Robbery Case: ವೃದ್ಧ ದಂಪತಿಯ ಮೇಲೆ ಹಲ್ಲೆ ಎಸಗಿ ಚಿನ್ನಾಭರಣ ದರೋಡೆ ಮಾಡಿದ ಚಡ್ಡಿ ಗ್ಯಾಂಗ್‌! - Vistara News

ಕ್ರೈಂ

Robbery Case: ವೃದ್ಧ ದಂಪತಿಯ ಮೇಲೆ ಹಲ್ಲೆ ಎಸಗಿ ಚಿನ್ನಾಭರಣ ದರೋಡೆ ಮಾಡಿದ ಚಡ್ಡಿ ಗ್ಯಾಂಗ್‌!

Robbery Case: ಚಡ್ಡಿ ಟಿಶರ್ಟ್‌ ಧರಿಸಿ ಬರುವ ಈ ಗ್ಯಾಂಗ್‌ನಲ್ಲಿ 4-5 ಜನರಿದ್ದಾರೆ. ಒಬ್ಬಾತ ರಸ್ತೆಯ ಬದಿಯಲ್ಲಿ ಅವಿತು ಕೂತು ಒಳಗಿದ್ದವರಿಗೆ ಸಿಗ್ನಲ್‌ ಕೊಟ್ಟರೆ, ಇನ್ನ ಮೂವರು ಒಳಗೆ ನುಗ್ಗಿ ಕಳವು, ದರೋಡೆ ಮಾಡುತ್ತಾರೆ ಎಂದು ಗೊತ್ತಾಗಿದೆ.

VISTARANEWS.COM


on

chaddy gang robbery case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ಮಂಗಳೂರಿನಲ್ಲಿ (Mangalore news) ಕಮಿಷನರೆಟ್ ವ್ಯಾಪ್ತಿಯಲ್ಲಿ ಖತರ್ನಾಕ್ ಚಡ್ಡಿ ಗ್ಯಾಂಗ್ (Chaddi gang) ತನ್ನ ಬಾಲ ಬಿಚ್ಚಿದೆ. ಮಂಗಳೂರು ಪೊಲೀಸ್‌ ಆಯುಕ್ತಾಲಯದ ವ್ಯಾಪ್ತಿಯಲ್ಲಿ ಮತ್ತೊಂದು ದರೋಡೆ (Robbery Case) ನಡೆದಿದ್ದು, ವೃದ್ಧ ದಂಪತಿ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದರೋಡೆ ಮಾಡಲಾಗಿದೆ.

ವಿಕ್ಟರ್ ಮತ್ತು ಪೆಟ್ರೀಷಾ ದಂಪತಿ ಹಲ್ಲೆಗೊಳಗಾದವರು. ರಾತ್ರಿ 2 ಗಂಟೆ ಹೊತ್ತಿಗೆ ಕಿಟಕಿಯ ಸರಳು ಕತ್ತರಿಸಿ ಈ ಚಡ್ಡಿ ಗ್ಯಾಂಗ್‌ ದಂಪತಿಯ ಮನೆಗೆ ನುಗ್ಗಿದೆ. ಪ್ರತಿರೋಧಿಸಿದ ವೃದ್ಧ ದಂಪತಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಚಿನ್ನಾಭರಣ, ನಗದು ಲೂಟಿ ಮಾಡಿದೆ. 4 ಜನ ದುಷ್ಕರ್ಮಿಗಳ ತಂಡ ಮನೆಗೆ ನುಗ್ಗಿತ್ತು.

ಘಟನೆಯಲ್ಲಿ ವಿಕ್ಟರ್ ಅವರಿಗೆ ಗಂಭೀರ ಗಾಯಗಳಾಗಿವೆ. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೆಯಲ್ಲಿದ್ದ ಕಾರನ್ನು ಕೂಡ ದುಷ್ಕರ್ಮಿಗಳು ಕದ್ದೊಯ್ದಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಚಡ್ಡಿ ಟಿಶರ್ಟ್‌ ಧರಿಸಿ ಬರುವ ಈ ಗ್ಯಾಂಗ್‌ನಲ್ಲಿ 4-5 ಜನರಿದ್ದಾರೆ. ಒಬ್ಬಾತ ರಸ್ತೆಯ ಬದಿಯಲ್ಲಿ ಅವಿತು ಕೂತು ಒಳಗಿದ್ದವರಿಗೆ ಸಿಗ್ನಲ್‌ ಕೊಟ್ಟರೆ, ಇನ್ನ ಮೂವರು ಒಳಗೆ ನುಗ್ಗಿ ಕಳವು, ದರೋಡೆ ಮಾಡುತ್ತಾರೆ ಎಂದು ಗೊತ್ತಾಗಿದೆ.

ಉಡುಪಿಯಲ್ಲಿ ಕೆಲ ತಿಂಗಳ ಹಿಂದೆ ʼಬನಿಯನ್‌ ಗ್ಯಾಂಗ್‌ʼ ಸಕ್ರಿಯವಾಗಿತ್ತು. ಬನಿಯನ್‌ ಹಾಗೂ ಚಡ್ಡಿ ಧರಿಸಿ ಬರುವ ಈ ಕಳ್ಳರು ಮೈಗೆ ಎಣ್ಣೆ ಹಚ್ಚಿಕೊಂಡು ಫೀಲ್ಡಿಗಿಳಿಯುತ್ತಾರೆ. ಎಲ್ಲರೂ ಗಾಢ ನಿದ್ರೆ ಜಾರುವ ಸಮಯಕ್ಕೆ ಕಾದುಕುಳಿತು ನಂತರ ಕಳ್ಳತನಕ್ಕೆ ಮುಂದಾಗುತ್ತಾರೆ. ರಾತ್ರೋ ರಾತ್ರಿ ಕಳ್ಳ ಬೆಕ್ಕಿನಂತೆ ನುಗ್ಗುವ ಇವರು ಕ್ಷಣಾರ್ಧದಲ್ಲಿ ಚಿನ್ನಾಭರಣವನ್ನು ಲೂಟಿ ಮಾಡಿ ಪರಾರಿ ಆಗುತ್ತಾರೆ.

