Bowling Coach: ಬೌಲಿಂಗ್​ ಕೋಚ್​ ರೇಸ್​ನಿಂದ ಹೊರಬಿದ್ದ ಕನ್ನಡಿಗ ವಿನಯ್​ ಕುಮಾರ್! - Vistara News

ಕ್ರೀಡೆ

Bowling Coach: ಬೌಲಿಂಗ್​ ಕೋಚ್​ ರೇಸ್​ನಿಂದ ಹೊರಬಿದ್ದ ಕನ್ನಡಿಗ ವಿನಯ್​ ಕುಮಾರ್!

Bowling Coach: ವಿನಯ್ ಕುಮಾರ್ ಅವರನ್ನು ಆಯ್ಕೆ ಮಾಡುವುದಕ್ಕಿಂತ ಅನುಭವಿ ಮಾಜಿ ಕ್ರಿಕೆಟಿಗರಾದ ಜಹೀರ್ ಖಾನ್ ಇಲ್ಲವೇ ಲಕ್ಷ್ಮಿಪತಿ ಬಾಲಾಜಿ ಅವರನ್ನು ಆಯ್ಕೆಗೆ ಪರಿಗಣಿಸುವಂತೆ ಬಿಸಿಸಿಐ, ಗಂಭೀರ್‌ಗೆ ಸಲಗೆ ನೀಡಿದೆ ಎಂದು ವರದಿಯಾಗಿದೆ.

VISTARANEWS.COM


on

Bowling Coach
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಟೀಮ್​ ಇಂಡಿಯಾದ ಪ್ರಧಾನ ಕೋಚ್​ ಆಯ್ಕೆ ಈಗಾಗಲೇ ಪ್ರಕಟಗೊಂಡಿದೆ. ಮಾಜಿ ಆಟಗಾರ ಗೌತಮ್ ಗಂಭೀರ್​ ಈ ಹುದ್ದೆಗೆ ನೇಮಕಗೊಂಡಿದ್ದಾರೆ. ಇನ್ನುಳಿದ ಬ್ಯಾಟಿಂಗ್​, ಫೀಲ್ಡಿಂಗ್, ಬೌಲಿಂಗ್​​ ಮತ್ತು ಸಹಾಯಕ ಕೋಚ್​ಗಳ ಆಯ್ಕೆಯಾಗಬೇಕಿದೆ. ಇದೀಗ ಬೌಲಿಂಗ್​ ಕೋಚ್(Bowling Coach)​ ರೇಸ್​ನಲ್ಲಿದ್ದ ಕನ್ನಡಿಗ ವಿನಯ್​ ಕುಮಾರ್(Vinay Kumar)​ ಅವರನ್ನು ಬಿಸಿಸಿಐ ಕೈಬಿಟ್ಟು(BCCI To Pick Bowling Coach) ಇಬ್ಬರ ಹೆಸರನ್ನು ಮಾತ್ರ ಅಂತಿಮಗೊಳಿಸಿರುವುದಾಗಿ ತಿಳಿದುಬಂದಿದೆ.

​ಬೌಲಿಂಗ್​ ಕೋಚ್​ ರೇಸ್​ನಲ್ಲಿ ದಾವಣಗೆರೆ ಎಕ್ಸ್‌ಪ್ರೆಸ್ ಎಂದೇ ಪ್ರಸಿದ್ಧವಾಗಿರುವ ವಿನಯ್​ ಕುಮಾರ್​, ಜಹೀರ್​ ಖಾನ್(Zaheer Khan)​ ಮತ್ತು ಲಕ್ಷ್ಮೀಪತಿ ಬಾಲಾಜಿ(Lakshmipathy Balaji) ಮಧ್ಯೆ ಪೈಪೋಟಿ ಏರ್ಪಟ್ಟಿತ್ತು. ಇದೀಗ ಈ ರೇಸ್​ನಿಂದ ವಿನಯ್​ ಕುಮಾರ್ ಅವರನ್ನು ಕೈಬಿಡಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ವಿನಯ್ ಕುಮಾರ್ ಅವರನ್ನು ಆಯ್ಕೆ ಮಾಡುವುದಕ್ಕಿಂತ ಅನುಭವಿ ಮಾಜಿ ಕ್ರಿಕೆಟಿಗರಾದ ಜಹೀರ್ ಖಾನ್ ಇಲ್ಲವೇ ಲಕ್ಷ್ಮಿಪತಿ ಬಾಲಾಜಿ ಅವರನ್ನು ಆಯ್ಕೆಗೆ ಪರಿಗಣಿಸುವಂತೆ ಬಿಸಿಸಿಐ, ಗಂಭೀರ್‌ಗೆ ಸಲಗೆ ನೀಡಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ Gautam Gambhir: ವಿಶ್ವಕಪ್ ನಂತರವೇ ಮದುವೆ ಎಂದು ಪ್ರಿಯತಮೆಗೆ ಷರತ್ತು ಹಾಕಿದ್ದ ಗಂಭೀರ್! ಇಲ್ಲಿದೆ ಅವರ ಲವ್‌ ಸ್ಟೋರಿ!

ಭಾರತ ಕ್ರಿಕೆಟ್ ತಂಡವು ಕಂಡ ಅತ್ಯಂತ ಯಶಸ್ವಿ ಎಡಗೈ ವೇಗದ ಬೌಲರ್ ಎನಿಸಿಕೊಂಡಿರುವ ಜಹೀರ್ ಖಾನ್, ಭಾರತ ಪರ 309 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿ 610 ವಿಕೆಟ್ ಕಬಳಿಸಿದ್ದಾರೆ. ಬಿಸಿಸಿಐ ಮೂಲಗಳ ಪ್ರಕಾರ, ಜಹೀರ್ ಖಾನ್, ಟೀಂ ಇಂಡಿಯಾ ಬೌಲಿಂಗ್ ಕೋಚ್‌ ರೇಸ್‌ನಲ್ಲಿ ಮುಂದಿದ್ದಾರೆ ಎನ್ನಲಾಗುತ್ತಿದೆ. ಇವರು ಈ ಹುದ್ದೆಗೆ ಒಪ್ಪದೇ ಇದ್ದರೆ ತಮಿಳುನಾಡು ಮೂಲದ ಲಕ್ಷ್ಮಿಪತಿ ಬಾಲಾಜಿ ಅವರಿಗೆ ಅವಕಾಶ ಸಿಗಲಿದೆ. ಐಪಿಎಲ್​ನಲ್ಲಿ ಬಾಲಾಜಿ ವಹಲವು ತಂಡಗಳ ಬೌಲಿಂಗ್​ ಕೋಚ್​ ಆಗಿ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಮೂಲಗಳ ಪ್ರಕಾರ ಜಹೀರ್​ ಖಾನ್​ ಅವರೇ ಬೌಲಿಂಗ್​ ಕೋಚ್​ ಆಗಲಿದ್ದು ಅಧಿಕೃತ ಘೋಷಣೆಯೊಂದೆ ಬಾಕಿ ಎನ್ನಲಾಗಿದೆ. ಬ್ಯಾಟಿಂಗ್​ ಕೋಚ್​ ಆಗಿ ಅಭಿಷೇಕ್ ನಾಯರ್ ಆಯ್ಕೆಯಾಗುವ ಸಾಧ್ಯತೆ ಇದೆ.

