ED Raid: ಸತತ 7 ಗಂಟೆ ಇಡಿ ವಿಚಾರಣೆ ಬಳಿಕ ಮಾಜಿ ಸಚಿವ ನಾಗೇಂದ್ರ ಬಂಧನ; ಕೋರ್ಟ್‌ಗೆ ಹಾಜರುಪಡಿಸಲು ಸಿದ್ಧತೆ - Vistara News

ಕರ್ನಾಟಕ

ED Raid: ಸತತ 7 ಗಂಟೆ ಇಡಿ ವಿಚಾರಣೆ ಬಳಿಕ ಮಾಜಿ ಸಚಿವ ನಾಗೇಂದ್ರ ಬಂಧನ; ಕೋರ್ಟ್‌ಗೆ ಹಾಜರುಪಡಿಸಲು ಸಿದ್ಧತೆ

ED Raid: ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿ ಸತತ 7 ಗಂಟೆ ವಿಚಾರಣೆ ಬಳಿಕ ಮಾಜಿ ಸಚಿವ ಬಿ.ನಾಗೇಂದ್ರರನ್ನು ಇಡಿ ಬಂಧನ ಮಾಡಿದೆ.

VISTARANEWS.COM


on

ED Raid
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿ ಸತತ 7 ಗಂಟೆ ವಿಚಾರಣೆ ಬಳಿಕ ಮಾಜಿ ಸಚಿವ ಬಿ.ನಾಗೇಂದ್ರರನ್ನು ಇಡಿ ಬಂಧನ ಮಾಡಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ಮಾಜಿ ಸಚಿವರನ್ನು ಕೋರ್ಟ್‌ಗೆ ಹಾಜರುಪಡಿಸಲು ಇಡಿ ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ.

ನಿರಂತರ 40 ಗಂಟೆಗಳ ತಪಾಸಣೆ ಹಾಗೂ ತನಿಖೆಯ ಬಳಿಕ, ವಾಲ್ಮೀಕಿ ನಿಗಮ ಹಗರಣ (Valmiki Corporation Scam) ಕುರಿತು ಹೆಚ್ಚಿನ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ (Enforcement Directorate) ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ (Ex minister B Nagendra) ಅವರನ್ನು ಶುಕ್ರವಾರ ಬೆಳಗ್ಗೆ ವಶಕ್ಕೆ ಪಡೆಯಲಾಗಿತ್ತು. ಮೊನ್ನೆ ಮುಂಜಾನೆಯಿಂದ ನಾಗೇಂದ್ರ ಮನೆ ಹಾಗೂ ಕಚೇರಿ ಮುಂತಾದೆಡೆ ಇಡಿ ದಾಳಿ (ED Raid) ನಡೆದಿತ್ತು.

40 ಗಂಟೆಗಳ ಕಾಲ ನಾಗೇಂದ್ರ ಹಾಗೂ ಕುಟುಂಬದವರನ್ನು ಮನೆಯಿಂದ ಹೊರಬಿಡದ ಇಡಿ ಅಧಿಕಾರಿಗಳು ನಿರಂತರವಾಗಿ ಪ್ರಶ್ನೆ ಮಾಡಿದ್ದರು. ವಾಲ್ಮೀಕಿ ನಿಗಮದಲ್ಲಿ ನಡೆದ 185 ಕೋಟಿ ರೂಪಾಯಿಗಳ ಹಗರಣದ ಬಗ್ಗೆ ಯಾವುದೇ ಸುಳಿವು ತಮಗಿಲ್ಲ ಎಂದೇ ನಾಗೇಂದ್ರ ಹೇಳಿದ್ದರು. ಆದರೆ ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್‌ ಹೇಳಿಕೆಯಿಂದಾಗಿ ನಾಗೇಂದ್ರ ಹೇಳಿಕೆಯ ಬಗ್ಗೆ ಅನುಮಾನ ಮೂಡಿದ್ದು, ಹೆಚ್ಚಿನ ತನಿಖೆಗಾಗಿ ಅವರನ್ನು ಕರೆದೊಯ್ಯಲಾಗಿತ್ತು. ಇದೀಗ ಸುದೀರ್ಘ ವಿಚಾರಣೆ ಬಳಿಕ ಅವರನ್ನು ಬಂಧಿಸಲಾಗಿದೆ.

ಬೆಂಗಳೂರಿನ ಇಡಿ ಕಚೇರಿಯಲ್ಲಿ ಅಧಿಕಾರಿಗಳು ಅವರನ್ನು ಪ್ರಶ್ನಿಸಲಾಗಿತ್ತು. ನಾಗೇಂದ್ರ ಸಿಎ ಹರೀಶ್‌ ಕೂಡ ನಿನ್ನೆಯಿಂದ ಇಡಿ ವಶದಲ್ಲಿದ್ದಾರೆ. ಯೂನಿಯನ್‌ ಬ್ಯಾಂಕ್‌ನಲ್ಲಿ ಸುಳ್ಳು ದಾಖಲೆ ನೀಡಿ ಅಕ್ರಮ ಖಾತೆ ತೆರೆದು ಕೋಟ್ಯಂತರ ರೂಪಾಯಿ ನಿಗಮದ ಹಣವನ್ನು ಅಲ್ಲಿಗೆ ವರ್ಗಾಯಿಸಿದ ಕುರಿತು ಹರೀಶ್‌ ಹೇಳಿಕೆಯಲ್ಲಿ ಕೆಲವು ಸಾಕ್ಷಿಗಳು ದೊರೆತಿವೆ. ಬ್ಯಾಂಕ್‌ ಸಿಸಿಟಿವಿ ರೆಕಾರ್ಡ್‌ಗಳನ್ನು ಚೆಕ್‌ ಮಾಡಿದಾಗಲೂ, ನಾಗೇಂದ್ರ ಸಿಎ ಹಾಗೂ ಶಾಸಕ ದದ್ದಲ್‌ ಸಿಎ ಅಲ್ಲಿಗೆ ಬಂದು ಹೋದ ಕುರಿತು ದಾಖಲೆ ಲಭ್ಯವಾಗಿದೆ. 50 ಲಕ್ಷ ಡೀಲ್‌ ನಡೆಸಲಾಗಿರುವ ಕುರಿತು ಬಂಧಿತರಾಗಿರುವ ಬ್ಯಾಂಕ್‌ ಅಧಿಕಾರಿಗಳು ಬಾಯಿ ಬಿಟ್ಟಿದ್ದಾರೆ. ಹೀಗಾಗಿ ಈಗ ಹೆಚ್ಚಿನ ತನಿಖೆಯ ಉರುಳು ನಾಗೇಂದ್ರ ಕೊರಳಿಗೆ ಸುತ್ತಿಕೊಂಡಿದೆ.

ಬಿ. ನಾಗೇಂದ್ರ ಹಾಗೂ ಬಸವನಗೌಡ ದದ್ದಲ್ ನಿವಾಸಗಳ ಜತೆಗೆ ಮೂವರು ಯೂನಿಯನ್ ಬ್ಯಾಂಕ್ ಸಿಬ್ಬಂದಿ ಮನೆಯ ಮೇಲೂ ಇಡಿ ದಾಳಿ ನಡೆಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರವಾದ್ದರಿಂದ ವಸಂತನಗರದಲ್ಲಿರುವ ವಾಲ್ಮೀಕಿ ನಿಗಮದ ಕಚೇರಿಗೂ ಇಡಿ ರೇಡ್‌ ಮಾಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಇಡಿ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದೆ.

