Anant Radhika Wedding: ಅನಂತ್ - ರಾಧಿಕಾ ವಿವಾಹದಂತೆ ಅದ್ಧೂರಿಯಾಗಿ ನಡೆದಿತ್ತು ಈ ಐದು ಮದುವೆಗಳು - Vistara News

ವಾಣಿಜ್ಯ

Anant Radhika Wedding: ಅನಂತ್ – ರಾಧಿಕಾ ವಿವಾಹದಂತೆ ಅದ್ಧೂರಿಯಾಗಿ ನಡೆದಿತ್ತು ಈ ಐದು ಮದುವೆಗಳು

ಸುಮಾರು 5000- 6000 ಕೋಟಿ ರೂಪಾಯಿ ಖರ್ಚು ಮಾಡಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ (Anant Radhika Wedding) ಅದ್ದೂರಿಯಾಗಿ ನೆರವೇರಿದೆ. ಅಂತೆಯೇ ವಿಶ್ವದ 5 ವಿವಾಹ ಕಾರ್ಯಕ್ರಮಗಳನ್ನು ಅತ್ಯಂತ ದುಬಾರಿ ವಿವಾಹಗಳು ಎಂದೇ ಪರಿಗಣಿಸಲಾಗಿದೆ. ಯಾರ ಮದುವೆ ಎಷ್ಟು ವೆಚ್ಚದಲ್ಲಿ ನಡೆದಿತ್ತು ಎಂಬುದರ ವಿವರ ಇಲ್ಲಿದೆ.

VISTARANEWS.COM


on

Anant Radhika Wedding
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಏಷ್ಯಾದ ಬಿಲಿಯನೇರ್ ಉದ್ಯಮಿ ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಅದ್ಧೂರಿ ವಿವಾಹ (Anant Radhika Wedding) ಈಗ ವಿಶ್ವದ ಗಮನ ಸೆಳೆದಿದೆ. ಅಂತೆಯೇ ಈ ಹಿಂದೆ ವಿಶ್ವದ ಗಮನ ಸೆಳೆದ ಐದು ಪ್ರಮುಖ ಅದ್ದೂರಿ ಮದುವೆಗಳು ಯಾರದ್ದು, ಹೇಗಿತ್ತು ಗೊತ್ತೇ?

ಸುಮಾರು 5000- 6000 ಕೋಟಿ ರೂಪಾಯಿ ಖರ್ಚು ಮಾಡಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಭರ್ಜರಿಯಾಗಿ ನೆರವೇರಿದೆ. ಅಂತೆಯೇ ವಿಶ್ವದ 5 ವಿವಾಹ ಕಾರ್ಯಕ್ರಮಗಳನ್ನು ಅತ್ಯಂತ ದುಬಾರಿ ವಿವಾಹಗಳು ಎಂದೇ ಪರಿಗಣಿಸಲಾಗಿದೆ.


1. ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್

1979ರಲ್ಲಿ ರಾಜಕುಮಾರಿ ಸಲಾಮಾ ಅವರನ್ನು ವಿವಾಹವಾದ ದುಬೈನ ಆಡಳಿತಗಾರ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ತಮ್ಮ ಮದುವೆಗಾಗಿ 137 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 11,44,21,50,950 ರೂಪಾಯಿ ಖರ್ಚು ಮಾಡಿದ್ದರು. ಮದುವೆಯು ಐದು ದಿನಗಳ ಕಾಲ ನಡೆಯಿತು. ಈ ಸಮಾರಂಭದಲ್ಲಿ ವಧುವಿಗೆ ಮದುವೆಯ ಉಡುಗೊರೆಗಳಾಗಿ 20 ಬೆಜೆವೆಲ್ಡ್ ಒಂಟೆಗಳನ್ನು ನೀಡಲಾಯಿತು. ಈ ಮದುವೆಯು ಅತ್ಯಂತ ದುಬಾರಿ ವಿವಾಹಕ್ಕಾಗಿ ಗಿನ್ನೆಸ್ ವಿಶ್ವ ದಾಖಲೆಯನ್ನು ಪಡೆದಿದೆ.


2. ಮೊನಾಕೊದ ಪ್ರಿನ್ಸ್ ಆಲ್ಬರ್ಟ್ II

ಮೊನಾಕೊದ ಪ್ರಿನ್ಸ್ ಆಲ್ಬರ್ಟ್ II ಮತ್ತು ಚಾರ್ಲೀನ್ ವಿಟ್‌ಸ್ಟಾಕ್ 2011ರಲ್ಲಿ ವಿವಾಹವಾಗಿದ್ದು, ಈ ರಾಜಮನೆತನದ ವಿವಾಹವು ಬಹು ದಿನಗಳ ಆಚರಣೆಗಳನ್ನು ಒಳಗೊಂಡಿತ್ತು. ಇದು ಪ್ರಿನ್ಸ್ ಅರಮನೆಯಲ್ಲಿ ನಡೆದ ಸಮಾರಂಭ. ಮೊನಾಕೊದಲ್ಲಿ ಗಣ್ಯರು ಮತ್ತು ಪ್ರಸಿದ್ಧ ವ್ಯಕ್ತಿಗಳಿಗೆ ಅದ್ದೂರಿ ಪಾರ್ಟಿಯನ್ನು ಆಯೋಜಿಸಲಾಗಿತ್ತು. ಈ ಮದುವೆಗಾಗಿ 70 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 5,847,779,000 ರೂ. ಗಳನ್ನು ಖರ್ಚು ಮಾಡಲಾಗಿತ್ತು.


3. ವನಿಶಾ ಮಿತ್ತಲ್

ಉಕ್ಕಿನ ಉದ್ಯಮಿ ಲಕ್ಷ್ಮಿ ಮಿತ್ತಲ್ ಅವರ ಮಗಳು ವನಿಶಾ ಮಿತ್ತಲ್ ಅವರು ಅಮಿತ್ ಭಾಟಿಯಾ ಅವರೊಂದಿಗೆ
2004ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಐಷಾರಾಮಿ ವಸತಿ ಮತ್ತು ಸಾಂಪ್ರದಾಯಿಕ ಆಚರಣೆಗಳಿಂದ ಗುರುತಿಸಲ್ಪಟ್ಟ ಈ ವಿವಾಹಕ್ಕೆ 66 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 5,512,392,006 ರೂ. ವೆಚ್ಚವಾಗಿತ್ತು.


4. ಪ್ರಿನ್ಸ್ ಚಾರ್ಲ್ಸ್

ಪ್ರಿನ್ಸ್ ಚಾರ್ಲ್ಸ್ ಮತ್ತು ಪ್ರಿನ್ಸೆಸ್ ಡಯಾನಾ 1981ರಲ್ಲಿ ವಿವಾಹವಾಗಿದ್ದು, ಇವರ ವಿವಾಹವು ಅತ್ಯಂತ ಸಾಂಪ್ರದಾಯಿಕ ಮತ್ತು ದುಬಾರಿ ವಿವಾಹಗಳಲ್ಲಿ ಒಂದಾಗಿದೆ. ಸೇಂಟ್ ಪಾಲ್ಸ್ ಕ್ಯಾಥೆಡ್ರಲ್‌ನಲ್ಲಿ ನಡೆದ ಈ ಮದುವೆಗೆ 750 ಮಿಲಿಯನ್ ಜನರು ಸಾಕ್ಷಿಯಾಗಿದ್ದರು. 48 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 4,007,368,656 ರೂಪಾಯಿ ವೆಚ್ಚವಾಗಿದೆ.

