Self Harming: ಆನ್‌ಲೈನ್‌ ಗೇಮಿಂಗ್‌ ಚಟ; ಹಣ ಕಳೆದುಕೊಂಡ ವಿದ್ಯಾರ್ಥಿ ಸೂಸೈಡ್‌ - Vistara News

ಹುಬ್ಬಳ್ಳಿ

Self Harming: ಆನ್‌ಲೈನ್‌ ಗೇಮಿಂಗ್‌ ಚಟ; ಹಣ ಕಳೆದುಕೊಂಡ ವಿದ್ಯಾರ್ಥಿ ಸೂಸೈಡ್‌

Online Gaming: ಆನ್‌ಲೈನ್‌ ಆಟಕ್ಕೆ ವಿದ್ಯಾರ್ಥಿಯೊಬ್ಬ (Self Harming) ಬದುಕಿನ ಓಟವನ್ನೇ ಮುಗಿಸಿದ್ದಾನೆ. ಆನ್‌ಲೈನ್‌ನಲ್ಲಿ ಹಣ ಕಳೆದುಕೊಂಡು ಖಾಲಿ ಕೈಯಾದ ವಿದ್ಯಾರ್ಥಿ ಮನನೊಂದು ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ.

VISTARANEWS.COM


on

Self Harming
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹುಬ್ಬಳ್ಳಿ: ಆನ್‌ಲೈನ್‌ ಗೇಮಿಂಗ್‌ನಲ್ಲಿ (Self Harming) ಹಣ ಕಳೆದುಕೊಂಡ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ (Student Death) ಶರಣಾಗಿದ್ದಾನೆ. ಹುಬ್ಬಳ್ಳಿಯ ಶಿರಡಿ ನಗರದಲ್ಲಿರುವ ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡಿದ್ದಾನೆ. ರಾಕೇಶ್ ಜಂಬಲದಿನ್ನಿ (21) ಮೃತ ದುರ್ದೈವಿ.

ಬಿಇ 6ನೇ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಕೇಶ್‌ ಆನ್‌ಲೈನ್ ಗೇಮ್‌ ಚಟ ಹೊಂದಿದ್ದ. ದಿಢೀರ್ ಹಣ‌ ಗಳಿಸುವ ಆಸೆಗೆ ಬಿದ್ದ ರಾಕೇಶ್‌ ಆನ್‌ಲೈನ್‌ ಗೇಮ್‌ಗೆ ಸಾವಿರಾರು ರೂ. ಹಾಕಿ ಎಲ್ಲವನ್ನೂ ಕಳೆದುಕೊಂಡಿದ್ದ. ಇದರಿಂದ ಮನನೊಂದ ರಾಕೇಶ್‌ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

ಸಾಲಭಾದೆ ತಾಳಲಾರದೇ ರೈತ ಆತ್ಮಹತ್ಯೆ

ಸಾಲಭಾದೆ ತಾಳಲಾರದೆ ರೈತರೊಬ್ಬರು ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಗುರುವಾರ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹನುಮಂತ ಭೀಮಪ್ಪ ಮುರನಾಳ (55) ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟವರು. ಬಾಗಲಕೋಟೆಯ ಗುಳೇದಗುಡ್ಡ ತಾಲೂಕಿನ ಲಕ್ಕಸಕೊಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ. ಮಂಗಳವಾರ ಜಮೀನಿನಲ್ಲಿ ವಿಷ ಸೇವಿಸಿದ್ದ ಹನುಮಂತರನ್ನು ಕುಟುಂಬಸ್ಥರು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ರೈತ ಎರಡೂವರೆ ಎಕರೆ ಸ್ವಂತ ಜಮೀನು ಹೊಂದಿದ್ದರು. 2 ಎಕರೆ ಜಮೀನಿನಲ್ಲಿ ಲಾವಣಿ ಮಾಡುತ್ತಿದ್ದರು. ಕೆರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Road Accident : ಮಂಡ್ಯದಲ್ಲಿ ಜವರಾಯನ ಅಟ್ಟಹಾಸ; ಕಾರಿಗೆ ಲಾರಿ ಡಿಕ್ಕಿಯಾಗಿ ಮೂವರು ಸಾವು

ವಿದ್ಯಾರ್ಥಿನಿ ಆತ್ಮಹತ್ಯೆ; ಈಕೆ ಜೀವ ತೆಗೆದುಕೊಳ್ಳುವಂಥದು ಏನಾಗಿತ್ತು?

ಉಡುಪಿ: ಮಣಿಪಾಲದ ಹೆರ್ಗದಲ್ಲಿ ವೈಯಕ್ತಿಕ ಕಾರಣಕ್ಕೆ ಚಾರ್ಟರ್ಡ್ ಅಕೌಂಟೆಂಟ್‌ (chartered accountant) ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ (Student Self Harming) ಮಾಡಿಕೊಂಡಿದ್ದಾರೆ. ಕೌಟುಂಬಿಕ ಅಸೌಖ್ಯದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಚಿಕ್ಕಮಗಳೂರು ಕೊಪ್ಪ ತಾಲೂಕಿನ ಹರಂದೂರು ಗ್ರಾಮದ ಶ್ರೀನಿಧಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡವರು. ಇವರು ಮಂಗಳೂರಿನ ಆಳ್ವಾಸ್ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದರು. ಬಾಡಿಗೆ ಮನೆಯ ರೂಮ್‌ನಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರು ಕೊಪ್ಪ ಹರಂದೂರು ಗ್ರಾಮದ ಮಹೇಶ್ ಎನ್ನುವವರ ಮಗಳಾಗಿದ್ದಾರೆ. ಮಹೇಶ್‌ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಡಯಾಲಿಸಿಸ್ ಹಿನ್ನಲೆಯಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆರ್ಗ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಪತ್ನಿ ಹಾಗೂ ಮಗಳೊಂದಿಗೆ ವಾಸವಾಗಿದ್ದರು. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಮಂಗಳೂರಿನಲ್ಲಿ ಆತಂಕ ಮೂಡಿಸಿದ್ದ ಚಡ್ಡಿ ಬನಿಯನ್‌ ಗ್ಯಾಂಗ್‌ ಸೆರೆ

ಮಂಗಳೂರು: ಸರಣಿ ದರೋಡೆ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ಪೊಲೀಸರು ಚೆಡ್ಡಿ ಬನಿಯನ್ ಗ್ಯಾಂಗ್ (Chaddi Baniyan Gang)​ ಸದಸ್ಯರನ್ನು ಬಂಧಿಸಿದ್ದಾರೆ. ಮಂಗಳೂರಿನ ಕಾಪಿಕಾಡು ಬಳಿಯ ಕೋಟೆಕಣಿ ಎಂಬಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆಡ್ಡಿ, ಬನಿಯನ್ ಗ್ಯಾಂಗ್​ಗೆ ಸೇರಿದ ಮಧ್ಯಪ್ರದೇಶದ ನಾಲ್ಕು ಜನ ದರೋಡೆಕೋರರ ಬಂಧವಾಗಿದೆ. ರಾಜು ಸಿಂಗ್ವಾನಿಯ (24), ಮಯೂರ್ (30), ಬಾಲಿ (22), ವಿಕ್ಕಿ (21) ಬಂಧನಕ್ಕೆ ಒಳಗಾದವರು.

