Fraud Case: ಯಾದಗಿರಿಯಲ್ಲೊಂದು ʼಆಡುಜೀವಿತಂʼ ವ್ಯಥೆ; ಕೆಲಸದ ಆಮಿಷ ನೀಡಿ ದುಬೈಗೆ ಕರೆದೊಯ್ದು ಕುರಿ ಕಾಯಲು ಹಚ್ಚಿದರು! - Vistara News

ಕ್ರೈಂ

Fraud Case: ಯಾದಗಿರಿಯಲ್ಲೊಂದು ʼಆಡುಜೀವಿತಂʼ ವ್ಯಥೆ; ಕೆಲಸದ ಆಮಿಷ ನೀಡಿ ದುಬೈಗೆ ಕರೆದೊಯ್ದು ಕುರಿ ಕಾಯಲು ಹಚ್ಚಿದರು!

Fraud case: ಏಜೆಂಟ್ ಲಾಲಸಾಬ ಎಂಬಾತ ಇವರನ್ನು ಬಹಳ ಸಂಬಳ ಕೊಡಿಸುತ್ತೇನೆ ಎಂದು ನಂಬಿಸಿ ಕೆಲಸಕ್ಕಾಗಿ ದುಬೈಗೆ ಕರೆದುಕೊಂಡು ಹೋಗಿದ್ದ. ದುಬೈನ ಕಪೀಲ್ ಎಂಬವರ ಬಳಿ ಕೆಲಸಕ್ಕಾಗಿ ಬಿಟ್ಟಿದ್ದಾನೆ. ಕಪೀಲ್‌, ದ್ಯಾಮರಾಯನಿಂದ ಕುರಿ ಮೇಯಿಸಿ, ಒಂಟೆ ಕಾಯಿಸಿದ್ದಾನೆ. ಇಬ್ಬರೂ ದ್ಯಾಮರಾಯನಿಗೆ ದುಡ್ಡು ನೀಡಿಲ್ಲ.

VISTARANEWS.COM


on

fraud Case yadgiri
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಾದಗಿರಿ: ಹೊರದೇಶದಲ್ಲಿ ಹೆಚ್ಚಿನ ಹಣ ಸಿಗುತ್ತೆ ಅಂತ ಗಲ್ಫ್‌ ದೇಶಗಳಿಗೆ (Gulf Nations) ಕೆಲಸಕ್ಕೆ ಹೋಗಬಯಸುವವರು ಈ ಸ್ಟೋರಿ ಓದಬೇಕು. ಇದು ಇತ್ತೀಚೆಗೆ ಬಂದ ʼಆಡುಜೀವಿತಂʼ ಸಿನಿಮಾ (Adujeevitam Movie) ಕತೆಯಂತೆಯೇ ಇದೆ. ಒಳ್ಳೆಯ ಉದ್ಯೋಗ (Job) ಕೊಡಿಸುತ್ತೇವೆ ಎಂದು ನಂಬಿಸಿ ದುಬೈಗೆ ಕರೆದೊಯ್ದ ಏಜೆಂಟರಿಂದಾಗಿ ಯಾದಗಿರಿಯ (Yadgiri news) ವ್ಯಕ್ತಿಯೊಬ್ಬರು ಮೋಸ (Fraud Case) ಹೋಗಿದ್ದು, ಇದೀಗ ಜೀತದಾಳಿನಂತೆ ದುಬೈಯಲ್ಲಿ (Dubai) ಕುರಿ, ಒಂಟೆ ಕಾಯುವ ಕೆಲಸ ಮಾಡುತ್ತಿದ್ದಾರೆ. ತಮ್ಮನ್ನು ಈ ಸ್ಥಿತಿಯಿಂದ ಪಾರು ಮಾಡಿ ಎಂದು ಸಂಬಂಧಿಸಿದವರಿಗೆ ಅಂಗಲಾಚಿದ್ದಾರೆ.

ಏಜೆಂಟರ ಬಣ್ಣ ಬಣ್ಣದ ಮಾತುಗಳಿಗೆ ಮೋಸ ಹೋಗಿ ಈಗ ಕಣ್ಣೀರು ಹಾಕುತ್ತಿರುವ ವ್ಯಕ್ತಿ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ರಾಜಾಪುರ ಗ್ರಾಮದ ರಾಜಾಪುರ ಗ್ರಾಮದ ದ್ಯಾಮರಾಯ ಎಂಬವರು. ಒಳ್ಳೆ ಕೆಲಸ ಕೊಡಿಸ್ತೀವಿ ಎಂದು ವೀಸಾ ಮಾಡಿಸಿ ದುಬೈಗೆ ಕಳಿಸಿರುವ ಕಿರಾತಕರು ಅಲ್ಲಿ ಕೊಡಿಸಿದ್ದು ಕುರಿ ಕಾಯುವ, ಒಂಟೆ ಮೇಯಿಸುವ ಕೆಲಸ. ಜೊತೆಗೆ, ಇವರ ಪ್ರಯಾಣ ದಾಖಲೆಗಳನ್ನೂ ಏಜೆಂಟರು ಕಿತ್ತಿಟ್ಟುಕೊಂಡಿದ್ದಾರೆ.

