Physical Abuse : ಬಸ್​​ನಲ್ಲಿ ಪಕ್ಕದಲ್ಲಿ ಕೂರಿಸಿಕೊಂಡು ಬಾಲಕಿಗೆ ಲೈಂಗಿಕ ಕಿರುಕುಳ ಕೊಟ್ಟವನಿಗೆ ಮಹಿಳೆಯರಿಂದ ಗೂಸಾ - Vistara News

ಪ್ರಮುಖ ಸುದ್ದಿ

Physical Abuse : ಬಸ್​​ನಲ್ಲಿ ಪಕ್ಕದಲ್ಲಿ ಕೂರಿಸಿಕೊಂಡು ಬಾಲಕಿಗೆ ಲೈಂಗಿಕ ಕಿರುಕುಳ ಕೊಟ್ಟವನಿಗೆ ಮಹಿಳೆಯರಿಂದ ಗೂಸಾ

Physical Abuse : ಕಿರುಕುಳದ ಕುರಿತು ಅರಿವು ಹೊಂದಿದ್ದ ಆಕೆ ತಕ್ಷಣವೇ ಪೋಷಕರಿಗೆ ಮಾಹಿತಿ ನೀಡಿದ್ದಾಳೆ. ಎಚ್ಚೆತ್ತುಕೊಂಡ ಆಕೆಯ ತಾಯಿ ಹಾಗೂ ಬಸ್​ನಲ್ಲಿದ್ದ ಇನ್ನಲವು ಮಹಿಳೆಯರು ಆತನಿಗೆ ದಬಾಯಿಸಿದ್ದಾರೆ. ತಕ್ಷಣ ಆತ ಇನ್ನು ಮುಂದೆ ಆ ರೀತಿ ಮಾಡಲ್ಲ ಎಂದು ಹೇಳುತ್ತಿರುವ ವಿಡಿಯೊ ವೈರಲ್ ಆಗಿದೆ.

VISTARANEWS.COM


on

Physical Abuse
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು : ಬಸ್​ನಲ್ಲಿ ಸೀಟು ಕೊಡುವ ನೆಪದಲ್ಲಿ ಬಾಲಕಿಯೊಬ್ಬಳನ್ನು ಪಕ್ಕದಲ್ಲಿ ಕೂರಿಸಿಕೊಂಡು ಲೈಂಗಿಕ ಕಿರುಕುಳ ನೀಡಿದ್ದ (Physical Abuse) ಹಿರಿಯ ವಯಸ್ಸಿನ ವ್ಯಕ್ತಿಯೊಬ್ಬನಿಗೆ ಬಸ್​ನಲ್ಲಿದ್ದ ಮಹಿಳೆಯರೇ ಧರ್ಮದೇಟು ಕೊಟ್ಟ ಪ್ರಕರಣದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯು ತನ್ನ ಕೃತ್ಯವನ್ನು ಮುಂದುವರಿಸುತ್ತಿದ್ದಂತೆ ಬಾಲಕಿ ಜಾಗೃತಳಾಗಿ ಮನೆ ಮಂದಿಗೆ ತಿಳಿಸಿದ್ದಾರೆ. ತಕ್ಷಣ ಆಕೆಯ ತಾಯಿ ಹಾಗೂ ಬಸ್​ನಲ್ಲಿದ್ದ ಇತರ ಮಹಿಳೆಯರು ಮುಖ- ಮೂತಿ ನೋಡದೇ ಹಿಗ್ಗಾಮುಗ್ಗಾ ಬಾರಿಸಿದ್ದಾರೆ.

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕೆ.ಎಸ್​ಆರ್​ಟಿಸಿ ಬಸ್​ನಲ್ಲಿ ಘಟನೆ ನಡೆದಿದೆ. ಈ ವ್ಯಕ್ತಿಯು ಕುಟುಂಬವೊಂದರ ಜತೆ ಪ್ರಯಾಣ ಮಾಡುತ್ತಿದ್ದ ಬಾಲಕಿಯನ್ನು ಸೀಟು ಕೊಡುವ ನೆಪದಲ್ಲಿ ಹತ್ತಿರ ಕೂರಿಸಿಕೊಂಡಿದ್ದ. ಬಳಿಕ ತನ್ನ ದುರ್ಬುದ್ಧಿ ತೋರಿದ ಆತ ಬಾಲಕಿಯ ತೊಡೆ ಮೇಲೆ ಕೈಯಿಟ್ಟು ಅಸಭ್ಯವಾಗಿ ವರ್ತಿಸಿದ್ದ. ಬಳಿಕ ಆಕೆಯ ಮೈಯೆಲ್ಲ ಕೈಯಾಡಿಸಲು ಶುರುಮಾಡಿದ್ದ. ಕಿರುಕುಳದ ಕುರಿತು ಅರಿವು ಹೊಂದಿದ್ದ ಆಕೆ ತಕ್ಷಣವೇ ಪೋಷಕರಿಗೆ ಮಾಹಿತಿ ನೀಡಿದ್ದಾಳೆ. ಎಚ್ಚೆತ್ತುಕೊಂಡ ಆಕೆಯ ತಾಯಿ ಹಾಗೂ ಬಸ್​ನಲ್ಲಿದ್ದ ಇನ್ನಲವು ಮಹಿಳೆಯರು ಆತನಿಗೆ ದಬಾಯಿಸಿದ್ದಾರೆ. ತಕ್ಷಣ ಆತ ಇನ್ನು ಮುಂದೆ ಆ ರೀತಿ ಮಾಡಲ್ಲ ಎಂದು ಹೇಳುತ್ತಿರುವ ವಿಡಿಯೊ ವೈರಲ್ ಆಗಿದೆ.