ಇದನ್ನೂ ಓದಿ: Anant Radhika Wedding: ಅನಂತ್ ರಾಧಿಕಾ ಮದುವೆಯಲ್ಲಿ 160 ವರ್ಷಗಳ ಹಿಂದಿನ ಸೀರೆ ಧರಿಸಿ ಮಿಂಚಿದ ಅಲಿಯಾ


5. ಪ್ರಿನ್ಸ್ ವಿಲಿಯಂ

ಪ್ರಿನ್ಸ್ ವಿಲಿಯಂ ಮತ್ತು ಕೇಟ್ ಮಿಡಲ್‌ಟನ್ 2011ರಲ್ಲಿ ವಿವಾಹವಾಗಿದ್ದು, ಅವರ ಹೆತ್ತವರ ಮದುವೆಗಿಂತ ಕಡಿಮೆ ಅತಿರಂಜಿತವಾಗಿದ್ದರೂ ಕೇಂಬ್ರಿಡ್ಜ್‌ನ ಡ್ಯೂಕ್ ಮತ್ತು ಡಚೆಸ್ ಸಂಪ್ರದಾಯದ ವಿವಾಹಗಳು ಜಾಗತಿಕವಾಗಿ ದೂರದರ್ಶನದಲ್ಲಿ ಪ್ರಸಾರ ಮಾಡಲಾಗಿತ್ತು. ಬಕಿಂಗ್ ಹ್ಯಾಮ್ ಅರಮನೆಯಲ್ಲಿ ಅದ್ದೂರಿ ಮೆರವಣಿಗೆ ಮತ್ತು ವಿಶೇಷ ಅತಿಥಿ ಸತ್ಕಾರ ಕಾರ್ಯಕ್ರಮವನ್ನು ಒಳಗೊಂಡಿತ್ತು. 34 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 2,838,056,500 ರೂಪಾಯಿ ಖರ್ಚಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿನ್ನದ ದರ

Gold Rate Today: ಮತ್ತೆ ಏರಿಕೆಯಾದ ಚಿನ್ನದ ಬೆಲೆ; ಆಭರಣ ಕೊಂಡುಕೊಳ್ಳುವ ಮುನ್ನ ದರ ಗಮನಿಸಿ

Gold Rate Today:  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 16) ಏರಿಕೆಯಾಗಿದೆ. ಸೋಮವಾರ ದರ ಇಳಿಕೆಯಾಗಿ ಗ್ರಾಹಕರು ಸಮಾಧಾನದ ನಿಟ್ಟುಸಿರು ಬಿಡುವಷ್ಟರಲ್ಲಿ ಇಂದು ಮತ್ತೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಇಂದು 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 35 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 38 ಹೆಚ್ಚಾಗಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 16) ಏರಿಕೆಯಾಗಿದೆ (Gold Rate Today). ಸೋಮವಾರ ದರ ಇಳಿಕೆಯಾಗಿ ಗ್ರಾಹಕರು ಸಮಾಧಾನದ ನಿಟ್ಟುಸಿರು ಬಿಡುವಷ್ಟರಲ್ಲಿ ಇಂದು ಮತ್ತೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಇಂದು 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 35 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 38 ಏರಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,785 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,402 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 54,280 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 67,850 ಮತ್ತು ₹ 6,78,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 59,216 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನವನ್ನು ₹ 74,020 ಮತ್ತು ₹ 7,40,200 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,800 ₹ 7,417
ಮುಂಬೈ₹ 6,785 ₹ 7,402
ಬೆಂಗಳೂರು₹ 6,785 ₹ 7,402
ಚೆನ್ನೈ₹ 6,830 ₹ 7,451

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 94.25 ಹಾಗೂ 8 ಗ್ರಾಂಗೆ ₹ 754 ಇದೆ. 10 ಗ್ರಾಂಗೆ ₹ 942.50 ಹಾಗೂ 1 ಕಿಲೋಗ್ರಾಂಗೆ ₹ 94,250 ಬೆಲೆ ಬಾಳುತ್ತದೆ.

ಚಿನ್ನ ಯಾಕೆ ದುಬಾರಿಯಾಗುತ್ತಿದೆ?

ಚಿನ್ನದಲ್ಲಿ ಹೂಡಿಕೆ ಸುರಕ್ಷಿತವಾಗಿರುವುದರಿಂದಲೇ ಚಿನ್ನ ಹೆಚ್ಚು ದುಬಾರಿಯಾಗುತ್ತಿದೆ. ಆರ್ಥಿಕ ಅನಿಶ್ಚಿತತೆ, ಭೌಗೋಳಿಕ, ರಾಜಕೀಯ ಪ್ರಕ್ಷುಬ್ಧತೆಯ ಅವಧಿಯಲ್ಲಿ ಸ್ಥಿರತೆಯನ್ನು ಬಯಸುವ ಹೂಡಿಕೆದಾರರಿಗೆ ಚಿನ್ನದ ಮೇಲಿನ ಹೂಡಿಕೆಯು ಹೆಚ್ಚು ಸುರಕ್ಷಿತವಾಗಿ ಕಾಣುತ್ತಿದೆ. ಹೀಗಾಗಿಯೇ ಚಿನ್ನದ ದರ ಗಗನಕ್ಕೇರುತ್ತಿದೆ.

ಹಣದುಬ್ಬರ: ಚಿನ್ನವನ್ನು ಸಾಮಾನ್ಯವಾಗಿ ಹಣದುಬ್ಬರದ ವಿರುದ್ಧ ಹೂಡಿಕೆ ಎಂದು ಪರಿಗಣಿಸಲಾಗಿದೆ. ದೇಶದಲ್ಲಿ ಹೊಸ ನೋಟು, ನಾಣ್ಯಗಳನ್ನು ಹೊರತರಬೇಕಾದರೆ ಅಷ್ಟೇ ಪ್ರಮಾಣದ ಚಿನ್ನವನ್ನು ಆರ್‌ಬಿಐ ತೆಗೆದಿರುಸುತ್ತದೆ. ದೇಶದಲ್ಲಿ ಹಣದುಬ್ಬರದ ಒತ್ತಡದಿಂದಾಗಿ ಕರೆನ್ಸಿಗಳ ಮೌಲ್ಯ ಕಡಿಮೆಯಾಗುತ್ತದೆ. ಆಗ ಚಿನ್ನದ ಬೆಲೆ ತನ್ನಿಂತಾನೇ ಏರಿಕೆಯಾಗುತ್ತದೆ. ಈ ಮೂಲಕ ದೇಶದಲ್ಲಿ ಕರೆನ್ಸಿಗಳ ಮೌಲ್ಯ ಕಾಪಾಡಿಕೊಳ್ಳಬಹುದು.