ಏಜೆಂಟ್ ಲಾಲಸಾಬ ಎಂಬಾತ ಇವರನ್ನು ಬಹಳ ಸಂಬಳ ಕೊಡಿಸುತ್ತೇನೆ ಎಂದು ನಂಬಿಸಿ ಕೆಲಸಕ್ಕಾಗಿ ದುಬೈಗೆ ಕರೆದುಕೊಂಡು ಹೋಗಿದ್ದ. ದುಬೈನ ಕಪೀಲ್ ಎಂಬವರ ಬಳಿ ಕೆಲಸಕ್ಕಾಗಿ ಬಿಟ್ಟಿದ್ದಾನೆ. ಕಪೀಲ್‌, ದ್ಯಾಮರಾಯನಿಂದ ಕುರಿ ಮೇಯಿಸಿ, ಒಂಟೆ ಕಾಯಿಸಿದ್ದಾನೆ. ಇಬ್ಬರೂ ದ್ಯಾಮರಾಯನಿಗೆ ದುಡ್ಡು ನೀಡಿಲ್ಲ. ದ್ಯಾಮರಾಯನ ಪಾಸ್‌ಪೋರ್ಟ್‌ ವೀಸಾ ಇತ್ಯಾದಿಗಳನ್ನು ಲಾಲಸಾಬ ಕಿತ್ತಿಟ್ಟುಕೊಂಡಿದ್ದು, ಇದೀಗ ಭಾರತಕ್ಕೆ ಮರಳುತ್ತೇನೆ ಎಂದರೆ ಅವುಗಳನ್ನು ಕೊಡದೆ ಸತಾಯಿಸುತ್ತಿದ್ದಾನೆ.

ಅನಾರೋಗ್ಯದಿಂದ ಬಳಲುತ್ತಿದ್ದೇನೆ ಭಾರತಕ್ಕೆ ತೆರಳ್ತೀನಿ ಅಂದರೂ ವೀಸಾ, ಪಾಸ್‌ಪೋರ್ಟ್ ಕೊಡುತ್ತಿಲ್ಲ ಎಂದು ದ್ಯಾಮರಾಯ ಅಲವತ್ತುಕೊಂಡಿದ್ದಾರೆ. ಸದ್ಯ ದ್ಯಾಮರಾಯ ದುಬೈನ ತಮಾಮ ನಗರದಲ್ಲಿದ್ದಾರೆ. ಕಳೆದ 3 ತಿಂಗಳಿನಿಂದ ದುಬೈನಲ್ಲಿ ದುಡಿಸಿಕೊಂಡು ದುಡ್ಡು ನೀಡದೇ ನಡುನೀರಿನಲ್ಲಿ ಏಜೆಂಟ್ ಲಾಲಸಾಬ ಕೈಬಿಟ್ಟಿದ್ದಾನೆ. ನನ್ನ ಹೆಂಡತಿ-ಮಕ್ಕಳು ಊರಲ್ಲಿದ್ದಾರೆ. ನನಗೆ ಊಟ ಸಹ ದೊರೆಯುತ್ತಿಲ್ಲ ಎಂದು ದ್ಯಾಮರಾಯ ಅತ್ತಿದ್ದಾರೆ.

ದುಬೈನಲ್ಲಿ ಬಹಳ ತೊಂದರೆಯಲ್ಲಿದ್ದೇನೆ. ದಯವಿಟ್ಟು ನನ್ನನ್ನು ಭಾರತಕ್ಕೆ ಕರೆಯಿಸಿಕೊಳ್ಳಿ. 2-3 ಬಾರಿ ಇಂಡಿಯನ್ ಎಂಬೆಸ್ಸಿ ಬಳಿ ಹೋದರೂ ಅಧಿಕಾರಿಗಳು ಕೇರ್ ಮಾಡುತ್ತಿಲ್ಲ. ಭಾರತ ಸರ್ಕಾರ ಸಹಾಯ ಮಾಡಿ ನನ್ನನ್ನು ಕರೆಸಿಕೊಳ್ಳಬೇಕು. ಇಲ್ಲದಿದ್ದರೆ ನಾನು ಏನಾದರೂ ಮಾಡಿಕೊಂಡು ಸಾಯಬೇಕಾಗುತ್ತದೆ ಎಂದು ದ್ಯಾಮರಾಯ ಅಂಗಲಾಚಿದ್ದಾರೆ.

ಕಾಡಾನೆ ದಾಳಿಗೆ ಫಾರೆಸ್ಟ್‌ ವಾಚರ್‌ ಬಲಿ

ಆನೇಕಲ್: ಕಾಡಾನೆ ದಾಳಿಗೆ (Elephant Attack) ಫಾರೆಸ್ಟ್ ವಾಚರ್ (forest Watcher) ಒಬ್ಬರು ಬಲಿಯಾದ ದುರ್ಘಟನೆ ಬನ್ನೇರುಘಟ್ಟ (Bannerghatta) ಸಮೀಪದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ನಡೆದಿದೆ. ಚಿಕ್ಕಮಾದಯ್ಯ (46) ಸಾವನ್ನಪ್ಪಿದ ಫಾರೆಸ್ಟ್ ವಾಚರ್. ಇದರಿಂದ ರೊಚ್ಚಿಗೆದ್ದ ಕುಟುಂಬಿಕರು ಹಾಗೂ ಗ್ರಾಮಸ್ಥರು ಪರಿಹಾರ ದೊರೆಯದೆ ಹೆಣ ತೆಗೆಯುವುದಿಲ್ಲ ಎಂದು ಪ್ರತಿಭಟಿಸಿದರು.

