Pooja Khedkar: ಯಾರು ಈ ಪೂಜಾ ಖೇಡ್ಕರ್? ವಿಐಪಿ ದರ್ಬಾರ್ ನಡೆಸಿ ಸಿಕ್ಕಿಹಾಕಿಕೊಂಡ ಐಎಎಸ್ ಅಧಿಕಾರಿ! - Vistara News

ಕ್ರೈಂ

Pooja Khedkar: ಯಾರು ಈ ಪೂಜಾ ಖೇಡ್ಕರ್? ವಿಐಪಿ ದರ್ಬಾರ್ ನಡೆಸಿ ಸಿಕ್ಕಿಹಾಕಿಕೊಂಡ ಐಎಎಸ್ ಅಧಿಕಾರಿ!

ವಿಐಪಿ ದರ್ಬಾರ್ ನಡೆಸಿದ ಪೂಜಾ ಖೇಡ್ಕರ್ (Pooja Khedkar) ಈಗ ಅಕ್ರಮ ಪ್ರಮಾಣ ಪತ್ರ ಪಡೆದ ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಇವರು ಕಠಿಣವಾದ ಯುಪಿಎಸ್ ಸಿ ಪರೀಕ್ಷೆಯಲ್ಲಿ 841ನೇ ರಾಂಕ್ ಗಳಿಸಿದ್ದರು. ಆದರೆ ಅವರು ತಮ್ಮ ಐಎಎಸ್ ಪರೀಕ್ಷೆಗಳಲ್ಲಿ ತೇರ್ಗಡೆಯಾಗಿ ಸೇವೆಗೆ ಆಯ್ಕೆಯಾಗಲು ನಕಲಿ ಪ್ರಮಾಣಪತ್ರಗಳನ್ನು ಸಲ್ಲಿಸಿದ್ದರು ಎಂದು ಆರೋಪಿಸಲಾಗಿದೆ. ಈ ಅಧಿಕಾರಿಯ ಶೋಕಿ‌ ಜೀವನ ಶೈಲಿ ಈಗ ಅವರಿಗೇ ಮುಳುವಾಗಿದೆ!

VISTARANEWS.COM


on

Pooja Khedkar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಧಿಕಾರ ದುರುಪಯೋಗದ ಆರೋಪದ ಮೇಲೆ ಪುಣೆಯಿಂದ (pune) ವಾಶಿಮ್‌ಗೆ (Washim) ವರ್ಗಾವಣೆಗೊಂಡಿರುವ ಮಹಾರಾಷ್ಟ್ರದ (maharastra) ಪ್ರೊಬೇಷನರಿ ಐಎಎಸ್ ಅಧಿಕಾರಿ (probationary IAS officer ) ಪೂಜಾ ಖೇಡ್ಕರ್ (Pooja Khedkar) ಅವರು ನಾಗರಿಕ ಸೇವಾ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ನಕಲಿ ಅಂಗವೈಕಲ್ಯ ಮತ್ತು ಇತರೆ ಹಿಂದುಳಿದ ವರ್ಗ (obc) ಪ್ರಮಾಣ ಪತ್ರಗಳನ್ನು ಸಲ್ಲಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಕೆಂಪು- ನೀಲಿ ಬೀಕನ್ ಲೈಟ್ ಮತ್ತು ವಿಐಪಿ ನಂಬರ್ ಪ್ಲೇಟ್‌ನೊಂದಿಗೆ ಖಾಸಗಿ ಆಡಿ ಕಾರನ್ನು ಬಳಸಿದ್ದಕ್ಕಾಗಿ ತನಿಖೆಗೆ ಖೇಡ್ಕರ್ ಅವರನ್ನು ಒಳಪಡಿಸಿದಾಗ ಅವರು ಒಬಿಸಿ ಮತ್ತು ದೃಷ್ಟಿಹೀನ ವರ್ಗಗಳ ಅಡಿಯಲ್ಲಿ ಸಿವಿಲ್ ಸರ್ವೀಸ್ ಪರೀಕ್ಷೆಗೆ ಹಾಜರಾಗಿದ್ದರು ಮತ್ತು ಮಾನಸಿಕ ಅಸ್ವಸ್ಥತೆಯ ಪ್ರಮಾಣಪತ್ರವನ್ನೂ ಸಲ್ಲಿಸಿದ್ದಾರೆ ಎನ್ನುವುದು ಬಯಲಾಗಿದೆ.

ಏಪ್ರಿಲ್ 2022ರಲ್ಲಿ ಖೇಡ್ಕರ್ ಅವರ ಅಂಗವೈಕಲ್ಯ ಪ್ರಮಾಣಪತ್ರದ ಪರಿಶೀಲನೆಗಾಗಿ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನಲ್ಲಿ (AIIMS) ವರದಿ ಮಾಡಲು ಕೇಳಲಾಯಿತು. ಆದರೆ ಕೋವಿಡ್ ಸೋಂಕನ್ನು ಉಲ್ಲೇಖಿಸಿ ಅವರು ತಪಾಸಣೆಗೆ ಹಾಜರಾಗಲಿಲ್ಲ. ಅನಂತರ, ಅವರು ಖಾಸಗಿಯಾಗಿ ಎಂಆರ್ ಐ ಸ್ಕ್ಯಾನಿಂಗ್ ಪ್ರಮಾಣಪತ್ರವನ್ನು ತಯಾರಿಸಿದ್ದಾರೆ. ಬಳಿಕ ಅವರ ಐಎಎಸ್ ನೇಮಕಾತಿಯನ್ನು ದೃಢೀಕರಿಸಲು ಸ್ವೀಕರಿಸಲಾಯಿತು.

