Uniform Civil Code: ಏಕರೂಪ ನಾಗರಿಕ ಸಂಹಿತೆ ಜಾರಿ; ರಾಜ್ಯಗಳಿಗೆ ಜವಾಬ್ದಾರಿ ನೀಡಲು ಕೇಂದ್ರದ ಚಿಂತನೆ? - Vistara News

ದೇಶ

Uniform Civil Code: ಏಕರೂಪ ನಾಗರಿಕ ಸಂಹಿತೆ ಜಾರಿ; ರಾಜ್ಯಗಳಿಗೆ ಜವಾಬ್ದಾರಿ ನೀಡಲು ಕೇಂದ್ರದ ಚಿಂತನೆ?

Uniform Civil Code: ಏಕರೂಪ ನಾಗರಿಕ ಸಂಹಿತೆ ಜಾರಿಯ ಬಗ್ಗೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಈ ಕುರಿತಾದ ಕಾನೂನನ್ನು ಸಂಸತ್ತಿನ ಮೂಲಕ ಜಾರಿಗೆ ತರದೆ ರಾಜ್ಯಗಳಿಗೆ ಅಧಿಕಾರ ನೀಡಲು ಮುಂದಾಗಿದೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ. ಈಗಾಗಲೇ ಉತ್ತರಾಖಂಡ ಸರ್ಕಾರವು ಏಕರೂಪ ನಾಗರಿಕ ಸಂಹಿತೆ ವಿಧೇಯಕವನ್ನು ಪಾಸು ಮಾಡಿದೆ. ಗುಜರಾತ್ ಮತ್ತು ಅಸ್ಸಾಂನಂತಹ ರಾಜ್ಯಗಳು ಈಗಾಗಲೇ ಯುಸಿಸಿ ಕಾನೂನುಗಳನ್ನು ಅಂಗೀಕರಿಸುವ ಪ್ರಕ್ರಿಯೆಯಲ್ಲಿವೆ.

VISTARANEWS.COM


on

Uniform Civil Code
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಏಕರೂಪ ನಾಗರಿಕ ಸಂಹಿತೆ (Uniform Civil Code) ಜಾರಿಯ ಬಗ್ಗೆ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಈ ಕುರಿತಾದ ಕಾನೂನನ್ನು ಸಂಸತ್ತಿನ ಮೂಲಕ ಜಾರಿಗೆ ತರದೆ ರಾಜ್ಯಗಳಿಗೆ ಅಧಿಕಾರ ನೀಡಲು ಮುಂದಾಗಿದೆ ಎಂದು ಬಿಜೆಪಿ (BJP)ಯ ಮೂಲಗಳು ತಿಳಿಸಿವೆ.

ಈಗಾಗಲೇ ಉತ್ತರಾಖಂಡ (Uttarakhand) ಸರ್ಕಾರವು ಏಕರೂಪ ನಾಗರಿಕ ಸಂಹಿತೆ ವಿಧೇಯಕವನ್ನು ಪಾಸು ಮಾಡಿದೆ. ಆ ಮೂಲಕ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತಂದ ಸ್ವತಂತ್ರ ಭಾರತದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಫೆಬ್ರವರಿಯಲ್ಲಿ, ಬಿಜೆಪಿ ಆಡಳಿತವಿರುವ ಉತ್ತರಾಖಂಡವು ಯುಸಿಸಿ ಮಸೂದೆಯನ್ನು ಅಂಗೀಕರಿಸಿದ ಬಳಿಕ ಇಲ್ಲಿ ಮದುವೆ, ವಿಚ್ಛೇದನ ಮತ್ತು ಉತ್ತರಾಧಿಕಾರಕ್ಕಾಗಿ ಸಾಮಾನ್ಯ ಕಾನೂನು ಅನ್ವಯವಾಗುತ್ತದೆ. ಗೋವಾದಲ್ಲಿ ಈಗಾಗಲೇ ಏಕರೂಪ ನಾಗರಿಕ ಸಂಹಿತೆ ಜಾರಿಯಲ್ಲಿದೆ. ಪೋರ್ಚುಗೀಸ್ ಆಡಳಿತವಿದ್ದಾಗಲೇ ಗೋವಾದಲ್ಲಿ ನಾಗರಿಕ ಸಂಹಿತೆ ಅನುಷ್ಠಾನಗೊಂಡಿದೆ.

ಹೀಗಾಗಿ ಇತರ ಬಿಜೆಪಿ ಆಡಳಿತದ ರಾಜ್ಯಗಳು ಶೀಘ್ರದಲ್ಲೇ ಇದನ್ನು ಜಾರಿಗೊಳಿಸಲಿವೆ ಎಂಬ ಭರವಸೆ ಪಕ್ಷಕ್ಕಿದೆ. ಗುಜರಾತ್ ಮತ್ತು ಅಸ್ಸಾಂನಂತಹ ರಾಜ್ಯಗಳು ಈಗಾಗಲೇ ಯುಸಿಸಿ ಕಾನೂನುಗಳನ್ನು ಅಂಗೀಕರಿಸುವ ಪ್ರಕ್ರಿಯೆಯಲ್ಲಿವೆ.

ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಈ ವಿಷಯದ ಬಗ್ಗೆ ಮಾತನಾಡಿ, ಕಾನೂನು ಆಯೋಗದ ಮೌಲ್ಯಮಾಪನಕ್ಕಾಗಿ ಕಾಯುತ್ತಿರುವುದಾಗಿ ಶುಕ್ರವಾರ ತಿಳಿಸಿದ್ದಾರೆ.

ಏಕರೂಪ ನಾಗರಿಕ ಸಂಹಿತೆ ಎಂದರೇನು?

ಮದುವೆ, ವಿಚ್ಛೇದನ, ದತ್ತು ಸ್ವೀಕಾರ ಮತ್ತು ಉತ್ತರಾಧಿಕಾರ ಸೇರಿದಂತೆ ಭಾರತದ ಎಲ್ಲ ನಾಗರಿಕರಿಗೆ ಅನ್ವಯವಾಗುವ, ಅವರ ಧರ್ಮವನ್ನು ಲೆಕ್ಕಿಸದೆ ವೈಯಕ್ತಿಕ ವಿಷಯಗಳನ್ನು ನಿಯಂತ್ರಿಸುವ ಕಾನೂನುಗಳ ಒಂದು ಗುಂಪಾಗಿ ಏಕರೂಪ ನಾಗರಿಕ ಸಂಹಿತೆ ಎಂದು ಕರೆಯಲಾಗುತ್ತದೆ. ಈಗ ಅಸ್ತಿತ್ವದಲ್ಲಿರುವ ವೈವಿಧ್ಯಮಯ, ವೈಯಕ್ತಿಕ ಕಾನೂನುಗಳನ್ನು ಬದಲಿಸುವ ಗುರಿಯನ್ನು ಇದು ಹೊಂದಿದೆ.

