Gautam Gambhir : ಸ್ಯಾಲರಿ ಫಿಕ್ಸ್​ ಮಾಡದೇ ಗಂಭೀರ್​ಗೆ ಕೋಚಿಂಗ್​ ಕೆಲಸ ಕೊಟ್ಟ ಬಿಸಿಸಿಐ! - Vistara News

ಪ್ರಮುಖ ಸುದ್ದಿ

Gautam Gambhir : ಸ್ಯಾಲರಿ ಫಿಕ್ಸ್​ ಮಾಡದೇ ಗಂಭೀರ್​ಗೆ ಕೋಚಿಂಗ್​ ಕೆಲಸ ಕೊಟ್ಟ ಬಿಸಿಸಿಐ!

Gautam Gambhir :ಗೌತಮ್ ಗಂಭೀರ್ ಅವರು ಭಾರತದ ಮುಖ್ಯ ಕೋಚ್ ಪಾತ್ರವನ್ನು ಒಪ್ಪಿಕೊಂಡಿದ್ದರೂ ಅವರು ಮಂಡಳಿಯೊಂದಿಗೆ ವೇತನ ಮಾತುಕತೆಗಳನ್ನು ಇನ್ನೂ ಅಂತಿಮಗೊಳಿಸಿಲ್ಲ ಎಂದು ವರದಿಗಳು ಸೂಚಿಸಿದೆ. ಇತ್ತೀಚೆಗೆ, ಮತ್ತೊಂದು ವರದಿಯು ಬಿಸಿಸಿಐ ಅವರನ್ನು ಮುಖ್ಯ ಕೋಚ್ ಆಗಿ ಘೋಷಿಸಲು ವಿಳಂಬ ಮಾಡಲು ವೇತನ ಮಾತುಕತೆ ಮುಖ್ಯ ಕಾರಣವಾಗಿದೆ ಎಂದು ಹೇಳಿದೆ.

VISTARANEWS.COM


on

Gautam Gambhir
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಗೌತಮ್ ಗಂಭೀರ್ (Gautam Gambhir) ಅವರನ್ನು ಮಂಗಳವಾರ (ಜುಲೈ 9) ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ. ಬಿಸಿಸಿಐ ಆ ಪ್ರಕಟಣೆಯನ್ನು ಘೋಷಿಸಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಎಕ್ಸ್ ನಲ್ಲಿ ಈ ಮಾಹಿತಿ ನೀಡಿದ್ದಾರೆ.

ರಾಹುಲ್ ದ್ರಾವಿಡ್ ನಂತರ ಭಾರತದ ಮಾಜಿ ಆರಂಭಿಕ ಆಟಗಾರ ಭಾರತದ ಕೋಚ್ ಆಗಿ ನೇಮಕಗೊಂಡಿದ್ದಾರೆ. ದ್ರಾವಿಡ್ 2021 ರಲ್ಲಿ ತಂಡದ ಉಸ್ತುವಾರಿ ವಹಿಸಿಕೊಂಡಿದ್ದರು/ ಕಳೆದ ತಿಂಗಳು ಟಿ 20 ವಿಶ್ವಕಪ್​ನಲ್ಲಿ ಭಾರತದ ಗೆಲುವಿನ ನಂತರ ಅವರ ಅಧಿಕಾರಾವಧಿ ಕೊನೆಗೊಂಡಿತು. ದ್ರಾವಿಡ್ ಉತ್ತರಾಧಿಕಾರಿಯಾಗಿ ಗೌತಮ್ ಗಂಭೀರ್ ಸೂಕ್ತ. ಐಪಿಎಲ್​​ನ ಕೋಲ್ಕತಾ ನೈಟ್ ರೈಡರ್ಸ್​ಗೆ ಮಾರ್ಗದರ್ಶಕರಾಗಿ ತಮ್ಮ ವೃತ್ತಿಜೀವನವನ್ನು ನಡೆಸುತ್ತಿದ್ದಾಗಲೇ ಅವರ ಹೆಸರು ಕೋಚಿಂಗ್​ ಹುದ್ದೆಯ ಪಕ್ಕ ಸುತ್ತಲು ಆರಂಭಿಸಿತ್ತು.

ಗೌತಮ್ ಗಂಭೀರ್ ಅವರು ಭಾರತದ ಮುಖ್ಯ ಕೋಚ್ ಪಾತ್ರವನ್ನು ಒಪ್ಪಿಕೊಂಡಿದ್ದರೂ ಅವರು ಮಂಡಳಿಯೊಂದಿಗೆ ವೇತನ ಮಾತುಕತೆಗಳನ್ನು ಇನ್ನೂ ಅಂತಿಮಗೊಳಿಸಿಲ್ಲ ಎಂದು ವರದಿಗಳು ಸೂಚಿಸಿದೆ. ಇತ್ತೀಚೆಗೆ, ಮತ್ತೊಂದು ವರದಿಯು ಬಿಸಿಸಿಐ ಅವರನ್ನು ಮುಖ್ಯ ಕೋಚ್ ಆಗಿ ಘೋಷಿಸಲು ವಿಳಂಬ ಮಾಡಲು ವೇತನ ಮಾತುಕತೆ ಮುಖ್ಯ ಕಾರಣವಾಗಿದೆ ಎಂದು ಹೇಳಿದೆ.

ಮಂಡಳಿಯು ಅವರನ್ನು ಹೊಸ ತರಬೇತುದಾರರಾಗಿ ದೃಢಪಡಿಸಿದ್ದರೂ, ವೇತನ ಮಾತುಕತೆ ಇನ್ನೂ ನಡೆಯುತ್ತಿದೆ. , ಭಾರತದ ಮಾಜಿ ಕ್ರಿಕೆಟಿಗನ ವೇತನವು ಅವರ ಹಿಂದಿನ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರಷ್ಟೇ ಇರುತ್ತದೆ ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: MS Dhoni : ಧೂಮ್ ಸಿನಿಮಾದ ಜಾನ್ ಅಬ್ರಾಹಮ್ ರೀತಿಯಲ್ಲೇ ಬೈಕ್ ಓಡಿಸಿದ ಧೋನಿ; ಇಲ್ಲಿದೆ ವಿಡಿಯೊ

“ಗೌತಮ್ ಅವರು ಅವರು ಅಧಿಕಾರ ವಹಿಸಿಕೊಂಡಿರುವುದು ಮುಖ್ಯ. ಸಂಬಳ ಮತ್ತು ಇತರ ವಿಷಯಗಳನ್ನು ನಂತರವೂ ರೂಪಿಸಬಹುದು. ಏಕೆಂದರೆ ಅದು ಎಲ್ಲಿಯೂ ಹೋಗುವುದಿಲ್ಲ. 2014ರಲ್ಲಿ ರವಿಶಾಸ್ತ್ರಿ ಅವರನ್ನು ಮೊದಲ ಬಾರಿಗೆ ಮುಖ್ಯ ಕೋಚ್ ಡಂಕನ್ ಫ್ಲೆಚರ್ ಅವರ ಮೇಲೆ ಕ್ರಿಕೆಟ್ ನಿರ್ದೇಶಕರನ್ನಾಗಿ ಮಾಡಿದಾಗ ಇದೇ ರೀತಿ ಆಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ರವಿ ಶಾಸ್ತ್ರಿ ಕೆಲಸಕ್ಕೆ ಸೇರಿದ ದಿನ, ಅವರಿಗೆ ವೇತನ ಒಪ್ಪಂದವೂ ಆಗಿರಲಿಲ್ಲ. ಗೌತಮ್ ಅವರ ವಿಷಯದಲ್ಲೂ, ಕೆಲವು ಸೂಕ್ಷ್ಮ ವಿವರಗಳನ್ನು ರೂಪಿಸಲಾಗುತ್ತಿದೆ. ರಾಹುಲ್ ದ್ರಾವಿಡ್ ಅವರ ವೇತನವೂ ಇದೇ ವ್ಯಾಪ್ತಿಯಲ್ಲಿರಲಿದೆ, ಎಂದು ಅವರು ಹೇಳಿದರು.