ಪೂಜಾ ಖೇಡ್ಕರ್ ಅವರ ತಂದೆ ದಿಲೀಪ್ ಖೇಡ್ಕರ್ ಅವರು ರಾಜ್ಯ ಸರ್ಕಾರದ ಮಾಜಿ ಅಧಿಕಾರಿ. ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಾಗ ಅವರು ತಮ್ಮ ಆಸ್ತಿ ಮೌಲ್ಯ 40 ಕೋಟಿ ರೂ. ಎಂದು ಘೋಷಿಸಿದ್ದಾರೆ. ಆದರೂ ಪೂಜಾ ಖೇಡ್ಕರ್ ಒಬಿಸಿ ವರ್ಗದ ಅಡಿಯಲ್ಲಿ ನಾಗರಿಕ ಸೇವೆಗಳ ಪರೀಕ್ಷೆಗೆ ಹಾಜರಾಗಿದ್ದರು. ಅಲ್ಲಿ ಕ್ರೀಮಿ ಲೇಯರ್ ಪ್ರಮಾಣಪತ್ರದ ಮಿತಿಯು ಪೋಷಕರ ವಾರ್ಷಿಕ ಆದಾಯ 8 ಲಕ್ಷ ರೂಪಾಯಿಯಾಗಿದೆ. ಆದರೆ ಇವರ ತಂದೆ ಕೋಟ್ಯಧೀಶರಾಗಿದ್ದರೂ ಒಬಿಸಿ ಪ್ರಮಾಣಪತ್ರ ಗಿಟ್ಟಿಸಿಕೊಂಡಿದ್ದಾರೆ ಎಂದು ತನಿಖಾ ಅಧಿಕಾರಿಗಳು ತಿಳಿಸಿದ್ದಾರೆ.

ಪುಣೆಯಲ್ಲಿ ಪ್ರೊಬೇಷನರಿ ಅಧಿಕಾರಿಯಾಗಿ ಸೇರಿದ ಅನಂತರ ಖೇಡ್ಕರ್ ಅವರು ಆಡಿ ಕಾರಿಗೆ ವಿಐಪಿ ನಂಬರ್ ಪ್ಲೇಟ್ ಸೇರಿದಂತೆ ಹಲವು ಬೇಡಿಕೆಗಳನ್ನು ಸಲ್ಲಿಸಿದ್ದರು. ವಾಹನಕ್ಕೆ ಕೆಂಪು ದೀಪವನ್ನು ಹಾಕಿಸಿದರು. ಅವರು ಪ್ರತ್ಯೇಕ ಕಚೇರಿ, ಕಾರು, ವಸತಿ ಕ್ವಾರ್ಟರ್ಸ್ ಮತ್ತು ತನಗಾಗಿ ವಿಶೇಷ ಪ್ಯೂನ್‌ಗೆ ಬೇಡಿಕೆ ಇಟ್ಟಿದ್ದರು ಎಂದು ಪುಣೆ ಕಲೆಕ್ಟರ್ ಸುಹಾಸ್ ದಿವ್ಸೆ ಸಾಮಾನ್ಯ ಆಡಳಿತ ಇಲಾಖೆಗೆ (ಜಿಎಡಿ) ಸಲ್ಲಿಸಿದ ತಮ್ಮ ವರದಿಯಲ್ಲಿ ತಿಳಿಸಿದ್ದಾರೆ.

ಜೂನ್ 3ರಂದು ಪುಣೆಯಲ್ಲಿ ಸಹಾಯಕ ಕಲೆಕ್ಟರ್ ಆಗಿ ಅಧಿಕಾರ ವಹಿಸಿಕೊಳ್ಳುವ ಮುನ್ನವೇ ಖೇಡ್ಕರ್ ಪುಣೆ ಜಿಲ್ಲಾಧಿಕಾರಿಯೊಂದಿಗೆ ವಾಟ್ಸಾಪ್ ಸಂಭಾಷಣೆಯ ಮೂಲಕ ಈ ಬೇಡಿಕೆಗಳನ್ನು ಮುಂದಿಟ್ಟರು.

ಈ ಅಸಾಮಾನ್ಯ ಬೇಡಿಕೆಗಳನ್ನು ಜಿಲ್ಲಾಧಿಕಾರಿಗಳು ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದರು. ತಮ್ಮ ವರದಿಯಲ್ಲಿ ಖೇಡ್ಕರ್ ಅವರ ತರಬೇತಿಯನ್ನು ಪುಣೆಯಲ್ಲಿ ಮುಂದುವರಿಸುವುದು ಸೂಕ್ತವಲ್ಲ ಎಂದು ಅವರು ಸೂಚಿಸಿದ್ದಾರೆ ಮತ್ತು ಇದು ಆಡಳಿತಾತ್ಮಕ ತೊಡಕುಗಳಿಗೆ ಕಾರಣವಾಗಬಹುದು ಎಂದು ಉಲ್ಲೇಖಿಸಿದ್ದಾರೆ.

ಅಧಿಕಾರಿಗೆ ತನ್ನ ಸ್ವಂತ ಕೊಠಡಿಯನ್ನು ನೀಡಲಾಯಿತು. ಆದರೂ ಕೊಠಡಿಯಲ್ಲಿ ಸ್ನಾನಗೃಹದ ಕೊರತೆಯಿರುವುದಾಗಿ ಹೇಳಿ ಅವರು ಅದನ್ನು ನಿರಾಕರಿಸಿದರು ಎನ್ನಲಾಗಿದೆ. ಬಳಿಕ ಪೂಜಾ ತಮ್ಮ ತಂದೆ ದಿಲೀಪ್ ಖೇಡ್ಕರ್ ಅವರೊಂದಿಗೆ ಪುಣೆಯ ಕಚೇರಿಗೆ ಭೇಟಿ ನೀಡಿದ್ದರು. ಗಣಿಗಾರಿಕೆ ಇಲಾಖೆಯ ಪಕ್ಕದಲ್ಲಿರುವ ವಿಐಪಿ ಹಾಲ್ ಅನ್ನು ತಮ್ಮ ಕ್ಯಾಬಿನ್ ಆಗಿ ಬಳಸಲು ಪ್ರಸ್ತಾಪಿಸಿದರು.

ಪ್ರೊಬೇಷನರಿ ಅಧಿಕಾರಿ ಅದರಲ್ಲೂ ಪ್ರೊಬೇಷನರಿಯಲ್ಲಿ ಈ ಸೌಲಭ್ಯಗಳಿಗೆ ಅರ್ಹಳಲ್ಲ ಎಂದು ತಿಳಿಸಲಾಗಿದ್ದು, ಆಕೆಗೆ ವಸತಿ ಒದಗಿಸಲಾಗುವುದು ಎಂದು ತಿಳಿಸಲಾಯಿತು.


ಯಾರು ಪೂಜಾ ಖೇಡ್ಕರ್ ?

