Nita Ambani Fitness Secret: 60ರಲ್ಲೂ ಬಳ್ಳಿಯಂತೆ ಬಳುಕುವ ನೀತಾ ಅಂಬಾನಿ ಫಿಟ್‌ನೆಸ್‌ ಸಿಕ್ರೆಟ್‌ ಹೀಗಿದೆ! - Vistara News

Latest

Nita Ambani Fitness Secret: 60ರಲ್ಲೂ ಬಳ್ಳಿಯಂತೆ ಬಳುಕುವ ನೀತಾ ಅಂಬಾನಿ ಫಿಟ್‌ನೆಸ್‌ ಸಿಕ್ರೆಟ್‌ ಹೀಗಿದೆ!

Nita Ambani Fitness Secret: ತೂಕ ಇಳಿಸಿಕೊಳ್ಳಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಆದರೆ ಎರಡು ದಿನ ಗಂಭೀರವಾಗಿ ಡಯೆಟ್ ಮಾಡಿ ಮೂರನೇ ದಿನ ಸಾಕಪ್ಪಾ ಇದು ಎಂದು ಬಿಟ್ಟುಬಿಡುವವರೇ ಜಾಸ್ತಿ. ದೇಶದ ಆಗರ್ಭ ಶ್ರೀಮಂತ ಕುಟುಂಬದ ನೀತಾ ಅಂಬಾನಿ ಮಾತ್ರ ಕಟ್ಟುನಿಟ್ಟಾಗಿ ತಮ್ಮ ಡಯೆಟ್ ಫಾಲೋ ಮಾಡುತ್ತಿದ್ದಾರೆ. ತಾವು ಅನುಸರಿಸುತ್ತಿರುವ ಫಿಟ್ನೆಸ್ ಸಿಕ್ರೆಟ್ ಅನ್ನು ಇಲ್ಲಿ ಹಂಚಿಕೊಂಡಿದ್ದಾರೆ. ನೀವೂ ಕೂಡ ಟ್ರೈ ಮಾಡಿ ನೋಡಿ.

VISTARANEWS.COM


on

Nita Ambani Fitness Secret
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಮುಂಬೈ: ಅಂಬಾನಿ ಕುಟುಂಬದ ಮುಖ್ಯ ಸದಸ್ಯೆ, ರಿಲಯನ್ಸ್ ಇಂಡಸ್ಟ್ರೀಸ್‍ನ ನಿರ್ದೇಶಕಿ ಮತ್ತು ರಿಲಯನ್ಸ್ ಫೌಂಡೇಶನ್ ಮತ್ತು ಧೀರೂಭಾಯಿ ಅಂಬಾನಿ ಇಂಟರ್ನ್ಯಾಷನಲ್ ಸ್ಕೂಲ್‍ನ ಅಧ್ಯಕ್ಷೆ-ಸಂಸ್ಥಾಪಕಿ ನೀತಾ ಅಂಬಾನಿಯವರು ಖ್ಯಾತ ಉದ್ಯಮಿ ಮುಖೇಶ್ ಅಂಬಾನಿಯ ಪತ್ನಿ ಎಂಬ ವಿಚಾರ ಎಲ್ಲರಿಗೂ ತಿಳಿದೆ ಇದೆ. ನೀತಾ ಅಂಬಾನಿ ತಮ್ಮ ಮಗ ಅನಂತ್ ಅಂಬಾನಿಯವರ ವಿವಾಹ ಮಾರಂಭಕ್ಕೆ ತಯಾರಿ ನಡೆಸುತ್ತಿರುವಾಗ ಅವರ ಫಿಟ್‍ನೆಸ್ ಎಲ್ಲರ ಗಮನ ಸೆಳೆದಿದೆ. 60 ವರ್ಷದ ನೀತಾ ಅಂಬಾನಿಯವರ ಫಿಟ್‍ನೆಸ್ (Nita Ambani Fitness secret )ಕಂಡು ಅನೇಕರು ದಂಗಾಗಿದ್ದಾರೆ. ಹಾಗಾದ್ರೆ ಅವರ ಫಿಟ್‍ನೆಸ್ ರಹಸ್ಯ ತಿಳಿದುಕೊಳ್ಳಿ.

ನೀತಾ ಅಂಬಾನಿಯವರು ಯಾವುದೇ ಕಠಿಣವಾದ ವ್ಯಾಯಾಮ ಮಾಡದೆ 18 ಕೆಜಿ ತೂಕ ಇಳಿಸಿಕೊಂಡಿದ್ದಾರೆ. ತಮ್ಮ ಮಗ ಅನಂತ್ ಅಂಬಾನಿಯವರಿಗೆ ತೂಕ ಇಳಿಸಲು ಬೆಂಬಲ ನೀಡುವ ಮೂಲಕ ಅವರಿಗೆ ಈ ರೀತಿ ತೂಕ ಇಳಿಸಲು ಪ್ರೇರಣೆ ಸಿಕ್ಕಿದೆ ಎನ್ನಲಾಗಿದೆ.

Nita Ambani Fitness Secret

ಅನಂತ್ ಬೊಜ್ಜು ಮತ್ತು ಅಸ್ತಮಾದಿಂದ ಬಳಲುತ್ತಿದ್ದರು. ಅನಂತ್‌ ಅವರನ್ನು ಬೆಂಬಲಿಸಲು, ಅವರ ಜೊತೆಗೆ ತಮ್ಮ ಆಹಾರವನ್ನು ಪದ್ಧತಿಯನ್ನೂ ನೀತಾ ಬದಲಾಯಿಸಿಕೊಂಡರಂತೆ. ಹಾಗಾದ್ರೆ ಅವರ ಫಿಟ್‍ನೆಸ್ ದಿನಚರಿ ಬಗ್ಗೆ ತಿಳಿಯೋಣ.