ಸಂವಿಧಾನ ಏನು ಹೇಳಿದೆ?

ಸಂವಿಧಾನದ ʼರಾಜ್ಯ ನೀತಿ ನಿರ್ದೇಶಕ ತತ್ವʼಗಳಲ್ಲಿ ಒಂದಾದ ಸಂವಿಧಾನದ 44ನೇ ವಿಧಿಯು ʼʼಭಾರತದ ಭೂ ಪ್ರದೇಶದಾದ್ಯಂತ ಜನರಿಗೆ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿ ಮಾಡಲು ಸರ್ಕಾರ ಪ್ರಯತ್ನಿಸಬೇಕುʼʼ ಎಂದು ಹೇಳಿದೆ. ಆದರೆ ಆರ್ಟಿಕಲ್ 37 ಹೇಳುವಂತೆ, ನಿರ್ದೇಶಕ ತತ್ವಗಳು ಸರ್ಕಾರಿ ನೀತಿಗಳಿಗೆ ಮಾರ್ಗದರ್ಶಿ ತತ್ವಗಳಾಗಿವೆ ಅಷ್ಟೇ. ಇವುಗಳನ್ನು ನ್ಯಾಯಾಲಯದ ಮೂಲಕ ಪಟ್ಟು ಹಿಡಿದು ಜಾರಿಗೊಳಿಸಲಾಗುವುದಿಲ್ಲ.

ಇದನ್ನೂ ಓದಿ: Uniform Civil Code: ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿದ ದೇಶದ ಮೊದಲ ರಾಜ್ಯ ಉತ್ತರಾಖಂಡ

ಪಕ್ಷಗಳ ನಿಲುವೇನು?

ಯುಸಿಸಿ ಜಾರಿಗೊಳಿಸುವ ಬಗ್ಗೆ ಎನ್‌ಡಿಎ ಮಿತ್ರಪಕ್ಷಗಳಲ್ಲಿ ಇನ್ನೂ ಗೊಂದಲವಿದೆ. ಬಿಜೆಪಿ, ಏಕನಾಥ ಶಿಂದೆ ನೇತೃತ್ವದ ಶಿವಸೇನೆ ಮತ್ತು ನಿತೀಶ್‌ ಕುಮಾರ್‌ ನೇತೃತ್ವದ ಜೆಡಿಯು ಏಕರೂಪ ನಾಗರಿಕ ಸಂಹಿತೆ ಜಾರಿಗೆ ಒಲವು ವ್ಯಕ್ತಪಡಿಸಿವೆ. ಅಜಿತ್‌ ಪವಾರ್‌ ನೇತೃತ್ವದ ಎನ್‌ಸಿಪಿ, ಚಂದ್ರಬಾಬು ನಾಯ್ಡು ನಾಯಕತ್ವದ ಟಿಡಿಪಿ ಮತ್ತು ಎಚ್‌.ಡಿ.ದೇವೇಗೌಡ ಅವರ ಜೆಡಿಎಸ್‌ ಇನ್ನೂ ತಮ್ಮ ನಿರ್ಧಾರ ತಿಳಿಸಿಲ್ಲ. ಇತ್ತ ಪ್ರತಿಪಕ್ಷಗಳ ಇಂಡಿ ಒಕ್ಕೂಟ ಯುಸಿಸಿ ಜಾರಿಗೆ ವಿರೋಧ ವ್ಯಕ್ತಪಡಿಸಿವೆ. ಬಿಜೆಪಿ ತನ್ನ ಚುನಾವಣೆ ಪ್ರಣಾಳಿಕೆಯಲ್ಲಿಯೂ ಯುಸಿಸಿ ಜಾರಿ ಬಗ್ಗೆ ಪ್ರಸ್ತಾವಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Pooja Khedkar: ಐಎಎಸ್‌ಗಾಗಿ ನಕಲಿ ಜಾತಿ, ಕಡಿಮೆ ವಯಸ್ಸು, ದರ್ಪ; ಪೂಜಾ ಖೇಡ್ಕರ್‌ ಕಳ್ಳಾಟ ಒಂದೆರಡಲ್ಲ!

Pooja Khedkar: ಟ್ರೈನಿ ಐಎಎಸ್‌ ಅಧಿಕಾರಿಯಾಗಿದ್ದಾಗಲೇ ಖಾಸಗಿ ವಾಹನಕ್ಕೆ ಕೆಂಪು ಗೂಟ ಅಳವಡಿಸಿಕೊಂಡು, ಅಧಿಕಾರ ದುರುಪಯೋಗದ ಆರೋಪ ಹೊತ್ತಿರುವ ಪೂಜಾ ಖೇಡ್ಕರ್‌ ಅವರ ಕಳ್ಳಾಟಗಳು ಬಯಲಾಗುತ್ತಿವೆ. ಅವರ ವಿರುದ್ಧ ನಕಲಿ ಜಾತಿ ಪ್ರಮಾಣಪತ್ರ, ವಿಶೇಷ ಚೇತನ ಎಂದು ಸುಳ್ಳು ದಾಖಲೆ ಸೃಷ್ಟಿ, ವಯಸ್ಸಿನ ಕುರಿತು ಕೂಡ ಫೇಕ್‌ ಡಾಕ್ಯುಮೆಂಟ್‌ ಮಾಡಿಸಿರುವುದು ಸೇರಿ ಅವರ ವಿರುದ್ಧ ಹತ್ತಾರು ಆರೋಪಗಳು ಕೇಳಿಬರುತ್ತಿವೆ.

VISTARANEWS.COM


on

Pooja Khedkar
Koo

ಮುಂಬೈ: ಮಹಾರಾಷ್ಟ್ರ ಕೇಡರ್‌ನ ಐಎಎಸ್‌ ಅಧಿಕಾರಿ, ಅತಿಯಾದ ದರ್ಪ, ನಕಲಿ ದಾಖಲೆ ಸೃಷ್ಟಿಯಿಂದಲೇ ದೇಶಾದ್ಯಂತ ಗಮನ ಸೆಳೆದಿರುವ ಟ್ರೈನಿ ಅಧಿಕಾರಿ (Trainee IAS Officer) ಪೂಜಾ ಖೇಡ್ಕರ್‌ (Pooja Khedkar) ಅವರ ಒಂದೊಂದೇ ಕಳ್ಳಾಟಗಳು ಬಯಲಾಗುತ್ತಿವೆ. ತಮ್ಮ ಖಾಸಗಿ ಕಾರಿಗೆ ‘ಕೆಂಪು ಗೂಟ’ ಅಳವಡಿಸಿದ್ದು ಸೇರಿ ಹಲವು ರೀತಿಯಲ್ಲಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು, ವರ್ಗಾವಣೆಯ ಶಿಕ್ಷೆ ಅನುಭವಿಸುತ್ತಿರುವ ಪೂಜಾ ಖೇಡ್ಕರ್‌ ಅವರು ನಕಲಿ ಜಾತಿ ಪ್ರಮಾಣಪತ್ರ, ವಿಶೇಷ ಚೇತನ ಎಂದು ಸುಳ್ಳು ದಾಖಲೆ ಸೃಷ್ಟಿ, ವಯಸ್ಸಿನ ಕುರಿತು ಕೂಡ ಫೇಕ್‌ ಡಾಕ್ಯುಮೆಂಟ್‌ ತಯಾರಿಸಿದ ಆರೋಪಗಳನ್ನೂ ಎದುರಿಸುತ್ತಿದ್ದಾರೆ.

