Kalki 2898 AD: 1,000 ಕೋಟಿ ರೂ. ಕಲೆಕ್ಷನ್‌ ಮಾಡಿದ `ಕಲ್ಕಿ 2898 ಎಡಿ': ಪ್ರಭಾಸ್ ಹೊಸ ದಾಖಲೆ! - Vistara News

ಟಾಲಿವುಡ್

Kalki 2898 AD: 1,000 ಕೋಟಿ ರೂ. ಕಲೆಕ್ಷನ್‌ ಮಾಡಿದ `ಕಲ್ಕಿ 2898 ಎಡಿ’: ಪ್ರಭಾಸ್ ಹೊಸ ದಾಖಲೆ!

Kalki 2898 AD: ಟ್ರೇಡ್ ವಿಶ್ಲೇಷಕ ರಮೇಶ್ ಬಾಲಾ ಅವರು ಎಕ್ಸ್‌ ಖಾತೆಯಲ್ಲಿ ಈ ಬಗ್ಗೆ ಹೇಳಿಕೊಂಡಿದ್ದಾರೆ.ಕಲ್ಕಿ 2898 ಎಡಿ ಬಾಕ್ಸ್ ಆಫೀಸ್‌ನಲ್ಲಿ 1,000 ಕೋಟಿಗಳನ್ನು ದಾಟಿದೆ” ಎಂದು ಬರೆದಿದ್ದಾರೆ. ಜುಲೈ 8 ರಂದು, ಚಿತ್ರ ವಿಶ್ವಾದ್ಯಂತ 900 ಕೋಟಿ ರೂ. ದಾಟಿದೆ ಎಂದು ಅಧಿಕೃತ ವೈಜಯಂತಿ ಮೂವೀಸ್ ಹ್ಯಾಂಡಲ್‌ನಲ್ಲಿ ತಂಡವು ಹಂಚಿಕೊಂಡಿತ್ತು.

VISTARANEWS.COM


on

Kalki 2898 AD worldwide box office collection day 1000 crore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಾಗ್ ಅಶ್ವಿನ್ ನಿರ್ದೇಶನ ಪ್ರಭಾಸ್‌ ಅಭಿನಯದ `ಕಲ್ಕಿ 2898 ಎಡಿ‘ (Kalki 2898 AD) ವಿಶ್ವಾದ್ಯಂತ 1000 ಕೋಟಿ ರೂ. ಗಳಿಕೆ ಕಂಡಿದೆ. ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಭ್‌ ಬಚ್ಚನ್ ಮತ್ತು ಕಮಲ್ ಹಾಸನ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರ ಬಿಡುಗಡೆಯಾದ 15 ದಿನಗಳಲ್ಲಿ ವಿಶ್ವಾದ್ಯಂತ 1000 ಬಾಕ್ಸ್ ಆಫೀಸ್‌ ಕಲೆಕ್ಷನ್‌ ಮಾಡಿ ಮುನ್ನುಗ್ಗಿದೆ.

ಚಿತ್ರ 1000 ಕೋಟಿ ರೂ. ಕಲೆಕ್ಷನ್‌ ಮಾಡಿದೆ ಎಂದು ಕಲ್ಕಿ 2898 AD ಚಿತ್ರತಂಡ ಹಂಚಿಕೊಂಡಿದೆ. ಟ್ರೇಡ್ ವಿಶ್ಲೇಷಕ ರಮೇಶ್ ಬಾಲಾ ಅವರು ಎಕ್ಸ್‌ ಖಾತೆಯಲ್ಲಿ ಈ ಬಗ್ಗೆ ಹೇಳಿಕೊಂಡಿದ್ದಾರೆ.ಕಲ್ಕಿ 2898 ಎಡಿ ಬಾಕ್ಸ್ ಆಫೀಸ್‌ನಲ್ಲಿ 1,000 ಕೋಟಿಗಳನ್ನು ದಾಟಿದೆ” ಎಂದು ಬರೆದಿದ್ದಾರೆ. ಜುಲೈ 8 ರಂದು, ಚಿತ್ರ ವಿಶ್ವಾದ್ಯಂತ 900 ಕೋಟಿ ರೂ. ದಾಟಿದೆ ಎಂದು ಅಧಿಕೃತ ವೈಜಯಂತಿ ಮೂವೀಸ್ ಹ್ಯಾಂಡಲ್‌ನಲ್ಲಿ ತಂಡವು ಹಂಚಿಕೊಂಡಿತ್ತು.

ಕಲ್ಕಿ 2898 ಎಡಿ ಜೂನ್ 27 ರಂದು ವಿಶ್ವಾದ್ಯಂತ ಬಿಡುಗಡೆಯಾಯಿತು. ಇದೀಗ ಶಂಕರ್ ಅವರ ಇಂಡಿಯನ್ 2 ಸಿನಿಮಾ ಇದೇ ವೇಳೆ ರಿಲೀಸ್‌ ಆಗಿದ್ದು , ಚಿತ್ರದ ಕಲೆಕ್ಷನ್‌ಗಳ ಮೇಲೆ ಪರಿಣಾಮ ಬೀರುತ್ತದೆಯೇ ಎಂದು ನೋಡಬೇಕಾಗಿದೆ. ಇಂಡಿಯನ್ 2 ಸಿನಿಮಾದಲ್ಲಿ ಕಮಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Kalki 2898 AD: ‘ಪಿಕೆ’, ʻಗದರ್‌ʼ ಸಿನಿಮಾಗಳ ದಾಖಲೆ ಮುರಿದ ʻಕಲ್ಕಿ 2898 ಎಡಿʼ!