ಹೀಗೆ ಚಿತ್ರ-ವಿಚಿತ್ರವಾಗಿ ವೇಷ ಧರಿಸಿ ಬರುವ ಕಳ್ಳರ ಹೆಜ್ಜೆ ಗುರುತು ಪತ್ತೆ ಮಾಡುವುದೇ ಪೊಲೀಸರಿಗೆ ತಲೆನೋವಾಗಿದೆ. ಈ ಕಚ್ಚಾ ಬನಿಯನ್ ಗ್ಯಾಂಗ್ ಪತ್ತೆ ಮಾಡುವುದೇ ಉಡುಪಿ ಪೊಲೀಸರಿಗೆ ಸವಾಲಾಗಿತ್ತು. ಸಂತೆಕಟ್ಟೆಯಲ್ಲಿ ನಡೆದಿದ್ದ ಮನೆ ದರೋಡೆ ಪ್ರಕರಣದಲ್ಲಿ ಈ ತಂಡದ ಕೃತ್ಯ ಬಯಲಾಗಿತ್ತು. ಕೃತ್ಯದ ಬಳಿಕ ಈ ಗ್ಯಾಂಗ್ ಸಿಂಗಲ್ ಚಪ್ಪಲಿಯನ್ನು ಬಿಟ್ಟು ಹೋಗುತ್ತಿತ್ತು. ಸೊಂಟಕ್ಕೆ ಚಪ್ಪಲಿ ಕಟ್ಟಿಕೊಂಡು ಬರುವ ಈ ಗ್ಯಾಂಗ್‌ ಡೆಲ್ಲಿ ಕ್ರೈಮ್-2 ವೆಬ್ ಸೀರೀಸ್‌ ಕಚ್ಚಾ ಬನಿಯನ್ ಗ್ಯಾಂಗ್ ನೆನಪಿಸುವಂತಿತ್ತು.

ಬೆಂಗಳೂರು ಹಾಗೂ ರಾಯಚೂರಿನಲ್ಲೂ ಇಂಥ ಪ್ರಕರಣಗಳು ನಡೆದಿವೆ. ಹೆಚ್ಚಿನ ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರಿಗೆ ಸಾಧ್ಯವಾಗಿಲ್ಲ. ಈ ಗ್ಯಾಂಗ್‌ನವರು ಸ್ಥಳೀಯರು ಇರಲಿಕ್ಕಿಲ್ಲ, ಅಂತಾರಾಜ್ಯ ಖದೀಮರಾಗಿರಬಹುದು ಎಂಬುದು ಪೊಲೀಸರ ಅಭಿಪ್ರಾಯವಾಗಿದೆ. ಇವರು ಒಂದು ನಗರದಲ್ಲಿ ದರೋಡೆ ನಡೆಸಿದ ಬಳಿಕ ಸ್ವಲ್ಪ ಕಾಲ ಆ ರಾಜ್ಯವನ್ನೇ ಬಿಟ್ಟು ಇನ್ನೊಂದು ಕಡೆ ಹೋಗಿ ದರೋಡೆ ನಡೆಸುತ್ತಿರುತ್ತಾರೆ. ಇದು ಪೊಲೀಸರ ಹದ್ದಿನಗಣ್ಣಿನಿಂದ ತಪ್ಪಿಸಿಕೊಳ್ಳಲು ಇವರಿಗೆ ನೆರವಾಗುತ್ತಿದೆ ಎನ್ನಲಾಗಿದೆ.

ರೌಡಿಶೀಟರ್‌ ಕಾಲಿಗೆ ಗುಂಡೇಟು

ಶಿವಮೊಗ್ಗ: ಬೆಳ್ಳಂ ಬೆಳಗ್ಗೆ ಶಿವಮೊಗ್ಗದಲ್ಲಿ (Shivamogga news) ರೌಡಿ ಶೀಟರ್ (rowdy sheeter) ಕಾಲಿಗೆ ಗುಂಡೇಟು ಹಾರಿಸಿ (shoot out) ಗಾಯಗೊಳಿಸಿ ಬಂಧಿಸಲಾಗಿದೆ. ಬಂಧಿಸಲು ಹೋದಾಗ ಈತ ಪೊಲೀಸ್‌ (Police) ಸಿಬ್ಬಂದಿ ಕಾಲಿಗೆ ಚಾಕುವಿನಿಂದ ಚುಚ್ಚಿ (Stabbing) ಗಾಯಗೊಳಿಸಿದ್ದ.

ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ತ್ಯಾಜ್ಯವಳ್ಳಿ ಅರಣ್ಯ ಪ್ರದೇಶದಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿದೆ. ರಜಾಕ್‌ ಎಂಬಾತ ಬಂಧಿತ ರೌಡಿ. ರಜಾಕ್ ಮೇಲೆ ಕೊಲೆ ಯತ್ನ ಸೇರಿ ಐದಾರು ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿವೆ. ಹೊಳೆಹೊನ್ನೂರು ಠಾಣೆ ಇನ್ಸ್‌ಪೆಕ್ಟರ್‌ ನೇತೃತ್ವದಲ್ಲಿ ಈತನ ಬಂಧನಕ್ಕೆ ತೆರಳಲಾಗಿತ್ತು.

