Yadgiri News: ನಿಸ್ವಾರ್ಥ ಸೇವೆಯಿಂದ ಮಾತ್ರ ಬದುಕಿನ ಮೌಲ್ಯ ವೃದ್ಧಿ: ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು - Vistara News

ಯಾದಗಿರಿ

Yadgiri News: ನಿಸ್ವಾರ್ಥ ಸೇವೆಯಿಂದ ಮಾತ್ರ ಬದುಕಿನ ಮೌಲ್ಯ ವೃದ್ಧಿ: ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು

Yadgiri News: ಯಾದಗಿರಿ ನಗದರ ಕೆಇಬಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಡಾ. ನೀಲಮ್ಮ ಎಸ್. ರಡ್ಡಿ ಯಲ್ಹೇರಿ ಅವರ ಬೀಳ್ಕೊಡುಗೆ ಸಮಾರಂಭವನ್ನು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಉದ್ಘಾಟಿಸಿದರು.

VISTARANEWS.COM


on

Value of life increases only through selfless service says MLA Channareddy Patila Tunnuru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಾದಗಿರಿ: ನಿಸರ್ಗದಲ್ಲಿ ಆ ಭಗವಂತ ಪ್ರತಿಯೊಬ್ಬರಿಗೂ ಸಮಾಜದಲ್ಲಿ ದೈವದತ್ತವಾಗಿ ಕ್ಷೇತ್ರವನ್ನು ನೀಡುತ್ತಾನೆ, ಯಾರು ಆ ಕ್ಷೇತ್ರದಲ್ಲಿ ಉತ್ಸಾಹದಿಂದ, ಕರ್ತವ್ಯ ಪ್ರಜ್ಞೆ ಮೈಗೂಡಿಸಿಕೊಂಡು ನಿಸ್ವಾರ್ಥದಿಂದ ಕೆಲಸ ಮಾಡುತ್ತಾರೆ, ಅವರ ಬದುಕಿನ ಮೌಲ್ಯ ವೃದ್ಧಿಯಾಗುತ್ತದೆ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು (Yadgiri News) ಅಭಿಪ್ರಾಯಪಟ್ಟರು.

ನಗದರ ಕೆಇಬಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಡಾ. ನೀಲಮ್ಮ ಎಸ್. ರಡ್ಡಿ ಯಲ್ಹೇರಿ ಅವರ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಡಾ. ನೀಲಮ್ಮ ಅವರು ಮದ್ಯಮ ವರ್ಗದ ಕುಟುಂಬದಲ್ಲಿ ಜನಿಸಿ, ಪರಿಶ್ರಮದಿಂದ ಅಭ್ಯಾಸ ಮಾಡಿ, ವೈದ್ಯರಾಗಿ ಜೀವನದಲ್ಲಿ ಸರಳತೆ, ಸಮಯಪ್ರಜ್ಞೆ, ಕಾಯಕತತ್ವ ಹಾಗೂ ಮಾನವೀಯ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಆರೋಗ್ಯ ಇಲಾಖೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿ, ಬದಲಾವಣೆಗೆ ಶ್ರಮಿಸಿದ್ದಾರೆ, ಅಲ್ಲದೇ ಸಾಮಾಜಿಕ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ, ಅವರ ಕಾರ್ಯವೈಖರಿ ಯುವ ವೈದ್ಯರಿಗೆ ಮಾದರಿಯಾಗಲಿ ಎಂದು ತಿಳಿಸಿದರು.

ಇದನ್ನೂ ಓದಿ: Job Alert: ಪದವೀಧರರಿಗೆ ಗುಡ್‌ನ್ಯೂಸ್‌; SCDCC ಬ್ಯಾಂಕ್‌ನಲ್ಲಿದೆ 123 ಹುದ್ದೆ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಐಎಂಎ ಅಧ್ಯಕ್ಷ ಡಾ. ಭಗವಂತ ಅನವಾರ ಮಾತನಾಡಿದರು,

ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ನೀಲಮ್ಮ ಎಸ್. ರಡ್ಡಿ ಯಲ್ಹೇರಿ, ನಾನು ಮಾಜಿ ಸಚಿವ ಡಾ. ಎ.ಬಿ. ಮಾಲಕರಡ್ಡಿ ಅವರ ಮಾರ್ಗದರ್ಶನದಲ್ಲಿ, ತಂದೆ-ತಾಯಿ ಎಲ್ಲರ ಸಹಕಾರದಿಂದ ವೈದ್ಯೆಯಾಗಿ ಸರ್ಕಾರಿ ಸೇವೆಯಲ್ಲಿ ಆತ್ಮಸಾಕ್ಷಿಯಾಗಿ ಕೆಲಸ ಮಾಡಿದ ಆತ್ಮತೃಪ್ತಿ ನನಗಿದೆ, ಇನ್ನೂ ಹಲವಾರು ಕ್ಷೇತ್ರಗಳಲ್ಲಿ ಕೆಲಸ ಮಾಡಬೇಕಾಗಿರುವುದು ಬಹಳಷ್ಟಿದೆ, ಅದಕ್ಕೆ ನನ್ನ ಆರೋಗ್ಯ ಹಾಗೂ ನಿಸರ್ಗ ಸಹಕರಿಸಬೇಕು ಎಂದು ಭಗವಂತನಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: Kannada New Movie: ಮೈಸೂರಿನ 100 ವರ್ಷಗಳ ಹಳೇ ಮನೆಯಲ್ಲಿ ʼಫಾದರ್ʼ ಸಿನಿಮಾ ಚಿತ್ರೀಕರಣ

ಕಾರ್ಯಕ್ರಮದಲ್ಲಿ ಯಲ್ಹೇರಿ ಶಿವಶಂಕರ ಮಠದ ಪೀಠಾಧಿಪತಿ ಕೊಟ್ಟುರೇಶ್ವರ ಸ್ವಾಮಿಜಿ, ಡಾ, ವಿಜಯಕುಮಾರ, ನಾಗರತ್ನ ಕುಪ್ಪಿ, ನಾಗರತ್ನ ಅನಪೂರ, ಡಾ. ಪ್ರಸನ್ನ ಪಾಟೀಲ, ಡಿಎಚ್‌ಒ ಡಾ. ಪ್ರಭುಲಿಂಗ ಮಾನಕರ್, ಹಿರಿಯ ನ್ಯಾಯವಾದಿ ಎಸ್.ಬಿ ಪಾಟೀಲ, ಹಿರಿಯ ವೈದ್ಯರಾದ ಡಾ. ಜಿ.ಡಿ ಹುನಗುಂಟಿ, ಡಾ. ವೀರಭದ್ರಪ್ಪ ಯಲ್ಹೇರಿ, ಡಾ. ರಿಜ್ವಾನ ಅಫ್ರೀನ್, ಎಚ್.ಸಿ ಪಾಟೀಲ್ ರಾಜನಕೊಳೂರ, ಮಲ್ಕರಡ್ಡಿ ಮಾಲಿ ಪಾಟೀಲ್ ಅರಕೇರಾ. ಬಿ, ಸಿದ್ದಪ್ಪ ಲಿಂಗೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ಡಾ. ಶೈಲಶ್ರೀ ಎಸ್. ರಡ್ಡಿ ಸ್ವಾಗತಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

