BMTC Bus Fire: ಎಂಜಿ ರಸ್ತೆಯಲ್ಲಿ ಸುಟ್ಟು ಭಸ್ಮವಾದ ಬಿಎಂಟಿಸಿ ಬಸ್ - Vistara News

ಬೆಂಗಳೂರು

BMTC Bus Fire: ಎಂಜಿ ರಸ್ತೆಯಲ್ಲಿ ಸುಟ್ಟು ಭಸ್ಮವಾದ ಬಿಎಂಟಿಸಿ ಬಸ್

BMTC Bus Fire: ರೋಸ್ ಗಾರ್ಡನ್‌ನಿಂದ ಶಿವಾಜಿನಗರದ ಕಡೆಗೆ ಹೋಗುತ್ತಿದ್ದ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣವೇ ಎಚ್ಚೆತ್ತುಕೊಂಡ ಬಿಎಂಟಿಸಿ ಬಸ್ ಚಾಲಕ, ನಿರ್ವಾಹಕರು ಪ್ರಯಾಣಿಕರನ್ನು ಕೆಳಗೆ ಇಳಿಸಿದರು.

VISTARANEWS.COM


on

bmtc bus fire mg road
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿಯ ಜನನಿಬಿಡ ಹಾಗೂ ವಾಹನನಿಬಿಡವಾದ ಎಂಜಿ ರೋಡ್‌ (MG Road) ನಟ್ಟ ನಡುವೆ ಬಿಎಂಟಿಸಿ ಬಸ್‌ (BMTC Bus Fire) ಒಂದು ಇಂದು ಬೆಳಗ್ಗೆ ಬೆಂಕಿಯ ಕೆನ್ನಾಲಗೆಗೆ ಸುಟ್ಟು ಭಸ್ಮವಾಗಿದೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ. ರೋಸ್ ಗಾರ್ಡನ್‌ನಿಂದ ಶಿವಾಜಿನಗರದ ಕಡೆಗೆ ಹೋಗುತ್ತಿದ್ದ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣವೇ ಎಚ್ಚೆತ್ತುಕೊಂಡ ಬಿಎಂಟಿಸಿ ಬಸ್ ಚಾಲಕ, ನಿರ್ವಾಹಕರು ಪ್ರಯಾಣಿಕರನ್ನು ಕೆಳಗೆ ಇಳಿಸಿದರು. ಬಸ್ಸಿನಲ್ಲಿ ಸುಮಾರು 30 ಮಂದಿ ಪ್ರಯಾಣಿಕರಿದ್ದರು. ಚಾಲಕರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.

ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಧಾವಿಸಿ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಈ ಘಟನೆಯಿಂದಾಗಿ, ಎಂಜಿ ರಸ್ತೆಯ ಸದಾ ದಟ್ಟ ವಾಹನನಿಬಿಡ ಸ್ಥಳವಾದ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಟ್ರಾಫಿಕ್‌ ಅಸ್ತವ್ಯಸ್ತವಾಯಿತು. ನಡು ರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್‌ನಿಂದ ಮೇಲೆದ್ದ ಭಾರಿ ಪ್ರಮಾಣದ ಹೊಗೆ ಪಕ್ಕದಲ್ಲಿದ್ದ ಮೆಟ್ರೋ ನಿಲ್ದಾಣವನ್ನು ಸಹ ಆವರಿಸಿತು.

ಬಾಡಿಗೆಗೆ ಸಿಗುತ್ತೆ ಬಿಎಂಟಿಸಿ ಬಸ್ಸು : ಯಾವ ಬಸ್ಸು, ಎಷ್ಟು ದರ?

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್​ಗಳು (BMTC Bus) ಇನ್ನು ಮುಂದೆ ನಿಮ್ಮ ಖಾಸಗಿ ಕಾರ್ಯಕ್ರಮಗಳಿಗೆ ಬಾಡಿಗೆಗೆ ದೊರೆಯುತ್ತವೆ. ಇದುವರೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು (KSRTC Bus) ಬಾಡಿಗೆಗೆ ಪಡೆಯುವ ಅವಕಾಶವಿತ್ತು. ಆದರೆ, ಈಗ ಬಿಎಂಟಿಸಿಯಲ್ಲಿಯೂ ಈ ವ್ಯವಸ್ಥೆಯನ್ನು ನೀಡಲಾಗುತ್ತಿದೆ. ಶೈಕ್ಷಣಿಕ ಪ್ರವಾಸ, ಧಾರ್ಮಿಕ ಅಥವಾ ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದು, ಮದುವೆ ಸಮಾರಂಭ ಸೇರಿದಂತೆ ಇತ್ಯಾದಿ ಕಾರ್ಯಕ್ರಮಗಳಿಗಾಗಿ ಬಾಡಿಗೆಗೆ ಪಡೆಯಬಹುದಾಗಿದೆ.

ಸಾಂದರ್ಭಿಕ ಒಪ್ಪಂದದ ಆಧಾರದ ಮೇಲೆ ವಿವಿಧ ಮಾದರಿಯ ಬಸ್​ಗಳನ್ನು ಬಾಡಿಗೆ ರೂಪದಲ್ಲಿ ಪಡೆದುಕೊಳ್ಳಲಾಗಿದೆ. ಇಲ್ಲಿ ಬಾಡಿಗೆ ಪಡೆಯುವ ಬಸ್‌ನ ಆಧಾರದ ಮೇಲೆ ದರವನ್ನು ನಿಗದಿಪಡಿಸಲಾಗಿದೆ. ಹೀಗಾಗಿ ಬಿಎಂಟಿಸಿಯು ದರದ ವಿವರವನ್ನು ಸಹ ಬಿಡುಗಡೆ ಮಾಡಿದೆ.

ಯಾವ ಬಸ್‌ಗಳು ಬಾಡಿಗೆಗೆ ಲಭ್ಯ? ಏನಿದರ ದರ?

