Job Alert: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 6128 ಹುದ್ದೆ; ಪರೀಕ್ಷೆ ಸ್ವರೂಪ ಹೇಗಿರುತ್ತದೆ? ಅರ್ಜಿ ಸಲ್ಲಿಸುವುದು ಹೇಗೆ? - Vistara News

Latest

Job Alert: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 6128 ಹುದ್ದೆ; ಪರೀಕ್ಷೆ ಸ್ವರೂಪ ಹೇಗಿರುತ್ತದೆ? ಅರ್ಜಿ ಸಲ್ಲಿಸುವುದು ಹೇಗೆ?

ಈ ಬಾರಿ 11 ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿಯಿರುವ 6128 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ನಮ್ಮ ರಾಜ್ಯದಲ್ಲಿ 457 ಹುದ್ದೆಗಳು ಖಾಲಿ ಇವೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 21 ಕೊನೆಯ ದಿನವಾಗಿರುತ್ತದೆ. ಎರಡು ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಯಿದ್ದು, ಪೂರ್ವಭಾವಿ ಪರೀಕ್ಷೆ, ಹಾಗೂ ಮುಖ್ಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ವರ್ಷದ ಸೆಪ್ಟೆಂಬರ್‌ನಲ್ಲಿ ಪೂರ್ವಭಾವಿ ಪರೀಕ್ಷೆ ಮತ್ತು ಅಕ್ಟೋಬರ್‌ನಲ್ಲಿ ಮುಖ್ಯ ಪರೀಕ್ಷೆ ನಡೆಯಲಿದೆ. ನಮ್ಮ ರಾಜ್ಯದವರಿಗೆ ಕನ್ನಡ ಮತ್ತು ಕೊಂಕಣಿ ಭಾಷೆಗಳಲ್ಲೂ ಪರೀಕ್ಷೆ ಬರೆಯುವ ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ, ಅಭ್ಯರ್ಥಿಗಳ ಆಯ್ಕೆ ಹಾಗೂ ನೇಮಕಾತಿ ಸ್ವರೂಪ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Job Alert
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
  • – ಆರ್‌ ಕೆ ಬಾಲಚಂದ್ರ
  • ಲೇಖಕರು, ಬ್ಯಾಂಕಿಂಗ್‌ ಮತ್ತು ವ್ಯಕ್ತಿತ್ವ ವಿಕಸನ , ಸಾಫ್ಟ್‌ ಸ್ಕಿಲ್‌ ತರಬೇತುದಾರರು, ವೃತ್ತಿ ಮಾರ್ಗದರ್ಶಕರು
    ಬ್ಯಾಂಕ್‌ಗಳಲ್ಲಿ ಗುಮಾಸ್ತ (ಕ್ಲರ್ಕ್‌) ಹುದ್ದೆಗೆ ಸೇರಬೇಕು ಎಂಬ ಕನಸು ಹೊತ್ತವರಿಗೆ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್ ) ಸಿಹಿ ಸುದ್ದಿಯೊಂದನ್ನು ನೀಡಿದೆ. ದೇಶದ ಹನ್ನೊಂದು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿಯಿರುವ ಕ್ಲರಿಕಲ್ ಕೇಡರ್ ಹುದ್ದೆಗಳ ನೇಮಕಕ್ಕಾಗಿ ‘ಸಾಮಾನ್ಯ ಪ್ರವೇಶ ಪರೀಕ್ಷೆ’(CRP ಗುಮಾಸ್ತರು–XIV)ನಡೆಸುತ್ತಿದ್ದು, ಸೋಮವಾರ ಅಧಿಸೂಚನೆ ಹೊರಡಿಸಿದೆ. ಈ ಬಾರಿ 11 ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿಯಿರುವ 6128 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ನಮ್ಮ ರಾಜ್ಯದಲ್ಲಿ 457 ಹುದ್ದೆಗಳು ಖಾಲಿ ಇವೆ. ಎಂದಿನಂತೆ, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 21 ಕೊನೆಯ ದಿನವಾಗಿರುತ್ತದೆ. ಎರಡು ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಯಿದ್ದು ಪೂರ್ವಭಾವಿ ಪರೀಕ್ಷೆ, ಹಾಗೂ ಮುಖ್ಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ. ಈ ವರ್ಷದ ಸೆಪ್ಟೆಂಬರ್‌ನಲ್ಲಿ ಪೂರ್ವಭಾವಿ ಪರೀಕ್ಷೆ ಮತ್ತು ಅಕ್ಟೋಬರ್‌ನಲ್ಲಿ ಮುಖ್ಯ ಪರೀಕ್ಷೆ ನಡೆಯಲಿದೆ. ನಮ್ಮ ರಾಜ್ಯದವರಿಗೆ ಕನ್ನಡ ಮತ್ತು ಕೊಂಕಣಿ ಭಾಷೆಗಳಲ್ಲೂ ಪರೀಕ್ಷೆ ಬರೆಯುವ ಅವಕಾಶ ನೀಡಲಾಗಿದೆ.  ರಾಜ್ಯದ 457 ಹುದ್ದೆಗಳಲ್ಲಿ ಪರಿಶಿಷ್ಟ ಜಾತಿಗೆ 75, ಪರಿಶಿಷ್ಟ ಪಂಗಡಕ್ಕೆ 39, ಹಿಂದುಳಿದ ವರ್ಗದವರಿಗೆ 108, ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ 44 ಹಾಗೂ ಸಾಮಾನ್ಯ ವರ್ಗದವರಿಗೆ 191 ಹುದ್ದೆಗಳನ್ನು ಮೀಸಲಿಡಲಾಗಿದೆ.

ರಾಜ್ಯದ ಯಾವ ಬ್ಯಾಂಕ್, ಎಷ್ಟು ಹುದ್ದೆ?

ರಾಜ್ಯದ ಯಾವ ಬ್ಯಾಂಕಿನಲ್ಲಿ ಎಷ್ಟು ಹುದ್ದೆಗಳು?
ಕ್ರಮ ಸಂಖ್ಯೆಬ್ಯಾಂಕ್‌ನ ಹೆಸರುಹುದ್ದೆಗಳು
1ಬ್ಯಾಂಕ್ ಆಫ್ ಇಂಡಿಯಾ    5
2ಕೆನರಾ ಬ್ಯಾಂಕ್364
3ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ  49
4ಇಂಡಿಯನ್ ಓವರ್ಸೀಸ್ ಬ್ಯಾಂಕ್  14
5ಪಂಜಾಬ್ ನ್ಯಾಷನಲ್ ಬ್ಯಾಂಕ್  15
6ಪಂಜಾಬ್ ಆ್ಯಂಡ್ ಸಿಂಥ್ ಬ್ಯಾಂಕ್  10
 ಒಟ್ಟು457

ಜುಲೈ 1 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಜುಲೈ 21, 2024 ಕೊನೆ ದಿನ.

ಅರ್ಜಿ ಸಲ್ಲಿಸಲು ಹಾಗೂ ನೋಂದಣಿಗೆ ಬಳಸಬೇಕಾದ ಲಿಂಕ್: www.ibps.in ಅಥವಾ https://ibpsonline.ibps.in/crpcl14jun24/

ಶೈಕ್ಷಣಿಕ ಅರ್ಹತೆ: (21.07.2024 ಕ್ಕೆ ಅನ್ವಯಿಸುವಂತೆ)

ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯ. ಹೀಗಾಗಿ ಕಂಪ್ಯೂಟರ್ ಕಲಿಕೆಯ ಬಗ್ಗೆ ದೃಢೀಕರಣ ಪತ್ರವನ್ನೂ ಹೊಂದಿರಬೇಕು (ಕಂಪ್ಯೂಟರ್ ಗೆ ಸಂಬಂಧಿಸಿದ ವಿಷಯದಲ್ಲಿ ಸರ್ಟಿಫಿಕೇಟ್/ ಡಿಪ್ಲೊಮಾ ಅಥವಾ ಡಿಗ್ರಿ ಪಡೆದಿರುವುದು ಅಥವಾ ಶಾಲೆ ಅಥವಾ ಕಾಲೇಜಿನಲ್ಲಿ ಕಂಪ್ಯೂಟರ್ ಅಥವಾ ಐಟಿ (InformationTechnology) ಯನ್ನು ಒಂದು ವಿಷಯವಾಗಿ ಓದಿರಬೇಕು. ಅಲ್ಲದೆ, ರಾಜ್ಯದ ಅಧಿಕೃತ ಭಾಷೆಯಲ್ಲಿ ಮಾತನಾಡುವ, ಬರೆಯುವ ಸಾಮರ್ಥ್ಯ ಹೊಂದಿರಬೇಕು. ಪದವಿ ಪೂರ್ಣ ಗೊಳಿಸಿದವರು ಮಾತ್ರ ಅರ್ಜಿ ಸಲ್ಲಿಸಬಹುದು. ಪದವಿಯಲ್ಲಿ ಪಡೆದ ಶೇಕಡಾವಾರು ಅಂಕಗಳನ್ನು ಅರ್ಜಿಯಲ್ಲಿ ಭರ್ತಿ ಮಾಡಬೇಕಾಗಿರುತ್ತದೆ.

ಇದನ್ನೂ ಓದಿ: Job Alert: ಬೆಂಗಳೂರಿನಲ್ಲಿದೆ ಉದ್ಯೋಗಾವಕಾಶ; 10, 12ನೇ ತರಗತಿ ಪಾಸಾದವರೂ ಅಪ್ಲೈ ಮಾಡಿ

ವಯೋಮಿತಿ: ಕನಿಷ್ಠ 20 ವರ್ಷಗಳು ಗರಿಷ್ಠ 28 ವರ್ಷಗಳು. (01.07.2024 ಕ್ಕೆ ಅನ್ವಯಿಸುವಂತೆ). ಅಂದರೆ ಅಭ್ಯರ್ಥಿಗಳು 1996 ರ ಜುಲೈ 2 ಮತ್ತು 2004 ರ ಜುಲೈ 1 ರ ನಡುವೆ ಜನಿಸಿರಬೇಕು.ಸರ್ಕಾರದ ನಿಯಮದಂತೆ ಎಸ್ ಸಿ/ ಎಸ್ ಟಿ ಅಭ್ಯ ರ್ಥಿಗಳಿಗೆ 5 ವರ್ಷ, ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲರಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ: GST ಒಳಗೊಂಡಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹850. ಎಸ್ ಸಿ/ಎಸ್ ಟಿ/ಅಂಗವಿಕಲ ಅಭ್ಯರ್ಥಿಗಳು/ಮಾಜಿ ಯೋಧರಿಗೆ ₹175.ಬ್ಯಾಂಕ್ ಸೇವಾ ಶುಲ್ಕ ಮತ್ತು ಇಂಟಿಮೇಷನ್ ಫೀ ಪ್ರತ್ಯೇಕವಾಗಿ ಪಾವತಿಸಬೇಕಾಗುತ್ತದೆ.

ಶುಲ್ಕಪಾವತಿ: ನೋಂದಣಿ ನಂತರ ಅಭ್ಯ ರ್ಥಿಗಳು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್  ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಆನ್ ಲೈನ್ ಮೂಲಕ ಮಾತ್ರ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.