ಈ ಸಂದರ್ಭದಲ್ಲಿ ಆರೋಪಿ ರಜಾಕ್‌ ಪೊಲೀಸ್‌ ಸಿಬ್ಬಂದಿ ಅರ್ಜುನ್ ಎಂಬವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಈ ಸಂದರ್ಭದಲ್ಲಿ ಸಿಬ್ಬಂದಿಯನ್ನು ಪಾರು ಮಾಡಲು ಹಾಗೂ ಆತ್ಮರಕ್ಷಣೆಗಾಗಿ ಇನ್‌ಸ್ಪೆಕ್ಟರ್ ಲಕ್ಷ್ಮಿಪತಿ ರೌಡಿಶೀಟರ್ ಕಾಲಿಗೆ ಗುಂಡು ಹೊಡೆದಿದ್ದಾರೆ. ಗಾಯಗೊಂಡಿರುವ ಆರೋಪಿ ರಜಾಕ್ ಹಾಗೂ ಹಲ್ಲೆಗೊಳಗಾದ ಪೊಲೀಸ್ ಸಿಬ್ಬಂದಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Viral Video: ಹಾವನ್ನು ಹಿಡಿದು ಕಚ್ಚಿ ಕಚ್ಚಿ ತಿಂದ! ಜೈಲಿನಿಂದ ರಿಲೀಸ್‌ ಆಗ್ತಿದ್ದಂತೆ ದರೋಡೆಕೋರನ ವಿಕೃತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Road Accident : ತಿರುಪತಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಬ್ರೇಕ್‌ ಫೇಲ್‌; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

Road Accident : ತಿರುಪತಿ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದು ಬ್ರೇಕ್‌ ಫೇಲ್‌ ಆಗಿದ್ದು, ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಬೆಂಗಳೂರಿನಲ್ಲಿ ಕುಳಿತ ಜಾಗದಲ್ಲೇ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.

VISTARANEWS.COM


on

By

Road Accident
Koo

ಕೋಲಾರ/ತಿರುಪತಿ: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಚಂದ್ರಗಿರಿ ಮಡಲಂ ಬಳಿಯ ಭಾಕರಪೇಟ್ ಘಾಟ್‌ನಲ್ಲಿ (Road Accident) ತೆರುಳುತ್ತಿದ್ದ ಕಎಸ್‌ಆರ್‌ಟಿಸಿ ಬಸ್‌ವೊಂದು ಬ್ರೇಕ್ ಫೈಲ್ಯೂರ್‌ ಆಗಿ ಬಂಡೆಗೆ ಡಿಕ್ಕಿ ಹೊಡೆದಿದೆ. ಕೆಎಸ್‌ಆರ್‌ಟಿಸಿ ಬಸ್‌ ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ.

ಪ್ರಪಾತವನ್ನು ತಪ್ಪಿಸಿದ ಚಾಲಕ ಬಸ್‌ ಅನ್ನು ಬೆಟ್ಟದ ಬಂಡೆಗೆ ಗುದ್ದಿಸಿದ್ದಾರೆ. ಬಸ್‌ನಲ್ಲಿದ್ದ 43 ಪ್ರಯಾಣಿಸುತ್ತಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ತಿರುಪತಿಯ ರೂಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್‌ ಮದನಪಲ್ಲಿ ಮಾರ್ಗವಾಗಿ ತಿರುಪತಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಬಿಟ್ಟರೆ ಯಾವುದೇ ಪ್ರಾಣ ಹಾನಿ ಆಗಿಲ್ಲ. ಕಂದಕ್ಕೆ ಬಸ್ ಬಿದ್ದಿದ್ದರೆ ಭಾರಿ ಆನಾಹುತ ಸಂಭವಿಸುತ್ತಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಚಂದ್ರಗಿರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಬಾಗೇಪಲ್ಲಿ ಡಿಪೋ ಮ್ಯಾನೇಜರ್ ಹಾಗೂ ಕೋಲಾರದ ಡಿಟಿಓ ಅಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ಹೊರಟಿದ್ದಾರೆ.

ಇದನ್ನೂ ಓದಿ: Karnataka Weather : ಫಲ್ಗುಣಿ ಅಬ್ಬರಕ್ಕೆ ಮುಳುಗಿದ ದೇಗುಲಗಳು; ಆಗಸ್ಟ್‌ 5ರವರೆಗೆ ಭಾರಿ ಮಳೆ ಸಾಧ್ಯತೆ

ಕುಳಿತ ಜಾಗದಲ್ಲೇ ಮೃತಪಟ್ಟ ಕಾರ್ಮಿಕ

ಬೆಂಗಳೂರಿನ ಬಾಗಲಗುಂಟೆಯ ಇಂದಿರಾ ಕ್ಯಾಂಟೀನ್ ಬಳಿ ಕುಳಿತ ಸ್ಥಿತಿಯಲ್ಲೇ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ರಾಮನಗರ ನಿವಾಸಿ ಶಿವಲಿಂಗಯ್ಯ ಮೃತ ದುರ್ದೈವಿ. ಗಾರೆ ಕೆಲಸಕ್ಕಾಗಿ ರಾಮನಗರದಿಂದ ಬೆಂಗಳೂರಿಗೆ ಬಂದಿದ್ದ ಶಿವಲಿಂಗಯ್ಯ ಅವರು ನಿನ್ನೆ ಬುಧವಾರ ಇಂದಿರಾ ಕ್ಯಾಂಟೀನ್ ಬಳಿ ಕುಳಿತಿದ್ದರು. ಆದರೆ ಮರುದಿನ ಗಮನಿಸಿದ ಸ್ಥಳೀಯರು ಶಿವಲಿಂಗಯ್ಯ ಮೃತಪಟ್ಟಿದ್ದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಬಾಗಲಗುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗಾಯಗೊಂಡ ನಾಗರ ಹಾವಿಗೆ ಟ್ರೀಟ್ಮೆಂಟ್‌

ಧಾರವಾಡದಲ್ಲಿ ಗಾಯಗೊಂಡ ನಾಗರ ಹಾವಿಗೆ ವೈದ್ಯರು ಆರೈಕೆ ಮಾಡಿದ್ದಾರೆ. ಧಾರವಾಡದ ಸಾಧುನವರ್ ಎಸ್ಟೇಟ್ ಬಳಿ ಹಾವೊಂದು ಬಿದ್ದಿತ್ತು. ಬೈಕ್ ಸವಾರರು ಗಾಯಗೊಂಡಿದ್ದ ಹಾವಿಗೆ ಆರೈಕೆ ಮಾಡಿದ್ದಾರೆ. ಪ್ರಾಣಿ ಪ್ರಿಯ ಸೋಮಶೇಖರ್ ಮೊದಲು ಆರೈಕೆ ಮಾಡಿ ಬಳಿಕ ಕೃಷಿ ವಿವಿಯ ವೈದ್ಯ ಡಾ.ಅನಿಲ್ ಪಾಟೀಲ್‌ರಿಂದ ಚಿಕಿತ್ಸೆ ನೀಡಿದ್ದಾರೆ. ಮುಂದೆ ಹೋಗಲಾರದೆ ಸ್ಥಿತಿಯಲ್ಲಿದ್ದ ಹಾವಿಗೆ ಚಿಕಿತ್ಸೆ ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Murder Case : ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಹಾಡಹಗಲೇ ಯುವಕನ ಬರ್ಬರ ಹತ್ಯೆ

Murder case : ನಡುರಸ್ತೆಯಲ್ಲಿ ಯುವಕನನ್ನು ಅಟ್ಟಾಡಿಸಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ತನಿಖೆಯನ್ನು ಕೈಗೊಂಡಿದ್ದಾರೆ.