ನಾಗ್ ಅಶ್ವಿನ್ ಅವರು ‘ಕಲ್ಕಿ 2898 ಎಡಿ’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. 2ಡಿ ಜೊತೆಗೆ 3ಡಿಯಲ್ಲೂ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. ಈ ಚಿತ್ರದ ಬಜೆಟ್ 600 ಕೋಟಿ ರೂಪಾಯಿ ಎನ್ನಲಾಗಿದೆ. ಈ ಕಾರಣದಿಂದಲೇ ಸಿನಿಮಾ ದೊಡ್ಡ ಮೊತ್ತದ ಗಳಿಕೆ ಮಾಡೋ ಅವಶ್ಯಕತೆ ಇತ್ತು. ಸದ್ಯ ಆಗಿರೋ ಗಳಿಕೆಯಿಂದ ನಿರ್ಮಾಪಕರಿಗೆ ಇನ್ನೂ ದೊಡ್ಡ ಲಾಭವೇನು ಆಗಿಲ್ಲ. ‘ಕಲ್ಕಿ 2898 ಎಡಿ’ ಚಿತ್ರ ತೆಲುಗು, ತಮಿಳು, ಮಲಯಾಳಂ, ಕನ್ನಡ, ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ರಿಲೀಸ್ ಆಗಿದೆ. ವೈಜಯಂತಿ ಮೂವಿಸ್ ಮೂಲಕ ಅಶ್ವಿನಿ ದತ್ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಸಲಾರ್’ ನಂತರ ಬಿಡುಗಡೆಯಾದ ಕಲ್ಕಿ ಸಿನಿಮಾ ಮೂಲಕ, ಪ್ರಭಾಸ್ ಚಿತ್ರೋದ್ಯಮದಲ್ಲಿ ಮತ್ತೊಂದು ಹೊಸ ಮೈಲಿಗಲ್ಲು ತಲುಪಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ದೊಡ್ಡ ಮಟ್ಟದ ಓಪನಿಂಗ್ ಪ್ರಭಾಸ್‌ ಸಿನಿಮಾಗಳಿಗೆ ಸಿಗುತ್ತಿವೆ. ಇದೀಗ ‘ಕಲ್ಕಿ 2898 AD’ ಸಿನಿಮಾ ಸಹ ಇದಕ್ಕೆ ಹೊರತಾಗಿಲ್ಲ, ಇದು ಭಾರತೀಯ ಚಿತ್ರರಂಗದಲ್ಲಿ ಅವರ ಮೂರನೇ ಅತಿದೊಡ್ಡ ಕಲೆಕ್ಷನ್‌ ಮಾಡಿದ ಸಿನಿಮಾವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Jr NTR -Janhvi Kapoor: ರೊಮ್ಯಾಂಟಿಕ್​ ಆಗಿ ಕಾಣಿಸಿಕೊಂಡ ಜ್ಯೂನಿಯರ್‌ ಎನ್‌ಟಿಆರ್- ಜಾಹ್ನವಿ; ಆ.5ಕ್ಕೆ ಚಿತ್ರತಂಡದಿಂದ ಗಿಫ್ಟ್‌!​

Jr NTR -Janhvi Kapoor: ಜ್ಯೂನಿಯರ್‌ ಎನ್‌ಟಿಆರ್‌, ಸೈಫ್ ಅಲಿ ಖಾನ್ ಮತ್ತು ಜಾನ್ವಿ ಕಪೂರ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ದೇವರ’ ಚಿತ್ರವನ್ನು ಕೊರಟಾಲ ಶಿವ ನಿರ್ದೇಶಿಸಿದ್ದಾರೆ. 2016ರಲ್ಲಿ ಇವರು ಜನತಾ ಗ್ಯಾರೇಜ್ ಎಂಬ ಸಿನಿಮಾವನ್ನು ನಿರ್ದೇಶಿಸಿದ್ದರು.

VISTARANEWS.COM


on

Jr NTR -Janhvi Kapoor Devara Song take centre stage
Koo

ಬೆಂಗಳೂರು: ಟಾಲಿವುಡ್‌ ನಟ ಜ್ಯೂನಿಯರ್‌ ಎನ್‌ಟಿಆರ್ (Jr NTR -Janhvi Kapoor) ಜತೆ ದೇವರ ಸಿನಿಮಾಗಾಗಿ ಜಾಹ್ನವಿ ಕಪೂರ್‌ ತೆರೆ ಹಂಚಿಕೊಂಡಿರುವುದು ಗೊತ್ತೇ ಇದೆ. ಇದೀಗ ‘ದೇವರ: ಪಾರ್ಟ್​ 1’ ಸಿನಿಮಾ (Devara: Part 1) ʼಎರಡನೇ ಹಾಡಿನಲ್ಲಿ ಜೂನಿಯರ್ ಎನ್​ಟಿಆರ್​ ಮತ್ತು ಜಾಹ್ನವಿ ಕಪೂರ್‌ ಅವರು ರೊಮ್ಯಾಂಟಿಕ್​ ಆಗಿ ಕಾಣಿಸಿಕೊಳ್ಳಲಿದ್ದಾರೆ. ಇದರ ಝಲಕ್​ ತೋರಿಸಲು ಹೊಸ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. 

