Rahul Dravid: ದ್ರಾವಿಡ್​ಗೆ ಗಾರ್ಡ್‌ ಆಫ್‌ ಹಾನರ್‌ ಸಲ್ಲಿಸಿದ ವಿದ್ಯಾರ್ಥಿಗಳು; ವಿಡಿಯೊ ವೈರಲ್​ - Vistara News

ಕ್ರೀಡೆ

Rahul Dravid: ದ್ರಾವಿಡ್​ಗೆ ಗಾರ್ಡ್‌ ಆಫ್‌ ಹಾನರ್‌ ಸಲ್ಲಿಸಿದ ವಿದ್ಯಾರ್ಥಿಗಳು; ವಿಡಿಯೊ ವೈರಲ್​

Rahul Dravid: ರಾಹುಲ್​ ದ್ರಾವಿಡ್​ ಅವರು ಎನ್​ಸಿಎ ಕ್ರಿಕೆಟ್​ ಅಕಾಡೆಮಿಗೆ(cricket academy in Bengaluru) ಆಗಮಿಸುತ್ತಿದ್ದಂತೆ ಅಧಿಕಾರಿಗಳು ಮತ್ತು ಇಲ್ಲಿ ಕ್ರಿಕೆಟ್​ ಅಭ್ಯಾಸ ನಡೆಸುತ್ತಿರುವ ವಿದ್ಯಾರ್ಥಿಗಳು ಬ್ಯಾಟ್​ ಎತ್ತಿ ಗಾರ್ಡ್‌ ಆಫ್‌ ಹಾನರ್‌ ಮೂಲಕ ಗೌರವ ಸಲ್ಲಿಸಿದರು.

VISTARANEWS.COM


on

Rahul Dravid
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಟಿ20 ವಿಶ್ವಕಪ್​ ವಿಜೇತ ಭಾರತ ತಂಡದ ಮಾಜಿ ಮುಖ್ಯ ಕೋಚ್​ ರಾಹುಲ್​ ದ್ರಾವಿಡ್(Rahul Dravid)​ ಅವರಿಗೆ ಬೆಂಗಳೂರಿನ(Bengaluru) ಕ್ರಿಕೆಟ್​ ಅಕಾಡೆಮಿಯಲ್ಲಿ ಕ್ರಿಕೆಟ್​ ವಿದ್ಯಾರ್ಥಿಗಳು ಗಾರ್ಡ್‌ ಆಫ್‌ ಹಾನರ್‌ (ಗೌರವ ವಂದನೆ) ಮೂಲಕ(guard of honour) ಅಭಿನಂದಿಸಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ರಾಹುಲ್​ ದ್ರಾವಿಡ್​ ಅವರು ಎನ್​ಸಿಎ ಕ್ರಿಕೆಟ್​ ಅಕಾಡೆಮಿಗೆ(cricket academy in Bengaluru) ಆಗಮಿಸುತ್ತಿದ್ದಂತೆ ಅಧಿಕಾರಿಗಳು ಮತ್ತು ಇಲ್ಲಿ ಕ್ರಿಕೆಟ್​ ಅಭ್ಯಾಸ ನಡೆಸುತ್ತಿರುವ ವಿದ್ಯಾರ್ಥಿಗಳು ಬ್ಯಾಟ್​ ಎತ್ತಿ ಗಾರ್ಡ್‌ ಆಫ್‌ ಹಾನರ್‌ ಮೂಲಕ ಗೌರವ ಸಲ್ಲಿಸಿದರು. ದ್ರಾವಿಡ್​ ಕೂಡ ಸಂತಸದಿಂದಲೇ ಎಲ್ಲರ ಕೈ ಕುಲುಕಿ ಧನ್ಯವಾದ ತಿಳಿಸಿದರು. ಭಾರತ ಟಿ20 ವಿಶ್ವಕಪ್​ ಗೆಲ್ಲುವಲ್ಲಿ ದ್ರಾವಿಡ್​ ಅವರ ಮಾರ್ಗದರ್ಶನ ಅಮೋಘವಾಗಿತ್ತು.

1996ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ರಾಹುಲ್‌ ದ್ರಾವಿಡ್‌ 2012ರ ವರೆಗೆ ಭಾರತ ತಂಡದ ಪರವಾಗಿ ಆಡಿದ್ದರು. ಆದರೆ ವಿಶ್ವಕಪ್ ಎನ್ನುವುದು ಅವರಿಗೆ ಕನಸಾಗಿತ್ತು. ಈ ಕೊರಗು ಕೂಡ ಅವರಲ್ಲಿತ್ತು. ನಾಯಕನಾಗಿ, ಆಟಗಾರನಾಗಿ ಗೆಲ್ಲಲಾಗದ ವಿಶ್ವಕಪ್‌ ಅನ್ನು ತರಬೇತುದಾರನಾಗಿ ಗಳಿಸಿಕೊಂಡಿದ್ದಾರೆ. ಅದು ಕೂಡ ತಮ್ಮ ಕೊನೆಯ ಮಾರ್ಗದರ್ಶನದಲ್ಲಿ ಎನ್ನುವುದು ವಿಶೇಷ.

2007ರಲ್ಲಿ ವೆಸ್ಟ್​ ಇಂಡೀಸ್​ನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ರಾಹುಲ್​ ದ್ರಾವಿಡ್​ ಅವರ ನಾಯಕತ್ವದಲ್ಲಿ ಭಾರತ ಅತ್ಯಂತ ಕಳಪೆ ಪ್ರದರ್ಶನ ತೋರುವ ಮೂಲಕ ಲೀಗ್​ ಹಂತದಿಂದಲೇ ನಿರ್ಗಮಿಸಿತ್ತು. ದುರ್ಬಲ ಬಾಂಗ್ಲಾದೇಶ ವಿರುದ್ದವೂ ಕೂಡ ಗೆಲುವು ಸಾಧಿಸಲು ಸಾಧ್ಯವಾಗ ಅವಮಾನಕ್ಕೆ ಸಿಲುಕಿತ್ತು. ಅಂದು ಅವಮಾನ ಎದುರಿಸಿದ ವಿಂಡೀಸ್​ ನೆಲದಲ್ಲೇ ಇದೀಗ ದ್ರಾವಿಡ್​ ತರಬೇತುದಾರನಾಗಿ ವಿಶ್ವಕಪ್​ ಕಪ್​ ಗೆದ್ದು ಸಂಭ್ರಮಿಸಿ ತಮ್ಮ ಎಲ್ಲ ಹಿಂದಿನ ನೋವನ್ನು ಮರೆತಿದ್ದಾರೆ. ಸದ್ಯ ಕೋಚ್​ ಹುದ್ದೆಯಿಂದ ಕೆಳಗಿಳಿದಿರುವ ದ್ರಾವಿಡ್​ ತಮ್ಮ ಇಬ್ಬರು ಮಕ್ಕಳ ಕ್ರಿಕೆಟ್​ ಭವಿಷ್ಯ ರೂಪಿಸುವಲ್ಲಿ ಹೆಚ್ಚಿನ ಕಾಳಜಿ ವಹಿಸಿಕೊಳ್ಳಬಹುದು.

ಇದನ್ನೂ ಓದಿ Rahul Dravid : ರಾಹುಲ್ ದ್ರಾವಿಡ್​ಗೆ ಭಾರತ ರತ್ನ ಕೊಡಿ; ಕೇಂದ್ರ ಸರ್ಕಾರಕ್ಕೆ ಗವಾಸ್ಕರ್ ಮನವಿ

ದ್ರಾವಿಡ್​ಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಒತ್ತಾಯಿಸಿದ ಗವಾಸ್ಕರ್


ಪ್ರಧಾನ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ ಅವರಿಗೆ “ಭಾರತ ರತ್ನ” ಪ್ರಶಸ್ತಿಯಿಂದ ಗೌರವಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುನೀಲ್ ಗವಾಸ್ಕರ್ ಒತ್ತಾಯಿಸಿದ್ದಾರೆ. “ಭಾರತ ಸರಕಾರವು ದ್ರಾವಿಡ್​ಗೆ ಭಾರತ ರತ್ನ ಪ್ರಶಸ್ತಿಯಿಂದ ಗೌರವಿಸಿದರೆ ಅದು ಅವರಿಗೆ ಸಲ್ಲುವ ಸೂಕ್ತ ಗೌರವವಾಗುತ್ತದೆ. ಈ ಗೌರವಕ್ಕೆ ಅವರು ಸಂಪೂರ್ಣವಾಗಿ ಅರ್ಹರಾಗಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ದ್ರಾವಿಡ್​ ಆಟಗಾರರಾಗಿ ಮತ್ತು ತಂಡದ ನಾಯಕರಾಗಿ ವಿದೇಶಗಳಲ್ಲಿ ಭಾರತಕ್ಕೆ ಗೆಲುವು ತಂದು ಕೊಟ್ಟಿದ್ದಾರೆ. ವೆಸ್ಟ್ ಇಂಡೀಸ್​ನಲ್ಲಿ ಗೆಲ್ಲುವುದು ಅಸಾಧ್ಯ ಎಂಬ ಕಾಲದಲ್ಲಿ ಅವರು ಭಾರತಕ್ಕೆ ಸರಣಿ ಗೆಲುವನ್ನು ತಂದಿದ್ದಾರೆ. ಇಂಗ್ಲೆಂಡ್​ನಲ್ಲಿ ಟೆಸ್ಟ್ ಸರಣಿಗಳನ್ನು ಗೆದ್ದಿರುವ ಕೇವಲ ಮೂರು ಭಾರತೀಯ ನಾಯಕರ ಪೈಕಿ ಅವರು ಕೂಡ ಒಬ್ಬರಾಗಿದ್ದಾರೆ. ಈ ಹಿಂದೆ, ಅವರು ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ಅಧ್ಯಕ್ಷರಾಗಿ ಅತ್ಯುತ್ತಮ ಕ್ರಿಕೆಟ್ ಪ್ರತಿಭೆಗಳನ್ನು ಹೊರತಂದಿದ್ದಾರೆ. ಬಳಿಕ ಭಾರತೀಯ ಹಿರಿಯರ ಕ್ರಿಕೆಟ್ ತಂಡದ ಕೋಚ್ ಆಗಿ ಉತ್ತಮ ನಿರ್ವಹಣೆ ನೀಡಿದ್ದಾರೆ ಎಂದು ಗವಾಸ್ಕರ್​ ಬರೆದುಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

