Skydiving: ಸ್ಕೈಡೈವಿಂಗ್‌ ಮಾಡಿದ ಕೇಂದ್ರ ಸಚಿವ ಗಜೇಂದ್ರ ಸಿಂಗ್‌; ಮೈನವಿರೇಳಿಸುವ ವಿಡಿಯೊ ಇಲ್ಲಿದೆ - Vistara News

ದೇಶ

Skydiving: ಸ್ಕೈಡೈವಿಂಗ್‌ ಮಾಡಿದ ಕೇಂದ್ರ ಸಚಿವ ಗಜೇಂದ್ರ ಸಿಂಗ್‌; ಮೈನವಿರೇಳಿಸುವ ವಿಡಿಯೊ ಇಲ್ಲಿದೆ

Skydiving: 56 ವರ್ಷದ ಗಜೇಂದ್ರ ಸಿಂಗ್‌ ಶೆಖಾವತ್‌ ಅವರು ಸ್ಕೈಡೈವಿಂಗ್‌ ಮಾಡಿದ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ. ಮತ್ತೊಬ್ಬ ಸ್ಕೈಡೈವರ್‌ ಜತೆಗೆ ಅವರು ಸ್ಕೈಡೈವಿಂಗ್‌ ಮಾಡಿದ್ದು, ವಿಡಿಯೊಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಶನಿವಾರ (ಜುಲೈ 13) ವಿಶ್ವ ಸ್ಕೈಡೈವಿಂಗ್‌ ದಿನವಾದ ಕಾರಣ ಹರಿಯಾಣದ ನರ್ನೌಲ್‌ ಏರ್‌ಸ್ಟ್ರಿಪ್‌ನಲ್ಲಿರುವ ಏಕೈಕ ನಾಗರಿಕ ಸ್ಕೈಡೈವಿಂಗ್‌ ಡ್ರಾಪ್‌ ಜೋನ್‌ನಲ್ಲಿ ಗಜೇಂದ್ರ ಸಿಂಗ್‌ ಶೆಖಾವತ್‌ ಅವರು ಸ್ಕೈಡೈವಿಂಗ್‌ ಮಾಡಿದರು.

VISTARANEWS.COM


on

Skydiving
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ರಾಜಕಾರಣಿಗಳು ಎಂದರೆ ಸಾಮಾನ್ಯವಾಗಿ ವೇದಿಕೆಗಳಲ್ಲಿ ಅಬ್ಬರದ ಭಾಷಣ ಮಾಡುವುದು, ಯೋಜನೆಗಳಿಗೆ ಚಾಲನೆ, ಶಂಕುಸ್ಥಾಪನೆ ನೆರವೇರಿಸುವುದು ಸೇರಿ ಹತ್ತಾರು ಚಟುವಟಿಕೆಗಳಲ್ಲಿ ಭಾಗಿಯಾಗುವುದೇ ಅವರ ನಿತ್ಯ ಕಾಯಕವಾಗಿರುತ್ತದೆ. ಹೆಚ್ಚೆಂದರೆ, ರಾಜಕಾರಣಿಗಳು (Politicians) ಮದುವೆ ಸೇರಿ ಕೆಲ ಕಾರ್ಯಕ್ರಮಗಳಿಗೆ ಹೋಗುತ್ತಾರೆ. ಸಾಹಸ ಕ್ರೀಡೆಗಳಲ್ಲಿ ರಾಜಕಾರಣಿಗಳು ಆಸಕ್ತಿ ಹೊಂದುವುದು, ಪಾಲ್ಗೊಳ್ಳುವುದು ಅಪರೂಪ. ಆದರೆ, ಇದಕ್ಕೆ ಅಪವಾದ ಎಂಬಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್‌ ಶೆಖಾವತ್‌ (Gajendra Singh Shekhawat) ಅವರು ಸ್ಕೈಡೈವಿಂಗ್‌ (Skydiving) ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಹೌದು, ಶನಿವಾರ (ಜುಲೈ 13) ವಿಶ್ವ ಸ್ಕೈಡೈವಿಂಗ್‌ ದಿನವಾದ (World Skydiving Day) ಕಾರಣ ಹರಿಯಾಣದ ನರ್ನೌಲ್‌ ಏರ್‌ಸ್ಟ್ರಿಪ್‌ನಲ್ಲಿರುವ ಏಕೈಕ ನಾಗರಿಕ ಸ್ಕೈಡೈವಿಂಗ್‌ ಡ್ರಾಪ್‌ ಜೋನ್‌ನಲ್ಲಿ ಗಜೇಂದ್ರ ಸಿಂಗ್‌ ಶೆಖಾವತ್‌ ಅವರು ಸ್ಕೈಡೈವಿಂಗ್‌ ಮಾಡಿದರು. ಸ್ಕೈಡೈವಿಂಗ್‌ಗೂ ಮುನ್ನ ಕೇಂದ್ರ ಸಚಿವರು ಪರಿಣತರಿಂದ ಸ್ಕೈಡೈವಿಂಗ್‌ ಕುರಿತು ಮಾಹಿತಿ ಪಡೆದರು. ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ತಿಳಿದುಕೊಂಡರು. ನಂತರ ಅವರು ಆಗಸದೆತ್ತರಕ್ಕೆ ತೆರಳಿ, ಅಲ್ಲಿಂದ ಸ್ಕೈಡೈವ್‌ ಮಾಡಿದರು. 56 ವರ್ಷದ ಗಜೇಂದ್ರ ಸಿಂಗ್‌ ಶೆಖಾವತ್‌ ಅವರು ಸ್ಕೈಡೈವಿಂಗ್‌ ಮಾಡಿದ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ಇನ್ನೊಬ್ಬ ಸ್ಕೈಡೈವರ್‌ ನೆರವಿನೊಂದಿಗೆ ಗಜೇಂದ್ರ ಸಿಂಗ್‌ ಶೆಖಾವತ್‌ ಅವರು ಸ್ಕೈಡೈವ್‌ ಮಾಡಿದ್ದಾರೆ. ಆಗಸದಲ್ಲಿಯೇ ಮತ್ತೊಬ್ಬ ಸ್ಕೈಡೈವರ್‌ “ಹೇಗೆ ಅನಿಸುತ್ತಿದೆ” ಎಂಬ ಪ್ರಶ್ನೆಗೆ ಕೇಂದ್ರ ಸಚಿವರು, ” ಗುಡ್‌ ಗುಡ್‌, ಮಜಾ ಬಂತು” ಎಂಬುದಾಗಿ ಪ್ರತಿಕ್ರಿಯಿಸಿದ್ದಾರೆ. ಸ್ಕೈಡೈವಿಂಗ್‌ಗೂ ಮೊದಲು ಅವರು “ನಾನು ತುಂಬ ಉತ್ಸುಕನಾಗಿದ್ದೇನೆ” ಎಂದು ಹೇಳಿದ್ದರು. ಸ್ಕೈಡೈವಿಂಗ್‌ ಬಳಿಕ ಅವರು ಸುರಕ್ಷಿತವಾಗಿ ಲ್ಯಾಂಡ್‌ ಆದರು. ಇದಾದ ಬಳಿಕ ಅವರು ತಮಗೆ ಆದ ಅನುಭವವನ್ನು ಹಂಚಿಕೊಂಡರು.