ನೆನಪಿಡಿ: ಒಬಿಸಿ ವರ್ಗಕ್ಕೆ ಸೇರಿದ ಆದರೆ ಕೆನೆ ಪದರದ ಅಡಿಯಲ್ಲಿ ಬರುವ ಅಭ್ಯ ರ್ಥಿಗಳು ಒಬಿಸಿ ಮೀಸಲಾತಿಗೆ ಅರ್ಹರಾಗಿರುವುದಿಲ್ಲ. ಅವರು ಆನ್ ಲೈನ್ ಅರ್ಜಿ ನಮೂನೆಯಲ್ಲಿ ತಮ್ಮ ವರ್ಗ ವನ್ನು ಸಾಮಾನ್ಯ ಎಂದು ಸೂಚಿಸಬೇಕು. ಅಭ್ಯರ್ಥಿಯು ಕಾಲಕಾಲಕ್ಕೆ ಭಾರತ ಸರ್ಕಾರದ ಮಾರ್ಗ ಸೂಚಿಗಳ ಪ್ರಕಾರ ಕೆನೆರಹಿತ ಲೇಯರ್ (Non cremy layer) ಷರತ್ತಿನೊಂದಿಗೆ ಒಬಿಸಿ ಪ್ರಮಾಣಪತ್ರ ವನ್ನು ಹೊಂದಿರಬೇಕು.

ಪರೀಕ್ಷಾ ಪ್ರಕ್ರಿಯೆ: ಇದೇ ಆಗಸ್ಟ್ ನಲ್ಲಿ ಪೂರ್ವ ಭಾವಿ ಪರೀಕ್ಷೆ, ಅಕ್ಟೋಬರ್ ನಲ್ಲಿ ಮುಖ್ಯ ಪರೀಕ್ಷೆಗಳು ನಡೆಯಲಿದ್ದು ಎರಡೂ ಪರೀಕ್ಷೆಗಳು ಆನ್ ಲೈನ್ ನಲ್ಲಿ ನಡೆಯಲಿದೆ.

ರಾಜ್ಯದಲ್ಲಿ ಪರೀಕ್ಷಾ ಕೇಂದ್ರಗಳು ಎಲ್ಲೆಲ್ಲಿ?: ರಾಜ್ಯದ 10 ಜಿಲ್ಲಾ ಕೇಂದ್ರಗಳಲ್ಲಿ ಪೂರ್ವಭಾವಿ ಪರೀಕ್ಷೆ ಮತ್ತು 5 ಜಿಲ್ಲಾ ಕೇಂದ್ರಗಳಲ್ಲಿ ಮುಖ್ಯ ಪರೀಕ್ಷೆಗಳು ಆನ್ ಲೈನ್ ನಲ್ಲಿ ನಡೆಯಲಿದೆ.

ಪೂರ್ವಭಾವಿ ಪರೀಕ್ಷೆ: ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ,ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ,ಉಡುಪಿ.

ಮುಖ್ಯ ಪರೀಕ್ಷೆ: ಬೆಂಗಳೂರು,ಧಾರವಾಡ, ಹುಬ್ಬಳ್ಳಿ, ಕಲಬುರಗಿ, ಮಂಗಳೂರು

ಪೂರ್ವಭಾವಿ ಪರೀಕ್ಷೆಗೆ ತರಬೇತಿ

ಐಬಿಪಿಎಸ್‌ನ ಎಲ್ಲ ನೇಮಕಾತಿ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದೆ.ಕ್ಲರ್ಕ್‌ ಹುದ್ದೆಗಳ ನೇಮಕಾತಿಗೆ 2024 ರ ಅಗಸ್ಟ್ 12 ರಿಂದ  17 ರವರೆಗೆ ತರಬೇತಿಗೆಂದು ದಿನಾಂಕ ನಿಗದಿ ಮಾಡಲಾಗಿದೆ. ಪರಿಶಿಷ್ಟರು, ಅಂಗವಿಕಲರು, ಹಿಂದುಳಿದವರರು ಹಾಗೂ ಅಲ್ಪಸಂಖ್ಯಾತ, ಮಾಜಿ ಸೈನಿಕರಿಗೆ ಈ ಸೌಲಭ್ಯ ಒದಗಿಸಲಾಗುತ್ತದೆ. ಒಂದು ವೇಳೆ ಅಭ್ಯರ್ಥಿಗಳು ಪರೀಕ್ಷಾ ಪೂರ್ವ ತರಬೇತಿ ಬಯಸಿದಲ್ಲಿ ಅಂಥವರು ಆನ್‌ಲೈನ್ ಅರ್ಜಿ ಸಲ್ಲಿಸುವಾಗಲೇ ತರಬೇತಿ ಪಡೆಯುವ ಬಗ್ಗೆ ಅರ್ಜಿಯಲ್ಲಿ ನಮೂದಿಸಬೇಕು.

ರಾಜ್ಯದಲ್ಲಿ 4 ಪೂರ್ವಭಾವಿ ಪರೀಕ್ಷಾ ತರಬೇತಿ ಕೇಂದ್ರಗಳು:

ರಾಜ್ಯದ ಬೆಂಗಳೂರು, ಮೈಸೂರು ಹುಬ್ಬಳ್ಳಿ ಹಾಗೂ ಮಂಗಳೂರಿನಲ್ಲಿ ಈ ತರಬೇತಿಯನ್ನು ನೀಡಲಾಗುತ್ತದೆ. ತರಬೇತಿ ಸ್ಥಳದ ಖರ್ಚು ವೆಚ್ಚ ಹಾಗೂ ಪ್ರಯಾಣದ ಖರ್ಚು ವೆಚ್ಚವನ್ನು ಅಭ್ಯರ್ಥಿಗಳ ಭರಿಸಬೇಕಾಗುತ್ತದೆ.

ಕ್ರೆಡಿಟ್ ಇತಿಹಾಸ

(i) ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅವರು ಆರೋಗ್ಯಕರ ಕ್ರೆಡಿಟ್ ಇತಿಹಾಸ (Credit History) ಹೊಂದಿರಬೇಕು. ಬ್ಯಾಂಕ್‌ಗೆ ಸೇರುವ ಸಮಯದಲ್ಲಿ ಕನಿಷ್ಠ ಸಿಬಿಲ್ (CIBIL)ಸ್ಕೋರ್ ಅಥವಾ ಅದಕ್ಕಿಂತ ಹೆಚ್ಚಿರುವುದನ್ನು ಖಚಿತ ಪಡಿಸಿಕೊಳ್ಳಬೇಕು. ಕನಿಷ್ಠ ಕ್ರೆಡಿಟ್ ಸ್ಕೋರ್ ಭಾಗವಹಿಸುವ ಬ್ಯಾಂಕ್ ಗಳ ನೀತಿಯ ಪ್ರಕಾರ ಇರುತ್ತದೆ. ಕಾಲಕಾಲಕ್ಕೆ ಅವುಗಳನ್ನ ತಿದ್ದುಪಡಿ ಮಾಡಲಾಗುತ್ತದೆ.

(ii) ಹುದ್ದೆಗೆ ಸೇರ್ಪಡೆಗೊಳ್ಳುವ ದಿನಾಂಕದ ಮೊದಲು CIBIL ಸ್ಥಿತಿ ನವೀಕರಿಸಬೇಕು ಅಥವಾ CIBIL ನಲ್ಲಿ ಪ್ರತಿಕೂಲವಾಗಿ ಪ್ರತಿಬಿಂಬಿತವಾಗಿರುವ ಖಾತೆಗಳಿಗೆ ಸಂಬಂಧಿಸಿದಂತೆ ಯಾವುದೇ ಬಾಕಿ ಉಳಿದಿಲ್ಲ ಎಂದು ಸಾಲದಾತರಿಂದ ನಿರಾಪೇಕ್ಷಣಾ ಪತ್ರ (NOC)ಗಳನ್ನು ಪಡೆಯಬೇಕು. ವಿಫಲವಾದರೆ ಆಫರ್ ಪತ್ರವನ್ನು ಹಿಂಪಡೆಯಲಾಗುತ್ತದೆ /ರದ್ದುಗೊಳಿಸಲಾಗುತ್ತದೆ.

ಗಮನಿಸಿ: ಯಾವುದೇ ಬ್ಯಾಂಕ್ ಖಾತೆಯನ್ನು ಹೊಂದಿರದ ಅಭ್ಯರ್ಥಿಗಳು CIBIL ಸ್ಥಿತಿಯನ್ನು ಒದಗಿಸುವ ಅಗತ್ಯ ವಿಲ್ಲ.

ಈ ದಿನಗಳು ನೆನಪಿರಲಿ

  • ಪೂರ್ವಭಾವಿ ಪರೀಕ್ಷೆಯ ಪ್ರವೇಶಪತ್ರ ಬಿಡುಗಡೆ : ಆಗಸ್ಟ್ 2024
  • ಪೂರ್ವಭಾವಿ ಆನ್‌ಲೈನ್ ಪರೀಕ್ಷೆ :ಆಗಸ್ಟ್ 2024
  • ಪೂರ್ವಭಾವಿ ಪರೀಕ್ಷೆಯ ಫಲಿತಾಂಶ :ಸೆಪ್ಟೆಂಬರ್, 2024
  • ಮುಖ್ಯ ಪರೀಕ್ಷೆಯ ಪ್ರವೇಶಪತ್ರ ಬಿಡುಗಡೆ: ಸೆಪ್ಟೆಂಬರ್/ಅಕ್ಟೋಬರ್, 2024
  • ಮುಖ್ಯ ಪರೀಕ್ಷೆಯ ಆಯೋಜನೆ: ಅಕ್ಟೋಬರ್, 2024
  • ಪ್ರಾತಿನಿಧಿಕ ಹುದ್ದೆ ಹಂಚಿಕೆ : ಎಪ್ರಿಲ್ 2025
  • ಅರ್ಜಿ ಸಲ್ಲಿಕೆ, ಹಾಗೂ ಶುಲ್ಕ ಪಾವತಿಗೆ ಕೊನೆಯ ದಿನಾಂಕ: 21.07.2024

ಇದನ್ನೂ ಓದಿ: Job Alert: ಇಂಡಿಯನ್‌ ಹೈವೇ ಮ್ಯಾನೇಜ್‌ಮೆಂಟ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಇಂದೇ ಅಪ್ಲೈ ಮಾಡಿ