ಇಂದು ರಾತ್ರಿ ವೃದ್ಧ ದಂಪತಿಗಳಿದ್ದ ಮನೆಗೆ ಕನ್ನ ಹಾಕಿದ್ದ ಈ ತಂಡ ದರೋಡೆ ಮಾಡಿತ್ತು. ವೃದ್ಧ ದಂಪತಿಗೆ ಹಲ್ಲೆ ಮಾಡಿ ಲೂಟಿ ಮಾಡಿದ್ದರು. ಹಲ್ಲೆಗೊಳಗಾದ ವಿಕ್ಟರ್ ಮೆಂಡೋನ್ಸಾ(71), ಪ್ಯಾಟ್ರಿಷಾ ಮೆಂಡೋನ್ಸಾ(60) ಆಸ್ಪತ್ರೆಗೆ ದಾಖಲಾಗಿದ್ದರು. ಆರೋಪಿಗಳಿಂದ 12 ಲಕ್ಷ ರೂ ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣ, ಸ್ಯಾಮ್ ಸಂಗ್ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು 1 ಲಕ್ಷ ರೂ. ಮೌಲ್ಯದ 10 ಬ್ರಾಂಡೆಡ್ ವಾಚ್ ಗಳು, ರೂ 3೦00 ರೂಪಾಯಿ ನಗದು ಹಣವನ್ನು ದರೋಡೆ ಮಾಡಿದ್ದರು. ಪ್ರಕರಣ ನಡೆದ ಮಾಹಿತಿ ಬಂದ ಕೂಡಲೇ ಉರ್ವಾ ಠಾಣೆಯ ಪೊಲೀಸ್ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದರು. ಅದರಲ್ಲಿ ಕೆ.ಎಸ್.ಅರ್.ಟಿ.ಸಿ ಬಸ್​​ನಲ್ಲಿ ದರೋಡೆಕೋರರರು ಮಂಗಳೂರು ಕಡೆಗೆ ಪ್ರಯಾಣಿಸಿದ್ದು ಕಂಡು ಬಂದಿತ್ತು. ಬಳಿಕ ಬಸ್ ಫಾಲೋ ಮಾಡಿ ಬಂಧಿಸಿದ್ದರು.

ಏನಾಗಿತ್ತು ದರೋಡೆ?

ಮಂಗಳೂರಿನಲ್ಲಿ (Mangalore news) ಕಮಿಷನರೆಟ್ ವ್ಯಾಪ್ತಿಯಲ್ಲಿ ಖತರ್ನಾಕ್ ಚಡ್ಡಿ ಗ್ಯಾಂಗ್ (Chaddi gang) ತನ್ನ ಬಾಲ ಬಿಚ್ಚಿದೆ. ಮಂಗಳೂರು ಪೊಲೀಸ್‌ ಆಯುಕ್ತಾಲಯದ ವ್ಯಾಪ್ತಿಯಲ್ಲಿ ಮತ್ತೊಂದು ದರೋಡೆ (Robbery Case) ನಡೆದಿದ್ದು, ವೃದ್ಧ ದಂಪತಿ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದರೋಡೆ ಮಾಡಲಾಗಿದೆ.

ವಿಕ್ಟರ್ ಮತ್ತು ಪೆಟ್ರೀಷಾ ದಂಪತಿ ಹಲ್ಲೆಗೊಳಗಾದವರು. ರಾತ್ರಿ 2 ಗಂಟೆ ಹೊತ್ತಿಗೆ ಕಿಟಕಿಯ ಸರಳು ಕತ್ತರಿಸಿ ಈ ಚಡ್ಡಿ ಗ್ಯಾಂಗ್‌ ದಂಪತಿಯ ಮನೆಗೆ ನುಗ್ಗಿದೆ. ಪ್ರತಿರೋಧಿಸಿದ ವೃದ್ಧ ದಂಪತಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಚಿನ್ನಾಭರಣ, ನಗದು ಲೂಟಿ ಮಾಡಿದೆ. 4 ಜನ ದುಷ್ಕರ್ಮಿಗಳ ತಂಡ ಮನೆಗೆ ನುಗ್ಗಿತ್ತು.

ಘಟನೆಯಲ್ಲಿ ವಿಕ್ಟರ್ ಅವರಿಗೆ ಗಂಭೀರ ಗಾಯಗಳಾಗಿವೆ. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೆಯಲ್ಲಿದ್ದ ಕಾರನ್ನು ಕೂಡ ದುಷ್ಕರ್ಮಿಗಳು ಕದ್ದೊಯ್ದಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಚಡ್ಡಿ ಟಿಶರ್ಟ್‌ ಧರಿಸಿ ಬರುವ ಈ ಗ್ಯಾಂಗ್‌ನಲ್ಲಿ 4-5 ಜನರಿದ್ದಾರೆ. ಒಬ್ಬಾತ ರಸ್ತೆಯ ಬದಿಯಲ್ಲಿ ಅವಿತು ಕೂತು ಒಳಗಿದ್ದವರಿಗೆ ಸಿಗ್ನಲ್‌ ಕೊಟ್ಟರೆ, ಇನ್ನ ಮೂವರು ಒಳಗೆ ನುಗ್ಗಿ ಕಳವು, ದರೋಡೆ ಮಾಡುತ್ತಾರೆ ಎಂದು ಗೊತ್ತಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ನಾಳೆಗೂ ಮಳೆ ಮುನ್ನೆಚ್ಚರಿಕೆ; ಸೆ.30ರವರೆಗೆ ಈ ಪ್ರವಾಸಿ ತಾಣಗಳಲ್ಲಿ ಟ್ರಕ್ಕಿಂಗ್‌ ನಿಷೇಧ

Karnataka Weather Forecast : ಬುಧವಾರವೂ ಗುಡುಗು ಸಹಿತ ಭಾರಿ ಮಳೆಯಾಗುವ (Heavy rain alert) ಸಾಧ್ಯತೆ ಇದೆ. ಚಿಕ್ಕಮಗಳೂರಿನಲ್ಲಿ ಅಬ್ಬರಿಸುತ್ತಿರುವ ಮಳೆ ಕಾರಣಕ್ಕೆ ಎರಡೂವರೆ ತಿಂಗಳು ಕೆಲವು ಪ್ರವಾಸಿತಾಣಗಳಿಗೆ ಟ್ರಕ್ಕಿಂಗ್‌ ನಿಷೇಧಿಸಲಾಗಿದೆ.

VISTARANEWS.COM


on

By

karnataka weather Forecast
Koo

ಚಿಕ್ಕಮಗಳೂರು/ಬೆಂಗಳೂರು: ರಾಜ್ಯಾದ್ಯಂತ ನೈರುತ್ಯ ಮುಂಗಾರು (karnataka Weather Forecast) ಸಕ್ರಿಯವಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯು (Heavy Rain Alert) ಅಬ್ಬರಿಸುತ್ತಿದ್ದು, ಆಗುಂಬೆ 33, ಅಂಕೋಲಾ 26, ಕಾರವಾರ 23, ಹಾಗೂ ಗೇರ್ಸೊಪ್ಪ 21 ಸೆಂ.ಮೀ ಮಳೆಯಾಗಿದೆ. ಇನ್ನೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೆಪ್ಟೆಂಬರ್ 30ರವರೆಗೆ ಚಾರಣಕ್ಕೆ ನಿಷೇಧಿಸಲಾಗಿದೆ.

ಚಿಕ್ಕಮಗಳೂರಿನ ಬಲ್ಲಾಳ ರಾಯನ ದುರ್ಗ, ರಾಣಿಝರಿ, ಬಂಡಾಜೆ ಫಾಲ್ಸ್ ಟ್ರಕ್ಕಿಂಗ್‌ಗೆ ನಿರ್ಬಂಧ ಹಾಕಲಾಗಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಭಾರಿ ಮಳೆಯಿಂದಾಗಿ ನೀರಿನ ಹರಿವು ಹೆಚ್ಚಳಗೊಂಡಿದೆ. ಪ್ರವಾಸಿಗರು ಚಾರಣದ ವೇಳೆ ಅಪಾಯಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಿದೆ. ಪ್ರವಾಸಿಗರ ಹಿತದೃಷ್ಟಿಯಿಂದ ಮೂಡಿಗೆರೆ ತಾಲೂಕಿನ ಬಲ್ಲಾಳ ರಾಯನ ದುರ್ಗ ಪ್ರವಾಸಿ ತಾಣ, ಕಳಸ ತಾಲೂಕಿನ ಬಂಡಾಜೆ ಫಾಲ್ಸ್‌ಗೆ ಕೊಪ್ಪ ವಿಭಾಗದ ಅರಣ್ಯ ಇಲಾಖೆ ಈ ಕ್ರಮಕೈಗೊಂಡಿದೆ.