Nita Ambani Fitness Secret

ಅವರು ತಮ್ಮ ದೈನಂದಿನ ಊಟದಲ್ಲಿ ತಾಜಾ ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸುತ್ತಾರೆ. ತಾಜಾ ಹಣ್ಣಿನ ರಸಗಳು ಮತ್ತು ಒಣ ಹಣ್ಣುಗಳನ್ನು ಒಳಗೊಂಡಿರುವ ಆರೋಗ್ಯಕರ ಉಪಾಹಾರದೊಂದಿಗೆ ದಿನವನ್ನು ಪ್ರಾರಂಭಿಸುತ್ತಾರೆ. ರಕ್ತ ಶುದ್ಧೀಕರಿಸಲು ಮತ್ತು ಚರ್ಮದ ಸಮಸ್ಯೆಗಳನ್ನು ತಡೆಗಟ್ಟಲು ಪ್ರತಿದಿನ ಡಿಟಾಕ್ಸ್ ನೀರನ್ನು ಕುಡಿಯುತ್ತಾರೆ. ಅವರು ಊಟವನ್ನು ಎಂದಿಗೂ ತಪ್ಪಿಸುವುದಿಲ್ಲವಂತೆ!

Nita Ambani Fitness Secret

ಪ್ರತಿದಿನ ಎರಡು ಲೋಟ ಬೀಟ್ರೂಟ್ ರಸವನ್ನು ಕುಡಿಯುತ್ತಾರಂತೆ. ಯಾಕೆಂದರೆ ಅದಕ್ಕೆ ದೇಹವನ್ನು ನಿರ್ವಿಷಗೊಳಿಸುವ ಗುಣವಿದೆ ಎಂದು ಅವರು ತಿಳಿಸಿದ್ದಾರೆ.

Nita Ambani Fitness Secret

ನೀತಾ ಅಂಬಾನಿ ಮತ್ತು ಅವರ ಪತಿ ಸಾಂಪ್ರದಾಯಿಕ ಗುಜರಾತಿ ಶೈಲಿಯ ಸೂಪ್‍ಗಳು, ಸೊಪ್ಪು ಮತ್ತು ಹಸಿರು ತರಕಾರಿಗಳನ್ನು ಉಪಾಹಾರಕ್ಕೆ ಆದ್ಯತೆ ನೀಡುತ್ತಾರೆ. ಅಲ್ಲದೆ, ಈ ದಂಪತಿ ರೊಟ್ಟಿ, ದಾಲ್ ಮತ್ತು ಬೇಳೆಕಾಳುಗಳನ್ನು ಒಳಗೊಂಡ ಮನೆಯಲ್ಲಿ ತಯಾರಿಸಿದ ಭೋಜನವನ್ನು ಹೆಚ್ಚು ಸೇವಿಸುತ್ತಾರೆ.

ಇದನ್ನೂ ಓದಿ: ರೋಗಿಗಳನ್ನು ನೋಡಿಕೊಳ್ಳುವ ಬದಲು ಕೋತಿಮರಿ ಜೊತೆ ಆಟವಾಡಿದ ನರ್ಸ್‌‌‌ಗಳು! ಕೊನೆಗೆ ಆಗಿದ್ದೇನು?

Nita Ambani Fitness Secret

ಅಷ್ಟೇ ಅಲ್ಲದೇ ನೀತಾ ಅಂಬಾನಿಯವರು ತಮ್ಮ ಮಾನಸಿಕ ಮತ್ತು ದೈಹಿಕ ಯೋಗಕ್ಷೇಮವನ್ನು ಹೆಚ್ಚಿಸಲು ಶಾಸ್ತ್ರೀಯ ನೃತ್ಯ ಮತ್ತು ಯೋಗವನ್ನು ಅಳವಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸೋಶಿಯಲ್ ಮೀಡಿಯಾದಲ್ಲಿ ಸಖತ್‌ ವೈರಲ್‌ ಆದ 5 ವಿಡಿಯೊಗಳು ಇಲ್ಲಿವೆ; ಮಿಸ್‌ ಮಾಡದೇ ನೋಡಿ!

Nita Ambani Fitness Secret

ಜಂಕ್ ಫುಡ್ ಮತ್ತು ಆಲ್ಕೋಹಾಲ್‌ನಿಂದ ದೂರವಿರುವುದು ಮತ್ತು ಕಟ್ಟುನಿಟ್ಟಾದ ಸಸ್ಯಾಹಾರಿ ಆಹಾರವನ್ನು ಮಾತ್ರ ಅನುಸರಿಸುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಈ ತತ್ವಗಳನ್ನು ಅನುಸರಿಸುವ ಮೂಲಕ ನೀವೂ ಸಹ ವೇಗವಾಗಿ ಫಿಟ್ನೆಸ್ ಸಾಧಿಸಬಹುದು ಎನ್ನುತ್ತಾರೆ ನೀತಾ ಅಂಬಾನಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Sexual Abuse: ಮಧ್ಯವಯಸ್ಕ ಮಹಿಳೆಯ ಮೇಲೆ ಮಗನ ಸ್ನೇಹಿತನಿಂದಲೇ ಅತ್ಯಾಚಾರ!

Rape Case: ಕಾಮಾಸಕ್ತರಿಗೆ ಭಯ ಮತ್ತು ಲಜ್ಜೆ ಎರಡೂ ಇರುವುದಿಲ್ಲವಂತೆ. ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಸ್ನೇಹಿತನ ತಾಯಿಯ ಮೇಲೆ ಅತ್ಯಾಚಾರ ಎಸಗಿದ ಹೇಯವಾದ ಘಟನೆಯೊಂದು ನಡೆದಿದೆ. ಸ್ನೇಹಿತನು ಇಲ್ಲದ ವೇಳೆ ನೋಡಿಕೊಂಡು ಮನೆಗೆ ಬಂದ ಆತನ ಕಾಮುಕ ಗೆಳೆಯ ಸ್ನೇಹಿತನ ತಾಯಿಯನ್ನೇ ತನ್ನ ಚಪಲಕ್ಕೆ ಬಳಸಿಕೊಂಡಿದ್ದಾನೆ. ತಾಯಿ ಇದಕ್ಕೆ ವಿರೋಧಿಸಿದಾಗ ಮಗನನ್ನು ಕೊಲ್ಲುವುದಾಗಿ ಬೆದರಿಯೊಡ್ಡಿದ್ದಾನೆ. ಮಹಿಳೆ ಪೊಲೀಸರನ್ನು ಸಂಪರ್ಕಿಸಿ ಆರೋಪಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮತ್ತು ತಲೆಮರೆಸಿಕೊಂಡಿರುವ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

VISTARANEWS.COM


on

Rape Case
Koo

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕೇಳಿಬರುತ್ತಿದೆ. ಕಾಮುಕರು ತಮ್ಮ ಕಾಮತೃಷೆಯನ್ನು ತೀರಿಸಿಕೊಳ್ಳಲು ಮುಗ್ಧ ಬಾಲಕಿ, ಯುವತಿರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದಾರೆ. ಅಷ್ಟೇ ಅಲ್ಲದೇ ತಮ್ಮ ತಾಯಿಯ ವಯಸ್ಸಿನವರನ್ನು ಕೂಡ ಬಿಡುತ್ತಿಲ್ಲ. ಅಂತಹದೊಂದು ಘಟನೆ ಇದೀಗ ಮಧ್ಯಪ್ರದೇಶದ ಅವಧ್ಪುರಿಯಲ್ಲಿ ನಡೆದಿದೆ. ಮಹಿಳೆಯ ಮಗನ ಸ್ನೇಹಿತನೇ ಆಕೆಯ ಮೇಲೆ ಅತ್ಯಾಚಾರ (Rape Case) ಎಸಗಿದ್ದಾನೆ.