ನಿಯಮಿತ ಅಧಿಕಾರವನ್ನು ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಪುಣೆಯಿಂದ (ಅಸಿಸ್ಟಂಟ್‌ ಕಲೆಕ್ಟರ್)‌ ವಾಶಿಂಗೆ ವರ್ಗಾವಣೆಗೊಂಡಿರುವ 34 ವರ್ಷದ ಅಧಿಕಾರಿಯು, ಒಬಿಸಿ ಜಾತಿ ಪ್ರಮಾಣಪತ್ರ ಲಗತ್ತಿಸಿ ಯುಪಿಎಸ್‌ಸಿ ಪರೀಕ್ಷೆ ಬರೆದು ತೇರ್ಗಡೆ ಹೊಂದಿದ್ದಾರೆ. ಆದರೆ, ಅವರು ಒಬಿಸಿ ಜಾತಿ ಪ್ರಮಾಣಪತ್ರದ ನಕಲಿ ದಾಖಲೆ ಸೃಷ್ಟಿಸಿದ್ದಾರೆ. ಇನ್ನು ವಿಶೇಷ ಚೇತನ ಎಂಬುದಾಗಿಯೂ ಫೇಕ್‌ ಡಾಕ್ಯುಮೆಂಟ್‌ ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಮೆಡಿಕಲ್‌ ಟೆಸ್ಟ್‌ ಪ್ರಕಾರ ಪೂಜಾ ಖೇಡ್ಕರ್‌ ಅವರು ಫಿಟ್‌ ಇದ್ದಾರೆ ಎಂದು ಹೇಳಲಾಗುತ್ತಿದೆ.‌ 2007ರಲ್ಲಿ ಅವರು ಎಂಬಿಬಿಎಸ್‌ಗೆ ಅರ್ಜಿ ಸಲ್ಲಿಸಿದಾಗ ದೈಹಿಕವಾಗಿ ಫಿಟ್‌ ಇರುವುದಾಗಿ ದಾಖಲೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ವಯಸ್ಸಿನ ಕುರಿತೂ ಸುಳ್ಳು ದಾಖಲೆ

ಜಾತಿ, ವಿಶೇಷ ಚೇತನ ಪ್ರಮಾಣಪತ್ರದ ಜತೆಗೆ ಪೂಜಾ ಖೇಡ್ಕರ್‌ ಅವರು ವಯಸ್ಸಿನ ಕುರಿತು ಕೂಡ ಸುಳ್ಳು ದಾಖಲೆ ಸಲ್ಲಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 2020ರಿಂದ 2023ರ ಅವಧಿಯಲ್ಲಿ ಅವರು ಸಲ್ಲಿಸಿದ ದಾಖಲೆಗಳ ಪ್ರಕಾರ, ಮೂರು ವರ್ಷದಲ್ಲಿ ಅವರ ವಯಸ್ಸು ದಾಖಲೆಯಲ್ಲಿ ಒಂದೇ ವರ್ಷ ಹೆಚ್ಚಾಗಿದೆ. ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಲು ವಯಸ್ಸಿನ ಮಿತಿ ಇರುವ ಕಾರಣ ಅವರು ವಯಸ್ಸಿನ ಕುರಿತು ಕೂಡ ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂದು ತಿಳಿದುಬಂದಿದೆ. ಇದು ಈಗ ಭಾರಿ ಚರ್ಚೆಗೂ ಗ್ರಾಸವಾಗಿದೆ.

27 ಸಾವಿರ ರೂ. ದಂಡ ಬಿದ್ದಿದ್ದೇಕೆ?

ಅಧಿಕಾರದ ದುರುಪಯೋಗ, ನಕಲಿ ದಾಖಲೆ ಸೃಷ್ಟಿ ಜತೆಗೆ ಸಂಚಾರ ದಟ್ಟಣೆ ನಿಯಮಗಳ ಉಲ್ಲಂಘನೆಯಲ್ಲೂ ಮುಂದಿದ್ದಾರೆ. ವಾಶಿಂ ಮಹಿಳಾ ಪೊಲೀಸರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡ ಪೂಜಾ ಖೇಡ್ಕರ್‌ ಅವರು ಎರಡು ತಾಸು ಚರ್ಚಿಸಿದ್ದಾರೆ. ಯಾವ ವಿಷಯದ ಕುರಿತು ಚರ್ಚಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗದಿದ್ದರೂ, ಸಂಚಾರ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ 27 ಸಾವಿರ ರೂ. ದಂಡ ವಿಧಿಸಲಾಗಿದ್ದು, ಅದರ ನೋಟಿಸ್‌ ನೀಡಲು ಪೊಲೀಸರು ಅವರ ಮನೆಗೆ ತೆರಳಿದ್ದರು ಎಂದು ಮೂಲಗಳು ತಿಳಿಸಿವೆ.

ಪೂಜಾ ಖೇಡ್ಕರ್‌ ಪ್ರತಿಕ್ರಿಯೆ ಏನು?