R Ashwin : ಸುನೀಲ್ ನರೈನ್ ರೀತಿ ಆರಂಭಿಕರಾಗಿ 20 ಎಸೆತಕ್ಕೆ 45 ರನ್ ಬಾರಿಸಿದ ಆರ್.​ ಅಶ್ವಿನ್​; ಇಲ್ಲಿದೆ ವಿಡಿಯೊ

R Ashwin : ಟಿಎನ್​ಪಿಎಲ್​​ ಪ್ರಸಕ್ತ ಋತುವಿನಲ್ಲಿ ಆರ್ ಅಶ್ವಿನ್ ದಿಂಡಿಗಲ್ ಪರ ಬ್ಯಾಟಿಂಗ್ ಆರಂಭಿಸುತ್ತಿದ್ದಾರೆ. ತಿರುಚ್ಚಿ ಮತ್ತು ಸೇಲಂ ವಿರುದ್ಧ ಕೇವಲ 5 ಮತ್ತು 6 ರನ್ ಗಳಿಸಿದ್ದ ಅಶ್ವಿನ್ ಅಂತಿಮವಾಗಿ ಅಜೇಯ 45 ರನ್ ಗಳಿಸುವ ಮೂಲಕ ತಮ್ಮ ಹೊಣೆಗಾರಿಕೆ ಪ್ರದರ್ಶಿಸಿದರು.

VISTARANEWS.COM


on

R Ashwin
Koo

ಕೊಯಮತ್ತೂರು: ಕೊಯಮತ್ತೂರಿನಲ್ಲಿ ಭಾನುವಾರ ನಡೆದ ತಮಿಳುನಾಡು ಪ್ರೀಮಿಯರ್ ಲೀಗ್ (TNPL) ಪಂದ್ಯದಲ್ಲಿ ದಿಂಡಿಗಲ್ ಡ್ರಾಗನ್ಸ್ ಪರ ಆಡಿದ ಭಾರತ ತಂಡದ ಸ್ಪಿನ್ನ ಬೌಲರ್​ ಆರ್​. ಅಶ್ವಿನ್ ಕೆಕೆಆರ್​ ಪರ ಸುನೀಲ್ ನರೈನ್ ಅವರಂತೆಯೇ ಅಬ್ಬರದ ಬ್ಯಾಟಿಂಗ್​ ಪ್ರದರ್ಶಿಸಿ ಗಮನ ಸೆಳೆದಿದ್ದಾರೆ. ಚೆಪಾಲ್ ಸೂಪರ್ ಗಿಲ್ಲಿಸ್ ವಿರುದ್ಧ ಪಂದ್ಯದಲ್ಲಿ ಅವರು ಕೇವಲ 25 ಎಸೆತಗಳಲ್ಲಿ 45 ರನ್ ಗಳಿಸಿದ್ದಾರೆ.

ಪಂದ್ಯದ ಎರಡನೇ ಓವರ್​ನಲ್ಲಿ ದಿಂಡಿಗಲ್ ಡ್ರ್ಯಾಗನ್ಸ್ 3 ವಿಕೆಟ್ ನಷ್ಟಕ್ಕೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಅಭಿಷೇಕ್ ತನ್ವರ್ ಮೊದಲ ಓವರ್​ನಲ್ಲಿ ಎರಡು ಆರಂಭಿಕ ವಿಕೆಟ್​ಗಳನ್ನು ಪಡೆದರೆ, ರಾಹಿಲ್ ಶಾ ಎರಡನೇ ಓವರ್​ನಲ್ಲಿ ಬಾಬಾ ಇಂದ್ರಜಿತ್ ಅವರ ವಿಕೆಟ್ ಪಡೆದರು. 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಆರ್.ವಿಮಲ್ ಕುಮಾರ್, ಗಣೇಶನ್ ಪೆರಿಯಸ್ವಾಮಿ ಹಾಕಿದ ಓವರ್​ನಲ್ಲಿ ಎರಡು ಬೌಂಡರಿಗಳನ್ನು ಬಾರಿಸಿದ ಒತ್ತಡ ಕಡಿಮೆ ಮಾಡಲು ನೆರವಾದರು. ಆದಾಗ್ಯೂ, ಆರ್ ಅಶ್ವಿನ್ ಅವರು ನಾಲ್ಕನೇ ಓವರ್​ನಲ್ಲಿ ರಾಹಿಲ್ ಶಾ ಓವರ್​ಗೆ ಎರಡು ಸಿಕ್ಸರ್ ಮತ್ತು ಒಂದು ಬೌಂಡರಿಗೆ ಹೊಡೆದು ತಮ್ಮ ಅಬ್ಬರದ ಆಟ ಆರಂಭಿಸಿದರು.

ಐದನೇ ಓವರ್ ನ ಮೊದಲ ಎಸೆತದಲ್ಲಿ ವಿಮಲ್ ಕುಮಾರ್ ಔಟಾದ ಕಾರಣ ಆರ್​. ಅಶ್ವಿನ್ ಪಾಲುದಾರರನ್ನು ಕಳೆದುಕೊಂಡರು. ಆದಾಗ್ಯೂ, ಬಾಲು ಸೂರ್ಯ ವಿರುದ್ಧದ ಓವರ್​ನಲ್ಲಿ ಅಶ್ವಿನ್ ಎರಡು ಬೌಂಡರಿ ಹೊಡೆದರು. ಅಭಿಷೇಕ್ ತನ್ವರ್ ವಿರುದ್ಧ ಆರನೇ ಓವರ್​ನಲ್ಲಿ ಅಶ್ವಿನ್ ಎರಡು ಸಿಕ್ಸರ್​​ ಬಾರಿಸುವ ಮೂಲಕ ದಿಂಡಿಗಲ್ 7 ಓವರ್​​ನಲ್ಲಿ 6 ವಿಕೆಟ್ ನಷ್ಟಕ್ಕೆ 64 ರನ್ ಪೇರಿಸುವಂತೆ ಮಾಡಿದರು.

ಇದನ್ನೂ ಓದಿ: Paris Olympics 2024 : ಟೋಕಿಯೊದಲ್ಲಿ ನಡೆದ 2020ರ ಒಲಿಂಪಿಕ್ಸ್​ನಲ್ಲಿ ಭಾರತ ಗೆದ್ದ ಪದಕಗಳ ಸಂಖ್ಯೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

ಸ್ಪಿನ್ನರ್​ಗಳ ವಿರುದ್ಧ ಬೃಹತ್ ಸಿಕ್ಸರ್ಗಳನ್ನು ಬಾರಿಸಿ ಮೇಲಗೈ ಸಾಧಿಸಿದರು. ಈ ಮೂಲಕ ಐಪಿಎಲ್ 2024 ರಲ್ಲಿ ಕೆಕೆಆರ್​​ ​ತಂಡಕ್ಕಾಗಿ ಸುನಿಲ್ ನರೈನ್ ವಹಿಸಿದ ಪಾತ್ರವನ್ನು ವಹಿಸಿದರು. ಅಶ್ವಿನ್ ನಾಲ್ಕು ಸಿಕ್ಸರ್ ಮತ್ತು 3 ಬೌಂಡರಿಗಳನ್ನು ಬಾರಿಸುವ ಮೂಲಕ ಒಟ್ಟು 45 ರನ್ ಗಳಿಸಿದರು. ದಿಂಡಿಗಲ್​​ನ ಇತರ ಬ್ಯಾಟರ್​ಗಳು 15 ರನ್​​​ ದಾಟಲಿಲ್ಲ.

ಆರಂಭಿಕ ಬ್ಯಾಟಿಂಗ್ ಹೊಣೆ

ಟಿಎನ್​ಪಿಎಲ್​​ ಪ್ರಸಕ್ತ ಋತುವಿನಲ್ಲಿ ಆರ್ ಅಶ್ವಿನ್ ದಿಂಡಿಗಲ್ ಪರ ಬ್ಯಾಟಿಂಗ್ ಆರಂಭಿಸುತ್ತಿದ್ದಾರೆ. ತಿರುಚ್ಚಿ ಮತ್ತು ಸೇಲಂ ವಿರುದ್ಧ ಕೇವಲ 5 ಮತ್ತು 6 ರನ್ ಗಳಿಸಿದ್ದ ಅಶ್ವಿನ್ ಅಂತಿಮವಾಗಿ ಅಜೇಯ 45 ರನ್ ಗಳಿಸುವ ಮೂಲಕ ತಮ್ಮ ಹೊಣೆಗಾರಿಕೆ ಪ್ರದರ್ಶಿಸಿದರು.