ಆರೋಪಿ ಸತ್ಯನಾರಾಯಣ್‌ನಿಂದ ವಾಲ್ಮೀಕಿ ನಿಗಮದ ಎಂ.ಡಿ. ಪದ್ಮನಾಭ್ ಹಣ ತಂದಿದ್ದರು ಎನ್ನಲಾಗಿದೆ. ಆ ಹಣದಲ್ಲಿ ನಾಗೇಂದ್ರ ಪಿಎ ಹರೀಶ್‌ 25 ಲಕ್ಷ ಹಣ ಪಡೆದಿದ್ದ. ದದ್ದಲ್ ಪಿಎ ಪಂಪಣ್ಣ ಕೂಡ 55 ಲಕ್ಷ ಹಣ ಪಡೆದಿದ್ದ. ಈ ಬಗ್ಗೆ ಪರಿಶೀಲನೆ ವೇಳೆ ಹರೀಶ್ ಬಾಯ್ಬಿಟ್ಟ ಹಿನ್ನೆಲೆಯಲ್ಲಿ ಆತನನ್ನು ಇಡಿ ವಶಕ್ಕೆ ಪಡೆದಿದೆ. ಪ್ರಕರಣದಲ್ಲಿ ಸಚಿವ ನಾಗೇಂದ್ರ ಪರ 50ರಿಂದ 60 ಕೋಟಿ ವ್ಯವಹಾರ ನಡೆದಿರುವ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆ ನಡೆದಿದೆ.

ನಾಗೇಂದ್ರ ಅವರಿಗೆ ಸೇರಿದ ಡಾಲರ್ಸ್ ಕಾಲೋನಿಯ ಮನೆ ಮೇಲೆ ದಾಳಿ ಮಾಡಲಾಗಿದೆ. ಅವರ ಆಸ್ತಿಗಳಿರುವ ಬಿಇಎಲ್ ರೋಡ್, ಮತ್ತಿಕೆರೆ ಹಾಗೂ ಮಲ್ಲೇಶ್ವರಂ ಸೇರಿದಂತೆ ಬೆಂಗಳೂರಿನಲ್ಲಿ ನಾಲ್ಕು ಕಡೆ ದಾಳಿಗಳು ನಡೆದಿವೆ. ಬಳ್ಳಾರಿಯ ಅವರ ಮನೆಯ ಮೇಲೂ ದಾಳಿ ನಡೆಸಲಾಗಿದೆ. ಬೆಂಗಳೂರು ಹೊರತುಪಡಿಸಿ ರಾಯಚೂರು ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಲ್ಲಿಯೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಸಿಬಿಐ ಮಧ್ಯೆ ಪ್ರವೇಶಿಸಬಹುದು ಎಂಬ ಮಾಹಿತಿ ದೊರೆತಿತ್ತು.

ಇದನ್ನೂ ಓದಿ | Prajwal Revanna Case: ರೇವಣ್ಣ ಜಾಮೀನು ರದ್ದು ಕೋರಿದ್ದ ಎಸ್‌ಐಟಿ ಅರ್ಜಿ ವಿಚಾರಣೆ 3 ವಾರ ಮುಂದೂಡಿಕೆ

ವಾಲ್ಮೀಕಿ ನಿಗಮದ ಹಗರಣದಲ್ಲಿ 185 ಕೋಟಿ ರೂ. ಅವ್ಯವಹಾರ ನಡೆದಿತ್ತು. ಇದರ ವ್ಯಾಪ್ತಿ ಕೆಳಹಂತದ ಅಧಿಕಾರಿಗಳಿಂದ ಹಿಡಿದು ಮೇಲಿನವರೆಗೂ ವ್ಯಾಪಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿ ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ್‌ ಡೆತ್‌ನೋಟ್‌ನಲ್ಲಿಯೂ ಸಚಿವರ ಬಗ್ಗೆ ಉಲ್ಲೇಖ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Karnataka Assembly Live: ವಾಲ್ಮೀಕಿ ಹಗರಣ ಚರ್ಚೆಯ ನಡುವೆ ಗದ್ದಲ ಸೃಷ್ಟಿಸಿದ ರೇವಣ್ಣ ಪ್ರಕರಣ; ರೊಚ್ಚಿಗೆದ್ದ ರೇವಣ್ಣ

Karnataka Assembly Session: ವಾಲ್ಮೀಕಿ ನಿಗಮ ಚರ್ಚೆಯ ಸಂದರ್ಭದಲ್ಲಿ ಆರೋಪಿತರ ಜಾಮೀನು ವಿಷಯವನ್ನು ವಿಪಕ್ಷ ನಾಯಕ ಆರ್‌. ಅಶೋಕ್‌ ಅವರು ಉಲ್ಲೇಖಿಸಿದರು. ʼವಾಲ್ಮೀಕಿ ಹಗರಣದ ಪ್ರಮುಖ ಆರೋಪಿಗಳು ಇನ್ನು ಆರಾಮಾಗಿ ಓಡಾಡಿಕೊಂಡಿದ್ದಾರೆ. ಆದರೆ ರೇವಣ್ಣ ಅವರ ಪ್ರಕರಣದಲ್ಲಿ ಜಾಮೀನಿಗಾಗಿ ಅವರು ಎಷ್ಟೊಂದು ಒದ್ದಾಡಬೇಕಾಯಿತುʼ ಎಂದು ಹೇಳಿದರು.

VISTARANEWS.COM


on

Karnataka assembly live hd revanna
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ (Valmiki Corporation Scam) ಸಂಬಂಧಿಸಿ ವಿಧಾನಸಭೆಯಲ್ಲಿ (Karnataka Assembly Live) ನಡೆದಿರುವ ಚರ್ಚೆಯ ನಡುವೆ ಮಾಜಿ ಸಚಿವ ಎಚ್‌ಡಿ ರೇವಣ್ಣ (HD Revanna Case) ಪ್ರಕರಣ ಉಲ್ಲೇಖಗೊಂಡು ಕೆಲ ಕಾಲ ಗದ್ದಲ ಎಬ್ಬಿಸಿತು. ಆಡಳಿತ ಪಕ್ಷದ ಶಾಸಕರ ಮಾತಿನಿಂದ ರೊಚ್ಚಿಗೆದ್ದ ರೇವಣ್ಣ ಅವರು, ಪ್ರಕರಣ ದಾಖಲಿಸಿಕೊಂಡ ಡಿಜಿ ವಿರುದ್ಧ ಹಾಗೂ ಸರ್ಕಾರದ ವಿರುದ್ಧ ಕಿಡಿ ಕಾರಿದರು.

ವಾಲ್ಮೀಕಿ ನಿಗಮ ಚರ್ಚೆಯ ಸಂದರ್ಭದಲ್ಲಿ ಆರೋಪಿತರ ಜಾಮೀನು ವಿಷಯವನ್ನು ವಿಪಕ್ಷ ನಾಯಕ ಆರ್‌. ಅಶೋಕ್‌ ಅವರು ಉಲ್ಲೇಖಿಸಿದರು. ʼವಾಲ್ಮೀಕಿ ಹಗರಣದ ಪ್ರಮುಖ ಆರೋಪಿಗಳು ಇನ್ನು ಆರಾಮಾಗಿ ಓಡಾಡಿಕೊಂಡಿದ್ದಾರೆ. ಆದರೆ ರೇವಣ್ಣ ಅವರ ಪ್ರಕರಣದಲ್ಲಿ ಜಾಮೀನಿಗಾಗಿ ಅವರು ಎಷ್ಟೊಂದು ಒದ್ದಾಡಬೇಕಾಯಿತುʼ ಎಂದು ಹೇಳಿದರು.