ಮಹಾರಾಷ್ಟ್ರ ಕೇಡರ್‌ನ 2022ರ ಬ್ಯಾಚ್ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್, ಮಹಾರಾಷ್ಟ್ರದ ಮಾಜಿ ಸರ್ಕಾರಿ ಅಧಿಕಾರಿ ದಿಲೀಪ್ ಖೇಡ್ಕರ್ ಅವರ ಮಗಳು, ಅವರು 2024 ರ ಲೋಕಸಭೆ ಚುನಾವಣೆಯಲ್ಲಿ ವಂಚಿತ್ ಬಹುಜನ ಆಘಾಡಿ ಪಕ್ಷದ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು.

ಇದನ್ನೂ ಓದಿ: Divya Vasantha: ಗೌರ್ಮೆಂಟ್ ಸ್ಕೂಲ್‌ನಲ್ಲಿ ಓದಿ, ಸೇಲ್ಸ್ ಗರ್ಲ್‌ ಆಗಿದ್ದ ದಿವ್ಯಾ ವಸಂತ ಬಳಿ ಇದೆ ಈ ದುಬಾರಿ ಕಾರು!

ಏನು ಆರೋಪ ?

ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಕುಟುಂಬದಿಂದ ಬಂದ ಪೂಜಾ ಖೇಡ್ಕರ್ ಕಠಿಣವಾದ ಯುಪಿಎಸ್ ಸಿ ಪರೀಕ್ಷೆಯಲ್ಲಿ 841ನೇ ರಾಂಕ್ ಗಳಿಸಿದ್ದಾರೆ. ಆದರೆ ಖೇಡ್ಕರ್ ತನ್ನ ಐಎಎಸ್ ಪರೀಕ್ಷೆಗಳಲ್ಲಿ ತೇರ್ಗಡೆಯಾಗಲು ನಕಲಿ ಪ್ರಮಾಣಪತ್ರಗಳನ್ನು ಸಲ್ಲಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಖೇಡ್ಕರ್ ಒಬಿಸಿ ವರ್ಗದ ಅಡಿಯಲ್ಲಿ ನಾಗರಿಕ ಸೇವೆಗಳ ಪರೀಕ್ಷೆಗೆ ಹಾಜರಾಗಿದ್ದರು. ಅಲ್ಲಿ ಕ್ರೀಮಿ ಲೇಯರ್ ಪ್ರಮಾಣಪತ್ರದ ಮಿತಿಯು ಪೋಷಕರ ವಾರ್ಷಿಕ ಆದಾಯ 8 ಲಕ್ಷ ರೂ. ಎಂದು ಘೋಷಿಸಿದ್ದರು. ನಾಗರಿಕ ಸೇವಾ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಅವರು ನಕಲಿ ಅಂಗವೈಕಲ್ಯ ದಾಖಲೆಯನ್ನೂ ಸಲ್ಲಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಅಲ್ಲದೇ ಖೇಡ್ಕರ್ ತಮ್ಮ ಖಾಸಗಿ ಆಡಿ ಕಾರನ್ನು ಕೆಂಪು-ನೀಲಿ ಬೀಕನ್ ಲೈಟ್ ಮತ್ತು ವಿಐಪಿ ನಂಬರ್ ಪ್ಲೇಟ್‌ನೊಂದಿಗೆ ಬಳಸಿದ್ದಕ್ಕಾಗಿ ತಪಾಸಣೆಗೆ ಒಳಗಾದ ಈ ಎಲ್ಲ ವಿಚಾರಗಳು ಬೆಳಕಿಗೆ ಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಯಚೂರು

Muharram 2024: ರಾಯಚೂರಿನಲ್ಲಿ ಮೊಹರಂನಲ್ಲಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ವ್ಯಕ್ತಿ ಸುಟ್ಟು ಭಸ್ಮ

Muharram 2024 : ಮೊಹರಂನಲ್ಲಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ವ್ಯಕ್ತಿ ಸುಟ್ಟು ಭಸ್ಮವಾಗಿದ್ದಾರೆ. ಬೆಂಕಿಯಲ್ಲಿ ಬೇಯುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ.

VISTARANEWS.COM


on

By

Muharram 2024 Man dies in fire during
Koo

ರಾಯಚೂರು: ರಾಯಚೂರಿನಲ್ಲಿ ಮೊಹರಂ ಆಚರಣೆ ವೇಳೆ ಕೊಂಡ ಹಾಯುವಾಗ (Muharram 2024) ವ್ಯಕ್ತಿಯೊಬ್ಬ ಆಯತಪ್ಪಿ ಬಿದ್ದು ಸುಟ್ಟು ಭಸ್ಮವಾಗಿದ್ದಾರೆ. ರಾಯಚೂರಿನ ಮಸ್ಕಿ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ತಡರಾತ್ರಿ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ಯಮನಪ್ಪ ನಾಯಕ್ (45)ಮೃತ ದುರ್ದೈವಿ.

ನಿಗಿ ನಿಗಿ ಕೆಂಡದಲ್ಲಿ ಬೇಯುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಮೊಹರಂ ಹಬ್ಬ ಆಚರಣೆ ವೇಳೆ ಕೊಂಡ ಹಾಯುವುದು ಪದ್ಧತಿ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿದೆ. ಅದರಂತೆ ಬೆಂಕಿ ಹಾಯಲು ಯಮನಪ್ಪ ಮುಂದಾಗಿದ್ದರು. ಕೊಂಡ ಹಾಯುವಾಗ ಆಯತಪ್ಪಿ ಬೆಂಕಿಯೊಳಗೆ ಬಿದ್ದ ಪರಿಣಾಮ ಸುಟ್ಟುಕರಕಲಾಗಿದ್ದಾರೆ.

