Bagalkot News: ಭಕ್ತರಿಗೆ ಭಂಡಾರ ಹಚ್ಚಿ ಕೊಡಲಿ ಏಟು ನೀಡೋ ಪೂಜಾರಿ; ಮೌಢ್ಯ ನಿಷೇಧ ಕಾಯ್ದೆಯಡಿ ಬಂಧನ! - Vistara News

ಕರ್ನಾಟಕ

Bagalkot News: ಭಕ್ತರಿಗೆ ಭಂಡಾರ ಹಚ್ಚಿ ಕೊಡಲಿ ಏಟು ನೀಡೋ ಪೂಜಾರಿ; ಮೌಢ್ಯ ನಿಷೇಧ ಕಾಯ್ದೆಯಡಿ ಬಂಧನ!

Bagalkot News: ಭಂಡಾರ ಹಚ್ಚಿ ಕೊಡಲಿ ಏಟು ನೀಡಿದರೆ ನೋವು ಗುಣಮುಖವಾಗುತ್ತದೆ ಎಂಬ ಮೂಢನಂಬಿಕೆ ಸೃಷ್ಟಿಸಲಾಗಿದೆ ಎಂದು ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಪೂಜಾರಿಯ ಬಂಧನವಾಗಿದೆ.

VISTARANEWS.COM


on

Bagalkot news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಾಗಲಕೋಟೆ: ಭಕ್ತರಿಗೆ ಭಂಡಾರ ಹಚ್ಚಿ ಕೊಡಲಿ ಏಟು ನೀಡುತ್ತಿದ್ದ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ (Bagalkot News) ಮುಧೋಳ ತಾಲೂಕಿನ ಮೆಟಗುಡ್ಡ ಗ್ರಾಮದಲ್ಲಿ ಮೈ ಕೈ ನೋವು ಎಂದು ಬರುವ ಭಕ್ತರಿಗೆ ಭಂಡಾರ ಹಚ್ಚಿ, ನೋವಾಗುವ ಭಾಗಕ್ಕೆ ಪೂಜಾರಿ ಕೊಡಲಿ ಏಟು ನೀಡುತ್ತಿದ್ದ. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಹಿನ್ನೆಲೆಯಲ್ಲಿ ಮೂಢನಂಬಿಕೆ ನಿಷೇಧ ಕಾಯ್ದೆಯಡಿ ಪೂಜಾರಿ ವಿರುದ್ಧ ಎಸ್‌ಐಆರ್ ದಾಖಲಿಸಿ, ಆತನನ್ನು ಬಂಧಿಸಲಾಗಿದೆ.

ಮೆಟಗುಡ್ಡ ಗ್ರಾಮದ ಕಾಶಿಲಿಂಗೇಶ್ವರ ದೇವಸ್ಥಾನದ ಪೂಜಾರಿ ಜಕ್ಕಪ್ಪ ಗಡ್ಡದ ಎಂಬುವವರಿಂದ ಮೌಢ್ಯಾಚರಣೆ ನಡೆಯುತ್ತಿದೆ. ಪೂಜಾರಿ ಭಂಡಾರ ಹಚ್ಚಿ ಕೊಡಲಿ ಏಟು ನೀಡಿದರೆ ನೋವು ಗುಣಮುಖವಾಗುತ್ತದೆ ಎಂಬ ಮೂಢನಂಬಿಕೆ ಸೃಷ್ಟಿಸಲಾಗಿದೆ ಎಂದು ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಪೂಜಾರಿಯ ಬಂಧನವಾಗಿದೆ.

ಭಕ್ತನಿಗೆ ಪೂಜಾರಿ ಕೊಡಲಿ ಏಟು ನೀಡುವ ದೃಶ್ಯ ಸಾಮಾಜಿಕ ವೈರಲ್ ಆಗಿದೆ. ವಿಡಿಯೊದಲ್ಲಿ ನೆಲದ ಮೇಲೆ ಭಕ್ತ ಮಲಗಿಕೊಂಡಿದ್ದು, ಪೂಜಾರಿ ಭಕ್ತನ ಹೊಟ್ಟೆಯ ಭಾಗಕ್ಕೆ ಜೋರಾಗಿ ಕೊಡಲಿಯಿಂದ ಹೊಡೆಯುತ್ತಾನೆ. ಆ ರಭಸಕ್ಕೆ ಕೊಡಲಿ ಭಕ್ತನ ದೇಹದೊಳಗೆ ಹೊಕ್ಕಿದ್ದು, ಹೊರತೆಗೆಯಲು ಪೂಜಾರಿ ಕಷ್ಟಪಡುತ್ತಿರುವುದನ್ನು ಕಾಣಬಹುದಾಗಿದೆ.

ಇದನ್ನೂ ಓದಿ | YouTuber Dhruv Rathee: ಸ್ಪೀಕರ್‌ ಓಂ ಬಿರ್ಲಾ ಪುತ್ರಿ ಬಗ್ಗೆ ಪೋಸ್ಟ್‌; ಯೂಟ್ಯೂಬರ್‌ ಧೃವ್‌ ರಥೀ ವಿರುದ್ಧ FIR

ಪೂಜಾರಿಯೊಬ್ಬ ಭಕ್ತನಿಗೆ ಕೊಡಲಿ ಏಟು ನೀಡುವ ದೃಶ್ಯ ವೈರಲ್ ವೈರಲ್‌ ಆಗಿದ್ದರಿಂದ ಮೂಢನಂಬಿಕೆ ನಿಷೇಧ ಕಾಯ್ದೆಯಡಿ ಪೂಜಾರಿ ವಿರುದ್ಧ ಲೋಕಾಪುರ ಠಾಣೆ ಪೊಲೀಸರು ಎಸ್‌ಐಆರ್ ದಾಖಲಿಸಿ ಬಂಧಿಸಿದ್ದಾರೆ ಎಂದು ಬಾಗಲಕೋಟೆ ಎಸ್‌ಪಿ ಅಮರನಾಥ ರೆಡ್ಡಿ ಮಾಹಿತಿ ನೀಡಿದ್ದಾರೆ.

Self Harming : ಪತಿ ಅಗಲಿಕೆಯ ನೋವು; ಖಿನ್ನತೆಗೊಳಗಾದ ತಾಯಿ ಮತ್ತು ಮಗ ಆತ್ಮಹತ್ಯೆ

Self Harming

ಬೆಂಗಳೂರು: ಬೆಂಗಳೂರಿನ ಯಲಹಂಕದ ಆರ್‌ಎನ್‌ಜೆಡ್ ಅಪಾರ್ಟ್‌ಮೆಂಟ್‌ನಲ್ಲಿ ತಾಯಿ ಮತ್ತು ಮಗ ಇಬ್ಬರು ಆತ್ಮಹತ್ಯೆ (Self Harming)ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಭಾರ್ಗವ್ ಪುಲಿವರ್ತ (13), ತಾಯಿ ರಮ್ಯಾ (40) ಮೃತ ದುರ್ದೈವಿಗಳು.