ನಕಲಿ ದಾಖಲೆ, ಅಧಿಕಾರ ದುರುಪಯೋಗ ಸೇರಿ ಹಲವು ಆರೋಪಗಳ ಕುರಿತು ತನಿಖೆಗೆ ಆದೇಶಿಸಲಾಗಿದ್ದು, ಮೊದಲ ಬಾರಿಗೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. “ಯಾರೇ ಆಗಲಿ, ಆರೋಪ ಸಾಬೀತಾಗುವವರೆಗೆ ಅವರು ಆರೋಪಿಯೇ. ಮಾಧ್ಯಮಗಳ ವರದಿಗಳು, ತೀರ್ಪುಗಳು ನಾನು ಏನೆಂಬುದನ್ನು ತೀರ್ಮಾನಿಸುವುದಿಲ್ಲ. ತನಿಖೆಗೆ ರಚನೆಯಾಗಿರುವ ಸಮಿತಿಯ ತೀರ್ಮಾನದ ಬಳಿಕವೇ ಸತ್ಯ ಏನೆಂಬುದು ಗೊತ್ತಾಗುತ್ತದೆ. ಮಾಧ್ಯಮಗಳು ಅಥವಾ ಜನರು ನನ್ನನ್ನು ತೀರ್ಮಾನಿಸುವುದಿಲ್ಲ” ಎಂದು ಮಾಧ್ಯಮಗಳಿಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Pooja Khedkar: ಎಂಬಿಬಿಎಸ್ ಪ್ರವೇಶಕ್ಕೆ ಒಬಿಸಿ ಕೆನೆಪದರ ರಹಿತ ಪ್ರಮಾಣಪತ್ರ ಸಲ್ಲಿಸಿದ್ದ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್

Continue Reading

ದೇಶ

Kashmir Encounter: ಸೇನಾ ಮುಖ್ಯಸ್ಥರ ಜೊತೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಮಾತುಕತೆ; ಸೇನೆಗೆ ಸಂಪೂರ್ಣ ಅಧಿಕಾರ

Kashmir Encounter: ಇನ್ನು ರಾಜನಾಥ್‌ ಸಿಂಗ್‌ ಅವರು ಸೇನಾ ಮುಖ್ಯಸ್ಥರ ಜೊತೆ ಘಟನೆ ಬಗ್ಗೆ ಮಾತುಕತೆ ನಡೆಸಿದ್ದು, ದೋಡಾ ಪ್ರದೇಶದಲ್ಲಿ ಪ್ರಸ್ತುತ ಸ್ಥಿತಿಗತಿ ಮತ್ತು ಕಾರ್ಯಾಚರಣೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅಲ್ಲದೇ ಘಟನೆಗೆ ಪ್ರತಿಕಾರವಾಗಿ ಯಾವುದೇ ಕ್ರಮ ಕೈಗೊಳ್ಳ ಸಂಪೂರ್ಣ ಅನುಮತಿ ನೀಡಿದ್ದಾರೆ ಎನ್ನಲಾಗಿದೆ.

VISTARANEWS.COM


on

Rajnath Singh
Koo

ಹೊಸದಿಲ್ಲಿ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಉಗ್ರರ ಉಪಟಳ ಮುಂದುವರಿದಿದೆ. ದೋಡಾ ಜಿಲ್ಲೆಯಲ್ಲಿ ಯೋಧರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ (Kashmir Encounter) ಒಬ್ಬ ಅಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಇದರ ಬೆನ್ನಲ್ಲೇ ಉಗ್ರರನ್ನು ಮಟ್ಟ ಹಾಕಲು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌(Rajnath Singh) ಸೇನೆಗೆ ಸಂಪೂರ್ಣ ಅಧಿಕಾರ ನೀಡಿದ್ದಾರೆ ಎನ್ನಲಾಗಿದೆ.

ಇನ್ನು ರಾಜನಾಥ್‌ ಸಿಂಗ್‌ ಅವರು ಸೇನಾ ಮುಖ್ಯಸ್ಥರ ಜೊತೆ ಘಟನೆ ಬಗ್ಗೆ ಮಾತುಕತೆ ನಡೆಸಿದ್ದು, ದೋಡಾ ಪ್ರದೇಶದಲ್ಲಿ ಪ್ರಸ್ತುತ ಸ್ಥಿತಿಗತಿ ಮತ್ತು ಕಾರ್ಯಾಚರಣೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅಲ್ಲದೇ ಘಟನೆಗೆ ಪ್ರತಿಕಾರವಾಗಿ ಯಾವುದೇ ಕ್ರಮ ಕೈಗೊಳ್ಳ ಸಂಪೂರ್ಣ ಅನುಮತಿ ನೀಡಿದ್ದಾರೆ ಎನ್ನಲಾಗಿದೆ.

ಜಮ್ಮು-ಕಾಶ್ಮೀರದಲ್ಲಿ ಉಗ್ರರ ಉಪಟಳ ಮುಂದುವರಿದಿದೆ. ದೋಡಾ ಜಿಲ್ಲೆಯಲ್ಲಿ ಯೋಧರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಅಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ದಾಳಿಯ ವೇಳೆ ಜಮ್ಮು-ಕಾಶ್ಮೀರ ಪೊಲೀಸ್‌ ಅಧಿಕಾರಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಆದಾಗ್ಯೂ, ಉಗ್ರರಿಗಾಗಿ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದುಬಂದಿದೆ.

ದೋಡಾ ಜಿಲ್ಲೆಯ ದೇಸಾ ಎಂಬ ಪ್ರದೇಶದ ಅರಣ್ಯದಲ್ಲಿ ಉಗ್ರರು ಅಡಗಿರುವ ಕುರಿತು ನಿಖರ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿಯು ಸೋಮವಾರ (ಜುಲೈ 16) ರಾತ್ರಿಯೇ ಕಾರ್ಯಾಚರಣೆ ಆರಂಭಿಸಿದ್ದಾರೆ. ಉಗ್ರರಿಗಾಗಿ ನಡೆದ ಕಾರ್ಯಾಚರಣೆ ವೇಳೆ ಭಯೋತ್ಪಾದಕರು ಯೋಧರ ಮೇಲೆಯೇ ಗುಂಡಿನ ದಾಳಿ ನಡೆಸಿದ್ದಾರೆ. ಇದೇ ವೇಳೆ ಯೋಧರು ಕೂಡ ಗುಂಡಿನ ದಾಳಿ ಆರಂಭಿಸಿದ್ದಾರೆ. ರಾತ್ರೋರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ಉಗ್ರರ ಉಪಟಳ ಜಾಸ್ತಿಯಾಗಿರುವ ಕಾರಣ ಭಾರತೀಯ ಸೇನೆ ಹಾಗೂ ಜಮ್ಮು-ಕಾಶ್ಮೀರ ಪೊಲೀಸರು ಕಾರ್ಯಾಚರಣೆಗಳನ್ನು ಕೈಗೊಳ್ಳುತ್ತಲೇ ಇರುತ್ತಾರೆ. ಜುಲೈ 6 ಮತ್ತು 7 ರಂದು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಗುಂಡಿನ ಚಕಮಕಿಗಳಲ್ಲಿ ಭದ್ರತಾ ಪಡೆಗಳು ಆರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದವು. ಇದಾದ ಕೇವಲ ಒಂದು ವಾರದ ನಂತರ ಈ ಕಾರ್ಯಾಚರಣೆಯು ನಡೆದಿದೆ. ಸೈನಿಕರು ಹಾಗೂ ವಲಸೆ ಕಾರ್ಮಿಕರನ್ನು ಗುರಿಯಾಗಿಸಿ ಉಗ್ರರು ಇತ್ತೀಚೆಗೆ ದಾಳಿ ನಡೆಸುತ್ತಿದ್ದಾರೆ.

