Kumble Sridhara Rao: ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನ - Vistara News

ಶ್ರದ್ಧಾಂಜಲಿ

Kumble Sridhara Rao: ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನ

Kumble Sridhara Rao: ಇರಾ ಸೋಮನಾಥೇಶ್ವರ ಮೇಳದ ಮೂಲಕ ಯಕ್ಷಗಾನ ವೃತ್ತಿಜೀವನ ಆರಂಭಿಸಿದ್ದ ಶ್ರೀಧರ ರಾವ್‌ ಯಕ್ಷಗಾನ ಕ್ಷೇತ್ರದ ದಿಗ್ಗಜ ಕಲಾವಿದರಾದ ಶೇಣಿ ಗೋಪಾಲಕೃಷ್ಣ ಭಟ್ಟರ ರಾವಣ, ವಾಲಿ ಪಾತ್ರಗಳಿಗೆ ಮಂಡೋದರಿಯಾಗಿ, ತಾರೆಯಾಗಿ ಸಾಥ್ ನೀಡಿದ್ದರು.

VISTARANEWS.COM


on

kumble sridhara rao
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ತಮ್ಮ ಸ್ತ್ರೀಪಾತ್ರಗಳಿಂದ ವಿಖ್ಯಾತರಾಗಿದ್ದ ಹಿರಿಯ ಯಕ್ಷಗಾನ ಕಲಾವಿದ (senior yakshagana artist) ಕುಂಬ್ಳೆ ಶ್ರೀಧರ ರಾವ್‌ (76) (Kumble Sridhara Rao) ಶುಕ್ರವಾರ ನಿಧನರಾದರು. ಸುಮಾರು 6 ದಶಕಗಳಿಗೂ ಹೆಚ್ಚು ಕಾಲ ಯಕ್ಷ ರಂಗದಲ್ಲಿ ಸೇವೆ ಸಲ್ಲಿಸಿದ ಅವರು ಸುಂದರ ಪಾತ್ರನಿರ್ವಹಣೆಯಿಂದ ಯಕ್ಷರಸಿಕರ ಮನದಲ್ಲಿ ನೆಲೆ ನಿಂತಿದ್ದಾರೆ.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮೇಳದಲ್ಲೇ ನಿರಂತರ 50 ವರ್ಷಗಳಿಗೂ ಹೆಚ್ಚು ಕಾಲ ಅವರು ಸೇವೆ ಸಲ್ಲಿಸಿದ್ದರು. ಕೆಲವು ವರ್ಷಗಳ ಹಿಂದೆ ಮೇಳದಿಂದ ನಿವೃತ್ತರಾಗಿದ್ದರು. ಮೂಲತಃ ಕೇರಳದ ಕಾಸರಗೋಡು ಜಿಲ್ಲೆಯ ಕುಂಬ್ಳೆಯವರಾದ ಶ್ರೀಧರ ರಾವ್ ಉಪ್ಪಿನಂಗಡಿಯ ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆಯಲ್ಲಿ ವಾಸವಿದ್ದರು.

ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ಮಹಾಲಿಂಗ ಮತ್ತು ಕಾವೇರಿ ದಂಪತಿಯ ಪುತ್ರನಾಗಿ 1948ರಲ್ಲಿ ಜನಿಸಿದ ಶ್ರೀಧರ ರಾವ್, ಕೂಡ್ಲು, ಮೂಲ್ಕಿ, ಇರಾ, ಕರ್ನಾಟಕ, ಧರ್ಮಸ್ಥಳ ಮೇಳಗಳಲ್ಲಿ ಒಟ್ಟು 60 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ.

