Karnataka Rain : ಭಾರಿ ಮಳೆಗೆ ಕರೆಯಂತಾದ ರಸ್ತೆಯಲ್ಲಿ ಬೈಕ್‌ ಚಲಾಯಿಸಿ ಮುಗ್ಗರಿಸಿ ಬಿದ್ದ ಸವಾರರು; ನಾಳೆಗೂ ರೈನ್‌ ಅಲರ್ಟ್‌ - Vistara News

ಮಳೆ

Karnataka Rain : ಭಾರಿ ಮಳೆಗೆ ಕರೆಯಂತಾದ ರಸ್ತೆಯಲ್ಲಿ ಬೈಕ್‌ ಚಲಾಯಿಸಿ ಮುಗ್ಗರಿಸಿ ಬಿದ್ದ ಸವಾರರು; ನಾಳೆಗೂ ರೈನ್‌ ಅಲರ್ಟ್‌

Karnataka Weather Forecast : ಕರ್ನಾಟಕ ಕರಾವಳಿ ಭಾಗದಲ್ಲಿ ಮಳೆಯು (Karnataka Rain Effect ) ಅಬ್ಬರಿಸುತ್ತಿದ್ದು, ನಾನಾ ಅವಾಂತರವೇ ಸೃಷ್ಟಿಯಾಗಿದೆ. ಮೊಟಕಾಲಿನಷ್ಟು ನಿಂತಿದ್ದ ನೀರಲ್ಲಿ ಗಾಡಿ ಚಲಾಯಿಸಲು ಹೋಗಿ ಸವಾರರು ಮುಗ್ಗರಿಸಿ ಬಿದ್ದಿದ್ದಾರೆ. ಮತ್ತೊಂದೆಡೆ ಕರ್ನಾಟಕ-ಗೋವಾ ಗಡಿ ಅನಮೋಡ್ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿಯಾದರೆ, ಶಿರಸಿ-ಕುಮಟಾ ರಸ್ತೆಯಲ್ಲಿ ಗುಡ್ಡ ಕುಸಿತ ಪ್ರಕರಣ ಮುಂದುವರಿದಿದೆ.

VISTARANEWS.COM


on

karnataka Rain Effect
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಅಬ್ಬರ (Karnataka weather Forecast) ಮುಂದುವರಿದಿದ್ದು, ಗೋವಾ ಲೋಂಡಾ ಬೆಳಗಾವಿ ಸಂಪರ್ಕಿಸುವ ರಸ್ತೆ (Karnataka Rain Effect) ಮುಳುಗಡೆಯಾಗಿದೆ. ಕಾಡಿನಿಂದ ಏಕಾಏಕಿ ಅಪಾರ ಪ್ರಮಾಣದ ನೀರು ಹರಿದು ಬಂದಿದೆ. ಇದರಿಂದಾಗಿ ರಸ್ತೆ ಮೇಲೆ ಮೂರ್ನಾಲ್ಕು ಅಡಿ ನೀರು ನಿಂತಿದೆ. ಇನ್ನೂ ಅಪಾಯ ಲೆಕ್ಕಿಸದೇ ಕೆರೆಯಂತಾಗಿದ್ದ ರಸ್ತೆಯಲ್ಲಿ ಬೈಕ್ ಚಲಾಯಿಸಿಕೊಂಡು ಬಂದ ಸವಾರರು ನೀರಲ್ಲಿ ಬಿದ್ದಿದ್ದರು. ಬಳಿಕ ಬೈಕ್‌ನಿಂದ ಇಳಿದು ನೀರಿನಲ್ಲೇ ಬೈಕ್‌ ತಳ್ಳಿಕೊಂಡು ರಸ್ತೆ ದಾಟ್ಟಿದ್ದಾರೆ. ಇತ್ತ ತುಂಬಿದ್ದ ನೀರಲ್ಲಿ ಬಂದ ಟ್ರ್ಯಾಕ್ಟರ್ ಪಲ್ಟಿ ಹೊಡೆದಿದೆ. ಸದ್ಯ ನೀರು ಹೋಗುವಂತೆ ಜೆಸಿಬಿಯಿಂದ ಸ್ಥಳೀಯರಿಂದ ಕಾಮಗಾರಿ ನಡೆಯುತ್ತಿದೆ.

ಕರ್ನಾಟಕ-ಗೋವಾ ಗಡಿ ಅನಮೋಡ್ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿ

ಕರಾವಳಿಯ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಿಂದಾಗಿ ಕರ್ನಾಟಕ-ಗೋವಾ ಗಡಿ ಅನಮೋಡ್ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿಯಾಗಿದೆ. ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ಅನಮೋಡ್-ಗೋವಾ ರಸ್ತೆಯಲ್ಲಿ ನೀರು ನಿಂತ ಪರಿಣಾಮ ಸಂಚಾರ ಸ್ಥಗಿತಗೊಂಡಿದೆ.

ರಾಮನಗರದ ಅನಮೋಡ್ ರಸ್ತೆಯ ಎಲಿಫೆಂಟ್ ಬ್ರಿಡ್ಜ್ ಬಳಿ ನೀರು ತುಂಬಿ ನಿಂತಿದೆ. ಓವರ್ ಬ್ರಿಡ್ಜ್ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆ ಸಂಚಾರಕ್ಕೆ ತೊಡಕಾಗಿದೆ. ನೀರು ತುಂಬಿದ್ದ ರಸ್ತೆಯಲ್ಲಿ ಕಂಟೇನರ್ ಪಲ್ಟಿ ಹೊಡೆದ ಪರಿಣಾಮ ಬೆಳಗಾವಿ-ರಾಮನಗರ-ಗೋವಾ ಮಾರ್ಗದ ಸಂಚಾರ ಅಸ್ತವ್ಯಸ್ತವಾಗಿದೆ.