ಇದನ್ನೂ ಓದಿ: Muharram 2024: ರಾಯಚೂರಿನಲ್ಲಿ ಮೊಹರಂನಲ್ಲಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ವ್ಯಕ್ತಿ ಸುಟ್ಟು ಭಸ್ಮ

ಶಿವಮೊಗ್ಗದಲ್ಲಿ ಕುಸಿದು ಬಿದ್ದ ಮನೆ

ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಮನೆಯೊಂದು ಕುಸಿದು ಬಿದ್ದಿದೆ. ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಕುಸ್ಕೂರು ಗ್ರಾಮದಲ್ಲಿ ಘಟನೆ ನಡೆದಿದೆ. ಮಂಜಾನಾಯ್ಕ ಎಂಬುವವರಿಗೆ ಸೇರಿದ ಮನೆ ಕುಸಿದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಮನೆಯಲ್ಲಿದ್ದ ಗೃಹ ಬಳಕೆ ವಸ್ತುಗಳು ನೀರುಪಾಲಾಗಿವೆ.

ಉಡುಪಿಯಲ್ಲಿ ಮಳೆಗೆ ಉಕ್ಕಿ ಹರಿದ ಬ್ರಹ್ಮಾವರ ಮಡಿಸಾಲು ಹೊಳೆ

ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಳೆಗೆ ಬ್ರಹ್ಮಾವರ ಮಡಿಸಾಲು ಹೊಳೆ ಉಕ್ಕಿ ಹರಿದಿದೆ. ಇದರಿಂದಾಗಿ ಆರೂರು ಬೆಳ್ಮಾರು ನೆರೆ ಹಾವಳಿ ಸೃಷ್ಟಿಯಾಗಿದೆ. ನೂರಾರು ಎಕರೆ ಕೃಷಿ ಭೂಮಿ ನೆರೆ ನೀರಿನಲ್ಲಿ ಮುಳುಗಿ ನಷ್ಟವಾಗಿದೆ. ಮಂಗಳವಾರ ಮಧ್ಯಾಹ್ನದ ನಂತರ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆ ಆಗಿದೆ. ಆದರೂ ಘಟ್ಟ ಪ್ರದೇಶದಿಂದ ಹರಿದು ಬರುತ್ತಿರುವ ನೀರಿನಿಂದಾಗಿ ನೆರೆ ಸೃಷ್ಟಿಯಾಗುತ್ತಿದೆ.

ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ

ಮುಂದಿನ 24 ಗಂಟೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಗಾಳಿಯ ವೇಗವು 30-40 ಕಿಮೀ ತಲುಪುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಜತೆಗೆ ನಿರಂತರ ಗಾಳಿಯ ವೇಗವು 40-50 ಕಿಮೀ ಇರಲಿದೆ. ಒಳನಾಡಿನ ಬೆಳಗಾವಿ ಮತ್ತು ಹಾಸನ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯು ಅಬ್ಬರಿಸಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆ ಎಫೆಕ್ಟ್‌-ಮಲಗಿದ್ದ‌ ವ್ಯಕ್ತಿ ಮೇಲೆ ಬಿದ್ದ ಗೋಡೆ; ಮರ ಬಿದ್ದು ಕಾರು ಜಖಂ, ಚಾಲಕ ಜಸ್ಟ್‌ ಮಿಸ್‌

Karnataka Rain : ಹಾಸನದಲ್ಲಿ ಭಾರಿ ಮಳೆಗೆ (Rain Effect) ತೆಂಗಿನ ಮರ ಧರೆಗುರುಳಿ ಕಾರು ಜಖಂಗೊಂಡರೆ, ಹಾವೇರಿಯಲ್ಲಿ ಮಲಗಿದ್ದ ವ್ಯಕ್ತಿ ಮೇಲೆ ಗೋಡೆ ಕುಸಿದಿದೆ. ನಾವುಂದ ಬಡಾಕೆರೆಯಲ್ಲಿ ನೆರೆ ಸೃಷ್ಟಿಯಾಗಿದ್ದು, ಜನರನ್ನು ಬೋಟ್‌ ಮೂಲಕ ರಕ್ಷಣೆ ಮಾಡಲಾಗಿದೆ.

VISTARANEWS.COM


on

By

Karnataka Rain
Koo

ಹಾಸನ/ಹಾವೇರಿ : ಹಾಸನದಲ್ಲಿ ಭಾರಿ ವರ್ಷಧಾರೆಗೆ (Karnataka Rain) ತೆಂಗಿನ ಮರ ಧರೆಗುರುಳಿದೆ. ಏಕಾಏಕಿ ಮಾರುತಿ ಓಮ್ನಿ ಕಾರಿನ ಮೇಲೆ‌ ಮರವು ಮುರಿದು ಬಿದ್ದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಗ್ರಾಮದಲ್ಲಿ ಘಟನೆ ನಡೆದಿದೆ. ಯಸಳೂರು ಪೊಲೀಸ್ ಠಾಣೆ ಎದುರು ಚಾಲಕ ಕಾರು ಪಾರ್ಕಿಂಗ್ ಮಾಡಿ ತೆರಳಿದ್ದರು. ಈ ವೇಳೆ ಏಕಾಏಕಿ ಯಸಳೂರು ಪೊಲೀಸ್ ಠಾಣೆ ಆವರಣದಲ್ಲಿದ್ದ ತೆಂಗಿನಮರ ಕಾರಿನ ಮೇಲೆ ಬಿದ್ದು ಜಖಂಗೊಂಡಿದೆ. ಅದೃಷ್ಟವಶಾತ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಾವೇರಿಯಲ್ಲಿ ಮನೆಗಳ ಗೋಡೆ ಕುಸಿತ

ಹಾವೇರಿ: ಜಿಟಿ ಜಿಟಿ ಮಳೆಗೆ ಎರಡು ಮನೆಗಳ ಗೋಡೆ ಕುಸಿದಿದೆ. ಹಾವೇರಿಯ ರಟ್ಟಿಹಳ್ಳಿ ತಾಲೂಕಿನ ‌ಮೇದೂರು ಗ್ರಾಮದ ರೇಷ್ಮಾ ನ್ಯಾಮತಿ ಎಂಬುವರ ಮನೆಗೆ ಹಾನಿಯಾಗಿದೆ. ಶಿಗ್ಗಾವಿ ತಾಲೂಕಿನ ಕುನ್ನೂರು ಗ್ರಾಮದ ಮಹಾದೇವಿ ತಳವಾರ ಎಂಬುವರ ಮನೆ ಗೋಡೆ ಕುಸಿದು ಬಿದ್ದಿದೆ. ಮನೆಯಲ್ಲಿ ‌ಮಲಗಿದ್ದ ವೇಳೆ ಈ ಅವಘಡ ನಡೆದಿದೆ. ರಾಮಪ್ಪ ತಳವಾರ ಎಂಬುವರ ಮೇಲೆ ಗೋಡೆ ಕುಸಿದು ಗಾಯಗೊಂಡಿದ್ದಾದೆ. ರಾಮಪ್ಪ ಗಣೇಶನ ಮೂರ್ತಿಗಳನ್ನು ತಯಾರಿಸಿ ಜೀವನ ನಡೆಸುತ್ತಿದ್ದರು. ಮನೆ ಗೋಡೆ ಕುಸಿದ ಹಿನ್ನೆಲೆಯಲ್ಲಿ 300 ಗಣೇಶನ ಮೂರ್ತಿಗಳಿಗೆ ಹಾನಿಯಾಗಿದೆ.