ಇರಾ ಸೋಮನಾಥೇಶ್ವರ ಮೇಳದ ಮೂಲಕ ಯಕ್ಷಗಾನ ವೃತ್ತಿಜೀವನ ಆರಂಭಿಸಿದ್ದ ಶ್ರೀಧರ ರಾವ್‌ ಯಕ್ಷಗಾನ ಕ್ಷೇತ್ರದ ದಿಗ್ಗಜ ಕಲಾವಿದರಾದ ಶೇಣಿ ಗೋಪಾಲಕೃಷ್ಣ ಭಟ್ಟರ ರಾವಣ, ವಾಲಿ ಪಾತ್ರಗಳಿಗೆ ಮಂಡೋದರಿಯಾಗಿ, ತಾರೆಯಾಗಿ ಸಾಥ್ ನೀಡಿದ್ದರು. ವೃತ್ತಿಜೀವನದ ಆರಂಭದಲ್ಲಿ ಸ್ತ್ರೀ ವೇಷಗಳಿಂದಲೇ ಪ್ರಸಿದ್ಧರಾದರು. ಶ್ರೀಧರ ರಾವ್​ ಧರ್ಮಸ್ಥಳ ಕ್ಷೇತ್ರ ಮಹಾತ್ಮೆಯ ಅಮ್ಮುದೇವಿ, ನಳ ದಮಯಂತಿಯ ದಮಯಂತಿ, ಭೀಷ್ಮ ವಿಜಯದ ಅಂಬೆ ಇತ್ಯಾದಿ ಪಾತ್ರಗಳಲ್ಲಿ ಜನಮನ ಗೆದ್ದಿದ್ದರು.

ರಂಭಾ ರೂಪ ರೇಖಾ ಪ್ರಸಂಗದ ರಂಭೆಯಾಗಿ ಶ್ರೀಧರ ರಾವ್ ಅವರ ಅಭಿನಯವನ್ನು ಈಗಲೂ ಯಕ್ಷಗಾನ ಪ್ರೇಮಿಗಳು ಕೊಂಡಾಡುತ್ತಾರೆ. ಪುರುಷ ವೇಷಗಳಲ್ಲಿ ಈಶ್ವರ, ಲಕ್ಷ್ಮಣ, ಸುದರ್ಶನ ವಿಜಯದ ವಿಷ್ಣು ಇತ್ಯಾದಿ ಪಾತ್ರಗಳೂ ಅವರಿಗೆ ಖ್ಯಾತಿ ತಂದುಕೊಟ್ಟಿವೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಸಂದರ್ಭದಲ್ಲಿ ಸನ್ಮಾನ, ಬೆಂಗಳೂರಿನ ಆತ್ಮಾಲಯ ಅಕಾಡೆಮಿ ಆಫ್ ಆರ್ಟ್ ಅಂಡ್ ಕಲ್ಚರ್ ಟ್ರಸ್ಟ್ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದಾರೆ.

ಇದನ್ನೂ ಓದಿ: Lacchi Poojarthi: ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ನಿಧನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಶ್ರದ್ಧಾಂಜಲಿ

M R Mamata: ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಆರ್. ಮಮತಾ ನಿಧನ

M R Mamata: ತುಮಕೂರು ವಾರ್ತಾಧಿಕಾರಿಯಾಗಿದ್ದ ಎಂ.ಆರ್ ಮಮತಾ ಅವರು ಕಳೆದ ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಕೊನೆಯುಸಿರೆಳೆದಿದ್ದಾರೆ

VISTARANEWS.COM


on

M R Mamata
Koo

ತುಮಕೂರು: ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಎಂ.ಆರ್. ಮಮತಾ (47) (M R Mamata) ಅವರು ಅನಾರೋಗ್ಯದಿಂದ ನಿಧನರಾದರು. ತುಮಕೂರು ವಾರ್ತಾಧಿಕಾರಿಯಾಗಿದ್ದ ಎಂ.ಆರ್ ಮಮತಾ ಅವರು ಕಳೆದ ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಕೊನೆಯುಸಿರೆಳೆದಿದ್ದಾರೆ.

