Crime News: ಶಾಕಿಂಗ್‌; 8 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿದ ಅಪ್ರಾಪ್ತ ಬಾಲಕರು - Vistara News

ಕ್ರೈಂ

Crime News: ಶಾಕಿಂಗ್‌; 8 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿದ ಅಪ್ರಾಪ್ತ ಬಾಲಕರು

Crime News: ಶಾಲಾ ವಿದ್ಯಾರ್ಥಿಗಳಾದ ಮೂವರು ಅಪ್ರಾಪ್ತ ಬಾಲಕರು 8 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. ಭಾನುವಾರ ನಡೆದಿದ್ದ ಈ ಘಟನೆ ತಡವಾಗಿ ಬುಧವಾರ ಬೆಳಕಿಗೆ ಬಂದಿದೆ. ಸದ್ಯ ಆರೋಪಿ ಬಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂತ್ರಸ್ತೆ 3ನೇ ತರಗತಿ ವಿದ್ಯಾರ್ಥಿನಿ. ಇನ್ನು ಆರೋಪಿಗಳ ಪೈಕಿ ಇಬ್ಬರು 6ನೇ ತರಗತಿ (12 ವರ್ಷ) ಮತ್ತು ಓರ್ವ 7ನೇ ತರಗತಿ (13 ವರ್ಷ)ಯ ವಿದ್ಯಾರ್ಥಿಗಳು.

VISTARANEWS.COM


on

Crime News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಮರಾವತಿ: ಶಾಲಾ ವಿದ್ಯಾರ್ಥಿಗಳಾದ ಮೂವರು ಅಪ್ರಾಪ್ತ ಬಾಲಕರು 8 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. ನಂದ್ಯಾಲ್ ಜಿಲ್ಲೆಯ ಪಗಿಡ್ಯಾಲ ಮಂಡಲದ ಮುಚುಮರಿ ಗ್ರಾಮದಲ್ಲಿ ಈ ಅಮಾನುಷ ಘಟನೆ ನಡೆದಿದ್ದು, ಇಡೀ ದೇಶವೇ ಬೆಚ್ಚಿ ಬಿದ್ದಿದೆ (Crime News).

ಭಾನುವಾರ ನಡೆದಿದ್ದ ಈ ಘಟನೆ ತಡವಾಗಿ ಬುಧವಾರ ಬೆಳಕಿಗೆ ಬಂದಿದೆ. ಸದ್ಯ ಆರೋಪಿ ಬಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂತ್ರಸ್ತೆ 3ನೇ ತರಗತಿ ವಿದ್ಯಾರ್ಥಿನಿ. ಇನ್ನು ಆರೋಪಿಗಳ ಪೈಕಿ ಇಬ್ಬರು 6ನೇ ತರಗತಿ (12 ವರ್ಷ) ಮತ್ತು ಓರ್ವ 7ನೇ ತರಗತಿ (13 ವರ್ಷ)ಯ ವಿದ್ಯಾರ್ಥಿಗಳು. ಸಂತ್ರಸ್ತೆ ಮತ್ತು ಆರೋಪಿಗಳು ಒಂದೇ ಶಾಲೆಯಲ್ಲಿ ಓದುತ್ತಿದ್ದರು.

ಘಟನೆ ವಿವರ

ಭಾನುವಾರ (ಜುಲೈ 7) ಸಂತ್ರಸ್ತೆಯ ತಂದೆ ಮಗಳು ನಾಪತ್ತೆಯಾಗಿದ್ದಾಳೆ ಎಂದು ದೂರು ದಾಖಲಿಸಿದ್ದರು. ಮುಚುಮರಿಯ ಪಾರ್ಕ್‌ ಒಂದರಲ್ಲಿ ಆಡುತ್ತಿದ್ದ ಆಕೆ ಕಾಣೆಯಾಗಿದ್ದಾಳೆ ಎಂದು ನಂದಿಕೋಟ್ಕೂರು ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೂಡಲೇ ಮುಚುಮರಿ ಸುತ್ತಮುತ್ತ ಹುಡುಕಾಟ ನಡೆಸಿದ್ದರು. ಸ್ಥಳೀಯರಲ್ಲಿ ಬಾಲಕಿ ಬಗ್ಗೆ ವಿಚಾರಿಸಲಾಗಿತ್ತು. ಶೋಧ ಕಾರ್ಯಕ್ಕೆ ಶ್ವಾನ ದಳವನ್ನೂ ಬಳಸಲಾಗಿತ್ತು. ಆದರೆ ಬಾಲಕಿ ಪತ್ತೆಯಾಗಿರಲಿಲ್ಲ.

ಸುಳಿವು ನೀಡಿದ ಶ್ವಾನ

ಬಾಲಕಿ ಪತ್ತೆಯಾಗದಿದ್ದರೂ ಪೊಲೀಸ್‌ ಶ್ವಾನ ಮಹತ್ವದ ಸುಳಿವು ನೀಡುವಲ್ಲಿ ಯಶಸ್ವಿಯಾಗಿತ್ತು. ಶ್ವಾನ ಆರೋಪಿ ಬಾಲಕರ ಬಳಿಗೆ ತೆರಳಿತ್ತು. ಅವರ ಮನೆ ಬಳಿ ನಿಂತು ಪೊಲೀಸರಿಗೆ ಸೂಚನೆ ನೀಡಿತ್ತು. ಬಳಿಕ ಪೊಲೀಸರು ಬಾಲಕನ್ನು ವಿಚಾರಣೆಗೆ ಒಳಪಡಿಸಿದರು. ಈ ವೇಳೆ ಬಾಲಕನೋರ್ವ ತಮ್ಮ ಕೃತ್ಯದ ಬಗ್ಗೆ ಬಾಯಿ ಬಿಟ್ಟಿದ್ದ. ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಆಕೆಯ ಮೃತದೇಹವನ್ನು ಕಾಲುವೆಗೆ ಎಸೆದಿರುವುದಾಗಿ ತಿಳಿಸಿದ್ದ.