ಹಕ್ಕಿಪಿಕ್ಕಿ ಕಾಲೋನಿಯ ದೊಡ್ಡಬಂಡೆ ಬಳಿ ಘಟನೆ ನಡೆದಿದೆ. ಕಳೆದ ಇಪ್ಪತ್ತು ವರ್ಷಗಳಿಂದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಫಾರೆಸ್ಟ್ ವಾಚರ್ ಆಗಿ ಕೆಲಸ ಮಾಡುತ್ತಿದ್ದ ಚಿಕ್ಕಮಾದಯ್ಯ ಅವರ ಮೇಲೆ ರಾತ್ರಿ 12.30ರ ಸುಮಾರಿಗೆ ಕಾಡಾನೆ ದಾಳಿ ಮಾಡಿದೆ.

ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸಾಕಾನೆಗಳನ್ನು ನಿತ್ಯ ಕಾಡಿಗೆ ಬಿಡಲಾಗುತ್ತದೆ. ನಿನ್ನೆ ಸಂಜೆ ಸಾಕಾನೆಗಳನ್ನು ಕಾಡಿಗೆ ಬೀಡಲಾಗಿತ್ತು. ಸಾಕಾನೆಗಳ ಗುಂಪಿನ ಜೊತೆಗೆ ಕಾಡಾನೆ ಸೇರಿಕೊಂಡಿತ್ತು. ನೈಟ್ ಬೀಟ್ ರೌಂಡ್ಸ್ ಮಾಡುತ್ತಿದ್ದ ಚಿಕ್ಕ ಮಾದಯ್ಯ ಮತ್ತು ಇನ್ನೊಬ್ಬ ಸಿಬ್ಬಂದಿ ಮೇಲೆ ಕಾಡಾನೆ ಏಕಾಏಕಿ ಅಟ್ಯಾಕ್ ಮಾಡಿದೆ. ಚಿಕ್ಕಮಾದಯ್ಯ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಇನ್ನೊಬ್ಬ ಸಿಬ್ಬಂದಿ ಪಾರಾಗಿದ್ದಾರೆ.

ಚಿಕ್ಕ ಮಾದಯ್ಯ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಬನ್ನೇರುಘಟ್ಟ ಅರಣ್ಯಾಧಿಕಾರಿಗಳು, ಪೊಲೀಸರು ಭೇಟಿ ನೀಡಿದ್ದಾರೆ. ಗ್ರಾಮಸ್ಥರು ಅರಣ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪದೇ ಪದೆ ಕಾಡಾನೆ ಹಾವಳಿಗೆ ಬೆಳೆಹಾನಿ ಜೊತೆಗೆ ಪ್ರಾಣಹಾನಿಯಾಗುತ್ತಿದೆ. ಕಡಿವಾಣ ಹಾಕಲು ಅರಣ್ಯಾಧಿಕಾರಿಗಳು ಮುಂದಾಗಿಲ್ಲ. ಫಾರೆಸ್ಟ್ ಸಿಬ್ಬಂದಿ ಕುಟುಂಬಕ್ಕೆ ಸೂಕ್ತ ಪರಿಹಾರ ಕೊಡಬೇಕು. ಪರಿಹಾರ ಕೊಡುವವರೆಗೆ ಮೃತದೇಹ ತೆಗೆಯುವುದಿಲ್ಲ ಎಂದು ಗ್ರಾಮಸ್ಥರು ಪ್ರತಿಭಟಿಸಿದರು.

ಇದನ್ನೂ ಓದಿ: Elephant attack :ಕಾರಿನ ಮೇಲೆ ಕಾಡಾನೆ ದಾಳಿ; ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Farmer Death: ಪವರ್ ಟಿಲ್ಲರ್ ಚಕ್ರಕ್ಕೆ ಸಿಲುಕಿ ರೈತ ದಾರುಣ ಸಾವು

Farmer Death: ರೈತನೊಬ್ಬ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಪವರ್ ಟಿಲ್ಲರ್ ಚಕ್ರಕ್ಕೆ ಸಿಲುಕಿ ಗಾಯಗೊಂಡು ಸಾವನ್ನಪ್ಪಿದ ಘಟನೆ ಅಂಕೋಲಾ ತಾಲೂಕಿನ ಮೊರಳ್ಳಿ ಮಾಣಿಗುಡ್ಡ ಬಳಿ ನಡೆದಿದೆ. ಮೊಗಟಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೊರಳ್ಳಿ ಮಾಣಿಗುಡ್ಡ ನಿವಾಸಿ ನಾಗರಾಜ ತಿಮ್ಮಪ್ಪ ಗೌಡ (37) ಮೃತಪಟ್ಟ ರೈತ ಎಂದು ತಿಳಿದುಬಂದಿದೆ.

VISTARANEWS.COM


on

Farmer dies after falling under power tiller wheel in Moralli village
Koo

ಅಂಕೋಲಾ: ರೈತನೊಬ್ಬ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಪವರ್ ಟಿಲ್ಲರ್ ಚಕ್ರಕ್ಕೆ ಸಿಲುಕಿ ಗಾಯಗೊಂಡು ಸಾವನ್ನಪ್ಪಿದ ಘಟನೆ (Farmer Death) ತಾಲೂಕಿನ ಮೊರಳ್ಳಿ ಮಾಣಿಗುಡ್ಡ ಬಳಿ ನಡೆದಿದೆ. ಮೊಗಟಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೊರಳ್ಳಿ ಮಾಣಿಗುಡ್ಡ ನಿವಾಸಿ ನಾಗರಾಜ ತಿಮ್ಮಪ್ಪ ಗೌಡ (37) ಮೃತ ದುರ್ದೈವಿಯಾಗಿದ್ದಾನೆ.