ಕೂಡಲೇ ಅಲ್ಲಿದ್ದವರು ಬೆಂಕಿ ಹಾರಿಸಲು ನೀರು ಎರಚಿ ರಕ್ಷಣೆ ಮುಂದಾದರೂ, ಆದರೆ ತೀವ್ರ ಬೆಂಕಿ ಆವರಿಸಿ ಯಮನಪ್ಪ ಸುಟ್ಟುಭಸ್ಮವಾದರು. ತುರುವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸ್‌ರಿಂದ ಲಾಠಿ ಚಾರ್ಜ್

ಮೊಹರಂ ಹಬ್ಬದ ಆಚರಣೆ ವೇಳೆ ಪೊಲೀಸ್‌ರಿಂದ ಲಾಠಿ ಚಾರ್ಜ್ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಪಾಶ್ಚಾಪೂರ ಗ್ರಾಮದಲ್ಲಿ ಘಟನೆ ನಡೆದಿದೆ. ಪಾಶ್ಚಾಪುರ ಗ್ರಾಮದ ನಡುವಿನ ಪೇಟೆ ಬಳಿ ಬಂದಾಗ ಏಕಾಏಕಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ ಎನ್ನಲಾಗಿದೆ. ಹೀಗಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿದರು. ಎರಡು ದೇವರ ಭೇಟಿ ಸಂದರ್ಭದಲ್ಲಿ ಟೊನ್ನೆಬಾವು, ಕರಬಾಲ ಎಂಬ ಸಂಪ್ರದಾಯದ ಆಚರಣೆ ವೇಳೆ ಘಟನೆ ನಡೆದಿದೆ. ಸ್ಥಳದಲ್ಲಿದ್ದ ಯಮಕನಮರಡಿ ಪೊಲೀಸ್ ಠಾಣೆಯ ಎಎಸ್‌ಐ ಮುರಗೋಡ ಹಾಗೂ ಓರ್ವ ಪೋಲಿಸ್ ಪೇದೆ ಮೇಲೆ ಹಲ್ಲೆ ನಡೆಸಲಾಗಿದೆ. ಉದ್ದೇಶಪೂರ್ವಕವಾಗಿ ಪೊಲೀಸರ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Hit And Run Case: ಮುಂಬೈ ಬಿಎಂಡಬ್ಲ್ಯು ಕಾರು ಹಿಟ್‌ ಆ್ಯಂಡ್‌ ರನ್‌ ಕೇಸ್‌; ಆರೋಪಿಗೆ ಜು.30ರವರೆಗೆ ನ್ಯಾಯಾಂಗ ಬಂಧನ

Hit And Run Case: ಮಿಹಿರ್‌ನ ಪೊಲೀಸ್‌ ಕಸ್ಟಡಿ ಮುಗಿದಿರುವ ಹಿನ್ನೆಲೆ ಮಂಗಳವಾರ ಶಿವಧಿ ಕೋರ್ಟ್‌ಗೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿದೆ. ಇನ್ನು ಈ ಪ್ರಕರಣದ ಮತ್ತೊರ್ವ ಆರೋಪಿ ಮಿಹಿರ್‌ನ ತಂದೆ ರಾಜೇಶ್‌ ಶಾ ಸದ್ಯ ಜಾಮೀನಿನ ಮೂಲಕ ಹೊರಬಂದಿದ್ದಾರೆ.

VISTARANEWS.COM


on

hit and run case
Koo

ಮುಂಬೈ: ಜು. 7ರಂದು ಮಹಾರಾಷ್ಟ್ರದ ವರ್ಲಿಯಲ್ಲಿ ಬಿಎಂಡಬ್ಲ್ಯು ಕಾರು ಚಲಾಯಿಸಿ(Hit And Run Case), ಸ್ಕೂಟರ್‌ಗೆ ಗುದ್ದಿ ಓರ್ವ ಮಹಿಳೆಯ ಸಾವಿಗೆ ಕಾರಣನಾದ ಶಿವಸೇನೆ ಮುಖಂಡ ರಾಜೇಶ್‌ ಶಾ (Rajesh Shah) ಅವರ ಪುತ್ರ ಮಿಹಿರ್‌ ಶಾ (Mihir Shah)ಗೆ ಜು.30ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಮಿಹಿರ್‌ನ ಪೊಲೀಸ್‌ ಕಸ್ಟಡಿ ಮುಗಿದಿರುವ ಹಿನ್ನೆಲೆ ಮಂಗಳವಾರ ಶಿವಧಿ ಕೋರ್ಟ್‌ಗೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿದೆ. ಇನ್ನು ಈ ಪ್ರಕರಣದ ಮತ್ತೊರ್ವ ಆರೋಪಿ ಮಿಹಿರ್‌ನ ತಂದೆ ರಾಜೇಶ್‌ ಶಾ ಸದ್ಯ ಜಾಮೀನಿನ ಮೂಲಕ ಹೊರಬಂದಿದ್ದಾರೆ.

ಶಿವಸೇನೆ (ಏಕನಾಥ್ ಶಿಂಧೆ ಬಣ) ನಾಯಕರಾಗಿರುವ ರಾಜೇಶ್‌ ಶಾ ಅವರ 24 ವರ್ಷದ ಪುತ್ರ ಮಿಹಿರ್‌ ಶಾ ಕುಡಿದು ಕಾರು ಚಲಾಯಿಸಿ ವರ್ಲಿಯಲ್ಲಿ ಮೀನು ಮಾರಾಟಗಾರ ದಂಪತಿ ಪ್ರದೀಪ್ ನಖ್ವಾ ಮತ್ತು ಕಾವೇರಿ ನಖ್ವಾ ಅವರು ಸಂಚರಿಸುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದ. ಭಾನುವಾರ ಬೆಳಿಗ್ಗೆ 5.30ರ ಸುಮಾರಿಗೆ ಈ ಘಟನೆ ನಡೆದಿತ್ತು. ಕಾರು ಡಿಕ್ಕಿ ಹೊಡೆದ ಪರಿಣಾಮ ಪ್ರದೀಪ್ ಎಸೆಯಲ್ಪಟ್ಟರೆ, ಕಾವೇರಿ ಅವರ ದೇಹ ಚಕ್ರಗಳ ಅಡಿಯಲ್ಲಿ ಸಿಕ್ಕಿ ಬಿದ್ದಿದ್ದು, ಕಾರು 1.5 ಕಿ.ಮೀ. ದೂರ ಎಳೆದೊಯ್ದಿತ್ತು.