ಇದನ್ನೂ ಓದಿ: Pralhad Joshi: ಆಸ್ಟ್ರೇಲಿಯಾ ವಶದಲ್ಲಿ ಅನಾಥರಂತೆ ಇದ್ದ ಇಬ್ಬರು ಮಕ್ಕಳು ತಾಯ್ನಾಡಿಗೆ; ಆತ್ಮಹತ್ಯೆ ಮಾಡಿಕೊಂಡಿದ್ದ ತಾಯಿ

ಆತನ ತಪ್ಪೊಪ್ಪಿಗೆ ಹೇಳತ್ತಿದ್ದಂತೆ ಜಾಗೃತರಾದ ಉಳಿದ ಮಹಿಳೆಯರೆಲ್ಲರೂ ಆತನ ಟೊಪ್ಪಿ ಹಾರಿ ಹೋಗುವಂತೆ ಬಡಿದಿದ್ದಾರೆ. ಕೈಯಿಂದಲೇ ಹಲ್ಲೆ ಮಾಡಿ ಆತನ ಚಳಿ ಬಿಡಿಸಿದ್ದಾರೆ. ಬಸ್​​ನಲ್ಲಿದ್ದ ಇತರರು ಈ ದೃಶ್ಯದ ವಿಡಿಯೊ ಮಾಡಿದ್ದಾರೆ.

ಐಸ್‌ಕ್ರೀಂ ಕೊಳ್ಳಲು ಬಂದ ಬಾಲಕಿಯ ಗುಪ್ತಾಂಗ ಮುಟ್ಟಿ ದೌರ್ಜನ್ಯ; ಮೊಹಮ್ಮದ್ ಖಾನ್ ಬಂಧನ

ಭೋಪಾಲ್: ಐಸ್‌ಕ್ರೀಂ ಮಾರಾಟಗಾರನೊಬ್ಬ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ (Sexual Assault) ನೀಡಿದ ಘಟನೆ ಮಧ್ಯಪ್ರದೇಶದ (madhyapradesh) ಭೋಪಾಲ್‌ನಲ್ಲಿ (bhopal) ನಡೆದಿದ್ದು, ಇದರ ವಿಡಿಯೋ (video) ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಎರಡು ವಾರಗಳ ಹಿಂದೆ ನಡೆದ ಘಟನೆ ಇದಾಗಿದೆ. ಐಸ್ ಕ್ರೀಮ್ ಮಾರಾಟಗಾರ ಬಾಲಕಿಯನ್ನು ಅನುಚಿತವಾಗಿ ಸ್ಪರ್ಶಿಸುತ್ತಿರುವುದು ಕೆಮರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಐಸ್ ಕ್ರೀಮ್ ಮಾರಾಟಗಾರ ಮೊಹಮ್ಮದ್ ಖಾಲಿದ್ ಖಾನ್ (52) ಎಂಬಾತನನ್ನು ಬಂಧಿಸಲಾಗಿದೆ.

ಪ್ಯಾರೆ ಎಂದು ಕರೆಯಲ್ಪಡುವ ಮೊಹಮ್ಮದ್ ಖಾಲಿದ್ ಖಾನ್ ಉತ್ತರ ಪ್ರದೇಶದ ಜಲೌನ್ ಜಿಲ್ಲೆಯ ನಿವಾಸಿ. ಜಹಾಂಗೀರಾಬಾದ್‌ನಲ್ಲಿ ರಾತ್ರಿ ವ್ಯಕ್ತಿಯೊಬ್ಬ ತನ್ನ ಬಾಲ್ಕನಿಯಲ್ಲಿ ಈ ವಿಡಿಯೋವನ್ನು ರೆಕಾರ್ಡ್ ಮಾಡಿದ್ದಾರೆ.

ಖಾಲಿದ್ 11 ವರ್ಷದ ಬಾಲಕಿಯ ಖಾಸಗಿ ಅಂಗಗಳನ್ನು ಸ್ಪರ್ಶಿಸುತ್ತಿರುವುದು ಕಂಡುಬಂದಿದ್ದು, ಬಾಲಕಿ ಐಸ್‌ಕ್ರೀಂ ಕಾರ್ಟ್‌ನಲ್ಲಿ ಐಸ್‌ಕ್ರೀಂ ಆಯ್ಕೆ ಮಾಡಿಕೊಳ್ಳುತ್ತಿದ್ದಳು. ಆರೋಪಿಯು ಬಾಲಕಿಯನ್ನು ಹಿಡಿದಿದ್ದು, ಆಕೆಯ ಹಿಡಿತದಿಂದ ತಪ್ಪಿಸಿಕೊಳ್ಳಲು ಬಾಲಕಿ ಪ್ರಯತ್ನಿಸುತ್ತಿರುವುದು ಕಂಡುಬಂದಿದೆ.

ಸ್ವಲ್ಪ ಸಮಯದ ಅನಂತರ ಹುಡುಗಿಗೆ ಐಸ್ ಕ್ರೀಂ ಅನ್ನು ಹಸ್ತಾಂತರಿಸುತ್ತಾನೆ. ಈ ವಿಡಿಯೋವನ್ನು ರಮೇಶ್ ಸಾಹು ಎಂಬಾತ ರೆಕಾರ್ಡ್ ಮಾಡಿದ್ದು, ಅದನ್ನು ವಾಟ್ಸಾಪ್ ನಲ್ಲಿ ಶೇರ್ ಮಾಡಿದ್ದಾನೆ. ಇದು ಸಾಕಷ್ಟು ವೈರಲ್ ಆಗಿದೆ.

ಸಂತ್ರಸ್ತೆಯ ತಾಯಿ ತನ್ನ ಮಗಳನ್ನು ಆಕೆಯ ಬಟ್ಟೆ ಮತ್ತು ವಿಡಿಯೋದಲ್ಲಿ ಸ್ವಲ್ಪ ಗೋಚರಿಸುವ ಮುಖದ ಭಾಗದಿಂದ ಗುರುತಿಸಿದ್ದಾರೆ. ಅನಂತರ ಮಹಿಳೆ ಪೊಲೀಸರನ್ನು ಸಂಪರ್ಕಿಸಿ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದಾರೆ.
ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಜಹಾಂಗೀರಾಬಾದ್ ಪೊಲೀಸ್ ಠಾಣೆಯಲ್ಲಿ ಘಟನೆ ವರದಿಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

D. S. Veeraiah: ಅರಸು ಟ್ರಕ್ ಟರ್ಮಿನಲ್ ಹಗರಣ;‌ ಡಿ.ಎಸ್‌.ವೀರಯ್ಯಗೆ ಜು.30ರವರೆಗೆ ನ್ಯಾಯಾಂಗ ಬಂಧನ

D. S. Veeraiah: ಬೆಂಗಳೂರಿನ 42ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಬಿಜೆಪಿ ಮಾಜಿ ಎಂಎಲ್‌ಸಿ ಡಿ.ಎಸ್‌. ವೀರಯ್ಯರನ್ನು ಸಿಐಡಿ ಹಾಜರುಪಡಿಸಿತ್ತು. ಪ್ರಕರಣದ ವಿಚಾರಣೆ ನಡೆಸಿರುವ ಕೋರ್ಟ್‌, ಜುಲೈ 30ರವರೆಗೂ ನ್ಯಾಯಾಂಗ ಬಂಧನ ಒಪ್ಪಿಸಲು ಸೂಚಿಸಿದೆ.