ಪುಷ್ಪಕ್‌ ಬಸ್‌: ಬಿಎಂಟಿಸಿ ಪುಷ್ಪಕ್ ಬಸ್ ಒಟ್ಟು 47 ಆಸನಗಳನ್ನು ಹೊಂದಿದೆ. ಈ ಬಸ್‌ 8 ಗಂಟೆ ಅವಧಿಗೆ ಕನಿಷ್ಠ 150 ಕಿ.ಮೀ. ವರೆಗೆ ಸಂಚರಿಸಲಿದೆ. ಪ್ರತಿ ಕಿ.ಮೀಗೆ 55 ರೂಪಾಯಿಯಂತೆ 8 ಗಂಟೆಯ ಬಾಡಿಗೆ ದರ 8,250 ರೂಪಾಯಿಯನ್ನು ನಿಗದಿಪಡಿಸಲಾಗಿದೆ. ಅದೇ 12 ಗಂಟೆ ಅವಧಿಗೆ ಈ ಪುಷ್ಪಕ್ ಬಸ್ ಅನ್ನು ಬಾಡಿಗೆ ಪಡೆದರೆ ಪ್ರತಿ ಕಿಲೋ ಮೀಟರ್‌ಗೆ 50 ರೂಪಾಯಿಯಂತೆ 10,000 ರೂಪಾಯಿ ಬಾಡಿಗೆಯನ್ನು ನೀಡಬೇಕು. ಈ ಅವಧಿಗೆ ಪುಷ್ಪಕ್‌ ಬಸ್‌ ಕನಿಷ್ಠ 200 ಕಿಲೋ ಮೀಟರ್‌ ಸಂಚರಿಸಲಿದೆ.

ಅದೇ 24 ಗಂಟೆ ಅವಧಿಗೆ ಬೇಕಿದ್ದರೂ ಬಿಎಂಟಿಸಿ ಆಚರಣಾ ವ್ಯಾಪ್ತಿಯಲ್ಲಿ ಬಾಡಿಗೆಗೆ ಲಭ್ಯವಿದೆ. ಇದು ಕನಿಷ್ಠ 250 ಕಿ.ಮೀ ಸಂಚರಿಸಲಿದ್ದು, ಪ್ರತಿ ಕಿ.ಮೀ ದರ 45 ರೂಪಾಯಿಯಂತೆ 11,250 ರೂಪಾಯಿ ಬಾಡಿಗೆ ನಿಗದಿ ಮಾಡಲಾಗಿದೆ. 24 ಗಂಟೆ ಅವಧಿಗೆ ಹೊರ ನಗರಗಳಿಗೆ ಕನಿಷ್ಠ 300 ಕಿ.ಮೀ ವರೆಗೆ ಪ್ರತಿ ಕಿ.ಮೀ ದರ 45 ರೂಪಾಯಿಯಂತೆ 13,500 ರೂಪಾಯಿ ಬಾಡಿಗೆ ನಿಗದಿ ಮಾಡಲಾಗಿದೆ.

ಬಿ.ಎಸ್- 6 ಬಸ್: 41 ಆಸನಗಳಿರುವ ಬಿಎಂಟಿಸಿ ಬಿ.ಎಸ್- 6 ಬಸ್‌ 8 ಗಂಟೆ ಅವಧಿಗೆ ಕನಿಷ್ಠ 150 ಕಿಲೋ ಮೀಟರ್‌ ಸಂಚರಿಸಲಿದೆ. ಪ್ರತಿ ಕಿ.ಮೀಗೆ 60 ರೂಪಾಯಿಯಂತೆ 9,000 ರೂಪಾಯಿ ನಿಗದಿ ಮಾಡಲಾಗಿದೆ. 12 ಗಂಟೆ ಅವಧಿಗೆ ಕನಿಷ್ಠ 200 ಕಿ.ಮೀ ಸಂಚರಿಸಲಿದ್ದು, ಪ್ರತಿ ಕಿ.ಮೀ ದ 55 ರೂಪಾಯಿಯಂತೆ 11,000 ರೂಪಾಯಿ ನಿಗದಿ ಮಾಡಲಾಗಿದೆ.

ಅದೇ 24 ಗಂಟೆ ಅವಧಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆಚರಣಾ ವ್ಯಾಪ್ತಿಯಲ್ಲು ಕನಿಷ್ಠ 250 ಕಿ.ಮೀ.ವರೆಗೆ ಸಂಚಾರ ಮಾಡಲಿದೆ. ಇದಕ್ಕೆ ಪ್ರತಿ ಕಿ.ಮೀ ದರವನ್ನು 50 ರೂಪಾಯಿಯಂತೆ ನಿಗದಿ ಮಾಡಲಾಗಿದ್ದು, ಒಟ್ಟು 12,500 ರೂಪಾಯಿ ನಿಗದಿ ಮಾಡಲಾಗಿದೆ.ನಗರದ ಹೊರಗೆ ಸಂಚಾರ ಮಾಡಬೇಕಿದ್ದರೆ 24 ಗಂಟೆ ಅವಧಿಗೆ ಕನಿಷ್ಠ 300 ಕಿ.ಮೀನಲ್ಲಿ ಪ್ರತಿ ಕಿ.ಮೀ ದರ 50 ರೂಪಾಯಿಯಂತೆ 15,000 ರೂಪಾಯಿ ಬಾಡಿಗೆ ನಿಗದಿ ಮಾಡಲಾಗಿದೆ.

ಎಲೆಕ್ಟ್ರಿಕ್ ಬಸ್‌ಗಳು: 40 ಆಸನಗಳಿರುವ ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ಗಳು 25 ಗಂಟೆ ಅವಧಿಗೆ 150 ಕಿ.ಮೀವರೆಗೆ 15,000 ರೂಪಾಯಿ ಬಾಡಿಗೆ ದರ ನಿಗದಿ ಮಾಡಲಾಗಿದೆ. 33 ಆಸನಗಳಿರುವ ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ಗಳು 120 ಕಿ.ಮೀವರೆಗೆ 13,000 ರೂಪಾಯಿ ನಿಗದಿ ಮಾಡಲಾಗಿದೆ.

ಹವಾನಿಯಂತ್ರಿತ ಬಸ್:‌ ಎಸಿ ಬಸ್​ಗಳಿಗೆ 12 ಗಂಟೆ ಅವಧಿಗೆ ಪ್ರತಿ ಕಿಲೋ ಮೀಟರ್ ಗೆ 80 ರೂಪಾಯಿಯಂತೆ 14,000 ರೂ, 24 ಗಂಟೆ ಅವಧಿಗೆ ಪ್ರತಿ ಕಿಲೋ ಮೀಟರ್ ಗೆ 80 ರೂಪಾಯಿಯಂತೆ 20 ಸಾವಿರ ಬಾಡಿಗೆ ನಿಗದಿ ಮಾಡಲಾಗಿದೆ.