ಮೆದುಳು ರಕ್ತಸ್ರಾವದ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ಮಮತಾ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರು ಪತ್ರಕರ್ತ ಎಚ್‌.ಆರ್‌.ರವೀಶ್‌, ಪುತ್ರ ಪ್ರಜ್ವಲ್‌ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಇವರು ಕಳೆದ 19 ವರ್ಷಗಳಿಂದ ವಾರ್ತಾ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ತುಮಕೂರಿನಲ್ಲಿ ಹಿರಿಯ ಸಹಾಯಕ ನಿರ್ದೇಶಕಿಯಾಗಿ 2 ವರ್ಷದಿಂದ ಕೆಲಸ ಮಾಡುತ್ತಿದ್ದರು. ಅಧಿಕಾರಿಯಾಗಿದ್ದಾಗ ಹಲವಾರು ಜನಪರ ಕೆಲಸಗಳನ್ನು ಇವರು ಮಾಡಿದ್ದರು. ಬೆಂಗಳೂರು ಉತ್ತರ ತಾಲೂಕಿನ ಕುದುರೆಗೆರೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ತುಮಕೂರು ತಾಲೂಕಿನ ಹಾಲನೂರು ಗ್ರಾಮದ ಗಂಡನ ಮನೆಯ ತೋಟದಲ್ಲಿ ಶನಿವಾರ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಿದೆ.

ಇದನ್ನೂ ಓದಿ | PSI Death: ನಿನ್ನೆ ಬೀಳ್ಕೊಡುಗೆ ಪಡೆದ ಪಿಎಸ್‌ಐ ಇಂದು ಹೃದಯಾಘಾತದಿಂದ ಸಾವು; 30 ಲಕ್ಷ ರೂ. ಲಂಚಕ್ಕೆ ಶಾಸಕ ಒತ್ತಡ ಹಾಕಿದ್ದರಿಂದ ಖಿನ್ನತೆ?

Continue Reading

ಕರ್ನಾಟಕ

Puttamadegowda: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ತಂದೆ ಅನಾರೋಗ್ಯದಿಂದ ನಿಧನ

Puttamadegowda: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ತಂದೆ ಪುಟ್ಟಮಾದೇಗೌಡ (89) ಅವರು ವಯೋಸಹಜ ಕಾಯಿಲೆಯಿಂದ ಭಾನುವಾರ ನಿಧನರಾಗಿದ್ದಾರೆ. ಮೃತರ ಅಂತ್ಯಸಂಸ್ಕಾರವು ಸ್ವಗ್ರಾಮವಾದ ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ಸೋಮವಾರ ನಡೆಯಲಿದೆ.

VISTARANEWS.COM


on

Puttamadegowda
Koo

ರಾಮನಗರ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ತಂದೆ ಪುಟ್ಟಮಾದೇಗೌಡ (89) ಅವರು ವಯೋಸಹಜ ಕಾಯಿಲೆಯಿಂದ ಭಾನುವಾರ ನಿಧನರಾದರು. ನಿವೃತ್ತ ಶಿಕ್ಷಕ ಪುಟ್ಟಮಾದೇಗೌಡ ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆಮ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಮೃತ ಪುಟ್ಟಮಾದೇಗೌಡ ಅವರಿಗೆ ಸಿ.ಪಿ ಯೋಗೇಶ್ವರ್ ಸೇರಿ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಸಂಸ್ಕಾರವು ಸ್ವಗ್ರಾಮವಾದ ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ಸೋಮವಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇದನ್ನೂ ಓದಿ | Karnataka Rain : ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿ ಮನೆ ಯಜಮಾನ ಹೃದಯಾಘಾತದಿಂದ ಸಾವು

ಸುದ್ದಿಗೋಷ್ಠಿ ನಡೆಸುವಾಗಲೇ ಎಚ್‌.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ; ಆಸ್ಪತ್ರೆಗೆ ದಾಖಲು