ಮಧ್ಯಪ್ರದೇಶದ ಭೋಪಾಲ್‌ನ ಅವಧ್ಪುರಿಯಲ್ಲಿ ಜುಲೈ 12ರಂದು 43 ವರ್ಷದ ಮಹಿಳೆಯ ಮೇಲೆ ಆಕೆಯ ಮಗನ ಸ್ನೇಹಿತ, ಮಗನನ್ನು ಕೊಲ್ಲುವುದಾಗಿ ಬೆದರಿಕೆಯೊಡ್ಡಿ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಆರೋಪಿ ಮತ್ತು ಸಂತ್ರಸ್ತೆ ಒಂದೇ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಅಲ್ಲದೆ ಸಂತ್ರಸ್ತೆಯ ಮಗ ಹಾಗೂ ಆರೋಪಿ ಸ್ನೇಹಿತರಾಗಿದ್ದರು. ಹಾಗಾಗಿ ಆರೋಪಿ ಆಗಾಗ ಆಕೆಯ ಮನೆಗೆ ಬರುತ್ತಿದ್ದ ಎನ್ನಲಾಗಿದೆ. ಆದರೆ ಶುಕ್ರವಾರ ರಾತ್ರಿ ಆಕೆಯ ಮಗ ಮತ್ತು ಆರೋಪಿ ಹೊರಗೆ ಹೋಗಿದ್ದರು. ಸಂತ್ರಸ್ತೆ ಮನೆಯಲ್ಲಿ ಒಬ್ಬಳೆ ಇರುವುದನ್ನು ಅರಿತ ಆತ ಒಬ್ಬನೇ ತನ್ನ ಸ್ನೇಹಿತನ ಮನೆಗೆ ಹಿಂದಿರುಗಿ ಸಂತ್ರಸ್ತೆಯ ಬಾಗಿಲು ತಟ್ಟಿದ್ದಾನೆ. ಆಗ ಬಾಗಿಲು ತೆರೆದ ಸಂತ್ರಸ್ತೆಯ ಮನೆಗೆ ನುಗ್ಗಿದ್ದಾನೆ.

ಆಗ ಸಂತ್ರಸ್ತೆ ತನ್ನ ಮಗನ ಬಗ್ಗೆ ಕೇಳಿದಾಗ ಆತ ಚೆನ್ನಾಗಿ ಕುಡಿದು ಮಲಗಿರುವುದಾಗಿ ತಿಳಿಸಿದ್ದಾನೆ. ಬಳಿಕ ಆತ ಆಕೆಯ ಜತೆ ಅಸಭ್ಯವಾಗಿ ವರ್ತಿಸಲು ಪ್ರಯತ್ನಿಸಿದ್ದಾನೆ. ಆಗ ಆಕೆ ಅದನ್ನು ವಿರೋಧಿಸಿದಾಗ ಅತ್ಯಾಚಾರ ಪ್ರಯತ್ನವನ್ನು ವಿರೋಧಿಸಿದರೆ ಅವಳ ಮಗನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಘಟನೆಯ ನಂತರ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ. ಮರುದಿನ ಮಹಿಳೆ ಪೊಲೀಸರನ್ನು ಸಂಪರ್ಕಿಸಿ ಆರೋಪಿಯ ವಿರುದ್ಧ ದೂರು ದಾಖಲಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಹುಡುಗಿಯ ಮೇಲೆ ಏಕಾಏಕಿ ದಾಳಿ ಮಾಡಿದ ಕೋತಿ; ವಿಡಿಯೊ ಇದೆ

ಮಹಿಳೆಯ ಮೇಲಿನ ದೌರ್ಜನ್ಯ ಹೆಚ್ಚಾಗಿದ್ದು, ಇಂತಹ ಪ್ರಕರಣಗಳು ಈ ಹಿಂದೆ ಹಲವು ನಡೆದಿದ್ದು, ಇದರಲ್ಲಿ ಮಹಿಳೆಯರು ಬಲಿಯಾಗಿದ್ದಾರೆ. ಪತ್ನಿಯ ಮೇಲಿನ ಅನುಮಾನದಿಂದ ಪತಿಯೇ ಆಕೆಯ ಕತ್ತು ಹಿಸುಕಿ ಶವವನ್ನು ಸುಟ್ಟು ಹೂತು ಹಾಕಿದ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದ್ದು, ಪತಿಯನ್ನು ಬಂಧಿಸಲಾಗಿತ್ತು. ಮತ್ತೊಂದು ಘಟನೆಯಲ್ಲಿ, ಜಬಲ್ಪುರ ನಗರದ ಓಮ್ತಿ ಪ್ರದೇಶದಲ್ಲಿ ಜುಲೈ 1 ರಂದು 17 ವರ್ಷದ ಬಾಲಕಿಯನ್ನು 20 ವರ್ಷದ ಗುಫ್ರಾನ್ ಎಂಬ ವ್ಯಕ್ತಿ ಕ್ರೂರವಾಗಿ ಕೊಲೆ ಮಾಡಿದ್ದಾನೆ. ಆರೋಪಿಯೊಂದಿಗೆ ಮಾತನಾಡಲು ಸಂತ್ರಸ್ತೆ ನಿರಾಕರಿಸಿದ್ದು ಈ ಅಪರಾಧದ ಹಿಂದಿನ ಉದ್ದೇಶವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Ambani Video: 3 ವರ್ಷದ ಅಂಬಾನಿ ಮೊಮ್ಮಗ ವೇದಿಕೆ ಮೇಲೆ ಜಾರಿ ಬಿದ್ದ, ಆದರೆ ಜನರ ಹೃದಯ ಗೆದ್ದ!