ಅಪಘಾತ ನಡೆದ ನಂತರ ಮಿಹಿರ್‌ ಚಾಲಕ ರಾಜರ್ಷಿ ಬಿದಾವತ್‌ನನ್ನು ಡ್ರೈವರ್‌ ಸೀಟ್‌ನಲ್ಲಿ ಕೂರಿಸಿದ್ದನು. ಬಳಿಕ ಅವರು ಬಾಂದ್ರಾದ ಕಲಾ ನಗರಕ್ಕೆ ತೆರಳಿ ಅಲ್ಲಿ ನಂಬರ್ ಪ್ಲೇಟ್ ಅನ್ನು ತೆಗೆದು ತಲೆ ಮರೆಸಿಕೊಂಡಿದ್ದರು. ಈ ವೇಳೆ ಮಿಹಿರ್‌ ಶಾ ತನ್ನ ಪ್ರೇಯಸಿಯೊಂದಿಗೆ ಸುಮಾರು 40 ಬಾರಿ ಮಾತನಾಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಕಲಾ ನಗರದಲ್ಲಿ ಕಾರು ನಿಲ್ಲಿಸಿ ಮಿಹಿರ್‌ ಶಾ ಆಟೋ ಹತ್ತಿ ಗೋರೆಗಾಂವ್‌ನಲ್ಲಿರುವ ಪ್ರೇಯಸಿ ಮನೆಗೆ ತೆರಳಿದ್ದ. ಅಪಘಾತದ ವಿಚಾರವನ್ನು ಪ್ರೇಯಸಿ ತನ್ನ ಸಹೋದರಿ ಜತೆಗೆ ಹಂಚಿಕೊಂಡಿದ್ದಳು. ಬಳಿಕ ಸಹೋದರಿ ಆಗಮಿಸಿ ಮಿಹಿರ್‌ನನ್ನು ಬೋರಿವಲಿಯಲ್ಲಿರುವ ತಮ್ಮ ಮನೆಗೆ ಕರೆದೊಯ್ದಿದ್ದರು. ಈ ವೇಳೆ ಮಿಹಿರ್‌ನ ಕುಟುಂಬ ಆತ ಎಲ್ಲಿ ತಲೆ ಮರೆಸಿಕೊಂಡಿದ್ದಾನೆ ಎನ್ನುವ ವಿಚಾರವನ್ನು ಪೊಲೀಸರಿಗೆ ತಿಳಿಸಿರಲಿಲ್ಲ. ಪೊಲೀಸರ 14 ತಂಡ ಆತನಿಗಾಗಿ ತೀವ್ರ ಶೋಧ ನಡೆಸುತ್ತಿತ್ತು.

ಸೋಮವಾರ ರಾತ್ರಿ ಮಿಹಿರ್‌ ವಿರಾರ್‌ನಲ್ಲಿರುವ ತನ್ನ ಮನೆಗೆ ತೆರಳಿದ್ದ. ಮಂಗಳವಾರ ಬೆಳಿಗ್ಗೆ ಆತನ ಸ್ನೇಹಿತ ಅವದೀಪ್ ತನ್ನ ಫೋನ್ ಅನ್ನು 15 ನಿಮಿಷಗಳ ಕಾಲ ಆನ್ ಮಾಡಿದಾಗ ಪೊಲೀಸರು ಅವರಿರುವ ಜಾಗ ಪತ್ತೆ ಮಾಡಿ ಮಿಹಿರ್‌ನನ್ನು ವಶಕ್ಕೆ ಪಡೆದುಕೊಂಡಿದ್ದರು. ಮಿಹಿರ್‌ನನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜುಲೈ 16ರವರೆಗೆ ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ.

10 ಲಕ್ಷ ರೂ. ಪರಿಹಾರ ಘೋಷಣೆ

ಬುಧವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಮೃತ ಕಾವೇರಿ ನಖ್ವಾ ಅವರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. “ನಾವು ಸಂತ್ರಸ್ತೆಯ ಕುಟುಂಬದೊಂದಿಗೆ ನಿಲ್ಲುತ್ತೇವೆ. ಅವರೂ ನಮ್ಮ ಕುಟುಂಬ. ಅವರಿಗೆ ಯಾವುದೇ ಸಹಾಯದ ಅಗತ್ಯವಿದ್ದರೂ ಅದು ಕಾನೂನು ಅಥವಾ ಆರ್ಥಿಕವಾಗಿರಲಿ ಒದಗಿಸಲಾಗುವುದು. ಸಂತ್ರಸ್ತೆಯ ಕುಟುಂಬಕ್ಕೆ ಸರ್ಕಾರ 10 ಲಕ್ಷ ರೂ.ಗಳ ಆರ್ಥಿಕ ನೆರವು ನೀಡಲಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: BSP President: ತಮಿಳುನಾಡು ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಕೊಲೆ; ಹಂತಕನ ಎನ್‌ಕೌಂಟರ್‌- ಮತ್ತೊಂದೆಡೆ ಹತ್ಯೆಯ ಭೀಕರ ದೃಶ್ಯ ವೈರಲ್‌

Continue Reading

ಬೆಂಗಳೂರು

BMTC staff : ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಬಿಎಂಟಿಸಿ ಸಿಬ್ಬಂದಿ ಆತ್ಮಹತ್ಯೆ

Bengaluru News : ಬೆಂಗಳೂರಿನ ಬಿಎಂಟಿಸಿ ಕೇಂದ್ರ ಕಚೇರಿಯೊಳಗೆ ಸಿಬ್ಬಂದಿಯೊಬ್ಬ (BMTC staff) ನೇಣು ಬಿಗಿದುಕೊಂಡು (Self Harming) ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

VISTARANEWS.COM


on

By

BMTC staff commits suicide at headquarters
Koo

ಬೆಂಗಳೂರು: ಬೆಂಗಳೂರಿನ ಶಾಂತಿನಗರದ ಇಡಿ ಕಚೇರಿಯ ಪಕ್ಕದಲ್ಲಿರುವ ಬಿಎಂಟಿಸಿ ಕಚೇರಿಯೊಳಗೆ ಬಿಎಂಟಿಸಿ ಸಿಬ್ಬಂದಿ (BMTC staff) ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಅಥಣಿ ಮೂಲದ ಮಹೇಶ್ ಆತ್ಮಹತ್ಯೆ ಮಾಡಿಕೊಂಡವರು.