ಬೆಂಗಳೂರು: ಸುದ್ದಿಗೋಷ್ಠಿ ನಡೆಸುವಾಗಲೇ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವ ಆಗಿರುವ ಘಟನೆ ಭಾನುವಾರ ನಡೆದಿದೆ. ಮುಡಾ ನಿವೇಶನ ಹಗರಣ ವಿರೋಧಿಸಿ ಆ.3ರಿಂದ ಪಾದಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ನಗರದ ಜೆಡಿಎಸ್‌ ಕಚೇರಿಯಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರ ಸಮನ್ವಯ ಸಭೆ ಏರ್ಪಡಿಸಲಾಗುತ್ತು. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ಅವರ ಮೂಗಿನಿಂದ ರಕ್ತಸ್ರಾವವಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಮೂಗಿನಿಂದ ರಕ್ತಸ್ರಾವವಾಗಿದೆ. ಈ ವೇಳೆ ಬಟ್ಟೆಯಿಂದ ಮೂಗನ್ನು ಎಚ್‌ಡಿಕೆ ಒರೆಸಿಕೊಂಡರು. ಅದರೂ ರಕ್ತಸ್ರಾವ ನಿಲ್ಲಲಿಲ್ಲ. ಮತ್ತೆ ಮೂಗಿನಿಂದ ರಕ್ತಸ್ರಾವ ಹೆಚ್ಚಾದ ಹಿನ್ನೆಲೆ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ತಂದೆಯನ್ನು ಜಯನಗರ ಅಪೋಲೋ ಆಸ್ಪತ್ರೆಗೆ ಕರೆದೊಯ್ದರು. ಮೂಗಿನಿಂದ ರಕ್ತಸ್ರಾವ ಹಿನ್ನೆಲೆಯಲ್ಲಿ ಬಿಳಿ ಶರ್ಟ್ ರಕ್ತಮಯವಾಗಿದೆ.

ಇದನ್ನೂ ಓದಿ | Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

ಈ ಬಗ್ಗೆ ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರಿಗೆ ಎರಡನೇ ಬಾರಿ ಈ ರೀತಿ ಆಗುತ್ತಿದೆ. ರಕ್ತ ಹೆಪ್ಪುಗಟ್ಟಬಾರದು ಎಂದು ಥಿನ್ನರ್‌ ತೆಗೆದುಕೊಳ್ಳುತ್ತಿದ್ದರು. ಅವರಿಗೆ ಬಿಪಿ ನಾರ್ಮಲ್‌ ಇದೆ, ನಿತ್ಯ ಶುಗರ್‌ ಲೆವೆಲ್‌ ಚೆಕ್‌ ಮಾಡಿಕೊಳ್ಳುತ್ತಿದ್ದರು. ಪ್ರವಾಸ ಹೆಚ್ಚಾಗಿ ಓವರ್‌ ಹೀಟ್‌ನಿಂದ ರಕ್ತಸ್ರಾವ ಆಗಿರಬಹುದು ಎಂದು ತಿಳಿಸಿದ್ದಾರೆ.

Continue Reading

ಶ್ರದ್ಧಾಂಜಲಿ

Veerabaswanthreddy Mudnal: ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ ಅನಾರೋಗ್ಯದಿಂದ ನಿಧನ

Veerabaswanthreddy Mudnal: ಕಳೆದ 6 ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಡಾ.ವೀರಬಸವಂತರೆಡ್ಡಿ ಮುದ್ನಾಳ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

VISTARANEWS.COM


on

Veerabaswanthreddy Mudnal
Koo

ಯಾದಗಿರಿ: ಮಾಜಿ ಶಾಸಕ ಹಾಗೂ ಹಿರಿಯ ವೈದ್ಯ ಡಾ.ವೀರಬಸವಂತರೆಡ್ಡಿ ಮುದ್ನಾಳ (76) (Veerabaswanthreddy Mudnal) ಅವರು ಅನಾರೋಗ್ಯರಿಂದ ಸೋಮವಾರ ನಿಧನರಾದರು. ಕಳೆದ 6 ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ನಗರದ ವಿಬಿಆರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಡಾ.ವೀರಬಸವಂತರೆಡ್ಡಿ ಮುದ್ನಾಳ ಅವರು 2004ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಶಾಸಕರಾಗಿದ್ದರು. 2010ರಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಬಿಜೆಪಿ ಪಕ್ಷದ ಹಿರಿಯ ಮುಖಂಡರಾಗಿದ್ದ ಇವರು ಯಾದಗಿರಿ ಜಿಲ್ಲೆ ರಚನೆಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಬಿ.ವೈ.ವಿಜಯೇಂದ್ರ ಸಂತಾಪ