VISTARANEWS.COM


on

DS Veeraiah
Koo

ಬೆಂಗಳೂರು: ದೇವರಾಜ ಅರಸು ಟ್ರಕ್ ಟರ್ಮಿನಲ್‌ ಹಗರಣದಲ್ಲಿ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಎಂಎಲ್‌ಸಿ ಡಿ.ಎಸ್‌. ವೀರಯ್ಯ (D. S. Veeraiah) ಅವರಿಗೆ ಜುಲೈ 30ರವರೆಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 47 ಕೋಟಿ ರೂ. ಹಗರಣ ಆರೋಪದಲ್ಲಿ ಬಂಧನವಾಗಿದ್ದ ವೀರಯ್ಯರನ್ನು ಸಿಐಡಿ ಅಧಿಕಾರಿಗಳು ನಗರದ 42ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿರುವ ಕೋರ್ಟ್‌ ನ್ಯಾಯಾಧೀಶರು, ವೀರಯ್ಯರನ್ನು ನ್ಯಾಯಾಂಗ ಬಂಧನ‌ಕ್ಕೆ ಒಪ್ಪಿಸಲು ಆದೇಶ ನೀಡಿದ್ದಾರೆ. ಮತ್ತೊಂದೆಡೆ ವೀರಯ್ಯ ಪರ ವಕೀಲ ವಕೀಲ ಶ್ಯಾಮಸುಂದರ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.

ದೇವರಾಜ ಅರಸು ಟರ್ಮಿನಲ್ ಬಹುಕೋಟಿ ಹಗರಣಕ್ಕೆ (Devaraja Arasu truck terminal scam) ಸಂಬಂಧಿಸಿ ಬಿಜೆಪಿ ಮಾಜಿ ಎಂಎಲ್‌ಸಿ ಡಿ.ಎಸ್‌. ವೀರಯ್ಯಋನ್ನು ಜುಲೈ 12ರಂದು ಬಂಧಿಸಲಾಗಿತ್ತು. 47 ಕೋಟಿ ರೂ. ಹಗರಣದ ಆರೋಪದಲ್ಲಿ ಮೈಸೂರಿನಲ್ಲಿ ವೀರಯ್ಯರನ್ನು ಸಿಐಡಿ ಬಂಧಿಸಿತ್ತು. ಈ ಹಿಂದೆ ವಾರ್ತಾ ಇಲಾಖೆಯ ಶಂಕರಪ್ಪ ಬಂಧನವಾಗಿತ್ತು, ಇದಾದ ಬೆನ್ನಲ್ಲೇ ಮೈಸೂರಿನಲ್ಲಿ ಮುಡಾ ಅಕ್ರಮ ವಿರೋಧಿಸಿ ಪ್ರತಿಭಟನೆಗೆ ತೆರಳಿದ್ದಾಗ ವೀರಯ್ಯರನ್ನು ಬಂಧಿಸಲಾಗಿತ್ತು.

2021ರಿಂದ 2023ರವರೆಗೆ ಡಿ.ಎಸ್.ವೀರಯ್ಯ ಅವರು ಡಿ.ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ನಿಗಮದ ಅಧ್ಯಕ್ಷರಾಗಿದ್ದಾಗ ನಡೆದಿದ್ದ ಸುಮಾರು 47 ಕೋಟಿ ರೂ. ಅಕ್ರಮದ ಬಗ್ಗೆ ಹಾಲಿ ವ್ಯವಸ್ಥಾಪಕ ನಿರ್ದೇಶಕ ಸಿಎನ್​ ಶಿವಪ್ರಸಾದ್ ವಿಲ್ಸನ್​​ ಗಾರ್ಡ್​ನ್​ ಠಾಣೆಗೆ ದೂರು ನೀಡಿದ್ದರು. ತುಂಡು ಗುತ್ತಿದೆ ಆಧಾರದಲ್ಲಿ ಅಕ್ರಮ ನಡೆದಿದೆ ನೀಡಿದ್ದ ದೂರಿನ ಮೇರೆಗೆ 2023ರ ಸೆಪ್ಟೆಂಬರ್​ 23ರಂದು ಎಫ್​ಐಆರ್ ದಾಖಲಾಗಿತ್ತು. ಬಳಿಕ ವೀರಯ್ಯ ಅವರಿಗೆ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್​ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು.

ಇದನ್ನೂ ಓದಿ | Hit And Run Case: ಮುಂಬೈ ಹಿಟ್‌ ಆ್ಯಂಡ್‌ ರನ್‌ ಕೇಸ್‌; ತನಗೆ ಕುಡಿಯುವ ಅಭ್ಯಾಸ ಇದೆ ಎಂದು ಒಪ್ಪಿಕೊಂಡ ಆರೋಪಿ

ಏನಿದು ಹಗರಣ?