ವಿಚಾರಣೆ ವೇಳೆ ಬೆಳಕಿಗೆ ಬಂತು ಭಯಾನಕ ವಿಚಾರ

ಬಳಿಕ ಮೂವರನ್ನು ಪೊಲೀಸರು ವಶಕ್ಕೆ ಪಡೆದು ಹೆಚ್ಚಿನ ಮಾಹಿತಿ ಕಲೆ ಹಾಕಿದರು. ಈ ವೇಳೆ ಅವರು ಕೃತ್ಯದ ಬಗ್ಗೆ ವಿವರಗಳನ್ನು ಒಂದೊಂದಾಗಿ ಬಾಯ್ಬಿಟ್ಟರು. ಪಾರ್ಕ್‌ನಲ್ಲಿ ಆಟವಾಡುತ್ತಿದ್ದ ಬಾಲಕಿ ಬಳಿ ಈ ಮೂವರು ತೆರಳಿದ್ದರು. ಒಂದೇ ಶಾಲೆ ಆಗಿದ್ದರಿಂದ ಬಾಲಕಿಗೂ ಅವರ ಪರಿಚಯವಿತ್ತು. ಹೀಗಾಗಿ ಅವಳೂ ಮಾತನಾಡಿಸಿದ್ದಳು. ಬಳಿಕ ಬಾಲಕರು ತಮ್ಮೊಂದಿಗೆ ಆಡಲು ಬರುವಂತೆ ಆಕೆಯನ್ನು ಜತೆಗೆ ಕರೆದೊಯ್ದರು. ನಿರ್ಜನ ಪ್ರದೇಶದಲ್ಲಿ ಅವರು ಒಬ್ಬರ ನಂತರ ಒಬ್ಬರಂತೆ ಆಕೆಯ ಮೇಲೆ ಎರಗಿದ್ದರು. ಬಳಿಕ ಆಕೆ ದೂರು ನೀಡಿದರೆ ಅರೆಸ್ಟ್‌ ಆಗಬಹುದೆಂಬ ಭಯದಲ್ಲಿ ಬಾಲಕರು ಆಕೆಯನ್ನು ಕೊಂದೇ ಬಿಟ್ಟರು. ಬಳಿಕ ಮೃತದೇಹವನ್ನು ನೀರಾವರಿ ಯೋಜನೆಯ ಕಾಲುವೆಗೆ ಎಸೆದು ಏನೂ ಗೊತ್ತಿಲ್ಲದವರಂತೆ ಮನೆಗೆ ಮರಳಿದ್ದರು. ಏನೂ ನಡೆದೇ ಇಲ್ಲ ಎನ್ನುವಂತೆ ಶಾಲೆಗೆ ಹೋಗಿ ಬರತೊಡಗಿದ್ದರು.

ಇದನ್ನೂ ಓದಿ: Viral News: ಶಾಕಿಂಗ್‌ ಘಟನೆ! ಬುದ್ಧಿ ಹೇಳಿದ ಗುರುವನ್ನೇ ಚುಚ್ಚಿ ಕೊಂದ ವಿದ್ಯಾರ್ಥಿ

ಸದ್ಯ ಕಾಲುವೆಯಲ್ಲಿ ನೀರಿನ ಮಟ್ಟ ಹೆಚ್ಚಿರುವುದರಿಂದ ಬಾಲಕಿಯ ಶವ ಇನ್ನೂ ಪತ್ತೆಯಾಗಿಲ್ಲ. ಸಂತ್ರಸ್ತೆಯ ಕುಟುಂಬಕ್ಕೆ ನ್ಯಾಯ ಒದಗಿಸಲು ಶ್ರಮಿಸುವುದಾಗಿ ಶಾಸಕ ಜಿ.ಜಯಸೂರ್ಯ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Sexual Abuse: ಹೆಣ್ಣು ಮಕ್ಕಳಿಗೆ ಈಗ ಶಾಲೆ ಕೂಡ ಸುರಕ್ಷಿತವಲ್ಲ! ಶಾಲಾ ಶೌಚಾಲಯದಲ್ಲಿ ಬಾಲಕಿ ಮೇಲೆ ಬಾಲಕನಿಂದ ಅತ್ಯಾಚಾರ

Sexual Abuse: ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯ ಪ್ರತಿಷ್ಠಿತ ಶಾಲಾ ಆವರಣದಲ್ಲಿ 14 ವರ್ಷದ ವಿದ್ಯಾರ್ಥಿಯೊಬ್ಬ ಅದೇ ಶಾಲೆಯ ಕಿರಿಯ ತರಗತಿಯಲ್ಲಿ ಓದುತ್ತಿದ್ದ 12 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆರೋಪಿ ಮತ್ತು ಸಂತ್ರಸ್ತೆ ಇಬ್ಬರೂ ಅನಾರೋಗ್ಯದ ಕಾರಣ ಶಾಲೆಯ ಆರೋಗ್ಯ ಕೇಂದ್ರಕ್ಕೆ ಹೋಗಿ ವಿಶ್ರಾಂತಿ ಪಡೆಯುತ್ತಿದ್ದರು. ಆರೋಪಿ ವಿದ್ಯಾರ್ಥಿ, ವಿದ್ಯಾರ್ಥಿನಿಯನ್ನು ಶೌಚಾಲಯಕ್ಕೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನಂತೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Sexual Abuse
Koo

ಶಾಲಾ ಕಾಲೇಜುಗಳೆಂದರೆ ವಿದ್ಯಾ ದೇಗಲವಿದ್ದಂತೆ. ಅಲ್ಲಿಗೆ ಬರುವ (Sexual Abuse) ಮಕ್ಕಳು ವಿದ್ಯೆ ಕಲಿತು ತಮ್ಮ ಬುದ್ಧಿಶಕ್ತಿಯನ್ನು ಹೆಚ್ಚಿಸಿಕೊಂಡು ಜೀವನದಲ್ಲಿ ಉನ್ನತ ಮಟ್ಟಕ್ಕೇರಲು ಪ್ರಯತ್ನಿಸಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳದ ಪ್ರಕರಣಗಳು ಹೆಚ್ಚಾಗಿ ಕೇಳಿಬರುತ್ತಿದೆ. ಶಾಲಾ ಶಿಕ್ಷಕರಿಂದ ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳಕ್ಕೆ ಒಳಗಾಗುತ್ತಿರುವುದು ಮಾತ್ರವಲ್ಲ ತಮ್ಮ ಸಹಪಾಠಿಗಳಿಂದಲೂ ಅತ್ಯಾಚಾರಕ್ಕೆ (Rape Case) ಒಳಗಾಗುತ್ತಿದ್ದಾರೆ. ಅಂತಹದೊಂದು ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯ ಪ್ರತಿಷ್ಠಿತ ಶಾಲೆಯೊಂದರಲ್ಲಿ ನಡೆದಿರುವುದಾಗಿ ಬೆಳಕಿಗೆ ಬಂದಿದೆ.