Karnataka Rain: ಉತ್ತರ ಕನ್ನಡದಲ್ಲಿ ವಿಪರೀತ ಮಳೆಯಾಗುತ್ತಿದ್ದು, ಸಾವು-ನೋವಿಗೆ ಕಾರಣವಾಗುತ್ತಿದೆ. ಶಿರೂರಿನಲ್ಲಿ ಗುಡ್ಡ ಕುಸಿತ ಉಂಟಾಗಿದ್ದರೆ, ಇತ್ತ ಕಿನ್ನರ ಗ್ರಾಮದಲ್ಲಿ ಮನೆ ಮೇಲೆ ಗುಡ್ಡ ಬಿದ್ದು, ಗೋಡೆ ಕುಸಿದು ವೃದ್ಧರೊಬ್ಬರು ಮೃತಪಟ್ಟಿದ್ದಾರೆ.

VISTARANEWS.COM


on

By

Karnataka Rain
Koo

ಉತ್ತರಕನ್ನಡ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಿನ್ನರ ಗ್ರಾಮದಲ್ಲಿ ಭಾರಿ ಮಳೆಗೆ (Karnataka Rain) ಮನೆ ಮೇಲೆ ಗುಡ್ಡ ಬಿದ್ದ ಪರಿಣಾಮ ಗೋಡೆ ಕುಸಿದಿದೆ. ಮಣ್ಣಿನಡಿ ಸಿಲುಕಿದ್ದ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ತಿಕರ್ಸ್ ಗುರವ (60) ಮೃತ ದುರ್ದೈವಿ.

ಮನೆಯ ಮೇಲೆ ಏಕಾಏಕಿ ಗುಡ್ಡ ಕುಸಿದ ಪರಿಣಾಮ ಗೋಡೆಯಡಿ ಸಿಲುಕಿದ ತಿಕರ್ಸ್‌ ತಲೆಗೆ ಗಂಭೀರ ಪೆಟ್ಟಾಗಿತ್ತು. ಏಕಾಏಕಿ ಮನೆ ಗೋಡೆ ಕುಸಿದ ಪರಿಣಾಮ ಹೊರ ಬರಲು ಆಗದೆ ಮೃತಪಟ್ಟಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಸುಮಾರು 3 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮೃತದೇಹ ಹೊರತೆಗೆದಿದ್ದಾರೆ. ಸ್ಥಳದಲ್ಲಿ ತಹಶಿಲ್ದಾರ್, ಕಾರವಾರ ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಅಧಿಕಾರಿಗಳು ದೌಡು

ಇನ್ನೂ ಉತ್ತರ ಕನ್ನಡದ ಅಂಕೋಲಾ ಗುಡ್ಡ ಕುಸಿತ ಪ್ರದೇಶಕ್ಕೆ ಕುಮಟಾ ಎಸಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಬಳಿ ಗುಡ್ಡ ಕುಸಿದಿದೆ. ಗುಡ್ಡದ ಮಣ್ಣಿನಡಿ 10ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ ಇದ್ದು, ಒಂದೇ ಕುಟುಂಬದ ಐವರು ಸೇರಿ ಹತ್ತಕ್ಕೂ ಅಧಿಕ ಮಂದಿ ಕಣ್ಮರೆಯಾಗಿದ್ದಾರೆ. ಗುಡ್ಡ ಕುಸಿದ ರಭಸಕ್ಕೆ ನದಿಗೆ 2 ಗ್ಯಾಸ್ ಟ್ಯಾಂಕರ್‌ಗಳು ಕೊಚ್ಚಿ ಹೋಗಿದೆ. ಗುಡ್ಡದ ಕೆಳಗಿದ್ದ ಲಾರಿ, ಮತ್ತೊಂದು ಟ್ಯಾಂಕರ್‌ ಹಾಗೂ ಚಾಲಕರು ಪಾರಾಗಿದ್ದಾರೆ.

ಅಂಕೋಲಾ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಹಿತಿ ನೀಡಿದ್ದಾರೆ. ಅವಘಡದಲ್ಲಿ 7 ಮಂದಿ ಸಾವನ್ನಪ್ಪಿರಬಹುದೆಂದು ಮಾಹಿತಿ ಲಭ್ಯವಾಗಿದೆ. ಇನ್ನೂ ಕೂಡಾ ಖಚಿತ ಮಾಹಿತಿ ಬರಬೇಕಿದೆ. ಸದ್ಯ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಎಷ್ಟು ಸಾವಾಗಿದೆ ಹೇಳುವುದು ಸಾಧ್ಯವಿಲ್ಲ. ಕಾರ್ಯಾಚರಣೆಗೆ ಅಗತ್ಯ ಸಲಕರಣೆಗಳು ಸಾಕಾಗುತ್ತಿಲ್ಲ. ಹೀಗಾಗಿ ಕುಮಟಾ ಹಾಗೂ ಅಂಕೋಲಾ ಎರಡೂ ಕಡೆಯಿಂದ ಕಾರ್ಯಾಚರಣೆಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲು ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ. ಜೆಸಿಬಿ, ಹಿಟಾಚಿ ಮತ್ತಿತರ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುವುದು ಎಂದರು.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

ಶಿವಮೊಗ್ಗದಲ್ಲಿ ಮನೆ ಮೇಲೆ ಮರ ಬಿದ್ದು ಹಾನಿ

ಶಿವಮೊಗ್ಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹೊಸನಗರ ತಾಲೂಕಿನ ಯಡೂರು ಗ್ರಾಮದಲ್ಲಿ ಮನೆಗೆ ಹಾನಿಯಾಗಿದೆ. ಮನೆ ಮೇಲೆ ಮರ ಬಿದ್ದು, ಚಾವಣಿ ಕುಸಿದು ಬಿದ್ದಿದೆ. ಜತೆಗೆ ನೀರು ನುಗ್ಗಿ, ಮನೆಯಲ್ಲಿರುವ ಗೃಹೋಪಯೋಗಿ ವಸ್ತುಗಳು ನೀರುಪಾಲಾಗಿದೆ. ನಿಂಗಮ್ಮ ಎಂಬುವರಿಗೆ ಸೇರಿದ ಮನೆಯು ಹಾನಿಯಾಗಿದ್ದು, ಸೂಕ್ತ ಪರಿಹಾರಕ್ಕೆ ಒತ್ತಾಯಿಸಿದ್ದಾರೆ.