ಡಾ.ವೀರಬಸವಂತರೆಡ್ಡಿ ಮುದ್ನಾಳ ಅವರ ನಿಧನಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ. ಪಕ್ಷದ ಮುಖಂಡರು ಹಾಗೂ ಯಾದಗಿರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಡಾ. ವೀರಬಸವಂತರೆಡ್ಡಿ ಮುದ್ನಾಳ ಅವರ ನಿಧನಕ್ಕೆ ಸಂತಾಪ ಕೋರುವೆ. ವೈದ್ಯಕೀಯ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸುತ್ತಾ, ಜನರ ಕಷ್ಟಗಳಿಗೆ ಸದಾ ಸ್ಪಂದಿಸುತ್ತಿದ್ದ ಸರಳ ವ್ಯಕ್ತಿತ್ವದ ಶ್ರೀ ವೀರಬಸವಂತರೆಡ್ಡಿ ಅವರ ಅಗಲಿಕೆಯಿಂದ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ.

ಮೃತರ ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ಆಘಾತದ ನೆರಳಿನಿಂದ ಹೊರಬರುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲೆಂದು ಪ್ರಾರ್ಥಿಸುತ್ತೇನೆ.
ಓಂಶಾಂತಿ ಎಂದು ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

Accident News : ಭಾರಿ ಮಳೆಗೆ ಉರುಳಿ ಬಿದ್ದ ಮರ; ಬೈಕ್‌ನಲ್ಲಿ ತೆರಳುತ್ತಿದ್ದ ಹೆಸ್ಕಾಂ ನೌಕರರ ದುರ್ಮರಣ

Continue Reading

ಕರ್ನಾಟಕ

Anchor Aparna: ಪಂಚಭೂತಗಳಲ್ಲಿ ಅಪರ್ಣಾ ಲೀನ; ಸ್ಮಾರ್ತ ಸಂಪ್ರದಾಯದಂತೆ ನೆರವೇರಿದ ಅಂತ್ಯಸಂಸ್ಕಾರ

Anchor Aparna: ಬೆಂಗಳೂರಿನ ಬನಶಂಕರಿಯ ಅಪರ್ಣಾ ಅವರ ಸ್ವಗೃಹದಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಶುಕ್ರವಾರ ಮಧ್ಯಾಹ್ನ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಿತು.

VISTARANEWS.COM


on

Koo

ಬೆಂಗಳೂರು: ಶ್ವಾಸಕೋಶ ಕ್ಯಾನ್ಸರ್‌ನಿಂದ ನಿಧನರಾದ ಖ್ಯಾತ ನಿರೂಪಕಿ, ನಟಿ ಅಪರ್ಣಾ (Anchor Aparna) ಅವರ ಅಂತ್ಯಸಂಸ್ಕಾರ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ನೆರವೇರಿತು. ಕುಟುಂಬಸ್ಥರು, ಆಪ್ತರು, ಚಿತ್ರರಂಗದ ಗಣ್ಯರು ಸೇರಿ ನೂರಾರು ಜನರ ಸಮ್ಮುಖದಲ್ಲಿ ಪೊಲೀಸ್‌ ಗೌರದೊಂದಿಗೆ, ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದ ಪ್ರಕಾರ ಅಂತ್ಯಕ್ರಿಯೆ ನಡೆಯಿತು.