ಆಗ ಮಧ್ಯಪ್ರವೇಶ ಮಾಡಿದ ಶಾಸಕ ರಿಜ್ವಾನ್, ʼರೇವಣ್ಣ ಹಾಗೂ ವಾಲ್ಮೀಕಿ ನಿಗಮದ ಪ್ರಕರಣ ತುಲನೆ ಮಾಡೋದು ಸರಿಯಲ್ಲ. ರೇವಣ್ಣ ಪ್ರಕರಣದಲ್ಲಿ ರಾಜ್ಯದ ಹೆಣ್ಣು ಮಕ್ಕಳ ಮಾನಹರಣವಾಗಿದೆ. ಹೆಣ್ಣು ಮಕ್ಕಳು ತಲೆ ತಗ್ಗಿಸುವಂತಾಗಿದೆ. ಹಣ ವಾಪಸ್‌ ಬರಬಹುದು, ಆದರೆ ಮಾನ ಮರಳಿ ಬರುವುದಿಲ್ಲʼ ಎಂದು ರಿಜ್ವಾನ್ ಟೀಕಿಸಿದರು.

ಈ ವೇಳೆ ಎದ್ದು ನಿಂತ ಶಾಸಕ ರೇವಣ್ಣ, ʼನನ್ನ ಹೆಸರು ಹೇಳಿದ್ದಾರೆ. ಆದ್ದರಿಂದ ನಾನು ಮಾತಾಡಬೇಕು. ನಾನು ತಪ್ಪು ಮಾಡಿದ್ರೆ ನನ್ನ ಗಲ್ಲಿಗೆ ಹಾಕಲಿ. ನನ್ನ ಮಗ ತಪ್ಪು ಮಾಡಿದ್ದರೆ ಅವನನ್ನು ಗಲ್ಲಿಗೆ ಹಾಕಲಿ. ಆದರೆ ನಾನು 40 ವರ್ಷಗಳಿಂದ ರಾಜಕಾರಣದಲ್ಲಿದ್ದೇನೆ. ಯಾವುದೋ ಹೆಣ್ಣುಮಗಳನ್ನು ಕರೆತಂದು ನನ್ನ ಮೇಲೆ ಕೇಸ್ ಹಾಕಿಸಿದ್ದಾರೆ. ಸ್ವತಃ ಡಿಜಿ ಮುಂದೆ ಕುಳಿತುಕೊಂಡು ಕೇಸ್ ಬರೆದುಕೊಳ್ಳುತ್ತಾನೆ. ಡಿಜಿ ಆಗಲು ಆತ ನಾಲಾಯಕ್‌ʼ ಎಂದು ಕಿಡಿ ಕಾರಿದರು. ಈ ಹಂತದಲ್ಲಿ ರೇವಣ್ಣ ಭಾವುಕರಾದರು.

ನಂತರ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್‌, ʼರೇವಣ್ಣ ಅಧಿಕಾರಿಗಳ ಮೇಲೆ ಆರೋಪ ಮಾಡಿದ್ದಾರೆ. ಅವರಿಗೆ ಅನ್ಯಾಯ ಆಗಿದ್ರೆ ನೋಟೀಸ್ ಕೊಟ್ಟು ಚರ್ಚೆ ಮಾಡಲಿʼ ಎಂದು ಹೇಳಿದರು. ಇದಕ್ಕೆ ರೇವಣ್ಣ ಸಮ್ಮತಿಸಿದರು.

ಡಿಸಿಎಂ- ಅಶ್ವಥ್‌ ನಾರಾಯಣ ಚಕಮಕಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕುರಿತು ನಡೆಯುತ್ತಿರುವ ಚರ್ಚೆಯ ವೇಳೆ ವಿಧಾನಸಭೆ ಗದ್ದಲದ ಗೂಡಾಯಿತು. ಸಿಎಂ ಗೈರುಹಾಜರಿಯನ್ನು ಬಿಜೆಪಿ ಶಾಸಕ ಅಶ್ವಥ್‌ ನಾರಾಯಣ್‌ ಆಕ್ಷೇಪಿಸಿದರು. ಈ ಸಂದರ್ಭದಲ್ಲಿ ಅವರು ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ನಡುವೆ ಮಾತಿನ ಚಕಮಕಿ ನಡೆದು ಗೊಂದಲ ಸೃಷ್ಟಿಯಾಯಿತು. ಸ್ಪೀಕರ್‌ ಯು.ಟಿ ಖಾದರ್‌ ಸದನವನ್ನು ಮುಂದೂಡಿದರು.

ವಾಲ್ಮೀಕಿ ನಿಗಮದ ಹಗರಣದ ಕುರಿತು ವಿಪಕ್ಷ ನಾಯಕ ಆರ್.‌ ಅಶೋಕ್‌ ಇಂದು ಚರ್ಚೆಯನ್ನು ಮುಂದುವರಿಸಿದರು. ಆದರೆ ಈ ಚರ್ಚೆಯ ವೇಳೆ ಸಿಎಂ ಸಿದ್ದರಾಮಯ್ಯ ಸದನದಲ್ಲಿ ಗೈರುಹಾಜರಾಗಿದ್ದರು. ಇದಕ್ಕೆ ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಆಕ್ಷೇಪ ವ್ಯಕ್ತಪಡಿಸಿದರು. ʼನೇರವಾಗಿ ಇದು ಮುಖ್ಯಮಂತ್ರಿಗಳಿಗೆ ಸಂಬಂಧಿಸಿದ ವಿಚಾರ. ಹಣಕಾಸು ಸಚಿವರಾಗಿರೋ ಸಿಎಂ ಅವರ ಮೇಲೆ ಇದರಲ್ಲಿ ನೇರವಾಗಿ ಗಂಭೀರ ಆರೋಪ ಇದೆʼ ಎಂದ ಅಶ್ವಥ್ ನಾರಾಯಣ್, ಕೂಡಲೇ ಅವರನ್ನು ಕರೆಸಿ ಎಂದು ಆಗ್ರಹಿಸಿದರು.

ಈ ವೇಳೆ ಸದನದಲ್ಲಿ ಎದ್ದು ನಿಂತ ಡಿಸಿಎಂ ಡಿಕೆ ಶಿವಕುಮಾರ್‌, ಸಿಎಂ ಪರವಾಗಿ ಬ್ಯಾಟಿಂಗ್ ಮಾಡಿದರು. ಸಚಿವ ಜಮೀರ್ ಅಹ್ಮದ್ ಖಾನ್, ಕೆಜೆ ಜಾರ್ಜ್ ಕೂಡ ಅವರಿಗೆ ಸಾಥ್‌ ನೀಡಿದರು. ಇದರಿಂದ ರೊಚ್ಚಿಗೆದ್ದ ಬಿಜೆಪಿ ಶಾಸಕರು ಡಿಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಎಲ್ಲರೂ ಎದ್ದು ನಿಂತು ʼನೀವೇನು ಎಲ್ಲರಿಗೂ ಗೊತ್ತಿದೆʼ ಎಂದು ಕಿಡಿಕಾರಿದರು. ಆಡಳಿತ, ವಿಪಕ್ಷ ಶಾಸಕರ ನಡುವೆ ವಾಗ್ವಾದ ಹೆಚ್ಚಿ ಗೊಂದಲ ಮೂಡಿದ ಕಾರಣ ವಿಧಾ‌ನಸಭೆ ಕಲಾಪವನ್ನು ಸ್ಪೀಕರ್ ಹತ್ತು ನಿಮಿಷ ಮುಂದೂಡಿದರು.