ಹಾಸನದಲ್ಲಿ ಕರೆಂಟ್‌ ಕಟ್‌

ಹಾಸನ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಅಪಾರ ಪ್ರಮಾಣದ ಹಾನಿಯಾಗಿದೆ. ಸಕಲೇಶಪುರ ತಾಲೂಕಿನ ಮಾವಿನೂರು, ಕಾಗಿನೆರೆ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ವಿದ್ಯುತ್ ಇಲ್ಲದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಮತ್ತೊಂದು ಕಡೆ ಸಕಲೇಶಪುರ ತಾಲೂಕಿನ ಗಡಿ ಗ್ರಾಮ ತಂಬಲಗೇರಿಯಲ್ಲಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದೆ. ಪುಟ್ಟೇಗೌಡ ಎಂಬುವವರ ಸೇರಿದ ಮನೆಯು ಹಾನಿಯಾಗಿದೆ. ಜತೆಗೆ ಗದ್ದೆಗಳಿಗೆ ಮಣ್ಣು ಕುಸಿದು, ಭತ್ತ ಸಸಿಗಳು ಮಣ್ಣಿನಡಿ ಸಿಲುಕಿದೆ. ತಂಬಲಗೇರಿ ಗ್ರಾಮದ ಲೋಕೇಶ್ ಹಾಗೂ ಇತರೆ ಗ್ರಾಮಸ್ಥರಿಗೆ ಸೇರಿದ ಭತ್ತದ ಗದ್ದೆಗಳು ಕೆರೆಯಂತಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಚಿಕ್ಕಮಗಳೂರು, ಹಾಸನದಲ್ಲಿ ಭಾರಿ ಮಳೆಗೆ ಮನೆಗಳು ನೆಲಸಮ

Karnataka Rain : ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆಗೆ ಜನರು ಅಕ್ಷರಶಃ ಕಂಗಲಾಗಿದ್ದಾರೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಮನೆಗಳು ನೆಲಸಮವಾಗಿವೆ. ಕೆಲವೆಡೆ ಸೇತುವೆಗಳು ಮುಳುಗಡೆಯಾಗಿದೆ.

VISTARANEWS.COM


on

By

karnataka rain
Koo

ಚಿಕ್ಕಮಗಳೂರು/ಹಾಸನ: ಭಾರಿ ಮಳೆಗೆ (Karnataka Rain) ವಾಸದ ಮನೆಯ ಗೋಡೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಕಬ್ಬಿನಗದ್ದೆ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಕಮಲ ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ವಿಶೇಷ ಚೇತನ ಹಾಗೂ ಮಾತು ಬಾರದ ಕಮಲ ತಾಯಿಯೊಂದಿಗೆ ವಾಸವಿದ್ದರು. ಸದ್ಯ ಮನೆ ಕಳೆದುಕೊಂಡು ಕಮಲ ಕುಟುಂಬಸ್ಥರು ಕಂಗಲಾಗಿದ್ದಾರೆ.

ಇತ್ತ ಚಿಕ್ಕಮಗಳೂರಿನಲ್ಲೂ ಮಳೆಯ ಅವಾಂತರಕ್ಕೆ ಮನೆಯೊಂದು ಕುಸಿದು ಬಿದ್ದಿದೆ. ಮನೆಯಲ್ಲಿದ್ದ ಪೀಠೋಪಕರಣ, ದವಸ, ಧಾನ್ಯ ನಾಶವಾಗಿವೆ. ಮೂಡಿಗೆರೆ ತಾಲೂಕಿನ ಬಣಕಲ್ ಪಟ್ಟಣದಲ್ಲಿ ಘಟನೆ ನಡೆದಿದೆ. ಬಣಕಲ್‌ನ ತಾಹಿರಾ ಎಂಬವರಿಗೆ ಸೇರಿದ ಮನೆ ನೆಲಸಮವಾಗಿದೆ. ಮನೆಯಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಳೆಯ ಆರ್ಭಟಕ್ಕೆ ಭಾರೀ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿದೆ. ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಕುಂಚೂರು ಘಾಟಿ ಬಳಿ ಘಟನೆ ನಡೆದಿದೆ. ಹೀಗಾಗಿ ಸ್ಥಳೀಯರು ರಸ್ತೆಗೆ ಕಲ್ಲು ಇಟ್ಟು ಎಚ್ಚರಿಕೆ ನೀಡಿದ್ದಾರೆ. ಭೂಮಿ ಮತ್ತಷ್ಟು ಕುಸಿದು ಬೀಳುತ್ತಿರುವ ಆತಂಕ ಎದುರಾಗಿದೆ.

karnataka Rain

ಚಿಕ್ಕಮಗಳೂರಲ್ಲಿ ರಸ್ತೆ ಅಡ್ಡಲಾಗಿ ಬಿದ್ದ ಬೃಹತ್‌ ಮರ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಆರ್ಭಟಕ್ಕೆ ರಸ್ತೆಗೆ ಅಡ್ಡಲಾಗಿ ಬೃಹತ್ ಗಾತ್ರದ ಮರಗಳು ಬಿದ್ದಿದೆ. ಬಾಳೆಹೊನ್ನೂರು ಮೆಲ್ವಾಲ್ ರಸ್ತೆಯಲ್ಲಿ ಭಾರೀ ಗಾತ್ರದ ಮರ ಬಿದ್ದು, ಹಲವೆಡೆ ವಿದ್ಯುತ್ ಕಂಬಗಳು ಧರೆಗುರುಳಿದೆ. ಕೆಲಕಾಲ ರಸ್ತೆ ಸಂಪರ್ಕ ಕಡಿತಗೊಂಡು ಸವಾರರು ಪರದಾಡಬೇಕಾಯಿತು.