ಕೋಚ್​ ಹುದ್ದೆಗೆ ಗಂಭೀರ್​ ಅವರನ್ನು ಆಯ್ಕೆ ಮಾಡುವ ಮುನ್ನ ತಂಡದ ಸ್ಟಾರ್​ ಆಟಗಾರ ವಿರಾಟ್​ ಕೊಹ್ಲಿ(virat kohli) ಜತೆ ಬಿಸಿಸಿಐ ಅಭಿಪ್ರಾಯ ಕೇಳಿಲ್ಲ ಎಂಬ ಮಾತುಗಳು ಕೇಳಿಬಂದಿವೆ.​

ಹೌದು ವಿರಾಟ್​ ಕೊಹ್ಲಿ ಮತ್ತು ಗಂಭೀರ್​ ಐಪಿಎಲ್​ ವೇಳೆ ಹಾವು ಮುಂಗುಸಿಯಂತೆ ಕಿತ್ತಾಡಿಕೊಳ್ಳುತ್ತಿದ್ದರು. ಕಳೆದ ವರ್ಷದ ಐಪಿಎಲ್​ ವೇಳೆ ಕೈ ಕೈ ಮಿಲಾಯಿಸುವ ಹಂತಕ್ಕೂ ಇಬರಿಬ್ಬರ ಜಗಳ ಮುಂದುವರಿದಿತ್ತು. ಕೊಹ್ಲಿಯ ವಿರುದ್ಧ ಹಲವು ಬಾರಿ ಬಹಿರಂಗವಾಗಿ ಮುನಿಸನ್ನು ಪ್ರದರ್ಶಿಸಿದ್ದರು. ಹೀಗಿರುವಾಗ ಬಿಸಿಸಿಐ ಗಂಭೀರ್​ ಅವರನ್ನು ಕೋಚ್​ ಆಗಿ ನೇಮಕ ಮಾಡುವಾಗ ಕೊಹ್ಲಿಯನ್ನು ಒಂದು ಮಾತು ಕೂಡ ಕೇಳದೇ ಇರುವುದು ಕೊಹ್ಲಿ ಮತ್ತು ಟೀಮ್​ ಇಂಡಿಯಾ ಅಭಿಮಾನಿಗಳಿಗೆ ಅಸಮಾಧಾನ ಉಂಟುಮಾಡಿದೆ. ಇವರಿಬ್ಬರ ಜಗಳ ಮತ್ತೆ ಮುಂದುವರಿದರೆ ತಂಡದ ಒಗ್ಗಟ್ಟು ಇಲ್ಲದಂತಾಗಬಹುದೆಂದು ಅನೇಕರು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Wasim Jaffer : ಪಂಜಾಬ್ ತಂಡದ ಕೋಚ್​ ಆಗಿ ಮಾಜಿ ಬ್ಯಾಟರ್​ ವಾಸಿಮ್​ ಜಾಫರ್ ನೇಮಕ

Wasim Jaffer :

VISTARANEWS.COM


on

Wasim Jaffer
Koo

ಬೆಂಗಳೂರು : ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ (PCA) ಮುಂಬರುವ ದೇಶೀಯ ಋತುವಿನಲ್ಲಿ ಭಾರತದ ಮಾಜಿ ಕ್ರಿಕೆಟಿಗ ವಾಸಿಮ್ ಜಾಫರ್ (Wasim Jaffer) ಅವರನ್ನು ಹಿರಿಯ ಪುರುಷರ ತಂಡದ ಮುಖ್ಯ ಕೋಚ್ ಆಗಿ ನೇಮಕ ಮಾಡಿದೆ. ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್ ಶಾನ್ ಟೈಟ್ ಬದಲಿಗೆ ವಾಸಿಮ್ ಜಾಫರ್ ಅವರನ್ನು ಪಂಜಾಬ್ ರಾಜ್ಯ ತಂಡದ ಮುಖ್ಯ ಕೋಚ್ ಆಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಐಪಿಎಲ್ 2025 ರ ಋತುವಿನಲ್ಲಿ ವಾಸಿಮ್ ಜಾಫರ್ ಅವರು ಟ್ರೆವರ್ ಬೇಲಿಸ್ ಅವರಿಂದ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಬಹುದು ಎಂಬ ವದಂತಿಗಳು ಇದ್ದವು. ಜಾಫರ್ 2019 ರಿಂದ 2021 ರವರೆಗೆ ತಂಡದ ಬ್ಯಾಟಿಂಗ್ ತರಬೇತುದಾರರಾಗಿ ಕೆಲಸ ಮಾಡಿದ್ದರು. ನಂತರ ಬ್ಯಾಟಿಂಗ್ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು. ಐಪಿಎಲ್ 2024 ರ ಹರಾಜಿಗೆ ಮುಂಚಿತವಾಗಿ ಅವರು ತಮ್ಮ ಸ್ಥಾನದಿಂದ ಕೆಳಗಿಳಿದಿದ್ದರು.

ಜಾಫರ್​ ಉತ್ತರಾಖಂಡ ಮತ್ತು ಒಡಿಶಾ ರಾಜ್ಯ ಕ್ರಿಕೆಟ್ ತಂಡಗಳ ಮುಖ್ಯ ತರಬೇತುದಾರರಾಗಿಯೂ ಕೆಲಸ ಮಾಡಿದ್ದಾರೆ. ಜಾಫರ್ ಉತ್ತರಾಖಂಡದೊಂದಿಗಿನ ಅವಧಿಯಲ್ಲಿ ಆಟಗಾರರಿಂದ ಆಯ್ಕೆ ಪಕ್ಷಪಾತದ ಆರೋಪಗಳನ್ನು ಎದುರಿಸಿದ್ದರಉ. ಭಾರತದ ಮಾಜಿ ಆರಂಭಿಕ ಬ್ಯಾಟರ್​​ ಅಂತಿಮವಾಗಿ ಋತುವಿನ ಮಧ್ಯದಲ್ಲಿ ರಾಜೀನಾಮೆ ನೀಡಿದ್ದರುನಂತರ ಅವರು ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದರು.

ವಾಸಿಮ್ ಜಾಫರ್ ತಂಡವನ್ನು ಯಶಸ್ಸನ್ನು ಸಾಧಿಸಲು ಪ್ರೇರೇಪಿಸುತ್ತಾರೆ

ಪಿಸಿಎ ಅಧ್ಯಕ್ಷ ಅಮರ್ಜೀತ್ ಸಿಂಗ್ ಮೆಹ್ತಾ ಅವರು ವಾಸಿಮ್ ಜಾಫರ್ ಅವರನ್ನು ಪಂಜಾಬ್ ಪುರುಷರ ಹಿರಿಯ ತಂಡದ ಮುಖ್ಯ ಕೋಚ್ ಆಗಿ ನೇಮಕ ಮಾಡಿರುವುದನ್ನು ದೃಢಪಡಿಸಿದ್ದಾರೆ. ಜಾಫರ್ ಅವರ ಅನುಭವ ಮತ್ತು ಪರಿಣತಿ ತಂಡವನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ ಎಂದು ಅಮರ್ಜೀತ್ ಹೇಳಿದ್ದಾರೆ. ಅವರೊಂದಿಗೆ ಕೆಲಸ ಮಾಡುವ ಅವಕಾಶವನ್ನು ಕಳೆದುಕೊಳ್ಳಲು ಪಿಸಿಎ ಬಯಸುವುದಿಲ್ಲ ಎಂದು ಅವರು ಹೇಳಿದರು.