ಇದನ್ನೂ ಓದಿ: Karnataka Assembly Live: ಸದನದಲ್ಲಿ ಇಂದು ಕಿಡಿಯೆಬ್ಬಿಸಲಿರುವ ವಾಲ್ಮೀಕಿ ಹಗರಣ; ಉತ್ತರ ನೀಡಲು ಸಿಎಂ ಸಜ್ಜು; ಇಲ್ಲಿದೆ ಕ್ಷಣಕ್ಷಣದ ಲೈವ್‌

Continue Reading

ಕರ್ನಾಟಕ

Assembly Session 2024: ಮೈಸೂರು ಪೇಪರ್ ಮಿಲ್ಸ್‌ ಪುನರಾರಂಭಕ್ಕೆ ಸರ್ಕಾರ ಚಿಂತನೆ: ಸಚಿವ ಎಂ.ಬಿ. ಪಾಟೀಲ್

Assembly Session 2024: ಹಣಕಾಸಿನ ಸಮಸ್ಯೆಯಿಂದ ಮೈಸೂರು ಪೇಪರ್ ಮಿಲ್ಸ್‌ ಅನ್ನು 2015ರಲ್ಲಿ ಸ್ಥಗಿತ ಮಾಡಲಾಗಿತ್ತು. ಈ ಕಾರ್ಖಾನೆಯ ಪುನರಾರಂಭಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

VISTARANEWS.COM


on

Assembly Session 2024
Koo

ಬೆಂಗಳೂರು: ಹಣಕಾಸಿನ ಸಮಸ್ಯೆಯಿಂದ 2015ರಲ್ಲಿ ಸ್ಥಗಿತ ಮಾಡಲಾಗಿದ್ದ ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆ (ಎಂಪಿಎಂ) ಪುನರಾರಂಭಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಖಾಸಗಿ ಸಹಭಾಗಿತ್ವದಲ್ಲಿ ಮೈಸೂರು ಪೇಪರ್ ಮಿಲ್ಸ್‌ (Assembly Session 2024) ಪುನಾರಂಭಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಮಂಗಳವಾರ ಕಾಂಗ್ರೆಸ್ ಸದಸ್ಯೆ ಬಿಲ್ಕಿಸ್ ಬಾನು ಅವರು ಕೇಳಿದ ಪ್ರಶ್ನೆಗೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಉತ್ತರ ನೀಡಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನಡೆದ ಅಧಿವೇಶನ ಸಮಯದಲ್ಲೂ ಮೈಸೂರು ಕಾಗದ ಕಾರ್ಖಾನೆ ಪುನರಾರಂಭದ ಬಗ್ಗೆ ಸಚಿವರು ಮಾತನಾಡಿದ್ದರು. ಹಣಕಾಸಿನ ಸಮಸ್ಯೆಯಿಂದ ಮೈಸೂರು ಪೇಪರ್ ಮಿಲ್ಸ್‌ ಅನ್ನು 2015ರಲ್ಲಿ ಸ್ಥಗಿತ ಮಾಡಲಾಗಿತ್ತು. ಜೂನ್ 2023ರ ಅಂತ್ಯಕ್ಕೆ 1,482 ಕೋಟಿ ಸಂಚಿತ ನಷ್ಟ ಆಗಿತ್ತು. ಖಾಸಗಿ ಅವರು ಕಂಪನಿ ಅವರಿಗೂ 3 ಬಾರಿ ಆಹ್ವಾನ ಮಾಡಿದ್ದೇವೆ. ಆದರೂ ಯಾರೂ ಕಾರ್ಖಾನೆ ಪ್ರಾರಂಭಕ್ಕೆ ಮುಂದೆ ಬರಲಿಲ್ಲ ಎಂದು ಮಾಹಿತಿ ನೀಡಿದ್ದರು, ಇದೀಗ ಮತ್ತೊಮ್ಮೆ ಮೈಸೂರು ಪೇಪರ್ ಮಿಲ್ಸ್‌ ಪುನರಾರಂಭ ಮಾಡುವುದಾಗಿ ಕಲಾಪದಲ್ಲಿ ತಿಳಿಸಿದ್ದಾರೆ.

ಕಾಗದ ಕಾರ್ಖಾನೆಗೆ ನೀಲಗಿರಿ ಅವಶ್ಯಕತೆ ಇದೆ. ಆದರೆ ನಮ್ಮಲ್ಲಿ ನೀಲಗಿರಿ ಬೆಳೆಯಲು ನಿಷೇಧ ಇದೆ. ಹೀಗಾಗಿ ಖಾಸಗಿ ಅವರು ಮುಂದೆ ಬರುತ್ತಿಲ್ಲ. ನಾವು ಕೂಡ ಮೈಸೂರು ಕಾಗದ ಕಾರ್ಖಾನೆ ಪ್ರಾರಂಭ ಮಾಡಲು ಉತ್ಸುಕರಾಗಿದ್ದೇವೆ. ಅರಣ್ಯ ಇಲಾಖೆಯ ತಜ್ಞರ ಸಮಿತಿಯು ನೀಲಗಿರಿ ಬೆಳೆಯಲು ಕಾರ್ಗಾನೆಗೆ ವಿನಾಯಿತಿ ನೀಡುವ ಸಂಬಂಧ ಪರಿಶೀಲಿಸಿ ವರದಿ ನೀಡಬೇಕಿದೆ. ಕಂಪನಿಯ ಸಾಲ, ಬಾಕಿ ಕುರಿತು ಆರ್ಥಿಕ ಇಲಾಖೆ ಜೊತೆ ಸಮಾಲೋಚನೆ ಮಾಡಲಾಗುತ್ತಿದೆ. ಇವೆರಡೂ ವಿಷಯಗಳ ಬಗ್ಗೆ ನಿರ್ಧಾರ ಆದ ಮೇಲೆ ಕಾರ್ಖಾನೆ ಪ್ರಾರಂಭದ ಬಗ್ಗೆ ಕ್ರಮವಹಿಸುತ್ತೇವೆ ಎಂದು ಈ ಹಿಂದೆ ಸಚಿವರು ಭರವಸೆ ನೀಡಿದ್ದರು.

ಸರ್ಕಾರದಿಂದ ಯಾವುದೇ ಬೃಹತ್ ಕೈಗಾರಿಕೆ ಪ್ರಾರಂಭಿಸುವುದಿಲ್ಲ

ರಾಜ್ಯದಲ್ಲಿ ಹೊಸ ಕೈಗಾರಿಕೆ, ಉದ್ಯೋಗ ಸೃಷ್ಟಿ ಕುರಿತು ಪ್ರಕಾಶ್ ರಾಥೋಡ್ ಪ್ರಶ್ನೆಗೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಉತ್ತರಿಸಿ, ಸರ್ಕಾರದಿಂದ ಯಾವುದೇ ಬೃಹತ್ ಕೈಗಾರಿಕೆ ಪ್ರಾರಂಭಿಸುವುದಿಲ್ಲ. ಕಳೆದ ಸಾಲಿನಲ್ಲಿ 591 ಕೋಟಿ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಗಳಿಂದ 1,56,989 ಉದ್ಯೋಗ ಸೃಷ್ಟಿಯಾಗಲಿದೆ. ಈ ಯೋಜನೆಗಳ ಅನುಷ್ಠಾನಕ್ಕೆ 3-4 ವರ್ಷ ಬೇಕಾಗುತ್ತದೆ ಎಂದು ತಿಳಿಸಿದರು.

