದ್ದಾರೆ. ಕಾರು ಡಿಕ್ಕಿಯಗುತ್ತಿದ್ದಂತೆ ರಸ್ತೆಗೆ ಬಿದ್ದಿದ್ದ ದಂಪತಿ ಗಂಭೀರವಾಗಿ ಗಾಯಗೊಂಡಿದ್ದರು. ಕಾವೇರಿ ಮತ್ತು ಪ್ರದೀಕ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕಾವೇರಿ ಕೊನೆಯುಸಿರೆಳೆದಿದ್ದಾರೆ.

ಶಿವಸೇನೆ ನಾಯಕನ ಪುತ್ರನಿಂದ ಡ್ರಂಕ್‌ ಆಂಡ್‌ ಡ್ರೈವ್‌

ಇನ್ನು ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು, ಕಾರನ್ನು ಪತ್ತೆ ಹಚ್ಚಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆಯವರ ಶಿವಸೇನೆ ಬಣದ ಪಾಲ್ಗರ್‌ ಜಿಲ್ಲಾ ಉಪಾಧ್ಯಕ್ಷ ರಾಜೇಶ್‌ ಅವರ ಪುತ್ರನಿಂದ ಈ ಕೃತ್ಯ ನಡೆದಿದೆ ಎಂಬುದು ಬಯಲಾಗಿದೆ. ರಾಜೇಶ್‌ ಅವರ 24 ವರ್ಷದ ಪುತ್ರ ಮಿಹಿರ್‌ ಶಾ ಕುಡಿದು ವಾಹನ ಚಲಾಯಿಸಿ ಮಹಿಳೆಯ ಸಾವಿಗೆ ಕಾರಣವಾಗಿದ್ದಾನೆ. ಮಿಹಿರ್‌ ಮತ್ತು ಆತನ ಕಾರಿನ ಚಾಲಕ ಕಾರಿನಲ್ಲಿದ್ದರು ಎನ್ನಲಾಗಿದೆ.

ಮಿಹಿರ್‌ ನಾಪತ್ತೆ, ಪೊಲೀಸರ ಹುಡುಕಾಟ

ಇನ್ನು ಘಟನೆ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಮಿಹಿರ್‌ ಶಾ ನಾಪತ್ತೆಯಾಗಿದ್ದಾನೆ. ಮಿಹಿರ್‌ ಶಾ ತನ್ನ ಫೋನನ್ನೂ ಸ್ವಿಚ್‌ ಆಫ್‌ ಮಾಡಿಕೊಂಡಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ಶುರು ಮಾಡಿದ್ದಾರೆ. ಪೊಲೀಸರ ಪ್ರಕಾರ ಮಿಹಿರ್‌ ಕಳೆದ ರಾತ್ರಿ ಜೂಹೂ ಪ್ರದೇಶದಲ್ಲಿರುವ ಬಾರ್‌ನಲ್ಲಿ ಕಂಠಪೂರ್ತಿ ಕುಡಿದಿದ್ದು. ತನ್ನ ಮನೆಗೆ ಹಿಂದಿರುಗುವ ವೇಳೆ ಲಾಂಗ್‌ ಡ್ರೈವ್‌ ಕರೆದುಕೊಂಡು ಹೋಗುವಂತೆ ಡ್ರೈವರ್‌ಗೆ ಹೇಳಿದ್ದಾನೆ. ವರ್ಲಿಗೆ ತಲುಪುತ್ತಿದ್ದಂತೆ ತಾನು ಕಾರು ಚಲಾಯಿಸುವುದಕ್ಕೆ ಮುಂದಾಗಿದ್ದಾನೆ. ಆಗ ಅತ್ಯಂತ ವೇಗವಾಗಿ ಕಾರು ಚಲಾಯಿಸಿದ ಮಿಹಿರ್, ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ.

ಸಿಎಂ ಪ್ರತಿಕ್ರಿಯೆ

ಇನ್ನು ಘಟನೆ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾತ್‌ ಶಿಂಧೆ ಪ್ರತಿಕ್ರಿಯಿಸಿದ್ದಾರೆ. ಈ ಘಟನೆ ದುರಾದೃಷ್ಟಕರವಾದುದು. ಕಾನೂನಿನ ಎದುರು ಎಲ್ಲರೂ ಸಮಾನ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ. ಪೊಲೀಸರು ಜೊತೆಗೆ ಮಾತುಕತೆ ನಡೆಸಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Nafees Iqbal : ಬಾಂಗ್ಲಾದೇಶದ ಮಾಜಿ ಕ್ರಿಕೆಟಿಗನಿಗೆ ಮೆದುಳಿನ ರಕ್ತಸ್ರಾವ; ಪರಿಸ್ಥಿತಿ ಗಂಭೀರ