“ರಣಜಿ ಟ್ರೋಫಿ ಮತ್ತು ಸೈಯದ್ ಮುಷ್ತಾಕ್ ಅಲಿ ಟ್ರೋಫಿಯನ್ನು ಗೆಲ್ಲುವುದು ನಮ್ಮ ಮುಖ್ಯ ಗುರಿ. ಆದ್ದರಿಂದ ಅವರನ್ನು ಮುಖ್ಯ ಕೋಚ್ ಆಗಿ ನೇಮಿಸಲು ನಾವು ಸರ್ವಾನುಮತದಿಂದ ನಿರ್ಧರಿಸಿದ್ದೇವೆ. ಅವರ ಅನುಭವ ಮತ್ತು ಪರಿಣತಿಯೊಂದಿಗೆ, ಜಾಫರ್ ತಂಡವನ್ನು ಯಶಸ್ಸನ್ನು ಸಾಧಿಸಲು ಪ್ರೇರೇಪಿಸುತ್ತಾರೆ ಎಂದು ನಮಗೆ ವಿಶ್ವಾಸವಿದೆ. ಅವರು ದೇಶದ ಅತ್ಯುತ್ತಮ ದೀರ್ಘ ಸ್ವರೂಪದ ಆಟಗಾರರಲ್ಲಿ ಒಬ್ಬರು, ಮತ್ತು ಅವರನ್ನು ಮಂಡಳಿಯಲ್ಲಿ ಹೊಂದುವ ಅವಕಾಶವನ್ನು ಕಳೆದುಕೊಳ್ಳಲು ನಾವು ಬಯಸಲಿಲ್ಲ”ಎಂದು ಅಮರ್ಜೀತ್ ಸಿಂಗ್ ಮೆಹ್ತಾ ತಿಳಿಸಿದ್ದಾರೆ.

ಪಂಜಾಬ್ ಇತ್ತೀಚೆಗೆ ವೈಟ್-ಬಾಲ್ ಕ್ರಿಕೆಟ್​​ನಲ್ಲಿ ಉತ್ತಮ ಪ್ರದರ್ಶನ ನೀಡಿದೆ ಮತ್ತು ಈಗ ರೆಡ್-ಬಾಲ್ ಕ್ರಿಕೆಟ್​ನಲ್ಲಿ ಸ್ಥಿರತೆಯನ್ನು ಸಾಧಿಸುವತ್ತ ಗಮನ ಹರಿಸಲು ಬಯಸಿದೆ ಎಂದು ಪಿಸಿಎ ಅಧ್ಯಕ್ಷರು ಒತ್ತಿ ಹೇಳಿದರು.

ಕಳೆದ ಋತುವಿನಲ್ಲಿ ಪಂಜಾಬ್ ತಂಡವು ವಿಜಯ್ ಹಜಾರೆ ಟ್ರೋಫಿ ಮತ್ತು ಸೈಯದ್ ಮುಷ್ತಾಕ್ ಅಲಿ ಟ್ರೋಫಿಯನ್ನು ಗೆದ್ದುಕೊಂಡಿತ್ತು. ಆ ತಂಡದ ಸಾಲ್ವಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ತೆರಳಿದ್ದು, ನಾಯಕ ಮನ್ದೀಪ್ ಸಿಂಗ್ ತ್ರಿಪುರಾ ಸೇರಲಿದ್ದಾರೆ. ಸಾಳ್ವಿ ಪ್ರಸ್ತುತ ಭಾರತ ಮಹಿಳಾ ಕ್ರಿಕೆಟ್ ತಂಡದ ಬೌಲಿಂಗ್ ತರಬೇತುದಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

2022-23ರ ಋತುವಿನಲ್ಲಿ ಪಂಜಾಬ್ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ತಲುಪಿತು. ಆದರೆ ಸೌರಾಷ್ಟ್ರ ವಿರುದ್ಧ ಸೋತಿತ್ತು. ಇತ್ತೀಚಿನ ಆವೃತ್ತಿಯಲ್ಲಿ ನಾಕೌಟ್​ಗೆ ಅರ್ಹತೆ ಪಡೆಯಲು ವಿಫಲವಾಯಿತು.

ಇದನ್ನೂ ಓದಿ: Kavya Maran : ಐಪಿಎಲ್​ ಆಟಗಾರರ ಹರಾಜಿನ ನಿಯಮಗಳ ಬಗ್ಗೆ ಕಾವ್ಯಾ ಮಾರನ್ ಇಟ್ಟಿರುವ ಬೇಡಿಕೆಗಳು ಇವು…

ರಣಜಿ ಟ್ರೋಫಿ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ವಾಸಿಂ ಜಾಫರ್. ಅವರು ತಮ್ಮ ವೃತ್ತಿಜೀವನದಲ್ಲಿ ಪಂದ್ಯಾವಳಿಯಲ್ಲಿ 238 ಇನ್ನಿಂಗ್ಸ್ ಗಳಲ್ಲಿ 12,038 ರನ್ ಗಳಿಸಿದ್ದಾರೆ. ಮಾಜಿ ಬಲಗೈ ಬ್ಯಾಟರ್​ 2008-09 ಮತ್ತು 2009-10ರಲ್ಲಿ ಮುಂಬೈ ರಾಜ್ಯ ತಂಡವನ್ನು ಎರಡು ರಣಜಿ ಪ್ರಶಸ್ತಿಗಳಿಗೆ ಮುನ್ನಡೆಸಿದ್ದರು. ಅವರು ೨೦೧೦ ರ ಆರಂಭದಲ್ಲಿ ದುಲೀಪ್ ಟ್ರೋಫಿ ವಿಜಯಕ್ಕೆ ಪಶ್ಚಿಮ ವಲಯವನ್ನು ಮುನ್ನಡೆಸಿದರು.

Continue Reading

ಕ್ರಿಕೆಟ್

Kavya Maran : ಐಪಿಎಲ್​ ಆಟಗಾರರ ಹರಾಜಿನ ನಿಯಮಗಳ ಬಗ್ಗೆ ಕಾವ್ಯಾ ಮಾರನ್ ಇಟ್ಟಿರುವ ಬೇಡಿಕೆಗಳು ಇವು…

Kavya Maran : ನಾವು ನಾಲ್ಕು ಉಳಿಸಿಕೊಳ್ಳುವ ಆಟಗಾರರು ಮತ್ತು ಎರಡು ಆರ್​ಟಿಎಂ ​ ಅಥವಾ ಎಲ್ಲಾ ಆರು ಉಳಿಸಿಕೊಳ್ಳುವ ಅಥವಾ ಎಲ್ಲಾ ಆರು ಆರ್​ಟಿಎಂ ​ ಆಯ್ಕೆಯನ್ನು ಬಯಸುತ್ತೇವೆ. ಆಟಗಾರನೊಂದಿಗಿನ ಚರ್ಚೆಯ ಆಧಾರದ ಮೇಲೆ ಉಳಿಸಿಕೊಳ್ಳುವ ಅಥವಾ ಆರ್​ಟಿಎಂ ಅನ್ನು ಬಳಸಬೇಕೇ ಎಂಬ ಆಯ್ಕೆಯು ಫ್ರಾಂಚೈಸಿಗೆ ಇರಬೇಕು,” ಎಂದು ಮಾರನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Kavya Maran
Koo