ನಿನ್ನೆ ಬುಧವಾರ ಸಂಜೆಯಿಂದಲೂ ರಸ್ತೆಯಲ್ಲೇ ಲಾರಿ, ಬಸ್‌ಗಳು ಸಾಲುಗಟ್ಟಿ ನಿಂತಿವೆ. ಇತ್ತ ಪ್ರಯಾಣಿಕರು ರಾತ್ರಿಯಿಡೀ ಬಸ್‌ನಲ್ಲೇ ಕಾಲಕಳೆದಿದ್ದಾರೆ. ಸಾಲುಗಟ್ಟಿ ವಾಹನಗಳು ನಿಂತ ಪರಿಣಾಮ ವಾಪಸ್ ಹೋಗಲಾಗದೇ ಪರದಾಟ ಅನುಭವಿಸಿದರು. ಸ್ಥಳೀಯಾಡಳಿತ ಜೆಸಿಬಿ ಬಳಸಿ ನೀರು ಹರಿದುಹೋಗಲು ವ್ಯವಸ್ಥೆ ಮಾಡುತ್ತಿದ್ದಾರೆ. ರಾಮನಗರ-ಅನಮೋಡ್-ಗೋವಾ ರಸ್ತೆಯಲ್ಲಿ ವಾಹನ ಸವಾರರ ಪರದಾಟ ಹೇಳತೀರದಾಗಿದೆ.

ಇದನ್ನೂ ಓದಿ: UGCET 2024: ಅರ್ಹತಾ ಅಂಕ ಶೇ 45ಕ್ಕೆ ಇಳಿಕೆ ; ಆರ್ಕಿಟೆಕ್ಚರ್ ಕೋರ್ಸ್‌ಗೆ ಅರ್ಜಿ ಸಲ್ಲಿಸಲು ಜು. 13ರವರೆಗೆ ಅವಕಾಶ

ಶಿರಸಿ-ಕುಮಟಾ ರಸ್ತೆಯಲ್ಲಿ ಗುಡ್ಡ ಕುಸಿತ

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 766EEಯ ಕತಗಾಲ ಗ್ರಾಮದ ಬಳಿ ಗುಡ್ಡ ಕುಸಿದಿದೆ. ಭಾರತ್‌ಮಾಲಾ ಯೋಜನೆಯಡಿ ನಡೆಯುತ್ತಿರುವ ಶಿರಸಿ ಕುಮಟಾ ಹೆದ್ದಾರಿ ಅಗಲೀಕರಣಕ್ಕಾಗಿ ಮಣ್ಣು ಕೊರೆಯಲಾಗಿದೆ. ಇದರಿಂದಲೇ ಗುಡ್ಡ ಕುಸಿದಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಮಳೆಯಿಂದಾಗಿ ಮಣ್ಣು ಸಡಿಲಗೊಂಡು ಗುಡ್ಡ ಕುಸಿಯುತ್ತಲೇ ಇದೆ. ರಸ್ತೆಗೆ ಮಣ್ಣು ಬಿದ್ದ ಪರಿಣಾಮ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದಾರೆ.

ಮುಳುಗಡೆಯಾಗಿದ್ದ ಸೇತುವೆಗಳು ಸಂಚಾರಕ್ಕೆ ಮುಕ್ತ

ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಮಳೆ ಪ್ರಮಾಣ ತಗ್ಗಿದೆ. ಕೃಷ್ಣಾ, ದೂದಗಂಗಾ ಹಾಗೂ ವೇದಗಂಗಾ ನದಿ ನೀರಿನ ಒಳ ಹರಿವಿನಲ್ಲಿ ಗಣನೀಯ ಇಳಿಕೆ ಆಗಿದೆ. ಒಂದೆ ದಿನದಲ್ಲಿ 20 ಸಾವಿರ ಕ್ಯೂಸೇಕ್ ಒಳ ಹರಿವಿನಲ್ಲಿ ಇಳಿಕೆ ಆಗಿದೆ. ಇನ್ನೂ ಚಿಕ್ಕೋಡಿ ವ್ಯಾಪ್ತಿಯ ಮುಳುಗಡೆಯಾಗಿದ್ದ 3 ಸೇತುವೆಗಳು ಸಂಚಾರಕ್ಕೆ ಮುಕ್ತವಾಗಿವೆ. ನಿಪ್ಪಾಣಿ ತಾಲೂಕಿನ ಕಾರದಗಾ-ಭೋಜ ಭೋಜವಾಡಿ-ಕುಣ್ಣೂರ ಸೇತುವೆಗಳು ಹಾಗೂ ಚಿಕ್ಕೋಡಿ ತಾಲೂಕಿನ ಮಲ್ಲಿಕವಾಡ-ದತ್ತವಾಡ ಸೇತುವೆ ಸಂಚಾರಕ್ಕೆ ಮುಕ್ತವಾಗಿವೆ. ಇನ್ನು ಒಳ ಹರಿವಿನ ಪ್ರಮಾಣದಲ್ಲಿ ಕಡಿಮೆಯಾಗುವ ಸಾದ್ಯತೆ ಇದೆ.

ಇತ್ತ ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಭಾಗದಲ್ಲಿ ನಿರಂತರ ಮಳೆಯಿಂದಾಗಿ ಕೃಷ್ಣಾ ನದಿಗೆ ಅಡ್ಡವಾಗಿ ಕಟ್ಟಲಾಗಿರುವ ಆಲಮಟ್ಟಿ ಜಲಾಶಯಕ್ಕೆ ದಿನೆದಿನೇ ಒಳಹರಿವು ಹೆಚ್ಚಾಗುತ್ತಿದೆ. ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗುತ್ತಿದ್ದು, ನದಿಪಾತ್ರದ ಜನರಿಗೆ ಸುರಕ್ಷಿತವಾಗಿರಲು ಕೆಬಿಜೆಎನ್ಎಲ್ ಅಧಿಕಾರಿಗಳು ಮುನ್ಸೂಚನೆ ಜತೆಗೆ ಎಚ್ಚರಿಕೆಯನ್ನು ನೀಡಿದೆ. 3,500 ಕ್ಯೂಸೆಕ್ ನೀರು ಹೊರಹರಿವಿನ ಸೂಚನೆ ನೀಡಿದ್ದು, ಕ್ರಮೇಣ ಅದನ್ನು 7,500 ಕ್ಯೂಸೆಕ್‌ಗೆ ಹೆಚ್ಚಿಸಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಹೊನ್ನಾವರದ ಹಲವೆಡೆ ನೆರೆ ಪರಿಸ್ಥಿತಿ; ಭಾನುವಾರವೂ ಮಳೆ ಎಚ್ಚರಿಕೆ

