Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ - Vistara News

ಹಾಸನ

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

Wild Animal Attack : ಕಾಫಿ ತೋಟಕ್ಕೆ ಹೊರಟಿದ್ದ ವ್ಯಕ್ತಿ ಮೇಲೆ ಕಾಡಾನೆಯೊಂದು ದಾಳಿ ಮಾಡಿ ಅಟ್ಟಾಡಿಸಿದೆ. ಡೆಂಕಣಿಕೋಟೆಯಲ್ಲಿ ಕಾಡಾನೆ ಎದುರು ಜನರು ವಿಡಿಯೋ ಮಾಡಿ ಹುಚ್ಚಾಟ ಮೆರೆದಿದ್ದಾರೆ. ಯಲ್ಲಾಪುರದಲ್ಲಿ ಮನೆಯ ಅಂಗಳದಲ್ಲಿ ಚಿರತೆ ಓಡಾಟ ನಡೆಸಿದೆ.

VISTARANEWS.COM


on

Wild Animal Attack
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ಮಲೆನಾಡು ಭಾಗದಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಜನರು ಆತಂಕದಲ್ಲೇ ದಿನದೂಡುವಂತಾಗಿದೆ. ಹಾಸನದ ಬೇಲೂರಿನ ಕಡೆಗರ್ಜೆ ಗ್ರಾಮದಲ್ಲಿ ವ್ಯಕ್ತಿಯ ಮೇಲೆ (Wild Animal Attack) ಒಂಟಿ ಸಲಗವೊಂದು ಡೆಡ್ಲಿ ಅಟ್ಯಾಕ್ (Elephant Attack) ನಡೆಸಿದೆ.

ಮಹೇಶ್‌ಗೌಡ ಎಂಬುವವರು ಮನೆಯಿಂದ ಕಾಫಿ ತೋಟದೊಳಗೆ ನಡೆದುಕೊಂಡು ಹೋಗುವಾಗ ಕಾಡಾನೆ ದಾಳಿ ಮಾಡಲು ಮುಂದಾಗಿದೆ. ಈ ವೇಳೆ ಆನೆಯಿಂದ ತಪ್ಪಿಸಿಕೊಂಡು ಓಡಿದರೂ ಬಿಡದೆ ಘೀಳಿಟ್ಟು ಅಟ್ಟಾಡಿಸಿದೆ. ಬಳಿಕ ಅಲ್ಲಿಂದ ತೋಟದೊಳಗೆ ಇದ್ದ ಮನೆ ಬಳಿ ಓಡಿ ಬಂದ ಮಹೇಶ್‌ಗೌಡ್ರು, ಕೊನೆಗೆ ಮಹಡಿಯ ಮೆಟ್ಟಿಲು ಹತ್ತಲು ಹೋಗಿದ್ದಾರೆ.

ಆದರೆ ಮಳೆ ಬಂದಿದ್ದರಿಂದ ಮೆಟ್ಟಿಲು ಹತ್ತುವಾಗ ಕಾಲು ಜಾರಿದೆ. ಆದರೂ ಮೆಟ್ಟಿಲು ಹತ್ತಿ ಮಹಡಿ ಮೇಲೆ ಹೋಗಿ ಪ್ರಾಣವನ್ನು ಉಳಿಸಿಕೊಂಡಿದ್ದಾರೆ. ಆದರೆ ಒಂಟಿ ಸಲಗ ಮಾತ್ರ ಮನೆಯ ಬಳಿಯೇ ಕಾಲಿನಿಂದ ಮಣ್ಣು ಕೆರೆಯುತ್ತ ನಿಂತಿತ್ತು. ಮಹಡಿ ಮೇಲೆ ನಿಂತಿದ್ದ ಮಹೇಶ್‌ಗೌಡ್ರು ಮೇಲೆ ದಾಳಿ ಮಾಡಲು ಯತ್ನಿಸಿದೆ. ಈ ವೇಳೆ ಮಹೇಶ್‌ ಗೌಡ್ರು ಕೈ ಮುಗಿದು ಹೊರಟು ಹೋಗುವಂತೆ ಅಂಗಲಾಚಿದ್ದಾರೆ. ಕೆಲಕಾಲ ಮನೆ ಬಳಿ ನಿಂತು ಘೀಳಿಟ್ಟ ಮದಗಜ ನಂತರ ಕಾಫಿ ತೋಟದ ಒಳಗೆ ನುಗ್ಗಿದೆ. ಕೂದಲೆಳೆ ಅಂತರದಲ್ಲಿ ಪಾರಾದ ಮಹೇಶ್‌ಗೌಡ್ರು ಬದುಕಿತು ಬಡಜೀವ ಅಂತ ನಿಟ್ಟುಸಿರು ಬಿಟ್ಟಿದ್ದಾರೆ.

ಇದನ್ನೂ ಓದಿ: Road Accident: ಓವರ್‌ ಟೇಕ್‌ ತಂದ ಆಪತ್ತು; ಬೇವಿನ ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರ ದುರ್ಮರಣ

Wild Animal Attack

ಡೆಂಕಣಿಕೋಟೆಯಲ್ಲಿ ಕಾಡಾನೆ ಎದುರು ಜನರ ಹುಚ್ಚಾಟ

ರಾಜ್ಯ ಗಡಿಭಾಗ ತಮಿಳುನಾಡಿನ ಡೆಂಕಣಿಕೋಟೆಯಿಂದ ಅಂಚೆಟ್ಟಿಗೆ ಹೋಗುವ ರಸ್ತೆಯಲ್ಲಿ ನಿಂತು ಅಡ್ಡಾಡುತ್ತಿದ್ದ ಆನೆ ಮುಂದೆ ಜನರು ಮೊಬೈಲ್‌ನಲ್ಲಿ ಸೆಲ್ಫಿ ತೆಗೆದುಕೊಂಡು ಹುಚ್ಚಾಟ ಮೆರೆದಿದ್ದಾರೆ.

