Viral Video: ದಿಲ್ಲಿ ಮೆಟ್ರೊದಂತೆ ʼನಮ್ಮ ಮೆಟ್ರೊʼದಲ್ಲೂ ಬಡಿದಾಡಿಕೊಂಡ ಪ್ರಯಾಣಿಕರು! ವಿಡಿಯೊ ನೋಡಿ - Vistara News

Latest

Viral Video: ದಿಲ್ಲಿ ಮೆಟ್ರೊದಂತೆ ʼನಮ್ಮ ಮೆಟ್ರೊʼದಲ್ಲೂ ಬಡಿದಾಡಿಕೊಂಡ ಪ್ರಯಾಣಿಕರು! ವಿಡಿಯೊ ನೋಡಿ

Viral Video: ಈಗ ಜನರಿಗೆ ತಾಳ್ಮೆಯೇ ಇಲ್ಲದ ಹಾಗೇ ವರ್ತಿಸುತ್ತಾರೆ. ಚಿಕ್ಕದಕ್ಕೂ ಅತೀಯಾಗಿ ವರ್ತಿಸುತ್ತಾರೆ. ನಾವು ಎಲ್ಲಿದ್ದೇವೆ, ನಮ್ಮ ಸುತ್ತಮುತ್ತ ಯಾರಿದ್ದಾರೆ ಎಂಬ ಅರಿವು ಇಲ್ಲದಂತೆ ವರ್ತಿಸುತ್ತಾರೆ. ಇಂತಹದ್ದೇ ಒಂದು ಘಟನೆ ನಮ್ಮ ಮೆಟ್ರೋದಲ್ಲಿ ನಡೆದಿದೆ. ನಮ್ಮ ಮೆಟ್ರೋದಲ್ಲಿ ಕಿಕ್ಕಿರಿದ ಜನಸಂದಣೆ ಇದ್ದು, ಈ ನಡುವೆ ಇಬ್ಬರು ಪ್ರಯಾಣಿಕರು ವಾಗ್ವಾದ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಒಬ್ಬರಿಗೊಬ್ಬರು ಹೊಡೆದಾಡಿದ್ದಾರೆ. ಆ ದಟ್ಟ ಜನಸಂದಣಿಯ ನಡುವೆ ಅವರಿಬ್ಬರು ಹೊಡೆದಾಡುವುದನ್ನು ನೋಡಿ ಸಹಪ್ರಯಾಣಿಕರು ಗಾಬರಿಯಾಗಿದ್ದಾರೆ. ಅವರ ಜಗಳ ನಿಲ್ಲಿಸಲು ಸಹ ಪ್ರಯಾಣಿಕರು ಪ್ರಯತ್ನಿಸಿದರೂ ಕೂಡ ಅವರು ಸಮಾಧಾನಗೊಳ್ಳಲಿಲ್ಲ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನ ಪ್ರಯಾಣಿಕರು ಹೆಚ್ಚಾಗಿ ಮೆಟ್ರೋ ರೈಲುಗಳಲ್ಲಿ ಪ್ರಯಾಣಿಸುತ್ತಾರೆ. ಯಾಕೆಂದರೆ ಇದರಲ್ಲಿ ಟ್ರಾಫಿಕ್ ಕಿರಿಕಿರಿ ಇರುವುದಿಲ್ಲ. ಹಾಗೇ ಇದರಲ್ಲಿ ಸ್ಥಳಾವಕಾಶ ಕೂಡ ಹೆಚ್ಚಾಗಿರುವುದರಿಂದ ಆರಾಮದಾಯಕವಾಗಿ ಪ್ರಯಾಣಿಸಬಹುದು ಎಂದು ಜನರು ಹೆಚ್ಚು ಮೆಟ್ರೋದಲ್ಲಿ ಪ್ರಯಾಣಿಸುತ್ತಾರೆ. ಆದರೆ ಎಲ್ಲರೂ ಮೆಟ್ರೊದಲ್ಲಿಯೆ ಪ್ರಯಾಣಿಸಲು ಶುರು ಮಾಡಿದ್ದರಿಂದ ಮೆಟ್ರೊದಲ್ಲಿ ಸ್ಥಳಗಳ ಅಭಾವ ಉಂಟಾಗಿದೆ. ಹಾಗಾಗಿ ಇಲ್ಲಿ ಕಿಕ್ಕಿರಿದ ಜನಸಂದಣೆಯನ್ನು ನೋಡಬಹುದು. ಈ ಸಮಸ್ಯೆ ದೆಹಲಿ ಮೆಟ್ರೋದಲ್ಲಿ ಮಾತ್ರವಲ್ಲ ಇದು ಈಗ ಬೆಂಗಳೂರು ನಮ್ಮ ಮೆಟ್ರೋದಲ್ಲಿಯೂ ಕೂಡ ಶುರುವಾಗಿದೆ. ಈ ಮಧ್ಯೆ ಇದೀಗ ಬೆಂಗಳೂರು ನಮ್ಮ ಮೆಟ್ರೋದಲ್ಲಿ ಜನಸಂದಣಿಯ ನಡುವೆ ಜನರು ಜಗಳವಾಡಲು ಕೂಡ ಶುರುಮಾಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ವೈರಲ್ (Viral Video )
ಆಗಿದೆ.

ಬೆಂಗಳೂರು ನಮ್ಮ ಮೆಟ್ರೋದಲ್ಲಿ ಕಿಕ್ಕಿರಿದ ಜನಸಂದಣೆ ಇದ್ದು, ಈ ನಡುವೆ ಇಬ್ಬರು ಪ್ರಯಾಣಿಕರು ವಾಗ್ವಾದ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಒಬ್ಬರಿಗೊಬ್ಬರು ಹೊಡೆದಾಡಿದ್ದಾರೆ. ಆ ದಟ್ಟ ಜನಸಂದಣಿಯ ನಡುವೆ ಅವರಿಬ್ಬರು ಹೊಡೆದಾಡುವುದನ್ನು ನೋಡಿ ಸಹಪ್ರಯಾಣಿಕರು ಗಾಬರಿಯಾಗಿದ್ದಾರೆ. ಅವರ ಜಗಳ ನಿಲ್ಲಿಸಲು ಸಹ ಪ್ರಯಾಣಿಕರು ಪ್ರಯತ್ನಿಸಿದರೂ ಕೂಡ ಅವರು ಸಮಾಧಾನಗೊಳ್ಳಲಿಲ್ಲ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಗಲಾಟೆಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ ನೂಕುನುಗ್ಗಲಿನಿಂದ ಒಬ್ಬರನೊಬ್ಬರು ತಳ್ಳಿದ ಕಾರಣ ಈ ಜಗಳ ಶುರುವಾಗಿದೆ ಮತ್ತು ಈ ಜಗಳ ಸಾಮಾನ್ಯವಾಗಿರಲಿಲ್ಲ, ಇಬ್ಬರು ಸಿಕ್ಕಾಪಟ್ಟೆ ಹೊಡೆದಾಡಿಕೊಂಡರು ಎಂದು ಸಹ ಪ್ರಯಾಣಿಕರು ತಿಳಿಸಿದ್ದಾರೆ. ಈ ಘಟನೆ ನಡೆದ ಸ್ಥಳ ಮತ್ತು ದಿನಾಂಕ ಕೂಡ ತಿಳಿದಿಲ್ಲ. ಈ ವೀಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿ ‘ChristinMP_’ ಹ್ಯಾಂಡಲ್ ಹಂಚಿಕೊಳ್ಳಲಾಗಿದೆ ಮತ್ತು ಬೆಂಗಳೂರಿನಲ್ಲಿ ಜನದಟ್ಟಣೆಯಿಂದ ತುಂಬಿದ ಮೆಟ್ರೋ ರೈಲಿನಲ್ಲಿ ಇಬ್ಬರು ಪ್ರಯಾಣಿಕರ ನಡುವೆ ಜಗಳ ನಡೆದಿದೆ. ಬಿಎಂಆರ್ ಸಿಎಲ್ ವೀಡಿಯೊವನ್ನು ಪರಿಶೀಲಿಸುತ್ತಿದೆ ಮತ್ತು ಹೆಚ್ಚಿನ ವಿವರಗಳನ್ನು ತನಿಖೆ ನಡೆಸುತ್ತಿದೆ” ಎಂದು ಮಾಹಿತಿ ಬರೆದಿದ್ದಾರೆ.