ಜುಲೈ 13ರ ಶನಿವಾರ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯ ಪ್ರತಿಷ್ಠಿತ ಶಾಲಾ ಆವರಣದಲ್ಲಿ 14 ವರ್ಷದ ವಿದ್ಯಾರ್ಥಿಯೊಬ್ಬ ಅದೇ ಶಾಲೆಯ ಕಿರಿಯ ತರಗತಿಯಲ್ಲಿ ಓದುತ್ತಿದ್ದ 12 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬುದಾಗಿ ತಿಳಿದುಬಂದಿದೆ. ನಂತರ ಈ ಘಟನೆಯ ಬಗ್ಗೆ ತಿಳಿದ ಶಾಲೆಯ ಪ್ರಾಂಶುಪಾಲರು ಬಹೋದಾಪುರ ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ.

Rape Case

ಆರೋಪಿ ಮತ್ತು ಸಂತ್ರಸ್ತೆ ಇಬ್ಬರೂ ಅಪ್ರಾಪ್ತ ವಯಸ್ಸಿನವರಾದ ಕಾರಣ ವಿಶೇಷ ಕಾಯಿದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಗ್ವಾಲಿಯರ್ ಎಎಸ್‍ಪಿ ನಿರಂಜನ್ ಶರ್ಮಾ, “ಗ್ವಾಲಿಯರ್ನ ಪ್ರತಿಷ್ಠಿತ ಶಾಲೆಯೊಂದರ ಪ್ರಾಂಶುಪಾಲರ ಗಮನಕ್ಕೆ ಬಂದಿದ್ದು, ಶಾಲೆಯ ವಿದ್ಯಾರ್ಥಿಯೊಬ್ಬ ಶಾಲೆಯ ಆವರಣದಲ್ಲಿ ಕಿರಿಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಶಾಲಾ ಪ್ರಾಂಶುಪಾಲರು ದೂರು ದಾಖಲಿಸಿದ್ದಾರೆ. ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ” ಎಂದು ತಿಳಿಸಿದ್ದಾರೆ.

ವರದಿ ಪ್ರಕಾರ, ಘಟನೆ ನಡೆದ ದಿನ, ಜುಲೈ 13ರಂದು ಆರೋಪಿ ಮತ್ತು ಸಂತ್ರಸ್ತೆ ಇಬ್ಬರೂ ಅನಾರೋಗ್ಯದ ಕಾರಣ ಶಾಲೆಯ ಆರೋಗ್ಯ ಕೇಂದ್ರಕ್ಕೆ ಹೋಗಿ ವಿಶ್ರಾಂತಿ ಪಡೆಯುತ್ತಿದ್ದರು. ಇದರ ನಂತರ ಆರೋಪಿ ವಿದ್ಯಾರ್ಥಿ, ವಿದ್ಯಾರ್ಥಿನಿಯನ್ನು ಶೌಚಾಲಯಕ್ಕೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ನಂತರ, ಸಂತ್ರಸ್ತೆ ಘಟನೆಯ ಬಗ್ಗೆ ಅಲ್ಲಿದ್ದ ನರ್ಸ್‍ಗೆ ಮಾಹಿತಿ ನೀಡಿದಳು. ಬಳಿಕ ಈ ವಿಷಯವು ಶಾಲಾ ಅಧಿಕಾರಿಗಳ ಗಮನಕ್ಕೆ ತಂದ ಕಾರಣ , ಅವರು ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಕಾಮುಕರ ಹಾವಳಿ ಮಿತಿ‌ ಮೀರಿದೆ; ಬೀದಿ ನಾಯಿಯನ್ನೂ ಇವರು ಬಿಡುತ್ತಿಲ್ಲ! ಆಘಾತಕಾರಿ ವಿಡಿಯೊ

Continue Reading

ಕ್ರೈಂ

Gauri Lankesh Murder: ಗೌರಿ ಲಂಕೇಶ್‌ ಹತ್ಯೆ ಪ್ರಕರಣದ 3 ಆರೋಪಿಗಳಿಗೆ ಜಾಮೀನು

Gauri Lankesh Murder: ಇವರು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಕಲಬುರ್ಗಿ ಪೀಠದ ನ್ಯಾಯಮೂರ್ತಿ ಎಸ್‌. ವಿಶ್ವಜಿತ್‌ ಶೆಟ್ಟಿ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ. ಕಳೆದ 6 ವರ್ಷಗಳಿಂದ ಆರೋಪಿಗಳು ಜೈಲಿನಲ್ಲಿದ್ದಾರೆ. ವಿಚಾರಣೆ ಮುಗಿಯದೇ ದೀರ್ಘ ಕಾಲ‌ ಜೈಲಿನಲ್ಲಿಡುವಂತಿಲ್ಲವೆಂದು ತೀರ್ಪು ಇದೆ.