VISTARANEWS.COM


on

By

murder case
Koo

ಬೆಂಗಳೂರು: ಹಾಡಹಗಲೆ ಯುವಕನ ಬರ್ಬರ ಹತ್ಯೆ (Murder case) ನಡೆದಿದೆ. ಬೆಂಗಳೂರಿನ ಶೇಷಾದ್ರಿ ಪುರಂ ಪೊಲೀಸ್ ಠಾಣೆಯ ಕೂಗಳತೆಯ ದೂರದಲ್ಲಿ ಘಟನೆ ನಡೆದಿದೆ. ಅಜಿತ್ ಕುಮಾರ್‌ (25) ಕೊಲೆಯಾದವನು.

ಶೇಷಾದ್ರಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ರಶಿಲ್ಲಾರ್ ಸ್ಟ್ರೀಟ್‌ನಲ್ಲಿ ಅಜಿತ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕೊಲೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಸ್ಥಳಕ್ಕೆ ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಭೇಟಿ ನೀಡಿದ್ದಾರೆ.

ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ನಡೆದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹಂತಕರಿಗಾಗಿ ಹುಡುಕಾಟ ನಡೆಸಿರುವ ಪೊಲೀಸರು, ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.

ಕೊಲೆ ಕೇಸ್‌ನಲ್ಲಿ ಆರೋಪಿಯಾಗಿದ್ದ ಅಜಿತ್‌

ಬ್ಲಡ್ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಅಜಿತ್‌, 2022ರಲ್ಲಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ. ಸಂಜೆ 4:15ರ ವೇಳೆಗೆ ಮನೆಯಿಂದ ಊಟ ಮುಗಿಸಿ ಹೊರಬಂದಿದ್ದ ಅಜಿತ್ ಮೇಲೆ ಏಕಾಏಕಿ ಹಂತಕರ ಗ್ಯಾಂಗ್‌ ಅಟ್ಯಾಕ್‌ ಮಾಡಿದೆ. ಮಚ್ಚು ಬೀಸಿದ ರಭಸಕ್ಕೆ ಅಜಿತ್‌ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಶೇಷಾದ್ರಿಪುರ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಅಜಿತ್ ಹಾಗೂ ಸೋದರ ಕಾರ್ತಿಕ್ ಇಬ್ಬರು ಗಣೇಶ್ ಎಂಬಾತನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದರು. ಏರಿಯಾದಲ್ಲಿ ನಾನೇ ಡಾನ್ ಎಂದು ಅಜಿತ್‌ ಮೆರೆಯುತ್ತಿದ್ದ. ಸಮಯ ಕಾದು ನೋಡಿ ಎದುರಾಳಿಗಳು ಸೇಡು ತೀರಿಸಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Road Accident : ಬೆಂಗಳೂರಲ್ಲಿ ಮಳೆಗೆ ಬೈಕ್‌ ಸವಾರ ಬಲಿ; ಕಂಟ್ರೋಲ್‌ ತಪ್ಪಿ ಬಿದ್ದವನ ಮೇಲೆ ಹರಿದ ವಾಹನಗಳು!

Road Accident : ಬೆಂಗಳೂರಿನಲ್ಲಿ ಸುರಿದ ಮಳೆಗೆ ಕಂಟ್ರೋಲ್‌ ತಪ್ಪಿ ಬೈಕ್‌ನಿಂದ ಕೆಳಗೆ ಬಿದ್ದ ಸವಾರನ ಮೇಲೆ ವಾಹನಗಳು ಹರಿದ ಪರಿಣಾಮ ದಾರುಣವಾಗಿ ಮೃತಪಟ್ಟಿದ್ದಾರೆ. ಆನೇಕಲ್‌ನಲ್ಲಿ ರಸ್ತೆ ದಾಟುತ್ತಿದ್ದ ಯುವಕನಿಗೆ ಕ್ಯಾಂಟರ್‌ವೊಂದು ಡಿಕ್ಕಿ ಹೊಡೆದಿದ್ದು, ಚಾಲಕ ಕಾಲ್ಕಿತ್ತಿದ್ದಾನೆ.

VISTARANEWS.COM


on

By

Road Accident
Koo

ಬೆಂಗಳೂರು/ಆನೇಕಲ್: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಬುಧವಾರ ಸುರಿದ ಮಳೆಗೆ ಬೈಕ್‌ ಸವಾರರೊಬ್ಬರು (Road Accident) ಬಲಿಯಾಗಿದ್ದಾರೆ. ಬೆಂಗಳೂರಿನ ಹೆಬ್ಬಾಳ ಮೇಲ್ಸೇತುವೆ ಬಳಿ ದುರ್ಘಟನೆ ನಡೆದಿದೆ. ಲೋಕೇಶ್ ಜೆ (41) ಮೃತ ಪಟ್ಟವರು.