” ಸ್ಕೈಡೈವಿಂಗ್‌ ಮಾಡಲು ಅವಕಾಶ ಸಿಕ್ಕಿದ್ದು ನನಗೆ ಸಂತಸ ತಂದಿದೆ. ಇದು ನನ್ನ ಜೀವನದ ಥ್ರಿಲ್ಲಿಂಗ್‌ ದಿನಗಳಲ್ಲಿ ಒಂದಾಗಿದೆ. ಜಗತ್ತಿನಾದ್ಯಂತ ಸ್ಕೈಡೈವಿಂಗ್‌ ಮಾಡುವುದು, ಈ ಏರೋಸ್ಪೋರ್ಟ್‌ಗೆ ಉತ್ತೇಜನ ನೀಡುವುದು ಪ್ರಮುಖ ಸಂಗತಿಯಾಗಿದೆ. ಅದರಲ್ಲೂ, ಇದೇ ಮೊದಲ ಬಾರಿಗೆ ವಿಶ್ವ ಸ್ಕೈಡೈವಿಂಗ್‌ ಡೇ ಆಚರಿಸಲಾಗುತ್ತಿದೆ. ಏರೋಸ್ಪೋರ್ಟ್ಸ್‌ ಹಾಗೂ ಪ್ರವಾಸೋದ್ಯಮವು ಇಂದಿನಿಂದ ಇನ್ನಷ್ಟು ಬಲಿಷ್ಠವಾಗಲಿದೆ ಎಂಬ ನಂಬಿಕೆ ಇದೆ” ಎಂದು ಅವರು ಲ್ಯಾಂಡ್‌ ಆದ ಬಳಿಕ ಹೇಳಿದರು.

ಇದನ್ನೂ ಓದಿ: Viral Video: ʼಡ್ಯೂಟಿ ಮುಗಿದ ಮೇಲೆ ಮನೆ ಬಾʼ ಎಂದು ಕರೆದ ASI; ಆಮೇಲೆ ಆಗಿದ್ದೇ ಬೇರೆ! ಸ್ಪೈಸ್‌ಜೆಟ್‌ ಸಿಬ್ಬಂದಿ ವಿಡಿಯೋ ವೈರಲ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Pooja Khedkar: ಪೂಜಾ ಖೇಡ್ಕರ್‌ಗೆ ಮತ್ತೊಂದು ಬಿಗ್‌ ಶಾಕ್‌; ತರಬೇತಿಗೆ ತಡೆ, ಅಕಾಡೆಮಿಗೆ ವಾಪಸ್‌

Pooja Khedkar: ಮಸೂರಿಯಲ್ಲಿರುವ ಲಾಲ್‌ ಬಹದ್ದೂರ್‌ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಸೇವಾ ಅಕಾಡೆಮಿ ಖೇಡ್ಕರ್‌ ಅವರನ್ನು ತರಬೇತಿ ಶಿಬಿರಕ್ಕೆ ಕರೆದು ಅವರ ತರಬೇತಿಯನ್ನು ತಡೆ ಹಿಡಿದಿರುವ ಬಗ್ಗೆ ಆದೇಶ ಹೊರಡಿಸಲಾಗಿದೆ. ಮಹಾರಾಷ್ಟ್ರದ ರಾಜ್ಯ ಸರ್ಕಾರದ ಜಿಲ್ಲಾ ತರಬೇತಿ ಕಾರ್ಯಕ್ರಮದಿಂದ “ನಿಮ್ಮನ್ನು ತರಬೇತಿಯಿಂದ ರಿಲೀವ್‌ ಮಾಡಲಾಗಿದೆ. ಆದಷ್ಟು ಬೇಗ ಅಕಾಡೆಮಿಗೆ ಬಂದು ಸೇರಿಕೊಳ್ಳಿ” ಎಂದು ಅಕಾಡೆಮಿ ಖೇಡ್ಕರ್‌ ಅವರಿಗೆ ಹೇಳಿದೆ.

VISTARANEWS.COM


on

Pooja Khedkar
Koo

ಮುಂಬೈ: ಮಹಾರಾಷ್ಟ್ರ ಕೇಡರ್‌ನ ಐಎಎಸ್‌ ಅಧಿಕಾರಿ, ಅತಿಯಾದ ದರ್ಪ, ನಕಲಿ ದಾಖಲೆ ಸೃಷ್ಟಿಯಿಂದಲೇ ದೇಶಾದ್ಯಂತ ಗಮನ ಸೆಳೆದಿರುವ ಟ್ರೈನಿ ಅಧಿಕಾರಿ (Trainee IAS Officer) ಪೂಜಾ ಖೇಡ್ಕರ್‌ (Pooja Khedkar) ಅವರ ಒಂದೊಂದೇ ಕಳ್ಳಾಟಗಳು ಬಯಲಾಗುತ್ತಿವೆ. ಇದರ ಬೆನ್ನಲ್ಲೇ ಪೂಜಾಗೆ ಮತ್ತೊಂದು ಶಾಕ್‌ ಎದುರಾಗಿದ್ದು, ಅವರ ತರಬೇತಿಯನ್ನ ತಡೆ ಹಿಡಿಯಲಾಗಿದೆ. ನಕಲಿ ದಾಖಲ್ ಸೃಷ್ಟಿ ಆರೋಪ ಎದುರಿಸುತ್ತಿರುವ ಪೂಜಾ ಖೇಡ್ಕರ್‌ ವಿರುದ್ಧ ಇದು ಮೊದಲ ಕ್ರಮವಾಗಿದೆ.

ಮಸೂರಿಯಲ್ಲಿರುವ ಲಾಲ್‌ ಬಹದ್ದೂರ್‌ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಸೇವಾ ಅಕಾಡೆಮಿ ಖೇಡ್ಕರ್‌ ಅವರನ್ನು ತರಬೇತಿ ಶಿಬಿರಕ್ಕೆ ಕರೆದು ಅವರ ತರಬೇತಿಯನ್ನು ತಡೆ ಹಿಡಿದಿರುವ ಬಗ್ಗೆ ಆದೇಶ ಹೊರಡಿಸಲಾಗಿದೆ. ಮಹಾರಾಷ್ಟ್ರದ ರಾಜ್ಯ ಸರ್ಕಾರದ ಜಿಲ್ಲಾ ತರಬೇತಿ ಕಾರ್ಯಕ್ರಮದಿಂದ “ನಿಮ್ಮನ್ನು ತರಬೇತಿಯಿಂದ ರಿಲೀವ್‌ ಮಾಡಲಾಗಿದೆ. ಆದಷ್ಟು ಬೇಗ ಅಕಾಡೆಮಿಗೆ ಬಂದು ಸೇರಿಕೊಳ್ಳಿ” ಎಂದು ಅಕಾಡೆಮಿ ಖೇಡ್ಕರ್‌ ಅವರಿಗೆ ಹೇಳಿದೆ.