ಕುಪ್ವಾರ ಜಿಲ್ಲೆಯಲ್ಲಿ ಸೋಮವಾರ (ಜುಲೈ 15) ಯೋಧರು ಮೂವರು ಉಗ್ರರನ್ನು ಹೊಡೆದುರುಳಿಸಿದ್ದರು. ಎಲ್‌ಒಸಿಯಲ್ಲಿ ಕುಪ್ವಾರದ ಕೆರಾನ್ ಸೆಕ್ಟರ್‌ನಲ್ಲಿ ಒಳನುಸುಳುವಿಕೆಯ ಪ್ರಯತ್ನವನ್ನು ವಿಫಲಗೊಳಿಸಲಾಯಿತು. “ಕೆರಾನ್ ಸೆಕ್ಟರ್‌ನಲ್ಲಿನ ಎಲ್‌ಒಸಿಯಲ್ಲಿ ನಡೆಯುತ್ತಿರುವ ಒಳನುಸುಳುವಿಕೆ-ವಿರೋಧಿ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲಾಗಿದೆ. ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಚಿನಾರ್ ಕಾರ್ಪ್ಸ್ ಎಕ್ಸ್‌ನ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: Manorathangal Trailer: ಗಮನ ಸೆಳೆದ ʼಮನೋರಥಂಗಳ್‌ʼ ಟ್ರೈಲರ್‌; 8 ನಿರ್ದೇಶಕರ 9 ಎಪಿಸೋಡ್‌ನಲ್ಲಿ ಸ್ಟಾರ್‌ಗಳ ಸಮಾಗಮ

Continue Reading

Latest

Stuck in Lift: ಫ್ಯಾನಿಲ್ಲ, ಲೈಟಿಲ್ಲ, ಆಹಾರವಿಲ್ಲ; 2 ದಿನ ಲಿಫ್ಟ್‌ನಲ್ಲಿ ಸಿಲುಕಿದ್ದವನ ಸ್ಥಿತಿ ಹೇಗಿರಬಹುದು ಊಹಿಸಿ!

Stuck in Lift: ಸ್ಥಳೀಯ ಸಿಪಿಐ ನಾಯಕ ಮತ್ತು ಸ್ಥಳೀಯ ಶಾಸಕರ ಹಾಸ್ಟೆಲ್‌ನ ಸಿಬ್ಬಂದಿ ರವೀಂದ್ರನ್ ಅವರು ಬೆನ್ನುನೋವಿನ ಚಿಕಿತ್ಸೆಗಾಗಿ ತಿರುವನಂತಪುರಂನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಹೋಗಿದ್ದರು. ಎಕ್ಸ್-ರೇ ನಂತರ ಅವರು ಲಿಫ್ಟ್ ಮೂಲಕ ವೈದ್ಯರ ಬಳಿಗೆ ಹೋಗುತ್ತಿದ್ದಾಗ ಅದು ಸಡನ್ ಆಗಿ ನಿಂತಿದೆ. ಆಗ ಅವರು ತಮ್ಮ ಫೋನ್ ಬಳಸಿ ಲಿಫ್ಟ್ ಒಳಗೆ ಬರೆದ ಹಲವಾರು (ಸಹಾಯವಾಣಿ) ಸಂಖ್ಯೆಗಳಿಗೆ ಕಾಲ್ ಮಾಡಿದರೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. 42 ಗಂಟೆಗಳ ಕಾಲ ಲಿಫ್ಟ್ ಒಳಗೆ ಸಿಲುಕಿಕೊಂಡಿದ್ದರು. ಅವರ ಕರಾಳ ಅನುಭವ ಇಲ್ಲಿದೆ ಓದಿ.

VISTARANEWS.COM


on

Stuck in Lift
Koo

ವ್ಯಕ್ತಿ ಲಿಫ್ಟ್‌ನೊಳಗೆ ಸಿಲುಕಿಕೊಂಡು ಒದ್ದಾಡುವಂತಹ ದೃಶ್ಯಗಳನ್ನು ನಾವು ಹೆಚ್ಚು ಸಿನಿಮಾಗಳಲ್ಲಿ ನೋಡಿರುತ್ತೇವೆ. ಆದರೆ ಆಸ್ಪತ್ರೆಯೊಂದರಲ್ಲಿ 59 ವರ್ಷದ ವ್ಯಕ್ತಿಯೊಬ್ಬರು ಭರ್ತಿ 42 ಗಂಟೆಗಳ ಕಾಲ ಲಿಫ್ಟ್ (Stuck in Lift) ಒಳಗೆ ಸಿಲುಕಿಕೊಂಡಿದ್ದು, ಸುಮಾರು ಎರಡು ದಿನಗಳ ಕಾಲ ಅವರು ಲಿಫ್ಟ್‌ನೊಳಗೆ ಪರದಾಡಿದ ರೀತಿ ಕೇಳಿದರೆ ಯಾರಿಗಾದರೂ ಗಾಬರಿಯಾಗುವುದು ಖಂಡಿತ.

ಸ್ಥಳೀಯ ಸಿಪಿಐ ನಾಯಕ ಮತ್ತು ಸ್ಥಳೀಯ ಶಾಸಕರ ಹಾಸ್ಟೆಲ್‍ನ ಸಿಬ್ಬಂದಿ ರವೀಂದ್ರನ್ ಅವರು ಬೆನ್ನುನೋವಿನ ಚಿಕಿತ್ಸೆಗಾಗಿ ತಿರುವನಂತಪುರಂನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿದರು. ಎಕ್ಸ್-ರೇ ನಂತರ, ಅವರು ಲಿಫ್ಟ್‌ ಮೂಲಕ ವೈದ್ಯರ ಬಳಿಗೆ ಹೋಗುತ್ತಿದ್ದಾಗ ಅದು ಸಡನ್ ಆಗಿ ನಿಂತಿದೆ. ಆಗ ಅವರು ತಮ್ಮ ಫೋನ್ ಬಳಸಿ ಲಿಫ್ಟ್ ಒಳಗೆ ಬರೆದ ಹಲವಾರು (ಸಹಾಯವಾಣಿ) ಸಂಖ್ಯೆಗಳಿಗೆ ಕಾಲ್ ಮಾಡಿದರೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ನಂತರ ಅವರ ಫೋನ್ ಕೆಳಗೆ ಬಿದ್ದು ಹಾಳಾಗಿದೆ. ನಂತರ ಅವರು ಲಿಫ್ಟ್‌ನ ಒಂದು ಮೂಲೆಯಲ್ಲಿ ಕುಳಿತು ಯಾರಾದರೂ ಬರುತ್ತಾರೆ ಎಂದು ಕಾಯತೊಡಗಿದ್ದಾರೆ.