ಡಿಪೋ ನಂಬರ್ 12ರಲ್ಲಿ ಮಹೇಶ್‌ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದ. ನಿನ್ನೆ ಸೋಮವಾರ ಬೆಳಗ್ಗೆ ರೆಕಾರ್ಡ್ ರೂಂ ಕೀ ಕೇಳಿದ್ದ. ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ನಿನ್ನೆ ಸಂಜೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ನಿನ್ನೆ ಸೆಕ್ಯೂರಿಟಿ ಗಾರ್ಡ್ ಬಳಿ ಮಹೇಶ್ ರೆಕಾರ್ಡ್ ಸೆಕ್ಷನ್ ಕೀ ಪಡೆದು, ಬೆಳಗ್ಗೆಯಿಂದಲ್ಲೂ ರೂಮಿನೊಳಗೆ ಓಡಾಟ ನಡೆಸಿದ್ದ. ಸಂಜೆ ಯಾರು ಇಲ್ಲದ ವೇಳೆ ವೈರ್ ಬಳಸಿ ಫ್ಯಾನ್‌ಗೆ ವೈರ್ ಹಾಕಿಕೊಂಡು ನೇಣು ಬಿಗಿದುಕೊಂಡಿದ್ದಾರೆ. ಮುಂಜಾನೆ ಸಿಬ್ಬಂದಿ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಪೊಲೀಸರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Karnataka Rain : ಭಾರಿ ಮಳೆ ಎಫೆಕ್ಟ್‌-ಮಲಗಿದ್ದ‌ ವ್ಯಕ್ತಿ ಮೇಲೆ ಬಿದ್ದ ಗೋಡೆ; ಮರ ಬಿದ್ದು ಕಾರು ಜಖಂ, ಚಾಲಕ ಜಸ್ಟ್‌ ಮಿಸ್‌

ಗದಗದಲ್ಲಿ ನದಿಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ

ಸೇತುವೆ ಮೇಲಿಂದ ನದಿಗೆ ಜಿಗಿದು ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬಳಿ ತುಂಗಭದ್ರಾ ನದಿಯಲ್ಲಿ ಘಟನೆ ನಡೆದಿದೆ. ಗದಗ ಹಾಗೂ ಬಳ್ಳಾರಿ ಜಿಲ್ಲೆ‌ಗಳ‌ ಮಧ್ಯ ಸಂಪರ್ಕಿಸುವ ಸೇತುವೆ ಇದಾಗಿದ್ದು, ತುಂಗಭದ್ರಾ ನದಿಗೆ‌ ಅಡ್ಡಲಾಗಿ ನಿರ್ಮಿಸಿರುವ ಸೇತುವೆ‌ ಮೇಲಿಂದ ನದಿಗೆ ಹಾರಿದ್ದಾನೆ. ಕರಿಬಸಪ್ಪ (30) ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದವನು. ಕರಿಬಸಪ್ಪ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮೀರಾಕೊರಳಹಳ್ಳಿ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ಕರಿಬಸಪ್ಪ ನದಿಗೆ ಹಾರಿದ್ದನ್ನು ಗಮನಿಸಿದ ಕೊರ್ಲಹಳ್ಳಿ ಗ್ರಾಮದ ಪುನೀತ್, ಕೃಷ್ಣ, ಹನುಮಂತ ಎಂಬುವವರು ಕೂಡಲೇ ರಕ್ಷಣೆ ಮಾಡಿದ್ದಾರೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Latest

Model Arrest: ತನ್ನ ಫಾಲೋವರ್ಸ್‌ಗಳನ್ನೇ ವೇಶ್ಯಾವಾಟಿಕೆಯಲ್ಲಿ ತೊಡಗಿಸುತ್ತಿದ್ದ ಖ್ಯಾತ ಮಾಡೆಲ್‌ಗೆ ಜೈಲು ಶಿಕ್ಷೆ!

Model Arrest: ಬ್ರೆಜಿಲ್‌ನ ಮಾಜಿ ರೂಪದರ್ಶಿ ಕ್ಯಾಟ್ ಟೊರೆಸ್ ಅನ್ನು ಮಾನವ ಕಳ್ಳಸಾಗಣೆ ಮತ್ತು ಮಹಿಳೆಯರ ಗುಲಾಮಗಿರಿಗಾಗಿ ಎಂಟು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಅವಳೊಂದಿಗೆ ವಾಸವಾಗಿದ್ದ ಇಬ್ಬರು ಮಹಿಳೆಯರು 2022ರಲ್ಲಿ ಕಾಣೆಯಾಗಿದ್ದರು. ಈ ಬಗ್ಗೆ ಎಫ್ಐಆರ್ ದಾಖಲಿಸಿದ ಪೊಲೀಸರು ತನಿಖೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿತ್ತು. ಆಕೆ ತನ್ನ ಫಾಲೋವರ್ಸ್‌ಗಳನ್ನು ಲೈಂಗಿಕ ಕೆಲಸದಲ್ಲಿ ತೊಡಗುವಂತೆ ಒತ್ತಾಯಿಸಿ ಅವರನ್ನು ತನ್ನ ಗುಲಾಮರಂತೆ ಇರಿಸಿಕೊಳ್ಳುತ್ತಿದ್ದಳು ಎಂಬುದಾಗಿ ತಿಳಿದು ಬಂದಿದೆ.

VISTARANEWS.COM


on

Model Arrest
Koo

ಬ್ರೆಜಿಲ್‌ನ ಮಾಜಿ ರೂಪದರ್ಶಿ ಮತ್ತು ಅಮೆರಿಕ ಮೂಲದ ವೆಲ್ನೆಸ್ ಇನ್ಫ್ಲುಯೆನ್ಸರ್ ಕ್ಯಾಟ್ ಟೊರೆಸ್‌ ಎಂಬುವಳನ್ನು ಮಾನವ ಕಳ್ಳಸಾಗಣೆ ಮತ್ತು ಮಹಿಳೆಯರ ಗುಲಾಮಗಿರಿಗಾಗಿ ಎಂಟು ವರ್ಷಗಳ ಜೈಲು ಶಿಕ್ಷೆ (Model Arrest) ವಿಧಿಸಲಾಗಿದೆ. ಅವಳೊಂದಿಗೆ ವಾಸವಾಗಿದ್ದ ಇಬ್ಬರು ಮಹಿಳೆಯರು 2022ರಲ್ಲಿ ಕಾಣೆಯಾಗಿದ್ದರು. ಈ ಬಗ್ಗೆ ಎಫ್‌ಐಆರ್ ದಾಖಲಿಸಿದ ಪೊಲೀಸರು ತನಿಖೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿತ್ತು. ಆಕೆ ತನ್ನ ಫಾಲೋವರ್ಸ್‌ಗಳನ್ನು ಲೈಂಗಿಕ ಕೆಲಸದಲ್ಲಿ ತೊಡಗುವಂತೆ ಒತ್ತಾಯಿಸಿ ಅವರನ್ನು ತನ್ನ ಗುಲಾಮರಂತೆ ಇರಿಸಿಕೊಳ್ಳುತ್ತಿದ್ದಳು ಎಂಬುದಾಗಿ ತಿಳಿದುಬಂದಿದೆ.