ತಮ್ಮ ಖಾಸಗಿ ಕಾರಿಗೆ ‘ಕೆಂಪು ಗೂಟ’ ಅಳವಡಿಸಿದ್ದು ಸೇರಿ ಹಲವು ರೀತಿಯಲ್ಲಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು, ವರ್ಗಾವಣೆಯ ಶಿಕ್ಷೆ ಅನುಭವಿಸುತ್ತಿರುವ ಪೂಜಾ ಖೇಡ್ಕರ್‌ ಅವರು ನಕಲಿ ಜಾತಿ ಪ್ರಮಾಣಪತ್ರ, ವಿಶೇಷ ಚೇತನ ಎಂದು ಸುಳ್ಳು ದಾಖಲೆ ಸೃಷ್ಟಿ, ವಯಸ್ಸಿನ ಕುರಿತು ಕೂಡ ಫೇಕ್‌ ಡಾಕ್ಯುಮೆಂಟ್‌ ತಯಾರಿಸಿದ ಆರೋಪಗಳನ್ನೂ ಎದುರಿಸುತ್ತಿದ್ದಾರೆ.

ನಿಯಮಿತ ಅಧಿಕಾರವನ್ನು ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಪುಣೆಯಿಂದ (ಅಸಿಸ್ಟಂಟ್‌ ಕಲೆಕ್ಟರ್)‌ ವಾಶಿಂಗೆ ವರ್ಗಾವಣೆಗೊಂಡಿರುವ 34 ವರ್ಷದ ಅಧಿಕಾರಿಯು, ಒಬಿಸಿ ಜಾತಿ ಪ್ರಮಾಣಪತ್ರ ಲಗತ್ತಿಸಿ ಯುಪಿಎಸ್‌ಸಿ ಪರೀಕ್ಷೆ ಬರೆದು ತೇರ್ಗಡೆ ಹೊಂದಿದ್ದಾರೆ. ಆದರೆ, ಅವರು ಒಬಿಸಿ ಜಾತಿ ಪ್ರಮಾಣಪತ್ರದ ನಕಲಿ ದಾಖಲೆ ಸೃಷ್ಟಿಸಿದ್ದಾರೆ. ಇನ್ನು ವಿಶೇಷ ಚೇತನ ಎಂಬುದಾಗಿಯೂ ಫೇಕ್‌ ಡಾಕ್ಯುಮೆಂಟ್‌ ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಮೆಡಿಕಲ್‌ ಟೆಸ್ಟ್‌ ಪ್ರಕಾರ ಪೂಜಾ ಖೇಡ್ಕರ್‌ ಅವರು ಫಿಟ್‌ ಇದ್ದಾರೆ ಎಂದು ಹೇಳಲಾಗುತ್ತಿದೆ.‌ 2007ರಲ್ಲಿ ಅವರು ಎಂಬಿಬಿಎಸ್‌ಗೆ ಅರ್ಜಿ ಸಲ್ಲಿಸಿದಾಗ ದೈಹಿಕವಾಗಿ ಫಿಟ್‌ ಇರುವುದಾಗಿ ದಾಖಲೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ವಯಸ್ಸಿನ ಕುರಿತೂ ಸುಳ್ಳು ದಾಖಲೆ

ಜಾತಿ, ವಿಶೇಷ ಚೇತನ ಪ್ರಮಾಣಪತ್ರದ ಜತೆಗೆ ಪೂಜಾ ಖೇಡ್ಕರ್‌ ಅವರು ವಯಸ್ಸಿನ ಕುರಿತು ಕೂಡ ಸುಳ್ಳು ದಾಖಲೆ ಸಲ್ಲಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 2020ರಿಂದ 2023ರ ಅವಧಿಯಲ್ಲಿ ಅವರು ಸಲ್ಲಿಸಿದ ದಾಖಲೆಗಳ ಪ್ರಕಾರ, ಮೂರು ವರ್ಷದಲ್ಲಿ ಅವರ ವಯಸ್ಸು ದಾಖಲೆಯಲ್ಲಿ ಒಂದೇ ವರ್ಷ ಹೆಚ್ಚಾಗಿದೆ. ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಲು ವಯಸ್ಸಿನ ಮಿತಿ ಇರುವ ಕಾರಣ ಅವರು ವಯಸ್ಸಿನ ಕುರಿತು ಕೂಡ ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂದು ತಿಳಿದುಬಂದಿದೆ. ಇದು ಈಗ ಭಾರಿ ಚರ್ಚೆಗೂ ಗ್ರಾಸವಾಗಿದೆ.

27 ಸಾವಿರ ರೂ. ದಂಡ ಬಿದ್ದಿದ್ದೇಕೆ?

ಅಧಿಕಾರದ ದುರುಪಯೋಗ, ನಕಲಿ ದಾಖಲೆ ಸೃಷ್ಟಿ ಜತೆಗೆ ಸಂಚಾರ ದಟ್ಟಣೆ ನಿಯಮಗಳ ಉಲ್ಲಂಘನೆಯಲ್ಲೂ ಮುಂದಿದ್ದಾರೆ. ವಾಶಿಂ ಮಹಿಳಾ ಪೊಲೀಸರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡ ಪೂಜಾ ಖೇಡ್ಕರ್‌ ಅವರು ಎರಡು ತಾಸು ಚರ್ಚಿಸಿದ್ದಾರೆ. ಯಾವ ವಿಷಯದ ಕುರಿತು ಚರ್ಚಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗದಿದ್ದರೂ, ಸಂಚಾರ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ 27 ಸಾವಿರ ರೂ. ದಂಡ ವಿಧಿಸಲಾಗಿದ್ದು, ಅದರ ನೋಟಿಸ್‌ ನೀಡಲು ಪೊಲೀಸರು ಅವರ ಮನೆಗೆ ತೆರಳಿದ್ದರು ಎಂದು ಮೂಲಗಳು ತಿಳಿಸಿವೆ.

ಪೂಜಾ ಖೇಡ್ಕರ್‌ ಪ್ರತಿಕ್ರಿಯೆ ಏನು?