ಬೆಂಗಳೂರು: ಐಪಿಎಲ್ 2024 ರಲ್ಲಿ ಸನ್​​ರೈಸರ್ಸ್ ಹೈದರಾಬಾದ್ ಅದ್ಭುತ ಪ್ರದರ್ಶನ ನೀಡಿತ್ತು. ಪಂದ್ಯಾವಳಿಯ ಅತ್ಯುತ್ತಮ ತಂಡಗಳಲ್ಲಿ ಒಂದಾಗಿ ರನ್ನರ್ ಅಪ್ ಸ್ಥಾನವನ್ನು ಗಳಿಸಿತ್ತು. ಸಹ ಮಾಲೀಕರಾದ ಕಾವ್ಯಾ ಮಾರನ್ (Kavya Maran ) ಅವರು ಆಟಗಾರರ ಪ್ರದರ್ಶನದಿಂದ ಸಂತೋಷಪಟ್ಟಿದ್ದರು. ಈಗ ಪಂದ್ಯಾವಳಿಯ 2025 ರ ಆವೃತ್ತಿಗೆ ತಂಡದಲ್ಲಿ ಪ್ರಮುಖ ಆಟಗಾರರನ್ನು ಉಳಿಸಿಕೊಳ್ಳುವ ಉದ್ದೇಶವನ್ನು ಅವರು ಹೊಂದಿದ್ದಾರೆ. ಆದಾಗ್ಯೂ, ಮೆಗಾ-ಹರಾಜು ಬರುತ್ತಿರುವುದರಿಂದ ಮುಂದಿನ ಆವೃತ್ತಿಗೆ ಮುಂಚಿತವಾಗಿ ಪ್ರತಿ ತಂಡವು ಉಳಿಸಿಕೊಳ್ಳಬಹುದಾದ ಆಟಗಾರರ ಸಂಖ್ಯೆಯ ಬಗ್ಗೆ ಸಾಕಷ್ಟು ಸ್ಪಷ್ಟತೆ ಇಲ್ಲದ ಕಾರಣ ಕೆಲವೊಂದು ಚರ್ಚೆಗಳು ನಡೆಯುತ್ತಿವೆ.

ಪ್ರತಿ ತಂಡಕ್ಕೆ ಕನಿಷ್ಠ ಆರು ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಬೇಕು ಅಥವಾ ರೈಟ್ ಟು ಮ್ಯಾಚ್ (ಆರ್ ಟಿಎಂ) ಕಾರ್ಡ್ ಗಳ ಮೂಲಕ ಹರಾಜಿನಲ್ಲಿ ಅವರನ್ನು ಖರೀದಿಸುವ ಅವಕಾಶವನ್ನು ಹೊಂದಿರಬೇಕು ಎಂದು ಮಾರನ್ ಬಿಸಿಸಿಐಯನ್ನು ಕೋರಿದ್ದಾರೆ. ಕೆಲವೊಮ್ಮೆ ಆಟಗಾರರನ್ನು ಉಳಿಸಿಕೊಳ್ಳುವ ಮೊತ್ತದಿಂದ ಸಂತೋಷವಾಗಿಲ್ಲ ಅಥವಾ ಅವರು ಉಳಿಸಿಕೊಳ್ಳುವ ಮೊದಲ ಆಟಗಾರನಾಗಲು ಬಯಸಿದ್ದರೆ ಆಟಿಎಂ ಕಾರ್ಡ್​ಗಳನ್ನು ಮರಳಿ ಜಾರಿಗೆ ತರಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಆಟಗಾರರನ್ನು ಆರ್ಟಿಎಂ ಕಾರ್ಡ್ ಬಳಸಿ ಖರೀದಿಸಿದರೆ ಹಣದ ಬಗ್ಗೆ ಗೊಂದಲ ಹೊಂದಿರವಲು ಅವಕಾಶವಿರುವುದಿಲ್ಲ ಎಂದು ಅವರು ಹೇಳಿದ್ದಾರೆ. .

ನಾವು ನಾಲ್ಕು ಉಳಿಸಿಕೊಳ್ಳುವ ಆಟಗಾರರು ಮತ್ತು ಎರಡು ಆರ್​ಟಿಎಂ ​ ಅಥವಾ ಎಲ್ಲಾ ಆರು ಉಳಿಸಿಕೊಳ್ಳುವ ಅಥವಾ ಎಲ್ಲಾ ಆರು ಆರ್​ಟಿಎಂ ​ ಆಯ್ಕೆಯನ್ನು ಬಯಸುತ್ತೇವೆ. ಆಟಗಾರನೊಂದಿಗಿನ ಚರ್ಚೆಯ ಆಧಾರದ ಮೇಲೆ ಉಳಿಸಿಕೊಳ್ಳುವ ಅಥವಾ ಆರ್​ಟಿಎಂ ಅನ್ನು ಬಳಸಬೇಕೇ ಎಂಬ ಆಯ್ಕೆಯು ಫ್ರಾಂಚೈಸಿಗೆ ಇರಬೇಕು,” ಎಂದು ಮಾರನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಉಳಿಸಿಕೊಳ್ಳುವ ಮೊತ್ತವು ಕಡಿಮೆ ಮಟ್ಟದಲ್ಲಿದೆ ಎಂದು ಭಾವಿಸಿದಾಗ ಆಟಗಾರ ಹರಾಜಿಗೆ ಹೋಗಲು ಆದ್ಯತೆ ನೀಡಿದ ಹಲವಾರು ಉದಾಹರಣೆಗಳಿವೆ. ಅನೇಕ ಆಟಗಾರರು ತಾವು ಮೊದಲ ಉಳಿಸಿಕೊಳ್ಳಬೇಕು ಎಂದು ಭಾವಿಸಿದ ನಿದರ್ಶನಗಳಿವೆ. ಮೊದಲನೆಯದಾಗಿ ಉಳಿಸಿಕೊಳ್ಳದಿದ್ದರೆ ಹರಾಜಿನಲ್ಲಿ ಇರಿಸಲು ಕಾವ್ಯ ಕೇಳಿದ್ದಾರೆ. ನಾವು ಆಟಗಾರರಿಗೆ ಇರುವ ಬೆಲೆಯಲ್ಲಿ ಉಳಿಸಿಕೊಳ್ಳಲು ಅಥವಾ ಆರ್​ಟಿಎಂ ಮಾಡಲು ಅವಕಾಶ ನೀಡಬಹುದು. ಇದರಿಂದ ಉಳಿಸಿಕೊಳ್ಳುವ ಬೆಲೆಯ ಬಗ್ಗೆ ಆಟಗಾರನಿಗೆ ಅಸಮಾಧಾನವಿಲ್ಲ ಎಂದು ಖಚಿತಪಡಿಸಿಕೊಳ್ಳಬಹುದು” ಎಂದು ಕಾವ್ಯಾ ವಿವರಿಸಿದ್ದಾರೆ.

ಇದನ್ನೂ ಓದಿ: Champions Trophy 2025 : ಚಾಂಪಿಯನ್ಸ್​ ಟ್ರೋಫಿಗಾಗಿ 544 ಕೋಟಿ ರೂಪಾಯಿ ಬಿಡುಗಡೆ ಮಾಡಿದ ಐಸಿಸಿ

ಬಿಸಿಸಿಐ ಉಳಿಸಿಕೊಳ್ಳಲು ಮಾತ್ರ ಅವಕಾಶ ನೀಡಿದರೆ, ಫ್ರಾಂಚೈಸಿಗಳು ಆಟಗಾರರಿಗೆ ಸೈಡ್ ಕಾಂಟ್ರಾಕ್ಟ್​ಗಳನ್ನು ನೀಡಬೇಕಾಗುತ್ತದೆ ಎಂದು ಎಸ್ಆರ್​ಎಚ್​ ಸಹ ಮಾಲೀಕರು ಹೇಳಿದ್ದಾರೆ. ಆದಾಗ್ಯೂ, ಅವರು ಆರ್​ಟಿಎಂ ಕಾರ್ಡ್​ಗಳ ಬಳಕೆಗೆ ಅವಕಾಶ ನೀಡಿದರೆ, ಸೈಡ್ ಡೀಲ್​ಗಳು ಸಂಪೂರ್ಣವಾಗಿ ಸ್ಥಗಿತಗೊಳ್ಳುತ್ತವೆ ಮತ್ತು ಹೆಚ್ಚಿನ ಆರ್ಥಿಕ ಪಾರದರ್ಶಕತೆ ಇರುತ್ತದೆ ಎಂಬುದು ಅವರು ಹೇಳಿಕೆಯಾಗಿದೆ.