ಹೆಮ್ಮೆಯ ಪ್ರತೀಕ

ಭಾರತ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ನೇಮಕಗೊಂಡ ಬೆನ್ನಲ್ಲೇ ಅಭಿಮಾನಿಗಳಿಗೆ ಸಂದೇಶವೊಂದನ್ನು ಕಳುಹಿಸಿದ್ದಾರೆ. ಭಾರತೀಯ ತಂಡಕ್ಕೆ ಮರಳಿದ ಬಗ್ಗೆ ಮಾಜಿ ಆಟಗಾರ ಸಂತೋಷ ವ್ಯಕ್ತಪಡಿಸಿದ್ದಾರೆ. ದೇಶಕ್ಕೆ ಹೆಮ್ಮೆ ತರುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ಅವರ ಮೊದಲ ನೇಮಕವು ಈ ತಿಂಗಳ ಕೊನೆಯಲ್ಲಿ ಶ್ರೀಲಂಕಾ ಪ್ರವಾಸದಿಂದ ಆರಂಭವಾಗಲಿದೆ. ಸರಣಿಗೂ ಮುನ್ನ ಬಿಸಿಸಿಐ ಬ್ಯಾಟಿಂಗ್ ಮತ್ತು ಬೌಲಿಂಗ್ ಕೋಚ್​ಗಳಂಥ ಇತರ ಸಹಾಯಕ ಸಿಬ್ಬಂದಿಯ ಹೆಸರುಗಳನ್ನು ಅಂತಿಮಗೊಳಿಸುವ ನಿರೀಕ್ಷೆಯಿದೆ. ವರದಿಗಳ ಪ್ರಕಾರ, ಅಭಿಷೇಕ್ ನಾಯರ್ ಮತ್ತು ವಿನಯ್ ಕುಮಾರ್ ಅವರಂತಹವರು ಈ ಹುದ್ದೆಗೆ ಸ್ಪರ್ಧೆಯಲ್ಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Anushka Sharma : ಪತ್ನಿ ಅನುಷ್ಕಾ ಬರ್ತ್​​ಡೇಗೆ ಕೊಹ್ಲಿ ಕೇಕ್​ ಆರ್ಡರ್​ ಮಾಡಿದ್ದು ಬೆಂಗಳೂರಿನಿಂದ; ತಿಂಗಳುಗಳ ಬಳಿಕ ಮಾಹಿತಿ ಬಹಿರಂಗ

Anushka Sharma: ಉತ್ತಿಷ್ಠ ಕುಮಾರ್ ಎಂಬುವರು ಮಂಗಳವಾರ ತಮ್ಮ ಇನ್ಸ್ಟಾಗ್ರಾಮ್ ಫೀಡ್​​ನಲ್ಲಿ ದಂಪತಿಯ ಚಿತ್ರವನ್ನು ಹಂಚಿಕೊಂಡಿದ್ದಾರೆ. ಬರ್ತ್​ಡೇ ಗರ್ಲ್​​ ಅನುಷ್ಕಾಗೆ ಅವರು ತಯಾರಿಸಿದ ಚಾಕೊಲೇಟ್ ಕೇಕ್ ನ ಚಿತ್ರವನ್ನು ಸಹ ಅವರು ಹಂಚಿಕೊಂಡಿದ್ದಾರೆ. ಕೇಕ್ ಮೇಲಿನ ಸಂದೇಶದಲ್ಲಿ “ಹ್ಯಾಪಿ ಬರ್ತ್ ಡೇ ಮ್ಯಾಡ್ ಒನ್” ಎಂದು ಬರೆಯಲಾಗಿದೆ. ಚಿತ್ರದಲ್ಲಿ ಅನುಷ್ಕಾ ಶರ್ಮಾ ಬಿಳಿ ಉಡುಪನ್ನು ಧರಿಸಿದ್ದರೆ, ವಿರಾಟ್ ಕೊಹ್ಲಿ ಬೀಗ್​ ಬಣ್ಣದ ಟೀ ಶರ್ಟ್ ಧರಿಸಿದ್ದಾರೆ.

VISTARANEWS.COM


on

Anushka Sharma
Koo

ನವದೆಹಲಿ: ಅನುಷ್ಕಾ ಶರ್ಮಾ (Anushka Sharma) ಅವರ 36ನೇ ಹುಟ್ಟುಹಬ್ಬದ ಆಚರಣೆ ಮೇ 1ರಂದು ನಡೆದಿತ್ತು. ಆ ದಿನದ ಸಂಭ್ರಮಾಚರಣೆಗಾಗಿ ಪತಿ ಹಾಗೂ ಸ್ಟಾರ್ ಬ್ಯಾಟರ್ ವಿರಾಟ್​ ಕೊಹ್ಲಿ ಬೆಂಗಳೂರಿನಿಂದ ಕೇಕ್ ಆರ್ಡರ್ ಮಾಡಿದ್ದರು ಎಂಬ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ಬೆಂಗಳೂರು ಮೂಲದ ಬೇಕರ್ ಒಬ್ಬರು ಅನುಷ್ಕಾ ಶರ್ಮಾ ಅವರ ಹುಟ್ಟುಹಬ್ಬದ ವಿಶೇಷ ಕೇಕ್ ತಯಾರಿಸಲು ವಿರಾಟ್ ಕೊಹ್ಲಿ ತಮ್ಮನ್ನು ಸಂಪರ್ಕಿಸಿದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಉತ್ತಿಷ್ಠ ಕುಮಾರ್ ಎಂಬುವರು ಮಂಗಳವಾರ ತಮ್ಮ ಇನ್ಸ್ಟಾಗ್ರಾಮ್ ಫೀಡ್​​ನಲ್ಲಿ ದಂಪತಿಯ ಚಿತ್ರವನ್ನು ಹಂಚಿಕೊಂಡಿದ್ದಾರೆ. ಬರ್ತ್​ಡೇ ಗರ್ಲ್​​ ಅನುಷ್ಕಾಗೆ ಅವರು ತಯಾರಿಸಿದ ಚಾಕೊಲೇಟ್ ಕೇಕ್ ನ ಚಿತ್ರವನ್ನು ಸಹ ಅವರು ಹಂಚಿಕೊಂಡಿದ್ದಾರೆ. ಕೇಕ್ ಮೇಲಿನ ಸಂದೇಶದಲ್ಲಿ “ಹ್ಯಾಪಿ ಬರ್ತ್ ಡೇ ಮ್ಯಾಡ್ ಒನ್” ಎಂದು ಬರೆಯಲಾಗಿದೆ. ಚಿತ್ರದಲ್ಲಿ ಅನುಷ್ಕಾ ಶರ್ಮಾ ಬಿಳಿ ಉಡುಪನ್ನು ಧರಿಸಿದ್ದರೆ, ವಿರಾಟ್ ಕೊಹ್ಲಿ ಬೀಗ್​ ಬಣ್ಣದ ಟೀ ಶರ್ಟ್ ಧರಿಸಿದ್ದಾರೆ.