ಕಾಡಾನೆಯೊಂದು ಕೆಲ ದಿನಗಳಿಂದ ಕಾಡಂಚಿನ ಗ್ರಾಮದಲ್ಲಿ ಬೀಡು ಬಿಟ್ಟಿದೆ. ನಿನ್ನೆ ಶುಕ್ರವಾರ ಸಂಜೆ ಗ್ರಾಮದ ರಸ್ತೆಯಲ್ಲಿ ಕಾಡಾನೆಯೊಂದು ಠೀಕಾಣಿ ಹಾಕಿ, ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆಯಲ್ಲಿ ಅಡ್ಡಾಡಿಕೊಂಡಿತ್ತು. ಇತ್ತ ಕಾಡಾನೆ ನೋಡಲು ಮುಗಿಬಿದ್ದ ಗ್ರಾಮಸ್ಥರು, ರಸ್ತೆಯಲ್ಲಿಯೇ ವಾಹನಗಳನ್ನು ನಿಲ್ಲಿಸಿಕೊಂಡಿದ್ದರು. ಜತೆಗೆ ಕಾಡಾನೆ ಹತ್ತಿರ ಹೋಗಿ ಫೋಟೋ ತೆಗೆಯಲು ಮುಂದಾಗಿದ್ದರು. ಇತ್ತ ಸಿಟ್ಟಿಗೆದ್ದ ಆನೆಯು ಜನರ ಕಡೆಗೆ ನುಗ್ಗಿದೆ. ಈ ವೇಳೆ ಎಲ್ಲರೂ ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಯಲ್ಲಾಪುರದಲ್ಲಿ ಮನೆಯ ಅಂಗಳದಲ್ಲಿ ಚಿರತೆ ಓಡಾಟ

ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಮಂಚಿಕೇರಿ ಅರಣ್ಯ ವ್ಯಾಪ್ತಿಯ ಶಾಸ್ತ್ರಿಜಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದೆ. ನರಸಿಂಹ ಹೆಗಡೆ ಎಂಬುವವರ ಮನೆಯ ಅಂಗಳದಲ್ಲಿ ಬೆಳಗಿನ ಜಾವ ಚಿರತೆ ಓಡಾಡಿದೆ. ಆಹಾರ ಅರಸಿ ಜನವಸತಿ ಪ್ರದೇಶಕ್ಕೆ ಬಂದಿದ್ದು, ತಿನ್ನಲು ಏನೂ ಸಿಗದೇ ಯಾರಿಗೂ ಹಾನಿ ಮಾಡದೇ ವಾಪಸ್‌ ಆಗಿದೆ. ಚಿರತೆ ಓಡಾಟದ ದೃಶ್ಯ ಮನೆಯ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ಬೆಂಗಳೂರಲ್ಲಿ ಹಾಡಹಗಲೇ‌‌ ಪುಂಡಾಟ, 15 ಮಂದಿಯಿಂದ ಯುವಕನ ಮೇಲೆ ಹಲ್ಲೆ

Viral video: 15 ಜನ ಪುಂಡರು ಒಬ್ಬ ಯುವಕನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯವನ್ನು ಸಾರ್ವಜನಿಕರು ವಿಡಿಯೋ ಸಮೇತ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಸಿಸಿಟಿವಿಯಲ್ಲೂ ಯುವಕನ ಮೇಲಿನ ಹಲ್ಲೆಯ ದೃಶ್ಯ ಸೆರೆಯಾಗಿದೆ.

VISTARANEWS.COM


on

assault case viral video
Koo

ಬೆಂಗಳೂರು: ಬೆಂಗಳೂರಿನ (Bangalore crime news) ಬೀದಿಯಲ್ಲಿ ಹಾಡಹಗಲೇ ನಡೆದ ರಾಜಾರೋಷ ಹಲ್ಲೆಯೊಂದರ (Assault Case) ದೃಶ್ಯವನ್ನು ಸಾರ್ವಜನಿಕರು ವಿಡಿಯೋ ಮಾಡಿ ಸೋಶಿಯಲ್‌ ಮೀಡಿಯಾಗಳಲ್ಲಿ (Viral Video) ಹಂಚಿಕೊಂಡಿದ್ದಾರೆ. ಸದ್ಯ ಇದು ಮೆಟ್ರೋ ನಗರದ (Metro City) ಮಾನ ತೆಗೆಯುತ್ತಿದೆ. ವಿದ್ಯಾರಣ್ಯಪುರದಲ್ಲಿ (Vidyaranyapura) ಘಟನೆ ನಡೆದಿದೆ.

15 ಜನ ಪುಂಡರು ಒಬ್ಬ ಯುವಕನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯವನ್ನು ಸಾರ್ವಜನಿಕರು ವಿಡಿಯೋ ಸಮೇತ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಸಿಸಿಟಿವಿಯಲ್ಲೂ ಯುವಕನ ಮೇಲಿನ ಹಲ್ಲೆಯ ದೃಶ್ಯ ಸೆರೆಯಾಗಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ನರಸೀಪುರ ಬಳಿ ನಡೆದ ಘಟನೆಯಿದು. ಹಲ್ಲೆಗೊಳಗಾದವನು ಹಾಗೂ ಹಲ್ಲೆ ಮಾಡಿದವರ ಕುರಿತ ವಿವರಗಳನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.

ಹಲ್ಲೆಯಿಂದ‌ ಯುವಕನ‌ ಮುಖ ಮತ್ತು ಮೂಗಿನ‌ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಈ ಕುರಿತು ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರು ಮತ್ತು ಈಶಾನ್ಯ ಡಿಸಿಪಿಗೆ ಟ್ಯಾಗ್ ಮಾಡಿ ಪೋಸ್ಟ್ ಮಾಡಲಾಗಿದೆ. ʼಬಿಎನ್‌ಎಸ್ 109 ಅಂದರೆ ಕೊಲೆ‌ ಯತ್ನ?ʼ ಎಂದು ಉಲ್ಲೇಖಿಸಿ ಪೋಸ್ಟ್‌ ಮಾಡಲಾಗಿದೆ.

ಕಲಬುರಗಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

ಕಲಬುರಗಿ: ಜಮೀನೊಂದರಲ್ಲಿ ಸುಟ್ಟಸ್ಥಿತಿಯಲ್ಲಿ ಮಹಿಳೆಯ ಶವ (Dead Body Foundಪತ್ತೆಯಾಗಿದೆ. ಕಲಬುರಗಿಯ (Kalaburagi News) ಕಮಲಾಪುರ ತಾಲೂಕಿನ ನಾಗೂರ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಮಹಿಳೆ ತಲೆ ಮೇಲೆ ಕಲ್ಲುಎತ್ತಿ ಹಾಕಿ ಕೊಲೆ ಮಾಡಲಾಗಿದ್ದು, ಬಳಿಕ ಗುರುತು ಸಿಗಬಾರದೆಂದು ಸುಟ್ಟು ಹಾಕಿದ್ದಾರೆ.