ಮೂಲತಃ ಆಂಧ್ರ ಪ್ರದೇಶದ ರಮ್ಯಾ ಶ್ರೀಧರ್ ಎಂಬುವವರನ್ನು ಪ್ರೀತಿಸಿ, ಅಂತರ್ಜಾತಿ ವಿವಾಹವಾಗಿದ್ದರು. ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದರು. ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಶ್ರೀಧರ್ ಪುಲಿವರ್ತ ಮೂರು ತಿಂಗಳ ಹಿಂದೆ ಕ್ಯಾನ್ಸರ್‌ನಿಂದ ಮೃತಪಟ್ಟಿದ್ದರು. ಫ್ಲ್ಯಾಟ್ ಬಾಡಿಗೆ 45 ಸಾವಿರ, ಮಕ್ಕಳಿಬ್ಬರ ಶಾಲೆ ಫೀಸ್, ಮನೆ ನಿರ್ವಹಣೆ ಖರ್ಚು ಅಂತ ತಿಂಗಳಿಗೆ ಲಕ್ಷ ಲಕ್ಷ ಹಣ ಬೇಕಿತ್ತು. ಇತ್ತ ಹಣ ಹೊಂದಿಸುವುದು ರಮ್ಯಾಳಿಗೆ ಆಗುತ್ತಿರಲಿಲ್ಲ. ಇದೇ ಕಾರಣಕ್ಕೆ ಖಿನ್ನತೆಗೊಳಗಾಗಿದ್ದರು. ಪತಿ ಸತ್ತ ನಂತರ ತಾವು ಸಾಯೋದಾಗಿ ರಮ್ಯಾ ಹಾಗೂ ಮಗ ಭಾರ್ಗವ್ ಹೇಳಿ ಕೊಂಡಿದ್ದರಂತೆ.

ರಮ್ಯಾಳಿಗೆ 19 ವರ್ಷದ ಮಗಳು ಇದ್ದು, ಆಕೆ ಪಿಜಿಯಲ್ಲಿದ್ದುಕೊಂಡು ಓದುತ್ತಿದ್ದಾಳೆ. ಕಳೆದ 9ರ ರಾತ್ರಿ ಮಗಳ ಜತೆಗೆ ಮಾತನಾಡಿ, ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿಯ ಸಾವಿನ ನಂತರ ಆರ್ಥಿಕವಾಗಿ ಹಾಗೂ ಮಾನಸಿಕವಾಗಿ ಕುಟುಂಬವು ಕುಗ್ಗಿ ಹೋಗಿತ್ತು.

ಇದನ್ನೂ ಓದಿ: Murder case : ಪ್ರೀತಿ ವಿಷ್ಯಕ್ಕೆ ಯುವಕನಿಗೆ ಬೆಂಕಿ ಹಚ್ಚಿ ಕೊಂದವರ ವಿರುದ್ಧ ಚಾಜ್೯ ಶೀಟ್ ಸಲ್ಲಿಕೆ

ಮೊದಲು ಮಗ ಆತ್ಮಹತ್ಯೆ ಮಾಡಿಕೊಂಡ ಬಳಿಕ ರಮ್ಯಾ ನೇಣಿನ ಕುಣಿಕೆಯಿಂದ ಬಿಡಿಸಿ ಬೆಡ್ ಮೇಲೆ ಮಲಗಿಸಿದ್ದಾರೆ. ನಂತರ ತಾವು ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ಸತ್ತು ನಾಲ್ಕು ದಿನದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೂ ಮುನ್ನ ಪೊಲೀಸ್‌, ಡಾಕ್ಟರ್‌ ಮತ್ತು ಮಗಳಿಗೆ ಪತ್ರ ಬರೆದು ನೇಣಿಗೆ ಶರಣಾಗಿದ್ದಾರೆ.

ಎರಡ್ಮೂರು ದಿನದಿಂದ ಮನೆಯಿಂದ ಫೋನ್‌ ಬಾರದ ಹಿನ್ನೆಲೆಯಲ್ಲಿ ನಿನ್ನೆ ಶುಕ್ರವಾರ ಮಗಳು ಪಿಜಿಯಿಂದ ಮನೆಗೆ ಬಂದಿದ್ದಾಳೆ. ಮನೆ ಬಾಗಿಲು ಎಷ್ಟೇ ತಟ್ಟಿದ್ದರು ತೆರೆಯದೇ ಇದ್ದಾಗ, ತನ್ನ ಬಳಿ ಇದ್ದ ಇನ್ನೊಂದು ಕೀಯಿಂದ ಮನೆಯ ಬಾಗಿಲು ತೆಗೆದಿದ್ದಾಳೆ. ಆಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಯಲಹಂಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಂತರ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Actor Darshan: ರೇಣುಕಾ ಸ್ವಾಮಿ ದೇಹ ಪೋಸ್ಟ್‌ ಮಾರ್ಟಮ್‌ ಮಾಡಿದ ವೈದ್ಯ ಪವಿತ್ರ ಗೌಡ ಆಪ್ತೆಯ ಪತಿ!

Actor Darshan: ಶಾಕಿಂಗ್ ಸಂಗತಿ ಏನು ಅಂದರೆ ರೇಣುಕಾ ಸ್ವಾಮಿಯ ಶವ ಪೋಸ್ಟ್‌ಮಾರ್ಟಮ್ ಮಾಡಿದ್ದೇ ಸಮತಳ ಪತಿ! ಸಮತ ಪತಿ ಡಾ. ಸುರೇಶ್ ಅವರಿಂದ ರೇಣುಕಾ ಸ್ವಾಮಿ ಶವದ ಮರಣೋತ್ತರ ಪರೀಕ್ಷೆ ನಡೆದಿತ್ತು. ಆ ಮರಣೋತ್ತರ ಪರೀಕ್ಷೆ ಪೊಲೀಸರ ಕೈ ಸೇರುವ ಮೊದಲೇ ಜೈಲಿನಲ್ಲಿ ದರ್ಶನ್ ಹಾಗೂ ಪವಿತ್ರರನ್ನು ಸಮತ ಭೇಟಿ ಮಾಡಿದ್ದಳು.