ಇದನ್ನೂ ಓದಿ: Accident: ಬಾಲಕ ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಡಿಕ್ಕಿ; ಮಹಿಳೆ ಬಲಿ; ಭೀಕರ ದೃಶ್ಯ ವೈರಲ್‌

ರೈತ ನಾಗರಾಜ ಶುಕ್ರವಾರ ಬೆಳಗ್ಗೆ ಮೊರಳ್ಳಿಯಲ್ಲಿರುವ ಸುರೇಶ ನಾಯಕ ಎಂಬುವವರ ಗದ್ದೆಯಲ್ಲಿ ಉಳುಮೆ ಮಾಡಲು ತೆರಳಿದ್ದ. ಈ ವೇಳೆ ವಿಪರೀತ ಮಳೆ ಬರುತ್ತಿದ್ದ ಹಿನ್ನಲೆ ವಾಪಸ್ಸಾಗಿದ್ದು, ಮದ್ಯಾಹ್ನದ ನಂತರ ಮಳೆ ಕಡಿಮೆಯಾದ ಬಳಿಕ ಮತ್ತೆ ಗದ್ದೆಗೆ ತೆರಳಿದ್ದ. ಪವರ್ ಟಿಲ್ಲರ್ ಮೂಲಕ ಉಳುಮೆ ಮಾಡುತ್ತಿದ್ದ ವೇಳೆ ಚಕ್ರಕ್ಕೆ ಕಾಲು ಸಿಲುಕಿದ್ದು, ಗಂಭೀರ ಸ್ವರೂಪದ ಗಾಯಗಳಾಗಿವೆ. ಪರಿಣಾಮ ತೀವ್ರ ರಕ್ತಸ್ರಾವ ಉಂಟಾಗಿದ್ದು, ಗದ್ದೆಯಲ್ಲೇ ಕೊನೆಯುಸಿರೆಳೆದಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: Karnataka Weather : ಹೊನ್ನಾವರದ ಹಲವೆಡೆ ನೆರೆ ಪರಿಸ್ಥಿತಿ; ಭಾನುವಾರವೂ ಮಳೆ ಎಚ್ಚರಿಕೆ

ಸ್ಥಳಕ್ಕೆ ಅಂಕೋಲಾ ಠಾಣೆಯ ಪಿಎಸ್‌ಐ ಉದ್ದಪ್ಪ ಧರೆಪ್ಪನವರ್ ತೆರಳಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಕುರಿತು ಅಂಕೋಲಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಪ್ರಮುಖ ಸುದ್ದಿ

Namma Metro: ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ; ಹಸಿರು ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ

Namma Metro: ಬೆಂಗಳೂರು ನಗರದ ದೊಡ್ಡಕಲ್ಲಸಂದ್ರ ಬಳಿ ವ್ಯಕ್ತಿಯೊಬ್ಬ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

VISTARANEWS.COM


on

Namma Metro
Koo

ಬೆಂಗಳೂರು: ನಮ್ಮ ಮೆಟ್ರೋದಲ್ಲಿ (Namma Metro) ಪದೇಪದೆ ಅವಘಡಗಳು ಸಂಭವಿಸುತ್ತಿದ್ದರೂ ಅಧಿಕಾರಿಗಳು, ಸಿಬ್ಬಂದಿ ಎಚ್ಚರಗೊಂಡಂತೆ ಕಾಣುತ್ತಿಲ್ಲ. ಮೊನ್ನೆ ಮೆಟ್ರೋ ಟ್ರ್ಯಾಕ್‌ಗೆ 4 ವರ್ಷದ ಮಗು ಬಿದ್ದ ಬೆನ್ನಲ್ಲೇ ಇದೀಗ ವ್ಯಕ್ತಿಯೊಬ್ಬ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ದೊಡ್ಡಕಲ್ಲಸಂದ್ರ ಬಳಿ ಶನಿವಾರ ಸಂಜೆ ನಡೆದಿದೆ.

ಸಂಜೆ 5:45 ಸುಮಾರಿಗೆ ದೊಡ್ಡಕಲ್ಲಸಂದ್ರ ಬಳಿ ಘಟನೆ‌ ನಡೆದಿದೆ. ಇದರಿಂದ ಯಲಚೇನಹಳ್ಳಿ- ಸಿಲ್ಕ್ ಇನ್‌ಸ್ಟಿಟ್ಯೂಟ್ ನಡುವೆ ರೈಲು ಸಂಚಾರ ಸ್ಥಗಿತಗೊಂಡಿದೆ. ಸ್ಥಳಕ್ಕೆ ಕೊಣನಕುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತಪಟ್ಟ ವ್ಯಕ್ತಿ ಯಾರು?, ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಮಾಹಿತಿ ಕಲೆ ಹಾಕುತ್ತಿದ್ದಾರೆ.