ಹೊಸದಾಗಿ ಅನಾವರಣಗೊಂಡ ಪೋಸ್ಟರ್‌ನಲ್ಲಿ ಜೋಡಿ ರೊಮ್ಯಾಂಟಿಕ್‌ ಆಗಿ ಕಂಡಿದೆ. ಕಾಡಿನ ಹಿನ್ನೆಲೆ, ಬಿಳಿ ಧರಿಸಿನಲ್ಲಿ ಕ್ಯೂಟ್‌ ಆಗಿ ಕಂಡಿದೆ ಜೋಡಿ. ಜ್ಯೂನಿಯರ್‌ ಎನ್‌ಟಿಆರ್ ಅವರು ಜಾಹ್ನವಿಯನ್ನು ಹಿಡಿದುಕೊಂಡಿದ್ದಾರೆ. ಇದರಲ್ಲಿ ಅವರಿಬ್ಬರ ಜೋಡಿಯನ್ನು ನೋಡಿ ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟು ಆಗಿದೆ. ಇದು ಆ್ಯಕ್ಷನ್​ ಸಿನಿಮಾ ಆಗಿದ್ದರೂ ಕೂಡ ಜಾನ್ವಿ ಕಪೂರ್​ ಜೊತೆ ಜೂನಿಯರ್​ ಎನ್​ಟಿಆರ್​ ಅವರ ರೊಮ್ಯಾಂಟಿಕ್​ ಕೆಮಿಸ್ಟ್ರಿ ಹೇಗಿರಲಿದೆ ಎಂಬುದನ್ನು ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.ಅನಿರುದ್ಧ್ ರವಿಚಂದರ್​ ಅವರು ‘ದೇವರ: ಪಾರ್ಟ್​ 1’ ಸಿನಿಮಾಗೆ ಸಂಗೀತ ನೀಡಿದ್ದಾರೆ. ಇದು ಪ್ಯಾನ್​ ಇಂಡಿಯಾ ಸಿನಿಮಾ. ತೆಲುಗಿನ ಜೊತೆ ಕನ್ನಡ, ಹಿಂದಿ, ತಮಿಳು ಮುಂತಾದ ಭಾಷೆಯಲ್ಲಿ ಈ ಚಿತ್ರ ರಿಲೀಸ್​ ಆಗಲಿದೆ. ಆಗಸ್ಟ್​ 5ರಂದು ಈ ಸಿನಿಮಾದಿಂದ ಎರಡನೇ ಹಾಡು ರಿಲೀಸ್​ ಆಗಲಿದೆ.

ಜ್ಯೂನಿಯರ್‌ ಎನ್‌ಟಿಆರ್‌, ಸೈಫ್ ಅಲಿ ಖಾನ್ ಮತ್ತು ಜಾನ್ವಿ ಕಪೂರ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ದೇವರ’ ಚಿತ್ರವನ್ನು ಕೊರಟಾಲ ಶಿವ ನಿರ್ದೇಶಿಸಿದ್ದಾರೆ. 2016ರಲ್ಲಿ ಇವರು ಜನತಾ ಗ್ಯಾರೇಜ್ ಎಂಬ ಸಿನಿಮಾವನ್ನು ನಿರ್ದೇಶಿಸಿದ್ದರು. ಅದರಲ್ಲಿ ಕೂಡ ಜ್ಯೂನಿಯರ್ ಎನ್​ಟಿಆರ್ ನಾಯಕನಾಗಿದ್ದರು. ಅದಾದ ಮೇಲೆ ಕೊರಟಾಲ ಶಿವ ಅವರೊಟ್ಟಿಗೆ ಜ್ಯೂ.ಎನ್​ಟಿಆರ್ ಯಾವುದೇ ಸಿನಿಮಾವನ್ನೂ ಮಾಡಿರಲಿಲ್ಲ.

ಇದನ್ನೂ ಓದಿ: Kannada New Movie: ʻಟೆನೆಂಟ್’ ಸಿನಿಮಾದ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌; ಸೋನು ಗೌಡ ನಾಯಕಿ!

ವರ ಸಿನಿಮಾದಲ್ಲಿ ಜ್ಯೂನಿಯರ್ ಎನ್​ಟಿಆರ್​ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ವದಂತಿಯೂ ಇದೆ. ಅಪ್ಪ-ಮಗ ಎರಡೂ ಪಾತ್ರದಲ್ಲಿ ಇವರೇ ಅಭಿನಯ ಮಾಡಲಿದ್ದಾರಂತೆ. ಇದೊಂದು ಪಕ್ಕಾ ಆ್ಯಕ್ಷನ್​ ಚಿತ್ರದಂತೆ ಕಾಣಿಸುತ್ತಿದೆ. ಯುವಸುಧಾ ಆರ್ಟ್ಸ್ ಮತ್ತು ಜ್ಯೂನಿಯರ್‌ ಎನ್‌ಟಿಆರ್‌ ಆರ್ಟ್ಸ್ ಈ ಚಿತ್ರವನ್ನು ನಿರ್ಮಿಸಿದ್ದು, ನಂದಮೂರಿ ಕಲ್ಯಾಣ್ ರಾಮ್ ಅವರು ಪ್ರಸ್ತುತಪಡಿಸಿದ್ದಾರೆ.

ಈ ಚಿತ್ರದ OTT ಹಕ್ಕುಗಳನ್ನು ಸ್ಟ್ರೀಮಿಂಗ್ ಕಂಪನಿ ನೆಟ್ಫ್ಲಿಕ್ಸ್ ಭಾರಿ ಬೆಲೆಗೆ ಪಡೆದುಕೊಂಡಿದೆ. ಮಾಹಿತಿಯ ಪ್ರಕಾರ, ನೆಟ್ಫ್ಲಿಕ್ಸ್ 155 ಕೋಟಿ ರೂಪಾಯಿ ನೀಡಿ ಈ ಚಿತ್ರದ OTT ಹಕ್ಕುಗಳನ್ನು ಪಡೆದುಕೊಂಡಿದೆ ಎಂಬ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Continue Reading

ಟಾಲಿವುಡ್

Vijay Deverakonda: ವಿಜಯ್ ದೇವರಕೊಂಡ ಲುಕ್‌ಗೆ ರಶ್ಮಿಕಾ ಮಂದಣ್ಣ ಫಿದಾ; ರಗಡ್‌ ಲುಕ್‌ಗೆ ಬೆರಗಾದ್ರು ಫ್ಯಾನ್ಸ್!