ಚಿಕ್ಕಮಗಳೂರಿನ ಕುದುರೆಮುಖ ವ್ಯಾಪ್ತಿಯ ಘಟ್ಟ ಪ್ರದೇಶಗಳಲ್ಲಿ ಮಳೆ ಸುರಿಯುತ್ತಿದ್ದು, ಭದ್ರಾ ನದಿ ಅಪಾಯದ ಮಟ್ಟ ಮೀರಿದೆ. ಕಳಸ ತಾಲೂಕಿನ ಹೊರನಾಡು ಬಳಿಯ ಹೆಬ್ಬಾಳೆ ಸೇತುವೆಯಾಗಿದ್ದು, ಹೊರನಾಡು-ಕಳಸ ಸಂಪರ್ಕ ಕಡಿತಗೊಂಡಿದೆ. ಕಳೆದ ರಾತ್ರಿಯಿಂದಲೂ ಸೇತುವೆಯ ಮೇಲೆ ಭದ್ರಾ ನದಿ ಉಕ್ಕಿ ಹರಿಯುತ್ತಿದೆ. ಮುನ್ನೆಚ್ಚರಿ ಕಾರ್ಯಕ್ರಮವಾಗಿ ಸೇತುವೆಯ ಎರಡು ಕಡೆ ಬ್ಯಾರಿಕೇಡ್‌ ಹಾಕಲಾಗಿದೆ. ಹೆಬ್ಬಾಳೆ ಸೇತುವೆಯ ಮೇಲೆ ವಾಹನಗಳ ಸಂಚಾರ ನಿಷೇಧ ಮಾಡಲಾಗಿದ್ದು, ಸೇತುವೆ ಬಳಿ ಕಳಸ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

Karnataka Rain

ಕೊಡಗಿನ ಶಾಲೆ ಮೇಲೆ ಬಿದ್ದ ಭಾರಿ ಗಾತ್ರದ ಗುಡ್ಡ

ಕೊಡಗಿನಲ್ಲಿ ಪುನರ್ವಸು ಮಳೆ ಅಬ್ಬರ ಜೋರಾಗಿದ್ದು, ಗುಡ್ಡದ ಮಣ್ಣು ಕುಸಿಯಲು ಆರಂಭವಾಗಿದೆ. ಕೊಡಗು ಜಿಲ್ಲೆ ಸಂಪಾಜೆ ಸಮೀಪ ಕೊಯನಾಡಿನಲ್ಲಿ ಸರ್ಕಾರಿ ಶಾಲಾ ಕಟ್ಟಡ ಮೇಲೆ ಭಾರಿ ಗಾತ್ರದ ಗುಡ್ಡ ಬಿದ್ದಿದೆ. ಕಳೆದ ಒಂದು ತಿಂಗಳ ಹಿಂದೆ ಕೂಡ ಮಣ್ಣು ಬಿದ್ದು ಹಾನಿಯಾಗಿತ್ತು. ಮತ್ತೆ ಗುಡ್ಡಕುಸಿತವಾಗಿ ಶಾಲಾ ಕಟ್ಟಡ ಹಿಂಭಾಗಕ್ಕೆ ಪೂರ್ತಿ ಹಾಳಾಗಿದೆ. ಭಾರಿ ಪ್ರಮಾಣದಲ್ಲಿ ಮಣ್ಣು ಬಿದ್ದು ಶಾಲಾ ಕಟ್ಟಡ ಸಂಪೂರ್ಣ ಹಾನಿಯಾಗಿದೆ. ಶಾಲೆಯಲ್ಲಿದ್ದ ದಾಖಲೆಗಳು ಪೀಟೋಪಕರಣಗಳು ಜಖಂ ಆಗಿದ್ದು, ವಿಚಾರ ತಿಳಿದು ಅಳುತ್ತಲೆ ಶಿಕ್ಷಕಿ ಶಾಲೆಗೆ ಓಡೋಡಿ ಬಂದಿದ್ದಾರೆ.

karnataka Rain

ಕುಮಟಾ-ಶಿರಸಿ ಹೆದ್ದಾರಿಯಲ್ಲಿ ಗುಡ್ಡ ಕುಸಿತ

ಉತ್ತರಕನ್ನಡ ಜಿಲ್ಲೆಯ ಕುಮಟಾ-ಶಿರಸಿ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾಗಿದೆ. ತಡರಾತ್ರಿ ಗುಡ್ಡ ಕುಸಿದು ಸಂಚಾರ ಸಂಪೂರ್ಣ ಬಂದ್ ಆಗಿದೆ. ರಾಷ್ಟ್ರೀಯ ಹೆದ್ದಾರಿ 766EEಯ ರಾಗಿಹೊಸಳ್ಳಿ ಬಳಿ ಘಟನೆ ನಡೆದಿದೆ. ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ.

ಇತ್ತ ಧಾರಾಕಾರ ಮಳೆಗೆ ಹೊನ್ನಾವರ-ಬೆಂಗಳೂರು ಹೆದ್ದಾರಿಯಲ್ಲಿ ಮತ್ತೆ ಗುಡ್ಡ ಕುಸಿತ ಉಂಟಾಗಿದೆ. ಹೊನ್ನಾವರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 206ರ ವರ್ನಕೇರಿ ಬಳಿ ಘಟನೆ ನಡೆದಿದೆ. ಹೆದ್ದಾರಿಗೆ ಬೃಹತ್ ಗಾತ್ರದ ಗುಡ್ಡದ ಮಣ್ಣು ಕುಸಿದು ಬಿದ್ದಿದೆ. ಹೀಗಾಗಿ ಹೊನ್ನಾವರ-ಗೇರುಸೊಪ್ಪ-ಸಾಗರ ಹೆದ್ದಾರಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಗುಡ್ಡ ಕುಸಿತದಿಂದ ರಸ್ತೆಯಲ್ಲೇ ವಾಹನಗಳು ಸಾಲುಗಟ್ಟಿ ನಿಂತಿವೆ. ಬೆಂಗಳೂರಿನಿಂದ ಹೊನ್ನಾವರದತ್ತ ಆಗಮಿಸುತ್ತಿದ್ದ ಪ್ರಯಾಣಿಕರು ಬಸ್‌ಗಳಲ್ಲೇ ಲಾಕ್ ಆಗಿದ್ದರು. ಹೊನ್ನಾವರ-ಬೆಂಗಳೂರು ಹೆದ್ದಾರಿಯಲ್ಲಿ ಇದು ನಾಲ್ಕನೇ ಬಾರಿಗೆ ಗುಡ್ಡ ಕುಸಿತ ಉಂಟಾಗಿದೆ.

ಇನ್ನೂ ಕಾರವಾರ ತಾಲೂಕಿನಲ್ಲಿ ಹಲವು ರಸ್ತೆಗಳು, ಗ್ರಾಮಗಳು ಜಲಾವೃತಗೊಂಡಿದೆ. ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಗೆ ಅರಗಾ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 66ರ ಮೇಲೆ‌ ನೀರು ನಿಂತಿದೆ. ಹೀಗಾಗಿ ಹೆದ್ದಾರಿ ಸಂಚಾರ ಬಂದ್ ಮಾಡಲಾಗಿದ್ದು, ಗೋವಾ-ಮಂಗಳೂರು ನಡುವೆ ವಾಹನ ಸಂಚಾರ ಸ್ಥಗಿತಗೊಂಡಿದೆ. ಕಾರವಾರ ನಗರದ ಹಬ್ಬುವಾಡ ರಸ್ತೆ ಜಲಾವೃತಗೊಂಡಿದ್ದು, ಮಳೆ‌ ನೀರು ಹರಿದು ಹೋಗಲಾಗದೇ ರಸ್ತೆಯು ಹೊಳೆಯಂತಾಗಿದೆ. ಕೆಎಸ್ಆರ್‌ಟಿಸಿ ಡಿಪೋದಲ್ಲೂ ನೀರು ತುಂಬಿಕೊಂಡಿದೆ.