VISTARANEWS.COM


on

actor darshan samata husband
Koo

ಬೆಂಗಳೂರು: ನಟ ದರ್ಶನ್ (Actor Darshan) ಗ್ಯಾಂಗ್‌ನಿಂದ ನಡೆದ ರೇಣುಕಾಸ್ವಾಮಿ ಕೊಲೆ (Renuka Swamy Murder) ಪ್ರಕರಣದ ವಿಚಾರಣೆಗೆ ಮತ್ತೊಂದು ಟ್ವಿಸ್ಟ್‌ ದೊರೆತಿದೆ. ಮೃತ ರೇಣುಕಾಸ್ವಾಮಿ ಶವ ಪೋಸ್ಟ್‌ ಮಾರ್ಟಮ್‌ (Post Martem) ನಡೆಸಿದ ವೈದ್ಯ ಬೇರೆ ಯಾರೂ ಅಲ್ಲ, ಜೈಲಿನಲ್ಲಿ ದರ್ಶನ್‌ ಹಾಗೂ ಪವಿತ್ರ ಗೌಡ (Pavitra Gowda) ಅವರನ್ನು ಭೇಟಿಯಾಗಿದ್ದ ಪವಿತ್ರ ಆಪ್ತೆ ಸಮತ ಅವರ ಪತಿ!

ಅಂದರೆ, ಈ ಪ್ರಕರಣದ ಸಾಕ್ಷ್ಯಗಳನ್ನು ತಿರುಚುವಲ್ಲಿ ಸಮತ ಕೈವಾಡ ಇದೆಯಾ, ಇದ್ದರೆ ಎಷ್ಟು ಎನ್ನುವ ಬಗ್ಗೆ ಈಗ ಪೊಲೀಸರು ತಲೆ ಕೆಡಿಸಿಕೊಂಡಿದ್ದಾರೆ. ಆ ಶಾಕಿಂಗ್ ಸ್ಟೋರಿಯ ಕಥನಾಯಕಿಯೇ ಪವಿತ್ರಗೌಡ ಸ್ನೇಹಿತೆ ಸಮತ. ಕೊಲೆ ಕೇಸ್‌ನಲ್ಲಿ ಜೈಲುಪಾಲಾಗಿರುವ ಪವಿತ್ರ ಗೌಡಳನ್ನು ಸಮತ ಭೇಟಿ ಮಾಡಿದ್ದಳು. ಪವಿತ್ರ ಗೌಡ ಮಾತ್ರವಲ್ಲದೇ ದರ್ಶನ್ ಜೊತೆಗೂ ಮಾತುಕತೆ ನಡೆಸಿದ್ದಳು. ಸಮತಳ ಜೈಲು ಭೇಟಿಯಿಂದ ತನಿಖಾಧಿಕಾರಿಗಳ ತಲೆಯಲ್ಲಿ ಅನುಮಾನ ಮೂಡಿತ್ತು. ಡೌಟ್ ಹಿನ್ನೆಲೆಯಲ್ಲಿ, ವಿಚಾರಣೆಗೆ ಹಾಜರಾಗುವಂತೆ ತನಿಖಾಧಿಕಾರಿ ನೋಟೀಸ್ ನೀಡಿದ್ದರು.

ಸಮತಳನ್ನು ಆಡುಗೋಡಿ ಟೆಕ್ನಿಕಲ್ ಸೆಲ್‌ನಲ್ಲಿ ತೀವ್ರವಾಗಿ ವಿಚಾರಣೆಗೆ ಒಳಪಡಿಸಿದಾಗ, ಪೊಲೀಸರೇ ಒಂದು ಕ್ಷಣ ಶಾಕ್ ಆಗುವಂಥ ಸಂಗತಿ ಬೆಳಕಿಗೆ ಬಂದಿತ್ತು. ಆ ವಿಚಾರ, ರೇಣುಕ ಸ್ವಾಮಿ ದೇಹದ ಪೋಸ್ಟ್‌ಮಾರ್ಟಮ್ ಮಾಡಿದ ವೈದ್ಯರ ಮೇಲೂ ಪೊಲೀಸರಿಗೆ ಅನುಮಾನ ಮೂಡಿಸುವಂತಿತ್ತು. ಆ ಅನುಮಾನ ಮೂಡಲು ಕಾರಣವಾದದ್ದು ಸಮತಳ ಪತಿಯ ವರ್ತನೆ. ಸಮತಳಿಂದ ಪವಿತ್ರ ಗೌಡ ಹಾಗೂ ದರ್ಶನ್ ಭೇಟಿ ಬಳಿಕ ಕೇಸ್‌ನಲ್ಲಿ ಈ ಬಿಗ್ ಟ್ವಿಸ್ಟ್ ದೊರೆತಿದೆ.

ಶಾಕಿಂಗ್ ಸಂಗತಿ ಏನು ಅಂದರೆ ರೇಣುಕಾ ಸ್ವಾಮಿಯ ಶವ ಪೋಸ್ಟ್‌ಮಾರ್ಟಮ್ ಮಾಡಿದ್ದೇ ಸಮತಳ ಪತಿ! ಸಮತ ಪತಿ ಡಾ. ಸುರೇಶ್ ಅವರಿಂದ ರೇಣುಕಾ ಸ್ವಾಮಿ ಶವದ ಮರಣೋತ್ತರ ಪರೀಕ್ಷೆ ನಡೆದಿತ್ತು. ಆ ಮರಣೋತ್ತರ ಪರೀಕ್ಷೆ ಪೊಲೀಸರ ಕೈ ಸೇರುವ ಮೊದಲೇ ಜೈಲಿನಲ್ಲಿ ದರ್ಶನ್ ಹಾಗೂ ಪವಿತ್ರರನ್ನು ಸಮತ ಭೇಟಿ ಮಾಡಿದ್ದಳು. ಹಾಗಾದರೆ ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿದ್ದುವ ಯತ್ನ ನಡೆದಿತ್ತೇ? ಈ ಅನುಮಾನದಲ್ಲಿ ಸಮತಳನ್ನು ತನಿಖಾ ತಂಡ ತೀವ್ರ ವಿಚಾರಣೆಗೆ ಒಳಪಡಿಸಿತ್ತು.