Self Harming

ಆ. 1ರಂದು ರಾತ್ರಿ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್ 2ರಲ್ಲಿ ಆಟವಾಡುತ್ತಿದ್ದ 4 ವರ್ಷದ ಬಾಲಕ, ಆಕಸ್ಮಿಕವಾಗಿ ಹಳಿ ಮೇಲೆ ಬಿದ್ದಿದ್ದ ಘಟನೆ ನಡೆದಿತ್ತು. ತಕ್ಷಣ ಭದ್ರತಾ ಸಿಬ್ಬಂದಿ ತುರ್ತು ರೈಲು ನಿಲುಗಡೆ ವ್ಯವಸ್ಥೆಯನ್ನು ಬಳಸುವ ಮೂಲಕ ರೈಲು ಸಂಚಾರವನ್ನು ನಿಲ್ಲಿಸಿದ್ದರು. ಬಳಿಕ ಬಾಲಕನನ್ನು ರಕ್ಷಣೆ ಮಾಡಲಾಗಿತ್ತು.

ಉಕ್ಕಿ ಹರಿಯುವ ಕೃಷ್ಣಾ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು

Self Harming
Self Harming

ಚಿಕ್ಕೋಡಿ: ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ. ಅಂಕಲಿ – ನಸಲಾಪೂರ ಗ್ರಾಮದ ಮಧ್ಯದ ಸೇತುವೆ ಬಳಿ ಆತ್ಮಹತ್ಯೆ (Krishna River) ಮಾಡಿಕೊಂಡಿದ್ದಾರೆ. ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮದ ಬಾಬುರಾವ ಸಂಭಾಜಿ ಭಾಸ್ಕರ (40) ಆತ್ಮಹತ್ಯೆಗೆ ಶರಣಾದವರು.

ಇದನ್ನೂ ಓದಿ: Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಅಂಕಲಿ ಹಾಗೂ ನಸಲಾಪೂರ ಗ್ರಾಮಗಳ ಮಧ್ಯೆ ನಿರ್ಮಿಸಲಾಗಿರುವಂತಹ ಸೇತುವೆ ಮೇಲೆ ನಿಂತು ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈಗಾಗಲೇ ಅಂಕಲಿ ಪೋಲಿಸರು ಮೃತ ದೇಹವನ್ನು ಹೊರ ತೆಗೆದಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಂಕಲಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Continue Reading

ದೇಶ

ಕೋರ್ಟ್‌ನಲ್ಲೇ ಅಳಿಯನನ್ನು ಗುಂಡಿಕ್ಕಿ ಕೊಂದ ಮಾಜಿ ಪೊಲೀಸ್‌ ಅಧಿಕಾರಿ; ಕೃತ್ಯಕ್ಕೆ ಕಾರಣವೇನು?

ಮಾಲ್ವಿಂದರ್‌ ಸಿಂಗ್‌ ಹಾಗೂ ಹರ್‌ಪ್ರೀತ್‌ ಸಿಂಗ್‌ ಮಧ್ಯೆ ಕೌಟುಂಬಿಕ ಸಮಸ್ಯೆ, ಕಂದಕ ಉಂಟಾಗಿತ್ತು. ಹಾಗಾಗಿ, ಅವರು ನ್ಯಾಯಾಲಯ ಮೆಟ್ಟಿಲೇರಿದ್ದರು. ಹಾಗಾಗಿ, ಇಬ್ಬರೂ ಕೌಟುಂಬಿಕ ನ್ಯಾಯಾಲಯಕ್ಕೆ ತೆರಳಿದ್ದರು. ಇದೇ ವೇಳೆ ಇಬ್ಬರ ಮಧ್ಯೆ ಮಧ್ಯಸ್ಥಿಕೆ ಪ್ರಕ್ರಿಯೆ ನಡೆಯುತ್ತಿತ್ತು. ಕೆಲ ನಿಮಿಷಗಳ ಬಳಿಕ ಇಬ್ಬರೂ ಹೊರಬಂದಿದ್ದು, ಜನರಿಗೆ ಗುಂಡಿನ ಸದ್ದು ಕೇಳಿದೆ. ನಂತರ ಏನಾಯಿತು ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Chandigarh Court
Koo

ಚಂಡೀಗಢ: ಪಂಜಾಬ್‌ನ ಚಂಡೀಗಢ ಕೋರ್ಟ್‌ನಲ್ಲಿ (Chandigarh Court) ಮಾಜಿ ಪೊಲೀಸ್‌ ಅಧಿಕಾರಿಯೊಬ್ಬರು ನೀರಾವರಿ ಇಲಾಖೆಯಲ್ಲಿ ಐಆರ್‌ಎಸ್‌ ಅಧಿಕಾರಿಯಾಗಿರುವ (IRS Officer) ವ್ಯಕ್ತಿಯೊಬ್ಬರ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ. ಮೃತರನ್ನು ಹರ್‌ಪ್ರೀತ್‌ ಸಿಂಗ್‌ ಎಂದು ಗುರುತಿಸಿದರೆ, ಕೊಲೆ ಆರೋಪಿಯನ್ನು ಮಾಲ್ವಿಂದರ್‌ ಸಿಂಗ್‌ ಸಿಧು ಎಂಬುದಾಗಿ ಗುರುತಿಸಲಾಗಿದೆ. ಮಾಲ್ವಿಂದರ್‌ ಸಿಂಗ್‌ಗೆ ಹರ್‌ಪ್ರೀತ್‌ ಸಿಂಗ್‌ ಅಳಿಯ (ಮಗಳ ಗಂಡ) ಆಗಬೇಕು ಎಂಬ ಸಂಗತಿಯು ಬಳಿಕ ಬಯಲಾಗಿದೆ.