ಕಲಬುರಗಿಯಲ್ಲಿ ದೇವಸ್ಥಾನಕ್ಕೆ ಜಲದಿಗ್ಬಂಧನ

ಕಲಬುರಗಿ ಜಿಲ್ಲೆಯಲ್ಲಿ ಅಫಜಲಪುರ, ಚಿಂಚೊಳ್ಳಿ ಸೇರಿ ಹಲವೆಡೆ ಭಾರಿ ‌ಮಳೆಯಾಗುತ್ತಿದ್ದು, ದತ್ತಾತ್ರೇಯ ದೇವಸ್ಥಾನಕ್ಕೆ ನೀರು ನುಗ್ಗಿದೆ. ಅಫಜಲಪುರ ತಾಲೂಕಿನ‌ ಸುಕ್ಷೇತ್ರ ಗಣಗಾಪುರದ ಶ್ರೀ ಗುರು ದತ್ತಾತ್ರೇಯ ದೇವಸ್ಥಾನಕ್ಕೆ ಜಲದಿಗ್ಬಂಧನ ಹಾಕಲಾಗಿದೆ.

ಕೆಳ ಹಂತದ ಸೇತುವೆಗಳು ಜಲಾವೃತ

ಮಹಾರಾಷ್ಟ್ರ ಘಟ್ಟ ಪ್ರದೇಶಗಳಲ್ಲಿ ಮಳೆ ಚುರುಕಾಗಿದ್ದು, ದೂದಗಂಗಾ ನದಿಯ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ದೂದಗಂಗಾ ನದಿಗೆ ಅಡ್ಡಲಾಗಿರುವ 2 ಕೆಳ ಹಂತದ ಸೇತುವೆಗಳು ಜಲಾವೃತಗೊಂಡಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ದತ್ತವಾಡ – ಮಲ್ಲಿಕವಾಡ ಸೇತುವೆ ಹಾಗೂ ನಿಪ್ಪಾಣಿ ತಾಲೂಕಿನ ಭೋಜ – ಕಾರದಗಾ ಸೇತುವೆ ಜಲಾವೃತಗೊಂಡಿದೆ. ಕೆಳ ಹಂತದ ಸೇತುವೆ ಜಲಾವೃತ ಹಿನ್ನೆಲೆ ಪರ್ಯಾಯ ಮಾರ್ಗದ ಮೂಲಕ ಜನರು ಸಂಚಾರಿಸುತ್ತಿದ್ದಾರೆ. ನದಿಗಳ‌ ನೀರಿನ ಮಟ್ಟ ಏರಿಕೆ ಹಿನ್ನೆಲೆ ನದಿಗಳಲ್ಲಿ ಇಳಿಯದಂತೆ ಬೆಳಗಾವಿ ಜಿಲ್ಲಾಡಳಿತದಿಂದ ಎಚ್ಚರಿಕೆ ನೀಡಿದೆ.

ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಮಾಲತಿ ನದಿ

ಪ್ರವಾಹ ರೀತಿಯಲ್ಲಿ ಮಾಲತಿ ನದಿ ಉಕ್ಕಿ ಹರಿಯುತ್ತಿದೆ. ಅಪಾಯ ಮಟ್ಟ ಮೀರಿ ರಸ್ತೆ ಮೇಲೆ ಉಕ್ಕಿ ಹರಿಯುತ್ತಿದೆ. ಶಿವಮೊಗ್ಗದ ಗುಡ್ಡಕೇರಿಯಿಂದ ಹೊನ್ನೆತಾಳು ಮಾರ್ಗವಾಗಿ ಬಿದರಗೋಡು ಸಂಪರ್ಕಿಸುವ ರಸ್ತೆ ಸ್ಥಗಿತಗೊಂಡಿದೆ. ನಾಬಳ ಬಳಿ ಮಾಲತಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ವಾಹನ ಸಂಚಾರದಲ್ಲಿ ಮಾರ್ಗ ಬದಲಾವಣೆ ಆಗಿದೆ. ಅಕ್ಕಪಕ್ಕದ ತೋಟಕ್ಕೂ ನೀರು ನುಗ್ಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

Karnataka Rain: ಹಾಸನದಲ್ಲಿ ಭಾರಿ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದಿದೆ. ಉಡುಪಿಯಲ್ಲಿ ಶಾಲೆಯೊಂದು ಜಲಾವೃತಗೊಂಡರೆ, ನಂಜನಗೂಡಿನ ಹದಿನಾರು ಕಾಲು ಮಂಟಪ ಮುಳುಗಡೆಯಾಗಿದೆ.

VISTARANEWS.COM


on

By

karnataka Rain
Koo

ಹಾಸನ/ಉಡುಪಿ: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಅವಾಂತರವನ್ನೇ ಸೃಷ್ಟಿಸಿದೆ. ಹಾಸನ ಜಿಲ್ಲೆಯ ಆಲೂರು ತಾಲೂಕಿನ ಮಠದಕೊಪ್ಪಲ್‌ನಲ್ಲಿ ಭಾರಿ ಮಳೆಯಿಂದಾಗಿ (Karnataka Rain) ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದಿದೆ. ರಿಡ್ಜ್ ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಾಲ್ವರ ಪೈಕಿ ಇಬ್ಬರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಕೆರೆಯೊಳಗಿದ್ದ ಕಾರನ್ನು ಜೆಸಿಬಿ ಬಳಸಿ ಹೊರತೆಗೆಯಲಾಗಿದೆ. ಭಾರಿ ಮಳೆ ಇದ್ದ ಕಾರಣಕ್ಕೆ ರಸ್ತೆ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದೆ.