ನಾವುಂದ ಬಡಾಕೆರೆಯಲ್ಲಿ ನೆರೆ; ಬೋಟ್‌ ಮೂಲಕ ರಕ್ಷಣೆ

ಉಡುಪಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ನಾವುಂದ ಬಡಾಕೆರೆಯಲ್ಲಿ ಮತ್ತೆ ನೆರೆ ಸೃಷ್ಟಿಯಾಗಿದೆ. ಬೈಂದೂರು ತಾಲೂಕಿನ ನಾವುಂದದಲ್ಲಿ ಮಳೆಗಾಲದಲ್ಲಿ 4 ಬಾರಿ ನೆರೆ ಕಟ್ಟಿಟ್ಟ ಬುತ್ತಿಯಾಗಿದೆ. ನೆರೆಯಿಂದಾಗಿ ನೂರಾರು ಎಕರೆ ಕೃಷಿ ಭೂಮಿ ಜಲಾವೃತಗೊಂಡಿದೆ. ನಾವುಂದ ಬಡಾಕೆರೆಯಲ್ಲಿ ಹಲವಾರು ಮನೆಗಳು ಜಲಾವೃತಗೊಂಡಿದ್ದು, ದೋಣಿ ಮೂಲಕ ರಕ್ಷಣೆ ಮಾಡಲಾಗಿದೆ.

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನಾದ್ಯಂತ ನೆರೆ ಹಾವಳಿ ಸೃಷ್ಟಿಯಾಗಿದೆ. ಸೀತಾ ನದಿ ತುಂಬಿ ಹರಿಯುತ್ತಿದ್ದು, ಕೋಟ ಬನ್ನಾಡಿ ಭಾಗದಲ್ಲಿ ನೆರೆಯಾಗಿದೆ. ಹೀಗಾಗಿ ಬನ್ನಾಡಿ, ಬೇಳೂರು, ಕೋಟ ವ್ಯಾಪ್ತಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದರು. ಜತೆಗೆ ಡಿಸಿ ವಿದ್ಯಾಕುಮಾರಿ ,ಸಿಇಒ ಪ್ರತೀಕ್ ಬಾಯಲ್ ಸಾಥ್ ನೀಡಿದರು. ಶಿರಿಯಾರದಲ್ಲಿ ನೆರೆಪೀಡಿತರನ್ನು ಎತ್ತರದ ಪ್ರದೇಶಕ್ಕೆ ಶಿಫ್ಟ್ ಮಾಡಲಾಯಿತು.

ಭಾರಿ ಮಳೆಗೆ ಬಾಯ್ಬಿಟ್ಟ ಭೂಮಿ!

ಭಾರಿ ಮಳೆಗೆ ಏಕಾಏಕಿ ಮನೆಯೊಂದರ ಪಕ್ಕ ಅಪಾಯಕಾರಿ ಗುಂಡಿ ನಿರ್ಮಾಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ರಾಜಾರಾಂಪುರ ಕಾಲನಿಯಲ್ಲಿ ಘಟನೆ ನಡೆದಿದೆ. ರಾಜಾರಾಂಪರ ಕಾಲನಿ ನಿವಾಸಿ ವಿಶೇಷ ಚೇತನ ಬಾಳಪ್ಪ ಎಂಬುವವರ ಮನೆ ಪಕ್ಕ ಸುಮಾರು ಒಂದು ಫೀಟ್ ಅಂತರದಲ್ಲೇ ಭೂಮಿ ಬಾಯ್ಬಿಟ್ಟಿದೆ. ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಸುಮಾರು 15-20ಫೀಟ್ ಆಳವಾಗದ ಸುರಂಗದ ರೀತಿಯ ಗುಂಡಿ ನಿರ್ಮಾಣವಾಗಿದೆ. ಜತೆಗೆ ಗುಂಡಿ ಒಳಗಿನ ಸುರಂಗದಿಂದ ನೀರು ಉಕ್ಕಿ ಬರುತ್ತಿದೆ. ಅಪಾಯದಂಚಿನಲ್ಲಿರುವ ಸಂಪಾಜೆ ಗ್ರಾಮದ ನಿವಾಸಿ ಬಾಳಪ್ಪ ಮನೆಯವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ.

ಕೆರೆಯಂತಾದ ರೈಲ್ವೆ ಅಂಡರ್‌ ಪಾಸ್‌

ರಾಯಚೂರಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ನೀರು ನಿಂತು ರೈಲ್ವೆ ಅಂಡರ್ ಪಾಸ್ ಕೆರೆಯಂತಾಗಿತ್ತು. ಕರೇಕಲ್ ಗ್ರಾಮದ ರೈಲ್ವೆ ಅಂಡರ್ ಪಾಸ್‌ನಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡಿದರು. ಇತ್ತ ವರದಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗುತ್ತಿದ್ದು, ಜೀವದ ಹಂಗು ತೊರೆದು ಜನರು ಬ್ರಿಜ್ಡ್ ಕಂ ಬ್ಯಾರೇಜ್ ಮೇಲೆ ವಾಹನ ಚಲಾಯಿಸುತ್ತಿದ್ದಾರೆ. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಕಳಸೂರು ಗ್ರಾಮದ ಬ್ರಿಜ್ಡ್ ಕಂ ಬ್ಯಾರೇಜ್ ಮೇಲೆ ನೀರು ಹರಿಯುತ್ತಿದೆ. ಕಳಸೂರು ಮತ್ತು ಕೊಳೂರ ನಡುವೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ.

ಅವೈಜ್ಞಾನಿಕ ಕಾಮಗಾರಿಯಿಂದ ರಸ್ತೆ ಕುಸಿತ

ಅವೈಜ್ಞಾನಿಕ ಕಾಮಗಾರಿಯಿಂದ ಭಾರಿ ಮಳೆಗೆ ರಸ್ತೆ ಕುಸಿದಿದೆ. ನಿಂತ ಜಾಗದಲ್ಲಿಯೇ ಲಾರಿಯೊಂದು ಒಂದು ಬದಿಗೆ ಜಾರಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಸರಕು ತುಂಬಿದ್ದ ಲಾರಿ ರಸ್ತೆ ಪಕ್ಕಕ್ಕೆ ಜಾರಿದ್ದು, ತಡೆಗೋಡೆ ಇಲ್ಲದಿದ್ದರೆ ಪ್ರಪಾತಕ್ಕೆ ಉರುಳಿ ಬೀಳುವ ಸಾಧ್ಯತೆ ಇದೆ. ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ. ಹಾಸನ ರಾಷ್ಟ್ರೀಯ ಹೆದ್ದಾರಿ 75 ರ ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆ ಬಳಿ ಘಟನೆ ನಡೆದಿದೆ. ಸ್ಥಳಕ್ಕೆ ಸಕಲೇಶಪುರ ಎಸಿ ಶೃತಿ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಭಾರಿ ಮಳೆಗೆ ಗ್ರಾಮದ ಮುಖ್ಯ ರಸ್ತೆ ನದಿಯಂತಾಗಿತ್ತು. ಚಿಕ್ಕಮಗಳೂರು ತಾಲೂಕಿನ ಬಾಸಪುರ ಗ್ರಾಮದಲ್ಲಿ ಗುಡ್ಡದಿಂದ ರಸ್ತೆಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಬಾಸಾಪುರ ಸೇರಿ ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ತೋಟಕ್ಕೆ ನೀರು ನುಗ್ಗಿ ಕಾಫಿ ಬೆಳೆ ನಾಶವಾಗಿದೆ.