ಮಾಲ್ವಿಂದರ್‌ ಸಿಂಗ್‌ ಹಾಗೂ ಹರ್‌ಪ್ರೀತ್‌ ಸಿಂಗ್‌ ಮಧ್ಯೆ ಕೌಟುಂಬಿಕ ಸಮಸ್ಯೆ, ಕಂದಕ ಉಂಟಾಗಿತ್ತು. ಹಾಗಾಗಿ, ಅವರು ನ್ಯಾಯಾಲಯ ಮೆಟ್ಟಿಲೇರಿದ್ದರು. ಹಾಗಾಗಿ, ಇಬ್ಬರೂ ಕೌಟುಂಬಿಕ ನ್ಯಾಯಾಲಯಕ್ಕೆ ತೆರಳಿದ್ದರು. ಇದೇ ವೇಳೆ ಇಬ್ಬರ ಮಧ್ಯೆ ಮಧ್ಯಸ್ಥಿಕೆ ಪ್ರಕ್ರಿಯೆ ನಡೆಯುತ್ತಿತ್ತು. ಆಗ, ಮಾಲ್ವಿಂದರ್‌ ಸಿಂಗ್‌, ಶೌಚಾಲಯಕ್ಕೆ ಹೋಗಿಬರುತ್ತೇನೆ ಎಂದು ಕೋಣೆಯಿಂದ ಹೊರಬಂದರು. ಇದೇ ವೇಳೆ ಮಾವನಿಗೆ ದಾರಿ ತೋರಿಸುತ್ತೇನೆ ಎಂದು ಹರ್‌ಪ್ರೀತ್‌ ಸಿಂಗ್‌ ಕೂಡ ಹೊರಬಂದರು. ಇದಾದ ಬಳಿಕ ಐದು ಬಾರಿ ಗುಂಡು ಹಾರಿಸಿದ ಸದ್ದು ಕೇಳಿದ ಕಾರಣ ಇಡೀ ಕೋರ್ಟ್‌ನಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಯಿತು.

ಮಾಲ್ವಿಂದರ್‌ ಸಿಂಗ್‌ ಅಳಿಯನಿಗೇ ಐದು ಬಾರಿ ಗುಂಡು ಹಾರಿಸಿದ್ದಾರೆ. ಐದರ ಪೈಕಿ ಎರಡು ಗುಂಡುಗಳು ಹರ್‌ಪ್ರೀತ್‌ ಸಿಂಗ್‌ಗೆ ತಗುಲಿವೆ. ಹರ್‌ಪ್ರೀತ್‌ ಸಿಂಗ್‌ ಕೋರ್ಟ್‌ನಲ್ಲಿ ಕೆಳಗೆ ಬಿದ್ದಿರುವ ವಿಡಿಯೊ ಲಭ್ಯವಾಗಿದೆ. “ಅವರಿಗೆ ಗುಂಡು ತಗುಲಿದೆ. ಯಾರಾದರೂ ಆಸ್ಪತ್ರೆಗೆ ಕರೆದುಕೊಂಡು ನಡೆಯಿರಿ” ಎಂದು ವ್ಯಕ್ತಿಯೊಬ್ಬ ಹೇಳುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ. ಬಳಿಕ ಹರ್‌ಪ್ರೀತ್‌ ಸಿಂಗ್‌ ಅವರನ್ನು ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರೂ ಮಾರ್ಗ ಮಧ್ಯೆಯೇ ಅಧಿಕಾರಿ ಮೃತಪಟ್ಟರು ಎಂದು ತಿಳಿದುಬಂದಿದೆ.

ಅಳಿಯನಿಗೇ ಗುಂಡು ಹಾರಿಸಿದ ವ್ಯಕ್ತಿಯನ್ನು ಕೆಲ ವಕೀಲರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದಾದ ಬಳಿಕ ಪೊಲೀಸರು ಮಾಲ್ವಿಂದರ್‌ ಸಿಂಗ್‌ ಅವರನ್ನು ಬಂಧಿಸಿದರು. ಕೋರ್ಟ್‌ನಲ್ಲೇ ಹರ್‌ಪ್ರೀತ್‌ ಸಿಂಗ್‌ ರಕ್ತದ ಮಡುವಿನಲ್ಲಿ ಬಿದ್ದ ವಿಡಿಯೊ ಕೂಡ ಲಭ್ಯವಾಗಿದೆ. ಇಬ್ಬರ ನಡುವಿನ ಕೌಂಟುಂಬಿಕ ಸಮಸ್ಯೆ ಏನು? ಮಗಳಿಗೆ ಹರ್‌ಪ್ರೀತ್‌ ಸಿಂಗ್‌ ಕಿರುಕುಳ ಕೊಡುತ್ತಿದ್ದರಾ? ಸಂಧಾನಕ್ಕೆ ಬಂದವರ ಮಧ್ಯೆ ಗಲಾಟೆ ಏಕೆ ನಡೆಯಿತು ಎಂಬುದು ಸೇರಿ ಕೃತ್ಯಕ್ಕೆ ಕಾರಣ ಏನು ಎಂಬುದು ಇದುವರೆಗೆ ಗೊತ್ತಾಗಿಲ್ಲ. ಮಾಲ್ವಿಂದರ್‌ ಸಿಂಗ್‌ ಅವರು ಅಸಿಸ್ಟಂಟ್‌ ಐಜಿಪಿಯಾಗಿದ್ದರು ಹಾಗೂ ಅವರು ಅಮಾನತಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Murder Case: ಒಂಟಿ ಕೈ ರೌಡಿಯಿಂದ ಇನ್ನೊಬ್ಬ ರೌಡಿಯ ಕೊಚ್ಚಿ ಕೊಲೆ