ಉಡುಪಿಯಲ್ಲಿ ಜಲಾವೃತಗೊಂಡ ಶಾಲೆ

ಉಡುಪಿಯ ಉಪ್ಪೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯು ನೆರೆಯಿಂದ ಜಲಾವೃತಗೊಂಡಿದೆ. ಬ್ರಹ್ಮಾವರ ತಾಲೂಕಿನ ಉಪ್ಪುರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರಕಾರಿ ಶಾಲೆಯು ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿದೆ. ತಗ್ಗು ಪ್ರದೇಶವಾಗಿರುವ ಹಿನ್ನೆಲೆಯಲ್ಲಿ ಪ್ರತಿ ವರ್ಷವೂ ಇಲ್ಲಿ ನೆರೆಹಾವಳಿ ಸೃಷ್ಟಿಯಾಗುತ್ತದೆ. ಮಡಿಸಾಲು ಹೊಳೆ ಉಕ್ಕಿ ಹರಿದ ಪರಿಣಾಮ ಶಾಲೆ ಜಲಾವೃತಗೊಂಡಿದೆ. ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ಶಾಲೆಗೆ ರಜೆ ನೀಡಲಾಗಿದೆ ಹೀಗಾಗಿ ಯಾವುದೇ ಸಮಸ್ಯೆಯಾಗಿಲ್ಲ.

ಜಲಾವೃತಗೊಂಡ ರಸ್ತೆಯಲ್ಲಿ ಸಿಲುಕಿದ ರೋಗಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 66 ಜಲಾವೃತಗೊಂಡ ಪರಿಣಾಮ ಚಿಕಿತ್ಸೆಗೆ ಹೊರಟಿದ್ದ ಪಾಶ್ವವಾಯು ಪೀಡಿತ ರಸ್ತೆಯಲ್ಲೇ ಸಿಲುಕುವಂತಾಯಿತು. ಕಾರವಾರದ ಅರಗಾ ಬಳಿ ಹೆದ್ದಾರಿ ಮೇಲೆ ನಿಂತ ನೀರು ಪರಿಣಾಮ ತೊಂದರೆಯುನ್ನುಂಟಾಯಿತು. ತಡರಾತ್ರಿಯಿಂದ ಸುರಿದ ಭಾರೀ ಮಳೆಗೆ ಹೆದ್ದಾರಿ ಜಲಾವೃತಗೊಂಡಿದೆ. ಹೆದ್ದಾರಿ ಬಂದ್ ಆದ ಪರಿಣಾಮ ರಸ್ತೆಯಲ್ಲೇ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಎದೆಮಟ್ಟದ ನೀರಿನಲ್ಲಿ ಬ್ಯಾಗ್ ತಲೆಯ ಮೇಲೆ ಹೊತ್ತು ರಸ್ತೆ ದಾಟುತ್ತಿರುವುದು ಕಂಡು ಬಂತು. ಮತ್ತೊಂದು ಕಡೆ ಜಲಾವೃತಗೊಂಡ ಹೆದ್ದಾರಿಯಲ್ಲಿ ಕಾರು ತಳ್ಳಿಕೊಂಡು ತೆರಳಿದರು. ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ನೀರಿನ ಪ್ರಮಾಣ ಇನ್ನೂ ಕಡಿಮೆಯಾಗಿಲ್ಲ. ಗೋವಾ-ಮಂಗಳೂರು ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿದೆ.

ಇದನ್ನೂ ಓದಿ: Karnataka Weather : ಅಬ್ಬರಿಸುತ್ತಿರುವ ಮುಂಗಾರು; ಕರಾವಳಿ, ಮಲೆನಾಡಿನಲ್ಲಿ ಇಂದು ಸಹ ಜೋರು ಮಳೆ

ನಂಜನಗೂಡಿನ ಹದಿನಾರು ಕಾಲು ಮಂಟಪ ಮುಳುಗಡೆ

ವೈನಾಡಿನಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಮೈಸೂರಿನ ನಂಜನಗೂಡಿನ ಕಪಿಲ ನದಿಗೆ 20 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಪರಿಣಾಮ ನಂಜನಗೂಡಿನ ಹದಿನಾರು ಕಾಲು ಮಂಟಪ ಮುಳುಗಡೆಯಾಗಿದೆ. ನಂಜನಗೂಡು ಶ್ರೀಕಂಠೇಶ್ವರ ದೇವಾಲಯದ ಸ್ನಾನಘಟ್ಟವೂ ಮುಳುಗಡೆಯಾಗಿದ್ದು, ನೀರು ಕಡಿಮೆಯಾಗುವ ತನಕ ನದಿ ದಂಡೆಗೆ ಹೋಗದಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. ಈಗಾಗಲೇ ನದಿ ಅಂಚಿನ ಒಕ್ಕಲಗೇರಿ ತೋಪಿನ ಬೀದಿ ಬಡಾವಣೆಯ ಜನರನ್ನು ಸ್ಥಳಾಂತರ ಮಾಡಲಾಗಿದೆ. ಜಿಲ್ಲಾಡಳಿತ ಕಪಿಲ ನದಿ ಅಂಚಿನಲ್ಲಿರುವ ಜನವಸತಿ ಪ್ರದೇಶಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ.

ಎಚ್‌ಡಿ ಕೋಟೆ ತಾಲೂಕಿನ ಶಾಲೆಗಳಿಗೆ ರಜೆ

ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ಎಚ್.ಡಿ.ಕೋಟೆ ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ. ತಹಸೀಲ್ದಾರ್, ಬಿಇಒ ಮೌಖಿಕ ಆದೇಶ ಹೊರಡಿಸಿದ್ದಾರೆ. ಮಳೆಯಿಂದ ವಿದ್ಯಾರ್ಥಿಗಳಿಗೆ ಆಗುವ ಅನಾನುಕೂಲ ತಪ್ಪಿಸಲು ಕ್ರಮವಹಿಸಲಾಗಿದೆ. ಒಂದು ವಾರದಿಂದಲೂ ಬಿಟ್ಟೂ ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಸರ್ಕಾರಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಕಾಲೇಜುಗಳು ತೆರೆದಿರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ರಣಭೀಕರ ಮಳೆಗೆ ಶಿರೂರು ಬಳಿ ಗುಡ್ಡ ಕುಸಿತ; ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ

Karnataka Rain : ರಣಭೀಕರ ಮಳೆಗೆ ಶಿರೂರು ಬಳಿ ಗುಡ್ಡ ಕುಸಿತ ಉಂಟಾಗಿದ್ದು, ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಹಾಸನದಲ್ಲಿ ತೆಂಗಿನ ಮರ ಬಿದ್ದು ಮನೆ ಜಖಂಗೊಂಡು ವಿದ್ಯುತ್ ಸಂಪರ್ಕ ಕಡಿತಗೊಂಡರೆ, ಹಾಸನ, ಶಿವಮೊಗ್ಗದಲ್ಲಿ ಕಲ್ಲುಹಳ್ಳ ಸೇತುವೆಯ ತಡೆಗೋಡೆ ಕುಸಿದು ಬಿದ್ದಿದೆ.