Rain Effect.. karnataka Rain Effect

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Rain Effect : ಭಾರಿ ಮಳೆಗೆ ಶಿರೂರು ಗುಡ್ಡ ಕುಸಿತ; ಮಣ್ಣಿನಡಿ ಸಿಲುಕಿದ್ದ ಮಹಿಳೆ ಮೃತದೇಹ ಪತ್ತೆ, ಉಳಿದವರಿಗಾಗಿ ಹುಡುಕಾಟ

Rain Effect : ಉತ್ತರಕನ್ನಡದಲ್ಲಿ ಭಾರಿ ಮಳೆಗೆ (Karnataka Rain Effect) ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಬಳಿ ಭಾರೀ ಗುಡ್ಡಕುಸಿತ (Karnataka Rain) ಉಂಟಾಗಿದ್ದು, ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ.

VISTARANEWS.COM


on

By

Rain Effect
Koo

ಉತ್ತರಕನ್ನಡ: ಉತ್ತರಕನ್ನಡದಲ್ಲಿ ಭಾರಿ ಮಳೆಗೆ (Karnataka Rain Effect) ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಬಳಿ ಭಾರೀ ಗುಡ್ಡಕುಸಿತ (Karnataka Rain) ಉಂಟಾಗಿತ್ತು. ಧಾರಾಕಾರ ಮಳೆಯಿಂದಾಗಿ ಹೆದ್ದಾರಿ ಪಕ್ಕದ ಗುಡ್ಡ ಸಡಿಲಗೊಂಡು, ಅಂಕೋಲಾ ತಾಲೂಕಿನ ಶಿರೂರು ಬಳಿ ಅಂಗಡಿಯೊಂದರ ಮೇಲೆ ಬಿದ್ದಿತ್ತು. ಇದೀಗ ಮಣ್ಣಿನಡಿ ಸಿಲುಕಿ ಮೃತಪಟ್ಟ ಮಹಿಳೆಯೊಬ್ಬರ ಮೃತದೇಹ (Rain Effect) ಪತ್ತೆಯಾಗಿದೆ.

ಉತ್ತರ ಕನ್ನಡದ ಅಂಕೋಲಾ ಗುಡ್ಡ ಕುಸಿತ ಪ್ರದೇಶಕ್ಕೆ ಕುಮಟಾ ಎಸಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಬಳಿ ಗುಡ್ಡ ಕುಸಿದಿದೆ. ಗುಡ್ಡದ ಮಣ್ಣಿನಡಿ 10ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ ಇದ್ದು, ಒಂದೇ ಕುಟುಂಬದ ಐವರು ಸೇರಿ ಹತ್ತಕ್ಕೂ ಅಧಿಕ ಮಂದಿ ಕಣ್ಮರೆಯಾಗಿದ್ದಾರೆ ಎನ್ನಲಾಗಿದೆ. ಗುಡ್ಡ ಕುಸಿದ ರಭಸಕ್ಕೆ ನದಿಗೆ 2 ಗ್ಯಾಸ್ ಟ್ಯಾಂಕರ್‌ಗಳು ಕೊಚ್ಚಿ ಹೋಗಿದೆ. ಗುಡ್ಡದ ಕೆಳಗಿದ್ದ ಲಾರಿ, ಮತ್ತೊಂದು ಟ್ಯಾಂಕರ್‌ ಹಾಗೂ ಚಾಲಕರು ಪಾರಾಗಿದ್ದಾರೆ.

ಅಂಕೋಲಾ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಹಿತಿ ನೀಡಿದ್ದಾರೆ. ಅವಘಡದಲ್ಲಿ 7 ಮಂದಿ ಸಾವನ್ನಪ್ಪಿರಬಹುದು, ಆದರೆ ಇನ್ನೂ ಕೂಡಾ ಖಚಿತ ಮಾಹಿತಿ ಬರಬೇಕಿದೆ ಎಂದಿದ್ದಾರೆ. ಸದ್ಯ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಎಷ್ಟು ಸಾವಾಗಿದೆ ಹೇಳುವುದು ಸಾಧ್ಯವಿಲ್ಲ. ಕಾರ್ಯಾಚರಣೆಗೆ ಅಗತ್ಯ ಸಲಕರಣೆಗಳು ಸಾಕಾಗುತ್ತಿಲ್ಲ. ಹೀಗಾಗಿ ಕುಮಟಾ ಹಾಗೂ ಅಂಕೋಲಾ ಎರಡೂ ಕಡೆಯಿಂದ ಕಾರ್ಯಾಚರಣೆಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲು ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ. ಜೆಸಿಬಿ, ಹಿಟಾಚಿ ಮತ್ತಿತರ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುವುದು ಎಂದರು.

ಮಳೆ ನಡುವೆಯೂ ಶೋಧ ಕಾರ್ಯ

ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ಐವರು ಸೇರಿ 7 ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ ಶಾಂತಿ ನಾಯ್ಕ ಎಂಬ ಮಹಿಳೆಯ ಶವ ಪತ್ತೆಯಾಗಿದ್ದು, ಮಣ್ಣಿನ ಅಡಿ ಸಿಲುಕಿರುವ ಇನ್ನೂ ಆರು ಮಂದಿಗಾಗಿ ಶೋಧ ನಡೆಯುತ್ತಿದೆ.

ಮಳೆ ನಡುವೆಯೂ ಬೆಳಗ್ಗೆಯಿಂದಲೂ ಜೆಸಿಬಿ ಮೂಲಕ ಮಣ್ಣು ತೆಗೆಯುವ ಕೆಲಸ ನಡೆಯುತ್ತಿದೆ. ರಕ್ಷಣಾ ಕಾರ್ಯಾಚರಣೆಗಾಗಿ ಸ್ಥಳಕ್ಕೆ ಎನ್‌ಡಿಆರ್‌ಎಫ್‌ ತಂಡ ಭೇಟಿ ನೀಡಿದೆ. ಹೆದ್ದಾರಿ ಬಂದ್ ಆಗಿದ್ದರಿಂದ ಯಲ್ಲಾಪುರ ಮಾರ್ಗವಾಗಿ ಶಿರೂರಿಗೆ ಆಗಮಿಸಿದ್ದಾರೆ. ಕಾರ್ಯಾಚರಣೆಗೆ ಧಾರಾಕಾರ ಮಳೆಯು ಅಡ್ಡಿಯಾಗುತ್ತಿದೆ. ಸ್ಥಳದಲ್ಲಿ ಪೊಲೀಸ್, ತಾಲ್ಲೂಕಾಡಳಿತದ ಅಧಿಕಾರಿಗಳು ಬೀಡುಬಿಟ್ಟಿದ್ದಾರೆ.

ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಲಾರಿಯಲ್ಲಿ ಹೊರಟ ಅಧಿಕಾರಿಗಳು

ಕಾರವಾರ ತಾಲೂಕಿನ ಅರಗಾ ಬಳಿ ನೀರು ನಿಂತು ಹೆದ್ದಾರಿ ಬಂದ್ ಆಗಿದೆ. ಅಪಾರ ಪ್ರಮಾಣದಲ್ಲಿ ನೀರು ನಿಂತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯತ್ ಸಿಇಒ ಈಶ್ವರ್ ಕಾಂದೂ ಹಾಗೂ ಎಸ್‌ಪಿ ಎಂ ನಾರಾಯಣ್ ಲಾರಿ ಮೂಲಕ ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ.