Continue Reading

ದೇಶ

CBI Arrest: ರೈಲ್ವೇ ಟೆಂಡರ್‌ನಲ್ಲಿ ಭಾರೀ ಗೋಲ್‌ಮಾಲ್;‌ ಸರ್ಕಾರಿ ಅಧಿಕಾರಿಗಳು ಸಿಬಿಐ ಬಲೆಗೆ

CBI Arrest: ರೈಲ್ವೇ ಟೆಂಡರ್‌ಗೆ ಸಂಬಂಧಿಸಿದಂತೆ ಬರೋಬ್ಬರಿ 11ಲಕ್ಷ ರೂ. ಹಣ ಮತ್ತು ಚಿನ್ನವನ್ನು ಲಂಚವಾಗಿ ಪಡೆದ ಆರೋಪದಲ್ಲಿ ಏಳು ಮಂದಿ ವಿರುದ್ಧ ಕೇಸ್‌ ದಾಖಲಾಗಿತ್ತು. ಇದೀಗ ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಸಿಬಿಐ ಏಳು ಮಂದಿಯನ್ನು ಅರೆಸ್ಟ್‌ ಮಾಡಿದೆ.

VISTARANEWS.COM


on

CBI Arrest
Koo

ಹೊಸಿದಿಲ್ಲಿ: ರೈಲ್ವೇ ಟೆಂಡರ್‌ನಲ್ಲಿ ಅಕ್ರಮ ನಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಐವರು ಸರ್ಕಾರಿ ಅಧಿಕಾರಿಗಳು ಸೇರಿದಂತೆ ಬರೋಬ್ಬರಿ ಏಳು ಮಂದಿಯನ್ನು ಕೇಂದ್ರೀಯ ತನಿಖಾ ಸಂಸ್ಥೆ(CBI Arrest) ಅರೆಸ್ಟ್‌ ಮಾಡಿದೆ. ವಿಭಾಗೀಯ ರೈಲ್ವೆ ಮ್ಯಾನೇಜರ್ (DRM), ವಿಭಾಗೀಯ ಹಣಕಾಸು ವ್ಯವಸ್ಥಾಪಕ (Sr. DFM), ನಿವೃತ ಹಿರಿಯ. ವಿಭಾಗೀಯ ಎಂಜಿನಿಯರ್ (Sr. DEN) ಸಮನ್ವಯ, ಕಛೇರಿ ಸೂಪರಿಂಟೆಂಡೆಂಟ್, ದಕ್ಷಿಣ ಮಧ್ಯ ರೈಲ್ವೆಯ ಖಾತೆ ಸಹಾಯಕ, ಗುಂತಕಲ್ ವಿಭಾಗ (ಆಂಧ್ರ ಪ್ರದೇಶ) ಮತ್ತು ಇಬ್ಬರು ಖಾಸಗಿ ವ್ಯಕ್ತಿಗಳು ಅವುಗಳೆಂದರೆ ಬೆಂಗಳೂರು ಮೂಲದ ಸಂಸ್ಥೆಯ ನಿರ್ದೇಶಕ (ಖಾಸಗಿ ವ್ಯಕ್ತಿ) ಮತ್ತು ಇನ್ನೊಬ್ಬ ಖಾಸಗಿ ವ್ಯಕ್ತಿಯನ್ನು ಸಿಬಿಐ ಅರೆಸ್ಟ್‌ ಮಾಡಿದೆ.

ರೈಲ್ವೇ ಟೆಂಡರ್‌ಗೆ ಸಂಬಂಧಿಸಿದಂತೆ ಬರೋಬ್ಬರಿ 11ಲಕ್ಷ ರೂ. ಹಣ ಮತ್ತು ಚಿನ್ನವನ್ನು ಲಂಚವಾಗಿ ಪಡೆದ ಆರೋಪದಲ್ಲಿ ಏಳು ಮಂದಿ ವಿರುದ್ಧ ಕೇಸ್‌ ದಾಖಲಾಗಿತ್ತು. ಇದೀಗ ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಸಿಬಿಐ ಏಳು ಮಂದಿಯನ್ನು ಅರೆಸ್ಟ್‌ ಮಾಡಿದೆ.