2021ರ ಅಕ್ಟೋಬರ್ 25ರಂದು ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ 194ನೇ ನಿರ್ದೇಶಕ ಮಂಡಳಿ ಸಭೆಯಲ್ಲಿ ಟ್ರಕ್ ಟರ್ಮಿನಲ್‌ಗಳ ದುರಸ್ತಿ ಹಾಗೂ ನಿರ್ವಹಣೆಗೆ 10 ಕೋಟಿ ರೂ.ಗಳವರೆಗೆ ತುಂಡು ಗುತ್ತಿಗೆ ನೀಡಲು ಅನುಮೋದನಾ ನಿರ್ಣಯ ಮಾಡಲಾಗಿತ್ತು. ಆನಂತರ ಕಾಮಗಾರಿ ನಡೆಸದೆ ನಕಲಿ ದಾಖಲೆ ಸೃಷ್ಟಿಸಿ ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ನಿಗಮದ ಹಾಲಿ ಎಂಡಿ, ಬಳಿಕ ವಿಲ್ಸನ್ ಗಾರ್ಡನ್ ಠಾಣೆಗೆ ತುಂಡು ಗುತ್ತಿಗೆ ಕಾಮಗಾರಿಯಲ್ಲಿ 47.10 ಕೋಟಿ ಅಕ್ರಮ ನಡೆದಿದೆ ಎಂದು ಆರೋಪಿಸಿ ದೂರು ನೀಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶ ನೀಡಿತ್ತು.

Continue Reading

ಕ್ರೀಡೆ

Olympics On Television: ಒಲಿಂಪಿಕ್ಸ್​ ಕ್ರೀಡಾಕೂಟ ಮೊದಲ ಬಾರಿಗೆ ಟಿವಿಯಲ್ಲಿ ಪ್ರಸಾರ ಕಂಡಿದ್ದು ಯಾವಾಗ?

Olympics On Television: ಎಲ್ಲ ಕ್ರೀಡೆಗಳಲ್ಲಿರುವಂತೆ ಇದೀಗ ಒಲಿಂಪಿಕ್ಸ್‌ಗಳಲ್ಲಿಯೂ ಉದ್ದೀಪನ ಪರೀಕ್ಷೆ ಕಟ್ಟುನಿಟ್ಟಾಗಿ ನಡೆಯುತ್ತದೆ. ಒಲಿಂಪಿಕ್ಸ್‌ ಇತಿಹಾಸದಲ್ಲಿ ಮೊದಲ ಬಾರಿಗೆ ಮಾದಕ ದ್ರವ್ಯ ಸೇವನೆ ಪ್ರಕರಣ ಬೆಳಕಿಗೆ ಬಂದದ್ದು 1968ರ ಮೆಕ್ಸಿಕೊ ಗೇಮ್ಸ್‌ನಲ್ಲಿ.

VISTARANEWS.COM


on

Olympics on television
Koo

ಬೆಂಗಳೂರು: ಬಹುನಿರೀಕ್ಷಿತ ಪ್ಯಾರಿಸ್ ಒಲಿಂಪಿಕ್ಸ್ 2024ರ ಕ್ರೀಡಾಕೂಟ ಆರಂಭಕ್ಕೆ ಇನ್ನು ಕೇವಲ 10 ದಿನಗಳು ಮಾತ್ರ ಬಾಕಿ ಉಳಿದಿವೆ. ಹಿಂದೆಂದಿಗಿಂತಲೂ ಈ ಬಾರಿ ಒಲಿಂಪಿಕ್ಸ್​ ಟೂರ್ನಿಯ ಪ್ರಸಾರ ದೊಡ್ಡ ಮಟ್ಟದಲ್ಲಿ ಇರಲಿದೆ. ಜಿಯೋ ಸಿನಿಮಾದಲ್ಲಿ ಉಚಿತವಾಗಿ ಪ್ರಸಾರಗೊಳ್ಳಲಿದೆ. ಆದರೆ ಮೊದಲ ಬಾರಿಗೆ ಒಲಿಂಪಿಕ್ಸ್​ ಟಿವಿಯಲ್ಲಿ(Olympics On Television) ಪ್ರಸಾರ ಕಂಡಿದ್ದು ಯಾವಾಗ? ಯಾರ ಆತಿಥ್ಯದಲ್ಲಿ ನಡೆದ ಒಲಿಂಪಿಕ್ಸ್​ ಇದಾಗಿತ್ತು ಎನ್ನುವ ಮಾಹಿತಿ ಇಂತಿದೆ.

ಮೊದಲ ಬಾರಿಗೆ ಒಲಿಂಪಿಕ್ಸ್​ ಕ್ರೀಡಾಕೂಟ ಟಿವಿಯಲ್ಲಿ ಪ್ರಸಾರಗೊಂಡದ್ದು 1936ರಲ್ಲಿ. ಬರ್ಲಿನ್​ನಲ್ಲಿ ನಡೆದಿದ್ದ ಟೂರ್ನಿ ಇದಾಗಿತ್ತು. ಆದರೆ, ಆತಿಥೇಯ ಜರ್ಮನಿಯ ಟಿವಿ ಹಾಲ್‌ಗ‌ಳಲ್ಲಿ ಮಾತ್ರ ಇದು ಪ್ರಸಾರ ಕಂಡಿತ್ತು. ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಟಿವಿಯಲ್ಲಿ ಪ್ರಸಾರಗೊಂಡ ಒಲಿಂಪಿಕ್ಸ್​ ಕ್ರೀಡಾಕೂಟ ಟೋಕಿಯೊ ಒಲಿಂಪಿಕ್ಸ್‌. 1964ರಲ್ಲಿ ನಡೆದಿದ್ದ ಟೂರ್ನಿ ಇದಾಗಿತ್ತು. ಇದಾದ ಬಳಿಕ 1956ರಲ್ಲಿ ಮೆಲ್ಬರ್ನ್ ಒಲಿಂಪಿಕ್ಸ್‌ನಲ್ಲಿ ಮೊದಲ ಬಾರಿಗೆ ಟಿವಿ ಪ್ರಸಾರ ಹಕ್ಕು ಮಾರಾಟ ಮಾಡಲಾಗಿತ್ತು. ಈ ಬಾರಿ ಟಿವಿ ಮಾತ್ರವಲ್ಲದೆ ಮೊಬೈಲ್​ ಆ್ಯಪ್​ನಲ್ಲಿಯೂ ಒಲಿಂಪಿಕ್ಸ್​ ಪ್ರಸಾರಗೊಳ್ಳುವ ಕಾರಣ ಪ್ರಸಾರಕರಿಗೆ ದೊಡ್ಡ ಮೊತ್ತದ ಹಣ ಸಿಗಲಿದೆ.