ಮಾಲೀಕರಿಗಾಗಿ ಹುಡುಕಾಟ ನಡೆಸಿದ ಶ್ವಾನ

ಇತ್ತ ಶ್ವಾನವೊಂದು ಮಣ್ಣು ಕುಸಿದ ಪ್ರದೇಶದಲ್ಲಿ ಮಾಲೀಕನನ್ನು ಹುಡುಕಾಡುತ್ತಿದೆ. ರಸ್ತೆಯಲ್ಲಿ ಅತ್ತಿಂದಿತ್ತ ಓಡಾಡುತ್ತಾ ಜನರ ಮುಖ ನೋಡಿ ಶ್ವಾನ ಮರುಗುತ್ತಿದೆ. ಟೀ ಸ್ಟಾಲ್ ಮಾಲೀಕ ಲಕ್ಷ್ಮಣ ನಾಯ್ಕಗೆ ಸೇರಿದ ಶ್ವಾನವು ಗೋಳಾಡುತ್ತಿದೆ. ಈಗಾಗಲೇ ಮಣ್ಣಿನಡಿ ಸಿಲುಕಿದ್ದ ಲಕ್ಷ್ಮಣ ಅವರ ಪತ್ನಿ ಶಾಂತಿ ನಾಯ್ಕ ಶವ ಪತ್ತೆಯಾಗಿದೆ. ಇನ್ನುಳಿದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಅಂಕೋಲಾ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ ಮಾಹಿತಿ ನೀಡಿದ್ದಾರೆ. ಒಂದು ಕುಟುಂಬದ ಐವರು, ಎದುರು ಮನೆಯ ಓರ್ವರು ಕಣ್ಮರೆಯಾಗಿದ್ದಾಗಿ ನಮಗೆ ಮಾಹಿತಿ ಇದೆ. ಈಗಾಗಲೇ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಉಳಿದವರಿಗಾಗಿ ಈಗಾಗಲೇ ಶೋಧ ಕಾರ್ಯ ನಡೆಯುತ್ತಿದೆ. ಗುಡ್ಡದ ಕೆಳಗಿದ್ದ 3 ಗ್ಯಾಸ್ ಟ್ಯಾಂಕರ್ ಪೈಕಿ ಎರಡು ನದಿಗೆ ಬಿದ್ದಿವೆ. ಎರಡು ಟ್ಯಾಂಕರ್‌ಗಳನ್ನು ಮೇಲೆತ್ತಲು ನೌಕಾನೆಲೆ ಹಾಗೂ ತಜ್ಞರ ತಂಡದೊಂದಿಗೆ ಪ್ರಯತ್ನ ನಡೆಯುತ್ತಿದೆ. ಕಾರ್ಯಾಚರಣೆಗೆ ಅಗತ್ಯ ಜೆಸಿಬಿ, ಹಿಟಾಚಿ ಸೇರಿ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಕಾರ್ಯಾಚರಣೆ ನಡೆಯುತ್ತಿರುವ ಸ್ಥಳದಿಂದ ಸಾರ್ವಜನಿಕರನ್ನು ಹೊರಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

ಭಾರಿ ಮಳೆಗೆ ವರ್ಷದ ಹಿಂದೆ ನಿರ್ಮಿಸಿದ ಸೇತುವೆ ಕುಸಿತ

ಉಡುಪಿಯ ಕುಂದಾಪುರ ತಾಲೂಕು ಹಾಲಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭರಣಕೊಳ್ಕಿಯಲ್ಲಿ ವರ್ಷದ ಹಿಂದೆ ನಿರ್ಮಿಸಿದ ಸೇತುವೆ ಭಾರಿ ಮಳೆಗೆ ಕುಸಿದಿದೆ. ಹಾಲಾಡಿಯಿಂದ ಜೋರಾಡಿ ಮುದ್ದೂರು ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ. ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಇದೆ ಸೇತುವೆಯನ್ನೇ ಬಳಸಬೇಕಿತ್ತು. ಕಳಪೆ ಕಾಮಗಾರಿ ಹಿನ್ನೆಲೆಯಲ್ಲಿ ಸೇತುವೆ ಕುಸಿದಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಸೇತುವೆ ವರ್ಷದ ಒಳಗೆ ನೀರುಪಾಲಾಗಿದೆ.

ಚಿಕ್ಕಮಗಳೂರಲ್ಲಿ ಮರ ಬಿದ್ದು ಮನೆಗಳು ಜಖಂ

ಪುನರ್ವಸು ಮಳೆ ಅಬ್ಬರಕ್ಕೆ ಚಿಕ್ಕಮಗಳೂರು ತತ್ತರಿಸಿ ಹೋಗಿದೆ. ಭಾರೀ ಗಾಳಿ-ಮಳೆಗೆ ಮರಗಳು ಧರೆಗುರುಳುತ್ತಿವೆ. ಮೂಡಿಗೆರೆ ತಾಲೂಕಿನ ಬಾಳೂರು ಗುಡ್ಡಟ್ಟಿ ಗ್ರಾಮದಲ್ಲಿ ಮನೆ ಮೇಲೆ ಮರ ಬಿದ್ದಿದೆ. ನವೀನ್, ಶೇಷಪ್ಪ ಎಂಬುವರಿಗೆ ಸೇರಿದ ಮನೆಗಳು ಜಖಂಗೊಂಡಿವೆ. ಮನೆಯಲ್ಲಿದ್ದ ಗೃಹ ಉಪಯೋಗಿ ವಸ್ತುಗಳು ನಾಶವಾಗಿವೆ. ಮೂಡಿಗೆರೆ ತಾಲೂಕಿನ ಕೆಳಗೂರು ಗ್ರಾಮದ ಮೂಲೆಮನೆ ಎಸ್ಟೇಟ್‌ನಲ್ಲಿ ಭಾರಿ ಗಾಳಿ, ಮಳೆಗೆ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದಿತ್ತು. ಪರಿಣಾಮ ಮನೆಯಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದೆ. ಮನೆಯಲ್ಲಿದ್ದ ಪೂರ್ಣಿಮಾ, ಪ್ರಣಬ್ ಎಂಬುವವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇತ್ತ ಭಾರೀ ಮಳೆಯಿಂದ ಹೇಮಾವತಿ ನದಿ ಮೈದುಂಬಿ ಹರಿಯುತ್ತಿದೆ. ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮದಲ್ಲಿ ಹುಟ್ಟುವ ಹೇಮಾವತಿ ನದಿ ಗೊರೂರು ಡ್ಯಾಂ ಮೂಲಕ ಕೆ.ಆರ್.ಎಸ್. ಡ್ಯಾಂ ಸೇರಲಿದೆ.

ತುಂಗಾ ನದಿಯಲ್ಲಿ ಮುಳುಗಿದ ಮಂಟಪ

ಮಲೆನಾಡು ಭಾಗದಲ್ಲಿ ನಿರಂತರ ವರ್ಷಧಾರೆ ಹಿನ್ನೆಲೆಯಲ್ಲಿ ತುಂಗಾ ನದಿ ಉಕ್ಕಿ ಹರಿಯುತ್ತಿದ್ದು, ಮಂಟಪ ಮುಳುಗಿದೆ. ಶಿವಮೊಗ್ಗ ನಗರ ಮಧ್ಯೆ ಸಾಗುವ ತುಂಗಾ ನದಿಗೆ ತಾಗಿಕೊಂಡಿರುವ ಮಂಟಪ ಮುಳುಗಿದೆ. ಶಿವಮೊಗ್ಗ ನಗರದ ಕೋರ್ಪಲಯ್ಯನ ಛತ್ರದ ಬಳಿಯಿರುವ ಮಂಟಪ ಸಂಪೂರ್ಣವಾಗಿ ಮುಳುಗಿದೆ. ನದಿ ಪಾತ್ರದಲ್ಲಿ ಹೆಚ್ಚು ಜನರು ಓಡಾಡದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಎಸ್‌ಪಿ ಮಿಥುನ್ ಕುಮಾರ್ ನದಿ ಪಾತ್ರದಲ್ಲಿ ಪೊಲೀಸರ ಬೀಟ್ ವ್ಯವಸ್ಥೆ ಮಾಡಿದ್ದಾರೆ.