ಅನಿವಾರ್ಯವಾದಾಗ ಲಿಫ್ಟ್‌ನ ಒಂದು ಮೂಲೆಯಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾರೆ. ಅವರಿಗೆ ಬಾಯಾರಿಕೆ, ಹಸಿವು ಆದ ಕಾರಣ ನಿದ್ರೆ ಕೂಡ ಬರಲಿಲ್ಲ. ಅವರು ನಿಯಮಿತವಾಗಿ ಆಲರಂ ಬೆಲ್ ಅನ್ನು ಒತ್ತುತ್ತಲೇ ಇದ್ದರಂತೆ. ಲಿಫ್ಟ್ ಚೇಂಬರ್‌ನಲ್ಲಿ ಫ್ಯಾನ್ ಮತ್ತು ಬೆಳಕು ಎರಡೂ ಇರಲಿಲ್ಲ. ಸ್ವಲ್ಪ ಗಾಳಿ ಒಳಗೆ ಬರುತ್ತಿದ್ದರಿಂದ ಅವರ ಜೀವ ಉಳಿದಿದೆ. ಕೊನೆಗೆ ಅವರು ತಮ್ಮ ನೈತಿಕ ಸ್ಥೈರ್ಯವನ್ನು ಉಳಿಸಿಕೊಳ್ಳಲು, ತಮ್ಮ ಹೆಂಡತಿ ಬರೆದು ಪ್ರಕಟಿಸಿದ ಕವಿತೆಗಳನ್ನು ಮೆಲುಕು ಹಾಕಿದರಂತೆ. ಎರಡು ದಿನ ಲಿಫ್ಟ್‌ನಲ್ಲಿ ಸಿಕ್ಕಿ ಬಿದ್ದು ಹೊರ ಬಂದಿರುವ ರವೀಂದ್ರನ್ ಆ ಸಂಕಷ್ಟದ ಕ್ಷಣಗಳನ್ನು ಮೆಲುಕು ಹಾಕಿದ್ದಾರೆ.

ಇತ್ತ ಅವರ ಪತ್ನಿ ಮತ್ತು ಮಕ್ಕಳು ಅವರು ಮನೆಗೆ ಬರದಿದ್ದರೂ ತಲೆಕೆಡಿಸಿಕೊಂಡಿರಲಿಲ್ಲ. ಯಾಕೆಂದರೆ ಅವರು ಆಗಾಗ ಕೆಲಸದ ನಿಮಿತ್ತ ಮನೆಗೇ ಬರುತ್ತಿರಲಿಲ್ಲವಂತೆ. ಆದರೆ ಭಾನುವಾರ ಅವರು ಮನೆಗೆ ಹಿಂತಿರುಗದಿದ್ದಾಗ ಮತ್ತು ಅವರ ಪೋನ್‌ಗೆ ಕರೆ ಮಾಡಿದರೂ ಅದು ಸಿಗದಿದ್ದಾಗ ಅವರಿಗೆ ಚಿಂತೆ ಶುರುವಾಗಿದೆ. ಹಾಗಾಗಿ ಶಾಸಕರ ಹಾಸ್ಟೆಲ್ ಮತ್ತು ಸಿಪಿಐ ಕಚೇರಿಗೆ ಕರೆ ಮಾಡಿದಾಗ ರವೀಂದ್ರನ್ ಶನಿವಾರ ಮಧ್ಯಾಹ್ನದಿಂದ ಕಾಣೆಯಾಗಿರುವುದು ತಿಳಿದುಬಂದಿದೆ.

ಇದನ್ನೂ ಓದಿ:  ಕಾಮುಕರ ಹಾವಳಿ ಮಿತಿ‌ ಮೀರಿದೆ; ಬೀದಿ ನಾಯಿಯನ್ನೂ ಇವರು ಬಿಡುತ್ತಿಲ್ಲ! ಆಘಾತಕಾರಿ ವಿಡಿಯೊ

Stuck in Lift

ಭಾನುವಾರ ಮಧ್ಯಾಹ್ನದ ವೇಳೆಗೆ, ಅವರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ದೂರು ದಾಖಲಿಸಿದ್ದರು ಮತ್ತು ಹಾಗಾಗಿ ಅವರನ್ನು ಪೊಲೀಸರು ಹುಡುಕಾಡಿದ್ದಾರೆ. ಕೊನೆಯಲ್ಲಿ ಸೋಮವಾರ ಬೆಳಗ್ಗೆ ಲಿಫ್ಟ್ ಆಪರೇಟರ್ ನಿಧಾನವಾಗಿ ಕರ್ತವ್ಯಕ್ಕೆ ಹಾಜರಾದಾಗ ರವೀಂದ್ರನ್ ಲಿಫ್ಟ್‌ನಲ್ಲಿ ಸಿಕ್ಕಿ ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ. ತಕ್ಷಣ ಅವರನ್ನು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ತನಿಖೆಗೆ ಆದೇಶಿಸಿದ್ದು, ಲಿಫ್ಟ್ ಆಪರೇಟರ್‌ಗಳು ಸೇರಿದಂತೆ ಮೂವರನ್ನು ಅಮಾನತುಗೊಳಿಸಲಾಗಿದೆ.

Continue Reading

ದೇಶ

Alcohol Delivery: ಎಣ್ಣೆ ಪ್ರಿಯರಿಗೆ ಗುಡ್‌ ನ್ಯೂಸ್;‌ ಇನ್ನು ಸ್ವಿಗ್ಗಿಯಲ್ಲಿ ಮನೆ ಬಾಗಿಲಿಗೆ ಬರಲಿದೆ ಆಲ್ಕೋಹಾಲ್!

Alcohol Delivery: ಆನ್‌ಲೈನ್‌ ಸರಬರಾಜು ಪ್ಲಾಟ್‌ಫಾರ್ಮ್‌ಗಳಾದ ಸ್ವಿಗ್ಗಿ, ಬಿಗ್‌ಬ್ಯಾಸ್ಕೆಟ್‌, ಜೊಮ್ಯಾಟೋ ಸೇರಿ ಹಲವು ಪ್ಲಾಟ್‌ಫಾರ್ಮ್‌ಗಳ ಮೂಲಕ ಶೀಘ್ರದಲ್ಲೇ ಮನೆಯ ಬಾಗಿಲಿಗೇ ಲಿಕ್ಕರ್‌ ಬಾಟಲಿಗಳನ್ನು ಪೂರೈಸಲಾಗುತ್ತದೆ ಎಂಬುದಾಗಿ ಎಕನಾಮಿಕ್‌ ಟೈಮ್ಸ್‌ ವರದಿ ಮಾಡಿದೆ. ಕರ್ನಾಟಕದ ಬೆಂಗಳೂರು ಸೇರಿ ಹಲವು ನಗರಗಳಲ್ಲಿ ಈ ಸೌಲಭ್ಯ ಇರಲಿದೆ ಎಂಬುದು ಗಮನಾರ್ಹವಾಗಿದೆ.