ನಕಲಿ ದಾಖಲೆ, ಅಧಿಕಾರ ದುರುಪಯೋಗ ಸೇರಿ ಹಲವು ಆರೋಪಗಳ ಕುರಿತು ತನಿಖೆಗೆ ಆದೇಶಿಸಲಾಗಿದ್ದು, ಮೊದಲ ಬಾರಿಗೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. “ಯಾರೇ ಆಗಲಿ, ಆರೋಪ ಸಾಬೀತಾಗುವವರೆಗೆ ಅವರು ಆರೋಪಿಯೇ. ಮಾಧ್ಯಮಗಳ ವರದಿಗಳು, ತೀರ್ಪುಗಳು ನಾನು ಏನೆಂಬುದನ್ನು ತೀರ್ಮಾನಿಸುವುದಿಲ್ಲ. ತನಿಖೆಗೆ ರಚನೆಯಾಗಿರುವ ಸಮಿತಿಯ ತೀರ್ಮಾನದ ಬಳಿಕವೇ ಸತ್ಯ ಏನೆಂಬುದು ಗೊತ್ತಾಗುತ್ತದೆ. ಮಾಧ್ಯಮಗಳು ಅಥವಾ ಜನರು ನನ್ನನ್ನು ತೀರ್ಮಾನಿಸುವುದಿಲ್ಲ” ಎಂದು ಮಾಧ್ಯಮಗಳಿಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Sadananda Suvarna : ʼಗುಡ್ಡದ ಭೂತʼ ಖ್ಯಾತಿಯ ಹಿರಿಯ ರಂಗಕರ್ಮಿ, ನಿರ್ದೇಶಕ ಸದಾನಂದ ಸುವರ್ಣ ಇನ್ನಿಲ್ಲ

Continue Reading

ದೇಶ

NEET UG 2024: ನೀಟ್‌ ಅಕ್ರಮ; ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಮತ್ತಿಬ್ಬರು ಆರೋಪಿಗಳು ಅರೆಸ್ಟ್‌

NEET UG 2024: ಇನ್ನು ಬಂಧಿತರನ್ನು ಪಂಕಜ್‌ ಕುಮಾರ್‌ ಮತ್ತು ರಾಜು ಸಿಂಗ್‌ ಎಂದು ಗುರುತಿಸಲಾಗಿದೆ. ಈ ಇಬ್ಬರೂ ಪ್ರಕರಣದ ಪ್ರಮುಖ ಆರೋಪಿ ಸಂಜೀವ್‌ ಮುಖಿಯಾ ಜೊತೆ ನೇರ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ಪಂಕಜ್‌ ಕುಮಾರ್‌ 2017 ಬ್ಯಾಚ್‌ನ ಸಿವಿಲ್‌ ಎಂಜಿನಿಯರ್‌ ಆಗಿದ್ದು, ಈತ ಜಮ್ಶೆಡ್‌ಪುರದ ಎನ್‌ಐಟಿಯಲ್ಲಿ ಎಂಜಿಯರಿಂಗ್‌ ಪದವಿ ಪಡೆದಿದ್ದಾನೆ. ಈತ ಹಜಾರಿಭಾಗ್‌ನಲ್ಲಿ ಪ್ರಶ್ನೆ ಪತ್ರಿಕೆ ಕದ್ದಿದ್ದ ಎನ್ನಲಾಗಿದೆ.

VISTARANEWS.COM


on

NEET-UG 2024
Koo

ಪಾಟ್ನಾ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG 2024) ಪ್ರಶ್ನೆಪತ್ರಿಕೆ (NEET UG 2024 Paper Leak) ಸೋರಿಕೆ ಪ್ರಕರಣದ ಕಿಂಗ್‌ಪಿನ್‌ ಬಂಧನ ಆಗಿರುವ ಬೆನ್ನಲ್ಲೇ ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ಸಿಬಿಐ ಅರೆಸ್ಟ್‌ ಮಾಡಿದೆ. ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಆರೋಪಿಗಳನ್ನು ಅರೆಸ್ಟ್‌ ಮಾಡಲಾಗಿದೆ.

ಇನ್ನು ಬಂಧಿತರನ್ನು ಪಂಕಜ್‌ ಕುಮಾರ್‌ ಮತ್ತು ರಾಜು ಸಿಂಗ್‌ ಎಂದು ಗುರುತಿಸಲಾಗಿದೆ. ಈ ಇಬ್ಬರೂ ಪ್ರಕರಣದ ಪ್ರಮುಖ ಆರೋಪಿ ಸಂಜೀವ್‌ ಮುಖಿಯಾ ಜೊತೆ ನೇರ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ಪಂಕಜ್‌ ಕುಮಾರ್‌ 2017 ಬ್ಯಾಚ್‌ನ ಸಿವಿಲ್‌ ಎಂಜಿನಿಯರ್‌ ಆಗಿದ್ದು, ಈತ ಜಮ್ಶೆಡ್‌ಪುರದ ಎನ್‌ಐಟಿಯಲ್ಲಿ ಎಂಜಿಯರಿಂಗ್‌ ಪದವಿ ಪಡೆದಿದ್ದಾನೆ. ಈತ ಹಜಾರಿಭಾಗ್‌ನಲ್ಲಿ ಪ್ರಶ್ನೆ ಪತ್ರಿಕೆ ಕದ್ದಿದ್ದ ಎನ್ನಲಾಗಿದೆ. ಸದ್ಯ ಆತನನ್ನು ಪಾಟ್ನಾದಿಂದ ಅರೆಸ್ಟ್‌ ಮಾಡಲಾಗಿದೆ. ಕಾಗದವನ್ನು ಕದ್ದು ಇತರ ಗ್ಯಾಂಗ್ ಸದಸ್ಯರಿಗೆ ರವಾನಿಸಲು ಕುಮಾರ್‌ಗೆ ಸಹಾಯ ಮಾಡಿದ ಆರೋಪದ ಮೇಲೆ ರಾಜು ಸಿಂಗ್‌ನನ್ನು ಸಿಬಿಐ ಬಂಧಿಸಿದೆ, ಸಿಂಗ್ ಅವರನ್ನು ಹಜಾರಿಬಾಗ್‌ನಿಂದ ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ,

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG 2024) ಅಕ್ರಮ ನಡೆದಿದ್ದು, ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂಬುದಾಗಿ ಸಲ್ಲಿಕೆಯಾದ ಹಲವು ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸುತ್ತಿದೆ. ನೀಟ್‌ ಪರೀಕ್ಷೆಯನ್ನೇ ರದ್ದುಗೊಳಿಸಬೇಕು ಎಂದು ಆಗ್ರಹಿಸಲಾಗುತ್ತಿದೆ. ಇದರ ಮಧ್ಯೆಯೇ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮಹತ್ವದ ಮುನ್ನಡೆ ಸಾಧಿಸಿದ್ದು, ನೀಟ್‌ ಪ್ರಶ್ನೆಪತ್ರಿಕೆ (NEET UG 2024 Paper Leak) ಸೋರಿಕೆ ಪ್ರಕರಣದ ಕಿಂಗ್‌ಪಿನ್‌ ಆಗಿರುವ ರಾಕೇಶ್‌ ರಂಜನ್‌ (Rakesh Ranjan) ಎಂಬಾತನನ್ನು ಬಂಧಿಸಿದ್ದರು.