ಲೋಕೇಶ್‌ ರಾತ್ರಿ 9.30ರ ಸುಮಾರಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಯಲಹಂಕ ಕಡೆಯಿಂದ ಕೋರಮಂಗಲದ ಕಡೆಗೆ ಹೋಗಲು ಹೆಬ್ಬಾಳ ಫ್ಲೈಓವರ್ ಪ್ರವೇಶಿಸಿದ್ದರು. ಈ ವೇಳೆ ನಿಯಂತ್ರಣ ತಪ್ಪಿ ರಸ್ತೆಯ ಮೇಲೆ ಬಿದ್ದಿದ್ದರು. ಧಾರಕಾರ ಮಳೆ ಬರುತ್ತಿದ್ದ ಹಿನ್ನೆಲೆಯಲ್ಲಿ ಬೈಕ್ ಸವಾರ ಬಿದ್ದಿರುವುದನ್ನು ಇತರೆ ವಾಹನ ಸವಾರರು ಗಮನಿಸಿಲ್ಲ. ಕೆಳಗೆ ಬಿದ್ದ ಲೋಕೇಶ್ ಮೇಲೆಯೇ ಹರಿದಿದ್ದು, ತಲೆಗೆ ಗಂಭೀರ ಗಾಯವಾಗಿತ್ತು.

ರಸ್ತೆಯಲ್ಲಿ ಬಿದ್ದು ನರಳಾಡುತ್ತಿರುವುದನ್ನು ಕಂಡು ಕೆಲವರು ಆಸ್ಪತ್ರೆಗೆ ದಾಖಲಿಸಲು ಯತ್ನಿಸಿದ್ದಾರೆ. ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಲೋಕೇಶ್ ಮೃತಪಟ್ಟಿದ್ದಾರೆ. ಹೆಬ್ಬಾಳ‌ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಯುವಕನಿಗೆ ಡಿಕ್ಕಿ ಹೊಡೆದು ಪರಾರಿಯಾದ ಚಾಲಕ

ರಸ್ತೆ ದಾಟುತ್ತಿದ್ದ ಯುವಕನಿಗೆ ವೇಗವಾಗಿ ಬಂದ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಕ್ಯಾಂಟರ್ ಚಾಲಕ ಪರಾರಿ ಆಗಿದ್ದಾನೆ. 19 ವರ್ಷದ ಆಕಾಶ್ ಸ್ಥಳದಲ್ಲೇ ಮೃತಪಟ್ಟವರು.

ಡಿಕ್ಕಿ ಹೊಡೆದು ಎಸ್ಕೇಪ್ ಆದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮರಸೂರು ಬಳಿ ಅಪಘಾತ ನಡೆದಿದೆ. ಗುಲ್ಬರ್ಗ ಮೂಲದ ಆಕಾಶ್ ನಿನ್ನೆ ಬುಧವಾರ ರಾತ್ರಿ ತಂದೆ ನೋಡಲು ಬಂದಿದ್ದ. ಆಕಾಶ್‌ ತಂದೆ ಆನೇಕಲ್ ಚಂದಾಪುರ ಮುಖ್ಯ ರಸ್ತೆಯ ಬಾರ್ ಒಂದರಲ್ಲಿ ವಾಚ್ ಮ್ಯಾನ್ ಆಗಿದ್ದರು. ತಂದೆಯನ್ನು ಮಾತನಾಡಿಸಿಕೊಂಡು ರಸ್ತೆ ದಾಟಲು ಮುಂದಾಗಿದ್ದು, ಈ ಸಂದರ್ಭದಲ್ಲಿ ವೇಗವಾಗಿ ಬಂದು ಕ್ಯಾಂಟರ್‌ ಡಿಕ್ಕಿ ಹೊಡೆದಿದೆ.

ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಎಸ್ಕೇಪ್ ಆಗಿರುವ ಕ್ಯಾಂಟರ್‌ ಚಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: Self Harming : ವಯಸ್ಸಲ್ಲದ ವಯಸ್ಸಲ್ಲಿ ಲವ್; 15ನೇ ವರ್ಷಕ್ಕೆ ಮದುವೆ ಆದವಳು 17ನೇ ವರ್ಷಕ್ಕೆ ಆತ್ಮಹತ್ಯೆ

ಕರೆಂಟ್‌ ಶಾಕ್‌ಗೆ ಪ್ರಜ್ಞೆ ತಪ್ಪಿದ ಲೈನ್‌ ಮ್ಯಾನ್‌

ಚಾಮರಾಜನಗರದ ಚಮಾಲ್ ಬೀದಿಯಲ್ಲಿ ವಿದ್ಯುತ್ ಕಂಬವೇರಿ ರಿಪೇರಿ ಮಾಡುತ್ತಿದ್ದಾಗ ವಿದ್ಯುತ್ ಪ್ರವಹಿಸಿದೆ. ವಿದ್ಯುತ್ ಸ್ಪರ್ಶದಿಂದ ಲೈನ್‌ ಮ್ಯಾನ್‌ ಕಿರಣ್‌ ಎಂಬಾತ ಪ್ರಜ್ಞೆ ತಪ್ಪಿದ್ದರು. ಚೆಸ್ಕಾಂ ಸಿಬ್ಬಂದಿ ತಕ್ಷಣ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಲೈನ್‌ಮ್ಯಾನ್‌ ಕಿರಣ್‌ನನ್ನು ಕೆಳೆಗಿಳಿಸಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಲೈನ್‌ಮ್ಯಾನ್‌ಗೆ ಸಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೆಚ್ಚಿನ‌ ಚಿಕಿತ್ಸೆಗೆ ಮೈಸೂರು ಅಪೋಲೋ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಬೆಂಗಳೂರಲ್ಲಿ ಧರೆಗುರುಳಿದ ಬೃಹತ್‌ ಮರ

ಬೆಂಗಳೂರಿನ ಗೋವಿಂದರಾಜನಗರದ ಸರಸ್ವತಿ ನಗರದಲ್ಲಿ ಬೃಹತ್‌ ಗಾತ್ರದ ಮರವೊಂದು ಧರೆಗುರುಳಿದೆ. ಮರವು ವಿದ್ಯುತ್ ಕಂಬದ ಮೇಲೆ ಬಿದ್ದ ರಭಸಕ್ಕೆ ಕಾರೊಂದು ಜಖಂಗೊಂಡಿತ್ತು. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಬೆಳಗಾವಿಯ ನಾಲೆಯಲ್ಲಿ ತೇಲಿ ಬಂದ ಅಪರಿಚಿತ ವ್ಯಕ್ತಿಯ ಮೃತ ದೇಹ