ಅನುಷ್ಕಾ ಶರ್ಮಾ ಅವರ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಲು ವಿರಾಟ್ ಕೊಹ್ಲಿ ನನ್ನನ್ನು ಸಂಪರ್ಕಿಸಿದಾಗ, ನಾನು ವಿಶೇಷವಾದದ್ದನ್ನು ರಚಿಸಬೇಕು ಎಂದು ಯೋಚಿಸಿದೆ. ಹುಟ್ಟುಹಬ್ಬದ ಆಚರಣೆಗಾಗಿ ಕ್ಲಾಸಿಕ್ ಚಾಕೊಲೇಟ್ ಕೇಕ್ ಬಿಟ್ಟರೆ ಇನ್ಯಾವುದೂ ಇಲ್ಲ ಎಂದು ಅವರು ಹೇಳಿದ್ದಾರೆ.

ವಾರಾಂತ್ಯದಲ್ಲಿ ನನ್ನ ಅಮ್ಮನ ಅಡುಗೆ ಮನೆಯಲ್ಲಿ ಅಡುವೆ ಮಾಡುವುದರಿಂದ ಹಿಡಿದು ನಮ್ಮ ಯುಗದ ಅತ್ಯಂತ ಕ್ರೀಡಾಪಟುಗಳಲ್ಲಿ ಒಬ್ಬರಿಗೆ ಕೇಕ್ ತಯಾರಿಸುವವರೆಗೆ ಇದು ಕಳೆದ ಎಂಟು ವರ್ಷಗಳಲ್ಲಿ ಅದ್ಭುತ ಪ್ರಯಾಣವಾಗಿದೆ! ನನ್ನ ಎಲ್ಲಾ ಅದ್ಭುತ ಗ್ರಾಹಕರಿಗೆ ವಿಶೇಷ ಕೇಕ್ ಗಳನ್ನು ತಯಾರಿಸುವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: R Ashwin : ಸುನೀಲ್ ನರೈನ್ ರೀತಿ ಆರಂಭಿಕರಾಗಿ 20 ಎಸೆತಕ್ಕೆ 45 ರನ್ ಬಾರಿಸಿದ ಆರ್.​ ಅಶ್ವಿನ್​; ಇಲ್ಲಿದೆ ವಿಡಿಯೊ

ಅನುಷ್ಕಾ ಶರ್ಮಾ ಮೇ 1 ರಂದು ತಮ್ಮ 36 ನೇ ಹುಟ್ಟುಹಬ್ಬವನ್ನು ಬೆಂಗಳೂರಿನಲ್ಲಿ ಆಚರಿಸಿಕೊಂಡರು. ಈ ಹಿಂದೆ ಬಾಣಸಿಗ ಮನು ಚಂದ್ರ ಅವರು ಅನುಷ್ಕಾ ಶರ್ಮಾ ಅವರ ಹುಟ್ಟುಹಬ್ಬದ ಆಚರಣೆಯ ಚಿತ್ರ ಹಂಚಿಕೊಂಡಿದ್ದರು.

ಅನುಷ್ಕಾ ಶರ್ಮಾ ಅವರ ಹುಟ್ಟುಹಬ್ಬದಂದು, ವಿರಾಟ್ ಕೊಹ್ಲಿ ಅವರ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ ಮತ್ತು ನಾನು ನಿಮ್ಮನ್ನು ಕಂಡುಕೊಳ್ಳದೇ ಹೋಗಿದ್ದರೆ ನಾನು ಸಂಪೂರ್ಣವಾಗಿ ಕಳೆದುಹೋಗುತ್ತಿದ್ದೆ. ಹುಟ್ಟುಹಬ್ಬದ ಶುಭಾಶಯಗಳು ಎಂದು ಬರೆದಿದ್ದರು.

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಡಿಸೆಂಬರ್ 11, 2017 ರಂದು ವಿವಾಹವಾದರು. ಅವರು ವಾಮಿಕಾ ಮತ್ತು ಅಕಾಯ್​ ಎಂಬ ಇಬ್ಬರು ಮಕ್ಕಳ ಪೋಷಕರಾಗಿದ್ದಾರೆ. ಕ್ರಿಕೆಟಿಗ ಜೂಲನ್ ಗೋಸ್ವಾಮಿ ಜೀವನಾಧಾರಿತ ಚಿತ್ರ ‘ಚಕ್ಡಾ ಎಕ್ಸ್ಪ್ರೆಸ್’ನಲ್ಲಿ ಅನುಷ್ಕಾ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ.

Continue Reading

ಪ್ರಮುಖ ಸುದ್ದಿ

R Ashwin : ಸುನೀಲ್ ನರೈನ್ ರೀತಿ ಆರಂಭಿಕರಾಗಿ 20 ಎಸೆತಕ್ಕೆ 45 ರನ್ ಬಾರಿಸಿದ ಆರ್.​ ಅಶ್ವಿನ್​; ಇಲ್ಲಿದೆ ವಿಡಿಯೊ

R Ashwin : ಟಿಎನ್​ಪಿಎಲ್​​ ಪ್ರಸಕ್ತ ಋತುವಿನಲ್ಲಿ ಆರ್ ಅಶ್ವಿನ್ ದಿಂಡಿಗಲ್ ಪರ ಬ್ಯಾಟಿಂಗ್ ಆರಂಭಿಸುತ್ತಿದ್ದಾರೆ. ತಿರುಚ್ಚಿ ಮತ್ತು ಸೇಲಂ ವಿರುದ್ಧ ಕೇವಲ 5 ಮತ್ತು 6 ರನ್ ಗಳಿಸಿದ್ದ ಅಶ್ವಿನ್ ಅಂತಿಮವಾಗಿ ಅಜೇಯ 45 ರನ್ ಗಳಿಸುವ ಮೂಲಕ ತಮ್ಮ ಹೊಣೆಗಾರಿಕೆ ಪ್ರದರ್ಶಿಸಿದರು.