ಕಲಬುರಗಿ ನಗರದ ಜಗತ್ ಬಡಾವಣೆಯ ನಿವಾಸಿ ಬಸಮ್ಮ (45) ಮೃತ ದುರ್ದೈವಿ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಎಸ್ಪಿ ಬಿಂದುರಾಣಿ, ಎಸ್ಪಿ ಅಡ್ಡೂರು ‌ಶ್ರೀನಿವಾಸಲು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಾಗಾವ್ ಪೊಲೀಸ್ ಠಾಣಾವ್ಯಾಪ್ತಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಹತ್ಯೆಗೆ ಕಾರಣವೇನು? ಹತ್ಯೆ ಮಾಡಿದ್ದು ಯಾರು ಎಂಬುದು ತಿಳಿದು ಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಕಲಬುರಗಿಯಲ್ಲಿ ನದಿಗೆ ಹಾರಿ ಯುವಕ-ಯುವತಿ ಆತ್ಮಹತ್ಯೆ

ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕುರಿಕೋಟಾ ಸೇತುವೆಯಿಂದ ಬೆಣ್ಣೆತೋರಾ ನದಿಗೆ ಹಾರಿ ಯುವಕ- ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನೀಲ್ ಕುಮಾರ್ ಮೂಲಗೆ (37) ನದಿಗೆ ಹಾರಿ ಮೃತಪಟ್ಟವರು. ಬೆಣ್ಣೆತೋರಾ ನದಿಯಲ್ಲಿ ಅನೀಲ್ ಕುಮಾರ್ ಶವ ಪತ್ತೆಯಾಗಿದೆ. ಅನೀಲ್ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕುಣಿ ಸಂಗಾವಿ ಗ್ರಾಮದ ನಿವಾಸಿಯಾಗಿದ್ದಾರೆ. ಅನೀಲ್ ಜತೆ ನದಿಗೆ ಹಾರಿದ ಯುವತಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಸ್ಥಳಕ್ಕೆ ಮಹಾಗಾಂವ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈಜು ತಜ್ಞರ ಮೂಲಕ ಶವ ಹುಡುಕಾಟ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದು ಬಂದಿಲ್ಲ.

kalaburagi news

ಹಾಸನದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಮಗುವಿನ ಅನಾರೋಗ್ಯದಿಂದ ಮನನೊಂದ ತಂದೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಾಸನದ ಹಿಮ್ಸ್ ಆಸ್ಪತ್ರೆಯ ಕಟ್ಟಡದ ಮೇಲೇರಿದ ಬಸವರಾಯನಪುರ ಗ್ರಾಮದ ಗಂಗಸ್ವಾಮಿಯಿಂದ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳೆಬೀಡು ಸಮೀಪದ ಗ್ರಾಮದಲ್ಲಿ ಘಟನೆ ನಡೆದಿದೆ. ಗಂಗಸ್ವಾಮಿ ತನ್ನ ಎರಡು ತಿಂಗಳ ಮಗುವಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಹಿಮ್ಸ್‌ಗೆ ದಾಖಲು ಮಾಡಿದ್ದರು. ಆದರೆ ಮಗುವಿನ ಅರೋಗ್ಯ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಮುಂದಾಗಿದ್ದರು. ಇತ್ತ ಆಸ್ಪತ್ರೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಅನಾಹುತವೊಂದು ತಪ್ಪಿದೆ. ಗಂಗಸ್ವಾಮಿಯನ್ನು ಮನವೊಲಿಸಿ‌ ಕೆಳಗಿಳಿಸಿ ಬಳಿಕ ಪೊಲೀಸ್ ಠಾಣೆಗೆ ಕರೆದೊಯ್ದಲಾಗಿದೆ.

ಇದನ್ನೂ ಓದಿ: Rain News: ಮಳೆಯ ಅಬ್ಬರಕ್ಕೆ ಧಡಾರ್‌ ಎಂದು ನೆಲಕಚ್ಚಿದ ಕೊಟ್ಟಿಗೆಹಾರ ಬಸ್‌ ನಿಲ್ದಾಣ!

Continue Reading

ಮಳೆ

Karnataka Weather : ಅಬ್ಬರಿಸುತ್ತಿರುವ ಮುಂಗಾರು; ಕರಾವಳಿ, ಮಲೆನಾಡಿನಲ್ಲಿ ಇಂದು ಸಹ ಜೋರು ಮಳೆ

Karnataka Weather Forecast : ಭಾರಿ ಮಳೆಯಾಗುವ (Heavy Rain alert) ಎಚ್ಚರಿಕೆಯನ್ನೂ ನೀಡಲಾಗಿದ್ದು, ಇಂದು ಕರಾವಳಿ, ಮಲೆನಾಡಿಗೆ ರೆಡ್‌ ಅಲರ್ಟ್‌ ಹಾಗೂ ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಮಂಗಳವಾರದಂದು ಕರ್ನಾಟಕದ ಕರಾವಳಿಯಲ್ಲಿ ಭಾರೀ ಮಳೆಯಾಗುವ (Heavy rain Alert) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಇನ್ನೂ ಮಲೆನಾಡು ಸುತ್ತಮುತ್ತ ಗುಡುಗು ಸಹಿತ ಸಾಧಾರಣ ಮಳೆಯಾಗಲಿದ್ದು, ಒಳನಾಡಿನದಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಮತ್ತು ಬೀದರ್ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಲ್ಲಿ ಗಾಳಿ ಜತೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಜಿಲ್ಲೆಗಳಿಗೆ ಮುಂದುವರಿದ ಎಚ್ಚರಿಕೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Karnataka Rain : ಚಿಕ್ಕಮಗಳೂರಲ್ಲಿ ಮಳೆಗೆ ಕರೆಂಟ್‌ ಕಟ್‌; ಕೊಡಗು, ದಾವಣಗೆರೆಯ‌ಲ್ಲೂ ಅವಾಂತರ

ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯಾದ್ಯಂತ ಮಳೆಯು (Heavy rain alert) ಅಬ್ಬರಿಸುತ್ತಿದ್ದು, ಮುನ್ನೆಚ್ಚರಿಕಾ ದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ಮಂಗಳವಾರವೂ ರಜೆ ಘೋಷಣೆ (Holiday For schools) ಮಾಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಿಗೆ ರೆಡ್‌ ಅಲರ್ಟ್‌ (Karnataka Weather Forecast) ಘೋಷಣೆ ಮಾಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜು.16ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಶಿವಮೊಗ್ಗದ ಸಾಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ. ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಾಗರ ತಹಶೀಲ್ದಾರ್ ಚಂದ್ರಶೇಖರ್ ನಾಯಕ್ ರಜೆ ಘೋಷಣೆ ಮಾಡಿದ್ದಾರೆ. ಇತ್ತ ಹೊಸನಗರ ತಾಲೂಕಿನ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಮಂಗಳವಾರ ರಜೆ ಘೋಷಣೆ ಮಾಡಿ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ.

ಹಾಸನ ಜಿಲ್ಲೆಯಲ್ಲೂ ನಿರಂತರ ಮಳೆಯಾಗುತ್ತಿದ್ದು, ಸಕಲೇಶಪುರ, ಆಲೂರು, ಬೇಲೂರು, ಹಾಸನ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಅನುಮತಿ ಪಡೆದು, ರಜೆ ಘೋಷಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪಾಂಡು ಆದೇಶ ಹೊರಡಿಸಿದ್ದಾರೆ. ಸರ್ಕಾರಿ,‌ ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದು, ಜುಲೈ 20 ರಂದು ಸರಿದೂಗಿಸುಂತೆ ಆದೇಶಿಸಿದ್ದಾರೆ.

ಕೊಡಗಿನಲ್ಲಿ ಮುಂದುವರೆದ ಭಾರಿ ಗಾಳಿ ಮಳೆ ಹಿನ್ನೆಲೆಯಲ್ಲಿ ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜುಗಳಿ ರಜೆ ಘೋಷಣೆ ಮಾಡಲಾಗಿದೆ. ಕೊಡಗು ಜಿಲ್ಲೆಯಾದ್ಯಂತ ಮಂಗಳವಾರ ಒಂದು ದಿನ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Dengue Fever: ರಾಜ್ಯದಲ್ಲಿ ಸೋಮವಾರ 435 ಡೆಂಗ್ಯೂ ಪ್ರಕರಣ ಪತ್ತೆ; ಹಾಸನದಲ್ಲಿ ಬಾಲಕ ಸಾವು

Dengue Fever: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 4989 ಮಂದಿಗೆ ಟೆಸ್ಟ್‌ ಮಾಡಲಾಗಿದ್ದು, ಈ ಪೈಕಿ 435 ಮಂದಿಗೆ ಸೋಂಕು ದೃಢಪಟ್ಟಿದೆ.

VISTARANEWS.COM


on

Dengue Fever
ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂ ಜ್ವರದಿಂದ ಮೃತಪಟ್ಟ ಬಾಲಕ ರಾಜೇಶ್
Koo

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 435 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಸದ್ಯ 334 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸೋಮವಾರ ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಮಂದಿಗೆ ಡೆಂಗ್ಯೂ (Dengue Fever) ದೃಢಪಟ್ಟಿರುವುದು ಕಂಡುಬಂದಿದೆ.

ಕಳೆದ 24 ಗಂಟೆಗಳಲ್ಲಿ 4989 ಮಂದಿಗೆ ಟೆಸ್ಟ್‌ ಮಾಡಲಾಗಿದ್ದು, ಈ ಪೈಕಿ 435 ಮಂದಿಗೆ ಸೋಂಕು ದೃಢಪಟ್ಟಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಬಿಬಿಎಂಪಿ 363, ಬೆಂಗಳೂರು ನಗರ 1, ಬೆಂಗಳೂರು ಗ್ರಾಮಾಂತರ 5, ಚಿಕ್ಕಬಳ್ಳಾಪುರ 5, ಶಿವಮೊಗ್ಗ 1, ಬಾಗಲಕೋಟೆ 2, ಧಾರವಾಡ 14, ಯಾದಗಿರಿ 1, ಬಳ್ಳಾರಿ 3, ಕೊಪ್ಪಳ 4, ಮಂಡ್ಯ ಜಿಲ್ಲೆಯಲ್ಲಿ 36 ಪ್ರಕರಣ ದಾಖಲಾಗಿವೆ. ಸದ್ಯ ರಾಜ್ಯದಲ್ಲಿ ಒಟ್ಟ 334 ಸಕ್ರಿಯ ಪ್ರಕರಣಗಳು ಇವೆ.

ಜನವರಿಯಿಂದ ಇಲ್ಲಿಯವರೆಗೂ ಒಟ್ಟು 9962 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, 8 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಶೇ. 0.08 ಡೆಂಗ್ಯೂ ಸಾವಿನ ಪ್ರಮಾಣ ಇದೆ.

ಹಾಸನದಲ್ಲಿ ಶಂಕಿತ ಡೆಂಗ್ಯೂ ಜ್ವರಕ್ಕೆ ಬಾಲಕ ಬಲಿ

ಹಾಸನ: ಶಂಕಿತ ಡೆಂಗ್ಯೂ ಜ್ವರಕ್ಕೆ ಬಾಲಕ ಬಲಿಯಾಗಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಮಾಡಾಳು ಗ್ರಾಮದಲ್ಲಿ ನಡೆದಿದೆ. ರಾಜೇಶ್ (9) ಮೃತಪಟ್ಟ ಬಾಲಕ. ಗ್ರಾಮದ ಗೌರಮ್ಮ-ನಾಗರಾಜ ದಂಪತಿ ಪುತ್ರ ರಾಜೇಶ್, ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಮೂರನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ನಾಲ್ಕು ದಿನದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಅರಸೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ನೆನ್ನೆ ಹಿಮ್ಸ್‌ಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ರಾಜೇಶ್ ಮೃತಪಟ್ಟಿದ್ದಾನೆ.