Continue Reading

ದಾವಣಗೆರೆ

Wild Animals : ರಸ್ತೆಗೆ ಅಡ್ಡಲಾಗಿ ಮಲಗಿಕೊಂಡ ಚಿರತೆ; ಕಾಡಿನಿಂದ ಹಸು ಜತೆಗೆ ಓಡೋಡಿ ಬಂದ ಜಿಂಕೆ

Wild Animals : ಆಹಾರ ಅರಸಿ ಕಾಡು ಪ್ರಾಣಿಗಳು ನಾಡಿಗೆ ಬರುತ್ತಿವೆ. ಸದ್ಯ ದಾವಣಗೆರೆಯಲ್ಲಿ ಚಿರತೆಯೊಂದು ರಸ್ತೆಗೆ ಅಡ್ಡಲಾಗಿ ಕುಳಿತು ಆತಂಕ ಮೂಡಿಸಿದರೆ, ಶಿವಮೊಗ್ಗದಲ್ಲಿ ಜಿಂಕೆಯೊಂದು ಕಾಡಿನಿಂದ ಓಡಿ ಬಂದಿದೆ.

VISTARANEWS.COM


on

By

Wild Animals
Koo

ದಾವಣಗೆರೆಯ ಕೊಂಡಜ್ಜಿ ಸಮೀಪ ಚಿರತೆಯೊಂದು ಪ್ರತ್ಯಕ್ಷಗೊಂಡು ಆತಂಕವನ್ನು (Wild Animals) ಸೃಷ್ಟಿಸಿತ್ತು. ಶಂಕ್ರನಹಳ್ಳಿ ರಸ್ತೆ ಮಧ್ಯೆ ಕಾಣಿಸಿಕೊಂಡ ಚಿರತೆಯು ಬಳಿಕ ರಸ್ತೆಗೆ ಅಡ್ಡಲಾಗಿ ಮಲಗಿಕೊಂಡಿತ್ತು. ರಸ್ತೆಯಲ್ಲಿ ಓಡಾಡಲು ಜನರು, ವಾಹನ ಸವಾರರು ಪರದಾಡಬೇಕಾಯಿತು. ಕಾರಿನೊಳಗೆ ಕುಳಿತು ಚಿರತೆ ಓಡಾಟವನ್ನು ಯುವಕರು ಸೆರೆ ಹಿಡಿದಿದ್ದಾರೆ. ಗ್ರಾಮಸ್ಥರು ಚಿರತೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.

ಕಾಡಿನಿಂದ ಓಡಿ ಬಂದ ಜಿಂಕೆ

ಕಾಡಿನಿಂದ ಗೋವಿನ ಜತೆಗೆ ಜಿಂಕೆಯೊಂದು ನಾಡಿಗೆ ಬಂದಿದೆ. ಶಿವಮೊಗ್ಗದ ಹೊಸನಗರ ಪಟ್ಟಣಕ್ಕೆ ಮಳೆಗಾಲದ ವಿಶೇಷ ಅತಿಥಿಯಾಗಿ ಜಿಂಕೆ ಆಗಮಿಸಿದಂತೆ ಭಾಸವಾಗಿತ್ತು. ಹೊಸನಗರ ಪಟ್ಟಣದ ಶಿವಪ್ಪನಾಯಕ ರಸ್ತೆಯಲ್ಲಿ ಗೋವಿನ ಜತೆಗೆ ಓಡೋಡಿ ಬಂದಿದೆ. ಜಿಂಕೆ ಓಡಾಟವನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಇನ್ನೂ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹರಿಬಿಟ್ಟಿದ್ದನ್ನು ಗಮನಿಸಿದ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Assault Case : ಹೆಲ್ಮೆಟ್‌ ಇಲ್ಲದೇ ಚಲಿಸುತ್ತಿದ್ದ ಬೈಕ್ ಸವಾರನ ಕಾಲರ್ ಪಟ್ಟಿ ಹಿಡಿದು ಎಳೆದ ಟ್ರಾಫಿಕ್‌ ಪೊಲೀಸ್‌!

ಬಾಲಕನ ಮೇಲೆ ದಾಳಿ ಮಾಡಿದ ಬೀದಿ ನಾಯಿಗಳು

ಬೀದಿ ನಾಯಿಗಳು ದಾಳಿ ಮಾಡಿದ್ದು, ಬಾಲಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ವೆಂಕಟೇಶ್ವರಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಬಾಲಾಜಿ ನಾಯ್ಕ್ ನಾಯಿ ದಾಳಿಗೆ ಒಳಗಾದ ಬಾಲಕ.

ಶಾಲೆಗೆ ಹೋಗಲು ರೆಡಿಯಾಗಿ ಮನೆಯಿಂದ ಹೊರ ಬಂದಿದ್ದ ಬಾಲಾಜಿ ನಾಯ್ಕ್ ಮೇಲೆ ಏಕಾಏಕಿ ನಾಲ್ಕಕ್ಕೂ ಹೆಚ್ಚು ನಾಯಿಗಳು ದಾಳಿ ಮಾಡಿದೆ. ಬಾಲಾಜಿ ಕಿರುಚಾಡುವುದನ್ನು ನೋಡಿ ಜನರು ಓಡಿ ಬಂದಿದ್ದಾರೆ. ಬಳಿಕ ನಾಯಿಗಳನ್ನು ಓಡಿಸಿದ್ದಾರೆ. ಬಾಲಾಜಿ ನಾಯ್ಕ್ ಬೆನ್ನು ಹಾಗೂ ಕಾಲಿಗೆ ನಾಯಿಗಳು ಕಚ್ಚಿ ಗಂಭೀರ ಗಾಯಗೊಳಿಸಿದೆ.