ಜಾಗತಿಕ ಉದ್ವಿಗ್ನತೆಗಳು: ಇತ್ತೀಚಿನ ದಿನಗಳಲ್ಲಿ ಭೌಗೋಳಿಕ, ರಾಜಕೀಯ ಘರ್ಷಣೆಗಳು ಮಾರುಕಟ್ಟೆಯ ಅಸ್ಥಿರತೆಯನ್ನು ಉಂಟು ಮಾಡುತ್ತಿದೆ. ಇದು ಹೂಡಿಕೆದಾರರಿಗೆ ಚಿನ್ನದಂತಹ ಸುರಕ್ಷಿತ ಸ್ವತ್ತುಗಳನ್ನು ಖರೀದಿಸಲು ಪ್ರೇರೇಪಿಸುತ್ತದೆ. ಭೌಗೋಳಿಕ ರಾಜಕೀಯ ಅನಿಶ್ಚಿತತೆಯ ಸಮಯದಲ್ಲಿ ಅದು ಮೌಲ್ಯವನ್ನು ಉಳಿಸಿಕೊಳ್ಳುತ್ತದೆ. ಉಕ್ರೇನ್‌ ಯುದ್ಧ ಮುಂದುವರಿಯುತ್ತಿರುವಾಗಲೇ ಈಗ ಇರಾನ್‌-ಇಸ್ರೇಲ್‌ ಯುದ್ಧದ ಛಾಯೆ ಆವರಿಸಿದೆ. ಇಂಥ ಸನ್ನಿವೇಶದಲ್ಲಿ ಸಹಜವಾಗಿಯೇ ಚಿನ್ನದ ಮೇಲಿನ ಹೂಡಿಕೆ ಹೆಚ್ಚುತ್ತದೆ. ಆಗ ದರ ಏರಿಕೆಯಾಗುತ್ತದೆ.

ಚೀನಾದ ಪ್ರಭಾವ: ಇತ್ತೀಚೆಗೆ ಚೀನಾದಲ್ಲಿ ಚಿನ್ನದ ಬೇಡಿಕೆ ಹೆಚ್ಚುತ್ತಿದೆ. ಚೀನಾದ ಸೆಂಟ್ರಲ್ ಬ್ಯಾಂಕ್ ತನ್ನ ಸಂಗ್ರಹಕ್ಕೆ ಗಣನೀಯ ಪ್ರಮಾಣದ ಚಿನ್ನವನ್ನು ಸೇರಿಸುತ್ತಿದೆ. ಇದು ಅಮೆರಿಕ ಮತ್ತು ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ.

ಕಡಿಮೆ ಬಡ್ಡಿ ದರಗಳು: ಬ್ಯಾಂಕ್‌ಗಳಲ್ಲಿ ಬಡ್ಡಿ ದರಗಳು ಕಡಿಮೆಯಾದಾಗ ಜನರಲ್ಲಿ ಹಣದ ಹರಿವಿನ ಪ್ರಮಾಣ ಹೆಚ್ಚಳವಾಗುತ್ತದೆ. ಇದರಿಂದ ಚಿನ್ನ ಖರೀದಿ ಪ್ರಮಾಣ ಹೆಚ್ಚಾಗುತ್ತದೆ. ಇದು ಚಿನ್ನದ ಹೆಚ್ಚಿನ ಬೇಡಿಕೆ ಮತ್ತು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತದೆ.

ಹೂಡಿಕೆ ಮಾಡಬಹುದೆ?: ಚಿನ್ನದ ಬೆಲೆಗಳು ಹೆಚ್ಚಾದಾಗ ಸಾಮಾನ್ಯವಾಗಿ ಇದು ಗ್ರಾಹಕರ ಖರೀದಿ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಮೊದಲೇ ಚಿನ್ನದ ಮೇಲೆ ಹೂಡಿಕೆ ಮಾಡಬೇಕು. ಇದರಿಂದ ಮಾರುಕಟ್ಟೆಯಲ್ಲಿ ಏರಿಳಿತದ ಅಪಾಯ ಕೊಂಚ ಕಡಿಮೆಯಾಗುತ್ತದೆ. ಹೂಡಿಕೆಯ ಉದ್ದೇಶವನ್ನು ಮೊದಲೇ ನಿರ್ಣಯಿಸುವುದು ಮತ್ತು ಪರ್ಯಾಯ ಮಾರ್ಗಗಳನ್ನು ಅನ್ವೇಷಿಸುವುದು ಕೂಡ ಬಹಳ ಮುಖ್ಯ. ಉದಾಹರಣೆಗೆ ಮದುವೆ ಅಥವಾ ಹಬ್ಬಗಳಂತಹ ವಿಶೇಷ ಸಂದರ್ಭಗಳಲ್ಲಿ ಚಿನ್ನವನ್ನು ಖರೀದಿಸುವ ಉದ್ದೇಶ ಮೊದಲೇ ಇರುತ್ತದೆ. ಇದಕ್ಕೆ ಮುಂಚಿತವಾಗಿ ಹೂಡಿಕೆ ಮಾಡಬಹುದು. ಇದರಿಂದ ಬೆಲೆಗಳು ಸ್ಥಿರವಾಗಿದ್ದಾಗ ತಕ್ಷಣ ಖರೀದಿ ಮಾಡಬಹುದು.

ಇದನ್ನೂ ಓದಿ: One Nation One Rate: ಚಿನ್ನಕ್ಕೆ ದೇಶಾದ್ಯಂತ ಒಂದೇ ದರ! ಹೊಸ ನಿಯಮ ಶೀಘ್ರ ಜಾರಿ ಸಾಧ್ಯತೆ

    Continue Reading

    ವಾಣಿಜ್ಯ

    Anant Radhika Wedding: ನಮ್ಮಿಂದ ಏನಾದರು ತಪ್ಪಾಗಿದ್ದರೆ ದಯವಿಟ್ಟು ಕ್ಷಮಿಸಿ; ನೀತಾ ಅಂಬಾನಿ ವಿನಮ್ರ ಮನವಿ!

    ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆ (Anant Radhika Wedding) ಪ್ರಯುಕ್ತ ನೀತಾ ಅಂಬಾನಿಯವರು ಪಾಪರಾಜಿಗಳಿಗೆ ಧನ್ಯವಾದ ಹೇಳಲು ಮತ್ತು ಸೋಮವಾರದ ವಿಶೇಷ ಆಚರಣೆಗೆ ಅವರನ್ನು ಸ್ವಾಗತಿಸಿದ್ದು ಇದನ್ನು ಸಾಮಾಜಿಕ ಜಾಲತಾಣದಲ್ಲಿ ನೆಟಿಜನ್‌ಗಳು ಶ್ಲಾಘಿಸಿದ್ದಾರೆ. ನೀತಾ ಅಂಬಾನಿ ಅವರ ಹೇಳಿಕೆಯ ವಿಡಿಯೊ ಇಲ್ಲಿದೆ.

    VISTARANEWS.COM


    on

    By

    Anant Radhika Wedding
    Koo

    ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆಗೆ (Anant Radhika Wedding) ನೀತಾ ಅಂಬಾನಿ (nita ambani) ವೈಯಕ್ತಿಕವಾಗಿ (ಮಾಧ್ಯಮ ಛಾಯಾಗ್ರಾಹಕರು) ಪಾಪರಾಜಿಗಳನ್ನು (paparazzi) ಆಹ್ವಾನಿಸುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ. ಇದು ಈಗ ಸಾಕಷ್ಟು ಮಂದಿಯ ಗಮನ ಸೆಳೆದಿದೆ.

    ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆ ಪ್ರಯುಕ್ತ ನಡೆದ ಮಂಗಲ್ ಉತ್ಸವ ಅಥವಾ ಅದ್ಧೂರಿ ವಿವಾಹದ ಆರತಕ್ಷತೆಯಲ್ಲಿ ಸಾಕಷ್ಟು ಗಣ್ಯರು ಪಾಲ್ಗೊಂಡಿದ್ದರು.

    ಈ ಸಂದರ್ಭದಲ್ಲಿ ಎ.ಆರ್. ರೆಹಮಾನ್ ಮತ್ತು ಶ್ರೇಯಾ ಘೋಷಾಲ್ ಅವರಿಬ್ಬರ ಸಂಗೀತ ಕಛೇರಿಯನ್ನು ನಡೆಸಿಕೊಟ್ಟರು. ಧೀರೂಬಾಯಿ ಅಂಬಾನಿಯವರ ಜೀವನವನ್ನು ಆಧರಿಸಿದ ಸಂಗೀತ ಕಾರ್ಯಕ್ರಮದ ವಿಡಿಯೋಗಳನ್ನು ಆನ್‌ಲೈನ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

    ಈ ನಡುವೆ ನೀತಾ ಅಂಬಾನಿಯವರು ಪಾಪರಾಜಿಗಳಿಗೆ ಧನ್ಯವಾದ ಹೇಳಲು ಮತ್ತು ಸೋಮವಾರದ ವಿಶೇಷ ಆಚರಣೆಗೆ ಅವರನ್ನು ಸ್ವಾಗತಿಸಿದ್ದು ಇದನ್ನು ಸಾಮಾಜಿಕ ಜಾಲತಾಣದಲ್ಲಿ ನೆಟಿಜನ್‌ಗಳು ಶ್ಲಾಘಿಸಿದ್ದಾರೆ.


    ಈ ವಿಡಿಯೋದಲ್ಲಿ ನೀತಾ ಅಂಬಾನಿ, ನಿಮ್ಮ ತಾಳ್ಮೆ ಮತ್ತು ತಿಳುವಳಿಕೆಗೆ ಧನ್ಯವಾದಗಳು. ಯಾವುದಾದರೂ ತಪ್ಪಾಗಿದ್ದರೆ ದಯವಿಟ್ಟು ನಮ್ಮನ್ನು ಕ್ಷಮಿಸಿ. ಯಾಕೆಂದರೆ ನಮ್ಮದು ಈಗ ಮದುವೆ ನಡೆಯುತ್ತಿರುವ ಮನೆ. ನಾಳೆ ನಮ್ಮ ಅತಿಥಿಗಳಾಗಿ ಬನ್ನಿ, ನೀವೆಲ್ಲರೂ ಆಹ್ವಾನವನ್ನು ಸ್ವೀಕರಿಸಿದ್ದೀರಿ. ನಮ್ಮ ಅತಿಥಿಗಳಾಗಿ ನಾಳೆ ನಿಮ್ಮನ್ನು ಸ್ವಾಗತಿಸಲು ನಾವು ಎದುರು ನೋಡುತ್ತಿದ್ದೇವೆ. ದಯವಿಟ್ಟು ನಿಮ್ಮ ಕುಟುಂಬಗಳೊಂದಿಗೆ ಬನ್ನಿ ಎಂದು ಪಾಪರಾಜಿಗಳನ್ನು ಆಮಂತ್ರಿಸಿದರು.

    ಇದನ್ನೂ ಓದಿ: Anant Ambani Wedding: ಕೌಟುಂಬಿಕ ಮುನಿಸು ಮರೆತು ವರನೊಂದಿಗೆ ಜತೆಯಾಗಿ ಹೆಜ್ಜೆ ಹಾಕಿದ ಮುಖೇಶ್ ಅಂಬಾನಿ-ಅನಿಲ್ ಅಂಬಾನಿ

    ಈ ಕಾರ್ಯಕ್ರಮದ ಮೂಲಕ ಅವರು ಪಾಪರಾಜಿಗಳ ಮನ ಗೆದ್ದಿರುವುದು ಮಾತ್ರವಲ್ಲ ಅವರ ವಿನಮ್ರಗೆ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದೆ.

    ಜುಲೈ 12 ರಂದು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅದ್ಧೂರಿ ವಿವಾಹದ ವಿಧಿವಿಧಾನಗಳ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈ ಸಮಾರಂಭಕ್ಕೆ ಸಾಕ್ಷಿಯಾಗಲು ಪ್ರಪಂಚದಾದ್ಯಂತದ ಹಲವಾರು ಅತಿಥಿಗಳು ಸಾಕ್ಷಿಯಾಗಿದ್ದರು. ಕಿಮ್, ಕ್ಲೋಯ್ ಕಾರ್ಡಶಿಯಾನ್, ಪ್ರಿಯಾಂಕಾ ಚೋಪ್ರಾ, ನಿಕ್ ಜೋನಾಸ್, ಮತ್ತು ಜಾನ್ ಸೆನಾ ಸೇರಿದಂತೆ ಹಲವಾರು ಅಂತಾರಾಷ್ಟ್ರೀಯ ರಾಜಕಾರಣಿಗಳು ಹಾಗೂ ಖ್ಯಾತನಾಮರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲು ಮುಂಬಯಿಗೆ ಆಗಮಿಸಿದ್ದರು.

    Continue Reading

    ದೇಶ

    Anant Ambani Wedding: ಮಗನ ಮದುವೆಯಲ್ಲಿ ರಿಲಯನ್ಸ್ ಉದ್ಯೋಗಿಗಳಿಗೂ ಭರ್ಜರಿ ಔತಣ ನೀಡಿದ ಮುಖೇಶ್ ಅಂಬಾನಿ

    Anant Ambani Wedding: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ ಅವರ ವಿವಾಹವು ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿದೆ. ಈ ಹಿನ್ನೆಲೆಯಲ್ಲಿ ಅಂಬಾನಿ ಕುಟುಂಬ 4 ದಿನಗಳ ಕಾಲ ವೈಭವದ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಸೋಮವಾರ ತೆರೆ ಬಿದ್ದಿದ್ದು, ಕೊನೆಯ ದಿನ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಪಾಲ್ಗೊಂಡಿದ್ದರು.

    VISTARANEWS.COM


    on

    Anant Ambani Wedding
    Koo

    ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಕೇಶ್ ಅಂಬಾನಿ (Mukesh Ambani) ಅವರ ಕಿರಿಯ ಪುತ್ರ ಅನಂತ್ ಅಂಬಾನಿ (Anant Ambani Wedding) ಮತ್ತು ಕೈಗಾರಿಕೋದ್ಯಮಿ ವೀರೇನ್ ಮರ್ಚಂಟ್‌ ಅವರ ಪುತ್ರಿ ರಾಧಿಕಾ ಮರ್ಚಂಟ್‌ (Radhika Merchant) ಅವರ ವಿವಾಹವು ಮುಂಬೈನಲ್ಲಿ ಅದ್ಧೂರಿಯಾಗಿ ನೆರವೇರಿದೆ. ಈ ಹಿನ್ನೆಲೆಯಲ್ಲಿ ಅಂಬಾನಿ ಕುಟುಂಬ 4 ದಿನಗಳ ಕಾಲ ವೈಭವದ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಸೋಮವಾರ ತೆರೆ ಬಿದ್ದಿದೆ. ಕೊನೆಯ ದಿನವಾದ ಸೋಮವಾರ ಜಿಯೋ ವರ್ಲ್ಡ್ ಡ್ರೈವ್‌ನಲ್ಲಿ ಮಾಧ್ಯಮ ಪ್ರತಿನಿಧಿಗಳು, ರಿಲಯನ್ಸ್ ಉದ್ಯೋಗಿಗಳು ಮತ್ತು ಅಂಬಾನಿ ಕುಟುಂಬದ ಸಿಬ್ಬಂದಿಗೆ ವಿಶೇಷ ಸಮಾರಂಭ ಆಯೋಜಿಸಲಾಗಿತ್ತು.