ಬೆಳಗಾವಿಯ ಉಜ್ವಲ ನಗರದ ನಾಲೆಯಲ್ಲಿ ವ್ಯಕ್ತಿಯೊಬ್ಬರ ಶವ ತೇಲಿ ಬಂದಿದೆ. ಶವ ಕಂಡು ಹೌಹಾರಿದ ಸ್ಥಳೀಯ ನಿವಾಸಿಗಳು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಮಾಳಮಾರುತಿ ಠಾಣಾ ಪೊಲೀಸರು ಶವ ಹೊರತೆಗೆದಿದ್ದಾರೆ. ಸುಮಾರು 33 ರಿಂದ 35 ರ ಆಸುಪಾಸಿನ ಅಂದಾಜಿನ ಯುವಕನ ಶವದ ಕೈ ಮೇಲೆ ಲಕ್ಷ್ಮಣ ಹೆಚ್ ಎಂಬ ಟ್ಯಾಟು ಪತ್ತೆಯಾಗಿದೆ. ವಿಪರೀತ ಮಳೆಗೆ ನಾಲೆಯ ಪ್ರವಾಹಕ್ಕೆ ಶವ ತೇಲಿ ಬಂದಿರುವ ಶಂಕೆ ಇದೆ. ಪ್ರಕರಣ ದಾಖಲಿಸಿಕೊಂಡು ಮಾಳಮಾರುತಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕೋಲಾರದಲ್ಲಿ ಬೆಂಕಿಗಾಹುತಿಯಾದ 9000 ಕೋಳಿ ಮರಿಗಳು

ಕೋಳಿ ಫಾರಂನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬರೋಬ್ಬರಿ 9,000 ಕೋಳಿ ಮರಿಗಳು ಮೃತಪಟ್ಟಿವೆ. ಸುಮಾರು ಹದಿನೈದು ಲಕ್ಷ ಮೌಲ್ಯದ ಕೋಳಿ ಮರಿಗಳ ಸಾವಿನಿಂದ ಮಾಲೀಕ ಕಂಗಲಾಗಿದ್ದಾರೆ. ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ರಾಮಸಾಗರ ಗ್ರಾಮ ಪಂಚಾಯತಿ ವ್ಯಾಪ್ತಿಯ ನೆರ್ನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಮೋಹನ್ ಕೃಷ್ಣ ಎಂಬುವವರಿಗೆ ಸೇರಿದ ಕೋಳಿ ಫಾರಂ ಇದಾಗಿದ್ದು, ಗ್ರಾಮಸ್ಥರು ಹಾಗೂ ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಗ್ರಾಮ ಪಂಚಾಯತಿಯ ರಾಜಕೀಯ ವಿದ್ಯಮಾನಗಳೇ ಈ ಘಟನೆಗೆ ಕಾರಣ ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಬೇತಮಂಗಲ ಸರ್ಕಲ್ ಇನ್ಸ್ಪೆಕ್ಟರ್ ರಂಗಸ್ವಾಮಯ್ಯ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Latest

Sexual Abuse: ಟೋಸ್ಟ್‌ ನೀಡುವುದಾಗಿ ಕರೆದು ಬಾಲಕಿ ಮೇಲೆ ಅತ್ಯಾಚಾರ; ಮೋಯಿದ್‌ ಖಾನ್‌, ರಾಜ ಖಾನ್‌ ಬಂಧನ

Sexual Abuse: ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳು ಮನೆಗೆ ಹಿಂದಿರುಗುತ್ತಿದ್ದಾಗ ಮೊಯೀದ್‌ ಖಾನ್‌ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ರಾಜ ಖಾನ್‌ ಸಂತ್ರಸ್ತೆಗೆ ಟೋಸ್ಟ್ ನೀಡುವ ಮೂಲಕ ತನ್ನ ಅಂಗಡಿಗೆ ಕರೆದೊಯ್ದಿದ್ದ. ನಂತರ ಮೋಯಿದ್‌ ಖಾನ್‌ ಮತ್ತು ರಾಜ ಖಾನ್‌ ಇಬ್ಬರೂ ಅಂಗಡಿಯೊಳಗೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದರು. ಬಳಿಕ ಇದನ್ನು ವಿಡಿಯೊ ರೆಕಾರ್ಡ್‌ ಮಾಡಿಕೊಂಡು ಬೆದರಿಸಿ ಮತ್ತೆ ಮತ್ತೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಬಾಲಕಿ ಗರ್ಭಿಣಿ ಆದಾಗ ಈ ಕೃತ್ಯ ಬೆಳಕಿಗೆ ಬಂದಿದೆ.

VISTARANEWS.COM


on

Sexual Abuse
Koo


ಉತ್ತರ ಪ್ರದೇಶದ ಅಯೋಧ್ಯೆ ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಸಮಾಜವಾದಿ ಪಕ್ಷದ ಮುಖಂಡ ಮೊಯೀದ್ ಖಾನ್ ಮತ್ತು ಆತನ ಸೇವಕ ರಾಜು ಖಾನ್ ಕೆಲವು ತಿಂಗಳ ಹಿಂದೆ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ (Sexual Abuse) ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೇ ಅಪ್ರಾಪ್ತ ಸಂತ್ರಸ್ತೆಯನ್ನು ಬ್ಲ್ಯಾಕ್‌ಮೇಲ್‌ ಮಾಡಲು ಅವರು ಆ ಘೋರ ಅಪರಾಧವನ್ನು ವಿಡಿಯೊ ಮಾಡಿ ಆ ಅಶ್ಲೀಲ ವಿಡಿಯೊವನ್ನು ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕುವ ಮೂಲಕ, ಅವರು 2 ತಿಂಗಳಿಗೂ ಹೆಚ್ಚು ಕಾಲ ಅವಳನ್ನು ಲೈಂಗಿಕವಾಗಿ ಶೋಷಿಸುತ್ತಿದ್ದರು ಎನ್ನಲಾಗಿದೆ. ಕೊನೆಗೆ ಆಕೆಯ ಆರೋಗ್ಯ ಹದಗೆಟ್ಟು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದಾಗ ಅವಳು ಗರ್ಭಿಣಿಯಾದ ವಿಚಾರ ಬೆಳಕಿಗೆ ಬರುವ ಮೂಲಕ ಕುಟುಂಬಕ್ಕೆ ಆಕೆಯ ಮೇಲೆ ನಡೆಯುತ್ತಿರುವ ಅಪರಾಧದ ಬಗ್ಗೆ ತಿಳಿದು ಬಂದಿದೆ.