VISTARANEWS.COM


on

By

Karnataka Rain
Koo

ಉತ್ತರಕನ್ನಡ ಉತ್ತರಕನ್ನಡದಲ್ಲಿ ರಣಭೀಕರ ಮಳೆಗೆ (Karnataka Rain Effect) ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಬಳಿ ಭಾರೀ ಗುಡ್ಡಕುಸಿತ (Karnataka Rain) ಉಂಟಾಗಿದೆ. ಅಂಕೋಲಾ ತಾಲೂಕಿನ ಶಿರೂರು ಬಳಿ ಅಂಗಡಿಯೊಂದರ ಮೇಲೆ ಗುಡ್ಡ ಕುಸಿದಿದೆ. 5ಕ್ಕೂ ಹೆಚ್ಚು ಮಂದಿ ಗುಡ್ಡದ ಮಣ್ಣಿನಡಿ ಸಿಲುಕಿರುವ ಶಂಕೆ ಇದೆ.

ಒಂದೇ ಕುಟಂಬದ ಐವರು ಮಣ್ಣಿನಡಿ ಸಿಲುಕಿದ್ದಾರೆ ಎನ್ನಲಾಗಿದೆ. ಲಕ್ಷ್ಮಣ ನಾಯ್ಕ(47), ಶಾಂತಿ ನಾಯ್ಕ(36), ರೋಶನ(11), ಅವಂತಿಕಾ(6), ಜಗನ್ನಾಥ(55) ಎಂಬುವವರು ಮಣ್ಣಿನಡಿ ಸಿಲುಕಿದ್ದಾರೆ ಎನ್ನಲಾಗಿದೆ. ಐಆರ್‌ಬಿ ಕಂಪೆನಿಯಿಂದ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ.

Karnataka Rain

5 ಮಂದಿ ಕುಟುಂಬ ವಾಸವಿದ್ದ ಅಂಗಡಿ ಮೇಲೆ ಗುಡ್ಡ ಕುಸಿದಿದ್ದು, ಗ್ರಾಹಕರು ಸೇರಿ ಮನೆಯವರು ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಧಾರಾಕಾರ ಮಳೆಯಿಂದಾಗಿ ಹೆದ್ದಾರಿ ಪಕ್ಕದ ಗುಡ್ಡ ಸಡಿಲಗೊಂಡಿತ್ತು. ಗಂಗಾವಳಿ ನದಿಗೆ ಹೊಂದಿಕೊಂಡಿರುವ ಶಿರೂರು ಪ್ರದೇಶ ಇದಾಗಿದ್ದು, ರಾಷ್ಟ್ರೀಯ ಹೆದ್ದಾರಿ 66ರ ಅಂಕೋಲಾ-ಕುಮಟಾ ನಡುವೆ ಸಂಚಾರ ಸಂಪೂರ್ಣ ಬಂದ್ ಆಗಿದೆ.

karnataka Rain

ಗುಡ್ಡ ಕುಸಿದ ರಭಸಕ್ಕೆ ನದಿಗೆ ಬಿದ್ದ ಗ್ಯಾಸ್ ಟ್ಯಾಂಕರ್

ಅಂಕೋಲಾದ ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡ್ಡ ಕುಸಿದ ರಭಸಕ್ಕೆ ಹೆದ್ದಾರಿ ಬದಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್ ನದಿಗೆ ಬಿದ್ದಿದೆ. ಶಿರೂರಿನ ಬೊಮ್ಮಯ್ಯ ದೇವಸ್ಥಾನದ ಬಳಿ ಗುಡ್ದ ಕುಸಿದ ಪರಿಣಾಮ ಟೀ ಸ್ಟಾಲ್ ಸೇರಿ ಹಲವು ಅಂಗಡಿಗಳಿಗೆ ಹಾನಿಯಾಗಿದೆ. ಘಟನೆಯಲ್ಲಿ ಒಂದೇ ಕುಟುಂಬದ ಐವರು ಸೇರಿ ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಸ್ಥಳಕ್ಕೆ ಅಂಕೋಲಾ ಪೊಲೀಸ್, ಅಗ್ನಿಶಾಮಕ ಸಿಬ್ಬಂದಿ, ಎನ್‌ಹೆಚ್‌ಎಐ ಆಂಬ್ಯುಲೆನ್ಸ್ ದೌಡಾಯಿಸಿದೆ.

ಇದನ್ನೂ ಓದಿ: Rain News: ಮಳೆಯ ಅಬ್ಬರಕ್ಕೆ ಧಡಾರ್‌ ಎಂದು ನೆಲಕಚ್ಚಿದ ಕೊಟ್ಟಿಗೆಹಾರ ಬಸ್‌ ನಿಲ್ದಾಣ!

karnataka Rain

ಹಾಸನದಲ್ಲಿ ಮರ ಬಿದ್ದು ಮನೆ ಜಖಂ, ವಿದ್ಯುತ್ ಸಂಪರ್ಕ ಕಡಿತ

ಭಾರಿ ಮಳೆ- ಗಾಳಿಗೆ ತೆಂಗಿನ ಮರವೊಂದು ಮನೆ ಮೇಲೆ, ವಿದ್ಯುತ್ ತಂತಿ ಮೇಲೆ ಬಿದ್ದಿದೆ. ಪರಿಣಾಮ ಮನೆ ಸಂಪೂರ್ಣ ಜಖಂಗೊಂಡರೆ, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಅಂಬೇಡ್ಕರ್ ನಗರದಲ್ಲಿ ಘಟನೆ ನಡೆದಿದೆ. ಮಾಜಿ ಶಾಸಕ ದಿ.ವೈ.ಎನ್.ರುದ್ರೇಶ್‌ಗೌಡರಿಗೆ ಸೇರಿದ ಮನೆ ಹಾನಿಯಾಗಿದೆ. ವಿದ್ಯುತ್ ಇಲ್ಲದ ನಿವಾಸಿಗಳು ಪರದಾಡುತ್ತಿದ್ದಾರೆ. ಕೂಡಲೇ ಮರ ತೆರವುಗೊಳಿಸಿ ವಿದ್ಯುತ್ ಪೂರೈಕೆ ಮಾಡುವಂತೆ ಒತ್ತಾಯ ಕೇಳಿ ಬಂದಿದೆ.