ಆಕೆಯಿಂದ ಗುಲಾಮಗಿರಿಗೆ ಒಳಗಾದ ಆ ಮಹಿಳೆಯರು ಆಕೆಯೊಂದಿಗೆ ವಾಸವಿದ್ದಾಗ ಅನುಭವಿಸಿದ ಭಯಾನಕ ಘಟನೆಗಳ ಬಗ್ಗೆ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಂತ್ರಸ್ತ ಮಹಿಳೆಯರು, ಆಕೆ ಮರುಳು ಮಾಡುವಂತೆ ಮಾತನಾಡುತ್ತಿದ್ದಳು. ಅವಳು ಹೇಳುವ ಮಾತನ್ನು ಕೇಳಿ ಆಕರ್ಷಿತರಾದೆವು. ನಟ ಲಿಯೊನಾರ್ಡೊ ಡಿಕಾಪ್ರಿಯೊ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾಳೆ ಎಂದು ಒಂದು ಕಾಲದಲ್ಲಿ ವದಂತಿಗಳಿದ್ದ ಟೊರೆಸ್, ತನ್ನ ಆಧ್ಯಾತ್ಮಿಕ ಶಕ್ತಿಯನ್ನು ಬಳಸಿಕೊಂಡು ಭವಿಷ್ಯ ನುಡಿಯಬಹುದು ಎಂದು ಪ್ರಸಿದ್ಧ ಬ್ರೆಜಿಲಿಯನ್ ಟಿವಿ ಕಾರ್ಯಕ್ರಮಗಳಲ್ಲಿ ಹೇಳಿದ್ದಳು. ಅಲ್ಲದೇ ಅವಳು ಮ್ಯಾಗಜೀನ್‌ಗಳ ಮುಖಪುಟಗಳಲ್ಲಿ ಕಾಣಿಸಿಕೊಂಡಿದ್ದಳು. ಹಾಲಿವುಡ್‌ ನಟ ಲಿಯೊನಾರ್ಡೊ ಡಿಕಾಪ್ರಿಯೊ ಅವರಂತಹ ಪ್ರಸಿದ್ಧ ವ್ಯಕ್ತಿಗಳೊಂದಿಗೆ ಕಾಣಿಸಿಕೊಂಡಳು. ಹಾಗಾಗಿ ಆಕೆ ಹೇಳುವುದನ್ನು ತಾವು ನಂಬಿರುವುದಾಗಿ ಮಹಿಳೆಯರು ತಿಳಿಸಿದ್ದಾರೆ.

Model Arrest

ಆಕೆ ವೆಲ್‍ನೆಸ್ ವೆಬ್‍ಸೈಟ್‍ ಮತ್ತು ಚಂದಾದಾರಿಕೆ ಸೇವೆಯನ್ನು ಅಭಿವೃದ್ಧಿಪಡಿಸಿ ಅದರಲ್ಲಿ ಸಂಬಂಧಗಳು, ಯೋಗಕ್ಷೇಮ, ಸಂಮೋಹನ, ಧ್ಯಾನ ಮತ್ತು ವ್ಯಾಯಾಮ ಕಾರ್ಯಕ್ರಮಗಳು ಸೇರಿದಂತೆ ವ್ಯವಹಾರ ಯಶಸ್ಸಿನ ಬಗ್ಗೆ ಸಲಹೆ ನೀಡುವ ಸ್ವ-ಸಹಾಯ ವೀಡಿಯೊಗಳನ್ನು ಸಹ ಮಾಡುತ್ತಿದ್ದಳು. ಹಾಗೇ ವಿಡಿಯೋ ಸಮಾಲೋಚನೆಗಳ ಮೂಲಕ ಮುಖಾಮುಖಿ ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಪರಿಹರಿಸುತ್ತಿದ್ದಳು.

ಹಾಗಾಗಿ ಆ ಮಹಿಳೆಯರು 2019ರಲ್ಲಿ ಟೊರೆಸ್ ಅವರ ಲೈವ್-ಇನ್ ಸಹಾಯಕರಾಗಿ ಕೆಲಸ ಮಾಡಲು ನ್ಯೂಯಾಕ್‌ಗೆ ತೆರಳಿದರು. ಅಲ್ಲಿ ಅವಳ ಮನೆಕೆಲಸ ಹಾಗೂ ಪ್ರಾಣಿಗಳನ್ನು ನೋಡಿಕೊಳ್ಳುವ ಕೆಲಸದಲ್ಲಿ ನಿರತಳಾಗಿದ್ದರು. ಆದರೆ ಆಕೆ ಸಂಬಳ ಸರಿಯಾಗಿ ನೀಡುತ್ತಿರಲಿಲ್ಲ. ನಂತರ ಸ್ಥಳೀಯ ಸ್ಟ್ರಿಪ್ ಕ್ಲಬ್‍ನಲ್ಲಿ ಕೆಲಸ ಮಾಡುವಂತೆ ಅವರ ಮೇಲೆ ಒತ್ತಡ ಹೇರಿದ್ದಳು. ಇದಕ್ಕೆ ಅವರು ಒಪ್ಪದಿದ್ದಾಗ ಅವರನ್ನು ಯಾಮಾರಿಸಿ ವೇಶ್ಯಾವಾಟಿಕೆಯಲ್ಲಿ ತೊಡಗುವಂತೆ ಮಾಡಿದ್ದಳು.