ಇದನ್ನೂ ಓದಿ: BMTC Driver : ಬಿಎಂಟಿಸಿ ಎಲೆಕ್ಟ್ರಿಕಲ್‌ ಬಸ್‌ಗೆ ಪರಭಾಷಿಕರ ನೇಮಕ; ಡಿಸಿ ಕಚೇರಿಗೆ ನುಗ್ಗಿ ಕನ್ನಡಿಗರ ಆಕ್ರೋಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Assembly Session: ಲೂಟಿಕೋರರ ಪಿತಾಮಹ ನೀನು: ಸದನದಲ್ಲಿ ಅಶ್ವತ್ಥ್ ನಾರಾಯಣ ವಿರುದ್ಧ ಗುಡುಗಿದ ಡಿಕೆಶಿ!

Assembly Session: ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ನಂತರ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಅವರ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

Assembly Session
Koo

ಬೆಂಗಳೂರು: ವಿಧಾನಮಂಡಲದ ಅಧಿವೇಶನದಲ್ಲಿ (Assembly Session) ಎರಡನೇ ದಿನವಾದ ಮಂಗಳವಾರವೂ ವಾಲ್ಮೀಕಿ ನಿಗಮದ ಹಗರಣವು (Valmiki Corporation Scam) ಸದ್ದು ಮಾಡಿದೆ. ಚರ್ಚೆಯ ವೇಳೆ ಸಿಎಂ ಸಿದ್ದರಾಮಯ್ಯ (CM Siddaramaiah) ಗೈರುಹಾಜರಿಯನ್ನು ಬಿಜೆಪಿ ಶಾಸಕ ಡಾ.ಸಿ.ಎನ್. ಅಶ್ವತ್ಥ್‌ ನಾರಾಯಣ್‌ (Ashwath narayan) ಆಕ್ಷೇಪಿಸಿದರು. ಈ ವೇಳೆ ʼಲೂಟಿಕೋರರ ಪಿತಾಮಹʼ ನೀನು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿರುವುದು ಕಂಡುಬಂದಿದೆ.

ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ನಂತರ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಚರ್ಚೆ ಮೇಲಿನ ಪ್ರಸ್ತಾಪ ಮುಂದುವರಿಸಲು ಮುಂದಾದರು. ಈ ವೇಳೆ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಅವರು, ವಾಲ್ಮೀಕಿ ನಿಗಮದ ಹಗರಣದಲ್ಲಿ ಹಗಲು ದರೋಡೆ ಮಾಡಿರುವ ಮುಖ್ಯಮಂತ್ರಿಗಳು ಗೈರಾಗಿದ್ದಾರೆ. ಅವರು ಸದನಕ್ಕೆ ಹಾಜರಾಗಬೇಕು ಎಂದು ಪಟ್ಟು ಹಿಡಿದರು.

ಅಶೋಕ್ ಚರ್ಚೆ ಮಾಡುವಾಗ ಸಿಎಂ ಸಿದ್ದರಾಮಯ್ಯ ಗೈರಾದ ಹಿನ್ನೆಲೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ ಶಾಸಕ ಅಶ್ವತ್ಥ್‌ ನಾರಾಯಣ್, ನೇರವಾಗಿ ಇದು ಮುಖ್ಯಮಂತ್ರಿಗಳಿಗೆ ಸಂಬಂಧಿಸಿದ ವಿಚಾರ. ಹಣಕಾಸು ಸಚಿವರಾಗಿರೋ ಸಿಎಂ ಮೇಲೆ ಗಂಭೀರ ಆರೋಪ ಇದೆ. ಕೂಡಲೇ ಅವರನ್ನು ಕರೆಸಿ ಅಂತ ಆಗ್ರಹಿಸಿದರು. ಈ ವೇಳೆ ಸದನದಲ್ಲಿ ಎದ್ದು ನಿದ್ದು ಸಿಎಂ ಪರವಾಗಿ ಬ್ಯಾಟಿಂಗ್ ಮಾಡಿದ ಡಿಸಿಎಂ ಡಿಕೆಶಿ, ಸಿಎಂಗೆ ಗೌರವ ಕೊಡೋದನ್ನು ಕಲಿಯಿರಿ ಅಂತ ಆಕ್ರೋಶ ಹೊರಹಾಕಿದರು. ಈ ವೇಳೇ ಲೂಟಿಕೋರರ ಪಿತಾಮಹ ನೀನು ಅಂತ ಅಶ್ವತ್ಥ್‌ ನಾರಾಯಣ್ ಕಡೆ ಬೊಟ್ಟು ಮಾಡಿ ಕಿಡಿಕಾರಿದರು. ಈ ವೇಳೆ ಡಿಸಿಎಂ ವಿರುದ್ಧ ಮುಗಿಬಿದ್ದ ಬಿಜೆಪಿ ಶಾಸಕರು, ನೀವೇನು ಎಂಬುವುದು ಎಲ್ಲರಿಗೂ ಗೊತ್ತಿದೆ ಅಂತ ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ | Lakshmi Hebbalkar: ವಿಶೇಷ ಶಾಲೆಗಳ ಶಿಕ್ಷಕರ ವೇತನ ಪರಿಷ್ಕರಣೆಗೆ ಅಗತ್ಯ ಕ್ರಮ: ಹೆಬ್ಬಾಳಕರ್ ಭರವಸೆ

ಈ ವೇಳೆ ಮಾತನಾಡಿದ ಶಿವಕುಮಾರ್ ಅವರು, ಸಿದ್ದರಾಮಯ್ಯ ಅವರು ಈ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದಾಗ ವಿಷಯದ ಚರ್ಚೆಗೆ ಪ್ರಸ್ತಾಪ ಮಾಡಿದಾಗೆಲ್ಲ ಬಿಜೆಪಿಯ ಮುಖ್ಯಮಂತ್ರಿಗಳು ಸದನದಲ್ಲಿ ಹಾಜರಿರುತ್ತಿದ್ದರೇ? ಅವರು ಗೈರಾಗಿರಲಿಲ್ಲವೇ? ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಶ್ವತ್ಥ್ ನಾರಾಯಣ ಅವರು ಮಾಡಬಾರದನ್ನು ಮಾಡಿರುವುದಕ್ಕೇ ಜನ ನಮ್ಮನ್ನು ಇಲ್ಲಿ ಕೂರಿಸಿ, ನಿಮ್ಮನ್ನು ಅಲ್ಲಿ ಕೂರಿಸಿ ತೀರ್ಪು ಕೊಟ್ಟಿದ್ದಾರೆ” ಎಂದು ಹರಿಹಾಯ್ದರು.