Vijay Deverakonda: ಜುಲೈ 12 ರಂದು, ಚಿತ್ರದ ಪ್ರೊಡಕ್ಷನ್ ಹೌಸ್, ಸಿತಾರಾ ಎಂಟರ್ಟೈನ್ಮೆಂಟ್ಸ್, ಚಿತ್ರದ ಬಗ್ಗೆ ಅಪ್ಡೇಟ್ ಅನ್ನು ಹಂಚಿಕೊಂಡಿದೆ. ವಿಜಯ್ ದೇವರಕೊಂಡ ಅವರ ಈ ಫೋಟೋಗೆ ರಶ್ಮಿಕಾ ಮಂದಣ್ಣ, ರಾಶಿ ಖಾನ್ ಸೇರಿ ಅನೇಕರು ಫೈಯರ್ ಎಮೋಜಿ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಅವರ ಸಿನಿಮಾಗೆ ಆಲ್​ ದಿ ಬೆಸ್ಟ್ ಹೇಳಿದ್ದಾರೆ.

VISTARANEWS.COM


on

Vijay Deverakonda VD 12 looks fierce in first poster
Koo

ಬೆಂಗಳೂರು: ವಿಜಯ್ ದೇವರಕೊಂಡ (Vijay Deverakonda) ಅವರ ಮುಂಬರುವ ಚಿತ್ರ ‘ವಿಡಿ 12’ ರ (VD 12) ಬಹುನಿರೀಕ್ಷಿತ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌ ಆಗಿದೆ. ಆಗಸ್ಟ್ 2 ರಂದು ಬಿಡುಗಡೆಯಾದ ಪೋಸ್ಟರ್‌ನಲ್ಲಿ ನಟ ಸಖತ್‌ ರಗಡ್‌ ಆಗಿ ಕಾಣಿಸಿಕೊಂಡಿದ್ದಾರೆ. ಚಿತ್ರವು 2025ರ ಮಾರ್ಚ್ 28 ರಂದು ಬಿಡುಗಡೆಯಾಗಲಿದೆ.  ‘ವಿಡಿ 12’ ಚಿತ್ರದ ಮೂಲಕ ಮತ್ತೊಂದು ಬಿಗ್ ಬಜೆಟ್ ಸಿನಿಮಾ ಒಪ್ಪಿಕೊಂಡಿದ್ದಾರೆ. ಮೊದಲ ಲುಕ್​ನಲ್ಲಿ ಅವರ ಗೆಟಪ್ ಸಖತ್ ರಗಡ್ ಆಗಿದೆ.

ಕೂದಲನ್ನು ಕಟ್ ಮಾಡಿಸಿದ್ದಾರೆ. ‘ಅವನ ಡೆಸ್ಟಿನಿ ಅವನಿಗೆ ಕಾಯುತ್ತಿದೆ’ ಎಂದು ವಿಜಯ್ ದೇವರಕೊಂಡ ಬರೆದುಕೊಂಡಿದ್ದಾರೆ. ಇತ್ತೀಚೆಗಷ್ಟೇ ‘ವಿಡಿ 12’ ಚಿತ್ರದ ವಿಜಯ್ ಅವರ ಲುಕ್ ಸೋಷಿಯಲ್ ಮೀಡಿಯಾದಲ್ಲಿ ಲೀಕ್ ಆಗಿತ್ತು. ಕೆಲವು ದಿನಗಳ ಹಿಂದೆ, ವಿಜಯ್, ಗೌತಮ್ ಮತ್ತು ಚಿತ್ರದ ತಂಡವು ಚಿತ್ರೀಕರಣಕ್ಕಾಗಿ ಶ್ರೀಲಂಕಾಕ್ಕೆ ತೆರಳಿತ್ತು. ಶ್ರೀಲಂಕಾದ ಗಾಲೆ ಕೋಟೆಯಲ್ಲಿ ಕೆಲವು ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ.

ಜುಲೈ 12 ರಂದು, ಚಿತ್ರದ ಪ್ರೊಡಕ್ಷನ್ ಹೌಸ್, ಸಿತಾರಾ ಎಂಟರ್ಟೈನ್ಮೆಂಟ್ಸ್, ಚಿತ್ರದ ಬಗ್ಗೆ ಅಪ್ಡೇಟ್ ಅನ್ನು ಹಂಚಿಕೊಂಡಿದೆ. ವಿಜಯ್ ದೇವರಕೊಂಡ ಅವರ ಈ ಫೋಟೋಗೆ ರಶ್ಮಿಕಾ ಮಂದಣ್ಣ, ರಾಶಿ ಖಾನ್ ಸೇರಿ ಅನೇಕರು ಫೈಯರ್ ಎಮೋಜಿ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಅವರ ಸಿನಿಮಾಗೆ ಆಲ್​ ದಿ ಬೆಸ್ಟ್ ಹೇಳಿದ್ದಾರೆ. ಇತ್ತೀಚೆಗೆ ಈ ಚಿತ್ರದ ಪೋಸ್ಟರ್ ಲೀಕ್ ಆಗಿತ್ತು.) ʻಜೆರ್ಸಿʼ ಸಿನಿಮಾ ಖ್ಯಾತಿಯ ನಿರ್ದೇಶಕ ಗೌತಮ್ ತಿನ್ನನೂರಿ ನಿರ್ದೇಶನ ಸಿನಿಮಾವಿದು.

ಇದನ್ನೂ ಓದಿ: Vijay Deverakonda: ಸಿನಿಮಾಗಳ ಸತತ ಸೋಲಿನ ಬೆನ್ನಲ್ಲೆ ಹೊಸ ಸಿನಿಮಾ ಅನೌನ್ಸ್‌ ಮಾಡಿದ ವಿಜಯ್‌ ದೇವರಕೊಂಡ!