ಆದರೆ ಈ ಬಗ್ಗೆ ಭದರ್ಸಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಿಲ್ಲ ಎಂದು ಆರೋಪಿಸಲಾಗಿದೆ. ಅಲ್ಲದೇ 2012ರಿಂದ ಈ ಪೊಲೀಸ್ ಠಾಣೆಯು ಆರೋಪಿ ಎಸ್ಪಿ ನಾಯಕ ಮೊಯೀದ್ ಖಾನ್ ಅವರ ಆದೇಶದ ಮೇರೆಗೆ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಲಾಗಿದೆ. ವರದಿಗಳ ಪ್ರಕಾರ ಅಯೋಧ್ಯೆಯ ಪುರ ಕಲಂದರ್ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಜುಲೈ 30, 2024 ಪೊಲೀಸರು ಪ್ರಕರಣ ದಾಖಲಿಸಿ ಆರೋಪಿ ಎಸ್ಪಿ ನಾಯಕ ಮೊಯೀದ್ ಖಾನ್ ಮತ್ತು ಅವರ ಸೇವಕ ರಾಜು ಅವರನ್ನು ಬಂಧಿಸಿದ್ದಾರೆ.

ವರದಿ ಪ್ರಕಾರ ಆರೋಪಿ ಎಸ್ಪಿ ನಾಯಕ ಖಾನ್ ಭದರ್ಸಾ ಹೊರ ಠಾಣೆ ಬಳಿ ಬೇಕರಿ ಅಂಗಡಿಯನ್ನು ಹೊಂದಿದ್ದಾರೆ. ಸಂತ್ರಸ್ತೆ ಕಾರ್ಮಿಕ ಕುಟುಂಬ ಮತ್ತು ಒಬಿಸಿ ಸಮುದಾಯಕ್ಕೆ ಸೇರಿದ್ದು, ಅಪ್ರಾಪ್ತ ಬಾಲಕಿ ತನ್ನ ತಾಯಿಯೊಂದಿಗೆ ವಾಸಿಸುತ್ತಾಳೆ. ಅಪ್ರಾಪ್ತ ಬಾಲಕಿಯ ಮನೆಗೆ ಹಿಂದಿರುಗುತ್ತಿದ್ದಾಗ, ಮೊಯೀದ್‍ನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ರಾಜ ಖಾನ್‌ ಸಂತ್ರಸ್ತೆಗೆ ಟೋಸ್ಟ್ ನೀಡುವ ಮೂಲಕ ತನ್ನ ಅಂಗಡಿಗೆ ಕರೆದೊಯ್ದನು. ಅವಳು ಈ ಹಿಂದೆಯೂ ಅಂಗಡಿಗೆ ಹೋಗುತ್ತಿದ್ದರಿಂದ, ಅವಳು ಅವನನ್ನು ನಂಬಿ ಅಲ್ಲಿಗೆ ಹೋದಳು.

ಇಬ್ಬರೂ ಆರೋಪಿಗಳು ಅಂಗಡಿಯೊಳಗೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಇಡೀ ಘಟನೆಯ ಅಶ್ಲೀಲ ವೀಡಿಯೊವನ್ನು ರೆಕಾರ್ಡ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ವಿಡಿಯೊವನ್ನು ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕುವ ಮೂಲಕ, ಅವರು 2 ತಿಂಗಳಿಗೂ ಹೆಚ್ಚು ಕಾಲ ಅಪ್ರಾಪ್ತೆಯ ಮೇಲೆ ಲೈಂಗಿಕ ಶೋಷಣೆ ಮುಂದುವರಿಸಿದರು. ನಿರಂತರ ಲೈಂಗಿಕ ಶೋಷಣೆಯ ಪರಿಣಾಮವಾಗಿ, ಸಂತ್ರಸ್ತೆ ಗರ್ಭಿಣಿಯಾದಳು. ಹೊಟ್ಟೆ ನೋವಿನ ಬಗ್ಗೆ ದೂರು ನೀಡಿದಾಗ, ಅವಳ ತಾಯಿಗೆ ಅನುಮಾನ ಬಂತು. ನಂತರ ಅವಳು ಇಡೀ ಘಟನೆಯನ್ನು ತನ್ನ ತಾಯಿಗೆ ವಿವರಿಸಿದಳು, ನಂತರ ಅವಳು ಈ ವಿಷಯದಲ್ಲಿ ಪೊಲೀಸ್ ದೂರು ದಾಖಲಿಸಿದ್ದಾಳೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಹಿಂದೂ ಸಂಘಟನೆಗಳು ಬಾಲಕಿಯ ಬೆಂಬಲಕ್ಕೆ ಬಂದರು. ಬಿಜೆಪಿ ಮತ್ತು ಬಜರಂಗದಳದ ಕಾರ್ಯಕರ್ತರೊಂದಿಗೆ ನಿಷಾದ್ ಪಕ್ಷದ ಸದಸ್ಯರು ಸಹ ಪೊಲೀಸ್ ಠಾಣೆಗೆ ಬಂದಿದ್ದಾರೆ.