ಇದನ್ನೂ ಓದಿ | Kalaburagi News : ಕಲಬುರಗಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ; ನದಿಗೆ ಹಾರಿ ಯುವಕ-ಯುವತಿ ಆತ್ಮಹತ್ಯೆ

ದ್ವಾರಬಾಗಿಲಿನ ಕಲ್ಲು ಬಿದ್ದು ಮಹಿಳೆ ಸಾವು; ನೀರಿನಲ್ಲಿ ಕೊಚ್ಚಿ ಹೋದ ಯುವಕ

Accident News

ಬಾಗಲಕೋಟೆ: ತರಕಾರಿ ಮಾರುತ್ತಿದ್ದ ಮಹಿಳೆ ಮೇಲೆ ದ್ವಾರಬಾಗಿಲಿನ ಮೇಲಿಂದ ಕಲ್ಲು ಕುಸಿದು (Accident News) ಬಿದ್ದಿದೆ. ಪರಿಣಾಮ ತೀವ್ರ ರಕ್ತಸ್ರಾವ ಆಗಿ ಸ್ಥಳದಲ್ಲೇ ಸುರೇಖಾ ಕಂಬಾರ (44) ಎಂಬಾಕೆ ಮೃತಪಟ್ಟಿದ್ದಾರೆ. ಬಾಗಲಕೋಟೆಯ ಆಲಗೂರ ಗ್ರಾಮದಲ್ಲಿ ಘಟನೆ ನಡೆದಿದೆ.

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರ ಗ್ರಾಮದ ಚಂದ್ರಾದೇವಿ ದೇವಸ್ಥಾನದ ದ್ವಾರಬಾಗಿಲಿನ ಮೇಲಿದ್ದ ಕಲ್ಲಿನ ಮೇಲೆ ಕೋತಿಯೊಂದು ಜಿಗಿದಿದೆ. ಈ ವೇಳೆ ದ್ವಾರಬಾಗಿಲಿಗೆ ತಾಗಿ ಮಹಿಳೆ ತಲೆ ಮೇಲೆ ಕಲ್ಲು ಬಿದ್ದಿದೆ. ಕಲ್ಲು ಬಿದ್ದ ರಭಸಕ್ಕೆ ಸುರೇಖಾಳ ತಲೆಯಿಂದ ರಕ್ತಸ್ರಾವವಾಗಿದ್ದು, ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಸುರೇಖ ಮೂಲತಃ ಹುನ್ನೂರು ಗ್ರಾಮದವರಾಗಿದ್ದರು. ಪ್ರತಿ ಸೋಮವಾರ ಆಲಗೂರು ಗ್ರಾಮದಲ್ಲಿ ನಡೆಯುವ ಸಂತೆಯಲ್ಲಿ ತರಕಾರಿ ಮಾರಾಟ ಮಾಡಿ ಜೀವನ ಮಾಡುತ್ತಿದ್ದರು. ಸದ್ಯ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಜಮಖಂಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Murugha mutt : ಮುರುಘಾ ಮಠದಲ್ಲಿ ಕಳುವಾಗಿದ್ದ ಬೆಳ್ಳಿ ಮೂರ್ತಿ ಪತ್ತೆ; ಗೋಣಿ ಚೀಲದಲ್ಲಿ ತಂದಿಟ್ಟು ಕಾಲ್ಕಿತ್ತ ಕಳ್ಳರು!

ಸರಣಿ ಅಪಘಾತಕ್ಕೆ ವ್ಯಕ್ತಿ ಬಲಿ

ನೈಸ್ ರಸ್ತೆಯಲ್ಲಿ ಬಳಿ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರು ಎಲೆಕ್ಟ್ರಾನಿಕ್ಸ್ ಸಿಟಿ ಟೋಲ್ ಸಮೀಪ ಸೋಮವಾರ 9 ಗಂಟೆ ಸುಮಾರಿಗೆ ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ಹಿಂದೆ ಬರುತ್ತಿದ್ದ ಕಾರು ಕೂಡ ಡಿಕ್ಕಿಯಾಗಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಓರ್ವ ವ್ಯಕ್ತಿ ಮೃತಪಟ್ಟರೆ, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಸ್ಥಳೀಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Accident Case

ಕುಣಿಗಲ್ ಮೂಲದ ದೇವರಾಜ್ (42) ಮೃತ ದುರ್ದೈವಿ. Elins ಕಂಪನಿಯ ಉದ್ಯೋಗಿಯಾದ ದೇವರಾಜ್, ಮಿನಿಬಸ್‌ನಲ್ಲಿ ಚಾಲಕನ ಪಕ್ಕ ಕುಳಿತಿದ್ದರು. ಗೊರಗುಂಟೆ ಪಾಳ್ಯದಿಂದ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶಕ್ಕೆ ಬರುತ್ತಿದ್ದ ಬಸ್, ನೈಸ್ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಗುದ್ದಿದೆ. ಮಿನಿಬಸ್ ಹಿಂಭಾಗ ಬರುತ್ತಿದ್ದ ಎರಡು ಕಾರುಗಳು ಡಿಕ್ಕಿ ಹೊಡೆದಿದೆ. ಮಿನಿ ಬಸ್ ನಲ್ಲಿದ್ದ ಓರ್ವ ಸಾವನ್ನಪ್ಪಿದ್ರೆ, ಐವರಿಗೆ ಗಂಭೀರ ಗಾಯವಾಗಿದೆ.

ಇದನ್ನೂ ಓದಿ | Harbhajan Singh : ಅಂಗವಿಕಲರಿಗೆ ಅವಮಾನ ಮಾಡಿ ಕ್ಷಮೆ ಕೋರಿದ ಹರ್ಭಜನ್​ ಸಿಂಗ್​!