ಈ ಘಟನೆಯನ್ನು ಪರಿಶೀಲಿಸಿದ ಮೆಟ್ರೋ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮತ್ತು ಈ ಸಮಸ್ಯೆಯನ್ನು ಪರಿಹರಿಸಲು, ಭವಿಷ್ಯದಲ್ಲಿ ಇಂತಹ ವಾಗ್ವಾದಗಳನ್ನು ತಪ್ಪಿಸಲು ರೈಲುಗಳಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲು ಅವರು ನಿರ್ಧಾರ ಮಾಡಿದ್ದಾರೆ. ಪ್ರಯಾಣಿಕರ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ಮೊದಲೇ ಈ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ರಣವೀರ್‌ ಎದುರೇ ದೀಪಿಕಾ ಬೇಬಿ ಬಂಪ್ ಮೇಲೆ ಕೈಯಿಟ್ಟ ಒರಿ; ನೆಟ್ಟಿಗರಿಗೆ ಉರಿ!

ಈ ವಿಡಿಯೊಗೆ ಹಲವರು ಕಾಮೆಂಟ್ ಮಾಡಿದ್ದು, ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವುದು ಅಪಾಯಕಾರಿ ಎಂದು ಒಬ್ಬರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪ್ರಯಾಣಿಕರ ಅಶಿಸ್ತಿನಿಂದ ಇಂತಹ ಘಟನೆ ನಡೆಯುತ್ತದೆ ಎಂದು ಇನ್ನೊಬ್ಬರು ತಿಳಿಸಿದ್ದಾರೆ. ಮೆಟ್ರೋ ಒಳಗೆ ಜಗಳ ಮಾಡಿದ ವ್ಯಕ್ತಿಗಳನ್ನು ಪೊಲೀಸರಿಗೆ ಒಪ್ಪಿಸಬೇಕೆಂದು ಮತ್ತೊಬ್ಬರು ಸಲಹೆ ನೀಡಿದ್ದಾರೆ. ಹಾಗೇ ಪ್ರಯಾಣಿಕರು ಜಗಳವಾಡುವುದನ್ನು ನಿಲ್ಲಿಸಲು ಸಹ ಪ್ರಯಾಣಿಕರ ಪ್ರಯತ್ನಕ್ಕೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

Latest

Vastu Tips: ಈ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಅಪಾಯ ಗ್ಯಾರಂಟಿ!

ವಾಸ್ತು ಶಾಸ್ತ್ರದಲ್ಲಿ ಶಕ್ತಿಗೆ ವಿಶೇಷ ಮಹತ್ವವಿದೆ. ವಾಸ್ತುವಿನಲ್ಲಿ (Vastu Tips) ಪ್ರತಿಯೊಂದಕ್ಕೂ ನಿರ್ದಿಷ್ಟ ದಿಕ್ಕನ್ನು ನಿಗದಿಪಡಿಸಲಾಗಿದೆ. ಮಲಗಲು ಸಹ ನಿಯಮಗಳನ್ನು ಮಾಡಲಾಗಿದೆ. ತಪ್ಪು ದಿಕ್ಕಿನಲ್ಲಿ ಮಲಗುವುದು ಮಾನಸಿಕ ಅಸ್ವಸ್ಥತೆ, ಒತ್ತಡ ಮತ್ತು ನಕಾರಾತ್ಮಕ ಶಕ್ತಿಗೆ ಕಾರಣವಾಗುತ್ತದೆ ಎನ್ನಲಾಗುತ್ತದೆ. ಹಾಗಾದರೆ ಸರಿಯಾದ ಮಲಗುವ ದಿಕ್ಕು ಯಾವುದಾಗಿರಬೇಕು ಗೊತ್ತೇ? ಈ ಲೇಖನ ಓದಿ.

VISTARANEWS.COM


on

By

Vastu Tips
Koo

ಪ್ರತಿಯೊಬ್ಬರ ಮನೆಯಲ್ಲೂ ಉತ್ತರ (north) ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ಹಿರಿಯರು ಹೇಳುವುದನ್ನು ಕೇಳಿರುತ್ತೇವೆ. ಇದರ ಹಿಂದೆ ಗಜಮುಖನಾದ ವಿನಾಯಕನ ಕಥೆಯೂ ಇದೆ. ಮಲಗುವ ದಿಕ್ಕು (direction of sleeping ) ಸರಿಯಾಗಿ ಇಲ್ಲದೇ ಹಲವು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ವಾಸ್ತು ಶಾಸ್ತ್ರದಲ್ಲೂ (Vastu Tips) ಮಲಗುವ ಸರಿಯಾದ ದಿಕ್ಕನ್ನು ಹೇಳಲಾಗಿದೆ. ಇದನ್ನು ಪಾಲಿಸದೇ ಇದ್ದರೆ ಏನಾಗುತ್ತದೆ ಎಂಬುದಕ್ಕೆ ವೈಜ್ಞಾನಿಕ ಕಾರಣಗಳು ಇವೆ.

ವಾಸ್ತು ಶಾಸ್ತ್ರದಲ್ಲಿ ಶಕ್ತಿಗೆ ವಿಶೇಷ ಮಹತ್ವವಿದೆ. ವಾಸ್ತುವಿನಲ್ಲಿ ಪ್ರತಿಯೊಂದಕ್ಕೂ ನಿರ್ದಿಷ್ಟ ದಿಕ್ಕನ್ನು ನಿಗದಿಪಡಿಸಲಾಗಿದೆ. ಮಲಗಲು ಸಹ ನಿಯಮಗಳನ್ನು ಮಾಡಲಾಗಿದೆ. ವಾಸ್ತು ಪ್ರಕಾರ ತಪ್ಪು ದಿಕ್ಕಿನಲ್ಲಿ ಮಲಗುವುದು ಮಾನಸಿಕ ಅಸ್ವಸ್ಥತೆ, ಒತ್ತಡ ಮತ್ತು ನಕಾರಾತ್ಮಕ ಶಕ್ತಿಗೆ ಕಾರಣವಾಗುತ್ತದೆ ಎನ್ನಲಾಗುತ್ತದೆ. ಹಾಗಾದರೆ ಸರಿಯಾದ ಮಲಗುವ ದಿಕ್ಕು ಯಾವುದಾಗಿರಬೇಕು? ಯಾವುದೇ ವ್ಯಕ್ತಿ ಆರೋಗ್ಯವಾಗಿರಲು ಉತ್ತಮ ನಿದ್ರೆ ಪಡೆಯುವುದು ಬಹಳ ಮುಖ್ಯ. ಸಂಪೂರ್ಣ ನಿದ್ದೆ ಮಾಡುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಉತ್ತಮವಾಗಿರುತ್ತದೆ.