ವರದಿಗಳ ಪ್ರಕಾರ, ಆರೋಪಿ ಖಾನ್ ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಅವರ ಆಪ್ತರಾಗಿದ್ದು, ಭದರ್ಸಾ ಪ್ರದೇಶದ ಪಕ್ಷದ ನಗರ ಅಧ್ಯಕ್ಷರಾಗಿದ್ದಾರೆ. ವರದಿಗಳ ಪ್ರಕಾರ, ಖಾನ್ ಅವರ ನಿಯಂತ್ರಣದಲ್ಲಿ ಭದರ್ಸಾ ಪೊಲೀಸ್ ಠಾಣೆ ಹಾಗೂ ಬ್ಯಾಂಕ್ ಕಾರ್ಯನಿರ್ವಹಿಸುತ್ತಿದೆ ಎನ್ನಲಾಗಿದೆ. ಹಾಗಾಗಿ ದೂರು ದಾಖಲಿಸಿದ ನಂತರ, ಪ್ರಕರಣವನ್ನು ಹಿಂತೆಗೆದುಕೊಳ್ಳುವಂತೆ ನಿರಂತರ ಒತ್ತಡವನ್ನು ಎದುರಿಸುತ್ತಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಆರೋಪಿಸಿದ್ದಾರೆ. ಅಲ್ಲದೇ ಅವರು ಬಡ ಕುಟುಂಬಕ್ಕೆ ಸೇರಿದ್ದರಿಂದ ಇದರ ಲಾಭ ಪಡೆದು ಆ ಜನರು ತನ್ನ ಮಗಳ ಮೇಲೆ ಇಂತಹ ಘೋರ ಕೃತ್ಯ ಎಸಗಿದ್ದಾರೆ ಎಂದು ಸಂತ್ರಸ್ಥೆಯ ತಾಯಿ ಗೋಳಾಡಿದ್ದಾರೆ.

ಇದನ್ನೂ ಓದಿ: ಕ್ಲಾಸ್‌ಗೆ ಹೋಗಲು ಆಟೊ ಹತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ; ಚಾಲಕ ಮೊಹಮ್ಮದ್‌ ಬಂಧನ

ಇದೀಗ ಎಸ್ಪಿ ನಾಯಕ ಮೊಯೀದ್ ಖಾನ್ ಮತ್ತು ಆತನ ಸೇವಕ ರಾಜ ಖಾನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅವರು ಸಾಮೂಹಿಕ ಅತ್ಯಾಚಾರ ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಏತನ್ಮಧ್ಯೆ, ಖಾನ್ ಅವರ ಬೇಕರಿ ಅಂಗಡಿಯಲ್ಲಿ ಸರಿಯಾದ ದಾಖಲೆಗಳಿವೆಯೇ ಅಥವಾ ಇಲ್ಲವೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Continue Reading
Advertisement
Whatsapp Shutdown
ತಂತ್ರಜ್ಞಾನ3 mins ago

Alternative to Whatsapp: ವಾಟ್ಸಾಪ್ ಸ್ಥಗಿತಗೊಂಡರೆ ಏನ್‌ ಮಾಡೋದು? ಇಲ್ಲಿದೆ ಪರ್ಯಾಯ ಆ್ಯಪ್‌ಗಳ ಪಟ್ಟಿ

Kerala Floods
ದೇಶ51 mins ago

Kerala Floods: ಕೇರಳದಲ್ಲಿ ಪ್ರವಾಹ; ಪ್ರಾಣವನ್ನೇ ಒತ್ತೆ ಇಟ್ಟು ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ದ ಪತಿ, Video ಇದೆ

Paris Olympics 2024
ಪ್ರಮುಖ ಸುದ್ದಿ54 mins ago

Paris Olympics 2024 : ಒಲಿಂಪಿಕ್ಸ್​ನಲ್ಲಿ ವಿವಾದ; ಮಹಿಳೆ ವಿರುದ್ಧ ಸ್ಪರ್ಧಿಸಲು ಬಾಕ್ಸಿಂಗ್​ ಕಣಕ್ಕೆ ಇಳಿದ ಪುರುಷ!

vyasana mukta dinacharane programme in hosapete
ವಿಜಯನಗರ1 hour ago

Vijayanagara News: ಹೊಸಪೇಟೆಯಲ್ಲಿ ವ್ಯಸನ ಮುಕ್ತ ದಿನಾಚರಣೆ; ಜನ ಜಾಗೃತಿ

utthana vaarshika katha spardhe the last date for submission of the story is october 10
ಬೆಂಗಳೂರು1 hour ago

Utthana Katha Spardhe 2024: ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆ; ಕಥೆ ತಲುಪಿಸಲು ಅ.10 ಕೊನೆಯ ದಿನ

World Breastfeeding Week
ಆರೋಗ್ಯ1 hour ago

World Breastfeeding Week: ವಿಶ್ವ ಸ್ತನ್ಯಪಾನ ಸಪ್ತಾಹ; ಹಾಲುಣಿಸಿದರೆ ಮಗುವಿಗೆ ಮಾತ್ರವಲ್ಲ, ತಾಯಿಗೂ ಲಾಭ!

Saree Fashion
ಫ್ಯಾಷನ್2 hours ago

Saree Fashion: ಕಂಟೆಂಪರರಿ ಪ್ರಿಂಟೆಡ್‌ ವಿನ್ಯಾಸದಲ್ಲೂ ಬಂತು ಆರ್ಗನ್ಜಾ ಸೀರೆ!

kotak bank smart watch
ವಾಣಿಜ್ಯ2 hours ago

kotak bank smart watch: ಮೊಬೈಲ್‌ ಬೇಕಿಲ್ಲ, ವಾಚ್‌ನಲ್ಲೇ ಆನ್‌ಲೈನ್‌ ಪೇಮೆಂಟ್‌! ಬಂದಿದೆ ಕೋಟಕ್-ಜಿಓಕ್ಯೂಐಐ ಸ್ಮಾರ್ಟ್ ವಾಚ್!

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : ಭಾರತದವರೇ ಆದ ಎಚ್​ಎಸ್​ ಪ್ರಣಯ್​ ಸೋಲಿಸಿ ಕ್ವಾರ್ಟರ್​​ ಫೈನಲ್ಸ್​ಗೇರಿದ ಲಕ್ಷ್ಯ ಸೇನ್​

Wayanad Landslide
ದೇಶ2 hours ago

Wayanad Landslide: ವಯನಾಡು ಸ್ಥಿತಿ ನೋಡಿ ತಂದೆ ಸಾವು ನೆನಪಾಯ್ತು ಎಂದ ರಾಹುಲ್‌ ಗಾಂಧಿ; ಸಾವಿನ ಸಂಖ್ಯೆ 300ರ ಸನಿಹ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ8 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ9 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ9 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