Karnataka Weather Forecast : ಮಳೆಗೆ (Rain News) ಹೊನ್ನಾವರದಲ್ಲಿ ನೆರೆ ಪರಿಸ್ಥಿತಿ ಸೃಷ್ಟಿಯಾಗಿದ್ದು, ಚೌಡಯ್ಯನ ಐಕ್ಯ ಮಂಟಪ ಮುಳುಗಡೆಯಾಗಿದೆ. ಉಕ್ಕಿ ಹರಿಯುವ ನದಿಯಲ್ಲಿ ಮೀನುಗಳನ್ನು ಹಿಡಿಯುವ ದುಸ್ಸಾಹಸಕ್ಕೆ ಮುಂದಾದ ಘಟನೆಯೂ ನಡೆದಿದೆ. ಭಾನುವಾರವೂ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather forecast
ಹೊನ್ನಾವರದ ಹಲವೆಡೆ ನೆರೆ ಪರಿಸ್ಥಿತಿ
Koo

ಉತ್ತರಕನ್ನಡ: ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ. ಭಾರಿ ಮಳೆಗೆ (Karnataka weather Forecast) ಶರಾವತಿ ನದಿ ಉಕ್ಕಿ ಹರಿದು ಹೊನ್ನಾವರ ಹಲವೆಡೆ ನೆರೆ ಪರಿಸ್ಥಿತಿ ಸೃಷ್ಟಿಯಾಗಿದೆ. ತಾಲೂಕಿನ ಸರಳಗಿ, ಮಾವಿನಹೊಳೆ, ಅಳ್ಳಂಕಿ ಸೇರಿ ಹಲವು ಗ್ರಾಮಗಳ ಮನೆಗಳಿಗೆ ನೀರು ನುಗ್ಗಿದೆ. ನೆರೆ ಆತಂಕದ ಸುಮಾರು 169ಕ್ಕೂ ಅಧಿಕ‌ ಮಂದಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಗೊಂಡಿದೆ. ಜಲಾಶಯದಿಂದ ಮತ್ತೆ ನೀರು ಬಿಡುಗಡೆ ಸಾಧ್ಯತೆ ಇದ್ದು, ನದಿ ಪಾತ್ರದ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸೂಚನೆ ನೀಡಲಾಗಿದೆ.

ಚೌಡಯ್ಯನ ಐಕ್ಯ ಮಂಟಪ ಮುಳುಗಡೆ

ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳಗೊಂಡಿದ್ದು ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಚೌಡಯ್ಯಧಾನಪುರದ ನಿಜಶರಣ ಅಂಬಿಗರ ಚೌಡಯ್ಯನ ಐಕ್ಯ ಮಂಟಪ ಮುಳುಗಡೆಯಾಗಿದೆ. ಇತ್ತ ಮಲೆನಾಡಿನ ಶಿವಮೊಗ್ಗದಲ್ಲೂ ಮಳೆ ಅಬ್ಬರ ಮುಂದುವರಿದಿದೆ. ಮಳೆಯ ಅಬ್ಬರಕ್ಕೆ ಲಿಂಗನಮಕ್ಕಿ ಜಲಾಶಯ ಭರ್ತಿಯಾಗಿದೆ. ಲಿಂಗನಮಕ್ಕಿ ಜಲಾಶಯದಿಂದ 11 ಕ್ರಸ್ಟ್ ಗೇಟ್ ಮೂಲಕ 42,705 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.

ಉಕ್ಕಿ ಹರಿಯುವ ನದಿಯಲ್ಲಿ ಮೀನುಗಳನ್ನು ಹಿಡಿಯುವ ದುಸ್ಸಾಹಸ

ಗದಗ ಜಿಲ್ಲೆಯಲ್ಲಿ ತುಂಗಭದ್ರಾ ನದಿಯು ಉಕ್ಕಿ ಹರಿಯುತ್ತಿದೆ. ಮುಂಡರಗಿ ತಾಲೂಕಿನ ಸಿಂಗಟಾಲೂರು ಬ್ಯಾರೇಜ್ ಭರ್ತಿಯಾಗಿದ್ದು, ಕೆಲವರು ಜೀವ ಭಯವಿಲ್ಲದೆ ಮೀನು ಹಿಡಿಯುವ ದುಸ್ಸಾಹಸಕ್ಕೆ ಇಳಿದಿದ್ದರು. ನದಿ ತಟಗಳಿಗೆ ಗದಗ ಜಿಲ್ಲಾಡಳಿತ ಹೋಗದಂತೆ ಸೂಚನೆ ನೀಡಿದೆ. ಸ್ವಲ್ಪ ಹೆಚ್ಚು ಕಡಿಮೆಯಾದರೂ ಮೀನುಗಾರರು ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ನಾಳೆ ಕರಾವಳಿಗೆ ಭಾರಿ ಮಳೆ ಎಚ್ಚರ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗವು 30-40 ಕಿಮೀ ತಲುಪುವ ಸಾಧ್ಯತೆಯಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಾಳಿಯ ವೇಗವು (30-40 ಕಿಮೀ) ತಲುಪುವ ಸಾಧ್ಯತೆಯಿದೆ ಹಾಗೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮೀನುಗಾರರಿಗೆ ಎಚ್ಚರಿಕೆ

ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನವು ಗಂಟೆಗೆ 35 ಕಿಮೀ ನಿಂದ 45 ಕಿಮೀ ವೇಗದಲ್ಲಿ 55 ಕಿಮೀ ವೇಗದಲ್ಲಿ ಬೀಸುವ ಗಾಳಿಯು ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಉತ್ತರ ಒಳನಾಡಿನಲ್ಲಿ ನೈರುತ್ಯ ದುರ್ಬಲ

ನೈರುತ್ಯ ಮಾನ್ಸೂನ್ ಕರಾವಳಿಯ ಸಕ್ರಿಯವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದೆ. ಕರಾವಳಿಯ ಬಹುತೇಕ ಸ್ಥಳಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ಆಗುಂಬೆಯಲ್ಲಿ 18, ಕ್ಯಾಸಲ್ ರಾಕ್ 12 ಸೆಂ.ಮೀ ಮಳೆಯಾಗಿದೆ.