“ನನ್ನ ಹೆಸರು ಹೇಳಿ ಆಪಾದನೆ ಮಾಡಲಾಗಿದೆ, ಸಾಕ್ಷಿ ನೀಡಬೇಕು” ಎಂದು ಅಶ್ವತ್ಥ್ ನಾರಾಯಣ ಹೇಳಿದಾಗ “ಮಾಡಬಾರದ್ದು ಮಾಡಿರುವ ನಿಮ್ಮದನ್ನು ತೆಗೆಯುತ್ತೇವೆ, ಮಾತನಾಡುತ್ತೇವೆ ತಡೆಯಿರಿ” ಎಂದು ಗುಡುಗಿದರು.

“ನನ್ನ ವಿರುದ್ದ ಮಾಡಿದ ಆಪಾದನೆ ಹಿಟ್ ಆ್ಯಂಡ್ ರನ್” ಎಂದು ಅಶ್ವತ್ಥ್ ನಾರಾಯಣ ಗದ್ದಲ ಎಬ್ಬಿಸಿದಾಗ “ರಾಮನಗರದ ಕಸ ಗುಡಿಸುತ್ತೇನೆ ಎಂದು ಹೇಳಿದ ನಿಮಗೆ ವಿಧಾನಸಭೆ ಚುನಾವಣೆಯಲ್ಲಿ ಒಂದೇ ಒಂದು ಸೀಟು ಗೆಲ್ಲಲು ಆಗಲಿಲ್ಲ” ಎಂದು ಡಿಸಿಎಂ ಕುಟುಕಿದರು.

ಮುಂದುವರಿದು “ಇಷ್ಟು ಹೊತ್ತಿನ ತನಕ ಮುಖ್ಯಮಂತ್ರಿಗಳು ಕುಳಿತಿರಲಿಲ್ಲವೇ? ಸದನದಲ್ಲಿ ನಾವೆಲ್ಲಾ ಕುಳಿತಿಲ್ಲವೇ? ಮುಖ್ಯಮಂತ್ರಿಗಳ ಮೇಲೆ ಆರೋಪವಿದೆ ಎಂದು ಹೇಗೆ ಹೇಳುತ್ತಾರೆ ಇವರು?” ಎಂದು ಬಿಜೆಪಿ ಶಾಸಕರ ಮೇಲೆ ಡಿಸಿಎಂ ಮುಗಿಬಿದ್ದರು. ʼ ಈ ರೀತಿ ಯಾರ ಹೆಸರನ್ನು ಬೇಕಾದರೂ ನಾವು ಬಳಸಿಕೊಳ್ಳಬಹುದೇ” ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಹೇಳಿದಾಗ “ಇವರು (ಅಶ್ವತ್ಥ್ ನಾರಾಯಣ) ಮುಖ್ಯಮಂತ್ರಿಗಳ ಹೆಸರನ್ನು ಹೇಗೆ ಬಳಸಿಕೊಂಡರು? ಎಂದು ಕಟುವಾಗಿ ಮರುಪ್ರಶ್ನಿಸಿದರು.

ಶಿವಕುಮಾರ್ ಅವರ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಶಾಸಕರು ಗದ್ದಲ ಮಾಡಿದಾಗ ಕಲಾಪವನ್ನು ಮುಂದೂಡಲಾಯಿತು. “ಎಸ್ಐಟಿ ಎಂದರೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್ ಎಂದು ಶಾಸಕ ಸುರೇಶ್ ಕುಮಾರ್ ಹೇಳಿದ್ದಾರೆ, ಇದನ್ನು ಸಹ ಕಡತದಿಂದ ತೆಗೆದುಹಾಕಬೇಕು” ಎಂದು ಡಿಸಿಎಂ ಅವರು ಸ್ವೀಕರ್ ಗೆ ಮನವಿ ಮಾಡಿದರು.

ಇದನ್ನೂ ಓದಿ | D. S. Veeraiah: ಅರಸು ಟ್ರಕ್ ಟರ್ಮಿನಲ್ ಹಗರಣ;‌ ಡಿ.ಎಸ್‌.ವೀರಯ್ಯಗೆ ಜು.30ರವರೆಗೆ ನ್ಯಾಯಾಂಗ ಬಂಧನ

ಇದೇ ವೇಳೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದಾಗ “ ನಾನು ಸ್ಪೀಕರ್ ಅವರ ಬಳಿ ಮನವಿ ಮಾಡುತ್ತಿದ್ದೇನೆ. ನನಗೂ ಈ ಸದನದ ಕಾನೂನು ಗೊತ್ತಿದೆ” ಎಂದಾಗ, “ನೀವು ಸಿಬಿಐ ಬಗ್ಗೆ ಹೇಳಿದ್ದೀರಲ್ಲ” ಎಂದು ವಿಪಕ್ಷ ನಾಯಕ ಅಶೋಕ್ ಹೇಳಿದರು. “ಮೊದಲು ಹೇಳಿದವರು ನೀವು ಮತ್ತು ದೇವೇಗೌಡರು” ಎಂದು ಶಿವಕುಮಾರ್ ಅವರು ತಿರುಗೇಟು ಕೊಟ್ಟರು.

Continue Reading

ಮಳೆ

Karnataka Weather : ನಾಳೆಗೂ ಮಳೆ ಮುನ್ನೆಚ್ಚರಿಕೆ; ಸೆ.30ರವರೆಗೆ ಈ ಪ್ರವಾಸಿ ತಾಣಗಳಲ್ಲಿ ಟ್ರಕ್ಕಿಂಗ್‌ ನಿಷೇಧ

Karnataka Weather Forecast : ಬುಧವಾರವೂ ಗುಡುಗು ಸಹಿತ ಭಾರಿ ಮಳೆಯಾಗುವ (Heavy rain alert) ಸಾಧ್ಯತೆ ಇದೆ. ಚಿಕ್ಕಮಗಳೂರಿನಲ್ಲಿ ಅಬ್ಬರಿಸುತ್ತಿರುವ ಮಳೆ ಕಾರಣಕ್ಕೆ ಎರಡೂವರೆ ತಿಂಗಳು ಕೆಲವು ಪ್ರವಾಸಿತಾಣಗಳಿಗೆ ಟ್ರಕ್ಕಿಂಗ್‌ ನಿಷೇಧಿಸಲಾಗಿದೆ.