ವಾಸ್ತು ಪ್ರಕಾರ ಸರಿಯಾದ ದಿಕ್ಕಿನಲ್ಲಿ ಮಲಗುವುದು ವಯಸ್ಸನ್ನು ಹೆಚ್ಚಿಸುತ್ತದೆ ಮತ್ತು ರೋಗವನ್ನು ಉಂಟುಮಾಡುವುದಿಲ್ಲ. ಆದರೆ ತಪ್ಪು ದಿಕ್ಕಿನಲ್ಲಿ ಮಲಗುವುದು ಮಾನಸಿಕ ಅಸ್ವಸ್ಥತೆ, ಒತ್ತಡ, ಸೋಮಾರಿತನ ಮತ್ತು ನಕಾರಾತ್ಮಕ ಶಕ್ತಿ ನಮ್ಮ ಸುತ್ತ ಸುತ್ತುವರಿಯುವಂತೆ ಮಾಡುತ್ತದೆ.

Vastu Tips


ಅಪ್ಪಿತಪ್ಪಿಯೂ ಈ ದಿಕ್ಕಿನಲ್ಲಿ ಮಲಗಬೇಡಿ

ವಾಸ್ತು ಪ್ರಕಾರ ಉತ್ತರ ದಿಕ್ಕಿಗೆ ತಲೆ ಇಟ್ಟು ಮಲಗಬಾರದು. ವಾಸ್ತುವಿನಲ್ಲಿ ಉತ್ತರ ದಿಕ್ಕನ್ನು ಮಲಗಲು ಅಶುಭವೆಂದು ಪರಿಗಣಿಸಲಾಗುತ್ತದೆ. ಈ ದಿಕ್ಕನ್ನು ನಕಾರಾತ್ಮಕ ಶಕ್ತಿಯ ಮೂಲ ಎನ್ನಲಾಗಿದೆ.

ಉತ್ತರ ದಿಕ್ಕಿಗೆ ಮಲಗುವುದರಿಂದ ವ್ಯಕ್ತಿಯು ಅನೇಕ ಪ್ರಮುಖ ಕಾಯಿಲೆಗಳನ್ನು ಎದುರಿಸುತ್ತಾನೆ ಮತ್ತು ನಿದ್ರೆಯಿಂದ ವಂಚಿತನಾಗಿರುತ್ತಾನೆ. ಉತ್ತರದ ಕಡೆಗೆ ತನ್ನ ತಲೆಯನ್ನು ಇಟ್ಟುಕೊಳ್ಳುವ ವ್ಯಕ್ತಿಯು ಖಂಡಿತವಾಗಿಯೂ ಸಾವಿನ ದೇವರನ್ನು ಆಹ್ವಾನಿಸುತ್ತಾನೆ. ಮೃತದೇಹದ ತಲೆಯನ್ನು ಮಾತ್ರ ಉತ್ತರ ದಿಕ್ಕಿಗೆ ಇಡಲಾಗುತ್ತದೆ.

ಮಲಗಲು ಸರಿಯಾದ ದಿಕ್ಕು

ವಾಸ್ತು ಪ್ರಕಾರ ದಕ್ಷಿಣ ದಿಕ್ಕಿಗೆ ತಲೆ ಇಟ್ಟು ಮಲಗುವುದನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಉತ್ತಮ ನಿದ್ರೆಗೆ ಈ ದಿಕ್ಕನ್ನು ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಇದು ಸಂತೋಷ ಮತ್ತು ಸಮೃದ್ಧಿ, ಉತ್ತಮ ಆರೋಗ್ಯ, ಅದೃಷ್ಟ, ಯಶಸ್ಸು ಮತ್ತು ಸಂಪತ್ತನ್ನು ಹೆಚ್ಚಿಸುತ್ತದೆ.

ವ್ಯಾಪಾರ, ರಾಜಕೀಯ ಅಥವಾ ವೃತ್ತಿಪರ ಕ್ಷೇತ್ರದಲ್ಲಿರುವ ವ್ಯಕ್ತಿಯು ದಕ್ಷಿಣಕ್ಕೆ ತಲೆಯಿಟ್ಟು ಮಲಗಬೇಕು. ಇದು ಅವರ ದಕ್ಷತೆ ಮತ್ತು ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯವನ್ನು ಸುಧಾರಿಸುತ್ತದೆ ಮತ್ತು ಮನಸ್ಸಿನ ಶಾಂತಿಯನ್ನು ನೀಡುತ್ತದೆ ಎಂದು ನಂಬಲಾಗಿದೆ. ಈ ದಿಕ್ಕನ್ನು ಧನಾತ್ಮಕ ಶಕ್ತಿಯ ಮೂಲ ಎಂದು ಕರೆಯಲಾಗುತ್ತದೆ.

Vastu Tips


ಇದನ್ನೂ ಓದಿ: Vastu Tips: ವಾಸ್ತು ಪ್ರಕಾರ ಮಕ್ಕಳ ಅಧ್ಯಯನ ಕೊಠಡಿ ಹೀಗಿರಬೇಕು

ಇನ್ನು ಪೂರ್ವಕ್ಕೆ ತಲೆಯಿಟ್ಟು ಮಲಗುವುದರಿಂದ ಜ್ಞಾಪಕ ಶಕ್ತಿ, ಏಕಾಗ್ರತೆ ಮತ್ತು ಆಧ್ಯಾತ್ಮಿಕತೆಯತ್ತ ಒಲವು ಹೆಚ್ಚಾಗುತ್ತದೆ. ವಾಸ್ತು ಪ್ರಕಾರ, ಈ ದಿಕ್ಕಿಗೆ ತಲೆಯಿಟ್ಟು ಮಲಗುವುದರಿಂದ ಶಿಕ್ಷಣ ಮತ್ತು ವೃತ್ತಿಗೆ ಹೊಸ ಅವಕಾಶಗಳು ಲಭಿಸುತ್ತವೆ. ಪ್ರತಿಯೊಬ್ಬ ವ್ಯಕ್ತಿಯು ಆರೋಗ್ಯಕರ ನಿದ್ರೆ ಪಡೆಯಲು ಪೂರ್ವ ದಿಕ್ಕಿಗೆ ಉತ್ತಮ ದಿಕ್ಕು ಎನ್ನುತ್ತಾರೆ ವಾಸ್ತು ತಜ್ಞರು.