VISTARANEWS.COM


on

Gauri Lankesh murder
Koo

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ (Journalist Gauri Lankesh) ಪ್ರಕರಣದ ಮೂವರು ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್‌ (Karnataka High Court) ಮಂಗಳವಾರ ಜಾಮೀನು (Bail) ಮಂಜೂರು ಮಾಡಿದೆ. ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಅಮಿತ್‌ ದಿಗ್ವೇಕರ್‌ ಅಲಿಯಾಸ್‌ ಅಮಿತ್‌ ಅಲಿಯಾಸ್‌ ಪ್ರದೀಪ್‌ ಮಹಾಜನ್‌, ಏಳನೇ ಆರೋಪಿ ಸುರೇಶ್‌ ಎಚ್‌.ಎಲ್‌ ಅಲಿಯಾಸ್‌ ಟೀಚರ್‌ ಮತ್ತು 17ನೇ ಆರೋಪಿ ಕೆ.ಟಿ ನವೀನ್‌ ಕುಮಾರ್‌ ಅಲಿಯಾಸ್‌ ನವೀನ್‌ಗೆ ಜಾಮೀನು ದೊರೆತಿದೆ.

ಇವರು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಕಲಬುರ್ಗಿ ಪೀಠದ ನ್ಯಾಯಮೂರ್ತಿ ಎಸ್‌. ವಿಶ್ವಜಿತ್‌ ಶೆಟ್ಟಿ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ. ಕಳೆದ 6 ವರ್ಷಗಳಿಂದ ಆರೋಪಿಗಳು ಜೈಲಿನಲ್ಲಿದ್ದಾರೆ. ವಿಚಾರಣೆ ಮುಗಿಯದೇ ದೀರ್ಘ ಕಾಲ‌ ಜೈಲಿನಲ್ಲಿಡುವಂತಿಲ್ಲವೆಂದು ತೀರ್ಪು ಇದೆ. ಹೀಗಾಗಿ ಷರತ್ತುಬದ್ಧ ಜಾಮೀನು ನೀಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಆರೋಪಿಗಳ ಪರ ನ್ಯಾಯವಾದಿಗಳಾದ ಅರುಣ್ ಶ್ಯಾಮ್, ಮಧುಕರ್ ದೇಶಪಾಂಡೆ, ಬಸವರಾಜ ಸಪ್ಪಣ್ಣವರ್ ವಾದಿಸಿದ್ದರು.

11ನೇ ಆರೋಪಿ ಮೋಹನ್‌ ನಾಯಕ್‌ಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿರುವುದನ್ನು ಪರಿಗಣಿಸಿ ತಮಗೂ ಜಾಮೀನು ಮಂಜೂರು ಮಾಡಬೇಕು ಎಂಬುದು ಎಲ್ಲಾ ಅರ್ಜಿದಾರರ ವಾದವಾಗಿತ್ತು. ಇದಕ್ಕೆ ತೀವ್ರವಾಗಿ ಆಕ್ಷೇಪಿಸಿದ ಪ್ರಾಸಿಕ್ಯೂಷನ್‌ “ಮೋಹನ್‌ ನಾಯಕ್‌ ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್‌ನ ಬೇರೊಂದು ಪೀಠವು ತಿರಸ್ಕರಿಸಿದ್ದು, ಕೊಲೆ, ಪಿತೂರಿಯಂಥ ಗಂಭೀರ ಆರೋಪಗಳಿರುವಾಗ ಜಾಮೀನು ನೀಡಲಾಗದು ಎಂದಿದೆ. ಇಡೀ ಪ್ರಕರಣದಲ್ಲಿ ಜಾಮೀನು ಪಡೆದಿರುವ ಏಕೈಕ ಮತ್ತು ಮೊದಲ ಆರೋಪಿ ಮೋಹನ್‌ ನಾಯಕ್‌. ಆತನ ಜಾಮೀನು ಆದೇಶವನ್ನು ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ಅದು ವಿಚಾರಣೆಗೆ ಬಾಕಿಯಿದೆ” ಎಂದಿತ್ತು.

ಸಂಚಲನ ಮೂಡಿಸಿದ್ದ ಗೌರಿ ಕೊಲೆ

ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಗೌರಿ ಲಂಕೇಶ್‌ ಅವರನ್ನು 2017ರ ಸೆಪ್ಟೆಂಬರ್‌ 5ರಂದು ಕೆಲಸ ಮುಗಿಸಿ ಮನೆಗೆ ಮರಳಿದ ವೇಳೆ ಗುಂಡು ಹಾರಿಸಿ ಕೊಲ್ಲಲಾಗಿತ್ತು. ಹತ್ಯೆಯ ಸಂಚು ರೂಪಿಸಿದ ಪ್ರಮುಖ ರೂವಾರಿ ಎಂದು ಅಮೋಲ್ ಕಾಳೆ ಮೇಲೆ ಆರೋಪವಿದ್ದರೆ, ಗುಂಡು ಹಾರಿಸಿದ ಆರೋಪ ಪರಶುರಾಮ್ ವಾಗ್ಮೋರೆ ಮೇಲೆ ಹಾಗೂ ಆತನನ್ನು ಕೂರಿಸಿಕೊಂಡು ಬೈಕ್ ಚಲಾಯಿಸಿ ತಪ್ಪಿಸಿಕೊಳ್ಳಲು ನೆರವಾದ ಆರೋಪ ಗಣೇಶ್ ಮಿಸ್ಕಿನ್ ಮೇಲೆ ಇದೆ.

ಅಮೋಲ್ ಕಾಳೆ, ಪರಶುರಾಮ್ ವಾಗ್ಮೋರೆ, ಗಣೇಶ್ ಮಿಸ್ಕಿನ್, ಅಮಿತ್ ಬಾಡ್, ಅಮಿತ್ ದೆಗ್ವೇಕರ್, ಭರತ್ ಕುರಣೆ, ಸುರೇಶ್ ಹೆಚ್ ಎಲ್, ರಾಜೇಶ್ ಬಂಗೇರ, ಸುಧನ್ವ ಗೊಂದಲೇಕರ್, ಶರದ್ ಕಾಲಸ್ಕರ್, ಮೋಹನ್ ನಾಯಕ್, ವಾಸುದೇವ್ ಸೂರ್ಯವಂಶಿ, ಸುಜಿತ್ ಕುಮಾರ್, ಮನೋಹರ ಎಡವೆ, ವಿಕಾಸ್‌ ಪಾಟೀಲ್‌, ಶ್ರೀಕಾಂತ್ ಪಂಗರ್ಕರ್, ಕೆ ಟಿ ನವೀನ್ ಕುಮಾರ್ ಮತ್ತು ಹೃಶಿಕೇಶ್ ದಿಯೋದಿಕರ್‌ ಪ್ರಕರಣದ ಆರೋಪಿಗಳಾಗಿದ್ದಾರೆ.