‘ವಿಡಿ 12’ ಅನ್ನು ಸಿತಾರಾ ಎಂಟರ್‌ಟೈನ್‌ಮೆಂಟ್ಸ್ ಮತ್ತು ಫಾರ್ಚೂನ್ ಫೋರ್ ಸಿನಿಮಾಸ್ ಜಂಟಿಯಾಗಿ ನಿರ್ಮಿಸಿದ್ದು, ಶ್ರೀಕರ ಸ್ಟುಡಿಯೋಸ್ ಪ್ರಸ್ತುತಪಡಿಸುತ್ತಿದೆ. ಪಾತ್ರವರ್ಗವನ್ನು ಇನ್ನೂ ಘೋಷಿಸಬೇಕಾಗಿದೆ. ಈ ಚಿತ್ರದಲ್ಲಿ ವಿಜಯ್ ಗೆ ಜೋಡಿಯಾಗಿ ಭಾಗ್ಯಶ್ರೀ ಬೊರಸೆ ನಟಿಸಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಸಂಯೋಜಕ ಅನಿರುದ್ಧ ರವಿಚಂದರ್ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ.

ಟಾಲಿವುಡ್ ನಟ ವಿಜಯ್ ದೇವರಕೊಂಡ (Vijay Devarakonda-Mrunal Thakur) ಸಿನಿಕರಿಯರ್‌ಗೆ ಬ್ರೇಕ್ ಕೊಟ್ಟ ಸಿನಿಮಾ ಗೀತ ಗೋವಿಂದಂ. ಪರಶುರಾಮ್ ನಿರ್ದೇಶನದಲ್ಲಿ ಮೂಡಿಬಂದಿದ್ದ ಈ ಚಿತ್ರ ಬಾಕ್ಸ್‌ ಆಫೀಸ್‌ನಲ್ಲಿ ಭಾರಿ ಸದ್ದು ಮಾಡಿತ್ತು. 100 ಕೋಟಿ ರೂ. ಕ್ಲಬ್ ಬಾಚಿದ್ದ ಗೀತ ಗೋವಿಂದಂ ಸಿನಿಮಾಗೆ ಸೌತ್ ಸಿನಿಜಗತ್ತು ಜೈಕಾರ ಹಾಕಿತ್ತು. 

Continue Reading

ಟಾಲಿವುಡ್

Pushpa 2: ಪುಷ್ಪ 2 ಕ್ಲೈ ಮ್ಯಾಕ್ಸ್‌ ದೃಶ್ಯ ಲೀಕ್‌; ಕೋಪ ಹೊರ ಹಾಕಿದ ಅರ್ಜುನ್‌ ಫ್ಯಾನ್ಸ್‌!

Pushpa 2: ಸುಕುಮಾರ್ ಅವರು ‘ಪುಷ್ಪ 2’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಡಾಲಿ ಧನಂಜಯ್ ಸೇರಿ ಅನೇಕರು ಸಿನಿಮಾದಲ್ಲಿ ಇದ್ದಾರೆ. ಈ ಚಿತ್ರದ ಶೂಟಿಂಗ್​ನಲ್ಲಿ ಫೋನ್ ಬಳಕೆ ನಿಷೇಧಿಸಲಾಗಿದೆ. ಆದಾಗ್ಯೂ ಕೆಲವರು ಮೊಬೈಲ್​ನ ಸೆಟ್​ ಒಳಗೆ ತೆಗೆದುಕೊಂಡು ಹೋಗಿದ್ದಾರೆ.

VISTARANEWS.COM


on

Pushpa 2 Allu Arjun climax leaked Fans urge producers to take action
Koo

ಬೆಂಗಳೂರು: ಸುಕುಮಾರ್ ಅವರ ಪುಷ್ಪ 2 ದಿ ರೂಲ್ (Pushpa 2 ) ಸಿನಿಮಾದಲ್ಲಿ , ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಮತ್ತು ಫಹದ್ ಫಾಸಿಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ , ಡಿಸೆಂಬರ್‌ನಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ಇದೀಗ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣದ ವೇಳೆ ತೆಗೆದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದೀಗ ಸಿನಿಪ್ರಿಯರು ಲೀಕ್‌ ಆಗಿರುವ ವಿಡಿಯೊ ಕಂಡು ಈ ಬಗ್ಗೆ ಆಕ್ಷನ್‌ ತೆಗೆದುಕೊಳ್ಳಿ ಎಂದು ಕಮೆಂಟ್‌ ಮಾಡಿದ್ದಾರೆ.

ಸೆಟ್‌ಗಳಲ್ಲಿ ತೆಗೆದ ವಿಡಿಯೊವನ್ನು ಹಂಚಿಕೊಂಡಿರುವ ವ್ಯಕ್ತಿ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ, “ಅಲ್ಲು ಅರ್ಜುನ್ ಕ್ಲೈಮ್ಯಾಕ್ಸ್ ದೃಶ್ಯ.” ಎಂದು ಬರೆದುಕೊಂಡಿದ್ದಾರೆ, ಇದೀಗ ಈ ವಿಡಿಯೊ ಭಾರಿ ವೈರಲ್‌ ಆಗುತ್ತಿದೆ.
ಕೆಲವರು ಮೈತ್ರಿ ಮೂವಿ ಮೇಕರ್ಸ್‌ಗಳಿಗೆ ಕ್ರಮ ತೆಗೆದುಕೊಳ್ಳುವಂತೆ ಕೇಳಿದ್ದಾರೆ. ಒಬ್ಬರು ʻನೀವು ವೀಡಿಯೊವನ್ನು ಏಕೆ ಲೀಕ್ ಮಾಡುತ್ತಿದ್ದೀರಿʼಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು ದಯವಿಟ್ಟು ವಿಡಿಯೊವನ್ನು ಡಿಲಿಟ್‌ ಮಅಡಿ ಎಂದು ಕಮೆಂಟ್‌ ಮಾಡಿದ್ದಾರೆ.