    ಮಾಧ್ಯಮಗಳು ಮತ್ತು ರಿಲಯನ್ಸ್‌ ಸಿಬ್ಬಂದಿಗೆಂದು ವಿಶೇಷವಾಗಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಪಾಲ್ಗೊಂಡಿದ್ದರು. ಅಕ್ಷಯ್‌ ಕುಮಾರ್‌ ಅವರಿಗೆ ಕೋವಿಡ್ ಬಾಧಿಸಿದ್ದ ಹಿನ್ನೆಲೆಯಲ್ಲಿ ಅವರು ಮದುವೆಯಲ್ಲಿ ಪಾಲ್ಗೊಂಡಿರಲಿಲ್ಲ. ಹೀಗಾಗಿ ಸೋಮವಾರ ಅವರು ಸಮಾರಂಭದಕ್ಕೆ ಪತ್ನಿ ಟ್ವಿಂಕಲ್‌ ಖನ್ನಾ ಜತೆಗೆ ಆಗಮಿಸಿದ ವಧು-ವರರಿಗೆ ಶುಭಾಶಯ ತಿಳಿಸಿದ್ದರು.

    ಯಾರೆಲ್ಲ ಭಾಗಿ?

    ಅಂಬಾನಿ ಆಸ್ತಿಗಳ ಹೌಸ್ ಕೀಪಿಂಗ್, ಸೆಕ್ಯುರಿಟಿ, ಸೆಕ್ರೆಟರಿಯಲ್‌ ಮತ್ತು ನಿರ್ವಹಣಾ ವಿಭಾಗಗಳ ಉದ್ಯೋಗಿಗಳು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ. ಸಾವಿರಾರು ಕಾರ್ಮಿಕರು ಮತ್ತು ಅವರ ಕುಟುಂಬಗಳ ಜತೆಗೆ ಮಾಧ್ಯಮ ಪ್ರತಿನಿಧಿಗಳೂ ಪಾಲ್ಗೊಂಡಿದ್ದರು. ಈ ಮೂಲಕ ಅನಂತ್‌-ರಾಧಿಕಾ ಮದುವೆಯ ಆಚರಣೆಗೆ ತೆರೆ ಎಳೆಯಲಾಗಿದೆ.

    ಗಣ್ಯರ ದಂಡೇ ಉಪಸ್ಥಿತಿ

    ಸಮಾರಂಭಕ್ಕೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ಕೂಡ ಆಗಮಿಸಿ ಮದುಮಕ್ಕಳನ್ನು ಆಶೀರ್ವದಿಸಿದ್ದರು. ಜತೆಗೆ ನಟ-ನಟಿಯರು, ಕ್ರಿಕೆಟಿಗರು, ಬೇರೆ ದೇಶಗಳ ನಾಯಕರಿಂದ ಹಿಡಿದು ಸಾವಿರಾರು ಗಣ್ಯರು, ಸೆಲೆಬ್ರಿಟಿಗಳು ಪಾಲ್ಗೊಂಡಿದ್ದರು. ಮಹೇಂದ್ರ ಸಿಂಗ್‌ ಧೋನಿ, ಅಮಿತಾಭ್‌ ಬಚ್ಚನ್‌, ಯಶ್‌, ದೀಪಿಕಾ ಪಡುಕೋಣೆ, ಆಲಿಯಾ ಭಟ್‌, ರಣವೀರ್‌ ಸಿಂಗ್‌, ರಣಬೀರ್‌ ಕಪೂರ್‌, ಅನನ್ಯಾ ಪಾಂಡೆ, ರಜನಿಕಾಂತ್‌, ಮಹೇಶ್‌ ಬಾಬು, ಹಾರ್ದಿಕ್‌ ಪಾಂಡ್ಯ, ಐಶ್ವರ್ಯಾ ರೈ, ದಿಶಾ ಪಟಾಣಿ, ನಯನತಾರಾ, ವಿಘ್ನೇಶ್‌ ಶಿವನ್‌, ಜೆನಿಲಿಯಾ, ರಿತೇಶ್‌ ದೇಶ್‌ಮುಖ್‌, ಮಾಧುರಿ ದೀಕ್ಷಿತ್‌, ಶಾರುಖ್‌ ಖಾನ್‌, ಸಲ್ಮಾನ್‌ ಖಾನ್‌, ಸೂರ್ಯ, ಜ್ಯೋತಿಕಾ, ರಶ್ಮಿಕಾ ಮಂದಣ್ಣ, ಪ್ರಿಯಾಂಕಾ ಚೋಪ್ರಾ, ಬ್ರಿಟನ್‌ ಮಾಜಿ ಪ್ರಧಾನಿಗಳಾದ ಬೋರಿಸ್‌ ಜಾನ್ಸನ್‌, ಟೋನಿ ಬ್ಲೇರ್‌ ಸೇರಿ ಹಲವು ಗಣ್ಯರು ಪಾಲ್ಗೊಂಡಿದ್ದರು.

    ಇದನ್ನೂ ಓದಿ: ಧೋನಿಯಿಂದ ರಜನಿಕಾಂತ್‌ವರೆಗೆ; ಅನಂತ್‌ ಅಂಬಾನಿ ಮದುವೆಯಲ್ಲಿ ಪಾಲ್ಗೊಂಡ ಗಣ್ಯರ ಫೋಟೊ, ವಿಡಿಯೊಗಳು ಇಲ್ಲಿವೆ

    5 ಸಾವಿರ ಕೋಟಿ ರೂ. ಖರ್ಚು

    ಅದ್ಧೂರಿ ವಿವಾಹ ಸಮಾರಂಭಕ್ಕೆ ಅಂದಾಜು ವೆಚ್ಚ 4,000ರಿಂದ 5000 ಕೋಟಿ ರೂ. ಎನ್ನಲಾಗಿದೆ. ಇದು ಅವರ ನಿವ್ವಳ ಆದಾಯದ ಶೇ. 0.5ರಷ್ಟು ಮಾತ್ರ! ವರದಿಗಳ ಪ್ರಕಾರ ಮುಖೇಶ್ ಅಂಬಾನಿ ಅವರ ನಿವ್ವಳ ಆದಾಯ ಮೌಲ್ಯವು 7.65 ಲಕ್ಷ ಕೋಟಿ ರೂ. ಮಾರ್ಚ್‌ನಲ್ಲಿ ಮದುವೆಯ ಪೂರ್ವಭಾವಿ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆದಿತ್ತು. ಅಂಬಾನಿ ಕುಟುಂಬದ ವಿವಾಹ ಕಾರ್ಯಕ್ರಮದಲ್ಲಿ ಜಾಗತಿಕ ಗಾಯನ ಐಕಾನ್‌ಗಳಾದ ಜಸ್ಟಿನ್ ಬೀಬರ್, ರಿಹಾನ್ನಾ, ದಿಲ್ಜಿತ್ ದೋಸಾಂಜ್ ಸೇರಿದಂತೆ ಹಾಲಿವುಡ್‌-ಬಾಲಿವುಡ್‌ನ ಅನೇಕ ಸೆಲೆಬ್ರಿಟಿಗಳು ಪಾಲ್ಗೊಂಡಿದ್ದರು.