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಆರೋಪಿಗಳನ್ನು ಸಿಬಿಐ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದರ ಮಧ್ಯೆಯೇ, ಬಿಹಾರದ ಪಟನಾದಲ್ಲಿ ಎರಡು ಕಡೆ ಹಾಗೂ ಪಶ್ಚಿಮ ಬಂಗಾಳದ ಕೋಲ್ಕೊತಾದಲ್ಲಿ ಎರಡು ಕಡೆ ಸಿಬಿಐ ಅಧಿಕಾರಿಗಳು ಗುರುವಾರ (ಜುಲೈ 11) ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಬಿಹಾರದ ಪಟನಾದಲ್ಲಿ ರಾಕೇಶ್‌ ರಂಜನ್‌ ಅಲಿಯಾಸ್‌ ರಾಕಿಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಈತನನ್ನು ಕೋರ್ಟ್‌ಗೂ ಹಾಜರುಪಡಿಸಲಾಗಿದ್ದು, 10 ದಿನ ಸಿಬಿಐ ಕಸ್ಟಡಿಗೆ ನೀಡಲಾಗಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಹಾಗೂ ಪಶ್ಚಿಮ ಬಂಗಾಳದಲ್ಲಿ ಅಧಿಕಾರಿಗಳು ಶೋಧ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.

ಜುಲೈ 18ರಂದು ಸುಪ್ರೀಂ ಕೋರ್ಟ್‌ ವಿಚಾರಣೆ

ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂಬುದಾಗಿ ಸಲ್ಲಿಕೆಯಾದ ಹಲವು ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್‌, ಜುಲೈ 18ಕ್ಕೆ ವಿಚಾರಣೆಯನ್ನು ಮುಂದೂಡಿದೆ. ನೀಟ್‌ ಅಕ್ರಮದ ಕುರಿತಂತೆ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ವರದಿಗಳನ್ನು ಪಡೆದಿರುವ ಸುಪ್ರೀಂ ಕೋರ್ಟ್‌, ಜುಲೈ 18ರಂದು ವಿಚಾರಣೆ ನಡೆಸಲು ತೀರ್ಮಾನಿಸಿತು.

ಏನಿದು ಪ್ರಕರಣ?

ನೀಟ್‌ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್‌ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್‌ ಮಾರ್ಕ್ಸ್‌ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್‌ ಮೈಂಡ್‌ ಅಮಿತ್‌ ಆನಂದ್‌ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.

ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ಇದನ್ನೂ ಓದಿ: Hit And Run Case: ಮುಂಬೈ ಹಿಟ್‌ ಆ್ಯಂಡ್‌ ರನ್‌ ಕೇಸ್‌; ತನಗೆ ಕುಡಿಯುವ ಅಭ್ಯಾಸ ಇದೆ ಎಂದು ಒಪ್ಪಿಕೊಂಡ ಆರೋಪಿ

Continue Reading

ದೇಶ

Hit And Run Case: ಮುಂಬೈ ಹಿಟ್‌ ಆ್ಯಂಡ್‌ ರನ್‌ ಕೇಸ್‌; ತನಗೆ ಕುಡಿಯುವ ಅಭ್ಯಾಸ ಇದೆ ಎಂದು ಒಪ್ಪಿಕೊಂಡ ಆರೋಪಿ

Hit And Run Case: ಮಿಹಿರ್‌ನ ಪೊಲೀಸ್‌ ಕಸ್ಟಡಿ ಮುಗಿದಿರುವ ಹಿನ್ನೆಲೆ ಮಂಗಳವಾರ ಶಿವಧಿ ಕೋರ್ಟ್‌ಗೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿದೆ. ಇನ್ನು ಈ ಪ್ರಕರಣದ ಮತ್ತೊರ್ವ ಆರೋಪಿ ಮಿಹಿರ್‌ನ ತಂದೆ ರಾಜೇಶ್‌ ಶಾ ಸದ್ಯ ಜಾಮೀನಿನ ಮೂಲಕ ಹೊರಬಂದಿದ್ದಾರೆ.

VISTARANEWS.COM


on

hit and run case
Koo

ಮುಂಬೈ: ಜು. 7ರಂದು ಮಹಾರಾಷ್ಟ್ರದ ವರ್ಲಿಯಲ್ಲಿ ಬಿಎಂಡಬ್ಲ್ಯು ಕಾರು ಚಲಾಯಿಸಿ(Hit And Run Case), ಸ್ಕೂಟರ್‌ಗೆ ಗುದ್ದಿ ಓರ್ವ ಮಹಿಳೆಯ ಸಾವಿಗೆ ಕಾರಣನಾದ ಶಿವಸೇನೆ ಮುಖಂಡ ರಾಜೇಶ್‌ ಶಾ (Rajesh Shah) ಅವರ ಪುತ್ರ ಮಿಹಿರ್‌ ಶಾ (Mihir Shah)ಗೆ ಜು.30ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಮಿಹಿರ್‌ನ ಪೊಲೀಸ್‌ ಕಸ್ಟಡಿ ಮುಗಿದಿರುವ ಹಿನ್ನೆಲೆ ಮಂಗಳವಾರ ಶಿವಧಿ ಕೋರ್ಟ್‌ಗೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿದೆ. ಇನ್ನು ಈ ಪ್ರಕರಣದ ಮತ್ತೊರ್ವ ಆರೋಪಿ ಮಿಹಿರ್‌ನ ತಂದೆ ರಾಜೇಶ್‌ ಶಾ ಸದ್ಯ ಜಾಮೀನಿನ ಮೂಲಕ ಹೊರಬಂದಿದ್ದಾರೆ.

ಶಿವಸೇನೆ (ಏಕನಾಥ್ ಶಿಂಧೆ ಬಣ) ನಾಯಕರಾಗಿರುವ ರಾಜೇಶ್‌ ಶಾ ಅವರ 24 ವರ್ಷದ ಪುತ್ರ ಮಿಹಿರ್‌ ಶಾ ಕುಡಿದು ಕಾರು ಚಲಾಯಿಸಿ ವರ್ಲಿಯಲ್ಲಿ ಮೀನು ಮಾರಾಟಗಾರ ದಂಪತಿ ಪ್ರದೀಪ್ ನಖ್ವಾ ಮತ್ತು ಕಾವೇರಿ ನಖ್ವಾ ಅವರು ಸಂಚರಿಸುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದ. ಭಾನುವಾರ ಬೆಳಿಗ್ಗೆ 5.30ರ ಸುಮಾರಿಗೆ ಈ ಘಟನೆ ನಡೆದಿತ್ತು. ಕಾರು ಡಿಕ್ಕಿ ಹೊಡೆದ ಪರಿಣಾಮ ಪ್ರದೀಪ್ ಎಸೆಯಲ್ಪಟ್ಟರೆ, ಕಾವೇರಿ ಅವರ ದೇಹ ಚಕ್ರಗಳ ಅಡಿಯಲ್ಲಿ ಸಿಕ್ಕಿ ಬಿದ್ದಿದ್ದು, ಕಾರು 1.5 ಕಿ.ಮೀ. ದೂರ ಎಳೆದೊಯ್ದಿತ್ತು.