ಉತ್ತರ ಕರ್ನಾಟಕಕ್ಕೆ ಯಾವುದೇ ಕೈಗಾರಿಕೆಗಳನ್ನ ತರುತ್ತಿಲ್ಲ ಎಂಬ ರಾಥೋಡ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಹಲವರು ಹೇಳುತ್ತಿದ್ದಾರೆ. ಅದರ ಬಗ್ಗೆ ಚರ್ಚೆ ಮಾಡಬೇಕು, ಅದು ಸುಲಭ ಇಲ್ಲ. ಕೇಂದ್ರ ಸರ್ಕಾರ ಏನಾದರೂ ಸಹಕಾರ ನೀಡಿದರೆ ಕೈಗಾರಿಕೆಗಳು ತರಬಹುದು. ಸಿ.ಟಿ. ರವಿಯವರು ಸಹಕಾರ ಕೊಟ್ಟರೆ ಮಾಡಬಹುದು. ಕುಮಾರ ಸ್ವಾಮಿಯವರು ಕೇಂದ್ರ ಮಂತ್ರಿಯಾಗಿದ್ದಾರೆ. ಅವರಿಗೆ ಮನವಿ ಮಾಡಿದ್ದೇವೆ ಎಂದರು.

ಇದನ್ನೂ ಓದಿ | Karnataka Assembly Live: ಡಿಸಿಎಂ ಡಿಕೆ ಶಿವಕುಮಾರ್-‌ ಅಶ್ವಥ್‌ ನಾರಾಯಣ್‌ ವಾಗ್ಯುದ್ಧ; ಗದ್ದಲ

ತುಮಕೂರು- ಚಿತ್ರದುರ್ಗ ನಡುವೆ ಹೊಸ ಏರ್‌ಪೋರ್ಟ್ ಕುರಿತು ಬಿಜೆಪಿಯ ನವೀನ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಬಗ್ಗೆ ಯಾವುದೇ ಪ್ರಸ್ತಾವನೆ ರಾಜ್ಯ ಸರ್ಕಾರದ ಮುಂದಿಲ್ಲ ಎಂದು ಹೇಳಿದರು.

Continue Reading

ಮಳೆ

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

Karnataka Rain: ಉತ್ತರ ಕನ್ನಡದಲ್ಲಿ ವಿಪರೀತ ಮಳೆಯಾಗುತ್ತಿದ್ದು, ಸಾವು-ನೋವಿಗೆ ಕಾರಣವಾಗುತ್ತಿದೆ. ಶಿರೂರಿನಲ್ಲಿ ಗುಡ್ಡ ಕುಸಿತ ಉಂಟಾಗಿದ್ದರೆ, ಇತ್ತ ಕಿನ್ನರ ಗ್ರಾಮದಲ್ಲಿ ಮನೆ ಮೇಲೆ ಗುಡ್ಡ ಬಿದ್ದು, ಗೋಡೆ ಕುಸಿದು ವೃದ್ಧರೊಬ್ಬರು ಮೃತಪಟ್ಟಿದ್ದಾರೆ.

VISTARANEWS.COM


on

By

Karnataka Rain
Koo

ಉತ್ತರಕನ್ನಡ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಿನ್ನರ ಗ್ರಾಮದಲ್ಲಿ ಭಾರಿ ಮಳೆಗೆ (Karnataka Rain) ಮನೆ ಮೇಲೆ ಗುಡ್ಡ ಬಿದ್ದ ಪರಿಣಾಮ ಗೋಡೆ ಕುಸಿದಿದೆ. ಮಣ್ಣಿನಡಿ ಸಿಲುಕಿದ್ದ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ತಿಕರ್ಸ್ ಗುರವ (60) ಮೃತ ದುರ್ದೈವಿ.

ಮನೆಯ ಮೇಲೆ ಏಕಾಏಕಿ ಗುಡ್ಡ ಕುಸಿದ ಪರಿಣಾಮ ಗೋಡೆಯಡಿ ಸಿಲುಕಿದ ತಿಕರ್ಸ್‌ ತಲೆಗೆ ಗಂಭೀರ ಪೆಟ್ಟಾಗಿತ್ತು. ಏಕಾಏಕಿ ಮನೆ ಗೋಡೆ ಕುಸಿದ ಪರಿಣಾಮ ಹೊರ ಬರಲು ಆಗದೆ ಮೃತಪಟ್ಟಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಸುಮಾರು 3 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮೃತದೇಹ ಹೊರತೆಗೆದಿದ್ದಾರೆ. ಸ್ಥಳದಲ್ಲಿ ತಹಶಿಲ್ದಾರ್, ಕಾರವಾರ ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಅಧಿಕಾರಿಗಳು ದೌಡು

ಇನ್ನೂ ಉತ್ತರ ಕನ್ನಡದ ಅಂಕೋಲಾ ಗುಡ್ಡ ಕುಸಿತ ಪ್ರದೇಶಕ್ಕೆ ಕುಮಟಾ ಎಸಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಬಳಿ ಗುಡ್ಡ ಕುಸಿದಿದೆ. ಗುಡ್ಡದ ಮಣ್ಣಿನಡಿ 10ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ ಇದ್ದು, ಒಂದೇ ಕುಟುಂಬದ ಐವರು ಸೇರಿ ಹತ್ತಕ್ಕೂ ಅಧಿಕ ಮಂದಿ ಕಣ್ಮರೆಯಾಗಿದ್ದಾರೆ. ಗುಡ್ಡ ಕುಸಿದ ರಭಸಕ್ಕೆ ನದಿಗೆ 2 ಗ್ಯಾಸ್ ಟ್ಯಾಂಕರ್‌ಗಳು ಕೊಚ್ಚಿ ಹೋಗಿದೆ. ಗುಡ್ಡದ ಕೆಳಗಿದ್ದ ಲಾರಿ, ಮತ್ತೊಂದು ಟ್ಯಾಂಕರ್‌ ಹಾಗೂ ಚಾಲಕರು ಪಾರಾಗಿದ್ದಾರೆ.

ಅಂಕೋಲಾ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಹಿತಿ ನೀಡಿದ್ದಾರೆ. ಅವಘಡದಲ್ಲಿ 7 ಮಂದಿ ಸಾವನ್ನಪ್ಪಿರಬಹುದೆಂದು ಮಾಹಿತಿ ಲಭ್ಯವಾಗಿದೆ. ಇನ್ನೂ ಕೂಡಾ ಖಚಿತ ಮಾಹಿತಿ ಬರಬೇಕಿದೆ. ಸದ್ಯ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಎಷ್ಟು ಸಾವಾಗಿದೆ ಹೇಳುವುದು ಸಾಧ್ಯವಿಲ್ಲ. ಕಾರ್ಯಾಚರಣೆಗೆ ಅಗತ್ಯ ಸಲಕರಣೆಗಳು ಸಾಕಾಗುತ್ತಿಲ್ಲ. ಹೀಗಾಗಿ ಕುಮಟಾ ಹಾಗೂ ಅಂಕೋಲಾ ಎರಡೂ ಕಡೆಯಿಂದ ಕಾರ್ಯಾಚರಣೆಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲು ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ. ಜೆಸಿಬಿ, ಹಿಟಾಚಿ ಮತ್ತಿತರ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುವುದು ಎಂದರು.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

ಶಿವಮೊಗ್ಗದಲ್ಲಿ ಮನೆ ಮೇಲೆ ಮರ ಬಿದ್ದು ಹಾನಿ

ಶಿವಮೊಗ್ಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹೊಸನಗರ ತಾಲೂಕಿನ ಯಡೂರು ಗ್ರಾಮದಲ್ಲಿ ಮನೆಗೆ ಹಾನಿಯಾಗಿದೆ. ಮನೆ ಮೇಲೆ ಮರ ಬಿದ್ದು, ಚಾವಣಿ ಕುಸಿದು ಬಿದ್ದಿದೆ. ಜತೆಗೆ ನೀರು ನುಗ್ಗಿ, ಮನೆಯಲ್ಲಿರುವ ಗೃಹೋಪಯೋಗಿ ವಸ್ತುಗಳು ನೀರುಪಾಲಾಗಿದೆ. ನಿಂಗಮ್ಮ ಎಂಬುವರಿಗೆ ಸೇರಿದ ಮನೆಯು ಹಾನಿಯಾಗಿದ್ದು, ಸೂಕ್ತ ಪರಿಹಾರಕ್ಕೆ ಒತ್ತಾಯಿಸಿದ್ದಾರೆ.