ಸಿದ್ದಾಪುರ 11, ಲೋಂಡಾ 10, ಕಾರ್ಕಳ, ಕೋಟ, ಕಾರವಾರದಲ್ಲಿ 9 ಸೆಂ.ಮೀ ಮಳೆಯಾಗಿದೆ. ಗೇರ್ಸೊಪ್ಪ, ಹೊನ್ನಾವರ, ಉತ್ತರ ಕನ್ನಡ, ಕೊಲ್ಲೂರು, ಗೋಕರ್ಣ, ಶೃಂಗೇರಿ ಎಚ್‌ಎಂಎಸ್ 8 ಸೆಂ.ಮೀ ಮಳೆಯಾಗಿದೆ. ಮೂಲ್ಕಿ , ಶಿರಾಲಿ ಪಿಟಿಒ , ಸಿದ್ದಾಪುರ, ಮಂಕಿ, ಕುಂದಾಪುರ , ಕದ್ರಾ, ಲಿಂಗನಮಕ್ಕಿ ಎಚ್‌ಎಂಎಸ್ , ಕಮ್ಮರಡಿ,ಚಿಕ್ಕಮಗಳೂರು, ಭಾಗಮಂಡಲ, ಜಯಪುರದಲ್ಲಿ 7 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

Karnataka Rain : ಕಾರವಾರದಲ್ಲಿ ಬಿಣಗಾ ಕಾರವಾರ ಟನೆಲ್‌ ಬಳಿ ಕಲ್ಲು ಕುಸಿದಿದ್ದು, ರಸ್ತೆ ಬಂದ್‌ ಮಾಡಿದ್ದಾರೆ. ಬೆಳಗಾವಿಯಲ್ಲಿ ದೇವಸ್ಥಾನದ ಗೋಪುರ ಕುಸಿದು ಬಿದ್ದಿದೆ. ವಿಜಯನಗರದಲ್ಲಿ ರಾಮ-ಲಕ್ಷ್ಮಣ ದೇಗುಲಕ್ಕೆ ಜಲದಿಗ್ಭಂದನ ಹಾಕಲಾಗಿದೆ.

VISTARANEWS.COM


on

By

karnataka rain
Koo

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ (Karnataka Rain) ಮುಂದುವರಿದಿದೆ. ರಾಷ್ಟ್ರೀಯ ಹೆದ್ದಾರಿ 66ರ ಕಾರವಾರದ ಸುರಂಗ ಮಾರ್ಗದಲ್ಲಿ ಕಲ್ಲು ಕುಸಿದಿದೆ. ಬಿಣಗಾದಿಂದ ಕಾರವಾರಕ್ಕೆ ಆಗಮಿಸುವ ಸುರಂಗದ ಎದುರು ಕಲ್ಲು, ಮಣ್ಣು ಜಾರಿ ಬಿದ್ದಿದೆ. ಅದೃಷ್ಟವಶಾತ್ ವಾಹನ ಸವಾರರು ಪಾರಾಗಿದ್ದಾರೆ.

ಸ್ಥಳಕ್ಕೆ ಕಾರವಾರ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು, ಐಆರ್‌ಬಿ ಕಾರ್ಮಿಕರಿಂದ ಹೆದ್ದಾರಿಯಲ್ಲಿ ಬಿದ್ದ ಕಲ್ಲು ಮಣ್ಣು ತೆರವು ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಬಿಣಗಾ ಕಾರವಾರ ಟನೆಲ್ ಬಂದ್ ಮಾಡಿದ್ದಾರೆ. ಬಿಣಗಾದಿಂದ ಬೈತಕೋಲ್ ಮಾರ್ಗದಲ್ಲಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

karnataka rain
karnataka rain

ಕುಸಿದು ಬಿದ್ದ ದೇವಸ್ಥಾನದ ಗೋಪುರ

ಬೆಳಗಾವಿ: ನಿರಂತರ ಮಳೆಗೆ ಬೆಳಗಾವಿಯ ಕಿತ್ತೂರಿನ ಕೊಂಡವಾಡ ಚೌಕಿನಲ್ಲಿರುವ ಕರೆಮ್ಮ ದೇವಿ ದೇವಸ್ಥಾನದ ಗೋಪುರ ಕುಸಿದು ಬಿದ್ದಿದೆ. ಕಳೆದ ಮೂರು ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಗೋಪುರ ಸಂಪೂರ್ಣವಾಗಿ ಕುಸಿದು, ಪಕ್ಕದ ಮಳಿಗೆಯ ಮೇಲೆ ಗೋಪುರ ಬಿದ್ದಿದೆ. ಘಟನೆಯಲ್ಲಿ ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ನಿನ್ನೆ ಶುಕ್ರವಾರವಷ್ಟೇ ಕಿತ್ತೂರು ಕೋಟೆಯ ಆವರಣದಲ್ಲಿದ್ದ ಐತಿಹಾಸಿಕ ವಾಚ್ ಟವರ್ ಕುಸಿದು ಬಿದ್ದಿತ್ತು.

ರಾಮ-ಲಕ್ಷ್ಮಣ ದೇಗುಲಕ್ಕೆ ಜಲದಿಗ್ಭಂದನ

ಜಲಾಶಯದಿಂದ 1.80 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ನದಿಗೆ ಹರಿಬಿಟ್ಟ ಹಿನ್ನೆಲೆಯಲ್ಲಿ ವಿಜಯನಗರದ ವಿಶ್ವ ವಿಖ್ಯಾತ ಹಂಪಿಯಲ್ಲಿ ತುಂಗಭದ್ರಾ ಉಕ್ಕಿ ಹರಿಯುತ್ತಿದೆ. ನದಿಯ ರೌದ್ರ ನರ್ತನ ಹೆಚ್ಚಾಗಿದ್ದರಿಂದ ಹಂಪಿಯ ಹಲವು ಸ್ಮಾರಕಗಳು ಮುಳುಗಿವೆ. ಅದರಲ್ಲೂ ಐತಿಹಾಸಿಕ ರಾಮ – ಲಕ್ಷ್ಮಣ ದೇಗುಲಕ್ಕೆ ಜಲ ದಿಗ್ಭಂದನ ಹಾಕಲಾಗಿದೆ. ಪ್ರವಾಸಿಗರು ಉಳಿದುಕೊಳುತ್ತಿದ್ದ ಮೂರು ಕಲ್ಲಿನ ಮಂಟಪಗಳು ಮುಕ್ಕಾಲು ಭಾಗ ಮುಳುಗಡೆಯಾಗಿದೆ.