VISTARANEWS.COM


on

R Ashwin
Koo

ಕೊಯಮತ್ತೂರು: ಕೊಯಮತ್ತೂರಿನಲ್ಲಿ ಭಾನುವಾರ ನಡೆದ ತಮಿಳುನಾಡು ಪ್ರೀಮಿಯರ್ ಲೀಗ್ (TNPL) ಪಂದ್ಯದಲ್ಲಿ ದಿಂಡಿಗಲ್ ಡ್ರಾಗನ್ಸ್ ಪರ ಆಡಿದ ಭಾರತ ತಂಡದ ಸ್ಪಿನ್ನ ಬೌಲರ್​ ಆರ್​. ಅಶ್ವಿನ್ ಕೆಕೆಆರ್​ ಪರ ಸುನೀಲ್ ನರೈನ್ ಅವರಂತೆಯೇ ಅಬ್ಬರದ ಬ್ಯಾಟಿಂಗ್​ ಪ್ರದರ್ಶಿಸಿ ಗಮನ ಸೆಳೆದಿದ್ದಾರೆ. ಚೆಪಾಲ್ ಸೂಪರ್ ಗಿಲ್ಲಿಸ್ ವಿರುದ್ಧ ಪಂದ್ಯದಲ್ಲಿ ಅವರು ಕೇವಲ 25 ಎಸೆತಗಳಲ್ಲಿ 45 ರನ್ ಗಳಿಸಿದ್ದಾರೆ.

ಪಂದ್ಯದ ಎರಡನೇ ಓವರ್​ನಲ್ಲಿ ದಿಂಡಿಗಲ್ ಡ್ರ್ಯಾಗನ್ಸ್ 3 ವಿಕೆಟ್ ನಷ್ಟಕ್ಕೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಅಭಿಷೇಕ್ ತನ್ವರ್ ಮೊದಲ ಓವರ್​ನಲ್ಲಿ ಎರಡು ಆರಂಭಿಕ ವಿಕೆಟ್​ಗಳನ್ನು ಪಡೆದರೆ, ರಾಹಿಲ್ ಶಾ ಎರಡನೇ ಓವರ್​ನಲ್ಲಿ ಬಾಬಾ ಇಂದ್ರಜಿತ್ ಅವರ ವಿಕೆಟ್ ಪಡೆದರು. 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಆರ್.ವಿಮಲ್ ಕುಮಾರ್, ಗಣೇಶನ್ ಪೆರಿಯಸ್ವಾಮಿ ಹಾಕಿದ ಓವರ್​ನಲ್ಲಿ ಎರಡು ಬೌಂಡರಿಗಳನ್ನು ಬಾರಿಸಿದ ಒತ್ತಡ ಕಡಿಮೆ ಮಾಡಲು ನೆರವಾದರು. ಆದಾಗ್ಯೂ, ಆರ್ ಅಶ್ವಿನ್ ಅವರು ನಾಲ್ಕನೇ ಓವರ್​ನಲ್ಲಿ ರಾಹಿಲ್ ಶಾ ಓವರ್​ಗೆ ಎರಡು ಸಿಕ್ಸರ್ ಮತ್ತು ಒಂದು ಬೌಂಡರಿಗೆ ಹೊಡೆದು ತಮ್ಮ ಅಬ್ಬರದ ಆಟ ಆರಂಭಿಸಿದರು.

ಐದನೇ ಓವರ್ ನ ಮೊದಲ ಎಸೆತದಲ್ಲಿ ವಿಮಲ್ ಕುಮಾರ್ ಔಟಾದ ಕಾರಣ ಆರ್​. ಅಶ್ವಿನ್ ಪಾಲುದಾರರನ್ನು ಕಳೆದುಕೊಂಡರು. ಆದಾಗ್ಯೂ, ಬಾಲು ಸೂರ್ಯ ವಿರುದ್ಧದ ಓವರ್​ನಲ್ಲಿ ಅಶ್ವಿನ್ ಎರಡು ಬೌಂಡರಿ ಹೊಡೆದರು. ಅಭಿಷೇಕ್ ತನ್ವರ್ ವಿರುದ್ಧ ಆರನೇ ಓವರ್​ನಲ್ಲಿ ಅಶ್ವಿನ್ ಎರಡು ಸಿಕ್ಸರ್​​ ಬಾರಿಸುವ ಮೂಲಕ ದಿಂಡಿಗಲ್ 7 ಓವರ್​​ನಲ್ಲಿ 6 ವಿಕೆಟ್ ನಷ್ಟಕ್ಕೆ 64 ರನ್ ಪೇರಿಸುವಂತೆ ಮಾಡಿದರು.

ಇದನ್ನೂ ಓದಿ: Paris Olympics 2024 : ಟೋಕಿಯೊದಲ್ಲಿ ನಡೆದ 2020ರ ಒಲಿಂಪಿಕ್ಸ್​ನಲ್ಲಿ ಭಾರತ ಗೆದ್ದ ಪದಕಗಳ ಸಂಖ್ಯೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

ಸ್ಪಿನ್ನರ್​ಗಳ ವಿರುದ್ಧ ಬೃಹತ್ ಸಿಕ್ಸರ್ಗಳನ್ನು ಬಾರಿಸಿ ಮೇಲಗೈ ಸಾಧಿಸಿದರು. ಈ ಮೂಲಕ ಐಪಿಎಲ್ 2024 ರಲ್ಲಿ ಕೆಕೆಆರ್​​ ​ತಂಡಕ್ಕಾಗಿ ಸುನಿಲ್ ನರೈನ್ ವಹಿಸಿದ ಪಾತ್ರವನ್ನು ವಹಿಸಿದರು. ಅಶ್ವಿನ್ ನಾಲ್ಕು ಸಿಕ್ಸರ್ ಮತ್ತು 3 ಬೌಂಡರಿಗಳನ್ನು ಬಾರಿಸುವ ಮೂಲಕ ಒಟ್ಟು 45 ರನ್ ಗಳಿಸಿದರು. ದಿಂಡಿಗಲ್​​ನ ಇತರ ಬ್ಯಾಟರ್​ಗಳು 15 ರನ್​​​ ದಾಟಲಿಲ್ಲ.

ಆರಂಭಿಕ ಬ್ಯಾಟಿಂಗ್ ಹೊಣೆ

ಟಿಎನ್​ಪಿಎಲ್​​ ಪ್ರಸಕ್ತ ಋತುವಿನಲ್ಲಿ ಆರ್ ಅಶ್ವಿನ್ ದಿಂಡಿಗಲ್ ಪರ ಬ್ಯಾಟಿಂಗ್ ಆರಂಭಿಸುತ್ತಿದ್ದಾರೆ. ತಿರುಚ್ಚಿ ಮತ್ತು ಸೇಲಂ ವಿರುದ್ಧ ಕೇವಲ 5 ಮತ್ತು 6 ರನ್ ಗಳಿಸಿದ್ದ ಅಶ್ವಿನ್ ಅಂತಿಮವಾಗಿ ಅಜೇಯ 45 ರನ್ ಗಳಿಸುವ ಮೂಲಕ ತಮ್ಮ ಹೊಣೆಗಾರಿಕೆ ಪ್ರದರ್ಶಿಸಿದರು.