ತನಿಖೆಗೊಳಪಡಿಸಿ ಸಮತ ನೀಡಿದ ಹೇಳಿಕೆಯನ್ನು ಪೊಲೀಸರು ದಾಖಲು ಮಾಡಿಕೊಂಡಿದ್ದಾರೆ. ಜೊತೆಗೆ ಸಮತ ಪತಿ ಡಾ. ಸುರೇಶ್ ಅವರ ಕಾಲ್ ಡಿಟೇಲ್ಸ್, ಚಾಟಿಂಗ್ಸ್ ಪರಿಶೀಲಿಸಲಾಗಿದೆ. ರೇಣುಕಾ ಸ್ವಾಮಿ ಶವ ಮರಣೋತ್ತರ ಪರೀಕ್ಷೆ ನಡೆಸುವ ವೇಳೆ, ತಮ್ಮ ಡ್ಯೂಟಿಗೆ ರಜೆ ಇದ್ದರೂ ಸುರೇಶ್‌ ಕರ್ತವ್ಯಕ್ಕೆ ಹಾಜರಾಗಿದ್ದರು. ತಾನೇ ಖುದ್ದು ಮುಂದೆ ನಿಂತು ರೇಣುಕಾಸ್ವಾಮಿ ಶವ ಮರಣೋತ್ತರ ಪರೀಕ್ಷೆ ಮಾಡಿಸಿದ್ದರು.

ಪವಿತ್ರ ಗೌಡ ಕ್ಲೋಸ್ ಫ್ರೆಂಡ್ ಪತಿಯಾಗಿರುವ ಕಾರಣ ಮರಣೋತ್ತರ ಪರೀಕ್ಷೆ ವರದಿಯನ್ನು ಮತ್ತೊಮ್ಮೆ ಪರಿಶೀಲನೆ ಮಾಡಲಾಗುತ್ತಿದೆ. ಪರಿಶೀಲನೆ ನಡೆಸಿ ಡಾ. ಪ್ರದೀಪ್ ಎಂಬ ವೈದ್ಯರಿಂದ ಪೊಲೀಸರಿಗೆ ಮತ್ತೆ ಮರಣೋತ್ತರ ಪರೀಕ್ಷಾ ವರದಿ ಸಲ್ಲಿಕೆ ಮಾಡಲಾಗುತ್ತಿದೆ. ಜೈಲಿಗೆ ತರಾತುರಿಯಿಂದ ಬಂದು ದರ್ಶನ್‌ ಹಾಗೂ ಪವಿತ್ರರನ್ನು ಭೇಟಿಯಾದದ್ದೇ ಇದೀಗ ಈ ಪ್ರಕರಣದ ಸಾಕ್ಷಿ ನಾಶದ ಪ್ರಯತ್ನದಲ್ಲಿ ಇನ್ನೊಂದು ಬಿಗ್‌ ಟ್ವಿಸ್ಟ್‌ ನೀಡಿದೆ.

ಇದನ್ನೂ ಓದಿ: Actor Darshan: ಪವಿತ್ರಾ ಗೌಡ ಆರೋಗ್ಯದಲ್ಲೂ ಏರುಪೇರು; ಚಿಕಿತ್ಸೆ ನೀಡಿದ ವೈದ್ಯರು

Continue Reading

ಮಳೆ

Karnataka Rain : ರಣಭೀಕರ ಮಳೆಗೆ ಶಿರೂರು ಬಳಿ ಗುಡ್ಡ ಕುಸಿತ; ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ

Karnataka Rain : ರಣಭೀಕರ ಮಳೆಗೆ ಶಿರೂರು ಬಳಿ ಗುಡ್ಡ ಕುಸಿತ ಉಂಟಾಗಿದ್ದು, ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಹಾಸನದಲ್ಲಿ ತೆಂಗಿನ ಮರ ಬಿದ್ದು ಮನೆ ಜಖಂಗೊಂಡು ವಿದ್ಯುತ್ ಸಂಪರ್ಕ ಕಡಿತಗೊಂಡರೆ, ಹಾಸನ, ಶಿವಮೊಗ್ಗದಲ್ಲಿ ಕಲ್ಲುಹಳ್ಳ ಸೇತುವೆಯ ತಡೆಗೋಡೆ ಕುಸಿದು ಬಿದ್ದಿದೆ.

VISTARANEWS.COM


on

By

Karnataka Rain
Koo

ಉತ್ತರಕನ್ನಡ ಉತ್ತರಕನ್ನಡದಲ್ಲಿ ರಣಭೀಕರ ಮಳೆಗೆ (Karnataka Rain Effect) ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಬಳಿ ಭಾರೀ ಗುಡ್ಡಕುಸಿತ (Karnataka Rain) ಉಂಟಾಗಿದೆ. ಅಂಕೋಲಾ ತಾಲೂಕಿನ ಶಿರೂರು ಬಳಿ ಅಂಗಡಿಯೊಂದರ ಮೇಲೆ ಗುಡ್ಡ ಕುಸಿದಿದೆ. 5ಕ್ಕೂ ಹೆಚ್ಚು ಮಂದಿ ಗುಡ್ಡದ ಮಣ್ಣಿನಡಿ ಸಿಲುಕಿರುವ ಶಂಕೆ ಇದೆ.

ಒಂದೇ ಕುಟಂಬದ ಐವರು ಮಣ್ಣಿನಡಿ ಸಿಲುಕಿದ್ದಾರೆ ಎನ್ನಲಾಗಿದೆ. ಲಕ್ಷ್ಮಣ ನಾಯ್ಕ(47), ಶಾಂತಿ ನಾಯ್ಕ(36), ರೋಶನ(11), ಅವಂತಿಕಾ(6), ಜಗನ್ನಾಥ(55) ಎಂಬುವವರು ಮಣ್ಣಿನಡಿ ಸಿಲುಕಿದ್ದಾರೆ ಎನ್ನಲಾಗಿದೆ. ಐಆರ್‌ಬಿ ಕಂಪೆನಿಯಿಂದ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ.

Karnataka Rain

5 ಮಂದಿ ಕುಟುಂಬ ವಾಸವಿದ್ದ ಅಂಗಡಿ ಮೇಲೆ ಗುಡ್ಡ ಕುಸಿದಿದ್ದು, ಗ್ರಾಹಕರು ಸೇರಿ ಮನೆಯವರು ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಧಾರಾಕಾರ ಮಳೆಯಿಂದಾಗಿ ಹೆದ್ದಾರಿ ಪಕ್ಕದ ಗುಡ್ಡ ಸಡಿಲಗೊಂಡಿತ್ತು. ಗಂಗಾವಳಿ ನದಿಗೆ ಹೊಂದಿಕೊಂಡಿರುವ ಶಿರೂರು ಪ್ರದೇಶ ಇದಾಗಿದ್ದು, ರಾಷ್ಟ್ರೀಯ ಹೆದ್ದಾರಿ 66ರ ಅಂಕೋಲಾ-ಕುಮಟಾ ನಡುವೆ ಸಂಚಾರ ಸಂಪೂರ್ಣ ಬಂದ್ ಆಗಿದೆ.