Ambani Video: ಮುಂಬೈನ ಬಾಂದ್ರಾದ ಕುರ್ಲಾ ಕಾಂಪ್ಲೆಕ್ಸ್ (ಬಿಕೆಸಿ)ನಲ್ಲಿರುವ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಇಡೀ ಅಂಬಾನಿ ಕುಟುಂಬ ಹಾಜರಿತ್ತು. ಈ ಸಂದರ್ಭದಲ್ಲಿ ನೀತಾ ಅಂಬಾನಿ ಮೂರು ವರ್ಷದ ಮೊಮ್ಮಗ ಪೃಥ್ವಿಯನ್ನು ವೇದಿಕೆಗೆ ಕರೆಮದರು. ಆಗ ತನ್ನ ಪುಟ್ಟ ಪುಟ್ಟ ಹೆಜ್ಜೆಗಳನ್ನಿಟ್ಟು ಓಡುತ್ತಾ ವೇದಿಕೆ ಬಂದ ಪೃಥ್ವಿ ಕಾಲು ಜಾರಿ ಬಿದ್ದ. ಆದರೆ ಸಾವರಿಸಿಕೊಂಡು ಎದ್ದು “ಜೈ ಶ್ರೀ ಕೃಷ್ಣ” ಎನ್ನುತ್ತ ಅತಿಥಿಗಳ ಮನ ಗೆದ್ದಿದ್ದಾನೆ.

VISTARANEWS.COM


on

Ambani Video
Koo


ಮುಂಬೈ: ಮುಖೇಶ್‌ ಅಂಬಾನಿ ಅವರ ಪುತ್ರ (Ambani Video) ಅನಂತ್ ಅಂಬಾನಿ ಹಾಗೂ ರಾಧಿಕಾ ಅವರ ವಿವಾಹ ಸಮಾರಂಭದಾಚರಣೆಗಳು ಬಹಳ ಭರ್ಜರಿಯಿಂದ ನಡೆದಿವೆ. ಇದೀಗ ಮುಖೇಶ್ ಮತ್ತು ನೀತಾ ಅಂಬಾನಿ (Ambani Family )ಸೋಮವಾರ ಸಂಜೆ ಮತ್ತೊಂದು ಸುತ್ತಿನ ಆರತಕ್ಷತೆಯನ್ನು ಆಯೋಜಿಸಿದ್ದರು. ಈ ವೇಳೆ ಅವರ ಹಿರಿಯ ಮೊಮ್ಮಗ ಮೂರು ವರ್ಷದ ಪೃಥ್ವಿ ಅಂಬಾನಿ ತಮ್ಮ ಚಿಕ್ಕಪ್ಪ ಅನಂತ್ ಅಂಬಾನಿ ಅವರ ವಿವಾಹ ಆರತಕ್ಷತೆಯಲ್ಲಿ ತನ್ನ ಮುದ್ದು ಮುದ್ದಾದ ಮಾತಿನಲ್ಲಿ ಭಾಷಣ ಮಾಡಿ ಅತಿಥಿಗಳಿಗೆ ಮನೋರಂಜನೆ ನೀಡಿದೆ! ಅದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ (ಬಿಕೆಸಿ)ನಲ್ಲಿರುವ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಧು ರಾಧಿಕಾ ಮರ್ಚೆಂಟ್ ಅವರ ಕುಟುಂಬ ಸೇರಿದಂತೆ ಇಡೀ ಅಂಬಾನಿ ಕುಟುಂಬ ಹಾಜರಿತ್ತು. ನೀತಾ ಅಂಬಾನಿ ಮೂರು ವರ್ಷದ ಪೃಥ್ವಿಯನ್ನು ಪರಿಚಯಿಸಿ ವೇದಿಕೆಗೆ ಬರುವಂತೆ ಆಹ್ವಾನಿಸಿದರು. “ನಮ್ಮ ಅತ್ಯಂತ ಪ್ರೀತಿಯ ಪೃಥ್ವಿ ಕೂಡ ಇಲ್ಲಿದ್ದಾನೆ, ಪೃಥ್ವಿ, ಬಾ” ಎಂದರು. ಆಗ ತನ್ನ ಪುಟ್ಟ ಪುಟ್ಟ ಹೆಜ್ಜೆಗಳನ್ನಿಟ್ಟು ಓಡುತ್ತಾ ವೇದಿಕೆ ಬಂದ ಪೃಥ್ವಿ ಕಾಲು ಜಾರಿ ಉರುಳಿ ಬಿದ್ದ! ನಂತರ ಎದ್ದು ನೀತಾ ಅಂಬಾನಿಯಿಂದ ಮೈಕ್ರೊಫೋನ್ ತೆಗೆದುಕೊಂಡು, ಪ್ರೇಕ್ಷಕರನ್ನು ಆತ್ಮವಿಶ್ವಾಸದಿಂದ “ಹಲೋ” ಎಂದು ಸ್ವಾಗತಿಸಿದ. ನಂತರ “ಜೈ ಶ್ರೀ ಕೃಷ್ಣ” ಎಂದು ಹೇಳಿದ. ಪ್ರೇಕ್ಷಕರು ಪ್ರತಿಯಾಗಿ “ಜೈ ಶ್ರೀ ಕೃಷ್ಣ” ಎಂದು ಒಕ್ಕೊರಲಿನಿಂದ ಪ್ರತಿಕ್ರಿಯಿಸಿದರು. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಪೃಥ್ವಿ ಅಂಬಾನಿ ಶ್ಲೋಕಾ ಮೆಹ್ತಾ ಮತ್ತು ಆಕಾಶ್ ಅಂಬಾನಿಯವರ ಪುತ್ರ. ಇವನಿಗೆ ವೇದಾ ಎಂಬ ಸಹೋದರಿ ಕೂಡ ಇದ್ದಾಳೆ. ಪೃಥ್ವಿ 2020ರ ಡಿಸೆಂಬರ್‌ನಲ್ಲಿ ಜನಿಸಿದರೆ, ವೇದಾ ಈ ವರ್ಷದ ಮೇ ತಿಂಗಳಲ್ಲಿ ಒಂದು ವರ್ಷ ಪೂರೈಸಿದ್ದಾಳೆ. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಪೂರ್ವ ಆಚರಣೆಗಳ ನಡುವೆ ಯುರೋಪಿನ ಐಷಾರಾಮಿ ಕ್ರೂಸ್ ಹಡಗಿನಲ್ಲಿ ವೇದಾಳ ಮೊದಲ ಹುಟ್ಟುಹಬ್ಬವನ್ನು ಆಚರಿಸಲಾಗಿತ್ತು.