ಈ ದಿಕ್ಕು ದೇಹಕ್ಕೆ ಎಲ್ಲಾ ರೀತಿಯ ಧನಾತ್ಮಕ ಶಕ್ತಿಯನ್ನು ನೀಡುತ್ತದೆ. ಒತ್ತಡ ಅಥವಾ ಆತಂಕದಿಂದ ಬಳಲುತ್ತಿರುವ ವ್ಯಕ್ತಿಯು ಪಶ್ಚಿಮಕ್ಕೆ ತಲೆಯಿಟ್ಟು ಮಲಗಬೇಕು. ಇದರಿಂದ ಮನಸ್ಸಿಗೆ ಶಾಂತಿ ಸಿಗುತ್ತದೆ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ.

Continue Reading

ಆರೋಗ್ಯ

Children Mobile Addiction: ನಮ್ಮ ಮಕ್ಕಳು ಎಷ್ಟು ಹೊತ್ತು ಮೊಬೈಲ್‌ ನೋಡಬಹುದು?

Children Mobile Addiction: ಮಕ್ಕಳಿಗೆ ದಿನದ ಸ್ಕ್ರೀನ್‌ ಸಮಯ ಎಷ್ಟಿರಬೇಕು? ಚಿಣ್ಣರು ಕೇಳುವಷ್ಟು ಹೊತ್ತೇ? ಹೆತ್ತವರಿಗೆ ಅನುಕೂಲ ಅಥವಾ ಪುರುಸೊತ್ತು ಆಗುವಲ್ಲಿಯವರೆಗೇ? ದಿನಕ್ಕಿಷ್ಟು ಹೊತ್ತು ಎಂದು ನಿಗದಿ ಮಾಡುವುದು ಸೂಕ್ತವೇ? ಹೆಚ್ಚು ಸಮಯ ಪರದೆಗೆ ಅಂಟಿಕೊಂಡಿದ್ದರೆ ಸಮಸ್ಯೆಯೇನು? ಇಂಥ ಹಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ. ಮಕ್ಕಳ ಕೈಯಲ್ಲಿ ಸದಾ ಗೆಜೆಟ್‌ ಇದ್ದರೆ ಏನಾಗುತ್ತದೆ ಎಂಬುದನ್ನು ಅರ್ಥ ಮಾಡಿಸುವ ಮಾಹಿತಿ ಇಲ್ಲಿದೆ.

VISTARANEWS.COM


on

By

Children Mobile Addiction
Koo

ಮಕ್ಕಳೆಂದರೆ ಹಾರಾಡುವ (Children Mobile Addiction) ಬಣ್ಣದ ಚಿಟ್ಟೆಗಳೆಂಬ (butterfly) ಭಾವ ಇತ್ತೀಚೆಗೆ ಕಡಿಮೆಯಾಗುತ್ತಿದೆ. ಕೂತಲ್ಲೇ ಅಂಟಿಕೊಂಡು, ಕರೆದರೂ ಕೇಳದ ಸ್ಥಿತಿಯಲ್ಲಿ, ಮಾತು ಬಾರದವರಂತೆ, ಎದುರಿನವರ ಪರಿಚಯವೂ ಇಲ್ಲದಂತೆ, ಹಸಿವೆ-ನೀರಡಿಕೆಗಳ ಪರಿವೆಯಿಲ್ಲದಂತೆ ಕೂತಿರುತ್ತಾರೆ… ಕೈಯಲ್ಲೊಂದು ಮೊಬೈಲು (mobile) ಹಿಡಿದು.

ಅದನ್ನು ಅವರ ಕೈಯಿಂದ ಕಿತ್ತರೆ ಟ್ಯಾಬ್‌ ಹಿಡಿಯುತ್ತಾರೆ, ಅದನ್ನೂ ಕಸಿದುಕೊಂಡರೆ ಎಲ್ಲಿ ಲ್ಯಾಪ್‌ಟಾಪ್‌ ಸಿಗುವಂತಿದೆ ನೋಡುತ್ತಾರೆ, ಕಡೆಗೆ ಟಿವಿಯಾದರೂ ಬೇಕು. ಅಂತೂ ಕೈಯಲ್ಲೊಂದು ಸ್ಕ್ರೀನ್‌ ಇಲ್ಲದಿದ್ದರೆ ಮಕ್ಕಳು ತಾವಾಗಿರುವುದಿಲ್ಲ ಎಂಬಂತೆ ಭಾಸವಾಗುತ್ತದೆ. ಅವರನ್ನೇ ಬಿಟ್ಟರೆ ಎಚ್ಚರ ಇದ್ದಷ್ಟೂ ಹೊತ್ತು ಕೈಯಲ್ಲಿ ಗೆಜೆಟ್‌ ಹಿಡಿದೇ ಇರುತ್ತಾರೆ. ಆದರೆ ಚಿಕ್ಕ ಮಕ್ಕಳು, ಅಂದರೆ ನಾಲ್ಕು-ಐದು ವರ್ಷದ ಒಳಗಿನ ಮಕ್ಕಳು ದಿನಕ್ಕೆ ಎಷ್ಟು ಹೊತ್ತು ಸ್ಕ್ರೀನ್‌ ನೋಡಬಹುದು?

ಜಾರಿಕೊಳ್ಳುತ್ತಿದ್ದಾರೆ ಹೆತ್ತವರು

ಹೆತ್ತವರ ವಿಷಯಕ್ಕೆ ಬಂದರೆ, ಬಹಳ ಮಂದಿಗೆ ಮಕ್ಕಳು ತಮ್ಮಷ್ಟಕ್ಕೆ ತಾವಿರುವುದು ಅನುಕೂಲವೇ. ಅವರು ಏನಾದರೂ ಮಾಡಿಕೊಳ್ಳಲಿ, ತಮ್ಮ ತಂಟೆಗೆ ಬಾರದಿದ್ದರೆ ಸಾಕು ಎಂಬ ಮನಸ್ಥಿತಿ ಹೆಚ್ಚಿವರದ್ದು. ಇದಕ್ಕೆ ಕಾರಣಗಳೂ ಇಲ್ಲದಿಲ್ಲ.

ದಿನವಿಡೀ ದುಡಿದು ಹೈರಾಣಾಗಿ ಬಂದ ದೊಡ್ಡವರಿಗೂ ತಮ್ಮದೇ ಆದ ಸಮಯ ಬೇಕು. ಮನೆಯದ್ದೇ ಆದ ನಿತ್ಯದ ಕೆಲಸಗಳನ್ನು ನಿಭಾಯಿಸಬೇಕು. ಮಾರನೇ ದಿನಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಇದಿಷ್ಟರ ನಡುವೆ ಮಕ್ಕಳನ್ನೂ ಸುಧಾರಿಸಬೇಕೆಂದರೆ…? ಹಾಗಾಗಿ ಸುಲಭದ ಉಪಾಯವೆಂಬಂತೆ ಅವರ ಕೈಗೊಂದು ಗೆಜೆಟ್‌ ಕೊಟ್ಟರೆ ಮುಗಿಯಿತು ಸಮಸ್ಯೆ. ಆದರಿದು ಸಾಧುವೇ? ಮಕ್ಕಳ ದೈಹಿಕ, ಮಾನಸಿಕ ಬೆಳವಣಿಗೆಗಳ ಗತಿಯೇನು?ಮನೆಯಲ್ಲಿ ದೊಡ್ಡವರೂ ಕೈಯಲ್ಲಿರುವ ಮೊಬೈಲ್‌ ಗೀರುವುದನ್ನೇ ಮಕ್ಕಳು ಸದಾ ಕಾಣುವಾಗ ಅದನ್ನು ತಪ್ಪು ಎಂದು ಹೇಳುವುದು ಹೇಗೆ? ಅದು ಒಳ್ಳೆಯದಲ್ಲ ಎಂದು ಅರ್ಥ ಮಾಡಿಸುವುದು ಹೇಗೆ?