ಸುಕುಮಾರ್ ಅವರು ‘ಪುಷ್ಪ 2’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಡಾಲಿ ಧನಂಜಯ್ ಸೇರಿ ಅನೇಕರು ಸಿನಿಮಾದಲ್ಲಿ ಇದ್ದಾರೆ. ಈ ಚಿತ್ರದ ಶೂಟಿಂಗ್​ನಲ್ಲಿ ಫೋನ್ ಬಳಕೆ ನಿಷೇಧಿಸಲಾಗಿದೆ. ಆದಾಗ್ಯೂ ಕೆಲವರು ಮೊಬೈಲ್​ನ ಸೆಟ್​ ಒಳಗೆ ತೆಗೆದುಕೊಂಡು ಹೋಗಿದ್ದಾರೆ. ಕ್ಲೈಮ್ಯಾಕ್ಸ್ ಹಂತದ ಶೂಟಿಂಗ್​ನ ಕದ್ದು ಚಿತ್ರೀಕರಿಸಿದ್ದಾರೆ. ಸದ್ಯ ವಿಡಿಯೋ ಲೀಕ್ ಆಗಿದೆ.

ಇದನ್ನೂ ಓದಿ: Kannada New Movie: `ನೈಸ್ ರೋಡ್’ ಸಿನಿಮಾಗೆ ನೋಟಿಸ್ ; ಅಷ್ಟಕ್ಕೂ ಆಗಿದ್ದೇನು?

2021ರಲ್ಲಿ ತೆರೆಕಂಡು ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡುದ್ದ ಪ್ಯಾನ್‌ ಇಂಡಿಯಾ ಸಿನಿಮಾ ʼಪುಷ್ಪʼದ ಮುಂದುವರಿದ ಭಾಗ ಇದು. ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಮೊದಲ ಹಾಡು ಈಗಾಗಲೇ ರಿಲೀಸ್‌ ಆಗಿ ಧೂಳೆಬ್ಬಿಸುತ್ತಿದೆ. ಅದರಲ್ಲಿಯೂ ಯೂಟ್ಯೂಬ್‌ನಲ್ಲಿ ದಾಖಲೆಯ ವೀಕ್ಷಣೆ ಕಂಡಿದೆ. ʻಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದು, ಇದರಲ್ಲಿನ ಹುಕ್ ಸ್ಟೆಪ್ ವೈರಲ್‌ ಆಗಿದೆ. ಎರಡನೇ ಹಾಡು ಕೂಡ ಔಟ್‌ ಆಗಿದ್ದು, ಅಲ್ಲು ಅರ್ಜುನ್‌ ಜತೆ ರಶ್ಮಿಕಾ ಹೆಜ್ಜೆ ಹಾಕಿದ್ದಾರೆ. ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಣೆ ಪಡೆದುಕೊಂಡಿದೆ.

Continue Reading

ಟಾಲಿವುಡ್

Sri Reddy: ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ; ಅರೆಬೆತ್ತಲೆ ಪ್ರತಿಭಟನೆ ಮೂಲಕ ಸದ್ದು ಮಾಡಿದ ನಟಿ ಶ್ರೀರೆಡ್ಡಿ ಪೋಸ್ಟ್‌ ವೈರಲ್‌!

Sri Reddy: ತೆಲುಗು ಫಿಲಂ ಚೇಂಬರ್ ಮುಂದೆ ನಟಿ ಶ್ರೀರೆಡ್ಡಿ ಟಾಪ್ ಲೆಸ್ ಪ್ರತಿಭಟನೆ ನಡೆಸಿ ದೇಶಾದ್ಯಂತ ಸಂಚಲನ ಮೂಡಿಸಿತ್ತು. . ನಟಿ ಶ್ರೀರೆಡ್ಡಿ ತೆಲುಗು ಸಿನಿರಂಗದ ಮೇಲೆ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಅಲ್ಲದೆ, ಅವಕಾಶ ನೀಡುವುದಾಗಿ ಲೈಂಗಿಕವಾಗಿ ತಮ್ಮನ್ನು ಬಳಸಿಕೊಂಡಿದ್ದಾರೆ ಎಂದು ದೂರಿದ್ದರು.

VISTARANEWS.COM


on

sri reddy me too fame telugu actress post goes viral
Koo

ಬೆಂಗಳೂರು: ಕೆಲವು ವರ್ಷಗಳ ಹಿಂದೆ ಟಾಲಿವುಡ್‌ನಲ್ಲಿ ʻಮಿಟೂʼ ಹಾಗೂ ಕ್ಯಾಸ್ಟಿಂಗ್ ಕೌಚ್ ಅವ್ಯವಹಾರಗಳ ಬಗ್ಗೆ ಧ್ವನಿ ಎತ್ತಿದ ನಟಿಯರಲ್ಲಿ ಶ್ರೀ ರೆಡ್ಡಿ (Sri Reddy) ಕೂಡ ಒಬ್ಬರು. ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿರುವ ತೆಲುಗು ಚಲನಚಿತ್ರ ವಾಣಿಜ್ಯ ಮಂಡಳಿ ಕಚೇರಿಯ ಮುಂದೆ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದರು. ತೆಲುಗು ಫಿಲಂ ಚೇಂಬರ್ ಮುಂದೆ ನಟಿ ಶ್ರೀರೆಡ್ಡಿ ಟಾಪ್ ಲೆಸ್ ಪ್ರತಿಭಟನೆ ನಡೆಸಿ ದೇಶಾದ್ಯಂತ ಸಂಚಲನ ಮೂಡಿಸಿತ್ತು. ನಟಿ ಶ್ರೀರೆಡ್ಡಿ ತೆಲುಗು ಸಿನಿರಂಗದ ಮೇಲೆ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಅಲ್ಲದೆ, ಅವಕಾಶ ನೀಡುವುದಾಗಿ ಲೈಂಗಿಕವಾಗಿ ತಮ್ಮನ್ನು ಬಳಸಿಕೊಂಡಿದ್ದಾರೆ ಎಂದು ದೂರಿದ್ದರು. ಅಲ್ಲಿಂದ ನಟಿಯ ಹೆಸರು ಮುನ್ನಲೆಗೆ ಬಂದಿತ್ತು. ಇದೀಗ ನಟಿ ಶ್ರೀರೆಡ್ಡಿ ದೊಡ್ಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆತ್ಮಹತ್ಯೆಗೆ ಯೋಚಿಸುತ್ತಿದ್ದೇನೆ ಎಂದು ನಟಿ ಹೇಳಿಕೊಂಡಿದ್ದಾರೆ.