    Continue Reading

    ಕರ್ನಾಟಕ

    Tata Motors: ಟಾಟಾ ಮೋಟರ್ಸ್‌ನಿಂದ ‘ಆಟೋಮೋಟಿವ್ ಸ್ಕಿಲ್ ಲ್ಯಾಬ್ಸ್’ ಮೂಲಕ 4000 ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ

    Tata Motors: ಟಾಟಾ ಮೋಟಾರ್ಸ್ ಕಂಪನಿಯು ನವೋದಯ ವಿದ್ಯಾಲಯ ಸಮಿತಿ (ಎನ್‌ವಿಎಸ್) ಸಹಯೋಗದ ಮೂಲಕ ಜವಾಹರ್ ನವೋದಯ ವಿದ್ಯಾಲಯಗಳಲ್ಲಿ (ಜೆಎನ್‌ವಿ) ‘ಆಟೋಮೋಟಿವ್ ಸ್ಕಿಲ್ ಲ್ಯಾಬ್ಸ್’ ಸ್ಥಾಪಿಸಿದೆ. ಇಲ್ಲಿಯವರೆಗೂ ಮಹಾರಾಷ್ಟ್ರ, ಕರ್ನಾಟಕ, ಗುಜರಾತ್, ಜಾರ್ಖಂಡ್, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಆಯ್ದ ಜೆಎನ್‌ವಿಗಳಲ್ಲಿ ಅಗತ್ಯ ಉಪಕರಣಗಳಿಂದ ಸುಸಜ್ಜಿತಗೊಂಡ 25 ಲ್ಯಾಬ್‌ಗಳನ್ನು ಸ್ಥಾಪಿಸಲಾಗಿದ್ದು, ಈ ವಿಶಿಷ್ಟವಾದ ಔದ್ಯಮಿಕ- ಶೈಕ್ಷಣಿಕ ಜಂಟಿ ಉಪಕ್ರಮದ ಮೂಲಕ ವರ್ಷದಲ್ಲಿ ಸುಮಾರು 4000 ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಆಟೋಮೋಟಿವ್ ಕೌಶಲ್ಯಗಳನ್ನು ಕಲಿಸುವ ಮೂಲಕ ಆಟೋಮೋಟಿವ್ ಕ್ಷೇತ್ರಕ್ಕೆ ಬೇಕಾದ ಉದ್ಯೋಗಿಗಳನ್ನಾಗಿ ಸಜ್ಜುಗೊಳಿಸಲಾಗುತ್ತದೆ.

    VISTARANEWS.COM


    on

    Automotive skill training for 4000 students through Automotive Skill Labs by Tata Motors
    Koo

    ಬೆಂಗಳೂರು: ಯುವ ಪ್ರತಿಭೆಗಳನ್ನು ಬೆಳೆಸುವ ಮತ್ತು ಆಟೋಮೋಟಿವ್ ಉದ್ಯಮಕ್ಕೆ ಬೇಕಾಗುವ ನುರಿತ ಉದ್ಯೋಗಿಗಳನ್ನು ಸಿದ್ಧಗೊಳಿಸುವ ನಿಟ್ಟಿನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು (Tata Motors) ನವೋದಯ ವಿದ್ಯಾಲಯ ಸಮಿತಿ (ಎನ್‌ವಿಎಸ್) ಸಹಯೋಗದ ಮೂಲಕ ಜವಾಹರ್ ನವೋದಯ ವಿದ್ಯಾಲಯಗಳಲ್ಲಿ (ಜೆಎನ್‌ವಿ) ‘ಆಟೋಮೋಟಿವ್ ಸ್ಕಿಲ್ ಲ್ಯಾಬ್ಸ್’ ಸ್ಥಾಪಿಸಿದೆ.

    ಇಲ್ಲಿಯವರೆಗೂ ಮಹಾರಾಷ್ಟ್ರ, ಕರ್ನಾಟಕ, ಗುಜರಾತ್, ಜಾರ್ಖಂಡ್, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಆಯ್ದ ಜೆಎನ್‌ವಿಗಳಲ್ಲಿ ಅಗತ್ಯ ಉಪಕರಣಗಳಿಂದ ಸುಸಜ್ಜಿತಗೊಂಡ 25 ಲ್ಯಾಬ್‌ಗಳನ್ನು ಸ್ಥಾಪಿಸಲಾಗಿದೆ. ಈ ವಿಶಿಷ್ಟವಾದ ಔದ್ಯಮಿಕ- ಶೈಕ್ಷಣಿಕ ಜಂಟಿ ಉಪಕ್ರಮದ ಮೂಲಕ ವರ್ಷದಲ್ಲಿ ಸುಮಾರು 4000 ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಆಟೋಮೋಟಿವ್ ಕೌಶಲ್ಯಗಳನ್ನು ಕಲಿಸುವ ಮೂಲಕ ಆಟೋಮೋಟಿವ್ ಕ್ಷೇತ್ರಕ್ಕೆ ಬೇಕಾದ ಉದ್ಯೋಗಿಗಳನ್ನಾಗಿ ಸಜ್ಜುಗೊಳಿಸಲಾಗುತ್ತದೆ. ಅಷ್ಟು ಮಂದಿಯಲ್ಲಿ 30% ಮಂದಿ ಹುಡುಗಿಯರಾಗಿರುತ್ತಾರೆ ಎನ್ನುವುದು ವಿಶೇಷ.

    ‘ರಾಷ್ಟ್ರೀಯ ಶಿಕ್ಷಣ ನೀತಿ 2020’ ರಲ್ಲಿ ಪರಿಕಲ್ಪಿಸಲಾದ ವೃತ್ತಿಪರ ಕೋರ್ಸ್‌ಗಳ ಸಾಲಿನಲ್ಲಿ ನಿಲ್ಲುವ ಟಾಟಾ ಮೋಟಾರ್ಸ್‌ನ ‘ಆಟೋಮೋಟಿವ್ ಸ್ಕಿಲ್ ಲ್ಯಾಬ್ಸ್,’ 9 ರಿಂದ 12 ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಶಾಲೆಯ ಆವರಣದಲ್ಲಿಯೇ ಅವರಿಗೆ ಅಗತ್ಯವಾಗಿ ಬೇಕಾಗುವ ವಿಷಯ ಜ್ಞಾನ, ಪ್ರಾಯೋಗಿಕ ಕೌಶಲ್ಯಗಳನ್ನು ಕಲಿಯುವುದರ ಕಡೆಗೆ ಮತ್ತು ಅವರಿಗೆ ಉತ್ತಮವಾದ ಔದ್ಯಮಿಕ ಕ್ಷೇತ್ರದ ಅರಿವು ನೀಡುವ ಕಡೆಗೆ ಗಮನ ಕೇಂದ್ರೀಕರಿಸುತ್ತದೆ.