ಅರ್ಜಿ ಸಲ್ಲಿಸುವಾಗ

ಅಭ್ಯರ್ಥಿ ಬ್ಯಾಂಕ್ ಆಯ್ಕೆ ಮಾಡಿಕೊಳ್ಳುವುದಕ್ಕೆ ಆನ್ ಲೈನ್ ಅರ್ಜಿ ನಮೂನೆಯಲ್ಲಿ ಬ್ಯಾಂಕ್ ಆದ್ಯತೆಯ ಆದೇಶವನ್ನು ಅಳವಡಿಸಲಾಗಿದೆ. ಅಭ್ಯರ್ಥಿಗಳು ಈ ಹಂತದಲ್ಲಿ ಅವರ ಬ್ಯಾಂಕ್ ಗಳ ಆದ್ಯತೆಯ ಕ್ರಮವನ್ನು ಅಗತ್ಯವಾಗಿ ಸೂಚಿಸಬೇಕು. ಯಾವ್ಯಾವ ಬ್ಯಾಂಕ್ ಗಳಲ್ಲಿ ಎಷ್ಟೆಷ್ಟು ಹುದ್ದೆಗಳಿವೆ ಹಾಗೂ ನಮ್ಮ ರಾಜ್ಯದಲ್ಲಿ/ಜಿಲ್ಲೆಗಳಲ್ಲಿ ಶಾಖೆಗಳಿವೆಯಾ ಎಂಬುದರ ಮೇಲೆ ನಿಮ್ಮ ಆದ್ಯತೆಯ ಆಯ್ಕೆ ಇರಲಿ. ಒಮ್ಮೆ ನೀವು ಆಯ್ಕೆಯಾದರೆ ನಂತರದ ದಿನಗಳಲ್ಲಿ ಬ್ಯಾಂಕ್/ಸ್ಥಳ ಬದಲಾವಣೆಗಾಗಿ ಸಲ್ಲಿಸುವ ವಿನಂತಿಯನ್ನು ಪರಿಗಣಿಸಲಾಗುವುದಿಲ್ಲ. ಆಯ್ಕೆ ಪ್ರಕ್ರಿಯೆಯ ಹಂತದಲ್ಲಿ ಅಥವಾ ಅಪಾಯಿಂಟ್ ಮೆಂಟ್ ನ ನಂತರ ನಿಮ್ಮ ಕೈಬರಹದ ಘೋಷಣೆ ಹಾಗೂ ನಿಮ್ಮ ಕೈಬರಹದಲ್ಲಿ ಭಿನ್ನವಾಗಿರುವುದು ತಜ್ಞರ ವಿಶ್ಲೇಷಣೆಯಲ್ಲಿ ಕಂಡುಬಂದರೆ, ಅಭ್ಯ ರ್ಥಿಯ ಉಮೇದುವಾರಿಕೆಯನ್ನ ರದ್ದುಗೊಳಿಸಲಾಗುವುದು. ಹೀಗಾಗಿ ಅರ್ಜಿ ಸಲ್ಲಿಸುವ ಹಂತದಲ್ಲಿಯೇ ಬಹಳ ಎಚ್ಚರಿಕೆಯಿಂದ ಅರ್ಜಿ ಸಲ್ಲಿಸುವುದು ಒಳಿತು.

ಪರೀಕ್ಷೆಗಳ ಸ್ವರೂಪ ಹೀಗಿದೆ:

ಪೂರ್ವ ಭಾವಿ ಪರೀಕ್ಷೆ:

ಕ್ರಮ ಸಂಖ್ಯೆಪರೀಕ್ಷೆಗಳ  ಹೆಸರು  ಪರೀಕ್ಷೆಯ ಮಾಧ್ಯಮ ಪ್ರಶ್ನೆಗಳುಗರಿಷ್ಠ ಅಂಕಗಳುಪ್ರತಿಪರೀಕ್ಷೆಗೆ ಪ್ರತ್ಯೇಕವಾಗಿನಿಗದಿಪಡಿಸಲಾದ ಸಮಯ
1ಆಂಗ್ಲಭಾಷೆಇಂಗ್ಲಿಷ್303020 ನಿಮಿಷಗಳು
2ಸಂಖ್ಯಾತ್ಮಕಸಾಮರ್ಥ್ಯ(Numerical Ability)  ಕನ್ನಡ, ಕೊಂಕಣಿ, ಇಂಗ್ಲಿಷ್ಮತ್ತುಹಿಂದಿಇವುಗಳಲ್ಲಿ ಯಾವುದಾದರೊಂದುಭಾಷೆಯಆಯ್ಕೆ  353520 ನಿಮಿಷಗಳು
3ತಾರ್ಕಿಕಸಾಮರ್ಥ್ಯ353520 ನಿಮಿಷಗಳು
 ಒಟ್ಟು 10010060 ನಿಮಿಷಗಳು

ಕನ್ನಡದಲ್ಲಿ ಪರೀಕ್ಷೆ

ಕರ್ನಾಟಕದ ಅಭ್ಯರ್ಥಿಗಳು ಹಿಂದಿ ಅಥವಾ ಇಂಗ್ಲಿಷ್ ಜೊತೆಗೆ ಕನ್ನಡ ಮತ್ತು ಕೊಂಕಣಿ ಭಾಷೆಯಲ್ಲೂ ಪರೀಕ್ಷೆ ಬರೆಯುವ ಅವಕಾಶವಿದೆ. ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವಾಗ ಭಾಷೆ ನಮೂದಿಸಬೇಕು.(ಪರೀಕ್ಷಾ ಸಂದರ್ಭದಲ್ಲಿ ಬದಲಾವಣೆಗೆ ಅವಕಾಶವಿಲ್ಲ ಎಂಬುದನ್ನು ಮರೆಯದಿರಿ)

ಹೇಗೆ ಭಿನ್ನವಾಗಿವೆ?

ಸಂಖ್ಯಾ ಸಾಮರ್ಥ್ಯ ಪರೀಕ್ಷೆಯು ಒಂದು ಮೂಲಭೂತ ಕೌಶಲ. ಇದರ ಮೂಲಕ ಸಂಖ್ಯೆಗಳ ವಿಷಯದಲ್ಲಿ ಅಭ್ಯರ್ಥಿಗಿರುವ ವೇಗ ಹಾಗೂ ನಿಖರತೆಯನ್ನು ಪರೀಕ್ಷಿಸಲಾಗುತ್ತದೆ. ಸಂಖ್ಯಾ ಸಾಮರ್ಥ್ಯ ಪರೀಕ್ಷೆಯಲ್ಲಿ, ಲೆಕ್ಕಾಚಾರದ ಸಾಮರ್ಥ್ಯ ಮತ್ತು ನಿಖರತೆಯನ್ನು ಸರಳ ಸಂಖ್ಯೆಯ ಪ್ರಶ್ನೆಗಳ ಮೂಲಕ ಪರೀಕ್ಷಿಸಲಾಗುತ್ತದೆ.

ಕ್ಲಿಷ್ಟತೆಯ ಮಟ್ಟ :

ಸಂಖ್ಯಾತ್ಮಕ ಸಾಮರ್ಥ್ಯ ಪರೀಕ್ಷೆಯಲ್ಲಿ ಸರಳೀಕರಣ, ಸಂಖ್ಯಾ ಸರಣಿ, ಅಂಕಗಣಿತದ ಪ್ರಶ್ನೆಗಳು, ಬೀಜಗಣಿತದ ಪ್ರಶ್ನೆಗಳಿರುತ್ತವೆ. ಈ ಪರೀಕ್ಷೆ ಮೂಲಕ ಅಭ್ಯರ್ಥಿಗೆ ಸಂಖ್ಯೆಗಳೊಂದಿಗೆ ವ್ಯವಹರಿಸುವ ಸಾಮರ್ಥ್ಯವನ್ನು ಪರೀಕ್ಷಿಸಲಾಗುತ್ತದೆ. ಆ ಪ್ರಶ್ನೆಗಳಲ್ಲಿ ತಾರ್ಕಿಕ ಅಂಶವಿರುವುದಿಲ್ಲ.

ಅಭ್ಯರ್ಥಿಗಳು ಐಬಿಪಿಎಸ್ ನಿರ್ಧರಿಸಿದಂತೆ ಮೂರು ಪರೀಕ್ಷೆಗಳಲ್ಲಿಯೂ ಕಟ್-ಆಫ್ ಅಂಕಗಳನ್ನು ಪಡೆಯುವದರ ಮೂಲಕ ಅರ್ಹತೆ ಪಡೆಯಬೇಕು. ಪ್ರತಿ ವರ್ಗದಲ್ಲಿ ಸಾಕಷ್ಟು ಸಂಖ್ಯೆಯ ಅಭ್ಯರ್ಥಿಗಳು ಐಬಿಪಿಎಸ್ ಪರೀಕ್ಷೆಯಲ್ಲಿ ಭಾಗವಹಿಸುವುದರಿಂದ ಕೇವಲ ಪಾಸಾದರೆ ಸಾಕಾಗುವುದಿಲ್ಲ. ಅವಶ್ಯಕತೆಗಳಿಗೆ ತಕ್ಕಂತೆ ಆನ್‌ಲೈನ್ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ ಅಭ್ಯರ್ಥಿಗಳನ್ನು ಮಾತ್ರ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ.

ಮುಖ್ಯ ಪರೀಕ್ಷೆ:

ಕ್ರಮ ಸಂಖ್ಯೆಪರೀಕ್ಷೆಗಳ  ಹೆಸರು (ಅನುಕ್ರಮದಿಂದ ಅಲ್ಲ)ಪರೀಕ್ಷೆ ಮಧ್ಯಮ  ಪ್ರಶ್ನೆಗಳುಗರಿಷ್ಠ ಅಂಕಗಳುಪ್ರತಿಪರೀಕ್ಷೆಗೆ ಪ್ರತ್ಯೇಕವಾಗಿನಿಗದಿಪಡಿಸಲಾದ ಸಮಯ
1ಆಂಗ್ಲಭಾಷೆಆಂಗ್ಲ404035 ನಿಮಿಷಗಳು
2ಸಾಮಾನ್ಯ/ಹಣಕಾಸುಅರಿವು  ಕನ್ನಡ, ಕೊಂಕಣಿ, ಇಂಗ್ಲಿಷ್ಮತ್ತುಹಿಂದಿಇವುಗಳಲ್ಲಿ ಯಾವುದಾದರೊಂದುಭಾಷೆಯಆಯ್ಕೆ505035 ನಿಮಿಷಗಳು
3ತಾರ್ಕಿಕಸಾಮರ್ಥ್ಯ& ಕಂಪ್ಯೂಟರ್ಆಪ್ಟಿಟ್ಯೂಡ್506045 ನಿಮಿಷಗಳು
4ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್505045 ನಿಮಿಷಗಳು
 ಒಟ್ಟು 190200160 ನಿಮಿಷಗಳು

ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ಪರೀಕ್ಷೆಯಲ್ಲಿ, ಪ್ರಶ್ನೆ ಅರ್ಥಮಾಡಿಕೊಳ್ಳುವುದರ ಜೊತೆಗೆ ಅದನ್ನ ಬಿಡಿಸಲು ಜ್ಞಾನದ ಮೂಲವನ್ನು (Basic concept) ಅನ್ವಯಿಸುವುದು ಮುಖ್ಯ ಉದ್ದೇಶವಾಗಿದೆ. ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್, ಬೀಜಗಣಿತ ಮತ್ತು ಅಭಿವ್ಯಕ್ತಿಗಳನ್ನು ಒಳಗೊಂಡಿರುವ ಪ್ರಶ್ನೆಗಳನ್ನು ಹೊಂದಿದೆ. ಇದರಲ್ಲಿ ಪ್ರಶ್ನೆಗಳನ್ನು ಬಿಡಿಸಲು ಅಭ್ಯರ್ಥಿಗಳು ತರ್ಕ ಮತ್ತು ಜ್ಞಾನವನ್ನು ಅನ್ವಯಿಸುವ ಅಗತ್ಯವಿದೆ.