ದತ್ತ ಮಂದಿರಕ್ಕೆ ಸುತ್ತುವರಿದ ಕೃಷ್ಣೆ

ಮಹಾರಾಷ್ಟ್ರದ ಪ್ರಸಿದ್ಧ ದೇವಸ್ಥಾನ ದತ್ತ ಮಂದಿರಕ್ಕೆ ಕೃಷ್ಣೆ ನದಿ ಸುತ್ತುವರಿದಿದೆ. ಕೊಲ್ಹಾಪುರ ಜಿಲ್ಲೆಯ ಶಿಳೋಳ‌ ತಾಲೂಕಿನ‌ ನರಸಿಂಹವಾಡಿಯಲ್ಲಿರುವ ದತ್ತ ಮಂದಿರ ಜಲಾವೃತಗೊಂಡಿದೆ. ನರಸಿಂಹವಾಡಿ ಕೃಷ್ಣಾ ಹಾಗೂ ಪಂಚಗಂಗಾ ನದಿಗಳ ಸಂಗಮಸ್ಥಾನವಾಗಿದೆ. ಜಲಾವೃತವಾಗಿದ್ದರೂ ದೇವಸ್ಥಾನಕ್ಕೆ ಭಕ್ತರ ದಂಡು ಹರಿದು ಬಂಧಿದೆ. ನಡು ಮಟ್ಟದ ನೀರಲ್ಲಿಯೇ ಪ್ರದಕ್ಷಿಣೆ ಹಾಕುತ್ತಿದ್ದಾರೆ.

ಕೋಟ ಸಾಹೇಬ್ರಕಟ್ಟೆ ರಾಜ್ಯ ಹೆದ್ದಾರಿ ಸಂಪರ್ಕ ಬಂದ್

ಉಡುಪಿಯ ಕೋಟ ಸಾಹೇಬ್ರಕಟ್ಟೆ ರಾಜ್ಯ ಹೆದ್ದಾರಿ ಸಂಪರ್ಕ ಬಂದ್ ಆಗಿದೆ. ಕೋಟ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಬನ್ನಾಡಿಹೊಳೆ ತುಂಬಿ ಹರಿದಿದೆ. ರಾಜ್ಯ ಹೆದ್ದಾರಿ ಬನ್ನಾಡಿ ಭಾಗದಲ್ಲಿ ಪ್ರತಿ ವರ್ಷವೂ ಕಾಣಿಸಿಕೊಳ್ಳುವ ನೆರೆಹಾವಳಿಯಿಂದಾಗಿ ಸಂಚಾರ ಅಸಾಧ್ಯವಾಗಿರುವ ಹಿನ್ನೆಲೆಯಲ್ಲಿ ಹೆದ್ದಾರಿ ಬಂದ್ ಮಾಡಲಾಗಿದೆ. ಸ್ಥಳಕ್ಕೆ ಕುಂದಾಪುರ ಎಸಿ ರಶ್ಮಿ ಭೇಟಿ ನೀರಿ ಪರಿಶೀಲನೆ ನಡೆಸಿದ್ದಾರೆ. ಇತ್ತ ಕುಂದಾಪುರ ವಾರಾಹಿ ಸೌಪರ್ಣಿಕ ನದಿ ಭರ್ತಿಯಾಗಿದೆ. ಕುಂದಾಪುರದ ನದಿ ಸಾಲಿನಲ್ಲಿ ನೆರೆಯ ವಾತಾವರಣ ನಿರ್ಮಾಣವಾಗಿದೆ. ಬೇಳೂರು ದೇಲಟ್ಟು ಭಾಗದಿಂದ ಜನರ ಸ್ಥಳಾಂತರ ಮಾಡಲಾಗಿದೆ. ಕುಂದಾಪುರ ಅಗ್ನಿಶಾಮಕ ದಳದ ಕಾರ್ಯಾಚರಣೆ ನಡೆಸುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

Karnataka Rain: ಉತ್ತರ ಕನ್ನಡದಲ್ಲಿ ವಿಪರೀತ ಮಳೆಯಾಗುತ್ತಿದ್ದು, ಸಾವು-ನೋವಿಗೆ ಕಾರಣವಾಗುತ್ತಿದೆ. ಶಿರೂರಿನಲ್ಲಿ ಗುಡ್ಡ ಕುಸಿತ ಉಂಟಾಗಿದ್ದರೆ, ಇತ್ತ ಕಿನ್ನರ ಗ್ರಾಮದಲ್ಲಿ ಮನೆ ಮೇಲೆ ಗುಡ್ಡ ಬಿದ್ದು, ಗೋಡೆ ಕುಸಿದು ವೃದ್ಧರೊಬ್ಬರು ಮೃತಪಟ್ಟಿದ್ದಾರೆ.

VISTARANEWS.COM


on

By

Karnataka Rain
Koo

ಉತ್ತರಕನ್ನಡ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಿನ್ನರ ಗ್ರಾಮದಲ್ಲಿ ಭಾರಿ ಮಳೆಗೆ (Karnataka Rain) ಮನೆ ಮೇಲೆ ಗುಡ್ಡ ಬಿದ್ದ ಪರಿಣಾಮ ಗೋಡೆ ಕುಸಿದಿದೆ. ಮಣ್ಣಿನಡಿ ಸಿಲುಕಿದ್ದ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ತಿಕರ್ಸ್ ಗುರವ (60) ಮೃತ ದುರ್ದೈವಿ.

ಮನೆಯ ಮೇಲೆ ಏಕಾಏಕಿ ಗುಡ್ಡ ಕುಸಿದ ಪರಿಣಾಮ ಗೋಡೆಯಡಿ ಸಿಲುಕಿದ ತಿಕರ್ಸ್‌ ತಲೆಗೆ ಗಂಭೀರ ಪೆಟ್ಟಾಗಿತ್ತು. ಏಕಾಏಕಿ ಮನೆ ಗೋಡೆ ಕುಸಿದ ಪರಿಣಾಮ ಹೊರ ಬರಲು ಆಗದೆ ಮೃತಪಟ್ಟಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಸುಮಾರು 3 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮೃತದೇಹ ಹೊರತೆಗೆದಿದ್ದಾರೆ. ಸ್ಥಳದಲ್ಲಿ ತಹಶಿಲ್ದಾರ್, ಕಾರವಾರ ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಅಧಿಕಾರಿಗಳು ದೌಡು

ಇನ್ನೂ ಉತ್ತರ ಕನ್ನಡದ ಅಂಕೋಲಾ ಗುಡ್ಡ ಕುಸಿತ ಪ್ರದೇಶಕ್ಕೆ ಕುಮಟಾ ಎಸಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಬಳಿ ಗುಡ್ಡ ಕುಸಿದಿದೆ. ಗುಡ್ಡದ ಮಣ್ಣಿನಡಿ 10ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ ಇದ್ದು, ಒಂದೇ ಕುಟುಂಬದ ಐವರು ಸೇರಿ ಹತ್ತಕ್ಕೂ ಅಧಿಕ ಮಂದಿ ಕಣ್ಮರೆಯಾಗಿದ್ದಾರೆ. ಗುಡ್ಡ ಕುಸಿದ ರಭಸಕ್ಕೆ ನದಿಗೆ 2 ಗ್ಯಾಸ್ ಟ್ಯಾಂಕರ್‌ಗಳು ಕೊಚ್ಚಿ ಹೋಗಿದೆ. ಗುಡ್ಡದ ಕೆಳಗಿದ್ದ ಲಾರಿ, ಮತ್ತೊಂದು ಟ್ಯಾಂಕರ್‌ ಹಾಗೂ ಚಾಲಕರು ಪಾರಾಗಿದ್ದಾರೆ.