ಆರ್ ಅಶ್ವಿನ್ ಈ ವರ್ಷದ ಕೊನೆಯಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಸಜ್ಜಾಗುತ್ತಿರುವುದರಿಂದ ಟಿಎನ್​ಪಿಎಲ್​ನಲ್ಲಿ ತಮ್ಮ ಬ್ಯಾಟಿಂಗ್ ಮೇಲೆ ಗಮನ ಹರಿಸುತ್ತಿದ್ದಾರೆ. ಆಫ್-ಸ್ಪಿನ್ನರ್ ಟಿ20 ವಿಶ್ವಕಪ್​ಗೆ ಆಯ್ಕೆಯಾಗಿರಲಿಲ್ಲ. ಸೆಪ್ಟೆಂಬರ್​ನಲ್ಲಿ ತಂಡವು ಬಾಂಗ್ಲಾದೇಶವನ್ನು ಎರಡು ಟೆಸ್ಟ್ ಸರಣಿಯಲ್ಲಿ ಭಾರತ ಎದುರಿಸುವಾಗ ಅವರು ತಂಡಕ್ಕೆ ಸೇರ್ಪಡೆಯಾಗುವ ಸಾಧ್ಯತೆಗಳಿವೆ.

Continue Reading

ಪ್ರಮುಖ ಸುದ್ದಿ

Paris Olympics 2024 : ಟೋಕಿಯೊದಲ್ಲಿ ನಡೆದ 2020ರ ಒಲಿಂಪಿಕ್ಸ್​ನಲ್ಲಿ ಭಾರತ ಗೆದ್ದ ಪದಕಗಳ ಸಂಖ್ಯೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Paris Olympics 2024 : 2022ರ ಏಷ್ಯನ್ ಗೇಮ್ಸ್​​ನಲ್ಲಿ 100ಕ್ಕೂ ಹೆಚ್ಚು ಪದಕಗಳನ್ನು ಗೆದ್ದಿರುವ ಭಾರತ, ಭಾಗವಹಿಸುತ್ತಿರುವ ಎಲ್ಲ ಸ್ಪರ್ಧೆಗಳಲ್ಲಿ ಕಠಿಣ ಹೋರಾಟ ನೀಡುವ ನಿರೀಕ್ಷೆಯಿದೆ. ಪ್ರಧಾನಿ ಮೋದಿ ಅವರು ಭಾರತೀಯ ತಂಡಕ್ಕೆ ಉತ್ಸಾಹ ಭರಿತ ಮಾತಿನ ಪ್ರೋತ್ಸಾಹವನ್ನೂ ನೀಡಿದ್ದಾರೆ. ಹೀಗಾಗಿ ಪದಕಗಳ ನಿರೀಕ್ಷೆ ಹೆಚ್ಚಾಗಿದೆ.

VISTARANEWS.COM


on

Paris Olympics 2024
Koo

ಬೆಂಗಳೂರು : ಪ್ಯಾರಿಸ್ ಒಲಿಂಪಿಕ್ಸ್​​ 2024 (Paris Olympics 2024) ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಭಾರತದ ನಿಯೋಗ ಪ್ಯಾರಿಸ್​ ತಲುಪಿ ಅಲ್ಲಿನ ಪರಿಸ್ಥಿತಿಗೆ ಹೊಂದಿಕೊಂಡು ಅಭ್ಯಾಸ ಆರಂಭಿಸಿದ್ದಾರೆ. ಭಾರತೀಯ ಕ್ರೀಡಾಭಿಮಾನಿಗಳು ಭಾರತ ಈ ಬಾರಿ ಹೆಚ್ಚು ಪದಕಗಳನ್ನು ಗೆಲ್ಲಬೇಕು ಎಂದು ಹಾರೈಸುತ್ತಿದ್ದಾರೆ. 33ನೇ ಒಲಿಂಪಿಕ್ಸ್ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಪ್ರಮುಖ ಆತಿಥೇಯ ನಗರವಾಗಿದ್ದರೂ, ಫ್ರಾನ್ಸ್ ನಾದ್ಯಂತ ಇತರ 16 ನಗರಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ಜಾವೆಲಿನ್ ಚಾಂಪಿಯನ್ ನೀರಜ್ ಚೋಪ್ರಾ ಮುಂಚೂಣಿಯಲ್ಲಿದ್ದು, ಭಾರತೀಯ ತಂಡ ಸಾಕಷ್ಟು ಬಲಿಷ್ಠವಾಗಿದೆ. ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು ಮತ್ತು ಶರತ್ ಕಮಲ್ ಧ್ವಜಧಾರಿಗಳಾಗಲಿದ್ದು, ಶೂಟರ್ ಗಗನ್ ನಾರಂಗ್ ಭಾರತದ ಚೆಫ್-ಡಿ-ಮಿಷನ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.

2022ರ ಏಷ್ಯನ್ ಗೇಮ್ಸ್​​ನಲ್ಲಿ 100ಕ್ಕೂ ಹೆಚ್ಚು ಪದಕಗಳನ್ನು ಗೆದ್ದಿರುವ ಭಾರತ, ಭಾಗವಹಿಸುತ್ತಿರುವ ಎಲ್ಲ ಸ್ಪರ್ಧೆಗಳಲ್ಲಿ ಕಠಿಣ ಹೋರಾಟ ನೀಡುವ ನಿರೀಕ್ಷೆಯಿದೆ. ಪ್ರಧಾನಿ ಮೋದಿ ಅವರು ಭಾರತೀಯ ತಂಡಕ್ಕೆ ಉತ್ಸಾಹ ಭರಿತ ಮಾತಿನ ಪ್ರೋತ್ಸಾಹವನ್ನೂ ನೀಡಿದ್ದಾರೆ. ಹೀಗಾಗಿ ಪದಕಗಳ ನಿರೀಕ್ಷೆ ಹೆಚ್ಚಾಗಿದೆ. ಏತನ್ಮಧ್ಯೆ 2021ರಲ್ಲಿ ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆದ 2020ರ ಆವೃತ್ತಿಯ ಒಲಿಂಪಿಕ್ಸ್​ನಲ್ಲಿ ಭಾರತ ಸಾಧನೆಯ ಬಗ್ಗೆ ಒಂದು ಪಕ್ಷಿ ನೋಟ ಹರಿಸೋಣ.

ಎಷ್ಟು ಪದಕಗಳು ಬಂದಿದ್ದವು?

202ರ ಒಲಿಂಪಿಕ್ಸ್​ನಲ್ಲಿ ಭಾರತ ಒಟ್ಟು 7 ಪದಕಗಳನ್ನು ಗೆದ್ದುಕೊಂಡಿತ್ತು. ಅದರಲ್ಲಿ ಒಂದು ಚಿನ್ನ, ಎರಡು ಬೆಳ್ಳಿ ಹಾಗೂ ಮೂರು ಕಂಚಿನ ಪದಕಗಳು ಇದ್ದವು. ಜಾವೆಲಿನ್ ಎಸೆತಗಾಗ ನೀರಜ್ ಚೋಪ್ರಾ ವೈಯಕ್ತಿಕ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಎರಡನೇ ಭಾರತೀಯ ಎನಿಸಿಕೊಂಡರು. ಪಿ.ವಿ.ಸಿಂಧು ತಮ್ಮ ಎರಡನೇ ಒಲಿಂಪಿಕ್ ಪದಕ (ಬೆಳ್ಳಿ) ಗೆದ್ದರೆ, ಪುರುಷರ ಹಾಕಿ ತಂಡವು 41 ವರ್ಷಗಳ ನಂತರ ಒಲಿಂಪಿಕ್ ಪದಕವನ್ನು (ಕಂಚು) ಗೆದ್ದು ಸಾಧನೆ ಮಾಡಿತು.

ಚಿನ್ನ ಗೆದ್ದ ನೀರಜ್ ಚೋಪ್ರಾ

ಭಾರತದ ಒಲಿಂಪಿಕ್ಸ್​ ಇತಿಹಾಸದಲ್ಲಿ ಅಥ್ಲೆಟಿಕ್ಸ್​ನಲ್ಲಿ ನೀರಜ್ ಚೋಪ್ರಾ ಭಾರತಕ್ಕೆ ಮೊಟ್ಟ ಮೊದಲ ಚಿನ್ನದ ಪದಕ ಗೆದ್ದುಕೊಟ್ಟರು. 2020 ರಲ್ಲಿ ಟೋಕಿಯೊದಲ್ಲಿ ನಡೆದ ಬೇಸಿಗೆ ಒಲಿಂಪಿಕ್ಸ್​ನಲ್ಲಿ ಅವರು ಜಾವೆಲಿನ್ ಎಸೆತದಲ್ಲಿ 87.58 ಮೀಟರ್ ಅತ್ಯುತ್ತಮ ಎಸೆತದೊಂದಿಗೆ ಚಿನ್ನದ ಪದಕ ಗೆದ್ದರು. ಜೆಕ್ ಗಣರಾಜ್ಯದ ಜಾಕುಬ್ ವಡ್ಲೆಜ್ಚ್ ಎರಡನೇ ಸ್ಥಾನ ಪಡೆದರೆ, ವಿಟೆಜ್ಸ್ಲಾವ್ ವೆಸೆಲಿ ಕಂಚಿನ ಪದಕ ಗೆದ್ದರು. ಬೀಜಿಂಗ್​ನಲ್ಲಿ ನಡೆದ 2008 ರ ಬೇಸಿಗೆ ಒಲಿಂಪಿಕ್ಸ್​​ನಲ್ಲಿ ಶೂಟರ್​ ಅಭಿನವ್ ಬಿಂದ್ರಾ ಅವರ ಯಶಸ್ಸಿನ ನಂತರ ಒಲಿಂಪಿಕ್ ಚಿನ್ನದ ಪದಕ ಗೆದ್ದ ಮೊದಲ ಅಥ್ಲೀಟ್​ ನೀರಜ್ ಚೋಪ್ರಾ.