ಇದಕ್ಕೂ ಮುನ್ನ ಬನಶಂಕರಿಯ ಅಪರ್ಣಾ (actress aparna) ಅವರ ಸ್ವಗೃಹದಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಸಪ್ತ ಸಾಗರದಾಚೆ ಎಲ್ಲೋ ಹಾಡಿನ ಮೂಲಕ ಚಿತ್ರರಂಗದ ಆಪ್ತರು ಕಣ್ಣೀರ ವಿದಾಯ ಹೇಳಿದರು. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಮುನಿರತ್ನ, ನಟ ಶ್ರೀನಾಥ್, ರಾಘವೇಂದ್ರ ರಾಜಕುಮಾರ್‌, ತೇಜಸ್ವಿನಿ ಅನಂತಕುಮಾರ್, ರಮೇಶ್‌ ಅರವಿಂದ್‌, ವಿನಯ್‌ ರಾಜಕುಮಾರ್‌, ನಿರೂಪಕಿ ಶ್ವೇತಾ ಚೆಂಗಪ್ಪ, ಬ್ರಹ್ಮಾಂಡ ಗೂರೂಜಿ ನರೇಂದ್ರ ಬಾಬು ಶರ್ಮಾ, ಇಂದ್ರಜಿತ್‌ ಲಂಕೇಶ್‌, ಮಂಡ್ಯ ರಮೇಶ್‌, ತಾರಾ ಸೇರಿ ಚಿತ್ರರಂಗ, ರಾಜಕೀಯ ನಾಯಕರು ಸೇರಿ ವಿವಿಧ ಗಣ್ಯರು ಅಂತಿಮ ದರ್ಶನ ಪಡೆದರು.

ಸೃಜನ್ ಲೋಕೇಶ್ ಹಾಗೂ ಕುಟುಂಬಸ್ಥರು ಅಂತ್ಯಸಂಸ್ಕಾರದ ವೇಳೆ ಭಾಗಿಯಾಗಿದ್ದರು. ಈ ವೇಳೆ ಅಪರ್ಣ ಪತಿ ನಾಗರಾಜ್‌ಗೆ ಸೃಜನ್ ಲೋಕೇಶ್ ಸಾಂತ್ವನ ಹೇಳಿದರು. ಬಳಿಕ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಬನಶಂಕರಿಯ ವಿದ್ಯುತ್ ಚಿತಾಗಾರಕ್ಕೆ ತೆಗೆದುಕೊಂಡು ಹೋಗಲಾಯಿತು. ನಂತರ ಮೂರು ಸುತ್ತು ಕುಶಾಲತೋಪು ಸಿಡಿಸಿ ಪೊಲೀಸರು ಗೌರವ ಸಲ್ಲಿಸಿದರು. ಹೊಯ್ಸಳ ಕರ್ನಾಟಕ ಭಾಗದ ಸ್ಮಾರ್ತ ಸಂಪ್ರದಾಯದ ಪ್ರಕಾರ ಅಪರ್ಣಾ ಅಂತ್ಯಕ್ರಿಯೆ ನೆರವೇರಿತು.

ಇದನ್ನೂ ಓದಿ | Anchor Aparna:  ಹೂವು-ಹಾರ ತರದಂತೆ ಮನವಿ ಮಾಡಿ, ಕವನದ ಮೂಲಕ ಅಪರ್ಣಾಗೆ ಭಾವುಕ ವಿದಾಯ ಹೇಳಿದ ಪತಿ!

ಕನ್ನಡಿಗರಲ್ಲದವರೂ ತಲೆದೂಗುವಂತೆ ಕನ್ನಡ (Kannada) ಮಾತನಾಡುತ್ತಿದ್ದ, ಸ್ಪಷ್ಟ ಉಚ್ಚಾರ, ಅದಕ್ಕೆ ತಕ್ಕ ಹಾವ-ಭಾವ, ನಿರೂಪಣೆ ವೇಳೆ ಕನ್ನಡದ ಪದಗಳನ್ನು ಪೋಣಿಸುತ್ತಿದ್ದ ಕರ್ನಾಟಕದ ಖ್ಯಾತ ನಿರೂಪಕಿ ಅಪರ್ಣಾ (57) (Anchor Aparna) ಅವರು ಗುರುವಾರ ರಾತ್ರಿ ನಿಧನರಾಗಿದ್ದರು.

ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಕಳೆದ ಮಂಗಳವಾರ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಬನಶಂಕರಿ ನಿವಾಸದಲ್ಲಿ ಪತಿ ಹಾಗೂ ಕೇರ್ ಟೇಕರ್ಸ್ ಜತೆ ಅಪರ್ಣಾ ವಾಸಿಸುತ್ತಿದ್ದರು. ಇವರ ಅಗಲಿಕೆಗೆ ಕನ್ನಡ ಸಿನಿಮಾ ರಂಗದ ನಟರು ಸೇರಿ ಹಲವರು ಕಂಬನಿ ಮಿಡಿದಿದ್ದಾರೆ.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ ಅವರು ಬೆಂಗಳೂರಿನ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿ. ಪುಟ್ಟಣ್ಣ ಕಣಗಾಲ್ ಅವರ ಮಸಣದ ಹೂವು ಚಿತ್ರದ ಮೂಲಕ ಸಿನಿರಂಗಕ್ಕೆ ಕಾಲಿಟ್ಟಿದ್ದ ಅಪರ್ಣಾ ಅವರು ಹಿಂದಿರುಗಿ ನೋಡಲಿಲ್ಲ. ಸಾಲು ಸಾಲು ಸಿನಿಮಾಗಳು, ಕಿರುತೆರೆ, ವೇದಿಕೆಗಳಲ್ಲಿ ಮನೋಜ್ಞ ನಿರೂಪಣೆ ಮೂಲಕವೇ ಅವರು ಮನೆಮಾತಾಗಿದ್ದರು. ಅದರಲ್ಲೂ, 80 ಮತ್ತು 90ರ ದಶಕದಲ್ಲಿ ಕನ್ನಡ ಕಿರುತೆರೆ ನಿರೂಪಕಿಯಾಗಿ ಜನಪ್ರಿಯತೆ ಗಳಿಸಿದ್ದರು.

1984ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ಅವರು ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದರು. ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಸೇರಿ ಹಲವು ಚಿತ್ರಗಳಲ್ಲಿ ನಟನೆ ಮಾಡಿದರು. 90ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳ ನಿರೂಪಣೆ ಮಾಡಿದ ನಂತರ ಭಾರತ ಸರ್ಕಾರದ ವಿವಿಧ ಭಾರತಿಯಲ್ಲಿ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು.

ಇದನ್ನೂ ಓದಿ | Anchor Aparna: ಅಪರ್ಣಾ ಕೊನೆ ಆಸೆ ಏನಾಗಿತ್ತು? ಕನಸು ಈಡೇರುವ ಮುನ್ನವೇ ಕಣ್ಮುಚ್ಚಿದ ನಟಿ!

1998ರಲ್ಲಿ ನಡೆದ ದೀಪಾವಳಿ ಕಾರ್ಯಕ್ರವೊಂದನ್ನು ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು. ಕಿರುತೆರೆಯಲ್ಲಿ ಮೂಡಲಮನೆ, ಮುಕ್ತ ಮುಂತಾದ ಧಾರಾವಾಹಿಗಳಲ್ಲಿ ನಟನೆ ಮಾಡಿದ್ದರು. 2013ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ ನ ಸ್ಪರ್ಧೆಯಾಗಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿದ್ದರು. 2014ರಲ್ಲಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಘೋಷಣೆಯಾಗುವ ‘ಪ್ರಯಾಣಿಕರು ಹತ್ತುವ ಮತ್ತು ಇಳಿಯುವ ಸೂಚನೆ’ಗೆ ಧ್ವನಿ ನೀಡಿದ್ದು ಕೂಡ ಇವರೇ.