ಇದನ್ನೂ ಓದಿ: ಅಂಬಾನಿ ಮದುವೆ ಸಮಾರಂಭದೊಳಗೆ ನುಸುಳಿದ್ದ ಇಬ್ಬರು ʼನಕಲಿ ಅತಿಥಿʼಗಳ ಬಂಧನ!

ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಕಳೆದ ಶುಕ್ರವಾರ ಅದ್ಧೂರಿಯಾಗಿ ವಿವಾಹವಾದರು. ವಿವಿಧ ಕ್ಷೇತ್ರಗಳ ಉನ್ನತ ಜಾಗತಿಕ ಮತ್ತು ಭಾರತೀಯ ಪ್ರಸಿದ್ಧ ವ್ಯಕ್ತಿಗಳು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾತ್ರಿ ನಡೆದ “ಶುಭ ಆಶೀರ್ವಾದ್” ಸಮಾರಂಭದಲ್ಲಿ ಭಾಗವಹಿಸಿ ನವವಿವಾಹಿತರನ್ನು ಆಶೀರ್ವದಿಸಿದ್ದರು.

Continue Reading

Latest

Viral Video : ಡ್ಯಾನ್ಸ್‌ ಆಯ್ತು, ಹೊಡೆದಾಟವಾಯ್ತು, ಈಗ ಹುಡುಗಿಯರ ಮೇಕಪ್‌ಗೂ ಸಾಕ್ಷಿಯಾಯ್ತು ದೆಹಲಿ ಮೆಟ್ರೊ! ವಿಡಿಯೊ ನೋಡಿ

Viral Video: ಮಹಿಳೆಯರಿಗೆ ಮೇಕಪ್ ಎಂದರೆ ತುಂಬಾ ಇಷ್ಟ. ತಾವು ಮಾಡಿದ ಮೇಕಪ್ ಸ್ವಲ್ಪ ಹಾಳಾದರೂ ಎಲ್ಲೆಂದರಲ್ಲಿ ಕುಳಿತು ತಮ್ಮ ಮುಖಕ್ಕೆ ಮತ್ತಷ್ಟು ಮೇಕಪ್ ಬಡಿದುಕೊಳ್ಳುತ್ತಾರೆ. ಅಂದಹಾಗೇ ದೆಹಲಿ ಮೆಟ್ರೋದಲ್ಲಿ ಕೂಡ ಇಬ್ಬರು ಮಹಿಳೆಯರು ಪ್ರಯಾಣಿಸುವಾಗ ಮುಖಕ್ಕೆ ಮೇಕಪ್ ಬಡಿದುಕೊಳ್ಳುತ್ತಿರುವುದರಲ್ಲಿ ತಲ್ಲೀನರಾಗಿರುವುದು ಕಂಡುಬಂದಿದೆ. ಇದನ್ನು ವ್ಯಕ್ತಿಯೊಬ್ಬರು ವಿಡಿಯೊ ತೆಗೆದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಇದು ಈಗ ವೈರಲ್ ಆಗಿದೆ.

VISTARANEWS.COM


on

Viral Video
Koo

ನವದೆಹಲಿ: ದೆಹಲಿ ಮೆಟ್ರೋ ಪ್ರತಿದಿನ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿದೆ. ದೆಹಲಿ ಮೆಟ್ರೋದಲ್ಲಿ ನಡೆದ ಘಟನೆಗಳನ್ನು ಜನರು ಆಗಾಗ ಸೋಶಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡುತ್ತಿರುತ್ತಾರೆ. ಈ ಹಿಂದೆ ದೆಹಲಿ ಮೆಟ್ರೋದಲ್ಲಿ ಯುವಕನೊಬ್ಬ ಡ್ಯಾನ್ಸ್ ಮಾಡಿದ್ದು, ಇಬ್ಬರು ವ್ಯಕ್ತಿಗಳು ಹೊಡೆದಾಡಿದ್ದು ಮುಂತಾದ ವಿಚಾರಕ್ಕೆ ಅದು ಸುದ್ದಿಯಾಗಿತ್ತು. ಇದೀಗ ದೆಹಲಿ ಮೆಟ್ರೋದಲ್ಲಿ ನಡೆದ ಮತ್ತೊಂದು ಘಟನೆ ಬಹಳ ವೈರಲ್ (Viral Video) ಆಗುತ್ತಿದೆ.

ಮಹಿಳೆಯರಿಗೆ ಮೇಕಪ್ ಎಂದರೆ ತುಂಬಾ ಇಷ್ಟ. ತಾವು ಮಾಡಿದ ಮೇಕಪ್ ಸ್ವಲ್ಪ ಹಾಳಾದರೂ ಎಲ್ಲೆಂದರಲ್ಲಿ ಕುಳಿತು ತಮ್ಮ ಮುಖಕ್ಕೆ ಮತ್ತಷ್ಟು ಮೇಕಪ್ ಬಡಿದುಕೊಳ್ಳುತ್ತಾರೆ. ಅಂದಹಾಗೇ ದೆಹಲಿ ಮೆಟ್ರೋದಲ್ಲಿ ಕೂಡ ಇಬ್ಬರು ಮಹಿಳೆಯರು ಪ್ರಯಾಣಿಸುವಾಗ ಮುಖಕ್ಕೆ ಮೇಕಪ್ ಬಡಿದುಕೊಳ್ಳುತ್ತಿರುವುದರಲ್ಲಿ ತಲ್ಲೀನರಾಗಿರುವುದು ಕಂಡುಬಂದಿದೆ. ಇದನ್ನು ವ್ಯಕ್ತಿಯೊಬ್ಬರು ವಿಡಿಯೊ ತೆಗೆದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಇದು ಈಗ ವೈರಲ್ ಆಗಿದೆ.