ತುಂಗಭದ್ರಾ ನದಿ ನೀರು ನುಗ್ಗಿದ್ದರಿಂದ ದೇಗುಲಕ್ಕೆ ಭಕ್ತರ ಸಂಖ್ಯೆಯಲ್ಲಿ ಭಾರೀ ವಿರಳವಾಗಿದೆ. ರಾಮ – ಲಕ್ಷ್ಮಣ, ಸೀತೆ ದೇಗುಲ 2011, 2017ರಲ್ಲಿ ಎರಡು ಬಾರಿ ಸಂಪೂರ್ಣ ಮುಳುಗಡೆ ಆಗಿತ್ತು. ವಾಲಿ ಎನ್ನುವ ರಾಜನನ್ನು ಸಂಹರಿಸಿ ಸುಗ್ರೀವ ಅನ್ನೋ ರಾಜನಿಗೆ ಪಟ್ಟಾಭಿಷೇಕ ಮಾಡಿದ ಜಾಗವೇ ರಾಮ-ಲಕ್ಷ್ಮಣ ದೇಗುಲವಾಗಿದೆ. ರಾಮ-ಲಕ್ಷ್ಮಣ, ಸೀತಾಮಾತೆ, ಆಂಜನೇಯ ಹಾಗೂ ಸುಗ್ರೀವ ರಾಜ ಸೇರಿ ಐದು ಜನರ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿದೆ.

ವಿಧಿ, ವಿಧಾನ ಮಂಟಪ, ಸ್ನಾನ ಘಟ್ಟ, ಪುರಂದರ ದಾಸರ ಮಂಟಪ ಸೇರಿ ಹತ್ತಾರು ಸ್ಮಾರಕಗಳು ಈಗಾಗಲೇ ಮುಳುಗಡೆಯಾಗಿದೆ. ಸ್ಮಾರಕಗಳು ಎಲ್ಲಿವೆ ಎಂಬುದು ಗೊತ್ತಾಗದ ರೀತಿ ತುಂಗಭದ್ರಾ ಉಕ್ಕಿ ಹರಿಯುತ್ತಿದೆ.

ಇದನ್ನೂ ಓದಿ: Murder case : ಮಲೆನಾಡಲ್ಲಿ ಒಂಟಿ ಮಹಿಳೆ ಕೊಲೆ; ಕತ್ತು ಹಿಸುಕಿ ಕೊಂದವರು ಯಾರು?

ಮುಳುಗಿದ ಸಂಗಮೇಶ್ವರ ದೇವಾಲಯ

ಮಲೆನಾಡಿನ ಶಿವಮೊಗ್ಗದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಮಳೆ ಅಬ್ಬರಕ್ಕೆ ಮಲೆನಾಡಿನ ನದಿಗಳು ಮೈದುಂಬಿ ಹರಿಯುತ್ತಿದೆ. ಅಪಾಯದ ಮಟ್ಟ ಮೀರಿ ತುಂಗಾ, ಭದ್ರಾ ಹರಿಯುತ್ತಿದೆ‌. ತುಂಗಾ, ಭದ್ರಾ ನದಿ ಸಂಗಮ ಕ್ಷೇತ್ರ ನೋಡಲು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಕೂಡ್ಲಿ ತುಂಗಾ ಹಾಗೂ ಭದ್ರಾ ನದಿ ಬಂದು ಸಂಗಮ ಆಗುವ ಪುಣ್ಯಕ್ಷೇತ್ರವಾಗಿದ್ದು, ಸಂಗಮೇಶ್ವರ ದೇವಾಲಯ ಮುಳುಗಿದೆ.

ಏತ ನೀರಾವರಿ ಬ್ಯಾರೇಜ್‌ಗೆ ಪ್ರವಾಸಿಗರ ದಂಡು

ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಸಿಂಗಟಾಲೂರು ಏತ ನೀರಾವರಿ ಬ್ಯಾರೇಜ್‌ನಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಮುಂಡರಗಿ ತಾಲೂಕಿನ ಹಮ್ಮಿಗಿ, ಗುಮ್ಮಗೋಳ, ವಿಠಲಾಪುರ ಸೇರಿದಂತೆ ಅನೇಕ ಗ್ರಾಮದ ರೈತರು ತತ್ತರಿಸಿದ್ದಾರೆ.

ಬ್ಯಾರೇಜ್‌ನ 26 ಗೇಟ್‌ಗಳಲ್ಲಿ 19 ಗೇಟ್‌ಗಳು ತೆರದು 2,90,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಬ್ಯಾರೇಜ್‌ನಿಂದ ರಭಸವಾಗಿ ಹರಿಯುತ್ತಿರುವ ನೀರು ನೋಡಲು ಕಿರು ಆಣೆಕಟ್ಟು ವೀಕ್ಷಿಸಲು ಪ್ರವಾಸಿಗರು ದೌಡಯಿಸಿದ್ದಾರೆ. ಬ್ಯಾರೇಜ್ ಎದುರು ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂತಸಗೊಂಡಿದ್ದಾರೆ.

ಜೋಗ ಜಲಪಾತಕ್ಕೆ ಪ್ರವಾಸಿಗರು ಫಿದಾ

ಲಿಂಗನಮಕ್ಕಿ ಜಲಾಶಯದಿಂದ 40 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ವಿಶ್ವವಿಖ್ಯಾತ ಜೋಗ ಜಲಪಾತ ಕಣ್ಮನ ಸೆಳೆಯುತ್ತಿದೆ. ಹಾಲ್ನೊರೆಯಂತೆ ಧುಮ್ಮಿಕ್ಕಿ ಹರಿಯುತ್ತಿದೆ. ಜೋಗ ಜಲಪಾತದ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ ಆಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : 7 ಜಿಲ್ಲೆಗಳಲ್ಲಿ ವ್ಯಾಪಿಸಲಿದೆ ಭರ್ಜರಿ ಮಳೆ

Karnataka Weather Forecast : ರಾಜ್ಯಾದ್ಯಂತ ನೈರುತ್ಯ ಮುಂಗಾರು ದುರ್ಬಲಗೊಂಡಿದೆ. ಕರಾವಳಿ ಹಾಗೂ ಮಲೆನಾಡಿನ ಕೆಲವಡೆ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ (Rain News) ಅಬ್ಬರ ಕಡಿಮೆ ಆಗುತ್ತಿದ್ದು, ಕೆಲವಡೆ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather forecast) ನೀಡಿದೆ. 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಗಾಳಿಯು 30-40 ಕಿ.ಮೀ ವೇಗದಲ್ಲಿ ಬೀಸಲಿದ್ದು,ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ ಮತ್ತು ಕೊಡಗು ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಇದನ್ನೂ ಓದಿ: Teachers Transfer : ಇಂದಿನಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಶುರು; ವಿವಿಧ ನೇಮಕಾತಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