ಇದನ್ನೂ ಓದಿ: Paris Olympics 2024 : ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಕಡಿಮೆ ಪದಕಗಳು ಸಿಗುವುದು ಯಾಕೆ? ಈ ಪ್ರಶ್ನೆಗೆ ಇಲ್ಲಿದೆ ಉತ್ತರ

ಮೀರಾಬಾಯಿ ಚಾನು- ಬೆಳ್ಳಿ ಪದಕ

ಟೋಕಿಯೋ ಒಲಿಂಪಿಕ್ಸ್​​ನ ಮಹಿಳೆಯರ 49 ಕೆ.ಜಿ ವೇಟ್​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಮೀರಾಬಾಯಿ ಚಾನು ಭಾರತಕ್ಕೆ ಪದಕದ ಖಾತೆ ತೆರೆದಿದಿದ್ದರು. 2000ನೇ ಇಸವಿಯಲ್ಲಿ ಸಿಡ್ನಿಯಲ್ಲಿ ಕರ್ಣಂ ಮಲ್ಲೇಶ್ವರಿ ಕಂಚಿನ ಪದಕ ಗೆದ್ದ ಬಳಿಕ ಇದು ಭಾರತದ ಎರಡನೇ ವೇಟ್ ಲಿಫ್ಟಿಂಗ್ ಒಲಿಂಪಿಕ್ ಪದಕವಾಗಿದೆ.

ಪಿ.ವಿ.ಸಿಂಧೂ- ಮಹಿಳೆಯರ ಬ್ಯಾಡ್ಮಿಂಟನ್ ಸಿಂಗಲ್ಸ್​ನಲ್ಲಿ ಕಂಚಿನ ಪದಕ

ಬ್ಯಾಡ್ಮಿಂಟನ್ ಕ್ವೀನ್ ಪಿ.ವಿ.ಸಿಂಧು ಸುಶೀಲ್ ಕುಮಾರ್ ನಂತರ ಎರಡು ವೈಯಕ್ತಿಕ ಒಲಿಂಪಿಕ್ ಪದಕಗಳನ್ನು ಗೆದ್ದ ಮೊದಲ ಭಾರತೀಯ ಮಹಿಳೆ ಮತ್ತು ಎರಡನೇ ಭಾರತೀಯ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಮಹಿಳೆಯರ ಬ್ಯಾಡ್ಮಿಂಟನ್​ ಸಿಂಗಲ್ಸ್​ನಲ್ಲಿ ಪಿ.ವಿ.ಸಿಂಧು ಚೀನಾದ ಹಿ ಬಿಂಗ್ ಜಿಯಾವೊ ವಿರುದ್ಧ 21-13, 21-15 ಅಂತರದಿಂದ ಸೋತಿದ್ದರು.

ರವಿ ಕುಮಾರ್ ದಹಿಯಾ: ಕುಸ್ತಿಯಲ್ಲಿ ಬೆಳ್ಳಿ ಪದಕ

ಪುರುಷರ 57 ಕೆಜಿ ಫ್ರೀಸ್ಟೈಲ್ ಕುಸ್ತಿಯ ಫೈನಲ್​ನಲ್ಲಿ 23 ವರ್ಷದ ರವಿ ಕುಮಾರ್ ದಹಿಯಾ ಎರಡು ವಿಶ್ವ ಚಾಂಪಿಯನ್ ರಷ್ಯಾದ ಜಾವೂರ್ ಉಗೆವ್ ವಿರುದ್ಧ ಫೈನಲ್​ನಲ್ಲಿ ಸೋತು ಬೆಳ್ಳಿ ಪದಕ ಗೆದ್ದರು. ಇದು ಒಲಿಂಪಿಕ್ ಇತಿಹಾಸದಲ್ಲಿ ಭಾರತಕ್ಕೆ ಕುಸ್ತಿಯಲ್ಲಿ ಒಂಬತ್ತನೇ ಬೆಳ್ಳಿ ಪದಕ. 2012 ರ ಲಂಡನ್​​ನಲ್ಲಿ ಸುಶೀಲ್ ಕುಮಾರ್ ನಂತರ ಕುಸ್ತಿಯಲ್ಲಿ ಎರಡನೇ ಬೆಳ್ಳಿ ಪದಕ. ರವಿ ಕುಮಾರ್ ದಹಿಯಾ ಅವರು ಸೆಮಿಫೈನಲ್​​ನಲ್ಲಿ ಕಜಕಿಸ್ತಾನದ ನುರಿಸ್ಲಾಮ್ ಸನಾಯೆವ್ ಅವರನ್ನು ಸೋಲಿಸುವ ಮೂಲಕ ಒಲಿಂಪಿಕ್ ಪದಕ ಖಚಿತಪಡಿಸಿಕೊಂಡಿದ್ದರು.

ಬಜರಂಗ್ ಪೂನಿಯಾ; ಕುಸ್ತಿಯಲ್ಲಿ ಕಂಚಿನ ಪದಕ

ಕುಸ್ತಿಪಟು ಬಜರಂಗ್ ಪೂನಿಯಾ ಟೋಕಿಯೊ 2020ರಲ್ಲಿ ಪದಕ ಗೆದ್ದ ಮೂರನೇ ಭಾರತೀಯ. ಪುರುಷರ 65 ಕೆ.ಜಿ ಫ್ರೀಸ್ಟೈಲ್ ಕುಸ್ತಿಯಲ್ಲಿ ಕಜಕಿಸ್ತಾನದ ದೌಲೆಟ್ ನಿಯಾಜ್ಬೆಕೊವ್ ಅವರನ್ನು ಸೋಲಿಸಿ ಕಂಚಿನ ಪದಕ ಗೆದ್ದಿದ್ದರು.

ಲವ್ಲಿನಾ ಬೊರ್ಗೊಹೈನ್ – ಬಾಕ್ಸಿಂಗ್​ನಲ್ಲಿ ಕಂಚಿನ ಪದಕ (64-69 ಕೆಜಿ)

ಮಹಿಳೆಯರ 69 ಕೆಜಿ ವಿಭಾಗದಲ್ಲಿ ಟರ್ಕಿಯ ಅಗ್ರ ಶ್ರೇಯಾಂಕದ ಬುಸೆನಾಜ್ ಸುರ್ಮೆನೆಲಿ ವಿರುದ್ಧ ಸೆಮಿಫೈನಲ್​​ನಲ್ಲಿ ಸೋತ ನಂತರ ಲೊವ್ಲಿನಾ ಬೊರ್ಗೊಹೈನ್ ಟೋಕಿಯೊ 2020 ರಲ್ಲಿ ಕಂಚಿನ ಪದಕ ಗೆದ್ದಿದ್ದರು. ಲೊವ್ಲಿನಾ ಬೊರ್ಗೊಹೈನ್ ಕ್ವಾರ್ಟರ್ ಫೈನಲ್​ನಲ್ಲಿ ಚೈನೀಸ್ ತೈಪೆಯ ನಿಯೆನ್-ಚಿನ್ ಚೆನ್ ಅವರನ್ನು ಸೋಲಿಸಿ ಪದಕದ ಭರವಸೆ ಮೂಡಿಸಿದ್ದರು.

ಪುರುಷರ ಹಾಕಿ ತಂಡ ; ಕಂಚಿನ ಪದಕ

1980ರ ಮಾಸ್ಕೋ ಒಲಿಂಪಿಕ್ಸ್​​ನಲ್ಲಿ ಚಿನ್ನ ಗೆದ್ದ ನಂತರ ಭಾರತೀಯ ಪುರುಷರ ಹಾಕಿ ತಂಡವು 41 ವರ್ಷಗಳ ಕಾಲ ಪದಕವೇ ಗೆದ್ದಿರಲಿಲ್ಲ. ಕೊನೆಗೂ 2020ರಲ್ಲಿ ಕಂಚಿನ ಪದಕ ಗೆದ್ದಿತು. ಮೂರನೇ ಸ್ಥಾನ ಪಂದ್ಯದ ಒಂದು ಹಂತದಲ್ಲಿ 3-1ರಿಂದ ಹಿನ್ನಡೆ ಅನುಭವಿಸಿದ್ದ ಭಾರತ, ಜರ್ಮನಿಯನ್ನು 5-4 ಅಂತರದಿಂದ ಮಣಿಸಿತ್ತು. 1968 ಮತ್ತು 1972ರ ಒಲಿಂಪಿಕ್ಸ್ ಬಳಿಕ ಇದು ಅವರ ಮೂರನೇ ಒಲಿಂಪಿಕ್ ಕಂಚಿನ ಪದಕ.