ಅಪಘಾತ ನಡೆದ ನಂತರ ಮಿಹಿರ್‌ ಚಾಲಕ ರಾಜರ್ಷಿ ಬಿದಾವತ್‌ನನ್ನು ಡ್ರೈವರ್‌ ಸೀಟ್‌ನಲ್ಲಿ ಕೂರಿಸಿದ್ದನು. ಬಳಿಕ ಅವರು ಬಾಂದ್ರಾದ ಕಲಾ ನಗರಕ್ಕೆ ತೆರಳಿ ಅಲ್ಲಿ ನಂಬರ್ ಪ್ಲೇಟ್ ಅನ್ನು ತೆಗೆದು ತಲೆ ಮರೆಸಿಕೊಂಡಿದ್ದರು. ಈ ವೇಳೆ ಮಿಹಿರ್‌ ಶಾ ತನ್ನ ಪ್ರೇಯಸಿಯೊಂದಿಗೆ ಸುಮಾರು 40 ಬಾರಿ ಮಾತನಾಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಕಲಾ ನಗರದಲ್ಲಿ ಕಾರು ನಿಲ್ಲಿಸಿ ಮಿಹಿರ್‌ ಶಾ ಆಟೋ ಹತ್ತಿ ಗೋರೆಗಾಂವ್‌ನಲ್ಲಿರುವ ಪ್ರೇಯಸಿ ಮನೆಗೆ ತೆರಳಿದ್ದ. ಅಪಘಾತದ ವಿಚಾರವನ್ನು ಪ್ರೇಯಸಿ ತನ್ನ ಸಹೋದರಿ ಜತೆಗೆ ಹಂಚಿಕೊಂಡಿದ್ದಳು. ಬಳಿಕ ಸಹೋದರಿ ಆಗಮಿಸಿ ಮಿಹಿರ್‌ನನ್ನು ಬೋರಿವಲಿಯಲ್ಲಿರುವ ತಮ್ಮ ಮನೆಗೆ ಕರೆದೊಯ್ದಿದ್ದರು. ಈ ವೇಳೆ ಮಿಹಿರ್‌ನ ಕುಟುಂಬ ಆತ ಎಲ್ಲಿ ತಲೆ ಮರೆಸಿಕೊಂಡಿದ್ದಾನೆ ಎನ್ನುವ ವಿಚಾರವನ್ನು ಪೊಲೀಸರಿಗೆ ತಿಳಿಸಿರಲಿಲ್ಲ. ಪೊಲೀಸರ 14 ತಂಡ ಆತನಿಗಾಗಿ ತೀವ್ರ ಶೋಧ ನಡೆಸುತ್ತಿತ್ತು.

ಸೋಮವಾರ ರಾತ್ರಿ ಮಿಹಿರ್‌ ವಿರಾರ್‌ನಲ್ಲಿರುವ ತನ್ನ ಮನೆಗೆ ತೆರಳಿದ್ದ. ಮಂಗಳವಾರ ಬೆಳಿಗ್ಗೆ ಆತನ ಸ್ನೇಹಿತ ಅವದೀಪ್ ತನ್ನ ಫೋನ್ ಅನ್ನು 15 ನಿಮಿಷಗಳ ಕಾಲ ಆನ್ ಮಾಡಿದಾಗ ಪೊಲೀಸರು ಅವರಿರುವ ಜಾಗ ಪತ್ತೆ ಮಾಡಿ ಮಿಹಿರ್‌ನನ್ನು ವಶಕ್ಕೆ ಪಡೆದುಕೊಂಡಿದ್ದರು. ಮಿಹಿರ್‌ನನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜುಲೈ 16ರವರೆಗೆ ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ.

10 ಲಕ್ಷ ರೂ. ಪರಿಹಾರ ಘೋಷಣೆ

ಬುಧವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಮೃತ ಕಾವೇರಿ ನಖ್ವಾ ಅವರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. “ನಾವು ಸಂತ್ರಸ್ತೆಯ ಕುಟುಂಬದೊಂದಿಗೆ ನಿಲ್ಲುತ್ತೇವೆ. ಅವರೂ ನಮ್ಮ ಕುಟುಂಬ. ಅವರಿಗೆ ಯಾವುದೇ ಸಹಾಯದ ಅಗತ್ಯವಿದ್ದರೂ ಅದು ಕಾನೂನು ಅಥವಾ ಆರ್ಥಿಕವಾಗಿರಲಿ ಒದಗಿಸಲಾಗುವುದು. ಸಂತ್ರಸ್ತೆಯ ಕುಟುಂಬಕ್ಕೆ ಸರ್ಕಾರ 10 ಲಕ್ಷ ರೂ.ಗಳ ಆರ್ಥಿಕ ನೆರವು ನೀಡಲಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: BSP President: ತಮಿಳುನಾಡು ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಕೊಲೆ; ಹಂತಕನ ಎನ್‌ಕೌಂಟರ್‌- ಮತ್ತೊಂದೆಡೆ ಹತ್ಯೆಯ ಭೀಕರ ದೃಶ್ಯ ವೈರಲ್‌

Continue Reading

ಪ್ರಮುಖ ಸುದ್ದಿ

Pooja Khedkar: ಐಎಎಸ್‌ಗಾಗಿ ನಕಲಿ ಜಾತಿ, ಕಡಿಮೆ ವಯಸ್ಸು, ದರ್ಪ; ಪೂಜಾ ಖೇಡ್ಕರ್‌ ಕಳ್ಳಾಟ ಒಂದೆರಡಲ್ಲ!