ಒಲಿಂಪಿಕ್ಸ್‌ನಲ್ಲಿ ಡೋಪಿಂಗ್‌


ಎಲ್ಲ ಕ್ರೀಡೆಗಳಲ್ಲಿರುವಂತೆ ಇದೀಗ ಒಲಿಂಪಿಕ್ಸ್‌ಗಳಲ್ಲಿಯೂ ಉದ್ದೀಪನ ಪರೀಕ್ಷೆ ಕಟ್ಟುನಿಟ್ಟಾಗಿ ನಡೆಯುತ್ತದೆ. ಒಲಿಂಪಿಕ್ಸ್‌ ಇತಿಹಾಸದಲ್ಲಿ ಮೊದಲ ಬಾರಿಗೆ ಮಾದಕ ದ್ರವ್ಯ ಸೇವನೆ ಪ್ರಕರಣ ಬೆಳಕಿಗೆ ಬಂದದ್ದು 1968ರ ಮೆಕ್ಸಿಕೊ ಗೇಮ್ಸ್‌ನಲ್ಲಿ. ಬಿಯರ್‌ ಕುಡಿದಿದ್ದಕ್ಕಾಗಿ ಸ್ವೀಡನ್‌ ಆ್ಯತ್ಲೀಟ್‌ ಹನ್ಸ್‌-ಗುನ್ನಾರ್‌ ಲಿಲಿಜೆನ್‌ವಾಲ್‌ ನಿಷೇಧ ಶಿಕ್ಷೆ ಅನುಭವಿಸಬೇಕಾಯಿತು! ಇದಕ್ಕಾಗಿ ಅವರು ಗೆದ್ದಿದ್ದ ಕಂಚಿನ ಪದಕವನ್ನೂ ವಾಪಸ್‌ ಪಡೆಯಲಾಗಿತ್ತು.

ಇದನ್ನೂ ಓದಿ India at the Olympics: ಒಲಿಂಪಿಕ್ಸ್​ನಲ್ಲಿ ಭಾರತದ ಪದಕ ಸಾಧನೆಯ ಇಣುಕು ನೋಟ

ಸೀನ್ ನದಿಯಲ್ಲಿ ಉದ್ಘಾಟನಾ ಸಮಾರಂಭ


ಈ ಬಾರಿಯ ಒಲಿಂಪಿಕ್ಸ್​ ಉದ್ಘಾಟನಾ ಸಮಾರಂಭ(paris olympics 2024 opening ceremony) ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮದೊಂದಿಗೆ ನೆರವೇರಲಿದೆ. ಕ್ರೀಡಾಕೂಟ ಜುಲೈ 26ರಿಂದ ಆರಂಭವಾಗಿ, ಆಗಸ್ಟ್‌ 11ರವರೆಗೆ ನಡೆಯಲಿದೆ. ಪ್ಯಾರಾಲಿಂಪಿಕ್ಸ್‌ ಆಗಸ್ಟ್‌ 28 ರಿಂದ ಸೆಪ್ಟೆಂಬರ್‌ 8ರವರೆಗೆ ನಿಗದಿಯಾಗಿದೆ. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಯನ್ನು ಈಗಾಗಲೇ ಕ್ರೀಡಾಕೂಟದ ಆಯೋಜಕರು ಮಾಡಿದ್ದಾರೆ. ಗೇಮ್ಸ್‌ಗಾಗಿಯೇ ಇಲ್ಲಿನ ಸೀನ್‌ ನದಿಯನ್ನು ಸಾರ್ವಜನಿಕ ನಿಧಿಯಿಂದ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿ ಈ ನದಿಯನ್ನು ಸ್ನಾನಮಾಡಲು ಯೋಗ್ಯವೆನಿಸುವ ರೀತಿಯಲ್ಲಿ ಸ್ವಚ್ಛ ಮಾಡಲಾಗಿದೆ.

ಇದನ್ನೂ ಓದಿ Paris Olympics 2024 : ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಕಡಿಮೆ ಪದಕಗಳು ಸಿಗುವುದು ಯಾಕೆ? ಈ ಪ್ರಶ್ನೆಗೆ ಇಲ್ಲಿದೆ ಉತ್ತರ

ಬೋಟ್‌ಗಳಲ್ಲೇ ಪರೇಡ್‌


ಒಲಿಂಪಿಕ್ಸ್​ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

Continue Reading

ಪ್ರಮುಖ ಸುದ್ದಿ

Pennar River Dispute: ಪೆನ್ನಾರ್ ನದಿ ನೀರು ಹಂಚಿಕೆ ವಿವಾದ; 8 ವಾರದಲ್ಲಿ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

Pennar River Dispute: ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಯರಗೋಳ ಬಳಿ ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿ, ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿರುವ ಕೋರ್ಟ್‌, 8 ವಾರಗಳಲ್ಲಿ ವರದಿ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

VISTARANEWS.COM


on

Pennar River Dispute
Koo

ಬೆಂಗಳೂರು: ಪೆನ್ನಾರ್ ನದಿ ನೀರು ಹಂಚಿಕೆ ವಿವಾದಕ್ಕೆ (Pennar River Dispute) ಸಂಬಂಧಿಸಿ 8 ವಾರಗಳಲ್ಲಿ ವರದಿ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ನೀರು ಹಂಚಿಕೆ ಸಂಬಂಧ ತಮಿಳುನಾಡು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌ನ ನ್ಯಾ.ಹಿಮಾ ಕೊಯ್ಲಿ ನೇತೃತ್ವದ ಪೀಠ, ವಾಸ್ತವವಾಗಿ ಏನಾಗಿದೆ ಎಂಬುದನ್ನು ತಿಳಿಸುವಂತೆ ಕೇಂದ್ರ ಜಲಶಕ್ತಿ ಮಂತ್ರಾಲಯಕ್ಕೆ ನಿರ್ದೇಶನ ನೀಡಿದೆ.