karnataka Rain

ಗುಡ್ಡ ಕುಸಿದ ರಭಸಕ್ಕೆ ನದಿಗೆ ಬಿದ್ದ ಗ್ಯಾಸ್ ಟ್ಯಾಂಕರ್

ಅಂಕೋಲಾದ ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡ್ಡ ಕುಸಿದ ರಭಸಕ್ಕೆ ಹೆದ್ದಾರಿ ಬದಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್ ನದಿಗೆ ಬಿದ್ದಿದೆ. ಶಿರೂರಿನ ಬೊಮ್ಮಯ್ಯ ದೇವಸ್ಥಾನದ ಬಳಿ ಗುಡ್ದ ಕುಸಿದ ಪರಿಣಾಮ ಟೀ ಸ್ಟಾಲ್ ಸೇರಿ ಹಲವು ಅಂಗಡಿಗಳಿಗೆ ಹಾನಿಯಾಗಿದೆ. ಘಟನೆಯಲ್ಲಿ ಒಂದೇ ಕುಟುಂಬದ ಐವರು ಸೇರಿ ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಸ್ಥಳಕ್ಕೆ ಅಂಕೋಲಾ ಪೊಲೀಸ್, ಅಗ್ನಿಶಾಮಕ ಸಿಬ್ಬಂದಿ, ಎನ್‌ಹೆಚ್‌ಎಐ ಆಂಬ್ಯುಲೆನ್ಸ್ ದೌಡಾಯಿಸಿದೆ.

ಇದನ್ನೂ ಓದಿ: Rain News: ಮಳೆಯ ಅಬ್ಬರಕ್ಕೆ ಧಡಾರ್‌ ಎಂದು ನೆಲಕಚ್ಚಿದ ಕೊಟ್ಟಿಗೆಹಾರ ಬಸ್‌ ನಿಲ್ದಾಣ!

karnataka Rain

ಹಾಸನದಲ್ಲಿ ಮರ ಬಿದ್ದು ಮನೆ ಜಖಂ, ವಿದ್ಯುತ್ ಸಂಪರ್ಕ ಕಡಿತ

ಭಾರಿ ಮಳೆ- ಗಾಳಿಗೆ ತೆಂಗಿನ ಮರವೊಂದು ಮನೆ ಮೇಲೆ, ವಿದ್ಯುತ್ ತಂತಿ ಮೇಲೆ ಬಿದ್ದಿದೆ. ಪರಿಣಾಮ ಮನೆ ಸಂಪೂರ್ಣ ಜಖಂಗೊಂಡರೆ, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಅಂಬೇಡ್ಕರ್ ನಗರದಲ್ಲಿ ಘಟನೆ ನಡೆದಿದೆ. ಮಾಜಿ ಶಾಸಕ ದಿ.ವೈ.ಎನ್.ರುದ್ರೇಶ್‌ಗೌಡರಿಗೆ ಸೇರಿದ ಮನೆ ಹಾನಿಯಾಗಿದೆ. ವಿದ್ಯುತ್ ಇಲ್ಲದ ನಿವಾಸಿಗಳು ಪರದಾಡುತ್ತಿದ್ದಾರೆ. ಕೂಡಲೇ ಮರ ತೆರವುಗೊಳಿಸಿ ವಿದ್ಯುತ್ ಪೂರೈಕೆ ಮಾಡುವಂತೆ ಒತ್ತಾಯ ಕೇಳಿ ಬಂದಿದೆ.

karnataka rain

ಶಿವಮೊಗ್ಗದಲ್ಲಿ ಕಲ್ಲುಹಳ್ಳ ಸೇತುವೆ ತಡೆಗೋಡೆ ಕುಸಿತ

ಶಿವಮೊಗ್ಗದ ಹೊಸನಗರ ಸಮೀಪ ಇರುವ ಕಲ್ಲುಹಳ್ಳ ಸೇತುವೆಯ ತಡೆಗೋಡೆ ಕುಸಿತಗೊಂಡಿದ್ದು, ಬಾರಿ ಅನಾಹುತವೊಂದು ತಪ್ಪಿದೆ. ರಾಣಿಬೆನ್ನೂರು – ಬೈಂದೂರು ರಾಷ್ಟ್ರೀಯ ಹೆದ್ದಾರಿ 766 c ಸೇರಿದ ತಡೆಗೋಡೆ ಕುಸಿತಗೊಂಡಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಡಿಯಲ್ಲಿ ಸುಮಾರು 5 ಕೋಟಿ ಅನುದಾನದಲ್ಲಿ ಸೇತುವೆ ನಿರ್ಮಾಣ ಮಾಡಲಾಗಿತ್ತು. ಲೋಕಾರ್ಪಣೆಗೊಳ್ಳುವ ಮೊದಲೇ ಸೇತುವೆಯ ತಡೆಗೋಡೆ ಕುಸಿದಿದೆ. ಇದೇ ರೀತಿ ಮಳೆ ಮುಂದುವರೆದಲ್ಲಿ ಇನ್ನಷ್ಟು ಭಾಗ ಕುಸಿಯುವ ಭೀತಿ ಇದೆ.

ಹಾಸನದಲ್ಲೂ ಮಳೆ ಅಬ್ಬರಕ್ಕೆ ತಡೆಗೋಡೆ ಕುಸಿತ

ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ತಡೆ ಗೋಡೆ ಕುಸಿದಿದೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾಂಕ್ರೀಟ್ ರಸ್ತೆಯ ತಡೆಗೋಡೆ ಸಂಪೂರ್ಣ ಕುಸಿದಿದ್ದು, ಒಂದು ಬದಿಯ ರಸ್ತೆ ಸಂಚಾರ ಬಂದ್ ಆಗುವ ಆತಂಕ ಇದೆ. ಸಕಲೇಶಪುರ ತಾಲೂಕಿನ ಗುಲಗಳಲೆ ಗ್ರಾಮದ, ರಾಟೆಮನೆ ಸಮೀಪ ಘಟನೆ ನಡೆದಿದೆ.