karnataka rain

ಶಿವಮೊಗ್ಗದಲ್ಲಿ ಕಲ್ಲುಹಳ್ಳ ಸೇತುವೆ ತಡೆಗೋಡೆ ಕುಸಿತ

ಶಿವಮೊಗ್ಗದ ಹೊಸನಗರ ಸಮೀಪ ಇರುವ ಕಲ್ಲುಹಳ್ಳ ಸೇತುವೆಯ ತಡೆಗೋಡೆ ಕುಸಿತಗೊಂಡಿದ್ದು, ಬಾರಿ ಅನಾಹುತವೊಂದು ತಪ್ಪಿದೆ. ರಾಣಿಬೆನ್ನೂರು – ಬೈಂದೂರು ರಾಷ್ಟ್ರೀಯ ಹೆದ್ದಾರಿ 766 c ಸೇರಿದ ತಡೆಗೋಡೆ ಕುಸಿತಗೊಂಡಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಡಿಯಲ್ಲಿ ಸುಮಾರು 5 ಕೋಟಿ ಅನುದಾನದಲ್ಲಿ ಸೇತುವೆ ನಿರ್ಮಾಣ ಮಾಡಲಾಗಿತ್ತು. ಲೋಕಾರ್ಪಣೆಗೊಳ್ಳುವ ಮೊದಲೇ ಸೇತುವೆಯ ತಡೆಗೋಡೆ ಕುಸಿದಿದೆ. ಇದೇ ರೀತಿ ಮಳೆ ಮುಂದುವರೆದಲ್ಲಿ ಇನ್ನಷ್ಟು ಭಾಗ ಕುಸಿಯುವ ಭೀತಿ ಇದೆ.

ಹಾಸನದಲ್ಲೂ ಮಳೆ ಅಬ್ಬರಕ್ಕೆ ತಡೆಗೋಡೆ ಕುಸಿತ

ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ತಡೆ ಗೋಡೆ ಕುಸಿದಿದೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾಂಕ್ರೀಟ್ ರಸ್ತೆಯ ತಡೆಗೋಡೆ ಸಂಪೂರ್ಣ ಕುಸಿದಿದ್ದು, ಒಂದು ಬದಿಯ ರಸ್ತೆ ಸಂಚಾರ ಬಂದ್ ಆಗುವ ಆತಂಕ ಇದೆ. ಸಕಲೇಶಪುರ ತಾಲೂಕಿನ ಗುಲಗಳಲೆ ಗ್ರಾಮದ, ರಾಟೆಮನೆ ಸಮೀಪ ಘಟನೆ ನಡೆದಿದೆ.

Karnataka Rain

ಸುಮಾರು 40 ಅಡಿಯಷ್ಟು ಎತ್ತರಕ್ಕೆ ನಿರ್ಮಿಸಿದ್ದ ತಡೆಗೋಡೆಯು ರಾತ್ರಿಯಿಡೀ ಸುರಿದ ಭಾರಿ ಮಳೆಗೆ ಕುಸಿದು ಬಿದ್ದಿದೆ. ವಾಹನ ಸಂಚಾರ ಹೆಚ್ಚಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಂಕ್ರೀಟ್ ರಸ್ತೆ ಬಿರುಕು ಬಿಡುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Donald Trump
ವಿದೇಶ58 seconds ago

Donald Trump: ಬೆದರಿಕೆಗೆ ಬಗ್ಗದ ಡೊನಾಲ್ಡ್‌ ಟ್ರಂಪ್;‌ ಕಿವಿಗೆ ಬ್ಯಾಂಡೇಜ್‌ ಕಟ್ಟಿಕೊಂಡು ಜನರೆದುರು ಪ್ರತ್ಯಕ್ಷ!

Karnataka Rain
ಮಳೆ18 mins ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

Actor Mithra
ಸ್ಯಾಂಡಲ್ ವುಡ್19 mins ago

Actor Mithra: ಖಡಕ್‌ ವಿಲನ್‌ ಆಗಿ ʼಕರಾವಳಿʼಯಲ್ಲಿ ಅಬ್ಬರಿಸಲಿದ್ದಾರೆ ಕಾಮಿಡಿ ಸ್ಟಾರ್ ಮಿತ್ರ; ಕಾಲಿವುಡ್‌ಗೂ ಎಂಟ್ರಿ

Rohit Sharma
ಕ್ರೀಡೆ34 mins ago

Rohit Sharma: ‘ಎಲಾ ಉನ್ನಾರು?’; ತೆಲುಗಿನಲ್ಲಿ ಮಾತನಾಡಿದ ರೋಹಿತ್ ಶರ್ಮ; ವಿಡಿಯೊ ವೈರಲ್​

karnataka rain
ಮಳೆ49 mins ago

Karnataka Rain : ಚಿಕ್ಕಮಗಳೂರು, ಹಾಸನದಲ್ಲಿ ಭಾರಿ ಮಳೆಗೆ ಮನೆಗಳು ನೆಲಸಮ

ಪ್ರಮುಖ ಸುದ್ದಿ57 mins ago

Karnataka Assembly Live: ಡಿಸಿಎಂ ಡಿಕೆ ಶಿವಕುಮಾರ್-‌ ಅಶ್ವಥ್‌ ನಾರಾಯಣ್‌ ವಾಗ್ಯುದ್ಧ; ಗದ್ದಲ

Alcohol Delivery
ದೇಶ60 mins ago

Alcohol Delivery: ಎಣ್ಣೆ ಪ್ರಿಯರಿಗೆ ಗುಡ್‌ ನ್ಯೂಸ್;‌ ಇನ್ನು ಸ್ವಿಗ್ಗಿಯಲ್ಲಿ ಮನೆ ಬಾಗಿಲಿಗೆ ಬರಲಿದೆ ಆಲ್ಕೋಹಾಲ್!

Doda Encounter
ದೇಶ1 hour ago

Doda Encounter: ಜಮ್ಮು- ಕಾಶ್ಮೀರದಲ್ಲಿ ಉಗ್ರರ ದಾಳಿ; ಬಿಜೆಪಿಯ ತಪ್ಪು ನೀತಿಯೇ ಕಾರಣ ಎಂದ ರಾಹುಲ್‌ ಗಾಂಧಿ

7th Pay Commission
ಕರ್ನಾಟಕ1 hour ago

7th Pay Commission: ರಜೆ, ಪಿಂಚಣಿ, ಬಡ್ತಿ; 7ನೇ ವೇತನ ಆಯೋಗದ ಜಾರಿ ಬಳಿಕ ಸಂಬಳದ ಜತೆ ಏನೆಲ್ಲ ಸೌಲಭ್ಯ ಸಿಗಲಿವೆ? ಇಲ್ಲಿದೆ ಮಾಹಿತಿ

IND vs SL
ಕ್ರಿಕೆಟ್1 hour ago

IND vs SL: ಶ್ರೀಲಂಕಾ ಪ್ರವಾಸಕ್ಕೆ ಇಂದು ಭಾರತ ತಂಡ ಪ್ರಕಟ ಸಾಧ್ಯತೆ: ಯಾರಿಗೆಲ್ಲ ಸಿಗಲಿದೆ ಅವಕಾಶ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ18 mins ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ20 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