ಬೆಂಗಳೂರಿನ ರಾಜರಾಜೇಶ್ವರಿ ನಗರ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 302, 120ಬಿ, 114, 118, 109, 201, 203, 204 ಮತ್ತು 35, ಸಶಸ್ತ್ರ ಕಾಯಿದೆಯ ಸೆಕ್ಷನ್‌ಗಳಾದ 25(1), 25(1B), 27(1) ಮತ್ತು ಕೋಕಾ ಕಾಯಿದೆಯ ಸೆಕ್ಷನ್‌ಗಳಾದ 3(1)(I), 3(2), 3(3), 3(4) ಅಡಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: Kalaburagi News : ಕಲಬುರಗಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ; ನದಿಗೆ ಹಾರಿ ಯುವಕ-ಯುವತಿ ಆತ್ಮಹತ್ಯೆ

Continue Reading

ದೇಶ

Road Accident: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ ವೇಯಲ್ಲಿ ಭೀಕರ ಅಪಘಾತ; ಪಂಢರಪುರಕ್ಕೆ ತೆರಳುತ್ತಿದ್ದ ಐವರು ಭಕ್ತರ ಸಾವು

Road Accident: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ ವೇಯಲ್ಲಿ ಭೀಕರ ರಸ್ತೆ ಅಪಘಾತ ಸಂಭಿಸಿದ್ದು, ಐವರು ಭಕ್ತರು ಮೃತಪಟ್ಟಿದ್ದಾರೆ. ಬಸ್ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಮೃತರು ಆಷಾಢ ಏಕಾದಶಿ ಆಚರಣೆಗಾಗಿ ಮುಂಬೈ ಬಳಿಯ ತಮ್ಮ ಊರಾದ ಡೊಂಬಿವ್ಲಿಯಿಂದ ಪಂಢರಪುರಕ್ಕೆ ತೆರಳುತ್ತಿದ್ದರು.

VISTARANEWS.COM


on

Road Accident
Koo

ಮುಂಬೈ: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ ವೇ (Mumbai-Pune Expressway)ಯಲ್ಲಿ ಭೀಕರ ರಸ್ತೆ ಅಪಘಾತ ಸಂಭಿಸಿದ್ದು, ಐವರು ಭಕ್ತರು ಮೃತಪಟ್ಟಿದ್ದಾರೆ. ಬಸ್ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ (Road Accident). ಘಟನೆಯಲ್ಲಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೃತರು ಆಷಾಢ ಏಕಾದಶಿ ಆಚರಣೆಗಾಗಿ ಮುಂಬೈ ಬಳಿಯ ತಮ್ಮ ಊರಾದ ಡೊಂಬಿವ್ಲಿಯಿಂದ ಪಂಢರಪುರಕ್ಕೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಮಧ್ಯರಾತ್ರಿಯ ಸುಮಾರಿಗೆ ಬಸ್ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು ಕಮರಿಗೆ ಬಿದ್ದಿದೆ. ʼʼಡೊಂಬಿವ್ಲಿಯಿಂದ ಒಟ್ಟು 42 ಪ್ರಯಾಣಿಕರು ಪಂಢರಪುರಕ್ಕೆ ತೆರಳುತ್ತಿದ್ದಾಗ ಅಡ್ನೆ ಗ್ರಾಮದ ಬಳಿ ಈ ಅಪಘಾತ ನಡೆದಿದೆʼʼ ಎಂದು ಡಿಸಿಪಿ ವಿವೇಕ್ ಪನ್ಸಾರೆ ಸುದ್ದಿಗಾರರಿಗೆ ತಿಳಿಸಿದ್ದಾರೆ. ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಅವರು ಹೇಳಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

“ಆಷಾಢ ಏಕಾದಶಿ ಹಿನ್ನಲೆಯಲ್ಲಿ ಭಕ್ತರು ಖಾಸಗಿ ಬಸ್ ಮೂಲಕ ಪಂಢರಪುರಕ್ಕೆ ಹೋಗುತ್ತಿದ್ದರು. ಬಸ್ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದಿದೆ. ಗಾಯಗೊಂಡ 42 ಜನರನ್ನು ಎಂಜಿಎಂ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಮೂವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 5 ಜನರು ಪ್ರಾಣ ಕಳೆದುಕೊಂಡಿರುವುದನ್ನು ವೈದ್ಯರು ದೃಢಪಡಿಸಿದ್ದಾರೆʼʼ ಎಂದು ವಿವೇಕ್ ಪನ್ಸಾರೆ ಮಾಹಿತಿ ನೀಡಿದ್ದಾರೆ.