Karnataka Rain

ಸುಮಾರು 40 ಅಡಿಯಷ್ಟು ಎತ್ತರಕ್ಕೆ ನಿರ್ಮಿಸಿದ್ದ ತಡೆಗೋಡೆಯು ರಾತ್ರಿಯಿಡೀ ಸುರಿದ ಭಾರಿ ಮಳೆಗೆ ಕುಸಿದು ಬಿದ್ದಿದೆ. ವಾಹನ ಸಂಚಾರ ಹೆಚ್ಚಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಂಕ್ರೀಟ್ ರಸ್ತೆ ಬಿರುಕು ಬಿಡುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉದ್ಯೋಗ

Job Alert: ಅಂಚೆ ಇಲಾಖೆಯಿಂದ ಬೃಹತ್‌ ನೇಮಕಾತಿ; ಕರ್ನಾಟಕದಲ್ಲಿಯೂ ಇದೆ 1,940 ಹುದ್ದೆ: ಹೀಗೆ ಅಪ್ಲೈ ಮಾಡಿ

Job Alert: ಭಾರತೀಯ ಅಂಚೆ ಇಲಾಖೆ ಬಹುನಿರೀಕ್ಷಿತ ಗ್ರಾಮೀಣ ಡಾಕ್ ಸೇವಕ್‌ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ನಮ್ಮ ರಾಜ್ಯದಲ್ಲಿ 1,940 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಗ್ರಾಮೀಣ ಡಾಕ್‌ ಸೇವಕ್‌ (ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌ ಮತ್ತು ಅಸಿಸ್ಟಂಟ್‌ ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌) ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಕೊನೆಯ ದಿನ ಆಗಸ್ಟ್‌ 5. ಅರ್ಜಿ ಸಲ್ಲಿಸುವ ವಿಧಾನದ ಮಾಹಿತಿ ಇಲ್ಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಭಾರತೀಯ ಅಂಚೆ ಇಲಾಖೆ (India Post Office) ಬಹುನಿರೀಕ್ಷಿತ ಗ್ರಾಮೀಣ ಡಾಕ್ ಸೇವಕ್‌ (Gramin Dak Sevak) ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ದೇಶಾದ್ಯಂತ ಸುಮಾರು 44,228 ಹುದ್ದೆಗಳು ಖಾಲಿ ಇವೆ. ಈ ಪೈಕಿ ನಮ್ಮ ರಾಜ್ಯದಲ್ಲಿ 1,940 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ (Karnataka Postal Circle Recruitment 2024). ಗ್ರಾಮೀಣ ಡಾಕ್‌ ಸೇವಕ್‌ (ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌ ಮತ್ತು ಅಸಿಸ್ಟಂಟ್‌ ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌) ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಕೊನೆಯ ದಿನ ಆಗಸ್ಟ್‌ 5 (Job Alert).

ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆ?

ಬಾಗಲಕೋಟೆ 23, ಬಳ್ಳಾರಿ 50, ಬೆಂಗಳೂರು ಜಿಪಿಒ 4, ಬೆಳಗಾವಿ 33, ಬೆಂಗಳೂರು ಪೂರ್ವ 83, ಬೆಂಗಳೂರು ದಕ್ಷಿಣ 62, ಬೆಂಗಳೂರು ಪಶ್ಚಿಮ 39, ಬೀದರ್ 59, ಚನ್ನಪಟ್ಟಣ 87, ಚಿಕ್ಕಮಗಳೂರು 60, ಚಿಕ್ಕೋಡಿ 19, ಚಿತ್ರದುರ್ಗ 27, ದಾವಣಗೆರೆ ಕಚೇರಿ 40, ಧಾರವಾಡ 22, ಗದಗ 18, ಗೋಕಾಕ್ 7, ಹಾಸನ 78, ಹಾವೇರಿ 44, ಕಲಬುರಗಿ 83, ಕಾರವಾರ 43, ಕೊಡಗು 76, ಕೋಲಾರ 106, ಕೊಪ್ಪಳ 36, ಮಂಡ್ಯ 65, ಮಂಗಳೂರು 62, ಮೈಸೂರು 42, ನಂಜನಗೂಡು 66, ಪುತ್ತೂರು 89, ರಾಯಚೂರು 63, ಆರ್‌ಎಂಎಸ್‌ ಎಚ್‌ಬಿ 3, ಆರ್‌ಎಂಎಸ್‌ ಕ್ಯೂ 9, ಶಿವಮೊಗ್ಗ 89, ಶಿರಸಿ 66, ತುಮಕೂರು 107, ಉಡುಪಿ 90, ವಿಜಯಪುರ 40, ಯಾದಗಿರಿ 50 ಹುದ್ದೆಗಳಿವೆ.

ವಿದ್ಯಾರ್ಹತೆ ಮತ್ತು ವಯೋಮಿತಿ

ಭಾರತದ ಯಾವುದೇ ಶಿಕ್ಷಣ ಮಂಡಳಿ ನಡೆಸುವ 10ನೇ ತರಗತಿ ಪರೀಕ್ಷೆಯಲ್ಲಿ (ಇಂಗ್ಲಿಷ್‌ ಮತ್ತು ಗಣಿತ ವಿಷಯ ಒಳಗೊಂಡಿರುವುದು ಕಡ್ಡಾಯ) ಪಾಸಾದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಅರ್ಜಿ ಶುಲ್ಕವಾಗಿ ಸಾಮಾನ್ಯ / ಒಬಿಸಿ ವಿಭಾಗದ ಅಭ್ಯರ್ಥಿಗಳು 100 ರೂ. ಪಾವತಿಸಬೇಕು. ಎಸ್‌ಸಿ / ಎಸ್‌ಟಿ / ಅಂಗವಿಕಲ ವಿಭಾಗದ ಮತ್ತು ಎಲ್ಲ ವರ್ಗದ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. 10ನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದವರಿಗೆ ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌-12,000 ರೂ. -29,380 ರೂ., ಅಸಿಸ್ಟಂಟ್‌ ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌-10,000 ರೂ. – 24,470 ರೂ. ಮಾಸಿಕ ವೇತನ ಇದೆ.

India Post GDS Recruitment 2024 ಅಧಿಕೃತ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://indiapostgdsonline.gov.in/)
  • ಹೆಸರು ನೋಂದಾಯಿಸಿ.
  • ಲಾಗಿನ್‌ ಆಗಿ ವಿವರಗಳನ್ನು ಭರ್ತಿ ಮಾಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ, ಸಹಿಯನ್ನು ಸೂಕ್ತ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಪದವೀಧರರಿಗೆ ಗುಡ್‌ನ್ಯೂಸ್‌; SCDCC ಬ್ಯಾಂಕ್‌ನಲ್ಲಿದೆ 123 ಹುದ್ದೆ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

Continue Reading

ಪ್ರಮುಖ ಸುದ್ದಿ

Karnataka Assembly Live: ಸದನದಲ್ಲಿ ಇಂದು ಕಿಡಿಯೆಬ್ಬಿಸಲಿರುವ ವಾಲ್ಮೀಕಿ ಹಗರಣ; ಉತ್ತರ ನೀಡಲು ಸಿಎಂ ಸಜ್ಜು; ಇಲ್ಲಿದೆ ಕ್ಷಣಕ್ಷಣದ ಲೈವ್‌

Karnataka Assembly Live: ಇಂದು ಸಹ ಬಿಜೆಪಿ ಹಾಗೂ ಜೆಡಿಎಸ್ ಶಾಸಕರಿಂದ ಈ ಚರ್ಚೆ ಮುಂದುವರಿಯಲಿದೆ. ಬಿಜೆಪಿಯ ಸಿಟಿ ರವಿ, ಸುನೀಲ್‌ ಕುಮಾರ್‌, ಯತ್ನಾಳ್ ಮುಂತಾದವರು ಈ ಚರ್ಚೆಯನ್ನು ಮುನ್ನಡೆಸಲಿದ್ದಾರೆ. ಬಳಿಕ ಸಿಎಂ ಸಿದ್ದರಾಮಯ್ಯ ಅವರು ಉತ್ತರ ನೀಡುವ ನಿರೀಕ್ಷೆ ಇದೆ. ನಿನ್ನೆ ಆಶೋಕ್ ಮಾತನಾಡುವಾಗಲೇ ಈ ಬಗ್ಗೆ ಸಿದ್ದರಾಮಯ್ಯ ಸುಳಿವು ನೀಡಿದ್ದರು.