Children Mobile Addiction


ಏನಾಗುತ್ತದೆ?

ಮಕ್ಕಳ ಕೈಯಲ್ಲಿ ಸದಾ ಗೆಜೆಟ್‌ ಇದ್ದರೆ ಏನಾಗುತ್ತದೆ ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳೋಣ. ದಿನಕ್ಕೆ ಮಿತಿಮೀರಿದ ಸ್ಕ್ರೀನ್‌ ಸಮಯದಿಂದಾಗಿ ಮಕ್ಕಳಲ್ಲಿ ಏಕಾಗ್ರತೆಯ ತೀವ್ರ ಸಮಸ್ಯೆ ಉಂಟಾಗುತ್ತದೆ. ಸಾಮಾಜಿಕ ಸಂಬಂಧಗಳು ಕಳಚಿ ಒಂಟಿತನದ ಭಾವನೆ ಎಳವೆಯಿಂದಲೇ ಬರುತ್ತದೆ. ಗಮನ ಸೆಳೆಯುವುದಕ್ಕಾಗಿ ರಚ್ಚೆ ಹಿಡಿಯುವ, ಅತಿಯಾದ ಚಂಚಲತೆಯನ್ನು ತೋರಿಸುತ್ತಾರೆ.

ಗಮನ ಕೊರತೆಯ ಅಸ್ವಸ್ಥತೆ (hyperactivity and attention deficit disorder) ಎಂದು ಕರೆಯಲಾಗುವ ಈ ಸಮಸ್ಯೆಯು ಮೆದುಳಿನ ಸಾಮರ್ಥ್ಯವನ್ನು ಕುಗ್ಗಿಸುತ್ತದೆ. ಈ ಎಲ್ಲವುಗಳ ಫಲವಾಗಿ, ಈ ಮಕ್ಕಳಲ್ಲಿ ಋಣಾತ್ಮಕ ವರ್ತನೆಗಳು ಕಂಡುಬರುತ್ತವೆ. ಶಿಸ್ತಿಲ್ಲದ, ಯಾವ ನಿಬಂಧನೆಗಳಿಗೂ ಒಳಪಡದ, ನಂಟುಗಳನ್ನೂ ಹಚ್ಚಿಕೊಳ್ಳದ ಬೀಡುಬೀಸಾದ ವರ್ತನೆ ಚಿಕ್ಕಂದಿನಲ್ಲೇ ಕಾಣಿಸಿಕೊಳ್ಳುತ್ತದೆ.

ದೃಷ್ಟಿದೋಷ

ಕೈಯಲ್ಲಿ ಹಿಡಿದು ನೋಡುವಂಥ ಗೆಜೆಟ್‌ಗಳನ್ನು ಸಾಮಾನ್ಯವಾಗಿ 2 ಅಡಿಗಿಂತ ಕಡಿಮೆ ಅಂತರಲ್ಲಿ ಇರಿಸಿಕೊಂಡು ವಾಚಿಸುತ್ತಾರೆ ಮಕ್ಕಳು. ಇದರಿಂದ ದೃಷ್ಟಿದೋಷವೂ ಹೆಚ್ಚುತ್ತದೆ. ಮೊದಲಿಗಿಂತ ಅತಿ ಹೆಚ್ಚಿನ ಪ್ರಮಾಣದಲ್ಲಿ ಬಾಲವಾಡಿಯ ಮಕ್ಕಳ ಕಣ್ಣಿಗೆ ಕನ್ನಡಕಗಳು ಬಂದಿರುವುದನ್ನು ಕಾಣಬಹುದು.

ದೈಹಿಕ ಆರೋಗ್ಯ

ಕೂತಲ್ಲೇ ಕೂತು ಕಳೆಯುವುದಾದರೆ ದೇಹ ಸ್ವಾಸ್ಥ್ಯ ಹಾಳಾಗುವುದೇ ತಾನೇ? ಮಕ್ಕಳೆಂದರೆ ಚಟುವಟಿಕೆಯ ಚಿಲುಮೆಗಳಂತೆ ಇರಬೇಕಾದವರು. ಓಡುವವರನ್ನು ಹಿಡಿದು ಕೂರಿಸುವುದು ಹೇಗೆ ಎಂದು ಹೆತ್ತವರು ಚಿಂತಿಸಬೇಕು. ಆದರೆ ಈಗಿನ ದಿನಗಳಲ್ಲಿ ಕೂತವರನ್ನು ಎಬ್ಬಿಸಿ ಆಡುವುದಕ್ಕೆ ಹೊರಗೆ ಕಳಿಸುವುದು ಹೇಗೆ ಎಂಬ ಚಿಂತೆಯಲ್ಲಿದ್ದರೆ ಸಹ.

Children Mobile Addiction


ಮಿತಿ ಎಷ್ಟು?

ದೊಡ್ಡ ಮಕ್ಕಳಿಗೆ ಶಾಲೆಯಿಂದ ಬರುವ ಹೋಮ್ ವರ್ಕ್‌ ಸಲುವಾಗಿ ಒಂದಿಷ್ಟು ಹೊತ್ತು ಪರದೆಯ ಮುಂದೆ ಕೂರುವುದು ಅನಿವಾರ್ಯವಾಗಬಹುದು. ಅದರ ಹೊರತಾಗಿ ಎಷ್ಟು ಹೊತ್ತು ಪರದೆಗೆ ಅಂಟಿಕೊಂಡಿರುತ್ತಾರೆ ಎಂಬುದನ್ನು ಗಮನಿಸಿ.

ಇದನ್ನೂ ಓದಿ: Smartphone Charging Tips: ನಿಮ್ಮ ಸ್ಮಾರ್ಟ್ ಪೋನ್ ಬ್ಯಾಟರಿ ಹೆಚ್ಚು ಬಾಳಿಕೆ ಬರಲು ಹೀಗೆ ಮಾಡಿ

ಶಾಲೆಯ ದಿನಗಳಲ್ಲಿ ಅನಗತ್ಯ ಸ್ಕ್ರೀನ್‌ ಸಮಯ ಇಲ್ಲದಿದ್ದರೇ ಒಳಿತು. ರಜೆಯ ದಿನಗಳಲ್ಲಿ ಪರದೆಯ ಪರಿಮಿತಿಯನ್ನು ಒಂದು ತಾಸಿಗೆ ನಿಗದಿಗೊಳಿಸಿ. ಬಾಲವಾಡಿ ಅಥವಾ ಅದಕ್ಕಿಂತ ಚಿಕ್ಕ ಮಕ್ಕಳಿಗೆ ದಿನಕ್ಕೆ ಒಂದು ತಾಸಿನ ಸ್ಕ್ರೀನ್‌ ಸಮಯ ಸಾಕಾಗುತ್ತದೆ. ಉಳಿದ ಸಮಯವನ್ನು ಅರ್ಥಪೂರ್ಣವಾಗಿ ಕಳೆಯುವುದು ಹೇಗೆ ಎಂಬುದನ್ನು ಹೆತ್ತವರೇ ನಿರ್ಧರಿಸಬೇಕಾಗುತ್ತದೆ.