Pooja Khedkar: ಟ್ರೈನಿ ಐಎಎಸ್‌ ಅಧಿಕಾರಿಯಾಗಿದ್ದಾಗಲೇ ಖಾಸಗಿ ವಾಹನಕ್ಕೆ ಕೆಂಪು ಗೂಟ ಅಳವಡಿಸಿಕೊಂಡು, ಅಧಿಕಾರ ದುರುಪಯೋಗದ ಆರೋಪ ಹೊತ್ತಿರುವ ಪೂಜಾ ಖೇಡ್ಕರ್‌ ಅವರ ಕಳ್ಳಾಟಗಳು ಬಯಲಾಗುತ್ತಿವೆ. ಅವರ ವಿರುದ್ಧ ನಕಲಿ ಜಾತಿ ಪ್ರಮಾಣಪತ್ರ, ವಿಶೇಷ ಚೇತನ ಎಂದು ಸುಳ್ಳು ದಾಖಲೆ ಸೃಷ್ಟಿ, ವಯಸ್ಸಿನ ಕುರಿತು ಕೂಡ ಫೇಕ್‌ ಡಾಕ್ಯುಮೆಂಟ್‌ ಮಾಡಿಸಿರುವುದು ಸೇರಿ ಅವರ ವಿರುದ್ಧ ಹತ್ತಾರು ಆರೋಪಗಳು ಕೇಳಿಬರುತ್ತಿವೆ.

VISTARANEWS.COM


on

Pooja Khedkar
Koo

ಮುಂಬೈ: ಮಹಾರಾಷ್ಟ್ರ ಕೇಡರ್‌ನ ಐಎಎಸ್‌ ಅಧಿಕಾರಿ, ಅತಿಯಾದ ದರ್ಪ, ನಕಲಿ ದಾಖಲೆ ಸೃಷ್ಟಿಯಿಂದಲೇ ದೇಶಾದ್ಯಂತ ಗಮನ ಸೆಳೆದಿರುವ ಟ್ರೈನಿ ಅಧಿಕಾರಿ (Trainee IAS Officer) ಪೂಜಾ ಖೇಡ್ಕರ್‌ (Pooja Khedkar) ಅವರ ಒಂದೊಂದೇ ಕಳ್ಳಾಟಗಳು ಬಯಲಾಗುತ್ತಿವೆ. ತಮ್ಮ ಖಾಸಗಿ ಕಾರಿಗೆ ‘ಕೆಂಪು ಗೂಟ’ ಅಳವಡಿಸಿದ್ದು ಸೇರಿ ಹಲವು ರೀತಿಯಲ್ಲಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು, ವರ್ಗಾವಣೆಯ ಶಿಕ್ಷೆ ಅನುಭವಿಸುತ್ತಿರುವ ಪೂಜಾ ಖೇಡ್ಕರ್‌ ಅವರು ನಕಲಿ ಜಾತಿ ಪ್ರಮಾಣಪತ್ರ, ವಿಶೇಷ ಚೇತನ ಎಂದು ಸುಳ್ಳು ದಾಖಲೆ ಸೃಷ್ಟಿ, ವಯಸ್ಸಿನ ಕುರಿತು ಕೂಡ ಫೇಕ್‌ ಡಾಕ್ಯುಮೆಂಟ್‌ ತಯಾರಿಸಿದ ಆರೋಪಗಳನ್ನೂ ಎದುರಿಸುತ್ತಿದ್ದಾರೆ.

ನಿಯಮಿತ ಅಧಿಕಾರವನ್ನು ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಪುಣೆಯಿಂದ (ಅಸಿಸ್ಟಂಟ್‌ ಕಲೆಕ್ಟರ್)‌ ವಾಶಿಂಗೆ ವರ್ಗಾವಣೆಗೊಂಡಿರುವ 34 ವರ್ಷದ ಅಧಿಕಾರಿಯು, ಒಬಿಸಿ ಜಾತಿ ಪ್ರಮಾಣಪತ್ರ ಲಗತ್ತಿಸಿ ಯುಪಿಎಸ್‌ಸಿ ಪರೀಕ್ಷೆ ಬರೆದು ತೇರ್ಗಡೆ ಹೊಂದಿದ್ದಾರೆ. ಆದರೆ, ಅವರು ಒಬಿಸಿ ಜಾತಿ ಪ್ರಮಾಣಪತ್ರದ ನಕಲಿ ದಾಖಲೆ ಸೃಷ್ಟಿಸಿದ್ದಾರೆ. ಇನ್ನು ವಿಶೇಷ ಚೇತನ ಎಂಬುದಾಗಿಯೂ ಫೇಕ್‌ ಡಾಕ್ಯುಮೆಂಟ್‌ ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಮೆಡಿಕಲ್‌ ಟೆಸ್ಟ್‌ ಪ್ರಕಾರ ಪೂಜಾ ಖೇಡ್ಕರ್‌ ಅವರು ಫಿಟ್‌ ಇದ್ದಾರೆ ಎಂದು ಹೇಳಲಾಗುತ್ತಿದೆ.‌ 2007ರಲ್ಲಿ ಅವರು ಎಂಬಿಬಿಎಸ್‌ಗೆ ಅರ್ಜಿ ಸಲ್ಲಿಸಿದಾಗ ದೈಹಿಕವಾಗಿ ಫಿಟ್‌ ಇರುವುದಾಗಿ ದಾಖಲೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ವಯಸ್ಸಿನ ಕುರಿತೂ ಸುಳ್ಳು ದಾಖಲೆ

ಜಾತಿ, ವಿಶೇಷ ಚೇತನ ಪ್ರಮಾಣಪತ್ರದ ಜತೆಗೆ ಪೂಜಾ ಖೇಡ್ಕರ್‌ ಅವರು ವಯಸ್ಸಿನ ಕುರಿತು ಕೂಡ ಸುಳ್ಳು ದಾಖಲೆ ಸಲ್ಲಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 2020ರಿಂದ 2023ರ ಅವಧಿಯಲ್ಲಿ ಅವರು ಸಲ್ಲಿಸಿದ ದಾಖಲೆಗಳ ಪ್ರಕಾರ, ಮೂರು ವರ್ಷದಲ್ಲಿ ಅವರ ವಯಸ್ಸು ದಾಖಲೆಯಲ್ಲಿ ಒಂದೇ ವರ್ಷ ಹೆಚ್ಚಾಗಿದೆ. ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಲು ವಯಸ್ಸಿನ ಮಿತಿ ಇರುವ ಕಾರಣ ಅವರು ವಯಸ್ಸಿನ ಕುರಿತು ಕೂಡ ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂದು ತಿಳಿದುಬಂದಿದೆ. ಇದು ಈಗ ಭಾರಿ ಚರ್ಚೆಗೂ ಗ್ರಾಸವಾಗಿದೆ.

27 ಸಾವಿರ ರೂ. ದಂಡ ಬಿದ್ದಿದ್ದೇಕೆ?