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಯರಗೋಳ ಬಳಿ ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿತ್ತು. ಬಳಿಕ ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಹೂಡಿತ್ತು. ಅಂತಾರಾಜ್ಯ ವಿವಾದವಾಗಿದ್ದರಿಂದ ನ್ಯಾಯಾಧೀಕರಣ ಸ್ಥಾಪನೆಗೆ ಆಗ್ರಹಿಸಿತ್ತು. ಆದರೆ ಮಾತುಕತೆಯಲ್ಲಿ ಇತ್ಯರ್ಥ ಮಾಡಿಕೊಳ್ಳುವ ಇರಾದೆಯನ್ನು ಕರ್ನಾಟಕ ವ್ಯಕ್ತಪಡಿಸಿತ್ತು. ಹಾಗಾಗಿ ವಾಸ್ತವವಾಗಿ ಏನಾಗಿದೆ ಎಂಬುದನ್ನು ತಿಳಿಸಲು 8 ವಾರಗಳಲ್ಲಿ ವರದಿ ನೀಡುವಂತೆ ಕೇಂದ್ರ ಜಲಶಕ್ತಿ ಮಂತ್ರಾಲಯಕ್ಕೆ ಸುಪ್ರೀಂ ಕೋರ್ಟ್‌ ಸೂಚಿಸಿದೆ.

2022ರ ಡಿಸೆಂಬರ್‌ನಲ್ಲಿ ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಪೆನ್ನಾರ್‌ ನದಿ (ದಕ್ಷಿಣ ಪಿನಾಕಿನಿ) ನೀರು ಬಳಕೆ ವಿವಾದ ಬಗೆಹರಿಸಲು ಮೂರು ತಿಂಗಳೊಳಗೆ ನ್ಯಾಯಾಧಿಕರಣ ರಚಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿತ್ತು. ಇದರಿಂದಾಗಿ, ಮಾತುಕತೆ ಮೂಲಕ ಜಲವಿವಾದ ಬಗೆಹರಿಸಿಕೊಳ್ಳುವ ಉದ್ದೇಶ ಹೊಂದಿದ್ದ ಕರ್ನಾಟಕಕ್ಕೆ ಹಿನ್ನಡೆಯಾಗಿತ್ತು.

ಏನಿದು ಪ್ರಕರಣ?

ದಕ್ಷಿಣ ಪಿನಾಕಿನಿಯ ಉಪನದಿಯಾದ ಮಾರ್ಕಂಡೇಯ ನದಿಗೆ ಅಡ್ಡಲಾಗಿ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಯರಗೋಳ ಗ್ರಾಮದ ಬಳಿ ಅಣೆಕಟ್ಟು ನಿರ್ಮಿಸಲು ಮುಂದಾಗಿದೆ. ಕೋಲಾರ, ಮಾಲೂರು, ಬಂಗಾರಪೇಟೆಯ ಹಲವು ಹಳ್ಳಿಗಳು ಹಾಗೂ ಪಟ್ಟಣಗಳಿಗೆ ಕುಡಿಯುವ ನೀರು ಪೂರೈಸುವ ಯೋಜನೆ ಇದಾಗಿದೆ. ಸುಮಾರು 240 ಕೋಟಿ ರೂ. ವೆಚ್ಚದ ಅಣೆಕಟ್ಟು ಯೋಜನೆಗೆ ಕೇಂದ್ರ ಜಲಶಕ್ತಿ ಸಚಿವಾಲಯದ ಅನುಮತಿಯನ್ನೂ ಪಡೆದಿದೆ. ಆದರೆ, ಇದಕ್ಕೆ ತಮಿಳುನಾಡು ಸರ್ಕಾರ ತಕರಾರು ತೆಗೆದಿದ್ದು, ಸುಪ್ರೀಂ ಕೋರ್ಟ್‌ ಮೊರೆಹೋಗಿದೆ.

ತಮಿಳುನಾಡು ತಕರಾರು ಏನು?

ಪೆನ್ನಾರ್‌ ನದಿಯ ನೀರಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸುವುದು ಅಂತಾರಾಜ್ಯ ಜಲವಿವಾದ ಕಾಯ್ದೆಯ ಉಲ್ಲಂಘನೆಯಾಗುತ್ತದೆ ಎಂಬುದು ತಮಿಳುನಾಡಿನ ತಕರಾರಾಗಿದೆ. ಮಾರ್ಕಂಡೇಯ ನದಿಯು ಪೆನ್ನಾರ್‌ನ ಉಪನದಿಯಾದ ಕಾರಣ ಅಣೆಕಟ್ಟು ನಿರ್ಮಿಸಿದರೆ ನದಿ ನೀರಿನ ಹರಿವಿಗೆ ತೊಂದರೆಯಾಗುತ್ತದೆ. ತಮಿಳುನಾಡಿನ ಜನರು ಕೃಷಿ ಹಾಗೂ ಕುಡಿಯಲು ಪೆನ್ನಾರ್‌ ನದಿ ನೀರನ್ನು ಅವಲಂಬಿಸಿದ್ದಾರೆ. ಹಾಗಾಗಿ, ಅಣೆಕಟ್ಟು ನಿರ್ಮಿಸಲು ಅವಕಾಶ ನೀಡಬಾರದು ಎಂದು ತಕರಾರು ತೆಗೆದಿದೆ.

ಇದನ್ನೂ ಓದಿ | Assembly Session: ವಾಲ್ಮೀಕಿ ನಿಗಮ ಅಕ್ರಮ ದಲಿತರಿಗೆ ಮಾಡಿರೋ ಅನ್ಯಾಯ: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

ಕರ್ನಾಟಕದ ವಾದವೇನು?

ಅಣೆಕಟ್ಟು ನಿರ್ಮಾಣ ಯೋಜನೆ ವೈಜ್ಞಾನಿಕವಾಗಿದ್ದು, ಕೇಂದ್ರ ಜಲಶಕ್ತಿ ಸಚಿವಾಲಯವೇ ಅನುಮತಿ ನೀಡಿದೆ ಎಂದು ಕರ್ನಾಟಕ ವಾದ ಮಂಡಿಸಿದೆ. ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂಬುದು ಕರ್ನಾಟಕದ ಉದ್ದೇಶವಾಗಿತ್ತು. ಇದನ್ನು ರಾಜ್ಯ ಸರ್ಕಾರವು ಕೇಂದ್ರಕ್ಕೂ ಮನವರಿಕೆ ಮಾಡಿತ್ತು. ನ್ಯಾಯಾಧಿಕರಣದ ರಚನೆಯು ಬಿಕ್ಕಟ್ಟು ಬಗೆಹರಿಸಲು ಸಮಯ ತೆಗೆದುಕೊಳ್ಳುವುದರಿಂದ ಮಾತುಕತೆಗೆ ಕರ್ನಾಟಕ ಆದ್ಯತೆ ನೀಡಿತ್ತು.