    ಇದನ್ನೂ ಓದಿ: Healthy Heart Tips: ನಿಮ್ಮ ಹೃದಯ ಆರೋಗ್ಯವಾಗಿರಬೇಕೆ? ಮಳೆಗಾಲದಲ್ಲಿ ಈ ಏಳು ಆಹಾರಗಳಿಂದ ದೂರವಿರಿ!

    ಜತೆಗೆ ವಿದ್ಯಾರ್ಥಿಗಳು ಟಾಟಾ ಮೋಟಾರ್ಸ್‌ನ ಘಟಕಗಳಿಗೆ ಭೇಟಿ ನೀಡಬಹುದು. ಸರ್ವೀಸ್ ಮತ್ತು ಡೀಲರ್‌ಶಿಪ್ ವೃತ್ತಿಪರರ ಜತೆ ಸಂವಹನ ನಡೆಸಬಹುದು. ಎಲ್ಲಕ್ಕಿಂತ ಹೆಚ್ಚಾಗಿ ಉದ್ಯಮ ತಜ್ಞರ ಉಪನ್ಯಾಸ ಕಾರ್ಯಕ್ರದಲ್ಲಿ ಭಾಗಿಯಾಗಿ ಹೆಚ್ಚು ಜ್ಞಾನ ಪಡೆಯುವ ಮತ್ತು ಉತ್ತಮ ಅನುಭವ ಹೊಂದುವ ಅವಕಾಶ ಪಡೆಯಲಿದ್ದಾರೆ. ಅಷ್ಟು ಮಾತ್ರವಲ್ಲದೆ ಈ ಲ್ಯಾಬ್‌ಗಳಲ್ಲಿ ಬೋಧನೆ ಮಾಡುವ ಬೋಧಕರು ಕಂಪನಿಯ ಪ್ಲಾಂಟ್‌ಗಳಿರುವ ಸ್ಥಳಗಳಲ್ಲಿ ಅಗತ್ಯ ತರಬೇತಿಯನ್ನು ಪಡೆಯುತ್ತಾರೆ. ಪುಣೆಯ ಸ್ಕಿಲ್ ಲ್ಯಾಬ್‌ನಲ್ಲಿ ವಿದ್ಯಾರ್ಥಿಗಳು ರಚಿಸಿರುವ ಇ-ರಿಕ್ಷಾ ಈ ವಿಶಿಷ್ಟವಾದ ಕಲಿಕಾ ಉಪಕ್ರಮದ ಯಶಸ್ಸಿಗೆ ಒಂದು ಶ್ರೇಷ್ಠ ಪುರಾವೆಯಾಗಿದೆ.

    ಈ ಕಲಿಕಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಬಳಿಕ ವಿದ್ಯಾರ್ಥಿಗಳು ಟಾಟಾ ಮೋಟಾರ್ಸ್ ಮತ್ತು ಎನ್‌ವಿಎಸ್ ನಿಂದ ಜಂಟಿ ಪ್ರಮಾಣಪತ್ರ ಸ್ವೀಕರಿಸುತ್ತಾರೆ. ತಮ್ಮ ಶಿಕ್ಷಣದ ಬಳಿಕ ವಿದ್ಯಾರ್ಥಿಗಳು ಡಿಪ್ಲೊಮಾ ಇನ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿಗೆ ಸೇರಿಕೊಳ್ಳಬಹುದು. ಸೇರಿಕೊಳ್ಳುವವರಿಗೆ ಪೂರ್ತಿ ಸ್ಟೈಫಂಡ್ ನೀಡಲಾಗುತ್ತದೆ ಮತ್ತು ಟಾಟಾ ಮೋಟಾರ್ಸ್‌ನ ಉತ್ಪಾದನಾ ಘಟಕಗಳಲ್ಲಿ ಉದ್ಯೋಗ ತರಬೇತಿಯನ್ನೂ ಪಡೆಯಬಹುದಾಗಿದೆ. ಜತೆಗೆ ಟಾಟಾ ಮೋಟಾರ್ಸ್‌ನಲ್ಲಿ ಮುಂದುವರಿಯಲು ಆಸಕ್ತಿಯುಳ್ಳವರು ಆಯ್ದ ಎಂಜಿನಿಯರಿಂಗ್ ಸಂಸ್ಥೆಗಳ ಸಹಯೋಗದೊಂದಿಗೆ ನಡೆಸುವ 3.5 ವರ್ಷಗಳ ವಿಶೇಷ ಶಿಕ್ಷಣ ಕಾರ್ಯಕ್ರಮವಾದ ಬಿಟೆಕ್ ಇನ್ ಎಂಜಿನಿಯರಿಂಗ್‌ ಪದವಿಗೆ ಸೇರಿಕೊಳ್ಳಬಹುದು. ಹಾಗೆ ಮಾಡಿದರೆ ಐದು ವರ್ಷಗಳ ನಂತರ ಟಾಟಾ ಮೋಟಾರ್ಸ್‌ನಲ್ಲಿ ಪರ್ಮನೆಂಟ್ ಉದ್ಯೋಗಕ್ಕೆ ಸೇರಿಕೊಳ್ಳಬಹುದು.

    ಈ ಕುರಿತು ಟಾಟಾ ಮೋಟಾರ್ಸ್‌ನ ಸಿಎಸ್‌ಆರ್ ಮುಖ್ಯಸ್ಥ ವಿನೋದ್ ಕುಲಕರ್ಣಿ ಮಾತನಾಡಿ, “ನಮ್ಮ ಆಟೋಮೋಟಿವ್ ಸ್ಕಿಲ್ ಲ್ಯಾಬ್‌ಗಳು ನಿರ್ಲಕ್ಷ್ಯಕ್ಕೆ ಒಳಗಾದ ಸಮುದಾಯಗಳ ಯುವಜನತೆಗೆ ಬೆಳೆಯುತ್ತಿರುವ ಆಟೋಮೋಟಿವ್‌ ಕ್ಷೇತ್ರದ ಉದ್ಯೋಗ ಗಳಿಸಲು ಬೇಕಾಗುವ ಸೂಕ್ತವಾದ ಕೌಶಲ್ಯಗಳನ್ನು ಕಲಿಸಿ ಅವರನ್ನು ಸಶಕ್ತಗೊಳಿಸುತ್ತವೆ. ಈ ಲ್ಯಾಬ್ ಗಳು 9 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆಯಲು ಮತ್ತು ಉದ್ಯೋಗಾವಕಾಶಗಳನ್ನು ಹೊಂದಲು ದಾರಿಗಳನ್ನು ಸೃಷ್ಟಿಸುತ್ತದೆ.