ಹಾಸನದಲ್ಲಿ ಕರೆಂಟ್‌ ಕಟ್‌

ಹಾಸನ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಅಪಾರ ಪ್ರಮಾಣದ ಹಾನಿಯಾಗಿದೆ. ಸಕಲೇಶಪುರ ತಾಲೂಕಿನ ಮಾವಿನೂರು, ಕಾಗಿನೆರೆ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ವಿದ್ಯುತ್ ಇಲ್ಲದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಮತ್ತೊಂದು ಕಡೆ ಸಕಲೇಶಪುರ ತಾಲೂಕಿನ ಗಡಿ ಗ್ರಾಮ ತಂಬಲಗೇರಿಯಲ್ಲಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದೆ. ಪುಟ್ಟೇಗೌಡ ಎಂಬುವವರ ಸೇರಿದ ಮನೆಯು ಹಾನಿಯಾಗಿದೆ. ಜತೆಗೆ ಗದ್ದೆಗಳಿಗೆ ಮಣ್ಣು ಕುಸಿದು, ಭತ್ತ ಸಸಿಗಳು ಮಣ್ಣಿನಡಿ ಸಿಲುಕಿದೆ. ತಂಬಲಗೇರಿ ಗ್ರಾಮದ ಲೋಕೇಶ್ ಹಾಗೂ ಇತರೆ ಗ್ರಾಮಸ್ಥರಿಗೆ ಸೇರಿದ ಭತ್ತದ ಗದ್ದೆಗಳು ಕೆರೆಯಂತಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಚಿಕ್ಕಮಗಳೂರು, ಹಾಸನದಲ್ಲಿ ಭಾರಿ ಮಳೆಗೆ ಮನೆಗಳು ನೆಲಸಮ

Karnataka Rain : ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆಗೆ ಜನರು ಅಕ್ಷರಶಃ ಕಂಗಲಾಗಿದ್ದಾರೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಮನೆಗಳು ನೆಲಸಮವಾಗಿವೆ. ಕೆಲವೆಡೆ ಸೇತುವೆಗಳು ಮುಳುಗಡೆಯಾಗಿದೆ.

VISTARANEWS.COM


on

By

karnataka rain
Koo

ಚಿಕ್ಕಮಗಳೂರು/ಹಾಸನ: ಭಾರಿ ಮಳೆಗೆ (Karnataka Rain) ವಾಸದ ಮನೆಯ ಗೋಡೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಕಬ್ಬಿನಗದ್ದೆ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಕಮಲ ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ವಿಶೇಷ ಚೇತನ ಹಾಗೂ ಮಾತು ಬಾರದ ಕಮಲ ತಾಯಿಯೊಂದಿಗೆ ವಾಸವಿದ್ದರು. ಸದ್ಯ ಮನೆ ಕಳೆದುಕೊಂಡು ಕಮಲ ಕುಟುಂಬಸ್ಥರು ಕಂಗಲಾಗಿದ್ದಾರೆ.

ಇತ್ತ ಚಿಕ್ಕಮಗಳೂರಿನಲ್ಲೂ ಮಳೆಯ ಅವಾಂತರಕ್ಕೆ ಮನೆಯೊಂದು ಕುಸಿದು ಬಿದ್ದಿದೆ. ಮನೆಯಲ್ಲಿದ್ದ ಪೀಠೋಪಕರಣ, ದವಸ, ಧಾನ್ಯ ನಾಶವಾಗಿವೆ. ಮೂಡಿಗೆರೆ ತಾಲೂಕಿನ ಬಣಕಲ್ ಪಟ್ಟಣದಲ್ಲಿ ಘಟನೆ ನಡೆದಿದೆ. ಬಣಕಲ್‌ನ ತಾಹಿರಾ ಎಂಬವರಿಗೆ ಸೇರಿದ ಮನೆ ನೆಲಸಮವಾಗಿದೆ. ಮನೆಯಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಳೆಯ ಆರ್ಭಟಕ್ಕೆ ಭಾರೀ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿದೆ. ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಕುಂಚೂರು ಘಾಟಿ ಬಳಿ ಘಟನೆ ನಡೆದಿದೆ. ಹೀಗಾಗಿ ಸ್ಥಳೀಯರು ರಸ್ತೆಗೆ ಕಲ್ಲು ಇಟ್ಟು ಎಚ್ಚರಿಕೆ ನೀಡಿದ್ದಾರೆ. ಭೂಮಿ ಮತ್ತಷ್ಟು ಕುಸಿದು ಬೀಳುತ್ತಿರುವ ಆತಂಕ ಎದುರಾಗಿದೆ.

karnataka Rain

ಚಿಕ್ಕಮಗಳೂರಲ್ಲಿ ರಸ್ತೆ ಅಡ್ಡಲಾಗಿ ಬಿದ್ದ ಬೃಹತ್‌ ಮರ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಆರ್ಭಟಕ್ಕೆ ರಸ್ತೆಗೆ ಅಡ್ಡಲಾಗಿ ಬೃಹತ್ ಗಾತ್ರದ ಮರಗಳು ಬಿದ್ದಿದೆ. ಬಾಳೆಹೊನ್ನೂರು ಮೆಲ್ವಾಲ್ ರಸ್ತೆಯಲ್ಲಿ ಭಾರೀ ಗಾತ್ರದ ಮರ ಬಿದ್ದು, ಹಲವೆಡೆ ವಿದ್ಯುತ್ ಕಂಬಗಳು ಧರೆಗುರುಳಿದೆ. ಕೆಲಕಾಲ ರಸ್ತೆ ಸಂಪರ್ಕ ಕಡಿತಗೊಂಡು ಸವಾರರು ಪರದಾಡಬೇಕಾಯಿತು.