ಮತ್ತೊಂದು ಪ್ರಕರಣದಲ್ಲಿ, ಕೇಂದ್ರೀಯ ಸರಕು ಮತ್ತು ಸೇವಾ ತೆರಿಗೆ (ಸಿಜಿಎಸ್‌ಟಿ) ಇನ್ಸ್‌ಪೆಕ್ಟರ್ ಒಬ್ಬರನ್ನು ಗುರುವಾರ ಗುಜರಾತ್‌ನ ರಾಜ್‌ಕೋಟ್‌ನಲ್ಲಿ 2.5 ಲಕ್ಷ ರೂಪಾಯಿ ಲಂಚ ಕೇಳಿ ಸ್ವೀಕರಿಸಿದ ಆರೋಪದ ಮೇಲೆ ಸಿಬಿಐ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನವೀನ್ ಧಂಕರ್ ಅವರು ಕಾನೂನು ಪ್ರಕಾರ ವ್ಯವಹಾರ ನಡೆಸುತ್ತಿಲ್ಲ ಎಂದು ಆರೋಪಿಸಿ ಸ್ಥಳೀಯ ಸಂಸ್ಥೆಯಿಂದ ಲಂಚ ಕೇಳಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

“ದಾಖಲೆಗಳಲ್ಲಿ ನಮೂದಿಸಿರುವಂತೆ ಯಾವುದೇ ಸರಕುಗಳನ್ನು ಸಂಸ್ಥೆಯಿಂದ ಹೊರಕ್ಕೆ ಸಾಗಿಸಲಾಗುತ್ತಿಲ್ಲ ಎಂದು ಅವರು ಹೇಳಿದರು. ನಂತರ ಅವರು 2.5 ಲಕ್ಷ ರೂಪಾಯಿ ಲಂಚವನ್ನು ಕೇಳಿದರು ಮತ್ತು ಸಂಸ್ಥೆಯ ಜಿಎಸ್ಟಿ ಸಂಖ್ಯೆಯನ್ನು ರದ್ದುಗೊಳಿಸುವಂತೆ ಬೆದರಿಕೆ ಹಾಕಿದರು” ಎಂದು ಕೇಂದ್ರ ತನಿಖಾ ದಳದ ಪ್ರಕಟಣೆ ತಿಳಿಸಿದೆ.

ದೂರು ಪಡೆದ ನಂತರ ಸಿಬಿಐ ಬಲೆ ಬೀಸಿತ್ತು. ಆ ವೇಳೆ ಧಂಕರ್‌ ಸಿಬಿಐ ಬಲೆಗೆ ಬಿದ್ದಿದರು. ತನಿಖೆಯ ಭಾಗವಾಗಿ ಆರೋಪಿಗಳಿಗೆ ಸಂಪರ್ಕವಿರುವ ರಾಜ್‌ಕೋಟ್‌ನಲ್ಲಿರುವ ಆವರಣವನ್ನು ಶೋಧಿಸಲಾಗುತ್ತಿದೆ ಎಂದು ಸಿಬಿಐ ಪ್ರಕಟಣೆ ತಿಳಿಸಿದೆ.

ಕೆಲವು ವಾರಗಳ ಹಿಂದೆ ಸಿಬಿಐ, ಕಸ್ಟಮ್ಸ್, ಮಾದಕ ದ್ರವ್ಯ ಮತ್ತು ಆದಾಯ ತೆರಿಗೆ ಅಧಿಕಾರಿಗಳಂತೆ ನಟಿಸುತ್ತಿದ್ದ ಗ್ಯಾಂಗ್‌ವೊಂದು ಬಹುರಾಷ್ಟ್ರೀಯ ಕಂಪನಿಯ ನಿವೃತ್ತ ಹಿರಿಯ ಅಧಿಕಾರಿಯೊಬ್ಬರಿಗೆ 85 ಲಕ್ಷ ರೂ. ವಂಚಿಸಿರುವ ಕುರಿತು ಆಂಧ್ರಪ್ರದೇಶದ ವಿಶಾಖಪಟ್ಟಣಂ ಮತ್ತು ದೆಹಲಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಹಣವನ್ನು ಚೆಕ್ ಮೂಲಕ ಪಡೆದ ಗ್ಯಾಂಗ್ ದೆಹಲಿಯ ಉತ್ತಮ್ ನಗರದಲ್ಲಿ ಹೆಚ್‌ಡಿಎಫ್‌ಸಿ ಖಾತೆಯನ್ನು ನಿರ್ವಹಿಸುತ್ತಿದ್ದ ‘ರಾಣಾ ಗಾರ್ಮೆಂಟ್ಸ್’ ಎಂಬ ಕಂಪನಿಗೆ ವರ್ಗಾಯಿಸಿದೆ. ವಿಶಾಖಪಟ್ಟಣಂನಲ್ಲಿ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಪ್ರಕಾರ, ಗ್ಯಾಂಗ್ ‘ರಾಣಾ ಗಾರ್ಮೆಂಟ್ಸ್’ ನಡೆಸುತ್ತಿದ್ದ ಎಚ್‌ಡಿಎಫ್‌ಸಿ ಖಾತೆಯಿಂದ ಭಾರತದಾದ್ಯಂತ 105 ಖಾತೆಗಳಿಗೆ ಈ ಹಣವನ್ನು ವರ್ಗಾಯಿಸಿದೆ. ಈ ಕುರಿತು ಹೆಚ್‌ಡಿಎಫ್‌ಸಿ ಬ್ಯಾಂಕ್‌ನ ಉತ್ತಮ್ ನಗರ ಶಾಖೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:Project Zorawar: ಚೀನಾಗೆ ಪೆಟ್ಟು ಕೊಡಲು ದೇಶೀಯವಾಗಿ ಯುದ್ಧ ಟ್ಯಾಂಕ್‌ ಉತ್ಪಾದನೆ; ಏನಿವುಗಳ ವಿಶೇಷ?