ಗಾಯಾಳನ್ನು ಕೂಡಲೇ ತಾಲೂಕಾಸ್ಪತ್ರೆಗೆ ಚಿಕಿತ್ಸೆಗಾಗಿ ರವಾನೆ ಮಾಡಿದ್ದಾರೆ. ಬೀದಿನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ಕೂಡಲೇ ನಿಯಂತ್ರಣ ‌ಮಾಡುವಂತೆ ಗ್ರಾಮಪಂಚಾಯತಿ ಅಧಿಕಾರಿಗೆ ಈ ಹಿಂದೆಯೇ ಗ್ರಾಮಸ್ಥರು ಮನವಿ ಮಾಡಿದ್ದರು. ಗ್ರಾಮ‌ಪಂಚಾಯತಿ ಅಧಿಕಾರಿಗಳ‌ ನಿರ್ಲಕ್ಷ್ಯದಿಂದ ಈ ರೀತಿ ಘಟನೆ ನಡೆದಿದೆ ಎಂದು ಕಿಡಿಕಾರಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Wasim Jaffer
ಕ್ರೀಡೆ3 mins ago

Wasim Jaffer : ಪಂಜಾಬ್ ತಂಡದ ಕೋಚ್​ ಆಗಿ ಮಾಜಿ ಬ್ಯಾಟರ್​ ವಾಸಿಮ್​ ಜಾಫರ್ ನೇಮಕ

Ayodhya
ದೇಶ15 mins ago

Ayodhya: ಅಯೋಧ್ಯೆಗೆ ವಿಮಾನ ತಲುಪುತ್ತಲೇ ಭೂಮಿಗೆ ನಮಸ್ಕರಿಸಿದ ಗಗನಸಖಿ; ಭುಗಿಲೆದ್ದಿತು ವಿವಾದ!

Wayanad Landslide
ಕರ್ನಾಟಕ1 hour ago

Wayanad Landslide: ವಯನಾಡು ಸಂತ್ರಸ್ತರಿಗೆ ಮಿಡಿದ ಕರುನಾಡು; ಸರ್ಕಾರದ ಜತೆಗೆ ಜನರಿಂದಲೂ ನೆರವು!

Kavya Maran
ಕ್ರಿಕೆಟ್2 hours ago

Kavya Maran : ಐಪಿಎಲ್​ ಆಟಗಾರರ ಹರಾಜಿನ ನಿಯಮಗಳ ಬಗ್ಗೆ ಕಾವ್ಯಾ ಮಾರನ್ ಇಟ್ಟಿರುವ ಬೇಡಿಕೆಗಳು ಇವು…

Champions Trophy 2025
ಪ್ರಮುಖ ಸುದ್ದಿ2 hours ago

Champions Trophy 2025 : ಚಾಂಪಿಯನ್ಸ್​ ಟ್ರೋಫಿಗಾಗಿ 544 ಕೋಟಿ ರೂಪಾಯಿ ಬಿಡುಗಡೆ ಮಾಡಿದ ಐಸಿಸಿ

Viral Video
ವೈರಲ್ ನ್ಯೂಸ್2 hours ago

Viral Video: ಪ್ರವಾಹದಲ್ಲಿ ಸಿಲುಕಿದ ನಾಯಿಗಳಿಗೆ ಡ್ರೋನ್‌ ಮೂಲಕ ಬಿರಿಯಾನಿ ರವಾನೆ; ಮಾನವೀಯತೆ ಅಂದ್ರೆ ಇದು!

Best Teacher Award
ಕರ್ನಾಟಕ2 hours ago

Best Teacher Award: ‘ರಾಜ್ಯ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಮಾಹಿತಿ

Union Minister Pralhad Joshi latest statement at Mysore Chalo Padayatra
ಕರ್ನಾಟಕ3 hours ago

BJP-JDS Padayatra: ವಾಲ್ಮೀಕಿ ನಿಗಮ, ಮುಡಾ ಹಗರಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಶೇರ್ ಹೋಲ್ಡರ್: ಪ್ರಲ್ಹಾದ್‌ ಜೋಶಿ ಆರೋಪ

Farmer dies after falling under power tiller wheel in Moralli village
ಉತ್ತರ ಕನ್ನಡ3 hours ago

Farmer Death: ಪವರ್ ಟಿಲ್ಲರ್ ಚಕ್ರಕ್ಕೆ ಸಿಲುಕಿ ರೈತ ದಾರುಣ ಸಾವು

KHIR City project Launch on August 23 at bengaluru says Minister MB Patil
ಕರ್ನಾಟಕ3 hours ago

KHIR City: ಬೆಂಗಳೂರಿನಲ್ಲಿ ದೇಶದಲ್ಲೇ ಮೊದಲ ‘ನಾಲೆಡ್ಜ್, ಹೆಲ್ತ್, ಇನ್ನೋವೇಶನ್ ಆಂಡ್ ರೀಸರ್ಚ್ ಸಿಟಿ’; ಆ.23ರಂದು ಉದ್ಘಾಟನೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ11 hours ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ4 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