Continue Reading

ಕರ್ನಾಟಕ

Assembly Session: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ; ಏನೆಲ್ಲ ಅರ್ಹತೆ ಇರಬೇಕು?

Assembly Session: ಖಾಸಗಿ ಕ್ಷೇತ್ರಗಳಲ್ಲಿ ದುಡಿಯುವ ಕನ್ನಡಿಗರಿಗೆ ಉದ್ಯೋಗ ಮೀಸಲು ನೀಡುವ ವಿಧೇಯಕವನ್ನು ವಿಧಾನ ಮಂಡಲದಲ್ಲಿ ಮಂಡಿಸಲು ಸೋಮವಾರ ನಡೆದ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದೇ ಅಧಿವೇಶನದಲ್ಲಿ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆಯುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

VISTARANEWS.COM


on

Assembly Session Job reservation for Kannadigas in private sectors Cabinet meeting approves bill
Koo

ಬೆಂಗಳೂರು: ಖಾಸಗಿ ಕ್ಷೇತ್ರಗಳಲ್ಲಿ ದುಡಿಯುವ ಕನ್ನಡಿಗರಿಗೆ ಉದ್ಯೋಗ ಮೀಸಲು ನೀಡುವ ವಿಧೇಯಕವನ್ನು ವಿಧಾನ ಮಂಡಲದಲ್ಲಿ ಮಂಡಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆಯಲ್ಲಿ (Assembly Session) ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದೇ ಅಧಿವೇಶನದಲ್ಲಿ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆಯುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

‘ದಿ ಕರ್ನಾಟಕ ಸ್ಟೇಟ್ ಎಂಪ್ಲಾಯ್ಮೆಂಟ್ ಆಫ್ ಲೋಕಲ್ ಕ್ಯಾಡಿಡೇಟ್ಸ್ ಇನ್ ದಿ ಇಂಡಸ್ಟ್ರೀಸ್, ಫ್ಯಾಕ್ಟರೀಸ್ ಆ್ಯಂಡ್ ಲೋಕಲ್ ಎಷ್ಟಾಬ್ಲಿಷ್‌ಮೆಂಟ್ ಬಿಲ್-2024 ವಿಧೇಯಕದಂತೆ ಮ್ಯಾನೇಜ್‌ಮೆಂಟ್ ಹುದ್ದೆಗಳು ಶೇ.50 ಹಾಗೂ ನಾನ್ ಮ್ಯಾನೇಜ್‌ಮೆಂಟ್ ಶೇ.75 ರಷ್ಟು ಹುದ್ದೆಗಳು ಸ್ಥಳೀಯರಿಗೆ ಮೀಸಲಿಡಲಾಗುತ್ತದೆ.

ಇದನ್ನೂ ಓದಿ: Assembly Session: ಕಾರ್ಮಿಕ ಇಲಾಖೆಯಿಂದ ಸಿನಿ ಕಾರ್ಮಿಕರಿಗೆ ಭರ್ಜರಿ ಗಿಫ್ಟ್!

ಕರ್ನಾಟಕದಲ್ಲಿಯೇ ಹುಟ್ಟಿದವರು, ಕರ್ನಾಟಕದಲ್ಲಿ 15 ವರ್ಷದಿಂದ ವಾಸಿಸುತ್ತಿರುವವರು, ಕನ್ನಡ ಓದಲು, ಬರೆಯಲು ಮತ್ತು ಮಾತನಾಡಲು ಬರುವವರು, ನೋಡಲ್ ಏಜೆನ್ಸಿ ನಡೆಸುವ ಕನ್ನಡ ಪರೀಕ್ಷೆಯಲ್ಲಿ ಪಾಸಾದವರನ್ನು ಸ್ಥಳೀಯರು ಎಂದು ಪರಿಗಣಿಸಲಾಗುವುದು. ಮ್ಯಾನೇಜ್‌ಮೆಂಟ್‌ನಲ್ಲಿ ಸೂಪರ್‌ವೈಸ‌ರ್, ಮ್ಯಾನೇಜಿರಿಯಲ್, ಟೆಕ್ನಿಕಲ್, ಆಪರೇಷನಲ್, ಆಡಳಿತ ಸೇರಿ ಉನ್ನತ ಹುದ್ದೆಗಳಲ್ಲಿ ಶೇ.50 ಉದ್ಯೋಗ ಸ್ಥಳೀಯರಿಗೆ ಮೀಸಲಿಡಲಾಗುವುದು. ಇನ್ನು ನಾನ್-ಮ್ಯಾನೇಜ್‌ಮೆಂಟ್ನಲ್ಲಿ ಕ್ಲರ್ಕ್‌ಗಳು, ಕೌಶಲ, ಕೌಶಲ ರಹಿತ ಹಾಗೂ ಅರೆಕೌಶಲ, ಗುತ್ತಿಗೆ ನೌಕರ ಹಾಗೂ ಐಟಿ ಹುದ್ದೆಗಳಲ್ಲಿ ಶೇ.75 ಮೀಸಲು ಸ್ಥಳೀಯರಿಗೆ ನೀಡುವ ವಿಧೇಯಕ ಇದಾಗಿದೆ.

ಸ್ಥಳೀಯರಿಗೆ ಉದ್ಯೋಗ ನೀಡದಿದ್ದರೆ ದಂಡ ವಿಧಿಸುವ ಅಂಶವನ್ನೂ ವಿಧೇಯಕದಲ್ಲಿ ಸೇರಿಸಲಾಗಿದೆ. ಕನಿಷ್ಠ 10 ಸಾವಿರ ರೂ. ಹಾಗೂ 25 ಸಾವಿರ ರೂ.ಗಳ ವರೆಗೆ ದಂಡ ವಿಸ್ತರಣೆ ಮಾಡಲು ಅವಕಾಶ ನೀಡಲಾಗುತ್ತದೆ. ಆ ನಂತರವೂ ಉದ್ಯೋಗ ನೀಡದೇ ಹೋದರೆ ದಿನಕ್ಕೆ 100 ರೂ. ದಂಡ ವಿಧಿಸಲಾಗುತ್ತದೆ.

ಇದನ್ನೂ ಓದಿ: Lakshmi Hebbalkar: ವಿಶೇಷ ಶಾಲೆಗಳ ಶಿಕ್ಷಕರ ವೇತನ ಪರಿಷ್ಕರಣೆಗೆ ಅಗತ್ಯ ಕ್ರಮ: ಹೆಬ್ಬಾಳಕರ್ ಭರವಸೆ

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಬೇಕು. ಈ ನಿಟ್ಟಿನಲ್ಲಿ ವಿಧೇಯಕವು ಮಹತ್ವದ ಪಾತ್ರ ವಹಿಸಲಿದೆ. ಕನ್ನಡಿಗ ನೌಕರರ ಜೀವನ ಭದ್ರತೆಗೆ ಇದು ಸಹಾಯವಾಗಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ತಿಳಿಸಿದ್ದಾರೆ.