ವಿಡಿಯೊದಲ್ಲಿ, ಮಹಿಳೆಯರು ಮೆಟ್ರೋ ಒಳಗೆ ಕುಳಿತಿರುವುದನ್ನು ಕಾಣಬಹುದು, ಮತ್ತು ಅಲ್ಲಿ ಹೆಚ್ಚು ಜನರು ಕಾಣುತ್ತಿಲ್ಲ. ಹಾಗಾಗಿ ಪರಿಸ್ಥಿತಿಯ ಲಾಭವನ್ನು ಪಡೆದುಕೊಂಡು, ಅವರು ಮೇಕಪ್ ಹಚ್ಚಲು ಪ್ರಾರಂಭಿಸಿದ್ದಾರೆ. ಇದು ಅಂತರ್ಜಾಲದಲ್ಲಿ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಹೆಚ್ಚಿನ ಜನರಿಗೆ ಈ ವಿಡಿಯೊವನ್ನು ತಮಾಷೆಯಾಗಿ ಕಂಡುಬಂದರೆ, ಕೆಲವರು ಇದನ್ನು ಮಾಡುವುದಕ್ಕಿಂತ ಈ ಸಮಯದಲ್ಲಿ ಸ್ವಲ್ಪ ನಿದ್ರೆ ಮಾಡಬಹುದಿತ್ತು ಎಂದು ಬರೆದಿದ್ದಾರೆ. ಕೆಲವರು ಹುಡುಗಿಯರು ಯಾರಿಗೂ ಹಾನಿ ಮಾಡದೆ ಅವರ ಪಾಡಿಗೆ ಅವರಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾನಿಲ್ಲ, ಲೈಟಿಲ್ಲ, ಆಹಾರವಿಲ್ಲ; 2 ದಿನ ಲಿಫ್ಟ್‌ನಲ್ಲಿ ಸಿಲುಕಿದ್ದವನ ಸ್ಥಿತಿ ಹೇಗಿರಬಹುದು ಊಹಿಸಿ!

“ಅವರಿಗೆ ಮೆಟ್ರೋ ಪಾಸ್‍ನೊಂದಿಗೆ ಮೇಕಪ್ ಕಿಟ್ ಅನ್ನು ಉಚಿತವಾಗಿ ನೀಡಬೇಕು” ಎಂದು ಮತ್ತೊಬ್ಬರು ಹೇಳಿದ್ದಾರೆ. ಮೆಟ್ರೋ ಅಥವಾ ಸಾರಿಗೆ ಮಾಧ್ಯಮವು ಈ ಎಲ್ಲದಕ್ಕೂ ಸಮಯವನ್ನು ಪಡೆಯುವ ಏಕೈಕ ಸ್ಥಳವಾಗಿದೆ”ಎಂದು ಮತ್ತೊಬ್ಬರು ತಿಳಿಸಿದ್ದಾರೆ. “ಈ ಹುಡುಗಿಯರು ತುಂಬಾ ಮುಗ್ಧರಾಗಿ ತಮ್ಮ ಮನೆಯಿಂದ ಹೊರಬರುತ್ತಾರೆ, ನಂತರ ಅವರು ತಮ್ಮ ನಿಜವಾದ ಮುಖವನ್ನು ತೋರಿಸುತ್ತಾರೆ” ಎಂದು ಬಳಕೆದಾರರೊಬ್ಬರು ಬರೆದಿದ್ದಾರೆ. ಈ ಘಟನೆಯ ದಿನಾಂಕ ಮತ್ತು ನಿಖರವಾದ ಸ್ಥಳದ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಆದರೆ ಈ ವಿಡಿಯೊವನ್ನು ಸೋಶಿಯಲ್ ಮೀಡಿಯಾ ಪ್ಲಾಟ್ಫಾ‌ರ್ಮ್ ಇನ್ಸ್ಟಾಗ್ರಾಂನಲ್ಲಿ ‘ದೆಹಲಿ ಮೇರಿ ಜಾನ್’ ಹ್ಯಾಂಡಲ್‍ನಲ್ಲಿ ಹಂಚಿಕೊಳ್ಳಲಾಗಿದೆ. ಇದಕ್ಕೆ “ದೆಹಲಿ ಹುಡುಗಿಯರು” ಎಂದು ಶೀರ್ಷಿಕೆ ನೀಡಲಾಗಿದೆ.

Continue Reading

Latest

Model Arrest: ತನ್ನ ಫಾಲೋವರ್ಸ್‌ಗಳನ್ನೇ ವೇಶ್ಯಾವಾಟಿಕೆಯಲ್ಲಿ ತೊಡಗಿಸುತ್ತಿದ್ದ ಖ್ಯಾತ ಮಾಡೆಲ್‌ಗೆ ಜೈಲು ಶಿಕ್ಷೆ!

Model Arrest: ಬ್ರೆಜಿಲ್‌ನ ಮಾಜಿ ರೂಪದರ್ಶಿ ಕ್ಯಾಟ್ ಟೊರೆಸ್ ಅನ್ನು ಮಾನವ ಕಳ್ಳಸಾಗಣೆ ಮತ್ತು ಮಹಿಳೆಯರ ಗುಲಾಮಗಿರಿಗಾಗಿ ಎಂಟು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಅವಳೊಂದಿಗೆ ವಾಸವಾಗಿದ್ದ ಇಬ್ಬರು ಮಹಿಳೆಯರು 2022ರಲ್ಲಿ ಕಾಣೆಯಾಗಿದ್ದರು. ಈ ಬಗ್ಗೆ ಎಫ್ಐಆರ್ ದಾಖಲಿಸಿದ ಪೊಲೀಸರು ತನಿಖೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿತ್ತು. ಆಕೆ ತನ್ನ ಫಾಲೋವರ್ಸ್‌ಗಳನ್ನು ಲೈಂಗಿಕ ಕೆಲಸದಲ್ಲಿ ತೊಡಗುವಂತೆ ಒತ್ತಾಯಿಸಿ ಅವರನ್ನು ತನ್ನ ಗುಲಾಮರಂತೆ ಇರಿಸಿಕೊಳ್ಳುತ್ತಿದ್ದಳು ಎಂಬುದಾಗಿ ತಿಳಿದು ಬಂದಿದೆ.