ನಟಿ ಶ್ರೀರೆಡ್ಡಿ ಟಾಲಿವುಡ್‌ನ ಹಲವು ಮಂದಿಯನ್ನು ಟಾರ್ಗೆಟ್ ಮಾಡಿದ್ದರು. ತೆಲುಗಿನ ಕೆಲವು ನಟಿಯರ ಮೇಲೂ ಗಂಭೀರ ಆರೋಪಗಳನ್ನು ಮಾಡಿದ್ದರು. ಅದರಲ್ಲಿ ಪವನ್‌ ಕಲ್ಯಾಣ್‌ ಅವರನ್ನು ನಟಿ ಬಿಟ್ಟಿಲ್ಲ. ಮಾತ್ರವಲ್ಲ ಪರಭಾಷೆ ನಟಿಯರಿಗೆ ಹಲವು ಅವಕಾಶಗಳನ್ನು ನೀಡುತ್ತಿದ್ದು, ತೆಲುಗು ನಟಿಯರಿಗೇ ಹೆಚ್ಚು ಅವಕಾಶ ಸಿಕ್ಕಿಲ್ಲ ಎಂದೂ ಟೀಕೆ ಕೂಡ ಮಾಡಿದ್ದರು. ಮೀಟೂ ಅಭಿಯಾನದ ವೇಲೆ ಹಲವು ರಾಜಕೀಯ, ಸಿನಿಮಾ ವ್ಯಕ್ತಿಗಳ ಬಗ್ಗೆ ಮಾಡಿದ ಪೋಸ್ಟ್‌ ಭಾರಿ ಸಂಚಲನ ಸೃಷ್ಟಿಸಿತ್ತು.

ಬಳಿಕ ಶ್ರೀರೆಡ್ಡಿ ಏನೇ ಹೇಳಿಕೆ ಕೊಟ್ಟರು ಜನರು ಆ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಈ ಕಾರಣಕ್ಕೆ ಶ್ರೀರೆಡ್ಡಿ ತನ್ನದೊಂದು ಯೂಟ್ಯೂಬ್ ಚಾನೆಲ್ ತೆರೆದಿದ್ದರು ಅದರಲ್ಲಿ ಬೇರೆ ಬೇರೆ ವಿಷಯಗಳ ಬಗ್ಗೆ ವಿಡಿಯೋ ಮಾಡುತ್ತಿದ್ದರು. ಅದರಲ್ಲೂ ವೈಸಿಪಿ ನಾಯಕ ವೈಎಸ್ ಜಗನ್ ದೊಡ್ಡ ಅಭಿಮಾನಿಯಾಗಿದ್ದ ಶ್ರೀ ರೆಡ್ಡಿ ಅವರನ್ನು ಬೆಂಬಲಿಸಿ ವಿಡಿಯೋ ಮಾಡುತ್ತಿದ್ದರು. ಸೋಶಿಯಲ್ ಮೀಡಿಯಾದಲ್ಲಿ ವೈಸಿಪಿ ಪಕ್ಷದ ಪರವಾಗಿ ಹೆಚ್ಚು ವಿಡಿಯೋಗಳನ್ನು ಮಾಡಿ ಸುದ್ದಿಯಲ್ಲಿ ಇದ್ದರು.ವೈಎಸ್‌ಆರ್ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತೆ ಎಂದು ಶ್ರೀರೆಡ್ಡಿ ನಂಬಿದ್ದರು. ಆದರೆ, ಪರಿಸ್ಥಿತಿ ಬದಲಾಗಿತ್ತು. ಜಗನ್ ಮೋಹನ್ ರೆಡ್ಡಿ ಚುನಾವಣೆಯಲ್ಲಿ ಸೋತಿದ್ದರು. ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾದರೆ, ಪವನ್ ಕಲ್ಯಾಣ್ ಉಪಮುಖ್ಯಮಂತ್ರಿಯಾಗಿದ್ದರು.ಇದೀಗ ನಟಿ ಈ ಬಗ್ಗೆ ಭಾರಿ ಟ್ರೋಲ್‌ ಆಗುತ್ತಿದ್ದಾರೆ.

ಹಳೆಯ ವಿಡಿಯೊಳನ್ನು ಇಟ್ಟುಕೊಂಡು ನಟಿಯನ್ನು ಟ್ರೋಲ್‌ ಮಾಡಲಾಗುತ್ತಿದೆ. ಶ್ರೀರೆಡ್ಡಿ ವಿರುದ್ಧ ಕ್ರಮ ಕೈಗೊಳ್ಳುವಂತೆ ತೆಲುಗುದೇಶಂ ಪಕ್ಷದ ಮುಖಂಡರು ಪೊಲೀಸರಿಗೆ ದೂರು ನೀಡಿದ್ದಾರೆ. ಇದರಿಂದಾಗಿ ಮನನೊಂದ ನಟಿ ಮಾನಸಿಕವಾಗಿ ನೊಂದಿದ್ದು, ಆತ್ಮಹತ್ಯೆಗೆ ಯೋಚಿಸುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಇನ್ನು ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ. ಈಗ ಹೇಳುತ್ತಿರುವ ಮಾತುಗಳು ಸಿಲ್ಲಿ ಎನಿಸಬಹುದು. ಆದರೆ, ನಾನು ಸಾಯಲು ಬಯಸುತ್ತೇನೆ ಎಂದು ಶ್ರೀರೆಡ್ಡಿ ಬರೆದುಕೊಂಡಿದ್ದಾರೆ.