ಹರಿಯುವ ನೀರಿನಲ್ಲಿ ಕೊಚ್ಚಿ ಹೋದ ಯುವಕ

ಪ್ರವಾಹದ ನೀರಲ್ಲಿ ಈಜುವ ಸಾಹಸಕ್ಕೆ ಹೋದ ಯುವಕನೊರ್ವ ಕೊಚ್ಚಿ ಹೋಗಿದ್ದಾನೆ. ಮಹಾರಾಷ್ಟ್ರದ ರತ್ನಾಗಿರಿ ಜಿಲ್ಲೆಯ ಖೇಡ ತಾಲೂಕಿನ ಶೀಲ್ಡ ಡ್ಯಾಂನಲ್ಲಿ ಘಟನೆ ನಡೆದಿದೆ. ಸ್ಥಳದಲ್ಲೇ ಹತ್ತಾರು ಜನರು ಇದ್ದರೂ ನೀರಿನ ಸೆಳತಕ್ಕೆ ರಕ್ಷಣೆ ಮಾಡಲು ಆಗಿಲ್ಲ. ಸ್ಥಳೀಯರು ಮತ್ತು ಎನ್‌ಡಿಆರ್‌ಎಫ್‌ ತಂಡದಿಂದ ಯುವಕನ ಹುಡುಕಾಟ ನಡೆಸಲಾಗುತ್ತಿದೆ. ಕಳೆದ ಎರಡು ದಿನಗಳಿಂದ ರತ್ನಾಗಿರಿ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹದ ಆತಂಕ ಹೆಚ್ಚಾಗಿದೆ. ಮೈದುಂಬಿರುವ ಹಳ್ಳ ಕೊಳ್ಳದಲ್ಲಿ ಯುವಕರು ಹುಚ್ಚಾಟ ತೋರಿ ಪ್ರಾಣಕಳೆದುಕೊಳ್ಳುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Karnataka Weather Forecast : ಶಿವಮೊಗ್ಗ ಹಾಗೂ ಹಾಸನ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು, ಮುಂಜಾಗ್ರತಾ ದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ (Heavy rain alert) ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಶಿವಮೊಗ್ಗ/ಕಾರವಾರ: ರಾಜ್ಯಾದ್ಯಂತ ಮಳೆಯು (Heavy rain alert) ಅಬ್ಬರಿಸುತ್ತಿದ್ದು, ಮುನ್ನೆಚ್ಚರಿಕಾ ದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ (Holiday For schools) ಮಾಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಿಗೆ ರೆಡ್‌ ಅಲರ್ಟ್‌ (Karnataka Weather Forecast) ಘೋಷಣೆ ಮಾಡಲಾಗಿದೆ. ಹೀಗಾಗಿ ಜು.16ಕ್ಕೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಶಿವಮೊಗ್ಗದ ಸಾಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ. ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಾಗರ ತಹಶೀಲ್ದಾರ್ ಚಂದ್ರಶೇಖರ್ ನಾಯಕ್ ರಜೆ ಘೋಷಣೆ ಮಾಡಿದ್ದಾರೆ. ಇತ್ತ ಹೊಸನಗರ ತಾಲೂಕಿನ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಮಂಗಳವಾರ ರಜೆ ಘೋಷಣೆ ಮಾಡಿ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ.

ಹಾಸನ ಜಿಲ್ಲೆಯಲ್ಲೂ ನಿರಂತರ ಮಳೆಯಾಗುತ್ತಿದ್ದು, ಸಕಲೇಶಪುರ, ಆಲೂರು, ಬೇಲೂರು, ಹಾಸನ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಅನುಮತಿ ಪಡೆದು, ರಜೆ ಘೋಷಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪಾಂಡು ಆದೇಶ ಹೊರಡಿಸಿದ್ದಾರೆ. ಸರ್ಕಾರಿ,‌ ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದು, ಜುಲೈ 20 ರಂದು ಸರಿದೂಗಿಸುಂತೆ ಆದೇಶಿಸಿದ್ದಾರೆ.

ಎಮರ್ಜೆನ್ಸಿ ಆಪರೇಷನ್ ಸೆಂಟರ್ ತೆರೆದ ಜಿಲ್ಲಾಡಳಿತ

ಉತ್ತರಕನ್ನಡ ಜಿಲ್ಲೆಗೆ ಮುಂದಿನ‌ 3 ದಿನ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ತುರ್ತು ಪರಿಸ್ಥಿತಿ ನಿರ್ವಹಣೆಗೆ ಡಿಸ್ಟ್ರಿಕ್ಟ್ ಎಮರ್ಜೆನ್ಸಿ ಆಪರೇಷನ್ ಸೆಂಟರ್ ತೆರೆದಿದೆ. ಈ ಕುರಿತು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ ಮಾಹಿತಿ ನೀಡಿದ್ದಾರೆ. ಡಿಸಿ ಕಚೇರಿಯನ್ನೇ ಕಂಟ್ರೋಲ್ ರೂಮ್‌ ಆಗಿ ಎಮರ್ಜೆನ್ಸಿ ಆಪರೇಷನ್ ಸೆಂಟರ್ ಆಗಿ ಮಾರ್ಪಾಡು ಮಾಡಲಾಗಿದೆ.

ವಿಪತ್ತು ನಿರ್ವಹಣೆ, ಪೊಲೀಸ್, ಅರಣ್ಯ, ಅಗ್ನಿಶಾಮಕ, ಹೆಸ್ಕಾಂ ಇಲಾಖೆಯಿಂದ ಒಬ್ಬೊಬ್ಬ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ತುರ್ತು ಸಂದರ್ಭದಲ್ಲಿ ಎಲ್ಲಾ ಇಲಾಖೆಯೊಂದಿಗೆ ಸಂಪರ್ಕ ಸಾಧಿಸಲು ಎಮರ್ಜೆನ್ಸಿ ಆಪರೇಷನ್ ಸೆಂಟರ್ ಮಾಡಲಾಗಿದೆ. ಎಲ್ಲೇ ಸಹಾಯ ಅಗತ್ಯವಿದ್ದರೂ ತುರ್ತು ಸ್ಪಂದನೆಗೆ ಕ್ರಮವಹಿಸಲಾಗುತ್ತದೆ. ಎಲ್ಲಾ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗೂ ಕೇಂದ್ರಸ್ಥಾನ ಬಿಡದಂತೆ ಸೂಚನೆ ನೀಡಲಾಗಿದೆ. ನೆರೆ ಪರಿಸ್ಥಿತಿಯ ಸ್ಥಳಗಳಲ್ಲಿ ಕಾಳಜಿ ಕೇಂದ್ರ ಸ್ಥಾಪನೆಗೆ ತಹಶೀಲ್ದಾರ್‌ಗಳಿಗೆ ಸೂಚನೆ ನೀಡಲಾಗಿದ್ದು ಜತೆಗೆ ಮನೆ, ಬೆಳೆ ಹಾನಿ ಕುರಿತಾಗಿಯೂ ಶೀಘ್ರದಲ್ಲಿ ಪರಿಶೀಲಿಸಿ ಪರಿಹಾರ ಒದಗಿಸಲು ಪ್ರಯತ್ನಿಸಲಾಗುವುದು ಎಂದರು.