VISTARANEWS.COM


on

Model Arrest
Koo

ಬ್ರೆಜಿಲ್‌ನ ಮಾಜಿ ರೂಪದರ್ಶಿ ಮತ್ತು ಅಮೆರಿಕ ಮೂಲದ ವೆಲ್ನೆಸ್ ಇನ್ಫ್ಲುಯೆನ್ಸರ್ ಕ್ಯಾಟ್ ಟೊರೆಸ್‌ ಎಂಬುವಳನ್ನು ಮಾನವ ಕಳ್ಳಸಾಗಣೆ ಮತ್ತು ಮಹಿಳೆಯರ ಗುಲಾಮಗಿರಿಗಾಗಿ ಎಂಟು ವರ್ಷಗಳ ಜೈಲು ಶಿಕ್ಷೆ (Model Arrest) ವಿಧಿಸಲಾಗಿದೆ. ಅವಳೊಂದಿಗೆ ವಾಸವಾಗಿದ್ದ ಇಬ್ಬರು ಮಹಿಳೆಯರು 2022ರಲ್ಲಿ ಕಾಣೆಯಾಗಿದ್ದರು. ಈ ಬಗ್ಗೆ ಎಫ್‌ಐಆರ್ ದಾಖಲಿಸಿದ ಪೊಲೀಸರು ತನಿಖೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿತ್ತು. ಆಕೆ ತನ್ನ ಫಾಲೋವರ್ಸ್‌ಗಳನ್ನು ಲೈಂಗಿಕ ಕೆಲಸದಲ್ಲಿ ತೊಡಗುವಂತೆ ಒತ್ತಾಯಿಸಿ ಅವರನ್ನು ತನ್ನ ಗುಲಾಮರಂತೆ ಇರಿಸಿಕೊಳ್ಳುತ್ತಿದ್ದಳು ಎಂಬುದಾಗಿ ತಿಳಿದುಬಂದಿದೆ.

ಆಕೆಯಿಂದ ಗುಲಾಮಗಿರಿಗೆ ಒಳಗಾದ ಆ ಮಹಿಳೆಯರು ಆಕೆಯೊಂದಿಗೆ ವಾಸವಿದ್ದಾಗ ಅನುಭವಿಸಿದ ಭಯಾನಕ ಘಟನೆಗಳ ಬಗ್ಗೆ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಂತ್ರಸ್ತ ಮಹಿಳೆಯರು, ಆಕೆ ಮರುಳು ಮಾಡುವಂತೆ ಮಾತನಾಡುತ್ತಿದ್ದಳು. ಅವಳು ಹೇಳುವ ಮಾತನ್ನು ಕೇಳಿ ಆಕರ್ಷಿತರಾದೆವು. ನಟ ಲಿಯೊನಾರ್ಡೊ ಡಿಕಾಪ್ರಿಯೊ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾಳೆ ಎಂದು ಒಂದು ಕಾಲದಲ್ಲಿ ವದಂತಿಗಳಿದ್ದ ಟೊರೆಸ್, ತನ್ನ ಆಧ್ಯಾತ್ಮಿಕ ಶಕ್ತಿಯನ್ನು ಬಳಸಿಕೊಂಡು ಭವಿಷ್ಯ ನುಡಿಯಬಹುದು ಎಂದು ಪ್ರಸಿದ್ಧ ಬ್ರೆಜಿಲಿಯನ್ ಟಿವಿ ಕಾರ್ಯಕ್ರಮಗಳಲ್ಲಿ ಹೇಳಿದ್ದಳು. ಅಲ್ಲದೇ ಅವಳು ಮ್ಯಾಗಜೀನ್‌ಗಳ ಮುಖಪುಟಗಳಲ್ಲಿ ಕಾಣಿಸಿಕೊಂಡಿದ್ದಳು. ಹಾಲಿವುಡ್‌ ನಟ ಲಿಯೊನಾರ್ಡೊ ಡಿಕಾಪ್ರಿಯೊ ಅವರಂತಹ ಪ್ರಸಿದ್ಧ ವ್ಯಕ್ತಿಗಳೊಂದಿಗೆ ಕಾಣಿಸಿಕೊಂಡಳು. ಹಾಗಾಗಿ ಆಕೆ ಹೇಳುವುದನ್ನು ತಾವು ನಂಬಿರುವುದಾಗಿ ಮಹಿಳೆಯರು ತಿಳಿಸಿದ್ದಾರೆ.

Model Arrest

ಆಕೆ ವೆಲ್‍ನೆಸ್ ವೆಬ್‍ಸೈಟ್‍ ಮತ್ತು ಚಂದಾದಾರಿಕೆ ಸೇವೆಯನ್ನು ಅಭಿವೃದ್ಧಿಪಡಿಸಿ ಅದರಲ್ಲಿ ಸಂಬಂಧಗಳು, ಯೋಗಕ್ಷೇಮ, ಸಂಮೋಹನ, ಧ್ಯಾನ ಮತ್ತು ವ್ಯಾಯಾಮ ಕಾರ್ಯಕ್ರಮಗಳು ಸೇರಿದಂತೆ ವ್ಯವಹಾರ ಯಶಸ್ಸಿನ ಬಗ್ಗೆ ಸಲಹೆ ನೀಡುವ ಸ್ವ-ಸಹಾಯ ವೀಡಿಯೊಗಳನ್ನು ಸಹ ಮಾಡುತ್ತಿದ್ದಳು. ಹಾಗೇ ವಿಡಿಯೋ ಸಮಾಲೋಚನೆಗಳ ಮೂಲಕ ಮುಖಾಮುಖಿ ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಪರಿಹರಿಸುತ್ತಿದ್ದಳು.

ಹಾಗಾಗಿ ಆ ಮಹಿಳೆಯರು 2019ರಲ್ಲಿ ಟೊರೆಸ್ ಅವರ ಲೈವ್-ಇನ್ ಸಹಾಯಕರಾಗಿ ಕೆಲಸ ಮಾಡಲು ನ್ಯೂಯಾಕ್‌ಗೆ ತೆರಳಿದರು. ಅಲ್ಲಿ ಅವಳ ಮನೆಕೆಲಸ ಹಾಗೂ ಪ್ರಾಣಿಗಳನ್ನು ನೋಡಿಕೊಳ್ಳುವ ಕೆಲಸದಲ್ಲಿ ನಿರತಳಾಗಿದ್ದರು. ಆದರೆ ಆಕೆ ಸಂಬಳ ಸರಿಯಾಗಿ ನೀಡುತ್ತಿರಲಿಲ್ಲ. ನಂತರ ಸ್ಥಳೀಯ ಸ್ಟ್ರಿಪ್ ಕ್ಲಬ್‍ನಲ್ಲಿ ಕೆಲಸ ಮಾಡುವಂತೆ ಅವರ ಮೇಲೆ ಒತ್ತಡ ಹೇರಿದ್ದಳು. ಇದಕ್ಕೆ ಅವರು ಒಪ್ಪದಿದ್ದಾಗ ಅವರನ್ನು ಯಾಮಾರಿಸಿ ವೇಶ್ಯಾವಾಟಿಕೆಯಲ್ಲಿ ತೊಡಗುವಂತೆ ಮಾಡಿದ್ದಳು.