Continue Reading

ಪ್ರಮುಖ ಸುದ್ದಿ

Champions Trophy 2025 : ಚಾಂಪಿಯನ್ಸ್​ ಟ್ರೋಫಿಗಾಗಿ 544 ಕೋಟಿ ರೂಪಾಯಿ ಬಿಡುಗಡೆ ಮಾಡಿದ ಐಸಿಸಿ

Champions Trophy 2025 : ಕೊಲಂಬೊದಲ್ಲಿ ನಡೆದ ಕಳೆದ ಎಜಿಎಂ ಸಭೆಯಲ್ಲಿ, ಈ ವಿಷಯವನ್ನು ವಿವಿಧ ವೇದಿಕೆಗಳಲ್ಲಿ ಚರ್ಚಿಸಲಾಗುವುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ನಡೆಯಲಿಲ್ಲ. ಚಾಂಪಿಯನ್ಸ್ ಟ್ರೋಫಿ ಆತಿಥ್ಯ ವಹಿಸಲು ಐಸಿಸಿ ಪಾಕಿಸ್ತಾನದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ ಮತ್ತು ಅದನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಅನ್ನು ಅಂತಿಮಗೊಳಿಸಲಾಗಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಸಮಿತಿ (ಸಿಇಸಿ) ದೃಢಪಡಿಸಿದೆ.

VISTARANEWS.COM


on

Champions Trophy 2025
Koo

ಬೆಂಗಳೂರು: 2025 ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗಾಗಿ (Champions Trophy 2025 ) ಅಂತಾರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) 65 ಮಿಲಿಯನ್ ಡಾಲರ್ (544 ಕೋಟಿ ರೂಪಾಯಿ) ಬಜೆಟ್ ಅನ್ನು ಬಿಡುಗಡೆಗೆ ಅನುಮೋದನೆ ನೀಡಿದೆ. ಇದರಲ್ಲಿ ಹೈಬ್ರಿಡ್​ ಮಾದರಿಯಲ್ಲಿ ನಡೆಯಲಿರುವ ಭಾರತದ ಪಂದ್ಯಗಳೂ ಸೇರಿಕೊಂಡಿವೆ. ಯಾಕೆಂದರೆ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸದೇ ಇರಲು ಕೇಂದ್ರ ಸರ್ಕಾರ ನಿರ್ಧರಿಸಿರುವ ಕಾರಣ ಹೆಚ್ಚುವರಿ ಮೊತ್ತ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ನೀಡಲಾಗಿದೆ. ಪ್ರತ್ಯೇಕ ಸ್ಥಳವನ್ನು ವ್ಯವಸ್ಥೆ ಮಾಡಿದರೆ ಬಜೆಟ್ ವೆಚ್ಚ ಹೆಚ್ಚಾಗುತ್ತದೆ. ಭದ್ರತಾ ಕಾಳಜಿಗಳಿಂದಾಗಿ ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸಲು ನಿರಾಕರಿಸಿದೆ. ಆತಿಥೇಯ ರಾಷ್ಟ್ರ ತನ್ನ ಮನಸ್ಸನ್ನು ಬದಲಾಯಿಸಿಲ್ಲ. ಹೀಗಾಗಿ ಕುತೂಹಲ ಮೂಡಿದೆ.

ಕೊಲಂಬೊದಲ್ಲಿ ನಡೆದ ಕಳೆದ ಎಜಿಎಂ ಸಭೆಯಲ್ಲಿ, ಈ ವಿಷಯವನ್ನು ವಿವಿಧ ವೇದಿಕೆಗಳಲ್ಲಿ ಚರ್ಚಿಸಲಾಗುವುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ನಡೆಯಲಿಲ್ಲ. ಚಾಂಪಿಯನ್ಸ್ ಟ್ರೋಫಿ ಆತಿಥ್ಯ ವಹಿಸಲು ಐಸಿಸಿ ಪಾಕಿಸ್ತಾನದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ ಮತ್ತು ಅದನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಅನ್ನು ಅಂತಿಮಗೊಳಿಸಲಾಗಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಸಮಿತಿ (ಸಿಇಸಿ) ದೃಢಪಡಿಸಿದೆ. ರಾವಲ್ಪಿಂಡಿ, ಕರಾಚಿ ಮತ್ತು ಲಾಹೋರ್​ನಲ್ಲಿನ ತನ್ನ ಸೌಲಭ್ಯಗಳನ್ನು ಅಭಿವೃದ್ದಿ ಮಾಡಲು ಪಾಕಿಸ್ತಾನಕ್ಕೆ ದೊಡ್ಡ ಮೊತ್ತವನ್ನು ನಿಗದಿಪಡಿಸಲಾಗಿದೆ. ಅದೇ ಬಜೆಟ್ ಅನ್ನು ಪಾಕಿಸ್ತಾನದ ಹೊರಗೆ ಆಯೋಜಿಸುವ ಪಂದ್ಯಗಳಿಗೂ ಬಳಸಲಾಗುವುದು ಎಂದು ಉಲ್ಲೇಖಿಸಲಾಗಿದೆ.

ಪಿಸಿಬಿ ಆತಿಥೇಯ ಒಪ್ಪಂದಕ್ಕೆ ಸಹಿ ಹಾಕಿದೆ ಮತ್ತು ಈವೆಂಟ್ ಬಜೆಟ್ ಅನ್ನು ರಚಿಸಲು ಮ್ಯಾನೇಜ್ಮೆಂಟ್​ನೊಂದಿಗೆ ಕೆಲಸ ಮಾಡಿದೆ. ಅದನ್ನು ಅನುಮೋದನೆಗೆ ಸಲ್ಲಿಸಲಾಗಿದೆ. ಪಾಕಿಸ್ತಾನದ ಹೊರಗೆ ಕೆಲವು ಪಂದ್ಯಗಳನ್ನು ಆಡುವುದು ಅಗತ್ಯವಿದ್ದರೆ ಈವೆಂಟ್ ಅನ್ನು ಆಯೋಜಿಸುವ ವೆಚ್ಚದ ಹೆಚ್ಚಳದ ಅಂದಾಜನ್ನು ಮ್ಯಾನೇಜ್ಮೆಂಟ್ ಅನುಮೋದಿಸಿದೆ” ಎಂದು ಸಿಇಸಿಯ ತಿಳಿಸಿದೆ.

ಮಾರ್ಚ್ 2024 ರಲ್ಲಿ ಪಾಕಿಸ್ತಾನದಲ್ಲಿ ಯೋಜನಾ ಸಭೆ ಮತ್ತು ಉದ್ದೇಶಿತ ಪಂದ್ಯದ ಸ್ಥಳಗಳ ಪರಿಶೀಲನೆ ನಡೆಸಲಾಗಿದೆ. ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸಲು ಎಲ್ಲಾ ಮೂರು ಸ್ಥಳಗಳಲ್ಲಿ ಗಮನಾರ್ಹ ಪ್ರಮಾಣದ ನವೀಕರಣ ನಡೆಯುತ್ತಿವೆ” ಎಂದು ಅದು ಹೇಳಿದೆ.