Continue Reading

ಕ್ರೀಡೆ

Olympics On Television: ಒಲಿಂಪಿಕ್ಸ್​ ಕ್ರೀಡಾಕೂಟ ಮೊದಲ ಬಾರಿಗೆ ಟಿವಿಯಲ್ಲಿ ಪ್ರಸಾರ ಕಂಡಿದ್ದು ಯಾವಾಗ?

Olympics On Television: ಎಲ್ಲ ಕ್ರೀಡೆಗಳಲ್ಲಿರುವಂತೆ ಇದೀಗ ಒಲಿಂಪಿಕ್ಸ್‌ಗಳಲ್ಲಿಯೂ ಉದ್ದೀಪನ ಪರೀಕ್ಷೆ ಕಟ್ಟುನಿಟ್ಟಾಗಿ ನಡೆಯುತ್ತದೆ. ಒಲಿಂಪಿಕ್ಸ್‌ ಇತಿಹಾಸದಲ್ಲಿ ಮೊದಲ ಬಾರಿಗೆ ಮಾದಕ ದ್ರವ್ಯ ಸೇವನೆ ಪ್ರಕರಣ ಬೆಳಕಿಗೆ ಬಂದದ್ದು 1968ರ ಮೆಕ್ಸಿಕೊ ಗೇಮ್ಸ್‌ನಲ್ಲಿ.

VISTARANEWS.COM


on

Olympics on television
Koo

ಬೆಂಗಳೂರು: ಬಹುನಿರೀಕ್ಷಿತ ಪ್ಯಾರಿಸ್ ಒಲಿಂಪಿಕ್ಸ್ 2024ರ ಕ್ರೀಡಾಕೂಟ ಆರಂಭಕ್ಕೆ ಇನ್ನು ಕೇವಲ 10 ದಿನಗಳು ಮಾತ್ರ ಬಾಕಿ ಉಳಿದಿವೆ. ಹಿಂದೆಂದಿಗಿಂತಲೂ ಈ ಬಾರಿ ಒಲಿಂಪಿಕ್ಸ್​ ಟೂರ್ನಿಯ ಪ್ರಸಾರ ದೊಡ್ಡ ಮಟ್ಟದಲ್ಲಿ ಇರಲಿದೆ. ಜಿಯೋ ಸಿನಿಮಾದಲ್ಲಿ ಉಚಿತವಾಗಿ ಪ್ರಸಾರಗೊಳ್ಳಲಿದೆ. ಆದರೆ ಮೊದಲ ಬಾರಿಗೆ ಒಲಿಂಪಿಕ್ಸ್​ ಟಿವಿಯಲ್ಲಿ(Olympics On Television) ಪ್ರಸಾರ ಕಂಡಿದ್ದು ಯಾವಾಗ? ಯಾರ ಆತಿಥ್ಯದಲ್ಲಿ ನಡೆದ ಒಲಿಂಪಿಕ್ಸ್​ ಇದಾಗಿತ್ತು ಎನ್ನುವ ಮಾಹಿತಿ ಇಂತಿದೆ.

ಮೊದಲ ಬಾರಿಗೆ ಒಲಿಂಪಿಕ್ಸ್​ ಕ್ರೀಡಾಕೂಟ ಟಿವಿಯಲ್ಲಿ ಪ್ರಸಾರಗೊಂಡದ್ದು 1936ರಲ್ಲಿ. ಬರ್ಲಿನ್​ನಲ್ಲಿ ನಡೆದಿದ್ದ ಟೂರ್ನಿ ಇದಾಗಿತ್ತು. ಆದರೆ, ಆತಿಥೇಯ ಜರ್ಮನಿಯ ಟಿವಿ ಹಾಲ್‌ಗ‌ಳಲ್ಲಿ ಮಾತ್ರ ಇದು ಪ್ರಸಾರ ಕಂಡಿತ್ತು. ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಟಿವಿಯಲ್ಲಿ ಪ್ರಸಾರಗೊಂಡ ಒಲಿಂಪಿಕ್ಸ್​ ಕ್ರೀಡಾಕೂಟ ಟೋಕಿಯೊ ಒಲಿಂಪಿಕ್ಸ್‌. 1964ರಲ್ಲಿ ನಡೆದಿದ್ದ ಟೂರ್ನಿ ಇದಾಗಿತ್ತು. ಇದಾದ ಬಳಿಕ 1956ರಲ್ಲಿ ಮೆಲ್ಬರ್ನ್ ಒಲಿಂಪಿಕ್ಸ್‌ನಲ್ಲಿ ಮೊದಲ ಬಾರಿಗೆ ಟಿವಿ ಪ್ರಸಾರ ಹಕ್ಕು ಮಾರಾಟ ಮಾಡಲಾಗಿತ್ತು. ಈ ಬಾರಿ ಟಿವಿ ಮಾತ್ರವಲ್ಲದೆ ಮೊಬೈಲ್​ ಆ್ಯಪ್​ನಲ್ಲಿಯೂ ಒಲಿಂಪಿಕ್ಸ್​ ಪ್ರಸಾರಗೊಳ್ಳುವ ಕಾರಣ ಪ್ರಸಾರಕರಿಗೆ ದೊಡ್ಡ ಮೊತ್ತದ ಹಣ ಸಿಗಲಿದೆ.

ಒಲಿಂಪಿಕ್ಸ್‌ನಲ್ಲಿ ಡೋಪಿಂಗ್‌


ಎಲ್ಲ ಕ್ರೀಡೆಗಳಲ್ಲಿರುವಂತೆ ಇದೀಗ ಒಲಿಂಪಿಕ್ಸ್‌ಗಳಲ್ಲಿಯೂ ಉದ್ದೀಪನ ಪರೀಕ್ಷೆ ಕಟ್ಟುನಿಟ್ಟಾಗಿ ನಡೆಯುತ್ತದೆ. ಒಲಿಂಪಿಕ್ಸ್‌ ಇತಿಹಾಸದಲ್ಲಿ ಮೊದಲ ಬಾರಿಗೆ ಮಾದಕ ದ್ರವ್ಯ ಸೇವನೆ ಪ್ರಕರಣ ಬೆಳಕಿಗೆ ಬಂದದ್ದು 1968ರ ಮೆಕ್ಸಿಕೊ ಗೇಮ್ಸ್‌ನಲ್ಲಿ. ಬಿಯರ್‌ ಕುಡಿದಿದ್ದಕ್ಕಾಗಿ ಸ್ವೀಡನ್‌ ಆ್ಯತ್ಲೀಟ್‌ ಹನ್ಸ್‌-ಗುನ್ನಾರ್‌ ಲಿಲಿಜೆನ್‌ವಾಲ್‌ ನಿಷೇಧ ಶಿಕ್ಷೆ ಅನುಭವಿಸಬೇಕಾಯಿತು! ಇದಕ್ಕಾಗಿ ಅವರು ಗೆದ್ದಿದ್ದ ಕಂಚಿನ ಪದಕವನ್ನೂ ವಾಪಸ್‌ ಪಡೆಯಲಾಗಿತ್ತು.

ಇದನ್ನೂ ಓದಿ India at the Olympics: ಒಲಿಂಪಿಕ್ಸ್​ನಲ್ಲಿ ಭಾರತದ ಪದಕ ಸಾಧನೆಯ ಇಣುಕು ನೋಟ

ಸೀನ್ ನದಿಯಲ್ಲಿ ಉದ್ಘಾಟನಾ ಸಮಾರಂಭ


ಈ ಬಾರಿಯ ಒಲಿಂಪಿಕ್ಸ್​ ಉದ್ಘಾಟನಾ ಸಮಾರಂಭ(paris olympics 2024 opening ceremony) ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮದೊಂದಿಗೆ ನೆರವೇರಲಿದೆ. ಕ್ರೀಡಾಕೂಟ ಜುಲೈ 26ರಿಂದ ಆರಂಭವಾಗಿ, ಆಗಸ್ಟ್‌ 11ರವರೆಗೆ ನಡೆಯಲಿದೆ. ಪ್ಯಾರಾಲಿಂಪಿಕ್ಸ್‌ ಆಗಸ್ಟ್‌ 28 ರಿಂದ ಸೆಪ್ಟೆಂಬರ್‌ 8ರವರೆಗೆ ನಿಗದಿಯಾಗಿದೆ. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಯನ್ನು ಈಗಾಗಲೇ ಕ್ರೀಡಾಕೂಟದ ಆಯೋಜಕರು ಮಾಡಿದ್ದಾರೆ. ಗೇಮ್ಸ್‌ಗಾಗಿಯೇ ಇಲ್ಲಿನ ಸೀನ್‌ ನದಿಯನ್ನು ಸಾರ್ವಜನಿಕ ನಿಧಿಯಿಂದ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿ ಈ ನದಿಯನ್ನು ಸ್ನಾನಮಾಡಲು ಯೋಗ್ಯವೆನಿಸುವ ರೀತಿಯಲ್ಲಿ ಸ್ವಚ್ಛ ಮಾಡಲಾಗಿದೆ.