ಆರ್ ಅಶ್ವಿನ್ ಈ ವರ್ಷದ ಕೊನೆಯಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಸಜ್ಜಾಗುತ್ತಿರುವುದರಿಂದ ಟಿಎನ್​ಪಿಎಲ್​ನಲ್ಲಿ ತಮ್ಮ ಬ್ಯಾಟಿಂಗ್ ಮೇಲೆ ಗಮನ ಹರಿಸುತ್ತಿದ್ದಾರೆ. ಆಫ್-ಸ್ಪಿನ್ನರ್ ಟಿ20 ವಿಶ್ವಕಪ್​ಗೆ ಆಯ್ಕೆಯಾಗಿರಲಿಲ್ಲ. ಸೆಪ್ಟೆಂಬರ್​ನಲ್ಲಿ ತಂಡವು ಬಾಂಗ್ಲಾದೇಶವನ್ನು ಎರಡು ಟೆಸ್ಟ್ ಸರಣಿಯಲ್ಲಿ ಭಾರತ ಎದುರಿಸುವಾಗ ಅವರು ತಂಡಕ್ಕೆ ಸೇರ್ಪಡೆಯಾಗುವ ಸಾಧ್ಯತೆಗಳಿವೆ.

Continue Reading

ಕರ್ನಾಟಕ

Assembly Session: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ; ಏನೆಲ್ಲ ಅರ್ಹತೆ ಇರಬೇಕು?

Assembly Session: ಖಾಸಗಿ ಕ್ಷೇತ್ರಗಳಲ್ಲಿ ದುಡಿಯುವ ಕನ್ನಡಿಗರಿಗೆ ಉದ್ಯೋಗ ಮೀಸಲು ನೀಡುವ ವಿಧೇಯಕವನ್ನು ವಿಧಾನ ಮಂಡಲದಲ್ಲಿ ಮಂಡಿಸಲು ಸೋಮವಾರ ನಡೆದ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದೇ ಅಧಿವೇಶನದಲ್ಲಿ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆಯುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

VISTARANEWS.COM


on

Assembly Session Job reservation for Kannadigas in private sectors Cabinet meeting approves bill
Koo

ಬೆಂಗಳೂರು: ಖಾಸಗಿ ಕ್ಷೇತ್ರಗಳಲ್ಲಿ ದುಡಿಯುವ ಕನ್ನಡಿಗರಿಗೆ ಉದ್ಯೋಗ ಮೀಸಲು ನೀಡುವ ವಿಧೇಯಕವನ್ನು ವಿಧಾನ ಮಂಡಲದಲ್ಲಿ ಮಂಡಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆಯಲ್ಲಿ (Assembly Session) ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದೇ ಅಧಿವೇಶನದಲ್ಲಿ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆಯುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

‘ದಿ ಕರ್ನಾಟಕ ಸ್ಟೇಟ್ ಎಂಪ್ಲಾಯ್ಮೆಂಟ್ ಆಫ್ ಲೋಕಲ್ ಕ್ಯಾಡಿಡೇಟ್ಸ್ ಇನ್ ದಿ ಇಂಡಸ್ಟ್ರೀಸ್, ಫ್ಯಾಕ್ಟರೀಸ್ ಆ್ಯಂಡ್ ಲೋಕಲ್ ಎಷ್ಟಾಬ್ಲಿಷ್‌ಮೆಂಟ್ ಬಿಲ್-2024 ವಿಧೇಯಕದಂತೆ ಮ್ಯಾನೇಜ್‌ಮೆಂಟ್ ಹುದ್ದೆಗಳು ಶೇ.50 ಹಾಗೂ ನಾನ್ ಮ್ಯಾನೇಜ್‌ಮೆಂಟ್ ಶೇ.75 ರಷ್ಟು ಹುದ್ದೆಗಳು ಸ್ಥಳೀಯರಿಗೆ ಮೀಸಲಿಡಲಾಗುತ್ತದೆ.

ಇದನ್ನೂ ಓದಿ: Assembly Session: ಕಾರ್ಮಿಕ ಇಲಾಖೆಯಿಂದ ಸಿನಿ ಕಾರ್ಮಿಕರಿಗೆ ಭರ್ಜರಿ ಗಿಫ್ಟ್!

ಕರ್ನಾಟಕದಲ್ಲಿಯೇ ಹುಟ್ಟಿದವರು, ಕರ್ನಾಟಕದಲ್ಲಿ 15 ವರ್ಷದಿಂದ ವಾಸಿಸುತ್ತಿರುವವರು, ಕನ್ನಡ ಓದಲು, ಬರೆಯಲು ಮತ್ತು ಮಾತನಾಡಲು ಬರುವವರು, ನೋಡಲ್ ಏಜೆನ್ಸಿ ನಡೆಸುವ ಕನ್ನಡ ಪರೀಕ್ಷೆಯಲ್ಲಿ ಪಾಸಾದವರನ್ನು ಸ್ಥಳೀಯರು ಎಂದು ಪರಿಗಣಿಸಲಾಗುವುದು. ಮ್ಯಾನೇಜ್‌ಮೆಂಟ್‌ನಲ್ಲಿ ಸೂಪರ್‌ವೈಸ‌ರ್, ಮ್ಯಾನೇಜಿರಿಯಲ್, ಟೆಕ್ನಿಕಲ್, ಆಪರೇಷನಲ್, ಆಡಳಿತ ಸೇರಿ ಉನ್ನತ ಹುದ್ದೆಗಳಲ್ಲಿ ಶೇ.50 ಉದ್ಯೋಗ ಸ್ಥಳೀಯರಿಗೆ ಮೀಸಲಿಡಲಾಗುವುದು. ಇನ್ನು ನಾನ್-ಮ್ಯಾನೇಜ್‌ಮೆಂಟ್ನಲ್ಲಿ ಕ್ಲರ್ಕ್‌ಗಳು, ಕೌಶಲ, ಕೌಶಲ ರಹಿತ ಹಾಗೂ ಅರೆಕೌಶಲ, ಗುತ್ತಿಗೆ ನೌಕರ ಹಾಗೂ ಐಟಿ ಹುದ್ದೆಗಳಲ್ಲಿ ಶೇ.75 ಮೀಸಲು ಸ್ಥಳೀಯರಿಗೆ ನೀಡುವ ವಿಧೇಯಕ ಇದಾಗಿದೆ.

ಸ್ಥಳೀಯರಿಗೆ ಉದ್ಯೋಗ ನೀಡದಿದ್ದರೆ ದಂಡ ವಿಧಿಸುವ ಅಂಶವನ್ನೂ ವಿಧೇಯಕದಲ್ಲಿ ಸೇರಿಸಲಾಗಿದೆ. ಕನಿಷ್ಠ 10 ಸಾವಿರ ರೂ. ಹಾಗೂ 25 ಸಾವಿರ ರೂ.ಗಳ ವರೆಗೆ ದಂಡ ವಿಸ್ತರಣೆ ಮಾಡಲು ಅವಕಾಶ ನೀಡಲಾಗುತ್ತದೆ. ಆ ನಂತರವೂ ಉದ್ಯೋಗ ನೀಡದೇ ಹೋದರೆ ದಿನಕ್ಕೆ 100 ರೂ. ದಂಡ ವಿಧಿಸಲಾಗುತ್ತದೆ.