ಕ್ಲಿಷ್ಟತೆಯ ಮಟ್ಟ

ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ವಿಷಯದಲ್ಲಿ ತಾರ್ಕಿಕ ಅರ್ಹತೆ ಮತ್ತು ಸಂಖ್ಯೆಗಳೊಂದಿಗೆ ವ್ಯವಹರಿಸುವ ಸಾಮರ್ಥ್ಯವನ್ನು ಪರೀಕ್ಷಿಸಲಾಗುತ್ತದೆ. ಇದು ಎರಡೂ ವಿಷಯಗಳ ಸಂಯೋಜನೆ. ಇದರಲ್ಲಿ ಪ್ರಶ್ನೆಗಳು ತುಂಬಾ ಕಠಿಣವಾಗಿರುವುದಿಲ್ಲ, ಆದರೆ ಇವುಗಳನ್ನು ಬಿಡಿಸಲು ಹೆಚ್ಚು ಅಭ್ಯಾಸ ಮಾಡಿರಬೇಕು. ಆದ್ದರಿಂದ ನೀವು ಪ್ರಶ್ನೆಗಳನ್ನು ಅರ್ಥ ಮಾಡಿಕೊಳ್ಳುವುದರ ಮೂಲಕ ಸಮಯವನ್ನು ಹೇಗೆ ನಿರ್ವಹಿಸಬಹುದು ಎಂಬುದನ್ನು ಅರಿಯುವಿರಿ. ಆದರೆ ಚಕ್ರ ಬಡ್ಡಿ(compound interest) ಕುರಿತ ಪ್ರಶ್ನೆಗಳು ಬಿಡಿಸಲು ಸ್ವಲ್ಪ ಸಮಯ ತೆಗೆದುಕೊಳ್ಳುವುದರಿಂದ ಅವುಗಳನ್ನು ವಿಭಾಗದ ಕೊನೆಯಲ್ಲಿ ಬಿಡಿಸಬೇಕು.

ಋಣಾತ್ಮಕ ಮೌಲ್ಯಮಾಪನ ಇದೆ

ಪೂರ್ವ ಭಾವಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ ಎರಡೂ ವಸ್ತುನಿಷ್ಠ ಮಾದರಿಯ ಪರೀಕ್ಷೆಗಳಾಗಿದ್ದು ಋಣಾತ್ಮಕ ಮೌಲ್ಯಮಾಪನ ಇದೆ. ಒಂದು ತಪ್ಪು ಉತ್ತರಕ್ಕೆ, ಅದಕ್ಕೆ ನಿಗದಿಪಡಿಸಿದ ಅಂಕಗಳಲ್ಲಿ 0.25 ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. ಪ್ರಶ್ನೆ ಖಾಲಿ ಬಿಟ್ಟರೆ, ಯಾವುದೇ ಅಂಕ ಕಳೆಯುವುದಿಲ್ಲ.

ಪ್ರತಿ ಅಭ್ಯರ್ಥಿಯು ಆನ್‌ಲೈನ್ ಮುಖ್ಯ ಪರೀಕ್ಷೆಯ ಪ್ರತಿ ಪರೀಕ್ಷೆಯಲ್ಲಿ ಕನಿಷ್ಠ ಸ್ಕೋರ್ ಪಡೆಯಬೇಕಾಗುತ್ತದೆ. ಹಾಗೂ ಒಟ್ಟಾರೆ ಕನಿಷ್ಟ ಅಂಕ  ಕೂಡ ಪಡೆಯಬೇಕಾದ ಅನಿವಾರ್ಯತೆ ಇದೆ. ಪ್ರತಿ ರಾಜ್ಯದಲ್ಲಿರುವ ಖಾಲಿ ಹುದ್ದೆಗಳನ್ನು ಆಧರಿಸಿ, ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ತಯಾರಿಸಲಾಗುತ್ತದೆ. ಅದರ ವಿವರಗಳನ್ನು ಅಧಿಕೃತ ಐಬಿಪಿಎಸ್ ವೆಬ್‌ಸೈಟ್‌ನಲ್ಲಿ ನಂತರ ಲಭ್ಯವಾಗುವಂತೆ ಮಾಡಲಾಗುತ್ತದೆ.

ಪೂರ್ವಭಾವಿ ಪರೀಕ್ಷೆ ಅರ್ಹತಾ ಸ್ವರೂಪದ್ದಾಗಿದ್ದು, ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನಷ್ಟೇ ಮೆರಿಟ್ ಪಟ್ಟಿಗೆ ಪರಿಗಣಿಸಲಾಗುತ್ತದೆ.ಮುಖ್ಯ ಪರೀಕ್ಷೆಯ 200 ಅಂಕಗಳನ್ನು ನೂರಕ್ಕೆ ಇಳಿಸಿ ಮೆರಿಟ್ ಪಟ್ಟಿ ರಚಿಸಲಾಗುತ್ತದೆ. ಈ ಕಾರಣಕ್ಕಾಗಿ ಹೆಚ್ಚಿನ ಅಂಕಗಳಿಸುವತ್ತ ಅಭ್ಯರ್ಥಿಗಳು ಗಮನ ನೀಡಬೇಕಾಗುತ್ತದೆ.ಹುದ್ದೆಗಳಿಗೆ ಆಯ್ಕೆ ಮಾಡುವಾಗ ಮುಖ್ಯ ಪರೀಕ್ಷೆಯಲ್ಲಿ ಕನಿಷ್ಠ ಅಂಕ ಪಡೆದಿರಬೇಕು.

ಇದನ್ನೂ ಓದಿ: Job Alert: ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 2,700 ಅಪ್ರೆಂಟಿಸ್ ಶಿಪ್ ಹುದ್ದೆ; ಆಯ್ಕೆಯಾಗಲು ಏನು ಮಾಡಬೇಕು? ವಿಸ್ತೃತ ಮಾಹಿತಿ

ಇನ್ನೊಂದಿಷ್ಟು ಮಾಹಿತಿ…

ಲಿಖಿತ ದೃಢೀಕರಣ:

ಅರ್ಜಿ ಸಲ್ಲಿಕೆಯ ವೇಳೆ ಕೈಬರಹದ ಘೋಷಣೆಯ ಪಠ್ಯ ಈ ರೀತಿಯಲ್ಲಿ ಬರೆದು ಅಪ್‌ಲೋಡ್‌ ಮಾಡಬೇಕು:

(ಅಭ್ಯ ರ್ಥಿಯ ಹೆಸರು),. …….. ಆದ ನಾನು ಈ ಮೂಲಕ ಅರ್ಜಿಯಲ್ಲಿ ಸಲ್ಲಿಸಿದ ಎಲ್ಲಾ ಮಾಹಿತಿಯು ಸರಿಯಾಗಿದೆ ಮತ್ತು ನಿಜ ಮಾನ್ಯವಾಗಿದೆ ಎಂದು ಘೋಷಿಸುತ್ತೇನೆ. ಅಗತ್ಯವಿದ್ದಾಗ ನಾನು ಪೂರಕ ದಾಖಲೆಗಳನ್ನು ಪ್ರಸ್ತುತಪಡಿಸುತ್ತೇನೆ. ಲಿಖಿತ ಘೋಷಣೆಯು ಇಂಗ್ಲಿಷ್ ನಲ್ಲಿ ಮಾತ್ರ ಇರಬೇಕು. ಕ್ಯಾಪಿಟಲ್ ಲೆಟರ್ಸ್‌ನಲ್ಲಿ ಇರಬಾರದು. ಕ್ಯಾಪಿಟಲ್ ಲೆಟರ್ ಗಳಲ್ಲಿ ಹಾಕಿದ ಸಹಿಯನ್ನು ಸ್ವೀಕರಿಸಲಾಗುವುದಿಲ್ಲ. ಎಡ ಹೆಬ್ಬೆರಳಿನ ಗುರುತು ಸರಿಯಾಗಿ ಸ್ಕ್ಯಾನ್ ಮಾಡಬೇಕು ಮತ್ತು ಮಸುಕಾಗಿರಬಾರದು. ಆಯ್ಕೆ ಪ್ರಕ್ರಿಯೆಯ ಹಂತದಲ್ಲಿ ಅಥವಾ ಅಪಾಯಿಂಟ್ ಮೆಂಟ್ ನ ನಂತರ ನಿಮ್ಮ ಕೈಬರಹದ ಘೋಷಣೆ ಹಾಗೂ ನಿಮ್ಮ ಕೈಬರಹದಲ್ಲಿ ಭಿನ್ನವಾಗಿರುವುದು ತಜ್ಞರ ವಿಶ್ಲೇಷಣೆಯಲ್ಲಿ ಕಂಡುಬಂದರೆ, ಅಭ್ಯರ್ಥಿಯ ಉಮೇದುವಾರಿಕೆಯನ್ನು ರದ್ದುಗೊಳಿಸಲಾಗುವುದು. ಹೀಗಾಗಿ ಅರ್ಜಿ ಸಲ್ಲಿಸುವ ಹಂತದಲ್ಲಿಯೇ ಬಹಳ ಎಚ್ಚರಿಕೆಯಿಂದ ಅರ್ಜಿ ಸಲ್ಲಿಸುವುದು ಒಳಿತು.

ಸಂದರ್ಶನವಿಲ್ಲ:

ಪೂರ್ವಭಾವಿ ಪರೀಕ್ಷೆ ಯಲ್ಲಿ ಅರ್ಹತೆ ಪಡೆಯುವ ಮತ್ತು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ. ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳು ಆಧಾರದ ಮೇಲೆ ಆಯ್ಕೆಯಾದವರಿಗೆ ತಾತ್ಕಾಲಿಕವಾಗಿ ನೇಮಕಾತಿ ಪತ್ರ ವಿತರಿಸಲಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಪ್ರಮುಖ ಸುದ್ದಿ

Actor Darshan: ರೇಣುಕಾಸ್ವಾಮಿ ಸಾಯೋವರೆಗೂ ಶೆಡ್‌ನಲ್ಲೇ ಇದ್ದರಾ ನಟ ದರ್ಶನ್! ಚಾರ್ಜ್ ಶೀಟ್‌ನಲ್ಲಿ ಏನೆಲ್ಲ ಇದೆ ಗೊತ್ತಾ?

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಮುಂದಿನ ಪ್ರಕ್ರಿಯೆಗಳು ಕೂಡ ಮುಂದುವರೆಯುತ್ತಿದ್ದು‌ ಕೊಲೆಯಲ್ಲಿ ಹದಿನೇಳು ಜನ ಆರೋಪಿಗಳಿದ್ದಾರೆ. ಇದರ ಡೀಟೇಲ್ಸ್ ಇಲ್ಲಿದೆ.

VISTARANEWS.COM


on

Actor Darshan to be questioned in Parappana Agrahara jail
Koo

ರೇಣುಕಾಸ್ವಾಮಿ ಕೊಲೆ (Actor Darshan) ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಮುಂದಿನ ಪ್ರಕ್ರಿಯೆಗಳು ಕೂಡ ಮುಂದುವರೆಯುತ್ತಿದೆ.‌ ಕೊಲೆಯಲ್ಲಿ ಹದಿನೇಳು ಜನ ಆರೋಪಿಗಳಿದ್ದಾರೆ. ಕ್ರಿಮಿನಲ್ ಕಾನ್‌ಸ್ಪಿರೆಸಿ ಮಾಡಿ ಪರ್ಪೆಕ್ಟ್ ಕ್ರೈಂ ಎನಿಸಿಕೊಂಡಿರುವವರ ಕೊಲೆ ಪ್ರಕರಣ ಇದಾಗಿದೆ.‌ ಕೊಲೆಯಾದ ಬಳಿಕ ಏನೆಲ್ಲಾ ಮಾಡಬೇಕು‌ ಎಂಬಷ್ಟರ ಮಟ್ಟಿಗೆ ಯೋಚನೆ ಮಾಡಿದ್ದ ಖದೀಮರು ಕೊನೆಗೆ ಪ್ಲಾನ್ ಉಲ್ಟಾ ಹೊಡೆದ ಬಳಿ ಅಷ್ಟೂ ಜನ ಸಿಕ್ಕಿ ಬಿದ್ದಿದ್ದಾರೆ. 17 ಜನ ಆರೋಪಿಗಳು ಯಾವ ರೀತಿ ಕೊಲೆ ಪ್ರಕರಣದಲ್ಲಿ ಪಾತ್ರ ವಹಿಸಿದರು ಎಂಬುದರ ಡಿಟೇಲ್ಸ್ ಇಲ್ಲಿದೆ.