ಇದನ್ನೂ ಓದಿ: IND vs SL ODI : ಶ್ರೀಲಂಕಾ ವಿರುದ್ಧ ಭಾನುವಾರ ಎರಡನೇ ಪಂದ್ಯ; ಮತ್ತೊಂದು ಥ್ರಿಲ್ಲರ್ ನಿರೀಕ್ಷೆ

ಆಟಗಾರರಿಗೆ ಮೂಲಸೌಕರ್ಯ ಮತ್ತು ಇತರ ಅಗತ್ಯ ವಸ್ತುಗಳ ಅಭಿವೃದ್ಧಿಗೆ 35 ಮಿಲಿಯನ್ ಡಾಲರ್, ಭಾಗವಹಿಸುವಿಕೆ ಮತ್ತು ಬಹುಮಾನದ ಹಣಕ್ಕಾಗಿ 20 ಮಿಲಿಯನ್ ಡಾಲರ್ ಮತ್ತು ಉತ್ಪಾದನೆಗಾಗಿ ಉಳಿದ 10 ಮಿಲಿಯನ್ ಡಾಲರ್ ನಿಗದಿಪಡಿಸಲಾಗಿದೆ. ಕುತೂಹಲಕಾರಿ ಸಂಗತಿಯೆಂದರೆ, ಐಸಿಸಿ ಪಂದ್ಯಾವಳಿಯ ಕರಡು ವೇಳಾಪಟ್ಟಿ ಸಹ ವಿನ್ಯಾಸಗೊಳಿಸಿದೆ. ಪಾಕಿಸ್ತಾನ ತನ್ನ ಮೊದಲ ಪಂದ್ಯವನ್ನು ನ್ಯೂಜಿಲೆಂಡ್ ವಿರುದ್ಧ ಫೆಬ್ರವರಿ 20 ರಂದು ಆಡಲಿದ್ದು, ಭಾರತ ತನ್ನ ಮೊದಲ ಪಂದ್ಯವನ್ನು ಫೆಬ್ರವರಿ 20 ರಂದು ಬಾಂಗ್ಲಾದೇಶ ವಿರುದ್ಧ ಆಡಲಿದೆ. ಮಾರ್ಚ್ 9ರಂದು ಫೈನಲ್ ಪಂದ್ಯ ನಡೆಯಲಿದೆ.

Continue Reading

ಪ್ರಮುಖ ಸುದ್ದಿ

IND vs SL ODI : ಶ್ರೀಲಂಕಾ ವಿರುದ್ಧ ಭಾನುವಾರ ಎರಡನೇ ಪಂದ್ಯ; ಮತ್ತೊಂದು ಥ್ರಿಲ್ಲರ್ ನಿರೀಕ್ಷೆ

IND vs SL ODI : ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ನಿಧಾನಗತಿಯ ಮೇಲ್ಮೈಯಲ್ಲಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಪಥುಮ್ ನಿಸ್ಸಾಂಕಾ 75 ಎಸೆತಗಳಲ್ಲಿ 56 ರನ್ ಗಳಿಸಿದ್ದರು. ಇತರ ಬ್ಯಾಟರ್​ಗಳು ಕ್ಲಿಷ್ಟಕರ ಮೇಲ್ಮೈಗೆ ಒಗ್ಗಿಕೊಳ್ಳಲು ವಿಫಲರಾದರು. ಭಾರತೀಯ ಸ್ಪಿನ್ನರ್​ಗಳು ಮಧ್ಯಮ ಕ್ರಮಾಂಕದಲ್ಲಿ ಆತಿಥೇಯರ ಮೇಲೆ ಮೇಲುಗೈ ಸಾಧಿಸಿದರು. 5 ವಿಕೆಟ್ ನಷ್ಟಕ್ಕೆ 101 ರನ್ ಗಳಿಸಿದ್ದ ಶ್ರೀಲಂಕಾ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 230 ರನ್ ಗಳಿಸಿತು. ದುನಿತ್ ವೆಲ್ಲಾಲಗೆ, ವನಿಂದು ಹಸರಂಗ ಮತ್ತು ಅಕಿಲಾ ಧನಂಜಯ ಅವರ ಬೆಂಬಲ ಪಡೆದ ಲಂಕಾ ಸ್ಪರ್ಧಾತ್ಮಕ ಮೊತ್ತ ಪೇರಿಸಿತು.

VISTARANEWS.COM


on

IND vs SL ODI
Koo

ಕೊಲಂಬೊ: ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಆಗಸ್ಟ್ 4 ರಂದು ಶ್ರೀಲಂಕಾ ಮತ್ತು ಭಾರತ ನಡುವಿನ (IND vs SL ODI) ಎರಡನೇ ಏಕದಿನ ಪಂದ್ಯ ನಡೆಯಲಿದೆ. ಮೊದಲ ಏಕದಿನ ಪಂದ್ಯವು ರೋಚಕ ಮುಖಾಮುಖಿಯಾಗಿ ಪರಿಣಮಿಸಿತ್ತು. ಅಂತಿಮವಾಗಿ ಪಂದ್ಯ ಟೈನಲ್ಲಿ ಮುಕ್ತಾಯಗೊಂಡಿತು. ಭಾನುವಾರ ಇದೇ ರೀತಿಯ ಥ್ರಿಲ್ಲರ್ ಅನ್ನು ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ.

ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ನಿಧಾನಗತಿಯ ಮೇಲ್ಮೈಯಲ್ಲಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಪಥುಮ್ ನಿಸ್ಸಾಂಕಾ 75 ಎಸೆತಗಳಲ್ಲಿ 56 ರನ್ ಗಳಿಸಿದ್ದರು. ಇತರ ಬ್ಯಾಟರ್​ಗಳು ಕ್ಲಿಷ್ಟಕರ ಮೇಲ್ಮೈಗೆ ಒಗ್ಗಿಕೊಳ್ಳಲು ವಿಫಲರಾದರು. ಭಾರತೀಯ ಸ್ಪಿನ್ನರ್​ಗಳು ಮಧ್ಯಮ ಕ್ರಮಾಂಕದಲ್ಲಿ ಆತಿಥೇಯರ ಮೇಲೆ ಮೇಲುಗೈ ಸಾಧಿಸಿದರು. 5 ವಿಕೆಟ್ ನಷ್ಟಕ್ಕೆ 101 ರನ್ ಗಳಿಸಿದ್ದ ಶ್ರೀಲಂಕಾ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 230 ರನ್ ಗಳಿಸಿತು. ದುನಿತ್ ವೆಲ್ಲಾಲಗೆ, ವನಿಂದು ಹಸರಂಗ ಮತ್ತು ಅಕಿಲಾ ಧನಂಜಯ ಅವರ ಬೆಂಬಲ ಪಡೆದ ಲಂಕಾ ಸ್ಪರ್ಧಾತ್ಮಕ ಮೊತ್ತ ಪೇರಿಸಿತು.