ಶ್ರೀರೆಡ್ಡಿಗೆ ಚಲನಚಿತ್ರ ಕಲಾವಿದರ ಸಂಘ ನಿಷೇಧ ಹೇರಿತ್ತು. ಏಪ್ರಿಲ್ 2018 ರಲ್ಲಿ ಶ್ರೀ ರೆಡ್ಡಿ ಫಿಲಂ ಚೇಂಬರ್ ಮುಂದೆ ಬೆತ್ತಲೆಯಾಗಿ ಪ್ರದರ್ಶನ ನೀಡಿದ್ದರು. ಇದು ರಾಷ್ಟ್ರವ್ಯಾಪಿ ಸುದ್ದಿಯಾಯಿತು. ಶ್ರೀರೆಡ್ಡಿ ಲೈಂಗಿಕ ಕಿರುಕುಳ ಮತ್ತು ತೆಲುಗು ಹುಡುಗಿಯರಿಗೆ ಅವಕಾಶ ನೀಡದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಅರೆ ಬೆತ್ತಲೆ ಪ್ರತಿಭಟನೆ ನಡೆಸಿದ್ದರು.


Continue Reading
Advertisement
Uttar Pradesh
ದೇಶ30 mins ago

ಪತ್ನಿ ಇದ್ದರೂ ಮಹಿಳಾ ಇನ್ಸ್‌ಪೆಕ್ಟರ್‌ ಜತೆ ವ್ಯಕ್ತಿ ಸರಸ; ರೆಡ್‌ ಹ್ಯಾಂಡ್‌ ಆಗಿ ಹಿಡಿದ ಪತ್ನಿ ಮಾಡಿದ್ದೇನು? Video ಇದೆ

Wasim Jaffer
ಕ್ರೀಡೆ1 hour ago

Wasim Jaffer : ಪಂಜಾಬ್ ತಂಡದ ಕೋಚ್​ ಆಗಿ ಮಾಜಿ ಬ್ಯಾಟರ್​ ವಾಸಿಮ್​ ಜಾಫರ್ ನೇಮಕ

Ayodhya
ದೇಶ1 hour ago

Ayodhya: ಅಯೋಧ್ಯೆಗೆ ವಿಮಾನ ತಲುಪುತ್ತಲೇ ಭೂಮಿಗೆ ನಮಸ್ಕರಿಸಿದ ಗಗನಸಖಿ; ಭುಗಿಲೆದ್ದಿತು ವಿವಾದ!

Wayanad Landslide
ಕರ್ನಾಟಕ2 hours ago

Wayanad Landslide: ವಯನಾಡು ಸಂತ್ರಸ್ತರಿಗೆ ಮಿಡಿದ ಕರುನಾಡು; ಸರ್ಕಾರದ ಜತೆಗೆ ಜನರಿಂದಲೂ ನೆರವು!

Kavya Maran
ಕ್ರಿಕೆಟ್3 hours ago

Kavya Maran : ಐಪಿಎಲ್​ ಆಟಗಾರರ ಹರಾಜಿನ ನಿಯಮಗಳ ಬಗ್ಗೆ ಕಾವ್ಯಾ ಮಾರನ್ ಇಟ್ಟಿರುವ ಬೇಡಿಕೆಗಳು ಇವು…

Champions Trophy 2025
ಪ್ರಮುಖ ಸುದ್ದಿ3 hours ago

Champions Trophy 2025 : ಚಾಂಪಿಯನ್ಸ್​ ಟ್ರೋಫಿಗಾಗಿ 544 ಕೋಟಿ ರೂಪಾಯಿ ಬಿಡುಗಡೆ ಮಾಡಿದ ಐಸಿಸಿ

Viral Video
ವೈರಲ್ ನ್ಯೂಸ್3 hours ago

Viral Video: ಪ್ರವಾಹದಲ್ಲಿ ಸಿಲುಕಿದ ನಾಯಿಗಳಿಗೆ ಡ್ರೋನ್‌ ಮೂಲಕ ಬಿರಿಯಾನಿ ರವಾನೆ; ಮಾನವೀಯತೆ ಅಂದ್ರೆ ಇದು!

Best Teacher Award
ಕರ್ನಾಟಕ3 hours ago

Best Teacher Award: ‘ರಾಜ್ಯ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಮಾಹಿತಿ

Union Minister Pralhad Joshi latest statement at Mysore Chalo Padayatra
ಕರ್ನಾಟಕ4 hours ago

BJP-JDS Padayatra: ವಾಲ್ಮೀಕಿ ನಿಗಮ, ಮುಡಾ ಹಗರಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಶೇರ್ ಹೋಲ್ಡರ್: ಪ್ರಲ್ಹಾದ್‌ ಜೋಶಿ ಆರೋಪ

Farmer dies after falling under power tiller wheel in Moralli village
ಉತ್ತರ ಕನ್ನಡ4 hours ago

Farmer Death: ಪವರ್ ಟಿಲ್ಲರ್ ಚಕ್ರಕ್ಕೆ ಸಿಲುಕಿ ರೈತ ದಾರುಣ ಸಾವು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ12 hours ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