ಚಿಕ್ಕಮಗಳೂರಿನ ಕುದುರೆಮುಖ ವ್ಯಾಪ್ತಿಯ ಘಟ್ಟ ಪ್ರದೇಶಗಳಲ್ಲಿ ಮಳೆ ಸುರಿಯುತ್ತಿದ್ದು, ಭದ್ರಾ ನದಿ ಅಪಾಯದ ಮಟ್ಟ ಮೀರಿದೆ. ಕಳಸ ತಾಲೂಕಿನ ಹೊರನಾಡು ಬಳಿಯ ಹೆಬ್ಬಾಳೆ ಸೇತುವೆಯಾಗಿದ್ದು, ಹೊರನಾಡು-ಕಳಸ ಸಂಪರ್ಕ ಕಡಿತಗೊಂಡಿದೆ. ಕಳೆದ ರಾತ್ರಿಯಿಂದಲೂ ಸೇತುವೆಯ ಮೇಲೆ ಭದ್ರಾ ನದಿ ಉಕ್ಕಿ ಹರಿಯುತ್ತಿದೆ. ಮುನ್ನೆಚ್ಚರಿ ಕಾರ್ಯಕ್ರಮವಾಗಿ ಸೇತುವೆಯ ಎರಡು ಕಡೆ ಬ್ಯಾರಿಕೇಡ್‌ ಹಾಕಲಾಗಿದೆ. ಹೆಬ್ಬಾಳೆ ಸೇತುವೆಯ ಮೇಲೆ ವಾಹನಗಳ ಸಂಚಾರ ನಿಷೇಧ ಮಾಡಲಾಗಿದ್ದು, ಸೇತುವೆ ಬಳಿ ಕಳಸ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

Karnataka Rain

ಕೊಡಗಿನ ಶಾಲೆ ಮೇಲೆ ಬಿದ್ದ ಭಾರಿ ಗಾತ್ರದ ಗುಡ್ಡ

ಕೊಡಗಿನಲ್ಲಿ ಪುನರ್ವಸು ಮಳೆ ಅಬ್ಬರ ಜೋರಾಗಿದ್ದು, ಗುಡ್ಡದ ಮಣ್ಣು ಕುಸಿಯಲು ಆರಂಭವಾಗಿದೆ. ಕೊಡಗು ಜಿಲ್ಲೆ ಸಂಪಾಜೆ ಸಮೀಪ ಕೊಯನಾಡಿನಲ್ಲಿ ಸರ್ಕಾರಿ ಶಾಲಾ ಕಟ್ಟಡ ಮೇಲೆ ಭಾರಿ ಗಾತ್ರದ ಗುಡ್ಡ ಬಿದ್ದಿದೆ. ಕಳೆದ ಒಂದು ತಿಂಗಳ ಹಿಂದೆ ಕೂಡ ಮಣ್ಣು ಬಿದ್ದು ಹಾನಿಯಾಗಿತ್ತು. ಮತ್ತೆ ಗುಡ್ಡಕುಸಿತವಾಗಿ ಶಾಲಾ ಕಟ್ಟಡ ಹಿಂಭಾಗಕ್ಕೆ ಪೂರ್ತಿ ಹಾಳಾಗಿದೆ. ಭಾರಿ ಪ್ರಮಾಣದಲ್ಲಿ ಮಣ್ಣು ಬಿದ್ದು ಶಾಲಾ ಕಟ್ಟಡ ಸಂಪೂರ್ಣ ಹಾನಿಯಾಗಿದೆ. ಶಾಲೆಯಲ್ಲಿದ್ದ ದಾಖಲೆಗಳು ಪೀಟೋಪಕರಣಗಳು ಜಖಂ ಆಗಿದ್ದು, ವಿಚಾರ ತಿಳಿದು ಅಳುತ್ತಲೆ ಶಿಕ್ಷಕಿ ಶಾಲೆಗೆ ಓಡೋಡಿ ಬಂದಿದ್ದಾರೆ.

karnataka Rain

ಕುಮಟಾ-ಶಿರಸಿ ಹೆದ್ದಾರಿಯಲ್ಲಿ ಗುಡ್ಡ ಕುಸಿತ

ಉತ್ತರಕನ್ನಡ ಜಿಲ್ಲೆಯ ಕುಮಟಾ-ಶಿರಸಿ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾಗಿದೆ. ತಡರಾತ್ರಿ ಗುಡ್ಡ ಕುಸಿದು ಸಂಚಾರ ಸಂಪೂರ್ಣ ಬಂದ್ ಆಗಿದೆ. ರಾಷ್ಟ್ರೀಯ ಹೆದ್ದಾರಿ 766EEಯ ರಾಗಿಹೊಸಳ್ಳಿ ಬಳಿ ಘಟನೆ ನಡೆದಿದೆ. ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ.

ಇತ್ತ ಧಾರಾಕಾರ ಮಳೆಗೆ ಹೊನ್ನಾವರ-ಬೆಂಗಳೂರು ಹೆದ್ದಾರಿಯಲ್ಲಿ ಮತ್ತೆ ಗುಡ್ಡ ಕುಸಿತ ಉಂಟಾಗಿದೆ. ಹೊನ್ನಾವರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 206ರ ವರ್ನಕೇರಿ ಬಳಿ ಘಟನೆ ನಡೆದಿದೆ. ಹೆದ್ದಾರಿಗೆ ಬೃಹತ್ ಗಾತ್ರದ ಗುಡ್ಡದ ಮಣ್ಣು ಕುಸಿದು ಬಿದ್ದಿದೆ. ಹೀಗಾಗಿ ಹೊನ್ನಾವರ-ಗೇರುಸೊಪ್ಪ-ಸಾಗರ ಹೆದ್ದಾರಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಗುಡ್ಡ ಕುಸಿತದಿಂದ ರಸ್ತೆಯಲ್ಲೇ ವಾಹನಗಳು ಸಾಲುಗಟ್ಟಿ ನಿಂತಿವೆ. ಬೆಂಗಳೂರಿನಿಂದ ಹೊನ್ನಾವರದತ್ತ ಆಗಮಿಸುತ್ತಿದ್ದ ಪ್ರಯಾಣಿಕರು ಬಸ್‌ಗಳಲ್ಲೇ ಲಾಕ್ ಆಗಿದ್ದರು. ಹೊನ್ನಾವರ-ಬೆಂಗಳೂರು ಹೆದ್ದಾರಿಯಲ್ಲಿ ಇದು ನಾಲ್ಕನೇ ಬಾರಿಗೆ ಗುಡ್ಡ ಕುಸಿತ ಉಂಟಾಗಿದೆ.

ಇನ್ನೂ ಕಾರವಾರ ತಾಲೂಕಿನಲ್ಲಿ ಹಲವು ರಸ್ತೆಗಳು, ಗ್ರಾಮಗಳು ಜಲಾವೃತಗೊಂಡಿದೆ. ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಗೆ ಅರಗಾ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 66ರ ಮೇಲೆ‌ ನೀರು ನಿಂತಿದೆ. ಹೀಗಾಗಿ ಹೆದ್ದಾರಿ ಸಂಚಾರ ಬಂದ್ ಮಾಡಲಾಗಿದ್ದು, ಗೋವಾ-ಮಂಗಳೂರು ನಡುವೆ ವಾಹನ ಸಂಚಾರ ಸ್ಥಗಿತಗೊಂಡಿದೆ. ಕಾರವಾರ ನಗರದ ಹಬ್ಬುವಾಡ ರಸ್ತೆ ಜಲಾವೃತಗೊಂಡಿದ್ದು, ಮಳೆ‌ ನೀರು ಹರಿದು ಹೋಗಲಾಗದೇ ರಸ್ತೆಯು ಹೊಳೆಯಂತಾಗಿದೆ. ಕೆಎಸ್ಆರ್‌ಟಿಸಿ ಡಿಪೋದಲ್ಲೂ ನೀರು ತುಂಬಿಕೊಂಡಿದೆ.