VISTARANEWS.COM


on

Alcohol Delivery
Koo

ನವದೆಹಲಿ: ಪರಿಚಯದವರ ಕಣ್ಣುತಪ್ಪಿಸಿ ಬಾರ್‌ಗೆ ಹೋಗುವ ಗೋಜು, ಕೌಂಟರ್‌ನಲ್ಲಿ ಅವಸರದಲ್ಲಿಯೇ ಮದ್ಯವನ್ನು ಹೀರಿ, ಉಪ್ಪಿನಕಾಯಿ ನೆಕ್ಕಿ ಬರುವ ಗಡಿ ಬಿಡಿ ಇರಲ್ಲ, ಆಫೀಸಿನಿಂದ ಮನೆಗೆ ಬರುತ್ತಲೇ ಊಟ ಆರ್ಡರ್‌ ಮಾಡಿದಂತೆ, ಬಿಯರ್‌, ವೈನ್‌ ಸೇರಿ ಯಾವುದೇ ಮದ್ಯದ ಬಾಟಲಿಗಳನ್ನು ಇನ್ನು ಸ್ವಿಗ್ಗಿ (Swiggy), ಜೊಮ್ಯಾಟೋದಂತಹ ಆನ್‌ಲೈನ್‌ ಕಂಪನಿಗಳ ಮೂಲಕವೇ‌ ಮನೆಯ ಬಾಗಿಲಿಗೆ ತಂದು ಕೊಡುವಂತೆ (Alcohol Home Delivery) ಆರ್ಡರ್‌ ಮಾಡಬಹುದಾಗಿದೆ. ಹೌದು, ಎಣ್ಣೆ ಪ್ರಿಯರು ಓದಿರುವ ಸುದ್ದಿ, ವಾಕ್ಯಗಳು ಸರಿಯಾಗಿಯೇ ಇವೆ. ಶೀಘ್ರದಲ್ಲೇ ಕರ್ನಾಟಕ ಸೇರಿ ದೇಶಾದ್ಯಂತ ಮದ್ಯದ ಹೋಮ್‌ ಡೆಲಿವರಿ (Alcohol Delivery) ಆಗಲಿದೆ.

ಆನ್‌ಲೈನ್‌ ಸರಬರಾಜು ಪ್ಲಾಟ್‌ಫಾರ್ಮ್‌ಗಳಾದ ಸ್ವಿಗ್ಗಿ, ಬಿಗ್‌ಬ್ಯಾಸ್ಕೆಟ್‌, ಜೊಮ್ಯಾಟೋ ಸೇರಿ ಹಲವು ಪ್ಲಾಟ್‌ಫಾರ್ಮ್‌ಗಳ ಮೂಲಕ ಶೀಘ್ರದಲ್ಲೇ ಮನೆಯ ಬಾಗಿಲಿಗೇ ಲಿಕ್ಕರ್‌ ಬಾಟಲಿಗಳನ್ನು ಪೂರೈಸಲಾಗುತ್ತದೆ ಎಂಬುದಾಗಿ ಎಕನಾಮಿಕ್‌ ಟೈಮ್ಸ್‌ ವರದಿ ಮಾಡಿದೆ. ಸದ್ಯ, ನವದೆಹಲಿ, ಕರ್ನಾಟಕ, ಹರಿಯಾಣ, ಪಂಜಾಬ್‌, ತಮಿಳುನಾಡು, ಗೋವಾ ಹಾಗೂ ಕೇರಳ ರಾಜ್ಯಗಳಲ್ಲಿ ಆನ್‌ಲೈನ್‌ ಪ್ಲಾಟ್‌ಫಾರ್ಮ್‌ಗಳು ಹೋಮ್‌ ಡೆಲಿವರಿ ಕುರಿತ ಪೈಲಟ್‌ ಪ್ರಾಜೆಕ್ಟ್‌ಅನ್ನು ಕೈಗೆತ್ತಿಕೊಂಡಿದ್ದು, ಶೀಘ್ರದಲ್ಲೇ ದೇಶಾದ್ಯಂತ ಹೋಮ್‌ ಡೆಲಿವರಿ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ಆರಂಭಿಕ ಹಂತದಲ್ಲಿ ಮನೆ ಬಾಗಿಲಿಗೆ ಮದ್ಯ ಪೂರೈಸುವ ವ್ಯವಸ್ಥೆ ಜಾರಿಯಾದರೆ, ಹಂತ ಹಂತವಾಗಿ ದೇಶಾದ್ಯಂತ ನಗರ, ಪಟ್ಟಣಗಳಿಗೆ ಯೋಜನೆಯನ್ನು ವಿಸ್ತರಿಸಲಾಗುತ್ತದೆ. ಬಿಯರ್‌, ವೈನ್‌, ಕಡಿಮೆ ಬೆಲೆಯ ಲಿಕ್ಕರ್‌ಗಳನ್ನು ಮೊದಲಿಗೆ ಪೂರೈಕೆ ಮಾಡಲಾಗುತ್ತದೆ. ಗ್ರಾಹಕರು ಊಟ, ತಿಂಡಿ ಆರ್ಡರ್‌ ಮಾಡಿದಂತೆಯೇ, ಸ್ವಿಗ್ಗಿ, ಜೊಮ್ಯಾಟೋ, ಬಿಗ್‌ಬ್ಯಾಸ್ಕೆಟ್‌ ಅಪ್ಲಿಕೇಷನ್‌ಗಳ ಮೂಲಕ ಮನೆಯ ಬಾಗಿಲಿನವರೆಗೆ ಮದ್ಯವನ್ನು ಪೂರೈಸಲಾಗುತ್ತದೆ ಎಂದು ತಿಳಿದುಬಂದಿದೆ. ಇದರಿಂದ ಮದ್ಯ ಪ್ರಿಯರು ಆರಾಮವಾಗಿ ಮನೆಯಲ್ಲೇ ಕುಳಿತು ಮದ್ಯ ಸೇವನೆ ಮಾಡಬಹುದಾಗಿದೆ.