ಪವಿತ್ರಾಗೌಡ

ಕೊಲೆ ಮಾಡಲು ಮೂಲ ಕಾರಣ ಪವಿತ್ರ ಗೌಡ. ಕೃತ್ಯ ನಡೆದ ಸಮಯದಲ್ಲಿ ಅಲ್ಲೇ ಇರುವುದಕ್ಕೆ ಸಾಕ್ಷಿ ಪತ್ತೆಯಾಗಿದೆ.,
ಸಿಸಿಟಿವಿಯಲ್ಲಿ ಪವಿತ್ರಗೌಡ ಸೆರೆಯಾಗಿದ್ದಾರೆ. ಪವಿತ್ರ ಗೌಡ ಮೊಬೈಲ್ ಕೃತ್ಯದ ಸ್ಥಳದಲ್ಲಿ ಆಕ್ಟಿವ್ ಆಗಿರುವುದು ಕಂಡುಬಂದಿದೆ.

ದರ್ಶನ್

ಕಿಡ್ನಾಪ್ ಮಾಡಿಸಿದ್ದು , ಹಲ್ಲೆ ಮಾಡಿದ್ದು, ಕೊಲೆ ನಂತರ ಮುಚ್ಚಿಹಾಕಲು ಹಣ ನೀಡಿದ್ದು ದರ್ಶನ್. ಕೊಲೆ ನಡೆದ ಸ್ಥಳದಲ್ಲಿ ಇರುವುದು ಪತ್ತೆಯಾಗಿದೆ. ಸಿಸಿಟಿವಿಯಲ್ಲಿ ಕೂಡ ದರ್ಶನ್ ಸೆರೆಯಾಗಿದ್ದಾರೆ. ಕೊಲೆ ಬಳಿಕ ಸ್ಥಳದಿಂದ ಪರಾರಿಯಾರಿಯಾಗುವ ದೃಶ್ಯ ಸಹ ಇದೆ. ದರ್ಶನ್ ಬಟ್ಟೆ ಮತ್ತು ಶೂನಲ್ಲಿ ರೇಣುಕಾ ಸ್ವಾಮಿ ರಕ್ತ ಇರುವುದು ಪತ್ತೆಯಾಗಿದ್ದು, ದರ್ಶನ್ ಹಲ್ಲೆ ಮಾಡಿರುವ ಬಗ್ಗೆ ಮತ್ತು ಕೊಲೆಯಲ್ಲಿ ಭಾಗಿರುವುದು ದೃಡವಾಗಿದೆ.

ಪವನ್

ಪವಿತ್ರ ಜೊತೆಗೆ ಇದ್ದು ,ಕಿಡ್ನಾಪ್ ಮಾಡುವಾಗ ರಾಘವೇಂದ್ರ ಜೊತೆಗೆ ಸಂಪರ್ಕದಲ್ಲಿ ಇದ್ದುಕೊಂಡು ನಂತ್ರ ಹಲ್ಲೆ ಮಾಡುವ ಸ್ಥಳಕ್ಕೆ ಹೋಗಿ ಹಲ್ಲೆ ಪವನ್ ಮಾಡಿದ್ದಾನೆ. ಬೇರೊಂದು ಇನ್ಸ್ಟಾಗ್ರಾಮ್ ಅಕೌಂಟ್ ಮಾಡಿ ರೇಣುಕಾಸ್ವಾಮಿ ಜೊತೆಗೆ ಚಾಟ್ ಮಾಡಿ ಕಿಡ್ನಾಪ್ ಮಾಡುವಂತೆ ಸೂಚಿನೆ ನಿಡಿದ್ದಾನೆ. ರೇಣುಕಾಸ್ವಾಮಿ ಗೆ ಹಲ್ಲೆ ಮಾಡಿದ್ದು, ಇದೆಲ್ಲದಕ್ಕು ಸಾಕ್ಷಿ ಲಭ್ಯ ವಿದೆ.

ರಾಘವೇಂದ್ರ

ಚಿತ್ರದುರ್ಗ ದರ್ಶನ್ ಅಭಿಮಾನಿಗಳ ಸಂಘದ ಅದ್ಯಕ್ಷ, ಕಿಡ್ನಾಪ್ ಮಾಡುವಲ್ಲಿ ಪ್ರಮುಖ ಪಾತ್ರ. ಕೊಲೆಯಾದ ಸ್ಥಳದಲ್ಲಿ ಹಾಜರಿದ್ದ. ಕೊಲೆ ಬಳಿಕ ರೇಣುಕಾಸ್ವಾಮಿ ಮೈ ಮೇಲಿದ್ದ ಆಭರಣ ತೆಗೆದಿದ್ದ. ಕೊಲೆ ಮಾಡುವ ಮೊದಲು ಕಿಡ್ನಾಪ್ ಮಾಡುವಲ್ಲಿ ಸಕ್ರಿಯವಾಗಿ ಕೆಲಸ ಮಾಡಿರುವುದಕ್ಕೆ ಸಾಕ್ಷಿ ಲಭ್ಯವಾಗಿದೆ.

ನಂದೀಶ

ಹಲ್ಲೆ ಮಾಡುವಾಗ ಜೊತೆಗೆ ಇದ್ದು , ರಣೇಕಾ ಸ್ವಾಮಿಗೆ ತೀವ್ರವಾಗಿ ಹಲ್ಲೆ ಮಾಡಿದವನು. ರೇಣುಕಾಸ್ವಾಮಿ ಬಳಸಿದ್ದ ಬಟ್ಟೆಯಲ್ಲಿ ರಕ್ತವಿದೆ. ಕೊಲೆ ಬಳಿಕ ವಾಹನದಲ್ಲಿ ಮೃತ ದೇಹ ಇಟ್ಟಿದ್ದು, ದೇಹ ಹೊತ್ತುಕೊಂಡು ಬಂದಿದ್ದ ದೃಶ್ಯ ಪತ್ತೆಯಾಗಿದೆ.

ಜಗದೀಶ್ ಅಲಿಯಾಸ್ ಜಗ್ಗ

ಕಿಡ್ನಾಪ್ ಮಾಡಿಕೊಂಡು ಚಿತ್ರದುರ್ಗದಿಂದ ಬಂದಿದ್ದ ತಂಡದ ಸದಸ್ಯ, ಚಿತ್ರದುರ್ಗದಿಂದ ಕರೆತಂದು ಕೊಲೆ ಮಾಡಿದ ಬಳಿಕ ಎಸ್ಕೇಪ್ ಆಗಿದ್ದನ್ನು. ರೇಣುಕಾಸ್ವಾಮಿ ಕಿಡ್ನಾಪ್ ನಂತರ ಕರೆತರುವಾಗ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅನುಕುಮಾರ್ ಅಲಿಯಾಸ್ ಅನು

ಕಿಡ್ನಾಪ್ ಮಾಡಿಕೊಂಡು ಚಿತ್ರದುರ್ಗದಿಂದ ಬಂದಿದ್ದ ತಂಡದ ಸದಸ್ಯ ಈ ಅನುಕುಮಾರ್. ಚಿತ್ರದುರ್ಗದಿಂದ ಕರೆತಂದ ಕೊಲೆ ಮಾಡಿದ ಬಳಿಕ ಎಸ್ಕೇಪ್ ಆಗಿದ್ದ. ಕಿಡ್ನಾಪ್ ಸಮಯದಲ್ಲಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರವಿ ಅಲಿಯಾಸ್ ರವಿಶಂಕರ್

ಕಾರು ಚಾಲಕ, ಈತ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದಿದ್ದ. ಕೊಲೆ ಬಳಿಕ ಕಾರಿನಲ್ಲಿ ಉಳಿದ ಆರೋಪಿಗಳ ಕರೆದುಕೊಂಡು ಹೋಗಿದ್ದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರಾಜು ಅಲಿಯಾಸ್ ಧನರಾಜ್

ದರ್ಶನ್ ನಿವಾಸದಲ್ಲಿ ಕೆಲಸ ಮಾಡಿಕೊಂಡಿದ್ದ ರಾಜರಾಜೇಶ್ವರಿ ನಗರ ನಿವಾಸಿ. ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ನೀಡಿದ್ದು, ಮೃತ ದೇಹ ಸಾಗಾಣೆ ಈ ರಾಜು ಅಲಿಯಾಸ್ ಧನರಾಜ್.

ವಿನಯ್

ದರ್ಶನ್ ಆಪ್ತನಾಗಿದ್ದು ಸ್ಟೋನಿ ಬ್ರೂಕ್ ರೆಸ್ಟೋರೆಂಟ್ ಮಾಲಿಕ, ಈತ ಹಲ್ಲೆ ಮಾಡಿದ್ದವರ ಪೈಕಿ ಪ್ರಮುಖ ವ್ಯಕ್ತಿ. ಮನಸ್ಸಿಗೆ ಬಂದಹಾಗೆ ಹಲ್ಲೆ ಮಾಡಿದ್ದಾನೆ ಲಾಠಿ ಬೀಸಿ ಬೀಸಿ ಹೊಡೆದಿದ್ದಾನೆ. ಕೊಲೆಗು ಮೊದಲಿನಿಂದ ದರ್ಶನ್ ಜೊತೆಗೆ ಇದ್ದ. ಸ್ಟೋನಿ ಬ್ರೂಕ್‌ನಲ್ಲಿ ನಡೆದ ಕೊಲೆಗು ಮೊದಲ ಮಾತುಕತೆಯಲ್ಲಿ ಭಾಗಿದ್ದಾನೆ.

ನಾಗರಾಜು ಅಲಿಯಾಸ್ ನಾಗ

ನಟ ದರ್ಶನ್‌ನ ಅನಧಿಕೃತ ಮ್ಯಾನೇಜರ್ ಇವನನು. ಪಾರ್ಟಿ ಕುಡಿತ ಸೇರಿ ಎಲ್ಲಾ ಕಡೆ ಇರುತ್ತಿದ್ದ. ಹಲ್ಲೆ ಮಾಡುವಾಗ ಜೊತೆಗೆ ಇದ್ದು ಹಲ್ಲೆ ಮಾಡಿ ಕಾಲಿನಿಂದಲೂ ಒದ್ದಿದ್ದ. ಬೇರೆಯವರಿಗೆ ಶರಣಾಗುವಂತೆ ವ್ಯವಸ್ಥೆ ಮಾಡುವಲ್ಲಿಯೂ ಪಾತ್ರ ನಿರ್ವಹಿಸಿದ್ದಾನೆ.

ಲಕ್ಷ್ಮಣ್

ದರ್ಶನ್ ಕಾರು ಚಾಲಕ. ಕೊಲೆ ಮಾಡುವಾಗ ಸ್ಥಳದಲ್ಲಿ ಇದ್ದು ಹಲ್ಲೆ ಮಾಡಿದ್ದು, ಮೃತ ದೇಹವನ್ನು ಎಸೆಯಲು ಬೇಕಾದ ವ್ಯವಸ್ಥೆ ಮಾಡಿದ್ದು ಕೊಲೆಗೆ ಮೊದಲೆ ಜೊತೆಗೆ ಇದ್ದಿದ್ದು ಈ ಲಕ್ಷ್ಮಣ್. ಕೊಲೆಯ ನಂತ್ರ ಎ2 ಆರೋಪಿ ಜೊತೆಗೆ ಪರಾರಿಯಾಗಲು ಸಹಾಯ ಸಹ ಮಾಡಿದ್ದಾನೆ.