ಕಲಬುರಗಿಯಲ್ಲಿ ದೇವಸ್ಥಾನಕ್ಕೆ ಜಲದಿಗ್ಬಂಧನ

ಕಲಬುರಗಿ ಜಿಲ್ಲೆಯಲ್ಲಿ ಅಫಜಲಪುರ, ಚಿಂಚೊಳ್ಳಿ ಸೇರಿ ಹಲವೆಡೆ ಭಾರಿ ‌ಮಳೆಯಾಗುತ್ತಿದ್ದು, ದತ್ತಾತ್ರೇಯ ದೇವಸ್ಥಾನಕ್ಕೆ ನೀರು ನುಗ್ಗಿದೆ. ಅಫಜಲಪುರ ತಾಲೂಕಿನ‌ ಸುಕ್ಷೇತ್ರ ಗಣಗಾಪುರದ ಶ್ರೀ ಗುರು ದತ್ತಾತ್ರೇಯ ದೇವಸ್ಥಾನಕ್ಕೆ ಜಲದಿಗ್ಬಂಧನ ಹಾಕಲಾಗಿದೆ.

ಕೆಳ ಹಂತದ ಸೇತುವೆಗಳು ಜಲಾವೃತ

ಮಹಾರಾಷ್ಟ್ರ ಘಟ್ಟ ಪ್ರದೇಶಗಳಲ್ಲಿ ಮಳೆ ಚುರುಕಾಗಿದ್ದು, ದೂದಗಂಗಾ ನದಿಯ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ದೂದಗಂಗಾ ನದಿಗೆ ಅಡ್ಡಲಾಗಿರುವ 2 ಕೆಳ ಹಂತದ ಸೇತುವೆಗಳು ಜಲಾವೃತಗೊಂಡಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ದತ್ತವಾಡ – ಮಲ್ಲಿಕವಾಡ ಸೇತುವೆ ಹಾಗೂ ನಿಪ್ಪಾಣಿ ತಾಲೂಕಿನ ಭೋಜ – ಕಾರದಗಾ ಸೇತುವೆ ಜಲಾವೃತಗೊಂಡಿದೆ. ಕೆಳ ಹಂತದ ಸೇತುವೆ ಜಲಾವೃತ ಹಿನ್ನೆಲೆ ಪರ್ಯಾಯ ಮಾರ್ಗದ ಮೂಲಕ ಜನರು ಸಂಚಾರಿಸುತ್ತಿದ್ದಾರೆ. ನದಿಗಳ‌ ನೀರಿನ ಮಟ್ಟ ಏರಿಕೆ ಹಿನ್ನೆಲೆ ನದಿಗಳಲ್ಲಿ ಇಳಿಯದಂತೆ ಬೆಳಗಾವಿ ಜಿಲ್ಲಾಡಳಿತದಿಂದ ಎಚ್ಚರಿಕೆ ನೀಡಿದೆ.

ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಮಾಲತಿ ನದಿ

ಪ್ರವಾಹ ರೀತಿಯಲ್ಲಿ ಮಾಲತಿ ನದಿ ಉಕ್ಕಿ ಹರಿಯುತ್ತಿದೆ. ಅಪಾಯ ಮಟ್ಟ ಮೀರಿ ರಸ್ತೆ ಮೇಲೆ ಉಕ್ಕಿ ಹರಿಯುತ್ತಿದೆ. ಶಿವಮೊಗ್ಗದ ಗುಡ್ಡಕೇರಿಯಿಂದ ಹೊನ್ನೆತಾಳು ಮಾರ್ಗವಾಗಿ ಬಿದರಗೋಡು ಸಂಪರ್ಕಿಸುವ ರಸ್ತೆ ಸ್ಥಗಿತಗೊಂಡಿದೆ. ನಾಬಳ ಬಳಿ ಮಾಲತಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ವಾಹನ ಸಂಚಾರದಲ್ಲಿ ಮಾರ್ಗ ಬದಲಾವಣೆ ಆಗಿದೆ. ಅಕ್ಕಪಕ್ಕದ ತೋಟಕ್ಕೂ ನೀರು ನುಗ್ಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Karnataka assembly live hd revanna
ಪ್ರಮುಖ ಸುದ್ದಿ5 seconds ago

Karnataka Assembly Live: ವಾಲ್ಮೀಕಿ ಹಗರಣ ಚರ್ಚೆಯ ನಡುವೆ ಗದ್ದಲ ಸೃಷ್ಟಿಸಿದ ರೇವಣ್ಣ ಪ್ರಕರಣ; ರೊಚ್ಚಿಗೆದ್ದ ರೇವಣ್ಣ

Assembly Session 2024
ಕರ್ನಾಟಕ7 mins ago

Assembly Session 2024: ಮೈಸೂರು ಪೇಪರ್ ಮಿಲ್ಸ್‌ ಪುನರಾರಂಭಕ್ಕೆ ಸರ್ಕಾರ ಚಿಂತನೆ: ಸಚಿವ ಎಂ.ಬಿ. ಪಾಟೀಲ್

Donald Trump
ವಿದೇಶ10 mins ago

Donald Trump: ಬೆದರಿಕೆಗೆ ಬಗ್ಗದ ಡೊನಾಲ್ಡ್‌ ಟ್ರಂಪ್;‌ ಕಿವಿಗೆ ಬ್ಯಾಂಡೇಜ್‌ ಕಟ್ಟಿಕೊಂಡು ಜನರೆದುರು ಪ್ರತ್ಯಕ್ಷ!

Karnataka Rain
ಮಳೆ27 mins ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

Actor Mithra
ಸ್ಯಾಂಡಲ್ ವುಡ್28 mins ago

Actor Mithra: ಖಡಕ್‌ ವಿಲನ್‌ ಆಗಿ ʼಕರಾವಳಿʼಯಲ್ಲಿ ಅಬ್ಬರಿಸಲಿದ್ದಾರೆ ಕಾಮಿಡಿ ಸ್ಟಾರ್ ಮಿತ್ರ; ಕಾಲಿವುಡ್‌ಗೂ ಎಂಟ್ರಿ

Rohit Sharma
ಕ್ರೀಡೆ43 mins ago

Rohit Sharma: ‘ಎಲಾ ಉನ್ನಾರು?’; ತೆಲುಗಿನಲ್ಲಿ ಮಾತನಾಡಿದ ರೋಹಿತ್ ಶರ್ಮ; ವಿಡಿಯೊ ವೈರಲ್​

karnataka rain
ಮಳೆ58 mins ago

Karnataka Rain : ಚಿಕ್ಕಮಗಳೂರು, ಹಾಸನದಲ್ಲಿ ಭಾರಿ ಮಳೆಗೆ ಮನೆಗಳು ನೆಲಸಮ

ಪ್ರಮುಖ ಸುದ್ದಿ1 hour ago

Karnataka Assembly Live: ಡಿಸಿಎಂ ಡಿಕೆ ಶಿವಕುಮಾರ್-‌ ಅಶ್ವಥ್‌ ನಾರಾಯಣ್‌ ವಾಗ್ಯುದ್ಧ; ಗದ್ದಲ

Alcohol Delivery
ದೇಶ1 hour ago

Alcohol Delivery: ಎಣ್ಣೆ ಪ್ರಿಯರಿಗೆ ಗುಡ್‌ ನ್ಯೂಸ್;‌ ಇನ್ನು ಸ್ವಿಗ್ಗಿಯಲ್ಲಿ ಮನೆ ಬಾಗಿಲಿಗೆ ಬರಲಿದೆ ಆಲ್ಕೋಹಾಲ್!

Doda Encounter
ದೇಶ1 hour ago

Doda Encounter: ಜಮ್ಮು- ಕಾಶ್ಮೀರದಲ್ಲಿ ಉಗ್ರರ ದಾಳಿ; ಬಿಜೆಪಿಯ ತಪ್ಪು ನೀತಿಯೇ ಕಾರಣ ಎಂದ ರಾಹುಲ್‌ ಗಾಂಧಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ27 mins ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ20 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