Continue Reading

Latest

Sexual Abuse: ಮಧ್ಯವಯಸ್ಕ ಮಹಿಳೆಯ ಮೇಲೆ ಮಗನ ಸ್ನೇಹಿತನಿಂದಲೇ ಅತ್ಯಾಚಾರ!

Rape Case: ಕಾಮಾಸಕ್ತರಿಗೆ ಭಯ ಮತ್ತು ಲಜ್ಜೆ ಎರಡೂ ಇರುವುದಿಲ್ಲವಂತೆ. ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಸ್ನೇಹಿತನ ತಾಯಿಯ ಮೇಲೆ ಅತ್ಯಾಚಾರ ಎಸಗಿದ ಹೇಯವಾದ ಘಟನೆಯೊಂದು ನಡೆದಿದೆ. ಸ್ನೇಹಿತನು ಇಲ್ಲದ ವೇಳೆ ನೋಡಿಕೊಂಡು ಮನೆಗೆ ಬಂದ ಆತನ ಕಾಮುಕ ಗೆಳೆಯ ಸ್ನೇಹಿತನ ತಾಯಿಯನ್ನೇ ತನ್ನ ಚಪಲಕ್ಕೆ ಬಳಸಿಕೊಂಡಿದ್ದಾನೆ. ತಾಯಿ ಇದಕ್ಕೆ ವಿರೋಧಿಸಿದಾಗ ಮಗನನ್ನು ಕೊಲ್ಲುವುದಾಗಿ ಬೆದರಿಯೊಡ್ಡಿದ್ದಾನೆ. ಮಹಿಳೆ ಪೊಲೀಸರನ್ನು ಸಂಪರ್ಕಿಸಿ ಆರೋಪಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮತ್ತು ತಲೆಮರೆಸಿಕೊಂಡಿರುವ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

VISTARANEWS.COM


on

Rape Case
Koo

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕೇಳಿಬರುತ್ತಿದೆ. ಕಾಮುಕರು ತಮ್ಮ ಕಾಮತೃಷೆಯನ್ನು ತೀರಿಸಿಕೊಳ್ಳಲು ಮುಗ್ಧ ಬಾಲಕಿ, ಯುವತಿರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದಾರೆ. ಅಷ್ಟೇ ಅಲ್ಲದೇ ತಮ್ಮ ತಾಯಿಯ ವಯಸ್ಸಿನವರನ್ನು ಕೂಡ ಬಿಡುತ್ತಿಲ್ಲ. ಅಂತಹದೊಂದು ಘಟನೆ ಇದೀಗ ಮಧ್ಯಪ್ರದೇಶದ ಅವಧ್ಪುರಿಯಲ್ಲಿ ನಡೆದಿದೆ. ಮಹಿಳೆಯ ಮಗನ ಸ್ನೇಹಿತನೇ ಆಕೆಯ ಮೇಲೆ ಅತ್ಯಾಚಾರ (Rape Case) ಎಸಗಿದ್ದಾನೆ.

ಮಧ್ಯಪ್ರದೇಶದ ಭೋಪಾಲ್‌ನ ಅವಧ್ಪುರಿಯಲ್ಲಿ ಜುಲೈ 12ರಂದು 43 ವರ್ಷದ ಮಹಿಳೆಯ ಮೇಲೆ ಆಕೆಯ ಮಗನ ಸ್ನೇಹಿತ, ಮಗನನ್ನು ಕೊಲ್ಲುವುದಾಗಿ ಬೆದರಿಕೆಯೊಡ್ಡಿ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಆರೋಪಿ ಮತ್ತು ಸಂತ್ರಸ್ತೆ ಒಂದೇ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಅಲ್ಲದೆ ಸಂತ್ರಸ್ತೆಯ ಮಗ ಹಾಗೂ ಆರೋಪಿ ಸ್ನೇಹಿತರಾಗಿದ್ದರು. ಹಾಗಾಗಿ ಆರೋಪಿ ಆಗಾಗ ಆಕೆಯ ಮನೆಗೆ ಬರುತ್ತಿದ್ದ ಎನ್ನಲಾಗಿದೆ. ಆದರೆ ಶುಕ್ರವಾರ ರಾತ್ರಿ ಆಕೆಯ ಮಗ ಮತ್ತು ಆರೋಪಿ ಹೊರಗೆ ಹೋಗಿದ್ದರು. ಸಂತ್ರಸ್ತೆ ಮನೆಯಲ್ಲಿ ಒಬ್ಬಳೆ ಇರುವುದನ್ನು ಅರಿತ ಆತ ಒಬ್ಬನೇ ತನ್ನ ಸ್ನೇಹಿತನ ಮನೆಗೆ ಹಿಂದಿರುಗಿ ಸಂತ್ರಸ್ತೆಯ ಬಾಗಿಲು ತಟ್ಟಿದ್ದಾನೆ. ಆಗ ಬಾಗಿಲು ತೆರೆದ ಸಂತ್ರಸ್ತೆಯ ಮನೆಗೆ ನುಗ್ಗಿದ್ದಾನೆ.