ಅಧಿಕಾರದ ದುರುಪಯೋಗ, ನಕಲಿ ದಾಖಲೆ ಸೃಷ್ಟಿ ಜತೆಗೆ ಸಂಚಾರ ದಟ್ಟಣೆ ನಿಯಮಗಳ ಉಲ್ಲಂಘನೆಯಲ್ಲೂ ಮುಂದಿದ್ದಾರೆ. ವಾಶಿಂ ಮಹಿಳಾ ಪೊಲೀಸರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡ ಪೂಜಾ ಖೇಡ್ಕರ್‌ ಅವರು ಎರಡು ತಾಸು ಚರ್ಚಿಸಿದ್ದಾರೆ. ಯಾವ ವಿಷಯದ ಕುರಿತು ಚರ್ಚಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗದಿದ್ದರೂ, ಸಂಚಾರ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ 27 ಸಾವಿರ ರೂ. ದಂಡ ವಿಧಿಸಲಾಗಿದ್ದು, ಅದರ ನೋಟಿಸ್‌ ನೀಡಲು ಪೊಲೀಸರು ಅವರ ಮನೆಗೆ ತೆರಳಿದ್ದರು ಎಂದು ಮೂಲಗಳು ತಿಳಿಸಿವೆ.

ಪೂಜಾ ಖೇಡ್ಕರ್‌ ಪ್ರತಿಕ್ರಿಯೆ ಏನು?

ನಕಲಿ ದಾಖಲೆ, ಅಧಿಕಾರ ದುರುಪಯೋಗ ಸೇರಿ ಹಲವು ಆರೋಪಗಳ ಕುರಿತು ತನಿಖೆಗೆ ಆದೇಶಿಸಲಾಗಿದ್ದು, ಮೊದಲ ಬಾರಿಗೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. “ಯಾರೇ ಆಗಲಿ, ಆರೋಪ ಸಾಬೀತಾಗುವವರೆಗೆ ಅವರು ಆರೋಪಿಯೇ. ಮಾಧ್ಯಮಗಳ ವರದಿಗಳು, ತೀರ್ಪುಗಳು ನಾನು ಏನೆಂಬುದನ್ನು ತೀರ್ಮಾನಿಸುವುದಿಲ್ಲ. ತನಿಖೆಗೆ ರಚನೆಯಾಗಿರುವ ಸಮಿತಿಯ ತೀರ್ಮಾನದ ಬಳಿಕವೇ ಸತ್ಯ ಏನೆಂಬುದು ಗೊತ್ತಾಗುತ್ತದೆ. ಮಾಧ್ಯಮಗಳು ಅಥವಾ ಜನರು ನನ್ನನ್ನು ತೀರ್ಮಾನಿಸುವುದಿಲ್ಲ” ಎಂದು ಮಾಧ್ಯಮಗಳಿಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Pooja Khedkar: ಎಂಬಿಬಿಎಸ್ ಪ್ರವೇಶಕ್ಕೆ ಒಬಿಸಿ ಕೆನೆಪದರ ರಹಿತ ಪ್ರಮಾಣಪತ್ರ ಸಲ್ಲಿಸಿದ್ದ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್

Continue Reading
Advertisement
Ananth Ambani Fashion
ಫ್ಯಾಷನ್11 mins ago

Ananth Ambani Fashion: ಅನಂತ್‌ ಅಂಬಾನಿ ಬಳಿ ಇದೆ ಡೈಮಂಡ್‌ ಬ್ರೂಚ್‌ಗಳ ಕಲೆಕ್ಷನ್‌! ಇವುಗಳ ಮೌಲ್ಯ ಎಷ್ಟಿರಬಹುದು?

Entrepreneurship Development Training Concluding Ceremony at Kanakagiri
ಕೊಪ್ಪಳ18 mins ago

Koppala News: ಕನಕಗಿರಿಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ

Pooja Khedkar
ದೇಶ19 mins ago

Pooja Khedkar: ಪೂಜಾ ಖೇಡ್ಕರ್‌ಗೆ ಮತ್ತೊಂದು ಬಿಗ್‌ ಶಾಕ್‌; ತರಬೇತಿಗೆ ತಡೆ, ಅಕಾಡೆಮಿಗೆ ವಾಪಸ್‌

Clearance of footpaths in Shira
ತುಮಕೂರು19 mins ago

Shira News: ಶಿರಾದಲ್ಲಿ ಫುಟ್‌ಪಾತ್‌ಗಳ ತೆರವು ಕಾರ್ಯಾಚರಣೆ

karnataka weather Forecast
ಮಳೆ21 mins ago

Karnataka Weather : ನಾಳೆಗೂ ಮಳೆ ಮುನ್ನೆಚ್ಚರಿಕೆ; ಸೆ.30ರವರೆಗೆ ಈ ಪ್ರವಾಸಿ ತಾಣಗಳಲ್ಲಿ ಟ್ರಕ್ಕಿಂಗ್‌ ನಿಷೇಧ

R Ashok demands that Valmiki Development Corporation scam should be investigated by CBI and CM Siddaramaiah should resign
ಕರ್ನಾಟಕ22 mins ago

Assembly Session: ಸರ್ಕಾರಕ್ಕೆ ವಾಲ್ಮೀಕಿ ಜನಾಂಗದ ಶಾಪ ತಟ್ಟಬಾರದೆಂದರೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ; ಆರ್‌. ಅಶೋಕ್‌ ಆಗ್ರಹ

Necessary action will be taken for salary revision of special schools teachers says minister Lakshmi Hebbalkar
ಕರ್ನಾಟಕ25 mins ago

Lakshmi Hebbalkar: ವಿಶೇಷ ಶಾಲೆಗಳ ಶಿಕ್ಷಕರ ವೇತನ ಪರಿಷ್ಕರಣೆಗೆ ಅಗತ್ಯ ಕ್ರಮ: ಹೆಬ್ಬಾಳಕರ್ ಭರವಸೆ

Assembly Session Minister Santosh Lad gave a huge gift to the film workers from the labor department
ಕರ್ನಾಟಕ27 mins ago

Assembly Session: ಕಾರ್ಮಿಕ ಇಲಾಖೆಯಿಂದ ಸಿನಿ ಕಾರ್ಮಿಕರಿಗೆ ಭರ್ಜರಿ ಗಿಫ್ಟ್!

Sadananda Suvarna
ಕರ್ನಾಟಕ46 mins ago

Sadananda Suvarna : ʼಗುಡ್ಡದ ಭೂತʼ ಖ್ಯಾತಿಯ ಹಿರಿಯ ರಂಗಕರ್ಮಿ, ನಿರ್ದೇಶಕ ಸದಾನಂದ ಸುವರ್ಣ ಇನ್ನಿಲ್ಲ

DS Veeraiah
ಕರ್ನಾಟಕ53 mins ago

D. S. Veeraiah: ಅರಸು ಟ್ರಕ್ ಟರ್ಮಿನಲ್ ಹಗರಣ;‌ ಡಿ.ಎಸ್‌.ವೀರಯ್ಯಗೆ ಜು.30ರವರೆಗೆ ನ್ಯಾಯಾಂಗ ಬಂಧನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ6 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ7 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 day ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