ಇದನ್ನೂ ಓದಿ Paris Olympics 2024 : ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಕಡಿಮೆ ಪದಕಗಳು ಸಿಗುವುದು ಯಾಕೆ? ಈ ಪ್ರಶ್ನೆಗೆ ಇಲ್ಲಿದೆ ಉತ್ತರ

ಬೋಟ್‌ಗಳಲ್ಲೇ ಪರೇಡ್‌


ಒಲಿಂಪಿಕ್ಸ್​ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

Continue Reading

ಕ್ರೀಡೆ

India at the Olympics: ಒಲಿಂಪಿಕ್ಸ್​ನಲ್ಲಿ ಭಾರತದ ಪದಕ ಸಾಧನೆಯ ಇಣುಕು ನೋಟ

India at the Olympics: ಒಲಿಂಪಿಕ್ಸ್​ ಇತಿಹಾಸದಲ್ಲಿ ಭಾರತ ಇದುವರೆಗೆ ಒಟ್ಟು 35 ಪದಕಗಳನ್ನು ಗೆದ್ದಿದೆ. ಇದರಲ್ಲಿ 10 ಚಿನ್ನ, 9 ಬೆಳ್ಳಿ ಮತ್ತು 16 ಕಂಚು ಒಳಗೊಂಡಿದೆ. ಈ ಬಾರಿ ಕನಿಷ್ಠ 20 ಪದಕ ಗೆಲ್ಲುವ ನಿರೀಕ್ಷೆ ಇದೆ. ನಿರೀಕ್ಷೆ ಮಾಡಿದಷ್ಟು ಪದಕ ಗೆದ್ದರೆ ಒಟ್ಟು ಪದಕಗಳ ಸಂಖ್ಯೆ 50ರ ಗಡಿ ದಾಟಲಿದೆ.

VISTARANEWS.COM


on

Koo

ಬೆಂಗಳೂರು: ಜಾಗತಿಕ ಕ್ರೀಡಾಕೂಟವಾದ ಒಲಿಂಪಿಕ್ಸ್​ನಲ್ಲಿ(India at the Olympics) ಭಾರತ ಇದುವರೆಗೂ ಹೆಚ್ಚಿನ ಪದಕ ಗೆಲ್ಲದಿದ್ದರೂ ಕೂಡ ವಿಶ್ವ ಮಟ್ಟದ ಸ್ಪರ್ಧೆಗಳಲ್ಲಿ ಭಾರತೀಯರು ಎಂದೂ ಹಿಂಜರಿಯಲಿಲ್ಲ. ಇತಿಹಾಸವನ್ನೊಮ್ಮೆ ಕೆದಕಿದರೆ ಪುರುಷರ ಹಾಕಿಯಲ್ಲಿ 8 ಬಾರಿ ಸ್ವರ್ಣ ಗೆದ್ದ ಏಕೈಕ ತಂಡವೆಂಬ ಹೆಗ್ಗಳಿಕೆ ಭಾರತ ಉಳಿಸಿಕೊಂಡಿದೆ. ಈ ಬಾರಿ ಪ್ಯಾರಿಸ್​ಗೆ ತೆರಳುವ ಕ್ರೀಡಾಪಟುಗಳಿಗೆ ಹಿಂದೆಂದಿಗಿಂತ್ತಲೂ ದೊರೆಯದ ಬೆಂಬಲ ಸಿಕ್ಕಿದೆ. ಹಿಂದಿನ ಒಲಿಂಪಿಕ್ಸ್‌ನಲ್ಲಿ ಭಾರತೀಯರ ಪದಕ ಸಾಧನೆ ಹೇಗಿತ್ತು ಎನ್ನುವ ಇಣುಕು ನೋಟ ಇಲ್ಲಿದೆ.

1928ರಲ್ಲಿ ಮೊದಲ ಚಿನ್ನ


ಭಾರತಕ್ಕೆ ಮೊದಲ ಚಿನ್ನದ ಪದಕ ಸಿಕ್ಕಿದ್ದು. 1928ರಲ್ಲಿ ನೆದರ್ಲೆಂಡ್‌ನ‌ ಆ್ಯಮ್‌ಸ್ಟರ್ಡಾಮ್‌ನಲ್ಲಿ ನಡೆದ ಒಲಿಂಪಿಕ್‌ನಲ್ಲಿ ಭಾರತ ಹಾಕಿ ತಂಡ ಚಿನ್ನ ಗೆದ್ದು ಐತಿಹಾಸಿಕ ಸಾಧನೆ ಮಾಡಿತ್ತು. ಇಲ್ಲಿಂದ ಭಾರತ ಹಾಕಿ ತಂಡದ ಸುವರ್ಣ ಯುಗಾರಂಭವಾಯಿತು. ಹೆಚ್ಚು ಕಡಿಮೆ ಅರ್ಧಶತಮಾನದವರೆಗೆ ಒಲಿಂಪಿಕ್‌ನಲ್ಲಿ ಭಾರತ ಹಾಕಿಯಲ್ಲಿ ಪಾರುಪತ್ಯ ಸಾಧಿಸಿತು. 1956ರವರೆಗೆ ಸತತ 6 ಬಾರಿ ಸ್ವರ್ಣ ಜಯಿಸಿತು. ಧ್ಯಾನ್‌ಚಂದ್‌ ಎಂಬ ಮಹಾನ್‌ ಪ್ರತಿಭೆ ವಿಶ್ವಕ್ಕೆ ಪರಿಚಯವಾಗಿದ್ದೂ ಕೂಡ ಇಲ್ಲಿಯೇ.


ಸ್ವತಂತ್ರ ಭಾರತ ಗೆದ್ದ ಮೊದಲ ಪದಕ

1948ರಂದು ಇಂಗ್ಲೆಂಡ್‌ ರಾಜಧಾನಿ ಲಂಡನ್‌ನಲ್ಲಿ ನಡೆದ ಒಲಿಂಪಿಕ್ಸ್​ ಭಾರತದ ಪಾಲಿಗೆ ವಿಶೇಷವಾಗಿತ್ತು. ಏಕೆಂದರೆ ಸ್ವತಂತ್ರ ಭಾರತ ಆಡಿದ ಮೊದಲ ಒಲಿಂಪಿಕ್ಸ್​ ಕೂಟ ಇದಾಗಿತ್ತು. ಒಂದು ಕಾಲದಲ್ಲಿ ತನ್ನನ್ನು ಆಳಿದ್ದ ಇಂಗ್ಲೆಂಡ್​ ತಂಡವನ್ನೇ ಭಾರತ ಫೈನಲ್‌ನಲ್ಲಿ ಸೋಲಿಸಿ ಚಿನ್ನ ಗೆದ್ದಿತು!. ಗೆಲುವಿನ ಅಂತರ 4-0 ಗೋಲುಗಳು. ಬ್ರಿಟಿಷರ ವಸಾಹತುಶಾಹಿ ಅಹಂಕಾರಕ್ಕೆ ಭಾರತ ಕೊಟ್ಟ ಭಾರೀ ತಿರುಗೇಟಿನಂತಿತ್ತು ಈ ಗೆಲುವು.

ವೈಯಕ್ತಿಕ ವಿಭಾಗದಲ್ಲಿ ಮೊದಲ ಪದಕ


ಒಲಿಂಪಿಕ್ಸ್‌ ಇತಿಹಾಸದಲ್ಲಿ ಭಾರತದ ಕ್ರೀಡಾಪಟುವೊಬ್ಬರು ವೈಯಕ್ತಿಕ ವಿಭಾಗದಲ್ಲಿ ಪದಕ ಜಯಿಸಿದ್ದು 1952ರಲ್ಲಿ. ಮಹಾರಾಷ್ಟ್ರದ ಖಾಸಾಬಾ ದಾದಾ ಸಾಹೆಬ್‌ ಜಾಧವ್‌ ಕುಸ್ತಿಯ ಫ್ರೀಸ್ಟೈಲ್‌ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದರು. ಇದು ಒಲಿಂಪಿಕ್ಸ್‌ ಇತಿಹಾಸದಲ್ಲಿ ಭಾರತದ ಕ್ರೀಡಾಪಟುವೊಬ್ಬರು ವೈಯಕ್ತಿಕ ವಿಭಾಗದಲ್ಲಿ ಗೆದ್ದ ಮೊದಲ ಪದಕ ಇದಾಗಿತ್ತು.

ಇದನ್ನೂ ಓದಿ Paris Olympics 2024 : ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಕಡಿಮೆ ಪದಕಗಳು ಸಿಗುವುದು ಯಾಕೆ? ಈ ಪ್ರಶ್ನೆಗೆ ಇಲ್ಲಿದೆ ಉತ್ತರ


ಟೆನಿಸ್​ನಲ್ಲಿ ಮೊದಲ ಪದಕ


1996ರಲ್ಲಿ ಅಮೆರಿಕದಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾರತ ಏಕೈಕ ಕಂಚಿನ ಪದಕ ಜಯಿಸಿತ್ತು. ಲಿಯಾಂಡರ್‌ ಪೇಸ್‌ ಟೆನಿಸ್‌ ಸಿಂಗಲ್ಸ್‌ ವಿಭಾಗದಲ್ಲಿ ಕಂಚು ಜಯಿಸಿದ್ದರು. ವೈಯಕ್ತಿಕ ವಿಭಾಗದಲ್ಲಿ 44 ವರ್ಷಗಳ ಬಳಿಕ ಭಾರತಕ್ಕೆ ಒಲಿದ ಪದಕ ಇದಾಗಿತ್ತು. ಇಲ್ಲಿ ಲಿಯಾಂಡರ್‌ ಪೇಸ್‌ ಬ್ರಝಿಲ್‌ನ ಫೆರ್ನಾಂಡೊ ಮೆಲಿಗಿನಿ ಅವರನ್ನು ಮಣಿಸಿ ಪದಕಕ್ಕೆ ಕೊರಳೊಡ್ಡಿದ್ದರು.