ಐತಿಹಾಸಿಕ ಕಿತ್ತೂರು ಕೋಟೆಯ ವಾಚ್ ಟವರ್ ಕುಸಿತ

ಬೆಳಗಾವಿ ಜಿಲ್ಲೆಯಾದ್ಯಂತ ನಿರಂತರ ಮಳೆಯಿಂದಾಗಿ ಐತಿಹಾಸಿಕ ಕಿತ್ತೂರು ಕೋಟೆಯ ವಾಚ್ ಟವರ್ ಕುಸಿದು ಬಿದ್ದಿದೆ. 15ನೇ ಶತಮಾನದಲ್ಲಿ ನಿರ್ಮಿಸಲಾಗಿದ್ದ ವಾಚ್ ಟವರ್ ಮಧ್ಯಾಹ್ನ ಸುರಿದ ಭಾರಿ ಮಳೆಗೆ ಕುಸಿದಿದೆ.

ಹಾವೇರಿಯಲ್ಲಿ ಬಾಲಕನ ಮೇಲೆ ಕುಸಿದ ಚಾವಣಿ

ಹಾವೇರಿ ಜಿಲ್ಲೆಯಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ನಿರಂತರ ಮಳೆಗೆ ಶಾಲೆಯ ಚಾವಣಿ ಕುಸಿದು ಬಾಲಕನಿಗೆ ಗಾಯವಾಗಿದೆ. ಹಾವೇರಿಯ ನೀರಲಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. 25 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 5 ನೇ ತರಗತಿಯಲ್ಲಿ ಓದುತ್ತಿದ್ದ ವಿನಾಯಕ್ ಮೋರೆ ಗಾಯಗೊಂಡವನು. ಬಾಲಕನ ಕಾಲಿನ ಮೇಲೆ ಚಾವಣಿ ಕಂಬ ಬಿದ್ದಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಗುತ್ತಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹರವಿ ಗ್ರಾಮದಲ್ಲೂ ಮನೆ ಕುಸಿದಿದೆ. ಕುಮಾರ ಮಳೆಪ್ಪನವರ ಮನೆಯು ಕುಸಿದು ಬಿದ್ದಿದೆ. ಬೆಳಗಿನ ಜಾವದಲ್ಲಿ ಮಣ್ಣು ಕುಸಿದಿದೆ. ಅದೃಷ್ಟವಶಾತ್ ಕುಟುಂಬಸ್ಥರು ಪಾರಾಗಿದ್ದಾರೆ.

ಇದನ್ನೂ ಓದಿ: Governor Versus State: ಶುರುವಾಯ್ತು ರಾಜ್ಯದಲ್ಲಿ ರಾಜ್ಯ ಸರ್ಕಾರ ವರ್ಸಸ್ ರಾಜ್ಯಪಾಲ ಸಂಘರ್ಷ; ರಾಜ್ಯಪಾಲರ ಮುಂದಿನ ನಡೆ ಏನು?

ಸೌಪರ್ಣಿಕ ನದಿ ತೀರದಲ್ಲಿ ಮತ್ತೆ ನೆರೆ

ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಸೌಪರ್ಣಿಕ ನದಿ ತೀರದಲ್ಲಿ ಮತ್ತೆ ನೆರೆ ಸೃಷ್ಟಿಯಾಗಿದೆ. ಸತತ ಮೂರನೇ ಬಾರಿಗೆ ನೆರೆ ಹಾವಳಿಯಿಂದಾಗಿ ಬೈಂದೂರು ತಾಲೂಕಿನ ನಾವುಂದ ಕುದ್ರು ವಿನಲ್ಲಿ ವಾಸವಾಗಿರುವ ಏಳು ಮನೆಗಳಿಗೆ ಜಲದಿಗ್ಬಂದನ ಹಾಕಲಾಗಿದೆ. ದೋಣಿಯ ಮೂಲಕವೇ ದೈನಂದಿನ ಕೆಲಸಗಳನ್ನು ಮಾಡಿಕೊಳ್ಳುತ್ತಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮನೆ ಮುಂಭಾಗವೇ ಭೂಮಿ ಛಿದ್ರ

ಚಿಕ್ಕಮಗಳೂರಿನಲ್ಲಿ ಮಳೆಯ ಅಬ್ಬರ ನಿಲ್ಲುವಂತೆ ಕಾಣುತ್ತಿಲ್ಲ. ಭಾರಿ ಮಳೆಗೆ ಭಾರಿ ಪ್ರಮಾಣದ ಭೂಕುಸಿತ ಉಂಟಾಗಿದೆ. ಕೊಪ್ಪ ತಾಲೂಕಿನ ಬಸರಿ ಕಟ್ಟೆ ಚೆನ್ನಕಲ್ಲು ಗ್ರಾಮದಲ್ಲಿ ನಾಗರಾಜ್ ಎಂಬುವವರ ಮನೆ ಮುಂದೆ ಭೂಮಿ ಛಿದ್ರ ಛಿದ್ರಗೊಂಡಿದೆ. 300 ಅಡಿಯಷ್ಟು ದೂರಕ್ಕೆ ಭೂಮಿ ಜಾರಿ ಹೋಗಿದೆ. ಭೂಮಿ ಕುಸಿತದ ರಭಸಕ್ಕೆ ಮನೆಯ ಅಡಿಪಾಯ, ಗೋಡೆಗಳಲ್ಲಿ ಬಿರುಕು ಉಂಟಾಗಿದೆ. ಮಳೆ ಹೆಚ್ಚಾದಂತೆ ಮನೆಯ ಮುಂಭಾಗ ಮತ್ತಷ್ಟು ಧರೆ ಕುಸಿತ ಉಂಟಾಗುವ ಸಾಧ್ಯತೆ ಇದೆ. ಭೂ ಕುಸಿತದಿಂದಾಗಿ 4-5 ಎಕರೆ, ಅಡಿಕೆ ತೋಟವು ನಾಶವಾಗಿದೆ.