VISTARANEWS.COM


on

karnataka assembly live
Koo

ಬೆಂಗಳೂರು: ವಿಧಾನ ಮಂಡಲ ಮಳೆಗಾಲದ ಅಧಿವೇಶನ (Karnataka Assembly Live, Karnataka Assembly monsoon session) ಇಂದು ಇನ್ನಷ್ಟು ರಂಗೇರಲಿದೆ. ವಾಲ್ಮೀಕಿ ನಿಗಮದ ಅವ್ಯವಹಾರ (Valmiki corporation Scam) ಪ್ರಕರಣದ ಕುರಿತು ನಿನ್ನೆ ವಿಧಾನಸಭೆ ಕಲಾಪದಲ್ಲಿ ಸುದೀರ್ಘ ಚರ್ಚೆ ನಡೆದಿದ್ದು, ವಿಪಕ್ಷ ನಾಯಕ ಆರ್. ಆಶೋಕ್ (R Ashok) ಅವರು ಈ ಚರ್ಚೆಯನ್ನು ಮುನ್ನಡೆಸಿದ್ದರು. ಇಂದು ಅದು ಮುಂದುವರಿಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಕೂಡ ಇದಕ್ಕೆ ಉತ್ತರ ನೀಡಲಿದ್ದಾರೆ.

ನಿನ್ನೆ ಮಾತನಾಡಿದ ಆರ್.‌ ಅಶೋಕ್‌, ಸರ್ಕಾರದ ತಪ್ಪು ನಡೆಗಳ ಬಗ್ಗೆ ಪ್ರಸ್ತಾಪ ಮಾಡಿದ್ದರು. ಹೈಕಮಾಂಡ್‌ಗೆ ಕಪ್ಪಕಾಣಿಕೆ ಸಲ್ಲಿಸಲು ನಿಗಮದ ಹಣವನ್ನು ದುರುಪಯೋಗ ಮಾಡಲಾಗಿದೆ ಎಂದಿದ್ದ ಅಶೋಕ್‌, 187 ಕೋಟಿ ರೂಪಾಯಿ ಅವ್ಯವಹಾರದ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದರು. ಈ ಹಣ ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಹೇಗೆ ವಿನಿಯೋಗವಾಗಬೇಕಿತ್ತು, ಹೇಗೆ ಅಕ್ರಮವಾಗಿದೆ ಎಂಬುದನ್ನು ಎಳೆ ಎಳೆಯಾಗಿ ಬಿಡಿಸಿಟ್ಟಿದ್ದರು. ಆ ಮೂಲಕ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದರು.

ಇಂದು ಸಹ ಬಿಜೆಪಿ ಹಾಗೂ ಜೆಡಿಎಸ್ ಶಾಸಕರಿಂದ ಈ ಚರ್ಚೆ ಮುಂದುವರಿಯಲಿದೆ. ಬಿಜೆಪಿಯ ಸಿಟಿ ರವಿ, ಸುನೀಲ್‌ ಕುಮಾರ್‌, ಯತ್ನಾಳ್ ಮುಂತಾದವರು ಈ ಚರ್ಚೆಯನ್ನು ಮುನ್ನಡೆಸಲಿದ್ದಾರೆ. ಬಳಿಕ ಸಿಎಂ ಸಿದ್ದರಾಮಯ್ಯ ಅವರು ಉತ್ತರ ನೀಡುವ ನಿರೀಕ್ಷೆ ಇದೆ. ನಿನ್ನೆ ಆಶೋಕ್ ಮಾತನಾಡುವಾಗಲೇ ಈ ಬಗ್ಗೆ ಸಿದ್ದರಾಮಯ್ಯ ಸುಳಿವು ನೀಡಿದ್ದರು. ʼನಿಮ್ಮ ವಾದವನ್ನ ಸಮಾಧಾನವಾಗಿ ಕೇಳ್ತೀನಿ. ನಾನು ಉತ್ತರ ಕೊಡುವಾಗಲೂ ಅಷ್ಟೇ ಸಮಾಧಾನದಿಂದ ಕೇಳಬೇಕುʼ ಎಂದಿದ್ದರು.

ʼ187 ಕೋಟಿ ಅಲ್ಲ ಅದು ಬರೀ 87 ಕೋಟಿ ಮಾತ್ರ ವರ್ಗಾವಣೆ ಆಗಿರುವುದು. ಹಣ ಎಲ್ಲಿಯವರೆಗೂ ಸರ್ಕಾರದ ಸುಪರ್ದಿಯಲ್ಲಿರುತ್ತೆ, ಬಳಿಕ ಆ ಹಣ ಯಾರಿಗೆ ಹೋಗುತ್ತೆ ಈ ಬಗ್ಗೆ ಸಂಪೂರ್ಣ ಮಾಹಿತಿ ಕೊಡ್ತೀನಿ. ಇದರಲ್ಲಿ ಯಾರ ಪಾತ್ರ ಎಷ್ಟಿದೆ. ಈ ಹಿಂದೆ ಹೇಗೆ ವ್ಯವಹಾರ ನಡೆದಿದೆ ಅದೆಲ್ಲವನ್ನ ಸಂಪೂರ್ಣವಾಗಿ ಕೊಡ್ತೀನಿʼ ಎಂದು ಹೇಳಿದ್ದರು. ಎಂದರೆ ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದ ಪ್ರಕರಣಗಳನ್ನೂ ಸಿಎಂ ಪ್ರಸ್ತಾವಿಸುವುದು ಖಚಿತವಾಗಿದೆ.