VISTARANEWS.COM


on

By

karnataka weather Forecast
Koo

ಚಿಕ್ಕಮಗಳೂರು/ಬೆಂಗಳೂರು: ರಾಜ್ಯಾದ್ಯಂತ ನೈರುತ್ಯ ಮುಂಗಾರು (karnataka Weather Forecast) ಸಕ್ರಿಯವಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯು (Heavy Rain Alert) ಅಬ್ಬರಿಸುತ್ತಿದ್ದು, ಆಗುಂಬೆ 33, ಅಂಕೋಲಾ 26, ಕಾರವಾರ 23, ಹಾಗೂ ಗೇರ್ಸೊಪ್ಪ 21 ಸೆಂ.ಮೀ ಮಳೆಯಾಗಿದೆ. ಇನ್ನೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೆಪ್ಟೆಂಬರ್ 30ರವರೆಗೆ ಚಾರಣಕ್ಕೆ ನಿಷೇಧಿಸಲಾಗಿದೆ.

ಚಿಕ್ಕಮಗಳೂರಿನ ಬಲ್ಲಾಳ ರಾಯನ ದುರ್ಗ, ರಾಣಿಝರಿ, ಬಂಡಾಜೆ ಫಾಲ್ಸ್ ಟ್ರಕ್ಕಿಂಗ್‌ಗೆ ನಿರ್ಬಂಧ ಹಾಕಲಾಗಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಭಾರಿ ಮಳೆಯಿಂದಾಗಿ ನೀರಿನ ಹರಿವು ಹೆಚ್ಚಳಗೊಂಡಿದೆ. ಪ್ರವಾಸಿಗರು ಚಾರಣದ ವೇಳೆ ಅಪಾಯಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಿದೆ. ಪ್ರವಾಸಿಗರ ಹಿತದೃಷ್ಟಿಯಿಂದ ಮೂಡಿಗೆರೆ ತಾಲೂಕಿನ ಬಲ್ಲಾಳ ರಾಯನ ದುರ್ಗ ಪ್ರವಾಸಿ ತಾಣ, ಕಳಸ ತಾಲೂಕಿನ ಬಂಡಾಜೆ ಫಾಲ್ಸ್‌ಗೆ ಕೊಪ್ಪ ವಿಭಾಗದ ಅರಣ್ಯ ಇಲಾಖೆ ಈ ಕ್ರಮಕೈಗೊಂಡಿದೆ.

ಇದನ್ನೂ ಓದಿ: Muharram 2024: ರಾಯಚೂರಿನಲ್ಲಿ ಮೊಹರಂನಲ್ಲಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ವ್ಯಕ್ತಿ ಸುಟ್ಟು ಭಸ್ಮ

ಶಿವಮೊಗ್ಗದಲ್ಲಿ ಕುಸಿದು ಬಿದ್ದ ಮನೆ

ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಮನೆಯೊಂದು ಕುಸಿದು ಬಿದ್ದಿದೆ. ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಕುಸ್ಕೂರು ಗ್ರಾಮದಲ್ಲಿ ಘಟನೆ ನಡೆದಿದೆ. ಮಂಜಾನಾಯ್ಕ ಎಂಬುವವರಿಗೆ ಸೇರಿದ ಮನೆ ಕುಸಿದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಮನೆಯಲ್ಲಿದ್ದ ಗೃಹ ಬಳಕೆ ವಸ್ತುಗಳು ನೀರುಪಾಲಾಗಿವೆ.

ಉಡುಪಿಯಲ್ಲಿ ಮಳೆಗೆ ಉಕ್ಕಿ ಹರಿದ ಬ್ರಹ್ಮಾವರ ಮಡಿಸಾಲು ಹೊಳೆ

ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಳೆಗೆ ಬ್ರಹ್ಮಾವರ ಮಡಿಸಾಲು ಹೊಳೆ ಉಕ್ಕಿ ಹರಿದಿದೆ. ಇದರಿಂದಾಗಿ ಆರೂರು ಬೆಳ್ಮಾರು ನೆರೆ ಹಾವಳಿ ಸೃಷ್ಟಿಯಾಗಿದೆ. ನೂರಾರು ಎಕರೆ ಕೃಷಿ ಭೂಮಿ ನೆರೆ ನೀರಿನಲ್ಲಿ ಮುಳುಗಿ ನಷ್ಟವಾಗಿದೆ. ಮಂಗಳವಾರ ಮಧ್ಯಾಹ್ನದ ನಂತರ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆ ಆಗಿದೆ. ಆದರೂ ಘಟ್ಟ ಪ್ರದೇಶದಿಂದ ಹರಿದು ಬರುತ್ತಿರುವ ನೀರಿನಿಂದಾಗಿ ನೆರೆ ಸೃಷ್ಟಿಯಾಗುತ್ತಿದೆ.

ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ

ಮುಂದಿನ 24 ಗಂಟೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಗಾಳಿಯ ವೇಗವು 30-40 ಕಿಮೀ ತಲುಪುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಜತೆಗೆ ನಿರಂತರ ಗಾಳಿಯ ವೇಗವು 40-50 ಕಿಮೀ ಇರಲಿದೆ. ಒಳನಾಡಿನ ಬೆಳಗಾವಿ ಮತ್ತು ಹಾಸನ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯು ಅಬ್ಬರಿಸಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Assembly Session: ಸರ್ಕಾರಕ್ಕೆ ವಾಲ್ಮೀಕಿ ಜನಾಂಗದ ಶಾಪ ತಟ್ಟಬಾರದೆಂದರೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ; ಆರ್‌. ಅಶೋಕ್‌ ಆಗ್ರಹ

Assembly Session: ವಾಲ್ಮೀಕಿ ಜನಾಂಗದ ಶಾಪ ಸರ್ಕಾರಕ್ಕೆ ತಟ್ಟಬಾರದೆಂದರೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್ಥಿಕ ಸಚಿವರೂ ಆಗಿರುವುದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಆಗ್ರಹಿಸಿದ್ದಾರೆ.