ಶಿರಾಡಿಘಾಟ್ ಭೂ ಕುಸಿತ; ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ಟೀಂ ಭೇಟಿ

ಹಾಸನದ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಸಮೀಪದ ಗುಡ್ಡಕುಸಿತ ಸ್ಥಳಕ್ಕೆ ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾದ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕುಸಿತಕ್ಕೆ ಕಾರಣ ತಿಳಿಯಲು ಸ್ಥಳ ಪರಿಶೀಲನೆ ನಡೆಸಿದ್ದರು. ಒಂದೇ ಸ್ಥಳದಲ್ಲಿ ನಿರಂತರವಾಗಿ ಭೂಮಿ ಕುಸಿಯುತ್ತಿದೆ. ಸಕಲೇಶಪುರ ತಾಲೂಕಿನ ಹಾರ್ಲೇ ಕೂಡಿಗೆ ಗ್ರಾಮದ ಸಮೀಪ ಭೂಮಿ ಕುಸಿದಿತ್ತು. ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಕುಸಿತವಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Koppala News: ತುಂಗಭದ್ರಾ ನದಿಗೆ ಅಪಾರ ಪ್ರಮಾಣದ ನೀರು; ನದಿಪಾತ್ರದ ಗ್ರಾಮಗಳಿಗೆ ತಂಗಡಗಿ ಭೇಟಿ

Koppala News: ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣ ನೀರು ನದಿಗೆ ಹರಿಸುತ್ತಿರುವ ಪರಿಣಾಮ ಕಂಪ್ಲಿ ಸೇತುವೆ ಮುಳಗಡೆಯಾಗಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

VISTARANEWS.COM


on

Minister Shivaraj tangadagi visited and inspected Tungabhadra river side villages
Koo

ಗಂಗಾವತಿ: ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣ ನೀರು ನದಿಗೆ ಹರಿಸುತ್ತಿರುವ ಪರಿಣಾಮ ಕಂಪ್ಲಿ ಸೇತುವೆ ಮುಳಗಡೆಯಾಗಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಶುಕ್ರವಾರ ಭೇಟಿ ನೀಡಿ ಪರಿಶೀಲನೆ (Koppala News) ನಡೆಸಿದರು.

ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ಗ್ರಾಮದ ಬಳಿ ಹರಿಯುವ ತುಂಗಭದ್ರಾ ನದಿಯಿಂದ ಪಂಪ್ ಮೂಲಕ ಕನಕಗಿರಿ ಕ್ಷೇತ್ರದ ನಾನಾ ಗ್ರಾಮಗಳ ಕೆರೆ ತುಂಬಿಸುವ ಯೋಜನೆಯಡಿ ಕೈಗೊಂಡ ಕಾಮಗಾರಿಗೆ ನದಿಪ್ರವಾಹದಿಂದ ಏನಾದರೂ ಧಕ್ಕೆಯಾಗಿದೆಯೇ ಎಂದು ಸಚಿವ ಖುದ್ದು ನೀರಿನಲ್ಲಿ ಇಳಿದು ವೀಕ್ಷಣೆ ಮಾಡಿದರು.

ಸ್ಥಳದಲ್ಲಿದ್ದ ಗಂಗಾವತಿ ತಹಸೀಲ್ದಾರ್ ಯು. ನಾಗರಾಜ್ ಹಾಗೂ ಕಂದಾಯ ಅಧಿಕಾರಿಗಳಿಂದ, ನದಿಯಲ್ಲಿನ ಪ್ರವಾಹದಿಂದ ಜನರ ವಸತಿ, ಜಾನುವಾರು ಪ್ರಾಣಹಾನಿ, ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟಾಗಿದೆಯೇ ಎಂಬ ಮಾಹಿತಿ ಪಡೆದುಕೊಂಡರು.

ಇದನ್ನೂ ಓದಿ: Book Release: ಬೆಂಗಳೂರಿನಲ್ಲಿ ಆ.4ರಂದು ʼರಣಧುರಂಧರʼ ಗ್ರಂಥ ಲೋಕಾರ್ಪಣೆ

ನಿತ್ಯ ಕಂಪ್ಲಿ-ಗಂಗಾವತಿ ಮಧ್ಯೆ ಸಾವಿರಾರು ಜನ ಚಿಕಿತ್ಸೆ, ವ್ಯಾಪಾರ ವಹಿವಾಟು, ಮಕ್ಕಳು ಶಾಲಾ-ಕಾಲೇಜು ಸೇರಿದಂತೆ ನಾನಾ ಕಾರಣಕ್ಕೆ ಓಡಾಡುತ್ತಿದ್ದು, ಕಂಪ್ಲಿ ಸೇತುವೆ ಮುಳಗಡೆಯಿಂದಾಗಿ ಜನರಿಗೆ ಭಾರೀ ಸಮಸ್ಯೆಯಾಗಿದೆ ಎಂದು ಸ್ಥಳೀಯರು ತಿಳಿಸಿದರು.

ಅಲ್ಲದೇ ನದಿಯಲ್ಲಿ ಪ್ರವಾಹ ಉಂಟಾದ ಕಾರಣಕ್ಕೆ ನದಿ ಪಾತ್ರದ ಗ್ರಾಮಗಳ ಹೊಲ-ಗದ್ದೆ, ತೋಟಗಳಿಗೆ ಹಾನಿಯಾಗಿದೆ. ಭತ್ತದ ಗದ್ದೆಗಳು ಸಂಪೂರ್ಣ ಜಲಾವೃತವಾಗಿವೆ. ಅಧಿಕಾರಿಗಳು ಇದುವರೆಗೂ ಸಮೀಕ್ಷೆ ನಡೆಸಿಲ್ಲ ಎಂದು ಸ್ಥಳೀಯ ರೈತರು ಈ ಸಂದರ್ಭದಲ್ಲಿ ಸಚಿವರ ಬಳಿ ಅಳಲು ತೋಡಿಕೊಂಡರು.

ಈ ಬಗ್ಗೆ ಮಾತನಾಡಿದ ಸಚಿವ, ಶನಿವಾರ ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಲ್ಲಾ ತಾಲೂಕಿನ ತಹಸೀಲ್ದಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ಕೃಷಿ, ತೋಟಗಾರಿಕಾ ಇಲಾಖೆಯ ಅಧಿಕಾರಿಗಳ ಸಭೆ ನಡೆಸಲಿದ್ದೇನೆ. ಸಭೆಯಲ್ಲಿ ಮಳೆ ಕೊರತೆಯಿಂದ ಮಳೆಯಾಶ್ರಿತ ಪ್ರದೇಶದಲ್ಲಾದ ಹಾನಿಯ ಬಗ್ಗೆ ಚರ್ಚಿಸಲಾಗುವುದು. ಅಲ್ಲದೇ ನದಿಗೆ ಹೆಚ್ಚುವರಿ ನೀರು ಹರಿಸಿದ್ದರಿಂದ ಆಗಿರುವ ಹಾನಿಯ ಬಗ್ಗೆಯೂ ಚರ್ಚಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದರು.