ಕರ್ಣ ಮಲ್ಲೇಶ್ವರಿ ಐತಿಹಾಸಿಕ ಸಾಧನೆ


2000ದಲ್ಲಿ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದಿದ್ದ ಒಲಿಂಪಿಕ್ಸ್​ ಕ್ರೀಡಾಕೂಟದಲ್ಲಿ ಆಂಧ್ರ ಪ್ರದೇಶ ಮೂಲದವರಾದ ಕರ್ಣ ಮಲ್ಲೇಶ್ವರಿ ವೇಟ್‌ಲಿಫ್ಟಿಂಗ್‌ನಲ್ಲಿ ಕಂಚಿನ ಪದಕ ಜಯಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದರು. ಒಲಿಂಪಿಕ್ಸ್‌ನಲ್ಲಿ ಪದಕ ಜಯಿಸಿದ ಭಾರತದ ಮೊಟ್ಟ ಮೊದಲ ಮಹಿಳಾ ಕ್ರೀಡಾಪಟು ಎನಿಸಿಕೊಂಡಿದ್ದರು. 69 ಕೆಜಿ ವಿಭಾಗದಲ್ಲಿ ಮಲ್ಲೇಶ್ವರಿ ಈ ಸಾಧನೆ ಮಾಡಿದ್ದರು.


2004ರಲ್ಲಿ ಗ್ರೀಸ್‌ನ ಅಥೆನ್ಸ್‌ನಲ್ಲಿ ನಡೆದ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಭಾರತಕ್ಕೆ ಏಕೈಕ ಪದಕ ಮಾತ್ರ ಲಭಿಸಿತು. ರಾಜಸ್ಥಾನದ ಶೂಟರ್‌ ರಾಜ್ಯವರ್ಧನ್‌ ಸಿಂಗ್‌ ರಾಥೋಡ್‌ ಪುರುಷರ ಡಬಲ್‌ ಟ್ರಾಯಪ್‌ ವಿಭಾಗದಲ್ಲಿ ಬೆಳ್ಳಿ ಪದಕಕ್ಕೆ ಗುರಿ ಇರಿಸಿ ಈ ಪದಕ ತಂದುಕೊಟ್ಟಿದ್ದರು. ಈ ಸಾಧನೆಯೊಂದಿಗೆ ವೈಯಕ್ತಿಕ ವಿಭಾಗದಲ್ಲಿ ರಜತ ಗೆದ್ದ ಮೊದಲ ಭಾರತೀಯರೆನಿಸಿದರು.

ಇದನ್ನೂ ಓದಿ Paris Olympics 2024: ಮೊಟ್ಟಮೊದಲ ಒಲಿಂಪಿಕ್ಸ್ ಕ್ರೀಡಾಕೂಟದ 10 ಕುತೂಹಲಕರ ಸಂಗತಿಗಳಿವು

ಚಿನ್ನ ಗೆದ್ದ ಅಭಿನವ್‌ ಬಿಂದ್ರ


ಚೀನದ ಬೀಜಿಂಗ್‌ನಲ್ಲಿ ನಡೆದ ಒಲಿಂಪಿಕ್ಸ್‌ ಭಾರತದ ಕ್ರೀಡಾ ಇತಿಹಾಸದಲ್ಲೇ ಅತ್ಯಂತ ಅವಿಸ್ಮರಣೀಯ ಕೂಟವಾಗಿದೆ. ಸ್ವತಂತ್ರ ಭಾರತದಲ್ಲಿ ವೈಯಕ್ತಿಕ ವಿಭಾಗದಲ್ಲಿ ಮೊದಲ ಸ್ವರ್ಣ ಸಾಧನೆ ಮಾಡಿದ್ದು ಇದೇ ಕೂಟದಲ್ಲಿ ಅಲ್ಲದೆ ಮೊಟ್ಟ ಮೊದಲ ಬಾರಿಗೆ ಒಂದೇ ಕೂಟದಲ್ಲಿ 3 ಪದಕಗಳು ಭಾರತದ ಪಾಲಾಗಿದ್ದವು. ಅಭಿನವ್‌ ಬಿಂದ್ರ 10 ಮೀ. ಏರ್‌ ರೈಫ‌ಲ್‌ನಲ್ಲಿ ಸ್ವರ್ಣ ಗೆದ್ದು ಇತಿಹಾಸ ನಿರ್ಮಿಸಿದ್ದರು. ಇತ್ತೀಚೆಗೆ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಕುಸ್ತಿಪಟು ಸುಸೀಲ್‌ ಕುಮಾರ್‌ ಪುರುಷರ ಕುಸ್ತಿಯ 75 ಕೆಜಿ ವಿಭಾಗದಲ್ಲಿ ಕಂಚು ಗೆದ್ದರೆ ಬಾಕ್ಸಿಂಗ್‌ನಲ್ಲಿ ವಿಜೇಂದರ್‌ ಸಿಂಗ್‌ 66 ಕೆಜಿ ವಿಭಾಗದಲ್ಲಿ ಕಂಚು ಜಯಿಸಿದ್ದರು.


ಲಂಡನ್​ನಲ್ಲಿ ಕಮಾಲ್​…

2012ರಲ್ಲಿ ಲಂಡನ್‌ನಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಭಾರತ ಅಮೋಘ ಸಧನೆಯೊಂದನ್ನು ಮಾಡಿತು. ಭಾರತಕ್ಕೆ ಅರ್ಧ ಡಜನ್‌ ಪದಕ ಒಲಿದು ಬಂದಿತ್ತು. ಭಾರತದ ಶೂಟಿಂಗ್‌, ಬಾಕ್ಸಿಂಗ್‌, ಬ್ಯಾಡ್ಮಿಂಟನ್‌, ಕ್ಷೇತ್ರಕ್ಕೆ ಹೊಸ ಆಯಾಮ ಸೃಷ್ಟಿಸಿದ ಕೂಟ ಇದಾಗಿತ್ತು. 2 ಬೆಳ್ಳಿ ಹಾಗೂ 4 ಕಂಚಿನ ಪದಕಗಳು ಭಾರತದ ಪಾಲಾದವು. ಶೂಟಿಂಗ್‌ನಲ್ಲಿ ವಿಜಯ್‌ ಕುಮಾರ್‌ 25 ಮೀ. ರ್ಯಾಪಿಟ್‌ ಫೈರ್‌ ಪಿಸ್ತೂಲ್‌ನಲ್ಲಿ ಬೆಳ್ಳಿ ಗೆದ್ದರೆ, ಸುಶೀಲ್‌ ಕುಮಾರ್‌ ಪುರುಷರ 66 ಕೆಜಿ ಫ್ರೀ ಸ್ಟೈಲ್‌ನಲ್ಲಿ ರಜತ ಸಾಧನೆಯೊಂದಿಗೆ ಸತತ 2ನೇ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಪದಕ ಜಯಿಸಿದರು. ಮತೋರ್ವ ಶೂಟರ್‌ ಗಗನ್‌ ನಾರಂಗ್‌ (10 ಮೀ ಏರ್‌ ರೈಫ‌ಲ್‌), ಬ್ಯಾಡ್ಮಿಂಟನ್‌ ತಾರೆ ಸೈನಾ ನೆಹ್ವಾಲ್‌, ಬಾಕ್ಸರ್‌ ಮೇರಿ ಕೋಮ್‌ ಹಾಗೂ ಮತೋರ್ವ ಕುಸ್ತಿಪಟು ಯೋಗೇಶ್ವರ್‌ ದತ್‌ ಕಂಚಿನ ಪದಕ ಜಯಿಸಿದರು.

ಇದನ್ನೂ ಓದಿ Paris Olympics 2024 : ಒಲಿಂಪಿಕ್ಸ್​ ಕ್ರೀಡಾಕೂಟದ ಇತಿಹಾಸ ಏನು? ಇದನ್ನು ಆಯೋಜಿಸುವವರು ಯಾರು?