ಗುಜರಾತ್‌ನಲ್ಲಿ ಭೀಕರ ರಸ್ತೆ ಅಪಘತಾಕ್ಕೆ 6 ಮಂದಿ ಬಲಿ

ಗಾಂಧಿನಗರ: ಇತ್ತ ಗುಜರಾತ್‌ನಲ್ಲಿಯೂ ಭೀಕರ ರಸ್ತೆ ಅಪಘಾತ ಸಂಭವಿಸಿ 6 ಮಂದಿ ಮೃತಪಟ್ಟಿದ್ದಾರೆ. ಗುಜರಾತ್‌ನ ಆನಂದ್ ಪಟ್ಟಣದ ಬಳಿ ಅಹಮದಾಬಾದ್-ವಡೋದರಾ ಎಕ್ಸ್‌ಪ್ರೆಸ್‌ ವೇಯಲ್ಲಿ ಸೋಮವಾರ ಬೆಳಿಗ್ಗೆ ವೇಗವಾಗಿ ಚಲಿಸುತ್ತಿದ್ದ ಟ್ರಕ್ ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಮೃತಪಟ್ಟು ಮತ್ತು ಆರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಜಾನೆ 4.30ರ ಸುಮಾರಿಗೆ ಆನಂದ್ ಜಿಲ್ಲೆಯ ಚಿಖೋದ್ರಾ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಟೈರ್‌ ಬದಲಾಯಿಸಲು ಅಹಮದಾಬಾದ್ ಕಡೆಗೆ ತೆರಳುತ್ತಿದ್ದ ಖಾಸಗಿ ಐಷಾರಾಮಿ ಬಸ್ ಅನ್ನು ರಸ್ತೆ ಬದಿಗೆ ನಿಲ್ಲಿಸಲಾಗಿತ್ತು. ಬಸ್‌ನಿಂದ ಕೆಳಗೆ ಇಳಿದಿದ್ದ ಪ್ರಯಾಣಿಕರು ಅಲ್ಲೇ ನಿಂತಿದ್ದರು. ಈ ವೇಳೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟರೆ, ಓರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಪೊಲೀಸರ ಪ್ರಕಾರ, ಮೃತರಲ್ಲಿ ಮೂವರು ಮಹಿಳೆಯರು ಮತ್ತು ಮೂವರು ಪುರುಷರು ಸೇರಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Road Accident : ಲಾಂಗ್‌ ಡ್ರೈವ್‌ ಹೋದ ಯುವಕರಿಬ್ಬರು ಹಿಟ್ ಆ್ಯಂಡ್ ರನ್‌ಗೆ ಬಲಿ; ನಿಲ್ಲದ ನಿಶಾಚರಿಗಳ ಕಾಟ

ನಿದ್ರೆ ಮಂಪರಿನಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ, ಇಬ್ಬರು ಸಾವು

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಚಿತ್ರದುರ್ಗದ ತಳಕು ಹೈವೆ ಬ್ರೀಡ್ಜ್ ಸಮೀಪದಲ್ಲಿ ಅಪಘಾತ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಳಕು ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ಬಳ್ಳಾರಿ ಮೂಲದ ಗೋಪಿನಾಥ್ (52), ಲಲಿತಮ್ಮ (47) ಮೃತ ದುರ್ದೈವಿಗಳು. ಬೆಂಗಳೂರಿನಲ್ಲಿ ಉಪನಯನ ಕಾರ್ಯಕ್ರಮ ಮುಗಿಸಿ, ಬಳ್ಳಾರಿಗೆ ತೆರಳುವ ವೇಳೆ ಅಪಘಾತ ನಡೆದಿದೆ. ನಿದ್ರೆಯ ಮಂಪರಿನಲ್ಲಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿದೆ ಎನ್ನಲಾಗಿದೆ. 

Continue Reading

ಪ್ರಮುಖ ಸುದ್ದಿ

Actor Darshan: ರೇಣುಕಾ ಸ್ವಾಮಿ ದೇಹ ಪೋಸ್ಟ್‌ ಮಾರ್ಟಮ್‌ ಮಾಡಿದ ವೈದ್ಯ ಪವಿತ್ರ ಗೌಡ ಆಪ್ತೆಯ ಪತಿ!

Actor Darshan: ಶಾಕಿಂಗ್ ಸಂಗತಿ ಏನು ಅಂದರೆ ರೇಣುಕಾ ಸ್ವಾಮಿಯ ಶವ ಪೋಸ್ಟ್‌ಮಾರ್ಟಮ್ ಮಾಡಿದ್ದೇ ಸಮತಳ ಪತಿ! ಸಮತ ಪತಿ ಡಾ. ಸುರೇಶ್ ಅವರಿಂದ ರೇಣುಕಾ ಸ್ವಾಮಿ ಶವದ ಮರಣೋತ್ತರ ಪರೀಕ್ಷೆ ನಡೆದಿತ್ತು. ಆ ಮರಣೋತ್ತರ ಪರೀಕ್ಷೆ ಪೊಲೀಸರ ಕೈ ಸೇರುವ ಮೊದಲೇ ಜೈಲಿನಲ್ಲಿ ದರ್ಶನ್ ಹಾಗೂ ಪವಿತ್ರರನ್ನು ಸಮತ ಭೇಟಿ ಮಾಡಿದ್ದಳು.

VISTARANEWS.COM


on

actor darshan samata husband
Koo

ಬೆಂಗಳೂರು: ನಟ ದರ್ಶನ್ (Actor Darshan) ಗ್ಯಾಂಗ್‌ನಿಂದ ನಡೆದ ರೇಣುಕಾಸ್ವಾಮಿ ಕೊಲೆ (Renuka Swamy Murder) ಪ್ರಕರಣದ ವಿಚಾರಣೆಗೆ ಮತ್ತೊಂದು ಟ್ವಿಸ್ಟ್‌ ದೊರೆತಿದೆ. ಮೃತ ರೇಣುಕಾಸ್ವಾಮಿ ಶವ ಪೋಸ್ಟ್‌ ಮಾರ್ಟಮ್‌ (Post Martem) ನಡೆಸಿದ ವೈದ್ಯ ಬೇರೆ ಯಾರೂ ಅಲ್ಲ, ಜೈಲಿನಲ್ಲಿ ದರ್ಶನ್‌ ಹಾಗೂ ಪವಿತ್ರ ಗೌಡ (Pavitra Gowda) ಅವರನ್ನು ಭೇಟಿಯಾಗಿದ್ದ ಪವಿತ್ರ ಆಪ್ತೆ ಸಮತ ಅವರ ಪತಿ!