ಪ್ರತಿಯಾಗಿ ಬ್ಯಾಟ್ ಮಾಡಿದ ಭಾಋತ ಪರ ನಾಯಕ ರೋಹಿತ್ ಶರ್ಮಾ 47 ಎಸೆತಗಳಲ್ಲಿ 58 ರನ್ ಗಳಿಸಿ ಭಾರತಕ್ಕೆ ಉತ್ತಮ ಆರಂಭ ನೀಡಿದರು. 35 ಎಸೆತಗಳಲ್ಲಿ 16 ರನ್ ಗಳಿಸಿದ್ದ ಶುಬ್ಮನ್ ಗಿಲ್ 13ನೇ ಓವರ್​ನಲ್ಲಿ ಔಟಾದರು. ಈ ವೇಳೆ ಭಾರತ 75 ರನ್ ಗಳಿಸಿತ್ತು. ಬಳಿಕ ಭಾರತದ ಮೂರು ವಿಕೆಟ್ ಗಳು ತ್ವರಿತವಾಗಿ ಬಿದ್ದವು. ಶ್ರೇಯಸ್ ಅಯ್ಯರ್ ಮತ್ತು ವಿರಾಟ್ ಕೊಹ್ಲಿ 45 ಎಸೆತಗಳಲ್ಲಿ 43 ರನ್​ಗಳ ಜೊತೆಯಾಟ ನೀಡಿದರು. ಆದಾಗ್ಯೂ, ಶ್ರೀಲಂಕಾ ಮತ್ತೆ ಚೇತರಿಸಿಕೊಂಡಿತು.

ಅಕ್ಷರ್ ಪಟೇಲ್ ಮತ್ತು ಕೆಎಲ್ ರಾಹುಲ್ ಎಚ್ಚರಿಕೆಯಿಂದ ಆಡಿ 92 ಎಸೆತಗಳಲ್ಲಿ 57 ರನ್​ ಸೇರಿಸಿ ಭಾರತವನ್ನು ಮುನ್ನಡೆಸಿದರು. ಆದಾಗ್ಯೂ, ಪಂದ್ಯ ಟೈನಲ್ಲಿ ಕೊನೆಗೊಂಡಿತು. ಶ್ರೀಲಂಕಾ ತಂಡದ ನಾಯಕ ಚರಿತ್ ಅಸಲಂಕಾ ಸತತ ಎಸೆತಗಳಲ್ಲಿ ಶಿವಂ ದುಬೆ ಮತ್ತು ಅರ್ಶ್​ದೀಪ್ ಅವರನ್ನು ಔಟ್ ಮಾಡಿದರು.

ಲಂಕಾಗೆ ಬಲ

ಈ ಪಂದ್ಯವು ಶ್ರೀಲಂಕಾದ ನೈತಿಕ ಸ್ಥೈರ್ಯ ಹೆಚ್ಚಿಸುತ್ತದೆ ಎಂದು ಕ್ರಿಕೆಟ್​ ತಜ್ಞರು ಹೇಳಿದ್ದಾರೆ. ಭಾರತವು ಗೆಲುವಿನ ಹಾದಿಗೆ ಮರಳಲು ತಮ್ಮ ಪ್ರಾಬಲ್ಯ ಬಯಸಲಿದೆ. ಆಟದ ವಿಧಾನವನ್ನು ಉತ್ತಮವಾಗಿ ಯೋಜಿಸಲು ಬಯಸುತ್ತಿದ್ದಾರೆ. ಮೊದಲ ಪಂದ್ಯದಲ್ಲಿ ಭಾರತದ ಮೂವರು ಬ್ಯಾಟರ್​ಗಳು ಸ್ವೀಪ್ ಶಾಟ್​ಗಳಿಗೆ ಬಲಿಯಾದರು. ಟರ್ನಿಂಗ್ ಟ್ರ್ಯಾಕ್​ಗಳಲ್ಲಿ ಬಳಸಲು ಇದು ಸುಲಭವಾದ ತಂತ್ರವಾಗಿದ್ದರೂ ಭಾರತೀಯ ಬ್ಯಾಟರ್​ಗಳು ಈ ಬಗ್ಗೆ ಎಚ್ಚರಿಕೆ ವಹಿಸಲಿದ್ದಾರೆ ಶ್ರೀಲಂಕಾದ ಶಕ್ತಿ ಅವರ ಸ್ಪಿನ್-ಬೌಲಿಂಗ್/ ಅನುಕೂಲಕರ ಪರಿಸ್ಥಿತಿಗಳಲ್ಲಿ ಭಾರತೀಯ ಬ್ಯಾಟರ್​ಗಳ ಮೇಲೆ ಸಾಧ್ಯವಾದಷ್ಟು ಒತ್ತಡ ಹೇರಲು ಬಯಸುತ್ತಾರೆ.

ಮೊದಲ ಏಕದಿನ ಪಂದ್ಯವನ್ನು ಸ್ವಲ್ಪ ಸಮಯದವರೆಗೆ ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿದ್ದರಿಂದ ಭಾರತಕ್ಕೆ ಭಯವೇನೂ ಇಲ್ಲ. ಅವರ ಸಂಯೋಜನೆಯು ಪರಿಸ್ಥಿತಿಗಳಿಗೆ ಸಾಕಷ್ಟು ಸ್ಥಿರವಾಗಿದೆ ಎಂದು ತೋರುತ್ತದೆ. ಭಾರತೀಯ ಬ್ಯಾಟರ್​ಗಳು ಲಂಕಾ ಬೌಲರ್​ಗಳನ್ನು ಒತ್ತಡದಲ್ಲಿ ಸಿಲುಕಿಸಬಹುದು.

ಶ್ರೀಲಂಕಾದ ಮುಂಚೂಣಿ ವೇಗಿಗಳಾದ ದುಷ್ಮಂತ ಚಮೀರಾ, ಬಿನುರಾ ಫರ್ನಾಂಡೊ, ಮಥೀಶಾ ಪತಿರಾನಾ, ನುವಾನ್ ತುಷಾರಾ ಮತ್ತು ದಿಲ್ಶಾನ್ ಮಧುಶಂಕಾ ಗಾಯಗೊಂಡಿದ್ದಾರೆ. ಬಲಿಷ್ಠ ಭಾರತೀಯ ಬ್ಯಾಟಿಂಗ್ ಲೈನ್ಅಪ್ ವಿರುದ್ಧ ಹೆಜ್ಜೆ ಇಡುವ ಜವಾಬ್ದಾರಿ ಅಸಿತಾ ಫರ್ನಾಂಡೊ ಮತ್ತು ಮೊಹಮ್ಮದ್ ಶಿರಾಜ್ ಅವರ ಮೇಲಿದೆ. ಮೊದಲ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಅವರು ಶ್ರೇಯಸ್ ಅಯ್ಯರ್ ಅವರ ವಿಕೆಟ್ ಪಡೆದಿದ್ದರು. ಸ್ಪಿನ್ ಸ್ನೇಹಿ ಪರಿಸ್ಥಿತಿಗಳನ್ನು ಪರಿಗಣಿಸಿ, ಶಿರಾಜ್ ಬದಲಿಗೆ ಮಹೀಶ್ ದೀಕ್ಷಾ ಅವರನ್ನು ಕರೆತರಲು ಶ್ರೀಲಂಕಾ ಪ್ರಚೋದಿಸಬಹುದು.

ಆರ್ ಪ್ರೇಮದಾಸ ಕ್ರೀಡಾಂಗಣದ ಪಿಚ್ ವರದಿ

ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಇದುವರೆಗೆ 150 ಏಕದಿನ ಪಂದ್ಯಗಳು ನಡೆದಿವೆ. ಈ ಸ್ಥಳದಲ್ಲಿ ಮೊದಲು ಬ್ಯಾಟಿಂಗ್ ಮಾಡುವುದು ಹೆಚ್ಚು ಅನುಕೂಲಕರ. ಮೊದಲು ಬ್ಯಾಟಿಂಗ್ ಮಾಡುವ ತಂಡಗಳು 80 ಪಂದ್ಯಗಳನ್ನು ಗೆದ್ದಿದ್ದರೆ, ಚೇಸಿಂಗ್ ತಂಡಗಳು ಕೇವಲ 59 ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ. ಮೊದಲ ಪಂದ್ಯದಲ್ಲಿ ಸ್ಪಿನ್ನರ್​ಗಳು ಪ್ರಭಾವ ಬೀರಿದ್ದರು. ಎರಡನೇ ಏಕದಿನ ಪಂದ್ಯದಲ್ಲಿ ಹೆಚ್ಚಿನದನ್ನು ನಿರೀಕ್ಷಿಸಲಾಗಿದೆ. ಪಂದ್ಯ ಮುಂದುವರಿದಂತೆ ಬ್ಯಾಟಿಂಗ್ ಕಠಿಣವಾಗುತ್ತದೆ. ಟಾಸ್ ಗೆದ್ದ ನಾಯಕ ಮೊದಲು ಬ್ಯಾಟಿಂಗ್ ಮಾಡಲು ಒಲವು ತೋರುತ್ತಾನೆ.