ಇದನ್ನೂ ಓದಿ: Lakshmi Hebbalkar: ವಿಶೇಷ ಶಾಲೆಗಳ ಶಿಕ್ಷಕರ ವೇತನ ಪರಿಷ್ಕರಣೆಗೆ ಅಗತ್ಯ ಕ್ರಮ: ಹೆಬ್ಬಾಳಕರ್ ಭರವಸೆ

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಬೇಕು. ಈ ನಿಟ್ಟಿನಲ್ಲಿ ವಿಧೇಯಕವು ಮಹತ್ವದ ಪಾತ್ರ ವಹಿಸಲಿದೆ. ಕನ್ನಡಿಗ ನೌಕರರ ಜೀವನ ಭದ್ರತೆಗೆ ಇದು ಸಹಾಯವಾಗಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Paris Olympics 2024 : ಟೋಕಿಯೊದಲ್ಲಿ ನಡೆದ 2020ರ ಒಲಿಂಪಿಕ್ಸ್​ನಲ್ಲಿ ಭಾರತ ಗೆದ್ದ ಪದಕಗಳ ಸಂಖ್ಯೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Paris Olympics 2024 : 2022ರ ಏಷ್ಯನ್ ಗೇಮ್ಸ್​​ನಲ್ಲಿ 100ಕ್ಕೂ ಹೆಚ್ಚು ಪದಕಗಳನ್ನು ಗೆದ್ದಿರುವ ಭಾರತ, ಭಾಗವಹಿಸುತ್ತಿರುವ ಎಲ್ಲ ಸ್ಪರ್ಧೆಗಳಲ್ಲಿ ಕಠಿಣ ಹೋರಾಟ ನೀಡುವ ನಿರೀಕ್ಷೆಯಿದೆ. ಪ್ರಧಾನಿ ಮೋದಿ ಅವರು ಭಾರತೀಯ ತಂಡಕ್ಕೆ ಉತ್ಸಾಹ ಭರಿತ ಮಾತಿನ ಪ್ರೋತ್ಸಾಹವನ್ನೂ ನೀಡಿದ್ದಾರೆ. ಹೀಗಾಗಿ ಪದಕಗಳ ನಿರೀಕ್ಷೆ ಹೆಚ್ಚಾಗಿದೆ.

VISTARANEWS.COM


on

Paris Olympics 2024
Koo

ಬೆಂಗಳೂರು : ಪ್ಯಾರಿಸ್ ಒಲಿಂಪಿಕ್ಸ್​​ 2024 (Paris Olympics 2024) ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಭಾರತದ ನಿಯೋಗ ಪ್ಯಾರಿಸ್​ ತಲುಪಿ ಅಲ್ಲಿನ ಪರಿಸ್ಥಿತಿಗೆ ಹೊಂದಿಕೊಂಡು ಅಭ್ಯಾಸ ಆರಂಭಿಸಿದ್ದಾರೆ. ಭಾರತೀಯ ಕ್ರೀಡಾಭಿಮಾನಿಗಳು ಭಾರತ ಈ ಬಾರಿ ಹೆಚ್ಚು ಪದಕಗಳನ್ನು ಗೆಲ್ಲಬೇಕು ಎಂದು ಹಾರೈಸುತ್ತಿದ್ದಾರೆ. 33ನೇ ಒಲಿಂಪಿಕ್ಸ್ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಪ್ರಮುಖ ಆತಿಥೇಯ ನಗರವಾಗಿದ್ದರೂ, ಫ್ರಾನ್ಸ್ ನಾದ್ಯಂತ ಇತರ 16 ನಗರಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ಜಾವೆಲಿನ್ ಚಾಂಪಿಯನ್ ನೀರಜ್ ಚೋಪ್ರಾ ಮುಂಚೂಣಿಯಲ್ಲಿದ್ದು, ಭಾರತೀಯ ತಂಡ ಸಾಕಷ್ಟು ಬಲಿಷ್ಠವಾಗಿದೆ. ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು ಮತ್ತು ಶರತ್ ಕಮಲ್ ಧ್ವಜಧಾರಿಗಳಾಗಲಿದ್ದು, ಶೂಟರ್ ಗಗನ್ ನಾರಂಗ್ ಭಾರತದ ಚೆಫ್-ಡಿ-ಮಿಷನ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.

2022ರ ಏಷ್ಯನ್ ಗೇಮ್ಸ್​​ನಲ್ಲಿ 100ಕ್ಕೂ ಹೆಚ್ಚು ಪದಕಗಳನ್ನು ಗೆದ್ದಿರುವ ಭಾರತ, ಭಾಗವಹಿಸುತ್ತಿರುವ ಎಲ್ಲ ಸ್ಪರ್ಧೆಗಳಲ್ಲಿ ಕಠಿಣ ಹೋರಾಟ ನೀಡುವ ನಿರೀಕ್ಷೆಯಿದೆ. ಪ್ರಧಾನಿ ಮೋದಿ ಅವರು ಭಾರತೀಯ ತಂಡಕ್ಕೆ ಉತ್ಸಾಹ ಭರಿತ ಮಾತಿನ ಪ್ರೋತ್ಸಾಹವನ್ನೂ ನೀಡಿದ್ದಾರೆ. ಹೀಗಾಗಿ ಪದಕಗಳ ನಿರೀಕ್ಷೆ ಹೆಚ್ಚಾಗಿದೆ. ಏತನ್ಮಧ್ಯೆ 2021ರಲ್ಲಿ ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆದ 2020ರ ಆವೃತ್ತಿಯ ಒಲಿಂಪಿಕ್ಸ್​ನಲ್ಲಿ ಭಾರತ ಸಾಧನೆಯ ಬಗ್ಗೆ ಒಂದು ಪಕ್ಷಿ ನೋಟ ಹರಿಸೋಣ.

ಎಷ್ಟು ಪದಕಗಳು ಬಂದಿದ್ದವು?

202ರ ಒಲಿಂಪಿಕ್ಸ್​ನಲ್ಲಿ ಭಾರತ ಒಟ್ಟು 7 ಪದಕಗಳನ್ನು ಗೆದ್ದುಕೊಂಡಿತ್ತು. ಅದರಲ್ಲಿ ಒಂದು ಚಿನ್ನ, ಎರಡು ಬೆಳ್ಳಿ ಹಾಗೂ ಮೂರು ಕಂಚಿನ ಪದಕಗಳು ಇದ್ದವು. ಜಾವೆಲಿನ್ ಎಸೆತಗಾಗ ನೀರಜ್ ಚೋಪ್ರಾ ವೈಯಕ್ತಿಕ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಎರಡನೇ ಭಾರತೀಯ ಎನಿಸಿಕೊಂಡರು. ಪಿ.ವಿ.ಸಿಂಧು ತಮ್ಮ ಎರಡನೇ ಒಲಿಂಪಿಕ್ ಪದಕ (ಬೆಳ್ಳಿ) ಗೆದ್ದರೆ, ಪುರುಷರ ಹಾಕಿ ತಂಡವು 41 ವರ್ಷಗಳ ನಂತರ ಒಲಿಂಪಿಕ್ ಪದಕವನ್ನು (ಕಂಚು) ಗೆದ್ದು ಸಾಧನೆ ಮಾಡಿತು.