VISTARANEWS.COM


on

R Ashok demands that Valmiki Development Corporation scam should be investigated by CBI and CM Siddaramaiah should resign
Koo

ಬೆಂಗಳೂರು: ವಾಲ್ಮೀಕಿ ಜನಾಂಗದ ಶಾಪ ಸರ್ಕಾರಕ್ಕೆ ತಟ್ಟಬಾರದೆಂದರೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್ಥಿಕ ಸಚಿವರೂ ಆಗಿರುವುದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ (Assembly Session) ಆಗ್ರಹಿಸಿದರು.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದ ಕುರಿತು ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ನಡೆದಿದೆ ಎಂದು ಸರ್ಕಾರವೇ ಒಪ್ಪಿಕೊಂಡಿದೆ. ವಸಂತ ನಗರದ ಯೂನಿಯನ್‌ ಬ್ಯಾಂಕ್‌ ಹಾಗೂ ಎಂಜಿ ರಸ್ತೆಯ ಬ್ಯಾಂಕ್‌ ಖಾತೆಗೆ ಹಣ ಹಾಕಲಾಗಿದೆ. ಎರಡು ಖಾತೆ ತೆರೆಯಬಾರದು ಎಂದು ಸರ್ಕಾರವೇ ಆದೇಶ ಮಾಡಿರುವಾಗ ಅದನ್ನು ಉಲ್ಲಂಘಿಸಲಾಗಿದೆ. ಕಳ್ಳತನ ಆಗಿರುವುದೇ 187 ಕೋಟಿ ರೂ. ಎಂದಿರುವಾಗ ಅದು 89 ಕೋಟಿ ರೂ. ಎಂದು ಹೇಳಲು ಸಾಧ್ಯವಿಲ್ಲ. ಇದಕ್ಕಾಗಿಯೇ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸು ಇಲಾಖೆಯವರು ತಮಗೆ ಗೊತ್ತಿರಲಿಲ್ಲ ಎಂದು ಹೇಳಿದರೂ ಅದು ದೊಡ್ಡ ತಪ್ಪು ಎಂದರು.

ಇದನ್ನೂ ಓದಿ: Karnataka Rain : ಭಾರಿ ಮಳೆ ಎಫೆಕ್ಟ್‌-ಮಲಗಿದ್ದ‌ ವ್ಯಕ್ತಿ ಮೇಲೆ ಬಿದ್ದ ಗೋಡೆ; ಮರ ಬಿದ್ದು ಕಾರು ಜಖಂ, ಚಾಲಕ ಜಸ್ಟ್‌ ಮಿಸ್‌

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆಗೆ ವಿಶೇಷ ತನಿಖಾ ದಳ ನಿಯೋಜಿಸಲಾಗಿದೆ. ಹಾಗೆಯೇ ಎಚ್‌.ಡಿ.ರೇವಣ್ಣ, ಪ್ರಜ್ವಲ್‌ ರೇವಣ್ಣ ಹಾಗೂ ಭವಾನಿ ರೇವಣ್ಣ ಅವರ ತನಿಖೆಗೆ ವಿಶೇಷ ತನಿಖಾ ದಳ ನಿಯೋಜಿಸಲಾಗಿದೆ. ಎಸ್‌ಐಟಿ ತನಿಖೆ ಆರಂಭವಾದಾಗಲೇ ಅವರು ಭಯಗೊಂಡು ನ್ಯಾಯಾಲಯಕ್ಕೆ ಹೋಗಿದ್ದರು. ಆದರೆ ನಿಗಮದ ತನಿಖೆ ಆರಂಭವಾದಾಗ ಸಚಿವರಿಗೆ ಹಾಗೂ ಅಧ್ಯಕ್ಷರಿಗೆ ಯಾವುದೇ ಭಯ ಇರಲಿಲ್ಲ. “ಸಿಬಿಐ ತನಿಖೆಯಾದರೆ ಎರಡು ವರ್ಷ ಜೈಲು ಹಾಗೂ ನಮ್ಮವರು ಬಂದರೆ ಬಿಡುಗಡೆ” ಎಂದು ಬಿಡುಗಡೆಯಾದ ಆಡಿಯೋದಲ್ಲಿ ಅಧಿಕಾರಿಗಳು ಮಾತಾಡಿದ್ದಾರೆ. ನಿಗಮದ ಹಗರಣದ ತನಿಖೆಯಲ್ಲಿ ಎಸ್‌ಐಟಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.

ಬೇನಾಮಿ ಹಣ ಬಂದ ಕೂಡಲೇ ಸಹಜವಾಗಿ ಇಲ್ಲಿ ಜಾರಿ ನಿರ್ದೇಶನಾಲಯ ಬಂದು ತನಿಖೆ ಮಾಡಿದೆ. ಹಾಗೆಯೇ ಸಿಬಿಐ ಕೂಡ ಕಾನೂನು ಪ್ರಕಾರ ಮಧ್ಯಪ್ರವೇಶ ಮಾಡಿ ತನಿಖೆ ಮಾಡುತ್ತಿದೆ. ಆದರೆ ಎಸ್‌ಐಟಿಯನ್ನು ಕಾಂಗ್ರೆಸ್‌ ಸರ್ಕಾರ ನೇಮಿಸಿದ್ದು, ತನಿಖೆ ವೇಗವಾಗಿ ನಡೆದಿಲ್ಲ. ಇಲ್ಲಿ ತಾರತಮ್ಯ ನಡೆದಿದೆ ಎಂದು ದೂರಿದರು.

ಹಗರಣವಾಗಿದೆ ಎಂದು ಗೊತ್ತಾದಾಗ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಇದು ತಮ್ಮ ವ್ಯಾಪ್ತಿಯದ್ದಲ್ಲ ಎಂದು ಹೇಳಿದರು. ಆರ್ಥಿಕ ಇಲಾಖೆಯವರೂ ಇದನ್ನೇ ಹೇಳಿದರು. ಮುಖ್ಯಮಂತ್ರಿಯನ್ನು ಕೇಳಿದರೆ ಇದು ನನಗೆ ಸಂಬಂಧವಿಲ್ಲ ಎಂದರು. ಹೀಗೆ ಯಾರೂ ಒಪ್ಪಿಕೊಳ್ಳದೆ ಮತ್ತೊಬ್ಬರ ಮೇಲೆ ತಪ್ಪು ಹೇರುವ ಕೆಲಸ ಮಾಡಿದ್ದಾರೆ. ಇದು ಹೊಣೆ ಇಲ್ಲದ ಸರ್ಕಾರ ಎಂದು ದೂರಿದರು.