ಅಂದರೆ, ಈ ಪ್ರಕರಣದ ಸಾಕ್ಷ್ಯಗಳನ್ನು ತಿರುಚುವಲ್ಲಿ ಸಮತ ಕೈವಾಡ ಇದೆಯಾ, ಇದ್ದರೆ ಎಷ್ಟು ಎನ್ನುವ ಬಗ್ಗೆ ಈಗ ಪೊಲೀಸರು ತಲೆ ಕೆಡಿಸಿಕೊಂಡಿದ್ದಾರೆ. ಆ ಶಾಕಿಂಗ್ ಸ್ಟೋರಿಯ ಕಥನಾಯಕಿಯೇ ಪವಿತ್ರಗೌಡ ಸ್ನೇಹಿತೆ ಸಮತ. ಕೊಲೆ ಕೇಸ್‌ನಲ್ಲಿ ಜೈಲುಪಾಲಾಗಿರುವ ಪವಿತ್ರ ಗೌಡಳನ್ನು ಸಮತ ಭೇಟಿ ಮಾಡಿದ್ದಳು. ಪವಿತ್ರ ಗೌಡ ಮಾತ್ರವಲ್ಲದೇ ದರ್ಶನ್ ಜೊತೆಗೂ ಮಾತುಕತೆ ನಡೆಸಿದ್ದಳು. ಸಮತಳ ಜೈಲು ಭೇಟಿಯಿಂದ ತನಿಖಾಧಿಕಾರಿಗಳ ತಲೆಯಲ್ಲಿ ಅನುಮಾನ ಮೂಡಿತ್ತು. ಡೌಟ್ ಹಿನ್ನೆಲೆಯಲ್ಲಿ, ವಿಚಾರಣೆಗೆ ಹಾಜರಾಗುವಂತೆ ತನಿಖಾಧಿಕಾರಿ ನೋಟೀಸ್ ನೀಡಿದ್ದರು.

ಸಮತಳನ್ನು ಆಡುಗೋಡಿ ಟೆಕ್ನಿಕಲ್ ಸೆಲ್‌ನಲ್ಲಿ ತೀವ್ರವಾಗಿ ವಿಚಾರಣೆಗೆ ಒಳಪಡಿಸಿದಾಗ, ಪೊಲೀಸರೇ ಒಂದು ಕ್ಷಣ ಶಾಕ್ ಆಗುವಂಥ ಸಂಗತಿ ಬೆಳಕಿಗೆ ಬಂದಿತ್ತು. ಆ ವಿಚಾರ, ರೇಣುಕ ಸ್ವಾಮಿ ದೇಹದ ಪೋಸ್ಟ್‌ಮಾರ್ಟಮ್ ಮಾಡಿದ ವೈದ್ಯರ ಮೇಲೂ ಪೊಲೀಸರಿಗೆ ಅನುಮಾನ ಮೂಡಿಸುವಂತಿತ್ತು. ಆ ಅನುಮಾನ ಮೂಡಲು ಕಾರಣವಾದದ್ದು ಸಮತಳ ಪತಿಯ ವರ್ತನೆ. ಸಮತಳಿಂದ ಪವಿತ್ರ ಗೌಡ ಹಾಗೂ ದರ್ಶನ್ ಭೇಟಿ ಬಳಿಕ ಕೇಸ್‌ನಲ್ಲಿ ಈ ಬಿಗ್ ಟ್ವಿಸ್ಟ್ ದೊರೆತಿದೆ.

ಶಾಕಿಂಗ್ ಸಂಗತಿ ಏನು ಅಂದರೆ ರೇಣುಕಾ ಸ್ವಾಮಿಯ ಶವ ಪೋಸ್ಟ್‌ಮಾರ್ಟಮ್ ಮಾಡಿದ್ದೇ ಸಮತಳ ಪತಿ! ಸಮತ ಪತಿ ಡಾ. ಸುರೇಶ್ ಅವರಿಂದ ರೇಣುಕಾ ಸ್ವಾಮಿ ಶವದ ಮರಣೋತ್ತರ ಪರೀಕ್ಷೆ ನಡೆದಿತ್ತು. ಆ ಮರಣೋತ್ತರ ಪರೀಕ್ಷೆ ಪೊಲೀಸರ ಕೈ ಸೇರುವ ಮೊದಲೇ ಜೈಲಿನಲ್ಲಿ ದರ್ಶನ್ ಹಾಗೂ ಪವಿತ್ರರನ್ನು ಸಮತ ಭೇಟಿ ಮಾಡಿದ್ದಳು. ಹಾಗಾದರೆ ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿದ್ದುವ ಯತ್ನ ನಡೆದಿತ್ತೇ? ಈ ಅನುಮಾನದಲ್ಲಿ ಸಮತಳನ್ನು ತನಿಖಾ ತಂಡ ತೀವ್ರ ವಿಚಾರಣೆಗೆ ಒಳಪಡಿಸಿತ್ತು.

ತನಿಖೆಗೊಳಪಡಿಸಿ ಸಮತ ನೀಡಿದ ಹೇಳಿಕೆಯನ್ನು ಪೊಲೀಸರು ದಾಖಲು ಮಾಡಿಕೊಂಡಿದ್ದಾರೆ. ಜೊತೆಗೆ ಸಮತ ಪತಿ ಡಾ. ಸುರೇಶ್ ಅವರ ಕಾಲ್ ಡಿಟೇಲ್ಸ್, ಚಾಟಿಂಗ್ಸ್ ಪರಿಶೀಲಿಸಲಾಗಿದೆ. ರೇಣುಕಾ ಸ್ವಾಮಿ ಶವ ಮರಣೋತ್ತರ ಪರೀಕ್ಷೆ ನಡೆಸುವ ವೇಳೆ, ತಮ್ಮ ಡ್ಯೂಟಿಗೆ ರಜೆ ಇದ್ದರೂ ಸುರೇಶ್‌ ಕರ್ತವ್ಯಕ್ಕೆ ಹಾಜರಾಗಿದ್ದರು. ತಾನೇ ಖುದ್ದು ಮುಂದೆ ನಿಂತು ರೇಣುಕಾಸ್ವಾಮಿ ಶವ ಮರಣೋತ್ತರ ಪರೀಕ್ಷೆ ಮಾಡಿಸಿದ್ದರು.