ಆಗ ಸಂತ್ರಸ್ತೆ ತನ್ನ ಮಗನ ಬಗ್ಗೆ ಕೇಳಿದಾಗ ಆತ ಚೆನ್ನಾಗಿ ಕುಡಿದು ಮಲಗಿರುವುದಾಗಿ ತಿಳಿಸಿದ್ದಾನೆ. ಬಳಿಕ ಆತ ಆಕೆಯ ಜತೆ ಅಸಭ್ಯವಾಗಿ ವರ್ತಿಸಲು ಪ್ರಯತ್ನಿಸಿದ್ದಾನೆ. ಆಗ ಆಕೆ ಅದನ್ನು ವಿರೋಧಿಸಿದಾಗ ಅತ್ಯಾಚಾರ ಪ್ರಯತ್ನವನ್ನು ವಿರೋಧಿಸಿದರೆ ಅವಳ ಮಗನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಘಟನೆಯ ನಂತರ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ. ಮರುದಿನ ಮಹಿಳೆ ಪೊಲೀಸರನ್ನು ಸಂಪರ್ಕಿಸಿ ಆರೋಪಿಯ ವಿರುದ್ಧ ದೂರು ದಾಖಲಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಹುಡುಗಿಯ ಮೇಲೆ ಏಕಾಏಕಿ ದಾಳಿ ಮಾಡಿದ ಕೋತಿ; ವಿಡಿಯೊ ಇದೆ

ಮಹಿಳೆಯ ಮೇಲಿನ ದೌರ್ಜನ್ಯ ಹೆಚ್ಚಾಗಿದ್ದು, ಇಂತಹ ಪ್ರಕರಣಗಳು ಈ ಹಿಂದೆ ಹಲವು ನಡೆದಿದ್ದು, ಇದರಲ್ಲಿ ಮಹಿಳೆಯರು ಬಲಿಯಾಗಿದ್ದಾರೆ. ಪತ್ನಿಯ ಮೇಲಿನ ಅನುಮಾನದಿಂದ ಪತಿಯೇ ಆಕೆಯ ಕತ್ತು ಹಿಸುಕಿ ಶವವನ್ನು ಸುಟ್ಟು ಹೂತು ಹಾಕಿದ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದ್ದು, ಪತಿಯನ್ನು ಬಂಧಿಸಲಾಗಿತ್ತು. ಮತ್ತೊಂದು ಘಟನೆಯಲ್ಲಿ, ಜಬಲ್ಪುರ ನಗರದ ಓಮ್ತಿ ಪ್ರದೇಶದಲ್ಲಿ ಜುಲೈ 1 ರಂದು 17 ವರ್ಷದ ಬಾಲಕಿಯನ್ನು 20 ವರ್ಷದ ಗುಫ್ರಾನ್ ಎಂಬ ವ್ಯಕ್ತಿ ಕ್ರೂರವಾಗಿ ಕೊಲೆ ಮಾಡಿದ್ದಾನೆ. ಆರೋಪಿಯೊಂದಿಗೆ ಮಾತನಾಡಲು ಸಂತ್ರಸ್ತೆ ನಿರಾಕರಿಸಿದ್ದು ಈ ಅಪರಾಧದ ಹಿಂದಿನ ಉದ್ದೇಶವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Continue Reading
Advertisement
DS Veeraiah
ಕರ್ನಾಟಕ6 mins ago

D. S. Veeraiah: ಅರಸು ಟ್ರಕ್ ಟರ್ಮಿನಲ್ ಹಗರಣ;‌ ಡಿ.ಎಸ್‌.ವೀರಯ್ಯಗೆ ಜು.30ರವರೆಗೆ ನ್ಯಾಯಾಂಗ ಬಂಧನ

NEET-UG 2024
ದೇಶ18 mins ago

NEET UG 2024: ನೀಟ್‌ ಅಕ್ರಮ; ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಮತ್ತಿಬ್ಬರು ಆರೋಪಿಗಳು ಅರೆಸ್ಟ್‌

Olympics on television
ಕ್ರೀಡೆ30 mins ago

Olympics On Television: ಒಲಿಂಪಿಕ್ಸ್​ ಕ್ರೀಡಾಕೂಟ ಮೊದಲ ಬಾರಿಗೆ ಟಿವಿಯಲ್ಲಿ ಪ್ರಸಾರ ಕಂಡಿದ್ದು ಯಾವಾಗ?

Pennar River Dispute
ಪ್ರಮುಖ ಸುದ್ದಿ55 mins ago

Pennar River Dispute: ಪೆನ್ನಾರ್ ನದಿ ನೀರು ಹಂಚಿಕೆ ವಿವಾದ; 8 ವಾರದಲ್ಲಿ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

Rape Case
Latest1 hour ago

Sexual Abuse: ಮಧ್ಯವಯಸ್ಕ ಮಹಿಳೆಯ ಮೇಲೆ ಮಗನ ಸ್ನೇಹಿತನಿಂದಲೇ ಅತ್ಯಾಚಾರ!

ಕ್ರೀಡೆ1 hour ago

India at the Olympics: ಒಲಿಂಪಿಕ್ಸ್​ನಲ್ಲಿ ಭಾರತದ ಪದಕ ಸಾಧನೆಯ ಇಣುಕು ನೋಟ

Ambani Video
ಪ್ರಮುಖ ಸುದ್ದಿ1 hour ago

Ambani Video: 3 ವರ್ಷದ ಅಂಬಾನಿ ಮೊಮ್ಮಗ ವೇದಿಕೆ ಮೇಲೆ ಜಾರಿ ಬಿದ್ದ, ಆದರೆ ಜನರ ಹೃದಯ ಗೆದ್ದ!

Money Guide
ಮನಿ-ಗೈಡ್1 hour ago

Money Guide: ಹಿರಿಯರಿಗೆ ಆರೋಗ್ಯ ವಿಮೆ: ಯಾಕಾಗಿ? ಏನಿದರ ಉಪಯೋಗ?

Muharram 2024 Man dies in fire during
ರಾಯಚೂರು1 hour ago

Muharram 2024: ರಾಯಚೂರಿನಲ್ಲಿ ಮೊಹರಂನಲ್ಲಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ವ್ಯಕ್ತಿ ಸುಟ್ಟು ಭಸ್ಮ

hit and run case
ದೇಶ2 hours ago

Hit And Run Case: ಮುಂಬೈ ಹಿಟ್‌ ಆ್ಯಂಡ್‌ ರನ್‌ ಕೇಸ್‌; ತನಗೆ ಕುಡಿಯುವ ಅಭ್ಯಾಸ ಇದೆ ಎಂದು ಒಪ್ಪಿಕೊಂಡ ಆರೋಪಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ7 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 day ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