ಎಲ್ಲ ಶಾಸಕರಿಗೆ ಸಂಬಂಧಿಸಿದ್ದು

ಇದು 224 ಶಾಸಕರಿಗೂ ಸಂಬಂಧಪಟ್ಟ ಸಂಗತಿ. ಒಂದು ವರ್ಷದಿಂದ ನಿಗಮದಿಂದ ದಲಿತರಿಗೆ 187 ಕೋಟಿ ರೂ. ಮೊತ್ತದ ಯೋಜನೆ ಸಿಕ್ಕಿಲ್ಲ. ಈ ಹಣವನ್ನು ಮುಖ್ಯಮಂತ್ರಿಯೇ ನೀಡಬೇಕು. ಇದಕ್ಕೆ ಯಾರು ಜವಾಬ್ದಾರಿ? ಯೋಜನೆ ಮುಂದುವರಿಸುವುದಕ್ಕೆ ಯಾರನ್ನು ಹೊಣೆಗಾರರಾಗಿ ಮಾಡುತ್ತಾರೆ? ಇದು ಕ್ಷೇತ್ರದ ಮತದಾರರಿಗೆ ತಲುಪಬೇಕಾದ ಹಣ. ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತರ ಮನೆಗೆ ಹೋಗಿ ಒಂದು ದಿನ ವಾಸ್ತವ್ಯ ಮಾಡಲಿ. ದಲಿತರು ಎಷ್ಟು ಕಷ್ಟ ಪಡುತ್ತಾರೆ ಎಂದು ಗೊತ್ತಾಗುತ್ತದೆ. ಅಂತಹ ಜನರ ಹಣವನ್ನು ಕದ್ದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: KSRTC Package Tour: ಸೋಮನಾಥಪುರ, ತಲಕಾಡು, ಮಧ್ಯರಂಗ, ಭರಚುಕ್ಕಿ, ಗಗನಚುಕ್ಕಿಗೆ ಕೆಎಸ್‌ಆರ್‌ಟಿಸಿ ಪ್ಯಾಕೇಜ್‌ ಟೂರ್‌; ದರವೆಷ್ಟು?

ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಚಂದ್ರಶೇಖರನ್‌ ಕುಟುಂಬ ಬೀದಿಗೆ ಬಂದಿದೆ ಎಂಬ ಸುದ್ದಿ ಪತ್ರಿಕೆಯಲ್ಲಿ ಬಂದಿದೆ. ಆ ಮನೆಯನ್ನೇ ಕುಟುಂಬದವರು ಖಾಲಿ ಮಾಡಿ ಹೋಗಿದ್ದಾರೆ. ಆ ಕುಟುಂಬವೀಗ ಬೀದಿಗೆ ಬಂದಿದೆ. ಸಚಿವರು ಬಂದು ಸಮಾಧಾನ ಹೇಳಿದ್ದಾರೆಯೇ ಹೊರತು, ಏನೂ ಪರಿಹಾರ ಸಿಕ್ಕಿಲ್ಲ ಎಂದು ಮೃತ ಅಧಿಕಾರಿಯ ಪತ್ನಿ ಹೇಳಿದ್ದಾರೆ. ಇದೇ ರೀತಿ ನಮ್ಮ ಮನೆಯ ಹೆಣ್ಣುಮಕ್ಕಳಿಗೆ ಆಗಿದ್ದರೆ ಸಹಿಸಿಕೊಳ್ಳುತ್ತಿದ್ದೆವಾ? ಎಂದು ಪ್ರಶ್ನಿಸಿದರು.

Continue Reading

ಕರ್ನಾಟಕ

Lakshmi Hebbalkar: ವಿಶೇಷ ಶಾಲೆಗಳ ಶಿಕ್ಷಕರ ವೇತನ ಪರಿಷ್ಕರಣೆಗೆ ಅಗತ್ಯ ಕ್ರಮ: ಹೆಬ್ಬಾಳಕರ್ ಭರವಸೆ

Lakshmi Hebbalkar: 1982ರ ರಾಜ್ಯ ಅನುಸಂಧಾನ ಸಂಹಿತೆಯಡಿ ನಡೆಯುತ್ತಿರುವ ವಿಶೇಷ ಶಾಲೆಗಳ ವಿಶೇಷ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಯ ಬೇಡಿಕೆಗಳನ್ನು ಇಲಾಖೆ ಸಹಾನುಭೂತಿಯಿಂದ ಪರಿಶೀಲಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಸದ್ಯ ವಿಶೇಷ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ‌ ಶಿಕ್ಷಕರು ಹಾಗೂ ಶಿಕ್ಷಕೇತರರಿಗೆ ಕಳೆದ 14 ವರ್ಷಗಳಿಂದ ವೇತನ ಪರಿಷ್ಕರಣೆ ಆಗಿಲ್ಲ ಎನ್ನುವುದು ಗಮನಕ್ಕೆ ಬಂದಿದೆ. ಹೀಗಾಗಿ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗುವುದು. ಜತೆಗೆ ಪ್ರತಿ ತಿಂಗಳು ವೇತನ ಭರಿಸುವ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

VISTARANEWS.COM


on

Necessary action will be taken for salary revision of special schools teachers says minister Lakshmi Hebbalkar
Koo

ಬೆಂಗಳೂರು: ರಾಜ್ಯದ ವಿಶೇಷ ವಸತಿ ಶಾಲೆಗಳಲ್ಲಿ ಸೇವಾ ನಿರತ ಸಿಬ್ಬಂದಿಯ ವೇತನ ಪರಿಷ್ಕರಣೆ ಸೇರಿದಂತೆ ಮೂಲಭೂತ ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಶೀಘ್ರವೇ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ತಿಳಿಸಿದ್ದಾರೆ.

ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ವಿಶೇಷಚೇತನ ಮಕ್ಕಳ ವಸತಿ ಶಾಲೆಗಳ ಸಭೆಯಲ್ಲಿ ಮಾತನಾಡಿದ‌ ಸಚಿವರು, 1982ರ ರಾಜ್ಯ ಅನುಸಂಧಾನ ಸಂಹಿತೆಯಡಿ ನಡೆಯುತ್ತಿರುವ ವಿಶೇಷ ಶಾಲೆಗಳ ವಿಶೇಷ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಯ ಬೇಡಿಕೆಗಳನ್ನು ಇಲಾಖೆ ಸಹಾನುಭೂತಿಯಿಂದ ಪರಿಶೀಲಿಸಲಿದೆ ಎಂದು ಹೇಳಿದರು.

ಇದನ್ನೂ ಓದಿ: KSRTC Package Tour: ಸೋಮನಾಥಪುರ, ತಲಕಾಡು, ಮಧ್ಯರಂಗ, ಭರಚುಕ್ಕಿ, ಗಗನಚುಕ್ಕಿಗೆ ಕೆಎಸ್‌ಆರ್‌ಟಿಸಿ ಪ್ಯಾಕೇಜ್‌ ಟೂರ್‌; ದರವೆಷ್ಟು?