ಇದನ್ನೂ ಓದಿ: ತರಕಾರಿ ಮಾರುವವಳ ಮಗ ಸಿಎ ಪರೀಕ್ಷೆಯಲ್ಲಿ ಪಾಸ್‌; ಹೃದಯಸ್ಪರ್ಶಿ ವಿಡಿಯೊ ಇಲ್ಲಿದೆ

ನಂತರ ಇಬ್ಬರು ಮಹಿಳೆಯರ ಸ್ನೇಹಿತರು ಮತ್ತು ಕುಟುಂಬವು ಅವರನ್ನು ಹುಡುಕಲು ಸಾಮಾಜಿಕ ಮಾಧ್ಯಮ ಅಭಿಯಾನಗಳನ್ನು ಪ್ರಾರಂಭಿಸಿತು. ಮಾಧ್ಯಮಗಳ ಗಮನದಿಂದ ತಪ್ಪಿಸಿಕೊಳ್ಳಲು, ಟೊರೆಸ್ ಆ ಮಹಿಳೆಯರಿಗೆ ತಾವು ಆರಾಮವಾಗಿ ಇದ್ದೀವಿ ಎಂದು ವಿಡಿಯೊ ಪೋಸ್ಟ್ ಮಾಡುವಂತೆ ಒತ್ತಾಯಿಸಿದ್ದಳು. ಈ ರೀತಿ ಆಕೆ ಮಹಿಳೆಯರನ್ನು ಬಳಸಿಕೊಳ್ಳುತ್ತಿದ್ದಳು ಎನ್ನಲಾಗಿದೆ. 20 ಕ್ಕೂ ಹೆಚ್ಚು ಮಹಿಳೆಯರು ಟೊರೆಸ್‌ನಿಂದ ವಂಚನೆಗೊಳಗಾದ ಅಥವಾ ಶೋಷಣೆಗೊಳಗಾದ ಬಗ್ಗೆ ತಿಳಿಸಿದ್ದಾರೆ. ಅವರು ಅನುಭವಿಸಿದ ಮತ್ತು ಅನುಭವದಿಂದ ಚೇತರಿಸಿಕೊಳ್ಳಲು ಅವರು ಇನ್ನೂ ಮನೋವೈದ್ಯಕೀಯ ಚಿಕಿತ್ಸೆಗೆ ಒಳಗಾಗುತ್ತಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.

Continue Reading
Advertisement
NEET-UG 2024
ದೇಶ11 mins ago

NEET UG 2024: ನೀಟ್‌ ಅಕ್ರಮ; ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಮತ್ತಿಬ್ಬರು ಆರೋಪಿಗಳು ಅರೆಸ್ಟ್‌

Olympics on television
ಕ್ರೀಡೆ23 mins ago

Olympics On Television: ಒಲಿಂಪಿಕ್ಸ್​ ಕ್ರೀಡಾಕೂಟ ಮೊದಲ ಬಾರಿಗೆ ಟಿವಿಯಲ್ಲಿ ಪ್ರಸಾರ ಕಂಡಿದ್ದು ಯಾವಾಗ?

Pennar River Dispute
ಪ್ರಮುಖ ಸುದ್ದಿ49 mins ago

Pennar River Dispute: ಪೆನ್ನಾರ್ ನದಿ ನೀರು ಹಂಚಿಕೆ ವಿವಾದ; 8 ವಾರದಲ್ಲಿ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

Rape Case
Latest58 mins ago

Sexual Abuse: ಮಧ್ಯವಯಸ್ಕ ಮಹಿಳೆಯ ಮೇಲೆ ಮಗನ ಸ್ನೇಹಿತನಿಂದಲೇ ಅತ್ಯಾಚಾರ!

ಕ್ರೀಡೆ1 hour ago

India at the Olympics: ಒಲಿಂಪಿಕ್ಸ್​ನಲ್ಲಿ ಭಾರತದ ಪದಕ ಸಾಧನೆಯ ಇಣುಕು ನೋಟ

Ambani Video
ಪ್ರಮುಖ ಸುದ್ದಿ1 hour ago

Ambani Video: 3 ವರ್ಷದ ಅಂಬಾನಿ ಮೊಮ್ಮಗ ವೇದಿಕೆ ಮೇಲೆ ಜಾರಿ ಬಿದ್ದ, ಆದರೆ ಜನರ ಹೃದಯ ಗೆದ್ದ!

Money Guide
ಮನಿ-ಗೈಡ್1 hour ago

Money Guide: ಹಿರಿಯರಿಗೆ ಆರೋಗ್ಯ ವಿಮೆ: ಯಾಕಾಗಿ? ಏನಿದರ ಉಪಯೋಗ?

Muharram 2024 Man dies in fire during
ರಾಯಚೂರು1 hour ago

Muharram 2024: ರಾಯಚೂರಿನಲ್ಲಿ ಮೊಹರಂನಲ್ಲಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ವ್ಯಕ್ತಿ ಸುಟ್ಟು ಭಸ್ಮ

hit and run case
ದೇಶ1 hour ago

Hit And Run Case: ಮುಂಬೈ ಹಿಟ್‌ ಆ್ಯಂಡ್‌ ರನ್‌ ಕೇಸ್‌; ತನಗೆ ಕುಡಿಯುವ ಅಭ್ಯಾಸ ಇದೆ ಎಂದು ಒಪ್ಪಿಕೊಂಡ ಆರೋಪಿ

Assembly Session
ಕರ್ನಾಟಕ2 hours ago

Assembly Session: ವಾಲ್ಮೀಕಿ ನಿಗಮ ಅಕ್ರಮ ದಲಿತರಿಗೆ ಮಾಡಿರೋ ಅನ್ಯಾಯ: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ7 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 day ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