ದೀಪಕ್

ದರ್ಶನ್ ಆಪ್ತ. ಹಲ್ಲೆ ಮಾಡಿದ್ದು ನಂತರ ದರ್ಶನ್, ಪ್ರದೋಶ್ ಹೇಳಿದಂತೆ ಹಣವನ್ನು ನಿಕಿಲ್, ಕೇಶವಮೂರ್ತ, ಮತ್ತು ಕಾರ್ತಿಕ್‌ಗೆ ಹೇಳಿ ಒಪ್ಪಿಸಿ ಹಣ ನೀಡಿದ್ದ ತಲಾ ಐದು ಲಕ್ಷ ಹಣ ನೀಡಿದ್ದ. ಕೊಲೆ ನಡೆದ ಶೆಡ್ ಸ್ಥಳದ ಜವಾಬ್ದಾರಿ ಹೊಂದಿದ್ದ.

ಪ್ರದೂಶ್

ದರ್ಶನ್ ಜೊತೆಗೆ ಇದ್ದುಕೊಂಡು ಹಲ್ಲೆ ಮಾಡಿದವನು, ನಂತರ ದರ್ಶನ್ ಜೊತೆಗೆ ವ್ಯವಹಾರ, ಕೊಲೆ ಮಾಡಿದ್ದವರ ಖರ್ಚಿಗಾಗಿ ಮೂವತ್ತು ಲಕ್ಷ ಹಣವನ್ನು ಪಡೆದುತಂದಿದ್ದ. ಆರೋಪಿಗಳು ಭಯ ಪಟ್ಟಾಗ ಮತ್ತೆ ದರ್ಶನ್ ಬೇಟಿ ಮಾಡಿಸಿ ಮೂವರನ್ನ ಸರಂಡರ್ ಮಾಡಿಸಿದ್ದ.

ಕಾರ್ತಿಕ್ ಅಲಿಯಾಸ್ ಕಪ್ಪೆ

ಶೆಡ್‌ನಲ್ಲಿ ಕೆಲಸ ಮಾಡಿಕೊಂಡಿದ್ದ, ಹಣ ನೀಡಿದ ಬಳಿಕ ಶವ ಸಾಗಿಸಿದ್ದ. ನಂತರ ಪೊಲೀಸರ ಮುಂದೆ ಸರಂಡರ್ ಆಗಿದ್ದನು.

ಕೇಶವಮೂರ್ತಿ

ಕೊಲೆ ಮಾಡಿದ್ದ ಬಳಿಕ ಐದು ಲಕ್ಷ ಹಣ ಪಡೆದುಕೊಂಡು ಮೃತ ದೇಹವನ್ನು ಸಾಗಿಸುವ ಕೆಲಸ ಮಾಡಿದ್ದ. ಆಮೇಲೆ ಪೊಲೀಸರ ಎದುರು ಸರಂಡರ್ ಆಗಿದ್ದನು.

ನಿಕಿಲ್

ಕೊಲೆ ಮಾಡಿದ್ದ ಬಳಿಕ ಐದು ಲಕ್ಷ ಹಣ ಪಡೆದುಕೊಂಡು ಮೃತ ದೇಹವನ್ನು ಸಾಗಿಸುವ ಕೆಲಸ ಮಾಡಿದ್ದ. ಅಮೇಲೆ ಪೊಲೀಸರ ಎದುರು ಸರಂಡರ್ ಆಗಿದ್ದನು.

Continue Reading

ಬೆಂಗಳೂರು

Railway news: ಪ್ರಯಾಣಿಕರ ಗಮನಕ್ಕೆ; ಸುರಕ್ಷತಾ ಕಾಮಗಾರಿ ಹಿನ್ನೆಲೆ ಈ ರೈಲುಗಳ ಓಡಾಟ ಸ್ಥಗಿತ

railway news: ನೈರುತ್ಯ ರೈಲ್ವೆ ಪತ್ರಿಕಾ ಪ್ರಕಟಣೆ ಸಂಖ್ಯೆ 226 ಪ್ರಕಾರ ದಿನಾಂಕ: 02.09.2024ರಂದು ರೈಲುಗಳ ಭಾಗಶಃ ರದ್ದು / ಮಾರ್ಗ ಬದಲಾವಣೆಯಾಗಲಿದೆ.

VISTARANEWS.COM


on

Job Alert
Koo

ಡಾ. ಮಂಜುನಾಥ ಕನಮಡಿ
ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ
ನೈರುತ್ಯ ರೈಲ್ವೆ, ಹುಬ್ಬಳ್ಳಿ

ಬೆಂಗಳೂರು ವಿಭಾಗದ (railway news) ಪೆನುಕೊಂಡ-ಮಕ್ಕಾಜಿಪಲ್ಲಿ ನಿಲ್ದಾಣಗಳ ನಡುವೆ ಇಂಜಿನಿಯರಿಂಗ್ ಮತ್ತು ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಹಿನ್ನಲೆಯಲ್ಲಿ ಈ ಕೆಳಗಿನ ರೈಲುಗಳನ್ನು ಭಾಗಶಃ ರದ್ದು ಮತ್ತು ಬದಲಾದ ಮಾರ್ಗದ ಮೂಲಕ ಸಂಚರಿಸಲಾಗುತ್ತದೆ. ಅವುಗಳು ಈ ಕೆಳಗಿನಂತಿವೆ:

indian railway

ಭಾಗಶಃ ರದ್ದು

ರೈಲು ಸಂಖ್ಯೆ 06515 ಕೆಎಸ್ಆರ್ ಬೆಂಗಳೂರು-ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ ಮೆಮು ವಿಶೇಷ ರೈಲು ಸೆಪ್ಟೆಂಬರ್ 5, 10, 11 ಮತ್ತು 12, 2024 ರಂದು ಹಿಂದೂಪುರ-ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ. ಈ ರೈಲು ಹಿಂದೂಪುರದಲ್ಲಿ ಕೊನೆಗೊಳ್ಳುತ್ತದೆ.

ರೈಲು ಸಂಖ್ಯೆ 06516 ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ-ಕೆಎಸ್ಆರ್ ಬೆಂಗಳೂರು ಮೆಮು ವಿಶೇಷ ರೈಲು ಸೆಪ್ಟೆಂಬರ್ 5, 10, 11 ಮತ್ತು 12, 2024 ರಂದು ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ-ಹಿಂದೂಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. ಈ ರೈಲು ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ ನಿಲ್ದಾಣದ ಬದಲು ಹಿಂದೂಪುರದಿಂದ ನಿಗದಿತ ನಿರ್ಗಮನ ಸಮಯದಲ್ಲಿ ತನ್ನ ಪ್ರಯಾಣವನ್ನು ಪ್ರಾರಂಭಿಸುತ್ತದೆ.

ರೈಲು ಸಂಖ್ಯೆ 07693 ಗುಂತಕಲ್-ಹಿಂದೂಪುರ ಡೆಮು ವಿಶೇಷ ರೈಲು ಸೆಪ್ಟೆಂಬರ್ 9 ರಿಂದ 11, 2024 ರವರೆಗೆ ಧರ್ಮಾವರಂ-ಹಿಂದೂಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿದೆ. ಈ ರೈಲು ಧರ್ಮಾವರಂನಲ್ಲಿ ಕೊನೆಗೊಳ್ಳುತ್ತದೆ.

ರೈಲು ಸಂಖ್ಯೆ 07694 ಹಿಂದೂಪುರ-ಗುಂತಕಲ್ ಡೆಮು ವಿಶೇಷ ರೈಲು ಸೆಪ್ಟೆಂಬರ್ 10 ರಿಂದ 12, 2024 ರವರೆಗೆ ಹಿಂದೂಪುರ ನಿಲ್ದಾಣದ ಬದಲು ಧರ್ಮಾವರಂನಿಂದ ನಿಗದಿತ ನಿರ್ಗಮನ ಸಮಯದಲ್ಲಿ ತನ್ನ ಪ್ರಯಾಣವನ್ನು ಪ್ರಾರಂಭಿಸುತ್ತದೆ. ಹೀಗಾಗಿ ಹಿಂದೂಪುರ-ಧರ್ಮಾವರಂ ನಿಲ್ದಾಣಗಳ ನಡುವೆ ರದ್ದುಗೊಂಡಿರುತ್ತದೆ.

railway
railway

ರೈಲುಗಳ ಮಾರ್ಗ ಬದಲಾವಣೆ

ಸೆಪ್ಟೆಂಬರ್ 5 ಮತ್ತು 12, 2024ರಂದು ಪ್ರಾರಂಭವಾಗುವ ರೈಲು ಸಂಖ್ಯೆ 20703 ಕಾಚಿಗುಡ-ಯಶವಂತಪುರ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಧರ್ಮಾವರಂ, ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಯಶವಂತಪುರ ನಿಲ್ದಾಣಗಳ ಮೂಲಕ ಸಂಚರಿಸಲಿದೆ.

ಸೆಪ್ಟೆಂಬರ್ 5 ಮತ್ತು 12, 2024ರಂದು ಪ್ರಾರಂಭವಾಗುವ ರೈಲು ಸಂಖ್ಯೆ 22231 ಕಲಬುರಗಿ-ಎಸ್ಎಂವಿಟಿ ಬೆಂಗಳೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಅನಂತಪುರ, ಧರ್ಮಾವರಂ, ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಯಲಹಂಕ ನಿಲ್ದಾಣಗಳ ಮೂಲಕ ಸಂಚರಿಸಲಿದೆ.

ಸೆಪ್ಟೆಂಬರ್ 9, 2024ರಂದು ಹೊರಡುವ ರೈಲು ಸಂಖ್ಯೆ 12976 ಜೈಪುರ-ಮೈಸೂರು ಎಕ್ಸ್ ಪ್ರೆಸ್ ರೈಲು ಧರ್ಮಾವರಂ, ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಹಿಂದೂಪುರ ನಿಲ್ದಾಣಗಳ ಮೂಲಕ ಸಂಚರಿಸಲಿದೆ.

ಸೆಪ್ಟೆಂಬರ್ 10 ಮತ್ತು 11, 2024ರಂದು ಹೊರಡುವ ರೈಲು ಸಂಖ್ಯೆ 16572 ಬೀದರ್-ಯಶವಂತಪುರ ಎಕ್ಸ್ ಪ್ರೆಸ್ ರೈಲು ಧರ್ಮಾವರಂ, ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಹಿಂದೂಪುರ ನಿಲ್ದಾಣಗಳ ಮೂಲಕ ಸಂಚರಿಸಲಿದೆ.

ಸೆಪ್ಟೆಂಬರ್ 10 ಮತ್ತು 11, 2024ರಂದು ಹೊರಡುವ ರೈಲು ಸಂಖ್ಯೆ 16593 ಕೆಎಸ್ಆರ್ ಬೆಂಗಳೂರು-ನಾಂದೇಡ್ ಎಕ್ಸ್ ಪ್ರೆಸ್ ರೈಲು ಪೆನುಕೊಂಡ, ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ & ಧರ್ಮಾವರಂ ನಿಲ್ದಾಣಗಳ ಮೂಲಕ ಸಂಚರಿಸಲಿದೆ.