ಇದನ್ನೂ ಓದಿ: ತರಕಾರಿ ಮಾರುವವಳ ಮಗ ಸಿಎ ಪರೀಕ್ಷೆಯಲ್ಲಿ ಪಾಸ್‌; ಹೃದಯಸ್ಪರ್ಶಿ ವಿಡಿಯೊ ಇಲ್ಲಿದೆ

ನಂತರ ಇಬ್ಬರು ಮಹಿಳೆಯರ ಸ್ನೇಹಿತರು ಮತ್ತು ಕುಟುಂಬವು ಅವರನ್ನು ಹುಡುಕಲು ಸಾಮಾಜಿಕ ಮಾಧ್ಯಮ ಅಭಿಯಾನಗಳನ್ನು ಪ್ರಾರಂಭಿಸಿತು. ಮಾಧ್ಯಮಗಳ ಗಮನದಿಂದ ತಪ್ಪಿಸಿಕೊಳ್ಳಲು, ಟೊರೆಸ್ ಆ ಮಹಿಳೆಯರಿಗೆ ತಾವು ಆರಾಮವಾಗಿ ಇದ್ದೀವಿ ಎಂದು ವಿಡಿಯೊ ಪೋಸ್ಟ್ ಮಾಡುವಂತೆ ಒತ್ತಾಯಿಸಿದ್ದಳು. ಈ ರೀತಿ ಆಕೆ ಮಹಿಳೆಯರನ್ನು ಬಳಸಿಕೊಳ್ಳುತ್ತಿದ್ದಳು ಎನ್ನಲಾಗಿದೆ. 20 ಕ್ಕೂ ಹೆಚ್ಚು ಮಹಿಳೆಯರು ಟೊರೆಸ್‌ನಿಂದ ವಂಚನೆಗೊಳಗಾದ ಅಥವಾ ಶೋಷಣೆಗೊಳಗಾದ ಬಗ್ಗೆ ತಿಳಿಸಿದ್ದಾರೆ. ಅವರು ಅನುಭವಿಸಿದ ಮತ್ತು ಅನುಭವದಿಂದ ಚೇತರಿಸಿಕೊಳ್ಳಲು ಅವರು ಇನ್ನೂ ಮನೋವೈದ್ಯಕೀಯ ಚಿಕಿತ್ಸೆಗೆ ಒಳಗಾಗುತ್ತಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.

Continue Reading
Advertisement
Muharram 2024 Man dies in fire during
ರಾಯಚೂರು53 seconds ago

Muharram 2024: ರಾಯಚೂರಿನಲ್ಲಿ ಮೊಹರಂನಲ್ಲಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ವ್ಯಕ್ತಿ ಸುಟ್ಟು ಭಸ್ಮ

hit and run case
ದೇಶ3 mins ago

Hit And Run Case: ಮುಂಬೈ ಬಿಎಂಡಬ್ಲ್ಯು ಕಾರು ಹಿಟ್‌ ಆ್ಯಂಡ್‌ ರನ್‌ ಕೇಸ್‌; ಆರೋಪಿಗೆ ಜು.30ರವರೆಗೆ ನ್ಯಾಯಾಂಗ ಬಂಧನ

Assembly Session
ಕರ್ನಾಟಕ9 mins ago

Assembly Session: ವಾಲ್ಮೀಕಿ ನಿಗಮ ಅಕ್ರಮ ದಲಿತರಿಗೆ ಮಾಡಿರೋ ಅನ್ಯಾಯ: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

Paris Olympics 2024
ಪ್ರಮುಖ ಸುದ್ದಿ26 mins ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಕಡಿಮೆ ಪದಕಗಳು ಸಿಗುವುದು ಯಾಕೆ? ಈ ಪ್ರಶ್ನೆಗೆ ಇಲ್ಲಿದೆ ಉತ್ತರ

BMTC staff commits suicide at headquarters
ಬೆಂಗಳೂರು43 mins ago

BMTC staff : ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಬಿಎಂಟಿಸಿ ಸಿಬ್ಬಂದಿ ಆತ್ಮಹತ್ಯೆ

ಪ್ರಮುಖ ಸುದ್ದಿ49 mins ago

Uttara Kannada Rain: ಭಾರಿ ಮಳೆಗೆ ತತ್ತರಿಸಿದ ಉತ್ತರ ಕನ್ನಡ; ಭೂಕುಸಿತಕ್ಕೆ 11 ಸಾವು, ರಸ್ತೆಗಳೇ ಮಾಯ, ತೋಟ ಗದ್ದೆ ಮುಳುಗಡೆ

Pooja Khedkar
ಪ್ರಮುಖ ಸುದ್ದಿ49 mins ago

Pooja Khedkar: ಐಎಎಸ್‌ಗಾಗಿ ನಕಲಿ ಜಾತಿ, ಕಡಿಮೆ ವಯಸ್ಸು, ದರ್ಪ; ಪೂಜಾ ಖೇಡ್ಕರ್‌ ಕಳ್ಳಾಟ ಒಂದೆರಡಲ್ಲ!

Viral Video
Latest55 mins ago

Viral Video : ಡ್ಯಾನ್ಸ್‌ ಆಯ್ತು, ಹೊಡೆದಾಟವಾಯ್ತು, ಈಗ ಹುಡುಗಿಯರ ಮೇಕಪ್‌ಗೂ ಸಾಕ್ಷಿಯಾಯ್ತು ದೆಹಲಿ ಮೆಟ್ರೊ! ವಿಡಿಯೊ ನೋಡಿ

Rajnath Singh
ದೇಶ59 mins ago

Kashmir Encounter: ಸೇನಾ ಮುಖ್ಯಸ್ಥರ ಜೊತೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಮಾತುಕತೆ; ಸೇನೆಗೆ ಸಂಪೂರ್ಣ ಅಧಿಕಾರ

Model Arrest
Latest1 hour ago

Model Arrest: ತನ್ನ ಫಾಲೋವರ್ಸ್‌ಗಳನ್ನೇ ವೇಶ್ಯಾವಾಟಿಕೆಯಲ್ಲಿ ತೊಡಗಿಸುತ್ತಿದ್ದ ಖ್ಯಾತ ಮಾಡೆಲ್‌ಗೆ ಜೈಲು ಶಿಕ್ಷೆ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ4 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ23 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