ಚಿನ್ನ ಗೆದ್ದ ನೀರಜ್ ಚೋಪ್ರಾ

ಭಾರತದ ಒಲಿಂಪಿಕ್ಸ್​ ಇತಿಹಾಸದಲ್ಲಿ ಅಥ್ಲೆಟಿಕ್ಸ್​ನಲ್ಲಿ ನೀರಜ್ ಚೋಪ್ರಾ ಭಾರತಕ್ಕೆ ಮೊಟ್ಟ ಮೊದಲ ಚಿನ್ನದ ಪದಕ ಗೆದ್ದುಕೊಟ್ಟರು. 2020 ರಲ್ಲಿ ಟೋಕಿಯೊದಲ್ಲಿ ನಡೆದ ಬೇಸಿಗೆ ಒಲಿಂಪಿಕ್ಸ್​ನಲ್ಲಿ ಅವರು ಜಾವೆಲಿನ್ ಎಸೆತದಲ್ಲಿ 87.58 ಮೀಟರ್ ಅತ್ಯುತ್ತಮ ಎಸೆತದೊಂದಿಗೆ ಚಿನ್ನದ ಪದಕ ಗೆದ್ದರು. ಜೆಕ್ ಗಣರಾಜ್ಯದ ಜಾಕುಬ್ ವಡ್ಲೆಜ್ಚ್ ಎರಡನೇ ಸ್ಥಾನ ಪಡೆದರೆ, ವಿಟೆಜ್ಸ್ಲಾವ್ ವೆಸೆಲಿ ಕಂಚಿನ ಪದಕ ಗೆದ್ದರು. ಬೀಜಿಂಗ್​ನಲ್ಲಿ ನಡೆದ 2008 ರ ಬೇಸಿಗೆ ಒಲಿಂಪಿಕ್ಸ್​​ನಲ್ಲಿ ಶೂಟರ್​ ಅಭಿನವ್ ಬಿಂದ್ರಾ ಅವರ ಯಶಸ್ಸಿನ ನಂತರ ಒಲಿಂಪಿಕ್ ಚಿನ್ನದ ಪದಕ ಗೆದ್ದ ಮೊದಲ ಅಥ್ಲೀಟ್​ ನೀರಜ್ ಚೋಪ್ರಾ.

ಇದನ್ನೂ ಓದಿ: Paris Olympics 2024 : ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಕಡಿಮೆ ಪದಕಗಳು ಸಿಗುವುದು ಯಾಕೆ? ಈ ಪ್ರಶ್ನೆಗೆ ಇಲ್ಲಿದೆ ಉತ್ತರ

ಮೀರಾಬಾಯಿ ಚಾನು- ಬೆಳ್ಳಿ ಪದಕ

ಟೋಕಿಯೋ ಒಲಿಂಪಿಕ್ಸ್​​ನ ಮಹಿಳೆಯರ 49 ಕೆ.ಜಿ ವೇಟ್​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಮೀರಾಬಾಯಿ ಚಾನು ಭಾರತಕ್ಕೆ ಪದಕದ ಖಾತೆ ತೆರೆದಿದಿದ್ದರು. 2000ನೇ ಇಸವಿಯಲ್ಲಿ ಸಿಡ್ನಿಯಲ್ಲಿ ಕರ್ಣಂ ಮಲ್ಲೇಶ್ವರಿ ಕಂಚಿನ ಪದಕ ಗೆದ್ದ ಬಳಿಕ ಇದು ಭಾರತದ ಎರಡನೇ ವೇಟ್ ಲಿಫ್ಟಿಂಗ್ ಒಲಿಂಪಿಕ್ ಪದಕವಾಗಿದೆ.

ಪಿ.ವಿ.ಸಿಂಧೂ- ಮಹಿಳೆಯರ ಬ್ಯಾಡ್ಮಿಂಟನ್ ಸಿಂಗಲ್ಸ್​ನಲ್ಲಿ ಕಂಚಿನ ಪದಕ

ಬ್ಯಾಡ್ಮಿಂಟನ್ ಕ್ವೀನ್ ಪಿ.ವಿ.ಸಿಂಧು ಸುಶೀಲ್ ಕುಮಾರ್ ನಂತರ ಎರಡು ವೈಯಕ್ತಿಕ ಒಲಿಂಪಿಕ್ ಪದಕಗಳನ್ನು ಗೆದ್ದ ಮೊದಲ ಭಾರತೀಯ ಮಹಿಳೆ ಮತ್ತು ಎರಡನೇ ಭಾರತೀಯ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಮಹಿಳೆಯರ ಬ್ಯಾಡ್ಮಿಂಟನ್​ ಸಿಂಗಲ್ಸ್​ನಲ್ಲಿ ಪಿ.ವಿ.ಸಿಂಧು ಚೀನಾದ ಹಿ ಬಿಂಗ್ ಜಿಯಾವೊ ವಿರುದ್ಧ 21-13, 21-15 ಅಂತರದಿಂದ ಸೋತಿದ್ದರು.

ರವಿ ಕುಮಾರ್ ದಹಿಯಾ: ಕುಸ್ತಿಯಲ್ಲಿ ಬೆಳ್ಳಿ ಪದಕ

ಪುರುಷರ 57 ಕೆಜಿ ಫ್ರೀಸ್ಟೈಲ್ ಕುಸ್ತಿಯ ಫೈನಲ್​ನಲ್ಲಿ 23 ವರ್ಷದ ರವಿ ಕುಮಾರ್ ದಹಿಯಾ ಎರಡು ವಿಶ್ವ ಚಾಂಪಿಯನ್ ರಷ್ಯಾದ ಜಾವೂರ್ ಉಗೆವ್ ವಿರುದ್ಧ ಫೈನಲ್​ನಲ್ಲಿ ಸೋತು ಬೆಳ್ಳಿ ಪದಕ ಗೆದ್ದರು. ಇದು ಒಲಿಂಪಿಕ್ ಇತಿಹಾಸದಲ್ಲಿ ಭಾರತಕ್ಕೆ ಕುಸ್ತಿಯಲ್ಲಿ ಒಂಬತ್ತನೇ ಬೆಳ್ಳಿ ಪದಕ. 2012 ರ ಲಂಡನ್​​ನಲ್ಲಿ ಸುಶೀಲ್ ಕುಮಾರ್ ನಂತರ ಕುಸ್ತಿಯಲ್ಲಿ ಎರಡನೇ ಬೆಳ್ಳಿ ಪದಕ. ರವಿ ಕುಮಾರ್ ದಹಿಯಾ ಅವರು ಸೆಮಿಫೈನಲ್​​ನಲ್ಲಿ ಕಜಕಿಸ್ತಾನದ ನುರಿಸ್ಲಾಮ್ ಸನಾಯೆವ್ ಅವರನ್ನು ಸೋಲಿಸುವ ಮೂಲಕ ಒಲಿಂಪಿಕ್ ಪದಕ ಖಚಿತಪಡಿಸಿಕೊಂಡಿದ್ದರು.