ಇದನ್ನೂ ಓದಿ: National Cricket Academy : ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿದೆ 45 ಪಿಚ್​ಗಳಿರುವ ಬೃಹತ್​​ ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿ

ಸಂಭಾವ್ಯ ಪ್ಲೇಯಿಂಗ್ ಇಲೆವೆನ್


ಶ್ರೀಲಂಕಾ: ಪಥುಮ್ ನಿಸ್ಸಾಂಕಾ, ಅವಿಷ್ಕಾ ಫರ್ನಾಂಡೊ, ಕುಸಾಲ್ ಮೆಂಡಿಸ್ (ವಿಕೆ), ಸದೀರಾ ಸಮರವಿಕ್ರಮ, ಚರಿತ್ ಅಸಲಂಕಾ (ಸಿ), ಜನಿತ್ ಲಿಯಾನಗೆ, ದುನಿತ್ ವೆಲ್ಲಾಲಗೆ, ವನಿಂದು ಹಸರಂಗ, ಅಕಿಲಾ ಧನಂಜಯ, ಮೊಹಮ್ಮದ್ ಶಿರಾಜ್ / ಮಹೇಶ್ ತೀಕ್ಷಾನಾ, ಅಸಿತಾ ಫರ್ನಾಂಡೊ.

ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ವಾಷಿಂಗ್ಟನ್ ಸುಂದರ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಶಿವಂ ದುಬೆ, ಕುಲದೀಪ್ ಯಾದವ್, ಅರ್ಷ್ದೀಪ್ ಸಿಂಗ್, ಮೊಹಮ್ಮದ್ ಸಿರಾಜ್.

ಪಂದ್ಯದ ವಿವರಗಳು

  • ಭಾರತ-ಶ್ರೀಲಂಕಾ 2ನೇ ಏಕದಿನ ಪಂದ್ಯ
  • ಸ್ಥಳ: ಆರ್ ಪ್ರೇಮದಾಸ ಕ್ರೀಡಾಂಗಣ, ಕೊಲಂಬೊ
  • ದಿನಾಂಕ ಮತ್ತು ಸಮಯ ಭಾನುವಾರ, ಆಗಸ್ಟ್ 4, ಮಧ್ಯಾಹ್ನ 2:30

ಮುಖಾಮುಖಿ ದಾಖಲೆಗಳು

  • ಪಂದ್ಯಗಳು- 169
  • ಶ್ರೀಲಂಕಾ ಗೆಲುವು- 57
  • ಭಾರತ ಗೆಲುವು- 99
  • ಸಮಬಲ 02
  • ಫಲಿತಾಂಶ ಇಲ್ಲ 11
  • ಮೊದಲ ಪಂದ್ಯ: ಜೂನ್ 16, 1979
  • ಇತ್ತೀಚಿನ ಪಂದ್ಯ- ಆಗಸ್ಟ್ 2, 2024
Continue Reading
Advertisement
Uttar Pradesh
ದೇಶ2 hours ago

ಪತ್ನಿ ಇದ್ದರೂ ಮಹಿಳಾ ಇನ್ಸ್‌ಪೆಕ್ಟರ್‌ ಜತೆ ವ್ಯಕ್ತಿ ಸರಸ; ರೆಡ್‌ ಹ್ಯಾಂಡ್‌ ಆಗಿ ಹಿಡಿದ ಪತ್ನಿ ಮಾಡಿದ್ದೇನು? Video ಇದೆ

Wasim Jaffer
ಕ್ರೀಡೆ3 hours ago

Wasim Jaffer : ಪಂಜಾಬ್ ತಂಡದ ಕೋಚ್​ ಆಗಿ ಮಾಜಿ ಬ್ಯಾಟರ್​ ವಾಸಿಮ್​ ಜಾಫರ್ ನೇಮಕ

Ayodhya
ದೇಶ3 hours ago

Ayodhya: ಅಯೋಧ್ಯೆಗೆ ವಿಮಾನ ತಲುಪುತ್ತಲೇ ಭೂಮಿಗೆ ನಮಸ್ಕರಿಸಿದ ಗಗನಸಖಿ; ಭುಗಿಲೆದ್ದಿತು ವಿವಾದ!

Wayanad Landslide
ಕರ್ನಾಟಕ4 hours ago

Wayanad Landslide: ವಯನಾಡು ಸಂತ್ರಸ್ತರಿಗೆ ಮಿಡಿದ ಕರುನಾಡು; ಸರ್ಕಾರದ ಜತೆಗೆ ಜನರಿಂದಲೂ ನೆರವು!

Kavya Maran
ಕ್ರಿಕೆಟ್5 hours ago

Kavya Maran : ಐಪಿಎಲ್​ ಆಟಗಾರರ ಹರಾಜಿನ ನಿಯಮಗಳ ಬಗ್ಗೆ ಕಾವ್ಯಾ ಮಾರನ್ ಇಟ್ಟಿರುವ ಬೇಡಿಕೆಗಳು ಇವು…

Champions Trophy 2025
ಪ್ರಮುಖ ಸುದ್ದಿ5 hours ago

Champions Trophy 2025 : ಚಾಂಪಿಯನ್ಸ್​ ಟ್ರೋಫಿಗಾಗಿ 544 ಕೋಟಿ ರೂಪಾಯಿ ಬಿಡುಗಡೆ ಮಾಡಿದ ಐಸಿಸಿ

Viral Video
ವೈರಲ್ ನ್ಯೂಸ್5 hours ago

Viral Video: ಪ್ರವಾಹದಲ್ಲಿ ಸಿಲುಕಿದ ನಾಯಿಗಳಿಗೆ ಡ್ರೋನ್‌ ಮೂಲಕ ಬಿರಿಯಾನಿ ರವಾನೆ; ಮಾನವೀಯತೆ ಅಂದ್ರೆ ಇದು!

Best Teacher Award
ಕರ್ನಾಟಕ5 hours ago

Best Teacher Award: ‘ರಾಜ್ಯ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಮಾಹಿತಿ

Union Minister Pralhad Joshi latest statement at Mysore Chalo Padayatra
ಕರ್ನಾಟಕ6 hours ago

BJP-JDS Padayatra: ವಾಲ್ಮೀಕಿ ನಿಗಮ, ಮುಡಾ ಹಗರಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಶೇರ್ ಹೋಲ್ಡರ್: ಪ್ರಲ್ಹಾದ್‌ ಜೋಶಿ ಆರೋಪ

Farmer dies after falling under power tiller wheel in Moralli village
ಉತ್ತರ ಕನ್ನಡ6 hours ago

Farmer Death: ಪವರ್ ಟಿಲ್ಲರ್ ಚಕ್ರಕ್ಕೆ ಸಿಲುಕಿ ರೈತ ದಾರುಣ ಸಾವು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ14 hours ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ6 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