ಸದ್ಯ ವಿಶೇಷ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ‌ ಶಿಕ್ಷಕರು ಹಾಗೂ ಶಿಕ್ಷಕೇತರರಿಗೆ ಕಳೆದ 14 ವರ್ಷಗಳಿಂದ ವೇತನ ಪರಿಷ್ಕರಣೆ ಆಗಿಲ್ಲ ಎನ್ನುವುದು ಗಮನಕ್ಕೆ ಬಂದಿದೆ. ಹೀಗಾಗಿ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗುವುದು. ಜತೆಗೆ ಪ್ರತಿ ತಿಂಗಳು ವೇತನ ಭರಿಸುವ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು.

ಮಾನಸಿಕ ಭಿನ್ನ ಸಾಮರ್ಥ್ಯದ 25 ವಯೋಮಿತಿ ಮೀರಿದವರಿಗಾಗಿ ವೃತ್ತಿಪರ ತರಬೇತಿ ಕೇಂದ್ರ ಅಥವಾ ಪಾಲನಾ ಕೇಂದ್ರವನ್ನು ರಾಜ್ಯಾದ್ಯಂತ ನಡೆಸುವ ಬಗ್ಗೆ ಪರಿಶೀಲಿಸಿ ಕ್ರಮವಹಿಸಲಾಗುವುದು ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ: Olympics On Television: ಒಲಿಂಪಿಕ್ಸ್​ ಕ್ರೀಡಾಕೂಟ ಮೊದಲ ಬಾರಿಗೆ ಟಿವಿಯಲ್ಲಿ ಪ್ರಸಾರ ಕಂಡಿದ್ದು ಯಾವಾಗ?

ಸಭೆಯಲ್ಲಿ ಬೈಲಹೊಂಗಲ ಶಾಸಕ ಮಹಾಂತೇಶ್ ಕೌಜಲಗಿ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಆಯುಕ್ತ ವಾಸಿರೆಡ್ಡಿ ವಿಜಯ ಜ್ಯೋತ್ಸ್ನಾ, ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ನಿರ್ದೇಶಕ ಸಿದ್ದೇಶ್ವರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಅಧಿಕಾರಿಗಳು, ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರ ಹಾಗೂ ಶಿಕ್ಷಕೇತರ ಸಂಘ ಹಾಗೂ ಕರ್ನಾಟಕ ರಾಜ್ಯ ವಿಕಲಚೇತನರ ಸೇವಾ ಸಂಸ್ಥೆಗಳ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Continue Reading
Advertisement
Paris Olympics 2024
ಪ್ರಮುಖ ಸುದ್ದಿ25 mins ago

Paris Olympics 2024 : ಟೋಕಿಯೊದಲ್ಲಿ ನಡೆದ 2020ರ ಒಲಿಂಪಿಕ್ಸ್​ನಲ್ಲಿ ಭಾರತ ಗೆದ್ದ ಪದಕಗಳ ಸಂಖ್ಯೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Dog Ethnicwear
ಫ್ಯಾಷನ್29 mins ago

Dog Ethnicwear: ನಾಯಿಗಳಿಗೂ ಬಂತು ಎಥ್ನಿಕ್‌ ವೇರ್ಸ್! ಎಷ್ಟು ಮುದ್ದಾಗಿ ಕಾಣಿಸುತ್ತಿವೆ!

SIM Cards
ಗ್ಯಾಜೆಟ್ಸ್34 mins ago

SIM Cards: ಮಿತಿ ಮೀರಿ ಮೊಬೈಲ್‌ ಸಿಮ್ ಹೊಂದಿದ್ದೀರಾ? ಕಾದಿದೆ ಭಾರಿ ದಂಡ, ಶಿಕ್ಷೆ!

Assembly Session
ಕರ್ನಾಟಕ38 mins ago

Assembly Session: ಲೂಟಿಕೋರರ ಪಿತಾಮಹ ನೀನು: ಸದನದಲ್ಲಿ ಅಶ್ವತ್ಥ್ ನಾರಾಯಣ ವಿರುದ್ಧ ಗುಡುಗಿದ ಡಿಕೆಶಿ!

Ananth Ambani Fashion
ಫ್ಯಾಷನ್50 mins ago

Ananth Ambani Fashion: ಅನಂತ್‌ ಅಂಬಾನಿ ಬಳಿ ಇದೆ ಡೈಮಂಡ್‌ ಬ್ರೂಚ್‌ಗಳ ಕಲೆಕ್ಷನ್‌! ಇವುಗಳ ಮೌಲ್ಯ ಎಷ್ಟಿರಬಹುದು?

Entrepreneurship Development Training Concluding Ceremony at Kanakagiri
ಕೊಪ್ಪಳ56 mins ago

Koppala News: ಕನಕಗಿರಿಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ

Pooja Khedkar
ದೇಶ57 mins ago

Pooja Khedkar: ಪೂಜಾ ಖೇಡ್ಕರ್‌ಗೆ ಮತ್ತೊಂದು ಬಿಗ್‌ ಶಾಕ್‌; ತರಬೇತಿಗೆ ತಡೆ, ಅಕಾಡೆಮಿಗೆ ವಾಪಸ್‌

Clearance of footpaths in Shira
ತುಮಕೂರು57 mins ago

Shira News: ಶಿರಾದಲ್ಲಿ ಫುಟ್‌ಪಾತ್‌ಗಳ ತೆರವು ಕಾರ್ಯಾಚರಣೆ

karnataka weather Forecast
ಮಳೆ60 mins ago

Karnataka Weather : ನಾಳೆಗೂ ಮಳೆ ಮುನ್ನೆಚ್ಚರಿಕೆ; ಸೆ.30ರವರೆಗೆ ಈ ಪ್ರವಾಸಿ ತಾಣಗಳಲ್ಲಿ ಟ್ರಕ್ಕಿಂಗ್‌ ನಿಷೇಧ

R Ashok demands that Valmiki Development Corporation scam should be investigated by CBI and CM Siddaramaiah should resign
ಕರ್ನಾಟಕ1 hour ago

Assembly Session: ಸರ್ಕಾರಕ್ಕೆ ವಾಲ್ಮೀಕಿ ಜನಾಂಗದ ಶಾಪ ತಟ್ಟಬಾರದೆಂದರೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ; ಆರ್‌. ಅಶೋಕ್‌ ಆಗ್ರಹ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ7 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ8 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 day ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