ತುಂಗಭದ್ರಾ ಜಲಾಶಯದಿಂದ ನದಿಗೆ ನಿತ್ಯ ಎರಡು ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಹರಿಸಿದರೆ ನದಿಪಾತ್ರದ ಗ್ರಾಮಗಳಿಗೆ ಮತ್ತು ಹೊಲ-ಗದ್ದೆಗಳಿಗೆ ಹಾನಿಯಾಗಲಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ಇದನ್ನೂ ಓದಿ: Workshop: ಬೆಂಗಳೂರಿನಲ್ಲಿ ಆ.10ರಂದು ಸಿನಿಮಾಸಕ್ತರಿಗೆ ಕಾರ್ಯಾಗಾರ

ಸೇತುವೆ ಬಗ್ಗೆ ಸಿಎಂ ಗಮನಕ್ಕೆ

ನದಿಗೆ ನೀರು ಬಿಟ್ಟಾಗಲೊಮ್ಮೆ ಕಂಪ್ಲಿ ಸೇತುವೆ ಮುಳಗಡೆಯಾಗಿ ಸಂಚಾರಕ್ಕೆ ತೊಂದರೆಯಾಗಿ ಎರಡು ಜಿಲ್ಲೆಯ ಜನ ಪರದಾಡುತ್ತಿರುವ ಬಗ್ಗೆ ಈಗಾಗಲೆ ಸಿಎಂ ಗಮನಕ್ಕೆ ತರಲಾಗಿದೆ. ಸೇತುವೆಯ ಎತ್ತರವನ್ನು ಇನ್ನಷ್ಟು ಹೆಚ್ಚಿಸಬೇಕಿದೆ. ಇಲ್ಲಿನ ಸಮಗ್ರ ಮಾಹಿತಿಯನ್ನು ವರದಿ ರೂಪದಲ್ಲಿ ಸಿಎಂ ಗಮನಕ್ಕೆ ತರಲಾಗುವುದು ಎಂದು ಸಚಿವ ಹೇಳಿದರು.

Continue Reading
Advertisement
Ayodhya
ದೇಶ10 mins ago

Ayodhya: ಅಯೋಧ್ಯೆಗೆ ವಿಮಾನ ತಲುಪುತ್ತಲೇ ಭೂಮಿಗೆ ನಮಸ್ಕರಿಸಿದ ಗಗನಸಖಿ; ಭುಗಿಲೆದ್ದಿತು ವಿವಾದ!

Wayanad Landslide
ಕರ್ನಾಟಕ1 hour ago

Wayanad Landslide: ವಯನಾಡು ಸಂತ್ರಸ್ತರಿಗೆ ಮಿಡಿದ ಕರುನಾಡು; ಸರ್ಕಾರದ ಜತೆಗೆ ಜನರಿಂದಲೂ ನೆರವು!

Kavya Maran
ಕ್ರಿಕೆಟ್2 hours ago

Kavya Maran : ಐಪಿಎಲ್​ ಆಟಗಾರರ ಹರಾಜಿನ ನಿಯಮಗಳ ಬಗ್ಗೆ ಕಾವ್ಯಾ ಮಾರನ್ ಇಟ್ಟಿರುವ ಬೇಡಿಕೆಗಳು ಇವು…

Champions Trophy 2025
ಪ್ರಮುಖ ಸುದ್ದಿ2 hours ago

Champions Trophy 2025 : ಚಾಂಪಿಯನ್ಸ್​ ಟ್ರೋಫಿಗಾಗಿ 544 ಕೋಟಿ ರೂಪಾಯಿ ಬಿಡುಗಡೆ ಮಾಡಿದ ಐಸಿಸಿ

Viral Video
ವೈರಲ್ ನ್ಯೂಸ್2 hours ago

Viral Video: ಪ್ರವಾಹದಲ್ಲಿ ಸಿಲುಕಿದ ನಾಯಿಗಳಿಗೆ ಡ್ರೋನ್‌ ಮೂಲಕ ಬಿರಿಯಾನಿ ರವಾನೆ; ಮಾನವೀಯತೆ ಅಂದ್ರೆ ಇದು!

Best Teacher Award
ಕರ್ನಾಟಕ2 hours ago

Best Teacher Award: ‘ರಾಜ್ಯ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಮಾಹಿತಿ

Union Minister Pralhad Joshi latest statement at Mysore Chalo Padayatra
ಕರ್ನಾಟಕ3 hours ago

BJP-JDS Padayatra: ವಾಲ್ಮೀಕಿ ನಿಗಮ, ಮುಡಾ ಹಗರಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಶೇರ್ ಹೋಲ್ಡರ್: ಪ್ರಲ್ಹಾದ್‌ ಜೋಶಿ ಆರೋಪ

Farmer dies after falling under power tiller wheel in Moralli village
ಉತ್ತರ ಕನ್ನಡ3 hours ago

Farmer Death: ಪವರ್ ಟಿಲ್ಲರ್ ಚಕ್ರಕ್ಕೆ ಸಿಲುಕಿ ರೈತ ದಾರುಣ ಸಾವು

KHIR City project Launch on August 23 at bengaluru says Minister MB Patil
ಕರ್ನಾಟಕ3 hours ago

KHIR City: ಬೆಂಗಳೂರಿನಲ್ಲಿ ದೇಶದಲ್ಲೇ ಮೊದಲ ‘ನಾಲೆಡ್ಜ್, ಹೆಲ್ತ್, ಇನ್ನೋವೇಶನ್ ಆಂಡ್ ರೀಸರ್ಚ್ ಸಿಟಿ’; ಆ.23ರಂದು ಉದ್ಘಾಟನೆ

IND vs SL ODI
ಪ್ರಮುಖ ಸುದ್ದಿ3 hours ago

IND vs SL ODI : ಶ್ರೀಲಂಕಾ ವಿರುದ್ಧ ಭಾನುವಾರ ಎರಡನೇ ಪಂದ್ಯ; ಮತ್ತೊಂದು ಥ್ರಿಲ್ಲರ್ ನಿರೀಕ್ಷೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ11 hours ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ4 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