ರಿಯೋದಲ್ಲಿ ಕೇವಲ 2 ಪದಕ


ಲಂಡನ್‌ನಲ್ಲಿ ಅರ್ಧ ಡಜನ್‌ ಪದಕ ಗೆದ್ದಿದ್ದ ಭಾರತದ ಕ್ರೀಡಾಪಟುಗಳ ಮೇಲೆ ರಿಯೋ ಒಲಿಂಪಿಕ್ಸ್‌ನಲ್ಲಿ ಅಪಾರ ಪದಕ ನಿರೀಕ್ಷೆ ಮಾಡಲಾಗಿತ್ತು. ಆದರೆ, ಈ ಎಲ್ಲ ನಿರೀಕ್ಷೆ ಹುಸಿಗೊಂಡಿತು. ಭಾರತ ಕೇವಲ 2 ಪದಕಕ್ಕೆ ಮಾತ್ರ ಸೀಮಿತವಾಯಿತು. ಭಾರತದ ಸ್ಟಾರ್‌ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿ.ವಿ. ಸಿಂಧು ಕೊನೆಯ ಹಂತದಲ್ಲಿ ಎಡವಿ ಚಿನ್ನದ ಪದಕದಿಂದ ವಂಚಿತರಾಗಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟರು. ಆದರೆ, ಸಿಂಧು ಬ್ಯಾಡ್ಮಿಂಟನ್‌ ಮಹಿಳಾ ಸಿಂಗಲ್ಸ್‌ ವಿಭಾಗದಲ್ಲಿ ಫೈನಲ್‌ ಪ್ರವೇಶಿಸಿದ ಮೊದಲ ಭಾರತೀಯ ಶಟ್ಲರ್‌ ಎನಿಸಿಕೊಂಡರು. ಇತ್ತೀಚೆಗೆ ಬ್ರಿಜ್​ ಭೂಷಣ್​ ಸಿಂಗ್​ ವಿರುದ್ಧ ಲೈಂಗಿಕ ಆರೋಪ ಹೊರಿಸಿ ಪ್ರತಿಭಟನೆ ನಡೆಸಿ ಕುಸ್ತಿಗೆ ನಿವೃತ್ತಿ ಹೇಳಿದ್ದ ಸಾಕ್ಷಿ ಮಲಿಕ್‌ ಕೂಡ ಈ ಒಲಿಂಪಿಕ್ಸ್​ನಲ್ಲಿ ಕಂಚಿನ ಪದಕ ಜಯಿಸಿದ್ದರು.


ಚಿನ್ನ ಗೆದ್ದ ನೀರಜ್​ ಚೋಪ್ರಾ

ಕೊರೊನಾ ಮಹಾಮಾರಿ ಸಾಂಕ್ರಾಮಿಕ ರೋಗದಿಂದ ಹಲವು ಕಟ್ಟುಪಾಡುಗಳ ನಡುವೆ ಜಪಾನ್​ನ ಟೋಕಿಯೊದಲ್ಲಿ ನಡೆದಿದ್ದ ಒಲಿಂಪಿಕ್ಸ್​ನಲ್ಲಿ ಭಾರತ ಒಟ್ಟು 7 ಪದಕ ಜಯಿಸಿತ್ತು. ಇದರಲ್ಲಿ ಒಂದು ಚಿನ್ನ, 2 ಬೆಳ್ಳಿ ಮತ್ತು 4 ಕಂಚಿನ ಪದಕ ಒಳಗೊಂಡಿತ್ತು. ಒಟ್ಟಾರೆಯಾಗಿ ಭಾರತ ಪದಕ ಪಟ್ಟಿಯಲ್ಲಿ 48ನೇ ಸ್ಥಾನ ಪಡೆದಿತ್ತು. ಸ್ಟಾರ್​ ಜಾವೆಲಿನ್​ ಎಸೆತಗಾರ ನೀರಜ್ ಚೋಪ್ರ ಚಿನ್ನದ ಪದಕ ಗೆದ್ದು ಒಲಿಂಪಿಕ್ಸ್‌ನ ಟ್ರ್ಯಾಕ್‌ ಇವೆಂಟ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಪಿವಿ ಸಿಂಧು ಕಂಚಿನ ಪದಕ ಜಯಿಸಿ ಸತತವಾಗಿ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಸಾಧನೆ ಮಾಡಿದರು. ಭಾರತದ ಪುರುಷರ ಹಾಕಿ ತಂಡ ಕಂಚಿನ ಪದಕ ಗೆದ್ದು 1980ರ ಬಳಿಕ ಮೊದಲ ಬಾರಿಗೆ ಒಲಿಂಪಿಕ್ ಹಾಕಿಯಲ್ಲಿ ಪದಕ ಗೆದ್ದು ಸಂಭ್ರಮಿಸಿತ್ತು. ಬಾಕ್ಸರ್​ ಲವ್ಲೀನಾ ಬೋರ್ಗೊಹೈನ್ ಕಂಚು ಗೆದ್ದರೆ, ಮೀರಾಬಾಯಿ ಚಾನು ಬೆಳ್ಳಿಯೊಂದಿಗೆ ಮಿನುಗಿದರು. ಕುಸ್ತಿಪಟು ರವಿ ದಹಿಯಾ ಬೆಳ್ಳಿ, ಬಜರಂಗ್ ಪೂನಿಯಾ ಕಂಚು ಗೆದ್ದರು.​

35 ಪದಕ


ಒಲಿಂಪಿಕ್ಸ್​ ಇತಿಹಾಸದಲ್ಲಿ ಭಾರತ ಇದುವರೆಗೆ ಒಟ್ಟು 35 ಪದಕಗಳನ್ನು ಗೆದ್ದಿದೆ. ಇದರಲ್ಲಿ 10 ಚಿನ್ನ, 9 ಬೆಳ್ಳಿ ಮತ್ತು 16 ಕಂಚು ಒಳಗೊಂಡಿದೆ. ಈ ಬಾರಿ ಕನಿಷ್ಠ 20 ಪದಕ ಗೆಲ್ಲುವ ನಿರೀಕ್ಷೆ ಇದೆ. ನಿರೀಕ್ಷೆ ಮಾಡಿದಷ್ಟು ಪದಕ ಗೆದ್ದರೆ ಒಟ್ಟು ಪದಕಗಳ ಸಂಖ್ಯೆ 50ರ ಗಡಿ ದಾಟಲಿದೆ.

Continue Reading
Advertisement
R Ashwin
ಪ್ರಮುಖ ಸುದ್ದಿ15 mins ago

R Ashwin : ಸುನೀಲ್ ನರೈನ್ ರೀತಿ ಆರಂಭಿಕರಾಗಿ 20 ಎಸೆತಕ್ಕೆ 45 ರನ್ ಬಾರಿಸಿದ ಆರ್.​ ಅಶ್ವಿನ್​; ಇಲ್ಲಿದೆ ವಿಡಿಯೊ

Children Mobile Addiction
ಆರೋಗ್ಯ19 mins ago

Children Mobile Addiction: ನಮ್ಮ ಮಕ್ಕಳು ಎಷ್ಟು ಹೊತ್ತು ಮೊಬೈಲ್‌ ನೋಡಬಹುದು?

Road Accident
ಕರ್ನಾಟಕ23 mins ago

Road Accident: ಕೊಡಗಿನ ಸುಂಟಿಕೊಪ್ಪ ಬಳಿ ಟಿಪ್ಪರ್-ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರ ದುರ್ಮರಣ

Assembly Session Job reservation for Kannadigas in private sectors Cabinet meeting approves bill
ಕರ್ನಾಟಕ30 mins ago

Assembly Session: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ; ಏನೆಲ್ಲ ಅರ್ಹತೆ ಇರಬೇಕು?

Paris Olympics 2024
ಪ್ರಮುಖ ಸುದ್ದಿ1 hour ago

Paris Olympics 2024 : ಟೋಕಿಯೊದಲ್ಲಿ ನಡೆದ 2020ರ ಒಲಿಂಪಿಕ್ಸ್​ನಲ್ಲಿ ಭಾರತ ಗೆದ್ದ ಪದಕಗಳ ಸಂಖ್ಯೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Dog Ethnicwear
ಫ್ಯಾಷನ್1 hour ago

Dog Ethnicwear: ನಾಯಿಗಳಿಗೂ ಬಂತು ಎಥ್ನಿಕ್‌ ವೇರ್ಸ್! ಎಷ್ಟು ಮುದ್ದಾಗಿ ಕಾಣಿಸುತ್ತಿವೆ!

SIM Cards
ಗ್ಯಾಜೆಟ್ಸ್1 hour ago

SIM Cards: ಮಿತಿ ಮೀರಿ ಮೊಬೈಲ್‌ ಸಿಮ್ ಹೊಂದಿದ್ದೀರಾ? ಕಾದಿದೆ ಭಾರಿ ದಂಡ, ಶಿಕ್ಷೆ!

Assembly Session
ಕರ್ನಾಟಕ1 hour ago

Assembly Session: ಲೂಟಿಕೋರರ ಪಿತಾಮಹ ನೀನು: ಸದನದಲ್ಲಿ ಅಶ್ವತ್ಥ್ ನಾರಾಯಣ ವಿರುದ್ಧ ಗುಡುಗಿದ ಡಿಕೆಶಿ!

Ananth Ambani Fashion
ಫ್ಯಾಷನ್2 hours ago

Ananth Ambani Fashion: ಅನಂತ್‌ ಅಂಬಾನಿ ಬಳಿ ಇದೆ ಡೈಮಂಡ್‌ ಬ್ರೂಚ್‌ಗಳ ಕಲೆಕ್ಷನ್‌! ಇವುಗಳ ಮೌಲ್ಯ ಎಷ್ಟಿರಬಹುದು?

Entrepreneurship Development Training Concluding Ceremony at Kanakagiri
ಕೊಪ್ಪಳ2 hours ago

Koppala News: ಕನಕಗಿರಿಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ7 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ9 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 day ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