ಇನ್ನೂ ನೌಕಾನೆಲೆ ಕಾಂಪೌಂಡ್‌ನಿಂದ ಕಾರವಾರದ ಚೆಂಡಿಯಾ ಭಾಗದಲ್ಲಿ ನೆರೆ ಪರಿಸ್ಥಿತಿ ನಿರ್ಮಾಣ ವಿಚಾರವಾಗಿಯೂ ಭೇಟಿ ನೀಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಪರಿಶೀಲಿಸಿದರು. ನೌಕಾನೆಲೆಯ ಎರಡು ಕಡೆ ಕಾಮಗಾರಿ ಪ್ರದೇಶದಲ್ಲಿ ನೀರು ಹರಿದುಹೋಗಲು ಅಡ್ಡಿಯಾಗಿದೆ. ನೀರು ಹರಿದುಹೋಗಲು ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದರು.

ಇದನ್ನೂ ಓದಿ: Karnataka Rain : ಚಿಕ್ಕಮಗಳೂರಲ್ಲಿ ಮಳೆಗೆ ಕರೆಂಟ್‌ ಕಟ್‌; ಕೊಡಗು, ದಾವಣಗೆರೆಯ‌ಲ್ಲೂ ಅವಾಂತರ

ಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಗಾಳಿ-ಮಳೆಗೆ ಬೃಹತ್ ಗಾತ್ರದ ಮರ ಉರುಳಿ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಬೈಕ್ ಸವಾರ ಪಾರಾಗಿದ್ದಾರೆ. ಕೊಪ್ಪ ತಾಲೂಕಿನ ಹೆಗ್ಗಾರು ಕುಡಿಗೆ ಸಮೀಪ ಘಟನೆ ನಡೆದಿದೆ. ಶೃಂಗೇರಿ ಹಾಗೂ ಹೊರನಾಡಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಇದಾಗಿದ್ದು, ಎರಡು ಗಂಟೆಗೂ ಹೆಚ್ಚು ಸಮಯ ಮರ ತೆರವುಗೊಳಿಸಲು ಹರಸಾಹಸ ಪಡೆಬೇಕಾಯಿತು.
ಶೃಂಗೇರಿಯಿಂದ ಹೊರನಾಡಿಗೆ ಹೋಗುವ ಪ್ರವಾಸಿಗರು, ಸ್ಥಳೀಯರು ಪರದಾಟ ಅನುಭವಿಸಿದರು. ಅರಣ್ಯ ಸಿಬ್ಬಂದಿ, ಸ್ಥಳೀಯ ಮೆಸ್ಕಾಂ ಸಿಬ್ಬಂದಿಯಿಂದ ತೆರವು ಕಾರ್ಯಾಚರಣೆ ನಡೆಸಲಾಯಿತು. ಇತ್ತ ಭಾರಿ ಗಾಳಿ ಮಳೆಗೆ ಮಲೆನಾಡಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಡಿತ್ತು.

ಪ್ರವಾಸಿಗರ ಹುಚ್ಚಾಟಕ್ಕೆ ಸ್ಥಳೀಯರು ಬೇಸರ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಹೊಸಳ್ಳಿ ಬೆಟ್ಟದಲ್ಲಿ ಪ್ರವಾಸಿಗರು ಹುಚ್ಚಾಟ ಮೆರೆದಿದ್ದಾರೆ. ಹಸಿರಿನಿಂದ ಕಂಗೊಳಿಸುತ್ತಿರುವ ಬೆಟ್ಟದ ಮೇಲೆ ವಾಹನಗಳ ಪ್ರವೇಶ ನಿಷೇಧವಿದ್ದರೂ ಮನಬಂದಂತೆ ವಾಹನಗಳನ್ನು ಚಲಾಯಿಸಿದ್ದಾರೆ. ಅಕ್ರಮವಾಗಿ ಪ್ರವೇಶ ಮಾಡಿರುವ ಕೆಲ ಯುವಕರು, ಹಸಿರು ಹುಲ್ಲಿನ ಮೇಲೆ ಡರ್ಟ್ ರೈಡ್ ಮಾಡಿ ಕೆಸರು ಗದ್ದೆಯಂತೆ ಮಾಡಿದ್ದಾರೆ. ಹೊಸಳ್ಳಿ ಬೆಟ್ಟ ಹಾಳು ಮಾಡಿರುವವರ ವಿರುದ್ಧ ಸ್ಥಳೀಯರು ಹಾಗೂ ಪರಿಸರವಾದಿಗಳು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ತುಂಗಭದ್ರ ಡ್ಯಾಂ ಹಿನ್ನಿರಿನಲ್ಲಿ ಪ್ರವಾಸಿಗರ ಹುಚ್ಚಾಟ

ವಿಜಯನಗರ ಜಿಲ್ಲೆಯ ಹೊಸಪೇಟೆ ಬಳಿ ಇರುವ ತುಂಗಾಭದ್ರ ಡ್ಯಾಂ ಹಿನ್ನಿರಿಗೆ ಪ್ರವಾಸಿಗರು ಆಗಮಿಸುತ್ತಿದ್ದಾರೆ. ನೀರಿನ ಅಲೆಗಳ ಜತೆ ಫೋಟೊ ಕ್ಲಿಕ್ಕಿಸಿಕೊಳ್ಳುವ ಸಾಹಸಕ್ಕೆ ಕೈಹಾಕಿದ್ದಾರೆ. ಪ್ರೇಮಿಗಳು , ಕಾಲೇಜು ವಿಧ್ಯಾರ್ಥಿಗಳು ಡ್ಯಾಂ ಹಿನ್ನಿರಿಗೆ ಇಳಿದು ಹುಚ್ಚಾಟ ಮೆರೆದಿದ್ದಾರೆ. ನೀರಿನ ಅಲೆಗಳ ಜತೆ ಎಂಜಾಯ್ ಮಾಡಲು ಹೋಗಿ ತಮ್ಮ ಪ್ರಾಣಕ್ಕೆ ಸಂಚಕಾರ ತಂದುಕೊಳ್ಳುತ್ತಿದ್ದಾರೆ.