Continue Reading

ಪ್ರಮುಖ ಸುದ್ದಿ

CET/NEET: ಮೊದಲ ಬಾರಿಗೆ ಆನ್ ಲೈನ್ ಪಾವತಿ ಜಾರಿ, ಒಳ್ಳೆಯ ಪ್ರತಿಕ್ರಿಯೆ

CET/NEET: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ (CET/NEET) ಪ್ರವೇಶ ಪ್ರಕ್ರಿಯೆ ಆರಂಭವಾದ ಮೊದಲ ದಿನವೇ (ಶನಿವಾರ) ದಾಖಲೆಯ 16 ಸಾವಿರಕ್ಕೂ ಹೆಚ್ಚು ಮಂದಿ ತಮ್ಮ ಇಚ್ಛೆಯ ಛಾಯ್ಸ್ ದಾಖಲು ಮಾಡಿದ್ದಾರೆ.

VISTARANEWS.COM


on

UPSC
Koo

ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ (CET/NEET) ಪ್ರವೇಶ ಪ್ರಕ್ರಿಯೆ ಆರಂಭವಾದ ಮೊದಲ ದಿನವೇ (ಶನಿವಾರ) ದಾಖಲೆಯ 16 ಸಾವಿರಕ್ಕೂ ಹೆಚ್ಚು ಮಂದಿ ತಮ್ಮ ಇಚ್ಛೆಯ ಛಾಯ್ಸ್ ದಾಖಲು ಮಾಡಿದ್ದಾರೆ. 3000 ಕ್ಕೂ ಹೆಚ್ಚು ಮಂದಿ ಶುಲ್ಕ ಪಾವತಿ ಮಾಡಿ, ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡಿದ್ದಾರೆ.

ಇದೇ ಮೊದಲ ಬಾರಿಗೆ ಇಂಟರ್ ನೆಟ್ ಬ್ಯಾಂಕಿಂಗ್, ಡೆಬಿಟ್/ಕೆಡಿಟ್ ಕಾರ್ಡ್ ಮೂಲಕ ಶುಲ್ಕ ಪಾವತಿಸುವುದಕ್ಕೂ ಅವಕಾಶ ಕಲ್ಪಿಸಿದ್ದರಿಂದ ಇಡೀ ಪ್ರಕ್ರಿಯೆ ಸರಳವಾಯಿತು. ಇದರಿಂದ ಪೋಷಕರಿಗೂ ಸಂತಸವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಚಲನ್‌ ಡೌನ್‌ ಲೋಡ್ ಮಾಡಿಕೊಂಡು ಬ್ಯಾಂಕಿಗೆ ಹೋಗಿ ಶುಲ್ಕ ಪಾವತಿಸುವ ವ್ಯವಸ್ಥೆ ಕೂಡ‌ ಇದ್ದು, ಅದರ ಮೂಲಕವೂ‌ 2000 ಮಂದಿ (ರಾತ್ರಿ 8ಕ್ಕೆ) ಶುಲ್ಕ ಪಾವತಿಸಿದ್ದಾರೆ. ಆನ್ ಲೈನ್ ಮೂಲಕ ಒಂದು ಸಾವಿರ ಮಂದಿ ಪಾವತಿಸಿದ್ದಾರೆ ಎಂದು ವಿವರಿಸಿದ್ದಾರೆ.

ವೈದ್ಯಕೀಯ ಕೋರ್ಸ್ ಪ್ರವೇಶ ಪಡೆದ ಕೆಲವರು‌ ತಮ್ಮ ಗರಿಷ್ಠ ಮೊತ್ತದ ಶುಲ್ಕ‌ವನ್ನೂ (6.09 ಲಕ್ಷ) ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಪಾವತಿ‌ ಮಾಡಿದ್ದಾರೆ. ಅಭ್ಯರ್ಥಿಗಳು ಅಥವಾ ಅವರ ಪೋಷಕರು ತಮ್ಮ ಬ್ಯಾಂಕಿನಿಂದ ಪಾವತಿ‌ ಮಾಡುವ ಮಿತಿಯನ್ನು ಹೆಚ್ವಿಸಿಕೊಳ್ಳಲು ಅವಕಾಶ ಇದ್ದು, ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು‌ ಹೇಳಿದರು. ಎಚ್ ಡಿಎಫ್ ಸಿ ಬ್ಯಾಂಕ್ ತನ್ನ ಗ್ರಾಹರಿಗೆ ಒಮ್ಮೆಗೇ ಗರಿಷ್ಠ 50 ಲಕ್ಷ ರೂಪಾಯಿ ವರೆಗೆ ವರ್ಗಾಯಿಸಲು ಅವಕಾಶ ನೀಡಿದೆ. ಇದೇ ರೀತಿ ಇತರ ಬ್ಯಾಂಕ್ ಗಳೂ ಈ ನಿಟ್ಟಿನಲ್ಲಿ ಪ್ರಯತ್ನ‌ ನಡೆಸುತ್ತಿದ್ದು ಇದರಿಂದ ಎನ್ಆರ್ ಐ ಮತ್ತು ಮ್ಯಾನೇಜ್ಮೆಂಟ್ ಸೀಟುಗಳ ಶುಲ್ಕವನ್ನು ಒಮ್ನೆಗೆ ಪಾವತಿಸಲು ಅನುಕೂಲವಾಗಲಿದೆ ಎಂದಿದ್ದಾರೆ. ಹೊಸ ವ್ಯವಸ್ಥೆಯಿಂದಾಗಿ ಬ್ಯಾಂಕ್ ರಜೆ ಇತ್ಯಾದಿ ಕಾರಣಕ್ಕೆ ಶುಲ್ಕ ಪಾವತಿ ಮಾಡಲು ಸಾಧ್ಯವಾಗಲಿಲ್ಲ ಎನ್ನುವ ದೂರುಗಳು ಕಡಿಮೆ ಆಗಬಹುದು. ನಾಳೆ ಭಾನುವಾರ ಇದ್ದರೂ ಶುಲ್ಕ ಪಾವತಿಗೆ ಯಾವ ಸಮಸ್ಯೆಯೂ ಇರುವುದಿಲ್ಲ ಎಂದು ಅವರು ಹೇಳಿದ್ದಾರೆ. ಯುಪಿಐ ಪಾವತಿ ವ್ಯವಸ್ಥೆ ಮೂಲಕವೂ ಶುಲ್ಕ ಪಾವತಿ ಮಾಡಬಹುದಾಗಿದೆ. ಒಟ್ಟಾರೆ ಪಾವತಿ ವ್ಯವಸ್ಥೆಯನ್ನು ಜನಸ್ನೇಹಿ‌ ಮಾಡಿರುವ ಕಾರಣಕ್ಕೆ ತಾಂತ್ರಿಕ ಸಮಸ್ಯೆಗಳು ಕಡಿಮೆ ಆಗುವ ವಿಶ್ವಾಸವಿದೆ‌ ಎಂದರು.

ಸರ್ವರ್ ಸಮಸ್ಯೆ

ಚಾಯ್ಸ್ ಆಯ್ಕೆ ನಂತರ ಶುಲ್ಕ ಪಾವತಿ ಮಾಡಲು ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಒಮ್ಮೆಗೇ ಪ್ರಯತ್ನ ನಡೆಸಿದ್ದರಿಂದ ಕೆಲವೊಮ್ಮೆ ಸರ್ವರ್ ನಿಧಾನ/ ಇನ್ನು ಕೆಲವೊಮ್ಮೆ ಸ್ಥಗಿತಗೊಂಡ ಪ್ರಸಂಗ ಕೂಡ ನಡೆಯಿತು. ತಾಂತ್ರಿಕ ಸಿಬ್ಬಂದಿ ಸರಿ ಮಾಡಿ ನಂತರ ಸಹಜ ಸ್ಥಿತಿಗೆ ತಂದರು.

Continue Reading

ಕ್ರೈಂ

Protest: ಲವ್ ಜಿಹಾದ್ ಆರೋಪ: ಪೊಲೀಸ್ ಠಾಣೆ ಎದುರು ಶ್ರೀರಾಮ ಸೇನೆ ಕಾರ್ಯಕರ್ತರಿಂದ ಪ್ರತಿಭಟನೆ

ಧಾರವಾಡದಲ್ಲಿ ಲವ್ ಜಿಹಾದ್ ಪ್ರಕರಣ ನಡೆದಿದೆ ಎಂದು ಆರೋಪಿಸಿ ಶ್ರೀರಾಮ ಸೇನೆಯ ಕಾರ್ಯಕರ್ತರು ಧಾರವಾಡ ಉಪನಗರ ಠಾಣೆ ಎದುರು ಪ್ರತಿಭಟನೆ (Protest) ನಡೆಸಿದರು. ಘಟನೆಗೆ ಕಾರಣವಾದ ಳಗಾವಿ ಜಿಲ್ಲೆಯ ರಾಮದುರ್ಗದ ಮುನ್ನಾ ಮೇಲೆ ಕಿಡ್ನಾಪ್ ಕೇಸ್ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

VISTARANEWS.COM


on

By

Protest
Koo

ಧಾರವಾಡ: ಲವ್ ಜಿಹಾದ್ (love jihad) ನಡೆದಿದೆ ಎಂದು ಆರೋಪಿಸಿ ಧಾರವಾಡ (Dharwad) ಉಪನಗರ ಠಾಣೆ ಎದುರು ಶ್ರೀರಾಮ‌ ಸೇನೆ (sriram sene) ಸಂಘಟನೆಯ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ (Protest) ನಡೆಸಿದರು. ಜುಲೈ 11 ರಂದು ಆಂಜನೇಯ ನಗರದ ವಿವಾಹಿತ ಮಹಿಳೆಯು ಬೆಳಗಾವಿ ಜಿಲ್ಲೆಯ ರಾಮದುರ್ಗದವನಾಗಿರುವ ಮುನ್ನಾ ಎಂಬಾತನ ಜೊತೆ ಹೋಗಿದ್ದು ಇದನ್ನು ಲವ್ ಜಿಹಾದ್ ಎನ್ನಲಾಗಿದೆ.

ವಿವಾಹಿತ ಮಹಿಳೆ ತಂಗೆಮ್ಮಾ (20) ಬೆಳಗಾವಿ ಜಿಲ್ಲೆಯ ರಾಮದುರ್ಗದವನಾಗಿರುವ ಮುನ್ನಾ ಎಂಬಾತನೊಂದಿಗೆ ಹೋಗಿದ್ದಾಳೆ. ಮೂರು ತಿಂಗಳ ಹಿಂದೆ ಧಾರವಾಡ ಆಂಜನೇಯನಗರದ ತಂಗೆಮ್ಮ ತವರು ಮನೆಯ ಎದುರು ಮನೆಗೆ ಮುನ್ನಾ ಬಾಡಿಗೆಗೆ ಬಂದಿದ್ದ ಎನ್ನಲಾಗಿದೆ.