ಬಜರಂಗ್ ಪೂನಿಯಾ; ಕುಸ್ತಿಯಲ್ಲಿ ಕಂಚಿನ ಪದಕ

ಕುಸ್ತಿಪಟು ಬಜರಂಗ್ ಪೂನಿಯಾ ಟೋಕಿಯೊ 2020ರಲ್ಲಿ ಪದಕ ಗೆದ್ದ ಮೂರನೇ ಭಾರತೀಯ. ಪುರುಷರ 65 ಕೆ.ಜಿ ಫ್ರೀಸ್ಟೈಲ್ ಕುಸ್ತಿಯಲ್ಲಿ ಕಜಕಿಸ್ತಾನದ ದೌಲೆಟ್ ನಿಯಾಜ್ಬೆಕೊವ್ ಅವರನ್ನು ಸೋಲಿಸಿ ಕಂಚಿನ ಪದಕ ಗೆದ್ದಿದ್ದರು.

ಲವ್ಲಿನಾ ಬೊರ್ಗೊಹೈನ್ – ಬಾಕ್ಸಿಂಗ್​ನಲ್ಲಿ ಕಂಚಿನ ಪದಕ (64-69 ಕೆಜಿ)

ಮಹಿಳೆಯರ 69 ಕೆಜಿ ವಿಭಾಗದಲ್ಲಿ ಟರ್ಕಿಯ ಅಗ್ರ ಶ್ರೇಯಾಂಕದ ಬುಸೆನಾಜ್ ಸುರ್ಮೆನೆಲಿ ವಿರುದ್ಧ ಸೆಮಿಫೈನಲ್​​ನಲ್ಲಿ ಸೋತ ನಂತರ ಲೊವ್ಲಿನಾ ಬೊರ್ಗೊಹೈನ್ ಟೋಕಿಯೊ 2020 ರಲ್ಲಿ ಕಂಚಿನ ಪದಕ ಗೆದ್ದಿದ್ದರು. ಲೊವ್ಲಿನಾ ಬೊರ್ಗೊಹೈನ್ ಕ್ವಾರ್ಟರ್ ಫೈನಲ್​ನಲ್ಲಿ ಚೈನೀಸ್ ತೈಪೆಯ ನಿಯೆನ್-ಚಿನ್ ಚೆನ್ ಅವರನ್ನು ಸೋಲಿಸಿ ಪದಕದ ಭರವಸೆ ಮೂಡಿಸಿದ್ದರು.

ಪುರುಷರ ಹಾಕಿ ತಂಡ ; ಕಂಚಿನ ಪದಕ

1980ರ ಮಾಸ್ಕೋ ಒಲಿಂಪಿಕ್ಸ್​​ನಲ್ಲಿ ಚಿನ್ನ ಗೆದ್ದ ನಂತರ ಭಾರತೀಯ ಪುರುಷರ ಹಾಕಿ ತಂಡವು 41 ವರ್ಷಗಳ ಕಾಲ ಪದಕವೇ ಗೆದ್ದಿರಲಿಲ್ಲ. ಕೊನೆಗೂ 2020ರಲ್ಲಿ ಕಂಚಿನ ಪದಕ ಗೆದ್ದಿತು. ಮೂರನೇ ಸ್ಥಾನ ಪಂದ್ಯದ ಒಂದು ಹಂತದಲ್ಲಿ 3-1ರಿಂದ ಹಿನ್ನಡೆ ಅನುಭವಿಸಿದ್ದ ಭಾರತ, ಜರ್ಮನಿಯನ್ನು 5-4 ಅಂತರದಿಂದ ಮಣಿಸಿತ್ತು. 1968 ಮತ್ತು 1972ರ ಒಲಿಂಪಿಕ್ಸ್ ಬಳಿಕ ಇದು ಅವರ ಮೂರನೇ ಒಲಿಂಪಿಕ್ ಕಂಚಿನ ಪದಕ.

Continue Reading
Advertisement
Anushka Sharma
ಪ್ರಮುಖ ಸುದ್ದಿ15 mins ago

Anushka Sharma : ಪತ್ನಿ ಅನುಷ್ಕಾ ಬರ್ತ್​​ಡೇಗೆ ಕೊಹ್ಲಿ ಕೇಕ್​ ಆರ್ಡರ್​ ಮಾಡಿದ್ದು ಬೆಂಗಳೂರಿನಿಂದ; ತಿಂಗಳುಗಳ ಬಳಿಕ ಮಾಹಿತಿ ಬಹಿರಂಗ

Muscat Terrorist Attack
ವಿದೇಶ20 mins ago

Muscat Terrorist Attack: ಮಸ್ಕತ್‌ನಲ್ಲಿ ಉಗ್ರರ ಅಟ್ಟಹಾಸ; ಭಾರತೀಯ ಸೇರಿ 9ಮಂದಿ ಸಾವು

Manikanta Rathod
ಕರ್ನಾಟಕ33 mins ago

Manikanta Rathod: ಅನ್ನ ಭಾಗ್ಯ ಅಕ್ಕಿ ಕಳವು ಕೇಸ್‌ನಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಬಂಧನ

K Kavitha
ದೇಶ53 mins ago

Delhi Liquor Policy Case: ತಿಹಾರ್‌ ಜೈಲಿನಲ್ಲಿರುವ ಕೆ.ಕವಿತಾ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

R Ashwin
ಪ್ರಮುಖ ಸುದ್ದಿ1 hour ago

R Ashwin : ಸುನೀಲ್ ನರೈನ್ ರೀತಿ ಆರಂಭಿಕರಾಗಿ 20 ಎಸೆತಕ್ಕೆ 45 ರನ್ ಬಾರಿಸಿದ ಆರ್.​ ಅಶ್ವಿನ್​; ಇಲ್ಲಿದೆ ವಿಡಿಯೊ

Children Mobile Addiction
ಆರೋಗ್ಯ1 hour ago

Children Mobile Addiction: ನಮ್ಮ ಮಕ್ಕಳು ಎಷ್ಟು ಹೊತ್ತು ಮೊಬೈಲ್‌ ನೋಡಬಹುದು?

Road Accident
ಕರ್ನಾಟಕ1 hour ago

Road Accident: ಕೊಡಗಿನ ಸುಂಟಿಕೊಪ್ಪ ಬಳಿ ಟಿಪ್ಪರ್-ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರ ದುರ್ಮರಣ

Assembly Session Job reservation for Kannadigas in private sectors Cabinet meeting approves bill
ಕರ್ನಾಟಕ1 hour ago

Assembly Session: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ; ಏನೆಲ್ಲ ಅರ್ಹತೆ ಇರಬೇಕು?

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : ಟೋಕಿಯೊದಲ್ಲಿ ನಡೆದ 2020ರ ಒಲಿಂಪಿಕ್ಸ್​ನಲ್ಲಿ ಭಾರತ ಗೆದ್ದ ಪದಕಗಳ ಸಂಖ್ಯೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Dog Ethnicwear
ಫ್ಯಾಷನ್2 hours ago

Dog Ethnicwear: ನಾಯಿಗಳಿಗೂ ಬಂತು ಎಥ್ನಿಕ್‌ ವೇರ್ಸ್! ಎಷ್ಟು ಮುದ್ದಾಗಿ ಕಾಣಿಸುತ್ತಿವೆ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ8 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ10 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 day ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