ಅಂಕೋಲಾ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಹಿತಿ ನೀಡಿದ್ದಾರೆ. ಅವಘಡದಲ್ಲಿ 7 ಮಂದಿ ಸಾವನ್ನಪ್ಪಿರಬಹುದೆಂದು ಮಾಹಿತಿ ಲಭ್ಯವಾಗಿದೆ. ಇನ್ನೂ ಕೂಡಾ ಖಚಿತ ಮಾಹಿತಿ ಬರಬೇಕಿದೆ. ಸದ್ಯ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಎಷ್ಟು ಸಾವಾಗಿದೆ ಹೇಳುವುದು ಸಾಧ್ಯವಿಲ್ಲ. ಕಾರ್ಯಾಚರಣೆಗೆ ಅಗತ್ಯ ಸಲಕರಣೆಗಳು ಸಾಕಾಗುತ್ತಿಲ್ಲ. ಹೀಗಾಗಿ ಕುಮಟಾ ಹಾಗೂ ಅಂಕೋಲಾ ಎರಡೂ ಕಡೆಯಿಂದ ಕಾರ್ಯಾಚರಣೆಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲು ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ. ಜೆಸಿಬಿ, ಹಿಟಾಚಿ ಮತ್ತಿತರ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುವುದು ಎಂದರು.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

ಶಿವಮೊಗ್ಗದಲ್ಲಿ ಮನೆ ಮೇಲೆ ಮರ ಬಿದ್ದು ಹಾನಿ

ಶಿವಮೊಗ್ಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹೊಸನಗರ ತಾಲೂಕಿನ ಯಡೂರು ಗ್ರಾಮದಲ್ಲಿ ಮನೆಗೆ ಹಾನಿಯಾಗಿದೆ. ಮನೆ ಮೇಲೆ ಮರ ಬಿದ್ದು, ಚಾವಣಿ ಕುಸಿದು ಬಿದ್ದಿದೆ. ಜತೆಗೆ ನೀರು ನುಗ್ಗಿ, ಮನೆಯಲ್ಲಿರುವ ಗೃಹೋಪಯೋಗಿ ವಸ್ತುಗಳು ನೀರುಪಾಲಾಗಿದೆ. ನಿಂಗಮ್ಮ ಎಂಬುವರಿಗೆ ಸೇರಿದ ಮನೆಯು ಹಾನಿಯಾಗಿದ್ದು, ಸೂಕ್ತ ಪರಿಹಾರಕ್ಕೆ ಒತ್ತಾಯಿಸಿದ್ದಾರೆ.

ಹಾಸನದಲ್ಲಿ ಕರೆಂಟ್‌ ಕಟ್‌

ಹಾಸನ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಅಪಾರ ಪ್ರಮಾಣದ ಹಾನಿಯಾಗಿದೆ. ಸಕಲೇಶಪುರ ತಾಲೂಕಿನ ಮಾವಿನೂರು, ಕಾಗಿನೆರೆ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ವಿದ್ಯುತ್ ಇಲ್ಲದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಮತ್ತೊಂದು ಕಡೆ ಸಕಲೇಶಪುರ ತಾಲೂಕಿನ ಗಡಿ ಗ್ರಾಮ ತಂಬಲಗೇರಿಯಲ್ಲಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದೆ. ಪುಟ್ಟೇಗೌಡ ಎಂಬುವವರ ಸೇರಿದ ಮನೆಯು ಹಾನಿಯಾಗಿದೆ. ಜತೆಗೆ ಗದ್ದೆಗಳಿಗೆ ಮಣ್ಣು ಕುಸಿದು, ಭತ್ತ ಸಸಿಗಳು ಮಣ್ಣಿನಡಿ ಸಿಲುಕಿದೆ. ತಂಬಲಗೇರಿ ಗ್ರಾಮದ ಲೋಕೇಶ್ ಹಾಗೂ ಇತರೆ ಗ್ರಾಮಸ್ಥರಿಗೆ ಸೇರಿದ ಭತ್ತದ ಗದ್ದೆಗಳು ಕೆರೆಯಂತಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Paris Olympics 2024
ಪ್ರಮುಖ ಸುದ್ದಿ35 mins ago

Paris Olympics 2024 : ಟೋಕಿಯೊದಲ್ಲಿ ನಡೆದ 2020ರ ಒಲಿಂಪಿಕ್ಸ್​ನಲ್ಲಿ ಭಾರತ ಗೆದ್ದ ಪದಕಗಳ ಸಂಖ್ಯೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Dog Ethnicwear
ಫ್ಯಾಷನ್39 mins ago

Dog Ethnicwear: ನಾಯಿಗಳಿಗೂ ಬಂತು ಎಥ್ನಿಕ್‌ ವೇರ್ಸ್! ಎಷ್ಟು ಮುದ್ದಾಗಿ ಕಾಣಿಸುತ್ತಿವೆ!

SIM Cards
ಗ್ಯಾಜೆಟ್ಸ್44 mins ago

SIM Cards: ಮಿತಿ ಮೀರಿ ಮೊಬೈಲ್‌ ಸಿಮ್ ಹೊಂದಿದ್ದೀರಾ? ಕಾದಿದೆ ಭಾರಿ ದಂಡ, ಶಿಕ್ಷೆ!

Assembly Session
ಕರ್ನಾಟಕ49 mins ago

Assembly Session: ಲೂಟಿಕೋರರ ಪಿತಾಮಹ ನೀನು: ಸದನದಲ್ಲಿ ಅಶ್ವತ್ಥ್ ನಾರಾಯಣ ವಿರುದ್ಧ ಗುಡುಗಿದ ಡಿಕೆಶಿ!

Ananth Ambani Fashion
ಫ್ಯಾಷನ್60 mins ago

Ananth Ambani Fashion: ಅನಂತ್‌ ಅಂಬಾನಿ ಬಳಿ ಇದೆ ಡೈಮಂಡ್‌ ಬ್ರೂಚ್‌ಗಳ ಕಲೆಕ್ಷನ್‌! ಇವುಗಳ ಮೌಲ್ಯ ಎಷ್ಟಿರಬಹುದು?

Entrepreneurship Development Training Concluding Ceremony at Kanakagiri
ಕೊಪ್ಪಳ1 hour ago

Koppala News: ಕನಕಗಿರಿಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ

Pooja Khedkar
ದೇಶ1 hour ago

Pooja Khedkar: ಪೂಜಾ ಖೇಡ್ಕರ್‌ಗೆ ಮತ್ತೊಂದು ಬಿಗ್‌ ಶಾಕ್‌; ತರಬೇತಿಗೆ ತಡೆ, ಅಕಾಡೆಮಿಗೆ ವಾಪಸ್‌

Clearance of footpaths in Shira
ತುಮಕೂರು1 hour ago

Shira News: ಶಿರಾದಲ್ಲಿ ಫುಟ್‌ಪಾತ್‌ಗಳ ತೆರವು ಕಾರ್ಯಾಚರಣೆ

karnataka weather Forecast
ಮಳೆ1 hour ago

Karnataka Weather : ನಾಳೆಗೂ ಮಳೆ ಮುನ್ನೆಚ್ಚರಿಕೆ; ಸೆ.30ರವರೆಗೆ ಈ ಪ್ರವಾಸಿ ತಾಣಗಳಲ್ಲಿ ಟ್ರಕ್ಕಿಂಗ್‌ ನಿಷೇಧ

R Ashok demands that Valmiki Development Corporation scam should be investigated by CBI and CM Siddaramaiah should resign
ಕರ್ನಾಟಕ1 hour ago

Assembly Session: ಸರ್ಕಾರಕ್ಕೆ ವಾಲ್ಮೀಕಿ ಜನಾಂಗದ ಶಾಪ ತಟ್ಟಬಾರದೆಂದರೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ; ಆರ್‌. ಅಶೋಕ್‌ ಆಗ್ರಹ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ7 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ8 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 day ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