ಇದರಿಂದ ಸದನದಲ್ಲಿ ಇಂದು ಏಟು ಎದಿರೇಟು ಖಚಿತವಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಆಡಳಿತ ಪಕ್ಷ ಸದದ್ಯರು ಸಾಥ್‌ ನೀಡಲಿದ್ದು, ವಿಪಕ್ಷ ಶಾಸಕರು ಕೆರಳಿ ಪ್ರತಿಭಟನೆ ನಡೆಸುವುದೂ ಬಹುತೇಕ ಖಚಿತವಾಗಿದೆ. ಸ್ಪೀಕರ್‌ ಯು.ಟಿ ಖಾದರ್‌ ಅವರು ಶಾಂತಚಿತ್ತರಾಗಿಯೇ ಸದನದ ಕಲಾಪವನ್ನು ನಿರ್ವಹಿಸುತ್ತಿದ್ದರೂ, ಹಲವು ಬಾರಿ ಶಾಸಕರ ವರ್ತನೆ ಅವರಿಗೂ ಸವಾಲಾಗುತ್ತಿದೆ.

ನಿನ್ನೆ ಅಧಿವೇಶನ ಆರಂಭಕ್ಕೂ ಮುನ್ನ ವಿಧಾನಸೌಧದ ನೂತನ ದ್ವಾರವನ್ನು ಸಿಎಂ ಉದ್ಘಾಟಿಸಿದ್ದರು. ವಿಧಾನಸಭೆಯ ಸಭಾಂಗಣವನ್ನು ಇನ್ನಷ್ಟು ಸುಂದರವಾಗಿ ವಿನ್ಯಾಸಗೊಳಿಸಲಾಗಿದ್ದು, ಇದಕ್ಕೆ ಸದಸ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಕಲಾಪ ಆರಂಭದಲ್ಲಿ ಸಂವಿಧಾನದ ಪೀಠಿಕೆಯನ್ನು ಓದಲಾಯಿತು. ನಂತರ ಅಗಲಿದ ಗಣ್ಯರಿಗೆ ಸಂತಾಪ ಸೂಚನೆ ಮಂಡಿಸಲಾಯಿತು.

ಇದನ್ನೂ ಓದಿ: Assembly Session: ಅಧಿವೇಶನದಲ್ಲಿ ಹಗರಣಗಳ ಸದ್ದು; ಮೊದಲ ದಿನವೇ ಮುಗಿಬಿದ್ದ ವಿಪಕ್ಷ ನಾಯಕರು, ಹೆದರಲ್ಲ ಎಂದ ಸಿಎಂ!

Continue Reading
Advertisement
actor darshan samata husband
ಪ್ರಮುಖ ಸುದ್ದಿ2 mins ago

Actor Darshan: ರೇಣುಕಾ ಸ್ವಾಮಿ ದೇಹ ಪೋಸ್ಟ್‌ ಮಾರ್ಟಮ್‌ ಮಾಡಿದ ವೈದ್ಯ ಪವಿತ್ರ ಗೌಡ ಆಪ್ತೆಯ ಪತಿ!

Karnataka Rain
ಮಳೆ14 mins ago

Karnataka Rain : ರಣಭೀಕರ ಮಳೆಗೆ ಶಿರೂರು ಬಳಿ ಗುಡ್ಡ ಕುಸಿತ; ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ

Rishabh Pant
ಕ್ರೀಡೆ24 mins ago

Rishabh Pant: ಡೆಲ್ಲಿ ತೊರೆದು ಮುಂದಿನ ಐಪಿಎಲ್​ನಲ್ಲಿ ಈ ಫ್ರಾಂಚೈಸಿ ಪರ ಆಡಲಿದ್ದಾರೆ ರಿಷಭ್​ ಪಂತ್​

Job Alert
ಉದ್ಯೋಗ35 mins ago

Job Alert: ಅಂಚೆ ಇಲಾಖೆಯಿಂದ ಬೃಹತ್‌ ನೇಮಕಾತಿ; ಕರ್ನಾಟಕದಲ್ಲಿಯೂ ಇದೆ 1,940 ಹುದ್ದೆ: ಹೀಗೆ ಅಪ್ಲೈ ಮಾಡಿ

Viral Video
Latest50 mins ago

Viral Video: ಕಾಮುಕರ ಹಾವಳಿ ಮಿತಿ‌ ಮೀರಿದೆ; ಬೀದಿ ನಾಯಿಯನ್ನೂ ಇವರು ಬಿಡುತ್ತಿಲ್ಲ! ಆಘಾತಕಾರಿ ವಿಡಿಯೊ

Jitan Sahani
ದೇಶ58 mins ago

Jitan Sahani: ಬಿಹಾರದಲ್ಲಿ ವಿಕಾಸಶೀಲ ಇನ್ಸಾನ್‌ ಪಕ್ಷದ ಮುಖ್ಯಸ್ಥನ ತಂದೆಯ ಭೀಕರ ಹತ್ಯೆ; ಮನೆ ತುಂಬ ರಕ್ತ!

karnataka assembly live
ಪ್ರಮುಖ ಸುದ್ದಿ1 hour ago

Karnataka Assembly Live: ಸದನದಲ್ಲಿ ಇಂದು ಕಿಡಿಯೆಬ್ಬಿಸಲಿರುವ ವಾಲ್ಮೀಕಿ ಹಗರಣ; ಉತ್ತರ ನೀಡಲು ಸಿಎಂ ಸಜ್ಜು; ಇಲ್ಲಿದೆ ಕ್ಷಣಕ್ಷಣದ ಲೈವ್‌

David Warner
ಕ್ರೀಡೆ1 hour ago

David Warner: ​ಚಾಂಪಿಯನ್ಸ್ ಟ್ರೋಫಿಗೆ ವಾರ್ನರ್​ ಆಯ್ಕೆ ಇಲ್ಲ ಎಂದ ಜಾರ್ಜ್​ ಬೈಲಿ

Kannada New Movie
ಸ್ಯಾಂಡಲ್ ವುಡ್1 hour ago

Kannada New Movie: ಸೆಟ್ಟೇರಿತು ‘ಆಕಾಶ್’, ‘ಅರಸು’ ಚಿತ್ರಗಳ ಡೈರೆಕ್ಟರ್ ಹೊಸ ಸಿನಿಮಾ; ಕಿರುತೆರೆಯ ಈ ಪ್ರತಿಭೆ ನಾಯಕ

Kannada In Madrasa
ಕರ್ನಾಟಕ2 hours ago

Kannada In Madrasa: ರಾಜ್ಯದ ಮದರಸಾಗಳಲ್ಲಿ ಇನ್ನು ಕನ್ನಡ ಕಲಿಕೆ ಕಡ್ಡಾಯ; ಶೀಘ್ರವೇ ಆದೇಶ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ18 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ3 days ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

ಟ್ರೆಂಡಿಂಗ್‌