    ಇದನ್ನೂ ಓದಿ: One Nation One Rate: ಚಿನ್ನಕ್ಕೆ ದೇಶಾದ್ಯಂತ ಒಂದೇ ದರ! ಹೊಸ ನಿಯಮ ಶೀಘ್ರ ಜಾರಿ ಸಾಧ್ಯತೆ

    ‘ಸ್ಕಿಲ್ ಇಂಡಿಯಾ ಮಿಷನ್ʼಗೆ ಕೊಡುಗೆ ನೀಡುವ ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ನವೀನ ಚಿಂತನೆ, ಉದ್ಯಮಶೀಲತಾ ಮನೋಭಾವ, ವಿಶ್ಲೇಷಣಾತ್ಮಕ ಮನಸ್ಥಿತಿ ಮತ್ತು ವಿಮರ್ಶಾತ್ಮಕ ಸಂವಹನ ಇತ್ಯಾದಿ ಕೌಶಲಗಳನ್ನು ಬೆಳೆಸುತ್ತದೆ. ಈ ಉಪಕ್ರಮಕ್ಕೆ ವಿದ್ಯಾರ್ಥಿಯರು ಕೂಡ ಉತ್ತಮವಾಗಿ ಸ್ಪಂದಿಸಿದ್ದು, ಆ ಮೂಲಕ ವಿಕಸಿತ ಭಾರತ @2047 ಪರಿಕಲ್ಪನೆಗೆ ಪೂರಕವಾಗಿ ಭವಿಷ್ಯದ ನಾಯಕರನ್ನು ಸಜ್ಜುಗೊಳಿಸುವ ನಮ್ಮ ಬದ್ಧತೆಗೆ ಬಲ ದೊರೆತಿದೆ” ಎಂದು ತಿಳಿಸಿದ್ದಾರೆ.

    Continue Reading
    Advertisement
    Viral News
    Latest10 mins ago

    Viral News: ಬಾಸ್‌ ಜತೆ ಚಕ್ಕಂದವಾಡುತ್ತಿದ್ದ ಕಿಲಾಡಿ ಪತ್ನಿ; ಡ್ರೋನ್‌ ಬಳಸಿ ಪತ್ತೆ ಹಚ್ಚಿದ ಚಾಲಾಕಿ ಗಂಡ!

    Rishabh Pant
    ಕ್ರಿಕೆಟ್13 mins ago

    Rishabh Pant: ಸಹ ಆಟಗಾರ ಖಲೀಲ್​ ಅಹ್ಮದ್​ರನ್ನು ಸ್ವಿಮ್ಮಿಂಗ್ ಪೂಲ್‌​ಗೆ ತಳ್ಳಿ ಹಾಕಿದ ಪಂತ್​; ವಿಡಿಯೊ ವೈರಲ್​

    Karnataka Rain
    ಮಳೆ14 mins ago

    Karnataka Rain : ಭಾರಿ ಮಳೆ ಎಫೆಕ್ಟ್‌-ಮಲಗಿದ್ದ‌ ವ್ಯಕ್ತಿ ಮೇಲೆ ಬಿದ್ದ ಗೋಡೆ; ಮರ ಬಿದ್ದು ಕಾರು ಜಖಂ, ಚಾಲಕ ಜಸ್ಟ್‌ ಮಿಸ್‌

    2nd Puc Result
    ಪ್ರಮುಖ ಸುದ್ದಿ19 mins ago

    ‌2nd PUC Exam Result: ದ್ವಿತೀಯ ಪಿಯುಸಿ ಪರೀಕ್ಷೆ- 3 ಫಲಿತಾಂಶ ಪ್ರಕಟ, 23.73% ವಿದ್ಯಾರ್ಥಿಗಳು ಪಾಸ್

    Stuck in Lift
    Latest25 mins ago

    Stuck in Lift: ಫ್ಯಾನಿಲ್ಲ, ಲೈಟಿಲ್ಲ, ಆಹಾರವಿಲ್ಲ; 2 ದಿನ ಲಿಫ್ಟ್‌ನಲ್ಲಿ ಸಿಲುಕಿದ್ದವನ ಸ್ಥಿತಿ ಹೇಗಿರಬಹುದು ಊಹಿಸಿ!

    7th Pay Commission
    ಕರ್ನಾಟಕ40 mins ago

    7th Pay Commission: ಸರ್ಕಾರಿ ನೌಕರರ ವೇತನ, ಪಿಂಚಣಿ 58% ಹೆಚ್ಚಳ; ಸಂಪೂರ್ಣ ಲೆಕ್ಕ ಕೊಟ್ಟ ಸಿದ್ದರಾಮಯ್ಯ

    Viral Video
    Latest44 mins ago

    Viral Video: ಸ್ಟ್ರೆಚರ್‌ ಇಲ್ಲದ ಸರ್ಕಾರಿ ಆಸ್ಪತ್ರೆ; ಪತಿಯನ್ನು ಬೆನ್ನ ಮೇಲೆ ಹೊತ್ತು ನಡೆದ ಪತ್ನಿ! ಮನಮಿಡಿಯುವ ವಿಡಿಯೊ

    7th Pay Commission
    ಕರ್ನಾಟಕ54 mins ago

    7th Pay Commission: ಆ.1ರಿಂದ ನೌಕರರ ವೇತನ ಹೆಚ್ಚಳ; ಸರ್ಕಾರಕ್ಕೆ ವಾರ್ಷಿಕ 20,208 ಕೋಟಿ ಹೆಚ್ಚುವರಿ ಹೊರೆ ಎಂದ ಸಿಎಂ

    Sexual Abuse
    Latest56 mins ago

    Sexual Abuse: ಹೆಣ್ಣು ಮಕ್ಕಳಿಗೆ ಈಗ ಶಾಲೆ ಕೂಡ ಸುರಕ್ಷಿತವಲ್ಲ! ಶಾಲಾ ಶೌಚಾಲಯದಲ್ಲಿ ಬಾಲಕಿ ಮೇಲೆ ಬಾಲಕನಿಂದ ಅತ್ಯಾಚಾರ

    MAX Teaser
    ಸ್ಯಾಂಡಲ್ ವುಡ್1 hour ago

    MAX Teaser: ಬಹುನಿರೀಕ್ಷಿತ ʼಮ್ಯಾಕ್ಸ್ʼ ಚಿತ್ರದ ಟೀಸರ್‌ ಔಟ್‌; ರೌಡಿಗಳ ಅಡ್ಡದಲ್ಲಿ ನಿಂತು ಲಾಂಗ್‌ ಬೀಸಿದ ಸುದೀಪ್‌

    Sharmitha Gowda in bikini
    ಕಿರುತೆರೆ9 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ9 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ9 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    galipata neetu
    ಕಿರುತೆರೆ8 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ10 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Kannada Serials
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ7 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    varun
    ಕಿರುತೆರೆ8 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Kannada Serials
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    Karnataka Rain
    ಮಳೆ2 hours ago

    Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

    karnataka Rain
    ಮಳೆ4 hours ago

    Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

    karnataka Weather Forecast
    ಮಳೆ22 hours ago

    Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    karnataka Rain
    ಮಳೆ1 day ago

    Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

    karnataka weather Forecast
    ಮಳೆ1 day ago

    Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

    Karnataka Rain
    ಮಳೆ2 days ago

    Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

    karnataka Rain
    ಮಳೆ2 days ago

    Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

    haveri News
    ಹಾವೇರಿ2 days ago

    Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

    karnataka Rain
    ಮಳೆ2 days ago

    Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

    karnataka Weather Forecast
    ಮಳೆ3 days ago

    Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

    ಟ್ರೆಂಡಿಂಗ್‌