ಕುಡಿದು ಸಮುದ್ರಕ್ಕೆ ಇಳಿದ ಯುವಕರು

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಕುಡ್ಲೇ ಬೀಚ್‌ನಲ್ಲಿ ಮದ್ಯಪಾನ ಮಾಡಿ ಅಪಾಯ ಲೆಕ್ಕಿಸದೇ ಪ್ರವಾಸಿಗರು ಈಜಲು ಸಮುದ್ರಕ್ಕೆ ಇಳಿದ ಘಟನೆ ನಡೆದಿದೆ. ಸಮುದ್ರದಲ್ಲಿ 40-50 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ. ಅಷ್ಟಾದರೂ ಸೂಚನೆಗಳನ್ನು ನಿರ್ಲಕ್ಷ್ಯಿಸಿ ಕಡಲಿಗೆ ಇಳಿಯುತ್ತಿದ್ದಾರೆ.

ಜೋಗ್‌ಫಾಲ್ಸ್‌ಗೆ ಹರಿದು ಬಂದ ಜನಸಾಗರ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ನಿನ್ನೆ ಭಾನುವಾರ ಒಂದೇ ದಿನ 50 ಸಾವಿರ ಪ್ರವಾಸಿಗರು ಭೇಟಿ ನೀಡಿದ್ದಾರೆ. ಶರಾವತಿ ನದಿ ಪಾತ್ರದಲ್ಲಿ ಉತ್ತಮ ಮಳೆಯಾಗಿದ್ದು, ಜೋಗ ಜಲಪಾತದ ರಾಜ, ರಾಣಿ, ರೋರರ್, ರಾಕೇಟ್ ಕವಲುಗಳು ಧುಮ್ಮಿಕ್ಕಿ ಹರಿಯುತ್ತಿದೆ. ಜೋಗ ಜಲಪಾತದ ನಯನ ಮನೋಹರ ದೃಶ್ಯ ಪ್ರವಾಸಿಗರು ಕಣ್ತುಂಬಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
valmiki corporation scam culprits
ಪ್ರಮುಖ ಸುದ್ದಿ16 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣದಲ್ಲಿ ಮತ್ತೊಬ್ಬನ ಬಂಧನ; ಛತ್ತೀಸ್‌ಗಢದಲ್ಲೂ ವಂಚಿಸಿದ್ದ!

Anant Ambani Wedding
ದೇಶ20 mins ago

Anant Ambani Wedding: ಅನಂತ್‌ ಅಂಬಾನಿ ಅದ್ಧೂರಿ ಮದುವೆಗೆ ತೆರೆ; ಕೊನೆಯ ದಿನ ನಟ ಅಕ್ಷಯ್‌ ಕುಮಾರ್‌ ಭಾಗಿ

Former MPs
ದೇಶ21 mins ago

Formers MPs: ಚುನಾವಣೆಯಲ್ಲಿ ಸೋತರೂ ಸರ್ಕಾರಿ ಬಂಗಲೆ ಬಿಡದ 200 ಮಾಜಿ ಸಂಸದರು; ನೋಟಿಸ್‌ ಜಾರಿ

Hardik Pandya
ಕ್ರೀಡೆ24 mins ago

Hardik Pandya: ರೋಡ್​ ಶೋದಲ್ಲಿ ಚಕ್ ದೇ! ಇಂಡಿಯಾ ಹಾಡಿದ ಹಾರ್ದಿಕ್​ ಪಾಂಡ್ಯ; ವಿಡಿಯೊ ವೈರಲ್​

Monkey Attack
Latest59 mins ago

Monkey Attack: ಹುಡುಗಿಯ ಮೇಲೆ ಏಕಾಏಕಿ ದಾಳಿ ಮಾಡಿದ ಕೋತಿ; ವಿಡಿಯೊ ಇದೆ

Actor Yash
ಸಿನಿಮಾ1 hour ago

Actor Yash: ಯಶ್‌ ಅಭಿನಯದ ಈ ಸೂಪರ್‌ ಹಿಟ್‌ ಚಿತ್ರ ರಿ-ರಿಲೀಸ್‌; ಎರಡೂವರೆ ವರ್ಷಗಳ ಬಳಿಕ ರಾಕಿಂಗ್‌ ಸ್ಟಾರ್‌ ಥಿಯೇಟರ್‌ಗೆ ಎಂಟ್ರಿ

assault case viral video
ವೈರಲ್ ನ್ಯೂಸ್1 hour ago

Viral Video: ಬೆಂಗಳೂರಲ್ಲಿ ಹಾಡಹಗಲೇ‌‌ ಪುಂಡಾಟ, 15 ಮಂದಿಯಿಂದ ಯುವಕನ ಮೇಲೆ ಹಲ್ಲೆ

Kashmir encounter
ದೇಶ1 hour ago

Kashmir Encounter: ಕಾಶ್ಮೀರದಲ್ಲಿ ಉಗ್ರರ ದಾಳಿಗೆ ನಾಲ್ವರು ಯೋಧರು ಹುತಾತ್ಮ; ಮುಂದುವರಿದ ಕಾರ್ಯಾಚರಣೆ

BJP MLA
ಪ್ರಮುಖ ಸುದ್ದಿ2 hours ago

BJP MLA: ಡಿಗ್ರಿ ಉಪಯೋಗಕ್ಕೆ ಬರಲ್ಲ, ಪಂಕ್ಚರ್‌ ಅಂಗಡಿ ತೆರೆಯಿರಿ; ವಿದ್ಯಾರ್ಥಿಗಳಿಗೆ ಬಿಜೆಪಿ ಶಾಸಕ ಕರೆ!

Pani Puri Machine
Latest2 hours ago

Pani Puri Machine: ಬೆಂಗಳೂರಿಗೆ ಬಂದಿದೆ ಪಾನಿಪುರಿ ನೀಡುವ ಮೆಷಿನ್! ಇದು ಹೇಗಿದೆ ನೋಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ16 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ22 hours ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ3 days ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

ಟ್ರೆಂಡಿಂಗ್‌