Continue Reading

ಫ್ಯಾಷನ್

Dog Ethnicwear: ನಾಯಿಗಳಿಗೂ ಬಂತು ಎಥ್ನಿಕ್‌ ವೇರ್ಸ್! ಎಷ್ಟು ಮುದ್ದಾಗಿ ಕಾಣಿಸುತ್ತಿವೆ!

Dog Ethnicwear: ಇದೀಗ ಮುದ್ದು ಶ್ವಾನಗಳು ಕೂಡ ಗ್ರ್ಯಾಂಡ್‌ ಸಮಾರಂಭಗಳಲ್ಲಿ ಸಿಂಗಾರಗೊಳ್ಳುತ್ತಿವೆ. ಇವಕ್ಕೆ ಪೂರಕ ಎಂಬಂತೆ ನಾನಾ ಪೆಟ್‌ ಶಾಪ್‌ಗಳು ಡಿಸೈನರ್‌ವೇರ್‌ಗಳನ್ನು ಬಿಡುಗಡೆಗೊಳಿಸಿವೆ. ಅವುಗಳಲ್ಲಿ ಯಾವ್ಯಾವ ಬಗೆಯವು ಬೇಡಿಕೆ ಪಡೆದುಕೊಂಡಿವೆ ಎಂಬುದರ ಕುರಿತಂತೆ ಡಾಗ್‌ ಸ್ಟೈಲಿಸ್ಟ್‌ಗಳು ಇಲ್ಲಿ ವಿವರಿಸಿದ್ದಾರೆ.

VISTARANEWS.COM


on

By

Dog Ethnicwear
Koo

ಶೀಲಾ ಸಿ. ಶೆಟ್ಟಿ, ಬೆಂಗಳೂರು

ಶ್ವಾನಗಳು ಇತ್ತೀಚೆಗೆ (Dog Ethnicwear) ಎಥ್ನಿಕ್‌ವೇರ್‌ಗಳಲ್ಲಿ ಮಿಂಚುತ್ತಿವೆ. ಅಂಬಾನಿ ಫ್ಯಾಮಿಲಿಯ (ambani family) ಮುದ್ದು ಶ್ವಾನಗಳಾದ (dog) ಹ್ಯಾಪಿ ಹಾಗೂ ಪಾಪ್‌ಕಾರ್ನ್‌ ವೆಡ್ಡಿಂಗ್‌ ಔಟ್‌ಫಿಟ್‌ನಲ್ಲಿ (Wedding outfit) ಕಾಣಿಸಿಕೊಂಡು ಸುದ್ದಿಯಾಗಿರುವುದು ಎಲ್ಲರಿಗೂ ಗೊತ್ತೇ ಇದೆ. ಇದಕ್ಕೆ ಪೂರಕ ಎಂಬಂತೆ, ಇದೀಗ ಮುದ್ದು ಶ್ವಾನಗಳು ಕೂಡ ಗ್ರ್ಯಾಂಡ್‌ ಸಮಾರಂಭಗಳಲ್ಲಿ ಸಿಂಗಾರಗೊಳ್ಳುತ್ತಿವೆ. ಮನುಷ್ಯರಂತೆ ಉಡುಪನ್ನು ಧರಿಸಿ ಮೆರೆಯುತ್ತಿವೆ.

ಪೆಟ್‌ ಶಾಪ್‌ಗಳಲ್ಲೂ ಲಭ್ಯ

ಪೆಟ್‌ ಶಾಪ್‌ಗಳು ಡಾಗ್ಗಿಗಳ ನಾನಾ ಬಗೆಯ ವೈವಿಧ್ಯಮಯ ಡಿಸೈನರ್‌ವೇರ್‌ಗಳನ್ನು ಬಿಡುಗಡೆಗೊಳಿಸಿವೆ. ಪುಟ್ಟ ನಾಯಿಮರಿಯಿಂಡಿದು ದೊಡ್ಡ ಗೋಲ್ಡನ್‌ ರಿಟ್ರಿವರ್‌ನಂತಹ ನಾಯಿ ಕೂಡ ಧರಿಸಬಹುದಾದ ಎಥ್ನಿಕ್‌ವೇರ್‌ಗಳನ್ನು ಲಾಂಚ್‌ ಮಾಡಿವೆ.

ಆಯಾ ಜಾತಿಯ ಶ್ವಾನಗಳಿಗೆ ಅನುಗುಣವಾಗಿ ಎಥ್ನಿಕ್‌ವೇರ್‌ಗಳ ಆಯ್ಕೆ ಮಾಡಬಹುದು ಎನ್ನುವ ಡಾಗ್‌ ಸ್ಟೈಲಿಸ್ಟ್ ರಾಕೇಶ್‌, ಈ ಕುರಿತಂತೆ ಒಂದಿಷ್ಟು ಮಾಹಿತಿ ನೀಡಿದ್ದಾರೆ.

Dog Ethnicwear
ಚಿತ್ರಕೃಪೆ: ಇನ್ ಸ್ಟಾಗ್ರಾಮ್


ಟ್ರೆಂಡಿಯಾಗಿರುವ ಡಾಗ್‌ ಎಥ್ನಿಕ್‌ವೇರ್ಸ್

ಸ್ಯಾಟಿನ್‌, ವೆಲ್ವೆಟ್‌, ಕಾಟನ್‌, ಕಾಟನ್‌ ಸಿಲ್ಕ್‌ ಹೀಗೆ ನಾನಾ ಫ್ಯಾಬ್ರಿಕ್‌ನ ಫ್ರಾಕ್‌ ಶೈಲಿಯ ಡ್ರೆಸ್‌ಗಳು, ಹೆಣ್ಣು ನಾಯಿಮರಿಗಳಿಗೆ ನಾನಾ ಡಿಸೈನ್‌ನಲ್ಲಿ ಬಿಡುಗಡೆಗೊಂಡಿದ್ದರೇ, ಗಂಡು ನಾಯಿಮರಿಗಳಿಗೆ ನೋಡಲು ಕೋಟ್‌ ಎಂದೆನಿಸುವ ವೇಸ್ಟ್ಕೋಟ್‌ ಶೈಲಿಯಂತವು ಬಂದಿವೆ ಎನ್ನುತ್ತಾರೆ ಪೆಟ್‌ ಶಾಪ್‌ವೊಂದರ ಮಾಲೀಕರು.