Continue Reading
Advertisement
Viral News
ದೇಶ48 seconds ago

ಪಿಎಂ ಆವಾಸ್‌ ಯೋಜನೆಯ 40 ಸಾವಿರ ರೂ. ಪಡೆದು 11 ಸ್ತ್ರೀಯರು ಗೆಳೆಯರೊಂದಿಗೆ ಪರಾರಿ; ಕಂಗಾಲಾದ ಪತಿಯರು!

Amritpal Singh
ದೇಶ1 min ago

Amritpal Singh: ತಾಯಿ ವಿರುದ್ಧವೇ ಹೇಳಿಕೆ ನೀಡಿದ ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತ್‌ಪಾಲ್‌ ಸಿಂಗ್‌; ಕಾರಣವೇನು?

Leopard attack three in Raichur
ರಾಯಚೂರು10 mins ago

Leopard attack : ರಾಯಚೂರಿನಲ್ಲಿ ಮೂವರ ಮೇಲೆ ದಾಳಿ ಮಾಡಿ ಕಾಲ್ಕಿತ್ತ ಚಿರತೆ!

Hit and Run case
ದೇಶ11 mins ago

Hit and Run Case: ಶಿವಸೇನೆ ಮುಖಂಡನ ಪುತ್ರನಿಂದ ಡ್ರಂಕ್‌ ಆಂಡ್‌ ಡ್ರೈವ್‌; ಸ್ಕೂಟರ್‌ಗೆ BMW ಕಾರು ಡಿಕ್ಕಿ ಹೊಡೆದು ಮಹಿಳೆ ಸಾವು

Sonakshi Sinha has a hilarious take on her pregnancy
ಬಾಲಿವುಡ್16 mins ago

Sonakshi Sinha: ಮದುವೆಯಾದ ಕೆಲವೇ ದಿನಗಳಲ್ಲಿ ಸೋನಾಕ್ಷಿ ಸಿನ್ಹಾ ಗರ್ಭಿಣಿ? ಆಸ್ಪತ್ರೆಯಲ್ಲಿ ನಟಿ ಹೇಳಿದ್ದೇನು?

ATM Robbery
ಕರ್ನಾಟಕ47 mins ago

ATM Robbery: ಎಟಿಎಂನಲ್ಲಿ 15 ಲಕ್ಷ ರೂ. ದೋಚಿದ ಕಳ್ಳರು; ಗ್ಯಾಸ್ ಕಟರ್ ಬಳಸಿ ಕೃತ್ಯ!

Rohit Sharma
ಕ್ರೀಡೆ53 mins ago

Rohit Sharma: ಚಾಂಪಿಯನ್ಸ್​ ಟ್ರೋಫಿಗೂ ರೋಹಿತ್​ ನಾಯಕ; ಖಚಿತಪಡಿಸಿದ ಜಯ್​ ಶಾ

Attempt To Murder
ಬೆಂಗಳೂರು ಗ್ರಾಮಾಂತರ60 mins ago

Attempt To Murder: ಬಾಯಿಗೆ ಬಂದಂತೆ ಬೈದ್ರು ಅಂತ ಸಿಟ್ಟು; ಮಾಲೀಕನಿಗೆ ಹೊಡೆದು ಕೋಮಾಗೆ ಕಳಿಸಿದ ಸಪ್ಲೇಯರ್‌!

murder case
ಶಿವಮೊಗ್ಗ2 hours ago

Murder case : ಸ್ನೇಹಿತನಿಂದಲೇ ಕೊಲೆಯಾದಳು ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ

MS Dhoni Birthday
ಕ್ರೀಡೆ2 hours ago

MS Dhoni Birthday: ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಪತ್ನಿ; ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ9 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ21 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ23 hours ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ1 day ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು1 day ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ1 day ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ1 day ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ2 days ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ2 days ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ2 days ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

ಟ್ರೆಂಡಿಂಗ್‌