ಪವಿತ್ರ ಗೌಡ ಕ್ಲೋಸ್ ಫ್ರೆಂಡ್ ಪತಿಯಾಗಿರುವ ಕಾರಣ ಮರಣೋತ್ತರ ಪರೀಕ್ಷೆ ವರದಿಯನ್ನು ಮತ್ತೊಮ್ಮೆ ಪರಿಶೀಲನೆ ಮಾಡಲಾಗುತ್ತಿದೆ. ಪರಿಶೀಲನೆ ನಡೆಸಿ ಡಾ. ಪ್ರದೀಪ್ ಎಂಬ ವೈದ್ಯರಿಂದ ಪೊಲೀಸರಿಗೆ ಮತ್ತೆ ಮರಣೋತ್ತರ ಪರೀಕ್ಷಾ ವರದಿ ಸಲ್ಲಿಕೆ ಮಾಡಲಾಗುತ್ತಿದೆ. ಜೈಲಿಗೆ ತರಾತುರಿಯಿಂದ ಬಂದು ದರ್ಶನ್‌ ಹಾಗೂ ಪವಿತ್ರರನ್ನು ಭೇಟಿಯಾದದ್ದೇ ಇದೀಗ ಈ ಪ್ರಕರಣದ ಸಾಕ್ಷಿ ನಾಶದ ಪ್ರಯತ್ನದಲ್ಲಿ ಇನ್ನೊಂದು ಬಿಗ್‌ ಟ್ವಿಸ್ಟ್‌ ನೀಡಿದೆ.

ಇದನ್ನೂ ಓದಿ: Actor Darshan: ಪವಿತ್ರಾ ಗೌಡ ಆರೋಗ್ಯದಲ್ಲೂ ಏರುಪೇರು; ಚಿಕಿತ್ಸೆ ನೀಡಿದ ವೈದ್ಯರು

Continue Reading
Advertisement
7th Pay Commission
ಕರ್ನಾಟಕ1 min ago

7th Pay Commission: ಆ.1ರಿಂದ ನೌಕರರ ವೇತನ ಹೆಚ್ಚಳ; ಸರ್ಕಾರಕ್ಕೆ ವಾರ್ಷಿಕ 20,208 ಕೋಟಿ ಹೆಚ್ಚುವರಿ ಹೊರೆ ಎಂದ ಸಿಎಂ

Sexual Abuse
Latest3 mins ago

Sexual Abuse: ಹೆಣ್ಣು ಮಕ್ಕಳಿಗೆ ಈಗ ಶಾಲೆ ಕೂಡ ಸುರಕ್ಷಿತವಲ್ಲ! ಶಾಲಾ ಶೌಚಾಲಯದಲ್ಲಿ ಬಾಲಕಿ ಮೇಲೆ ಬಾಲಕನಿಂದ ಅತ್ಯಾಚಾರ

MAX Teaser
ಸ್ಯಾಂಡಲ್ ವುಡ್8 mins ago

MAX Teaser: ಬಹುನಿರೀಕ್ಷಿತ ʼಮ್ಯಾಕ್ಸ್ʼ ಚಿತ್ರದ ಟೀಸರ್‌ ಔಟ್‌; ರೌಡಿಗಳ ಅಡ್ಡದಲ್ಲಿ ನಿಂತು ಲಾಂಗ್‌ ಬೀಸಿದ ಸುದೀಪ್‌

Soldier 2
ಸಿನಿಮಾ11 mins ago

Soldier 2: ಮುಂದಿನ ವರ್ಷ ‘ಸೋಲ್ಜರ್ 2’ ಶೂಟಿಂಗ್; ಮತ್ತೆ ಒಂದಾಗಲಿದ್ದಾರೆಯೇ ಬಾಬಿ ಡಿಯೋಲ್-ಪ್ರೀತಿ ಜಿಂಟಾ?

Rain Effect.. karnataka Rain Effect
ಮಳೆ28 mins ago

Rain Effect : ಭಾರಿ ಮಳೆಗೆ ಶಿರೂರು ಗುಡ್ಡ ಕುಸಿತ; ಮಣ್ಣಿನಡಿ ಸಿಲುಕಿದ್ದ ಮಹಿಳೆ ಮೃತದೇಹ ಪತ್ತೆ

RCB
ಕ್ರೀಡೆ43 mins ago

RCB: ಆರ್​ಸಿಬಿ ಕಪ್​ ಗೆಲ್ಲದಿರಲು ನೈಜ ಕಾರಣ ತಿಳಿಸಿದ ತಂಡದ ಮಾಜಿ ಆಟಗಾರ

Gold Rate Today
ಚಿನ್ನದ ದರ48 mins ago

Gold Rate Today: ಮತ್ತೆ ಏರಿಕೆಯಾದ ಚಿನ್ನದ ಬೆಲೆ; ಆಭರಣ ಕೊಂಡುಕೊಳ್ಳುವ ಮುನ್ನ ದರ ಗಮನಿಸಿ

Karnataka assembly live hd revanna
ಪ್ರಮುಖ ಸುದ್ದಿ56 mins ago

Karnataka Assembly Live: ವಾಲ್ಮೀಕಿ ಹಗರಣ ಚರ್ಚೆಯ ನಡುವೆ ಗದ್ದಲ ಸೃಷ್ಟಿಸಿದ ರೇವಣ್ಣ ಪ್ರಕರಣ; ರೊಚ್ಚಿಗೆದ್ದ ರೇವಣ್ಣ

Assembly Session 2024
ಕರ್ನಾಟಕ1 hour ago

Assembly Session 2024: ಮೈಸೂರು ಪೇಪರ್ ಮಿಲ್ಸ್‌ ಪುನರಾರಂಭಕ್ಕೆ ಸರ್ಕಾರ ಚಿಂತನೆ: ಸಚಿವ ಎಂ.ಬಿ. ಪಾಟೀಲ್

Donald Trump
ವಿದೇಶ1 hour ago

Donald Trump: ಬೆದರಿಕೆಗೆ ಬಗ್ಗದ ಡೊನಾಲ್ಡ್‌ ಟ್ರಂಪ್;‌ ಕಿವಿಗೆ ಬ್ಯಾಂಡೇಜ್‌ ಕಟ್ಟಿಕೊಂಡು ಜನರೆದುರು ಪ್ರತ್ಯಕ್ಷ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 hour ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ21 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