Dog Ethnicwear
ಚಿತ್ರಕೃಪೆ: ಇನ್ ಸ್ಟಾಗ್ರಾಮ್


ಕಸ್ಟಮೈಸ್ಡ್ ಡಾಗ್‌ ಎಥ್ನಿಕ್‌ವೇರ್ಸ್

ಇನ್ನು ಸಾಕಷ್ಟು ಬೋಟಿಕ್‌ಗಳು ಮುದ್ದು ನಾಯಿಮರಿಗಳಿಗೂ ಎಥ್ನಿಕ್‌ವೇರ್‌ಗಳನ್ನು ಹೊಲಿದು ಡಿಸೈನ್‌ ಮಾಡಿಕೊಡುತ್ತಿವೆ. ಆಯಾ ಕುಟುಂಬದವರ ಸಮಾರಂಭಗಳಿಗೆ ಅನುಗುಣವಾಗಿ ಡಿಸೈನ್‌ ಮಾಡಿ, ರೆಡಿ ಮಾಡಿಕೊಡುತ್ತವೆ.

Dog Ethnicwear
ಚಿತ್ರಕೃಪೆ: ಇನ್ ಸ್ಟಾಗ್ರಾಮ್


ಆನ್‌ಲೈನ್‌ನಲ್ಲಿ ಡಾಗ್‌ ಡಿಸೈನರ್‌ವೇರ್ಸ್

ಇನ್ನು, ಆನ್‌ಲೈನ್‌ಗಳಲ್ಲಂತೂ ಲೆಕ್ಕವಿಲ್ಲದಷ್ಟೂ ಬಗೆಯ ಡಾಗ್‌ ಎಥ್ನಿಕ್‌ವೇರ್‌ಗಳು ದೊರೆಯುತ್ತಿವೆ. ಅದರಲ್ಲೂ ವೆಡ್ಡಿಂಗ್‌, ಬರ್ತ್ ಡೇ ಸೆಲೆಬ್ರೇಷನ್‌ ಹೀಗೆ ನಾನಾ ಸಮಾರಂಭಗಳಿಗೆ ಮ್ಯಾಚ್‌ ಆಗುವಂತಹ ಕ್ಯೂಟ್‌ ಡಿಸೈನರ್‌ವೇರ್‌ಗಳು ಇಲ್ಲಿ ಲಭ್ಯ ಎನ್ನುತ್ತಾರೆ ಡಾಗ್‌ ಪ್ರೇಮಿ ಜೀವಿತಾ ಹಾಗೂ ದೀಕ್ಷಾ.

ಇದನ್ನೂ ಓದಿ: Summer Fashion: ಉರಿ ಬಿಸಿಲಿನಲ್ಲಿ ಗಮನ ಸೆಳೆವ ನಟ ಶೈನ್‌ ಶೆಟ್ಟಿಯ ಕೂಲ್‌ ಸ್ಮೈಲ್‌ & ಸ್ಟೈಲ್‌!

· ಆನ್‌ಲೈನ್‌ನಲ್ಲಿ ಕೆಲವೊಮ್ಮೆ ಆಫರ್‌ಗಳಲ್ಲಿ ಕಡಿಮೆ ಬೆಲೆಯಲ್ಲಿ ದೊರೆಯುತ್ತವೆ.
· ನಿಮ್ಮ ಶ್ವಾನದ ಸೈಜ್‌ಗೆ ತಕ್ಕಂತೆ ಖರೀದಿಸಿ. ದೊಗಲೆಯಾದಲ್ಲಿ ಚೆನ್ನಾಗಿ ಕಾಣಿಸುವುದಿಲ್ಲ.
· ಗ್ರ್ಯಾಂಡ್‌ ಆಗಿರುವಂಥವು ಚೆನ್ನಾಗಿ ಕಾಣಿಸುತ್ತವೆ.

(ಲೇಖಕಿ ಫ್ಯಾಷನ್‌ ಪತ್ರಕರ್ತೆ)
Continue Reading
Advertisement
Vastu Tips
Latest5 mins ago

Vastu Tips: ಈ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಅಪಾಯ ಗ್ಯಾರಂಟಿ!

dina Bhavishya
ಭವಿಷ್ಯ1 hour ago

Dina Bhavishya : ಆತುರದಲ್ಲಿ ಆಡಿದ ಮಾತು ಅಪಾಯ ತಂದಿತು ಎಚ್ಚರ

Oil Tanker Capsizes
ವಿದೇಶ6 hours ago

Oil Tanker Capsizes: ತೈಲ ತುಂಬಿದ್ದ ಹಡಗು ಮುಳುಗಡೆ; 13 ಭಾರತೀಯರು ಜಲಸಮಾಧಿ

Team India
ಪ್ರಮುಖ ಸುದ್ದಿ6 hours ago

Team India : ಶ್ರೀಲಂಕಾ ಪ್ರವಾಸದ ಟಿ20 ಸರಣಿಗೆ ಹಾರ್ದಿಕ್ ಬದಲಿಗೆ ಸೂರ್ಯಕುಮಾರ್ ನಾಯಕ

Ananth Ambani Wedding
ದೇಶ7 hours ago

Anant Ambani Wedding: ಅನಂತ್‌ ಅಂಬಾನಿ ಮದುವೆಯಲ್ಲಿ ಬಾಂಬ್‌ ಸ್ಫೋಟಕ್ಕೆ ನಡೆದಿತ್ತಾ ಸಂಚು? ಕಿಡಿಗೇಡಿ ಅರೆಸ್ಟ್‌

Yuvraj Singh
ಕ್ರೀಡೆ7 hours ago

Yuvraj Singh : ಅಂಗವಿಕಲರಂತೆ ರೀಲ್ಸ್​ ಮಾಡಿದ ಯುವರಾಜ್​, ಹರ್ಭಜನ್​ ಸಿಂಗ್ ವಿರುದ್ಧ ದೂರು ದಾಖಲು

Mosaic of Modernity art exhibition by Gallery G in Bengaluru
ಕರ್ನಾಟಕ7 hours ago

Bengaluru News: ಬೆಂಗಳೂರಿನಲ್ಲಿ ಗ್ಯಾಲರಿ ಜಿ ಯಿಂದ ‘ಮೊಸಾಯಿಕ್ ಆಫ್ ಮಾಡರ್ನಿಟಿ’ ಕಲಾ ಪ್ರದರ್ಶನ

Viral Video
ವೈರಲ್ ನ್ಯೂಸ್7 hours ago

Viral Video: ಪಕ್ಷದ ಕಾರ್ಯಕರ್ತನಿಗೆ ರಪ್‌ ಅಂತಾ ಕೆನ್ನೆಗೆ ಬಾರಿಸಿದ ಟಿಎಂಸಿ ನಾಯಕಿ; ವಿಡಿಯೋ ಇದೆ

T20 World Cup 2024
ಪ್ರಮುಖ ಸುದ್ದಿ8 hours ago

T20 World Cup 2024 : 30 ಎಸೆತಕ್ಕೆ 30 ರನ್​ ಇದ್ದಾಗ ದಿಕ್ಕೇ ತೋಚದಂತಾಗಿದ್ದೆ! ಆ ತಲ್ಲಣ ವಿವರಿಸಿದ ಶರ್ಮಾ

Assembly Session
ಕರ್ನಾಟಕ8 hours ago

Assembly Session: ಅಧಿಕಾರಿಗಳು ಮಾಡಿದ ಅಕ್ರಮಕ್ಕೆ ಸಚಿವರ ವಿರುದ್ಧ ಆರೋಪಿಸುವುದು ಸರಿಯಲ್ಲ ಎಂದ ಡಿಕೆಶಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ17 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ19 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