“ಭಾರತವು ಆಧುನಿಕತೆಗೆ ತೆರೆದುಕೊಂಡಿದ್ದು, ಮದ್ಯದ ಕುರಿತು ಇದ್ದ ಕಲ್ಪನೆಯೇ ಬದಲಾಗಿಹೋಗಿದೆ. ಮನೆಯಲ್ಲಿ ಟಿ.ವಿ ನೋಡುತ್ತ, ಊಟ ಮಾಡುತ್ತಲೇ ವೈನ್‌ ಹೀರುವ, ಹೆಣ್ಣುಮಕ್ಕಳು ಕೂಡ ಮದ್ಯ ಸೇವನೆ ಮಾಡುವ ಪ್ರಮಾಣ ಜಾಸ್ತಿಯಾಗಿದೆ. ಇನ್ನು, ಮಳೆ, ಚಂಡಮಾರುತ ಸೇರಿ ಯಾವುದೇ ತುರ್ತು ಸಂದರ್ಭಗಳಲ್ಲಿ ಜನ ಮದ್ಯವನ್ನು ಮಳಿಗೆಗಳಿಗೆ ಹೋಗಿ ಖರೀದಿ ಮಾಡಲು ಆಗುವುದಿಲ್ಲ. ಇದಕ್ಕೆ ಆನ್‌ಲೈನ್‌ ಡೆಲಿವರಿಯು ಪ್ರಮುಖ ಉಪಾಯವಾಗಿದೆ” ಎಂದು ಆನ್‌ಲೈನ್‌ ಪ್ಲಾಟ್‌ಫಾರ್ಮ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕೊರೊನಾ ಲಾಕ್‌ಡೌನ್‌ ಸಂದರ್ಭದಲ್ಲಿ ಕೆಲವು ಕಡೆ ಆನ್‌ಲೈನ್‌ ಮೂಲಕ ಮದ್ಯದ ಪೂರೈಕೆ ವ್ಯವಸ್ಥೆ ಜಾರಿಗೆ ಬಂದಿತ್ತಾದರೂ ಅದು ದೇಶಾದ್ಯಂತ ಜಾರಿಗೊಳಿಸಲು ಸಾಧ್ಯವಾಗಿರಲಿಲ್ಲ. ಸದ್ಯ, ದೇಶದಲ್ಲಿ ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಮಾತ್ರ ಮದ್ಯವನ್ನು ಆನ್‌ಲೈನ್‌ ಮೂಲಕ ಹೋಮ್‌ ಡೆಲಿವರಿ ಮಾಡಲಾಗುತ್ತಿದೆ. ಇನ್ನು ಕೆಲವೇ ತಿಂಗಳಲ್ಲಿ ದೇಶಾದ್ಯಂತ ಈ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Murder Case: ಮದ್ಯಪಾನ ಮಾಡಿ ಬಂದು ಅಜ್ಜಿಯನ್ನೇ ಕೊಂದ ಅಪ್ರಾಪ್ತ ಬಾಲಕ

Continue Reading
Advertisement
BMTC staff commits suicide at headquarters
ಬೆಂಗಳೂರು12 mins ago

BMTC staff : ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಬಿಎಂಟಿಸಿ ಸಿಬ್ಬಂದಿ ಆತ್ಮಹತ್ಯೆ

ಪ್ರಮುಖ ಸುದ್ದಿ18 mins ago

Uttara Kannada Rain: ಭಾರಿ ಮಳೆಗೆ ತತ್ತರಿಸಿದ ಉತ್ತರ ಕನ್ನಡ; ಭೂಕುಸಿತಕ್ಕೆ 11 ಸಾವು, ರಸ್ತೆಗಳೇ ಮಾಯ, ತೋಟ ಗದ್ದೆ ಮುಳುಗಡೆ

Pooja Khedkar
ಪ್ರಮುಖ ಸುದ್ದಿ19 mins ago

Pooja Khedkar: ಐಎಎಸ್‌ಗಾಗಿ ನಕಲಿ ಜಾತಿ, ಕಡಿಮೆ ವಯಸ್ಸು, ದರ್ಪ; ಪೂಜಾ ಖೇಡ್ಕರ್‌ ಕಳ್ಳಾಟ ಒಂದೆರಡಲ್ಲ!

Viral Video
Latest24 mins ago

Viral Video : ಡ್ಯಾನ್ಸ್‌ ಆಯ್ತು, ಹೊಡೆದಾಟವಾಯ್ತು, ಈಗ ಹುಡುಗಿಯರ ಮೇಕಪ್‌ಗೂ ಸಾಕ್ಷಿಯಾಯ್ತು ದೆಹಲಿ ಮೆಟ್ರೊ! ವಿಡಿಯೊ ನೋಡಿ

Rajnath Singh
ದೇಶ28 mins ago

Kashmir Encounter: ಸೇನಾ ಮುಖ್ಯಸ್ಥರ ಜೊತೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಮಾತುಕತೆ; ಸೇನೆಗೆ ಸಂಪೂರ್ಣ ಅಧಿಕಾರ

Model Arrest
Latest34 mins ago

Model Arrest: ತನ್ನ ಫಾಲೋವರ್ಸ್‌ಗಳನ್ನೇ ವೇಶ್ಯಾವಾಟಿಕೆಯಲ್ಲಿ ತೊಡಗಿಸುತ್ತಿದ್ದ ಖ್ಯಾತ ಮಾಡೆಲ್‌ಗೆ ಜೈಲು ಶಿಕ್ಷೆ!

Manorathangal Trailer
ಸಿನಿಮಾ41 mins ago

Manorathangal Trailer: ಗಮನ ಸೆಳೆದ ʼಮನೋರಥಂಗಳ್‌ʼ ಟ್ರೈಲರ್‌; 8 ನಿರ್ದೇಶಕರ 9 ಎಪಿಸೋಡ್‌ನಲ್ಲಿ ಸ್ಟಾರ್‌ಗಳ ಸಮಾಗಮ

CM Siddaramaiah
ಕರ್ನಾಟಕ46 mins ago

CM Siddaramaiah: ಆಸ್ತಿ ಬಗ್ಗೆ ತಪ್ಪು ಮಾಹಿತಿ; ಸಿಎಂ ವಿರುದ್ಧ ಚುನಾವಣಾ ಆಯೋಗಕ್ಕೆ ಮತ್ತೆರಡು ದೂರು

Viral News
Latest1 hour ago

Viral News: ಬಾಸ್‌ ಜತೆ ಚಕ್ಕಂದವಾಡುತ್ತಿದ್ದ ಕಿಲಾಡಿ ಪತ್ನಿ; ಡ್ರೋನ್‌ ಬಳಸಿ ಪತ್ತೆ ಹಚ್ಚಿದ ಚಾಲಾಕಿ ಗಂಡ!

Rishabh Pant
ಕ್ರಿಕೆಟ್1 hour ago

Rishabh Pant: ಸಹ ಆಟಗಾರ ಖಲೀಲ್​ ಅಹ್ಮದ್​ರನ್ನು ಸ್ವಿಮ್ಮಿಂಗ್ ಪೂಲ್‌​ಗೆ ತಳ್ಳಿ ಹಾಕಿದ ಪಂತ್​; ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ23 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