ಈ ವೇಳೆ ತಂಗೆಮ್ಮಳ‌ ಜೊತೆ ಪರಿಚಯ ಮಾಡಿಕೊಂಡಿದ್ದ ಮುನ್ನಾ ತಂಗೆಮ್ಮಳ‌ ಜೊತೆ ಒಡಿಹೋಗಿದ್ದಾನೆ. ಆತನಿಗೆ ಈಗಾಗಲೇ ಮದುವೆ ಆಗಿದೆ. ಆದರೂ ತಂಗೆಮ್ಮ ಗಂಡ, ಮುನ್ನಾ ಪತ್ನಿ ಮತ್ತು ಮಕ್ಕಳನ್ನ ಬಿಟ್ಟು ಓಡಿ‌ ಹೋಗಿದ್ದಾರೆ.
ಸದ್ಯ ಉಪನಗರ ಪೊಲೀಸರು ತಂಗೆಮ್ಮ ಕಾಣೆಯಾದ ದೂರನ್ನು ದಾಖಲಿಸಿಕೊಂಡಿದ್ದಾರೆ. ಇದು ಅಪಹರಣವಲ್ಲ. ಲವ್ ಜಿಹಾದ್ ಎಂದು ಆರೋಪಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ತಂಗೆಮ್ಮ ಪೋಷಕರನ್ನು ಕರೆ ತಂದು ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಮುನ್ನಾ ಮೇಲೆ ಕಿಡ್ನಾಪ್ ಕೇಸ್ ಹಾಕಬೇಕು, ಒಂದು‌ ವಾರದಲ್ಲಿ ತಂಗೆಮ್ಮ ಹಾಗೂ ಮುನ್ನಾರನ್ನು ಕರೆ ತರುವಂತೆ ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ 44 ಸಾವಿರ ಹಿಂದೂ ಯುವತಿಯರು ಕಾಣೆಯಾಗಿದ್ದಾರೆ. ಆದರೆ ಪೊಲೀಸರು ಕೆಲವು ಕಾಣೆಯಾದ ಪ್ರಕರಣ ಮಾತ್ರ ತೆಗೆದುಕೊಂಡಿದ್ದಾರೆ ಎಂದು ಶ್ರೀರಾಮ ಸೇನೆ ಆರೋಪಿಸಿದೆ.

ಇದನ್ನೂ ಓದಿ: Assault Case : ನಡುರಸ್ತೆಯಲ್ಲೇ ಜಾಡಿಸಿ ಒದ್ದು, ಥೂ ಎಂದು ಉಗಿದಾಡಿಕೊಂಡ ಖಾಸಗಿ ಬಸ್‌ಗಳ ಸಿಬ್ಬಂದಿ

ಕಾಣೆಯಾಗಿದ್ದ ನವ ವಿವಾಹಿತೆ ಬಾವಿಯಲ್ಲಿ ಜೀವಂತವಾಗಿ ಪತ್ತೆ!

ಕಾಣೆಯಾಗಿದ್ದ ಮಹಿಳೆ ಬಾವಿಯಲ್ಲಿ ಜೀವಂತವಾಗಿ ಪತ್ತೆಯಾಗಿರುವ ವಿಚಿತ್ರ ಘಟನೆ ಗದಗ ಜಿಲ್ಲೆ ತೋಟಗಂಟಿ ಗ್ರಾಮದಲ್ಲಿ ನಡೆದಿದೆ. ಮೂರು ದಿನ ಬಾವಿಯಲ್ಲಿದ್ದ ಮಹಿಳೆ ಬದುಕಿದ್ದೇ ಪವಾಡ. ಅಸ್ವಸ್ಥಳಾಗಿದ್ದ ಮಹಿಳೆಗೆ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಆದರೆ ಮಹಿಳೆ ಬಾವಿಗೆ‌ ಬಿದ್ದಿದ್ದು ಹೇಗೆ ಎಂಬ ಮಾಹಿತಿ ಕೇಳಿ ಗ್ರಾಮದ ಜನರು ಶಾಕ್‌ ಆಗಿದ್ದಾರೆ.

ಮಹಿಳೆ ಹೇಳುವ ಪ್ರಕಾರ ಯಾರೋ ನನ್ನ ಎಳೆದುಕೊಂಡು ಹೋದರು ಎನ್ನುತ್ತಿದ್ದಾಳೆ.

ಆರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತೆ ಆಗಸ್ಟ್‌ 20 ರಂದು ನಸುಕಿನ ಜಾವ ಮನೆಯ ಅಂಗಳದಲ್ಲಿ ಕೆಲಸ ಮಾಡುತ್ತಿದ್ದಳು. ಅಲ್ಲಿಗೆ ಬಂದ ಅಪರಿಚಿತ ಮಹಿಳೆಯೊಬ್ಬಳು ಆಕೆಯನ್ನು ಎಳೆದುಕೊಂಡು ಹೋಗಿದ್ದಾಳೆ ಎನ್ನುತ್ತಿದ್ದಾಳೆ.

ನವವಿವಾಹಿತೆಯ ಕುತ್ತಿಗೆ ಭಾಗ ಹಿಡಿದು ಮನೆ ಬಿಟ್ಟು ಬರುವಂತೆ ಬಲವಂತ ಮಾಡಿದ್ದಾಳೆ. ಮಾತ್ರವಲ್ಲದೇ ನನ್ನ ಕೈಬಳೆ, ಕಾಲುಂಗರ ನೀಡುವಂತೆ ಅಪರಿಚಿತ ಮಹಿಳೆ ಒತ್ತಾಯ ಮಾಡಿದ್ದಳು. ಇನ್ನು ನನ್ನ ಕಣ್ಣಿಗೆ ಕಾಣದಂತೆ ಮರೆಯಾಗಿ ಕುತ್ತಿಗೆ ಹಿಡಿದು ಭಯಪಡಿಸಿದ್ದಳಂತೆ.

ಗೋವಿ‌ನ ಜೋಳ ಹೊಲದ ಮೂಲಕ ನನ್ನನ್ನು ಎಳೆದುಕೊಂಡು ಹೋಗಿ ಅನಂತರ ತಾಳಿ ಕೇಳಿ ನನ್ನನ್ನು ಬಾವಿಗೆ ತಳ್ಳಿದ್ದಳು. ಬಾವಿಗೆ ಬಿದ್ದ ಮಾರನೇ ದಿನ ನನಗೆ ಪ್ರಜ್ಞೆ ಬಂದಿತ್ತು. ಆಗ ಎಷ್ಟೇ ಕಿರುಚಿದರೂ ಸಹಾಯಕ್ಕೆ ಯಾರು ಬರಲಿಲ್ಲ.

ಆ. 22 ರಂದು ಧ್ವನಿ ಕೇಳಿದ ಜನರು ನನ್ನ ಕಾಪಾಡಿದ್ದಾರೆ. ಆದರೆ ಯಾರು ನನ್ನ ಹೀಗೆ ಎಳೆದುಕೊಂಡು ಹೋದರು ಎನ್ನುವ ನಿಖರ ಮಾಹಿತಿ ಇಲ್ಲ ಎಂದಿದ್ದಾಳೆ.

ಈ ವಿಚಿತ್ರ ರೀತಿಯ ಘಟನೆಗೆ ಗ್ರಾಮದ ಇತರೆ ಮಹಿಳೆಯರು ಆತಂಕಗೊಂಡಿದ್ದಾರೆ. ನಸುಕಿನ ಜಾವ ಓಡಾಡಲು ಹೆದರುವಂತಾಗಿದೆ. ಸದ್ಯ ಈ ಸಂಬಂಧ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಪೊಲೀಸರನ್ನು ಸಂಪರ್ಕಿಸಿದ್ದರೋ ಇಲ್ಲವೋ ಎನ್ನುವ ಕುರಿತು ಯಾವುದೇ ಮಾಹಿತಿ ಇಲ್ಲ.

Continue Reading
Advertisement
Action Prince Dhruva Sarja much awaited film Martin to hit the screens on October 11
ಸಿನಿಮಾ4 ಗಂಟೆಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Actor Darshan
ಬೆಂಗಳೂರು5 ಗಂಟೆಗಳು ago

Parappana Agrahara : ಜೈಲಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಕೇಸ್; ಕ್ಲೈ ಮ್ಯಾಕ್ಸ್ ಹಂತದಲ್ಲಿ ರಿವೈಲ್ ಆಯ್ತು ಜೈಲಿನೊಳಗಿನ ಅಂದರ್ ಕಿ ದರ್ಬಾರ್!

Bengaluru News
ಬೆಂಗಳೂರು7 ಗಂಟೆಗಳು ago

Bengaluru News : ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನ; ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಕುಟುಂಬ

HD kumaraswamy And Vijayetata
ಬೆಂಗಳೂರು8 ಗಂಟೆಗಳು ago

HD Kumaraswamy : ಎಲೆಕ್ಷನ್‌ಗೆ 50 ಕೋಟಿ ರೂ.ಗೆ ಡಿಮ್ಯಾಂಡ್‌ ಮಾಡಿ ಉದ್ಯಮಿಗೆ ಬೆದರಿಕೆ; ಎಚ್‌ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

Karnataka weather Forecast
ಪ್ರಮುಖ ಸುದ್ದಿ9 ಗಂಟೆಗಳು ago

Karnataka Rain : ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ; ಹೈರಾಣಾದ ವಾಹನ ಸವಾರರು

MLA Muniratna
ಬೆಂಗಳೂರು9 ಗಂಟೆಗಳು ago

MLA Muniratna: ಶಾಸಕ ಮುನಿರತ್ನ ಕೇಸ್‌; ರಾಜಕಾರಣಿಗಳ ಹನಿಟ್ರ್ಯಾಪ್‌ ಮಾಡುತ್ತಿದ್ದ ರೂಮಿನ ಸ್ಥಳ ಮಹಜರು ಮಾಡಿದ ಎಸ್‌ಐಟಿ ಅಧಿಕಾರಿಗಳು

Power cut off due to a technical problem in the transformer Bengaluru faces water crisis today
ಬೆಂಗಳೂರು11 ಗಂಟೆಗಳು ago

Water supply: ಟ್ರಾನ್ಸಫಾರ್ಮರ್‌ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ವಿದ್ಯುತ್‌ ಸಂಪರ್ಕ ಕಡಿತ; ಬೆಂಗಳೂರಿಗೆ ಇಂದು ನೀರಿನ ಸಮಸ್ಯೆ

Gandhi Jayanti 2024
ಬೆಂಗಳೂರು11 ಗಂಟೆಗಳು ago

Gandhi Jayanti 2024: ಗಾಂಧಿ ಜಯಂತಿ ಹಿನ್ನೆಲೆ ಸರ್ಕಾರಿ ಯೋಜನೆಗಳ ಅರಿವು ಮೂಡಿಸಿದ ಎನ್‌ಸಿಸಿ ಕೆಡೆಟ್‌ಗಳು

Drugs Mafia
ಕೊಡಗು12 ಗಂಟೆಗಳು ago

Drugs Mafia: ಥೈಲ್ಯಾಂಡ್ ಟು ದುಬೈ ಡ್ರಗ್‌ ಮಾಫಿಯಾಗೆ ಇಂಡಿಯಾನೆ ಮೈನ್ ಲಿಂಕ್; 3 ಕೋಟಿ ಮೌಲ್ಯದ ಗಾಂಜಾ ವಶ

Mysuru Dasara 2024
ಮೈಸೂರು13 ಗಂಟೆಗಳು ago

Mysuru Dasara 2024: ವೈಭವದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಿಸಿದ ಹಿರಿಯ ಸಾಹಿತಿ ಡಾ. ಹಂಪ ನಾಗರಾಜಯ್ಯ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ4 ಗಂಟೆಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