Continue Reading
Advertisement
Action Prince Dhruva Sarja much awaited film Martin to hit the screens on October 11
ಸಿನಿಮಾ4 ಗಂಟೆಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Actor Darshan
ಬೆಂಗಳೂರು5 ಗಂಟೆಗಳು ago

Parappana Agrahara : ಜೈಲಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಕೇಸ್; ಕ್ಲೈ ಮ್ಯಾಕ್ಸ್ ಹಂತದಲ್ಲಿ ರಿವೈಲ್ ಆಯ್ತು ಜೈಲಿನೊಳಗಿನ ಅಂದರ್ ಕಿ ದರ್ಬಾರ್!

Bengaluru News
ಬೆಂಗಳೂರು8 ಗಂಟೆಗಳು ago

Bengaluru News : ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನ; ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಕುಟುಂಬ

HD kumaraswamy And Vijayetata
ಬೆಂಗಳೂರು8 ಗಂಟೆಗಳು ago

HD Kumaraswamy : ಎಲೆಕ್ಷನ್‌ಗೆ 50 ಕೋಟಿ ರೂ.ಗೆ ಡಿಮ್ಯಾಂಡ್‌ ಮಾಡಿ ಉದ್ಯಮಿಗೆ ಬೆದರಿಕೆ; ಎಚ್‌ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

Karnataka weather Forecast
ಪ್ರಮುಖ ಸುದ್ದಿ9 ಗಂಟೆಗಳು ago

Karnataka Rain : ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ; ಹೈರಾಣಾದ ವಾಹನ ಸವಾರರು

MLA Muniratna
ಬೆಂಗಳೂರು9 ಗಂಟೆಗಳು ago

MLA Muniratna: ಶಾಸಕ ಮುನಿರತ್ನ ಕೇಸ್‌; ರಾಜಕಾರಣಿಗಳ ಹನಿಟ್ರ್ಯಾಪ್‌ ಮಾಡುತ್ತಿದ್ದ ರೂಮಿನ ಸ್ಥಳ ಮಹಜರು ಮಾಡಿದ ಎಸ್‌ಐಟಿ ಅಧಿಕಾರಿಗಳು

Power cut off due to a technical problem in the transformer Bengaluru faces water crisis today
ಬೆಂಗಳೂರು11 ಗಂಟೆಗಳು ago

Water supply: ಟ್ರಾನ್ಸಫಾರ್ಮರ್‌ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ವಿದ್ಯುತ್‌ ಸಂಪರ್ಕ ಕಡಿತ; ಬೆಂಗಳೂರಿಗೆ ಇಂದು ನೀರಿನ ಸಮಸ್ಯೆ

Gandhi Jayanti 2024
ಬೆಂಗಳೂರು12 ಗಂಟೆಗಳು ago

Gandhi Jayanti 2024: ಗಾಂಧಿ ಜಯಂತಿ ಹಿನ್ನೆಲೆ ಸರ್ಕಾರಿ ಯೋಜನೆಗಳ ಅರಿವು ಮೂಡಿಸಿದ ಎನ್‌ಸಿಸಿ ಕೆಡೆಟ್‌ಗಳು

Drugs Mafia
ಕೊಡಗು13 ಗಂಟೆಗಳು ago

Drugs Mafia: ಥೈಲ್ಯಾಂಡ್ ಟು ದುಬೈ ಡ್ರಗ್‌ ಮಾಫಿಯಾಗೆ ಇಂಡಿಯಾನೆ ಮೈನ್ ಲಿಂಕ್; 3 ಕೋಟಿ ಮೌಲ್ಯದ ಗಾಂಜಾ ವಶ

Mysuru Dasara 2024
ಮೈಸೂರು13 ಗಂಟೆಗಳು ago

Mysuru Dasara 2024: ವೈಭವದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಿಸಿದ ಹಿರಿಯ ಸಾಹಿತಿ ಡಾ. ಹಂಪ ನಾಗರಾಜಯ್ಯ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ4 ಗಂಟೆಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